Anant Ambani Marriage: ಅಂಬಾನಿ ಮದುವೆ ಸಮಾರಂಭದೊಳಗೆ ನುಸುಳಿದ್ದ ಇಬ್ಬರು ʼನಕಲಿ ಅತಿಥಿʼಗಳ ಬಂಧನ! - Vistara News

Latest

Anant Ambani Marriage: ಅಂಬಾನಿ ಮದುವೆ ಸಮಾರಂಭದೊಳಗೆ ನುಸುಳಿದ್ದ ಇಬ್ಬರು ʼನಕಲಿ ಅತಿಥಿʼಗಳ ಬಂಧನ!

Anant Ambani Marriage: ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ಆರತಕ್ಷತೆ ಜುಲೈ 14ರಂದು ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದಿತ್ತು. ಈ ವೇಳೆ ಕಾರ್ಯಕ್ರಮಕ್ಕೆ ಯೂಟ್ಯೂಬರ್ ವೆಂಕಟೇಶ್ ನರಸಯ್ಯ (26) ಮತ್ತು ಇನ್ನೊಬ್ಬ ವ್ಯಕ್ತಿ ಉದ್ಯಮಿ ಎಂದು ಹೇಳಿಕೊಂಡ ಲುಕಾಮ್ ಮೊಹಮ್ಮದ್ ಶಫಿ ಶೇಖ್ (28) ಆಂಧ್ರಪ್ರದೇಶದಿಂದ ಮುಂಬೈಗೆ ಬಂದಿದ್ದರು. ಇವರಿಗೆ ವಿವಾಹಕ್ಕೆ ಆಹ್ವಾನ ನೀಡದಿದ್ದರೂ ಕೂಡ ಗೇಟ್ ಕ್ರಾಸಿಂಗ್ ಮಾಡಿದ್ದಕ್ಕಾಗಿ ಪೊಲೀಸರು ಇಬ್ಬರ ವಿರುದ್ಧ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ ಬಂಧಿಸಿದ್ದಾರೆ.

VISTARANEWS.COM


on

Anant Ambani Marriage
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ : ಅಂಬಾನಿ ಮನೆತನದಲ್ಲಿ ಮದುವೆಯ ಸಡಗರ ಸಂಭ್ರಮ ಮನೆ ಮಾಡಿದೆ. ಅಂಬಾನಿ ಕುಟುಂಬದ ಪುತ್ರ ಅನಂತ್ ಅಂಬಾನಿಯವರ (Anant Ambani Marriage)ವಿವಾಹ ಸಮಾರಂಭದ ಪ್ರಯುಕ್ತ ಇಡೀ ಕುಟುಂಬ ವಿವಾಹ ಆಚರಣೆಯಲ್ಲಿ ಮುಳುಗಿದೆ. ಈ ನಡುವೆ ಈ ಸಮಾರಂಭದ ವೇಳೆ ಅನಂತ್ –ರಾಧಿಕಾ ಆರತಕ್ಷತೆಗೆ ಇಬ್ಬರು ವ್ಯಕ್ತಿಗಳು ಅಕ್ರಮವಾಗಿ ಪ್ರವೇಶಿಸಿ ಅಡ್ಡಿಯನ್ನುಂಟುಮಾಡಿದ್ದಾರೆ. ಜುಲೈ 14ರಂದು ನಡೆದ ಅಂಬಾನಿ ಕುಟುಂಬದ ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಅವರ ವಿವಾಹ ಆರತಕ್ಷತೆ ಕಾರ್ಯಕ್ರಮಕ್ಕೆ ಆಹ್ವಾನವಿಲ್ಲದೆ ಪ್ರವೇಶಿಸಲು ಯತ್ನಸಿದ ಯೂಟ್ಯೂಬರ್ ಹಾಗೂ ಇನ್ನೊಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ಆರತಕ್ಷತೆ ಜುಲೈ 14ರಂದು ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದಿತ್ತು. ಈ ವೇಳೆ ಕಾರ್ಯಕ್ರಮಕ್ಕೆ ಯೂಟ್ಯೂಬರ್ ವೆಂಕಟೇಶ್ ನರಸಯ್ಯ (26) ಮತ್ತು ಇನ್ನೊಬ್ಬ ವ್ಯಕ್ತಿ ಉದ್ಯಮಿ ಎಂದು ಹೇಳಿಕೊಂಡ ಲುಕಾಮ್ ಮೊಹಮ್ಮದ್ ಶಫಿ ಶೇಖ್ (28) ಆಂಧ್ರಪ್ರದೇಶದಿಂದ ಮುಂಬೈಗೆ ಬಂದಿದ್ದರು. ಇವರಿಗೆ ವಿವಾಹಕ್ಕೆ ಆಹ್ವಾನ ನೀಡದಿದ್ದರೂ ಕೂಡ ಗೇಟ್ ಕ್ರಾಸಿಂಗ್ ಮಾಡಿದ್ದಕ್ಕಾಗಿ ಪೊಲೀಸರು ಇಬ್ಬರ ವಿರುದ್ಧ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ ಇಬ್ಬರನ್ನು ಬಂಧಿಸಿದ್ದಾರೆ.

Anant Ambani Marriage

ಪೊಲೀಸರ ಪ್ರಕಾರ, ವೆಂಕಟೇಶ್ ಮತ್ತು ಲುಕಮ್ ಇಬ್ಬರೂ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ಗೆ ಆಗಮಿಸಿದ್ದರು. ಅನುಮಾನಗೊಂಡ ಭದ್ರತಾ ಅಧಿಕಾರಿಗಳು ಅವರನ್ನು ತಡೆದು ವಿಚಾರಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಇವರಿಬ್ಬರನ್ನು ಬಿಕೆಸಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರ ವಿರುದ್ಧ ಅತಿಕ್ರಮಣ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: Viral News: ಯಾರೋ ಬಿಸಾಡಿದ ಕಸದಿಂದ 56 ಲಕ್ಷ ರೂ. ಸಂಪಾದಿಸಿದ ಯುವಕ!

Anant Ambani Marriage

ನೋಟಿಸ್ ನೀಡಿದ ನಂತರ ಕಾನೂನು ಕ್ರಮ ಕೈಗೊಂಡ ಪೊಲೀಸರು ಇಬ್ಬರನ್ನು ಬಿಡುಗಡೆ ಮಾಡಿದರು ಎನ್ನಲಾಗಿದೆ. ಅನಂತ್ ಮತ್ತು ರಾಧಿಕಾ ಅವರ ವಿವಾಹ ಆರತಕ್ಷತೆಯಲ್ಲಿ ಗೋವಿಂದಾ, ಕತ್ರಿನಾ ಕೈಫ್, ವಿಕ್ಕಿ ಕೌಶಲ್, ತಮನ್ನಾ ಭಾಟಿಯಾ, ಬಿಪಾಶಾ ಬಸು, ಕರಣ್ ಸಿಂಗ್ ಗ್ರೋವರ್, ಭಾಗ್ಯಶ್ರೀ, ರಾಜ್ ಕುಮಾರ್ ರಾವ್, ಜಾಕಿ ಶ್ರಾಫ್, ಟೈಗರ್ ಶ್ರಾಫ್, ರಾಕುಲ್ ಪ್ರೀತ್ ಸಿಂಗ್ ಸೇರಿದಂತೆ ಅನೇಕ ಸಿನಿಮಾ ನಟ ನಟಿಯರು ಭಾಗವಹಿಸಿದ್ದರು. ಅದ್ಧೂರಿ ವಿವಾಹ ಆರತಕ್ಷತೆಯ ನಂತರ, ಅಂಬಾನಿ ಕುಟುಂಬವು ಮದುವೆಯ ನಂತರ ದ ಆಚರಣೆಗಳನ್ನು ಮುಂದುವರಿಸಲು ಲಂಡನ್‌ಗೆ ತೆರಳಲಿದೆ ಎಂದು ವರದಿಯಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Viral Video: ಕಾಮುಕರ ಹಾವಳಿ ಮಿತಿ‌ ಮೀರಿದೆ; ಬೀದಿ ನಾಯಿಯನ್ನೂ ಇವರು ಬಿಡುತ್ತಿಲ್ಲ! ಆಘಾತಕಾರಿ ವಿಡಿಯೊ

Viral Video : ವೃದ್ಧನೊಬ್ಬ ಬೀದಿಯಲ್ಲಿ ಮಲಗಿದ್ದ ಗಂಡು ನಾಯಿಯ ಖಾಸಗಿ ಭಾಗಗಳನ್ನು ಪದೇ ಪದೇ ಸ್ಪರ್ಶಿಸುವ ಮೂಲಕ ಕಿರುಕುಳ ನೀಡಿದ್ದಾನೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಮುಂಬೈನ ಸ್ಟ್ರೀಟ್ ಅನಿಮಲ್ಸ್ ಎಂಬ ಇನ್ಸ್ಟಾಗ್ರಾಮ್ ಪುಟದಲ್ಲಿ ಪೋಸ್ಟ್ ಮಾಡಲಾಗಿದೆ. ವಿಡಿಯೊದಲ್ಲಿ ಕೆಲವು ಅಸಹ್ಯವಾದ ತುಣುಕುಗಳನ್ನು ಸೆನ್ಸಾರ್ ಮಾಡಲಾಗಿದ್ದು, ಅಲ್ಲಿ ವೃದ್ಧ ವ್ಯಕ್ತಿ ಬೀದಿ ನಾಯಿಯನ್ನು ತನ್ನ ಕಡೆಗೆ ಸೆಳೆಯುವುದು ಮತ್ತು ಅನುಚಿತವಾಗಿ ಸ್ಪರ್ಶಿಸುವುದು ಕಂಡುಬಂದಿದೆ. ನಾಗರಿಕ ಸಮಾಜ ತಲೆತಗ್ಗಿಸುವ ವಿಡಿಯೊ ಈಗ ಬಹಿರಂಗವಾಗಿದೆ.

VISTARANEWS.COM


on

Viral Video
Koo


ಮುಂಬೈ : ಕಾಮುಕರು ತಮ್ಮ ಕಾಮದಾಟಕ್ಕೆ ಮನುಷ್ಯರನ್ನು ಮಾತ್ರವಲ್ಲ ಪ್ರಾಣಿಗಳನ್ನು ಕೂಡ ಬಳಸಿಕೊಳ್ಳುತ್ತಿದ್ದಾರೆ. ತಮ್ಮ ಲೈಂಗಿಕ ಬಯಕೆಯನ್ನು ತೀರಿಸಿಕೊಳ್ಳಲು ಮೂಕ ಪ್ರಾಣಿಗಳ ಮೇಲೂ ದೌರ್ಜನ್ಯ ಎಸಗುತ್ತಿದ್ದಾರೆ. ಇದೀಗ ಅಂತಹದೊಂದು ಘಟನೆ ಬೆಳಕಿಗೆ ಬಂದಿದ್ದು, ವಿಕೃತ ಕಾಮುಕನೊಬ್ಬ ಬೀದಿ ನಾಯಿಗೆ ಪದೇ ಪದೇ ಲೈಂಗಿಕ ಕಿರುಕುಳ ನೀಡಿದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ಗುರ್ಗಾಂವ್‍ನ ಸೆಕ್ಟರ್ 48ರಲ್ಲಿ ವೃದ್ಧನೊಬ್ಬ ಬೀದಿಯಲ್ಲಿ ಮಲಗಿದ್ದ ಗಂಡು ನಾಯಿಯ ಖಾಸಗಿ ಭಾಗಗಳನ್ನು ಪದೇ ಪದೇ ಸ್ಪರ್ಶಿಸುವ ಮೂಲಕ ಬಹಿರಂಗವಾಗಿ ಕಿರುಕುಳ ನೀಡಿದ್ದಾನೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಮುಂಬೈನ ಸ್ಟ್ರೀಟ್ ಅನಿಮಲ್ಸ್ ಎಂಬ ಇನ್ಸ್ಟಾಗ್ರಾಮ್ ಪುಟದಲ್ಲಿ ಪೋಸ್ಟ್ ಮಾಡಲಾಗಿದೆ. ವಿಡಿಯೊದಲ್ಲಿ ಕೆಲವು ಅಸಹ್ಯವಾದ ತುಣುಕುಗಳನ್ನು ಸೆನ್ಸಾರ್ ಮಾಡಲಾಗಿದ್ದು, ಅಲ್ಲಿ ವೃದ್ಧ ವ್ಯಕ್ತಿ ಬೀದಿ ನಾಯಿಯನ್ನು ತನ್ನ ಕಡೆಗೆ ಸೆಳೆಯುವುದು ಮತ್ತು ಅನುಚಿತವಾಗಿ ಸ್ಪರ್ಶಿಸುವುದು ಕಂಡುಬಂದಿದೆ.

ಇದರಲ್ಲಿ ಮೊದಲು ವ್ಯಕ್ತಿಯು ನಾಯಿಯನ್ನು ನೆಲದ ಮೇಲೆ ಮಲಗುವಂತೆ ಒತ್ತಾಯಿಸುವುದನ್ನು ತೋರಿಸುತ್ತದೆ. ಆತ ತನ್ನ ಕೈಗಳಿಂದ ನಾಯಿಯ ಮೈಯನ್ನು ಸವರುತ್ತಿದ್ದಾನೆ. ನಾಯಿ ಎಚ್ಚರಗೊಂಡು ನೇರವಾಗಿ ನಿಲ್ಲಲು ಪ್ರಯತ್ನಿಸಿದಾಗ, ಆತ ಪದೇ ಪದೇ ಪ್ರಾಣಿಯನ್ನು ವಿಶ್ರಾಂತಿ ಪಡೆಯುವಂತೆ ಮಾಡಿದ. ನಂತರ ಅವನು ಅದರ ಖಾಸಗಿ ಭಾಗಗಳನ್ನು ಸ್ಪರ್ಶಿಸುವುದನ್ನು ಮುಂದುವರಿಸಿದ.

ಮತ್ತೊಂದು ಘಟನೆಯಲ್ಲಿ, ಅದೇ ವ್ಯಕ್ತಿ ಮತ್ತೊಮ್ಮೆ ತಮ್ಮ ನಿವಾಸದ ಹೊರಗೆ ಬೀದಿ ನಾಯಿಗೆ ಕಿರುಕುಳ ನೀಡುತ್ತಿರುವುದು ಕಂಡುಬಂದಿದೆ. ಅವನು ನಾಯಿಯ ಜನನಾಂಗಗಳನ್ನು ಕಂಡುಹಿಡಿಯಲು ಮತ್ತು ಅವುಗಳನ್ನು ಮಟ್ಟಲು ಪ್ರಯತ್ನಿಸುತ್ತಿದ್ದ. ಇದಲ್ಲದೆ, ವ್ಯಕ್ತಿಯು ಕುರ್ಚಿಯ ಮೇಲೆ ಕುಳಿತು ತನ್ನ ಬರಿಗೈಯಿಂದ ನಾಯಿಯನ್ನು ಅನುಚಿತವಾಗಿ ಸ್ಪರ್ಶಿಸುವುದನ್ನು ವೀಡಿಯೊ ತೋರಿಸುತ್ತದೆ. ಆದರೆ ವ್ಯಕ್ತಿಯ ಈ ಅನುಚಿತ ವರ್ತನೆಯ ಬಗ್ಗೆ ಕ್ರಮ ಕೈಗೊಳ್ಳಲು ಸ್ಥಳೀಯ ಯುವತಿಯೊಬ್ಬಳು ಪೊಲೀಸರನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಆತನ ವಿರುದ್ಧ ಯಾವುದೇ ಪೊಲೀಸ್ ಕ್ರಮ ದಾಖಲಾಗಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: ಮೊಬೈಲ್‌ನಲ್ಲಿ ಮಾತನಾಡುತ್ತ ರಸ್ತೆ ದಾಟಿದರೆ ಏನಾಗುತ್ತದೆ ನೋಡಿ; ಬೆಚ್ಚಿ ಬೀಳಿಸುವ ವಿಡಿಯೊ

Viral Video

ಪ್ರಾಣಿಗಳ ಮೇಲಿನ ಲೈಂಗಿಕ ದೌರ್ಜನ್ಯ ಭಾರತದಲ್ಲಿ ಮಾತ್ರವಲ್ಲ ಎಲ್ಲಾ ಕಡೆ ನಡೆಯುತ್ತಿದೆ. ಇದೀಗ ಬರೋಬ್ಬರಿ 60ಕ್ಕೂ ಹೆಚ್ಚು ನಾಯಿಗಳನ್ನು ಅತ್ಯಾಚಾರ ಮಾಡಿ, ಕೊಂದ ಪ್ರಕರಣದಲ್ಲಿ ಖ್ಯಾತ ಪ್ರಾಣಿಶಾಸ್ತ್ರಜ್ಞ ಆಡಂ ಬ್ರಿಟನ್‌ಗೆ 249 ವರ್ಷಗಳ ಜೈಲು ಶಿಕ್ಷೆಯಾಗಿದೆ. ಆತ ನಾಯಿಗಳನ್ನು ಕೋಣೆಗಳಲ್ಲಿ ಕೂಡಿ ಹಾಕಿ ವಿಚಿತ್ರವಾಗಿ ಹಿಂಸಿಸುತ್ತಿದ್ದನು. ಅತ್ಯಾಚಾರವೆಸಗಿ ಬರ್ಬರವಾಗಿ ಕೊಂದಿದ್ದನು ಎನ್ನಲಾಗಿತ್ತು. ವಿಚಾರಣೆಯ ವೇಳೆ ಈತನೂ ತನ್ನ ತಪ್ಪನ್ನು ಒಪ್ಪಿದ್ದನು. ಹೀಗಾಗಿ ಆತನಿಗೆ ಕೋರ್ಟ್ ಈಗ ಶಿಕ್ಷೆ ವಿಧಿಸಿದೆ.

Continue Reading

ವಾಣಿಜ್ಯ

Anant Radhika Wedding: ನಮ್ಮಿಂದ ಏನಾದರು ತಪ್ಪಾಗಿದ್ದರೆ ದಯವಿಟ್ಟು ಕ್ಷಮಿಸಿ; ನೀತಾ ಅಂಬಾನಿ ವಿನಮ್ರ ಮನವಿ!

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಮದುವೆ (Anant Radhika Wedding) ಪ್ರಯುಕ್ತ ನೀತಾ ಅಂಬಾನಿಯವರು ಪಾಪರಾಜಿಗಳಿಗೆ ಧನ್ಯವಾದ ಹೇಳಲು ಮತ್ತು ಸೋಮವಾರದ ವಿಶೇಷ ಆಚರಣೆಗೆ ಅವರನ್ನು ಸ್ವಾಗತಿಸಿದ್ದು ಇದನ್ನು ಸಾಮಾಜಿಕ ಜಾಲತಾಣದಲ್ಲಿ ನೆಟಿಜನ್‌ಗಳು ಶ್ಲಾಘಿಸಿದ್ದಾರೆ. ನೀತಾ ಅಂಬಾನಿ ಅವರ ಹೇಳಿಕೆಯ ವಿಡಿಯೊ ಇಲ್ಲಿದೆ.

VISTARANEWS.COM


on

By

Anant Radhika Wedding
Koo

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಮದುವೆಗೆ (Anant Radhika Wedding) ನೀತಾ ಅಂಬಾನಿ (nita ambani) ವೈಯಕ್ತಿಕವಾಗಿ (ಮಾಧ್ಯಮ ಛಾಯಾಗ್ರಾಹಕರು) ಪಾಪರಾಜಿಗಳನ್ನು (paparazzi) ಆಹ್ವಾನಿಸುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದೆ. ಇದು ಈಗ ಸಾಕಷ್ಟು ಮಂದಿಯ ಗಮನ ಸೆಳೆದಿದೆ.

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಮದುವೆ ಪ್ರಯುಕ್ತ ನಡೆದ ಮಂಗಲ್ ಉತ್ಸವ ಅಥವಾ ಅದ್ಧೂರಿ ವಿವಾಹದ ಆರತಕ್ಷತೆಯಲ್ಲಿ ಸಾಕಷ್ಟು ಗಣ್ಯರು ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಎ.ಆರ್. ರೆಹಮಾನ್ ಮತ್ತು ಶ್ರೇಯಾ ಘೋಷಾಲ್ ಅವರಿಬ್ಬರ ಸಂಗೀತ ಕಛೇರಿಯನ್ನು ನಡೆಸಿಕೊಟ್ಟರು. ಧೀರೂಬಾಯಿ ಅಂಬಾನಿಯವರ ಜೀವನವನ್ನು ಆಧರಿಸಿದ ಸಂಗೀತ ಕಾರ್ಯಕ್ರಮದ ವಿಡಿಯೋಗಳನ್ನು ಆನ್‌ಲೈನ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.

ಈ ನಡುವೆ ನೀತಾ ಅಂಬಾನಿಯವರು ಪಾಪರಾಜಿಗಳಿಗೆ ಧನ್ಯವಾದ ಹೇಳಲು ಮತ್ತು ಸೋಮವಾರದ ವಿಶೇಷ ಆಚರಣೆಗೆ ಅವರನ್ನು ಸ್ವಾಗತಿಸಿದ್ದು ಇದನ್ನು ಸಾಮಾಜಿಕ ಜಾಲತಾಣದಲ್ಲಿ ನೆಟಿಜನ್‌ಗಳು ಶ್ಲಾಘಿಸಿದ್ದಾರೆ.


ಈ ವಿಡಿಯೋದಲ್ಲಿ ನೀತಾ ಅಂಬಾನಿ, ನಿಮ್ಮ ತಾಳ್ಮೆ ಮತ್ತು ತಿಳುವಳಿಕೆಗೆ ಧನ್ಯವಾದಗಳು. ಯಾವುದಾದರೂ ತಪ್ಪಾಗಿದ್ದರೆ ದಯವಿಟ್ಟು ನಮ್ಮನ್ನು ಕ್ಷಮಿಸಿ. ಯಾಕೆಂದರೆ ನಮ್ಮದು ಈಗ ಮದುವೆ ನಡೆಯುತ್ತಿರುವ ಮನೆ. ನಾಳೆ ನಮ್ಮ ಅತಿಥಿಗಳಾಗಿ ಬನ್ನಿ, ನೀವೆಲ್ಲರೂ ಆಹ್ವಾನವನ್ನು ಸ್ವೀಕರಿಸಿದ್ದೀರಿ. ನಮ್ಮ ಅತಿಥಿಗಳಾಗಿ ನಾಳೆ ನಿಮ್ಮನ್ನು ಸ್ವಾಗತಿಸಲು ನಾವು ಎದುರು ನೋಡುತ್ತಿದ್ದೇವೆ. ದಯವಿಟ್ಟು ನಿಮ್ಮ ಕುಟುಂಬಗಳೊಂದಿಗೆ ಬನ್ನಿ ಎಂದು ಪಾಪರಾಜಿಗಳನ್ನು ಆಮಂತ್ರಿಸಿದರು.

ಇದನ್ನೂ ಓದಿ: Anant Ambani Wedding: ಕೌಟುಂಬಿಕ ಮುನಿಸು ಮರೆತು ವರನೊಂದಿಗೆ ಜತೆಯಾಗಿ ಹೆಜ್ಜೆ ಹಾಕಿದ ಮುಖೇಶ್ ಅಂಬಾನಿ-ಅನಿಲ್ ಅಂಬಾನಿ

ಈ ಕಾರ್ಯಕ್ರಮದ ಮೂಲಕ ಅವರು ಪಾಪರಾಜಿಗಳ ಮನ ಗೆದ್ದಿರುವುದು ಮಾತ್ರವಲ್ಲ ಅವರ ವಿನಮ್ರಗೆ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗಿದೆ.

ಜುಲೈ 12 ರಂದು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅದ್ಧೂರಿ ವಿವಾಹದ ವಿಧಿವಿಧಾನಗಳ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಈ ಸಮಾರಂಭಕ್ಕೆ ಸಾಕ್ಷಿಯಾಗಲು ಪ್ರಪಂಚದಾದ್ಯಂತದ ಹಲವಾರು ಅತಿಥಿಗಳು ಸಾಕ್ಷಿಯಾಗಿದ್ದರು. ಕಿಮ್, ಕ್ಲೋಯ್ ಕಾರ್ಡಶಿಯಾನ್, ಪ್ರಿಯಾಂಕಾ ಚೋಪ್ರಾ, ನಿಕ್ ಜೋನಾಸ್, ಮತ್ತು ಜಾನ್ ಸೆನಾ ಸೇರಿದಂತೆ ಹಲವಾರು ಅಂತಾರಾಷ್ಟ್ರೀಯ ರಾಜಕಾರಣಿಗಳು ಹಾಗೂ ಖ್ಯಾತನಾಮರು ಈ ಸಮಾರಂಭದಲ್ಲಿ ಪಾಲ್ಗೊಳ್ಳಲು ಮುಂಬಯಿಗೆ ಆಗಮಿಸಿದ್ದರು.

Continue Reading

Latest

Monkey Attack: ಹುಡುಗಿಯ ಮೇಲೆ ಏಕಾಏಕಿ ದಾಳಿ ಮಾಡಿದ ಕೋತಿ; ವಿಡಿಯೊ ಇದೆ

Monkey Attack: ನೆಲಮಾಳಿಗೆಯಲ್ಲಿ ನಡೆದು ಬರುತ್ತಿದ್ದ ಹುಡುಗಿಯ ಮೇಲೆ ಹಿಂದಿನಿಂದ ಬಂದ ಕೋತಿಯೊಂದು ದಾಳಿ ನಡೆಸಿದೆ. ಈ ಘಟನೆ ಜುಲೈ 11ರಂದು ನಡೆದಿದೆ. ಆದರೆ ಸ್ಥಳದ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಈ ಆಘಾತಕಾರಿ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದೆ. ಇದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ಇದು ಈಗ ವೈರಲ್ ಆಗಿದೆ. ಹುಡುಗಿಗೆ ಯಾವುದೇ ಗಂಭೀರ ಹಾನಿಯಾಗಲಿಲ್ಲ, ಆದರೂ ಅವಳು ಕೋತಿಗೆ ಹೆದರಿ ನಡಗುತ್ತಿರುವುದು ಕಂಡುಬಂದಿದೆ.

VISTARANEWS.COM


on

Monkey Attack
Koo

ಇತ್ತೀಚಿನ ದಿನಗಳಲ್ಲಿ ಕೋತಿಗಳ ಹಾವಳಿ ಹೆಚ್ಚಾಗಿದೆ. ಈ ಕೋತಿಗಳು ಎಲ್ಲೆಂದರಲ್ಲಿ ಜನರ ಮೇಲೆ ದಾಳಿ ಮಾಡುತ್ತಿವೆ. ಇತ್ತೀಚೆಗಷ್ಟೇ ಮಥುರಾದಲ್ಲಿ 5 ವರ್ಷದ ಬಾಲಕನ ಮೇಲೆ ಕೋತಿಗಳು ದಾಳಿ ನಡೆಸಿದ್ದು, ಆ ವಿಡಿಯೊ ವೈರಲ್ ಆಗಿದೆ. ಅದೇ ರೀತಿ ಇದೀಗ ಕೋತಿಯೊಂದು ಹುಡುಗಿಯೊಬ್ಬಳ ಮೇಲೆ ದಾಳಿ ನಡೆಸುತ್ತಿರುವ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Monkey Attack) ಆಗಿದೆ. ಇದು ಜನರ ಕಳವಳಕ್ಕೆ ಕಾರಣವಾಗಿದೆ.

ನೆಲಮಾಳಿಗೆಯಲ್ಲಿ ನಡೆದು ಬರುತ್ತಿದ್ದ ಹುಡುಗಿಯ ಮೇಲೆ ಹಿಂದಿನಿಂದ ಬಂದ ಕೋತಿಯೊಂದು ದಾಳಿ ನಡೆಸಿದೆ. ಈ ಘಟನೆ ಜುಲೈ 11ರಂದು ನಡೆದಿದೆ. ಆದರೆ ಸ್ಥಳದ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಈ ಆಘಾತಕಾರಿ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದೆ. ಇದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ಇದು ಈಗ ವೈರಲ್ ಆಗಿದೆ.

ವಿಡಿಯೊದಲ್ಲಿ, ನೆಲಮಾಳಿಗೆಯಲ್ಲಿ ನಡೆದು ಬರುತ್ತಿದ್ದ ಹುಡುಗಿಯ ಬಳಿ ಬಂದ ಕೋತಿಯೊಂದು ಇದ್ದಕ್ಕಿದ್ದಂತೆ ಅವಳ ಮೇಲೆ ದಾಳಿ ಮಾಡಿದೆ. ಹುಡುಗಿಗೆ ತುಂಬಾ ಭಯವಾಗಿದೆ. ಅದೃಷ್ಟವಶಾತ್, ಹುಡುಗಿಗೆ ಯಾವುದೇ ಗಂಭೀರ ಹಾನಿಯಾಗಲಿಲ್ಲ, ಆದರೂ ಅವಳು ಕೋತಿಗೆ ಹೆದರಿ ನಡಗುತ್ತಿರುವುದು ಕಂಡುಬಂದಿದೆ. ಈ ವೀಡಿಯೊವನ್ನು ಸಾಮಾಜಿಕ ಮಾಧ್ಯಮ ಪ್ಲಾಟ್‍ಫಾರ್ಮ್‍ನಲ್ಲಿ (ಈ ಹಿಂದೆ ಟ್ವಿಟರ್) ‘ಘರ್ ಕೆ ಕಾಲೇಶ್’ ಹ್ಯಾಂಡಲ್‍ನಲ್ಲಿ ಹಂಚಿಕೊಳ್ಳಲಾಗಿದೆ. “ನೆಲಮಾಳಿಗೆಯ ಪ್ರದೇಶದಲ್ಲಿ ದೊಡ್ಡ ಕೋತಿ ಹುಡುಗಿಯ ಮೇಲೆ ದಾಳಿ ಮಾಡಿದೆ” ಎಂದು ಶೀರ್ಷಿಕೆ ನೀಡಲಾಗಿದೆ. ಈ ವೀಡಿಯೊ 89 ಸಾವಿರ ವೀಕ್ಷಣೆಗಳನ್ನು ಗಳಿಸಿದೆ.

ಸ್ಥಳೀಯ ಅಧಿಕಾರಿಗಳು ಈ ಘಟನೆಗೆ ಪ್ರತಿಕ್ರಿಯಿಸಿದ್ದು, ರಸ್ತೆಯಲ್ಲಿರುವ ಪ್ರಾಣಿಗಳ ಬಗ್ಗೆ ಜನರು ಜಾಗರೂಕರಾಗಿರುವಂತೆ ಸೂಚಿಸಿದ್ದಾರೆ. ಕೋತಿಗಳು, ಹೆಚ್ಚಾಗಿ ತಮಾಷೆಯಾಗಿ ಕಂಡರೂ, ಆಕ್ರಮಣ ಮಾಡಬಹುದು. ಒಂದು ವೇಳೆ ಅವುಗಳಿಗೆ ಹೆದರಿಸಿದೆ ಅಥವಾ ಅವುಗಳಿಗೆ ಹಸಿವಾದರೆ ಆಹಾರಕ್ಕಾಗಿ ಈ ರೀತಿ ದಾಳಿ ನಡೆಸಬಹುದು ಎಂದು ತಿಳಿಸಿದ್ದಾರೆ.

ಅಲ್ಲದೇ ವೈರಲ್ ಆದ ವಿಡಿಯೊದ ಬಗ್ಗೆ ಪ್ರಾಣಿಗಳಿಂದ ಸುರಕ್ಷಿತವಾಗಿರಲು ಮತ್ತು ಅಂತರ ಕಾಯ್ದುಕೊಳ್ಳುವ ಬಗ್ಗೆ ಆನ್‍ಲೈನ್‍ನಲ್ಲಿ ಚರ್ಚೆ ನಡೆಯುತ್ತಿದೆ. ಪ್ರಾಣಿಗಳು ದಾಳಿ ಮಾಡುವುದನ್ನು ತಪ್ಪಿಸಲು ಅವುಗಳಿಗೆ ಆಹಾರ ನೀಡುವುದು ಅಥವಾ ಅವುಗಳು ಹತ್ತಿರ ಬರುವುದನ್ನು ತಪ್ಪಿಸಬೇಕು ಎಂದು ತಜ್ಞರು ಸಲಹೆ ನೀಡಿದ್ದಾರೆ. ಕೋತಿಯ ದಾಳಿಗೆ ಒಳಗಾದ ಹುಡುಗಿ ಚೇತರಿಸಿಕೊಳ್ಳುತ್ತಿದ್ದಾಳೆ ಮತ್ತು ಅವಳಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಅವಳ ಕುಟುಂಬವು ತಿಳಿಸಿದೆ ಎನ್ನಲಾಗಿದೆ.

ಇದನ್ನೂ ಓದಿ: ಆಸ್ತಿಗಾಗಿ ಅಕ್ಕನಿಗೆ ಕೊಡಲಿಯಿಂದ ಕೊಚ್ಚಿದ ತಮ್ಮ; ಭಯಾನಕ ವಿಡಿಯೊ

ಕೋತಿಗಳು ದಾಳಿ ನಡೆಸಿದ್ದು ಇದೇ ಮೊದಲಲ್ಲಾ. ಈ ಹಿಂದೆ ಮಥುರಾದ ವೃಂದಾವನದಲ್ಲಿ ಶುಕ್ರವಾರ ಜುಲೈ 12ರಂದು ಕಿಶನ್ ಎಂಬ 5 ವರ್ಷದ ಬಾಲಕ ಕೋತಿಗಳ ದಾಳಿಗೆ ಒಳಗಾಗಿದ್ದಾನೆ. ಮನೆಯಿಂದ ಹೊರಗೆ ಬಂದ ಬಾಲಕನ ಮೇಲೆ ಕೋತಿಗಳು ಒಟ್ಟಿಗೆ ಸೇರಿಕೊಂಡು ದಾಳಿ ಮಾಡಿ ಎಳೆದಾಡಿದ್ದವು. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

Continue Reading

ಕ್ರೀಡೆ

Paris Olympics 2024: ಮೊಟ್ಟಮೊದಲ ಒಲಿಂಪಿಕ್ಸ್ ಕ್ರೀಡಾಕೂಟದ 10 ಕುತೂಹಲಕರ ಸಂಗತಿಗಳಿವು

Paris Olympics 2024: ಒಲಿಂಪಿಕ್ ಕ್ರೀಡಾಕೂಟವನ್ನು ವಿಶ್ವದ ಅತಿದೊಡ್ಡ ಕ್ರೀಡಾಕೂಟವೆಂದು ಪರಿಗಣಿಸಲಾಗಿದೆ. ಒಲಿಂಪಿಕ್ಸ್ ಕಲ್ಪನೆಯನ್ನು ಉತ್ತೇಜಿಸಲು ಪ್ರತಿ ವರ್ಷ ಜೂನ್ 23 ರಂದು ವಿಶ್ವ ಒಲಿಂಪಿಕ್ ದಿನವನ್ನು ಆಚರಿಸಲಾಗುತ್ತದೆ. ಮೊದಲ ಒಲಿಂಪಿಕ್ ಕ್ರೀಡಾಕೂಟ (First Olympic Games) ಹಲವು ಪ್ರಮುಖ ಸ್ಮರಣೀಯ ಘಟನೆಗಳಿಗೆ ಕಾರಣವಾಗಿತ್ತು.

VISTARANEWS.COM


on

By

Paris Olympics 2024
Koo

ಈ ಬಾರಿ ಪ್ಯಾರಿಸ್ ನಲ್ಲಿ ಜುಲೈ 26ರಿಂದ ಆಗಸ್ಟ್ 11ರವರೆಗೆ (Paris Olympics 2024) ಒಲಿಂಪಿಕ್ಸ್ ಕ್ರೀಡಾಕೂಟ (Olympic Games) ನಡೆಯಲಿದೆ. ಈಗಿನ ಒಲಿಂಪಿಕ್ಸ್ ಕ್ರೀಡಾಕೂಟವು ಸಾಕಷ್ಟು ಆಧುನೀಕರಣಗೊಂಡಿದೆ. ಮೊದಲ ಒಲಿಂಪಿಕ್ಸ್ ಕ್ರೀಡಾಕೂಟವು ಅಥೆನ್ಸ್ ನಲ್ಲಿ (Athens) 1896ರ ಏಪ್ರಿಲ್‌ 6ರಿಂದ 15ರವರೆಗೆ ಆಯೋಜಿಸಲಾಗಿತ್ತು. ಮೊದಲ ಒಲಿಂಪಿಕ್ ಕ್ರೀಡಾಕೂಟ (First Olympic Games) ಹಲವು ಪ್ರಮುಖ ಸ್ಮರಣೀಯ ಘಟನೆಗಳಿಗೆ ಕಾರಣವಾಗಿತ್ತು.

ಒಲಿಂಪಿಕ್ ಕ್ರೀಡಾಕೂಟವನ್ನು ವಿಶ್ವದ ಅತಿದೊಡ್ಡ ಕ್ರೀಡಾಕೂಟವೆಂದು ಪರಿಗಣಿಸಲಾಗಿದೆ. ಒಲಿಂಪಿಕ್ಸ್ ಕಲ್ಪನೆಯನ್ನು ಉತ್ತೇಜಿಸಲು ಪ್ರತಿ ವರ್ಷ ಜೂನ್ 23ರಂದು ವಿಶ್ವ ಒಲಿಂಪಿಕ್ ದಿನವನ್ನು ಆಚರಿಸಲಾಗುತ್ತದೆ. ಅಥೆನ್ಸ್‌ನಲ್ಲಿ ನಡೆದ ಮೊದಲ ಒಲಂಪಿಕ್ಸ್ ಉದ್ಘಾಟನೆ ಸ್ಪರ್ಧೆಗಳಲ್ಲಿ ಒಟ್ಟು 280 ಕ್ರೀಡಾಪಟುಗಳು ಭಾಗವಹಿಸಿದ್ದರು. ಅಥ್ಲೆಟಿಕ್ಸ್ ನಲ್ಲಿ 43 ಸ್ಪರ್ಧಿಗಳಿದ್ದರು.

ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುವ ಆಟಗಾರರು ಅನೇಕ ಸ್ಪರ್ಧಿಗಳನ್ನು ಸೋಲಿಸಿದ ಅನಂತರ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳಲು ಅರ್ಹರಾಗುತ್ತಾರೆ. ಒಲಿಂಪಿಕ್ ಕ್ರೀಡಾಕೂಟದ ಆತಿಥ್ಯವು ಆತಿಥೇಯ ರಾಷ್ಟ್ರದ ಅತಿದೊಡ್ಡ ಸಾಧನೆಯಾಗಿದೆ. ಅಮೆರಿಕ ಈವರೆಗೆ 9 ಬಾರಿ ಒಲಿಂಪಿಕ್ ಕ್ರೀಡಾಕೂಟವನ್ನು ಆಯೋಜಿಸಿದೆ. ಇದು ಇತರ ದೇಶಗಳಿಗಿಂತ ಹೆಚ್ಚಿನದಾಗಿದೆ. ಇದುವರೆಗೆ 6 ಒಲಿಂಪಿಕ್ ಕ್ರೀಡಾಕೂಟಗಳನ್ನು ಆಯೋಜಿಸಿದ ಫ್ರಾನ್ಸ್ ಅನಂತರದ ಸ್ಥಾನದಲ್ಲಿದೆ.

ಮೊದಲ ಒಲಿಂಪಿಕ್ ಕ್ರೀಡಾಕೂಟದ ಹತ್ತು ಪ್ರಮುಖ ಸಂಗತಿಗಳು

1. ಮೊದಲ ಒಲಂಪಿಕ್ಸ್ ಗ್ರೀಸ್ ದೇಶದ ಅಥೆನ್ಸ್‌ನಲ್ಲಿ 1896ರ ಏಪ್ರಿಲ್ 6ರಿಂದ 15ರವರೆಗೆ ನಡೆಯಿತು.

2. ಅಥೆನ್ಸ್‌ನಲ್ಲಿ ನಡೆದ ಒಲಿಂಪಿಕ್ಸ್ ಗೇಮ್ಸ್‌ ಅನ್ನು ಕಿಂಗ್ ಜಾರ್ಜ್ I ಉದ್ಘಾಟಿಸಿದ್ದರು.

3. ಮೊದಲ ಒಲಿಂಪಿಕ್ಸ್‌ನಲ್ಲಿ ಒಟ್ಟು 14 ದೇಶಗಳು ಭಾಗವಹಿಸಿವೆ.

First Olympic Games


4. 1896ರ ಏಪ್ರಿಲ್ 6ರಂದು ಅಮೆರಿಕನ್ ಆಟಗಾರ ಜೇಮ್ಸ್ ಕೊನೊಲಿ ಟ್ರಿಪಲ್ ಜಂಪ್ ಅನ್ನು ಗೆದ್ದು ಮೊದಲ ಒಲಿಂಪಿಕ್ ಚಾಂಪಿಯನ್ ಆದರು. ಎತ್ತರ ಜಿಗಿತದಲ್ಲಿ ದ್ವಿತೀಯ ಹಾಗೂ ಉದ್ದ ಜಿಗಿತದಲ್ಲಿ ತೃತೀಯ ಸ್ಥಾನವನ್ನು ಅವರು ಗಳಿಸಿದರು.

5. ಜರ್ಮನಿಯ ಕಾರ್ಲ್ ಶುಹ್ಮನ್ ಅವರು 1896ರಲ್ಲಿ ಅಥೆನ್ಸ್‌ನ ಸ್ಟಾರ್ ತಾರೆಯಾಗಿದ್ದರು. ಜಿಮ್ನಾಸ್ಟಿಕ್ಸ್, ಅಥ್ಲೆಟಿಕ್ಸ್, ವೇಟ್‌ಲಿಫ್ಟಿಂಗ್ ಮತ್ತು ಗ್ರೀಕೊ-ರೋಮನ್ ಕುಸ್ತಿಯಲ್ಲಿ ಸ್ಪರ್ಧಿಸಿ ಅವರು ಉದ್ಘಾಟನಾ ಆಧುನಿಕ ಕ್ರೀಡಾಕೂಟದಲ್ಲಿ ನಾಲ್ಕು ಚಿನ್ನದ ಪದಕಗಳನ್ನು ಗೆದ್ದರು.

6. ಮೊದಲ ಒಲಿಂಪಿಕ್ಸ್ ನಲ್ಲಿ ಅಮೆರಿಕವು ಗರಿಷ್ಠ ಸಂಖ್ಯೆಯ 14 ಚಿನ್ನದ ಪದಕಗಳನ್ನು ಗೆದ್ದುಕೊಂಡಿತು.

7. ಮೊದಲ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಒಟ್ಟು 241 ಆಟಗಾರರು ಸ್ಪರ್ಧಿಸಿದ್ದರು.

7. ಅಥೆನ್ಸ್‌ನಲ್ಲಿ ಒಲಿಂಪಿಕ್ಸ್ ಅಂಗವಾಗಿ ಒಟ್ಟು 43 ಕಾರ್ಯಕ್ರಮಗಳನ್ನು ನಡೆಸಲಾಗಿತ್ತು.

8. ಒಲಿಂಪಿಕ್ಸ್‌ನಲ್ಲಿ ಮೊದಲ ಸ್ಥಾನ ಪಡೆದ ವಿಜೇತರಿಗೆ ಬೆಳ್ಳಿ ಪದಕ ಮತ್ತು ಆಲಿವ್ ಗುಚ್ಛ ನೀಡಲಾಯಿತು. ಎರಡನೇ ಸ್ಥಾನದಲ್ಲಿರುವವರಿಗೆ ತಾಮ್ರದ ಪದಕ, ಲಾರೆಲ್ ಗುಚ್ಛ ಮತ್ತು ಪ್ರಮಾಣಪತ್ರ ನೀಡಲಾಯಿತು.

First Olympic Games


9. ಪದಕದ ಮುಂಭಾಗದ ಭಾಗವು ಜೀಸಸ್‌ನ ಮುಖವನ್ನು ಹೊಂದಿದ್ದು, ಅವನು ಕೈಯಲ್ಲಿ ರೆಕ್ಕೆಯ ವಿಜಯದೊಂದಿಗೆ ಗ್ಲೋಬ್ ಅನ್ನು ಹಿಡಿದಿದ್ದಾನೆ. ಗ್ರೀಕ್ ಭಾಷೆಯಲ್ಲಿ “ಒಲಿಂಪಿಯಾ” ಎಂಬ ಶೀರ್ಷಿಕೆಯನ್ನು ಇದು ಒಳಗೊಂಡಿತ್ತು. ಹಿಂಭಾಗವು ಆಕ್ರೊಪೊಲಿಸ್ ಸೈಟ್ ಅನ್ನು ಗ್ರೀಕ್ ಭಾಷೆಯಲ್ಲಿ “1896ರಲ್ಲಿ ಅಥೆನ್ಸ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಒಲಿಂಪಿಕ್ ಕ್ರೀಡಾಕೂಟ” ಎಂಬ ಶೀರ್ಷಿಕೆಯೊಂದಿಗೆ ಹೊಂದಿತ್ತು.

ಇದನ್ನೂ ಓದಿ: Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್ ಯಾವಾಗ ಆರಂಭ? ಬೃಹತ್​ ಕ್ರೀಡಾಕೂಟಕ್ಕೆ ನಡೆಸಿರುವ ಸಿದ್ಧತೆಗಳೇನು?

10. ಅಥೆನ್ಸ್ 1896ರ ಒಲಿಂಪಿಕ್ ಕ್ರೀಡಾಕೂಟದ ಅಧಿಕೃತ ವರದಿಯು ಎರಡು ಭಾಗಗಳನ್ನು ಒಳಗೊಂಡಿತ್ತು. “ದ ಒಲಿಂಪಿಕ್ ಗೇಮ್ಸ್ ಇನ್ ಏನ್ಷಿಯಂಟ್ ಟೈಮ್ಸ್” ಶೀರ್ಷಿಕೆಯಲ್ಲಿ ಕ್ರೀಡಾಕೂಟದ ಮೊದಲು ಪ್ರಕಟವಾಯಿತು. 1896ರಲ್ಲಿ ಒಲಿಂಪಿಕ್ ಗೇಮ್ಸ್ ಕ್ರೀಡಾಕೂಟದ ಅನಂತರ ಪ್ರಕಟವಾಯಿತು.
ಎರಡು ಸಂಪುಟಗಳನ್ನು ಫ್ರೆಂಚ್-ಗ್ರೀಕ್ ಮತ್ತು ಇಂಗ್ಲಿಷ್-ಜರ್ಮನ್ ಎಂಬ ಎರಡು ದ್ವಿಭಾಷಾ ಆವೃತ್ತಿಗಳ ರೂಪದಲ್ಲಿ ನಾಲ್ಕು ಭಾಷೆಗಳಲ್ಲಿ ಪ್ರಕಟಿಸಲಾಯಿತು. ಈ ಅಧಿಕೃತ ವರದಿಯು ವಿವಿಧ ಹೊಸ ಆವೃತ್ತಿಗಳ ವಿಷಯವಾಗಿತ್ತು.

Continue Reading
Advertisement
Karnataka assembly live hd revanna
ಪ್ರಮುಖ ಸುದ್ದಿ5 mins ago

Karnataka Assembly Live: ವಾಲ್ಮೀಕಿ ಹಗರಣ ಚರ್ಚೆಯ ನಡುವೆ ಗದ್ದಲ ಸೃಷ್ಟಿಸಿದ ರೇವಣ್ಣ ಪ್ರಕರಣ; ರೊಚ್ಚಿಗೆದ್ದ ರೇವಣ್ಣ

Assembly Session 2024
ಕರ್ನಾಟಕ12 mins ago

Assembly Session 2024: ಮೈಸೂರು ಪೇಪರ್ ಮಿಲ್ಸ್‌ ಪುನರಾರಂಭಕ್ಕೆ ಸರ್ಕಾರ ಚಿಂತನೆ: ಸಚಿವ ಎಂ.ಬಿ. ಪಾಟೀಲ್

Donald Trump
ವಿದೇಶ15 mins ago

Donald Trump: ಬೆದರಿಕೆಗೆ ಬಗ್ಗದ ಡೊನಾಲ್ಡ್‌ ಟ್ರಂಪ್;‌ ಕಿವಿಗೆ ಬ್ಯಾಂಡೇಜ್‌ ಕಟ್ಟಿಕೊಂಡು ಜನರೆದುರು ಪ್ರತ್ಯಕ್ಷ!

Karnataka Rain
ಮಳೆ32 mins ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

Actor Mithra
ಸ್ಯಾಂಡಲ್ ವುಡ್33 mins ago

Actor Mithra: ಖಡಕ್‌ ವಿಲನ್‌ ಆಗಿ ʼಕರಾವಳಿʼಯಲ್ಲಿ ಅಬ್ಬರಿಸಲಿದ್ದಾರೆ ಕಾಮಿಡಿ ಸ್ಟಾರ್ ಮಿತ್ರ; ಕಾಲಿವುಡ್‌ಗೂ ಎಂಟ್ರಿ

Rohit Sharma
ಕ್ರೀಡೆ48 mins ago

Rohit Sharma: ‘ಎಲಾ ಉನ್ನಾರು?’; ತೆಲುಗಿನಲ್ಲಿ ಮಾತನಾಡಿದ ರೋಹಿತ್ ಶರ್ಮ; ವಿಡಿಯೊ ವೈರಲ್​

karnataka rain
ಮಳೆ1 hour ago

Karnataka Rain : ಚಿಕ್ಕಮಗಳೂರು, ಹಾಸನದಲ್ಲಿ ಭಾರಿ ಮಳೆಗೆ ಮನೆಗಳು ನೆಲಸಮ

ಪ್ರಮುಖ ಸುದ್ದಿ1 hour ago

Karnataka Assembly Live: ಡಿಸಿಎಂ ಡಿಕೆ ಶಿವಕುಮಾರ್-‌ ಅಶ್ವಥ್‌ ನಾರಾಯಣ್‌ ವಾಗ್ಯುದ್ಧ; ಗದ್ದಲ

Alcohol Delivery
ದೇಶ1 hour ago

Alcohol Delivery: ಎಣ್ಣೆ ಪ್ರಿಯರಿಗೆ ಗುಡ್‌ ನ್ಯೂಸ್;‌ ಇನ್ನು ಸ್ವಿಗ್ಗಿಯಲ್ಲಿ ಮನೆ ಬಾಗಿಲಿಗೆ ಬರಲಿದೆ ಆಲ್ಕೋಹಾಲ್!

Doda Encounter
ದೇಶ1 hour ago

Doda Encounter: ಜಮ್ಮು- ಕಾಶ್ಮೀರದಲ್ಲಿ ಉಗ್ರರ ದಾಳಿ; ಬಿಜೆಪಿಯ ತಪ್ಪು ನೀತಿಯೇ ಕಾರಣ ಎಂದ ರಾಹುಲ್‌ ಗಾಂಧಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ32 mins ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ2 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ20 hours ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌