ತ್ಯಾಜ್ಯದಿಂದ ಸಂಪತ್ತು ಸೃಷ್ಟಿ: ದೇಶದ ಅತಿದೊಡ್ಡ ಬಯೋ-ಗ್ಯಾಸ್ ಯೋಜನೆ ಅನುಷ್ಠಾನಕ್ಕೆ ಜಲಮಂಡಳಿ ಸಜ್ಜು - Vistara News

Latest

ತ್ಯಾಜ್ಯದಿಂದ ಸಂಪತ್ತು ಸೃಷ್ಟಿ: ದೇಶದ ಅತಿದೊಡ್ಡ ಬಯೋ-ಗ್ಯಾಸ್ ಯೋಜನೆ ಅನುಷ್ಠಾನಕ್ಕೆ ಜಲಮಂಡಳಿ ಸಜ್ಜು

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಸುಸ್ಥಿರ ನಗರ ಜಲ ನಿರ್ವಹಣೆ ಮತ್ತು ಸರ್ಕ್ಯುಲರ್ ಎಕಾನಮಿ ನಿಟ್ಟಿನಲ್ಲಿ ಕ್ರಾಂತಿಕಾರಿ ಹೆಜ್ಜೆಯನ್ನಿಟ್ಟಿರುವ ಬೆಂಗಳೂರು ಜಲಮಂಡಳಿ ಕೊಳಚೆ ನೀರಿನ ತ್ಯಾಜ್ಯವನ್ನು (𝗦𝗲𝘄𝗮𝗴𝗲 𝗦𝗹𝘂𝗱𝗴𝗲) ಆದಾಯದ ಬೃಹತ್ ಮೂಲವಾಗಿ ಪರಿವರ್ತಿಸಲು ಸಜ್ಜಾಗಿದೆ.
ತನ್ನ ಐದು ಪ್ರಮುಖ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳಲ್ಲಿ (𝗦𝗧𝗣𝘀) ಉತ್ಪತ್ತಿಯಾಗುವ ಕಚ್ಚಾ ಜೈವಿಕ ಅನಿಲವನ್ನು ಹೆಚ್ಚಿನ ಮೌಲ್ಯದ ಕಂಪ್ರೆಸ್ಡ್ ಬಯೋ-ಗ್ಯಾಸ್ (𝗖𝗼𝗺𝗽𝗿𝗲𝘀𝘀𝗲𝗱 𝗕𝗶𝗼-𝗚𝗮𝘀 – 𝗖𝗕𝗚) ಆಗಿ ಮೇಲ್ದರ್ಜೆಗೇರಿಸುವ ಮೂಲಕ, ಮಂಡಳಿಯು ಮುಂದಿನ ಎರಡು ದಶಕಗಳಲ್ಲಿ ಅಂದಾಜು 𝟭𝟮𝟬 ಕೋಟಿ ರೂ. (𝗜𝗡𝗥 𝟭𝟮𝟬 𝗖𝗿𝗼𝗿𝗲) ಹೆಚ್ಚುವರಿ ಆದಾಯವನ್ನು ಗಳಿಸಲಿದೆ. ಇದು ದೇಶದಲ್ಲೇ ತನ್ನದೇ ಮಾದರಿಯ ಮೊದಲ ಮತ್ತು ಅತಿದೊಡ್ಡ ಯೋಜನೆ ಆಗಿರುವುದರಿಂದ ಇದೊಂದು ಐತಿಹಾಸಿಕ ಮೈಲಿಗಲ್ಲಾಗಿದೆ ಎಂದು ಬೆಂಗಳೂರು ಜಲಮಂಡಲಿ ತಿಳಿಸಿದೆ.
ದೇಶದಲ್ಲಿ ಸೂರತ್‌ನಂತಹ ನಗರದಲ್ಲಿ ಕೇವಲ 𝟭𝟮𝟬 𝗠𝗟𝗗 ಸಾಮರ್ಥ್ಯದ ನೀರಿನ ಬಳಕೆಯೊಂದಿಗೆ ಇಂತಹ ಯೋಜನೆಗಳು ಕಾರ್ಯನಿರ್ವಹಿಸುತ್ತಿದ್ದರೆ, 𝗕𝗪𝗦𝗦𝗕 ಬರೋಬ್ಬರಿ 𝟱𝟱𝟬 𝗠𝗟𝗗 ಸಾಮರ್ಥ್ಯದ ತ್ಯಾಜ್ಯ ನೀರಿನ ಬಳಕೆಯೊಂದಿಗೆ ಈ ಬೃಹತ್ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ. ಇದಲ್ಲದೆ, ಈ ಸಾಮರ್ಥ್ಯವನ್ನು ಗರಿಷ್ಠಗೊಳಿಸಲು, ನಗರದಾದ್ಯಂತ ಎಲ್ಲಿ 𝗦𝗧𝗣 ಗಳಲ್ಲಿ ಬಯೋ-ಡೈಜೆಸ್ಟರ್‌ಗಳಿವೆಯೋ (𝗕𝗶𝗼-𝗱𝗶𝗴𝗲𝘀𝘁𝗲𝗿𝘀) ಅಲ್ಲೆಲ್ಲಾ ಈ ಅತ್ಯಾಧುನಿಕ ಯೋಜನೆಯನ್ನು ವಿಸ್ತರಿಸಲು ಮತ್ತು ಸ್ಥಾಪಿಸಲು ಜಲಮಂಡಳಿ ಅಧ್ಯಕ್ಷರು ಸೂಚನೆ ನೀಡಿದ್ದಾರೆ.
ಪ್ರಸ್ತುತ, ಈ 𝗦𝗧𝗣 ಗಳಲ್ಲಿ ಉತ್ಪತ್ತಿಯಾಗುವ ಜೈವಿಕ ಅನಿಲವನ್ನು ಸ್ಥಳೀಯ ವಿದ್ಯುತ್ ಉತ್ಪಾದನೆಗೆ ಬಳಸಲಾಗುತ್ತಿದೆ, ಹಾಗೂ ಒಂದು ಘಟಕದಲ್ಲಿ ಮಾತ್ರ ಸುಟ್ಟುಹಾಕಲಾಗುತ್ತಿದೆ. ಈ ಯೋಜನೆಯು ಕಚ್ಚಾ ಜೈವಿಕ ಅನಿಲವನ್ನು ನಗರ ಅನಿಲ ವಿತರಣಾ ಜಾಲ (𝗖𝗶𝘁𝘆 𝗚𝗮𝘀 𝗗𝗶𝘀𝘁𝗿𝗶𝗯𝘂𝘁𝗶𝗼𝗻 𝗡𝗲𝘁𝘄𝗼𝗿𝗸) ಗೆ ಪೂರೈಸಲು ಅಥವಾ ಶುದ್ಧ ಸಾರಿಗೆ ಇಂಧನವಾಗಿ ಬಳಸಲು ರಾಷ್ಟ್ರೀಯ ಮಾನದಂಡಗಳನ್ನು ಪೂರೈಸುವ 𝗖𝗕𝗚 ಆಗಿ ಉನ್ನತೀಕರಿಸಲು ಉದ್ದೇಶಿಸಿದೆ. ಕೇವಲ ವಿದ್ಯುತ್ ವೆಚ್ಚವನ್ನು ಸರಿದೂಗಿಸುವ ಬದಲು ಆದಾಯ-ಉತ್ಪಾದಿಸುವ ಜೈವಿಕ ಅನಿಲ ಪರಿವರ್ತನೆಗೆ ಬದಲಾಗುವ ಮೂಲಕ, 𝗕𝗪𝗦𝗦𝗕 ಗೆ ಒಟ್ಟಾರೆ ಅಂದಾಜು 𝟭𝟮𝟬 ಕೋಟಿ ರೂ. ಹೆಚ್ಚುವರಿ ಆದಾಯ ಬರುವ ನಿರೀಕ್ಷೆಯಿದೆ.
ಸಾರ್ವಜನಿಕ-ಖಾಸಗಿ ಸಹಭಾಗಿತ್ವ (𝗣𝘂𝗯𝗹𝗶𝗰-𝗣𝗿𝗶𝘃𝗮𝘁𝗲 𝗣𝗮𝗿𝘁𝗻𝗲𝗿𝘀𝗵𝗶𝗽 – 𝗣𝗣𝗣) ಮಾದರಿಯಲ್ಲಿ ಈ ಯೋಜನೆಯನ್ನು ಕಾರ್ಯಗತಗೊಳಿಸಲಾಗುತ್ತಿದ್ದು, ಖಾಸಗಿ ಪಾಲುದಾರರು ಸಂಪೂರ್ಣ 𝟴𝟱 ಕೋಟಿ ರೂ. ಬಂಡವಾಳ ವೆಚ್ಚದ ಜೊತೆಗೆ ಎಲ್ಲಾ ಕಾರ್ಯಾಚರಣೆ ಮತ್ತು ನಿರ್ವಹಣಾ ವೆಚ್ಚಗಳನ್ನು ಭರಿಸಲಿದ್ದಾರೆ. ಮಂಡಳಿಯು ಯೋಜನಾ ಕಾರ್ಯಾಚರಣೆಗಳಿಗಾಗಿ 𝗦𝗧𝗣 ಆವರಣದಲ್ಲಿ ಸರಿಸುಮಾರು 𝟭𝟯,𝟬𝟬𝟬 𝘀𝗾. 𝗺 ಜಾಗವನ್ನು ಒದಗಿಸಲಿದ್ದು, ಜಮೀನಿನ ಮಾಲೀಕತ್ವ ಜಲಮಂಡಳಿಯದ್ದೇ ಆಗಿರಲಿದೆ.
ಆರ್ಥಿಕ ಲಾಭಗಳ ಆಚೆಗೆ, ಈ ಯೋಜನೆಯಿಂದಾಗಿ ಬೆಂಗಳೂರಿನ ಇಂಧನ ಭದ್ರತೆಗೆ ದೊಡ್ಡ ಉತ್ತೇಜನ ಸಿಗಲಿದೆ. ಪ್ರಸ್ತುತ ಭಾರತ ದೇಶದಲ್ಲಿ ಬಹುಪಾಲು ಬಳಸಲಾಗುವ ಎಲ್‌ಪಿಜಿಗಾಗಿ ಬೇರೆ ದೇಶಗಳ ಮೇಲೆ ಅವಲಂಬಿತವಾಗಿದೆ. ಸರ್ಕಾರದಿಂದ ಯಾವುದೇ ವೆಚ್ಚವಿಲ್ಲದೆ ಪೋಲಾಗುತ್ತಿರುವ ಅನಿಲವನ್ನು ಪರಿವರ್ತಿಸುವ ಮೂಲಕ ಉತ್ತಮ ಅದಾಯು ನೀರಿಕ್ಷಿಸುವ ಜೊತೆಯಲ್ಲಿಯೇ ದೇಶವನ್ನು ಸ್ವಾವಲಂಬಿಯನ್ನಾಗಿಸಬಹುದಾಗಿದೆ. ಈ ನಿಟ್ಟಿನಲ್ಲಿ ಬೆಂಗಳೂರಿನ ಈ ಯೋಜನೆಯು ಇತರ ಭಾರತೀಯ ನಗರಗಳು ಅನುಸರಿಸಲು ಒಂದು ರಾಷ್ಟ್ರೀಯ ಮಾದರಿ ಯೋಜನೆಯಾಗಿದೆ.
ಡಾ. ರಾಮ್ ಪ್ರಸಾತ್ ಮನೋಹರ್, ಅವರು ಪ್ರತಿಕ್ರಿಯಿಸಿ, “ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿರಂತರ ಮಾರ್ಗದರ್ಶನ ಮತ್ತು ನಾಯಕತ್ವದಲ್ಲಿ, ನಾವು ಅಕ್ಷರಶಃ ತ್ಯಾಜ್ಯವನ್ನು ಸಂಪತ್ತಿನ ಬೃಹತ್ ಮೂಲವಾಗಿ ಪರಿವರ್ತಿಸುತ್ತಿದ್ದೇವೆ. 𝟱𝟱𝟬 𝗠𝗟𝗗 ತ್ಯಾಜ್ಯ ನೀರನ್ನು ಬಳಸಿ ಮೌಲ್ಯದ ಕಂಪ್ರೆಸ್ಡ್ ಬಯೋ-ಗ್ಯಾಸ್ (𝗖𝗼𝗺𝗽𝗿𝗲𝘀𝘀𝗲𝗱 𝗕𝗶𝗼-𝗚𝗮𝘀 – 𝗖𝗕𝗚) ಆಗಿ ಮೇಲ್ದರ್ಜೆಗೇರಿಸುವ ಯೋಜನೆ ಇದು ಭಾರತದಲ್ಲೇ ಈ ರೀತಿಯ ಅತಿದೊಡ್ಡ ಮತ್ತು ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಈ 𝗣𝗣𝗣 ಮಾದರಿಯು ಬಂಡವಾಳ ಅಥವಾ ಕಾರ್ಯಾಚರಣೆಗಳಲ್ಲಿ ಒಂದೇ ಒಂದು ರೂಪಾಯಿಯನ್ನು ಹೂಡಿಕೆ ಮಾಡದೆ 𝟭𝟮𝟬 ಕೋಟಿಗೂ ಅಧಿಕ ಹೊಸ ಆದಾಯವನ್ನು ಗಳಿಸಲು ಬೆಂಗಳೂರು ಜಲಮಂಡಳಿಗೆ ಅನುವು ಮಾಡಿಕೊಡುತ್ತದೆ. ಇದು ನಮ್ಮ ಆರ್ಥಿಕ ಸ್ಥಿತಿಯನ್ನು ಹೆಚ್ಚಿಸುವ, ನಮ್ಮ ನಗರದ ಇಂಧನ ಭದ್ರತೆಯನ್ನು ಬಲಪಡಿಸುವ ಮತ್ತು ದೇಶಕ್ಕೆ ಮಾದರಿಯಾದ ಯೋಜನೆಯಾಗಿದೆ,” ಎಂದು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Latest

ಹೆಣ್ಣು ಮಗುವಿನ ತಂದೆಯಾದ ಖ್ಯಾತ ನಿರ್ದೇಶಕ ಅಟ್ಲಿ; ಅಭಿನಂದನೆಗಳ ಮಹಾಪೂರ

VISTARANEWS.COM


on

ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ ಅಟ್ಲಿ ಕುಟುಂಬದಲ್ಲಿ ಸಂಭ್ರಮ ಮನೆಮಾಡಿದೆ. ಅಟ್ಲಿ ಅವರ ಪತ್ನಿ ಪ್ರಿಯಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಅಟ್ಲಿ ಹಾಗೂ ಅವರ ಪತ್ನಿ ಪ್ರಿಯಾ ಅವರ ಮನೆಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣ ಆಗಿದೆ. ಈ ದಂಪತಿ ಎರಡನೇ ಬಾರಿಗೆ ಪೋಷಕರಾಗಿದ್ದು, ಮುದ್ದಾದ ಹೆಣ್ಣು ಮಗುವನ್ನು ಬರಮಾಡಿಕೊಂಡಿದ್ದಾರೆ. ವಿಶೇಷವೆಂದರೆ, ಅಟ್ಲಿ ನಿರ್ದೇಶನದ ‘ರಾಕಾ’ ಚಿತ್ರದ ನಾಯಕಿ ದೀಪಿಕಾ ಪಡುಕೋಣೆ ಅವರು ತಮ್ಮ ಎರಡನೇ ಪ್ರೆಗ್ನೆನ್ಸಿ ಸುದ್ದಿಯನ್ನು ಹಂಚಿಕೊಂಡ ಮರುದಿನವೇ ಅಟ್ಲೀ ಕೂಡ ಈ ಸಿಹಿ ಸುದ್ದಿಯನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಪ್ರಿಯಾ ಅಟ್ಲಿ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಇಂದು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅಟ್ಲಿ ಮತ್ತು ಪ್ರಿಯಾ, ತಮ್ಮ ಮನೆಗೆ ಹೆಣ್ಣು ಮಗುವಿನ ಆಗಮನವಾಗಿರುವುದನ್ನು ಖಚಿತಪಡಿಸಿದ್ದಾರೆ. ಈ ಪೋಸ್ಟ್‌ ಗೆ ‘ಧನ್ಯತೆಯ ಭಾವ ಮೂಡಿದೆ’ ಎಂದು ಕ್ಯಾಪ್ಷನ್ ನೀಡಿದ್ದಾರೆ. ತಮ್ಮ ಮೊದಲ ಪುತ್ರ ಮೀರ್ ಈಗ ದೊಡ್ಡ ಅಣ್ಣನ ಜವಾಬ್ದಾರಿ ವಹಿಸಿಕೊಳ್ಳಲು ಸಜ್ಜಾಗಿರುವ ಮುದ್ದಾದ ಪೋಸ್ಟರ್ ಒಂದನ್ನೂ ಹಂಚಿಕೊಂಡಿರುವುದು ಕುತೂಹಲ ಮೂಡಿಸಿದೆ.
ಅಟ್ಲಿ ಅವರ ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಇಡೀ ದೇಶದ ಚಿತ್ರರಂಗದ ಗಣ್ಯರು ಮತ್ತು ಅಭಿಮಾನಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ.
ಅಟ್ಲಿ ಮತ್ತು ಪ್ರಿಯಾ ಹಲವು ವರ್ಷಗಳ ಕಾಲ ಪ್ರೀತಿಸಿ 2014ರಲ್ಲಿ ವಿವಾಹವಾಗಿದ್ದರು. ಮದುವೆಯಾದ ಎಂಟು ವರ್ಷಗಳ ನಂತರ 2023ರ ಜನವರಿ 31ರಂದು ದಂಪತಿಗೆ ಮೊದಲ ಪುತ್ರ ಮೀರ್ ಜನಿಸಿದ್ದ. ಈಗ ಎರಡನೇ ಮಗುವಿನ ಆಗಮನವಾಗಿದೆ.
ಚಿತ್ರರಂಗದಲ್ಲಿಯೂ ಅಟ್ಲಿ ಅವರಿಗೆ ಬೇಡಿಕೆ ಹೆಚ್ಚುತ್ತಲೇ ಇದೆ. ಈಗ ಅವರು ‘ರಾಕಾ’ ಚಿತ್ರದ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಟಾಲಿವುಡ್ ಸ್ಟಾರ್ ನಟ ಅಲ್ಲು ಅರ್ಜುನ್ ಮತ್ತು ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ನಟಿಸುತ್ತಿದ್ದಾರೆ.

Continue Reading

Latest

ಮಹಿಳಾ ಮೀಸಲು ಮಸೂದೆ ಕಾಂಗ್ರೆಸ್‌ ಪಕ್ಷದ ಕನಸು ಮತ್ತು ಕೂಸು: ಡಿ.ಕೆ.ಶಿವಕುಮಾರ್

VISTARANEWS.COM


on

ಬೆಂಗಳೂರು, ಏ.19: ತರಾತುರಿಯಲ್ಲಿ ಸಂವಿಧಾನ ತಿದ್ದುಪಡಿ ಮಾಡಲು ಹೋದ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಮುಖಭಂಗವಾಗಿದೆ. ಇಂಡಿಯಾ ಒಕ್ಕೂಟಕ್ಕೆ ಜಯವಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯಿಸಿದರು.
ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರು ಹಾಗೂ ಕ್ಷೇತ್ರ ವಿಂಗಡಣೆ ವಿರುದ್ದ ಪ್ರತಿಭಟಿಸಿದ ದಕ್ಷಿಣ ಭಾರತದ ಎಲ್ಲಾ ಮುಖ್ಯಮಂತ್ರಿಗಳ ಹೋರಾಟಕ್ಕೆ, ಪ್ರಜಾಪ್ರಭುತ್ವಕ್ಕೆ ಸಿಕ್ಕಂತಹ ದೊಡ್ಡ ಜಯ. ಮಹಿಳೆಯರ ಪರವಾಗಿ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಒಕ್ಕೂಟ ನಿಂತಿದೆ. ಇಲ್ಲಿ ಯಾರಿಗೂ ಅವಮಾನವಾಗಿಲ್ಲ” ಎಂದರು.
ಸಂವಿಧಾನ ತಿದ್ದುಪಡಿ ಮಾಡುವಾಗ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತು. ಮಹಿಳಾ ಮೀಸಲಾತಿ ಕಾಯ್ದೆ ಕಾಂಗ್ರೆಸ್ ಪಕ್ಷದ ಕನಸು ಮತ್ತು ಕೂಸು. ಇದರ ಪರವಾಗಿ ಕೆಲಸ ಮಾಡಿದ್ದು ಕಾಂಗ್ರೆಸ್ ಪಕ್ಷ. ಆದರೆ ಈಗ ಬಿಜೆಪಿ ಸರ್ಕಾರ ಮಾಡಿರುವ ನಿರ್ಧಾರ ಸರಿಯಾದ ಸಮಯವಲ್ಲ. ನಮ್ಮದು ಹಿಟ್ಲರ್ ಆಡಳಿತವಲ್ಲ” ಎಂದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧ ಪಕ್ಷಗಳ ಜೊತೆ ಚರ್ಚೆ ನಡೆಸಬೇಕಿತ್ತು. ಚುನಾವಣೆ ನಡೆಯುತ್ತಿರುವ ಹೊತ್ತಿನಲ್ಲೇ ತರುವ ಪ್ರಮೇಯವೇನಿತ್ತು. ಇಂಡಿಯಾ ಒಕ್ಕೂಟದ ಎಲ್ಲಾ ಸದಸ್ಯರಿಗೆ ನಾನು ಶುಭಾಶಯಗಳನ್ನು ತಿಳಿಸುತ್ತೇನೆ ಎಂದೂ ಶಿವಕುಮಾರ್‌ ಹೇಳಿದ್ದಾರೆ.
ಸೋಲುತ್ತದೆ ಎಂದರೂ ಬಿಲ್ ತಂದಿದ್ದು ಬಿಜೆಪಿ
ವಿಪಕ್ಷಗಳ ವಿರುದ್ದ ಬಿಜೆಪಿ ಪ್ರತಿಭಟನೆ ಬಗ್ಗೆ ಕೇಳಿದಾಗ, “ಬಿಲ್ ಸೋಲುತ್ತದೆ ಎಂದು ಗೊತ್ತಿದ್ದರೂ ತಂದವರು ಅವರು. ಅವರುಗಳು ಮಹಿಳಾ ವಿರೋಧಿಗಳು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವೆಲ್ಲರೂ ಪ್ರತಿನಿಧಿಗಳಲ್ಲವೇ? ಇವರುಗಳು ಜನರಿಂದ ಗೆದ್ದಿಲ್ಲವೇ? ಅವರುಗಳು ಇದರ ಬಗ್ಗೆ ಮಾತನಾಡಬೇಕಿತ್ತು, ಚರ್ಚೆ ಮಾಡಬೇಕಿತ್ತು. ಮಹಿಳಾ ಮೀಸಲಾತಿ ಬಿಲ್ ಅವರ ಆಸ್ತಿಯಲ್ಲ. ದೇಶದ ಆಸ್ತಿ” ಎಂದರು.
“ಈ ಹಿಂದೆ ರಾಜೀವ್ ಗಾಂಧಿಯವರು ಶೇ 50 ರಷ್ಟು ಮೀಸಲಾತಿ ತಂದಿದ್ದರು. ಸೋನಿಯಾಗಾಂಧಿ ಅವರ ನೇತೃತ್ವದಲ್ಲಿ ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಬಿಲ್ ಪಾಸ್ ಆಗಿತ್ತು. ಈ ಬಿಲ್ ಅಡಿಯಲ್ಲಿ ದಕ್ಷಿಣ ಭಾರತದ ಕ್ಷೇತ್ರಗಳನ್ನು ಕತ್ತರಿಸಿ ಉತ್ತರ ಭಾರತದ ಕ್ಷೇತ್ರಗಳನ್ನು ಹೆಚ್ಚು ಮಾಡಲು ಹೊರಟಿರುವುದು ಸರಿಯಲ್ಲ. ಇದನ್ನು ಸಹಿಸಲು ಸಾಧ್ಯವಿಲ್ಲ. ನಮ್ಮನ್ನೆಲ್ಲಾ ಕರೆದು ಚರ್ಚೆ ಮಾಡಬೇಕಿತ್ತು” ಎಂದು ಹೇಳಿದರು.

Continue Reading

Latest

ಗ್ಯಾಂಗ್‌ಸ್ಟರ್ ಸಿನಿಮಾ ಎಂಬ ಭ್ರಮೆಯಲ್ಲಿದ್ದವರಿಗೆ ಶಾಕ್ ಕೊಟ್ಟ ಯಶ್; ‘ಟಾಕ್ಸಿಕ್’ ಹಿಂದಿದೆ ಬೇರೆಯದೇ ಪ್ಲ್ಯಾನ್‌!

VISTARANEWS.COM


on

ಸ್ಯಾಂಡಲ್‌ವುಡ್‌ನಿಂದ ಜಾಗತಿಕ ಮಟ್ಟಕ್ಕೆ ಬೆಳೆದಿರುವ ರಾಕಿಂಗ್ ಸ್ಟಾರ್ ಯಶ್, ತಮ್ಮ ಮುಂದಿನ ಸಿನಿಮಾ ‘ಟಾಕ್ಸಿಕ್’ ಬಗ್ಗೆ ಅಭಿಮಾನಿಗಳಲ್ಲಿ ಇದ್ದ ಕುತೂಹಲಕ್ಕೆ ಹೊಸ ಟ್ವಿಸ್ಟ್ ನೀಡಿದ್ದಾರೆ. ಇತ್ತೀಚೆಗೆ ಅಮೆರಿಕದ ಲಾಸ್ ವೇಗಾಸ್‌ನಲ್ಲಿ ನಡೆದ ‘ಸಿನಿಮಾಕಾನ್ 2026’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯಶ್, ಈ ಸಿನಿಮಾ ಕೇವಲ ರಕ್ತಪಾತದ ಗ್ಯಾಂಗ್‌ಸ್ಟರ್ ಕಥೆಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮೇಲ್ನೋಟಕ್ಕೆ ಇದು ಆಕ್ಷನ್ ಸಿನಿಮಾದಂತೆ ಕಂಡರೂ, ಕಥೆಯ ಒಳಗೆ ಮಾನವನ ಮನಸ್ಥಿತಿಯ ಆಳವಾದ ಪದರಗಳಿವೆ ಮತ್ತು ಇದು ಪ್ರತಿಯೊಬ್ಬರಿಗೂ ಹತ್ತಿರವಾಗುವಂತಹ ಭಾವನಾತ್ಮಕ ಕಥೆಯನ್ನು ಹೊಂದಿದೆ ಎಂದು ಅವರು ಅಚ್ಚರಿಯ ಮಾಹಿತಿ ಹಂಚಿಕೊಂಡಿದ್ದಾರೆ.

ವಿಶೇಷವೆಂದರೆ, ‘ಟಾಕ್ಸಿಕ್’ ಕೇವಲ ಭಾರತೀಯ ಭಾಷೆಗಳಿಗೆ ಸೀಮಿತವಾಗಿಲ್ಲ. ಈ ಚಿತ್ರವನ್ನು ಕನ್ನಡದ ಜೊತೆಗೆ ನೇರವಾಗಿ ಇಂಗ್ಲಿಷ್ ಭಾಷೆಯಲ್ಲೂ ಚಿತ್ರೀಕರಿಸಲಾಗಿದ್ದು, ಅಂತರರಾಷ್ಟ್ರೀಯ ಪ್ರೇಕ್ಷಕರನ್ನು ಸೆಳೆಯುವ ಗುರಿ ಹೊಂದಿದೆ. ಜಾಗತಿಕ ಮಟ್ಟದ ತಂತ್ರಜ್ಞರು ಈ ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದು, ದೃಶ್ಯ ವೈಭವದ ಜೊತೆಗೆ ಪ್ರೇಕ್ಷಕರನ್ನು ಆಳವಾಗಿ ಯೋಚಿಸುವಂತೆ ಮಾಡುವ ವಿಭಿನ್ನ ಶೈಲಿಯ ಸಿನಿಮಾ ಇದಾಗಲಿದೆ ಎಂಬ ಭರವಸೆಯನ್ನು ಯಶ್ ನೀಡಿದ್ದಾರೆ. ಈ ಸುದ್ದಿಯು ಯಶ್ ಅವರ ಅಭಿಮಾನಿಗಳಲ್ಲಿ ಸಿನಿಮಾದ ಮೇಲಿರುವ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.

ಚಿತ್ರದ ಬಿಡುಗಡೆ ವಿಚಾರಕ್ಕೆ ಬರುವುದಾದರೆ, ಈ ಹಿಂದೆ ಮಧ್ಯಪ್ರಾಚ್ಯದ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಸಿನಿಮಾ ವಿಳಂಬವಾಗಬಹುದು ಎಂಬ ವದಂತಿಗಳಿದ್ದವು. ಆದರೆ, ಸದ್ಯಕ್ಕೆ ಲಭ್ಯವಿರುವ ಮಾಹಿತಿಯ ಪ್ರಕಾರ ಎಲ್ಲ ಅಡೆತಡೆಗಳನ್ನು ದಾಟಿ ಸಿನಿಮಾ ಜೂನ್ 4, 2026 ರಂದು ಅದ್ಧೂರಿಯಾಗಿ ವಿಶ್ವದಾದ್ಯಂತ ತೆರೆಗೆ ಬರಲು ಸಜ್ಜಾಗಿದೆ. ಕಿಯಾರಾ ಅಡ್ವಾಣಿ, ನಯನತಾರಾ ಅವರಂತಹ ಘಟಾನುಘಟಿ ಕಲಾವಿದರ ದಂಡೇ ಈ ಸಿನಿಮಾದಲ್ಲಿದ್ದು, ಜೂನ್ ತಿಂಗಳಿನಲ್ಲಿ ‘ಟಾಕ್ಸಿಕ್’ ಹವಾ ಶುರುವಾಗುವುದು ಗ್ಯಾರಂಟಿ ಎನ್ನಲಾಗುತ್ತಿದೆ.

Continue Reading

Latest

ಸಾಧ್ವಿ ಸೈಲ್ ಮಿಸ್ ವರ್ಲ್ಡ್ ಪ್ರಶಸ್ತಿ ಗೆಲ್ಲಲಿ: ಸಿಎಂ ಸಿದ್ದರಾಮಯ್ಯ ಆಶಯ

VISTARANEWS.COM


on

ಬೆಂಗಳೂರು: ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಪುತ್ರಿ ಸಾಧ್ವಿ ಸೈಲ್ ಅವರು 61ನೇ ಸಾಲಿನ ‘ಫೆಮಿನಾ ಮಿಸ್ ಇಂಡಿಯಾ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ತಮ್ಮದೇ ಪಕ್ಷದ ಶಾಸಕರ ಪುತ್ರಿಯೊಬ್ಬರು ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೃತ್ಪೂರ್ವಕ ಅಭಿನಂದನೆ ತಿಳಿಸಿದ್ದಾರೆ.
ತಮ್ಮ ‘ಎಕ್ಸ್’ ಸಂದೇಶದಲ್ಲಿ ಒಡಿಶಾದ ಭುವನೇಶ್ವರದಲ್ಲಿ ನಡೆದ 61ನೇ “ಫೆಮಿನಾ ಮಿಸ್ ಇಂಡಿಯಾ -2026” ಕಿರೀಟ ಮುಡಿಗೇರಿಸಿಕೊಂಡಿರುವ ಕಾರವಾರದ ಕಾಂಗ್ರೆಸ್ ಶಾಸಕರಾದ ಸತೀಶ್ ಸೈಲ್ ಅವರ ಪುತ್ರಿ ಸಾಧ್ವಿ ಸತೀಶ್ ಸೈಲ್ ಅವರಿಗೆ ಅಭಿನಂದನೆಗಳು.
ತಮ್ಮ ಮಗಳ ಈ ಸಾಧನೆಯನ್ನು ಖುದ್ದು ಸತೀಶ್ ಸೈಲ್ ಅವರೇ ನನ್ನೊಂದಿಗೆ ಹಂಚಿಕೊಂಡು, ಹರ್ಷ ವ್ಯಕ್ತಪಡಿಸಿದರು. ಮಗಳ ಕನಸುಗಳಿಗೆ ಬೆಂಬಲವಾಗಿ ನಿಂತಿರುವ ಅವರನ್ನು ಕೂಡ ಇದೇ ವೇಳೆ ಅಭಿನಂದಿಸಿದೆ. 2027ರ ಮಿಸ್ ವರ್ಲ್ಡ್ ಸ್ಪರ್ಧೆಯಲ್ಲಿ ಭಾರತವನ್ನು ಸಾಧ್ವಿ ಪ್ರತಿನಿಧಿಸಲಿದ್ದು, ಅಲ್ಲಿಯೂ ಗೆಲುವು ಸಾಧಿಸಿ ಜಾಗತಿಕ ಮಟ್ಟದಲ್ಲಿ ರಾಜ್ಯದ ಕೀರ್ತಿ ರಾರಾಜಿಸುವಂತಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
ಒಡಿಶಾದ ಭುವನೇಶ್ವರದಲ್ಲಿ ಏಪ್ರಿಲ್ 18ರಂದು ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿಯಲ್ಲಿ ‘ಫೆಮಿನಾ ಮಿಸ್ ಇಂಡಿಯಾ ಫಿನಾಲೆ ಸ್ಪರ್ಧೆ ಜರುಗಿತ್ತು. ಗೆಲುವು ಸಾಧಿಸಿದ ನಂತರ ಸಾಧ್ವಿ ಸೈಲ್ ತಮ್ಮ ತಂದೆಯ ಜೊತೆ ವಿಡಿಯೋ ಕಾಲ್​​​ನಲ್ಲಿ ಮಾತನಾಡಿದ್ದ ಸುದ್ದಿ ವೈರಲ್‌ ಆಗಿ ಗಮನ ಸೆಳೆದಿತ್ತು.

Continue Reading
Advertisement
Latest27 ನಿಮಿಷಗಳು ago

ಹೆಣ್ಣು ಮಗುವಿನ ತಂದೆಯಾದ ಖ್ಯಾತ ನಿರ್ದೇಶಕ ಅಟ್ಲಿ; ಅಭಿನಂದನೆಗಳ ಮಹಾಪೂರ

Latest1 ಗಂಟೆ ago

ಮಹಿಳಾ ಮೀಸಲು ಮಸೂದೆ ಕಾಂಗ್ರೆಸ್‌ ಪಕ್ಷದ ಕನಸು ಮತ್ತು ಕೂಸು: ಡಿ.ಕೆ.ಶಿವಕುಮಾರ್

ಅವಿಭಾಗೀಕೃತ1 ಗಂಟೆ ago

ಕಾಶ್ಮೀರ: ಕಂದಕಕ್ಕೆ ಉರುಳಿದ ಬಸ್; 15 ಸಾವು, ಹಲವರ ಸ್ಥಿತಿ ಗಂಭೀರ

ದೇಶ1 ಗಂಟೆ ago

ದೇಶದ ಪ್ರಧಾನಿಗೆ ಕೈಯಾರ ಚುರುಮುರಿ ಕೊಟ್ಟರೂ ಇಲ್ಲ ಖುಷಿ! ಆ ತಪ್ಪು ಮಾಡಬಾರದಿತ್ತು ಅಂದ ವ್ಯಾಪಾರಿ

Latest1 ಗಂಟೆ ago

ಗ್ಯಾಂಗ್‌ಸ್ಟರ್ ಸಿನಿಮಾ ಎಂಬ ಭ್ರಮೆಯಲ್ಲಿದ್ದವರಿಗೆ ಶಾಕ್ ಕೊಟ್ಟ ಯಶ್; ‘ಟಾಕ್ಸಿಕ್’ ಹಿಂದಿದೆ ಬೇರೆಯದೇ ಪ್ಲ್ಯಾನ್‌!

ಅವಿಭಾಗೀಕೃತ2 ಗಂಟೆಗಳು ago

ಅಹಿಂದ ರಕ್ಷಣೆ ಹೊಣೆ ಹೊತ್ತ ಸಚಿವ ಜಾರಕಿಹೊಳಿ: ಇದರ ಮರ್ಮವೇನು?

Latest2 ಗಂಟೆಗಳು ago

ಸಾಧ್ವಿ ಸೈಲ್ ಮಿಸ್ ವರ್ಲ್ಡ್ ಪ್ರಶಸ್ತಿ ಗೆಲ್ಲಲಿ: ಸಿಎಂ ಸಿದ್ದರಾಮಯ್ಯ ಆಶಯ

Latest3 ಗಂಟೆಗಳು ago

ಮೋದಿ-ಸಿದ್ದರಾಮಯ್ಯ ಗುಸುಗುಸು: ಇಬ್ಬರೂ ಮಾತನಾಡಿದ ವಿಷಯ ಬಹಿರಂಗ

Latest3 ಗಂಟೆಗಳು ago

ಪ್ರಧಾನಿ ಮೋದಿ ಸಾಮಾಜಿಕ ನ್ಯಾಯದ ಪರವಾಗಿಲ್ಲ: ಸಿಎಂ ಸಿದ್ದರಾಮಯ್ಯ ಟೀಕೆ

Latest4 ಗಂಟೆಗಳು ago

ಬಸವಣ್ಣನವರನ್ನು ಒಂದು ಸಮುದಾಯಕ್ಕೆ ಸೀಮಿತಗೊಳಿಸಬಾರದು: ಸಚಿವ ಸತೀಶ್‌ ಜಾರಕಿಹೊಳಿ

galipata neetu
ಕಿರುತೆರೆ2 ವರ್ಷಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 ವರ್ಷಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 ವರ್ಷಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 ವರ್ಷಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 ವರ್ಷಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವರ್ಷಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ವರ್ಷಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ವರ್ಷಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ವರ್ಷಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ವರ್ಷಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ವರ್ಷಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ವರ್ಷಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ವರ್ಷಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ವರ್ಷಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ವರ್ಷಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌