Zameer ACB Raid | ಸೋಮವಾರ ಸಂಜೆಯೇ ಸಿಕ್ಕಿತ್ತು ಸಿಎಂ ಬೊಮ್ಮಾಯಿ ಅನುಮತಿ - Vistara News

ಕರ್ನಾಟಕ

Zameer ACB Raid | ಸೋಮವಾರ ಸಂಜೆಯೇ ಸಿಕ್ಕಿತ್ತು ಸಿಎಂ ಬೊಮ್ಮಾಯಿ ಅನುಮತಿ

ಶಾಸಕ ಜಮೀರ್‌ ಅಹ್ಮದ್‌ ಮನೆ ಮೇಲೆ ದಾಳಿ(Zameer ACB Raid) ನಡೆಸಿರುವ ಎಸಿಬಿ, ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನದ ಒಂದು ಸಂಸ್ಥೆ. ಈ ಇಲಾಖೆಯು ಸಿಎಂ ಬಸವರಾಜ ಬೊಮ್ಮಾಯಿ ಅವರ ಸುಪರ್ದಿಯಲ್ಲಿದೆ.

VISTARANEWS.COM


on

Zameer ahmed home raid
ಎಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿರುವ ಜಮೀರ್‌ ಅಹ್ಮದ್‌ ಅವರ ಗೆಸ್ಟ್‌ಹೌಸ್‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಾಂಗ್ರೆಸ್‌ ಶಾಸದಕ ಬಿ.ಜಡ್‌. ಜಮೀರ್‌ ಅಹ್ಮದ್‌ ಖಾನ್‌ ನಿವಾಸದ ಮೇಲೆ ಭ್ರಷ್ಟಾಚಾರ ನಿಗ್ರ ದಳದ(ಎಸಿಬಿ) ಅಧಿಕಾರಿಗಳು ದಾಳಿ (Zameer ACB Raid) ನಡೆಸಿ ಶಾಕ್‌ ನೀಡಿದ್ದಾರೆ. ಶಾಸಕ ಜಮೀರ್‌ ಅಹ್ಮದ್‌, ಅವರ ಬೆಂಬಲಿಗರು ಹಾಗೂ ರಾಜಕೀಯ ವಲಯಕ್ಕೆ ಇದು ಅಚ್ಚರಿಯಾದರೂ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸೋಮವಾರ ಸಂಜೆಯೇ ಜಮೀರ್‌ ಅಹಮದ್‌ ಮನೆ ಮೇಲಿನ ದಾಳಿ ವಿಚಾರ ತಿಳಿದಿತ್ತು.

ಭ್ರಷ್ಟಾಚಾರ ನಿಗ್ರಹ ದಳವನ್ನು ರಚನೆ ಮಾಡಿದ್ದು 2016ರ ಮಾರ್ಚ್‌ 15ರಂದು ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ. ಅದಾಗಲೆ ಲೋಕಾಯುಕ್ತ ಸಂಸ್ಥೆ ಕರ್ನಾಟಕದಲ್ಲಿ ಅನೇಕ ರಾಜಕಾರಣಿಗಳು ಮತ್ತು ಅಧಿಕಾರಿಗಳಿಗೆ ಬಿಸಿ ಮುಟ್ಟಿಸುತ್ತಿತ್ತು. ಈ ಸಂಸ್ಥೆಯನ್ನು ದುರ್ಬಲಗೊಳಿಸುವ ಸಲುವಾಗಿ ಎಸಿಬಿ ಸ್ಥಾಪನೆ ಮಾಡಲಾಯಿತು ಎಂಬ ಆರೋಪ ಕೇಳಿಬಂದಿತ್ತು. ಏಕೆಂದರೆ ಲೋಕಾಯುಕ್ತ ಸಂಸ್ಥೆಗೆ ಅಲ್ಲಿವರೆಗೆ ಇದ್ದ, ದಾಳಿ ಮತ್ತು ತನಿಖೆ ಅಧಿಕಾರವನ್ನು ಕಿತ್ತು ಎಸಿಬಿಗೆ ನೀಡಲಾಗಿತ್ತು.

ಎಸಿಬಿ ರಚನೆ ಆದೇಶದ 5ನೇ ಅಂಶದ ಪ್ರಕಾರ, ʻಸಾರ್ವಜನಿಕ ನೌಕರನು ತನ್ನ ಅಧಿಕೃತ ಕಾರ್ಯನಿರ್ವಹಣೆಯಲ್ಲಿ ಕೈಗೊಳ್ಳುವ ನಿರ್ಧಾರ ಅಥವಾ ಮಾಡುವ ಶಿಫಾರಸುಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳವು ನೇಮಕಾತಿ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ತನಿಖೆ ಪ್ರಾರಂಭಿಸಲು ಅವಕಾಶ ಇರುವುದಿಲ್ಲʼ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ. ಎಸಿಬಿ ಸಂಸ್ಥೆಯು ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನದಲ್ಲಿ ಬರುತ್ತದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಸಿಎಂ ಬಸವರಾಜ ಬೊಮ್ಮಾಯಿ ಅವರ ವ್ಯಾಪ್ತಿಗೆ ಬರುತ್ತದೆ.

ಸೀಮಂತ್‌ಕುಮಾರ್‌ ಸಿಂಗ್‌ ಭೇಟಿ

ಎಸಿಬಿ ಎಡಿಜಿಪಿ ಸೀಮಂತ್‌ಕುಮಾರ್‌ ಸಿಂಗ್‌ ಸೋಮವಾರ ಸಂಜೆ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಆರ್‌ಟಿ ನಗರ ನಿವಾಸದಲ್ಲಿ ಭೇಟಿ ಮಾಡಿದರು. 545 ಪಿಎಸ್‌ಐ ನೇಮಕ ಕುರಿತು ಸೋಮವಾರ ಮದ್ಯಾಹ್ನವಷ್ಟೆ ಬಂಧನವಾಗಿದ್ದ ಎಡಿಜಿಪಿ ರ‍್ಯಾಂಕ್‌ ಅಧಿಕಾರಿ ಹಾಗೂ ಈ ಹಿಂದೆ ಪೊಲೀಸ್‌ ನೇಮಕಾತಿ ಹೊಣೆ ಹೊತ್ತಿದ್ದ ಅಮೃತ್‌ ಪಾಲ್‌ ಕುರಿತು ಮಾಹಿತಿ ನೀಡಲು ತೆರಳಿದ್ದರು ಎನ್ನಲಾಗಿತ್ತು. ಆದರೆ ಅಸಲಿಗೆ ಸಿಎಂ ನಿವಾಸದಲ್ಲಿ ಸೋಮವಾರ ಸಂಜೆ ಚರ್ಚೆಯಾಗಿದ್ದು ಜಮೀರ್‌ ಅಹಮದ್‌ ಮನೆ ಮೇಲಿನ ದಾಳಿ ವಿಚಾರ ಎನ್ನಲಾಗಿದೆ.

ಜಾರಿ ನಿರ್ದೇಶನಾಲಯದಿಂದ ಬಂದ ಮಾಹಿತಿ ಆಧಾರದಲ್ಲಿ ಜಮೀರ್‌ ಮನೆ ಮೇಲೆ ಎಸಿಬಿ ದಾಳಿ ನಡೆಸುವ ಕುರಿತು ಸಿಎಂ ಬೊಮ್ಮಾಯಿ ಅನುಮತಿಯನ್ನು ನೀಡಿದ್ದರು. ಅದರ ಆಧಾರದಲ್ಲಿ ಎಸಿಬಿ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ಜಮೀರ್‌ ಅಹ್ಮದ್‌ ಖಾನ್‌ ಅವರ ಮನೆ ಮೇಲೆ ದಾಳಿ ನಡೆದಿದೆ ಎನ್ನಲಾಗಿದೆ.

ಇದನ್ನೂ ಓದಿ | ACB raid| ಮೊದಲ ಬಾರಿಗೆ ಹಾಲಿ ಶಾಸಕ ಜಮೀರ್‌ ಮನೆಗೆ ಎಸಿಬಿ ಭರ್ಜರಿ ದಾಳಿ, ಬೆಂಬಲಿಗರ ಪ್ರತಿಭಟನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

NEET UG 2024: ಯುಜಿ ನೀಟ್: ರೋಲ್ ನಂಬರ್ ದಾಖಲಿಸಲು ಸದ್ಯದಲ್ಲೇ ಅವಕಾಶ

NEET UG 2024: ನೀಟ್ ಅಭ್ಯರ್ಥಿಗಳು ದಾಖಲಿಸುವ ರೋಲ್ ನಂಬರ್ ಆಧಾರದ ಮೇಲೆ ಅಭ್ಯರ್ಥಿಯ ಹೆಸರು, ರ‍್ಯಾಂಕ್, ಅಂಕ, ಅರ್ಹತೆಗಳ ಮಾಹಿತಿ ಪಡೆಯಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

VISTARANEWS.COM


on

UG Neet 2024
Koo

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್‌ಗಳಿಗೆ ಪ್ರವೇಶ ಬಯಸಿ ಈಗಾಗಲೇ 2024ರ ಯುಜಿ ಸಿಇಟಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡು, ಆನ್ ಲೈನ್ ಅರ್ಜಿ ಸಲ್ಲಿಸಿರುವವರು ಈಗ ಯುಜಿ-ನೀಟ್‌ನಲ್ಲಿ (NEET UG 2024) ಅರ್ಹತೆ ಪಡೆದಿದ್ದಲ್ಲಿ, ಅಂಥವರು ತಮ್ಮ ರೋಲ್ ನಂಬರ್ ದಾಖಲಿಸಲು ಸದ್ಯದಲ್ಲೇ ಜಾಲತಾಣದಲ್ಲಿ ಪೋರ್ಟಲ್ ತೆರೆಯಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಶುಕ್ರವಾರ ತಿಳಿಸಿದೆ.

ಈ ಬಗ್ಗೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಮಾಹಿತಿ ನೀಡಿದ್ದು, ಅಭ್ಯರ್ಥಿಗಳು ದಾಖಲಿಸುವ ರೋಲ್ ನಂಬರ್ ಆಧಾರದ ಮೇಲೆ ಅಭ್ಯರ್ಥಿಯ ಹೆಸರು, ರ‍್ಯಾಂಕ್, ಅಂಕ, ಅರ್ಹತೆಗಳ ಮಾಹಿತಿ ಪಡೆಯಲಾಗುವುದು ಎಂದು ತಿಳಿಸಿದ್ದಾರೆ.

ಈಗ ಯುಜಿ ನೀಟ್‌ನಲ್ಲಿ ಅರ್ಹತೆ ಪಡೆದುಕೊಂಡಿದ್ದು, ಈವರೆಗೂ ಯುಜಿ-ಸಿಇಟಿಗೆ ನೋಂದಣಿ ಮಾಡಿಕೊಳ್ಳದೆ ಇರುವವರಿಗೂ ಆನ್‌ಲೈನ್ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಗೆ ಅವಕಾಶ ನೀಡಲಾಗುವುದು. ಅಭ್ಯರ್ಥಿಗಳು ದಾಖಲಿಸುವ ವಿವರಗಳನ್ನು ವೆಬ್-ಸರ್ವೀಸ್ ಮೂಲಕ ಆನ್‌ಲೈನ್ ಮೂಲಕವೇ ಪರಿಶೀಲಿಸಲಾಗುವುದು. ಹೀಗಾಗಿ ಭೌತಿಕ ಪರಿಶೀಲನೆ ಇರುವುದಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | Job News: ಗುಡ್‌ನ್ಯೂಸ್‌; 35 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರದಿಂದ ಅನುಮತಿ

ರಾಜ್ಯದಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್‌ಗಳ ಪ್ರವೇಶಕ್ಕೆ ಪ್ರಾಧಿಕಾರದಲ್ಲಿ ನೋಂದಣಿ ಮಾಡಿ, ಅರ್ಜಿ ಸಲ್ಲಿಸಿ, ಆನ್‌ಲೈನ್ ಕೌನ್ಸೆಲಿಂಗ್‌ನಲ್ಲಿ ಭಾಗವಹಿಸುವುದು ಕಡ್ಡಾಯವಾಗಿದೆ. ನಮೂದಿಸುವ ಆಪ್ಶನ್ಸ್ (Options)ಪರಿಗಣಿಸಿ, ಮೆರಿಟ್ ಆಧಾರದ ಮೇಲೆ ಸೀಟು ಹಂಚಿಕೆ ಮಾಡಲಾಗುವುದು. ಎಂಜಿನಿಯರಿಂಗ್ ಸೇರಿದಂತೆ ಹಲವು ವೃತ್ತಿಪರ ಕೋರ್ಸುಗಳಿಗೆ ಏಕಕಾಲದಲ್ಲೇ ಆಪ್ಶನ್ಸ್ ದಾಖಲಿಸಲು ಅವಕಾಶ ನೀಡಲಾಗುವುದು ಮತ್ತು ಜತೆಯಲ್ಲೇ ಕೌನ್ಸೆಲಿಂಗ್ ನಡೆಸಲಾಗುವುದು ಎಂದು ವಿವರಿಸಿದರು.

ಸಂಬಂಧ ವಿವಿಧ ಇಲಾಖೆಗಳು ಸೀಟ್ ಮ್ಯಾಟ್ರಿಕ್ಸ್ ಮತ್ತು ಶುಲ್ಕದ ವಿವರಗಳನ್ನು ಕೆಇಎಗೆ ನೀಡಿದ ಬಳಿಕ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ | Job Alert: ರೈಲ್ವೆ ಇಲಾಖೆಯಲ್ಲಿನ 1,202 ಹುದ್ದೆಗಳಿಗೆ ಐಟಿಐ ಪಾಸಾದವರು ಆನ್‌ಲೈನ್‌ ಮೂಲಕ ಇಂದೇ ಅರ್ಜಿ ಸಲ್ಲಿಸಿ

ನಿಗಮ-ಮಂಡಳಿ ನೇಮಕಾತಿ; 684 ಹುದ್ದೆವಾರು ಪರಿಷ್ಕೃತ ಅಂಕಪಟ್ಟಿ ಪ್ರಕಟ

Job News

ಬೆಂಗಳೂರು: ಕಿಯೋನಿಕ್ಸ್, ಎಂಎಸ್ಐಎಲ್ ಸೇರಿ ಐದು ನಿಗಮ-ಮಂಡಳಿಗಳ ವಿವಿಧ ವೃಂದದ 684 ಹುದ್ದೆಗಳ (Job News) ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ 6,18,148 ಅಭ್ಯರ್ಥಿಗಳು ಪಡೆದ ಅಂಕಗಳ ಹುದ್ದೆವಾರು ಪರಿಷ್ಕೃತ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಶುಕ್ರವಾರ ಬಿಡುಗಡೆ ಮಾಡಿದೆ.

ಏ.22ರಂದು ಪ್ರಕಟಿಸಿದ್ದ ತಾತ್ಕಾಲಿಕ ಅಂಕ ಪಟ್ಟಿಗೆ ಬಂದ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಈ ಪರಿಷ್ಕೃತ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ | Unemployment Rate : ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಒಂದೇ ವರ್ಷದಲ್ಲಿ ಶೇಕಡಾ 4 ಇಳಿಕೆ; ವರದಿ

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ (386), ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (186), ಎಂಎಸ್ಐಎಲ್ (72), ಕಿಯೋನಿಕ್ಸ್ (26), ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ (14) ವಿವಿಧ ವೃಂದದ ಒಟ್ಟು 684 ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗಿತ್ತು. ಈ ಪರಿಷ್ಕೃತ ಅಂಕ ಪಟ್ಟಿಗೆ ಆಕ್ಷೇಪಣೆಗಳು ಇದ್ದಲ್ಲಿ ಇದೇ ಜೂನ್ 14ರೊಳಗೆ ಇ-ಮೇಲ್ (kea2023exam@gmail.com) ಮೂಲಕ ಸಲ್ಲಿಸಬೇಕು ಎಂದು ಮಾಹಿತಿ ನೀಡಿದ್ದಾರೆ.

Continue Reading

ಕರ್ನಾಟಕ

Job News: ನಿಗಮ-ಮಂಡಳಿ ನೇಮಕಾತಿ; 684 ಹುದ್ದೆವಾರು ಪರಿಷ್ಕೃತ ಅಂಕಪಟ್ಟಿ ಪ್ರಕಟ

Job News: ಕಿಯೋನಿಕ್ಸ್, ಎಂಎಸ್ಐಎಲ್ ಸೇರಿ ಐದು ನಿಗಮ-ಮಂಡಳಿಗಳ ವಿವಿಧ ವೃಂದದ 684 ಹುದ್ದೆಗಳ (Job News) ನೇಮಕಾತಿಯ ಪರಿಷ್ಕೃತ ತಾತ್ಕಾಲಿಕ ಪಟ್ಟಿಯನ್ನು ಕೆಇಎ ಪ್ರಕಟಿಸಿದೆ.

VISTARANEWS.COM


on

Job News
Koo

ಬೆಂಗಳೂರು: ಕಿಯೋನಿಕ್ಸ್, ಎಂಎಸ್ಐಎಲ್ ಸೇರಿ ಐದು ನಿಗಮ-ಮಂಡಳಿಗಳ ವಿವಿಧ ವೃಂದದ 684 ಹುದ್ದೆಗಳ (Job News) ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ 6,18,148 ಅಭ್ಯರ್ಥಿಗಳು ಪಡೆದ ಅಂಕಗಳ ಹುದ್ದೆವಾರು ಪರಿಷ್ಕೃತ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಶುಕ್ರವಾರ ಬಿಡುಗಡೆ ಮಾಡಿದೆ.

ಏ.22ರಂದು ಪ್ರಕಟಿಸಿದ್ದ ತಾತ್ಕಾಲಿಕ ಅಂಕ ಪಟ್ಟಿಗೆ ಬಂದ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಈ ಪರಿಷ್ಕೃತ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ (386), ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (186), ಎಂಎಸ್ಐಎಲ್ (72), ಕಿಯೋನಿಕ್ಸ್ (26), ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ (14) ವಿವಿಧ ವೃಂದದ ಒಟ್ಟು 684 ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗಿತ್ತು. ಈ ಪರಿಷ್ಕೃತ ಅಂಕ ಪಟ್ಟಿಗೆ ಆಕ್ಷೇಪಣೆಗಳು ಇದ್ದಲ್ಲಿ ಇದೇ ಜೂನ್ 14ರೊಳಗೆ ಇ-ಮೇಲ್ (kea2023exam@gmail.com) ಮೂಲಕ ಸಲ್ಲಿಸಬೇಕು ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | Unemployment Rate : ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಒಂದೇ ವರ್ಷದಲ್ಲಿ ಶೇಕಡಾ 4 ಇಳಿಕೆ; ವರದಿ

ರೈಲ್ವೆ ಇಲಾಖೆಯಲ್ಲಿನ 1,202 ಹುದ್ದೆಗಳಿಗೆ ಐಟಿಐ ಪಾಸಾದವರು ಆನ್‌ಲೈನ್‌ ಮೂಲಕ ಇಂದೇ ಅರ್ಜಿ ಸಲ್ಲಿಸಿ

ನವದೆಹಲಿ: ಒಂದೊಳ್ಳೆ ಉದ್ಯೋಗ ಹೊಂದಬೇಕು ಎನ್ನುವುದು ಬಹುತೇಕರ ಕನಸು. ಅದರಲ್ಲಿಯೂ ಹೆಚ್ಚಿನ ಯುವ ಜನತೆ ಸರ್ಕಾರಿ ಕೆಲಸ ಪಡೆಯಬೇಕು ಎನ್ನುವ ಆಕಾಂಕ್ಷೆ ಹೊತ್ತಿರುತ್ತಾರೆ. ಅಂತಹವರಿಗೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ರೈಲ್ವೆ ಇಲಾಖೆ ಖಾಲಿ ಇರುವ ವಿವಿಧ 1,202 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಗ್ನೇಯ ರೈಲ್ವೆಯ ನೇಮಕಾತಿ ಕೋಶ (South Eastern Railway Recruitment Cell) ಖಾಲಿ ಇರುವ ಲೋಕೋ ಪೈಲಟ್‌ ಮತ್ತು ಟ್ರೈನ್ಸ್‌ ಮ್ಯಾನೇಜರ್‌ ಹುದ್ದೆಗಳಿಗೆ ಎಸ್ಸೆಸ್ಸೆಲ್ಸಿ, ಐಟಿಐ, ಪದವಿ ತೇರ್ಗಡೆಯಾದವರನ್ನು ನೇಮಿಸಿಕೊಳ್ಳುತ್ತಿದೆ (RRC SER Recruitment 2024). ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜೂನ್‌ 12 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಅಸಿಸ್ಟಂಟ್‌ ಲೋಕೋ ಪೈಲಟ್‌ – 827 ಮತ್ತು ಟ್ರೈನ್ಸ್‌ ಮ್ಯಾನೇಜರ್‌ (ಗೂಡ್ಸ್‌ ಗಾರ್ಡ್‌) – 375 ಹುದ್ದೆಗಳಿವೆ. ಅಸಿಸ್ಟಂಟ್‌ ಲೋಕೋ ಪೈಲಟ್‌ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಜತೆಗೆ ಐಟಿಐ ಪಾಸ್‌ ಮಾಡಿರಬೇಕು ಅಥವಾ ಅಂಗೀಕೃತ ಸಂಸ್ಥೆಯಿಂದ ಎಂಜಿನಿಯರಿಂಗ್‌ನಲ್ಲಿ 3 ವರ್ಷದ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು. ಇನ್ನು ಟ್ರೈನ್ಸ್‌ ಮ್ಯಾನೇಜರ್‌ (ಗೂಡ್ಸ್‌ ಗಾರ್ಡ್‌) ಹುದ್ದೆಗೆ ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು ಎಂದು ಪ್ರಕಟಣೆ ತಿಳಿಸಿದೆ.

ವಯೋಮಿತಿ ಮತ್ತು ಅರ್ಜಿ ಶುಲ್ಕ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 42 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ವಿಭಾಗದ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ. ಯಾರಿಗೂ ಅರ್ಜಿ ಶುಲ್ಕವಿಲ್ಲ.

ಆಯ್ಕೆ ವಿಧಾನ

ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 5,200 ರೂ. – 20,200 ರೂ. ಮಾಸಿಕ ವೇತನ ದೊರೆಯಲಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ನೀವು ಅರ್ಜಿ ಸಲ್ಲಿಸಬೇಕಾದ ಹುದ್ದೆಯನ್ನು ಆಯ್ಕೆ ಮಾಡಿ ಅದರ ಮೇಲೆ ಕ್ಲಿಕ್‌ ಮಾಡಿ (South Eastern Railway Trains Manager (Goods Guard) ಅಥವಾ South Eastern Railway Assistant Loco Pilot (ALP))
  • ಪುಟದ ಕೆಳಗಡೆ ಕಾಣಿಸುವ Apply Now ಬಟನ್‌ ಆಯ್ಕೆ ಮಾಡಿ.
  • ನಿಮ್ಮ ಇಮೇಲ್‌ ಐಡಿ, ಫೋನ್‌ ನಂಬರ್‌ ಬಳಸಿ ಹೆಸರು ನೋಂದಾಯಿಸಿ.
  • ರಿಜಿಸ್ಟರ್‌ ನಂಬರ್‌, ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ. ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Sumbit ಬಟನ್‌ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಭಾರತೀಯ ವಾಯುಪಡೆಯಲ್ಲಿದೆ ಉದ್ಯೋಗಾವಕಾಶ; ದ್ವಿತೀಯ ಪಿಯು ಪಾಸಾದವರೂ ಅರ್ಜಿ ಸಲ್ಲಿಸಿ

Continue Reading

ಮೈಸೂರು

Mysore News: ಗುರುಗಳ ಅನುಗ್ರಹವಿದ್ದರೆ ಜೀವನದಲ್ಲಿ ಎಲ್ಲ ಸಾಧನೆಗಳು ಸುಲಭ; ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ

Mysore News: ಮೈಸೂರಿನ ಜೆಪಿ ನಗರದ ವಿಠಲಧಾಮದ ಭವ್ಯ ವೇದಿಕೆಯಲ್ಲಿ ಶ್ರೀ ಸೋಸಲೆ ವ್ಯಾಸರಾಜ ಮಠ ಆಯೋಜನೆ ಮಾಡಿರುವ ಶ್ರೀಮನ್ ನ್ಯಾಯ ಸುಧಾ ಮಂಗಳ ಮಹೋತ್ಸವದ ಶುಕ್ರವಾರದ ವಿದ್ವತ್ ಸಭೆಯಲ್ಲಿ ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಉತ್ತರಾದಿ ಮಠದ ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು.

VISTARANEWS.COM


on

All achievements in life are easy if there is Guru's grace says Sri Satyatmatirtha Swamiji
Koo

ಮೈಸೂರು: ಗುರುಗಳ ಅನುಗ್ರಹವಿದ್ದರೆ ಜೀವನದಲ್ಲಿ ಎಲ್ಲ ಸಾಧನೆಗಳು ಸುಲಭ ಎಂದು ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಉತ್ತರಾದಿ ಮಠದ ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ (Mysore News) ತಿಳಿಸಿದರು.

ಜೆಪಿ ನಗರದ ವಿಠಲಧಾಮದ ಭವ್ಯ ವೇದಿಕೆಯಲ್ಲಿ ಶ್ರೀ ಸೋಸಲೆ ವ್ಯಾಸರಾಜ ಮಠ ಆಯೋಜನೆ ಮಾಡಿರುವ ಶ್ರೀಮನ್ ನ್ಯಾಯ ಸುಧಾ ಮಂಗಳ ಮಹೋತ್ಸವದ ಶುಕ್ರವಾರದ ವಿದ್ವತ್ ಸಭೆಯಲ್ಲಿ ಶ್ರೀಗಳು ಆಶೀರ್ವಚನ ನೀಡಿದರು.

ವಿದ್ಯಾರ್ಥಿಗಳು ಶ್ರಮ ವಹಿಸಿ ಅಧ್ಯಯನ ಮಾಡಿರುವುದು ಒಂದೆಡೆಯಾದರೆ ಅವರಲ್ಲಿ ಧೈರ್ಯ, ಸದಾಚಾರ, ಸಂಸ್ಕಾರ, ನೈತಿಕತೆ ಮತ್ತು ಜೀವನ ಕ್ರಮದ ಮಾರ್ಗವನ್ನು ಕಲಿಯುವುದು ಗುರುವಿನ ಅನುಸರಣೆಯಿಂದ ಮಾತ್ರ. ಈ ನಿಟ್ಟಿನಲ್ಲಿ ಇಂದು ಸುಧಾಮಂಗಳ ಮಾಡುತ್ತಿರುವ ವಿದ್ಯಾರ್ಥಿಗಳಾದ ಸೌಮಿತ್ರಿ, ಸುಘೋಷ, ಪ್ರಣವ ಮತ್ತು ಹೊನ್ನಾಳಿ ಆಯಾಚಿತ ಶ್ರೀಶ ಆಚಾರ್ಯರು ಪಂಡಿತರು ಮತ್ತು ವಿದ್ವಾಂಸರು ಮೆಚ್ಚುವಂತಹ ಮುಕ್ತ ಪರೀಕ್ಷೆ ನೀಡಿದ್ದಾರೆ. ಅವರಿಗೆ ಉನ್ನತೋನ್ನತ ಪ್ರಗತಿ ಆಗಲಿ ಎಂದು ಸತ್ಯಾತ್ಮ ಶ್ರೀಗಳು ಆಶೀರ್ವಾದ ಪೂರ್ವಕವಾಗಿ ಹೇಳಿದರು.

ಇದನ್ನೂ ಓದಿ: World Food Safety Day: ಆಹಾರ ಸುರಕ್ಷತೆಗಾಗಿ ನಾವು ಏನು ಮಾಡಬಹುದು?

ಮುಳಬಾಗಿಲು ಶ್ರೀಪಾದರಾಜರ ಮಠದ ಶ್ರೀ ಸುಜಯನಿಧಿ ತೀರ್ಥರು ಮಾತನಾಡಿ, ಶ್ರೀ ವಿದ್ಯಾಶ್ರೀಶ ತೀರ್ಥರು ಶ್ರೀ ವ್ಯಾಸ ತೀರ್ಥ ವಿದ್ಯಾಪೀಠದ ಮೂಲಕ ಯುವ-ನವ ವಿದ್ವಾಂಸರನ್ನು ತರಬೇತುಗೊಳಿಸಿ ಸಮಾಜಕ್ಕೆ ಮಹತ್ವದ ಕೊಡುಗೆಯನ್ನಾಗಿ ನೀಡುತ್ತಿದ್ದಾರೆ. ಅವರ ಸೇವೆ ಮಹತ್ತರವಾಗಿದೆ. ವಿದ್ಯಾರ್ಥಿಗಳು ಪಂಡಿತರಾಗಿ ಭಾರತೀಯ ಸನಾತನ ಪರಂಪರೆಯ ಪ್ರತೀಕವೂ ಆಗಿ ದೇಶದ ಸಂಸ್ಕೃತಿಯನ್ನು ಮುನ್ನಡೆಸುವಂತಾಗಲಿ ಎಂದು ತಿಳಿಸಿದರು.

ಶ್ರೀ ವ್ಯಾಸ ತೀರ್ಥ ವಿದ್ಯಾಪೀಠದ ಗೌರವ ಕಾರ್ಯದರ್ಶಿ ಡಾ. ಡಿ.ಪಿ. ಮಧುಸೂದನಾಚಾರ್ಯರು ಮಾತನಾಡಿ, ಪೇಜಾವರ ಶ್ರೀ ವಿಶ್ವೇಶ ತೀರ್ಥರು ನಮ್ಮ ವಿದ್ಯಾಪೀಠಕ್ಕೆ ಪ್ರಪ್ರಥಮವಾಗಿ ಸ್ಪೂರ್ತಿ ಮತ್ತು ಚೈತನ್ಯ ನೀಡಿದವರು ಎಂದು ಸ್ಮರಿಸಿದರು.

ಕಳೆದ ಎಂಟು ವರ್ಷಗಳ ಹಿಂದೆ ಶ್ರೀ ವ್ಯಾಸ ತೀರ್ಥ ವಿದ್ಯಾಪೀಠ ತಿರುಮಕೂಡಲು ಕ್ಷೇತ್ರದಲ್ಲಿ ಆರಂಭವಾದಾಗ ಸ್ವತಃ ನನ್ನ ತಾಯಿಯವರೇ ಎಲ್ಲ ಮಕ್ಕಳಿಗೂ ಅಡುಗೆ ಮಾಡಿ ಕೈ ತುತ್ತು ಹಾಕಿ ಬೆಳೆಸಿದರು. ವಿದ್ಯಾರ್ಥಿಗಳ ಸಮಗ್ರ ಕ್ಷೇಮ ಪಾಲನೆಯಲ್ಲಿ ಪ್ರತಿನಿತ್ಯವೂ ನೂರಾರು ಸಮಸ್ಯೆ ಎದುರಾದರು ಅವೆಲ್ಲವೂ ಗುರುಗಳ ಪರಮ ಅನುಗ್ರಹದಿಂದ ನಿವಾರಣೆಯಾಗಿ ಇಂದು ನಾಲ್ವರು ಪಂಡಿತರಾಗುವ ಮಟ್ಟದವರೆಗೆ ಸಂಸ್ಥೆ ಬೆಳೆದಿದೆ. ಇವುಗಳ ಹಿಂದೆ ಸೋಸಲ ಶ್ರೀ ವಿದ್ಯಾಶ್ರೀಶ ತೀರ್ಥರ ಪರಿಶ್ರಮ ಅಗಾಧವಾಗಿದೆ ಎಂದರು.

ವಿದ್ಯಾಪೀಠದ ವ್ಯವಸ್ಥಾಪಕ ಟ್ರಸ್ಟಿ ಶೇಷಗಿರಿ ಆಚಾರ್ಯ ಮಾತನಾಡಿ, ಸುಧಾ ಪರೀಕ್ಷೆ ಎಂಬುದು ವಿದ್ಯಾರ್ಥಿಗಳಿಗೆ ಮಾತ್ರ ಅಲ್ಲ, ವಿದ್ವಾಂಸರೂ ತಮ್ಮನ್ನು ತಾವು ಸರಿಪಡಿಸಿಕೊಳ್ಳಲು, ಜ್ಞಾನದ ಶಾಖೆಯನ್ನು ಉನ್ನತೀಕರಿಸಿಕೊಳ್ಳಲು ಮಹೋನ್ನತವಾದ ವೇದಿಕೆಯಾಗಿದೆ ಎಂದರು.

ಇದನ್ನೂ ಒದಿ: Cyber Crime: ವಾಟ್ಸ್ಆ್ಯಪ್‌ ಗ್ರೂಪ್‌ ಮೆಸೇಜ್‌ ಓಪನ್‌ ಮಾಡಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಾಪಾರಿ

ಸುಧಾ ಪರೀಕ್ಷೆ ಎದುರಿಸಿ, ವಿದ್ವಾಂಸರ ಪ್ರಶಂಸೆಗೆ ಭಾಜನರಾದ ಆಯಾಚಿತ ಶ್ರೀ ಶ ಮತ್ತು ಸುಘೋಷ ಅವರು ತಮ್ಮ ಅನುಭವಗಳನ್ನು ಹಂಚಿಕೊಂಡರು.

ಆಯಾಚಿತ ಶ್ರೀ ಶ ಮಾತನಾಡಿ, ಬಡತನದ ಬೇಗೆಯಲ್ಲಿ ನಾನು ಇದ್ದರೂ ಬಾಲ್ಯದಲ್ಲಿಯೇ ತಾಯಿಯನ್ನು ಕಳೆದುಕೊಂಡರೂ ಸೋಸಲೆ ಶ್ರೀಗಳು ನನ್ನನ್ನು ಕೈಹಿಡಿದು ಅನ್ನ, ಆಹಾರವನ್ನು ನೀಡಿ ವಿದ್ಯಾದಾನ ಮಾಡಿದರು. ಕಳೆದ ವರ್ಷ ನನ್ನ ಸಹೋದರಿಯ ವಿವಾಹ ಸಂದರ್ಭದಲ್ಲಿಯೂ ನಮ್ಮ ಬಡತನವನ್ನು ಕಂಡು ಸಂಪೂರ್ಣ ವಿವಾಹದ ಜವಾಬ್ದಾರಿಯನ್ನು ಮಠದಿಂದಲೇ ನಿರ್ವಹಿಸಿದ್ದನ್ನು ಜೀವನದಲ್ಲಿ ಮರೆಯಲಾಗದು ಎಂದು ತಿಳಿಸಿದರು.

ಪ್ರಣವ ಆಚಾರ್ಯ ಮಾತನಾಡಿ, ನಮ್ಮ ಪರೀಕ್ಷೆ ಮತ್ತು ಯಶಸ್ವಿಗಾಗಿ ಹಗಲು ಇರುಳು ಶ್ರಮಿಸಿದ ಉಪನ್ಯಾಸಕರು ಮತ್ತು ಪಂಡಿತರನ್ನು ಸ್ಮರಿಸಿಕೊಂಡರು. ಹಿರಿಯರ ಅನುಗ್ರಹದಿಂದಲೇ ನಮ್ಮ ಉನ್ನತಿ ಸಾಧ್ಯವಾಗಿದೆ ಎಂದು ಧನ್ಯತೆ ಸಮರ್ಪಿಸಿದರು.

ಹಿರಿಯ ವಿದ್ವಾಂಸ ಎ.ವಿ. ನಾಗಸಂಪಿಗೆ ಮಾತನಾಡಿದರು. ಇದೇ ಸಂದರ್ಭದಲ್ಲಿ ಶ್ರೀ ಮಠ ಆಯೋಜಿಸಿದ್ದ ವಿಶೇಷ ಪ್ರದರ್ಶಿನಿ ಗಮನ ಸೆಳೆಯಿತು. ರಾಮಾಯಣ, ಮಹಾಭಾರತ ಶ್ರೀಮನ್ ನ್ಯಾಯ ಸುಧಾ, ವ್ಯಾಸತ್ರಗಳು, ವೇದಗಳು ಮತ್ತು ಉಪನಿಷತ್ತಿನ ವರ್ಣ ಚಿತ್ರಗಳು ವೀಕ್ಷಕರ ಗಮನಸೆಳೆದವು. ಸಂಜೆ ವಿವಿಧ ಭಜನಾ ಮಂಡಳಿಗಳು ನಾದಸ್ವರ ವೇದಘೋಷದೊಂದಿಗೆ ಶೋಭಾ ಯಾತ್ರೆ ಸಂಪನ್ನಗೊಂಡಿತು.

ಶ್ರೀ ವ್ಯಾಸರಾಜರಿಗೆ ಸಾಂಪ್ರದಾಯಿಕವಾಗಿ ದರ್ಬಾರ್ ಸಮರ್ಪಿಸಲಾಯಿತು. ವಿವಿಧ ಪೀಠಾಧೀಶರು ವ್ಯಾಸರಾಜರಿಗೆ ರತ್ನದ ಅಭಿಷೇಕ ಸಮರ್ಪಣೆ ಮಾಡಿದರು.

ಇದನ್ನೂ ಓದಿ: Money Guide: ಪಿಎಫ್‌ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇಲ್ಲಿದೆ ಸಂಪೂರ್ಣ ಮಾಹಿತಿ

ಪ್ರಶಸ್ತಿ ಪ್ರದಾನ

ವಿವಿಧ ರಂಗದಲ್ಲಿ ಅದ್ವಿತೀಯ ಸಾಧನೆ ಮಾಡಿದ ಕೆ.ಎಸ್. ಗುರುರಾಜ, ಎಚ್.ಆರ್. ನಾಗೇಂದ್ರ ಮತ್ತು ಎ.ಆರ್. ರಘುರಾಮ ಅವರಿಗೆ ಶ್ರೀಮಠದ ರಘುನಾಥ ತೀರ್ಥ ಅನುಗ್ರಹ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

Continue Reading

ಶಿವಮೊಗ್ಗ

Shivamogga News: ನೈರುತ್ಯ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗಳ ಭರ್ಜರಿ ಗೆಲುವು; ರಿಪ್ಪನ್‌ಪೇಟೆಯಲ್ಲಿ ಸಂಭ್ರಮಾಚರಣೆ

Shivamogga News: ವಿಧಾನ ಪರಿಷತ್‌ನ ನೈರುತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿಯ ಮೈತ್ರಿ ಅಭ್ಯರ್ಥಿಗಳಾದ ಎಸ್‌.ಎಲ್‌. ಭೋಜೇಗೌಡ, ಡಾ. ಧನಂಜಯ ಸರ್ಜಿ ಅವರು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ರಿಪ್ಪನ್‌ಪೇಟೆ ಪಟ್ಟಣದ ವಿನಾಯಕ ವೃತ್ತದಲ್ಲಿ ಶುಕ್ರವಾರ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು.

VISTARANEWS.COM


on

Alliance Candidates Win in MLC South West Constituency Celebration at Ripponpet
Koo

ರಿಪ್ಪನ್‌ಪೇಟೆ: ವಿಧಾನ ಪರಿಷತ್‌ನ ನೈರುತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿಯ ಮೈತ್ರಿ ಅಭ್ಯರ್ಥಿಗಳಾದ ಎಸ್‌. ಎಲ್‌. ಭೋಜೇಗೌಡ, ಡಾ. ಧನಂಜಯ ಸರ್ಜಿ ಅವರು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಟ್ಟಣದ ವಿನಾಯಕ ವೃತ್ತದಲ್ಲಿ ಶುಕ್ರವಾರ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ (Shivamogga News) ನಡೆಸಿದರು.

ಇದನ್ನೂ ಓದಿ: Pesticides in Spices: MDH, Everest ಬೆನ್ನಲ್ಲೇ ರಾಜ್ಯದ ಮಸಾಲೆ ಪದಾರ್ಥಗಳಿಗೂ ತಟ್ಟಿದ ಬ್ಯಾನ್‌ ಬಿಸಿ

ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಎಸ್‌.ಎಲ್‌.ಭೋಜೇಗೌಡ ಹಾಗೂ ನೈರುತ್ಯ ಪದವೀಧರರ ಕ್ಷೇತ್ರದಿಂದ ಡಾ. ಧನಂಜಯ ಸರ್ಜಿ ಅವರು ಭರ್ಜರಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ಎ. ಚಾಬುಸಾಬ್ ಮಾತನಾಡಿದರು.

ಇದನ್ನೂ ಓದಿ: Karnataka Rain : ಮಳೆ ಶುರುವಾದರೆ ಸಾಕು ಗೋಕಾಕ ಜನರಿಗೆ ಗುಡ್ಡದ ಭೂತದ ಕಾಟ!

ಈ ವೇಳೆ ಬಿಜೆಪಿ ಹಾಗೂ ಜೆಡಿಎಸ್‌ ಮುಖಂಡರುಗಳಾದ ಎನ್. ಸತೀಶ್, ಎಂ.ಬಿ.‌ ಮಂಜುನಾಥ್, ಸುರೇಶ್ ಸಿಂಗ್, ಸೋಮಶೇಖರ್ ದೂನ, ಪಿ. ರಮೇಶ್, ರಾಮಚಂದ್ರ, ಸುಧೀರ್ ಪಿ., ಮುರುಳಿ ಕೆರೆಹಳ್ಳಿ, ಈಶ್ವರ್ ಮಳಕೊಪ್ಪ, ಮಹೇಶ್ ಮಾನಿಕೆರೆ, ಮಂಜುಳಾ ಕೇತರ್ಜಿರಾವ್‌, ದೀಪಾ ಸುಧೀರ್‌, ಪದ್ಮಾ ಸುರೇಶ್, ಲೀಲಾಶಂಕರ್‌ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading
Advertisement
Narendra Modi
ದೇಶ25 mins ago

Narendra Modi: ಭಾನುವಾರ ಸಂಜೆ 7.15ಕ್ಕೆ ಮೋದಿ ಪ್ರಮಾಣವಚನ‌; ಹಲವು ಸಂಸದರಿಗೂ ಮಂತ್ರಿ ಭಾಗ್ಯ!

Niveditha Gowda
ಸಿನಿಮಾ31 mins ago

Niveditha Gowda : ಇನ್​ಸ್ಟಾಗ್ರಾಮ್​ನಲ್ಲಿ ಚಂದನ್ ಶೆಟ್ಟಿ ಅನ್​ಫಾಲೋ ಮಾಡಿದ ನಿವೇದಿತ ಗೌಡ

UG Neet 2024
ಕರ್ನಾಟಕ33 mins ago

NEET UG 2024: ಯುಜಿ ನೀಟ್: ರೋಲ್ ನಂಬರ್ ದಾಖಲಿಸಲು ಸದ್ಯದಲ್ಲೇ ಅವಕಾಶ

Niveditha Gowda
ಪ್ರಮುಖ ಸುದ್ದಿ1 hour ago

Niveditha Gowda : ಡಿವೋರ್ಸ್​ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡ ನಿವೇದಿತಾ ಗೌಡ, ಅವರ ಇನ್​ಸ್ಟಾಗ್ರಾಮ್ ಸಂದೇಶ ಇಲ್ಲಿದೆ

Hamare Baarah
ಸಿನಿಮಾ1 hour ago

Hamare Baarah: ಮುಸ್ಲಿಂ ಮಹಿಳೆಯರ ಕುರಿತ ಹಮಾರೆ ಬಾರಾ ಸಿನಿಮಾ ರಿಲೀಸ್‌ಗೆ ಕೋರ್ಟ್‌ ಗ್ರೀನ್‌ ಸಿಗ್ನಲ್!

Job News
ಕರ್ನಾಟಕ1 hour ago

Job News: ನಿಗಮ-ಮಂಡಳಿ ನೇಮಕಾತಿ; 684 ಹುದ್ದೆವಾರು ಪರಿಷ್ಕೃತ ಅಂಕಪಟ್ಟಿ ಪ್ರಕಟ

T20 World Cup
ಪ್ರಮುಖ ಸುದ್ದಿ2 hours ago

T20 World Cup : ಭಾರತ ತಂಡಕ್ಕೆ ಎಚ್ಚರಿಕೆ ನೀಡಿದ ಅಮೆರಿಕ ತಂಡ

All achievements in life are easy if there is Guru's grace says Sri Satyatmatirtha Swamiji
ಮೈಸೂರು2 hours ago

Mysore News: ಗುರುಗಳ ಅನುಗ್ರಹವಿದ್ದರೆ ಜೀವನದಲ್ಲಿ ಎಲ್ಲ ಸಾಧನೆಗಳು ಸುಲಭ; ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ

Akasa Air
ದೇಶ2 hours ago

Akasa Air: ಗೋರಖ್​ಪುರದಿಂದ ದೆಹಲಿ ಮತ್ತು ಬೆಂಗಳೂರಿಗೆ ಆಕಾಶ ಏರ್ ನೇರ ವಿಮಾನ

Alliance Candidates Win in MLC South West Constituency Celebration at Ripponpet
ಶಿವಮೊಗ್ಗ2 hours ago

Shivamogga News: ನೈರುತ್ಯ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗಳ ಭರ್ಜರಿ ಗೆಲುವು; ರಿಪ್ಪನ್‌ಪೇಟೆಯಲ್ಲಿ ಸಂಭ್ರಮಾಚರಣೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 hours ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 hours ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ4 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ4 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ4 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು6 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌