Accident Video: ಸ್ಕೂಟರ್‌ಗೆ ಅಪ್ಪಳಿಸಿದ ಕಾರು; 30 ಅಡಿ ದೂರ ಎಗರಿ ಬಿದ್ದ ಮಹಿಳಾ ಕಾನ್‌ಸ್ಟೇಬಲ್‌ - Vistara News

Latest

Accident Video: ಸ್ಕೂಟರ್‌ಗೆ ಅಪ್ಪಳಿಸಿದ ಕಾರು; 30 ಅಡಿ ದೂರ ಎಗರಿ ಬಿದ್ದ ಮಹಿಳಾ ಕಾನ್‌ಸ್ಟೇಬಲ್‌

Accident Video: ಅತೀ ವೇಗ ಒಳ್ಳೆಯದಲ್ಲ ಎಂದು ಎಷ್ಟು ಹೇಳಿದರೂ ಜನ ಮುನ್ನುಗ್ಗಿ ಬಿಡುತ್ತಾರೆ. ಇದರಿಂದಲೇ ಸಾಕಷ್ಟು ಅಪಘಾತಗಳಿಗೆ ತುತ್ತಾಗುತ್ತಾರೆ. ವೇಗವಾಗಿ ಚಲಿಸುತ್ತಿದ್ದ ಕಾರೊಂದು ಟರ್ನ್ ಮಾಡಲು ಹೋದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಎದುರಿನಿಂದ ಬರುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸ್ಕೂಟರ್‌ಗೆ ಮುಂಭಾಗದಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳಾ ಪೊಲೀಸ್ ಪೇದೆ ಹಾರಿ ಹೋಗಿ 30 ಅಡಿ ದೂರಕ್ಕೆ ಬಿದ್ದಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ.

VISTARANEWS.COM


on

Accident Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo


ಚೆನ್ನೈ: ಅತಿ ವೇಗ ಅಪಘಾತಕ್ಕೆ ಕಾರಣವೆಂದು (Accident Video) ತಿಳಿದರೂ ಕೂಡ ಕೆಲವರು ವೇಗವಾಗಿ ವಾಹನಗಳನ್ನು ಚಲಾಯಿಸಿ ತಮ್ಮ ಜೀವದ ಜೊತೆಗೆ ಜನರ ಜೀವಕ್ಕೂ ಅಪಾಯವನ್ನು ತಂದೊಡ್ಡುತ್ತಾರೆ. ಇದೀಗ ಅಂತಹದೊಂದು ಅಪಘಾತದ (Hit and Run Case) ಘಟನೆ ಚೆನ್ನೈನಲ್ಲಿ ನಡೆದಿದ್ದು, ಈ ಅಪಘಾತದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ಆ ಗಿದೆ. ಚೆನ್ನೈನಲ್ಲಿ ವೇಗವಾಗಿ ಬಂದ ಕಾರೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ 24 ವರ್ಷದ ಮಹಿಳಾ ಪೊಲೀಸ್ ಅಧಿಕಾರಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚೆನ್ನೈನಲ್ಲಿ ಬುಧವಾರ ನಡೆದಿದೆ.

ಚೆನ್ನೈ ಪೊಲೀಸರ ಪ್ರಕಾರ, ಚೆನ್ನೈನ ತಿರುಮುಲ್ಲೈವಾಯಲ್ ಪ್ರದೇಶದ ನಿವಾಸಿ ಪವಿತ್ರಾ ಅವರು ಪೋರೂರಿನ ಮಹಿಳಾ ಪೊಲೀಸ್ ಠಾಣೆಯಿಂದ ತಮ್ಮ ನಿವಾಸಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಕಾರನ್ನು ಚಾಲಕ ಟರ್ನ್ ಮಾಡಲು ಹೋದಾಗ ನಿಯಂತ್ರಣ ಕಳೆದುಕೊಂಡು ರಸ್ತೆಯ ಎದುರಿನಿಂದ ಬರುತ್ತಿದ್ದ ಪವಿತ್ರಾ ಅವರ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದಾನೆ. ಪವಿತ್ರಾ ಅವರ ಸ್ಕೂಟರ್ ಹಿಂದೆ ಕಪ್ಪು ಕಾರೊಂದು ಬರುತ್ತಿತ್ತು. ಹಾಗೇ ಅದರ ಹಿಂದೆ ಗ್ಯಾಸ್ ಸಿಲಿಂಡರ್‌ಗಳನ್ನು ಹೊತ್ತಿರುವ ಟೆಂಪೊ ಬರುತ್ತಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೊದಲ್ಲಿ ಪವಿತ್ರಾ ಅವರ ಸ್ಕೂಟರ್ ಅನ್ನು ಮುಂಭಾಗದಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಅವರ ಸ್ಕೂಟರ್ ಹಿಂದೆ ಇದ್ದ ಕಪ್ಪು ಕಾರಿಗೆ ಡಿಕ್ಕಿ ಹೊಡೆದು ಅವರು ಹಾರಿ ಹೋಗಿ 30 ಅಡಿ ದೂರಕ್ಕೆ ಬಿದ್ದಿರುವುದು ಕಂಡುಬಂದಿದೆ.

ಅದೃಷ್ಟವಶಾತ್, ಗ್ಯಾಸ್ ಸಿಲಿಂಡರ್‌ಗಳನ್ನು ಹೊಂದಿರುವ ಟೆಂಪೊ ಕಪ್ಪು ಕಾರಿನ ಹಿಂದೆ ಇದ್ದ ಕಾರಣ ದೊಡ್ಡ ಅಪಘಾತ ಸಂಭವಿಸಲಿಲ್ಲ ಎನ್ನಲಾಗಿದೆ. ಪವಿತ್ರಾ ಅವರ ಸ್ಥಿತಿ ಬಹಳ ಗಂಭೀರವಾಗಿದ್ದು, ತಕ್ಷಣ ಅವರನ್ನು ರಾಮಚಂದ್ರ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ಬಳಿಕ ಚಾಲಕ ಪರಾರಿಯಾಗಿದ್ದಾನೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತಲುಪಿ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಚಾಲಕನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಬಸ್‌ ಡ್ರೈವರ್‌ನ ರೀಲ್ಸ್‌ ಕ್ರೇಜ್‌ಗೆ 2 ಎತ್ತುಗಳು ಬಲಿ; ರೈತನ ಸ್ಥಿತಿ ಗಂಭೀರ

ಪ್ರತಿದಿನ ಒಂದಲ್ಲ ಒಂದು ಅಪಘಾತದ ಪ್ರಕರಣಗಳು ವರದಿಯಾಗುತ್ತಿರುತ್ತದೆ. ಜುಲೈ 8ರಂದು ರಸ್ತೆ ದಾಟಲು ಕಾಯುತ್ತಿದ್ದ 61 ವರ್ಷದ ಮಹಿಳೆಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಮೃತಪಟ್ಟಿರುವ ಘಟನೆ ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಕಾಣಿಯೂರು ನಿವಾಸಿ ಗೋಮತಿ ಎಂದು ಗುರುತಿಸಲಾಗಿದೆ. ಸಿಸಿಟಿವಿಯಲ್ಲಿ ಈ ಘಟನೆಯನ್ನು ಸೆರೆಹಿಡಿಯಲಾಗಿದ್ದು, ಗೋಮತಿ ಜೀಬ್ರಾ ಕ್ರಾಸಿಂಗ್ ಬಳಿ ನಿಂತಿದ್ದಾಗ ಅತಿ ವೇಗದಲ್ಲಿ ಬಂದ ಕಾರು ನಿಂತಿದ್ದ ಆಕೆಗೆ ಡಿಕ್ಕಿ ಹೊಡೆದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Sexual Abuse: ಬಾಲಕಿ ಮೇಲೆ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ; ವಿಡಿಯೊ ಮನೆಗೇ ಕಳಿಸಿದ ದುಷ್ಟರು

Sexual Abuse: ಸೋಷಿಯಲ್ ಮೀಡಿಯಾದಿಂದ ಎಷ್ಟು ಒಳ್ಳೆಯದು ಇರುತ್ತದೆಯೋ ಅಷ್ಟೇ ಕೆಟ್ಟದ್ದು ಕೂಡ ಇದೆ. 13 ವರ್ಷದ ಬಾಲಕಿಯೊಬ್ಬಳು ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ಹುಡುಗನನ್ನು ನಂಬಿ ಅತ್ಯಾಚಾರಕ್ಕೀಡಾಗಿದ್ದಾಳೆ. ಹುಡುಗಿಯನ್ನು ಕರೆದುಕೊಂಡು ಹೋದ ಹುಡುಗ ತನ್ನಿಬ್ಬರು ಗೆಳೆಯರೊಂದಿಗೆ ಸುತ್ತಾಡುವ ನೆಪದಲ್ಲಿ ಕಾರಿನಲ್ಲೇ ಅತ್ಯಾಚಾರ ಎಸಗಿದ್ದಾನೆ. ಈ ವೇಳೆ ಆರೋಪಿಗಳು ಬಾಲಕಿಯ ವಿಡಿಯೊವನ್ನು ಕೂಡ ಚಿತ್ರೀಕರಿಸಿದ್ದರು.

VISTARANEWS.COM


on

Sexual Abuse
Koo


ಚಲಿಸುತ್ತಿದ್ದ ಕಾರಿನಲ್ಲಿ 9ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ (Sexual Abuse) ಎಸಗಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ. ಅಲ್ಲದೆ, ಆರೋಪಿಗಳು ಅಪ್ರಾಪ್ತೆಯ ಅಶ್ಲೀಲ ವಿಡಿಯೊವನ್ನು ಚಿತ್ರೀಕರಿಸಿ ಅವಳ ಕುಟುಂಬ ಸದಸ್ಯರಿಗೆ ಕಳುಹಿಸಿದ್ದಾರೆ. ಇದಕ್ಕೆ ಸಂಬಂಧಪಟ್ಟಂತೆ ಕುಟುಂಬದವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಆದರೆ ಆರೋಪಿಗಳು ಪರಾರಿಯಾಗಿದ್ದು, ಪೊಲೀಸರು ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ಮಾಹಿತಿಯ ಪ್ರಕಾರ, 13 ವರ್ಷದ ಸಂತ್ರಸ್ತೆ ಇನ್ಸ್ಟಾಗ್ರಾಮ್ ಮೂಲಕ ಮೂವರು ಆರೋಪಿಗಳಲ್ಲಿ ಒಬ್ಬನೊಂದಿಗೆ ಸ್ನೇಹ ಬೆಳೆಸಿದ್ದಾಳೆ. ಘಟನೆಯ ದಿನ, ಆರೋಪಿ ಅವಳನ್ನು ಭೇಟಿಯಾಗಲು ಕರೆದನು, ಅಲ್ಲಿ ಅವನು ಇತರ ಇಬ್ಬರು ಸ್ನೇಹಿತರೊಂದಿಗೆ ಕಾರಿನಲ್ಲಿ ಕಾಯುತ್ತಿದ್ದನು. ಅಪ್ರಾಪ್ತ ಬಾಲಕಿ ತಲುಪಿದ ಕೂಡಲೇ, ಸುತ್ತಾಡುವ ನೆಪದಲ್ಲಿ ಅವರು ಅವಳನ್ನು ಕಾರಿನೊಳಗೆ ಕರೆದೊಯ್ದರು. ಅವಳು ಒಳಗೆ ಬಂದ ನಂತರ, ಅವರು ಅವಳನ್ನು ಹೆದ್ದಾರಿಗೆ ಕರೆದೊಯ್ದು ಒಬ್ಬೊಬ್ಬರಾಗಿ ಸಾಮೂಹಿಕ ಅತ್ಯಾಚಾರ ಎಸಗಿದರು. ಈ ವೇಳೆ ಆರೋಪಿಗಳು ಬಾಲಕಿಯ ವಿಡಿಯೊವನ್ನು ಸಹ ಮಾಡಿದರು. ನಂತರ ಅವರು ಅದನ್ನು ತೋರಿಸಿ ಸಂತ್ರಸ್ತೆಯನ್ನು ಬ್ಲ್ಯಾಕ್‌ಮೇಲ್‌ ಮಾಡಿ ಮತ್ತೆ ಭೇಟಿಯಾಗುವಂತೆ ಒತ್ತಾಯಿಸಿದ್ದಾರೆ. ಅದಕ್ಕೆ ಅವಳು ನಿರಾಕರಿಸಿದಾಗ, ಅವರು ವಿಡಿಯೊವನ್ನು ಅವಳ ಕುಟುಂಬ ಸದಸ್ಯರಿಗೆ ಕಳುಹಿಸಿದ್ದಾರೆ.

ಈ ಘಟನೆ ಮೋಹನಾ ಪೊಲೀಸ್ ಠಾಣೆ ವ್ಯಾಪ್ತಿಗೆ ಸಂಬಂಧಿಸಿದ್ದು, ಆಕೆಯನ್ನು ಕುಟುಂಬದವರು ಮೋಹನಾ ಪೊಲೀಸ್ ಠಾಣೆಗೆ ಕರೆದೊಯ್ದು ದೂರು ದಾಖಲಿಸಿದ್ದಾರೆ. ಸಂತ್ರಸ್ತೆಯ ದೂರಿನ ಮೇರೆಗೆ ಪೊಲೀಸರು ಮೂವರು ಆರೋಪಿಗಳ ವಿರುದ್ಧ ಅತ್ಯಾಚಾರ, ಅಪಹರಣ ಮತ್ತು ಇತರ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಆರೋಪಿಗಳು ತಮ್ಮ ಮನೆಗಳಿಂದ ಪರಾರಿಯಾಗಿದ್ದು, ಪೊಲೀಸರು ಆರೋಪಿಗಳನ್ನು ಹುಡುಕಲು ಪ್ರಾರಂಭಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:ಶಾಲಾ ಬಾಲಕಿಯನ್ನು ಕ್ರೂರವಾಗಿ ಥಳಿಸಿ ಗುಪ್ತಾಂಗಕ್ಕೆ ಕೋಲು ತುರುಕಿದ ಮಹಿಳೆ!

ಮೋಹನಾ ಪೊಲೀಸ್ ಠಾಣೆಯ ಉಸ್ತುವಾರಿ ರಶೀದ್ ಖಾನ್ ಅವರ ಪ್ರಕಾರ “ವಿದ್ಯಾರ್ಥಿನಿಯೊಬ್ಬಳು ತನ್ನ ಕುಟುಂಬದೊಂದಿಗೆ ಪೊಲೀಸ್ ಠಾಣೆಗೆ ಬಂದು ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ದೂರು ನೀಡಿದ್ದಾಳೆ. ಯುವಕನನ್ನು ಆಕೆ ಇನ್ಸ್ಟಾಗ್ರಾಂನಲ್ಲಿ ಭೇಟಿಯಾಗಿದ್ದಳು. ಪರಿಚಯವಾದ ನಂತರ, ಯುವಕ ತನ್ನ ಇನ್ನೊಬ್ಬ ಸ್ನೇಹಿತನೊಂದಿಗೆ ಭೇಟಿಯಾಗಲು ಹೇಳಿದ್ದಾನೆ. ಹಾಗಾಗಿ ಇನ್ನೊಬ್ಬ ಯುವಕ ಅವಳನ್ನು 2 ಬಾರಿ ಭೇಟಿಯಾಗಿದ್ದಾನೆ. ಘಟನೆ ನಡೆದ ದಿನವೂ ಆರೋಪಿ ಸ್ನೇಹಿತರೊಂದಿಗೆ ಬಂದು ಆಕೆಯನ್ನು ಕಾರಿನಲ್ಲಿ ಕರೆದೊಯ್ದಿದ್ದ, ಅಲ್ಲಿ ಮೂವರು ಯುವಕರು ಅವಳ ಮೇಲೆ ಅತ್ಯಾಚಾರ ಎಸಗಿ ಅಶ್ಲೀಲ ವಿಡಿಯೊ ಮಾಡಿದ್ದರು. ವಿದ್ಯಾರ್ಥಿಯ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ. ಅವರನ್ನು ಶೀಘ್ರದಲ್ಲೇ ಬಂಧಿಸಲಾಗುವುದು“ ಎಂಬುದಾಗಿ ತಿಳಿಸಿದ್ದಾರೆ.

Continue Reading

Latest

Salman Khan-Akshay Kumar: ಸಲ್ಮಾನ್ ಖಾನ್ – ಅಕ್ಷಯ್ ಕುಮಾರ್ ಜೋಡಿಯಾಗಿ ನಟಿಸಿದ 4 ಅತ್ಯುತ್ತಮ ಚಿತ್ರಗಳಿವು!

Salman Khan-Akshay Kumar ಬಾಲಿವುಡ್‌ನ ಸೂಪರ್ ಸ್ಟಾರ್ ನಟರೆನಿಸಿಕೊಂಡ  ಸಲ್ಮಾನ್ ಖಾನ್ ಮತ್ತು ಅಕ್ಷಯ್ ಕುಮಾರ್ ಬಾಲಿವುಡ್ ಚಿತ್ರರಂಗಕ್ಕೆ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅಲ್ಲದೇ ಇವರಿಬ್ಬರು ಹಲವು ಚಿತ್ರಗಳಲ್ಲಿ ಜೊತೆಯಾಗಿ ನಟಿಸಿದ್ದಾರೆ. ಇವರ ಜೋಡಿ ಅನೇಕ ವೀಕ್ಷಕರನ್ನು ಮೋಡಿ ಮಾಡಿದೆ. ಹಾಗಾಗಿ ಅವರು ಜೊತೆಯಾಗಿ ನಟಿಸಿದ ಚಿತ್ರಗಳು ಕೂಡ ಸೂಪರ್ ಹಿಟ್ ಆಗಿವೆ. ಆ ಚಿತ್ರಗಳ ಕುರಿತ ಮಾಹಿತಿ ಇಲ್ಲಿವೆ.

VISTARANEWS.COM


on

Salman Khan-Akshay Kumar
Koo

ಮುಂಬೈ : ಬಾಲಿವುಡ್‌ನ ಸೂಪರ್ ಸ್ಟಾರ್ ನಟರೆನಿಸಿಕೊಂಡ  ಸಲ್ಮಾನ್ ಖಾನ್ ಮತ್ತು ಅಕ್ಷಯ್ ಕುಮಾರ್ ಬಾಲಿವುಡ್ ಚಿತ್ರರಂಗಕ್ಕೆ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅಲ್ಲದೇ ಇವರಿಬ್ಬರು ಹಲವು ಚಿತ್ರಗಳಲ್ಲಿ ಜೊತೆಯಾಗಿ ನಟಿಸಿದ್ದಾರೆ. ಇವರ ಜೋಡಿ ಕೋಟ್ಯಂತರ ವೀಕ್ಷಕರನ್ನು ಮೋಡಿ ಮಾಡಿದೆ. ಹಾಗಾಗಿ ಅವರು ಜೊತೆಯಾಗಿ ನಟಿಸಿದ ಚಿತ್ರಗಳು ಕೂಡ ಸೂಪರ್ ಹಿಟ್ ಆಗಿವೆ. ಸಲ್ಮಾನ್ ಖಾನ್ ಮತ್ತು ಅಕ್ಷಯ್ ಕುಮಾರ್ (Salman Khan-Akshay Kumar) ಚಲನಚಿತ್ರಗಳನ್ನು ನೀವು ಒಮ್ಮೆಯಾದರೂ ನೋಡಬೇಕು ಎಂದು ಬಯಸಿದ್ದರೆ ಅವರ  ಅಭಿನಯದ 4 ಅತ್ಯುತ್ತಮ ಸಿನಿಮಾಗಳ ಬಗ್ಗೆ ಇಲ್ಲಿದೆ ಮಾಹಿತಿ.

1. ಮುಜ್‌ ಸೇ ಶಾದಿ ಕರೋಗಿ

ನಟ ಸಲ್ಮಾನ್ ಖಾನ್ ಮತ್ತು ನಟ ಅಕ್ಷಯ್ ಕುಮಾರ್ ಅವರು ಇದರಲ್ಲಿ ಜೊತೆಯಾಗಿ ನಟಿಸಿದ್ದಾರೆ. ನಟಿ ಪ್ರಿಯಾಂಕಾ ಚೋಪ್ರಾ ಅವರು ಹಿರೋಯಿನ್ ಪಾತ್ರ ಮಾಡಿದ್ದಾರೆ. 2004ರಲ್ಲಿ ಬಿಡುಗಡೆಯಾದ ಈ ಚಿತ್ರ ಹಾಸ್ಯ ಹಾಗೂ ಪ್ರಣಯವನ್ನು ಒಳಗೊಂಡಿದೆ. ಇದು ಈಗ ಯೂಟ್ಯೂಬ್‌ನಲ್ಲಿ ಲಭ್ಯವಿದೆ. ಮುಜ್‌ ಸೇ ಶಾದಿ ಕರೋಗಿ ಚಿತ್ರದಲ್ಲಿ ಸಲ್ಮಾನ್ ಮತ್ತು ಅಕ್ಷಯ್ ರೂಮ್ ಮೇಟ್‌ಗಳಾಗಿದ್ದು, ಇಬ್ಬರು ಪ್ರಿಯಾಂಕಾ ಚೋಪ್ರಾ ಒಬ್ಬರನ್ನೇ  ಪ್ರೀತಿಸುತ್ತಾರೆ. ಅವರ ಈ ಪೈಪೋಟಿ ಮನರಂಜನೆ ಮತ್ತು ಪ್ರೀತಿಪಾತ್ರವಾಗಿಸುತ್ತದೆ. ಚಿತ್ರದಲ್ಲಿ ಅವರ ಹಾಸ್ಯಮಯ ಸಮಯ ಮತ್ತು ಅವರ ನಡುವಿನ ತಮಾಷೆ ಪ್ರೇಕ್ಷರರಿಗೆ ಮನೋರಂಜನೆಯನ್ನು ನೀಡುತ್ತದೆ.

2. ಜಾನ್-ಎ-ಮನ್

ಇದರಲ್ಲಿ ಕೂಡ ಸಲ್ಮಾನ್ ಖಾನ್, ಅಕ್ಷಯ್ ಕುಮಾರ್ ಜೊತೆಯಾಗಿ ನಟಿಸಿದ್ದಾರೆ. ಇದರಲ್ಲಿ ನಟಿ ಪ್ರೀತಿ ಜಿಂಟಾ ಹಿರೋಯಿನ್ ಆಗಿ ನಟಿಸಿದ್ದಾರೆ. 2006 ರಲ್ಲಿ ಬಿಡುಗಡೆಯಾದ ಈ ಚಿತ್ರ ಸಂಗೀತ  ಮತ್ತು ಪ್ರಣಯಕ್ಕೆ ಸಂಬಂಧಿಸಿದಾಗಿದೆ. ಇದು ಈಗ ಯೂಟ್ಯೂಬ್‌ನಲ್ಲಿ ನೋಡಲು ಸಿಗುತ್ತದೆ. ಈ ಚಿತ್ರದಲ್ಲಿ ಕೂಡ ಸಲ್ಮಾನ್ ಮತ್ತು ಅಕ್ಷಯ್ ಇಬ್ಬರು ಕೂಡ ಪ್ರೀತಿ ಜಿಂಟಾ ಅವರನ್ನೇ ಪ್ರೀತಿಸುತ್ತಿರುತ್ತಾರೆ. ಹಮ್ಕೊ ಮಾಲೂಮ್ ಹೈ ಮತ್ತು ಕೆಲವು  ಹಾಡುಗಳಲ್ಲಿ ಅವರ ಕೆಮಿಸ್ಟ್ರಿ ಚೆನ್ನಾಗಿ ಮೂಡಿಬಂದಿದೆ.

3. ತೀಸ್ ಮಾರ್ ಖಾನ್

2010ರಲ್ಲಿ ಬಿಡುಗಡೆಯಾದ ಈ ಚಿತ್ರ ಹಾಸ್ಯ, ಆಕ್ಷನ್ ನಿಂದ ಕೂಡಿದೆ. ಈ ಚಿತ್ರ ಈಗ ಯೂಟ್ಯೂಬ್‌ನಲ್ಲಿ ಲಭ್ಯವಿದೆ. ತೀಸ್ ಮಾರ್ ಖಾನ್ ಚಿತ್ರದಲ್ಲಿ  ಅಕ್ಷಯ್ ಕುಮಾರ್ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ ಮತ್ತು ಸಲ್ಮಾನ್ ಖಾನ್ ಅವರು ವಲ್ಲಾ ರೆ ವಾಲಾ ಹಾಡಿನಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಹೆಚ್ಚು ಪರದೆಯ ಸಮಯವನ್ನು ಹಂಚಿಕೊಳ್ಳದಿದ್ದರೂ, ಹಾಡಿನಲ್ಲಿ ಅವರ ಕೆಮಿಸ್ಟ್ರಿ ಸೂಪರ್ ಆಗಿ ಕಾಣಿಸಿದೆ. ಇದು ಚಿತ್ರದ ಪ್ರಮುಖ ಹೈಲೈಟ್ ಆಗಿದೆ.

4. ಫಗ್ಲಿ

2014ರಲ್ಲಿ ಬಿಡುಗಡೆಯಾದ ಈ ಚಿತ್ರ ಹಾಸ್ಯ ಮತ್ತು  ಥ್ರಿಲ್ಲರ್‌ನಿಂದ ಕೂಡಿದೆ. ಫಗ್ಲಿ ಚಿತ್ರದಲ್ಲಿ, ಸಲ್ಮಾನ್ ಮತ್ತು ಅಕ್ಷಯ್ ಚಿತ್ರದ ಟೈಟಲ್ ಸಾಂಗ್  ಫಗ್ಲಿ ಫಗ್ಲಿ ಕ್ಯಾ ಹೈನಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರಿಬ್ಬರ ಅಭಿನಯ ಮತ್ತು ಪರದೆಯ ಮೇಲೆ ಅವರ ಜೋಡಿ ಈ ಸಾಂಗ್ ಅನ್ನು ಸೂಪರ್ ಹಿಟ್ ಆಗಿಸಿದೆ.

ಇದನ್ನೂ ಓದಿ: ನೀತಾ ಅಂಬಾನಿ ಪ್ರಸ್ತುತಪಡಿಸಿದ್ದಾರೆ ವಿಷ್ಣುವಿನ ‘ದಶಾವತಾರ’ದ ಚಿತ್ರಣ; ವಿಡಿಯೊ ನೋಡಿ

ಸಲ್ಮಾನ್ ಖಾನ್ ಮತ್ತು ಅಕ್ಷಯ್ ಕುಮಾರ್ ತಮ್ಮ ಅಭಿನಯ ಮತ್ತು ಅಸಾಧಾರಣ ಕೆಮಿಸ್ಟ್ರಿಯಿಂದ ಬಾಲಿವುಡ್‌ನಲ್ಲಿ ಕೆಲವು ಮರೆಯಲಾಗದ ಕ್ಷಣಗಳನ್ನು ಸೃಷ್ಟಿಸಿದ್ದಾರೆ. ಅವರ ಚಲನಚಿತ್ರಗಳು, ಒಟ್ಟಿಗೆ ಅಥವಾ ವೈಯಕ್ತಿಕವಾಗಿ, ಪ್ರೇಕ್ಷಕರನ್ನು ರಂಜಿಸುತ್ತಲೇ ಇರುತ್ತವೆ. ಇದು ಅವರನ್ನು ಭಾರತೀಯ ಚಿತ್ರರಂಗದ ಐಕಾನ್‌ಗಳನ್ನಾಗಿ ಮಾಡುತ್ತವೆ.

Continue Reading

ಫ್ಯಾಷನ್

Natasha ponawala jewelled kurta: ರಿಯಲ್‌ ಜ್ಯುವೆಲ್ಡ್ ಕುರ್ತಾ ಧರಿಸಿದ್ದ ಏಕೈಕ ಫ್ಯಾಷನ್‌ ಐಕಾನ್‌ ನತಾಶಾರ ‘ಮೊಗಲ್‌ ರಾಣಿ’ ಲುಕ್‌!

ಜ್ಯುವೆಲ್‌ಭರಿತ ಬ್ಲೌಸ್‌ ಗೊತ್ತು! ಜ್ಯುವೆಲ್‌ ಸಹಿತ ಕುರ್ತಾ ಬಗ್ಗೆ ಗೊತ್ತೇ! ಫ್ಯಾಷನ್‌ ಐಕಾನ್‌ ನತಾಶ ಪೂನಾವಾಲ (Natasha ponawala jewelled kurta) ಈ ಪ್ರಯೋಗಾತ್ಮಕ ಡಿಸೈನರ್‌ವೇರ್‌ನಲ್ಲಿ ಮೊಗಲರ ರಾಣಿಯಂತೆ ಕಾಣಿಸಿಕೊಂಡಿದ್ದಾರೆ. ಏನಿದು ಜ್ಯುವೆಲ್ಡ್ ಕುರ್ತಾ? ಇದ್ಯಾವ ಬಗೆಯ ಔಟ್‌ಫಿಟ್‌? ಇಲ್ಲಿದೆ ಡಿಟೇಲ್ಸ್.

VISTARANEWS.COM


on

By

Natasha ponawala jeweled kurta
Koo
ಶೀಲಾ ಸಿ. ಶೆಟ್ಟಿ, ಬೆಂಗಳೂರು

ಫ್ಯಾಷನ್‌ ಐಕಾನ್‌ ನತಾಶ ಪೂನಾವಾಲ (Natasha ponawala jewelled kurta) ಜ್ಯುವೆಲ್‌ಭರಿತ ಕುರ್ತಾ ಸೆಟ್‌ನಲ್ಲಿ (kurta set) ಕಾಣಿಸಿಕೊಂಡಿರುವುದು, ಎಥ್ನಿಕ್‌ ಡಿಸೈನರ್ಸ್ (Ethnic Designers) ಲೋಕದಲ್ಲಿ ಡಿಸೈನರ್‌ಗಳ ಹುಬ್ಬೇರಿಸಿದೆ. ಹೌದು, ಅಂಬಾನಿ ಮದುವೆಯಲ್ಲಿ (ambani wedding) ಜ್ಯುವೆಲ್‌ ಭರಿತವಾದ ಡಿಸೈನರ್‌ ಸೀರೆ, ಲೆಹೆಂಗಾ ಬ್ಲೌಸ್‌ಗಳನ್ನು ಕಣ್ಣಾರೆ ಕಂಡು ಪಾವನರಾಗಿದ್ದ ಫ್ಯಾಷನ್‌ ಪ್ರಿಯರು ಇದೀಗ ನತಾಶರ ಆಭರಣಗಳಿಂದಲೇ ಸಿದ್ಧಪಡಿಸಿದ್ದ ಜ್ಯುವೆಲ್ಡ್ ಕುರ್ತಾ ಕಂಡು ದಂಗಾಗಿದ್ದಾರೆ.

ಸದಾ ಪ್ರಯೋಗಾತ್ಮಕ ಡಿಸೈನರ್‌ವೇರ್ ಧರಿಸುವ ನತಾಶ

ಮಾಡರ್ನ್‌ ಡ್ರೆಸ್‌ಗೂ ಸೈ, ಆಂಟಿಕ್‌ ಡಿಸೈನ್‌ನ ಎಥ್ನಿಕ್‌ವೇರ್‌ಗಳಿಗೂ ಸೈ ಎನ್ನುವ ನತಾಶ, ಅಂಬಾನಿಯವರ ಮದುವೆಗೆಂದು ವಿದೇಶದಿಂದ ಇಲ್ಲಿಗೆ ಹಾರಿ ಬಂದಿದ್ದರು. ಆದರೆ, ಅವರ ಔಟ್‌ಫಿಟ್‌ ಕಡೆ ಯಾರೂ ಹೆಚ್ಚಾಗಿ ಗಮನ ನೀಡಲಿಲ್ಲ! ಆದರೆ, ಇದೀಗ ಸೆಲೆಬ್ರೆಟಿ ಡಿಸೈನರ್‌ ಅಬು ಜಾನಿ ಸಂದೀಪ್‌ ಅವರು ನತಾಶ ಅವರಿಗಾಗಿ ಸಿದ್ಧಪಡಿಸಿದ್ದ ವಿಶೇಷ ಜ್ಯುವೆಲ್ಡ್ ಕುರ್ತಾ ಸೆಟ್ಟಿನ ವಿನ್ಯಾಸವನ್ನು ಅನಾವರಣಗೊಳಿಸಿದ್ದಾರೆ.

Natasha ponawala jeweled kurta

ಎಥ್ನಿಕ್‌ವೇರ್‌ ಡಿಸೈನರ್‌ಗಳ ಕಣ್ಣರಳಿಸಿದ ಜ್ಯುವೆಲ್ಡ್ ಕುರ್ತಾ

ಕುರ್ತಾ ಎಂದಾಕ್ಷಣ ಮಾರುದ್ದ ಇರುವ ಡಿಸೈನ್‌ ಟಾಪ್‌ ಅಲ್ಲ, ಶಾರ್ಟ್ ಲೆಂಥ್‌ನ ಕುರ್ತಾ ಶೈಲಿ ಹೋಲುವಂತಹ ಉಡುಗೆಯಿದು. ರಾಣಿ-ಮಹಾರಾಣಿಯರು ಅದರಲ್ಲೂ ಮೊಗಲರ ರಾಣಿಯರು ಧರಿಸುತ್ತಿದ್ದ ಡಿಸೈನ್‌ ಇದು ಎನ್ನಲಾಗಿದೆ. ಆದರೆ, ಅಂದು ಆ ಮಹಾರಾಣಿಯರು ಈ ಮಟ್ಟಿಗೆ ಆಭರಣಗಳಿಂದಲೇ ಡಿಸೈನ್‌ ಮಾಡಿಸಿದ ಕುರ್ತಾ ಧರಿಸಿದ್ದರೋ ಇಲ್ಲವೋ ಗೊತ್ತಿಲ್ಲ! ಆದರೆ, ಈ ಕಲಿಯುಗದಲ್ಲಿ ನತಾಶ ಈ ಜ್ಯುವೆಲ್ಡ್‌ ಕುರ್ತಾ ಧರಿಸಿ ಮೆರೆದಿದ್ದಾರೆ.

ಹಿಸ್ಟರಿ ರೀ ಕ್ರಿಯೇಟ್‌ ಮಾಡಿದ್ದಾರೆ ಎಂದಿದ್ದಾರೆ ಫ್ಯಾಷನ್‌ ವಿಶ್ಲೇಷಕರು. ಇನ್ನು, ಫ್ಯಾಷನಿಸ್ಟಾ ಪ್ರಸಾದ್‌ ಬಿದ್ದಪ್ಪ ಹೇಳುವಂತೆ, ಇದೊಂದು ಪ್ರಯೋಗಾತ್ಮಕ ಎಥ್ನಿಕ್‌ವೇರ್‌ ಎಲ್ಲರಿಗೂ ಇಂತಹ ಡಿಸೈನರ್‌ವೇರ್‌ ಪ್ರಯೋಗಿಸಲು ಸಾಧ್ಯವಿಲ್ಲ ಎಂದಿದ್ದಾರೆ. ನತಾಶ ತಕ್ಕಣಕ್ಕೆ ನೋಡಲು ಮೊಗಲರ ರಾಣಿಯಂತೆ ಕಂಗೊಳಿಸಿದ್ದಾರೆ ಎಂದಿದ್ದಾರೆ ಸ್ಟೈಲಿಸ್ಟ್ ಜನಕ್‌.

Natasha ponawala jeweled kurta


ಜ್ಯುವೆಲ್ಡ್ ಕುರ್ತಾ ಸೆಟ್‌ ವಿನ್ಯಾಸದ ಗುಟ್ಟು

ಮದುವೆಯಲ್ಲಿ ಮುಖದ ಮುಂದೆ ಧರಿಸುವ ಮದುಮಗನ ಸೆಹ್ರಾ ಡಿಸೈನಿಂದ ಸ್ಪೂರ್ತಿಗೊಂಡು, ಈ ಜ್ಯುವೆಲ್ಡ್ ಶಾರ್ಟ್ ಕುರ್ತಾ ಡಿಸೈನ್‌ ಮಾಡಲಾಗಿದೆ ಎಂದು ಹೇಳಿಕೊಂಡಿದ್ದಾರೆ ಡಿಸೈನರ್‌ ಅಬುಜಾನಿ ಸಂದೀಪ್‌ ಕೋಸ್ಲಾ. ಅವರು ಹೇಳುವಂತೆ, ಈ ಕುರ್ತಾದಲ್ಲಿ ಬೀಡ್ಸ್, ಪ್ರಿಶಿಯಸ್‌ ಸ್ಟೋನ್ಸ್, ಪರ್ಲ್ಸ್ ಎಲ್ಲವನ್ನು ಅತಿ ಸೂಕ್ಷ್ಮವಾಗಿ ಹೆಣೆಯಲಾಗಿದೆ. ಇದನ್ನು ದೇಸಿ ಮೂಲ ಕಲಾಕಾರರಿಂದ ಹೆಣೆಸಲಾಗಿದೆ. ಸ್ಟ್ರಿಂಗ್ಸ್ನಂತೆ ವಿನ್ಯಾಸ ಮಾಡಿ, ಕುರ್ತಾ ರೂಪ ನೀಡಲಾಗಿದೆ.

ಇದನ್ನೂ ಓದಿ: Golden Designer Fashion Wears: ವೆಡ್ಡಿಂಗ್‌ ಫ್ಯಾಷನ್‌ನಲ್ಲಿ ಟ್ರೆಂಡಿಯಾದ 3 ಶೈಲಿಯ ಗೋಲ್ಡನ್‌ ಡಿಸೈನರ್‌ವೇರ್ಸ್!

ಇದಕ್ಕೆ ಶರಾರ ಶೈಲಿಯಲ್ಲಿರುವ ಅಗಲವಾದ ಸ್ಕರ್ಟ್ ಶೈಲಿಯ ಪ್ಯಾಂಟ್‌ಗಳನ್ನು ಬನಾರಸಿ ಬಾಂದನಿ ಬ್ರೋಕೆಡ್‌ನಿಂದ ವಿನ್ಯಾಸಗೊಳಿಸಲಾಗಿದೆ. ಡಾಕಾದ ಬಾಂದನಿ ಸೀರೆಯಿಂದ ದುಪಟ್ಟಾ ರೂಪಿಸಲಾಗಿದೆ. ಇನ್ನು, ನತಾಶ ತಮ್ಮ ಹೇರ್‌ಸ್ಟೈಲ್‌ಗೆ ಅಜ್ಜಿಯ ಗಿಫ್ಟ್ ಆಂಟಿಕ್‌ ಬಂಗಾರದ ಹಾರವನ್ನು ಧರಿಸಿದ್ದಾರೆ. ಇದು ಕಂಪ್ಲೀಟ್‌ ಮೊಗಲರ ರಾಣಿಯಂತೆ ಆಕೆಯನ್ನು ಬಿಂಬಿಸಿದೆ ಎನ್ನುತ್ತಾರೆ ಫ್ಯಾಷನಿಸ್ಟಾಗಳು.

(ಲೇಖಕಿ : ಫ್ಯಾಷನ್‌ ಪರ್ತಕರ್ತೆ)
Continue Reading

Latest

Sexual Abuse : ಬಿಸ್ಕೆಟ್‌ಗೆ ಆಸೆ ಪಟ್ಟು ಹೋಗಿದ್ದ ಪುಟ್ಟ ಬಾಲಕಿ ಕಾಮುಕನ ಕೈಗೆ ಸಿಕ್ಕಿ ಕೊಲೆಯಾದಳು

Sexual Abuse: ಚಿಕ್ಕಮಕ್ಕಳು, ಚಾಕೋಲೆಟ್ ಐಸ್‌ಕ್ರೀಂ, ಬಿಸ್ಕತ್ ಕೊಟ್ಟರೆ ಯಾರೇ ಕರೆದರೂ ಬಂದು ಬಿಡುತ್ತಾರೆ. ಮಕ್ಕಳಿಗೆ ಯಾರು ಒಳ್ಳೆಯವರು, ಯಾರು ಕೆಟ್ಟವರು ಎಂಬ ಪರಿವೆ ಇರುವುದಿಲ್ಲ. ತಿಂಡಿಯ ಮೇಲಿನ ಆಸೆಗೆ ಅವರು ಯಾರೇ ಕರೆದರೂ ಹೋಗಿ ಬಿಡುತ್ತಾರೆ. ಇಲ್ಲೊಬ್ಬಳು ಬಾಲಕಿ ಬಿಸ್ಕೆತ್‌ನ ಆಮಿಷಕ್ಕೆ ಒಳಗಾಗಿ ಕಾಮುಕನ ಕೈಗೆ ಸಿಲುಕಿ ಜೀವವನ್ನೇ ಕಳೆದುಕೊಂಡಿದ್ದಾಳೆ. ಗಾಂಜಾ ಪ್ರಭಾವದಲ್ಲಿ ಕಾರ್ಮಿಕನೊಬ್ಬ ಈ ಹೀನ ಕೃತ್ಯ ಎಸಗಿದ್ದಾನೆ.

VISTARANEWS.COM


on

Sexual Abuse
Koo


ದಿನೇದಿನೇ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ. ಕಾಮುಕರ ಕೆಟ್ಟ ಚಟಕ್ಕೆ ಬಾಲಕಿಯರು ಬಲಿಯಾಗುತ್ತಿದ್ದಾರೆ. ಇದೀಗ ಆಂಧ್ರಪ್ರದೇಶದ ತಿರುಪತಿಯಲ್ಲಿ ಭಯಾನಕ ಅತ್ಯಾಚಾರ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Sexual Abuse)ಆಗಿದೆ. ಜನರು ಘಟನೆ ನೋಡಿ ಬೆಚ್ಚಿಬಿದ್ದಿದ್ದಾರೆ.

ದೋರಾವರಿಸತ್ರಮ್ ಮಂಡಲದ ನೆಲಬಳ್ಳಿ ಗ್ರಾಮದಲ್ಲಿ ಜುಲೈ 17ರಂದು ಈ ಘಟನೆ ನಡೆದಿದ್ದು, ಗಾಂಜಾ ಪ್ರಭಾವದಲ್ಲಿ ಕಾರ್ಮಿಕನೊಬ್ಬ ಎಂಟು ವರ್ಷದ ಬಾಲಕಿಯನ್ನು ಕಾಡಿಗೆ ಕರೆದೊಯ್ದು ಆಕೆಯ ಮೇಲೆ ಕ್ರೂರವಾಗಿ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದಾನೆ. ವರದಿ ಪ್ರಕಾರ, ಬಿಹಾರ ಮೂಲದ ಆರೋಪಿ, ಸ್ಥಳೀಯ ಅಕ್ಕಿ ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದು, ಬಿಸ್ಕತ್ತು ನೀಡುವ ನೆಪದಲ್ಲಿ ಬಾಲಕಿಯನ್ನು ಹತ್ತಿರದ ಕಾಡಿಗೆ ಕರೆದೊಯ್ದಿದ್ದಾನೆ. ಯಾರೂ ಇಲ್ಲದ ಆ ಪ್ರದೇಶದಲ್ಲಿ, ಅವನು ಅವಳ ಮೇಲೆ ಅತ್ಯಾಚಾರ ಎಸಗಿ ಕ್ರೂರವಾಗಿ ಕೊಲೆ ಮಾಡಿದ್ದಾನೆ. ಘಟನೆಯ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಬೆಳಗ್ಗೆ ಬಾಲಕಿ ಕಾಣೆಯಾದ ನಂತರ, ಅವಳ ಪೋಷಕರು ದಿನವಿಡೀ ಅವಳನ್ನು ಹುಡುಕಿದರು. ಗ್ರಾಮದ ಹೊರವಲಯದಲ್ಲಿರುವ ಅರಣ್ಯ ಪ್ರದೇಶದಲ್ಲಿ ದನಕಾಯುವವರು ಶವವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಾಲಕಿ ಬಿಹಾರದ ದರ್ಭಾಂಗ ಜಿಲ್ಲೆಯ ವಲಸೆ ಕಾರ್ಮಿಕನ ಮಗಳಾಗಿದ್ದು, ಶಂಕಿತ ಕೂಡ ಅದೇ ರಾಜ್ಯದವನಾಗಿದ್ದ. ತಿರುಪತಿ ಜಿಲ್ಲಾ ಎಸ್ಪಿ ಎಲ್ ಸುಬ್ಬರಾಯುಡು ಅವರ ಪ್ರಕಾರ, ಬಿಹಾರದಿಂದ ಸುಮಾರು 40 ಜನರು ಎರಡು ತಿಂಗಳ ಹಿಂದೆ ನೆಲಬಳ್ಳಿ ಗ್ರಾಮದ ಬಳಿಯ ಧನ್ಯಲಕ್ಷ್ಮಿ ಅಕ್ಕಿ ಗಿರಣಿಯಲ್ಲಿ ಕೆಲಸ ಮಾಡಲು ಬಂದಿದ್ದರು. ಅವರಲ್ಲಿ ಒಬ್ಬ ಅಡುಗೆಯವನು ತನ್ನ ಎಂಟು ವರ್ಷದ ಮಗಳನ್ನು ಕರೆತಂದಿದ್ದನು. ಆಕೆಯೇ ಈಗ ಕೊಲೆಯಾದ ಬಾಲಕಿ ಎನ್ನಲಾಗಿದೆ.

ಇದನ್ನೂ ಓದಿ: ಬಡಪಾಯಿ ಡೆಲಿವರಿ ಮ್ಯಾನ್‌ನನ್ನು ಭೀಕರವಾಗಿ ಕಚ್ಚಿದ ಶ್ರೀಮಂತರ ಮನೆಯ ನಾಯಿಗಳು; ವಿಡಿಯೊ ಇದೆ

ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರದ ಮತ್ತೊಂದು ಪ್ರಕರಣ ಮಧ್ಯಪ್ರದೇಶದಲ್ಲಿ ನಡೆದಿರುವುದಾಗಿ ಬೆಳಕಿಗೆ ಬಂದಿದೆ. ಚಲಿಸುತ್ತಿದ್ದ ಕಾರಿನಲ್ಲಿ 9ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ. ಅಲ್ಲದೆ, ಆರೋಪಿಗಳು ಅಪ್ರಾಪ್ತೆಯ ಅಶ್ಲೀಲ ವೀಡಿಯೊವನ್ನು ಚಿತ್ರೀಕರಿಸಿ ಅವಳ ಕುಟುಂಬ ಸದಸ್ಯರಿಗೆ ಕಳುಹಿಸಿದ್ದಾರೆ. ಇದಕ್ಕೆ ಸಂಬಂಧಪಟ್ಟಂತೆ ಕುಟುಂಬದವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಆದರೆ ಆರೋಪಿಗಳು ಪರಾರಿಯಾಗಿದ್ದು, ಪೊಲೀಸರು ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

Continue Reading
Advertisement
Sexual Abuse
Latest10 mins ago

Sexual Abuse: ಬಾಲಕಿ ಮೇಲೆ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ; ವಿಡಿಯೊ ಮನೆಗೇ ಕಳಿಸಿದ ದುಷ್ಟರು

Actor Darshan
ಕರ್ನಾಟಕ55 mins ago

Actor Darshan: ದರ್ಶನ್‌ಗಿಲ್ಲ ಮನೆಯೂಟ ತಿನ್ನೋ ಭಾಗ್ಯ; ಅರ್ಜಿ ವಿಚಾರಣೆ ಜು.29ಕ್ಕೆ ಮುಂದೂಡಿಕೆ

Keshav Prasad Maurya
ದೇಶ1 hour ago

Keshav Prasad Maurya: ʼಮಾನ್ಸೂನ್‌ ಆಫರ್‌ʼ ಕೊಟ್ಟ ಅಖಿಲೇಶ್‌ ಯಾದವ್‌ಗೆ ಬಿಜೆಪಿ ಟಾಂಗ್‌

karnataka Weather Forecast
ಮಳೆ1 hour ago

Karnataka Weather : ವಾಯುಭಾರ ಕುಸಿತ ಎಫೆಕ್ಟ್‌; ವಾರಾಂತ್ಯದಲ್ಲಿ ಭಾರಿ ಮಳೆ ಎಚ್ಚರಿಕೆ, ಶಾಲೆಗಳಿಗೆ ರಜೆ ಘೋಷಣೆ

Salman Khan-Akshay Kumar
Latest1 hour ago

Salman Khan-Akshay Kumar: ಸಲ್ಮಾನ್ ಖಾನ್ – ಅಕ್ಷಯ್ ಕುಮಾರ್ ಜೋಡಿಯಾಗಿ ನಟಿಸಿದ 4 ಅತ್ಯುತ್ತಮ ಚಿತ್ರಗಳಿವು!

Bengaluru power cut July 20th power outage in many parts of Bengaluru
ಬೆಂಗಳೂರು1 hour ago

Bengaluru Power Cut: ಬೆಂಗಳೂರಿನ ಹಲವೆಡೆ ನಾಳೆ ಕರೆಂಟ್‌ ಇರಲ್ಲ!

Congress creates colorful stories only during elections Minister Pralhad Joshi alleges
ಕರ್ನಾಟಕ1 hour ago

Pralhad Joshi: ಚುನಾವಣೆ ವೇಳೆ ಮಾತ್ರ ಕಾಂಗ್ರೆಸ್ ಬಣ್ಣ ಬಣ್ಣದ ಕಥೆ ಕಟ್ಟುತ್ತದೆ: ಪ್ರಲ್ಹಾದ್‌ ಜೋಶಿ

Natasha ponawala jeweled kurta
ಫ್ಯಾಷನ್1 hour ago

Natasha ponawala jewelled kurta: ರಿಯಲ್‌ ಜ್ಯುವೆಲ್ಡ್ ಕುರ್ತಾ ಧರಿಸಿದ್ದ ಏಕೈಕ ಫ್ಯಾಷನ್‌ ಐಕಾನ್‌ ನತಾಶಾರ ‘ಮೊಗಲ್‌ ರಾಣಿ’ ಲುಕ್‌!

Kubusa Kannada film release on 26th July
ಕರ್ನಾಟಕ1 hour ago

Kannada New Movie: ಜು.26ರಂದು ’ಕುಬುಸʼ ಚಿತ್ರ ರಾಜ್ಯಾದ್ಯಂತ ಬಿಡುಗಡೆ

Paris Olympics 2024
ಪ್ರಮುಖ ಸುದ್ದಿ2 hours ago

Paris Olympics 2024 : ಒಲಿಂಪಿಕ್ಸ್​ನಲ್ಲಿ ಸ್ಪರ್ಧಿಸಲಿರುವ 117 ಭಾರತೀಯ ಕ್ರೀಡಾಪಟುಗಳ ಸಂಪೂರ್ಣ ವಿವರ ಇಲ್ಲಿದೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ6 hours ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ7 hours ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ1 day ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ1 day ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ3 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ4 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ4 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ5 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ5 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

ಟ್ರೆಂಡಿಂಗ್‌