Ziyu Homes Scam: ಝಿಯೂ ಹೋಮ್ಸ್ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ; ಅಹ್ಮದ್ ಅಲಿ ಬೇಗ್ ದಂಪತಿ ಅರೆಸ್ಟ್‌! - Vistara News

ಕರ್ನಾಟಕ

Ziyu Homes Scam: ಝಿಯೂ ಹೋಮ್ಸ್ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ; ಅಹ್ಮದ್ ಅಲಿ ಬೇಗ್ ದಂಪತಿ ಅರೆಸ್ಟ್‌!

Ziyu Homes Scam: ಬೆಂಗಳೂರಿನಲ್ಲಿ ನೂರಾರು ಮನೆ ಮಾಲೀಕರು ಹಾಗೂ ಬಾಡಿಗೆದಾರರಿಗೆ ವಂಚನೆ ಮಾಡಿದ ಪ್ರಕರಣದಲ್ಲಿ ಝಿಯೂ ಹೋಮ್ಸ್ ಕಂಪನಿ ಮಾಲೀಕ ಅಹ್ಮದ್‌ ಅಲಿ ಬೇಗ್ ಮತ್ತು ಮುಯಿನಾ ದಂಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

Ziyu Homes Scam
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಝಿಯೂ ಹೋಮ್ಸ್ (Ziyu Homes Scam) ಹೆಸರಲ್ಲಿ ಮನೆ ಮಾಲೀಕರು ಮತ್ತು ಭೋಗ್ಯಕ್ಕೆ ಇರುವವರನ್ನು ಏಕಕಾಲಕ್ಕೆ ವಂಚನೆ ಮಾಡುತ್ತಿದ್ದ ಝಿಯೂ ಹೋಮ್ಸ್ ಕಂಪನಿ ಮಾಲೀಕ ಅಹ್ಮದ್‌ ಅಲಿ ಬೇಗ್ ಮತ್ತು ಮುಯಿನಾ ದಂಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮನೆ ಮತ್ತು ಫ್ಲ್ಯಾಟ್‌ಗಳನ್ನು ಝಿಯೂ ಸಂಸ್ಥೆ ಬಾಡಿಗೆಗೆ ಪಡೆದು ಅಗ್ರಿಮೆಂಟ್ ಮಾಡಿಕೊಳ್ಳುತ್ತಿತ್ತು. ಆದರೆ, ಆ ಮನೆಗಳನ್ನು ಬೇರೊಬ್ಬರಿಗೆ ಭೋಗ್ಯಕ್ಕೆ ನೀಡಿ ಕೋಟ್ಯಂತರ ರೂ. ವಂಚನೆ ಮಾಡಿದ್ದರಿಂದ ಕಂಪನಿ ಮಾಲೀಕ ಹಾಗೂ ಆತನ ಪತ್ನಿಯನ್ನು ಬಂಧಿಸಲಾಗಿದೆ.

ಪೂರ್ವ ವಿಭಾಗದಲ್ಲಿ ಬರುವ ನೂರಾರು ಮನೆ ಮಾಲೀಕರಿಗೆ ದಂಪತಿ ವಂಚನೆ ಮಾಡಿದ್ದಾರೆ. 15-20 ಸಾವಿರ ರೂ.ಗಳಿಗೆ ಮನೆ ಬಾಡಿಗೆಗೆ ಪಡೆಯುತ್ತಿದ್ದ ಝಿಯೂ ಹೋಮ್ಸ್‌, ಬೇರೊಬ್ಬರಿಗೆ 15-20 ಲಕ್ಷಕ್ಕೆ ಭೋಗ್ಯಕ್ಕೆ ಹಾಕಿ ವಂಚನೆ ಮಾಡುತ್ತಿತ್ತು. ಮನೆ ಮಾಲೀಕರು ಬಾಡಿಗೆಗೆ ಕೊಟ್ಟಿದ್ದೇವೆ ಎಂದು ಸುಮ್ಮನೆ ಇರುತ್ತಿದ್ದರು. ಅದರೆ, ಒಂದೆರಡು ತಿಂಗಳು ಬಾಡಿಗೆ ಕೊಟ್ಟು ನಂತರ ಬಾಡಿಗೆ ಕೊಡುತ್ತಿರಲಿಲ್ಲ. ಮಾಲೀಕರು ಮನೆ ಬಳಿ ಹೋಗಿ ನೋಡಿದಾಗ ಅವರಿಗೆ ಶಾಕ್ ಆಗುತ್ತಿತ್ತು. ಯಾಕೆಂದರೆ ಮನೆಯಲ್ಲಿ ಬೇರೆ ಯಾರೋ ವ್ಯಕ್ತಿಗಳು ವಾಸವಿರುತ್ತಿರುವುದು ಕಂಡುಬರುತ್ತಿತ್ತು.

ಈ ಬಗ್ಗೆ ಹೆಣ್ಣೂರು, ಬಾಣಸವಾಡಿ ಸೇರಿ ಹಲವು ಠಾಣೆಗಳಲ್ಲಿ ದೂರುಗಳು ದಾಖಲಾಗಿದ್ದವು. ಸುಮಾರು ನಲವತ್ತಕ್ಕೂ ಹೆಚ್ಚು ಮನೆ ಮಾಲೀಕರಿಂದ ದೂರು‌‌ ದಾಖಲಿಸಿದ್ದರಿಂದ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿತ್ತು. ಸದ್ಯ ಸಿಸಿಬಿ ಅಧಿಕಾರಿಗಳಿಂದ ಹೈದರಾಬಾದ್‌ನಲ್ಲಿ ಅಹ್ಮದ್‌ ಅಲಿ ಬೇಗ್ ಮತ್ತು ಪತ್ನಿ ಮುಯಿನಾಳನ್ನು ಬಂಧಿಸಿದ್ದಾರೆ. ಇನ್ನೂ ಕೆಲ ಆರೋಪಿಗಳು ತಲೆ ಮರೆಸಿಕೊಂಡಿದ್ದು, ಅವರಿಗಾಗಿ ಪೊಲೀಸರಿಂದ ಹುಡುಕಾಟ ನಡೆಯುತ್ತಿದೆ.

ಇದನ್ನೂ ಓದಿ | Road Accident : ಪ್ರತ್ಯೇಕ ಕಡೆಗಳಲ್ಲಿ ಅಪಘಾತ; ಓವರ್‌ ಸ್ಪೀಡ್‌ ಯಡವಟ್ಟು, ಪ್ರಾಣಕ್ಕೆ ತಂತು ಕುತ್ತು

ಶಾಲಾ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಕಾಮುಕನನ್ನು ಥಳಿಸಿದ ಸಾರ್ವಜನಿಕರು

Physical abuse attempted rape of school girl The public who beat up the man
Physical abuse attempted rape of school girl The public who beat up the man

ಚಿಕ್ಕೋಡಿ: ಶಾಲಾ ಬಾಲಕಿ ಮೇಲೆ ಅತ್ಯಾಚಾರಕ್ಕೆ (Physical Abuse) ಯತ್ನಿಸಿದ ಕಾಮುಕನನ್ನು ಹಿಡಿದು ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ರಾಯಬಾಗ ಪಟ್ಟಣದ ಕೈರಕೋಡಿ ನಿವಾಸಿ ಸುನೀಲ್ ದೀಪಾಳೆ ಎಂಬಾತನಿಂದ ಕೃತ್ಯ ನಡೆದಿದೆ.

ಸುನೀಲ್ 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಾಲಕಿ ಪಟ್ಟಣದ ಕಂಚರವಾಡಿ ರೋಡ್ ಕಡೆಯಿಂದ ತೆರಳುತ್ತಿದ್ದಳು. ಈ ವೇಳೆ ಬಾಲಕಿಗೆ ಡ್ರಾಪ್ ಕೊಡುವ ನೆಪದಲ್ಲಿ ಬೈಕ್ ಮೇಲೆ ಕೂರಿಸಿಕೊಂಡಿದ್ದಾನೆ. ನಂತರ ನಿರ್ಜನ ಪ್ರದೇಶದ ಕಡೆಗೆ ಕರೆದ್ಯೊಯಲು ಯತ್ನಿಸಿದ್ದಾನೆ. ಇದರಿಂದ ಗಾಬರಿಗೊಂಡ ಬಾಲಕಿ ಗಾಡಿ ನಿಲ್ಲಿಸಲು ಹೇಳಿದ್ದಾಳೆ. ಆದರೆ ನಿಲ್ಲಸದೇ ಇದ್ದಾಗ ಬಾಲಕಿ ಕಿರುಚಾಡಿದ್ದಾಳೆ. ಆಕೆಯ ಕಿರುಚಾಟ ಕೇಳಿ ಸ್ಥಳಕ್ಕೆ ಸ್ಥಳೀಯರು ದೌಡಾಯಿಸಿದ್ದಾರೆ.

ಕೂಡಲೇ ಸುನೀಲ್‌ನನ್ನು ಹಿಡಿದುಕೊಂಡ ಸ್ಥಳೀಯರು ಅತ್ಯಾಚಾರಕ್ಕೆ ಯತ್ನಿಸಿದ್ದು ತಿಳಿಯುತ್ತಿದ್ದಂತೆ ಧರ್ಮದೇಟು ನೀಡಿ ರಾಯಬಾಗ ಪೊಲೀಸ್‌ರಿಗೆ ಒಪ್ಪಿಸಿದ್ದಾರೆ. ಆರೋಪಿಗೆ ರಾಯಬಾಗ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Love Case : ಪ್ರೀತಿಗೆ ಪೋಷಕರ ವಿರೋಧ; ಒಬ್ಬರಿಗೊಬ್ಬರು ತಬ್ಬಿಕೊಂಡು ನೇಣಿಗೆ ಶರಣಾದ ಪ್ರೇಮಿಗಳು

ಹೊಸಕೋಟೆಯಲ್ಲಿ ಬಾಲ್ಯ ವಿವಾಹಕ್ಕೆ ಯತ್ನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಕನಕ‌ ಭವನದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಪ್ಪಿಸಿದ್ದಾರೆ. 15 ವರ್ಷದ ಬಾಲಕಿಗೆ ಮದುವೆ ಮಾಡಲು ಪೋಷಕರು ಮುಂದಾಗಿದ್ದರು. ಆರತಕ್ಷತೆ ಮುಗಿಸಿ ಮದುವೆಗೆ ಅರಿಶಿನ ಶಾಸ್ತ್ರ ಮಾಡುತ್ತಿದ್ದರು. ಈ ವೇಳೆ ದಾಳಿ ನಡೆಸಿದ ಅಧಿಕಾರಿಗಳು ಮದುವೆ ನಿಲ್ಲಿಸಿದ್ದಾರೆ.

ಹೊಸಕೋಟೆ ನಗರದ ಕನಕ ಭವನದಲ್ಲಿ ಬಾಲ್ಯ ವಿವಾಹಕ್ಕೆ ಬ್ರೇಕ್ ಹಾಕಿದ್ದಾರೆ. ಮಹಿಳಾ ಮತ್ತು ಮಕ್ಕಳ‌ ಕಲ್ಯಾಣ‌ ಇಲಾಖೆಯ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನಿತಾ ಲಕ್ಷ್ಮೀ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿ ಮದುವೆ ನಿಲ್ಲಿಸಿ, ಬಾಲಕಿಯನ್ನು ವಶಕ್ಕೆ ಪಡೆದು ಮಹಿಳಾ ಕೇಂದ್ರಕ್ಕೆ ಕರೆತಂದಿದ್ದಾರೆ. ಪೋಷಕರ ವಿರುದ್ಧ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Basavaraj Bommai: ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಸ್ಥಗಿತಗೊಂಡಿದೆ: ಬೊಮ್ಮಾಯಿ ಕಿಡಿ

Basavaraj Bommai: ಸಂಕಷ್ಟದಲ್ಲಿರೋ ಜನತೆಗೆ ಸ್ಪಂದನೆ ಮಾಡದ ಸರ್ಕಾರ ರಾಜ್ಯದಲ್ಲಿದೆ. ಇಂತಹ ಸರ್ಕಾರ ಬೇಕೆ ಅನ್ನುವ ಪ್ರಶ್ನೆ ಉದ್ಭವವಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

VISTARANEWS.COM


on

Basavaraj Bommai
Koo

ಹುಬ್ಬಳ್ಳಿ: ಕಾಂಗ್ರೆಸ್‌ನಲ್ಲಿ ಏನು ನಡೆಯುತ್ತಿದೆಯೋ ಅದು ಅವರ ಆಂತರಿಕ ವಿಚಾರ, ರಾಜ್ಯದಲ್ಲಿ ಏನು ನಡೆಯುತ್ತಿದೆ ಅನ್ನುವುದು ಮುಖ್ಯ. ರಾಜ್ಯದಲ್ಲಿ ಆಡಳಿತ ಸಂಪೂರ್ಣ ಸ್ಥಗಿತಗೊಂಡಿದೆ. ಸಿದ್ದರಾಮಯ್ಯ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳುತ್ತೇ ಅನ್ನುವುದು ಅವರಿಗೆ ಬಿಟ್ಟದ್ದು. ವಿರೋಧ ಪಕ್ಷದ ಆರೋಪಗಳನ್ನು ನಿಭಾಯಿಸಲು ಸಿಎಂ ಸಭೆಗಳ ಮೇಲೆ ಸಭೆ ಮಾಡ್ತಿದಾರೆ. ಒಳ್ಳೆಯ ಆಡಳಿತ ನೀಡಲಿ ಅಂತ ಜನತೆ ಕಾಂಗ್ರೆಸ್ ಗೆ ಅಧಿಕಾರ ಕೊಟ್ಟಿದೆ. ಸರ್ಕಾರದಲ್ಲಿ ಖಜಾನೆ ಸಂಪೂರ್ಣ ಖಾಲಿಯಾಗಿದ್ದು, ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಸ್ಥಗಿತಗೊಂಡಿದೆ ಎಂದು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಕಿಡಿಕಾರಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬರಗಾಲ ಬಂದರೂ ಸರಿಯಾದ ಪರಿಹಾರ ಕೊಡುತ್ತಿಲ್ಲ. ಮುಳುಗಡೆಯಾದ ಪ್ರದೇಶಗಳಿಗೆ ಪರಿಹಾರ ಕೊಟ್ಟಿಲ್ಲ. ಒಂದು ವಿಡಿಯೋ ಕಾಲ್ ಬಿಟ್ಟರೆ ಬೇರೇನೂ ಮಾಡಿಲ್ಲ. ಸಂಕಷ್ಟದಲ್ಲಿರೋ ಜನತೆಗೆ ಸ್ಪಂದನೆ ಮಾಡದ ಸರ್ಕಾರ ರಾಜ್ಯದಲ್ಲಿದೆ. ಇಂತಹ ಸರ್ಕಾರ ಬೇಕೆ ಅನ್ನುವ ಪ್ರಶ್ನೆ ಉದ್ಭವವಾಗಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಬೆಂಬಲ ಇರುವ ಕುರಿತು ಕೇಳಿದ ಪ್ರಶ್ನೆಗೆ, ಹೈಕಮಾಂಡ್ ಶ್ರೀರಕ್ಷೆ ಎಲ್ಲಿವರೆಗೆ ಅನ್ನುವುದು ಅವರಿಗೇ ಬಿಟ್ಟ ವಿಚಾರ. ಒಂದು ವರದಿಯಲ್ಲಿ ಸಿಎಂಗೆ ರಕ್ಷೆ ಎನ್ನಲಾಗುತ್ತಿದೆ. ಮತ್ತೊಂದು ವರದಿಯಲ್ಲಿ ಪ್ರಾದೇಶಿಕ ಪಕ್ಷದ ರೀತಿಯಲ್ಲಿ ನಡೆದುಕೊಳ್ಳಲಾಗಲ್ಲ ಎನ್ನಲಾಗುತ್ತಿದೆ ಎಂದಿರುವುದಾಗಿ ಹೇಳಿದರು.

KAS Prelims exam: ಕೆಎಎಸ್‌ ಪರೀಕ್ಷೆ ಮುಂದೂಡಲು ಕೆಲವರಿಂದ ಲಾಬಿ; ಆದರೆ ಮುಂದೂಡುವುದಿಲ್ಲ ಎಂದ ಸರ್ಕಾರ

ಮಾಜಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಹಂಸರಾಜ್ ಭಾರದ್ವಾಜ್ ಒಬ್ಬ ರಾಜಕಾರಣಿ ಗವರ್ನರ್ ಆಗಿದ್ದರು. ಅವರು ರಾಜಕಾರಣ ಬಿಟ್ಟರೆ ಬೇರೇನು ಮಾಡಲಿಲ್ಲ. ದಿನ‌ ಬೆಳಗಾದರೆ ರಾಜ್ಯ ಸರ್ಕಾರದ ವಿರುದ್ಧ ಮಾತನಾಡುತ್ತಿದ್ದರು. ಆ ಸಂದರ್ಭದಲ್ಲಿ ಕಾಂಗ್ರೆಸ್ ಹೇಗೆ ನಡೆದುಕೊಂಡಿತು. ಅವತ್ತು ರಾಜ್ಯಪಾಲರ ಭಾಷೆ, ರಾಜ್ಯಪಾಲರ ನಿರ್ಧಾರ ಇವರಿಗೆ ಬೇಕಾಗಿತ್ತು. ಈಗ ಅದೇ ಪರಿಸ್ಥಿತಿ ಇವರಿಗೆ ಬಂದಾಗ ರಾಜ್ಯಪಾಲರ ವಿರುದ್ಧ ಮಾತನಾಡುತ್ತಿದ್ದಾರೆ. ಇದು ಸಂವಿಧಾನ ಮತ್ತು ರಾಜ್ಯಾಂಗದ ಪ್ರಶ್ನೆ ಇದೆ. ರಾಜ್ಯಪಾಲರು ರಾಷ್ಟ್ರಪತಿಗಳ ಪ್ರತಿನಿಧಿಗಳು, ಆ ಸ್ಥಾನ ಬಹಳ ಮುಖ್ಯವಾದದ್ದು. ಅವರ ಕಾರ್ಯ ವೈಖರಿ ಬಗ್ಗೆ ಭಿನ್ನಾಭಿಪ್ರಾಯವಿದ್ದರೆ ಹೇಳುವುದಕ್ಕೆ ರೀತಿ ನೀತಿ ಇದೆ. ಆ ರೀತಿ ನಡೆದುಕೊಂಡರೆ ರಾಜ್ಯ ಸರ್ಕಾರಕ್ಕೆ ಗೌರವ ಸಿಗುತ್ತದೆ. ರಾಜ್ಯಪಾಲರನ್ನು ಬೈಯುವುದರಿಂದ ಕಾಂಗ್ರೆಸ್ ಏನು ಲಾಭ ಆಗಲ್ಲ ಎಂದು ಹೇಳಿದರು.

ಅಹಿಂದ ಸಂಘಟನೆಯಿಂದ ರಾಜಭವನ ಚಲೋ ಕುರಿತ ಕೇಳಿದ ಪ್ರಶ್ನೆಗೆ ಇದೆಲ್ಲವೂ ಕಾಂಗ್ರೆಸ್ ಪ್ರೇರಿತ ಹೋರಾಟ ಎಂದರು.

ಇದನ್ನೂ ಓದಿ | Jindal Steels: ಬಿಜೆಪಿ ಸರ್ಕಾರವೇ ಜಿಂದಾಲ್ ಕಂಪನಿಗೆ ಭೂಮಿ ನೀಡಲು ತೀರ್ಮಾನಿಸಿತ್ತು: ಎಂ.ಬಿ. ಪಾಟೀಲ್

ಭರತ್ ಶಿಗ್ಗಾಂವಿಯಿಂದ ಸ್ಪರ್ಧಿಸಲ್ಲ

ಶಿಗ್ಗಾಂವಿ ಕ್ಷೇತ್ರದಿಂದ ಭರತ್ ಬೊಮ್ಮಾಯಿ ಸ್ಪರ್ಧಿಸುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಭರತ್ ಬೊಮ್ಮಾಯಿಗೆ ಶಿಗ್ಗಾಂವಿ ಟಿಕೆಟ್ ಕೇಳಿಲ್ಲ. ಶಿಗ್ಗಾಂವಿ ಸವಣೂರು ಕ್ಷೇತ್ರದ ಜನ ಭರತ್‌ಗೆ ಟಿಕೆಟ್ ಕೊಡಲು ಒತ್ತಡ ತಂದಿಲ್ಲ. ಜೋಶಿಯವರನ್ನು ಭೇಟಿಯಾಗಲು ಶಿಗ್ಗಾಂವಿ ಕ್ಷೇತ್ರದ ಜನ ಹೋಗಿದ್ದ ಉದ್ದೇಶವೇ ಬೇರೆ. ಆದರೆ ಅದು ಬೇರೆ ರೀತಿಯ ಪ್ರಚಾರವಾಗಿದೆ. ಪಕ್ಷಕ್ಕೆ ಕೆಲಸ ಮಾಡಿದ ನಿಷ್ಠರಿಗೆ ಟಿಕೆಟ್ ಕೊಡುವಂತೆ ಕೇಳಿದ್ದಾರೆ. ಕಷ್ಟದಲ್ಲಿ ಪಕ್ಷ ಕಟ್ಟಿದವರಿಗೆ ಟಿಕೆಟ್ ಕೊಡುವಂತೆ ಮನವಿ ಮಾಡಿದ್ದಾರೆ. ಈ ವೇಳೆ ಜೋಶಿಯವರು ಭರತ್ ಹೆಸರು ಹೇಳಿದ್ದಾರೆ. ನಾನು ನನ್ನ ಮಗನಿಗೆ ಟಿಕೇಟ್ ಕೇಳಿಲ್ಲ. ನನ್ನ ಮಗ ಸ್ಪರ್ಧೆ ಮಾಡುವ ವಿಚಾರವಿಲ್ಲ ಎಂದು ಹೇಳಿದರು.

Continue Reading

ಬೆಂಗಳೂರು

Self Harming: ನೇಣಿಗೆ ಶರಣಾದ ಕ್ಯಾಬ್‌ ಚಾಲಕ; ಮಗನ ಶವದ ಮುಂದೆ ಕಣ್ಣೀರಿಡುತ್ತಾ ಕೊನೆಯುಸಿರೆಳೆದ ತಾಯಿ

Bengaluru News : ರಾಜಧಾನಿ ಬೆಂಗಳೂರಿನಲ್ಲಿ ಮನಕಲಕುವ ಘಟನೆ ನಡೆದಿದೆ. ಭಾನುವಾರ ಕ್ಯಾಬ್‌ ಚಾಲಕನೊಬ್ಬ (Cab Driver) ಆತ್ಮಹತ್ಯೆಗೆ (Self Harming) ಶರಣಾಗಿದ್ದ. ಮಗನ ಶವಕೊಂಡು ಆಘಾತಕ್ಕೆ ಒಳಗಾದ ತಾಯಿ ಕಣ್ಣೀರುಡುತ್ತಲೇ ಕೊನೆಯುಸಿರೆಳೆದಿದ್ದಾರೆ.

VISTARANEWS.COM


on

By

Self Harming
Koo

ಬೆಂಗಳೂರು: ಆ ಮಹಿಳೆ ಭಾನುವಾರ ಅಂತ ಕೊಂಚ ತಡವಾಗಿಯೇ ಎದ್ದಿದ್ದರು. ಬಿಸಿ ಬಿಸಿ ಕಾಫಿ ಮಾಡಿಕೊಂಡು ಮಗನಿಗೆ ಕೊಡಲು ಹೋದಾಕೆಗೆ ಬರಸಿಡಿಲು ಬಡಿದಂತಾಗಿತ್ತು. ಯಾಕೆಂದರೆ ಬಾಳಿ ಬದುಕಬೇಕಿದ್ದ ಮಗ ಫ್ಯಾನಿಗೆ ಕೊರಳೊಡ್ಡಿದ. ಫ್ಯಾನಿನಲ್ಲಿ ನೇತಾಡುತ್ತಿದ್ದ ಮಗನ ಶವ ಕಂಡೊಡನೇ ಹೌಹಾರಿದ್ದರು. ಚೀರಾಡುತ್ತಾ ಅಕ್ಕ-ಪಕ್ಕದವರನ್ನು ಕರೆದಿದ್ದರು. ಆದರೆ ಮಗನ ಶವ ಕಂಡು ಕಣ್ಣೀರುಡುತ್ತಿದ್ದ ಆ ತಾಯಿ ಆ ನೋವಿನಲ್ಲೇ ಜೀವ ಬಿಟ್ಟಿದ್ದಾರೆ. ಈ ಮನಕಲಕುವ ಘಟನೆ ಬೆಂಗಳೂರಿನಲ್ಲಿ (Self Harming) ನಡೆದಿದೆ.

ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನೊರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಅರುಣ್ ಕುಮಾರ್ ಮೃತ ದುರ್ದೈವಿ. ಬೆಂಗಳೂರಿನ ಕಾವೇರಿಪುರದ ನಿವಾಸಿಯಾದ ಅರುಣ್‌ ಕುಮಾರ್‌ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅರುಣ್ ಕುಮಾರ್ ಭಾನುವಾರ ಬೆಳಗಿನ ಜಾವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದ. ಮಗನ ಅಗಲಿಕೆಯಿಂದ ನೊಂದಿದ್ದ ತಾಯಿ ಮಗನ ಶವದ ಮುಂದೆ ಕಣ್ಣೀರಿಡುತ್ತಾ ಗೋಳಾಡುತ್ತಿದ್ದರು. ಮಗನ ನೋಡುತ್ತಲೆ ತಾಯಿಯು ಕೊನೆಯುಸಿರೆಳೆದಿದ್ದಾರೆ. ಅರುಣ್ ಕುಮಾರ್ ತಾಯಿ ಸರಸ್ವತಿ (78) ಮೃತಪಟ್ಟಿದ್ದಾರೆ.

ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ. ಅರುಣ್‌ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ನೀರವ ಮೌನ ಆವರಿಸಿದೆ.

ಇದನ್ನೂ ಓದಿ: Physical Abuse : ಮದುವೆಯಾಗುವುದಾಗಿ ನಂಬಿಸಿ ಪ್ರಿಯಕರ ಎಸ್ಕೇಪ್; ಆತ್ಮಹತ್ಯೆಗೆ ಯತ್ನಿಸಿದ ಯುವತಿ

ಒಬ್ಬರಿಗೊಬ್ಬರು ತಬ್ಬಿಕೊಂಡು ನೇಣಿಗೆ ಶರಣಾದ ಪ್ರೇಮಿಗಳು

ಆನೇಕಲ್: ಪ್ರೀತಿಗೆ ಪೋಷಕರ (Love Case) ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರೇಮಿಗಳು ಆತ್ಮಹತ್ಯೆಗೆ (Self Harming) ಶರಣಾಗಿದ್ದಾರೆ. ಪ್ರಿಯಕರನ ಮನೆಯ ಫ್ಯಾನಿಗೆ ಇಬ್ಬರು ಒಬ್ಬರಿಗೊಬ್ಬರು ತಬ್ಬಿಕೊಂಡು ನೇಣು ಬಿಗಿದುಕೊಂಡಿದ್ದಾರೆ. ತಮಿಳುನಾಡಿನ ಡೆಂಕಣಿಕೋಟೆಯ ಕೆಳಮಂಗಲ ಸಮೀಪದ ಗೌತಾಲಂ ಗ್ರಾಮದಲ್ಲಿ ಘಟನೆ ನಡೆದಿದೆ.

ಗೌತಾಲಂ ಗ್ರಾಮದ ನರಸಿಂಹಮೂರ್ತಿ (22), ಬಾಚಪ್ಪನಟ್ಟಿ ಗ್ರಾಮದ ಯುವಶ್ರೀ (17) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ನರಸಿಂಹಮೂರ್ತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೆ, ಯುವಶ್ರೀ ಕೃಷ್ಣಗಿರಿಯ ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು.

Love case
Love case

ಕೆಲ ವರ್ಷಗಳಿಂದ ನರಸಿಂಹ ಮೂರ್ತಿ ಹಾಗೂ ಯುವಶ್ರೀ ಪರಸ್ಪರ ಪ್ರೀತಿಸುತ್ತಿದ್ದರು. ಇವರಿಬ್ಬರ ಪ್ರೀತಿ ವಿಚಾರ ತಿಳಿದ ಯುವತಿ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಮಾತ್ರವಲ್ಲದೇ ಕಳೆದ ತಿಂಗಳು ಯುವತಿ ಪೋಷಕರಿಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನರಸಿಂಹಮೂರ್ತಿ ಯುವಶ್ರೀಗೆ ಕಿರುಕುಳ ನೀಡುತ್ತಿದ್ದಾನೆಂದು ದೂರು ಕೊಟ್ಟಿದ್ದರು.

ಇದನ್ನೂ ಓದಿ: Actor Darshan : ಕೊಲೆ ಕೇಸ್‌ನಲ್ಲಿ ದರ್ಶನ್‌ ಮೂಲಕವೇ ಪವಿತ್ರಾಗೌಡ ಲಾಕ್‌; ಜತೆಗೆ ಇದ್ದ ಹುಡುಗರನ್ನು ನಂಬಿ ಕೆಟ್ಟೆ ಎಂದ ನಟ!

ಡೆಂಕಣಿಕೋಟೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಯುವತಿ ಪೋಷಕರು ಪ್ರಕರಣ ದಾಖಲಿಸಿದ್ದರು. ಪೊಲೀಸರು ನರಸಿಂಹಮೂರ್ತಿಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಕಳೆದ ಹತ್ತು‌ ದಿನಗಳ ಹಿಂದೆಯಷ್ಟೇ ನರಸಿಂಹಮೂರ್ತಿ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದ.

ಜೈಲಿನಿಂದ ಹೊರಬಂದ ಬಳಿಕ ಯುವತಿ ಜತೆ ನರಸಿಂಹಮೂರ್ತಿ ನಿರಂತರ ಫೋನ್‌ ಸಂಪರ್ಕ ಬೆಳೆಸಿದ್ದ. ನಿನ್ನೆ ಶನಿವಾರ ಸಂಜೆ ಕಾಲೇಜು ಮುಗಿಸಿ ನರಸಿಂಹಮೂರ್ತಿ ಮನೆಗೆ ಹೋಗಿದ್ದ ಯುವಶ್ರೀ ಇಬ್ಬರು ಆತ್ಮಹತ್ಯೆಗೆ ನಿರ್ಧರಿಸಿದ್ದಾರೆ. ಪ್ರೀತಿಗೆ ಯುವತಿ ಪೋಷಕರು ವಿರೋಧದಿಂದ ಬೇಸತ್ತ ಇವರಿಬ್ಬರು ಬಾಗಿಲು ಹಾಕಿಕೊಂಡು ಮನೆಯೊಳಗೆ ಇಬ್ಬರು ಫ್ಯಾನಿಗೆ ನೇಣಿಗೆ ಶರಣಾಗಿದ್ದಾರೆ.

ಮನೆಯ ಬಾಗಿಲು ತೆರೆಯದೆ ಇದ್ದಾಗ ಅನುಮಾನಗೊಂಡ ಯುವಕನ ಪೋಷಕರು, ಬಾಗಿಲು ಮುರಿದು ಒಳ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಡೆಂಕಣಿಕೋಟೆ ಡಿವೈಎಸ್‌ಪಿ ಶಾಂತಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಡೆಂಕಣಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Jindal Steels: ಬಿಜೆಪಿ ಸರ್ಕಾರವೇ ಜಿಂದಾಲ್ ಕಂಪನಿಗೆ ಭೂಮಿ ನೀಡಲು ತೀರ್ಮಾನಿಸಿತ್ತು: ಎಂ.ಬಿ. ಪಾಟೀಲ್

Jindal Steels: ಬಿಜೆಪಿ ಸರ್ಕಾರವೇ ಜಿಂದಾಲ್ ಕಂಪನಿಗೆ 3,666 ಎಕರೆ ಕೊಡಲು ತೀರ್ಮಾನಿಸಿತ್ತು. ಅದರಂತೆ ಜಿಂದಾಲ್ ಕಂಪನಿಗೆ ಭೂಮಿ ನೀಡಲಾಗಿದೆ. ಸರ್ಕಾರದ ಷರತ್ತುಗಳನ್ನು ಪಾಲಿಸಿದ ನಂತರವೂ ಅವರಿಗೆ ಜಮೀನಿನ ಗುತ್ತಿಗೆ ಮಾರಾಟ ಮಾಡದಿದ್ದರೆ ಹೂಡಿಕೆ‌ ವಲಯಕ್ಕೆ ಕೆಟ್ಟ ಸಂದೇಶ ಕೊಟ್ಟಂತಾಗುತ್ತದೆ ಎಂದು ಸಚಿವ ಎಂ‌.ಬಿ. ಪಾಟೀಲ್ ತಿಳಿಸಿದ್ದಾರೆ.

VISTARANEWS.COM


on

Jindal Steels
Koo

ಬೆಂಗಳೂರು: ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಜಿಂದಾಲ್ ಕಂಪನಿಗೆ (Jindal Steels) 3,666 ಎಕರೆ ಕೊಡಲು ತೀರ್ಮಾನಿಸಿ, ಅದರಂತೆ ಸರ್ಕಾರಿ ಆದೇಶವನ್ನೂ‌ (2021ರ ಮೇ 6) ಹೊರಡಿಸಿತ್ತು. ಅದೇ ಆದೇಶವನ್ನು ಈಗ ಹೈಕೋರ್ಟ್ ಸೂಚನೆಯಂತೆ ಜಾರಿ ಮಾಡಲು ಮಾ.12ರಂದು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಇದರಲ್ಲಿ ಯಾವ ಅಕ್ರಮವೂ ನಡೆದಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ‌.ಬಿ. ಪಾಟೀಲ್ ಭಾನುವಾರ ಸ್ಪಷ್ಟಪಡಿಸಿದರು.

ಜಿಂದಾಲ್‌ಗೆ ಭೂಮಿ ನೀಡಿರುವುದಕ್ಕೆ ವಿಪಕ್ಷಗಳಿಂದ ಆಕ್ಷೇಪ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಚಿವರು, ಈ ವಿಷಯದಲ್ಲಿ ಸರ್ಕಾರ ಒಳ ಒಪ್ಪಂದ ಮಾಡಿಕೊಂಡಿದೆ ಎನ್ನುವ ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ಅವರ ಆರೋಪ ನಿರಾಧಾರ. ಆಗೊಂದು ವೇಳೆ ಒಳ ಒಪ್ಪಂದ ಆಗಿದ್ದರೆ ಅದು ಅವರದ್ದೇ ಪಕ್ಷದ ಸರ್ಕಾರದ ಜತೆ ಆಗಿರಬೇಕು ಎಂದು ತಿರುಗೇಟು ನೀಡಿದರು.

ಯಡಿಯೂರಪ್ಪ ಸರ್ಕಾರದ ಆದೇಶ ಜಾರಿಯಾಗದ ಕಾರಣ ಜಿಂದಾಲ್ ಕಂಪನಿ ಹೈಕೋರ್ಟ್‌ಗೆ ಹೋಯಿತು. ಬಳಿಕ ಕೋರ್ಟ್ ಆ ಆದೇಶವನ್ನು ಪಾಲಿಸುವಂತೆ ಸೂಚಿಸಿತು. ಅದರಂತೆ ನಮ್ಮ ಸರ್ಕಾರ ನಡೆದುಕೊಂಡಿದೆ ಎಂದು ವಿವರಿಸಿದರು.

ಇಷ್ಟಕ್ಕೂ ಜಿಂದಾಲ್ ಕಂಪನಿ ರಾಜ್ಯದಲ್ಲಿ 90 ಸಾವಿರ‌ ಕೋಟಿ ರೂ. ಹೂಡಿಕೆ‌ ಮಾಡಿ, 50 ಸಾವಿರ ಜನರಿಗೆ ಉದ್ಯೋಗ ನೀಡಿದೆ. ಸರ್ಕಾರದ ಷರತ್ತುಗಳನ್ನು ಪಾಲಿಸಿದ ನಂತರವೂ ಅವರಿಗೆ ಜಮೀನಿನ ಗುತ್ತಿಗೆ ಮಾರಾಟ ಮಾಡದಿದ್ದರೆ ಹೂಡಿಕೆ‌ ವಲಯಕ್ಕೆ ಕೆಟ್ಟ ಸಂದೇಶ ಕೊಟ್ಟಂತಾಗುತ್ತದೆ’ ಎಂದು ಎಚ್ಚರಿಸಿದರು.

ಬಿಜೆಪಿ ಸರ್ಕಾರ ಚಾಣಕ್ಯ ವಿಶ್ವವಿದ್ಯಾಲಯಕ್ಕೆ ಕೊಟ್ಟ ಹಾಗೆ ನಮ್ಮ ಸರ್ಕಾರ ಜಿಂದಾಲ್ ಕಂಪನಿಗೆ ಯಾವ ರಿಯಾಯಿತಿಯನ್ನೂ ಕೊಟ್ಟಿಲ್ಲ. 20 ವರ್ಷದ ಹಿಂದೆ ಇದ್ದ ಮಾರುಕಟ್ಟೆ ದರವನ್ನು ಆಧರಿಸಿ‌ಯೇ ಭೂಮಿ ದರ ನಿಗದಿಪಡಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಹಿಂದಿನ ಬಿಜೆಪಿ ಸರ್ಕಾರವು ಚಾಣಕ್ಯ ವಿಶ್ವವಿದ್ಯಾಲಯಕ್ಕೆ ದೇವನಹಳ್ಳಿ ಬಳಿ ಕೆಐಎಡಿಬಿಯ 116 ಎಕರೆ ಜಮೀನನ್ನು ಕೇವಲ 50 ಕೋಟಿ ರೂಪಾಯಿಗೆ ಭಾರಿ ರಿಯಾಯಿತಿ ದರದಲ್ಲಿ ಕೊಟ್ಟಿದೆ. ಅದರ ನೈಜ ಬೆಲೆ ಅಂದು 187 ಕೋಟಿ ರೂಪಾಯಿ ಇತ್ತು. ಇದರಲ್ಲಿ 137 ಕೋಟಿ ರೂಪಾಯಿ ಮೇಲ್ನೋಟಕ್ಕೇ ನಷ್ಟವಾಗಿದೆ. ಈ ಹಣ ಇಲ್ಲಿಯವರೆಗೂ ಕೆಐಎಡಿಬಿಗೂ ಸಂದಾಯವಾಗಿಲ್ಲ. ಇದರ ಬಗ್ಗೆ ಬೆಲ್ಲದ ಅವರ ಜಾಣಮೌನ ಯಾಕೆ ಎಂದು ಪಾಟೀಲ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ | KAS Prelims exam: ಕೆಎಎಸ್‌ ಪರೀಕ್ಷೆ ಮುಂದೂಡಲು ಕೆಲವರಿಂದ ಲಾಬಿ; ಆದರೆ ಮುಂದೂಡುವುದಿಲ್ಲ ಎಂದ ಸರ್ಕಾರ

ಸರ್ಕಾರದ ಷರತ್ತುಗಳನ್ನು ಪಾಲಿಸಿದ ನಂತರವೂ ಉದ್ಯಮ ಸಂಸ್ಥೆಗಳಿಗೆ ಜಮೀನಿನ ಗುತ್ತಿಗೆ ಮಾರಾಟ ಮಾಡದಿದ್ದರೆ ಹೂಡಿಕೆ‌ ವಲಯಕ್ಕೆ ಕೆಟ್ಟ ಸಂದೇಶ ಕೊಟ್ಟಂತಾಗುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದು,

Continue Reading

ಕರ್ನಾಟಕ

KAS Prelims exam: ಕೆಎಎಸ್‌ ಪರೀಕ್ಷೆ ಮುಂದೂಡಲು ಕೆಲವರಿಂದ ಲಾಬಿ; ಆದರೆ ಮುಂದೂಡುವುದಿಲ್ಲ ಎಂದ ಸರ್ಕಾರ

KAS Prelims exam: ಕೆಎಎಸ್‌ ಪೂರ್ವಭಾವಿ ಪರೀಕ್ಷೆ ಮುಂದೂಡಲು ಒತ್ತಾಯಗಳು ಕೇಳಿಬರುತ್ತಿರುವ ಹಿನ್ನೆಲೆ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಪ್ರತಿಕ್ರಿಯಿಸಿದ್ದು, ಕೆಲವರ ಲಾಬಿಗೆ ಮಣಿದರೆ ಸುಮಾರು 2.5 ಲಕ್ಷಕ್ಕೂ ಹೆಚ್ಚು ಅರ್ಜಿದಾರರು ಸಂಕಷ್ಟಕ್ಕೆ ಸಿಲುಕುತ್ತಾರೆ ಎಂದು ಹೇಳಿದ್ದಾರೆ.

VISTARANEWS.COM


on

Koo

ಬೆಂಗಳೂರು: ಆಗಸ್ಟ್ 27 ರಂದು ನಡೆಯಲಿರುವ ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆಯನ್ನು (KAS Prelims exam) ಮುಂದೂಡಲು ಆಗ್ರಹಿಸಿ ಕೆಎಎಸ್ ಆಕಾಂಕ್ಷಿಗಳ ಸಣ್ಣ ಗುಂಪೊಂದು ಲಾಬಿ ನಡೆಸುತ್ತಿದೆ. ಎಲ್ಲಾ ರೀತಿಯಲ್ಲಿ ಒತ್ತಡ ಹೇರಲು ಈ ಗುಂಪು ಯತ್ನಿಸುತ್ತಿದ್ದು, ಕೆಪಿಎಸ್‌ಸಿ, ಡಿಪಿಎಆರ್‌, ಮತ್ತು ಸಿಎಂಒನ ಎಲ್ಲಾ ಪ್ರಮುಖ ಅಧಿಕಾರಿಗಳಿಗೆ ಕರೆ ಮಾಡಿ, ವಾಟ್ಸ್‌ ಆ್ಯಪ್ ಸಂದೇಶಗಳ ಸುರಿಮಳೆ ಸುರಿಸುತ್ತಿದ್ದಾರೆ. ಎಷ್ಟರಮಟ್ಟಿಗೆ ಎಂದರೆ ಕೆಲವೊಮ್ಮೆ ನನ್ನ ಫೋನ್ ಅನ್ನು ನಾನು ಏರೋಪ್ಲೇನ್ ಮೋಡ್‌ನಲ್ಲಿ ಇಡಬೇಕಾದ ಪರಿಸ್ಥಿತಿ ಬಂದೊದಗಿದೆ ಎಂದು ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಆರೋಪ ಮಾಡಿದ್ದಾರೆ.

ಕೆಎಎಸ್‌ ಪೂರ್ವಭಾವಿ ಪರೀಕ್ಷೆ ಮುಂದೂಡಲು ಒತ್ತಾಯಗಳು ಕೇಳಿಬರುತ್ತಿರುವ ಹಿನ್ನೆಲೆ ಪ್ರತಿಕ್ರಿಯಿಸಿರುವ ಅವರು, ಕೆಪಿಎಸ್‌ಸಿ ಸುತ್ತಾ ಅನುಮಾನಗಳ ಹುತ್ತ! ಎಂಬಂತಹ ಪದಗಳನ್ನು ಬಳಸಿ ಸಾಕಷ್ಟು ತಪ್ಪು ಮಾಹಿತಿ ಹರಡಿ ಹಗರಣ ನಡೆದಿದೆ ಎಂಬಂತೆ ಬಿಂಬಿಸಲು ಕೆಲವರು ಯತ್ನಿಸುತ್ತಿದ್ದಾರೆ. ಕೆಪಿಎಸ್‌ಸಿ ಅಥವಾ ಸರ್ಕಾರವು ನೀಡಿರುವ ಹೆಚ್ಚುವರಿ ಅವಕಾಶ ಮತ್ತು ವಯೋಮಿತಿ ಸಡಿಲಿಕೆಯನ್ನು ಪಡೆದ ಸುಮಾರು ಈ 1500 ವಿದ್ಯಾರ್ಥಿಗಳ (ವಯೋಮಿತಿ ಸಡಿಲಿಕೆ ನೀಡಿದ ನಂತರ ತಡವಾಗಿ ಅರ್ಜಿ ಸಲ್ಲಿಸಿದವರ ಸಂಖ್ಯೆ) ಈ ಲಾಬಿಗೆ ಮಣಿದರೆ ಸುಮಾರು 2.5 ಲಕ್ಷಕ್ಕೂ ಹೆಚ್ಚು ಅರ್ಜಿದಾರರು ಸಂಕಷ್ಟಕ್ಕೆ ಸಿಲುಕುತ್ತಾರೆ ಮತ್ತು ಅನ್ಯಾಯವನ್ನು ಎದುರಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | KAS Prelims exam: ಕೆಎಎಸ್ ಪೂರ್ವಭಾವಿ ಪರೀಕ್ಷೆ ಮುಂದೂಡಿ, ಇಲ್ಲವೇ ದಯಾಮರಣ ಕೊಡಿ: ಸಿಎಂಗೆ ಅಭ್ಯರ್ಥಿಗಳ ಮನವಿ

ಪರೀಕ್ಷೆಗೆ 2.5 ಲಕ್ಷ ಅಭ್ಯರ್ಥಿಗಳು ಪೂರ್ಣ ಸಿದ್ಧತೆ ನಡೆಸಿದ್ದಾರೆ, ಪರೀಕ್ಷಾ ಕೇಂದ್ರಗಳಿಗೆ ಬರಲು ತಮ್ಮ ಪ್ರಯಾಣದ ಟಿಕೆಟ್‌ಗಳನ್ನು ಕಾಯ್ದಿರಿಸಿದ್ದಾರೆ. ಹಾಗಾಗಿ ಕೆಳಗಿನ ಸಂಗತಿಗಳನ್ನು ನಿಮ್ಮ ಗಮನಕ್ಕೆ ತರಲು ಬಯಸುತ್ತೇನೆ‌.

  1. ಫೆಬ್ರವರಿ 25ರ ಅಧಿಸೂಚನೆಯ ಪ್ರಕಾರ ಪೂರ್ವಭಾವಿ ಪರೀಕ್ಷಾ ದಿನಾಂಕವನ್ನು ಮೇ 05 ರಂದು ನಿಗದಿಪಡಿಸಲಾಗಿತ್ತು. ಆದರೆ, ಮೇ 7ರಂದು ಚುನಾವಣೆ ಇರುವ ಕಾರಣದಿಂದಾಗಿ ಜುಲೈ 21ಕ್ಕೆ ಮುಂದೂಡಲಾಗಿತ್ತು. (ಆರಂಭದಲ್ಲಿ ಜುಲೈ 7ರಂದು ನಡೆಸಲು ತೀರ್ಮಾನಿಸಲಾಗಿತ್ತು ಆದರೆ ಆ ದಿನ UPSC ಪರೀಕ್ಷೆಯೊಂದಕ್ಕೆ ಘರ್ಷಣೆಯಾಗುತ್ತೆ ಎಂಬ ಕಾರಣದಿಂದಾಗಿ ಜುಲೈ 21ಕ್ಕೆ ಬದಲಾಯಿಸಲಾಗಿತ್ತು)
  2. ⁠2017-18ರ ವಯೋಮಿತಿ ನಿರ್ಬಂಧಿತ ಅಭ್ಯರ್ಥಿಗಳಿಗೆ ಹೆಚ್ಚುವರಿಯಾಗಿ ಅವಕಾಶ ನೀಡಲು ಜೂನ್ 21ರಂದು ಸರ್ಕಾರಿ ಆದೇಶವನ್ನು ಪ್ರಕಟಿಸಲಾಗಿತ್ತು. ಈ ರೀತಿ ವಯೋಮಿತಿ ನಿರ್ಬಂಧಿತರಿಗೆ ಅವಕಾಶ ನೀಡಿದ್ದರಿಂದ ಪರೀಕ್ಷೆಯ ದಿನಾಂಕವನ್ನು ಆಗಸ್ಟ್ 25ಕ್ಕೆ ನಡೆಸುವುದಾಗಿ ಜೂನ್ 26ರ ರಂದು ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿತ್ತು.
  3. ಜುಲೈ 6 ರ ಹೊತ್ತಿಗೆ 2017-18 ಬ್ಯಾಚ್‌ನಿಂದ ಅಪ್ಲಿಕೇಶನ್‌ಗಳನ್ನು ಸ್ವೀಕರಿಸಲು ಸರಳವಾದ ಸಾಫ್ಟ್‌ವೇರ್‌ ಆವೃತ್ತಿಯನ್ನು ಅಭಿವೃದ್ಧಿಪಡಿಸಲಾಗಿತ್ತು. ಮತ್ತು ಅರ್ಜಿ ಸ್ವೀಕರಿಸಲು ಜುಲೈ 21 ಕೊನೆಯ ದಿನವಾಗಿತ್ತು. ಈ ಅವಧಿಯಲ್ಲಿ ಸುಮಾರು 1560 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ.
  4. ಜುಲೈ 1ರಂದು IBPS ಪರೀಕ್ಷೆ ದಿನಾಂಕಗಳ ಅಧಿಸೂಚನೆಯನ್ನು ಪ್ರಕಟಿಸಲಾಗಿತ್ತು. (ಅವರ ತಾತ್ಕಾಲಿಕ ದಿನಾಂಕಗಳನ್ನು ಜನವರಿಯಲ್ಲಿ ಘೋಷಿಸಲಾಗಿತ್ತಾದರೂ ವೆಬ್‌ಸೈಟ್‌ಗಳಲ್ಲಿ ಅಥವಾ ಆನ್‌ಲೈನ್‌ನಲ್ಲಿ ನಮಗೆ ಯಾವುದೇ ಮಾಹಿತಿ ಅಥವಾ ದೃಢೀಕರಣ ಲಭ್ಯವಾಗಿಲ್ಲ).
  5. ಮುಖ್ಯಮಂತ್ರಿಯವರ ಕಚೇರಿಯಲ್ಲಿ ನಡೆದ ಚರ್ಚೆಯ ಬಳಿಕ ಆಗಸ್ಟ್ 25ರಂದು ನಡೆಯುವ ಪರೀಕ್ಷೆಯನ್ನು ಮುಂದೂಡಿರುವ ಕುರಿತು ಸಿಎಂ‌ ರವರು ಆಗಸ್ಟ್ 3ರಂದು ಟ್ವೀಟ್ ಮಾಡಿದ್ದಾರೆ. ಆಗಸ್ಟ್ 5ರಂದು ಆಯೋಗವು ಒಂದೇ ಅಜೆಂಡಾದ ಮೂಲಕ ಪರೀಕ್ಷೆ ನಡೆಯಬೇಕಿದ್ದ ಅದೇ ವಾರದಲ್ಲಿ ಅಂದರೆ, ಆಗಸ್ಟ್ 27ರಂದು ಪರೀಕ್ಷೆ ನಡೆಸಲು ನಿರ್ಧಾರ ತೆಗೆದುಕೊಂಡಿದೆ. ಯಾಕೆಂದರೆ ಆಗಸ್ಟ್ 27ರಂದು ಬೇರೆ ಯಾವುದೇ ಪರೀಕ್ಷೆಗಳನ್ನು ನಿಗದಿಪಡಿಸಲಾಗಿಲ್ಲ. ಆದ್ದರಿಂದ ಪರೀಕ್ಷೆ ನಡೆಸಬೇಕಿದ್ದ ಈ ವಾರದಲ್ಲಿಯೇ ಪರೀಕ್ಷೆ ನಡೆಸಲು ಆಯೋಗ ನಿರ್ಧರಿಸಿದೆ.

ಈ ಪ್ರಕ್ರಿಯೆಯ ವೇಳೆ, ಸಾಕಷ್ಟು ಸಮಯವನ್ನು ಅಭ್ಯರ್ಥಿಗಳಿಗೆ ನೀಡಲಾಗಿದೆ ಎಂಬ ಅಂಶವು ತುಂಬಾ ಸ್ಪಷ್ಟವಾಗಿದ್ದು, ಕೆಪಿಎಸ್‌ಸಿ ತರಾತುರಿಯಲ್ಲಿ ಪರೀಕ್ಷೆ ನಡೆಸುತ್ತಿದೆ ಎಂದು ಹೇಳಲು ಯಾವುದೇ ಆಧಾರವಿಲ್ಲ. ಮುಂದಿನ 2 ತಿಂಗಳವರೆಗೆ ಯಾವುದೇ ಭಾನುವಾರಗಳು ಖಾಲಿ ಇಲ್ಲದ ಕಾರಣದಿಂದಾಗಿ ಕೆಲಸದ ದಿನಗಳಲ್ಲಿ ಪರೀಕ್ಷೆಯನ್ನು ನಡೆಸಲಾಗುತ್ತಿದೆ ಎಂದು ಎಲ್.ಕೆ.ಅತೀಕ್ ತಿಳಿಸಿದ್ದಾರೆ.

ಇದನ್ನೂ ಓದಿ | KAS Prelims Exam: ಕೆಎಎಸ್‌ ಪೂರ್ವಭಾವಿ ಪರೀಕ್ಷೆ ಮುಂದೂಡಲು ಸಾಧ್ಯವಿಲ್ಲ: ಸಿಎಂ ಸ್ಪಷ್ಟನೆ

2.5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ನಡೆಸಲು ಸಾಕಷ್ಟು ತಯಾರಿ ನಡೆಸಲಾಗಿದೆ. ಪತ್ರಿಕೆಗಳ ಮುದ್ರಣಕ್ಕೆ ಸುಮಾರು 4-5 ಕೋಟಿ ಖರ್ಚಾಗುತ್ತದೆ. 2 ತಿಂಗಳು ಮುಂದೂಡಿ ಎಂದರೆ ಮುದ್ರಿತ ಪತ್ರಿಕೆಗಳನ್ನು ನಾಶಪಡಿಸಿ ಹೊಸ ಪತ್ರಿಕೆಗಳನ್ನು ಮುದ್ರಿಸಬೇಕು. ಪ್ರಶ್ನೆ ಪತ್ರಿಕೆ ಸೋರಿಕೆಯಾಗುವ ಅಪಾಯವಿರುವುದರಿಂದ ಪೇಪರ್‌ಗಳನ್ನು ಹೆಚ್ಚು ಸಮಯ ಇಡುವಂತಿಲ್ಲ. ಈ ಎಲ್ಲವನ್ನು ಗಮನದಲ್ಲಿಟ್ಟುಕೊಂಡು ಲಾಬಿ ನಡೆಸುತ್ತಿರುವ ವಿದ್ಯಾರ್ಥಿಗಳ ಸಣ್ಣ ಗುಂಪಿನ ಬಗ್ಗೆ ಮತ್ತು ಸತ್ಯವನ್ನು ಪರಿಶೀಲಿಸಲು ಮಾಧ್ಯಮಗಳು ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

Continue Reading
Advertisement
Delhi News
ಪ್ರಮುಖ ಸುದ್ದಿ5 mins ago

Delhi News : ಆಟಿಕೆಯೆಂದು ಭಾವಿಸಿ ಅಪ್ಪನ ಪಿಸ್ತೂಲ್‌ ಶಾಲೆಗೆ ತೆಗೆದುಕೊಂಡು ಹೋದ 10 ವರ್ಷದ ಬಾಲಕ

Basavaraj Bommai
ಕರ್ನಾಟಕ14 mins ago

Basavaraj Bommai: ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಸ್ಥಗಿತಗೊಂಡಿದೆ: ಬೊಮ್ಮಾಯಿ ಕಿಡಿ

ಕ್ರೀಡೆ15 mins ago

Fatima Sana: ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಪಾಕ್​; 22 ವರ್ಷದ ಫಾತಿಮಾ ನಾಯಕಿ

Self Harming
ಬೆಂಗಳೂರು18 mins ago

Self Harming: ನೇಣಿಗೆ ಶರಣಾದ ಕ್ಯಾಬ್‌ ಚಾಲಕ; ಮಗನ ಶವದ ಮುಂದೆ ಕಣ್ಣೀರಿಡುತ್ತಾ ಕೊನೆಯುಸಿರೆಳೆದ ತಾಯಿ

Shocking Video
ವೈರಲ್ ನ್ಯೂಸ್35 mins ago

Shocking Video : ಹೆಣ್ಣು ನಾಯಿಯ ಮೇಲೆ ಅತ್ಯಾಚಾರ ಮಾಡಿದ ಕಾಮುಕ ಪೊಲೀಸ್‌ ವಶಕ್ಕೆ

Jindal Steels
ಕರ್ನಾಟಕ46 mins ago

Jindal Steels: ಬಿಜೆಪಿ ಸರ್ಕಾರವೇ ಜಿಂದಾಲ್ ಕಂಪನಿಗೆ ಭೂಮಿ ನೀಡಲು ತೀರ್ಮಾನಿಸಿತ್ತು: ಎಂ.ಬಿ. ಪಾಟೀಲ್

Virat Kohli
ಕ್ರೀಡೆ55 mins ago

Virat Kohli: ಧವನ್‌ ವಿದಾಯದ ಕುರಿತು ವಿರಾಟ್​ ಕೊಹ್ಲಿ ಭಾವನಾತ್ಮಕ ಸಂದೇಶ

ಕರ್ನಾಟಕ1 hour ago

KAS Prelims exam: ಕೆಎಎಸ್‌ ಪರೀಕ್ಷೆ ಮುಂದೂಡಲು ಕೆಲವರಿಂದ ಲಾಬಿ; ಆದರೆ ಮುಂದೂಡುವುದಿಲ್ಲ ಎಂದ ಸರ್ಕಾರ

Nissan Magnite EZ
ಆಟೋಮೊಬೈಲ್1 hour ago

Nissan Magnite : ನಿಸ್ಸಾನ್‌ ಮ್ಯಾಗ್ನೈಟ್‌ ಇಜಡ್‌- ಶಿಫ್ಟ್‌ ಕಾರು ಹೇಗಿದೆ?; ಪವರ್‌, ಫೀಚರ್‌ಗಳು ಹೇಗಿವೆ? ಇಲ್ಲಿದೆ ವಿವರ

Narendra Modi
ದೇಶ1 hour ago

Narendra Modi: ಮಹಿಳೆಯರ ಮೇಲಿನ ದೌರ್ಜನ್ಯ ಕ್ಷಮಿಸಲು ಸಾಧ್ಯವೇ ಇಲ್ಲದ ಪಾಪ; ಪ್ರಧಾನಿ ಮೋದಿ ಗುಡುಗು

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

ಮಳೆ1 day ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

ಟ್ರೆಂಡಿಂಗ್‌