Site icon Vistara News

Youths drowned | ಅಮಾವಾಸ್ಯೆ ಹಿನ್ನೆಲೆಯಲ್ಲಿ ಕಾರು ತೊಳೆಯಲು ಹೋದ ಇಬ್ಬರು ಯುವಕರು ನೀರುಪಾಲು

death in channel gadaga

ಗದಗ: ಅಮಾವಾಸ್ಯೆ ಪೂಜೆಯ ಹಿನ್ನೆಲೆಯಲ್ಲಿ ಕಾರು ತೊಳೆಯಲೆಂದು ಕಾಲುವೆ ಪಕ್ಕ ಹೋಗಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಗದಗ ಜಿಲ್ಲೆ ನರಗುಂದ ಪಟ್ಟಣದಲ್ಲಿ ಮಂಗಳವಾರ ಸಂಜೆ ನಡೆದಿದೆ.

ಘಟನಾ ಸ್ಥಳದಲ್ಲಿ ಸೇರಿದ ಜನರು

ಅರುಣ್ ಪಡೆಸೂರ (25) ಹಾಗೂ ಹನುಮಂತ ಮಜ್ಜಿಗೆ (30) ನಾಪತ್ತೆಯಾದ ಯುವಕರು. ಅವರು ಮಲಪ್ರಭಾ ನದಿಯ ಕಾಲುವೆಗೆ ಕಾರು‌ ಸ್ವಚ್ಛಗೊಳಿಸಲು ತೆರಳಿದ್ದರು. ಇಬ್ಬರೂ ಯುವಕರು ಕಾಲುವೆಯಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ.

ಈ ಭಾಗದಲ್ಲಿ ಅಮಾವಾಸ್ಯೆ ದಿನ ಕಾರುಗಳಿಗೆ ಪೂಜೆ ಮಾಡುವ ಪದ್ಧತಿ ಇದೆ. ಅದಕ್ಕೂ ಮುನ್ನ ಅದನ್ನು ತೊಳೆಯಲೆಂದು ಕಾಲುವೆ ಬಳಿ ತೆರಳಿದ್ದರು ಎನ್ನಲಾಗಿದೆ. ಅವರ ಕಾರು ಕಾಲುವೆಯ ಪಕ್ಕದಲ್ಲೇ ಇದೆ. ಆದರೆ, ಅವರಿಬ್ಬರೂ ನಾಪತ್ತೆಯಾಗಿದ್ದಾರೆ. ಕಾರು ತೊಳೆಯಲು ನೀರು ತರಲೆಂದು ಇಳಿದ ವೇಳೆ ಒಬ್ಬಾತ ಜಾರಿ ಬಿದ್ದು, ಇನ್ನೊಬ್ಬ ಆತನ ರಕ್ಷಣೆಗೆ ಹೋಗಿರುವ ಸಾಧ್ಯತೆ ಇದೆ.

ಯುವಕರ ಪತ್ತೆಗಾಗಿ ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿಗಳಿಂದ ಶೋಧ ಕಾರ್ಯ ನಡೆಸುತ್ತಿದ್ದಾರೆ. ನರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ | Drowned | ಮಂಡ್ಯ ನಾಲೆಯಲ್ಲಿ ಮುಳುಗಿ ರಾಷ್ಟ್ರೀಯ ಮಟ್ಟದ ಕ್ರೀಡಾಪಟು ಸಾವು

Exit mobile version