Amnesia Disease: ಈ ಗ್ರಾಮದಲ್ಲಿರುವ ಎಲ್ಲರೂ ಮರೆಗುಳಿಗಳು! ಇಲ್ಲಿ ಏನು ಖರೀದಿಸಿದರೂ ದುಡ್ಡೇ ಕೇಳುವುದಿಲ್ಲ! - Vistara News

Latest

Amnesia Disease: ಈ ಗ್ರಾಮದಲ್ಲಿರುವ ಎಲ್ಲರೂ ಮರೆಗುಳಿಗಳು! ಇಲ್ಲಿ ಏನು ಖರೀದಿಸಿದರೂ ದುಡ್ಡೇ ಕೇಳುವುದಿಲ್ಲ!

Amnesia Disease: ಫ್ರಾನ್ಸ್‌ನ ಲ್ಯಾಂಡೈಸ್ ಗ್ರಾಮವು ದೇಶದ ಇತರ ಸ್ಥಳಗಳಿಗಿಂತ ತುಂಬಾ ಭಿನ್ನವಾಗಿದೆ. ಯಾಕೆಂದರೆ ಇಲ್ಲಿ, ಪ್ರತಿಯೊಬ್ಬ ನಿವಾಸಿಯೂ ಮರೆಗುಳಿತನದಿಂದ ಬಳಲುತ್ತಿದ್ದಾರೆ. 2020ರಲ್ಲಿ ಅಲ್ಝೈಮರ್ ವಿರುದ್ಧ ಹೋರಾಡುವ ಜನರಿಗೆ ಪ್ರಾಯೋಗಿಕ ಸಮುದಾಯವಾಗಿ ಲ್ಯಾಂಡೈಸ್ ಗ್ರಾಮವನ್ನು ಸ್ಥಾಪಿಸಲಾಯಿತು. ಇದನ್ನು ಬೋರ್ಡೆಕ್ಸ್ ವಿಶ್ವವಿದ್ಯಾಲಯದ ಸಂಶೋಧಕರ ಸಲಹೆ ಮೇರೆಗೆ ಸ್ಥಾಪಿಸಲಾಗಿದೆ. ಇದು ಅಲ್ಝೈಮರ್ ಪೀಡಿತ ರೋಗಿಗಳನ್ನು ನೋಡಿಕೊಳ್ಳಲು ಮತ್ತು ಅವರ ಜೀವನದ ಗುಣಮಟ್ಟವನ್ನು ಸುಧಾರಿಸುವ ಗುರಿಯನ್ನು ಹೊಂದಿದೆ.

VISTARANEWS.COM


on

Unique Village
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ


ಸಾಮಾನ್ಯವಾಗಿ ಮರೆಗುಳಿತನ ಸಮಸ್ಯೆ ವಯಸ್ಸಾದಂತೆ ಕಾಡುತ್ತದೆ. ಆದರೆ ಇತ್ತೀಚೆಗೆ ಇದು ಹೆಚ್ಚಿನ ಜನರಲ್ಲಿ ಕಂಡುಬರುವ ಸಮಸ್ಯೆಯಾಗಿದೆ. ಆದರೆ ಇಲ್ಲೊಂದು ವಿಚಿತ್ರವಾದ ಗ್ರಾಮವಿದೆ. ಈ ಗ್ರಾಮದಲ್ಲಿ ಬರೀ ಮರೆಗುಳಿತನ (Amnesia Disease) ಸಮಸ್ಯೆಯಿಂದ ಬಳಲುತ್ತಿರುವ ಜನರೇ ತುಂಬಿದ್ದಾರೆ. ಇಲ್ಲಿನ ಜನರಿಗೆ ಹಣದ ಅವಶ್ಯಕತೆಯೇ ಇಲ್ಲವಂತೆ. ಹಾಗಾದ್ರೆ ಈ ಗ್ರಾಮದಲ್ಲಿನ ಜನರು ಯಾಕೆ ಹೀಗಿದ್ದಾರೆ? ಇದಕ್ಕೆ ಕಾರಣವೇನು ಎಂಬುದರ ಮಾಹಿತಿ ಇಲ್ಲಿದೆ.

ಫ್ರಾನ್ಸ್‌ನ ಲ್ಯಾಂಡೈಸ್ ಗ್ರಾಮವು ದೇಶದ ಇತರ ಸ್ಥಳಗಳಿಗಿಂತ ತುಂಬಾ ಭಿನ್ನವಾಗಿದೆ. ಯಾಕೆಂದರೆ ಇಲ್ಲಿ ಪ್ರತಿಯೊಬ್ಬ ನಿವಾಸಿಯೂ ಮರೆಗುಳಿತನದಿಂದ ಬಳಲುತ್ತಿದ್ದಾರೆ. 2020ರಲ್ಲಿ ಅಲ್ಝೈಮರ್ ವಿರುದ್ಧ ಹೋರಾಡುವ ಜನರಿಗೆ ಪ್ರಾಯೋಗಿಕ ಸಮುದಾಯವಾಗಿ ಲ್ಯಾಂಡೈಸ್ ಗ್ರಾಮವನ್ನು ಸ್ಥಾಪಿಸಲಾಯಿತು. ಇದನ್ನು ಬೋರ್ಡೆಕ್ಸ್ ವಿಶ್ವವಿದ್ಯಾಲಯದ ಸಂಶೋಧಕರ ಸಲಹೆ ಮೇರೆಗೆ ಸ್ಥಾಪಿಸಲಾಗಿದೆ. ಇದು ಅಲ್ಝೈಮರ್ ಪೀಡಿತ ರೋಗಿಗಳನ್ನು ನೋಡಿಕೊಳ್ಳಲು ಮತ್ತು ಅವರ ಜೀವನದ ಗುಣಮಟ್ಟವನ್ನು ಸುಧಾರಿಸುವ ಗುರಿಯನ್ನು ಹೊಂದಿದೆ.

ಅಲ್ಲದೇ ಲಾಂಡೈಸ್ ಗ್ರಾಮದಲ್ಲಿ ವಾಸಿಸುವ ಯಾರೂ ಹಣವನ್ನು ಸಂಪಾದಿಸುವ ಅವಶ್ಯಕತೆಯಿಲ್ಲ. ಹಾಗಾಗಿ ಅವರು ಆ ಗ್ರಾಮದಲ್ಲಿ ಎಲ್ಲಿಗೇ ಹೋಗುವುದಾದರೂ ತಮ್ಮ ಪರ್ಸ್‌ಗಳನ್ನು ತೆಗೆದುಕೊಂಡು ಹೋಗಬೇಕಾಗಿಲ್ಲ. ಯಾಕೆಂದರೆ ಈ ಗ್ರಾಮದಲ್ಲಿರುವ ಯಾವ ಅಂಗಡಿಗಳೂ ಹಣವನ್ನು ಸ್ವೀಕರಿಸುವುದಿಲ್ಲ. ಅಲ್ಲದೇ ಈ ಗ್ರಾಮದಲ್ಲಿ ವಾಸಿಸಲು ಗ್ರಾಮಸ್ಥರು ವಾರ್ಷಿಕ € 28,000 ಶುಲ್ಕವನ್ನು ಪಾವತಿಸಿದರೆ ಸಾಕು. ಹೆಚ್ಚಿನ ನಿರ್ವಹಣಾ ವೆಚ್ಚಗಳನ್ನು ಪ್ರಾದೇಶಿಕ ಫ್ರೆಂಚ್ ಸರ್ಕಾರ ನೋಡಿಕೊಳ್ಳುತ್ತದೆ.

ಈ ಗ್ರಾಮದಲ್ಲಿ ಒಂದು ಮಹಡಿಯ ಮನೆಗಳಿರುತ್ತದೆ. ಪ್ರತಿಯೊಂದೂ ಮನೆಯಲ್ಲಿ ಎಂಟು ನಿವಾಸಿಗಳು ವಾಸವಾಗಿರುತ್ತಾರೆ. ಪ್ರತಿ ಮನೆ ಅಡುಗೆಮನೆ, ಕುಳಿತುಕೊಳ್ಳುವ ಮತ್ತು ಊಟದ ಕೋಣೆಗಳನ್ನು ಹೊಂದಿರುತ್ತದೆ. ಈ ಗ್ರಾಮದಲ್ಲಿ ಸುಮಾರು 120 ಜನರಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲದೇ ಈ ಗ್ರಾಮದಲ್ಲಿ ರೋಗಿಗಳ ಸೇವೆ ಮಾಡಲು ವೈದ್ಯರು, ನರ್ಸ್‌ಗಳು , ಜೆರೊಂಟೋಲಾಜಿಕಲ್ ಸಹಾಯಕರು, ಮನಶ್ಶಾಸ್ತ್ರಜ್ಞರು, ಔದ್ಯೋಗಿಕ ಚಿಕಿತ್ಸಕ, ಸೈಕೋಮೋಟರ್ ಥೆರಪಿಸ್ಟ್, ಆನಿಮೇಟರ್ಗಳು, ಜೊತೆಗೆ ಅಡುಗೆಯವರು, ಆಡಳಿತ ಸಿಬ್ಬಂದಿ ಇತ್ಯಾದಿಗಳನ್ನು ಒಳಗೊಂಡ ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಾರೆ.

ಇದನ್ನೂ ಓದಿ:  ಎಸ್ಕಲೇಟರ್ ಮೇಲೆ ಮಗುವನ್ನು ನಿಲ್ಲಿಸಲು ತಾಯಿಯ ಕಸರತ್ತು; ಮುಂದೇನಾಯ್ತು ನೋಡಿ

65 ವರ್ಷದ ಪ್ಯಾಟ್ರೀಷಿಯಾ ಎಂಬ ಲಾಂಡೈಸ್ ನಿವಾಸಿಯೊಬ್ಬರು ಈ ಗ್ರಾಮದ ಬಗ್ಗೆ ಸುದ್ದಿವಾಹಿನಿಯೊಂದರ ಜೊತೆ ಮಾತನಾಡಿ, “ಅಲ್ಝೈಮರ್ ರೋಗಕ್ಕೆ ಒಳಗಾದರೆ ಜೀವನ ಅಷ್ಟೊಂದು ಸುಲಭವಲ್ಲ ಎಂದು ನನಗೆ ತಿಳಿದಿತ್ತು. ಹಾಗಾಗಿ ನಾನು ಭಯಭೀತನಾಗಿದ್ದೆ. ನನಗೆ ಆರೋಗ್ಯ ಸರಿಯಿರಲಿಲ್ಲ. ನಾನು ದಣಿದಿದ್ದೆ. ಹಾಗಾಗಿ ನನಗೆ ಸಹಾಯ ಮಾಡಬಹುದಾದ ಯಾವುದಾದರೊಂದು ಆಶ್ರಮದಲ್ಲಿ ಇರಲು ಬಯಸುತ್ತಿದ್ದೆ. ಆದರೆ ಲಾಂಡೈಸ್ ನನ್ನ ಜೀವನವನ್ನು ಮರಳಿ ನೀಡಿದೆ. ಅಲ್ಲಿ ನನಗಾಗಿ ಅಡುಗೆ ಮಾಡಲು ಒಬ್ಬ ಮಹಿಳೆ ಇದ್ದಳು. ಇತರ ಆರೈಕೆ ಮನೆಗಳಲ್ಲಿ ಈ ತರಹದ ಸೌಲಭ್ಯಗಳಿರುವುದಿಲ್ಲ. ಆದರೆ ಇಲ್ಲಿ, ಜೀವನ ತುಂಬಾ ಸುಂದರವಾಗಿತ್ತು” ಎಂದು ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

VISTARANEWS.COM


on

ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರಿ ಏರಿಕೆ ಮಾಡಲಾಗಿದೆ. ತೈಲ ಕಂಪನಿಗಳು ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತಲಾ ₹3 ರೂಪಾಯಿಗಳನ್ನು ಹೆಚ್ಚಿಸಿವೆ. ಇಂದಿನಿಂದಲೇ ಹೊಸ ದರ ಜಾರಿಗೆ ಬಂದಿದ್ದು, ವಾಹನ ಸವಾರರು ಅಕ್ಷರಶಃ ಕಂಗಾಲಾಗಿದ್ದಾರೆ. ಅಮೆರಿಕ-ಇರಾನ್​ ಯುದ್ಧದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಡೀಸೆಲ್, ಪೆಟ್ರೋಲ್ ದುಬಾರಿಯಾಗಿದೆ. ಕಳೆದ ಒಂದು ವರ್ಷದಲ್ಲಿ ಮೊದಲ ಸಲ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ರೂ. 94.77 ರಿಂದ ರೂ. 97.77ಕ್ಕೆ ಏರಿಕೆಯಾದರೆ, ಡೀಸೆಲ್ ದರ ರೂ.89.67 ರಿಂದ ರೂ.90.67ಕ್ಕೆ ಹೆಚ್ಚಳವಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ಸುಮಾರು 102.84 ರೂಪಾಯಿ ಇತ್ತು. ದರ ಏರಿಕೆ ಬೆನ್ನಲ್ಲೇ ಪೆಟ್ರೋಲ್ 106.17 ರೂಪಾಯಿಗೆ ತಲುಪಿದೆ. ನಿನ್ನೆ 90.99 ರೂಪಾಯಿ ಇದ್ದ ಡೀಸೆಲ್ ಬೆಲೆ ಇಂದಿನಿಂದ 94.10 ರೂಪಾಯಿಗೆ ಏರಿಕೆಯಾಗಿದೆ. ಪ್ರತಿ ಲೀಟರ್‌ಗೆ 3.14 ರೂಪಾಯಿ ಹೆಚ್ಚಳ ಆಗಿದೆ.

Continue Reading

Latest

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

VISTARANEWS.COM


on

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌, ಇನ್ನು ಒಂದು ವರ್ಷ ಬಿಡುಗಡೆ ಆಗುವ ಸಾಧ್ಯತೆ ಇಲ್ಲ. ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿರುವ ನಟ ದರ್ಶನ್‌ಗೆ, ನ್ಯಾಯಪೀಠ ಬಿಗ್ ಶಾಕ್ ಕೊಟ್ಟಿದೆ. ನಟ ದರ್ಶನ್ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇನ್ನು ಒಂದು ವರ್ಷ ಜಾಮೀನು ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ವಿಚಾರಣೆಯಲ್ಲಿ ಒಂದು ವರ್ಷ ಯಾವುದೇ ಪ್ರಗತಿಯಾಗದೇ ಇದ್ದಲ್ಲಿ ಮತ್ತೊಮ್ಮೆ ಜಾಮೀನಿಗೆ ಅರ್ಜಿ ಸಲ್ಲಿಸಬಹುದು ಎಂದು ಸರ್ವೋಚ್ಛ ನ್ಯಾಯಾಲಯ ಹೇಳಿದೆ. ಮುಂದಿನ ಒಂದು ವರ್ಷದಲ್ಲಿ ಬಾಕಿ ಇರುವ 60 ಪ್ರಮುಖ ಸಾಕ್ಷಿಗಳ ವಿಚಾರಣೆ ನಡೆಸಬೇಕು ಎಂದು ಜಿ. ಬಿ ಪಾರ್ದಿವಾಲಾ ನೇತೃತ್ವದ ನ್ಯಾಯಪೀಠ ಹೇಳಿದೆ.
ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಸುಪ್ರೀಂಕೋರ್ಟ್​​ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಸಾಕ್ಷ್ಯಗಳ ವಿಚಾರಣೆಯಲ್ಲಿ ವಿಳಂಬ, ಜೈಲಿನಲ್ಲಿ ಸೌಲಭ್ಯಗಳ ಕೊರತೆ, ಕುಟುಂಬವನ್ನು ಭೇಟಿ ಮಾಡಲು ಜೈಲಾಧಿಕಾರಿಗಳಿಂದ ಅವಕಾಶ ನಿರಾಕರಣೆ, ಆರೋಗ್ಯ ಸಮಸ್ಯೆ, ಸಹ ಕೈದಿಗಳಿಂದ ಕಿರುಕುಳ, ಬೆದರಿಕೆ, ಇನ್ನೂ ಕ್ವಾರಂಟೈನ್ ಸೆಲ್​​ನಲ್ಲಿ ಇಟ್ಟಿರುವುದು ಹೀಗೆ ಹಲವು ಕಾರಣಗಳನ್ನು ನೀಡಿ ದರ್ಶನ್ ಅವರು ಜಾಮೀನಿಗಾಗಿ ಸುಪ್ರೀಂಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ದರ್ಶನ್ ಪರ ವಕೀಲರು ಹಾಗೂ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ವಾದ ಆಲಿಸಿದ ಸುಪ್ರೀಂ ಕೋರ್ಟ್ ದರ್ಶನ್​​ರ ಜಾಮೀನು ಅರ್ಜಿ ವಿಚಾರಣೆ ಮುಗಿಸಲು ಒಂದು ವರ್ಷ ಕಾಲಾವಕಾಶ ಕೊಟ್ಟಿದೆ. ಅಷ್ಟರಲ್ಲಿ ಸಾಕ್ಷ್ಯಗಳ ವಿಚಾರಣೆ ಮುಗಿಯದಿದ್ದಲ್ಲಿ, ಜಾಮೀನು ಅರ್ಜಿಯನ್ನು ಪರಿಗಣಿಸುವುದಾಗಿ ಸರ್ವೋಚ್ಛ ನ್ಯಾಯಾಲಯ ಹೇಳಿದೆ.

Continue Reading

Latest

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

VISTARANEWS.COM


on

ಅಮೆರಿಕ-ಇರಾನ್‌ ಯುದ್ಧದ ನಡುವೆಯೇ ಅಮೆರಿಕ ಅಧ್ಯಕ್ಷ ಟ್ರಂಪ್ ಚೀನಾ ಪ್ರವಾಸ ಕೈಗೊಂಡಿದ್ದಾರೆ. ಎರಡು ದಿನಗಳ ಪ್ರವಾಸದಲ್ಲಿ ಅವರು ಚೀನಾ ಅಧ್ಯಕ್ಷ ಶಿ ಜಿನ್‌ ಪಿಂಗ್‌ ಜೊತೆ ಹಲವು ಮಹತ್ವದ ಮಾತುಕತೆಗಳನ್ನು ನಡೆಸಲಿದ್ದಾರೆ. ಅತಿದೊಡ್ಡ ನಿಯೋಗದೊಂದಿಗೆ ಟ್ರಂಪ್‌ ರಾಜಧಾನಿ ಬೀಜಿಂಗ್‌ಗೆ ಆಗಮಿಸಿದ್ದಾರೆ.
ಅಧ್ಯಕ್ಷ ಶಿ ಜಿನ್‌ ಪಿಂಗ್‌ ಆಯೋಜಿಸಿದ್ದ ಭೋಜನಕೂಟದಲ್ಲಿ ಪಾಲ್ಗೊಂಡ ಟ್ರಂಪ್‌, ಅಮೆರಿಕ ಮತ್ತು ಚೀನಾ ನಡುವಣ ಬಾಂಧವ್ಯವನ್ನು ಕೊಂಡಾಡಿದ್ದಾರೆ. ಚೀನಾ ಜೊತೆ ಸಕಾರಾತ್ಮಕ ಮಾತುಕತೆ ನಿರೀಕ್ಷೆ ಮಾಡುವುದಾಗಿ ಟ್ರಂಪ್ ಹೇಳಿದ್ದಾರೆ.
ತೈವಾನ್ ವಿಚಾರ ಸೂಕ್ಷ್ಮ ಎಂದ ಚೀನಾ
ಬೀಜಿಂಗ್‌ನಲ್ಲಿ ಗುರುವಾರ ನಡೆದ ಉನ್ನತ ಮಟ್ಟದ ಶೃಂಗಸಭೆಯಲ್ಲಿ ಉಭಯ ನಾಯಕರ ಮಾತುಕತೆಯ ವೇಳೆ ತೈವಾನ್‌ ವಿಷಯ ಮುಂಚೂಣಿಗೆ ಬಂದಿದೆ. ಚೀನಾದ ಸರ್ಕಾರಿ ಸುದ್ದಿ ಸಂಸ್ಥೆ ‘ಕ್ಸಿನ್ಹುವಾ’ ಪ್ರಕಾರ, ಚೀನಾ-ಅಮೆರಿಕ ಸಂಬಂಧಗಳಲ್ಲಿ ತೈವಾನ್ ಅತ್ಯಂತ ಪ್ರಮುಖ ಮತ್ತು ಸೂಕ್ಷ್ಮವಾದ ವಿಷಯವಾಗಿದೆ ಎಂಬುದನ್ನು ಜಿನ್‌ಪಿಂಗ್ ಸ್ಪಷ್ಟಪಡಿಸಿದ್ದಾರೆ.
ಇದಕ್ಕೂ ಮೊದಲು, ಟ್ರಂಪ್‌ಗೆ ಬೀಜಿಂಗ್ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. 9 ವರ್ಷಗಳ ನಂತರ ಅಮೆರಿಕ ಅಧ್ಯಕ್ಷರು ಬೀಜಿಂಗ್‌ಗೆ ಭೇಟಿ ನೀಡಿರುವುದು ವಿಶೇಷ.

Continue Reading

Latest

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

VISTARANEWS.COM


on

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ದೀದಿ ಭದ್ರಕೋಟೆಯನ್ನು ಧೂಳೀಪಟಗೈದು ಅಧಿಕಾರಕ್ಕೇರಿದ ಸುವೇಂದು ಅಧಿಕಾರಿ ಮುಖ್ಯಮಂತ್ರಿ ಪಟ್ಟಕ್ಕೇರುತ್ತಿದ್ದಂತೆ ಮಹತ್ವದ ಆದೇಶ ಹೊರಡಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಆರೋಗ್ಯವಂತ ಜಾನುವಾರುಗಳ ಹತ್ಯೆ ಮಾಡಿದರೆ ಶಿಕ್ಷೆ ನೀಡಲಾಗುವುದು ಎಂದು ಆದೇಶ ಹೊರಡಿಸಿದ್ದಾರೆ.
ಸರ್ಕಾರಿ ಪಶುವೈದ್ಯರು ನೀಡುವ ಫಿಟ್‌ನೆಸ್‌‍ ಪ್ರಮಾಣಪತ್ರವಿಲ್ಲದೆ ಹಸು, ಹೋರಿ, ಎಮ್ಮೆ ಮತ್ತು ಕರು ಸೇರಿ ಯಾವುದೇ ಪ್ರಾಣಿಯನ್ನು ಹತ್ಯೆ ಮಾಡುವಂತಿಲ್ಲ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಸರ್ಕಾರವು ಅಧಿಸೂಚನೆ ಹೊರಡಿಸಿದೆ.
ಹಸು 14 ವರ್ಷ ಮೇಲ್ಪಟ್ಟಿದ್ದು, ಕೆಲಸ ಮಾಡಲು ಅಥವಾ ಸಂತಾನೋತ್ಪತ್ತಿ ಮಾಡಲು ಯೋಗ್ಯವಿಲ್ಲದಿದ್ದರೆ ಅಥವಾ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿದ್ದು, ಶಾಶ್ವತವಾಗಿ ಗುಣಪಡಿಸಲು ಸಾಧ್ಯವಾಗದಿದ್ದರೆ ಮಾತ್ರ ಸ್ಥಳೀಯ ನಾಗರಿಕ ಅಧಿಕಾರಿಗಳು ಅಥವಾ ಪಶುವೈದ್ಯರು ಜಂಟಿಯಾಗಿ ಪ್ರಮಾಣ ಪತ್ರವನ್ನು ನೀಡಬಹುದಾಗಿದೆ.
ನಿಯಮಗಳನ್ನು ಜಾರಿಗೊಳಿಸಲು ಅಧಿಕಾರಿಗಳು ನಡೆಸುವ ಯಾವುದೇ ಪರಿಶೀಲನೆಯನ್ನು ವ್ಯಕ್ತಿಗಳು ತಡೆಯುವಂತಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಯಾವುದೇ ರೀತಿಯ ಕಾನೂನು ಉಲ್ಲಂಘನೆಗಳಿಗೆ ಆರು ತಿಂಗಳವರೆಗೆ ಜೈಲು ಶಿಕ್ಷೆ ಅಥವಾ 1 ಸಾವಿರ ರೂಪಾಯಿವರೆಗೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

Continue Reading
Advertisement
Latest1 hour ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest1 hour ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest19 hours ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

Latest20 hours ago

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

ಪ್ರಮುಖ ಸುದ್ದಿ20 hours ago

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

Latest21 hours ago

ಹಿಜಾಬ್‌ ಓಕೆ, ಕೇಸರಿ ಶಾಲುಗೆ ನೋ: ಪರ- ವಿರೋಧ ಚರ್ಚೆ ಶುರು

Latest23 hours ago

ವಿ.ಡಿ. ಸತೀಶನ್‌ ಸಿಎಂ ಆಗಿ ಆಯ್ಕೆ ಹಿಂದಿನ ರಿಯಲ್ ಸ್ಟೋರಿ

Latest1 day ago

ಕೇರಳಂ ನೂತನ ಸಿಎಂ ಆಗಿ ವಿ.ಡಿ. ಸತೀಶನ್‌ ಆಯ್ಕೆ

Latest2 days ago

ಮನಸೆಳೆದ ಎಸ್‌ಜೆಬಿಐಟಿ ವಿದ್ಯಾರ್ಥಿಗಳ ʼವರ್ಚಸ್ವ ಫ್ಲ್ಯಾಶ್ ಮಾಬ್ʼ

ಅವಿಭಾಗೀಕೃತ2 days ago

ಬೆಂಗಳೂರಿಗೆ ʼಆರನೇ ಗ್ಯಾರಂಟಿʼ – ʼನನ್ನ ಖಾತೆ ನನ್ನ ಹಕ್ಕುʼ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌