Yellapura News Yellapura Cooperative sector needs to be empowered says Sahakhara Ratna awardee R N Hegade Gorsagadde Yellapura News: ಸಹಕಾರಿ ವಲಯದ ಸಬಲೀಕರಣ ಅಗತ್ಯ; ಸಹಕಾರ ರತ್ನ ಆರ್.ಎನ್. ಹೆಗಡೆ ಗೋರ್ಸಗದ್ದೆ Vistara News
Connect with us

ಉತ್ತರ ಕನ್ನಡ

Yellapura News: ಸಹಕಾರಿ ವಲಯದ ಸಬಲೀಕರಣ ಅಗತ್ಯ; ಸಹಕಾರ ರತ್ನ ಆರ್.ಎನ್. ಹೆಗಡೆ ಗೋರ್ಸಗದ್ದೆ

Yellapura News: ಯಲ್ಲಾಪುರ ಪಟ್ಟಣದ ವೆಂಕಟರಮಣ ಮಠದಲ್ಲಿ ಏರ್ಪಡಿಸಿದ್ದ ಯಲ್ಲಾಪುರ ಅರ್ಬನ್ ಕೋ ಆಪ್ ಬ್ಯಾಂಕಿನ ಬೆಳ್ಳಿ ಹಬ್ಬ ಸಮಾರಂಭಕ್ಕೆ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಆರ್.ಎನ್. ಹೆಗಡೆ ಗೋರ್ಸಗದ್ದೆ ಚಾಲನೆ ನೀಡಿದರು.

VISTARANEWS.COM


on

Yellapura Urban Co Op Bank Silver Jubilee Ceremony Inauguration
ಯಲ್ಲಾಪುರ ಪಟ್ಟಣದ ವೆಂಕಟರಮಣ ಮಠದಲ್ಲಿ ಏರ್ಪಡಿಸಿದ್ದ ಯಲ್ಲಾಪುರ ಅರ್ಬನ್ ಕೋ ಆಪ್ ಬ್ಯಾಂಕಿನ ಬೆಳ್ಳಿ ಹಬ್ಬ ಸಮಾರಂಭಕ್ಕೆ, ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಆರ್.ಎನ್. ಹೆಗಡೆ ಗೋರ್ಸಗದ್ದೆ ಚಾಲನೆ ನೀಡಿದರು.
Koo

ಯಲ್ಲಾಪುರ: ನಮ್ಮ ತಾಲೂಕಿನಲ್ಲಿ ಸಹಕಾರಿ ಕ್ಷೇತ್ರವು (Co-operative sector) ಉತ್ತಮ ವಾತಾವರಣವನ್ನು ಸೃಷ್ಟಿಸಿದೆ, ಅಂತೆಯೇ ಗ್ರಾಮೀಣ (Rural) ಭಾಗದ ರೈತರ (farmer) ಬೆನ್ನೆಲುಬಾಗಿ ನಿಂತಿದೆ ಎಂದು ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಆರ್.ಎನ್. ಹೆಗಡೆ ಗೋರ್ಸಗದ್ದೆ ತಿಳಿಸಿದರು.

ಪಟ್ಟಣದ ವೆಂಕಟರಮಣ ಮಠದಲ್ಲಿ ಜರುಗಿದ ಯಲ್ಲಾಪುರ ಅರ್ಬನ್ ಕೋ ಆಪರೇಟಿವ್‌ ಬ್ಯಾಂಕಿನ ಬೆಳ್ಳಿ ಹಬ್ಬ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜನರಿಗೆ ಅತ್ಯಂತ ಸಮೀಪದಲ್ಲಿ, ಸುಲಭವಾಗಿ ಕೈಗೆಟಕುವಂತೆ ವ್ಯವಹಾರ ಒದಗಿಸುವಲ್ಲಿ ಸಹಕಾರಿ ಸಂಸ್ಥೆಗಳು ಪ್ರಮುಖ ಪಾತ್ರ ವಹಿಸುತ್ತಿದೆ. ಸಹಕಾರಿ ವಲಯದ ಸಬಲೀಕರಣ ಆಗಬೇಕಿದೆ. ಸಿಬ್ಬಂದಿಗಳ, ಆಡಳಿತ ಮಂಡಳಿಯ ಉತ್ತಮ ಆಳ್ವಿಕೆಯ ಫಲವಾಗಿ ಈ ಸಂಸ್ಥೆಯು ಉತ್ತಮವಾಗಿ ಬೆಳೆದು ಬಂದಿದೆ. ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ಉತ್ತಮ ಆಡಳಿತದೊಂದಿಗೆ ಸಂಸ್ಥೆ ಮುಂದುವರೆಯಲಿ ಎಂಬುದು ನನ್ನ ಆಶಯ ಎಂದು ಹೇಳಿದರು.

ಇದನ್ನೂ ಓದಿ: The Kerala Story : ಕೇರಳ ಸ್ಟೋರಿ ಸಿನಿಮಾ ನೋಡಲು ರಜೆ ಕೊಟ್ಟ ಕಾಲೇಜು, ವಿರೋಧ ವ್ಯಕ್ತವಾದ ಬಳಿಕ ಹಿಂದೇಟು

ಶ್ರೇಷ್ಠ ಸಹಕಾರಿ ಪ್ರಶಸ್ತಿ ಪುರಸ್ಕೃತ ಜಿ.ಎನ್. ಹೆಗಡೆ ಹಿರೇಸರ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಯನ್ನು ಸಹಕಾರಿ ಕ್ಷೇತ್ರಕ್ಕೆ ತಂದು, ಎಲ್ಲಾ ವಿಭಾಗದ ಸರ್ವತೋಮುಖ ಅಭಿವೃದ್ದಿ ಮಾಡಬೇಕು ಎಂಬುದೇ ಎಲ್ಲಾ ಸಹಕಾರಿಗಳ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.

ಯು.ಕೆ. ಬ್ಯಾಂಕ್ ಅಧ್ಯಕ್ಷ ಪ್ರಮೋದ ಹೆಗಡೆ ಮಾತನಾಡಿ, ಉತ್ತಮ ತಂಡವು ಈ ಸಂಸ್ಥೆಯನ್ನು ಕಟ್ಟಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಈ ಸಂಸ್ಥೆಯು ನಮ್ಮ ಊರಿನ ಹೆಸರನ್ನು ಸಹಕಾರಿ ಕ್ಷೇತ್ರದಲ್ಲಿ ಬೆಳೆಸುತ್ತಿದೆ. ಇದು ಜನ ಸಾಮಾನ್ಯರ ಬ್ಯಾಂಕ್ ಆಗಿದೆ. ಮಧ್ಯಮ ವರ್ಗದ ಜನರ ಕಷ್ಟಗಳಿಗೆ ಸ್ಪಂದಿಸುವ ಮೂಲಕ ಜನರ ಮನಸ್ಸಿನಲ್ಲಿ ಮನೆ ಮಾಡಿದೆ. ರಾಷ್ಟ್ರೀಯ ಬ್ಯಾಂಕ್‌ಗಳಿಗೆ ಪೈಪೋಟಿ ನೀಡುವಂತೆ ಸಹಕಾರಿ ಸಂಸ್ಥೆಗಳು ಬೆಳೆಯುವಂತೆ ಆಗಬೇಕು. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸಾಲ ಪಡೆಯಲು ಜನ ಸಾಮಾನ್ಯರು ಪರದಾಡಬೇಕು. ಆದರೆ ಸಹಕಾರಿ ಬ್ಯಾಂಕ್‌ಗಳು ಜನರ ಕಷ್ಟಕ್ಕೆ ಸ್ಪಂದಿಸಿ ಕಾರ್ಯ ನಿರ್ವಹಿಸುತ್ತದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪರಶುರಾಮ ಆಚಾರಿ ವಹಿಸಿದ್ದರು. ಸ್ಕಾಡ್ ವೆಸ್ ಮಹಿಳಾ ಸೌಹಾರ್ದ ಸಂಘದ ಅಧ್ಯಕ್ಷೆ ಸರಸ್ವತಿ ಎನ್‌ ರವಿ ಮಾತನಾಡಿದರು.

ಇದನ್ನೂ ಓದಿ: WTC Final 2023: ಲಂಡನ್​ನಲ್ಲಿ ಅಭ್ಯಾಸ ಆರಂಭಿಸಿದ ಟೀಮ್​ ಇಂಡಿಯಾ

ಇದೇ ಸಂದರ್ಭದಲ್ಲಿ ಸಂಘದ ಅಭಿವೃದ್ಧಿಗೆ ಸಹಕರಿಸಿದ ಗಣ್ಯರಿಗೆ ಹಾಗೂ ಉತ್ತಮ ವ್ಯವಹಾರ ನಡೆಸಿದ ಸದಸ್ಯರಿಗೆ ಸಂಘದ ವತಿಯಿಂದ ಗೌರವಿಸಿ, ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ವೈ.ಟಿ.ಎಸ್.ಎಸ್. ಶಿಕ್ಷಣ ಸಮಿತಿ ಅಧ್ಯಕ್ಷ ರವಿಕುಮಾರ ಶ್ಯಾನಭಾಗ್, ಸಂಘದ ಉಪಾಧ್ಯಕ್ಷ ನಾರಾಯಣ ಭಟ್, ಗ್ರಾಮದೇವಿ ದೇವಸ್ಥಾನದ ಟ್ರಸ್ಟಿ ರಾಜೇಂದ್ರ ಭಟ್, ಮಾಜಿ ಅಧ್ಯಕ್ಷರು, ನಿರ್ದೇಶಕರು ಇದ್ದರು. ಕು. ಅದಿತಿ ಭಟ್ ಪ್ರಾರ್ಥಿಸಿದರು. ನಿರ್ದೇಶಕ ನರಸಿಂಹ ಸಭಾಹಿತ ಸ್ವಾಗತಿಸಿದರು. ಸುಧೀರ್ ಕೊಡ್ಕಣಿ ವರದಿ ವಾಚಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಉಡುಪಿ

Weather Report: ಬಿಪರ್‌ಜಾಯ್‌ ಸೈಕ್ಲೋನ್ ಎಫೆಕ್ಟ್‌; ರಾಜ್ಯಾದ್ಯಂತ ಇನ್ನೂ 4 ದಿನ ಜಡಿ ಮಳೆ

Weather Report: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಎದ್ದಿದ್ದು, ಇದರ ಪ್ರಭಾವದಿಂದಾಗಿ ರಾಜ್ಯಾದ್ಯಂತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಯಾವ್ಯಾವ ಜಿಲ್ಲೆಗಳಿಗೆ ಅಲರ್ಟ್‌ ನೀಡಲಾಗಿದೆ ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Edited by

Rain news
ಸಂಗ್ರಹ ಚಿತ್ರ
Koo

ಬೆಂಗಳೂರು: ಬಿಪರ್‌ಜಾಯ್‌ ಸೈಕ್ಲೋನ್‌ (Cyclone Biporjoy) ಎಫೆಕ್ಟ್‌ನಿಂದಾಗಿ ರಾಜ್ಯಾದ್ಯಂತ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಕರಾವಳಿ ಸೇರಿ ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಮುಂದಿನ 4 ದಿನ ಮಳೆಯ ಅಬ್ಬರ (Weather Report) ಇರಲಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್‌, ಗದಗ ಹಾಗೂ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಬಾಗಲಕೋಟೆ, ಧಾರವಾಡ, ಹಾವೇರಿಯಲ್ಲಿ ಒಣಹವೆ ಇರಲಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಲ್ಲೂ ಮಳೆಯ ಅಬ್ಬರ ಇರಲಿದೆ. ವಿಜಯನಗರ, ದಾವಣಗೆರೆಯಲ್ಲಿ ಯಾವುದೇ ಮಳೆ ಮುನ್ಸೂಚನೆ ಇಲ್ಲ.

ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಸುಳಿಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.

ತಾಪಮಾನ ಏರಿಕೆ ಮುನ್ಸೂಚನೆ

ಮಳೆ ಎಚ್ಚರಿಕೆಯ ನಡುವೆಯೂ ಗರಿಷ್ಠ ಉಷ್ಣಾಂಶವು ರಾಜ್ಯಾದ್ಯಂತ ಹೆಚ್ಚಾಗುವ ಸಾಧ್ಯತೆ ಇದೆ. ಸಾಮಾನ್ಯಕ್ಕಿಂತ 4-5 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಯಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗಲಿದೆ. ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-50 ಕಿ.ಮೀ ಯಿಂದ 60 ಕಿ.ಮೀ ವೇಗದಲ್ಲಿ ಬೀಸುವ ವಾತಾವರಣ ಇರಲಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಇದನ್ನೂ ಓದಿ: Cyclone Biparjoy: ಬಿಪರ್‌ಜಾಯ್‌ ಚಂಡಮಾರುತ ಭೀತಿ; ಈ ಪದದ ಅರ್ಥ ಏನು? ಮೊದಲು ಎಲ್ಲಿ ಬಳಕೆ?

ಮಂಗಳವಾರ (ಜೂ.6) ಶಿವಮೊಗ್ಗದ ಹೊಳೆಹೊನ್ನೂರು, ಹಾಸನದ ಚನ್ನರಾಯಪಟ್ಟಣದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಕಲಬುರಗಿಯ ಮಹಾಗಾವ್, ಯಾದಗಿರಿಯ ಶೋರಪುರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಗರಿಷ್ಠ ಉಷ್ಣಾಂಶ 39.9 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಉತ್ತರ ಕನ್ನಡ

Karwar News: ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ: ಇಬ್ಬರು ಅಧಿಕಾರಿಗಳಿಗೆ 2 ವರ್ಷ ಜೈಲು

Karwar News: ಕಾರವಾರದಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿ ಹಾಗೂ ನಿವೃತ್ತ ಅಧಿಕಾರಿ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸಿಜೆಎಮ್ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.

VISTARANEWS.COM


on

Edited by

Uttara Kannada District Court
Koo

ಕಾರವಾರ: ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ (Karwar News) ಆರೋಪಿಗಳಾದ ವಾಣಿಜ್ಯ ತೆರಿಗೆ ಅಧಿಕಾರಿ ರಾಜು ಪವಾರ ಮತ್ತು ನಿವೃತ್ತ ಅಧಿಕಾರಿ ಶಿವಾನಂದ ನಾಯ್ಕ ಎಂಬುವವರಿಗೆ ನ್ಯಾಯಾಲಯ 2 ವರ್ಷ ಶಿಕ್ಷೆ ಮತ್ತು 15 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

ಕಳೆದ 2014ರಲ್ಲಿ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ನೌಕರೆಯೊಬ್ಬರು ಈ ಇಬ್ಬರು ಆರೋಪಿತರು ಲೈಂಗಿಕ ಕಿರುಕುಳ ನೀಡಿದ ಕುರಿತು ದೂರು ದಾಖಲಿಸಿದ್ದರು‌. ಅದರಂತೆ ಸಿಜೆಎಮ್ ನ್ಯಾಯಾಲಯವು ಪ್ರಕರಣದ ವಿಚಾರಣೆ ನಡೆಸಿದ್ದು ಈ ಸಂಬಂಧ ಆರೋಪಿತರಿಗೆ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

ಆರೋಪಿತ ವಾಣಿಜ್ಯ ತೆರಿಗೆ ಅಧಿಕಾರಿ ರಾಜು ಪವಾರ ಸದ್ಯ ಕುಮಟಾ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಮತ್ತೊಬ್ಬ ಆರೋಪಿ ಶಿವಾನಂದ ನಾಯ್ಕ ನಿವೃತ್ತಿ ಹೊಂದಿದ್ದು, ಇಬ್ಬರ ವಿರುದ್ಧದ ಆರೋಪ ಸಾಬೀತಾಗಿದೆ. ಈ ಹಿನ್ನೆಲೆ ನ್ಯಾಯಾಧೀಶರಾದ ರೇಷ್ಮಾ ರೋಡ್ರಿಗ್ರೀಸ್ ಕಲಂ 354, 354(A), 506 ಸಹಿತ 34 ಐಪಿಸಿ ಅಡಿ ಆರೋಪಿಗಳಿಗೆ ತಲಾ ಎರಡು ವರ್ಷ ಕಾರಾಗೃಹ ವಾಸ ಮತ್ತು 15 ಸಾವಿರ ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.

ಇದನ್ನೂ ಓದಿ | Karwar Accident: ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸವಾರರ ಸಾವು

ಸರ್ಕಾರದ ಪರವಾಗಿ ಕಾರವಾರದ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರಾದ ಮಂಜುನಾಥ ಹೊನ್ನಯ್ಯ ನಾಯ್ಕ ವಾದ ಮಂಡಿಸಿದ್ದರು.

Continue Reading

ಉತ್ತರ ಕನ್ನಡ

Karwar Accident: ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸವಾರರ ಸಾವು

Karwar Accident: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ರಾಷ್ಟ್ರೀಯ ಹೆದ್ದಾರಿ 66ರ ತೋಡೂರು ಗ್ರಾಮದಲ್ಲಿ ಮಂಗಳವಾರ ರಾತ್ರಿ ಅಪಘಾತ ನಡೆದಿದೆ.

VISTARANEWS.COM


on

Edited by

Bike accident in karwar
Koo

ಕಾರವಾರ: ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಾರವಾರದ ರಾಷ್ಟ್ರೀಯ ಹೆದ್ದಾರಿ-66ರ ತೋಡೂರು ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಸಂದೀಪ್ ಗುನಗ, ಲಿಂಗರಾಜು ಮೃತ ಬೈಕ್ ಸವಾರರು. ಕಾರವಾರ ಗ್ರಾಮೀಣ ಠಾಣೆ ಪೊಲೀಸರು ಸ್ಥಳ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಯಚೂರಿನಲ್ಲಿ ಬೈಕ್ ಮೇಲೆ ಲಾರಿ ಹರಿದು ಇಬ್ಬರ ದುರ್ಮರಣ

ರಾಯಚೂರು: ಬೈಕ್ ಮೇಲೆ ಲಾರಿ ಹರಿದಿದ್ದರಿಂದ ಇಬ್ಬರು ಸವಾರರು ದುರ್ಮರಣ ಹೊಂದಿರುವ ಘಟನೆ ನಗರದ ಸಾಥ್ ಮೈಲ್ ಬಳಿ ನಡೆದಿದೆ. ಹುಣಿಶ್ಯಾಳಹುಡಾ ಗ್ರಾಮದ ಹನುಮೇಶ (30), ಆಂಜನೇಯ (35) ಮೃತರು. ರಾಯಚೂರು ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ | Assault Case: ಹಣಕಾಸಿನ ಕಿರಿಕ್‌; ರಾಜಿಗೆಂದು ಕರೆಸಿ ಮಚ್ಚು, ಲಾಂಗು ಬೀಸಿದರು

ಬಾವಿಯಲ್ಲಿ ಬಿದ್ದು ವೃದ್ಧೆ ಸಾವು

Elderly woman dies after falling into well in kushtagi

ಕೊಪ್ಪಳ: ಸೌದೆ ತರಲು ಹೋಗಿದ್ದಾಗ ಬಾವಿಯಲ್ಲಿ ಬಿದ್ದು ವೃದ್ಧೆಯೊಬ್ಬರು ಮೃತಪಟ್ಟಿರುವುದು ಜಿಲ್ಲೆ ಕುಷ್ಟಗಿ ತಾಲೂಕಿನ ರ‍್ಯಾ ವಣಕಿಯಲ್ಲಿ ನಡೆದಿದೆ. ಗ್ರಾಮದ ಭರಮವ್ವ ಹರಿಜನ (65) ಮೃತರು. ಈಕೆ ಸೋಮವಾರ ಸೌದೆ ತರಲು ಹೋಗಿದ್ದರು. ಆದರೆ, ಮಂಗಳವಾರ ಬಸಪ್ಪ ಎಂಬುವವರ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಘಟನಾ ಸ್ಥಳಕ್ಕೆ ಕುಷ್ಟಗಿ ಪೊಲೀಸರ ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

ಉತ್ತರ ಕನ್ನಡ

Uttara kannada News: ಇನ್ಸ್ಪಿರೇಶನ್ ಎಜುಕೇಷನಲ್ ಟ್ರಸ್ಟ್‌ನಿಂದ ಹೊನ್ನಾವರದಲ್ಲಿ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು

Uttara kannada News: ಹೊನ್ನಾವರ ತಾಲೂಕಿನ ಸೇಂಟ್ ಥಾಮಸ್ ಹೈಸ್ಕೂಲ್‌ನ ಹಳೇ ವಿದ್ಯಾರ್ಥಿಗಳ ಇನ್ಸ್ಪಿರೇಶನ್ ಎಜುಕೇಷನಲ್ ಟ್ರಸ್ಟ್‌ನಿಂದ ಕಳೆದ 3 ವರ್ಷಗಳಿಂದ ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ, ಆರ್ಥಿಕ ನೆರವು ನೀಡುತ್ತಿದ್ದು, ಪ್ರಸಕ್ತ ವರ್ಷ ಬಡ ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ಆರ್ಥಿಕ ನೆರವು ನೀಡಲಾಯಿತು.

VISTARANEWS.COM


on

Edited by

Distribution of uniforms along with the poor in Honnavar
ಹೊನ್ನಾವರ ತಾಲೂಕಿನ ಸೇಂಟ್‌ ಥಾಮಸ್ ಹೈಸ್ಕೂಲ್‌ನಲ್ಲಿ ಇನ್ಸ್ಪಿರೇಶನ್ ಎಜುಕೇಷನಲ್ ಟ್ರಸ್ಟ್‌ ವತಿಯಿಂದ ಬಡ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲಾಯಿತು.
Koo

ಹೊನ್ನಾವರ: ತಾಲೂಕಿನ ಸೇಂಟ್‌ ಥಾಮಸ್ ಹೈಸ್ಕೂಲ್‌ನಲ್ಲಿ ಇನ್ಸ್ಪಿರೇಶನ್ ಎಜುಕೇಷನಲ್ ಟ್ರಸ್ಟ್‌ ವತಿಯಿಂದ ಬಡ ವಿದ್ಯಾರ್ಥಿಗಳಿಗೆ (Poor students) ಸಮವಸ್ತ್ರ (Uniforms) ಹಾಗೂ ಆರ್ಥಿಕ ನೆರವು ನೀಡಲಾಯಿತು.

ಶಾಲೆಯ ಹಳೇ ವಿದ್ಯಾರ್ಥಿಗಳಿಂದ ರಚಿಸಿಕೊಂಡ ಇನ್ಸ್ಪಿರೇಶನ್ ಎಜುಕೇಷನಲ್ ಟ್ರಸ್ಟ್‌ನ ವತಿಯಿಂದ ಕಳೆದ ಮೂರು ವರ್ಷಗಳಿಂದ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು, ಸಮವಸ್ತ್ರ ವಿತರಣೆ, ಉನ್ನತ ವಿದ್ಯಾಭ್ಯಾಸಕ್ಕೆ ಮಾರ್ಗದರ್ಶನ ಸೇರಿದಂತೆ ವಿವಿಧ ಸಮಾಜ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ ಎಂದು ಟ್ರಸ್ಟ್‌ನ ಸದಸ್ಯರು ತಿಳಿಸಿದರು.

ಇದನ್ನೂ ಓದಿ: IDBI Recruitment 2023 : ಐಡಿಬಿಐ ಬ್ಯಾಂಕ್‌ನಲ್ಲಿ 1,036 ಎಕ್ಸಿಕ್ಯೂಟಿವ್‌ ಹುದ್ದೆ; ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನ

ಕಾರ್ಯಕ್ರಮದಲ್ಲಿ ಪ್ರಸುತ್ತ ವರ್ಷ ಸೇಂಟ್ ಥಾಮಸ್ ಹೈಸ್ಕೂಲ್‌ನ 20 ಬಡ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸುವುದರ ಜತೆಗೆ 20ಕ್ಕೂ ಹೆಚ್ಚು ಕಾಲೇಜು ವಿದ್ಯಾರ್ಥಿಗಳಿಗೆ ವ್ಯಾಸಂಗಕ್ಕೆ ಆರ್ಥಿಕ ನೆರವನ್ನು ಟ್ರಸ್ಟ್‌ ವತಿಯಿಂದ ನೀಡಲಾಯಿತು.

ಇದನ್ನೂ ಓದಿ: Traffic Police:‌ ಇನ್ಮುಂದೆ ಟ್ರಾಫಿಕ್‌ ರೂಲ್ಸ್‌ ಬ್ರೇಕ್‌ ಮಾಡಿದ್ರೆ ಪೊಲೀಸ್ರು ಅಡ್ಡ ಹಾಕ್ತಾರೆ ಹುಷಾರ್!

ಈ ಸಂದರ್ಭದಲ್ಲಿ ಟ್ರಸ್ಟಿನ ಸದಸ್ಯರಾದ ಗುರುರಾಜ ನಾಯಕ್, ಸಂತೋಷ ಮೇಸ್ತ್, ಶಂಕರ ಗೌಡ ಗುಣವಂತೆ ಹಾಗೂ ಸೆಂಟ್ ಥಾಮಸ್ ಹೈಸ್ಕೂಲ್ ಪ್ರಾಚಾರ್ಯರು ಮತ್ತು ಸಿಬ್ಬಂದಿ ಹಾಗೂ ನಾಗರಾಜ್, ಶ್ರೀಕಾಂತ್ ನಾಯ್ಕ, ಡಾ. ಸಚಿನ್, ವೆಂಕಟೇಶ ಗಂಗಾವಳಿಕಾರ, ಇಸ್ಮಾಯಿಲ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

Continue Reading
Advertisement
wrestlers protest
ಕ್ರೀಡೆ7 mins ago

Wrestlers Protest: ಜೂನ್​ 15ರ ತನಕ ಪ್ರತಿಭಟನೆ ಸ್ಥಗಿತಗೊಳಿಸಿದ ಕುಸ್ತಿಪಟುಗಳು

abhishek ambareesh wedding Reception
ಕರ್ನಾಟಕ9 mins ago

Abhishek Ambareesh Reception: ಅಭಿ- ಅವಿವಾ ಅದ್ಧೂರಿ ಆರತಕ್ಷತೆ; ಲೈವ್‌ ವಿಡಿಯೊ ಇಲ್ಲಿದೆ

KS Bharat
ಕ್ರಿಕೆಟ್9 mins ago

WTC Final 2023 : ವಿಕೆಟ್​ ಕೀಪರ್​ ಕೆಎಸ್​ ಭರತ್​​ ಹಿಡಿದ ರೋಮಾಂಚಕಾರಿ ಕ್ಯಾಚ್​ ಹೀಗಿತ್ತು

for tenants also to wrestlers protest and more news
ಕರ್ನಾಟಕ13 mins ago

ವಿಸ್ತಾರ TOP 10 NEWS: ಬಾಡಿಗೆಯವರಿಗೂ ಫ್ರೀ ಕರೆಂಟ್‌ನಿಂದ, ಅಂತಿಮ ಘಟ್ಟದಲ್ಲಿ ಕುಸ್ತಿ ಕದನದವರೆಗಿನ ಪ್ರಮುಖ ಸುದ್ದಿಗಳಿವು

Anita Madhu Bangarappa was felicitated by Block Mahila Congress at soraba
ಕರ್ನಾಟಕ25 mins ago

Shivamogga News: ಸೊರಬ ಕ್ಷೇತ್ರದ ಮತದಾರರಿಗೆ ಅಭಿನಂದನೆ ಸಲ್ಲಿಸಿದ ಅನಿತಾ ಮಧು ಬಂಗಾರಪ್ಪ

MLA TB Jayachandra visited Shira Public Hospital
ಕರ್ನಾಟಕ27 mins ago

Tumkur News: ಶಿರಾ ಸಾರ್ವಜನಿಕ ಆಸ್ಪತ್ರೆಗೆ ಶಾಸಕ ಟಿ.ಬಿ. ಜಯಚಂದ್ರ ಭೇಟಿ, ಪರಿಶೀಲನೆ

Farooq Abdullah meets HD Devegowda
ಕರ್ನಾಟಕ38 mins ago

Farooq Abdullah: ಮಾಜಿ ಪಿಎಂ ದೇವೇಗೌಡ, ಸಿಎಂ ಸಿದ್ದರಾಮಯ್ಯ ಜತೆ ಫಾರೂಕ್‌ ಅಬ್ದುಲ್ಲಾ ʼಲೋಕಾʼಭಿರಾಮ!

Good Train Accident
ದೇಶ48 mins ago

Odisha Train Accident : ಅಯ್ಯೊ ದುರ್ವಿಧಿ, ಟ್ರೈನ್ ಕೆಳಗೆ ಮಲಗಿದ್ದವರು ಅಲ್ಲೇ ಅಪ್ಪಚ್ಚಿ!

BJP lose in karnataka
ಕರ್ನಾಟಕ48 mins ago

BJP Karnataka: ಸೋತು 25 ದಿನದ ನಂತರ ಅವಲೋಕನ ನಡೆಸಲಿದೆ ಬಿಜೆಪಿ!: ಗೆದ್ದ-ಸೋತವರ ಸಭೆ ಗುರುವಾರ

Kolhapur Protest
ದೇಶ57 mins ago

ಮಹಾರಾಷ್ಟ್ರದಲ್ಲೂ ಟಿಪ್ಪು ವಿವಾದ;‌ ಕೊಲ್ಹಾಪುರದಲ್ಲಿ ಹಿಂದು ಸಂಘಟನೆಗಳ ಪ್ರತಿಭಟನೆ, ಪರಿಸ್ಥಿತಿ ಉದ್ವಿಗ್ನ

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ15 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ4 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ6 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್8 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

abhishek ambareesh wedding Reception
ಕರ್ನಾಟಕ9 mins ago

Abhishek Ambareesh Reception: ಅಭಿ- ಅವಿವಾ ಅದ್ಧೂರಿ ಆರತಕ್ಷತೆ; ಲೈವ್‌ ವಿಡಿಯೊ ಇಲ್ಲಿದೆ

N Chaluvarayaswamy about Congress guarantee
ಕರ್ನಾಟಕ8 hours ago

Video Viral: ಉಚಿತ ಗ್ಯಾರಂಟಿ ಯೋಜನೆ ಚುನಾವಣೆಯ ಚೀಪ್‌ ಗಿಮಿಕ್‌ ಎಂದ ಕೃಷಿ ಸಚಿವ ಚಲುವರಾಯಸ್ವಾಮಿ!

horoscope today love and horoscope
ಪ್ರಮುಖ ಸುದ್ದಿ15 hours ago

Horoscope Today : ಈ ರಾಶಿಯವರಿಗೆ ಇಂದು ಪ್ರೀತಿ ಅಂಕುರವಾಗಲಿದೆಯಂತೆ!

Salman Khan Bigg Boss ott 2
South Cinema1 day ago

Big Boss OTT 2: ಜೂನ್ 17ಕ್ಕೆ ಬಿಗ್‌ಬಾಸ್ ಒಟಿಟಿ 2 ಪ್ರಸಾರ, ಇಲ್ಲೂ ನಿರೂಪಕ ಸಲ್ಲೂ!

dining table vastu tips
ಭವಿಷ್ಯ1 day ago

Vastu Tips : ಮನೆಯ ಡೈನಿಂಗ್‌ ಹಾಲ್‌ನಲ್ಲಿ ಈ ಆಕಾರದ ಟೇಬಲ್‌ ಇರಲೇಬಾರದು!

pineapple cultivation
ಕೃಷಿ1 day ago

Krishi Khajane : ಆರೋಗ್ಯಕರ ಅನಾನಸ್‌ ಬೆಳೆಯುವುದು ಕಷ್ಟವೇನಲ್ಲ!

health and horoscope horoscope today
ಪ್ರಮುಖ ಸುದ್ದಿ2 days ago

Horoscope Today : ಈ ರಾಶಿಯವರ ಆರೋಗ್ಯ ಕೊಂಚ ಹದಗೆಡುವ ಸಾಧ್ಯತೆ, ಇರಲಿ ಎಚ್ಚರ!

Chakravarthy Sulibele and MB Patil
ಕರ್ನಾಟಕ2 days ago

Chakravarthy Sulibele: ಜೈಲಿಗೆ ಕಳುಹಿಸಲೇ ಬೇಕು ಅಂತಿದ್ದರೆ ಬನ್ನಿ, ನಾನೂ ನೋಡ್ತೇನೆ: ಎಂಬಿಪಿಗೆ ಸೂಲಿಬೆಲೆ ಸವಾಲ್‌

Sevanthige Flower Farming
ಕೃಷಿ2 days ago

Krishi Khajane : ಬಿಳಿ ಸೇವಂತಿಗೆ ಬೆಳೆದರೆ ಒಂದು ಎಕರೆಗೆ 5 ಲಕ್ಷ ರೂ. ಲಾಭ!

Horoscope Today
ಪ್ರಮುಖ ಸುದ್ದಿ3 days ago

Horoscope Today : ಈ ನಾಲ್ಕು ರಾಶಿಯ ಉದ್ಯೋಗಿಗಳಿಗೆ ಇಂದು ಅದೃಷ್ಟದ ದಿನವಂತೆ!

ಟ್ರೆಂಡಿಂಗ್‌

error: Content is protected !!