Zika Virus | ರಾಯಚೂರಿನಲ್ಲಿ ಝಿಕಾ ವೈರಸ್‌ ಸೋಂಕು ತಡೆಗೆ ಮುನ್ನೆಚ್ಚರಿಕಾ ಕ್ರಮ: ಸಚಿವ ಶಂಕರ್ ಬಿ.ಪಾಟೀಲ್ ಮುನೇನಕೊಪ್ಪ - Vistara News

ಕರ್ನಾಟಕ

Zika Virus | ರಾಯಚೂರಿನಲ್ಲಿ ಝಿಕಾ ವೈರಸ್‌ ಸೋಂಕು ತಡೆಗೆ ಮುನ್ನೆಚ್ಚರಿಕಾ ಕ್ರಮ: ಸಚಿವ ಶಂಕರ್ ಬಿ.ಪಾಟೀಲ್ ಮುನೇನಕೊಪ್ಪ

ರಾಜ್ಯದಲ್ಲೇ ಮೊದಲ ಝಿಕಾ ವೈರಸ್ ಪ್ರಕರಣ ರಾಯಚೂರು ಜಿಲ್ಲೆಯಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಚಿವ ಶಂಕರ್ ಬಿ ಪಾಟೀಲ್ ಮುನೇನಕೊಪ್ಪ ಸಭೆ ನಡೆಸಿದ್ದಾರೆ.

VISTARANEWS.COM


on

Zika Virus
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಯಚೂರು: ಜಿಲ್ಲೆಯಲ್ಲಿ ಹೆರಿಗೆ ಆಗಬೇಕಿರುವ 151 ಗರ್ಭಿಣಿಯರು ಇದ್ದಾರೆ. ಈಗಾಗಲೇ 21 ಗರ್ಭಿಣಿಯರ ರಕ್ತದ ಮಾದರಿಯನ್ನು ಸಂಗ್ರಹ ಮಾಡಲಾಗಿದೆ. ಜತೆಗೆ 57 ಗರ್ಭಿಣಿಯರ ಮೇಲೆ ನಿಗಾ ಇಡಲಾಗಿದೆ. ಝಿಕಾ ವೈರಸ್‌ (Zika Virus) ಸೋಂಕು ತಡೆಗೆ ಆರೋಗ್ಯ ಇಲಾಖೆ, ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಂಕರ್ ಬಿ. ಪಾಟೀಲ್ ಮುನೇನಕೊಪ್ಪ ತಿಳಿಸಿದ್ದಾರೆ.

ರಾಜ್ಯದಲ್ಲೇ ಮೊದಲ ಝಿಕಾ ವೈರಸ್ ಪ್ರಕರಣ ಜಿಲ್ಲೆಯಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ನಗರದಲ್ಲಿ ಜಿಲ್ಲಾಧಿಕಾರಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಗುರುವಾರ ಸಭೆ ನಡೆಸಿದ ಬಳಿಕ ಮಾತನಾಡಿದರು.

ಝಿಕಾ ವೈರಸ್‌ ಸೋಂಕು ತಡೆಗೆ ಆಸ್ಪತ್ರೆಗಳಲ್ಲಿ ಮುಂಜಾಗ್ರತೆ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ತೊಟ್ಟಿಗಳಲ್ಲಿ ಹೆಚ್ಚು ದಿನಗಳ ಕಾಲ ನೀರು ಸಂಗ್ರಹಣೆ ಮಾಡದೆ ಆಗಿಂದಾಗ ಸ್ವಚ್ಛಗೊಳಿಸಲು ಸೂಚನೆ ಕೊಡಲಾಗಿದೆ. ಮುಂಜಾಗ್ರತೆ ಕೈಗೊಳ್ಳಲು ನಿರ್ಲಕ್ಷ್ಯ ವಹಿಸಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಸೋಂಕು ತಡೆಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗೆ ಎಲ್ಲ ರೀತಿಯ ಅಧಿಕಾರ ನೀಡಿದ್ದೇವೆ ಎಂದರು.

ಈ ಬಗ್ಗೆ ನಿರಂತರವಾಗಿ ಅಧಿಕಾರಿಗಳೊಂದಿಗೆ ಸಭೆ ಮಾಡಿ, ಸಲಹೆ ಸೂಚನೆ ನೀಡುತ್ತಿದ್ದೇನೆ. ಒಟ್ಟಿನಲ್ಲಿ ರೋಗ ಉಲ್ಬಣಗೊಳ್ಳದಂತೆ ಕ್ರಮ ಆಗಬೇಕು ಎಂದು ಹೇಳಿದರು.

ಸಭೆಯಲ್ಲಿ ಸಚಿವರ ಎಡವಟ್ಟು
ಝಿಕಾ ವೈರಸ್‌ ನಿಯಂತ್ರಣ ಸಂಬಂಧಿತ ಸಭೆಯಲ್ಲಿ ಸೋಂಕಿತ ಬಾಲಕಿ ಬಗ್ಗೆ ಮಾಹಿತಿ ನೀಡುವಾಗ ಸಚಿವ ಶಂಕರ್ ಬಿ. ಪಾಟೀಲ್ ಮುನೇನಕೊಪ್ಪ ಅವರು ಎಡವಟ್ಟು ಮಾಡಿಕೊಂಡಿದ್ದಾರೆ. ರಾಜ್ಯದಲ್ಲೇ ಮೊದಲ ಝಿಕಾ ವೈರಸ್ ಪ್ರಕರಣ ಜಿಲ್ಲೆಯಲ್ಲಿ ಕಂಡುಬಂದಿದೆ. ಜಿಲ್ಲೆಯ 5 ವರ್ಷದ ಬಾಲಕಿಗೆ ಇತ್ತೀಚೆಗೆ ಸೋಂಕು ತಗುಲಿತ್ತು. ಆದರೆ ಈ ಬಗ್ಗೆ, ಸಚಿವರು ಉಲ್ಲೇಖಿಸುವಾಗ, ಸೋಂಕಿತ ಬಾಲಕಿ ‌ಮೃತಪಟ್ಟಿದ್ದಾಳೆ. ಮೃತರ ಮನೆಯವರ ರಕ್ತದ ಮಾದರಿಗಳನ್ನು ಪಡೆಯಲಾಗಿದೆ ಎಂದು ಹೇಳಿದರು. ಈ ವೇಳೆ, ಅಧಿಕಾರಿಗಳು ಯಾವುದೇ ಸಾವು ಆಗಿಲ್ಲ ಎಂದಾಗ, ಸಚಿವರು ತಪ್ಪು ತಿದ್ದಿಕೊಂಡು ಪಾಸಿಟಿವ್ ಬಂದಿದೆ ಎಂದು ಹೇಳಿದ್ದು ಕಂಡುಬಂದಿದೆ.

ಇದನ್ನೂ ಓದಿ | ಬಿ.ಎಸ್‌. ಯಡಿಯೂರಪ್ಪ ನಮ್ಮ ಪಿತಾಮಹ: ಹಾಡಿ ಹೊಗಳಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Karnataka Jobs Reservation: ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಶೇ.75 ಮೀಸಲಾತಿ ಮಾತ್ರ; ಆಡಳಿತ ಹುದ್ದೆಗಳಲ್ಲಿ ಶೇ.50; ಉದ್ಯಮಿಗಳಿಗೆ ಬೆಚ್ಚಿತೇ ಸರ್ಕಾರ?

Karnataka Jobs Reservation: ಮುಂಜಾನೆ ಸಿಎಂ ಮಾಡಿದ್ದ ಎಕ್ಸ್‌ ಪೋಸ್ಟ್‌ ಬಗ್ಗೆ ಖಾಸಗಿ ಉದ್ಯಮ ವಲಯದಲ್ಲಿ ಕೋಲಾಹಲವೇ ಎದ್ದಿತ್ತು. ಕಿರಣ್‌ ಮಜುಂದಾರ್‌ ಶಾ, ಮೋಹನದಾಸ ಪೈ ಮುಂತಾದವರು ಈ ವಿಧೇಯಕವನ್ನು ಆಕ್ಷೇಪಿಸಿದ್ದರು. ಇದಾದ ಬಳಿಕ ಪೋಸ್ಟ್‌ ಅಳಿಸಿದ್ದ ಸಿಎಂ, ಇದೀಗ ಹೊಸ ಪೋಸ್ಟ್‌ ಮಾಡಿದ್ದಾರೆ.

VISTARANEWS.COM


on

CM Siddaramaiah karnataka jobs reservation
Koo

ಬೆಂಗಳೂರು: ರಾಜ್ಯದ ಖಾಸಗಿ ಕೈಗಾರಿಕೆಗಳು (Private industry) ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ (Kannadiga employees) ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ (karnataka jobs reservation) ನಿಗದಿಪಡಿಸುವ ವಿಧೇಯಕಕ್ಕೆ (private jobs quota for locals bill) ಸೋಮವಾರ ನಡೆದ ಸಚಿವ ಸಂಪುಟ ಸಭೆಯು (karnataka Cabinet meeting) ಒಪ್ಪಿಗೆ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramiah) ತಿಳಿಸಿದ್ದಾರೆ.

ಈ ಬಗ್ಗೆ ಸೋಶಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಅವರು ಪೋಸ್ಟ್‌ ಮಾಡಿದ್ದಾರೆ. ಇಂದು ಮುಂಜಾನೆ ಹಾಕಿದ್ದ ಪೋಸ್ಟ್‌ ಅನ್ನು ಅಳಿಸಿ ಬೇರೊಂದು ಪೋಸ್ಟ್‌ ಹಾಕಿದ್ದು, ಅದರಲ್ಲಿ ಈ ವಿಚಾರ ತಿಳಿಸಿದ್ದಾರೆ. ಪೋಸ್ಟ್‌ನಲ್ಲಿ ಹೀಗಿದೆ:

“ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ. ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ.”

ಮುಂಜಾನೆ ಅವರು ಮಾಡಿದ್ದ ಪೋಸ್ಟ್‌ನಲ್ಲಿ, “ರಾಜ್ಯದ ಎಲ್ಲಾ ಖಾಸಗಿ ಕೈಗಾರಿಕೆಗಳಲ್ಲಿ ʼಸಿʼ ಮತ್ತು ʼಡಿʼ ದರ್ಜೆಯ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಕನ್ನಡಿಗರ ನೇಮಕಾತಿಯನ್ನು ಕಡ್ಡಾಯಗೊಳಿಸುವ ವಿಧೇಯಕಕ್ಕೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ” ಎಂದು ಬರೆದಿದ್ದರು. ಈ ಬಗ್ಗೆ ಖಾಸಗಿ ಉದ್ಯಮ ವಲಯದಲ್ಲಿ ಕೋಲಾಹಲವೇ ಎದ್ದಿತ್ತು. ಕಿರಣ್‌ ಮಜುಂದಾರ್‌ ಶಾ, ಮೋಹನದಾಸ ಪೈ ಮುಂತಾದವರು ಈ ವಿಧೇಯಕವನ್ನು ಆಕ್ಷೇಪಿಸಿದ್ದರು. ಇದಾದ ಬಳಿಕ ಪೋಸ್ಟ್‌ ಅಳಿಸಿದ್ದ ಸಿಎಂ, ಇದೀಗ ಹೊಸ ಪೋಸ್ಟ್‌ ಮಾಡಿದ್ದಾರೆ.

ಎಚ್ಚರದಿಂದ ಕಾನೂನು ರೂಪಿಸುತ್ತೇವೆ: ಪೊನ್ನಣ್ಣ

“ಖಾಸಗಿ ಕಂಪನಿಗಳು ಹಾಗೂ ಖಾಸಗಿ ವ್ಯಕ್ತಿಗಳ‌ ಮೇಲೆ ಕಾನೂನು ತರಬೇಕಾದರೆ ಸಂವಿಧಾನದ ಆಶಯಗಳಡಿಯ ಹಕ್ಕುಗಳ ಉಲ್ಲಂಘನೆಯಾಗದಂತೆ ಕಾನೂನು ಜಾರಿ ಮಾಡಬೇಕುʼ ಎಂದು ಸಿಎಂ ಕಾನೂನು ಸಲಹೆಗಾರರು ಪೊನ್ನಣ್ಣ ಹೇಳಿದ್ದಾರೆ. ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಚಾರದಲ್ಲಿ ಮಾತನಾಡಿರುವ ಅವರು, ʼಈ ಕಾನೂನುಗಳನ್ನ ನಾನು ಓದಿಲ್ಲ. ಓದಿದ ಮೇಲೆ‌ ಮಾತನಾಡಬಹುದು. ಗಂಭೀರವಾಗಿ ಅಧ್ಯಯನ ಮಾಡಿ ಅದನ್ನು ಜಾರಿಮಾಡುವ ಕೆಲಸವಾಗುತ್ತೆʼ ಎಂದಿದ್ದಾರೆ.

ʼಖಾಸಗಿ ಕಂಪನಿಗಳಿಗೆ ಹಾಗೂ ವ್ಯಕ್ತಿಗಳಿಗೆ ರಾಜ್ಯಾಂಗ, ರಾಜ್ಯದ ಸಂಸ್ಥೆಗಳಿಗಿಂತ ಹೆಚ್ಚಿನ ಮೂಲಭೂತ ಹಕ್ಕುಗಳಿರುತ್ತವೆ. ಸರ್ಕಾರ ಅದರಲ್ಲಿ ಹಸ್ತಕ್ಷೇಪ ಮಾಡುವ ಅವಕಾಶ ಕಡಿಮೆ. ಕನ್ನಡಿಗರಿಗೆ ಮೀಸಲಾತಿ ಕೋಡುವುದರಲ್ಲಿ ಸಂಶಯವಿಲ್ಲ. ಅದರಲ್ಲಿ ಶಾಲೆಗಳು, ಸರ್ಕಾರದ ಅನುದಾನ ಪಡೆಯುವಂತಹ ಸಂಸ್ಥೆಗಳಲ್ಲಿ ಮೀಸಲಾತಿ ಕೊಡಬಹುದು. ಸಂಪೂರ್ಣ ಖಾಸಗಿ ಸಂಸ್ಥೆಗಳಿಗೆ ಮೀಸಲಾತಿ ಕೋಡುವ ವೇಳೆ ಅದನ್ನು ಸಂಪೂರ್ಣ ಪರಿಶೀಲನೆ ಮಾಡಿ ಕೊಡಬೇಕಾಗುತ್ತದೆ. ಕೋರ್ಟ್‌ಗಳಲ್ಲಿ ನಾಳೆ ಪ್ರಶ್ನೆ ಮಾಡಿದರೆ ಅದರಲ್ಲೂ ಯಶಸ್ವಿಯಾಗಬೇಕು. ಕ್ಯಾಬಿನೆಟ್‌ನಲ್ಲಿ ಮಾಡಿರುತ್ತಾರೆ ಅಂದ್ರೆ ಸಂಪೂರ್ಣ ಅಧ್ಯಯನ ಮಾಡಿರುತ್ತಾರೆ. ಸಿದ್ದರಾಮಯ್ಯ ಅವರ ಸರ್ಕಾರ ಕನ್ನಡಿಗರ ಏಳ್ಗೆಗೆ ಬದ್ಧವಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: CM Siddaramaiah : ಅಸಮಾನತೆ ತೊಲಗಿದಾಗ ಮಾತ್ರ ಸ್ವಾತಂತ್ರ್ಯಕ್ಕೆ ಬೆಲೆ ಎಂದ ಸಿಎಂ ಸಿದ್ದರಾಮಯ್ಯ

Continue Reading

ಪ್ರಮುಖ ಸುದ್ದಿ

GT World Mall: ರೈತರಿಗೆ ಅವಮಾನ ಮಾಡಿದ ಜಿಟಿ ಮಾಲ್‌ ವಿರುದ್ಧ ಸಚಿವರು ಗರಂ; ʼಪಂಚೆ ಧರಿಸಿಯೇ ಸಿದ್ದರಾಮಯ್ಯ 7 ವರ್ಷ ರಾಜ್ಯ ಆಳ್ಲಿಲ್ವಾ?ʼ

GT World Mall: ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh Lad) ಈ ಕುರಿತು ಗರಂ ಆಗಿದ್ದು, ʼಪಂಚೆ ಧರಿಸಿಕೊಂಡೇ ಏಳು ವರ್ಷಗಳ ಕಾಲ ಸಿಎಂ ಆಗಿ ಸಿದ್ದರಾಮಯ್ಯ ರಾಜ್ಯದ ಆಡಳಿತ ಮಾಡುತ್ತಿದ್ದಾರೆ. ಇದರಿಂದ ಅವರು ಪಾಠ ಕಲಿಯಬೇಕುʼ ಎಂದು ಟೀಕಿಸಿದ್ದಾರೆ.

VISTARANEWS.COM


on

gt world mall 3
Koo

ಬೆಂಗಳೂರು: ಪಂಚೆ ಧರಿಸಿದ್ದಾರೆ ಎಂಬ ಕಾರಣದಿಂದ ಮಾಲ್‌ ಒಳಗೆ ಬಿಡದೆ ಕಾಯಿಸಿ ಹಾವೇರಿಯ ರೈತರನ್ನು (Haveri Farmer) ಅವಮಾನ ಮಾಡಿದ ಬೆಂಗಳೂರಿನ ಮಾಗಡಿ ರಸ್ತೆಯ ಜಿಟಿ ಮಾಲ್‌ನ (GT World Mall) ಸಿಬ್ಬಂದಿಯ ವರ್ತನೆಗೆ ರಾಜ್ಯದ ಸಚಿವರುಗಳು (State ministers) ಗರಂ ಆಗಿದ್ದಾರೆ. ಈ ಬಗ್ಗೆ ಪೊಲೀಸ್‌ ನೋಟೀಸ್‌ ನೀಡುವ ಸೂಚನೆ ನೀಡಿದ್ದಾರೆ.

ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh Lad) ಈ ಕುರಿತು ಗರಂ ಆಗಿದ್ದು, ʼಪಂಚೆ ಧರಿಸಿಕೊಂಡೇ ಏಳು ವರ್ಷಗಳ ಕಾಲ ಸಿಎಂ ಆಗಿ ಸಿದ್ದರಾಮಯ್ಯ ರಾಜ್ಯದ ಆಡಳಿತ ಮಾಡುತ್ತಿದ್ದಾರೆ. ಇದರಿಂದ ಅವರು ಪಾಠ ಕಲಿಯಬೇಕುʼ ಎಂದು ಟೀಕಿಸಿದ್ದಾರೆ. ʼಆ ಮಾಲ್ ನಡೆಸುತ್ತಿರುವವರಿಗೆ ಬುದ್ಧಿ ಕಡಿಮೆ ಇರಬೇಕು. ನಮ್ಮ ಇಲಾಖೆ ಇಲ್ಲವೇ ಪೊಲೀಸ್ ಇಲಾಖೆಯಿಂದ ಈ ಬಗ್ಗೆ ಪತ್ರ ಬರೆಯುತ್ತೇವೆʼ ಎಂದು ಅವರು ಹೇಳಿದ್ದಾರೆ.‌

ಸರ್ಕಾರದಿಂದ ನಿಯಮ ತರುತ್ತೇವೆ: ಚಲುವರಾಯ ಸ್ವಾಮಿ

ರೈತರಿಗೆ ಪ್ರವೇಶ ನಿರಾಕರಣೆ ಮಾಡಿದ ಜಿ‌ಟಿ ಮಾಲ್ ಕ್ರಮವನ್ನು ಕೃಷಿ ಸಚಿವ ಚೆಲುವರಾಯಸ್ವಾಮಿ ಖಂಡಿಸಿದ್ದು, ಈ ವಿಚಾರದಲ್ಲಿ ಸೂಕ್ತ ನಿಯಮ ರೂಪಿಸಲು ಸರ್ಕಾರ ಪ್ರಯತ್ನಿಸಲಿದೆ ಎಂದು ಹೇಳಿದ್ದಾರೆ. ʼನಾವು ಇದನ್ನ ಖಂಡಿಸುತ್ತೇವೆ. ಕೆಲ ವರ್ಷಗಳ ಹಿಂದೆ ಪಂಚೆ ಕಟ್ಟಿಕೊಂಡು ಹೋದರೆ ಕ್ಲಬ್‌ಗಳಲ್ಲಿ ಬಿಡುತ್ತಿರಲಿಲ್ಲ. ಶೂ ಇಲ್ಲದೇ ಪಂಚೆ ಹಾಕಿಕೊಂಡು ಕ್ಲಬ್‌ಗೆ ಹೋಗಬಹುದು ಅಂತ ನಮ್ಮ ಸರ್ಕಾರ ನಿರ್ಧಾರ ಮಾಡಿತ್ತು. ಇದನ್ನು ನಾವು ಅಂದು ಅಧಿವೇಶನದಲ್ಲಿ ಚರ್ಚೆ ಮಾಡಿದ್ದೆವು. ಈಗಲೂ ಇದಕ್ಕೆ ಸರ್ಕಾರ ನಿಯಮ ತರಬೇಕುʼ ಎಂದು ಅವರು ಹೇಳಿದ್ದಾರೆ.

ʼಸರ್ಕಾರದಿಂದ ನಿಯಮ ತರುವ ಬಗ್ಗೆ ಸಿಎಂ ಜತೆ ಚರ್ಚೆ ಮಾಡ್ತೀನಿ. ಸೂಕ್ತ ಆದೇಶ ಹೊರಡಿಸಲು ಹೇಳುತ್ತೇವೆ. ರೈತರಿಗೆ ಅಪಮಾನ ಆಗಬಾರದು. ಮಾಲ್‌ಗಳಿಗೆ ಸೂಕ್ತವಾದ ಸೂಚನೆಯನ್ನು ನೀಡುತ್ತೇವೆ. ಕ್ಲಬ್, ಇಂಟರ್‌ನ್ಯಾಶನಲ್ ಫೆಸ್ಟಿವಲ್‌ನಲ್ಲಿ ಸ್ವಲ್ಪ ಡ್ರೆಸ್ ಕೋಡ್ ಇರುತ್ತದೆ. ಮಾಲ್‌ಗಳಲ್ಲಿ ಪ್ಯಾಂಟ್ ಹಾಕಿದ್ರೇನೇ ಬಿಡೋದು ಅಂತ ಹೇಳೋದು ತಪ್ಪಾಗುತ್ತೆ. ಮೆಟ್ರೋದಲ್ಲೂ ಕೂಡ ಹಿಂದೆ ಹೀಗೇ ಆಗಿತ್ತು. ರೈತರಿಗೆ ಹೀಗೆ ಅವಮಾನ ಆಗಬಾರದು, ಯಾರೂ ಅವಮಾನ ಮಾಡಬಾರದು. ಸಾರ್ವಜನಿಕರು, ರೈತರ ಜೊತೆ ಮಾಲ್ ಸಿಬ್ಬಂದಿ ಗೌರವಯುತವಾಗಿ ನಡೆದುಕೊಳ್ಳಬೇಕು ಎಂಬ ಸೂಚನೆ ಸರ್ಕಾರದಿಂದ ನೀಡಲಾಗುತ್ತದೆ. ಪಂಚೆ ಅಂದ್ರೆ ಯಾಕೆ ತಿರಸ್ಕಾರ ಮನೋಭಾವ ಅನ್ನೋದನ್ನು ಅವರನ್ನೇ ಕೇಳಬೇಕು” ಎಂದು ಚಲುವರಾಯ ಸ್ವಾಮಿ ಹೇಳಿದರು.

ಹಾವೇರಿ ಮೂಲದ ರೈತರನ್ನು ಪಂಚೆ ಉಟ್ಟಿದ್ದಾರೆ (Haveri Farmer wearing Dhoti) ಎಂಬ ಕಾರಣಕ್ಕಾಗಿ ಮಾಲ್‌ ಒಳಗೆ ಬಿಡದೆ ಅವಮಾನ ಮಾಡಿದ ಜಿಟಿ ವರ್ಲ್ಡ್‌ ಮಾಲ್‌ (GT World Mall) ಮುಂದೆ ಇಂದು ರೈತ ಸಂಘಟನೆಗಳ ಹಾಗೂ ಕನ್ನಡ ಸಂಘಟನೆಗಳ ಸದಸ್ಯರು ಪಂಚೆ ಉಟ್ಟು ಪ್ರತಿಭಟನೆ ನಡೆಸಿದ್ದಾರೆ. ರೈತರಿಗೆ ನ್ಯಾಯ ಸಲ್ಲಿಸಲು ಹೋರಾಟ ನಡೆಸಿದ ವಿಸ್ತಾರ ನ್ಯೂಸ್‌ ಹಾಗೂ ಸಾರ್ವಜನಿಕರ ಮುಂದೆ ಮಾಲ್‌ ಮಾಲಿಕರು ಕ್ಷಮೆ ಯಾಚಿಸಿದರು. ಮಾಲ್‌ ಆಡಳಿತದ ವರ್ತನೆಯ ಬಗ್ಗೆ ಸ್ಪಷ್ಟನೆ ಕೇಳಿ ನೋಟೀಸ್‌ ನೀಡಲು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ (Karnataka state human rights commission) ಮುಂದಾಗಿದೆ.

ಘಟನೆಯನ್ನು ವಿರೋಧಿಸಿದ ಕನ್ನಡ ಸಂಘಟನೆಯ ಕಾರ್ಯಕರ್ತರು ರೈತರ ಗೆಟಪ್‌ನಲ್ಲಿ ಬೆಳಗ್ಗೆ ಮಾಲ್‌ ಮುಂದೆ ಜಮಾಯಿಸಿದರು. ಕನ್ನಡ ಸಂಘಟನೆಯ ರೂಪೇಶ್ ರಾಜಣ್ಣ ಆ್ಯಂಡ್ ಟೀಂ ಪಂಚೆ ಧರಿಸಿ ಮಾಲ್‌ ಮುಂದೆ ಸೇರಿದ್ದು, ಪ್ರತಿಭಟನೆಗೆ ಮುಂದಾದರು. ಇಂದು ಪ್ರತಿಭಟನೆ ಹಿನ್ನೆಲೆಯಲ್ಲಿ ಮಾಲ್‌ನಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಇದನ್ನೂ ಓದಿ: GT World Mall: ಅನ್ನದಾತನಿಗೆ ಅವಮಾನ ಮಾಡಿದ ಜಿಟಿ ಮಾಲ್‌ ಮುಂದೆ ಪಂಚೆ ಉಟ್ಟು ಪ್ರತಿಭಟನೆ, ಕ್ಷಮೆ ಕೇಳಿದ ಮಾಲೀಕ

Continue Reading

ಕರ್ನಾಟಕ

HD Revanna: ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದ ಮಾಜಿ ಸಚಿವ ಎಚ್.ಡಿ.ರೇವಣ್ಣ; ಪಕ್ಕೆಲುಬಿಗೆ ಪೆಟ್ಟು

HD Revanna: ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ದೇವೇಶ್ವರ ದೇವಾಲಯಕ್ಕೆ ತೆರಳಿ ಬರುವ ವೇಳೆ ಎಚ್‌.ಡಿ.ರೇವಣ್ಣ ಅವರು ಕಾಲು ಜಾರಿ ಬಿದ್ದಿದ್ದಾರೆ. ಇದರಿಂದ ಪಕ್ಕೆಲುಬುಗೆ ಪೆಟ್ಟಾಗಿದ್ದು, ಚಿಕಿತ್ಸೆಗಾಗಿ ಹೊಳೆನರಸೀಪುರದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

VISTARANEWS.COM


on

HD Revanna
Koo

ಹಾಸನ: ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದು ಮಾಜಿ ಸಚಿವ ಎಚ್.ಡಿ.ರೇವಣ್ಣ (HD Revanna) ಅವರ ಪಕ್ಕೆಲುಬಿಗೆ ಪೆಟ್ಟಾಗಿದ್ದು, ಚಿಕಿತ್ಸೆಗಾಗಿ ಹೊಳೆನರಸೀಪುರದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಕಾದಶಿ ಪ್ರಯುಕ್ತ ಉಪವಾಸವಿದ್ದ ಎಚ್‌.ಡಿ.ರೇವಣ್ಣ, ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ದೇವೇಶ್ವರ ದೇವಾಲಯಕ್ಕೆ ತೆರಳಿದ್ದರು. ಪೂಜೆ ಸಲ್ಲಿಸಿ ಬರುವ ವೇಳೆ ಕಾಲು ಜಾರಿ ಬಿದ್ದಿದ್ದಾರೆ.

ಹರದನಹಳ್ಳಿಯಲ್ಲಿ ಪೂಜೆಯ ಬಳಿಕ ಹೊಳೆನರಸೀಪುರದ ಶ್ರೀ ಲಕ್ಷ್ಮೀನರಸಿಂಹ ದೇವಾಲಯಕ್ಕೆ ಎಚ್.ಡಿ.ರೇವಣ್ಣ ಹೊರಟಿದ್ದರು. ಈ ವೇಳೆ ಕಾಲು ಜಾರಿ ಬಿದ್ದಿದ್ದರಿಂದ ಪಕ್ಕೆಲುಬು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹೊಳೆನರಸೀಪುರದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಪವಾಸ ಹಾಗೂ ತೀವ್ರ ಪಕ್ಕೆಲುಬು ನೋವಿನ ಕಾರಣ ಸುಸ್ತಾಗಿರುವ ಎಚ್.ಡಿ.ರೇವಣ್ಣ ಅವರಿಗೆ ಹೊಳೆನರಸೀಪುರದ ತಾಲೂಕು ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ | Ankola landslide Case: ಅಂಕೋಲಾ ಗುಡ್ಡ ಕುಸಿತ ಪ್ರಕರಣ; ಮೃತರ ಕುಟುಂಬಗಳಿಗೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ವಾಲ್ಮೀಕಿ ನಿಗಮ ಹಗರಣ; ಮಾಜಿ ಸಚಿವ ನಾಗೇಂದ್ರ ಪತ್ನಿಯನ್ನು ವಶಕ್ಕೆ ಪಡೆದ ಇಡಿ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ (Valmiki Corporation Scam) ಸಂಬಂಧಿಸಿ ಮಾಜಿ ಸಚಿವ ಬಿ.ನಾಗೇಂದ್ರ (Ex minister B Nagendra) ಸದ್ಯ ಇಡಿ ಅಧಿಕಾರಿಗಳ (ED Officers) ವಶದಲ್ಲಿದ್ದಾರೆ. ಇದೀಗ ಅವರ ಪತ್ನಿ ಮಂಜುಳಾ ಅವರನ್ನೂ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಡಾಲರ್ಸ್ ಕಾಲೋನಿ ನಿವಾಸದಿಂದ ವಶಕ್ಕೆ ಪಡೆದ ಅಧಿಕಾರಿಗಳು ಅವರನ್ನು ಇಡಿ ಕಚೇರಿ ಕರೆ ತಂದಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಮಂಜುಳಾ ಅವರಿಂದ ಮಾಹಿತಿ ಕಲೆ ಹಾಕಲಿದ್ದಾರೆ. ಮಂಜುಳಾ ಅವರ ಹೆಸರಲ್ಲಿ ಹಣದ ವಹಿವಾಟು ನಡೆದಿರುವ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಅವ್ಯವಹಾರ ನಡೆದ ಸಮಯದಲ್ಲಿ ಮಂಜುಳಾ ಅವರ ಬ್ಯಾಂಕ್ ಖಾತೆಗಳಿಗೂ ಹಣ ಬಂದಿರುವ ಹಿನ್ನಲೆಯಲ್ಲಿ ಇಡಿ ಅಧಿಕಾರಿಗಳು ಇದರ ಮೂಲವನ್ನು ಪ್ರಶ್ನಿಸಲಿದ್ದಾರೆ.

ಜುಲೈ 13ರಂದು ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಬಳಿಕ ಯಲಹಂಕದಲ್ಲಿರುವ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರ ಮನೆಗೆ ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು 5 ದಿನಗಳ ಕಾಲ ಕಸ್ಟಡಿಗೆ ನೀಡಿದ್ದರು. 18ನೇ ತಾರೀಖಿನಂದು ಬೆಳಿಗ್ಗೆ 11ಕ್ಕೆ ಮತ್ತೆ ಹಾಜರುಪಡಿಸುವಂತೆ ಸೂಚನೆ ನೀಡಿದ್ದರು.

ಏನಿದು ಪ್ರಕರಣ?

ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಎಂಬಾತ ಮೇ 26ರಂದು ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಗಮದ 187 ಕೋಟಿ ರೂ.ಗಳನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಲಾಗಿದೆ, ಇದರಲ್ಲಿ 88 ಕೋಟಿ ಹಣ ದುರುಪಯೋಗವಾಗಿದೆ ಎಂದು ಅವರು ಡೆತ್‌ನೋಟ್‌ನಲ್ಲಿ ಬರೆದಿದ್ದರು. ಹೀಗಾಗಿ ನಿಗಮದ ಎಂಡಿ ಮತ್ತು ಲೆಕ್ಕಾಧಿಕಾರಿಯನ್ನು ಅಮಾನತು ಮಾಡಲಾಗಿತ್ತು. ನಂತರ ಅಧಿಕಾರಿಗಳ ಬಂಧನವಾಗಿತ್ತು.

ಚಂದ್ರಶೇಖರ್‌ ಬರೆದಿರುವ ಡೆತ್ ನೋಟ್‌ನಲ್ಲಿ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ ಹಾಗೂ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಸುಚಿಸ್ಮಿತಾ ಅವರೇ ನನ್ನ ಸಾವಿಗೆ ಕಾರಣ ಎಂದು ಬರೆದಿಟ್ಟಿದ್ದರು. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿತ್ತು. ವಾಲ್ಮೀಕಿ ನಿಗಮಕ್ಕೆ ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಾಗಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಕೆ. ಆರ್. ರಾಜ್ ಕುಮಾರ್ ಅವರನ್ನು ನೇಮಿಸಿತ್ತು.

ಪ್ರಕರಣದಲ್ಲಿ ಸರ್ಕಾರದ ಪೂರ್ವ ಅನುಮತಿ ಪಡೆದು ಬ್ಯಾಂಕ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿತ್ತು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಂ.ಡಿ & ಸಿಇಒ ಹಾಗೂ ಎಲ್ಲಾ ನಿರ್ದೇಶಕರು ಸೇರಿ 6 ಬ್ಯಾಂಕ್ ಅಧಿಕಾರಿಗಳ ಮೇಲೆ ಎಫ್‌ಐಆರ್‌ ದಾಖಲಿಸಲಾಗಿತ್ತು. ಇನ್ನು 88 ಕೋಟಿ ದುರುಪಯೋಗ ಹಣವನ್ನು ಈಗಾಗಲೇ ಮುಖ್ಯ ಖಾತೆಗೆ ಅಧಿಕಾರಿಗಳು ವಾಪಸ್ ಪಡೆದಿದ್ದರು. ಬಳಿಕ ಹಗರಣದಲ್ಲಿ ಸಚಿವ ನಾಗೇಂದ್ರ ಹೆಸರು ಕೇಳಿ ಬಂದ ಹಿನ್ನೆಲೆ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಾಯಕರು ರಾಜಭವನ ಚಲೋ ನಡೆಸಿದ್ದರು. 

ಇದನ್ನೂ ಓದಿ: Wakf Board Scam: ವಾಲ್ಮೀಕಿ ನಿಗಮದ ಬಳಿಕ ವಕ್ಫ್ ಬೋರ್ಡ್‌ನಲ್ಲಿ ಹಗರಣ ಬೆಳಕಿಗೆ; ಮಾಜಿ ಸಿಇಒ ವಿರುದ್ಧ ಎಫ್‌ಐಆರ್!

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಕೇಸ್‌ಗೆ ಸಂಬಂಧಿಸಿ ಮತ್ತೊಬ್ಬನನ್ನು ಎಸ್ಐಟಿ ಬಂಧಿಸಿದೆ. ಆಂಧ್ರ ಮೂಲದ ಶ್ರೀನಿವಾಸ್ ರಾವ್ ಬಂಧಿತ ಆರೋಪಿ. ಈತ ಹಗರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎನ್ನಲಾಗಿದೆ.

Continue Reading

ಕರ್ನಾಟಕ

Ankola landslide Case: ಅಂಕೋಲಾ ಗುಡ್ಡ ಕುಸಿತ ಪ್ರಕರಣ; ಮೃತರ ಕುಟುಂಬಗಳಿಗೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Ankola landslide Case: ಅಂಕೋಲಾ ಗುಡ್ಡ ಕುಸಿತ ಪ್ರಕರಣ. ಅತ್ಯಂತ ದುರದೃಷ್ಟಕರ ಘಟನೆ. ಮೃತ ದುರ್ದೈವಿಗಳ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಘಟನೆಯಲ್ಲಿ ಮೃತಪಟ್ಟವರಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

Ankola landslide Case
Koo

ಕಾರವಾರ: ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಗುಡ್ಡ ಕುಸಿತ ಪ್ರಕರಣದಲ್ಲಿ (Ankola landslide Case) ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಅವರು, ಅಂಕೋಲಾ ಗುಡ್ಡ ಕುಸಿತ ಪ್ರಕರಣದಲ್ಲಿ ಏಳು ಮಂದಿ ಮಣ್ಣಿನ ಅಡಿ ಸಿಲುಕಿ ಮೃತಪಟ್ಟಿರುವ ಸಾಧ್ಯತೆ ಇದ್ದು, ಈಗಾಗಲೇ 4 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇದು ಅತ್ಯಂತ ದುರದೃಷ್ಟಕರ ಘಟನೆ. ಮೃತ ದುರ್ದೈವಿಗಳ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಘಟನೆಯಲ್ಲಿ ಮೃತಪಟ್ಟವರಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ನಿರಂತರ ಮಳೆಯ ನಡುವೆಯೂ ರಕ್ಷಣಾ ಕಾರ್ಯಾಚರಣೆಯನ್ನೂ ಮುಂದುವರೆಸಲಾಗುತ್ತಿದ್ದು, ಉಳಿದ ಮೂವರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Viral Video: ಚಾಕೋಲೇಟ್ ತಿನ್ನುವ ಆಸೆಯಾಗಿ ಅಂಗಡಿಗೆ ಹೋಗಿದ್ದ ಬಾಲಕ ಶವವಾಗಿ ಮನೆಗೆ ಬಂದ; ಆಗಿದ್ದೇನು? ವಿಡಿಯೊ ನೋಡಿ

ಏನಿದು ಘಟನೆ?

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಗೆ (Karnataka Rain Effect) ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಬಳಿ ಭಾರೀ ಗುಡ್ಡಕುಸಿತ (Karnataka Rain) ಉಂಟಾಗಿತ್ತು. ಗುಡ್ಡದ ಮಣ್ಣಿನಡಿ 7 ಮಂದಿ ಸಿಲುಕಿ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಐವರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಗುಡ್ಡ ಕುಸಿದ ರಭಸಕ್ಕೆ ನದಿಗೆ 2 ಗ್ಯಾಸ್ ಟ್ಯಾಂಕರ್‌ಗಳು ಕೊಚ್ಚಿ ಹೋಗಿದ್ದವು. ಗುಡ್ಡದ ಕೆಳಗಿದ್ದ ಲಾರಿ, ಮತ್ತೊಂದು ಟ್ಯಾಂಕರ್‌ ಹಾಗೂ ಚಾಲಕರು ಪಾರಾಗಿದ್ದರು. ತುರ್ತು ಕಾರ್ಯಾಚರಣೆಗೆ ಪೊಲೀಸರು ಧಾವಿಸಿದ್ದು. ಸ್ಥಳದ ಪರಿಸ್ಥಿತಿ ಭೀಕರವಾಗಿದ್ದು, ಹೆದ್ದಾರಿ ಸಂಪೂರ್ಣ ಕತ್ತರಿಸಿಹೋಗಿ ಈ ರಸ್ತೆಯಲ್ಲಿ ವಾಹನ ಸಂಚಾರ ನಿಂತೇ ಹೋಗಿದೆ, ಇದನ್ನು ಸರಿಪಡಿಸಲು ವಾರವಾದರೂ ಬೇಕು ಎಂದು ಕಾರ್ಯಾಚರಣೆ ನಿರತರ ಅಭಿಪ್ರಾಯ. ಎಡೆಬಿಡದೆ ಸುರಿಯುತ್ತಿರುವ ಮಳೆ, ತೆರವು ಕಾರ್ಯಾಚರಣೆಯನ್ನು ಇನ್ನಷ್ಟು ಕಷ್ಟಗೊಳಿಸಿದೆ.

ಗುಡ್ಡದ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕಾರ್ಯಾಚರಣೆಗೆ ಅಡಚಣೆಯಾಗಿದೆ. ಇನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ 66 (ಗೋವಾ-ಮಂಗಳೂರು) ಹೆದ್ದಾರಿ ಸಂಪರ್ಕ ಸ್ಥಗಿತ ಹಿನ್ನೆಲೆ‌ಯಲ್ಲಿ ಲಾರಿಗಳು ಐದಾರು ಕಿ.ಮೀ ದೂರದಷ್ಟು ನಿಂತಲ್ಲೇ ನಿಂತಿವೆ. ಇದರಿಂದ ದೂರದ ರಾಜ್ಯಗಳಿಂದ ಬಂದ ಲಾರಿ ಚಾಲಕರು ಊಟ, ನೀರು ಸಿಗದೇ ಪರದಾಡುತ್ತಿದ್ದಾರೆ.

ಮನೆ ಕುಸಿದು ಮೃತಪಟ್ಟ ವೃದ್ಧನ ಕುಟುಂಬಸ್ಥರಿಗೆ ಪರಿಹಾರ

ಕಾರವಾರದ ಕಿನ್ನರ ಗ್ರಾಮದಲ್ಲಿ ಮನೆ ಕುಸಿದು ವೃದ್ಧ ಸಾವು ಪ್ರಕರಣದ ಹಿನ್ನೆಲೆಯಲ್ಲಿ ಮೃತರ ಕುಟುಂಬಸ್ಥರಿಗೆ ಸಚಿವ ಮಂಕಾಳು ವೈದ್ಯ ಅವರು ಪರಿಹಾರದ ಆದೇಶ ಪತ್ರ ವಿತರಿಸಿದರು.

ನಿನ್ನೆ ಸುರಿದ ಧಾರಾಕಾರ ಮಳೆಗೆ ಕಿನ್ನರ ಗ್ರಾಮದಲ್ಲಿ ಗುಡ್ಡ ಕುಸಿದು ಮನೆಗೆ ಹಾನಿಯಾಗಿತ್ತು. ಮನೆಯಲ್ಲಿದ್ದ ವೃದ್ಧ ತಿಕರ್ಸ್ ಗುರವ(60) ಗೋಡೆಯಡಿ ಸಿಲುಕಿ ಮೃತಪಟ್ಟಿದ್ದರು. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹ ಹೊರತೆಗೆದಿದ್ದರು. ಇಂದು ಕಾರವಾರಕ್ಕೆ ಆಗಮಿಸಿದ ವೇಳೆ ಪರಿಹಾರದ ಆದೇಶಪತ್ರವನ್ನು ಸಚಿವರು ಹಸ್ತಾಂತರಿಸಿದರು.

ಇದನ್ನೂ ಓದಿ | Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಮಾಜಿ ಸಚಿವ ನಾಗೇಂದ್ರ ಪತ್ನಿಯನ್ನು ವಶಕ್ಕೆ ಪಡೆದ ಇಡಿ

ಮನೆ ಹಾನಿಗೆ 1.5 ಲಕ್ಷ, ಜೀವಹಾನಿಗೆ 5 ಲಕ್ಷ ಸೇರಿ ಒಟ್ಟು 6.5 ಲಕ್ಷ ಪರಿಹಾರ ಆದೇಶ ಪತ್ರ ನೀಡಲಾಗಿದೆ. ಈ ವೇಳೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ.ಕೆ, ಶಾಸಕ ಸತೀಶ ಸೈಲ್ ಉಪಸ್ಥಿತರಿದ್ದರು.

Continue Reading
Advertisement
Tauba Tauba
Latest4 mins ago

Tauba Tauba : ಲಂಡನ್‌ ಬೀದಿಯಲ್ಲಿ ‘ತೌಬಾ ತೌಬಾ’ ಹಾಡಿಗೆ ಸಖತ್‌ ಆಗಿ ಸ್ಟೆಪ್ಸ್‌ ಹಾಕಿದ ಬೆಡಗಿಯರು; ವಿಡಿಯೊ ವೈರಲ್

CM Siddaramaiah karnataka jobs reservation
ಪ್ರಮುಖ ಸುದ್ದಿ11 mins ago

Karnataka Jobs Reservation: ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಶೇ.75 ಮೀಸಲಾತಿ ಮಾತ್ರ; ಆಡಳಿತ ಹುದ್ದೆಗಳಲ್ಲಿ ಶೇ.50; ಉದ್ಯಮಿಗಳಿಗೆ ಬೆಚ್ಚಿತೇ ಸರ್ಕಾರ?

Kannada New Movie Baila Baila Video Song Hiranya out
ಸ್ಯಾಂಡಲ್ ವುಡ್19 mins ago

Kannada New Movie: ರಾಜವರ್ಧನ್ ‘ಹಿರಣ್ಯ’ ಸಿನಿಮಾದಲ್ಲಿ ಮೈ ಚಳಿ ಬಿಟ್ಟು ಡ್ಯಾನ್ಸ್‌ ಮಾಡಿದ ದಿವ್ಯಾ ಸುರೇಶ್!

Usha Chilukuri Vance
ವಿದೇಶ22 mins ago

Usha Chilukuri Vance: ಟ್ರಂಪ್ ಅವರ ಉಪಾಧ್ಯಕ್ಷ ಅಭ್ಯರ್ಥಿಯ ಪತ್ನಿ ಭಾರತೀಯ ಸಂಸ್ಕೃತಿಯ ಪ್ರತಿಪಾದಕಿ!

Viral News
ಪ್ರಮುಖ ಸುದ್ದಿ23 mins ago

Viral News : ಕುವೈಟ್​ನಲ್ಲಿ ಈ ಚಪ್ಪಲಿಗೆ 1 ಲಕ್ಷ ರೂಪಾಯಿಯಂತೆ; ನಮ್ಮಲ್ಲಿ ಇದು ಬಾತ್​ರೂಮ್​ಗೆ ಹೋಗುವ ಚಪ್ಪಲಿ ಎಂದ ನೆಟ್ಟಿಗರು!

Food Poisoning
ದೇಶ33 mins ago

Food Poisoning: ಮೊಹರಂ ಮೆರವಣಿಗೆ ವೇಳೆ ಷರಬತ್ತು ಸೇವಿಸಿ 400 ಮಂದಿ ಅಸ್ವಸ್ಥ

Mohammed Shami
ಕ್ರೀಡೆ40 mins ago

Mohammed Shami: ಎನ್​ಸಿಎಯಲ್ಲಿ ಬೌಲಿಂಗ್​ ಅಭ್ಯಾಸ ಆರಂಭಿಸಿದ ಶಮಿ

gt world mall 3
ಪ್ರಮುಖ ಸುದ್ದಿ42 mins ago

GT World Mall: ರೈತರಿಗೆ ಅವಮಾನ ಮಾಡಿದ ಜಿಟಿ ಮಾಲ್‌ ವಿರುದ್ಧ ಸಚಿವರು ಗರಂ; ʼಪಂಚೆ ಧರಿಸಿಯೇ ಸಿದ್ದರಾಮಯ್ಯ 7 ವರ್ಷ ರಾಜ್ಯ ಆಳ್ಲಿಲ್ವಾ?ʼ

Anant Ambani wedding Shanaya Kapoor trolled for arguing with security
ಬಾಲಿವುಡ್44 mins ago

Anant Ambani: ಅನಂತ್ ಅಂಬಾನಿ ಮದುವೆಯಲ್ಲಿ ಖ್ಯಾತ ಬಾಲಿವುಡ್‌ ನಟನ ಮಗಳ ದರ್ಪ; ಮುನಿಸಿಕೊಂಡಿದ್ದೇಕೆ?

Sexual Harassment Case
Latest44 mins ago

Sexual Harassment Case: ಜನಜಂಗುಳಿಯ ಮಧ್ಯೆ ಮಹಿಳೆಯ ಖಾಸಗಿ ಭಾಗಕ್ಕೆ ಕೈ ಹಾಕಿದ ಬಸ್‍ ಕಂಡಕ್ಟರ್‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ2 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ2 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ2 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ3 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ3 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ3 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ4 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌