Site icon Vistara News

Yuva Nidhi Scheme: ಇನ್ನೆರಡೇ ವಾರಕ್ಕೆ ಯುವ ನಿಧಿ ಹಣ ಜಮೆ; ಸುಳ್ಳು ಹೇಳಿದ್ರೆ ಪೈಸಾ ವಸೂಲ್‌, ಕೇಸ್‌!

Yuva Nidhi Scheme

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ (Congress Guarantee) ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿಗಳಲ್ಲಿ ಕೊನೆಯ ಗ್ಯಾರಂಟಿಯಾದ ಯುವ ನಿಧಿಗೆ (Yuva Nidhi Scheme) ಡಿ. 26ರಿಂದ ನೋಂದಣಿಗೆ ಚಾಲನೆ ನೀಡಲಾಗುತ್ತಿದ್ದು, ಜ. 12ರಂದು ಖಾತೆಗೆ ನೇರವಾಗಿ ಜಮೆಯಾಗಲಿದೆ. ಆದರೆ, ಒಂದು ವೇಳೆ ಉದ್ಯೋಗ ಸಿಕ್ಕ ಮೇಲೆಯೂ ಇಲ್ಲವೇ ಉದ್ಯೋಗದಲ್ಲಿದ್ದೂ ಅರ್ಜಿ ಹಾಕಿ ಹಣ ಪಡೆದಿದ್ದು ಸಾಬೀತಾದರೆ ಅಂಥವರ ಮೇಲೆ ಕಾನೂನು ರೀತ್ಯಾ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು. ಅಲ್ಲದೆ, ಅವರು ಪಡೆದ ಅಷ್ಟೂ ಹಣವನ್ನು ವಾಪಸ್‌ ಪಡೆಯಲಾಗುವುದು.

ಯುವ ನಿಧಿ ಯೋಜನೆಯ ದುರುಪಯೋಗದ ಬಗ್ಗೆ ಸರ್ಕಾರ ಕ್ರಮವಹಿಸಬೇಕಿದೆ. ಯುವನಿಧಿ ದುರುಪಯೋಗ ತಡೆಯುವ ಉದ್ದೇಶದಿಂದ ಈ ಕ್ರಮವನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಶಿವಮೊಗ್ಗದಲ್ಲಿ ಜ.12ಕ್ಕೆ ಶಿವಮೊಗ್ಗದಲ್ಲಿ ಕಾರ್ಯಕ್ರಮ

ಜನವರಿ 12ರಂದು ಫಲಾನುಭವಿಗಳ ಖಾತೆಗೆ ನೇರವಾಗಿ ಜಮೆ ಆಗಲಿದ್ದು, ಅಂದು ಶಿವಮೊಗ್ಗದಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡುವುದಾಗಿ ಸಚಿವ ಶರಣ ಪ್ರಕಾಶ್‌ ಪಾಟೀಲ್‌ ಈಗಾಗಲೇ ಘೋಷಿಸಿದ್ದಾರೆ. ಕೆಲಸ ಸಿಗದಿರುವ ಬಗ್ಗೆ ಫಲಾನುಭವಿ ಸ್ವಯಂ ಧೃಢೀಕರಣ ಮಾಡಿಕೊಳ್ಳಬೇಕು. ಈ ನಡುವೆ ಕೆಲಸ ಸಿಕ್ಕರೆ ಅವರಿಗೆ ನಿಧಿ ಹಣ ಸಿಗುವುದಿಲ್ಲ.

ಅರ್ಹತೆ ಏನು?

ಯಾರು ಫಲಾನುಭವಿಗಳು?

ಯಾರು ಅನರ್ಹರು?

ಯುವ ನಿಧಿಗೆ ಅರ್ಜಿ ಸಲ್ಲಿಕೆ ಹೇಗೆ?

ಇದನ್ನೂ ಓದಿ: Residential School: ವಸತಿ ಶಾಲೆಯ 6ನೇ ತರಗತಿಗೆ ಪ್ರವೇಶ; ಅರ್ಜಿ ಸಲ್ಲಿಸೋಕೆ ನಾಳೆಯೇ ಕೊನೇ ದಿನ

ಯುವ ನಿಧಿ ಅರ್ಜಿ ಎಲ್ಲಿ ಸಲ್ಲಿಸಬೇಕು?

ಯುವನಿಧಿಗೆ ಅರ್ಹತೆ ಹೊಂದಿರುವ ಯುವಕ ಯುವತಿಯರು ‘ಸೇವಾ ಸಿಂಧು’ ಪೋರ್ಟಲ್‌, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರಗಳು, ಗ್ರಾಮ ಒನ್‌ಗಳಲ್ಲಿ ಅರ್ಜಿ ಸಲ್ಲಿಸಬಹುದು.

Exit mobile version