2 ಲಕ್ಷ ರೂ. ನಾಯಿ ಬೇಕೆಂದು ಪೀಡಿಸಿದ್ದಕ್ಕೆ ಮನೆ ಬಿಟ್ಟು ಹೋದ ತಾಯಿ; ನೊಂದ ಮಗ ಆತ್ಮಹತ್ಯೆ! - Vistara News

ಕರ್ನಾಟಕ

2 ಲಕ್ಷ ರೂ. ನಾಯಿ ಬೇಕೆಂದು ಪೀಡಿಸಿದ್ದಕ್ಕೆ ಮನೆ ಬಿಟ್ಟು ಹೋದ ತಾಯಿ; ನೊಂದ ಮಗ ಆತ್ಮಹತ್ಯೆ!

Self Harming : ಎರಡು ಲಕ್ಷ ಮೌಲ್ಯದ ನಾಯಿಮರಿ ಕೊಡಿಸುವಂತೆ ತಾಯಿಯ ಬಳಿ ಹಠ ಮಾಡುತ್ತಿದ್ದ ಎನ್ನಲಾಗಿದೆ. ಆದರೆ, ಆರ್ಥಿಕವಾಗಿ ಅಷ್ಟೊಂದು ಶಕ್ತರಲ್ಲದ ತಾಯಿ ತನಗೆ ಕೊಡಿಸಲು ಆಗುವುದಿಲ್ಲ ಎಂದು ಹೇಳಿದ್ದಾರೆ. ಈ ಗಲಾಟೆಯಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.

VISTARANEWS.COM


on

Dog and young man self harming hubballi news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹುಬ್ಬಳ್ಳಿ: ಯುವಕನೊಬ್ಬನನ್ನು ನಾಯಿ ಪ್ರೀತಿಯೊಂದು (Dog Love) ಬಲಿ ಪಡೆದಿದೆ. ಹುಬ್ಬಳ್ಳಿಯ ಮಿಷನ್ ಕಾಂಪೌಂಡ್‌ನಲ್ಲಿ ವಾಸವಾಗಿರುವ ಯುವಕನೊಬ್ಬ ನಾಯಿಯೊಂದನ್ನು ಕೊಡಿಸುವಂತೆ ಅಮ್ಮನಿಗೆ ಪೀಡಿಸಿ ಪೀಡಿಸಿ ಇಟ್ಟಿದ್ದಕ್ಕೆ ಆಕೆ ಮನೆಯನ್ನೇ ಬಿಟ್ಟು ಹೋದರು. ಇದರಿಂದ ನೊಂದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Self Harming) ಶರಣಾಗಿದ್ದಾನೆ.

ಅಲೆನ್ ಭಸ್ಮೆ (24) ಆತ್ಮಹತ್ಯೆಗೆ ಶರಣಾದ ಯುವಕ. ಈತ ಎರಡು ಲಕ್ಷ ಮೌಲ್ಯದ ನಾಯಿಮರಿ ಕೊಡಿಸುವಂತೆ ತಾಯಿಯ ಬಳಿ ಹಠ ಮಾಡುತ್ತಿದ್ದ ಎನ್ನಲಾಗಿದೆ. ಆದರೆ, ಆರ್ಥಿಕವಾಗಿ ಅಷ್ಟೊಂದು ಶಕ್ತರಲ್ಲದ ತಾಯಿ ತನಗೆ ಕೊಡಿಸಲು ಆಗುವುದಿಲ್ಲ ಎಂದು ಹೇಳಿದ್ದಾರೆ. ಇಷ್ಟಾದರೂ ತಾಯಿಯ ಮಾತನ್ನು ಕೇಳದೆ ತನಗೆ ನಾಯಿ ಬೇಕೇ ಬೇಕು ಎಂದು ಹಠ ಮಾಡುತ್ತಾ ಬಂದಿದ್ದಾನೆ.

ಇದನ್ನೂ ಓದಿ: Karnataka Weather : ಇಂದು – ನಾಳೆ ಭಾರಿ ಮಳೆ ಮುನ್ಸೂಚನೆ; ಹಾಗೇ ತಾಪಮಾನದಲ್ಲೂ ಏರಿಕೆ!

ಮಗನ ಕಾಟ ತಾಳಲಾರದೆ ತಾಯಿ ಮನೆಯನ್ನೇ ಬಿಟ್ಟು ಹೋಗಿದ್ದಾರೆ. ತನ್ನಿಂದ ತಾಯಿ ಮನೆ ಬಿಟ್ಟು ಹೋಗಿದ್ದಕ್ಕೆ ಮನನೊಂದ ಅಲೆನ್‌ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Assault Case : ಮಂಕಿ ಕ್ಯಾಪ್‌ ಧರಿಸಿ ಮಾರಣಾಂತಿಕ ಹಲ್ಲೆ

ಚಿಕ್ಕಮಗಳೂರು : ಮಂಕಿ ಕ್ಯಾಪ್‌ ಧರಿಸಿ ಮಾರಕಾಸ್ತ್ರದೊಂದಿಗೆ ಮನೆಗೆ ನುಗ್ಗಿದ ಹಂತಕನೊಬ್ಬ ಕೊಲೆಗೆ ಯತ್ನಿಸಿ ಪರಾರಿ ಆಗಿದ್ದಾನೆ. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಪ್ರಾಣಾಪಾಯದಿಂದ ಬಚಾವ್‌ ಆಗಿದ್ದಾರೆ. ಕಳೆದ ರಾತ್ರಿ (ನ.30) ನಾಗರಹಳ್ಳಿ ಗ್ರಾಮದ ಬಿಜೆಪಿ ಜಿಲ್ಲಾ ಕಚೇರಿ ಕಾರ್ಯದರ್ಶಿಯ ಮೇಲೆ ಹಲ್ಲೆ (assault Case) ನಡೆದಿದೆ. ಜಿಲ್ಲಾ ಕಾರ್ಯದರ್ಶಿ ದುರ್ಗೇಶ್‌ ಹಲ್ಲೆಗೊಳಗಾದವರು. ನಾಗರಹಳ್ಳಿಯ ಅವರ ಮನೆಗೆ ನುಗ್ಗಿದ ಕಿರಾತಕ ಮನಬಂದಂತೆ ಥಳಿಸಿದ್ದಾನೆ.

ಮಂಕಿ ಕ್ಯಾಪ್ ಹಾಕಿಕೊಂಡು ಬಂದಿದ್ದ ಅನಾಮಿಕ ಏಕಾಏಕಿ ದುರ್ಗೇಶ್‌ ಮೇಲೆ ಎರಗಿದ್ದಾನೆ. ಬಳಿಕ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಕೊಲೆ ಮಾಡಲೆಂದು ಹಂತಕ ಬಂದಿದ್ದ ಆದರೆ ದುರ್ಗೇಶ್‌ ಇದೇ ವೇಳೆ ಪ್ರತಿರೋಧ ವ್ಯಕ್ತಪಡಿಸಿದಾಗ ಆರೋಪಿ ಅಲ್ಲಿಂದ ಪರಾರಿ ಆಗಿದ್ದಾನೆ. ದುರ್ಗೇಶ್‌ ತಲೆಗೆ ಗಂಭೀರ ಪೆಟ್ಟಾಗಿದ್ದು, ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಯಾಕಾಗಿ ಈ ಹಲ್ಲೆ ನಡೆದಿದೆ ಎಂಬುದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ರಾಜಕೀಯ ದ್ವೇಷಕ್ಕೆ ಹೀಗೆ ಮಾಡಿರಬೇಕೆಂದು ಅಂದಾಜಿಸಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ಮಾಜಿ ಶಾಸಕ ಸಿ.ಟಿ.ರವಿ ಭೇಟಿ ನೀಡಿದರು. ಗಾಯಾಳು ದುರ್ಗೇಶ್‌ರ ಆರೋಗ್ಯ ವಿಚಾರಿಸಿದರು. ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕಾರ್ಯಾಲಯ ಕಾರ್ಯದರ್ಶಿಯಾಗಿ ದುರ್ಗೇಶ್‌ ಕೆಲಸ ಮಾಡುತ್ತಿದ್ದರು. ಮಾರಣಾಂತಿಕ ಹಲ್ಲೆ ನಡೆಸಿದವರ ಮೇಲೆ ಪೊಲೀಸರು ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಚಿಕ್ಕಮಗಳೂರು ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಈ ಸಂಬಂಧ ತನಿಖೆಯನ್ನು ಮುಂದುವರಿಸಿದ್ದಾರೆ. ಕೊಲೆ ಯತ್ನ ಕೇಸ್‌ ದಾಖಲಾಗಿದ್ದು, ಹಲ್ಲೆ ಮಾಡಿದವರಿಗಾಗಿ ಹುಡುಕಾಟ ನಡೆದಿದೆ.

ಜೈ ಶ್ರೀರಾಮ್‌ ಹೇಳುವಂತೆ ಒತ್ತಾಯಿಸಿ ಅಂಧ ಮುಸ್ಲಿಂ ವ್ಯಕ್ತಿಗೆ ಹಲ್ಲೆ?

ಕೊಪ್ಪಳ: ಯುವಕರ ತಂಡವೊಂದು ಮುಸ್ಲಿಂ ಅಂಧ ವ್ಯಕ್ತಿಯನ್ನು (Blind Muslim old man) ಅಪಹರಿಸಿ ಜೈ ಶ್ರೀ ರಾಮ್‌ (Jai Shree Ram) ಎಂದು ಹೇಳುವಂತೆ ಒತ್ತಾಯಿಸಿ ಹಲ್ಲೆ ಮಾಡಿದ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ (Gangavati News) ನಡೆದಿದೆ. ಗಂಗಾವತಿಯ ಮಹಿಬೂಬ ನಗರದ ನಿವಾಸಿ ಹುಸೇನಸಾಬ ಎಂಬ ವೃದ್ಧನ ಮೇಲೆ ಹಲ್ಲೆ (Attack on Muslim Man) ನಡೆದಿದೆ.

ಹುಸೇನ ಸಾಬ ಅವರಿಗೆ ಎರಡೂ ಕಣ್ಣುಗಳಲ್ಲಿ ದೃಷ್ಟಿ ಇಲ್ಲ. ಅಂಧರಾಗಿರುವ ಅವರು ನವೆಂಬರ್‌ 25ರಂದು ಕಷ್ಟಪಟ್ಟು ವಾಹನಗಳನ್ನು ಬಳಸಿ ಪೇಟೆ ಕಡೆಗೆ ಬಂದಿದ್ದರು. ಅಲ್ಲಿಂದ ಮನೆಗೆ ತೆರಳಲು ಆಟೋ ರಿಕ್ಷಾಕ್ಕಾಗಿ ಕಾಯುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ಕೆಲವರು ಅವರ ಮೇಲೆ ಹಲ್ಲೆ ಮಾಡಿದ್ದಾರೆ.

ಬಳಿಕ ಅವರನ್ನು ಎತ್ತಾಕಿಕೊಂಡು ನಗರದ ಹೊರವಲಯದ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಹಲ್ಲೆ ಮಾಡಿದ್ದಾರೆ ಎಂದು ಗಂಗಾವತಿ ನಗರ ಠಾಣೆಯಲ್ಲಿ ದೂರು ನೀಡಲಾಗಿದೆ. ನಗರದ ಹೊರವಲಯಕ್ಕೆ ಕರೆದುಕೊಂಡು ಹೋಗಿ ಅವರ ಗಡ್ಡಕ್ಕೆ ಬೆಂಕಿ ಹಚ್ಚಲಾಗಿದೆ. ಆದರೆ, ಅವರು ಕೂಡಲೇ ಅದನ್ನು ನಂದಿಸಿಕೊಂಡಿದ್ದಾರೆ. ಬಳಿಕ ಹಲ್ಲೆ ಮಾಡಲಾಗಿದೆ. ಹುಸೇನ ಸಾಬ ಅವರ ಬೆನ್ನಿನಲ್ಲಿ ಹಲ್ಲೆಯಿಂದಾದ ಗಾಯದ ಗುರುತುಗಳು ಕಂಡುಬಂದಿವೆ.

ನವೆಂಬರ್‌ 25ರಂದು ಸಂಜೆ ಈ ಘಟನೆ ನಡೆದಿದ್ದು, ಆವತ್ತು ರಾತ್ರಿ ಇಡೀ ಹುಸೇನಸಾಬ ಅವರು ಆ ಗುಡ್ಡದಲ್ಲೇ ಇದ್ದರು. ಬೆಳಗ್ಗೆ ಕುರಿ ಕಾಯುವವರು ಬಂದು ನೋಡಿದಾಗ ಇವರು ಬಿದ್ದುಕೊಂಡಿರುವುದು ಕಂಡಿದೆ. ಅವರು ಹುಸೇನ್‌ ಸಾಬ್‌ ಅವರನ್ನು ಮನೆಗೆ ಸೇರಿಸಿದ್ದಾರೆ. ಮನೆಯಲ್ಲಿ ಹೀಗೆಲ್ಲ ನಡೆದಿದೆ ಎಂದು ಹೇಳಿದ ಬಳಿಕ ಈಗ ಗಂಗಾವತಿ ನಗರ ಠಾಣೆಗೆ ದೂರು ನೀಡಲಾಗಿದೆ.

ಹಲ್ಲೆ ನಡೆದಿದ್ದು ನಿಜವಾ?

ಹುಸೇನ ಸಾಬ ಅವರನ್ನು ನೋಡಿದರೆ ಯಾರಿಗೂ ಹಲ್ಲೆ ಮಾಡಬೇಕು, ಗಡ್ಡಕ್ಕೆ ಬೆಂಕಿ ಹಚ್ಚಬೇಕು ಎಂದು ಅನಿಸುವ ಹಾಗಿದ್ದಾರೆ. ಒಬ್ಬ ಬಡ ಮುಸ್ಲಿಂ ಮಾತ್ರವಲ್ಲದೆ, ಕಣ್ಣೇ ಕಾಣದ ಅಂಧನಿಗೆ ಹಲ್ಲೆ ಮಾಡುವ ಉದ್ದೇಶವಾದರೂ ಏನು ಎನ್ನುವುದು ಸ್ಪಷ್ಟವಾಗಿಲ್ಲ. ನಿಜಕ್ಕೂ ಯಾರಾದರೂ ಕುಡಿತ ಇಲ್ಲವೇ ನಶೆಯ ಮತ್ತಿನಲ್ಲಿ ಈ ರೀತಿ ನಡೆದುಕೊಂಡರೇ ಎನ್ನುವ ಸಂಶಯವೂ ಇದೆ. ಆ ರೀತಿ ನಡೆದಿದ್ದರೆ ಅವರನ್ನು ಬೈಕ್‌ ಮೂಲಕ ಎತ್ತಾಕಿಕೊಂಡ ಪ್ರದೇಶದಲ್ಲಿ ಯಾವುದಾದರೂ ಸಿಸಿಟಿವಿಯಲ್ಲಿ ಈ ಘಟನೆ ದಾಖಲಾಗಿರುವ ಸಾಧ್ಯತೆ ಇದೆ. ಇದನ್ನು ಗಮನಿಸಿ ಪೊಲೀಸರು ಮುಂದಿನ ಕ್ರಮ ಕೈಗೊಳ್ಳಬೇಕಾಗಿದೆ.

ಇದನ್ನೂ ಓದಿ: DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

ಒಂದು ವೇಳೆ ಹಲ್ಲೆ ನಡೆದಿರುವುದು ನಿಜವೇ ಆಗಿದ್ದರೆ ಹಲ್ಲೆ ಮಾಡಿದವರು ಯಾರು? ಏನು ಉದ್ದೇಶ ಎನ್ನುವುದು ಅಪರಾಧಿಗಳ ಬಂಧನದ ಬಳಿಕ ಸ್ವಷ್ಟವಾಗಲಿದೆ. ಅಥವಾ ಯಾವುದೋ ಬೇರೆ ಕಾರಣದಿಂದ ಮನೆಯಿಂದ ನಾಪತ್ತೆಯಾದ ಹುಸೇನ ಸಾಬ ಅವರು ಹಲ್ಲೆ, ಜೈಶ್ರೀರಾಮ್‌ ಹೇಳಿಕೆಯ ಕಥೆಗಳನ್ನು ಕಟ್ಟಿದ್ದರೆ ಅದು ಕೂಡಾ ತನಿಖೆಯಿಂದ ಬಯಲಾಗಲಿದೆ. ಒಂದೊಮ್ಮೆ ದುಷ್ಕರ್ಮಿಗಳ ತಂಡ ಒಬ್ಬ ಅಂಧ ವ್ಯಕ್ತಿಯ ಮೇಲೆ ಈ ರೀತಿ ದೌರ್ಜನ್ಯ ಮಾಡಿದ್ದೇ ಹೌದಾಗಿದ್ದಲ್ಲಿ, ಇದಕ್ಕಿಂತ ದುಷ್ಟ ಕೃತ್ಯ ಬೇರೆ ಇಲ್ಲ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ.ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಹುಬ್ಬಳ್ಳಿ

Neha Murder case : ನ್ಯಾಯಾಧೀಶರ ಎದುರೆ ನೇಹಾ ಕೊಲೆ ಆರೋಪಿ ಫಯಾಜ್‌ನ DNA ಮಾದರಿ ಸಂಗ್ರಹ!

Neha Murder case : ನೇಹಾ ಕೊಲೆ ಆರೋಪಿ ಫಯಾಜ್‌ನನ್ನು ಸಿಐಡಿ ತಂಡ ಆರು ದಿನಗಳ ಕಾಲ ಕಸ್ಟಡಿಗೆ ಪಡೆದಿದೆ. ಶನಿವಾರ ಫಯಾಜ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಡಿಎನ್ಎ ಟೆಸ್ಟ್‌ಗೆ (DNA Test) ಅನುಮತಿ ಪಡೆಯಲಿದ್ದಾರೆ.

VISTARANEWS.COM


on

By

Neha Murder Case neha And fayas
ಕೊಲೆಯಾದ ನೇಹಾ ಹಾಗೂ ಸ್ಥಳ ಮಹಜರು ಮಾಡಿದ್ದ ಸಿಐಡಿ ಅಧಿಕಾರಿಗಳು
Koo

ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ (Neha Murder Case) ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳ ತನಿಖೆಯು ಮುಂದುವರಿದಿದೆ. ಆರೋಪಿ ಫಯಾಜ್‌ನ ಡಿಎನ್‌ಎ (DNA Test) ಟೆಸ್ಟ್‌ಗೆ ಸಿಐಡಿ ಅಧಿಕಾರಿಗಳು ಅನುಮತಿ ಕೇಳಿದ್ದಾರೆ. ಈ ಸಂಬಂಧ 1ನೇ ಆ್ಯಡಿಷನಲ್ ಸಿವಿಲ್ ಜಡ್ಡ್ ನ್ಯಾಯಾಲಯದಲ್ಲಿ ಕೋರಿಕೆಯ ಅರ್ಜಿ ಸಲ್ಲಿಸಿದ್ದಾರೆ.

ನ್ಯಾಯಾಲಯವು ಮಧ್ಯಾಹ್ನ 1 ಗಂಟೆಗೆ ಆರೋಪಿಯ ಹಾಜರಾತಿಗೆ ಸೂಚಿಸಿತ್ತು. ಆದರೆ ಕಾನೂನು ಸುವ್ಯವಸ್ಥೆ ಹಿನ್ನೆಲೆಯಲ್ಲಿ ಸಮಯ ಬದಲಾವಣೆಗೆ ನ್ಯಾಯಾಧೀಶರ ಬಳಿ ಸಿಐಡಿ ಅಧಿಕಾರಿಗಳು ಮನವಿ ಮಾಡಿದ್ದರು. ಸಿಐಡಿ ಮನವಿ ಮೇರೆಗೆ ಆರೋಪಿಯ ಹಾಜರಾತಿಗೆ ಮಧ್ಯಾಹ್ನ 3 ಗಂಟೆಯ ಸಮಯವನ್ನು ನಿಗದಿ ಮಾಡಲಾಗಿದೆ. ಇನ್ನೂ ವೈದ್ಯರು ನ್ಯಾಯಾಧೀಶರ ಎದುರೆ ಫಯಾಜ್‌ನ ಡಿಎನ್‌ಎ ಮಾದರಿಯನ್ನು ಸಂಗ್ರಹಿಸಲಿದ್ದಾರೆ.

ಇದನ್ನೂ ಓದಿ: Road Accident : ಲಾರಿ- ಬೈಕ್‌ ಅಪಘಾತ; ಪತ್ನಿ ಕಣ್ಣೇದುರೇ ಒದ್ದಾಡಿ ಪ್ರಾಣಬಿಟ್ಟ ಪತಿ

ನೇಹಾ ಹತ್ಯೆ ಮಾಡಿದ ಹಂತಕನ ಎನ್‌ಕೌಂಟರ್‌ ಮಾಡಿ- ಮಾಜಿ ಸಚಿವ ರಾಜುಗೌಡ

ನೇಹಾ ಹತ್ಯೆ ಮಾಡಿದ್ದ ಹಂತಕನನ್ನು ಎನ್‌ಕೌಂಟರ್ ಮಾಡಿ ಎಂದು ಯಾದಗಿರಿ ಜಿಲ್ಲೆಯ ಸುರಪುರನಲ್ಲಿ ಮಾಜಿ ಸಚಿವ ರಾಜುಗೌಡ ಹೇಳಿಕೆ ನೀಡಿದ್ದಾರೆ. ನೇಹಾ ಹತ್ಯೆ ಘಟನೆ ಬಗ್ಗೆ ಸಿಎಂ ಹಾಗೂ ಗೃಹ ಸಚಿವರು ಬೇಜವಾಬ್ದಾರಿತನ ಹೇಳಿಕೆ ನೀಡಿರುವುದು ಸರಿಯಲ್ಲ. ಯಾರು ಇಂತಹ ಹೇಳಿಕೆ ಕೊಡಬಾರದು ಎಂದು ಕಿಡಿಕಾರಿದರು.

ಇಂತಹ ಘಟನೆಗಳಿಂದ ಪೋಷಕರು ಕಾಲೇಜುಗಳಿಗೆ ಮಕ್ಕಳಿಗೆ ಕಳುಹಿಸಲು ಭಯಪಡುತ್ತಿದ್ದಾರೆ. ಯಾರೆ ತಪ್ಪು ಮಾಡಿದರೂ ಆರೋಪಿಗಳಿಗೆ ಎನ್‌ಕೌಂಟರ್ ಮಾಡಿದರೆ ಭಯ ಇರುತ್ತದೆ. ಯಾವುದೇ ಕೋಮಿನ ಮಹಿಳೆ ಮೇಲೆ ದೌರ್ಜನ್ಯ ಮಾಡಿದರೆ ತಕ್ಕ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.

ನೇಹಾ ಅವರ ತಂದೆ ನೋವಿನಲ್ಲಿದ್ದಾರೆ, ಹೆಣ್ಣು ಹೆತ್ತವರಿಗೆ ನೋವು ಇರುತ್ತದೆ. ಸಂತೋಷ ಲಾಡ್‌ಗೆ ಹೆಣ್ಣುಮಕ್ಕಳು ಇಲ್ಲ ಹೀಗಾಗಿ ಅವರು ಬಾಯಿಗೆ ಬಂದಾಗ ಮಾತನಾಡುತ್ತಾರೆ. ಯಾರೆ ಆದರೂ ಮಕ್ಕಳು ಮಕ್ಕಳೇ ಅಲ್ವಾ, ನೇಹಾ ತಂದೆ ನೋವಿನಲ್ಲಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆ ನೀಡುವಂತೆ ರಾಜುಗೌಡ ಒತ್ತಾಯಿಸಿದರು.

ಏನಿದು ನೇಹಾ ಹತ್ಯೆ ಪ್ರಕರಣ?

ಪ್ರೀತಿಸಲು‌ ನಿರಾಕರಿಸಿದಳು (Refusal to love) ಎಂಬ ಕಾರಣಕ್ಕಾಗಿ ಪಾಗಲ್‌ ಪ್ರೇಮಿ ಫಯಾಜ್‌ ಎಂಬಾತ ಕಾರ್ಪೋರೇಟರ್‌ ಮಗಳನ್ನು ಭೀಕರವಾಗಿ ಕೊಲೆ (Stab wound) ಮಾಡಿದ್ದ. ಚಾಕುವಿನಿಂದ 9 ಬಾರಿ ಇರಿದು (Murder Case) ಕೊಂದು ಎಸ್ಕೇಪ್‌ ಆಗಲು ಯತ್ನಿಸಿದ್ದ. ಏ.18ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲೇ ಈ ಹತ್ಯೆ ನಡೆದಿತ್ತು. ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳು ನೇಹಾ ಹಿರೇಮಠ ಬರ್ಬರವಾಗಿ ಕೊಲೆಯಾಗಿದ್ದಳು.

ನೇಹಾ ಹಿರೇಮಠ ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿದ್ದಳು. ಅದೇ ಕಾಲೇಜಿನಲ್ಲಿ ಓದುತ್ತಿದ್ದ ಆರೋಪಿ ಪ್ರೀತಿಸುವಂತೆ ಹಿಂದೆ ಬಿದ್ದಿದ್ದ. ಆದರೆ, ನೇಹಾ ನಿರಾಕರಣೆ ಮಾಡುತ್ತಲೇ ಬಂದಿದ್ದಳು ಎನ್ನಲಾಗಿದೆ. ಇದರಿಂದ ರೊಚ್ಚಿಗೆದ್ದ ಆತ ಏ.18ರ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದ, ಆದರೆ ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ.

ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿ ಫಯಾಜ್‌ ಏಕಾಏಕಿ ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದ. ಆತನಿಂದ ತಪ್ಪಿಸಿಕೊಳ್ಳಲು ಹೋಗಿ ಕೆಳಗೆ ಬಿದ್ದ ನೇಹಾಳನ್ನು ಹಿಡಿದುಕೊಂಡ ಪಾಗಲ್‌ ಪ್ರೇಮಿ, ಮನಬಂದಂತೆ ಚಾಕುವಿನಿಂದ ಇರಿದಿದ್ದ. ಒಟ್ಟು ಒಂಭತ್ತು ಬಾರಿ ಚಾಕುವಿನಿಂದ ಚುಚ್ಚಿದ್ದರಿಂದ ನೇಹಾಳಿಗೆ ತೀವ್ರ ರಕ್ತಸ್ರಾವವಾಗಿತ್ತು. ಕೂಡಲೇ ಅಲ್ಲಿದ್ದವರು ಕಿಮ್ಸ್ ಆಸ್ಪತ್ರೆಗೆ ಆಕೆಯನ್ನು ರವಾನೆ ಮಾಡಿದ್ದರು. ಆದರೆ, ಅಷ್ಟರಲ್ಲಾಗಲೇ ನೇಹಾ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದರು. ಇತ್ತ ಹತ್ಯೆ ಮಾಡಿ ಎಸ್ಕೇಪ್‌ ಆಗುತ್ತಿದ್ದ ಫಯಾಜ್‌ನನ್ನು ವಿದ್ಯಾರ್ಥಿಗಳೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಚಿನ್ನದ ದರ

Gold Rate Today: 22 ಕ್ಯಾರಟ್‌, 24 ಕ್ಯಾರಟ್‌ ಚಿನ್ನದ ಬೆಲೆ ಇಂದು ಹೀಗಿವೆ; ತುಸುವೇ ಏರಿಕೆ

Gold Rate Today: ಚಿನ್ನದ ಬೆಲೆಗಳು ಇಂದು 22 ಕ್ಯಾರಟ್‌ಗೆ ₹20 ಹಾಗೂ 24 ಕ್ಯಾರಟ್‌ಗೆ ₹22 ಏರಿಕೆಯಾಗಿವೆ. ಇದು ಪ್ರತಿ 1 ಗ್ರಾಂಗೆ ಏರಿಕೆಯಾಗಿರುವ ದರ. ಒಟ್ಟಾರೆ ದರಗಳನ್ನು ಇಲ್ಲಿ ಪರಿಶೀಲಿಸಿ.

VISTARANEWS.COM


on

gold rate today beauty
Koo

ಬೆಂಗಳೂರು: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹20 ಹಾಗೂ ₹22 ಏರಿಕೆಯಾಗಿವೆ. ನಿನ್ನೆ ಮತದಾನದ ದಿನವೂ ಚಿನ್ನದ ಬೆಲೆಗಳು ಏರಿಕೆಯಾಗಿದ್ದವು.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,685ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,480 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹66,850 ಮತ್ತು ₹6,68,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,293 ಆಗಿದ್ದರೆ, ಎಂಟು ಗ್ರಾಂ ಬೆಲೆ ₹58,344 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72,930 ಮತ್ತು ₹7,29,300 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹84, ಎಂಟು ಗ್ರಾಂ ₹672 ಮತ್ತು 10 ಗ್ರಾಂ ₹840ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,400 ಮತ್ತು 1 ಕಿಲೋಗ್ರಾಂಗೆ ₹84,000 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ67,00073,080
ಮುಂಬಯಿ66,850 72,930
ಬೆಂಗಳೂರು66,850 72,930
ಚೆನ್ನೈ67,70072,760

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Gold Rate Today: ಚಿನ್ನ ಕೊಳ್ಳೋಕೆ ಇಂದು ಸುಸಮಯ! 24 ಕ್ಯಾರಟ್‌ ಬಂಗಾರಕ್ಕೆ ₹1530 ಇಳಿಕೆ!

Continue Reading

ಕರ್ನಾಟಕ

Drought Relief: 3,454 ಕೋಟಿ ರೂ. ಬರ ಪರಿಹಾರ; ‘ಅರೆಕಾಸಿನ ಮಜ್ಜಿಗೆ’ ಎಂದ ಸಿದ್ದರಾಮಯ್ಯ!

Drought Relief: ಕರ್ನಾಟಕಕ್ಕೆ ಕೇಂದ್ರ ಸರ್ಕಾರವು ಕೊನೆಗೂ ಬರ ಪರಿಹಾರ ಬಿಡುಗಡೆ ಮಾಡಿದೆ. ರಾಜ್ಯಕ್ಕೆ ಒಟ್ಟು 3,454 ಕೋಟಿ ರೂಪಾಯಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಇದರೊಂದಿಗೆ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದ ಕರ್ನಾಟಕ ಸರ್ಕಾರಕ್ಕೆ ಕೊನೆಗೂ ಜಯ ಸಿಕ್ಕಂತಾಗಿದೆ. 18,171 ಕೋಟಿ ರೂ. ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರ ಮನವಿ ಮಾಡಿತ್ತು. ಹಾಗಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Drought Relief
Koo

ಕಲಬುರಗಿ: ಕರ್ನಾಟಕ ಸರ್ಕಾರವು ಬರ ಪರಿಹಾರಕ್ಕಾಗಿ ಸುಪ್ರೀಂ ಕೋರ್ಟ್‌ (Supreme Court) ಮೊರೆ ಹೋದ ಬಳಿಕ ಕೊನೆಗೂ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ (Drought Relief) ನೀಡಿದೆ. ಬರ ಪರಿಹಾರ ಬಿಡುಗಡೆ ಮಾಡಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಮೊದಲ ಪ್ರತಿಕ್ರಿಯೆ ನೀಡಿದ್ದು, “ಕೇಂದ್ರ ಸರ್ಕಾರವು ನಾವು ಕೇಳಿದ್ದಕ್ಕಿಂತ ತುಂಬ ಕಡಿಮೆ ಹಣ ಬಿಡುಗಡೆ ಮಾಡಿದೆ. ಈ ಕುರಿತು ಅಧಿಕಾರಿಗಳ ಜತೆ ಚರ್ಚಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು” ಎಂದು ತಿಳಿಸಿದರು.

“ರಾಜ್ಯದಲ್ಲಿ 35 ಸಾವಿರ ಕೋಟಿ ರೂ. ಮೊತ್ತದ ಬೆಳೆ ನಷ್ಟವಾಗಿದೆ. 48 ಸಾವಿರ ಹೆಕ್ಟೇರ್‌ ಬೆಳೆ ನಾಶ ಆಗಿದೆ. 223 ತಾಲೂಕುಗಳು ಬರಪೀಡಿತ ಎಂಬುದಾಗಿ ಘೋಷಣೆ ಮಾಡಿದ್ದೇವೆ. ಹಾಗಾಗಿ, ನಾವು ಕೇಂದ್ರ ಸರ್ಕಾರಕ್ಕೆ 18,172 ಕೋಟಿ ರೂ. ಪರಿಹಾರ ಕೇಳಿದ್ದೆವು. ಆದರೆ, ಈಗ ಕೇಂದ್ರ ಸರ್ಕಾರವು ನಾವು ಕೇಳಿದ ನಾಲ್ಕನೇ ಒಂದು ಭಾಗದಷ್ಟು ಮಾತ್ರ ಪರಿಹಾರ ನೀಡಿದೆ. ಇದು ತುಂಬ ಕಡಿಮೆ ಆಯಿತು. ಈ ಕುರಿತು ಅಧಿಕಾರಿಗಳ ಜತೆ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ” ಎಂಬುದಾಗಿ ಕಲಬುರಗಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ತಿಳಿಸಿದರು.

ಲೋಕಸಭೆ ಚುನಾವಣೆ ಕುರಿತು ಮಾತನಾಡಿದ ಅವರು, “ಕರ್ನಾಟಕದಲ್ಲಿ ನಿನ್ನೆ (ಏಪ್ರಿಲ್‌ 26) ಮೊದಲ ಹಂತದ ಮತದಾನ ಮುಕ್ತಾಯವಾಗಿದೆ. ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಹೆಚ್ಚಿನ ಮತದಾನವಾಗಿದೆ ಎಂಬುದಾಗಿ ವರದಿ ತಿಳಿಸಿದೆ. ಕರ್ನಾಟಕ ಸರ್ಕಾರ ಘೋಷಿಸಿದ ಐದು ಗ್ಯಾರಂಟಿಗಳು ಜನ ನಮ್ಮ ಮೇಲೆ ಹೆಚ್ಚು ವಿಶ್ವಾಸ ಇರಿಸಲು ಕಾರಣವಾಗಿದೆ. ಹಾಗಾಗಿ, ಎಲ್ಲ ಕ್ಷೇತ್ರಗಳಲ್ಲೂ ನಮಗೆ ಮುನ್ನಡೆ ಸಿಗುವುದು ನಿಶ್ಚಿತ” ಎಂದು ಹೇಳಿದರು. ನರೇಂದ್ರ ಮೋದಿ ಅಬ್ಬರದ ಭಾಷಣ, ಕಾಂಗ್ರೆಸ್‌ ವಿರುದ್ಧ ಟೀಕೆಗಳ ಕುರಿತು ಮಾತನಾಡಿದ ಅವರು, “ಪ್ರಧಾನಿಯವರಿಗೆ ಸುಳ್ಳು ಹೇಳುವುದು ರೂಢಿಯಾಗಿದೆ. ಆ ಸುಳ್ಳುಗಳನ್ನು ಜನ ಇನ್ನು ನಂಬುವುದಿಲ್ಲ” ಎಂದು ಕುಟುಕಿದರು.

ಮಲತಾಯಿ ಧೋರಣೆ ಎಂದ ಕೃಷ್ಣ ಭೈರೇಗೌಡ

ಕೇಂದ್ರ ಸರ್ಕಾರವು ಕಡಿಮೆ ಮೊತ್ತದ ಬರ ಪರಿಹಾರ ಬಿಡುಗಡೆ ಮಾಡಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ರಾಜ್ಯದಲ್ಲಿ 200ಕ್ಕೂ ಅಧಿಕ ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಇಷ್ಟಿದ್ದರೂ ಕೇವಲ 3,454 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದೆ. ಈ ದುಡ್ಡು ಯಾವುದಕ್ಕೂ ಸಾಕಾಗುವುದಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೋದಿಗೆ ಧನ್ಯವಾದ ಎಂದ ಕರ್ನಾಟಕ ಬಿಜೆಪಿ

ಕರ್ನಾಟಕಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಕರ್ನಾಟಕ ಬಿಜೆಪಿಯು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದೆ. ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಬಿಜೆಪಿ, “ಬರ ಪರಿಹಾರ ಮಾಡಿದ ಹಿನ್ನೆಲೆಯಲ್ಲಿ ನಾಡಿನ ಸಮಸ್ತ ಕನ್ನಡಿಗರ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತುಂಬು ಹೃದಯದ ಧನ್ಯವಾದಗಳು” ಎಂದಿದೆ.

ಕರ್ನಾಟಕದಲ್ಲಿ ಕಂಡು ಕೇಳರಿಯದಂತಹ ಬರ ಉಂಟಾದರೂ, ರೈತರಿಗೆ ಬಿಡಿಗಾಸು ಮಧ್ಯಂತರ ಪರಿಹಾರ ನೀಡದೆ ರಾಜ್ಯ ಕಾಂಗ್ರೆಸ್‌ ಸರ್ಕಾರವು ಸಂಪೂರ್ಣ ಓಲೈಕೆ ರಾಜಕಾರಣದಲ್ಲಿ ನಿರತವಾಗಿತ್ತು. ಆದರೆ, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿಯೂ ಕನ್ನಡಿಗರ ಸಂಕಷ್ಟಕ್ಕೆ ನೆರವಾಗಿರುವ ನರೇಂದ್ರ ಮೋದಿಯವರು ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ನೀಡುವ ಮೂಲಕ ಸಮಸ್ತ ಕನ್ನಡಿಗರ ಹಿತ ಕಾಯುವ ಕೆಲಸ ಮಾಡಿದ್ದಾರೆ” ಎಂದಿದೆ.

ಇದನ್ನೂ ಓದಿ: Drought Relief: ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

Continue Reading

ಕೋಲಾರ

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Road Accident : ಕೋಲಾರ ಸ್ಟ್ರಾಂಗ್‌ ರೂಮಿಗೆ ಇವಿಎಂ ಸಾಗಿಸುತ್ತಾಗ ಕ್ಯಾಂಟರ್‌ ವಾಹನದ ಟೈರ್‌ ಸ್ಫೋಟಗೊಂಡಿದೆ. ಅದೃಷ್ಟವಶಾತ್‌ ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಸದ್ಯ ಕ್ಯಾಂಟರ್‌ನ ಟೈರ್‌ ಬದಲಾವಣೆ ಮಾಡಲು ರಸ್ತೆಯಲ್ಲೇ ರಿಪೇರಿ ಕೆಲಸ ನಡೆಸುತ್ತಿದ್ದು, ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.

VISTARANEWS.COM


on

By

road Accident in kolar evm
Koo

ಕೋಲಾರ : ಕೋಲಾರದ ವಡಗೂರ್ ಗೇಟ್ ಬಳಿ ಇವಿಎಂ‌ (EVM) ಸಾಗಿಸುತ್ತಿದ್ದಾಗ ಕ್ಯಾಂಟರ್ ವಾಹನದ ಟೈರ್ ಸ್ಫೋಟಗೊಂಡ (Road Accident) ಘಟನೆ ನಡೆದಿದೆ. ಮುಳಬಾಗಿಲಿನಿಂದ ಕೋಲಾರದ‌ ಸ್ಟ್ರಾಂಗ್ ರೂಂಗೆ ಇವಿಎಂ ಸಾಗಿಸಲಾಗುತ್ತಿತ್ತು. ಈ ವೇಳೆ ಏಕಾಏಕಿ ಕ್ಯಾಂಟರ್‌ ವಾಹನದ ಟೈರ್‌ ಸ್ಫೋಟಗೊಂಡಿದೆ.

ಇದರಿಂದಾಗಿ ಅಡ್ಡಾದಿಡ್ಡಿಯಾಗಿ ಹೋದ ಕ್ಯಾಂಟರ್‌ ರಸ್ತೆ ಬದಿ ನಿಂತಿದೆ. ಅದೃಷವಶಾತ್‌ ಕ್ಯಾಂಟರ್‌ ವಾಹನದಲ್ಲಿದ್ದವರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇವಿಎಂ ಹೊತ್ತ ವಾಹನ ಕಳೆದೊಂದು ಗಂಟೆಯಿಂದ ರಸ್ತೆಯಲ್ಲೇ ನಿಂತಿದೆ.

ಸದ್ಯ ಸಿಬ್ಬಂದಿಯಿಂದ ವಾಹನದ ಟೈರ್ ಬದಲಾಯಿಸುವ ಕಾರ್ಯ ಮುಂದುವರಿದಿದ್ದು, ವಾಹನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಇವಿಎಂ ಇರುವ ಕ್ಯಾಂಟರ್‌ ಅನ್ನು ಸೀಲ್ ಮಾಡಿರುವುದರಿಂದ‌ ವಾಹನದ ರಿಪೇರಿಯಾದ‌ ನಂತರ ಸ್ಟ್ರಾಂಗ್ ರೂಂಗೆ ರವಾನೆ ಮಾಡಲಾಗುತ್ತದೆ. ಸ್ಥಳದಲ್ಲೇ‌ ತಹಸೀಲ್ದಾರ್ ಹಾಗೂ ಪೊಲೀಸ್ ‌ಸಿಬ್ಬಂದಿ ಮೊಕ್ಕಾಂ ಹೂಡಿದ್ದಾರೆ.

ಇದನ್ನೂ ಓದಿ: Vampire Facial: ಹೆಣ್ಣುಮಕ್ಕಳೇ ಎಚ್ಚರ; ಫೇಶಿಯಲ್‌ ಮಾಡಿಸಿಕೊಂಡ ಮೂವರಿಗೆ ಎಚ್‌ಐವಿ!

ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದ ಆಂಬ್ಯುಲೆನ್ಸ್‌ ಚಾಲಕ; ಸರಣಿ ಅಪಘಾತಕ್ಕೆ ಕಾರುಗಳು ಜಖಂ, ಗರ್ಭಿಣಿ ಸೇಫ್

ಬೆಂಗಳೂರು: ಆಂಬ್ಯುಲೆನ್ಸ್‌ ಚಾಲಕನ (Ambulance driver) ಎಡವಟ್ಟಿನಿಂದ ಸರಣಿ ಅಪಘಾತ (Road Accident) ಸಂಭವಿಸಿದೆ. ಆಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಮೂರು ಕಾರು ಮತ್ತು ಒಂದು ಬೈಕ್ ನಡುವೆ ಸರಣಿ ಅಪಘಾತ ನಡೆದಿದೆ. ಶುಕ್ರವಾರ ರಾತ್ರಿ 10.45 ರ ಸುಮಾರಿಗೆ ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ ಬಳಿ ಘಟನೆ ನಡೆದಿದೆ. ಬೈಕ್ ಸವಾರನ ಕಾಲಿಗೆ ಹಾಗೂ ಕಾರು ಚಾಲಕನಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಬಚಾವ್ ಆಗಿದ್ದಾರೆ.

ಆಂಬ್ಯುಲೆನ್ಸ್‌ ಚಾಲಕ ಸುಮಂತ್‌ ಎಂಬಾತ ಮಾರ್ಕೆಟ್‌ನಿಂದ ಗುಡ್ಡದಹಳ್ಳಿ ಮಾರ್ಗವಾಗಿ ವೇಗವಾಗಿ ಬರುತ್ತಿದ್ದ. ಈ ವೇಳೆ ನಿಯಂತ್ರಣ ಸಿಗದೆ ನಿಂತಿದ್ದ ಕಾರಿಗೆ ಡಿಕ್ಕಿಯಾಗಿದೆ. ಕಾರು ಡಿಕ್ಕಿಯಾದ ಪರಿಣಾಮ ಮುಂದಿದ್ದ ಎರಡು ಕಾರು ಹಾಗೂ ಬೈಕ್ ನಡುವೆ ಸರಣಿ ಅಪಘಾತ ನಡೆದಿದೆ.

ಸರಣಿ ಅಪಘಾತಕ್ಕೆ ಟೆಕ್ಷನ್‌ ಆದ ಚಾಲಕ ಬ್ರೇಕ್ ತುಳಿಯುವ ಬದಲು ಎಕ್ಸಿಲೇಟರ್ ತುಳಿದು ಮತ್ತೆ ಅವಾಂತರ ಸೃಷ್ಟಿಸಿದ್ದಾನೆ. ಈ ವೇಳೆ ಕಾರುಗಳಿಗೆ ಗುದ್ದಿದ ಪರಿಣಾಮ ಸಂಪೂರ್ಣ ಜಖಂಗೊಂಡಿವೆ. ಕಾರಲ್ಲಿದ್ದ ನಾಲ್ಕು ತಿಂಗಳ ಗರ್ಭಿಣಿ ಪಾರಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಬ್ಯಾಟರಾಯನಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆಂಬ್ಯುಲೆನ್ಸ್ ಚಾಲಕ ಸುಮಂತ್‌ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಸಂಬಂಧ ಬ್ಯಾಟರಾಯನಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Food Poisoning: ಹಾಸ್ಟೆಲ್‌ ಊಟ ಸೇವಿಸಿ 24 ವಿದ್ಯಾರ್ಥಿನಿಯರು ಅಸ್ವಸ್ಥ

ಲಾರಿ- ಬೈಕ್‌ ಅಪಘಾತ; ಪತ್ನಿ ಕಣ್ಣೇದುರೇ ಒದ್ದಾಡಿ ಪ್ರಾಣಬಿಟ್ಟ ಪತಿ

ಕಲಬುರಗಿ: ಬೆಳಗಿನ ಜಾವ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದ್ದು, ಬೈಕ್‌ ಸವಾರ ದಾರುಣವಾಗಿ ಮೃತಪಟ್ಟಿದ್ದಾರೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಢೋಗಿ ನಾಲಾ ಬಳಿ‌ ಲಾರಿ ಮತ್ತು ಬೈಕ್ ನಡುವೆ ಅಪಘಾತ ನಡೆದಿದೆ.

ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಬೈಕ್ ಸವಾರ ಅರ್ಜುನ್ ಎಂಬಾತ ಮೃತಪಟ್ಟಿದ್ದಾರೆ. ಅರ್ಜುನ್‌ ಯಾದಗಿರಿ ಜಿಲ್ಲೆಯ ಬಳಿಚಕ್ರ ಗ್ರಾಮದ ನಿವಾಸಿಯಾಗಿದ್ದಾರೆ. ಅರ್ಜುನ್‌ ತಮ್ಮ ಪತ್ನಿ ಜತೆಗೆ ಬೆಳಗಿನ ಜಾವ ಪುಣೆಯಿಂದ ಯಾದಗಿರಿ ಕಡೆ ಬೈಕ್ ಮೇಲೆ ಹೊರಟಿದ್ದರು.

ಈ ವೇಳೆ ವೇಗವಾಗಿ ಬಂದ ಲಾರಿಯು ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ಬೈಕ್‌ನಿಂದ ಎಗರಿ ಬಿದ್ದಾಗ ಅರ್ಜುನ್‌ ತಲೆಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೂ ಜತೆಯಲ್ಲಿದ್ದ ಅರ್ಜುನ್‌ ಪತ್ನಿಗೂ ಗಾಯವಾಗಿದ್ದು, ಪತಿ ಒದ್ದಾಡಿ ಸಾವನ್ನಪ್ಪಿದ್ದು ಕಂಡು ಆಘಾತಕ್ಕೆ ಒಳಗಾಗಿದ್ದರು.

ಕೂಡಲೇ ಅಲ್ಲಿದ್ದ ಸ್ಥಳೀಯರು ಗಾಯಾಳನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ಸಂಬಂಧ ನರೋಣಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿ ಹಾಗೂ ಪುಡಿ ಪುಡಿಯಾಗಿದ್ದ ಬೈಕ್‌ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: Public Exam: ಇನ್ನು ಮುಂದೆ ವರ್ಷಕ್ಕೆರಡು ಬಾರಿ ಬೋರ್ಡ್‌ ಪರೀಕ್ಷೆ ? ಪರಿಶೀಲನೆಗೆ ಸಿಬಿಎಸ್‌ಇಗೆ ಸೂಚನೆ

Anjali Nimbalkar: ಅಪಘಾತದಲ್ಲಿ ಗಾಯಗೊಂಡ ಯುವಕನಿಗೆ ನೆರವಾದ ಅಂಜಲಿ ನಿಂಬಾಳ್ಕರ್

ಕಾರವಾರ: ಅಪಘಾತದಲ್ಲಿ (Road Accident) ಗಾಯಗೊಂಡು ರಸ್ತೆ ಬದಿ ನರಳುತ್ತ ಬಿದ್ದಿದ್ದ ಯುವಕನನ್ನು ತಮ್ಮದೇ ಕಾರಿನಲ್ಲಿ ಉತ್ತರ ಕನ್ನಡ ಲೋಕಸಭೆ ಚುನಾವಣಾ ಅಭ್ಯರ್ಥಿ (Uttara Kannada lok sabha election candidate) ಅಂಜಲಿ ನಿಂಬಾಳ್ಕರ್‌ (Anjali Nimbalkar) ಆಸ್ಪತ್ರೆಗೆ ಸಾಗಿಸಿ ಮಾನವೀಯತೆ (Humanity) ಮೆರೆದಿದ್ದಾರೆ.

ಉತ್ತರ ಕನ್ನಡ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರು ಯಲ್ಲಾಪುರ- ಶಿರಸಿ ನಡುವೆ ಪ್ರಯಣಿಸುತ್ತಿದ್ದಾಗ, ಬೈಕ್ ಸ್ಕಿಡ್ ಆಗಿ ಬಿದ್ದಿದ್ದ ಯುವಕನನ್ನು ಗಮನಿಸಿದ್ದರು. ವಿನಾಯಕ್ ಶೆಟ್ಟರ್ ಎಂಬ ಯುವಕ ಬೈಕ್‌ ಸ್ಕಿಡ್‌ ಆಗಿ ಬಿದ್ದು ಗಾಯಗೊಂಡಿದ್ದರು.

ಹಳಿಯಾಳದಿಂದ ಶಿರಸಿಗೆ ಹೋಗುವಾಗ ಯುವಕನನ್ನು ಗಮನಿಸಿದ ಅಂಜಲಿ ನಿಂಬಾಳ್ಕರ್, ಕಾರು ನಿಲ್ಲಿಸಿ ಗಾಯಗೊಂಡವನನ್ನು ಪರಿಶೀಲಿಸಿದರು. ಸ್ವತಃ ವೈದ್ಯೆಯಾಗಿರುವ ಡಾ.ಅಂಜಲಿ ನಿಂಬಾಳ್ಕರ್ ಸೂಕ್ತ ಪ್ರಥಮ ಉಪಚಾರ ನೀಡಿ ತಕ್ಷಣ ಯುವಕನನ್ನು ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಕರೆತಂದರು. ಆಸ್ಪತ್ರೆಯಲ್ಲೂ ಚಿಕಿತ್ಸೆ ವೇಳೆ ಸಿಬ್ಬಂದಿಯೊಂದಿಗಿದ್ದು ನೆರವು ನೀಡಿದರು. ಶಿರಸಿಯ ಪಂಡಿತ್ ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಾಳುವಿಗೆ ಚಿಕಿತ್ಸೆ ಕೊಡಿಸಲಾಗಿದೆ.

ಬಿಜೆಪಿಯ ಭದ್ರಕೋಟೆಯನ್ನು ಒಡೆಯುವೆ: ಅಂಜಲಿ

ಅಂಕೋಲಾ: ಜಾತಿ- ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡಿ ಬಿಜೆಪಿಗರು ಉತ್ತರ ಕನ್ನಡದ ಹೆಸರು ಕೆಡಿಸಿರುವುದನ್ನು ಸರಿಪಡಿಸಲು ನಮಗೆ ಈ ಬಾರಿ ಉತ್ತಮ ಅವಕಾಶವಿದೆ. ನಾನು ಈ ಜಿಲ್ಲೆಯವಳಲ್ಲ ಎನ್ನುವ ಬಿಜೆಪಿಗರು ಕೂಡ ನನ್ನ ಕ್ಷೇತ್ರಕ್ಕೆ ಪ್ರಚಾರಕ್ಕೆ ಬರಲೇಬೇಕು. ಬಹುಶಃ ಅವರಿಗೆ ಖಾನಾಪುರ ಬ್ಲಾಕ್ ಎಲ್ಲಿದೆ ಎನ್ನುವುದೂ ಗೊತ್ತಿರಲಿಕ್ಕಿಲ್ಲ. ಯಾಕೆಂದರೆ ಅಲ್ಲಿಗೆ ಅವರು ಬರುವುದೇ ಅಪರೂಪ ಎಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ (Uttara Kannada News) ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ಹೇಮಂತ್ ನಿಂಬಾಳ್ಕರ್ ವ್ಯಂಗ್ಯವಾಡಿದರು.

ಅಂಕೋಲಾದ ನಾಡವರ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಲೋಕಸಭಾ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಉತ್ತರ ಕನ್ನಡ 30 ವರ್ಷಗಳಿಂದ ಬಿಜೆಪಿ ಭದ್ರಕೋಟೆಯಾಗಿದೆ ಎಂದು ಹೇಳುತ್ತಾರೆ. ಆದರೆ ಈಗ ಪ್ರತಿ ಕಾರ್ಯಕರ್ತರೂ “ನಾನೇ ಅಂಜಲಿ ನಿಂಬಾಳ್ಕರ್ʼ ಎಂಬಂತೆ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುತ್ತಿದ್ದಾರೆ. ಹಾಗಾಗಿ ಈ ಭದ್ರಕೋಟೆಯನ್ನು ಒಡೆಯಲು ಹೆಚ್ಚೇನೂ ಶ್ರಮ ಬೇಕಿಲ್ಲವೆಂದೆನಿಸುತ್ತಿದೆ. ರಾಜಕೀಯ ನನಗೆ ಹೊಸದಲ್ಲ. ಖಾನಾಪುರದಲ್ಲಿ ಕೇವಲ ಮಹಿಳೆಯರಿಗಾಗಿ ಎಂಸಿಎಚ್ ಆಸ್ಪತ್ರೆ ಕಟ್ಟಿದ್ದೇನೆ. ಕಾಡುಪ್ರದೇಶದಲ್ಲಿ ಅಂಥದ್ದೊಂದು ಆಸ್ಪತ್ರೆ ಕಟ್ಟಿಸಬೇಕೆಂಬುದು ನನ್ನ ಕನಸಾಗಿತ್ತು. ಬಿಜೆಪಿ ಸರ್ಕಾರವಿದ್ದರೂ ಅಂಥ ದೊಡ್ಡ ಆಸ್ಪತ್ರೆ ಕಟ್ಟಿ ತೋರಿಸಿದ್ದೀನಿ. ಜಿಲ್ಲೆಯಲ್ಲೂ ಸುಸಜ್ಜಿತ ಆಸ್ಪತ್ರೆ ಆಗಬೇಕೆಂಬ ಆಸೆ ಇಲ್ಲಿಯ ಜನರದ್ದಿದೆ. ಅದನ್ನು ಮಾಡಲು ಪ್ರಯತ್ನಿಸೋಣʼʼ ಎಂದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Neha Murder Case neha And fayas
ಹುಬ್ಬಳ್ಳಿ12 mins ago

Neha Murder case : ನ್ಯಾಯಾಧೀಶರ ಎದುರೆ ನೇಹಾ ಕೊಲೆ ಆರೋಪಿ ಫಯಾಜ್‌ನ DNA ಮಾದರಿ ಸಂಗ್ರಹ!

Lok Sabha Election-2024
Lok Sabha Election 202412 mins ago

Lok Sabha Election 2024: ಜೈಲಿನಲ್ಲಿರುವ ಅಮೃತಪಾಲ್ ಚುನಾವಣೆಗೆ ಸ್ಪರ್ಧಿಸಬಹುದು, ಕೇಜ್ರಿವಾಲ್ ಮತ ಚಲಾಯಿಸುವಂತಿಲ್ಲ! ಏನಿದು ನಿಯಮ?

gold rate today beauty
ಚಿನ್ನದ ದರ17 mins ago

Gold Rate Today: 22 ಕ್ಯಾರಟ್‌, 24 ಕ್ಯಾರಟ್‌ ಚಿನ್ನದ ಬೆಲೆ ಇಂದು ಹೀಗಿವೆ; ತುಸುವೇ ಏರಿಕೆ

Drought Relief
ಕರ್ನಾಟಕ18 mins ago

Drought Relief: 3,454 ಕೋಟಿ ರೂ. ಬರ ಪರಿಹಾರ; ‘ಅರೆಕಾಸಿನ ಮಜ್ಜಿಗೆ’ ಎಂದ ಸಿದ್ದರಾಮಯ್ಯ!

Rakshit Shetty Richard Anthony Pre Production
ಸ್ಯಾಂಡಲ್ ವುಡ್23 mins ago

Rakshit Shetty: ʻರಿಚರ್ಡ್​ ಆಂಟನಿʼಯಲ್ಲಿ ಕರಾವಳಿ ಕಲಾವಿದರಿಗೆ ಮೊದಲ ಆದ್ಯತೆ ಅಂದ್ರಾ ರಕ್ಷಿತ್‌ ಶೆಟ್ಟಿ?

Krishna Mukherjee accuses Shubh Shagun producer
ಕಿರುತೆರೆ24 mins ago

Krishna Mukherjee: ಮೇಕಪ್‌ ರೂಮ್‌ನಲ್ಲಿ ಕೂಡಿ ಹಾಕಿದ್ರು, ಬಟ್ಟೆ ಬದಲಿಸಲೂ ಬಿಡಲಿಲ್ಲ; ʻನಾಗಿಣ್-3′ ಖ್ಯಾತ ನಟಿಯ ಅಳಲು!

ದೇಶ43 mins ago

Trinamool Congress: ಮಮತಾ ಬ್ಯಾನರ್ಜಿಯನ್ನು ಅರೆಸ್ಟ್‌ ಮಾಡಿ; ಟಿಎಂಸಿ ಉಗ್ರ ಸಂಘಟನೆ ಎಂದು ಘೋಷಿಸಿ-ಬಿಜೆಪಿ ಆಗ್ರಹ

road Accident in kolar evm
ಕೋಲಾರ53 mins ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Vampire Facial
ಆರೋಗ್ಯ1 hour ago

Vampire Facial: ಹೆಣ್ಣುಮಕ್ಕಳೇ ಎಚ್ಚರ; ಫೇಶಿಯಲ್‌ ಮಾಡಿಸಿಕೊಂಡ ಮೂವರಿಗೆ ಎಚ್‌ಐವಿ!

Yogi Adithyanatha
ಪ್ರಮುಖ ಸುದ್ದಿ1 hour ago

Yogi Adityanath: “ಗೋಮಾಂಸ ಸೇವಿಸುವ ಹಕ್ಕು….” ಕಾಂಗ್ರೆಸ್‌ ವಿರುದ್ಧ ಯೋಗಿ ಇನ್ನೊಂದು ಆರೋಪ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

road Accident in kolar evm
ಕೋಲಾರ53 mins ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ8 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 day ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 day ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ1 day ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20242 days ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

ಟ್ರೆಂಡಿಂಗ್‌