Shilpa Shetty : 3.5 ಕೋಟಿ ರೂಪಾಯಿ ಬೆಲೆಯ ರೇಂಜ್​ ರೋವರ್​​ ಕಾರು ಖರೀದಿಸಿದ ಶಿಲ್ಪಾ ಶೆಟ್ಟಿ; ವಿಡಿಯೊ ನೋಡಿ - Vistara News

Latest

Shilpa Shetty : 3.5 ಕೋಟಿ ರೂಪಾಯಿ ಬೆಲೆಯ ರೇಂಜ್​ ರೋವರ್​​ ಕಾರು ಖರೀದಿಸಿದ ಶಿಲ್ಪಾ ಶೆಟ್ಟಿ; ವಿಡಿಯೊ ನೋಡಿ

Shilpa Shetty : ಶಿಲ್ಪಾ ಶೆಟ್ಟಿ ಮತ್ತು ಅವರ ಹೊಸ ರೇಂಜ್ ರೋವರ್ ನಲ್ಲಿ ಬರುವ ವೀಡಿಯೊ ಇನ್​ಸ್ಟಾಗ್ರಾಮ್​ನಲ್ಲಿ ವೈರಲ್ ಆಗಿದೆ. ವೈರಲ್ ಭಯಾನಿ ಎಂಬ ಖಾತೆಯಲ್ಲಿ ಅದು ಓಡಾಡುತ್ತಿದೆ. ಲೋಕ ಸಭಾ ಚುನಾವಣೆಯ ಮತದಾನಕ್ಕೆ ಅವರು ಆ ಕಾರಿನಲ್ಲಿ ಬಂದಿದ್ದರು. ಅವರ ಸಹೋದರಿ ಶಮಿತಾ ಶೆಟ್ಟಿ .ತಾಯಿ ಸುನಂದಾ ಶೆಟ್ಟಿ ಕೂಡ ಕಾರಿನಲ್ಲಿ ಬಂದಿದ್ದರು. ಅದರ ವಿಡಿಯೊ ಈ ಕೆಳಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಾಲಿವುಡ್ ಸೆಲೆಬ್ರಿಟಿಗಳು ಮತ್ತು ಐಷಾರಾಮಿ ಕಾರುಗಳ ನಡುವೆ ಅವಿನಾಭಾವ ಸಂಬಂಧ. ಅದರಲ್ಲೂ ಅವರೆಲ್ಲರಿಗೂ ಬ್ರಿಟನ್​ ಮೂಲದ ಪ್ರಸ್ತುತ ಟಾಟಾ ಒಡೆತನದಲ್ಲಿರುವ ರೇಂಜ್ ರೋವರ್​ ಕಾರುಗಳೆಂದರೆ ಇನ್ನಷ್ಟು ಇಷ್ಟ. ಹೀಗಾಗಿ ಬಾಲಿವುಡ್ ಸೆಲೆಬ್ರಿಟಿಗಳು ರೇಂಜ್ ರೋವರ್ ನ ಸಂಗ್ರಹಗಳನ್ನು ಹೊಂದಿರುತ್ತಾರೆ. ಆಗಾಗ ಕಾರುಗಳನ್ನು ಬದಲಿಸುತ್ತಿರುತ್ತಾರೆ. ಅಂತೆಯೇ ನಟಿ ಶಿಲ್ಪಾ ಶೆಟ್ಟಿ (Shilpa Shetty ) ಹೊಸ ರೇಂಜ್​ ರೋವರ್ ಕಾರನ್ನು ಖರೀದಿ ಮಾಡಿದ್ದಾರೆ. ಅವರು ತಮ್ಮ ಸಹೋದರಿ ಮತ್ತು ತಾಯಿಯೊಂದಿಗೆ ಈ ಕಾರಿನಲ್ಲಿ ಓಡಾಡುತ್ತಿರುವ ವಿಡಿಯೊವೊಂದು ವೈರಲ್ ಆಗಿದೆ. ಅಂದ ಹಾಗೆ ಇದು ಅವರ ಬಳಿಯಿರುವ ಎರಡನೇ ರೇಂಜ್ ರೋವರ್ ಕಾರು. ಜತೆಗೆ ಅವರ ಸಂಗ್ರಹದಲ್ಲಿ ಇನ್ನೂ ಹಲವಾರು ಕಾರುಗಳಿವೆ.

ಶಿಲ್ಪಾ ಶೆಟ್ಟಿ ಮತ್ತು ಅವರ ಹೊಸ ರೇಂಜ್ ರೋವರ್ ನಲ್ಲಿ ಬರುವ ವೀಡಿಯೊ ಇನ್​ಸ್ಟಾಗ್ರಾಮ್​ನಲ್ಲಿ ವೈರಲ್ ಆಗಿದೆ. ವೈರಲ್ ಭಯಾನಿ ಎಂಬ ಖಾತೆಯಲ್ಲಿ ಅದು ಓಡಾಡುತ್ತಿದೆ. ಲೋಕ ಸಭಾ ಚುನಾವಣೆಯ ಮತದಾನಕ್ಕೆ ಅವರು ಆ ಕಾರಿನಲ್ಲಿ ಬಂದಿದ್ದರು. ಅವರ ಸಹೋದರಿ ಶಮಿತಾ ಶೆಟ್ಟಿ .ತಾಯಿ ಸುನಂದಾ ಶೆಟ್ಟಿ ಕೂಡ ಕಾರಿನಲ್ಲಿ ಬಂದಿದ್ದರು. ಅದರ ವಿಡಿಯೊ ಈ ಕೆಳಗಿದೆ.

ವೀಡಿಯೊದಿಂದ, ನಟಿ ತನ್ನ ಹೊಸ ರೇಂಜ್ ರೋವರ್ ಗಾಗಿ ಸ್ಯಾಂಟೋರಿನಿ ಬ್ಲ್ಯಾಕ್ ನ ಕ್ಲಾಸಿ ಮತ್ತು ಅತ್ಯಂತ ಜನಪ್ರಿಯ ಕಾರು. ಶಿಲ್ಪಾ ಶೆಟ್ಟಿ ಹೊಂದಿರುವ ಕಾರಿನ ನಿಖರ ವೇರಿಯೆಂಟ್​ ತಿಳಿದಿಲ್ಲ. ಆದಾಗ್ಯೂ, ಅಲಾಯ್ ಚಕ್ರಗಳನ್ನು ಗಮನಿಸಿದರೆ, ಇದು ಆಟೋಬಯೋಗ್ರಫಿ ರೂಪಾಂತರವಾಗಿರಬಹುದು ಎಂದು ತೋರುತ್ತದೆ.

ಏನೆಲ್ಲ ಫೀಚರ್​ಗಳಿವೆ?

ಲ್ಯಾಂಡ್ ರೋವರ್ ರೇಂಜ್ ರೋವರ್ ಆಟೋಬಯಗ್ರಫಿ ಹಲವಾರು ಫೀಚರ್​ಗಳೊಂದಿಗೆ ಬರುತ್ತದೆ. ಈ ಪಟ್ಟಿಯಲ್ಲಿ ಸಿಗ್ನೇಚರ್ ಡಿಆರ್​​ಎಲ್​​, ಡಿಜಿಟಲ್ ಎಲ್ಇಡಿ ಹೆಡ್​ಲೈಟ್​ಗಳು, 22 ಇಂಚಿನ ಡೈಮಂಡ್-ಕಟ್ ಅಲಾಯ್ ವೀಲ್​ಗಳು , ಫ್ಲಶ್-ಟೈಪ್ ಡೋರ್ ಹ್ಯಾಂಡಲ್​ಗಳು ಸೇರಿವೆ.

ಒಳಭಾಗದಲ್ಲಿ 13.1 ಇಂಚಿನ ಟಚ್ ಸ್ಕ್ರೀನ್ ಪಿವಿ ಪ್ರೊ, ಡಿಜಿಟಲ್ ಆಡಿಯೋ ಬ್ರಾಡ್ ಕಾಸ್ಟ್ (ಡಿಎಬಿ) ರೇಡಿಯೋ, ವೈರ್ ಲೆಸ್ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ, ಡಿಜಿಟಲ್ ಇನ್ಸ್ ಟ್ರೂಮೆಂಟ್ ಗೇಜ್ ಕ್ಲಸ್ಟರ್, ವಾಯ್ಸ್ ಕಂಟ್ರೋಲ್ ಮತ್ತು ಹೆಡ್-ಅಪ್ ಡಿಸ್ ಪ್ಲೇಯನ್ನು ನೀಡಲಾಗಿದೆ.

ಮೆರಿಡಿಯನ್ ಸಿಗ್ನೇಚರ್ ಸೌಂಡ್ ಸಿಸ್ಟಮ್ ಮತ್ತು 24 ವೇ ಹೀಟೆಡ್ ಮತ್ತು ಕೂಲ್ಡ್ ಮಸಾಜ್ ಎಲೆಕ್ಟ್ರಿಕ್ ಫ್ರಂಟ್ ಸೀಟ್​​ಗಳಿವೆ. ಇದು ಎಕ್ಸಿಕ್ಯೂಟಿವ್-ಕ್ಲಾಸ್ ಹಿಂಭಾಗದ ಸೀಟುಗಳು, ಬಯೋಗ್ರಫಿ ಬಾಹ್ಯ ಪ್ಯಾಕ್, ನಾಲ್ಕು- ರೀಜನ್​ ಕ್ಲೈಮೇಟ್​ ಕಂಟ್ರೋಲ್​ ವ್ಯವಸ್ಥೆಯನ್ನು ಹೊಂದಿದೆ.

ಪವರ್​ ಟ್ರೇನ್ ಹೇಗಿದೆ?

ಪವರ್ ಟ್ರೇನ್ ವಿಷಯಕ್ಕೆ ಬಂದರೆ, ಬಯೋಗ್ರಫಿ ವೇರಿಯೆಂಟ್​​ ನಾಲ್ಕು ಎಂಜಿನ್ ಆಯ್ಕೆಗಳೊಂದಿಗೆ ಬರುತ್ತದೆ. ಮೊದಲನೆಯದು 3.0-ಲೀಟರ್ ಪೆಟ್ರೋಲ್ ಎಂಜಿನ್ ಆಗಿದ್ದು, ಇದು 346 ಬಿಹೆಚ್ ಪಿ ಮತ್ತು 700 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. 3.0 ಲೀಟರಿನ ಡೀಸೆಲ್ ಎಂಜಿನ್ 346 ಬಿ ಹೆಚ್ ಪಿ ಪವರ್ ಹಾಗೂ 700 ಎನ್ ಎಂ ಟಾರ್ಕ್ ಬಿಡುಗಡೆ ಮಾಡುತ್ತದೆ.

ಇದನ್ನೂ ಓದಿ: Electric Scooters : ದೊಡ್ಡ ಬೂಟ್​ ಸ್ಪೇಸ್ ಇರುವಂಥ 5 ಎಲೆಕ್ಟ್ರಿಕ್​ ಸ್ಕೂಟರ್​ಗಳು ಇವು

4.4 ಲೀಟರಿನ ಪೆಟ್ರೋಲ್ ಎಂಜಿನ್ 523 ಬಿ ಹೆಚ್ ಪಿ ಪವರ್ ಹಾಗೂ 750 ಎನ್ ಎಂ ಟಾರ್ಕ್ ಉತ್ಪಾದಿಸುತ್ತದೆ. ಕೊನೆಯದಾಗಿ, ಪ್ಲಗ್-ಇನ್ ಹೈಬ್ರಿಡ್ ಎಂಜಿನ್ ಆಯ್ಕೆಯೂ ಇದೆ. ಇದು ಬಲವಾದ ಹೈಬ್ರಿಡ್ ಸಿಸ್ಟಮ್ ನೊಂದಿಗೆ 3.0-ಲೀಟರ್ ವಿ 8 ಎಂಜಿನ್ ಅನ್ನು ಪಡೆಯುತ್ತದೆ. ಈ ಎಂಜಿನ್ 345 ಬಿ ಹೆಚ್ ಪಿ ಪವರ್ ಮತ್ತು 700 ಎನ್ ಎಂ ಟಾರ್ಕ್ ಉತ್ಪಾದಿಸುತ್ತದೆ.

ಶಿಲ್ಪಾ ಶೆಟ್ಟಿ ಇತ್ತೀಚೆಗೆ ಬಳಸಿದ ಬೆಂಟ್ಲೆ ಫ್ಲೈಯಿಂಗ್ ಸ್ಪರ್ ಕಾರನ್ನು ಖರೀದಿಸಿದ್ದಾರೆ. ಈ ಕಾರನ್ನು ತೆಲಂಗಾಣ ಮೂಲದ ಕಾನೂನು ಸೇವೆಗಳ ಕಂಪನಿಯಿಂದ ಖರೀದಿಸಿದ್ದಾರೆ. ಇದರ ನಿಜವಾದ ಬಣ್ಣ ಬಿಳ.; ಆದಾಗ್ಯೂ, ನಟಿ ಅದನ್ನು ಪ್ರಕಾಶಮಾನವಾದ ಕ್ರೋಮ್ ಬಣ್ಣ ಕೊಡಿಸಿದ್ದಅರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Viral Video: ಬಕ್ರೀದ್ ಬಲಿ ಕೊಡುವ ಮೇಕೆಯ ಮೈಮೇಲೆ ʼರಾಮʼ ನಾಮ; ಹಿಂದೂಗಳನ್ನು ಕೆಣಕಿದ ವ್ಯಕ್ತಿ ಅರೆಸ್ಟ್

Viral Video: ದೇಶದಲ್ಲಿ ಸಾಮರಸ್ಯ ಕದಡುವ ಘಟನೆ ಆಗಾಗ ನಡೆಯುತ್ತಲೇ ಇರುತ್ತವೆ. ಅದರಲ್ಲೂ ಈ ಧಾರ್ಮಿಕ ಹಬ್ಬಗಳು ಬಂದಾಗ ಏನಾದರೊಂದು ಘಟನೆ ಮಾಡಿ ನೆಮ್ಮದಿ ಹಾಳು ಮಾಡುತ್ತಿರುತ್ತಾರೆ. ಬಕ್ರೀದ್ ಹಬ್ಬದ ಹಿನ್ನೆಲೆ ಮಟನ್ ಅಂಗಡಿ ಮಾಲೀಕನೊಬ್ಬ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವಂತಹ ಕೆಲಸ ಮಾಡಿದ್ದಾನೆ. ಬಿಳಿ ಬಣ್ಣದ ಮೇಕೆಯ ಮೈ ಮೇಲೆ ಹಳದಿ ಬಣ್ಣದಲ್ಲಿ ರಾಮ್ ಎಂದು ಬರೆದು ಮಾಂಸದ ಅಂಗಡಿಯ ಹೊರಗೆ ಆ ಮೇಕೆಯನ್ನು ಕಟ್ಟಿಹಾಕಿದ್ದಾನೆ. ಇದು ಹಿಂದೂಗಳ ಕಣ್ಣಿಗೆ ಬಿದ್ದು ಕೋಲಾಹಲಕ್ಕೆ ಕಾರಣವಾಗಿದೆ ಇದಕ್ಕೆ ಸಂಬಂಧಿಸಿದ ವಿಡಿಯೊ ಈ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

VISTARANEWS.COM


on

Viral Video
Koo

ಮುಂಬೈ : ಮುಸ್ಲಿಮರಿಗೆ ಬಕ್ರೀದ್ ಹಬ್ಬ ತುಂಬಾ ವಿಶೇಷವಾದದ್ದು. ಹಾಗಾಗಿ ಈ ದಿನ ಅವರ ಸಂಪ್ರದಾಯದಂತೆ ಮೇಕೆಗಳನ್ನು ಬಲಿಕೊಡಲಾಗುತ್ತದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರಗಳೂ ಕೂಡ ಇತರರ ಭಾವನೆಗಳಿಗೆ ಧಕ್ಕೆಯುಂಟುಮಾಡುವ ಯಾವುದೇ ದುರ್ಘಟನೆಗಳು ನಡೆಯಬಾರದೆಂದು ಮುಸ್ಲಿಂರಿಗೆ ಹಾಗೂ ಆಡಳಿತ ಅಧಿಕಾರಿಗೂ ಸೂಚಿಸಿದೆ. ಆದರೂ ಇದರ ನಡುವೆ ಮಟನ್ ಅಂಗಡಿ ಮಾಲೀಕನೊಬ್ಬ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವಂತಹ ಕೆಲಸ ಮಾಡಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೊ ವೈರಲ್
(Viral Video )ಆಗಿದೆ.

ಮುಂಬೈನ ಬೆಲಾಪುರದ ಸೆಂಟ್ರಲ್ ಬ್ಯುಸಿನೆಸ್ ಡಿಸ್ಟ್ರಿಕ್ಟ್ ನಲ್ಲಿರುವ ಗುಡ್ ಲಕ್ ಮಟನ್ ಅಂಗಡಿ ಮಾಲೀಕ ಮಹಮ್ಮದ್ ಶಾಫಿ ಎಂಬುವವನು ಬಲಿದಾನದ ಬಿಳಿ ಬಣ್ಣದ ಮೇಕೆಯ ಮೈ ಮೇಲೆ ಹಳದಿ ಬಣ್ಣದಲ್ಲಿ ರಾಮ್ ಎಂದು ಬರೆದು ಮಾಂಸದ ಅಂಗಡಿಯ ಹೊರಗೆ ಆ ಮೇಕೆಯನ್ನು ಕಟ್ಟಿಹಾಕಿದ್ದ. ಇದು ಹಿಂದೂಗಳ ಕಣ್ಣಿಗೆ ಬಿದ್ದು ಕೋಲಾಹಲಕ್ಕೆ ಕಾರಣವಾಗಿದೆ. ಜೂನ್ 15ರಂದು ಈ ಘಟನೆ ನಡೆದಿದ್ದು, ರಾಮ ಎನ್ನುವುದು ಹಿಂದೂಗಳ ದೇವರಾದ ಕಾರಣ ಹಿಂದೂ ಸಂಘಟನೆಯ ಕೆಲವು ಜನರು ಅಲ್ಲಿಗೆ ಬಂದು ಗಲಾಟೆ ಮಾಡಿದ್ದಾರೆ. ಹಾಗೇ ಈ ದೃಶ್ಯವನ್ನು ವಿಡಿಯೊ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಇದು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ವಿಡಿಯೊದಲ್ಲಿ ಹಿಂದೂಗಳು ಅಂಗಡಿಗೆ ನುಗ್ಗಿ ಮಾಲೀಕನ ಜೊತೆ ಗಲಾಟೆ ನಡೆಸಿದ್ದು, ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ನಿಭಾಯಿಸಲು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ. ಈ ಬಗ್ಗೆ ಅಂಗಡಿ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಹಾಗೂ ಆತನ ಅಂಗಡಿಯನ್ನು ಮುಚ್ಚಲಾಗಿದೆ. ಸೋಶಿಯಲ್ ಮೀಡಿಯಾದ ಬಳಕೆದಾರರು, ಹಿಂದೂ ಸಂಘಟನೆಗಳು ಸೇರಿ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ:  ಬಕ್ರೀದ್ ಹಿನ್ನೆಲೆಯಲ್ಲಿ ಮಾರಾಟಕ್ಕಿಟ್ಟಿದ್ದ ಈ ಮೇಕೆಯ ಬೆಲೆ 69 ಲಕ್ಷ ರೂ!

ಹಿಂದುತ್ವ ನೈಟ್ ಎಂಬ ಬಳಕೆದಾರರು ಸಾಮಾಜಿಕ ಮಾಧ್ಯಮ ಪ್ಲಾಟ್ ಫಾರ್ಮ್ ನಲ್ಲಿ ತಮ್ಮ ಕೋಪವನ್ನು ಹೊರಹಾಕಿದ್ದಾರೆ. “ಇದು ಅತಿರೇಕವಾಗಿದೆ. ಗುಡ್ ಲಕ್ ಮಟನ್ ಸ್ಟೋರ್ ಮಾರಾಟ ಮಾಡುವ ಮೇಕೆಯ ಮೇಲೆ ರಾಮ್ ಹೆಸರನ್ನು ಬರೆಯಲಾಗಿದೆ. ಬಕ್ರೀದ್ ದಿನದಂದು ಈ ಮೇಕೆಯನ್ನು ಬಹಿರಂಗವಾಗಿ ಕೊಲ್ಲುವುದರ ಮೂಲಕ ಹಿಂದೂ ಸಮುದಾಯವನ್ನು ಉದ್ದೇಶಪೂರ್ವಕವಾಗಿ ಪ್ರಚೋದಿಸುತ್ತಿದ್ದಾರೆ. ಈ ಮೂಲಕ ಅವರು ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದಿದ್ದಕ್ಕಾಗಿ ಕಠಿಣ ಕ್ರಮ ಕೈಗೊಳ್ಳುವಂತೆ ಮುಂಬೈ ಪೊಲೀಸರಲ್ಲಿ ವಿನಂತಿಸುತ್ತೇವೆ” ಎಂದು ಪೋಸ್ಟ್ ಮಾಡಿದ್ದಾರೆ.

Continue Reading

Latest

Yogi Adithyanath: ಎರಡು ವರ್ಷಗಳ ಬಳಿಕ ತಾಯಿಯನ್ನು ಭೇಟಿಯಾದ ಯೋಗಿ ಆದಿತ್ಯನಾಥ್

Yogi Adityanath: ಉತ್ತರ ಪ್ರದೇಶದ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ್ ಅವರು ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ತಾಯಿಯನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಅವರ ಯೋಗಕ್ಷೇಮವನ್ನು ವಿಚಾರಿಸಿದ್ದಾರೆ. ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿಯವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು ಅವರು ಉತ್ತರಾಖಂಡದ ಹೃಷಿಕೇಶದಲ್ಲಿರುವ ಆಲ್ ಇಂಡಿಯಾ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಯೋಗಿ ಆದಿತ್ಯನಾಥ್ ಸುಮಾರು 20 ನಿಮಿಷಗಳ ಕಾಲ ತಮ್ಮ ತಾಯಿಯ ಜೊತೆ ಸಮಯ ಕಳೆದಿದ್ದಾರೆ.

VISTARANEWS.COM


on

Yogi Adithyanath
Koo

ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adithyanath) ಅವರು ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ತಾಯಿಯನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿಯವರು ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಉತ್ತರಾಖಂಡದ ಹೃಷಿಕೇಶದಲ್ಲಿರುವ ಆಲ್ ಇಂಡಿಯಾ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹಾಗಾಗಿ ಮುಖ್ಯಮಂತ್ರಿಗಳು ಭಾನುವಾರದಂದು ಆಸ್ಪತ್ರೆಗೆ ಭೇಟಿ ನೀಡಿ ತಮ್ಮ ತಾಯಿಯ ಯೋಗ ಕ್ಷೇಮ ವಿಚಾರಿಸಿದ್ದಾರೆ. ಅವರು ಸುಮಾರು 20 ನಿಮಿಷಗಳ ಕಾಲ ತಮ್ಮ ತಾಯಿಯ ಜೊತೆ ಸಮಯ ಕಳೆದಿದ್ದಾರೆ.

ಈ ವೇಳೆ ಮುಖ್ಯಮಂತ್ರಿಗಳ ಜೊತೆ ಉತ್ತರಾಖಂಡದ ಆರೋಗ್ಯ ಸಚಿವ ಧನ್ ಸಿಂಗ್ ರಾವತ್ ಮತ್ತು ಹರಿದ್ವಾರ ಸಂಸದ ತ್ರಿವೇಂದ್ರ ಸಿಂಗ್ ಜೊತೆಗಿದ್ದರು ಎನ್ನಲಾಗಿದೆ. ಹಾಗೇ ಶನಿವಾರದಂದು ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಕೂಡ ಮುಖ್ಯಮಂತ್ರಿ ಯೋಗಿಯವರ ತಾಯಿಯನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಇದು ಮುಖ್ಯಮಂತ್ರಿಯವರು ಎರಡು ವರ್ಷಗಳ ಬಳಿಕ ತಮ್ಮ ತಾಯಿಯನ್ನು ಮೊದಲ ಬಾರಿಗೆ ಭೇಟಿ ಮಾಡುತ್ತಿರುವುದಾಗಿದೆ. ಅವರ ತಾಯಿ ಸಾವಿತ್ರಿ ದೇವಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಈ ಹಿಂದೆ ಅವರು ಕಣ್ಣಿನ ಸೋಂಕಿಗೂ ಕೂಡ ಒಳಗಾಗಿದ್ದರು ಎಂಬುದಾಗಿ ತಿಳಿದುಬಂದಿದೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೂಲತಃ ಉತ್ತರಾಖಂಡದವರಾಗಿದ್ದು, ಅವರ ಕುಟುಂಬದವರು ಪೌರಿ ಗಢವಾಲ್ ನ ಪಚೌರ್ ಗ್ರಾಮದಲ್ಲಿ ನೆಲೆಸಿದ್ದಾರೆ. ಮುಖ್ಯಮಂತ್ರಿಗಳು ಈ ಹಿಂದೆ 2022ರಲ್ಲಿ ತಮ್ಮ ಕುಟುಂಬದವರಿರುವ ಗ್ರಾಮಕ್ಕೆ ಭೇಟಿ ನೀಡಿ ತಾಯಿಯ ಆಶೀರ್ವಾದ ಪಡೆದಿದ್ದರು.

ಇದನ್ನೂ ಓದಿ: Head Shave: ಪೋಷಕರು ಬಿಜೆಪಿಯನ್ನು ಬೆಂಬಲಿಸಿದ್ದಕ್ಕೆ ದಲಿತ ಹುಡುಗನ ತಲೆ ಬೋಳಿಸಿದರು!

ಮುಖ್ಯಮಂತ್ರಿ ಯೋಗಿ ಅವರು ತಮ್ಮ ತಾಯಿಯನ್ನು ಭೇಟಿ ಬಳಿಕ ರುದ್ರಪ್ರಯಾಗ ರಸ್ತೆ ಅಪಘಾತದಲ್ಲಿ ಗಾಯಗೊಂಡ ಸಂತ್ರಸ್ತರನ್ನು ಭೇಟಿ ಮಾಡಿ ಅವರ ಸ್ಥಿತಿಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಅವರಿಗೆ ಸರಿಯಾದ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಸೂಚಿಸಿದರು. ಹಾಗೇ ಗಾಯಾಳುಗಳು ಹಾಗೂ ವೈದ್ಯರ ಜೊತೆ ಮಾತುಕತೆ ನಡೆಸಿ ಅವರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವುದಾಗಿ ರಾಜ್ಯ ಸರ್ಕಾರದ ಕಡೆಯಿಂದ ಭರವಸೆ ನೀಡಿದ್ದಾರೆ. ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯಲ್ಲಿ ಶನಿವಾರ 26 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಟೆಂಪೊವೊಂದು ಆಳವಾದ ಕಣಿವೆಗೆ ಬಿದ್ದ ಪರಿಣಾಮ ಕನಿಷ್ಠ 14 ಮಂದಿ ಸಾವನಪ್ಪಿದ್ದಾರೆ. ಈ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಉತ್ತರಾಖಂಡ ಸರ್ಕಾರ ಆದೇಶಿಸಿತ್ತು.

Continue Reading

Latest

Bakrid: ಬಕ್ರೀದ್ ಹಿನ್ನೆಲೆಯಲ್ಲಿ ಮಾರಾಟಕ್ಕಿಟ್ಟಿದ್ದ ಈ ಮೇಕೆಯ ಬೆಲೆ 69 ಲಕ್ಷ ರೂ!

Bakrid ಬಕ್ರೀದ್ ಹಬ್ಬದಂದು ಬಲಿದಾನದ ಫಲ ಸಿಗಬೇಕೆಂದರೆ ಮೇಕೆಯನ್ನು ಮುಸ್ಲಿಂರು ಅವರ ಸ್ವಂತ ಹಣದಿಂದ ಖರೀದಿಸಬೇಕಂತೆ. ಈ ರೀತಿ ಮಾಡುವುದರಿಂದ ಅವರಿಗೆ ಬಲಿದಾನದ ಸಂಪೂರ್ಣ ಫಲ ಸಿಗುತ್ತದೆ ಎನ್ನುವುದು ಅವರ ನಂಬಿಕೆ. ಹಾಗಾಗಿ ಮುಸ್ಲಿಂರು ಮೇಕೆಗಳನ್ನು ಕಷ್ಟಪಟ್ಟು ದುಡಿದ ಹಣದಿಂದ ಖರೀದಿಸುತ್ತಾರಂತೆ. ಆದರೆ ಬಕ್ರೀದ್ ದಿನ ಮೇಕೆಗಳ ಬೆಲೆ ಮಾತ್ರ ಕೇಳಿದ್ರೆ ಎಲ್ಲರೂ ಶಾಕ್ ಆಗುತ್ತಾರೆ. ಇನ್ನು ಒಂದೊಂದು ಮೇಕೆಗೂ ಒಂದೊಂದು ಬೆಲೆ ಇರುತ್ತದೆ. ಆದರೆ ಈ ಮೇಕೆಗಳಲ್ಲಿ ಒಂದು ಬಹಳ ದುಬಾರಿ ಮೇಕೆ ಇದೆ.ಅದುವೇ ಬ್ರಾಡ್ ಹೆಸರಿನ ಮೇಕೆ.

VISTARANEWS.COM


on

Bakrid
Koo

ಬೆಂಗಳೂರು : ಬಕ್ರೀದ್‌ ಮುಸ್ಲಿಂ ಭಾಂದವರು ಆಚರಿಸುವ ಹಬ್ಬ. ಬಕ್ರೀದ್‌ (Bakrid) ಹಬ್ಬದಂದು ಮೇಕೆಗಳನ್ನು ಬಲಿಕೊಡುವುದು ಅವರ ಸಂಪ್ರದಾಯ. ಇನ್ನು ವಿಶೇಷವೆಂದರೆ ಈ ಬಕ್ರೀದ್‌ ಹಬ್ಬದಂದು ಬಲಿದಾನದ ಫಲ ಸಿಗಬೇಕೆಂದರೆ ಮೇಕೆಯನ್ನು ಅವರ ಸ್ವಂತ ಹಣದಿಂದ ಖರೀದಿಸಬೇಕಂತೆ. ಈ ರೀತಿ ಮಾಡುವುದರಿಂದ ಅವರಿಗೆ ಬಲಿದಾನದ ಸಂಪೂರ್ಣ ಫಲ ಸಿಗುತ್ತದೆ ಎನ್ನುವುದು ಅವರ ನಂಬಿಕೆ. ಹಾಗಾಗಿ ಮುಸ್ಲಿಂರು ಮೇಕೆಗಳನ್ನು ಕಷ್ಟಪಟ್ಟು ದುಡಿದ ಹಣದಿಂದ ಖರೀದಿಸುತ್ತಾರಂತೆ. ಆದರೆ ಬಕ್ರೀದ್ ದಿನ ಮೇಕೆಗಳ ಬೆಲೆ ಮಾತ್ರ ಗಗನಕ್ಕೇರಿರುತ್ತದೆ.

ಇನ್ನು ಈ ಸಂದರ್ಭದಲ್ಲಿ ಲಕ್ಷಾಂತರ ಬೆಲೆಗೆ ಮೇಕೆಗಳು ಮಾರಾಟವಾಗುತ್ತವೆ. ಒಂದೊಂದು ಮೇಕೆಗೂ ಒಂದೊಂದು ಬೆಲೆ ಇರುತ್ತದೆ. ಆದರೆ ಈ ಮೇಕೆಗಳಲ್ಲಿ ಒಂದು ಬಹಳ ದುಬಾರಿ ಮೇಕೆ ಇದೆ. ಅದರ ಬಗ್ಗೆ ತಿಳಿದುಕೊಳ್ಳಿ.
ಬ್ರಾಡ್ ಎಂಬ ಹೆಸರಿನ ಮೇಕೆ ವಿಶ್ವದಲ್ಲಿ ಅತ್ಯಂತ ದುಬಾರಿ ಬೆಲೆಗೆ ಮಾರಾಟವಾಗುತ್ತದೆ. ಹಾಗಾಗಿ ಅದರ ಹೆಸರು ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ದಾಖಲಾಗಿದೆ.. ವರ್ಲ್ಡ್ ರೆಕಾರ್ಡ್ಸ್ ನ ಪ್ರಕಾರ, ಈ ಮೇಕೆಯ ಬೆಲೆ 82,600 ಯುಎಸ್ ಡಿ ಆಗಿದೆ. ಅಂದರೆ ಭಾರತೀಯ ರೂಪಾಯಿಗಳಲ್ಲಿ ಹೇಳುವುದಾದರೆ ಇದರ ಬೆಲೆ ಅಂದಾಜು 69 ಲಕ್ಷ ರೂ.ಗಳಾಗಿವೆ. ಇಂತಹ ಅತ್ಯಂತ ದುಬಾರಿ ಬೆಲೆಯ ಮೇಲೆ ಬ್ರಿಟನ್ ನಲ್ಲಿ ಹೆಚ್ಚು ಮಾರಾಟವಾಗುತ್ತದೆಯಂತೆ. ಇದಕ್ಕೆ ಇತ್ತೀಚಿನ ದಿನಗಳಲ್ಲಿ ಈ ಬೆಲೆ ನಿಗದಿಯಾಗಿಲ್ಲ ಬಹಳ ಹಿಂದೆ ಅಂದರೆ 1985ರಲ್ಲಿಯೇ ಈ ಮೇಕೆಗೆ ದುಬಾರಿ ಬೆಲೆ ನೀಡಲಾಗುತ್ತಿತ್ತಂತೆ.

ಅಂಗೋರಾ ಮೇಕೆಯ ವಿಶೇಷತೆಗಳು:

ಬಿಳಿ ಬಣ್ಣದ ಕೂದಲನ್ನು ಹೊಂದಿರುವ ಈ ಅಂಗೋರಾ ಮೇಕೆಗಳು ವಿಶ್ವದ ಅತ್ಯುತ್ತಮ ಮೇಕೆ ತಳಿಗಳಲ್ಲಿ ಒಂದಾಗಿದೆ. ಈ ಮೇಕೆಗಳನ್ನು ಉಣ್ಣೆಗಳಿಗಾಗಿ ಹೆಚ್ಚಿನ ಜನರು ಸಾಕುತ್ತಾರೆ. ಇದರಿಂದ ದೊರೆಯುವ ಉಣ್ಣೆಗಳಿಗೆ ಮೊಹೇರ್ ಎಂದು ಕರೆಯುತ್ತಾರೆ. ಇದರ ಉಣ್ಣೆ ಉತ್ತಮ ಗುಣಮಟ್ಟದಾಗಿರುತ್ತದೆ. ಹಾಗಾಗಿ ಈ ಮೇಕೆಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡಲಾಗುತ್ತದೆ. ಬಕ್ರೀದ್ ಸಮಯದಲ್ಲಿ ಅನೇಕ ಜನರು ಹಣಕ್ಕಾಗಿ ಅವುಗಳನ್ನು ಮಾರಾಟ ಮಾಡುತ್ತಾರೆ.
ಮೇಕೆಗಳು ಅವುಗಳ ತಳಿಗಳ ಆಧಾರದ ಮೇಲೆ ವಿಶೇಷತೆಯನ್ನು ಹೊಂದಿರುತ್ತವೆ. ಮೇಕೆಗಳಲ್ಲಿ ಕೆಲವು ಕಪ್ಪು, ಬಿಳಿ ಬಣ್ಣದಲ್ಲಿದ್ದರೆ ಕೆಲವು ತಳಿಗಳ ಮೇಕೆಗಳ ಮೈಮೇಲೆ ವಿಶಿಷ್ಟವಾದ ಗುರುತುಗಳಿರುತ್ತದೆ. ಹಾಗಾಗಿ ಅವುಗಳನ್ನು ವಿಶೇಷವಾದವು ಎನ್ನಲಾಗುತ್ತದೆ.

ಇದನ್ನೂ ಓದಿ:ಸೇಬು ಹಣ್ಣುಗಳ ಮೇಲೆ ಸ್ಟಿಕ್ಕರ್; ಏನಿದರ ಹಿಂದಿರುವ ರಹಸ್ಯ?

ಇದೇ ರೀತಿ 2023ರಲ್ಲಿ ಮೈಮೇಲೆ ವಿಶಿಷ್ಟ ಗುರುತುಗಳನ್ನು ಹೊಂದಿರುವ ಮೇಕೆಯೊಂದು ಬಹಳ ಪ್ರಸಿದ್ಧವಾಗಿತ್ತು. ಅದು ಮೈಮೇಲೆ ವಿಶಿಷ್ಟ ಗುರುತುಗಳನ್ನು ಹೊಂದಿರುವ ಕಾರಣ ಅದರ ಮಾಲೀಕ 1 ಕೋಟಿ 12 ಲಕ್ಷದ 786 ರೂ. ಎಂಬುದಾಗಿ ತಿಳಿಸಿದ್ದ. ಈ ಮೇಕೆಯ ಹೆಸರು ಶೇರು. ಮಹಾರಾಷ್ಟ್ರದಲ್ಲಿ ವಾಸಿಸುತ್ತಿರುವ ಮೇಕೆ ಮಾಲೀಕನೊಬ್ಬನ ಬಳಿ ಇದು ಇತ್ತು. ಇದರ ದೇಹದ ಮೇಲೆ ಇದ್ದ ಗುರುತುಗಳನ್ನು ಹತ್ತಿರದಿಂದ ನೋಡಿದರೆ ಅದು “ ಅಲ್ಲಾ” ಮತ್ತು “ಮೊಹಮ್ಮದ್” ಎಂದು ಉರ್ದುವಿನಲ್ಲಿ ಬರೆದಿರುವುದನ್ನು ಕಾಣಬಹುದು. ಆದರೆ ಈ ಮೇಕೆ ಮಾರಾಟವಾಗುವ ಮುನ್ನವೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

Continue Reading

ವಾಣಿಜ್ಯ

Real Estate: ಹಲವರಿಗೆ ಮನೆ ಇಲ್ಲ, ಇದ್ದವರು ಬಳಸುತ್ತಿಲ್ಲ! ದೇಶದಲ್ಲಿ 1 ಕೋಟಿಗೂ ಹೆಚ್ಚು ಫ್ಲ್ಯಾಟ್ ಗಳು ಖಾಲಿ ಬಿದ್ದಿವೆ!

ಖರೀದಿ ಮಾಡಿರುವ ಒಂದು ಕೋಟಿಗೂ ಹೆಚ್ಚು ಫ್ಲ್ಯಾಟ್ ಗಳು ದೇಶದಲ್ಲಿ ಖಾಲಿ ಇವೆ. ಮಾತ್ರವಲ್ಲದೆ ದೇಶದಲ್ಲಿ ಅಗ್ಗದ ಮನೆಗಳಿಗೆ ಬೇಡಿಕೆ ವೇಗವಾಗಿ ಕುಸಿಯುತ್ತಿದ್ದು, ದುಬಾರಿ ಮನೆಗಳಿಗೆ ಬೇಡಿಕೆ ಹೆಚ್ಚಾಗಿದೆ. ಇದರ ಅರ್ಥ ಎಲ್ಲರೂ ಶ್ರೀಮಂತರಾಗಿದ್ದಾರೆ ಎಂದಲ್ಲ. ರಿಯಲ್ ಎಸ್ಟೇಟ್ (Real Estate) ಉದ್ಯಮಿಗಳು ಶೇ. 10ರಷ್ಟಿರುವ ಶ್ರೀಮಂತರಿಗೆ ತಮ್ಮ ಆಸ್ತಿ ಮಾರಾಟಕ್ಕೆ ಆಸಕ್ತಿ ವಹಿಸಿರುವುದು ಇದಕ್ಕೆ ಮುಖ್ಯ ಕಾರಣ ಎಂದಿದ್ದಾರೆ ಭಾರತದ ರಾಷ್ಟ್ರೀಯ ರಿಯಲ್ ಎಸ್ಟೇಟ್ ಅಭಿವೃದ್ಧಿ ಮಂಡಳಿ (ನರೆಡ್ಕೊ) ಅಧ್ಯಕ್ಷ ಜಿ. ಹರಿಬಾಬು.

VISTARANEWS.COM


on

By

Real Estate
Koo

ಬಳಕೆಯಾಗದ ಆಸ್ತಿಯನ್ನು (assets) ಇಟ್ಟುಕೊಳ್ಳುವುದು ಒಂದು ರಾಷ್ಟ್ರೀಯ ಅಪರಾಧ (national crime) ಎಂದು ನಾನು ಭಾವಿಸುತ್ತೇನೆ. ದೇಶದಲ್ಲಿ ಒಂದೆಡೆ ವಸತಿ ಕೊರತೆಯಿದೆ. ಇನ್ನೊಂದೆಡೆ 1.14 ಕೋಟಿ ಫ್ಲಾಟ್‌ಗಳು ಖಾಲಿ ಇವೆ ಎಂದು ಭಾರತದ ರಾಷ್ಟ್ರೀಯ ರಿಯಲ್ ಎಸ್ಟೇಟ್ (Real Estate) ಅಭಿವೃದ್ಧಿ ಮಂಡಳಿ (NAREDCO) ಅಧ್ಯಕ್ಷ ಜಿ. ಹರಿಬಾಬು (G. Haribabu) ತಿಳಿಸಿದ್ದಾರೆ.

ಪ್ರಸ್ತುತ ದೇಶದಲ್ಲಿ ಸುಮಾರು ಒಂದು ಕೋಟಿ ಮನೆಗಳು ಖಾಲಿ ಬಿದ್ದಿವೆ. ಒಂದೆಡೆ ದುಬಾರಿ ಮನೆಗಳಿಗೆ ಬೇಡಿಕೆ ನಿರಂತರವಾಗಿ ಹೆಚ್ಚುತ್ತಿದೆ. ಮತ್ತೊಂದೆಡೆ ದೇಶದ ದೊಡ್ಡ ನಗರಗಳಲ್ಲಿ ಅಗ್ಗದ ಮನೆಗಳ ಬೇಡಿಕೆ ವೇಗವಾಗಿ ಕುಸಿಯುತ್ತಿದೆ ಎಂದು ಅವರು ಹೇಳಿದ್ದಾರೆ.

ಅಂಕಿಅಂಶಗಳ ಪ್ರಕಾರ 2019 ಮತ್ತು 2023 ರ ನಡುವೆ 1.5 ಕೋಟಿ ರೂ. ಗಿಂತ ಹೆಚ್ಚು ವೆಚ್ಚದ ಮನೆಗಳ ಬೇಡಿಕೆಯು ಸುಮಾರು 1000 ಪ್ರತಿಶತದಷ್ಟು ಹೆಚ್ಚಾಗಿದೆ. ಶ್ರೀಮಂತರು ಮತ್ತು ಸಾಂಸ್ಥಿಕ ಹೂಡಿಕೆದಾರರು ರಿಯಲ್ ಎಸ್ಟೇಟ್ ಕ್ಷೇತ್ರಕ್ಕೆ ಜಿಗಿದಿರುವುದರಿಂದ ಈ ರೀತಿಯಾಗಿದೆ. ಆದರೆ, ದೇಶಕ್ಕೆ ಅಗ್ಗದ ಮನೆಗಳ ಅಗತ್ಯವಿದ್ದು, ರಿಯಲ್ ಎಸ್ಟೇಟ್ ಕ್ಷೇತ್ರದ ಅಭಿವೃದ್ಧಿಗೆ ಅವರ ಬೇಡಿಕೆಯನ್ನು ಹೆಚ್ಚಿಸಬೇಕು ಎಂದು ತಿಳಿಸಿದ್ದಾರೆ.


ಬಿಲ್ಡರ್‌ ಗಳಿಗೆ ಕೇವಲ ಶೇ. 10ರಷ್ಟು ಜನರಷ್ಟೇ ಗುರಿ

2022ರಲ್ಲಿ ಹೈದರಾಬಾದ್‌ನಲ್ಲಿ 5,300 ಅಗ್ಗದ ಮನೆಗಳನ್ನು ಮಾರಾಟ ಮಾಡಲಾಗಿದೆ. 2023ರಲ್ಲಿ ಈ ಸಂಖ್ಯೆ ಕೇವಲ 3,800 ಕ್ಕೆ ಇಳಿಕೆಯಾಗಿದೆ. ಕೆಲವೇ ಜನರಲ್ಲಿ ಹಣವು ವೇಗವಾಗಿ ಹೆಚ್ಚುತ್ತಿದೆ. ದೇಶದ ಜನಸಂಖ್ಯೆಯ ಶೇ. 10ರಷ್ಟು ಮಂದಿಯಲ್ಲಿ ಶೇ. 63ರಷ್ಟು ಸಂಪತ್ತು ಸಂಗ್ರಹವಾಗಿದೆ. ಈ ಸಂಖ್ಯೆ 14 ಕೋಟಿ ಜನರದ್ದು. ಈ ಸಮಯದಲ್ಲಿ ಹೆಚ್ಚಿನ ಬಿಲ್ಡರ್‌ಗಳು ಈ ಜನರನ್ನು ಗುರಿಯಾಗಿಸಿಕೊಂಡಿದ್ದಾರೆ. ಸುಮಾರು 1.14 ಕೋಟಿ ಮನೆಗಳು ಖಾಲಿ ಬಿದ್ದಿರುವುದಕ್ಕೆ ಇದೇ ಮುಖ್ಯ ಕಾರಣ ಎಂದು ಅವರು ಹೇಳಿದ್ದಾರೆ.

ಖರೀದಿಸಿ ಬಳಕೆಯಾಗದ ಮನೆಗಳು

ಹೂಡಿಕೆದಾರರು ಖರೀದಿಸುವ ಮನೆಗಳನ್ನು ಬಳಸುತ್ತಿಲ್ಲ ಎಂದು ತಿಳಿಸಿರುವ ಹರಿಬಾಬು, ಈ ಮನೆಗಳನ್ನು ಬಾಡಿಗೆಗೆ ಸಹ ನೀಡುತ್ತಿಲ್ಲ. ಒಂದೆಡೆ ಜನ ಮನೆ ಹುಡುಕಿಕೊಂಡು ಅಲೆದಾಡುತ್ತಿದ್ದರೆ, ಮತ್ತೊಂದೆಡೆ ಈ ಮನೆಗಳು ಖಾಲಿ ಬಿದ್ದಿವೆ. ಹೂಡಿಕೆಗಾಗಿ ಖರೀದಿಸಿದ ಈ ಮನೆಗಳು ಬಳಕೆಯಾಗುತ್ತಿಲ್ಲ. ಇದೊಂದು ರೀತಿಯ ಅಪರಾಧ. ಅಂತಹ ಮನೆಗಳ ಮೇಲಿನ ಆಸ್ತಿ ತೆರಿಗೆಯನ್ನು ಎರಡು ಅಥವಾ ಮೂರು ಪಟ್ಟು ಹೆಚ್ಚಿಸಬೇಕು. ಇದರಿಂದ ಈ ಆಸ್ತಿಯನ್ನು ಬಳಸಬಹುದು. ನಮ್ಮ ಜನಸಂಖ್ಯೆಯ ಶೇ.60ರಷ್ಟು ಮಂದಿಗೆ ಮನೆ ಖರೀದಿಸಲು ಸಾಧ್ಯವಾಗುತ್ತಿಲ್ಲ. ಅವರು ಸಂಪೂರ್ಣವಾಗಿ ಸರ್ಕಾರದ ಯೋಜನೆಗಳ ಮೇಲೆ ಅವಲಂಬಿತರಾಗಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: Water Price Hike : ತೈಲ ದರ ಬಳಿಕ ಕುಡಿಯುವ ನೀರು ದುಬಾರಿ! ನೀರಿನ ದರ ಏರಿಕೆಗೆ ಜಲಮಂಡಳಿ ಪ್ರಸ್ತಾವನೆ!

ಶುಲ್ಕಗಳಲ್ಲಿ ರಿಯಾಯಿತಿ

ಕೈಗೆಟಕುವ ದರದಲ್ಲಿ ಮನೆ ನಿರ್ಮಿಸಲು ಬಿಲ್ಡರ್ ಗಳ ಮೇಲೆ ಸರಕಾರ ಒತ್ತಡ ಹೇರಬೇಕು ಎಂದ ಅವರು, ಕೈಗೆಟಕುವ ಬೆಲೆಯ ಮನೆಗಳಿಗೆ ಜಿಎಸ್‌ಟಿ, ಮುದ್ರಾಂಕ ಶುಲ್ಕ ಮತ್ತು ನೋಂದಣಿ ಶುಲ್ಕವನ್ನು ಮನ್ನಾ ಮಾಡಬೇಕು. ಈ ಬದಲಾವಣೆಗಳು ಕೈಗೆಟುಕುವ ದರದ ವಸತಿ ವಲಯದಲ್ಲಿ ಶೇ. 25ರಷ್ಟು ಬೆಳವಣಿಗೆಯನ್ನು ತರುವ ನಿರೀಕ್ಷೆಯಿದೆ. ಕೆಳಮಧ್ಯಮ ಮತ್ತು ಮಧ್ಯಮ ವರ್ಗದವರ ಬಗ್ಗೆ ಸರಕಾರ ಚಿಂತನೆ ನಡೆಸಬೇಕಿದೆ. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸಂಕಲ್ಪದೊಂದಿಗೆ ನಾವು ಸಾಗುತ್ತಿದ್ದೇವೆ. ನಮ್ಮ ಜನಸಂಖ್ಯೆಯ ಶೇ. 40ರಷ್ಟು ಮಂದಿ ಕೊಳೆಗೇರಿಗಳಲ್ಲಿ ವಾಸಿಸುತ್ತಿದ್ದರೆ, ನಾವು ಅಭಿವೃದ್ಧಿ ಹೊಂದಿದ ದೇಶ ಎಂದು ಹೇಗೆ ಕರೆಯಬಹುದು ಎಂದು ಅವರು ಪ್ರಶ್ನಿಸಿದ್ದಾರೆ.

Continue Reading
Advertisement
Hunters Arrest
ಕ್ರೈಂ23 mins ago

Hunters Arrest : ಶಿವಮೊಗ್ಗದಲ್ಲಿ ಕಾಡುಕೋಣಗಳು ಬಲಿ; ಚಿಕ್ಕಬಳ್ಳಾಪುರ, ಬಾಗಲಕೋಟೆಯಲ್ಲಿ ಬೇಟೆಗಾರರು ಸೆರೆ

Petrol Diesel Price Hike
ಕರ್ನಾಟಕ24 mins ago

Petrol Diesel Price Hike: ಬಿಜೆಪಿಯವರು ಪ್ರತಿಭಟನೆ ಮಾಡಬೇಕಿರೋದು ಕೇಂದ್ರದ ವಿರುದ್ಧ: ಸಿಎಂ ತಿರುಗೇಟು

Kisan Samman Nidhi
ದೇಶ47 mins ago

Kisan Samman Nidhi: ರೈತರಿಗೆ ಗುಡ್‌ನ್ಯೂಸ್‌; ಕಿಸಾನ್‌ ಸಮ್ಮಾನ್‌ ನಿಧಿಯ 17ನೇ ಕಂತು ನಾಳೆ ನಿಮ್ಮ ಅಕೌಂಟ್‌ಗೆ; ಹೀಗೆ ಪರಿಶೀಲಿಸಿ

petrol diesel price hike bjp protest
ಪ್ರಮುಖ ಸುದ್ದಿ53 mins ago

Petrol Diesel Price Hike: ಪೆಟ್ರೋಲ್‌ ಬೆಲೆ ಏರಿಕೆ ಖಂಡಿಸಿ ಬಿಜೆಪಿ ವ್ಯಾಪಕ ಪ್ರತಿಭಟನೆ; ಎತ್ತಿನಗಾಡಿ, ಹೆಣ ಮೆರವಣಿಗೆ

Actor Darshan tagadu word umapathy counter now
ಕ್ರೈಂ53 mins ago

Actor Darshan: ಅಂದು `ತಗಡು’ ಅಂದಿದ್ದ ದರ್ಶನ್‌ಗೆ ಇಂದು ಉಮಾಪತಿ ಕೌಂಟರ್!

MS Dhoni
ಕ್ರೀಡೆ57 mins ago

MS Dhoni: ಕಾರಿನಲ್ಲಿ ಬರುತ್ತಿದ್ದ ಧೋನಿಯನ್ನು ತಡೆದು ನಿಲ್ಲಿಸಿ ಫೋಟೊ ತೆಗೆಸಿಕೊಂಡ ಅಭಿಮಾನಿ; ವಿಡಿಯೊ ವೈರಲ್​

Road Accident
ರಾಯಚೂರು57 mins ago

Road Accident : ನಿಂತಿದ್ದ ಟ್ಯಾಂಕರ್‌ ಟ್ಯಾಲಿಗೆ ಬೈಕ್‌ ಡಿಕ್ಕಿ; ಸವಾರ ಸಾವು, ಮತ್ತೋರ್ವ ಗಂಭೀರ

Actor Darshan support by Anusha Rai
ಸ್ಯಾಂಡಲ್ ವುಡ್1 hour ago

Actor Darshan: ದಾನ ಧರ್ಮಗಳೇ ದರ್ಶನ್‌ರನ್ನ ಕಾಪಾಡುತ್ತೆ ಎಂದ ʻನಾಗಕನ್ನಿಕೆʼ ಸೀರಿಯಲ್‌ ನಟಿ!

Gold Rate Today
ಚಿನ್ನದ ದರ1 hour ago

Gold Rate Today: ಆಭರಣ ಖರೀದಿಸುವವರಿಗೆ ರಿಲೀಫ್‌; ಇಳಿದ ಚಿನ್ನದ ದರ

GPF Interest
ಕರ್ನಾಟಕ1 hour ago

GPF Interest: ಸರ್ಕಾರಿ ನೌಕರರೇ ಗಮನಿಸಿ; 5 ಲಕ್ಷ ಮೀರಿದ ಜಿಪಿಎಫ್‌ಗೆ ಬಡ್ಡಿ ಪಾವತಿಸಲು ಸರ್ಕಾರ ಆದೇಶ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bakrid 2024
ಬೆಂಗಳೂರು2 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ20 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ21 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

ಟ್ರೆಂಡಿಂಗ್‌