Site icon Vistara News

Drowned in channel water : ಬಟ್ಟೆ ತೊಳೆಯಲು ಕಾಲುವೆಗೆ ಇಳಿದ ಯುವಕ, ಬಾಲಕ ನೀರುಪಾಲು

ಬಾಗಲಕೋಟೆ ಕಾಲುವೆಯಲ್ಲಿ ನೀರುಪಾಲು

#image_title

ಬಾಗಲಕೋಟೆ: ಬಟ್ಟೆ ತೊಳೆಯಲೆಂದು ಕಾಲುವೆಗೆ ಇಳಿದಿದ್ದ ಇಬ್ಬರು ಯುವಕರು ನೀರುಪಾಲಾಗಿದ್ದಾರೆ (Drowned in channel water). ಮುದ್ದೇಬಿಹಾಳ ತಾಲೂಕಿನ ಹಡಲಗೇರಿ ಬಳಿ ಕೆಬಿಜೆಎನ್ಎಲ್ ಕಾಲುವೆಯಲ್ಲಿ ಘಟನೆ ನಡೆದಿದ್ದು, ರಸೂಲ್ ಮಾಲದಾರ(೨೫) ಹಾಗೂ ಸಮಿವುಲ್ಲಾ ಗೊಳಸಂಗಿ(೧೦) ಮೃತ ದುರ್ದೈವಿಗಳು.

ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕಿನ ಚಿಮ್ಮಡ ಗ್ರಾಮದವರಾದ ರಸೂಲ್‌ ಮತ್ತು ಸಮಿವುಲ್ಲಾ ಕೂಲಿ ಕಾರ್ಮಿಕರಾಗಿದ್ದು, ಮುದ್ದೇಬಿಹಾಳದ ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದರು.

ಅವರು ತಮ್ಮ ಬಟ್ಟೆ ಒಗೆಯಲೆಂದು ಕಾಲುವೆಗೆ ಹೋಗಿದ್ದರು. ಬಟ್ಟೆ ತೊಳೆಯುತ್ತಿದ್ದಾಗ ಒಬ್ಬ ಕಾಲು ಜಾರಿ ಕಾಲುವೆಗೆ ಬಿದ್ದಿದ್ದು, ಇನ್ನೊಬ್ಬ ಅವನ ರಕ್ಷಣೆಗೆಂದು ಹೋಗಿರುವ ಸಾಧ್ಯತೆ ಇದೆ.

ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಹಾಗೂ ಸ್ಥಳೀಯರು ಸೇರಿ ಕಾಲುವೆಯಿಂದ ಶವವನ್ನು ಹೊರಕ್ಕೆ ತೆಗೆದಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : Young man drowned : ಸಾಗರ ಬಳಿ ಸ್ನೇಹಿತರ ಜತೆ ಕೆರೆಯಲ್ಲಿ ಈಜಲು ಹೋದ ಯುವಕ ನೀರುಪಾಲು

Exit mobile version