Site icon Vistara News

Yuva Rajkumar: ಕಾಂತಾರ ಕ್ವೀನ್‌ ಸಪ್ತಮಿ ಗೌಡ ಜತೆ ಯುವ ರಾಜ್‌ಕುಮಾರ್‌ ಸಂಬಂಧ; ಪತ್ನಿ ಶ್ರೀದೇವಿ ಆರೋಪ

Yuva Rajkumar

Yuva Rajkumar Has An Affair With Actress Sapthami Gowda: Says His Wife Sridevi Byrappa

ಬೆಂಗಳೂರು: ಡಾ.ರಾಜ್‌ಕುಮಾರ್‌ ವಂಶದ ಕುಡಿ, ನಟ ಯುವ ರಾಜ್‌ಕುಮಾರ್‌ (Yuva Rajkumar) ಅವರು ಪತ್ನಿ ಶ್ರೀದೇವಿ ಭೈರಪ್ಪ (Sridevi Byrappa) ಅವರಿಗೆ ಡಿವೋರ್ಸ್ ನೋಟಿಸ್‌ ನೀಡಿದ ಬಳಿಕ ಇಬ್ಬರ ನಡುವಿನ ಆರೋಪ- ಪ್ರತ್ಯಾರೋಪಗಳು ಜಾಸ್ತಿಯಾಗಿವೆ. ಅದರಲ್ಲೂ, ಅನೈತಿಕ ಸಂಬಂಧಗಳ ಆರೋಪಗಳು ಇನ್ನೂ ಹೆಚ್ಚಾಗಿವೆ. “ಶ್ರೀದೇವಿ ಭೈರಪ್ಪ ಅವರು ರಾಧಯ್ಯ ಎಂಬ ವ್ಯಕ್ತಿ ಜತೆ ಅನೈತಿಕ ಸಂಬಂಧ ಹೊಂದಿದ್ದಾರೆ” ಎಂಬುದಾಗಿ ಯುವ ರಾಜ್‌ಕುಮಾರ್‌ ಪರ ವಕೀಲ ಸಿರಿಲ್‌ ಪ್ರಸಾದ್‌ ಸುದ್ದಿಗೋಷ್ಠಿ ನಡೆಸಿ ಆರೋಪಿಸಿದ್ದಾರೆ. ಇನ್ನು, ನಟನ ಲೀಗಲ್‌ ನೋಟಿಸ್‌ಗೆ ಉತ್ತರಿಸಿದ ಶ್ರೀದೇವಿ ಭೈರಪ್ಪ, “ಯುವ ರಾಜ್‌ಕುಮಾರ್‌ ನಟಿ ಸಪ್ತಮಿ ಗೌಡ (Sapthami Gowda) ಜತೆ ಸಂಬಂಧ ಹೊಂದಿದ್ದಾರೆ” ಎಂಬುದಾಗಿ ಆರೋಪಿಸಿದ್ದಾರೆ. ಆ ಮೂಲಕ ಡಿವೋರ್ಸ್‌ ಪ್ರಕರಣವೀಗ ಪರಸ್ಪರ ಕೆಸರೆರಚಾಟಕ್ಕೆ ಕಾರಣವಾಗಿದೆ.

ಹೌದು, ನಟ ಯುವ ರಾಜ್‌ಕುಮಾರ್‌ ಕಳುಹಿಸಿದ ಲೀಗಲ್‌ ನೋಟಿಸ್‌ಗೆ ಶ್ರೀದೇವಿ ಭೈರಪ್ಪ ಮರುತ್ತರ ನೀಡಿದ್ದು, ಹಲವು ಆರೋಪಗಳನ್ನು ಮಾಡಿದ್ದಾರೆ. ಇದೇ ವರ್ಷದ ಮೇ 30ರಂದು ಶ್ರೀದೇವಿ ಭೈರಪ್ಪ ಅವರು ರಿಪ್ಲೈ ನೋಟಿಸ್‌ ನೀಡಿದ್ದಾರೆ. “ಸಪ್ತಮಿ ಗೌಡ ಜತೆಗೆ ಯುವ ರಾಜ್‌ಕುಮಾರ್‌ ಒಂದು ವರ್ಷದಿಂದ ಸಂಬಂಧ ಹೊಂದಿದ್ದಾರೆ. ಇದೇ ಕಾರಣಕ್ಕಾಗಿ ನನ್ನನ್ನು ಮನೆಯಿಂದ ಹೊರಹಾಕಲು ಪ್ರಯತ್ನಿಸಿದರು. ಪ್ರೀತಿಸಿ ಮದುವೆಯಾದ ಯುವ ರಾಜ್‌ಕುಮಾರ್‌, ಬಳಿಕ ಸಪ್ತಮಿ ಗೌಡ ಹಿಂದೆ ಬಿದ್ದಿದ್ದಾರೆ” ಎಂಬುದಾಗಿ ಶ್ರೀದೇವಿ ಭೈರಪ್ಪ ಆರೋಪಿಸಿದ್ದಾರೆ.

“ನಾನು ಹಾಗೂ ಯುವ ರಾಜ್‌ಕುಮಾರ್‌ 5 ವರ್ಷ ಪ್ರೀತಿಸಿದ್ದೆವು. 2019ರಲ್ಲಿ ಹಿಂದು ಸಂಪ್ರದಾಯದಂತೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಮದುವೆ ಮಾಡಿಕೊಂಡೆವು. ಮದುವೆಗೂ ಮುಂಚೆ ಯುವ ರಾಜ್‌ಕುಮಾರ್‌ ನಿರುದ್ಯೋಗಿ ಆಗಿದ್ದರು. ಅವರಿಗೆ ಕರಿಯರ್‌ ಬಗ್ಗೆ ಫೋಕಸ್‌ ಇರಲಿಲ್ಲ. ಅವರ ಕುಟುಂಬವು ಕೂಡ ಆರ್ಥಿಕವಾಗಿ ಸ್ಟೇಬಲ್‌ ಇರಲಿಲ್ಲ. ಇದಾದ ಬಳಿಕ ಯುವ ರಾಜ್‌ಕುಮಾರ್‌ ಸಪ್ತಮಿ ಗೌಡ ಹಿಂದೆ ಬಿದ್ದರು. ನಟಿಯನ್ನು ಮನೆಗೆ ಕರೆದುಕೊಂಡು ಬರುತ್ತಿದ್ದರು. ಸಪ್ತಮಿ ಗೌಡ ಜತೆ ಹೋಟೆಲ್‌ನಲ್ಲಿ ಇರುವಾಗಲೇ ಯುವ ಸಿಕ್ಕಿಬಿದ್ದಿದ್ದರು. ಸಂಬಂಧ ಗೊತ್ತಾದ ಮೇಲೆ ನನ್ನ ಮೇಲೆ ಆರೋಪ ಮಾಡಲು ಶುರುವಿಟ್ಟುಕೊಂಡರು” ಎಂಬುದಾಗಿ ಶ್ರೀದೇವಿ ಆರೋಪಿಸಿದ್ದಾರೆ.

ಲೀಗಲ್‌ ನೋಟಿಸ್‌ಗೆ ಶ್ರೀದೇವಿ ರಿಪ್ಲೈ

ಯುವ ಪರ ವಕೀಲರು ಹೇಳಿದ್ದೇನು?

ಯುವ ರಾಜ್‌ಕುಮಾರ್‌ ಪರ ವಕೀಲ ಸಿರಿಲ್‌ ಪ್ರಸಾದ್‌ ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ. “ಮಾನಸಿಕ ಹಾಗೂ ದೈಹಿಕ ದೌರ್ಜನ್ಯದ ಆಧಾರದ ಮೇಲೆ ನಾವು ಅರ್ಜಿ ಹಾಕಿದ್ದೇವೆ. ಒಟ್ಟು 54 ಪೇಜಿನ ಡಿವೋರ್ಸ್ ಪಿಟೀಷನ್ ಹಾಕಿದ್ದೇವೆ. ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಅದರಂತೆ, ಇವರು ನೋಟಿಸ್‌ ಜಾರಿಗೊಳಿಸಲಾಗಿದೆ. ಶ್ರೀದೇವಿ ಭೈರಪ್ಪ ಅವರಿಗೆ ರಾಧಯ್ಯ ಎಂಬ ವ್ಯಕ್ತಿ ಜತೆ ಅಕ್ರಮ ಸಂಬಂಧ ಇದೆ. ಇದರಿಂದಾಗಿ ಕಳೆದ ಎರಡು ವರ್ಷಗಳಿಂದ ಯುವ ಹಾಗೂ ಶ್ರೀದೇವಿ ನಡುವಿನ ಸಂಬಂಧ ಹಳಸಿತ್ತು” ಎಂಬುದಾಗಿ ಅವರು ಹೇಳಿದ್ದಾರೆ.

“ನಾನು ಅಮೆರಿಕದಲ್ಲಿ ಇರುತ್ತೇನೆ, ನೀನು ಬೆಂಗಳೂರಿನಲ್ಲಿಯೇ ಇರು ಎಂಬುದಾಗಿ ಕಿರುಕುಳ ಕೊಟ್ಟಿದ್ದಾರೆ. ಒಂದು ತಿಂಗಳ ಹಿಂದೆ ರಾಧಯ್ಯನಿಗೆ ಮದುವೆ ಆಗಿದೆ. ಆ ಸಮಯದಲ್ಲಿ ಆಕೆ ಬಹಳ ಖಿನ್ನತೆಗೆ ಜಾರಿದ್ದರು. ಇದಕ್ಕೆ ಈಗ ಯುವನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ದೈಹಿಕವಾಗಿ ಸಂಪರ್ಕಿಸಲು ಹೋದಾಗ ಅವಮಾನ ಮಾಡುತ್ತಿದ್ದರು. ಹಲ್ಲುಜ್ಜಿಕೊಂಡು ಬಾ, ಸ್ನಾನ ಮಾಡು ಅಂತ ಹೇಳುತ್ತಿದ್ದರು. ನೀನು ದೈಹಿಕವಾಗಿ ಫಿಟ್‌ ಇಲ್ಲ, ರಾಧಯ್ಯ ಫಿಟ್‌ ಇದ್ದಾನೆ ಎಂದು ಅವಮಾನ ಮಾಡುತ್ತಿದ್ದರು. ರಾಧಯ್ಯನ ಹೆಂಡತಿ ಮನೆಯಲ್ಲಿ ಇದ್ದಿದ್ದಾಗ ಆತನ ಮನೆಗೆ ಹೋಗುತ್ತಾರೆ. ಈ ರೀತಿಯ ಸಂಬಂಧ ಇಟ್ಟುಕೊಂಡಿದ್ದಾರೆ” ಎಂಬುದಾಗಿ ತಿಳಿಸಿದರು.

ಇದನ್ನೂ ಓದಿ: Yuva Rajkumar: ಶ್ರೀದೇವಿ ಭೈರಪ್ಪಗೆ ಅಕ್ರಮ ಸಂಬಂಧ; ಯುವ ರಾಜ್‌ಕುಮಾರ್ ಪರ ವಕೀಲ ಸ್ಫೋಟಕ ಹೇಳಿಕೆ

Exit mobile version