Yoga Day 2022 | ಯೋಗ ಜೀವನದ ಭಾಗವಲ್ಲ, ಜೀವನ ಮಾರ್ಗ ಎಂದ ಮೋದಿ - Vistara News

ಕರ್ನಾಟಕ

Yoga Day 2022 | ಯೋಗ ಜೀವನದ ಭಾಗವಲ್ಲ, ಜೀವನ ಮಾರ್ಗ ಎಂದ ಮೋದಿ

Yoga Day 2022 | ಕೋವಿಡ್‌ ಕಾರಣದಿಂದಾಗಿ ಕಳೆದೆರಡು ವರ್ಷ ಸಾರ್ವಜನಿಕವಾಗಿ ಯೋಗದಿನ ಕಾರ್ಯಕ್ರಮ ನಡೆದಿರಲಿಲ್ಲ. ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ನಡೆಯುತ್ತಿರುವ 8ನೇ ಅಂತಾರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮವನ್ನು ಇಡೀ ವಿಶ್ವ ಕಾತರದಿಂದ ಕಾದು ನೋಡುತ್ತಿದೆ.

VISTARANEWS.COM


on

modi yoga day mysuru
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ಯೋಗವನ್ನು ಜೀವನದ ಒಂದು ಭಾಗವಾಗಿಯಷ್ಟೆ ಪರಿಗಣಿಸಿದರೆ ಸಾಲದು. ಯೋಗ ಎನ್ನುವುದು ಜೀವನದ ಮಾರ್ಗವಾಗಬೇಕು. ಈ ಮೂಲಕ ವಿಶ್ವಶಾಂತಿಗೆ ನಮ್ಮ ಕೊಡುಗೆ ನೀಡೋಣ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು.

ಮೈಸೂರು ಅರಮನೆ ಆವರಣದಲ್ಲಿ ಆಯೋಜಿಸಿರುವ ೮ನೇ ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ನೇರವಾಗಿ ಭಾಗವಹಿಸಿದ್ದ ಸುಮಾರು ೧೫ ಸಾವಿರ ಜನರು ಹಾಗೂ ವರ್ಚುವಲ್‌ ಆಗಿ ವಿಶ್ವದಾದ್ಯಂತ ಭಾಗಿಯಾಗಿರುವ ಕೋಟ್ಯಂತರ ಜನರನ್ನುದ್ದೇಶಿಸಿ ಮಾತನಾಡಿದರು.

ಇದನ್ನೂ ಓದಿ | Horoscope Today | ಅಂತಾರಾಷ್ಟ್ರೀಯ ಯೋಗದ ದಿನವಾದ ಇಂದು ಯಾರ ಯೋಗ ಹೇಗಿದೆ?

ಯತ್ಪಿಂಡೆ, ತತ್‌ ಬ್ರಹ್ಮಾಂಡೆ ಎಂಬ ಮಾತಿದೆ. ಅಂದರೆ, ಅಣುವಿನಲ್ಲಿರುವ ಅಂಶವೇ ಇಡೀ ಬ್ರಹ್ಮಾಂಡದಲ್ಲೂ ಇದೆ ಎಂದರ್ಥ. ಯೋಗದಿಂದ ನಮ್ಮನ್ನು ನಾವು ಅರಿಯುತ್ತೇವೆ. ನಮ್ಮ ಆತ್ಮದರ್ಶನವಾಗುತ್ತದೆ. ಇದರ ಮೂಲಕ ಇಡೀ ವಿಶ್ವದ ದರ್ಶನವಾಗುತ್ತದೆ. ಇಡೀ ವಿಶ್ವವೇ ಒಂದು ಅಂಶ ಎಂದು ಪರಿಗಣಿಸಿದಾಗ ವಿಶ್ವದ ಬೇರೆ ಭಾಗಗಳ ಸಮಸ್ಯೆಯ ಅರಿವಾಗುತ್ತದೆ. ವಿಶ್ವಕ್ಕೆ ತೊಂದರೆಯಾಗದಂತೆ ಜೀವಿಸುವ ಮಾರ್ಗ ಕಾಣುತ್ತದೆ. ಈ ಸಮಾನ ಆತ್ಮದರ್ಶನದಿಂದಾಗಿ ಜಾಗತಿಕ ಶಾಂತಿ ಮೂಡುತ್ತದೆ. ಈ ರೀತಿಯಾಗಿ ಯೋಗವು ದೇಶ ಹಾಗೂ ವಿಶ್ವವನ್ನು ಜೋಡಿಸುತ್ತದೆ. ಈ ಮೂಲಕ ಯೋಗವು ಸಮಸ್ಯೆ ಪರಿಹಾರಕವಾಗುತ್ತದೆ ಎಂದರು.

ದೇಶ ೭೫ನೇ ಸ್ವಾತಂತ್ರ್ಯ ವರ್ಷಾಚರಣೆ ನಡೆಸುತ್ತಿರುವ ಸಂದರ್ಭದಲ್ಲಿ ಯೋಗ ದಿನ ಆಚರಿಸುತ್ತಿದ್ದೇವೆ. ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕೆ ಸ್ಫೂರ್ತಿ ನೀಡಿದ ಶಕ್ತಿಯೇ ನಮಗೆ ಇಂದೂ ಯೋಗ ದಿನ ಆಚರಣೆಗೆ ಸ್ಫೂರ್ತಿ ನೀಡುತ್ತಿದೆ. ಇಂದು ೭೫ ಐತಿಹಾಸಿಕ ಸ್ಥಾನಗಳಲ್ಲಿ ಯೋಗದಿನ ನಡೆಯುತ್ತಿದೆ. ಈ ಸ್ಥಾನಗಳು ಸಾಂಸ್ಕೃತಿಕ ಶಕ್ತಿಯ ಕೇಂದ್ರಗಳು. ಈ ಎಲ್ಲ ಕೇಂದ್ರಗಳೂ ಯೋಗ ದಿನದ ಕಾರಣಕ್ಕೆ ಒಂದಾಗುತ್ತಿವೆ. ಯೋಗವು ಇಡೀ ದೇಶವನ್ನು ಒಂದುಗೂಡಿಸುತ್ತಿದೆ ಎಂದು ಮೋದಿ ಹೇಳಿದರು.

ಗಾರ್ಡಿಯನ್‌ ರಿಂಗ್‌ ಆಫ್‌ ಯೋಗ ಪ್ರಯೋಗ ಇಡೀ ವಿಶ್ವದಲ್ಲಿ ಇಂದು ನಡೆಯುತ್ತಿದೆ. ಸೂರ್ಯೋದಯದ ಜತೆಗೆ, ಸೂರ್ಯನ ವೇಗದ ಜತೆಗೆ ಜನರು ಜೋಡಿಸಿಕೊಳ್ಳುತ್ತಿದ್ದಾರೆ. ಯೋಗ ಕೇವಲ ಜೀವನದ ಭಾಗವಲ್ಲ. ಇದು ಜೀವನ ಮಾರ್ಗ. ಹಾಗೆಂದರೆ, ನಮ್ಮ ದಿನ ಯೋಗದ ಜತೆಗೆ ಆರಂಭವಾಗಬೇಕು. ಇದಕ್ಕಿಂತ ಉತ್ತಮ ಆರಂಭ ಯಾವುದೂ ಬೇಕಿಲ್ಲ ಎಂದು ಬಣ್ಣಿಸಿದರು.

ಯೋಗವನ್ನು ದಿನದ ಯಾವುದಾದರೂ ಒಂದು ಸಮಯ ಹಾಗೂ ಸ್ಥಳಕ್ಕೆ ಮೀಸಲಿಡಬೇಕಿಲ್ಲ. ಕೆಲವು ಜನರು ಕಚೇರಿಯಲ್ಲೂ ಯೋಗ ಮಾಡುತ್ತಾರೆ. ಕೆಲಸದಲ್ಲಿ ಎಷ್ಟೇ ಒತ್ತಡವಿದ್ದರೂ ಕೆಲವು ನಿಮಿಷಗಳ ಯೋಗವು ನಮ್ಮ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ, ಮನಸ್ಸಿಗೆ ಉಲ್ಲಾಸ ನೀಡುತ್ತದೆ. ಯೋಗವನ್ನು ಹೆಚ್ಚುವರಿ ಕೆಲಸದಂತೆ ಭಾವಿಸದೆ, ನಮ್ಮ ಜೀವನ, ಆಹಾರ, ನಡವಳಿಕೆಯ ಭಾಗವಾಗಿಸಿಕೊಳ್ಳಬೇಕು. ಯೋಗವನ್ನು ಜೀವಿಸಲು ಆರಂಭಿಸಿದಾಗ, ಯೋಗ ಎಂಬುದು ಒಂದು ಕೆಲಸವಾಗುವುದಿಲ್ಲ. ಯೋಗ ಎನ್ನುವುದು ಜೀವನವನ್ನು ಸಂಭ್ರಮಿಸುವ ಮಾಧ್ಯಮವಾಗುತ್ತದೆ ಎಂದರು.

ಯೋಗದ ಕುರಿತು ಯುವಜನತೆ ನವೀನ ಆಲೋಚನೆಗಳನ್ನು ಹೊಂದಿರುವುದಕ್ಕೆ ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದರು. ಯುವಕರು ಇಂದು ಅನೇಕ ಹೊಸ ಯೋಜನೆಗಳೊಂದಿಗೆ ಬಂದಿದ್ದಾರೆ. ಅದಕ್ಕಾಗಿಯೇ ಸ್ಟಾರ್ಟಪ್‌ ಯೋಗ, ಇನೊವೇಟಿವ್‌ ಡಿಜಿಟಲ್‌ ಮಿಷನ್‌ ಪ್ರದರ್ಶನ ನಡೆಯುತ್ತಿದೆ. ಇಂತಹ ಪ್ರಯತ್ನಗಳು ಹೆಚ್ಚೆಚ್ಚು ನಡೆಯಬೇಕು. ಯೋಗದ ಈ ಯಾತ್ರೆ ಅನಂತ ಭವಿಷ್ಯದ ದೃಷ್ಟಿಯಿಂದ ನಿರಂತರ ನಡೆಯುತ್ತಿರಲಿ. ಸರ್ವೇ ಭವಂತು ಸುಖಿನಃ, ಸರ್ವೇ ಸಂತು ನಿರಾಮಯ ಎನ್ನುವಂತೆ, ಇಡೀ ವಿಶ್ವವನ್ನು ಸ್ವಸ್ಥ ಹಾಗೂ ಶಾಂತಗೊಳಿಸುವ ಸಲುವಾಗಿ ವಿಶ್ವ ಯೋಗ ದಿನವನ್ನು ಆಚರಿಸೋಣ. ಯೋಗದೊಂದಿಗಿನ ಅನಂತ ಸಂಭವನೀಯತೆಯನ್ನು ಸಾಕಾರಗೊಳಿಸೋಣ ಎಂದು ಪ್ರಧಾನಿ ಕರೆ ನೀಡಿದರು.

ಇದನ್ನೂ ಓದಿ | Yoga Day 2022 | ಜೀವನನ್ನು ಶಿವನನ್ನಾಗಿ ಮಾಡುವ ಮಹಾ ಮಾರ್ಗವೇ ಈ ಯೋಗ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Bengaluru News: ಮಹಿಳೆಯರು ಸೋಷಿಯಲ್‌ ಮೀಡಿಯಾ ಬಳಸುವಾಗ ಎಚ್ಚರ ವಹಿಸಬೇಕು ಎಂದ ಮಹಿಳಾ ಆಯೋಗದ ಅಧ್ಯಕ್ಷೆ

Bengaluru News: ಬೆಂಗಳೂರಿನ ಎಎಂಸಿ ಸಂಸ್ಥೆಯ ಕ್ಯಾಂಪಸ್‌ನಲ್ಲಿ ಪ್ರತಿಷ್ಠಿತ ಸೈಬರ್‌ ಸೆಕ್ಯುರಿಟಿ ಸಂಸ್ಥೆಯಾದ ಜೆಸ್ಕೇಲರ್‌ ಪ್ರಾಯೋಜಕತ್ವದೊಂದಿಗೆ ಸೈಬರ್‌ ದಾಳಿಗಳಿಂದ ಪಾರಾಗಲು ವಿಶಿಷ್ಟ ತಂತ್ರಜ್ಞಾನದೊಂದಿಗೆ ರೂಪಿಸಿರುವ ದೇಶದಲ್ಲೇ ಮೊಟ್ಟಮೊದಲ ವ್ಯವಸ್ಥೆಯಾದ ಕಾಪ್‌ಕನೆಕ್ಟ್‌ (ಮಾಹಿತಿ ಹಂಚಿಕೆ ಮತ್ತು ವಿಶ್ಲೇಷಣೆ ಕೇಂದ್ರ) ಎಂಬ ಸೈಬರ್‌ ಸೆಕ್ಯುರಿಟಿ ಕೆಫೆಯನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಉದ್ಘಾಟಿಸಿದರು.

VISTARANEWS.COM


on

CopConnect cyber security caffe inauguration by Dr Nagalakshmi Chaudhary at bengaluru
Koo

ಬೆಂಗಳೂರು: ಮಹಿಳೆಯರಿಗೆ ತಂತ್ರಜ್ಞಾನದ (Technology) ಕುರಿತು ಸಾಕಷ್ಟು ಅರಿವು ಮೂಡಿಸಬೇಕು ಮತ್ತು ಬದಲಾಗುತ್ತಿರುವ ಸನ್ನಿವೇಶದಲ್ಲಿ ಅವರೂ ಕೂಡ ತಾಂತ್ರಿಕವಾಗಿ ಸಾಕಷ್ಟು ತಿಳುವಳಿಕೆ ಹೊಂದಬೇಕು. ಇಲ್ಲವಾದಲ್ಲಿ ಅನಗತ್ಯ ಸಂಕಷ್ಟಗಳಿಗೆ ಸಿಕ್ಕಿ ಹಾಕಿಕೊಳ್ಳುವ ಪ್ರಸಂಗ ಎದುರಾಗಬಹುದು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ (Bengaluru News) ಎಚ್ಚರಿಸಿದರು.

ನಗರದ ಎಎಂಸಿ ಸಂಸ್ಥೆಯ ಕ್ಯಾಂಪಸ್‌ನಲ್ಲಿ ಪ್ರತಿಷ್ಠಿತ ಸೈಬರ್‌ ಸೆಕ್ಯುರಿಟಿ ಸಂಸ್ಥೆಯಾದ ಜೆಸ್ಕೇಲರ್‌ ಪ್ರಾಯೋಜಕತ್ವದೊಂದಿಗೆ ಸೈಬರ್‌ ದಾಳಿಗಳಿಂದ ಪಾರಾಗಲು ವಿಶಿಷ್ಟ ತಂತ್ರಜ್ಞಾನದೊಂದಿಗೆ ರೂಪಿಸಿರುವ ದೇಶದಲ್ಲೇ ಮೊಟ್ಟಮೊದಲ ವ್ಯವಸ್ಥೆಯಾದ ಕಾಪ್‌ಕನೆಕ್ಟ್‌ (ಮಾಹಿತಿ ಹಂಚಿಕೆ ಮತ್ತು ವಿಶ್ಲೇಷಣೆ ಕೇಂದ್ರ) ಎಂಬ ಸೈಬರ್‌ ಸೆಕ್ಯುರಿಟಿ ಕೆಫೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇದನ್ನೂ ಓದಿ: Lok Sabha Election: ನಾಲ್ಕನೇ ಹಂತದಲ್ಲಿ ಶೇ.62.31ರಷ್ಟು ಮತದಾನ; ಬಂಗಾಳದಲ್ಲಿ ಹೆಚ್ಚು

ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರು ವೈಯಕ್ತಿಕ ವಿವರ, ಪೋಟೋಗಳನ್ನು ಹಂಚಿಕೊಳ್ಳುವ ಮೊದಲು ಗಂಭೀರವಾಗಿ ಯೋಚಿಸಬೇಕು. ಇಂದು ಅಂತರ್ಜಾಲವನ್ನು ದುರ್ಬಳಕೆ ಮಾಡಿಕೊಂಡು ಅನೇಕ ಮಹಿಳೆಯರು ಹಾಗೂ ಮಕ್ಕಳನ್ನು ಗುರಿ ಮಾಡಿಕೊಳ್ಳುವ ಜಾಲವೇ ಬೆಳೆದುಬಿಟ್ಟಿದೆ. ಈ ಕಾರಣದಿಂದ ಸೈಬರ್‌ ಕ್ರೈಂಗೆ ಗುರಿಯಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಮಹಿಳೆಯರು ಇದನ್ನೆಲ್ಲಾ ಸಹಿಸಿಕೊಂಡು ಸುಮ್ಮನೆ ಕುಳಿತುಕೊಳ್ಳಬೇಕಿಲ್ಲ. ಮಹಿಳಾ ಆಯೋಗ ನಿಮ್ಮ ನೆರವಿಗಿದೆ. ಪೊಲೀಸರು ಕೂಡಾ ನೆರವು ನೀಡುತ್ತಾರೆ. ಅದೆಲ್ಲಕ್ಕಿಂತ ಹೆಚ್ಚಾಗಿ ಕಾಪ್‌ ಕನೆಕ್ಟ್‌ ನಂತಹ ಈ ಉಪಕ್ರಮ ಕೂಡಾ ನಿಮ್ಮನ್ನು ಎಚ್ಚರಿಸುವಲ್ಲಿ ಸಹಾಯ ಮಾಡಲಿದೆ. ಇಂತಹ ಪ್ರಯತ್ನಗಳು ಸಮಾಜದಲ್ಲಿ ಹೆಚ್ಚಾಗಬೇಕು ಎಂದು ಅವರು ತಿಳಿಸಿದರು.

ಎಎಂಸಿ ಸಂಸ್ಥೆಯ ನಿರ್ದೇಶಕ ಡಾ. ಜಿ.ಎನ್‌. ಮೋಹನ್‌ ಬಾಬು ಮಾತನಾಡಿ, ದಿನದಿಂದ ದಿನಕ್ಕೆ ಸೈಬರ್‌ ದಾಳಿಗಳು ಹೆಚ್ಚಾಗುತ್ತಿವೆ. ಜಾಗತಿಕವಾಗಿ ನೋಡಿದಾಗ ಕಳೆದ ಐದಾರು ವರ್ಷಗಳಲ್ಲಿ ಸೈಬರ್‌ ಅಪರಾಧಗಳ ಸಂಖ್ಯೆಯೇ ಅತಿ ಹೆಚ್ಚಿರುವುದು. ಮುಂದಿನ ಇನ್ನೂ ಎರಡು ದಶಕಗಳ ಕಾಲ ಸೈಬರ್‌ ಕ್ರೈಂಗಳೇ ಅಪರಾಧಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುತ್ತವೆ. ಪ್ರಸ್ತುತ ಸರಿ ಸುಮಾರು 40 ಬಿಲಿಯನ್‌ ಉಪಕರಣಗಳು ಇಂಟರ್‌ನೆಟ್‌ಗೆ ಕನೆಕ್ಟ್‌ ಆಗಿವೆ. ಖಂಡ, ಖಂಡಗಳ ನಡುವೆಯೇ ಸೂಪರ್ ಇಂಟರ್‌ನೆಟ್‌ ರಹದಾರಿ ನಿರ್ಮಿಸಿದೆ. ಇಂತಹ ಸನ್ನಿವೇಶದಲ್ಲಿ ಸೈಬರ್‌ ದಾಳಿಯಿಂದ ತಪ್ಪಿಸಿಕೊಳ್ಳಲು ಎಐ ಅಪ್ಲಿಕೇಶನ್‌ಗಳ ಮೊರೆ ಹೋಗುವ ತುರ್ತು ಅಗತ್ಯವಿದೆ ಎಂದರು.

ಇದನ್ನೂ ಓದಿ: Song Release: ‘ಇದು ನಮ್ ಶಾಲೆ’ ಚಿತ್ರದ ಹಾಡಿನ ಅನಾವರಣ

ಕಾಪ್‌ ಕನೆಕ್ಟ್‌ ಉಪಕ್ರಮದ ಕುರಿತಂತೆ ಮಾಹಿತಿ ಹಂಚಿಕೊಂಡ ಸಂಸ್ಥೆಯ ಪ್ರಾಂಶುಪಾಲ ಡಾ ಕೆ. ಕುಮಾರ್‌ ಮಾತನಾಡಿ, ಇದೊಂದು ಸೈಬರ್‌ ಕುರಿತಾದ ಉಚಿತ ಕಾರ್ಯಕ್ರಮವಾಗಿದ್ದು, ಸೈಬರ್‌ ದಾಳಿಗಳ ಕುರಿತಂತೆ ಸಮಾಜದಲ್ಲಿ ಜಾಗೃತಿ ಮೂಡಿಸುವುದಾಗಿದೆ. ಸೈಬರ್‌ ಕ್ರೈಂ ತಡೆಗಟ್ಟುವ ನಿಟ್ಟಿನಲ್ಲಿ ಆಪ್‌ವೊಂದನ್ನು ಅಭಿವೃದ್ಧಿ ಪಡಿಸಲಾಗಿದ್ದು, ಇದನ್ನು ಇನ್‌ಸ್ಟಾಲ್‌ ಮಾಡಿಕೊಂಡಲ್ಲಿ ನಿಮ್ಮ ಮೊಬೈಲ್‌ಗೆ ಯಾವುದಾದರು ಸೈಬರ್‌ ದಾಳಿಗಳಾದರೆ, ಅಪಾಯಕಾರಿ ಆಪ್‌ಗಳನ್ನು ಇನ್‌ಸ್ಟಾಲ್‌ ಮಾಡಲು ಪ್ರಯತ್ನಿಸಿದರೆ ಅದರಿಂದ ಇದು ರಕ್ಷಣೆ ನೀಡುತ್ತದೆ. ಈ ಆಪ್‌ ನೇರವಾಗಿ ಹಾಂಕ್‌ ಮಷೀನ್‌ಗೆ ಕನೆಕ್ಟ್‌ ಆಗಿದ್ದು, ಅದೇ ರೀತಿಯಲ್ಲಿ ಈ ತಂತ್ರಜ್ಞಾನವು ಕೂಡಾ ಅನಿರೀಕ್ಷಿತ ಸೈಬರ್‌ ದಾಳಿಗಳಿಂದ ಜನರನ್ನು ರಕ್ಷಿಸುತ್ತದೆ.

ಹಣ ಪಾವತಿಸುವುದು, ಗೊತ್ತಿರದ ಆಪ್‌ಗಳ ಬಳಕೆಗೆ ಅನುಮತಿ ನೀಡುವುದು ಸೇರಿದಂತೆ ಅನೇಕ ವಿಷಯಗಳನ್ನ ಎಚ್ಚರಿಸುವ ಕೆಲಸವನ್ನು ಮಾಡುತ್ತದೆ. ಮುಖ್ಯವಾಗಿ ಜನ ಐಟಿ ಕಾಯ್ದೆಗಳ ಮೊರೆ ಹೋಗಬೇಕಾದದ್ದು ಅಗತ್ಯ. ಐಟಿ ಕಾಯ್ದೆ 2000ರ 66ಎ ಅನಿರೀಕ್ಷಿತ ಸೈಬರ್‌ ದಾಳಿಗಳಿಗೆ ನೆರವಾಗುವುದಲ್ಲದೆ, ಸೈಬರ್‌ ಅಪರಾಧಿಗಳನ್ನು ಶಿಕ್ಷಿಸುವಲ್ಲಿಯೂ ಸಹಾಯಕ್ಕೆ ಬರಲಿದೆ. ಒಟ್ಟಾರೆಯಾಗಿ ಎಎಂಸಿ ಸಂಸ್ಥೆಯು ಇಂಥದ್ದೊಂದು ವಿಶೇಷ ಉಪಕ್ರಮ ಆರಂಭಿಸಿದ್ದು, ಇದರ ಕಾರಣೀಕರ್ತರಾದ ಸಂಸ್ಥೆಯ ಸಂಸ್ಥಾಪಕ ಡಾ ಕೆ.ಆರ್.‌ ಪರಮಹಂಸ ಮತ್ತು ಎಎಂಸಿ ಸಂಸ್ಥೆಗಳ ಕಾರ್ಯನಿರ್ವಾಹಕ ಉಪಾಧ್ಯಕ್ಷ ರಾಹುಲ್ ಕಲ್ಲೂರಿ ಅವರ ಪ್ರಯತ್ನ ನೆನೆಯಲೇಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

ಕಾರ್ಯಕ್ರಮದಲ್ಲಿ ಗೌರವ ಅತಿಥಿಗಳಾಗಿ ಕರ್ನಾಟಕ ಡಿಜಿಟಲ್‌ ಎಕಾನಮಿ ಸಿಇಒ ಸಂಜೀವ್‌ ಗುಪ್ತಾ, ಕಾಪ್‌ಕನೆಕ್ಟ್‌ನ ಸಂಸ್ಥಾಪಕ ನಿರ್ದೇಶಕ ಪಿ. ಆನಂದ ನಾಯ್ಡು, ಜೆಸ್ಕೇಲರ್‌ನ ಮಾರ್ಕೆಟಿಂಗ್‌ ವಿಭಾಗದ ಪ್ರಾದೇಶಿಕ ನಿರ್ದೇಶಕ ಕಾರ್ತಿಕ್‌ ಕಿಶೋರ್ ಉಪಸ್ಥಿತರಿದ್ದರು.

Continue Reading

ಉತ್ತರ ಕನ್ನಡ

Uttara Kannada News: ಯಲ್ಲಾಪುರ ಕ್ಷೇತ್ರದ ರೈತರಿಗೆ 35 ಕೋಟಿ ರೂ. ಬೆಳೆ ಹಾನಿ ವಿಮೆ ಜಮಾ: ಶಿವರಾಮ ಹೆಬ್ಬಾರ್‌

Uttara Kannada News: ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಮಧ್ಯವರ್ತಿ ಬ್ಯಾಂಕ್‌ಗೆ (ಕೆ.ಡಿ.ಸಿ.ಸಿ. ಬ್ಯಾಂಕ್‌) 2023-24 ನೇ ಸಾಲಿನ ಭತ್ತ ಹಾಗೂ ಗೋವಿನ ಜೋಳದ ಬೆಳೆ ಹಾನಿ ವಿಮೆ ಸುಮಾರು 41 ಕೋಟಿ ರೂಪಾಯಿ ಜಮಾವಾಗಿದೆ. ವಿಶೇಷವಾಗಿ ಈ ಸಾಲಿನಲ್ಲಿ ಬಿಡುಗಡೆಯಾದ ಬೆಳೆ ಹಾನಿ ವಿಮೆಯಲ್ಲಿ ನನ್ನ ಮತ ಕ್ಷೇತ್ರದ ಯಲ್ಲಾಪುರ ತಾಲೂಕಿಗೆ 84,85,610 ರೂಪಾಯಿ, ಮುಂಡಗೋಡ ತಾಲೂಕಿಗೆ 18,41,53,186 ರೂಪಾಯಿ ಹಾಗೂ ಬನವಾಸಿ ಹೋಬಳಿ ವ್ಯಾಪ್ತಿಯಲ್ಲಿ 15,90,59,753 ರೂಪಾಯಿ ಒಟ್ಟು 35 ಕೋಟಿ ರೂಪಾಯಿ ರೈತರಿಗೆ ಲಭಿಸಿರುವುದು ಅತ್ಯಂತ ಸಂತಸ ತಂದಿದೆ ಎಂದು ಕೆ.ಡಿ.ಸಿ.ಸಿ ಬ್ಯಾಂಕ್‌ನ ಅಧ್ಯಕ್ಷ ಹಾಗೂ ಶಾಸಕ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ.

VISTARANEWS.COM


on

35 crore crop damage insurance deposit for farmers of Yallapur constituency says MLA Shivaram Hebbar
Koo

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ (Uttara Kannada News) ಜಿಲ್ಲಾ ಮಧ್ಯವರ್ತಿ ಬ್ಯಾಂಕ್‌ಗೆ (ಕೆ.ಡಿ.ಸಿ.ಸಿ. ಬ್ಯಾಂಕ್‌) 2023-24 ನೇ ಸಾಲಿನ ಭತ್ತ ಹಾಗೂ ಗೋವಿನ ಜೋಳದ ಬೆಳೆ ಹಾನಿ ವಿಮೆ ಸುಮಾರು 35 ಕೋಟಿ ರೂಪಾಯಿ ಜಮೆಯಾಗಿದೆ ಎಂದು ಕೆ.ಡಿ.ಸಿ.ಸಿ ಬ್ಯಾಂಕ್‌ನ ಅಧ್ಯಕ್ಷ ಹಾಗೂ ಶಾಸಕ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಕಳೆದ ಸಾಲಿನಲ್ಲಿ ಮುಂಗಾರು ಮಳೆ ಕೊರತೆಯಿಂದ ಭತ್ತ, ಗೋವಿನ ಜೋಳದ ಬೆಳೆಗೆ ಹಾನಿಯಾಗಿ ರೈತ ಸಮುದಾಯಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿತ್ತು. ಈಗ ಬೆಳೆ ವಿಮೆಯ ಬಿಡುಗಡೆಯಿಂದಾಗಿ ಭತ್ತ, ಗೋವಿನ ಜೋಳ ಬೆಳೆದು ಜೀವನ ಜೀವನ ಸಾಗಿಸುತ್ತಿದ್ದ ಹಲವಾರು ರೈತರಿಗೆ ಆರ್ಥಿಕ ಶಕ್ತಿ ಬಂದಂತಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

ವಿಶೇಷವಾಗಿ ಈ ಸಾಲಿನಲ್ಲಿ ಬಿಡುಗಡೆಯಾದ ಬೆಳೆ ಹಾನಿ ವಿಮೆಯಲ್ಲಿ ನನ್ನ ಮತ ಕ್ಷೇತ್ರದ ಯಲ್ಲಾಪುರ ತಾಲೂಕಿಗೆ 84,85,610 ರೂಪಾಯಿ, ಮುಂಡಗೋಡ ತಾಲೂಕಿಗೆ 18,41,53,186 ರೂಪಾಯಿ ಹಾಗೂ ಬನವಾಸಿ ಹೋಬಳಿ ವ್ಯಾಪ್ತಿಯಲ್ಲಿ 15,90,59,753 ರೂಪಾಯಿ. ಹೀಗೆ ಒಟ್ಟು 35 ಕೋಟಿ ರೂಪಾಯಿ ರೈತರಿಗೆ ಲಭಿಸಿರುವುದು ಅತ್ಯಂತ ಸಂತಸ ತಂದಿದೆ. ನನ್ನ ಕ್ಷೇತ್ರಕ್ಕೆ ಹೆಚ್ಚಿನ ವಿಮೆ ಪರಿಹಾರವನ್ನು ನೀಡಲು ಸಹಕರಿಸಿದ ಕೃಷಿ ಇಲಾಖೆಯ ಅಧಿಕಾರಿಗೆ, ವಿಮೆ ಕಂಪನಿಯ ಸಿಬ್ಬಂದಿಗಳಿಗೆ ಹಾಗೂ ಸರ್ಕಾರಕ್ಕೆ ಕ್ಷೇತ್ರದ ರೈತರ ಪರವಾಗಿ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಇದನ್ನೂ ಓದಿ: Vijayanagara News: ವಿಜೃಂಭಣೆಯಿಂದ ನಡೆದ ಉಜ್ಜಯಿನಿ ಶ್ರೀ ಮರುಳಸಿದ್ದೇಶ್ವರ ಸ್ವಾಮಿ ರಥೋತ್ಸವ

ಸರ್ಕಾರದ ಮಟ್ಟದಲ್ಲಿ ವಿಶೇಷ ಪ್ರಯತ್ನವನ್ನು ನಡೆಸಿ ಈ ಸಾಲಿನಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಹೆಚ್ಚಿನ ಪರಿಹಾರವನ್ನು ಒದಗಿಲಾಗಿದೆ. ವಿಮೆ ಕಂಪನಿಯ ಮಾನದಂಡದ ಅನ್ವಯವಾಗಿ ಉತ್ತರ ಕನ್ನಡ ಜಿಲ್ಲೆಯ ಭತ್ತ ಹಾಗೂ ಗೋವಿನ ಜೋಳವನ್ನು ಬೆಳೆದ ರೈತರಿಗೆ ಜಿಲ್ಲಾ ಮಧ್ಯವರ್ತಿ ಬ್ಯಾಂಕ್‌ (ಕೆ.ಡಿ.ಸಿ.ಸಿ ಬ್ಯಾಂಕ್‌) ನ ಮೂಲಕವಾಗಿ ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಫಲಾನುಭವಿಗಳ ಖಾತೆಗೆ ಪರಿಹಾರದ ಮೊತ್ತವನ್ನು ನೇರವಾಗಿ ವರ್ಗಾಯಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Continue Reading

ಕರ್ನಾಟಕ

Yadgiri News: ಬರಡು ಭೂಮಿಯಲ್ಲಿ ಈ ರೈತ ಬಂಪರ್ ಮಾವು ಬೆಳೆದಿದ್ದು ಹೇಗೆ?

Yadgiri News: ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಬಿಳ್ಹಾರ ಗ್ರಾಮದ ರೈತ ಮಲ್ಲಿಕಾರ್ಜುನರೆಡ್ಡಿಗೌಡ ತಮ್ಮ ಐದು ಎಕರೆ ಭೂಮಿಯಲ್ಲಿ ಯಾವುದೇ ಕ್ರಿಮಿನಾಶಕ ಬಳಸದೇ ಸಾವಯವ ಕೃಷಿ ಮಾಡಿ ಮಾವು ಬೆಳೆದು ಯಶಸ್ವಿಯಾಗಿದ್ದಾರೆ. ಬರಡು ಭೂಮಿಯಲ್ಲಿ ಏನಾದರು ಕೃಷಿ ಮಾಡಿ ಯಶಸ್ಸು ಸಾಧಿಸಬೇಕೆಂದು ಕನಸು ಕಟ್ಟಿಕೊಂಡಿದ್ದ‌ ರೈತ, ಬಂಪರ್ ಮಾವು ಬೆಳೆದು ಇತರರಿಗೆ ಮಾದರಿಯಾಗಿದ್ದಾನೆ.

VISTARANEWS.COM


on

Bilhara village farmer grew bumper mango on barren land
Koo

ಯಾದಗಿರಿ: ಆ ಭೂಮಿ ಕೃಷಿ (Agriculture) ಮಾಡಲು ಯೋಗ್ಯವಿಲ್ಲದಂತಾಗಿತ್ತು. ಯಾವ ಬೆಳೆಯೂ ಬೆಳೆಯುತ್ತಿರಲಿಲ್ಲ. ಇಂತಹ ಭೂಮಿಯಲ್ಲಿ ಏನಾದರು ಕೃಷಿ ಮಾಡಿ ಯಶಸ್ಸು ಸಾಧಿಸಬೇಕೆಂದು ಕನಸು ಕಟ್ಟಿಕೊಂಡಿದ್ದ‌ ರೈತ, ಬರಡು ಭೂಮಿಯಲ್ಲಿ ಬಂಪರ್ ಮಾವು ಬೆಳೆದು ಇತರರಿಗೆ (Yadgiri News) ಮಾದರಿಯಾಗಿದ್ದಾನೆ.

ಹೌದು, ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಬಿಳ್ಹಾರ ಗ್ರಾಮದ ರೈತ ಮಲ್ಲಿಕಾರ್ಜುನರೆಡ್ಡಿ ಗೌಡ ತಮ್ಮ ಐದು ಎಕರೆ ಭೂಮಿಯಲ್ಲಿ ಯಾವುದೇ ಕ್ರಿಮಿನಾಶಕ ಬಳಸದೇ ಸಾವಯವ ಕೃಷಿ ಮಾಡಿ ಮಾವು ಬೆಳೆದು ಯಶಸ್ವಿಯಾಗಿದ್ದಾರೆ.

ರೈತ ಮಲ್ಲಿಕಾರ್ಜುನರೆಡ್ಡಿಗೌಡ ಅವರ ಐದು ಎಕರೆ ಭೂಮಿಯಲ್ಲಿ ಯಾವುದೇ ಬೇರೆ ಬೆಳೆ ಬೆಳೆಯುತ್ತಿರಲಿಲ್ಲ. ಹೀಗಾಗಿ ಮಾವು ಬೆಳೆಯಲು ಯೋಜನೆ ರೂಪಿಸಿ, 5 ಎಕರೆ ಭೂಮಿಯಲ್ಲಿ 2011ರಲ್ಲಿ 500 ಮಾವಿನ ಗಿಡಗಳನ್ನು ನಾಟಿ ಮಾಡಿದ್ದು, ಮೂರು ವರ್ಷಗಳ ನಂತರ ಮಾವು ಉತ್ತಮ ಫಲ ಕೊಡುತ್ತಿದೆ. ಇನ್ನು ನೀರಿಗಾಗಿ ಭೀಮಾನದಿ ಮೂಲಕ ಪೈಪ್ ಲೈನ್ ಹಾಕಿಕೊಂಡು ಹಾಗೂ ಜಮೀನಿನಲ್ಲಿ ಒಂದು ಬೋರ್‌ವೆಲ್ ಕೊರೆಸಿ ಮಾವಿನ ಗಿಡಕ್ಕೆ ನೀರು ಹರಿಸಲಾಗುತ್ತಿದೆ.

ಇದನ್ನೂ ಓದಿ: Vijayanagara News: ವಿಜೃಂಭಣೆಯಿಂದ ನಡೆದ ಉಜ್ಜಯಿನಿ ಶ್ರೀ ಮರುಳಸಿದ್ದೇಶ್ವರ ಸ್ವಾಮಿ ರಥೋತ್ಸವ

ಸಾವಯವ ಗೊಬ್ಬರ ಬಳಕೆ

ಮಾವಿನ ಬೆಳೆಗೆ ಯಾವುದೇ ಕ್ರಿಮಿನಾಶಕ ಬಳಕೆ ಮಾಡಿಲ್ಲ. ಸಾವಯವ ಗೊಬ್ಬರ ಬಳಸಿ, ಮಾವು ಬೆಳೆದಿದ್ದಾರೆ. ಕೇಸರಿ, ರಸಪುರಿ, ಬೆನಿಶ್ಯಾನ್, ಮಲ್ಲಿಕಾ ಸೇರಿದಂತೆ ಹಲವು ತಳಿಯ ಮಾವು ಬೆಳೆದಿದ್ದು, ಉತ್ತಮ ಫಸಲು ಬಂದಿದೆ.

ಈ ಕುರಿತು ರೈತ ಮಲ್ಲಿಕಾರ್ಜುನರೆಡ್ಡಿ ಗೌಡ ಮಾತನಾಡಿ, ಬರಡುಭೂಮಿಯಲ್ಲಿ ಯಾವುದೇ ಬೆಳೆ ಬೆಳೆಯುತ್ತಿರಲಿಲ್ಲ. 5 ಎಕರೆ ಭೂಮಿಯಲ್ಲಿ 500 ಕ್ಕೂ ಹೆಚ್ಚು ಮಾವು ಬೆಳೆದಿದ್ದು, ಯಾವುದೇ ಕ್ರಿಮಿನಾಶಕ ಹಾಕುವುದಿಲ್ಲ. ಸಾವಯವ ಗೊಬ್ಬರ ಬಳಸಿ ಮಾವು ಬೆಳೆಯಲಾಗಿದೆ. ಈಗ ಹೆಚ್ಚು ಮಾವು ಫಸಲು ಬಂದಿದೆ ಎಂದು ತಿಳಿಸಿದ್ದಾರೆ.

ಮಾವಿನ ಹಣ್ಣುಗಳು ಪೌಷ್ಟಿಕಾಂಶವುಳ್ಳ ಹಣ್ಣು ಆಗಿದ್ದು, ಅದರಲ್ಲೂ ಸಾವಯವ ಮಾವಿನ ಹಣ್ಣಿಗೆ ಭಾರೀ ಬೇಡಿಕೆ ಇದೆ. ಇನ್ನು ಸಾವಯವ ಮಾವು ಬೆಳೆದ ಹಿನ್ನೆಲೆಯಲ್ಲಿ ರೈತ, ಮಾವು ಮಾರಾಟ ಮಾಡಲು ಯಾವುದೇ ಮಾರುಕಟ್ಟೆಗೆ ಅಲೆದಾಡುವುದು ತಪ್ಪಿದೆ. ಖರೀದಿದಾರರೇ ಖುದ್ದಾಗಿ ಜಮೀನಿಗೆ ಆಗಮಿಸಿ ಒಂದು ಸ್ಯಾಂಪಲ್ ಮಾವಿನ ಹಣ್ಣು ಸೇವಿಸಿ, ಮಾವು ಖರೀದಿ ಮಾಡುತ್ತಿದ್ದಾರೆ. ಯಾದಗಿರಿ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿ ಮಾವಿನ ಹಣ್ಣುಗಳನ್ನು ಖರೀದಿ ಮಾಡಿ, ಬಳಿಕ ಅವುಗಳನ್ನು ಗುಜರಾತ್, ಮುಂಬೈ, ಬೆಂಗಳೂರು ಸೇರಿದಂತೆ ವಿವಿಧೆಡೆಗೆ ಕಳುಹಿಸುತ್ತಾರೆ.

ಇದನ್ನೂ ಓದಿ: Moringa Leaves Health Benefits: ನುಗ್ಗೆ ಸೊಪ್ಪು ಏಕೆ ತಿನ್ನಬೇಕು? ಏನಿದೆ ಇದರಲ್ಲಿ ವಿಶೇಷ ಗುಣ?

ವಡಗೇರಾ ತಾಲೂಕಿನ ಬಿಳ್ಹಾರ ಗ್ರಾಮದ ಈ ಸಾವಯವ ಮಾವಿನ ಹಣ್ಣಿಗೆ ಭಾರೀ ಡಿಮ್ಯಾಂಡ್ ಇದ್ದು, ರೈತ ಮಲ್ಲಿಕಾರ್ಜುನರೆಡ್ಡಿಗೌಡ ಉತ್ತಮ ಆದಾಯ ಗಳಿಸಿದ್ದಾರೆ.

Continue Reading

ಬೆಂಗಳೂರು

Metro Penalty: ಮೆಟ್ರೊ ಸ್ಟೇಷನ್‌ನಲ್ಲಿ ಗರ್ಲ್‌ ಫ್ರೆಂಡ್‌ಗೆ ಕಾಯುತ್ತ ಕೂತರೆ ಬೀಳುತ್ತೆ 50 ರೂ. ದಂಡ!

Metro Penalty: ಭಾರೀ ಮಳೆಯ ಸಮಯದಲ್ಲಿ ವಿಜಯನಗರದ ಮೆಟ್ರೋ ನಿಲ್ದಾಣದಲ್ಲಿ ಐದು ನಿಮಿಷ ಹೆಚ್ಚು ನಿಂತ ಅರುಣ್ ಜುಗಲ್ ಅವರಿಗೆ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಅಧಿಕಾರಿಗಳು 50 ರೂ. ದಂಡ (Penalty For Passenger) ವಿಧಿಸಿದ್ದಾರೆ. ಏನಿದು ನಿಯಮ? ಈ ವರದಿ ಓದಿ.

VISTARANEWS.COM


on

By

Metro Penalty
Koo

ಬೆಂಗಳೂರು: ಭಾರಿ ಮಳೆಯ ಕಾರಣದಿಂದ (Metro Penalty) ಮೆಟ್ರೋ ನಿಲ್ದಾಣದಲ್ಲಿ (Metro station) 20 ನಿಮಿಷಕ್ಕಿಂತ ಹೆಚ್ಚು ಕಾಲ ನಿಂತು ಮೊಬೈಲ್ ಚಾರ್ಜ್ ಮಾಡಿದ ವ್ಯಕ್ತಿಯೊಬ್ಬರಿಗೆ 50 ರೂ. ದಂಡ (Penalty For Passenger) ವಿಧಿಸಿದ್ದು ಗೊತ್ತಲ್ಲವೆ? ಬೆಂಗಳೂರಿನ (bengaluru) ವಿಜಯನಗರ (vijayanagar) ಮೆಟ್ರೊ ನಿಲ್ದಾಣದಲ್ಲಿ ಈ ವಿದ್ಯಮಾನ ಸಂಭವಿಸಿತ್ತು. ಇದರ ಸಂದೇಶ ಏನೆಂದರೆ, ನಾವು ಯಾವುದೇ ಮೆಟ್ರೊ ನಿಲ್ದಾಣದಲ್ಲಿ 20 ನಿಮಿಷಕ್ಕಿಂತ ಹೆಚ್ಚು ಹೊತ್ತು ಕಾಲ ಕಳೆದರೆ 50 ರೂ. ದಂಡ ತೆರಬೇಕಾಗುತ್ತದೆ. ಮೆಟ್ರೊ ನಿಲ್ದಾಣದಲ್ಲಿ ಯಾರಾದರು ತಮ್ಮ ಗರ್ಲ್‌ ಫ್ರೆಂಡ್‌ ಅಥವಾ ಬಾಯ್‌ ಫ್ರೆಂಡ್‌ಗಾಗಿ ಕಾಯುತ್ತ 20 ನಿಮಿಷಕ್ಕಿಂತ ಹೆಚ್ಚು ಸಮಯ ಕಳೆದರೆ ದಂಡ ಬಿದ್ದೇ ಬೀಳುತ್ತದೆ.

ಅರುಣ್ ಜುಗಲ್ ಬಂದಿ ಎಂಬವರು ಭಾರೀ ಮಳೆಯ ಸಮಯದಲ್ಲಿ ವಿಜಯನಗರದ ಮೆಟ್ರೋ ನಿಲ್ದಾಣದಲ್ಲಿ ಕುಳಿತು ತಮ್ಮ ಫೋನ್ ಅನ್ನು ಚಾರ್ಜ್ ಮಾಡಲು ನಿಂತಿದ್ದರು. ನಿಲ್ದಾಣದಲ್ಲಿ ಜನ ದಟ್ಟಣೆಯನ್ನು ತಡೆಗಟ್ಟುವ ಅಗತ್ಯವನ್ನು ಉಲ್ಲೇಖಿಸಿ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಅಧಿಕಾರಿಗಳು ದಂಡ ವಿಧಿಸಿರುವುದನ್ನು ಸಮರ್ಥಿಸಿಕೊಂಡಿದ್ದಾರೆ.

ಬೆಂಗಳೂರಿನ ವಿಜಯನಗರ ಮೆಟ್ರೋ ನಿಲ್ದಾಣದಲ್ಲಿ ಇತ್ತೀಚೆಗೆ ಈ ಘಟನೆ ನಡೆದಿದೆ. ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ಅನುಮತಿಸಿದ 20 ನಿಮಿಷಗಳ ಅವಧಿಯನ್ನು ಮೀರಿದ್ದಕ್ಕಾಗಿ ಜುಗಲ್ ಅವರಿಗೆ 50 ರೂ. ದಂಡವನ್ನು ವಿಧಿಸಲಾಯಿತು. ನಿಲ್ದಾಣದಿಂದ ನಿರ್ಗಮಿಸಿದ ಮೇಲೆ ಅವರ ಮೆಟ್ರೋ ಕಾರ್ಡ್‌ನಿಂದ ದಂಡವನ್ನು ಸ್ವಯಂಚಾಲಿತವಾಗಿ ಕಡಿತಗೊಳಿಸಲಾಯಿತು.

5 ನಿಮಿಷ ಹೆಚ್ಚು ಕಳೆದಿದ್ದರು

ಅರುಣ್ ಜುಗಲ್ ಅವರು ಸಂದಿಗ್ಧತೆಗೆ ಸಿಲುಕಿದ್ದರು. ಏಕೆಂದರೆ ಹೊರಗೆ ಭಾರೀ ಮಳೆಯಿಂದಾಗಿ ನಿಲ್ದಾಣದಲ್ಲಿ ತಮ್ಮ ಫೋನ್ ಅನ್ನು ಚಾರ್ಜ್ ಮಾಡಲು ನಿರ್ಧರಿಸಿದರು. ಅವರ ಫೋನ್ ಬ್ಯಾಟರಿಯೂ ಖಾಲಿಯಾಗಿತ್ತು. ನಿರಂತರ ಮಳೆ ಒಂದು ಕಡೆಯಾದರೆ ಮೊಬೈಲ್ ನಲ್ಲಿ ಬ್ಯಾಟರಿ ಮುಗಿದಿದ್ದುದರಿಂದ ಚಾರ್ಜ್ ಮಾಡಲು ನಿರ್ಧರಿಸಿದ್ದರು. ಅಲ್ಲೇ ಉಳಿಯುವ ಹೊರತು ಅವರ ಬಳಿ ಬೇರೆ ದಾರಿಯಿರಲಿಲ್ಲ. ಆದರೆ, ಇದರಿಂದಾಗಿ ಅವರು ಒಟ್ಟು 25 ನಿಮಿಷ ಅಲ್ಲಿ ಕಾಲ ಕಳೆದಿದ್ದರು. ಹಾಗಾಗಿ ದಂಡ ತೆರಬೇಕಾಯಿತು.

ಮೆಟ್ರೊ ಕಾರ್ಡ್‌ನಿಂದ ಕಡಿತ

ಅಲ್ಲಿಂದ ನಿರ್ಗಮಿಸಿದ ಮೇಲೆ ಮೆಟ್ರೊ ಕಾರ್ಡ್‌ನಿಂದ 50 ರೂ. ಹೆಚ್ಚುವರಿ ಕಡಿತವಾಗಿರುವುದನ್ನು ಕಂಡು ಜುಗಲ್ ಅವರಿಗೆ ಅಚ್ಚರಿಯಾಗಿದೆ. ಶುಲ್ಕದ ಬಗ್ಗೆ ಅವರು ವಿಚಾರಿಸಿದಾಗ, ಮೆಟ್ರೋ ಸಿಬ್ಬಂದಿ ಬಿಎಂಆರ್‌ಸಿಎಲ್‌ನ ನಿಲ್ದಾಣದ ಸಮಯ ಮಿತಿ ನಿಯಮವನ್ನು ಉಲ್ಲಂಘಿಸಿದ ಅವರ ವಿಸ್ತೃತ ವಾಸ್ತವ್ಯದ ಕಾರಣ ಎಂದು ಅವರಿಗೆ ತಿಳಿಸಿದರು.

ಇದನ್ನೂ ಓದಿ: Karnataka Politics: ಆಪರೇಶನ್ ಕಮಲ ಆಗೋಕೆ ಸಾಧ್ಯಾನೇ ಇಲ್ಲ; ಇದು ಬಿಜೆಪಿಯ ಹಗಲುಗನಸು: ಸಿಎಂ ಸಿದ್ದರಾಮಯ್ಯ

ದಟ್ಟಣೆಯನ್ನು ತಡೆಗಟ್ಟಲು ಮತ್ತು ಪ್ರಯಾಣಿಕರ ಸುಗಮ ಸಂಚಾರವನ್ನು ಖಚಿತಪಡಿಸಿಕೊಳ್ಳಲು ಉದ್ದೇಶಿಸಿರುವ ಈ ನಿಯಮವು ವ್ಯಕ್ತಿಗಳು 20 ನಿಮಿಷಗಳ ಅನಂತರ ನಿಲ್ದಾಣದ ಒಳಗೆ ಇರಬಾರದು ಎಂದು ಷರತ್ತು ವಿಧಿಸುತ್ತದೆ.
ದಂಡ ವಿಧಿಸಿರುವುದನ್ನು ಬಿಎಂಆರ್ ಸಿಎಲ್ ಅಧಿಕಾರಿಗಳು ಸಮರ್ಥಿಸಿಕೊಂಡಿದ್ದು, ಈ ನಿಯಮ ಮೊದಲಿನಿಂದಲೂ ಜಾರಿಯಲ್ಲಿದ್ದು, ಮೆಟ್ರೊ ವ್ಯವಸ್ಥೆಯಲ್ಲಿ ಸುವ್ಯವಸ್ಥೆ ಹಾಗೂ ದಕ್ಷತೆ ಕಾಪಾಡುವುದು ಅಗತ್ಯವಾಗಿದೆ ಎಂದು ಹೇಳಿದ್ದಾರೆ. ಎಲ್ಲಾ ಪ್ರಯಾಣಿಕರು ಹೆಚ್ಚು ತಂಗಿದರೆ ಅದು ಜನದಟ್ಟಣೆ ಮತ್ತು ಇತರರಿಗೆ ಅನಾನುಕೂಲತೆಗೆ ಕಾರಣವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

Continue Reading
Advertisement
Dust Storm
ಪ್ರಮುಖ ಸುದ್ದಿ4 mins ago

Dust Storm : ಧೂಳು ಗಾಳಿಗೆ ಹೋರ್ಡಿಂಗ್ ಕುಸಿದು ಮೂವರ ಸಾವು, 59 ಮಂದಿಗೆ ಗಾಯ

CopConnect cyber security caffe inauguration by Dr Nagalakshmi Chaudhary at bengaluru
ಬೆಂಗಳೂರು6 mins ago

Bengaluru News: ಮಹಿಳೆಯರು ಸೋಷಿಯಲ್‌ ಮೀಡಿಯಾ ಬಳಸುವಾಗ ಎಚ್ಚರ ವಹಿಸಬೇಕು ಎಂದ ಮಹಿಳಾ ಆಯೋಗದ ಅಧ್ಯಕ್ಷೆ

35 crore crop damage insurance deposit for farmers of Yallapur constituency says MLA Shivaram Hebbar
ಉತ್ತರ ಕನ್ನಡ11 mins ago

Uttara Kannada News: ಯಲ್ಲಾಪುರ ಕ್ಷೇತ್ರದ ರೈತರಿಗೆ 35 ಕೋಟಿ ರೂ. ಬೆಳೆ ಹಾನಿ ವಿಮೆ ಜಮಾ: ಶಿವರಾಮ ಹೆಬ್ಬಾರ್‌

Bilhara village farmer grew bumper mango on barren land
ಕರ್ನಾಟಕ14 mins ago

Yadgiri News: ಬರಡು ಭೂಮಿಯಲ್ಲಿ ಈ ರೈತ ಬಂಪರ್ ಮಾವು ಬೆಳೆದಿದ್ದು ಹೇಗೆ?

Metro Penalty
ಬೆಂಗಳೂರು18 mins ago

Metro Penalty: ಮೆಟ್ರೊ ಸ್ಟೇಷನ್‌ನಲ್ಲಿ ಗರ್ಲ್‌ ಫ್ರೆಂಡ್‌ಗೆ ಕಾಯುತ್ತ ಕೂತರೆ ಬೀಳುತ್ತೆ 50 ರೂ. ದಂಡ!

IPL 2024
ಪ್ರಮುಖ ಸುದ್ದಿ20 mins ago

IPL 2024: ಮಾಲೀಕನ ಜತೆ ಜಗಳ, ತಂಡದ ಬಸ್​ ಬಿಟ್ಟು ಸ್ವಂತ ಖರ್ಚಲ್ಲಿ ಪ್ರಯಾಣಿಸಿದ ಕೆ. ಎಲ್​ ರಾಹುಲ್​

Chandrayaan 4
ದೇಶ23 mins ago

Chandrayaan 4: ಚಂದ್ರಯಾನ 4ಕ್ಕೆ ಇಸ್ರೋ ಸಜ್ಜು; ಚಂದ್ರನ ವಿಶೇಷ ಸ್ಥಳದಲ್ಲಿ ಬಾಹ್ಯಾಕಾಶ ನೌಕೆ ಲ್ಯಾಂಡಿಂಗ್!

CBSE Class 10 Results
ಮಂಡ್ಯ25 mins ago

CBSE Class 10 Results: ಸತತ 9ನೇ ಬಾರಿಗೆ ಶೇ.100 ಫಲಿತಾಂಶ; ಅಕ್ಷರ ಇಂಟರ್‌ನ್ಯಾಷನಲ್ ಸ್ಕೂಲ್ ಅಮೋಘ ಸಾಧನೆ

Climate Plan
ಕರ್ನಾಟಕ36 mins ago

Climate Plan: ರಾಜ್ಯ ಸರ್ಕಾರದ ಹವಾಮಾನ ಯೋಜನೆ ಜಾರಿಗೆ ಕೇಂದ್ರ ಸರ್ಕಾರದ ಒಪ್ಪಿಗೆ; ಏನಿದು ಯೋಜನೆ?

Namma Metro green line
ಬೆಂಗಳೂರು51 mins ago

Namma Metro : ಜುಲೈ ಅಂತ್ಯಕ್ಕೆ ನಾಗಸಂದ್ರ-ಮಾದಾವರ ಮೆಟ್ರೋ ಕಾಮಗಾರಿ ಪೂರ್ಣ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

HD Revanna Bail Revanna will not leave the country condition imposed by the court
ಕ್ರೈಂ1 hour ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

Prajwal Revanna case HD Revanna finally gets bail What was the argument like
ಕ್ರೈಂ2 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ2 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ2 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ3 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ9 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ14 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ15 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ1 day ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ1 day ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

ಟ್ರೆಂಡಿಂಗ್‌