Yellapura News Yellapura Cooperative sector needs to be empowered says Sahakhara Ratna awardee R N Hegade Gorsagadde Yellapura News: ಸಹಕಾರಿ ವಲಯದ ಸಬಲೀಕರಣ ಅಗತ್ಯ; ಸಹಕಾರ ರತ್ನ ಆರ್.ಎನ್. ಹೆಗಡೆ ಗೋರ್ಸಗದ್ದೆ - Vistara News

ಉತ್ತರ ಕನ್ನಡ

Yellapura News: ಸಹಕಾರಿ ವಲಯದ ಸಬಲೀಕರಣ ಅಗತ್ಯ; ಸಹಕಾರ ರತ್ನ ಆರ್.ಎನ್. ಹೆಗಡೆ ಗೋರ್ಸಗದ್ದೆ

Yellapura News: ಯಲ್ಲಾಪುರ ಪಟ್ಟಣದ ವೆಂಕಟರಮಣ ಮಠದಲ್ಲಿ ಏರ್ಪಡಿಸಿದ್ದ ಯಲ್ಲಾಪುರ ಅರ್ಬನ್ ಕೋ ಆಪ್ ಬ್ಯಾಂಕಿನ ಬೆಳ್ಳಿ ಹಬ್ಬ ಸಮಾರಂಭಕ್ಕೆ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಆರ್.ಎನ್. ಹೆಗಡೆ ಗೋರ್ಸಗದ್ದೆ ಚಾಲನೆ ನೀಡಿದರು.

VISTARANEWS.COM


on

Yellapura Urban Co Op Bank Silver Jubilee Ceremony Inauguration
ಯಲ್ಲಾಪುರ ಪಟ್ಟಣದ ವೆಂಕಟರಮಣ ಮಠದಲ್ಲಿ ಏರ್ಪಡಿಸಿದ್ದ ಯಲ್ಲಾಪುರ ಅರ್ಬನ್ ಕೋ ಆಪ್ ಬ್ಯಾಂಕಿನ ಬೆಳ್ಳಿ ಹಬ್ಬ ಸಮಾರಂಭಕ್ಕೆ, ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಆರ್.ಎನ್. ಹೆಗಡೆ ಗೋರ್ಸಗದ್ದೆ ಚಾಲನೆ ನೀಡಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಲ್ಲಾಪುರ: ನಮ್ಮ ತಾಲೂಕಿನಲ್ಲಿ ಸಹಕಾರಿ ಕ್ಷೇತ್ರವು (Co-operative sector) ಉತ್ತಮ ವಾತಾವರಣವನ್ನು ಸೃಷ್ಟಿಸಿದೆ, ಅಂತೆಯೇ ಗ್ರಾಮೀಣ (Rural) ಭಾಗದ ರೈತರ (farmer) ಬೆನ್ನೆಲುಬಾಗಿ ನಿಂತಿದೆ ಎಂದು ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಆರ್.ಎನ್. ಹೆಗಡೆ ಗೋರ್ಸಗದ್ದೆ ತಿಳಿಸಿದರು.

ಪಟ್ಟಣದ ವೆಂಕಟರಮಣ ಮಠದಲ್ಲಿ ಜರುಗಿದ ಯಲ್ಲಾಪುರ ಅರ್ಬನ್ ಕೋ ಆಪರೇಟಿವ್‌ ಬ್ಯಾಂಕಿನ ಬೆಳ್ಳಿ ಹಬ್ಬ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜನರಿಗೆ ಅತ್ಯಂತ ಸಮೀಪದಲ್ಲಿ, ಸುಲಭವಾಗಿ ಕೈಗೆಟಕುವಂತೆ ವ್ಯವಹಾರ ಒದಗಿಸುವಲ್ಲಿ ಸಹಕಾರಿ ಸಂಸ್ಥೆಗಳು ಪ್ರಮುಖ ಪಾತ್ರ ವಹಿಸುತ್ತಿದೆ. ಸಹಕಾರಿ ವಲಯದ ಸಬಲೀಕರಣ ಆಗಬೇಕಿದೆ. ಸಿಬ್ಬಂದಿಗಳ, ಆಡಳಿತ ಮಂಡಳಿಯ ಉತ್ತಮ ಆಳ್ವಿಕೆಯ ಫಲವಾಗಿ ಈ ಸಂಸ್ಥೆಯು ಉತ್ತಮವಾಗಿ ಬೆಳೆದು ಬಂದಿದೆ. ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ಉತ್ತಮ ಆಡಳಿತದೊಂದಿಗೆ ಸಂಸ್ಥೆ ಮುಂದುವರೆಯಲಿ ಎಂಬುದು ನನ್ನ ಆಶಯ ಎಂದು ಹೇಳಿದರು.

ಇದನ್ನೂ ಓದಿ: The Kerala Story : ಕೇರಳ ಸ್ಟೋರಿ ಸಿನಿಮಾ ನೋಡಲು ರಜೆ ಕೊಟ್ಟ ಕಾಲೇಜು, ವಿರೋಧ ವ್ಯಕ್ತವಾದ ಬಳಿಕ ಹಿಂದೇಟು

ಶ್ರೇಷ್ಠ ಸಹಕಾರಿ ಪ್ರಶಸ್ತಿ ಪುರಸ್ಕೃತ ಜಿ.ಎನ್. ಹೆಗಡೆ ಹಿರೇಸರ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಯನ್ನು ಸಹಕಾರಿ ಕ್ಷೇತ್ರಕ್ಕೆ ತಂದು, ಎಲ್ಲಾ ವಿಭಾಗದ ಸರ್ವತೋಮುಖ ಅಭಿವೃದ್ದಿ ಮಾಡಬೇಕು ಎಂಬುದೇ ಎಲ್ಲಾ ಸಹಕಾರಿಗಳ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.

ಯು.ಕೆ. ಬ್ಯಾಂಕ್ ಅಧ್ಯಕ್ಷ ಪ್ರಮೋದ ಹೆಗಡೆ ಮಾತನಾಡಿ, ಉತ್ತಮ ತಂಡವು ಈ ಸಂಸ್ಥೆಯನ್ನು ಕಟ್ಟಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಈ ಸಂಸ್ಥೆಯು ನಮ್ಮ ಊರಿನ ಹೆಸರನ್ನು ಸಹಕಾರಿ ಕ್ಷೇತ್ರದಲ್ಲಿ ಬೆಳೆಸುತ್ತಿದೆ. ಇದು ಜನ ಸಾಮಾನ್ಯರ ಬ್ಯಾಂಕ್ ಆಗಿದೆ. ಮಧ್ಯಮ ವರ್ಗದ ಜನರ ಕಷ್ಟಗಳಿಗೆ ಸ್ಪಂದಿಸುವ ಮೂಲಕ ಜನರ ಮನಸ್ಸಿನಲ್ಲಿ ಮನೆ ಮಾಡಿದೆ. ರಾಷ್ಟ್ರೀಯ ಬ್ಯಾಂಕ್‌ಗಳಿಗೆ ಪೈಪೋಟಿ ನೀಡುವಂತೆ ಸಹಕಾರಿ ಸಂಸ್ಥೆಗಳು ಬೆಳೆಯುವಂತೆ ಆಗಬೇಕು. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸಾಲ ಪಡೆಯಲು ಜನ ಸಾಮಾನ್ಯರು ಪರದಾಡಬೇಕು. ಆದರೆ ಸಹಕಾರಿ ಬ್ಯಾಂಕ್‌ಗಳು ಜನರ ಕಷ್ಟಕ್ಕೆ ಸ್ಪಂದಿಸಿ ಕಾರ್ಯ ನಿರ್ವಹಿಸುತ್ತದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪರಶುರಾಮ ಆಚಾರಿ ವಹಿಸಿದ್ದರು. ಸ್ಕಾಡ್ ವೆಸ್ ಮಹಿಳಾ ಸೌಹಾರ್ದ ಸಂಘದ ಅಧ್ಯಕ್ಷೆ ಸರಸ್ವತಿ ಎನ್‌ ರವಿ ಮಾತನಾಡಿದರು.

ಇದನ್ನೂ ಓದಿ: WTC Final 2023: ಲಂಡನ್​ನಲ್ಲಿ ಅಭ್ಯಾಸ ಆರಂಭಿಸಿದ ಟೀಮ್​ ಇಂಡಿಯಾ

ಇದೇ ಸಂದರ್ಭದಲ್ಲಿ ಸಂಘದ ಅಭಿವೃದ್ಧಿಗೆ ಸಹಕರಿಸಿದ ಗಣ್ಯರಿಗೆ ಹಾಗೂ ಉತ್ತಮ ವ್ಯವಹಾರ ನಡೆಸಿದ ಸದಸ್ಯರಿಗೆ ಸಂಘದ ವತಿಯಿಂದ ಗೌರವಿಸಿ, ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ವೈ.ಟಿ.ಎಸ್.ಎಸ್. ಶಿಕ್ಷಣ ಸಮಿತಿ ಅಧ್ಯಕ್ಷ ರವಿಕುಮಾರ ಶ್ಯಾನಭಾಗ್, ಸಂಘದ ಉಪಾಧ್ಯಕ್ಷ ನಾರಾಯಣ ಭಟ್, ಗ್ರಾಮದೇವಿ ದೇವಸ್ಥಾನದ ಟ್ರಸ್ಟಿ ರಾಜೇಂದ್ರ ಭಟ್, ಮಾಜಿ ಅಧ್ಯಕ್ಷರು, ನಿರ್ದೇಶಕರು ಇದ್ದರು. ಕು. ಅದಿತಿ ಭಟ್ ಪ್ರಾರ್ಥಿಸಿದರು. ನಿರ್ದೇಶಕ ನರಸಿಂಹ ಸಭಾಹಿತ ಸ್ವಾಗತಿಸಿದರು. ಸುಧೀರ್ ಕೊಡ್ಕಣಿ ವರದಿ ವಾಚಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಹಾಟ್‌ ಸಿಟಿಯಾದ ಬೆಂಗಳೂರು; ಇನ್ನು 3 ದಿನಗಳು ಈ ಜಿಲ್ಲೆಗಳು ಕಾದ ಕೆಂಡ

Karnataka Weather Forecast : ಬೆಂಗಳೂರು ನಗರವು ಬಿಸಿಲ ನಗರೀಯಾಗಿ ಮಾರ್ಪಾಟ ಆಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿದೆ. ಎಲ್ಲ ಕಾಲದಲ್ಲೂ ಕೂಲ್‌ ಆಗಿದ್ದ ಬೆಂಗಳೂರು ಇದೀಗ ಹಾಟ್‌ ಸಿಟಿಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶಾಖದ ಅಲೆಯ ಎಚ್ಚರಿಕೆ ನೀಡಲಾಗಿದೆ.

VISTARANEWS.COM


on

By

Karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಹಗುರ ಮಳೆ ನಡುವೆಯೂ (rain News) ಮತ್ತೆ ತಾಪಮಾನ ಏರಿಕೆ ಹಾಗೂ ಶಾಖದ ಅಲೆಗಳ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡುತ್ತಿದೆ. ಏ.26ರಿಂದ 30ರವರೆಗೆ ಹಲವು ಜಿಲ್ಲೆಗಳಿಗೆ ಹೀಟ್‌ ವೇವ್‌ (Heat Wave) ಅಲರ್ಟ್‌ ನೀಡಲಾಗಿದೆ. ಮುಂದಿನ 5 ದಿನಗಳು ತಾಪಮಾನದಲ್ಲಿ ಏರಿಳಿತ ಉಂಟಾಗಲಿದೆ. ಸಾಮಾನ್ಯಕ್ಕಿಂತ 2-3 ಡಿ.ಸೆ ತಾಪಮಾನ ಏರಿಕೆ ಆಗಲಿದೆ.

ಉತ್ತರ ಕರ್ನಾಟಕಕ್ಕೂ ಸೆಡ್ಡು ಹೊಡೆಯುತ್ತಿರುವ ಬೆಂಗಳೂರು

ರಾಜಧಾನಿ ಬೆಂಗಳೂರಲ್ಲಿ ಬಿಸಿಲಿನ ವಾತಾವರಣವೇ ಮುಂದುವರಿಯಲಿದೆ. ಬೆಳಗಿನ ಸಮಯ ಕೆಲವೊಮ್ಮೆ ಮೋಡ ಕವಿದ ವಾತಾವರಣ ಇದ್ದರೆ ಮಧ್ಯಾಹ್ನದ ನಂತರ ಆಕಾಶವು ನಿರ್ಮಲವಾಗಿರದೆ. ಗರಿಷ್ಠ ಹಾಗೂ ಕನಿಷ್ಟ ಉಷ್ಣಾಂಶವು ಕ್ರಮವಾಗಿ 38 ಹಾಗೂ 23 ಡಿ.ಸೆ ಇರಲಿದೆ. ಕೂಲ್‌ ಆಗಿದ್ದ ಬೆಂಗಳೂರು ನಗರವು ಇದೀಗ ಹಾಟ್‌ ಸಿಟಿಯಾಗಿ ಮಾರ್ಪಾಟ್ಟಿದ್ದು, ಹಳೇಯ ದಾಖಲೆಯನ್ನು ಉಡೀಸ್‌ ಆಗಿದೆ. ಕಳೆದ 12 ವರ್ಷಗಳಲ್ಲೇ ಅತ್ಯಾಧಿಕ ಗರಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ. ಗುರುವಾರ ಹಾಗೂ ಶುಕ್ರವಾರ ಗರಿಷ್ಠ ಉಷ್ಣಾಂಶವು 38ಕ್ಕೆ ಹೋಗಿತ್ತು, ಶನಿವಾರ ಇದೇ ಪರಿಸ್ಥಿತಿ ಮುಂದುವರಿಯಲಿದೆ.

ಏ. 27, 28ರಂದು ಬಾಗಲಕೋಟೆ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ತುಮಕೂರು, ಮಂಡ್ಯ, ಗದಗ, ದಾವಣಗೆರೆ ಮತ್ತು ಚಿತ್ರದುರ್ಗಕ್ಕೆ ಶಾಖದ ಅಲೆಯ ಎಚ್ಚರಿಕೆ ನೀಡಲಾಗಿದೆ.

ರಾಯಚೂರಲ್ಲಿ ಗರಿಷ್ಠ ಉಷ್ಣಾಂಶ ದಾಖಲು

ಬುಧವಾರದಂದು ಕೋಲಾರದಲ್ಲಿ ಸರಾಸರಿ ಕನಿಷ್ಠ ಉಷ್ಣಾಂಶ 20.1 ಡಿಗ್ರಿ ಸೆಲ್ಸಿಯಸ್ ಹಾಗೂ ರಾಯಚೂರು ಜಿಲ್ಲೆಯಲ್ಲಿ ಸರಾಸರಿ ಗರಿಷ್ಠ ಉಷ್ಣಾಂಶ 43.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಉಳಿದಂತೆ ಹಾಸನ ಮತ್ತು ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರದಲ್ಲಿ ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್‌ನಿಂದ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ರಾಯಚೂರು, ಕಲಬುರಗಿ, ಬೀದರ್, ಕೊಪ್ಪಳ, ಬಾಗಲಕೋಟೆ, ಯಾದಗಿರಿ ಮತ್ತು ಬಳ್ಳಾರಿ, ವಿಜಯಪುರದ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನ 42 ಡಿಗ್ರಿ ಸೆಲ್ಸಿಯಸ್ ನಿಂದ 44 ಡಿಗ್ರಿ ಸೆಲ್ಸಿಯಸ್ ವರೆಗೆ ದಾಖಲಾಗಿದೆ.

ಇದನ್ನೂ ಓದಿ: Lok Sabha Election 2024 : ವೋಟ್‌ ಮಾಡಲು ಒಂದೂವರೆ ಲಕ್ಷ ರೂ. ಖರ್ಚು; ಲಂಡನ್‌ನಿಂದ ಮಂಡ್ಯಕ್ಕೆ ಬಂದ ಮಹಿಳೆ

ORS: ಒಆರ್‌ಎಸ್‌ ಜೀವಜಲ; ಯಾರು, ಎಷ್ಟು ಪ್ರಮಾಣದಲ್ಲಿ ಸೇವಿಸಬಹುದು?

ಬಿಸಿಲಿನ ಝಳ (ORS) ನೆತ್ತಿ ಸುಡುವಂತಿದೆ. ತಾಪಮಾನ 40 ಡಿಗ್ರಿ ಸೆ. ಆಚೀಚೆ ಬರುತ್ತಿದ್ದಂತೆ ನಿರ್ಜಲೀಕರಣಕ್ಕೆ ತುತ್ತಾಗದಂತೆ ಕಾಪಾಡಿಕೊಳ್ಳಲು ಹಲವು ಪ್ರಯತ್ನಗಳಲ್ಲಿ ಜನ ನಿರತರಾಗಿರುವುದು ಕಂಡುಬರುತ್ತದೆ. ಅವುಗಳಲ್ಲಿ ಪ್ರಮುಖ ಪೇಯವೆಂದರೆ ಒಆರ್‌ಎಸ್‌ ಅಥವಾ ಓರಲ್‌ ರಿಹೈಡ್ರೇಶನ್‌ ಸೊಲ್ಯೂಶನ್‌.

ದೇಹಕ್ಕೆ ಅಗತ್ಯವಾದ ನೀರು, ಸಕ್ಕರೆ ಮತ್ತು ಲವಣಗಳನ್ನು ಹೊಂದಿರುವ ಈ ದ್ರಾವಣದ ಸೇವನೆಯಿಂದ ನಿರ್ಜಲೀಕರಣಕ್ಕೆ ತುತ್ತಾಗಿ ಪ್ರಾಣಾಪಾಯ ಆಗುವುದರಿಂದ ಪಾರಾಗಬಹುದು. ಆದರೆ ಇದನ್ನು ಯಾರು, ಎಷ್ಟು ಕುಡಿಯಬಹುದು? ಸೆಕೆಗೆ ತತ್ತರಿಸುತ್ತಿರುವ ಈ ದಿನಗಳಲ್ಲಿ ಒಆರ್‌ಎಸ್‌ನಂಥವು ಎಷ್ಟು ಬೇಕಿದ್ದರೂ ಹೊಟ್ಟೆ ಸೇರುತ್ತವೆ. ಆದರೆ ಇದನ್ನು ಎಷ್ಟು ಕುಡಿದರೆ ಸಾಕು ಮತ್ತು ಬೇಕು? ನಿರ್ಜಲೀಕರಣದಿಂದ ಕಳೆದುಕೊಂಡ ಖನಿಜಾಂಶಗಳನ್ನು ಮತ್ತು ನೀರನ್ನು ದೇಹಕ್ಕೆ ಮರಳಿ ಒದಗಿಸಿಕೊಡುವ ವ್ಯವಸ್ಥಿತವಾದ ಮಾರ್ಗವಿದು.

ಬೇಸಿಗೆಯ ತೀವ್ರತೆ ವಿಪರೀತವಾದ ಮೇಲೆ ರಾಜಧಾನಿಯೊಂದರಲ್ಲೇ ಒಆರೆಸ್‌ ಮಾರಾಟ ಶೇ. ೬೦ರಷ್ಟು ಹೆಚ್ಚಿದೆ. ಅದರಲ್ಲೂ ವಾಂತಿ, ಡಯರಿಯಾ, ಸುಸ್ತು ಮತ್ತು ನಿರ್ಜಲೀಕರಣದ ಲಕ್ಷಣಗಳು ಕಾಣುತ್ತಿದ್ದಂತೆ ಒಂದು ಸ್ಯಾಶೆ ಒಆರೆಸ್‌ ನೀರಿಗೆ ಬೆರೆಸಿ ಕುಡಿದರೆ, ಜೀವಕ್ಕೆ ತಂಪಾಗುತ್ತದೆ ಎಂಬುದು ಬಹುತೇಕ ಮಂದಿಗೆ ಅನುಭವಕ್ಕೆ ಬಂದಿದೆ. ಆದರೆ ನಮಗೆ ನಿಜಕ್ಕೂ ಓಆರೆಸ್‌ ಅಗತ್ಯ ಬೀಳುವುದು ಯಾವಾಗ? ಮಧುಮೇಹ ಇದ್ದವರೂ ಇದನ್ನು ಕುಡಿಯಬಹುದೇ? ಮಕ್ಕಳಿಗೂ ಸೂಕ್ತವೇ? ಒಆರೆಸ್‌ ಪುಡಿ ಒಳ್ಳೆಯದೋ ಅಥವಾ ಜ್ಯೂಸ್‌ ರೀತಿಯಲ್ಲಿರುವ ಒಆರೆಸ್ಸೆಲ್‌ ಒಳ್ಳೆಯದೋ?

ors drink

ಏನಿದು ಒಆರ್‌ಎಸ್‌

ರಾಬರ್ಟ್‌ ಕ್ರೇನ್‌ ಎಂಬಾತ ಇದರ ಮಹತ್ವವನ್ನು ತಿಳಿಸಿಕೊಟ್ಟವ. 1960ರ ಸುಮಾರಿಗೆ ವಾಂತಿ, ಅತಿಸಾರದಿಂದ ಆಗುತ್ತಿದ್ದ ಪ್ರಾಣಾಪಾಯಗಳನ್ನು ತಡೆಯುವುದಕ್ಕೆ ಈ ದ್ರಾವಣದ ಸೇವನೆಯನ್ನು ಜಾರಿಗೆ ತರಲಾಗಿತ್ತು. ವಾಂತಿ-ಭೇದಿಯಿಂದ ಆಗುತ್ತಿದ್ದ ನಿರ್ಜಲೀಕರಣ ತಪ್ಪಿಸಲು ರಕ್ತನಾಳಕ್ಕೆ ಗ್ಲೂಕೋಸ್‌ ಕೊಡುವ ಪದ್ಧತಿ ಆಗ ಚಾಲ್ತಿಯಲ್ಲಿತ್ತು. ಆದರೆ ಎಲ್ಲ ಕಡೆಯೂ ಚಿಕಿತ್ಸೆಯನ್ನು ನೀಡಲಾಗುತ್ತಿರಲಿಲ್ಲ. ಆಗ ಒಆರೆಸ್‌ ಎಂಬ ಜೀವಜಲದ ಸೇವನೆ ವರದಾನವಾಗಿ ಪರಿಣಮಿಸಿತ್ತು. ಇದು ಗ್ಲೂಕೋಸ್‌, ಸೋಡಿಯಂ ಕ್ಲೋರೈಡ್‌, ಪೊಟಾಶಿಯಂ ಕ್ಲೋರೈಡ್‌ ಮತ್ತು ಸೋಡಿಯಂ ಸಿಟ್ರೇಟ್‌ಗಳ ಮಿಶ್ರಣವಾಗಿದೆ. ಜೊತೆಗೆ ಜಿಂಕ್‌ ಸಹ ಸೇರಿರುವುದರಿಂದ ವಾಂತಿ- ಅತಿಸಾರದ ಲಕ್ಷಣಗಳ ಉಪಶಮನಕ್ಕೆ ನೆರವಾಗುತ್ತದೆ.

ಯಾವಾಗ ಕುಡಿಯಬೇಕು?

ನಿರ್ಜಲೀಕರಣದ ಪ್ರಾರಂಭಿಕ ಲಕ್ಷಣಗಳು ಗೋಚರವಾಗುತ್ತಿದ್ದಂತೆ ಒಆರೆಸ್‌ ಸೇವನೆಯನ್ನು ಪ್ರಾರಂಭಿಸುವುದು ಸೂಕ್ತ. ಅಂದರೆ ತೀವ್ರ ಬಾಯಾರಿಕೆ. ತುಟಿಗಳೆಲ್ಲ ಒಣಗಿದಂತಾಗುವುದು, ಮೂತ್ರ ಕಡಿಮೆಯಾಗುವುದು, ಮೂತ್ರದ ಬಣ್ಣ ಗಾಢವಾಗುವುದು, ಸುಸ್ತು, ಆಯಾಸ, ತಲೆ ಸುತ್ತುವುದು, ತಲೆಯೊಳಗೆ ನೋವು… ಇಂಥ ಯಾವುದೇ ಅನುಭವಕ್ಕೆ ಬಂದರೂ ಒಆರೆಸ್‌ ಸೇವನೆಯನ್ನು ಆರಂಭಿಸಬಹುದು. ಬಿಸಿಲಿನ ತೀವ್ರತೆ ಸಿಕ್ಕಾಪಟ್ಟೆ ಇರುವ ದಿನಗಳಲ್ಲಿ, ಮನೆಯೊಳಗಿದ್ದರೂ ಸುಸ್ತು, ಆಯಾಸ, ಸಂಕಟ ಕಾಡುತ್ತಿರುವ ಹೊತ್ತಿನಲ್ಲಿ ಒಂದು ಲೋಟ ಒಆರೆಸ್‌ ನೀರು ಕುಡಿಯುವುದು ಜೀವವನ್ನು ತಂಪಾಗಿಸುತ್ತದೆ.

ಎಷ್ಟು ಕುಡಿಯಬೇಕು?

ಇದು ಆ ವ್ಯಕ್ತಿಯ ದೇಹಸ್ಥಿತಿಯನ್ನು ಅವಲಂಬಿಸಿದೆ. ನಿರ್ಜಲೀಕರಣದ ಲಕ್ಷಣಗಳು ಸ್ವಲ್ಪ ಅಥವಾ ಮಧ್ಯಮ ಪ್ರಮಾಣದಲ್ಲಿದ್ದರೆ, ಸುಮಾರು 20-25 ಎಂ.ಎಲ್‌ನಷ್ಟು ಒಆರೆಸ್‌ ದ್ರಾವಣವನ್ನು ಒಮ್ಮೆ ಗುಟುಕರಿಸುವುದು. ಪ್ರತಿ 10-15 ನಿಮಿಷಗಳಿಗೆ ಇದನ್ನೇ ನಿಯಮಿತವಾಗಿ ಮುಂದುವರಿಸುವುದು. ದಾಹ ಕಡಿಮೆಯಾಗಿ, ಬಾಯಿ ಒಣಗುವುದು ನಿಂತು, ಮೂತ್ರ ಹೆಚ್ಚಾಗಿ, ಮೂತ್ರದ ಬಣ್ನ ತಿಳಿಯಾಗಿ, ಸುಸ್ತು ಕಡಿಮೆಯಾಗುವವರೆಗೂ ಇದನ್ನೇ ಮುಂದುವರಿಸಬೇಕು. ಅಗತ್ಯವಿದ್ದರೆ ಇದನ್ನು ದಿನವಿಡೀ ಮಾಡಬಹುದು. ಆದರೆ ನಿರ್ಜಲೀಕರಣ ತೀವ್ರವಾಗಿದ್ದರೆ ಒಆರೆಸ್‌ ಪ್ರಮಾಣ ಹೆಚ್ಚು ಬೇಕಾಗುತ್ತದೆ. ಇದಕ್ಕೆ ವೈದ್ಯರಲ್ಲಿ ಸಲಹೆ ಕೇಳುವುದು ಒಳಿತು.

ಯಾರೆಲ್ಲ ಕುಡಿಯಬಹುದು?

ಬೇಸಿಗೆಯ ಹೊಡೆತ ತೀವ್ರವಾಗಿರುವ ಈ ದಿನಗಳಲ್ಲಿ ಬಹುತೇಕ ಎಲ್ಲರೂ ಇದನ್ನು ಸೇವಿಸಬಹುದು. ಆದರೆ ಹೃದ್ರೋಗಿಗಳು, ಕಿಡ್ನಿ ಸಮಸ್ಯೆ ಇರುವವರು ವೈದ್ಯರ ಸಲಹೆಯನ್ನು ತೆಗೆದುಕೊಳ್ಳಬೇಕು. ಅಗತ್ಯವಿದ್ದಾಗ ಮಧುಮೇಹಿಗಳು ಸಹ ಇದನ್ನು ಸೇವಿಸಬಹುದು. ಆದರೆ ನಿಯಮಿತವಾಗಿ ಸೇವಿಸುವ ಅಗತ್ಯವಿದ್ದರೆ ಸಕ್ಕರೆಯಂಶದ ಮೇಲೆ ಕಣ್ಣಿಡಬೇಕಾಗುತ್ತದೆ. ಹಾಗಾಗಿ ಅವರೂ ವೈದ್ಯರಲ್ಲಿ ಸಮಾಲೋಚನೆ ಮಾಡುವುದು ಕ್ಷೇಮ. ಇದರಿಂದ ಯಾವಾಗ, ಎಷ್ಟು ಕುಡಿಯಬಹುದು ಎಂಬುದು ಸ್ಪಷ್ಟವಾಗುತ್ತದೆ.

Boy Drinking Water from Glass

ಮಕ್ಕಳಿಗೆ ನೀಡಬಹುದೇ?

ಖಂಡಿತ. ಆರು ತಿಂಗಳ ನಂತರದ ಶಿಶುಗಳಿಗೂ ಒಆರೆಸ್‌ನಿಂದ ಅನುಕೂಲವಾಗುತ್ತದೆ. ಬಿಸಿಲ ದಿನಗಳಲ್ಲಿ, 6-24 ತಿಂಗಳ ಮಕ್ಕಳಿಗೆ, ದಿನಕ್ಕೆ 20 ಚಮಚ ಒಆರೆಸ್‌ ನೀಡಬಹುದು. 2-5 ವರ್ಷದ ಮಕ್ಕಳಿಗೆ 40 ಚಮಚ ಒಆರೆಸ್‌ ನೀಡಬಹುದು. 5 ವರ್ಷಕ್ಕೆ ಮೇಲ್ಪಟ್ಟ ಮಕ್ಕಳಿಗೆ ಅವು ಕುಡಿದು ತಡೆಯುವಷ್ಟು ನೀಡಬಹುದು. ವಯಸ್ಕರಿಗಿಂತ ಮಕ್ಕಳೇ ಹೆಚ್ಚು ನಿರ್ಜಲೀಕರಣಕ್ಕೆ ತುತ್ತಾಗುವುದರಿಂದ ಒಆರೆಸ್‌ ದ್ರಾವಣ ಎಳೆಯರ ಪಾಲಿನ ಜೀವಜಲ.

ಯಾವುದು ಒಳ್ಳೆಯದು?

ವಾಂತಿ, ಅತಿಸಾರದಂಥ ತೊಂದರೆ ಇರುವಾಗ ಒಆರ್‌ಎಸ್‌ ಪುಡಿಯೇ ಸೂಕ್ತವಾದದ್ದು. ಅದರ ಮೇಲೆ ನಮೂದಿಸಿರುವ ಪ್ರಮಾಣವನ್ನು ತಪ್ಪದೆ ಪಾಲಿಸಬೇಕು. ಒಆರೆಸೆಲ್‌ನಲ್ಲಿ ಬಣ್ಣ ಮತ್ತು ಸುವಾಸನೆಯನ್ನು ಸೇರಿಸಿರುವ ಸಾಧ್ಯತೆ ಹೆಚ್ಚಿರುವುದರಿಂದ, ಚಿಕಿತ್ಸೆಗೆ ಪುಡಿಯೇ ಸೂಕ್ತ. ಹಾಗಲ್ಲದೆ ಬೇಸಿಗೆಯ ಹೊಡೆತ ತಡೆಯುವಾಗ, ಸಾಮಾನ್ಯ ಸುಸ್ತು, ಆಯಾಸಗಳ ಪರಿಹಾರಕ್ಕಾದರೆ ಯಾವುದನ್ನಾದರೂ ಬಳಸಬಹುದು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಜಕೀಯ

Lok Sabha Election 2024: ಬಿಜೆಪಿಯವರಿಂದ ಹಿಂದೂ ಧರ್ಮಕ್ಕೆ ಅಪಾಯ ಎಂದ ಅಂಜಲಿ ನಿಂಬಾಳ್ಕರ್

Lok Sabha Election 2024: ಹಳಿಯಾಳ ತಾಲೂಕಿನ ತೇರಗಾಂವ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಶುಕ್ರವಾರ ಕಾಂಗ್ರೆಸ್ ಬಹಿರಂಗ ಪ್ರಚಾರ ಸಭೆಯಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ಮತಯಾಚನೆ ನಡೆಸಿದರು.

VISTARANEWS.COM


on

Congress election camapaign meeting in haliyala
Koo

ಹಳಿಯಾಳ: ಹಿಂದೂ ಧರ್ಮಕ್ಕೆ ಅಪಾಯ ಇರುವುದು ಬಿಜೆಪಿಗರಿಂದಲೇ ಹೊರತು ಬೇರಾರಿಂದಲೂ ಅಲ್ಲ ಎಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ (Lok Sabha Election 2024) ಆರೋಪಿಸಿದರು.

ತಾಲೂಕಿನ ತೇರಗಾಂವ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಗರು ತಾವೇ ಹಿಂದುತ್ವ ರಕ್ಷಣೆ ಮಾಡುತ್ತಿರುವವರು ಎನ್ನುತ್ತಾರೆ. ಮೊಘಲರು, ಬ್ರಿಟೀಷರು ಬಂದಾಗಲೂ ಹಿಂದೂ ಧರ್ಮಕ್ಕೆ ತೊಂದರೆಯಾಗಲು ಯಾರೂ ಬಿಟ್ಟಿರಲಿಲ್ಲ. ಆದರೆ ಅಂಥ ಮೋಸ ಈಗ ಬಿಜೆಪಿಯಿಂದ ಆಗುತ್ತಿದೆ ಎಂದು ಕಿಡಿಕಾರಿದರು.

ಇದನ್ನೂ ಓದಿ: Chocolate: ಏನಿದು ಮೀಲಿಬಗ್‌ ವೈರಸ್‌? ಚಾಕೊಲೇಟ್ ದರ ಏರಿಕೆಗೂ ಇದಕ್ಕೂ ಏನು ಸಂಬಂಧ?

ಬಿಜೆಪಿಗರಿಂದ ನಮ್ಮ ಧರ್ಮ, ಸಂಸ್ಕೃತಿ, ರಕ್ಷಣೆ ಮಾಡಬೇಕಿದೆ. ನಾನು ಹಿಂದೂ ಧರ್ಮದಲ್ಲಿ ಹುಟ್ಟಿರಲು ನನಗೆ ಹೆಮ್ಮೆ ಇದೆ. ಬಿಜೆಪಿಗರಿಂದ ಹಿಂದುತ್ವದ ಪಾಠ ಕಲಿಬೇಕಿಲ್ಲ. ಶಿವಾಜಿಯವರು ಎಲ್ಲಾ ಜಾತಿಗಳು ಸೇರಿ ಹಿಂದೂ ಧರ್ಮ ಎಂದಿದ್ದರು. ಯಾವುದೇ ಒಂದು ಜಾತಿಗೆ ಸೀಮಿತವಾದುದಲ್ಲ. ಆ ಹಿಂದೂ ಧರ್ಮವನ್ನು ಬಿಜೆಪಿಗರೇ ಹಾಳು ಮಾಡುತ್ತಿದ್ದಾರೆ ಎಂದು ಆರೋಪಿದರು.

ಬಿಜೆಪಿಗರು, ಕಾಂಗ್ರೆಸ್ 70 ವರ್ಷದಲ್ಲಿ ಏನು ಮಾಡಿದೆ ಎಂದು ಕೇಳುತ್ತಾರೆ. ಆ ಪುಣ್ಯಾತ್ಮರಿಗೆ ಹೇಳಬೇಕು, ನೀವಿರುವ ಗುಜರಾತ್‌ಗೆ ನೀರು ಪೂರೈಸುವ ಬೃಹತ್ ಅಣೆಕಟ್ಟು ಕಟ್ಟಿದ್ದು ಕಾಂಗ್ರೆಸ್. ಆದರೆ ಇವರಿಂದ ಹಳ್ಳಿಗಳಲ್ಲಿ ಚಿಕ್ಕ ಚರಂಡಿಗಳನ್ನೂ ನಿರ್ಮಿಸಲಾಗುತ್ತಿಲ್ಲ. ಸುಳ್ಳು, ಜಾತಿ, ಧರ್ಮದ ಮೇಲೆ ಮತ ಕೇಳಲು ಬಂದಿಲ್ಲ. ಅಭಿವೃದ್ಧಿ ಕೆಲಸಗಳ ಮೇಲೆ ಮತ ಯಾಚಿಸಲು ಬಂದಿದ್ದೇನೆ. ಈ ಬಾರಿ ಒಂದು ಅವಕಾಶ ನನಗೆ ನೀಡಿ ಬದಲಾವಣೆ ನೋಡಿ ಎಂದರು.

ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಮಾತನಾಡಿ, ರಾಷ್ಟ್ರ, ರಾಜ್ಯ, ತಾಲೂಕಿನ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ದೊಡ್ಡದು. ಆದರೂ ಮಹಿಳೆಯರಿಗೆ ಲೋಕಸಭಾ ಟಿಕೆಟ್ ಸಿಗುವುದು ತುಂಬಾ ಕಷ್ಟವಾಗಿದೆ. ಉತ್ತರ ಕನ್ನಡ ಭಾಗದಲ್ಲಿ ಇದುವರೆಗೂ ಬಿಜೆಪಿ ಮಹಿಳೆಯರಿಗೆ ಒಮ್ಮೆಯೂ ಟಿಕೆಟ್ ನೀಡಿಲ್ಲ. ಆದರೆ ಕಾಂಗ್ರೆಸ್, ಗ್ಯಾರಂಟಿಯ ಜತೆಗೆ ಮಹಿಳಾ ಅಭ್ಯರ್ಥಿಯನ್ನು ನೀಡಿ ಮಹಿಳಾ ಸಬಲೀಕರಣಕ್ಕಾಗಿ ಪ್ರಯತ್ನಿಸುತ್ತಿದೆ. ಮಹಿಳೆಯರು ಕೂಡ ಗ್ಯಾರಂಟಿ ನೀಡಿ ನೆರವಾದ ಕಾಂಗ್ರೆಸ್ ಪರ ಮತ ಚಲಾಯಿಸಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Viral News: ಸಿಂಗಾಪುರ ಏರ್‌ಲೈನ್ಸ್‌ ಪೈಲಟ್‌ ಅಂತಾ ಹೇಳ್ಕೊಂಡು ಪೋಸ್‌ ಕೊಡ್ತಿದ್ದವ ಲಾಕ್‌!

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೈತಾನ‌ ಬಾರ್ಬೋಜ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸಂತೋಷ ರೇಣಕೆ, ರವಿ ತೋರಣಗಟ್ಟಿ, ಪುರಸಭೆ ಮಾಜಿ ಅಧ್ಯಕ್ಷ ಅಜರ್ ಬಸರಿಕಟ್ಟಿ, ಡಿ ವಾಯ್ ಡಾಂಗೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading

ಮಳೆ

Karnataka Weather : ಮಳೆಯಾಟ ಬಂದ್‌; 12 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಟ್ಯಾಕ್‌, ಯೆಲ್ಲೋ ಅಲರ್ಟ್‌

Karnataka Weather Forecast : ಮತ್ತೆ ವಿಪರೀತ ತಾಪಮಾನವು ಜನರ ತಲೆಕೆಡಿಸಿದೆ. ಕೆಲವಡೆ ಮಳೆಯು ಅಬ್ಬರಿಸಿದ್ದರೂ, ಅದರ ದುಪ್ಪಟ್ಟು ಎಂಬಂತೆ ಬಿಸಿಲ ಧಗೆಯು ಹೆಚ್ಚಾಗಿದೆ. ಕರ್ನಾಟಕದಲ್ಲಿ ಹೀಟ್‌ ವೇವ್‌ ಹೆಚ್ಚುತ್ತಿದ್ದು ಹವಾಮಾನ ತಜ್ಞರು ಯೆಲ್ಲೋ ಅಲರ್ಟ್‌ ಘೋಷಿಸಿದ್ದಾರೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರವು (rain News) ಕಡಿಮೆ ಆಗಿದ್ದು, ಶುಷ್ಕ ವಾತಾವರಣವು (Dry Weather) ಮುಂದುವರಿದಿದೆ. ಏ.26ರಂದು ಶುಕ್ರವಾರ ಬೆಳಗಾವಿ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಇನ್ನೂ ರಾಜಧಾನಿ ಬೆಂಗಳೂರಿನಲ್ಲಿ ಶುಷ್ಕ ಹವಾಮಾನವು ಇರಲಿದೆ. ಗರಿಷ್ಠ ಉಷ್ಣಾಂಶ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಿಸಿಲ ಧಗೆಯು ಹೆಚ್ಚಾಗಿ ಇರಲಿದೆ.

ತಾಪಮಾನ ಎಚ್ಚರಿಕೆ

ಕರ್ನಾಟಕದ ಒಳನಾಡಿನ ಪ್ರತ್ಯೇಕ ಕಡೆಗಳಲ್ಲಿ ಬಿಸಿಲಿನ ತಾಪಮಾನ ಏರಿಕೆ ಆಗಲಿದೆ. ಗರಿಷ್ಠ ಉಷ್ಣಾಂಶದಲ್ಲಿ ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಿರಲಿದೆ. ಏ. 26 ರಂದು ಕರಾವಳಿ ಕರ್ನಾಟಕದ ಪ್ರತ್ಯೇಕ ಪ್ರದೇಶಗಳಲ್ಲಿ ಹೀಟ್‌ ವೇವ್‌ ಇರಲಿದೆ. ಏ. 28 ರವರೆಗೆ ಕರಾವಳಿ ಕರ್ನಾಟಕದಲ್ಲಿ ಬಿಸಿ ಮತ್ತು ಆರ್ದ್ರತೆ ಹವಾಮಾನ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ತುಮಕೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ಜಿಲ್ಲೆಗಳಲ್ಲಿ ಬಿಸಿಲಿನ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: Summer Nail Art : ಸಮ್ಮರ್ ಸೀಸನ್​ನಲ್ಲಿ ಟ್ರೆಂಡಿಯಾದ ಕಲ್ಲಂಗಡಿ ಹಣ್ಣಿನ ನೇಲ್ಆರ್ಟ್

ಹೀಟ್‌ವೇವ್‌ ವಾರ್ನಿಂಗ್‌

ಹೀಟ್‌ ವೇವ್ಸ್‌ ಅಥವಾ ಶಾಖದ ಅಲೆಯ ಸಮಯದಲ್ಲಿ ಮಾಡಬೇಕಾದದ್ದು ಮತ್ತು ಮಾಡಬಾರದ ಕೆಲಸಗಳ ಕುರಿತು ಹವಾಮಾನ ತಜ್ಞರು ಸಲಹೆ ಮತ್ತು ಸೂಚನೆಗಳನ್ನು ನೀಡಿದ್ದಾರೆ. ಹೀಟ್‌ ವೇವ್ಸ್‌ನಿಂದಾಗಿ ಅತಿಯಾದ ಒತ್ತಡ ಉಂಟಾಗಿ ಇದು ಸಾವಿಗೆ ಕಾರಣವಾಗಬಹುದು.

1.ವಿಶೇಷವಾಗಿ ಮಧ್ಯಾಹ್ನ 12 ರಿಂದ 3 ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ.

2.ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಿರಿ.

3.ಸಾಧ್ಯವಾದಷ್ಟು ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಿ.

4.ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಛತ್ರಿ/ಟೋಪಿ, ಬೂಟುಗಳು ಅಥವಾ ಚಪ್ಪಲ್‌ಗಳನ್ನು ಬಳಸಿ.

5.ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ.

6.ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಹೊರಗಿನ ಕೆಲಸ ಮಾಡುವುದನ್ನು ತಪ್ಪಿಸಿ.

7.ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೊನೇಟೆಡ್ ತಂಪು ಪಾನೀಯಗಳನ್ನು ಕುಡಿಯಬೇಡಿ.

8.ಹೆಚ್ಚಿನ ಪ್ರೋಟೀನ್ ಆಹಾರವನ್ನು ತಪ್ಪಿಸಿ ಮತ್ತು ಹಳೆಯ ಆಹಾರವನ್ನು ಸೇವಿಸಬೇಡಿ.

9.ನೀವು ಹೊರಗೆ ಕೆಲಸ ಮಾಡುತ್ತಿದ್ದರೆ, ಟೋಪಿ ಅಥವಾ ಛತ್ರಿ ಬಳಸಿ ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಿ.

10.ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡಬೇಡಿ

11.ನಿಮಗೆ ಮೂರ್ಛೆ ಅಥವಾ ಅನಾರೋಗ್ಯ ಅನಿಸಿದರೆ, ತಕ್ಷಣ ವೈದ್ಯರನ್ನು ಭೇಟಿ ಮಾಡಿ.

12.ORS, ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ತೋರಣಿ (ಅಕ್ಕಿ ನೀರು), ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ. ಇದು ದೇಹವನ್ನು ತಂಪಾಗಿ ಇರಲು ಸಹಾಯ ಮಾಡುತ್ತದೆ.

13. ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಿ.

14. ನಿಮ್ಮ ಮನೆಯನ್ನು ತಂಪಾಗಿ ಇರಿಸಿ, ಪರದೆಗಳು, ಶಟರ್‌ಗಳು ಅಥವಾ ಸನ್‌ಶೇಡ್‌ಗಳನ್ನು ಬಳಸಿ ಮತ್ತು ರಾತ್ರಿಯಲ್ಲಿ ಕಿಟಕಿಗಳನ್ನು ತೆರೆಯಿರಿ.

15. ಫ್ಯಾನ್, ಒದ್ದೆ ಬಟ್ಟೆಗಳನ್ನು ಬಳಸಿ ಮತ್ತು ಆಗಾಗ ತಣ್ಣೀರಿನಲ್ಲಿ ಸ್ನಾನ ಮಾಡಿ.

ಸನ್‌ಸ್ಟ್ರೋಕ್‌ ಚಿಕಿತ್ಸೆಗಾಗಿ ಸಲಹೆಗಳು

-ವ್ಯಕ್ತಿಯನ್ನು ತಂಪಾದ ಸ್ಥಳದಲ್ಲಿ, ನೆರಳಿನ ಕೆಳಗೆ ಇರಿಸಿ. ಒದ್ದೆ ಬಟ್ಟೆಯಿಂದ ಒರೆಸಿ/ಆಗಾಗ ದೇಹವನ್ನು ತೊಳೆಯಿರಿ. ತಲೆಯ ಮೇಲೆ ಸಾಮಾನ್ಯ ತಾಪಮಾನದ ನೀರನ್ನು ಸುರಿಯಿರಿ. ದೇಹದ ಉಷ್ಣತೆಯನ್ನು ಕಡಿಮೆ ಮಾಡುವುದು ಮುಖ್ಯ ವಿಷಯ.
-ವ್ಯಕ್ತಿಗೆ ORS ಕುಡಿಯಲು ಅಥವಾ ನಿಂಬೆ ಸರಬತ್/ತೋರಣಿ ಅಥವಾ ದೇಹವನ್ನು ಪುನರ್ಜಲೀಕರಣಗೊಳಿಸಲು ಉಪಯುಕ್ತವಾದ ಯಾವುದನ್ನಾದರೂ ನೀಡಿ.
-ತಕ್ಷಣ ವ್ಯಕ್ತಿಯನ್ನು ಹತ್ತಿರದ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ, ಏಕೆಂದರೆ ಶಾಖದ ಹೊಡೆತಗಳು ಮಾರಣಾಂತಿಕವಾಗಬಹುದು.

ರೈತರು/ಕೃಷಿ ಕಾರ್ಮಿಕರು

ಹೊಲದಲ್ಲಿ ಕೆಲಸ ಮಾಡುವವರು ಟೋಪಿ ಅಥವಾ ಛತ್ರಿ ಬಳಸಿ. ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಿ. ಇನ್ನೂ ಪ್ರಯಾಣಿಸುವಾಗ ನಿಮ್ಮೊಂದಿಗೆ ನೀರನ್ನು ಒಯ್ಯಿರಿ. ಕ್ರೀಡಾಪಟು ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Lok Sabha Election 2024: ಶಿರಸಿಯಲ್ಲಿ ಏಪ್ರಿಲ್‌ 28ರಂದು ಪ್ರಧಾನಿ ನರೇಂದ್ರ ಮೋದಿ ಸಮಾವೇಶ

Lok Sabha Election 2024: ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ಶಿರಸಿಗೆ ನರೇಂದ್ರ ಮೋದಿ ಅವರು ಏ.28 ರಂದು ಬೆಳಿಗ್ಗೆ 11 ಗಂಟೆಗೆ ಆಗಮಿಸಲಿದ್ದಾರೆ. ಶಿರಸಿ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಸಮಾವೇಶ ನಡೆಯಲಿದ್ದು, ಭರದ ಸಿದ್ಧತೆ ನಡೆದಿದೆ.

VISTARANEWS.COM


on

PM Narendra Modi will visit Sirsi on April 28
ಶಿರಸಿ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಸಮಾವೇಶಕ್ಕೆ ಭರದ ಸಿದ್ಧತೆ ನಡೆಯುತ್ತಿರುವುದು.
Koo

ಕಾರವಾರ: ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ಶಿರಸಿಗೆ ನರೇಂದ್ರ ಮೋದಿ (PM Narendra Modi) ಅವರು ಏಪ್ರಿಲ್‌ 28 ರಂದು ಬೆಳಿಗ್ಗೆ 11 ಗಂಟೆಗೆ ಚುನಾವಣಾ (Lok Sabha Election 2024) ಪ್ರಚಾರಕ್ಕೆ ಆಗಮಿಸಲಿದ್ದಾರೆ.

ಮೊದಲ ಬಾರಿಗೆ ಶಿರಸಿಗೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಮತಯಾಚನೆ ನಡೆಸಲಿದ್ದಾರೆ.

ಇದನ್ನೂ ಓದಿ: Job Alert: ಹಟ್ಟಿ ಚಿನ್ನದ ಗಣಿ ಕಂಪೆನಿಯಲ್ಲಿದೆ ಸುವರ್ಣಾವಕಾಶ; 168 ಹುದ್ದೆಗಳಿಗೆ ಐಟಿಐ, ಡಿಪ್ಲೋಮಾ ಪಾಸಾದವರು ಅಪ್ಲೈ ಮಾಡಿ

ಇನ್ನು ಶಿರಸಿ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಸಮಾವೇಶ ನಡೆಯಲಿದ್ದು, ಮದುವಣಗಿತ್ತಿಯಂತೆ ಸ್ಟೇಡಿಯಂ ಸಿದ್ಧಗೊಳ್ಳುತ್ತಿದೆ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪೂರ್ವ ಸಿದ್ಧತೆಯನ್ನು ವೀಕ್ಷಿಸಿದರು.

ಈ ವೇಳೆ ಮಾತನಾಡಿದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಶಿರಸಿ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣಕ್ಕೆ ಯಾವುದೇ ರೀತಿಯ ಧಕ್ಕೆಯಾಗದಂತೆ ಜರ್ಮನ್ ಟೆಂಟ್ ನಿರ್ಮಿಸುತ್ತಿದ್ದೇವೆ. ಶಿರಸಿಯಲ್ಲಿ ಮೊದಲ ಬಾರಿ ಈ ತಂತ್ರಜ್ಞಾನ ಬಳಸಿ ಸಾರ್ವಜನಿಕ ಕಾರ್ಯಕ್ರಮ ಮಾಡುತ್ತಿದ್ದು, ತಿಪ್ಪಾದೇವಿ ಟೆಂಟ್ ಹೌಸ್‌ನ ಕೃಷ್ಣೇಗೌಡ್ರು ಸ್ಥಳದಲ್ಲಿಯೇ ಇದ್ದು ನಿರ್ಮಾಣದ ಜವಾಬ್ದಾರಿ ವಹಿಸಿದ್ದಾರೆ.

ಇದನ್ನೂ ಓದಿ: IPL 2024 : ಆರ್​​ಸಿಬಿಗೆ ಸಿಕ್ಕಿತು ಕೊನೆಗೂ ಒಂದು ವಿಜಯ; ಎಸ್​ಆರ್​ಎಚ್​ ವಿರುದ್ಧ 35 ರನ್ ಗೆಲುವು

ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಾರ್ಯಕರ್ತರ 25 ತಂಡಗಳನ್ನು ರಚಿಸಿ ಬೇರೆ ಬೇರೆ ಜವಾಬ್ದಾರಿಗಳನ್ನು ಅವರಿಗೆ ವಹಿಸಿದ್ದೇವೆ. ಒಂದು ಲಕ್ಷಕ್ಕೂ ಅಧಿಕ ಜನರು ಆಗಮಿಸಲಿದ್ದಾರೆ ಎಂದು ಅವರು ತಿಳಿಸಿದರು.

Continue Reading
Advertisement
lok sabha election
ಪ್ರಮುಖ ಸುದ್ದಿ21 mins ago

Lok Sabha Election : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಮುಕ್ತಾಯ; ದಾಖಲೆ ಪ್ರಮಾಣದಲ್ಲಿ ಮತ ಚಲಾವಣೆ

Karnataka weather Forecast
ಮಳೆ36 mins ago

Karnataka Weather : ಹಾಟ್‌ ಸಿಟಿಯಾದ ಬೆಂಗಳೂರು; ಇನ್ನು 3 ದಿನಗಳು ಈ ಜಿಲ್ಲೆಗಳು ಕಾದ ಕೆಂಡ

Lok Sabha Election 2024
ಕರ್ನಾಟಕ37 mins ago

Lok Sabha Election 2024: ಸಂಜೆ 5 ಗಂಟೆವರೆಗೆ ಶೇ.63.90 ಮತದಾನ; ಮಂಡ್ಯ ಕ್ಷೇತ್ರದಲ್ಲಿ ಗರಿಷ್ಠ!

Flower Crown Trend
ಫ್ಯಾಷನ್49 mins ago

Flower Crown Trend: ಬಣ್ಣಬಣ್ಣದ ಫಂಕಿ ಫ್ಲವರ್‌ ಕ್ರೌನ್‌ಗೆ ಯುವತಿಯರು ಫಿದಾ

Rinku Singh
ಕ್ರೀಡೆ1 hour ago

Rinku Singh : ಹಠ ಹಿಡಿದು ಕೊಹ್ಲಿಯಿಂದ ಮತ್ತೊಂದು ಬ್ಯಾಟ್ ಪಡೆದುಕೊಂಡ ರಿಂಕು ಸಿಂಗ್​​

Tejasvi Surya
ಕರ್ನಾಟಕ1 hour ago

Tejasvi Surya: ಧರ್ಮಾಧಾರಿತ ಮತಯಾಚನೆ; ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕೇಸ್‌

Lok Sabha Election 2024 Two die of heart attack in Tumakuru and Kodagu
Lok Sabha Election 20242 hours ago

Lok Sabha Election 2024: ಹೃದಯಾಘಾತಕ್ಕೆ 3 ಬಲಿ; ಮೈಸೂರು, ತುಮಕೂರಿನಲ್ಲಿ ಮತ ಹಾಕಿದ್ದ, ಕೊಡಗಲ್ಲಿ ವೋಟ್‌ ಹಾಕಲು ನಿಂತಿದ್ದವ ಸಾವು!

Lok Sabha Election 2024 Anant Nag outrage against non-voters
ಸ್ಯಾಂಡಲ್ ವುಡ್2 hours ago

Lok Sabha Election 2024: ಮತ ಹಾಕದವರನ್ನು ಮತ ಪಟ್ಟಿಯಿಂದ ತೆಗೆದುಹಾಕಬೇಕು: ಅನಂತ್ ನಾಗ್ ಸಲಹೆಗೆ ಏನಂತೀರಿ?

Healthcare Tips For Women
ಆರೋಗ್ಯ2 hours ago

Healthcare Tips For Women: 30 ವರ್ಷದ ಬಳಿಕ ಮಹಿಳೆಯರು ಮಾಡಿಸಿಕೊಳ್ಳಲೇಬೇಕಾದ ಆರೋಗ್ಯ ಪರೀಕ್ಷೆಗಳಿವು

Lok Sabha Election 2024
ಬೆಂಗಳೂರು2 hours ago

Lok Sabha Election 2024: ಮೋದಿ ಮತ್ತೊಮ್ಮೆ ಎಂಬ ನುಡಿ ಸತ್ಯವಾಗಲಿದೆ: ಎಂಎಲ್‌ಸಿ ಟಿ.ಎ.ಶರವಣ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ7 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20248 hours ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20248 hours ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ14 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ1 day ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ1 day ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ1 day ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20241 day ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ3 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

ಟ್ರೆಂಡಿಂಗ್‌