Bike Stunt Video: ಪುಟ್ಟ ಮಗುವನ್ನು ಮುಂದೆ ಕೂರಿಸಿಕೊಂಡು ಬೈಕ್‌ ಸ್ಟಂಟ್‌! ಒದ್ದು ಒಳಗೆ ಹಾಕಿ ಅಂತಿದ್ದಾರೆ ನೆಟ್ಟಿಗರು - Vistara News

Latest

Bike Stunt Video: ಪುಟ್ಟ ಮಗುವನ್ನು ಮುಂದೆ ಕೂರಿಸಿಕೊಂಡು ಬೈಕ್‌ ಸ್ಟಂಟ್‌! ಒದ್ದು ಒಳಗೆ ಹಾಕಿ ಅಂತಿದ್ದಾರೆ ನೆಟ್ಟಿಗರು

Bike Stunt Video: ಉತ್ತರ ಪ್ರದೇಶದ ಸೀತಾಪುರದಲ್ಲಿ ಯುವಕನೊಬ್ಬ ಬೈಕಿನ ಪೆಟ್ರೋಲ್ ಟ್ಯಾಂಕ್ ಮೇಲೆ ಕುಳಿತಿರುವ ಮಗುವಿನೊಂದಿಗೆ ಹೆದ್ದಾರಿಯಲ್ಲಿ ಅತಿ ವೇಗದಲ್ಲಿ ಬೈಕ್ ರೈಡ್ ಮಾಡುತ್ತಾ ಅಪಾಯಕಾರಿ ಸ್ಟಂಟ್‌ಗಳನ್ನು ಮಾಡುತ್ತಿರುವುದು ಕಂಡುಬಂದಿದೆ. ಯುವಕನು ಅಪಾಯಕಾರಿ ಸ್ಟಂಟ್ ಮಾಡುತ್ತಿರುವುದನ್ನು ವಿಡಿಯೊ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡಲಾಗಿದೆ.

VISTARANEWS.COM


on

Dangerous Bike Stunt
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೆಲವು ಹುಡುಗರು ಬೈಕ್‍ನಲ್ಲಿ ಹೋಗುವಾಗ ವಿವಿಧ ರೀತಿಯ (Bike Stunt Video) ಸ್ಟಂಟ್‍ಗಳನ್ನು ಮಾಡುತ್ತಾರೆ. ಅದರಲ್ಲೂ ಕೆಲವರು ಬೈಕ್‌ನಲ್ಲಿ ಹೋಗುವಾಗ ರಸ್ತೆಯಲ್ಲಿ ಹುಡುಗಿಯರನ್ನು ಕಂಡರೆ ಸಾಕು, ಅವರ ಮುಂದೆ ಶೋ ಮಾಡಲು ಅಪಾಯಕಾರಿ ಸ್ಟಂಟ್‍ಗಳನ್ನು ಮಾಡಲು ಮುಂದಾಗುತ್ತಾರೆ. ಆದರೆ ಇದರಿಂದ ಎಷ್ಟೋ ಹುಡುಗರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮತ್ತೆ ಕೆಲವರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಅದೇರೀತಿ ಇದೀಗ ವ್ಯಕ್ತಿಯೊಬ್ಬ ಗೂಳಿಯಿಂದ ತಪ್ಪಿಸಿಕೊಳ್ಳಲು ಮಗುವಿನೊಂದಿಗೆ ಬೈಕ್‍ನಲ್ಲಿ ಹೋಗುವಾಗ ಸ್ಟಂಟ್‌ ಮಾಡಿದ್ದು, ಇದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಉತ್ತರ ಪ್ರದೇಶದ ಸೀತಾಪುರದಲ್ಲಿ ವ್ಯಕ್ತಿಯೊಬ್ಬ ಸ್ಪೆಂಡ್ಲರ್‌ ಬೈಕಿನ ಪೆಟ್ರೋಲ್ ಟ್ಯಾಂಕ್ ಮೇಲೆ ಕುಳಿತಿರುವ ಮಗುವಿನೊಂದಿಗೆ ಹೆದ್ದಾರಿಯಲ್ಲಿ ಅತಿ ವೇಗದಲ್ಲಿ ಬೈಕ್ ರೈಡ್ ಮಾಡುತ್ತಾ ಅಪಾಯಕಾರಿ ಸ್ಟಂಟ್‍ಗಳನ್ನು ಮಾಡುತ್ತಿರುವುದು ಕಂಡು ಬಂದಿದೆ. ವ್ಯಕ್ತಿಯು ಅಪಾಯಕಾರಿ ಸ್ಟಂಟ್ ಮಾಡುತ್ತಿರುವುದನ್ನು ವಿಡಿಯೊ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡಲಾಗಿದೆ. ವಿಡಿಯೊದಲ್ಲಿ ವ್ಯಕ್ತಿಯು ಹೆದ್ದಾರಿಯಲ್ಲಿ ಜಿಗ್ಜಾಗ್ ಮಾದರಿಯಲ್ಲಿ ಬೈಕ್ ಓಡಿಸುತ್ತಿದ್ದ ಮತ್ತು ಹಾಗೆ ಮಾಡುವಾಗ ಬೈಕಿನ ಮೇಲೆ ನಿಂತಿರುವುದನ್ನು ಕಾಣಬಹುದು. ಅವನು ಹಲವು ಬಾರಿ ಬೈಕಿನಲ್ಲಿ ಕುಳಿತು ಮತ್ತೊಮ್ಮೆ ನಿಂತಿರುವುದನ್ನು ಕಾಣಬಹುದು. ಮತ್ತು ಬೈಕಿನ ಪೆಟ್ರೋಲ್ ಟ್ಯಾಂಕ್ ಮೇಲೆ ಒಂದು ಸಣ್ಣ ಮಗು ಕೂಡ ಕುಳಿತಿದೆ. ಬೈಕಿನಲ್ಲಿ ಕುಳಿತಿದ್ದ ಆ ಮುಗ್ಧ ಮಗುವಿನ ಜೀವದ ಬಗ್ಗೆ ಆತನಿಗೆ ಸ್ವಲ್ಪವೂ ಕಾಳಜಿ ಇಲ್ಲದಿರುವುದು ಇದರಿಂದ ತಿಳಿಯುತ್ತದೆ.

ಅಲ್ಲದೇ ಆತ ಅಪಾಯಕಾರಿ ಸ್ಟಂಟ್ ಮಾಡುತ್ತಿರುವಾಗ, ಇತರ ಕಾರುಗಳು ಮತ್ತು ಬೈಕುಗಳು ಸಹ ಅಲ್ಲಿ ಓಡಾಡುತ್ತಿರುವುದು ಕಂಡುಬಂದಿದೆ. ಅಷ್ಟೇಅಲ್ಲದೇ ದಾರಿತಪ್ಪಿದ ಗೂಳಿಯೊಂದು ರಸ್ತೆ ದಾಟುವುದನ್ನು ಕಾಣಬಹುದು. ಆದರೆ ಗೂಳಿಯನ್ನು ನೋಡಿದರೂ ಆತ ಸ್ಟಂಟ್ ಮಾಡುವುದನ್ನು ನಿಲ್ಲಿಸಲಿಲ್ಲ. ಆ ವ್ಯಕ್ತಿ ಗೂಳಿಯಿಂದ ತಪ್ಪಿಸಿಕೊಂಡು ಮತ್ತೆ ತನ್ನ ಸ್ಟಂಟನ್ನು ಮುಂದುವರಿಸಿದ್ದಾನೆ.

ಹೆದ್ದಾರಿಯಲ್ಲಿ ಈತನ ಬೈಕ್ ಅನ್ನು ಹಿಂಬಾಲಿಸುತ್ತಿದ್ದ ಇನ್ನೊಬ್ಬ ಪ್ರಯಾಣಿಕ ಇದನ್ನು ವಿಡಿಯೊ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ ಮತ್ತು ಆ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. “ಮುಗ್ಧ ಮಗುವನ್ನು ಬೈಕ್ ಮೇಲೆ ಕೂರಿಸುವ ಮೂಲಕ ಅಪಾಯಕಾರಿ ಸ್ಟಂಟ್ ಮಾಡಿದ ಈ ಹಠಮಾರಿ ವ್ಯಕ್ತಿಗೆ ದಯವಿಟ್ಟು ಬೇಗ ಪಾಠ ಕಲಿಸಿ” ಎಂದು ಬರೆದಿದ್ದಾರೆ. ವೈರಲ್ ವಿಡಿಯೊದಲ್ಲಿ ಕಂಡುಬರುವ ಬೈಕಿನ ಸಂಖ್ಯೆ ಸೀತಾಪುರದಿಂದ ಬಂದಿದೆ ಎಂಬುದಾಗಿ ತಿಳಿದುಬಂದಿದೆ. ಈ ವೈರಲ್ ವಿಡಿಯೊಗೆ ಪ್ರತಿಕ್ರಿಯಿಸಿದ ಉತ್ತರ ಪ್ರದೇಶ ಪೊಲೀಸರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ಇನ್‌ಸ್ಟಾಗ್ರಾಂನಲ್ಲಿಯೇ ಗಂಡನಿಗೆ ಡಿವೋರ್ಸ್‌‌ ನೀಡಿದ ದುಬೈ ರಾಜಕುಮಾರಿ! ಏನು ಬರೆದಿದ್ದಾಳೆ ನೋಡಿ!

ಯುಪಿ ಪೊಲೀಸರು ಈ ವಿಡಿಯೊವನ್ನು ಸೀತಾಪುರ ಪೊಲೀಸರನ್ನು ಟ್ಯಾಗ್ ಮಾಡಿದ್ದು, ಇದಕ್ಕೆ ಉತ್ತರಿಸಿದ ಸೀತಾಪುರ ಪೊಲೀಸರು, ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಟ್ರಾಫಿಕ್ ಇನ್ಸ್ ಪೆಕ್ಟರ್‌ಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ. ಇಂಥ ಪುಂಡರನ್ನು ಪೊಲೀಸರು ಒದ್ದು ಒಳಗೆ ಹಾಕಬೇಕು ಎಂದು ನೆಟ್ಟಿಗರು ಆಗ್ರಹಿಸುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Sexual Abuse: ಶಾಲಾ ಬಾಲಕಿಯನ್ನು ಕ್ರೂರವಾಗಿ ಥಳಿಸಿ ಗುಪ್ತಾಂಗಕ್ಕೆ ಕೋಲು ತುರುಕಿದ ಮಹಿಳೆ!

Sexual Abuse: ಬಾಲಕಿ ಕೆಲವು ದಿನಗಳ ಹಿಂದೆ ಅಪರಾಧ ಹಿನ್ನೆಲೆಯನ್ನು ಹೊಂದಿರುವ ಭಗವತಿ ಕುಶ್ವಾಹ ಎಂಬ ಮಹಿಳೆಯ ಅಂಗಡಿಗೆ ಹೋಗಿದ್ದಳು. ಅಲ್ಲಿ ಕುಶ್ವಾಹ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾಳೆ ಮತ್ತು ಅವಳ ಪುರುಷ ಸಹಚರರ ಮುಂದೆ ಬಲವಂತವಾಗಿ ಬಟ್ಟೆಗಳನ್ನು ಬಿಚ್ಚಿದ್ದಾಳೆ. ಇದರಿಂದ ಸಂತ್ರಸ್ತೆ ಅಳುತ್ತಾ ಮನೆಗೆ ಬಂದು ಅಕ್ಕನಿಗೆ ದೂರು ನೀಡಿದ್ದಾಳೆ. ಆಗ ಅಕ್ಕ ಆರೋಪಿ ಕುಶ್ವಾಹಳ ಅಂಗಡಿಗೆ ಬಂದು ಈ ಬಗ್ಗೆ ಅವಳನ್ನು ತರಾಟೆಗೆ ತೆಗೆದುಕೊಂಡಿದ್ದಾಳೆ. ಇದಕ್ಕೆ ಸೇಡು ತೀರಿಸಿಕೊಳ್ಳಲು, ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಬಾಲಕಿಗೆ ಚಿತ್ರ ಹಿಂಸೆ ನೀಡಲಾಗಿದೆ.

VISTARANEWS.COM


on

Sexual Abuse
Koo


ಮಹಿಳೆಯ ಜೊತೆ ಪುರುಷರು ಕ್ರೂರವಾಗಿ ವರ್ತಿಸುವಾಗ ಮತ್ತೊಬ್ಬ ಮಹಿಳೆ ಸಹಾಯಕ್ಕೆ ಬರುವುದನ್ನು ನಾವು ಹಲವು ಕಡೆ ನೋಡಿರುತ್ತೇವೆ. ಆದರೆ ಹೆಣ್ಣಿಗೆ ಹೆಣ್ಣೇ ಶತ್ರು ಎಂಬುದು ಈ ಘಟನೆಯಿಂದ ತಿಳಿಯುತ್ತದೆ. ಮಹಿಳೆಯೊಬ್ಬಳು ತನ್ನ ಮೂವರು ಪುರುಷ ಸಹಚರರೊಂದಿಗೆ ಸೇರಿ ಅಪ್ರಾಪ್ತ ಬಾಲಕಿಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದಲ್ಲದೇ ಆಕೆಯ ಬಟ್ಟೆಗಳನ್ನು ಬಿಚ್ಚಿ (Sexual Abuse) ಹಿಂಸಿಸಿದ್ದಾಳೆ. ಅಲ್ಲದೇ, ಆಕೆಯ ಖಾಸಗಿ ಭಾಗಕ್ಕೆ ಕೋಲನ್ನು ತೂರಿಸಿ ಗಾಯಗೊಳಿಸಿದ್ದಾಳೆ. ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಈ ಘಟನೆ ನಡೆದಿದೆ.

ಮಾಹಿತಿ ಪ್ರಕಾರ, ಮುರಾರ್ ಪೊಲೀಸ್ ಠಾಣೆ ಪ್ರದೇಶದ ನಿವಾಸಿಯಾದ ಸಂತ್ರಸ್ತೆ ಬಾಲಕಿ ಕೆಲವು ದಿನಗಳ ಹಿಂದೆ ಅಪರಾಧ ಹಿನ್ನೆಲೆಯನ್ನು ಹೊಂದಿರುವ ಭಗವತಿ ಕುಶ್ವಾಹ ಎಂಬ ಮಹಿಳೆಯ ಅಂಗಡಿಗೆ ಹೋಗಿದ್ದಳು. ಅಲ್ಲಿ ಕುಶ್ವಾಹ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾಳೆ ಮತ್ತು ಅವಳ ಪುರುಷ ಸಹಚರರ ಮುಂದೆ ಬಲವಂತವಾಗಿ ಬಟ್ಟೆಗಳನ್ನು ಬಿಚ್ಚಿದ್ದಾಳೆ. ಇದರಿಂದ ಸಂತ್ರಸ್ತೆ ಅಳುತ್ತಾ ತನ್ನ ಮನೆಗೆ ಬಂದು ತನ್ನ ಅಕ್ಕನಿಗೆ ದೂರು ನೀಡಿದ್ದಾಳೆ. ಆಗ ಅಕ್ಕ ಆರೋಪಿ ಕುಶ್ವಾಹಳ ಅಂಗಡಿಗೆ ಬಂದು ಈ ಬಗ್ಗೆ ಅವಳನ್ನು ತರಾಟೆಗೆ ತೆಗೆದುಕೊಂಡಿದ್ದಾಳೆ.

ನಂತರ, ಮಂಗಳವಾರ, ಆರೋಪಿ ಭಗವತಿ ಕುಶ್ವಾಹ ಮತ್ತು ಅವಳ ಸಹಚರರಾದ ಜೀತು ಕುಶ್ವಾಹ, ಸಂತೋಷ್ ಮತ್ತು ರಾಹುಲ್ ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಸಂತ್ರಸ್ತೆ ಬಾಲಕಿ ಮೇಲೆ ಹಲ್ಲೆ ನಡೆಸಿದರು. ಆಕೆಗೆ ಕೋಲಿನಿಂದ ಹೊಡೆದು ಥಳಿಸಿದ್ದಲ್ಲದೇ ಅವಳ ಖಾಸಗಿ ಭಾಗಕ್ಕೆ ಕೋಲನ್ನು ತುರುಕಿದರು. ಈ ಹಲ್ಲೆಯಿಂದ 15 ವರ್ಷದ ಸಂತ್ರಸ್ತೆಯ ಕಾಲು ಮುರಿತಕ್ಕೊಳಗಾಗಿದ್ದಲ್ಲದೇ ದೇಹದಲ್ಲಿ ಗಂಭೀರ ಗಾಯಗಳು ಕೂಡ ಕಂಡು ಬಂದಿವೆ.

ಇಂತಹ ಪರಿಸ್ಥಿತಿಯಲ್ಲಿ ಸಂತ್ರಸ್ತೆ ತನ್ನ ಕಾಲಿಗೆ ಪ್ಲಾಸ್ಟರ್ ಕಟ್ಟಿಕೊಂಡು ಜುಲೈ 16ರಂದು ಎಸ್ಪಿ ಕಚೇರಿಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ತನಗೆ ಹಿಂಸೆ ನೀಡಿದ ಎಲ್ಲಾ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪೊಲೀಸರಲ್ಲಿ ವಿನಂತಿಸಿಕೊಂಡಿದ್ದಾಳೆ. ಹಾಗಾಗಿ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ ಆರೋಪಿ ಸಂಸದ ಭರತ್ ಸಿಂಗ್ ಕುಶ್ವಾಹ ಅವರ ಆಪ್ತನಾಗಿದ್ದು, ಪೊಲೀಸರು ಆತನ ವಿರುದ್ಧ ಇನ್ನೂ ಯಾವುದೇ ಕಠಿಣ ಕ್ರಮ ಕೈಗೊಂಡಿಲ್ಲ ಎಂದು ಸಂತ್ರಸ್ತೆಯ ಹಿರಿಯ ಸಹೋದರಿ ಆರೋಪಿಸಿದ್ದಾರೆ.

ಇದನ್ನೂ ಓದಿ:  8 ವರ್ಷದ ಮಗನ ತಲೆ ನೆಲಕ್ಕೆ ಅಪ್ಪಳಿಸಿ, ಮೈಕೈಯೆಲ್ಲ ಕಚ್ಚಿದ ತಾಯಿ; ವಿಡಿಯೊ ನೋಡಿ ಜನಾಕ್ರೋಶ

ಈ ವಿಷಯಕ್ಕೆ ಸಂಬಂಧಿಸಿದಂತೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಿರಂಜನ್ ಶರ್ಮಾ, “ಈ ಪ್ರಕರಣದಲ್ಲಿ, ಇಬ್ಬರ ನಡುವೆ ಜಗಳವಾಗಿತ್ತು ಮತ್ತು ಇಬ್ಬರು ವಿರುದ್ಧ ಪ್ರಕರಣ ದಾಖಲಿಸಿವೆ ಎಂದು ಹೇಳಿದರು. ವಿದ್ಯಾರ್ಥಿನಿಯನ್ನು ಸಾಕಷ್ಟು ಥಳಿಸಲಾಗಿದೆ ಮತ್ತು ಅವಳ ಕಾಲು ಮುರಿದಿದೆ. ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಆರೋಪಿಗಳ ವಿರುದ್ಧ ಆರೋಪವನ್ನು ಸಾಬೀತುಪಡಿಸಲು ಬಾಲಕಿಗೆ ವೈದ್ಯಕೀಯ ಪರೀಕ್ಷೆ ನಡೆಸಲು ಸಂಬಂಧಪಟ್ಟ ಅಧಿಕಾರಿಗೆ ಸೂಚನೆ ನೀಡಲಾಗಿದೆ. ಸಂತ್ರಸ್ತೆಯ ಹೇಳಿಕೆಯನ್ನು ಮತ್ತೆ ತೆಗೆದುಕೊಳ್ಳಲಾಗುವುದು ಮತ್ತು ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂಬುದಾಗಿ ತಿಳಿಸಿದ್ದಾರೆ.

Continue Reading

Latest

Nita Ambani : ನೀತಾ ಅಂಬಾನಿ ಪ್ರಸ್ತುತಪಡಿಸಿದ್ದಾರೆ ವಿಷ್ಣುವಿನ ‘ದಶಾವತಾರ’ದ ಚಿತ್ರಣ; ವಿಡಿಯೊ ನೋಡಿ

Nita Ambani: ಬನಾರಸ್ ಹಿನ್ನೆಲೆಯನ್ನು ಹೊಂದಿರುವ ‘ದಶಾವತಾರ’ ಹಿಂದೂ ಸಂಪ್ರದಾಯದ ಆಳವಾದ ಅನ್ವೇಷಣೆಯನ್ನು ನೀಡುತ್ತದೆ. ಇದನ್ನು ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ಅನಂತ್ ಮತ್ತು ರಾಧಿಕಾ ಅಂಬಾನಿ ಅವರ ವಿವಾಹ ಆಚರಣೆ ಹಿನ್ನೆಲೆಯಲ್ಲಿ ವಿಶೇಷವಾಗಿ ಸಾರ್ವಜನಿಕರಿಗಾಗಿ ಆಯೋಜಿಸಲಾಗಿದೆ. ಕಲೆ ಮತ್ತು ಕಲಾವಿದರ ತವರೂರಾದ ಎನ್ಎಂಎಸಿಸಿ ಈ ಸಾಂಸ್ಕೃತಿಕ ವೈಭವವನ್ನು ಸಾರ್ವಜನಿಕ ವೀಕ್ಷಣೆಗೆ ತೆರೆದಿಡುವ ಮೂಲಕ ಈ ಬದ್ಧತೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದಿದೆ.

VISTARANEWS.COM


on

Nita Ambani
Koo


ಮುಂಬೈ : ಅಂಬಾನಿ ಕುಟುಂಬದವರು ದೇವರ ಬಗ್ಗೆ ಅಪಾರವಾದ ಗೌರವವನ್ನು ಹೊಂದಿದ್ದಾರೆ. ಈ ವಿಚಾರ ಈ ಹಿಂದೆ ಅನಂತ್ ಅಂಬಾನಿಯವರ ಮದುವೆ ಆಮಂತ್ರಣ ಪತ್ರಿಕೆಯನ್ನು ನೋಡಿದಾಗ ತಿಳಿಯುತ್ತದೆ. ಇದೀಗ ಸಾಂಸ್ಕೃತಿಕ ಕೇಂದ್ರ ಎನ್ಎಂಎಸಿಸಿಯ ಸ್ಥಾಪಕಿ ಮತ್ತು ಅಧ್ಯಕ್ಷೆಯಾದ ನೀತಾ ಅಂಬಾನಿ (Nita Ambani )ಅವರು ವಿಷ್ಣುವಿನ ಹತ್ತು ಅವತಾರಗಳನ್ನು ಪ್ರದರ್ಶಿಸುವ ‘ದಶಾವತಾರ’ ಎಂಬ ಅದ್ಭುತ ಆಡಿಯೊ-ವಿಶುವಲ್ ಅನುಭವವನ್ನು ಪ್ರಸ್ತುತಪಡಿಸಲಿದ್ದಾರೆ.

ಬನಾರಸ್ ಹಿನ್ನೆಲೆಯನ್ನು ಹೊಂದಿರುವ ‘ದಶಾವತಾರ’ ಹಿಂದೂ ಸಂಪ್ರದಾಯದ ಆಳವಾದ ಅನ್ವೇಷಣೆಯನ್ನು ನೀಡುತ್ತದೆ. ಇದನ್ನು ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ಅನಂತ್ ಮತ್ತು ರಾಧಿಕಾ ಅಂಬಾನಿ ಅವರ ವಿವಾಹ ಆಚರಣೆಗಾಗಿ ವಿಶೇಷವಾಗಿ ಆಯೋಜಿಸಲಾಗಿದೆ. ಇದನ್ನು ಈಗ ಸಾರ್ವಜನಿಕರು ನೋಡಬಹುದಾಗಿದೆ. ಕಲೆ ಮತ್ತು ಕಲಾವಿದರ ತವರೂರಾದ ಎನ್ಎಂಎಸಿಸಿ ಈ ಸಾಂಸ್ಕೃತಿಕ ವೈಭವವನ್ನು ಸಾರ್ವಜನಿಕ ವೀಕ್ಷಣೆಗೆ ತೆರೆದಿಡುವ ಮೂಲಕ ಈ ಬದ್ಧತೆಯನ್ನು ಮತ್ತಷ್ಟು ಮುಂದಕ್ಕೆ ಕೊಂಡೊಯ್ದಿದೆ.

‘ದಶಾವತಾರ’ ಹಿಂದೂ ಸಂಸ್ಕೃತಿಯ ಶ್ರೀಮಂತಿಕೆಯನ್ನು ಸುಂದರವಾಗಿ ಸಾಕಾರಗೊಳಿಸುತ್ತದೆ ಮತ್ತು ಅದರ ಭವ್ಯತೆಗೆ ಸಾಕ್ಷಿಯಾಗಲು ಎಲ್ಲರಿಗೂ ಆಹ್ವಾನವನ್ನು ನೀಡಲಾಗುತ್ತಿದೆ. ಹಾಗಾಗಿ ಪವಿತ್ರ ನಗರವಾದ ಕಾಶಿಯಿಂದ ಸ್ಫೂರ್ತಿ ಪಡೆದ ದೃಶ್ಯಗಳು ಮತ್ತು ಶಬ್ದಗಳ ಈ ಅದ್ಭುತ ಪ್ರದರ್ಶನವನ್ನು ವೀಕ್ಷಿಸಲು ತಯಾರಾಗಿ.

ನೀತಾ ಮುಖೇಶ್ ಅಂಬಾನಿ ಅವರ ಸಾಂಸ್ಕೃತಿಕ ಕೇಂದ್ರ (ಎನ್ಎಂಎಸಿಸಿ) ಕಲೆಗಳಿಗೆ ಮೀಸಲಾಗಿರುವ ಅದ್ಭುತ, ಬಹು-ಶಿಸ್ತಿನ ಸಾಂಸ್ಕೃತಿಕ ಕೇಂದ್ರವಾಗಿದೆ. ವೈವಿಧ್ಯಮಯ ಕಲಾತ್ಮಕ ಅಭಿವ್ಯಕ್ತಿಗಳ ಮೂಲಕ ಭಾರತದ ಶ್ರೀಮಂತ ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಸಂರಕ್ಷಿಸುವುದು ಮತ್ತು ಉತ್ತೇಜಿಸುವುದು ನೀತಾ ಅಂಬಾನಿ ಅವರ ಉದ್ದೇಶವಾಗಿದೆ. ‘ದಶಾವತಾರ’ ಗ್ರೌಂಡ್ ಲೆವೆಲ್ ಎನ್ಎಂಎಸಿಸಿಯಲ್ಲಿ ಇಂಗ್ಲಿಷ್ ಮತ್ತು ಹಿಂದಿ ಎರಡರಲ್ಲೂ ಲಭ್ಯವಿರುತ್ತದೆ.

ಇದನ್ನೂ ಓದಿ: ಅನಂತ್‌-ರಾಧಿಕಾಗೆ ಗುಜರಾತ್‌ ಜನತೆಯಿಂದ ಅದ್ಧೂರಿ ಸ್ವಾಗತ; ವಿಡಿಯೊ ನೋಡಿ

ಮುಂಬೈ ನಿವಾಸಿಗಳು ಈಗ nmacc.com ಮತ್ತು bookmyshow.com ನಲ್ಲಿ ತಮ್ಮ ಟಿಕೆಟ್‍ಗಳನ್ನು ಬುಕಿಂಗ್‍ ಮಾಡಬಹುದು. ಮುಂಬಯಿಯ ಬಾಂದ್ರಾದ ಕುರ್ಲಾದಲ್ಲಿರುವ ಜಿಯೊ ವರ್ಲ್ಡ್‌ ಸೆಂಟರ್‌ನಲ್ಲಿ ಈ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಜುಲೈ 20ರಿಂದ 28ರವರೆಗೆ ಈ ಪ್ರದರ್ಶನ ಲಭ್ಯ. ಇದರ ಅವಧಿ 10 ನಿಮಿಷ ಮಾತ್ರ. ಟಿಕೆಟ್‌ ದರ 199 ರೂಪಾಯಿ. ಬೆಳಗ್ಗೆ 11ರಿಂದ ರಾತ್ರಿ 7.40ರವರೆಗೆ ಹಲವು ಶೋಗಳು ಇರುತ್ತವೆ.

Continue Reading

Latest

Viral Video: 8 ವರ್ಷದ ಮಗನ ತಲೆ ನೆಲಕ್ಕೆ ಅಪ್ಪಳಿಸಿ, ಮೈಕೈಯೆಲ್ಲ ಕಚ್ಚಿದ ತಾಯಿ; ವಿಡಿಯೊ ನೋಡಿ ಜನಾಕ್ರೋಶ

Viral Video: ತಾಯಿಯನ್ನು ಕರುಣಾಮೂರ್ತಿ, ಸಹನಾಮೂರ್ತಿ ಎಂದು ಕರೆಯುತ್ತಾರೆ. ತನ್ನ ಕರುಳು ಕುಡಿಗಾಗಿ ಎಂತಹ ತ್ಯಾಗ ಬೇಕಾದರೂ ಮಾಡುತ್ತಾಳೆ. ಆದರೆ ಇಲ್ಲೊಬ್ಬಳು ದುಷ್ಟ ತಾಯಿ ತನ್ನ ಮಗನನ್ನು ಹಿಂಸಿಸಿದ ಪರಿ ನೋಡಿದರೆ ತಾಯಿಯಾದವಳ ಕರುಳು ಕಿತ್ತು ಬರುತ್ತದೆ. ಉತ್ತರಾಖಂಡದ ಹರಿದ್ವಾರ ಜಿಲ್ಲೆಯ ರೂರ್ಕಿ ಪ್ರದೇಶದ ಜಬ್ರೆಡಾ ಗ್ರಾಮದಲ್ಲಿ, ಮಹಿಳೆಯೊಬ್ಬಳು ತನ್ನ 8 ವರ್ಷದ ಮಗನ ಮೇಲೆ ಕುಳಿತು, ನಿರ್ದಯವಾಗಿ ಥಳಿಸಿ, ಕಚ್ಚಿದ ಆಘಾತಕಾರಿ ಘಟನೆ ನಡೆದಿದೆ. ಆಕೆ ತನ್ನ ಮಗನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮಹಿಳೆಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

VISTARANEWS.COM


on

Viral Video
Koo

ಹರಿದ್ವಾರ: ತಾಯಿಯನ್ನು ದೇವರು ಎಂದು ಕರೆಯುತ್ತಾರೆ. ಯಾಕೆಂದರೆ ಆಕೆಯಿಂದ ಸಿಗುವ ಪ್ರೀತಿ, ವಾತ್ಸಲ್ಯ ಮತ್ತೆ ಜಗತ್ತಿನಲ್ಲಿ ಬೇರೆ ಯಾರಿಂದಲೂ ಸಿಗಲು ಸಾಧ್ಯವಿಲ್ಲ. ಹಾಗಾಗಿ ಮಕ್ಕಳು ತಾಯಿ ಎಷ್ಟೇ ಹೊಡೆದರೂ, ಬೈದರೂ ಅವಳ ಹಿಂದೆಯೇ ಓಡುತ್ತಾರೆ. ಆದರೆ ಇಲ್ಲೊಬ್ಬ ತಾಯಿ ದೇವರಲ್ಲ ದೆವ್ವದಂತೆ ವರ್ತಿಸಿದ್ದಾಳೆ. ತನ್ನ ಮಗನನ್ನು ಹೊಡಿದು ಬಡಿದು ಚಿತ್ರಹಿಂಸೆ ನೀಡುತ್ತಿದ್ದಾಳೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ. ತಾಯಿಗೆ ತನ್ನ ಮಕ್ಕಳು ತಪ್ಪು ಮಾಡಿದರೆ ದಂಡಿಸುವ ಹಕ್ಕಿದೆ ನಿಜ. ಅಂದಮಾತ್ರಕ್ಕೆ ಅವರಿಗೆ ದಂಡಿಸುವ ನೆಪದಲ್ಲಿ ಚಿತ್ರಹಿಂಸೆ ನೀಡಬಾರದು. ಈ ವಿಡಿಯೊ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಉತ್ತರಾಖಂಡದ ಹರಿದ್ವಾರ ಜಿಲ್ಲೆಯ ರೂರ್ಕಿ ಪ್ರದೇಶದ ಜಬ್ರೆಡಾ ಗ್ರಾಮದಲ್ಲಿ, ಮಹಿಳೆಯೊಬ್ಬಳು ತನ್ನ 8 ವರ್ಷದ ಮಗನ ಮೇಲೆ ಕುಳಿತು, ನಿರ್ದಯವಾಗಿ ಥಳಿಸಿ, ಕಚ್ಚಿದ ಆಘಾತಕಾರಿ ಘಟನೆ ನಡೆದಿದೆ. ಆಕೆ ತನ್ನ ಮಗನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯ ಈ ದುಷ್ಕೃತ್ಯವನ್ನು ವಿಡಿಯೊ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದೆ.

ಈ ಆತಂಕಕಾರಿ ವೀಡಿಯೊ ತುಣುಕಿನಲ್ಲಿ ಮಹಿಳೆ ತನ್ನ ಮಗನ ಮೇಲೆ ಕುಳಿತು, ಪದೇ ಪದೇ ಆತನ ಬಾಯಿಗೆ, ಕೆನ್ನೆಗೆ ಹೊಡೆಯುವುದು, ಕಚ್ಚುವುದು ಮತ್ತು ಉಸಿರುಗಟ್ಟಿಸುವುದನ್ನು ತೋರಿಸುತ್ತದೆ. ಈ ಸಮಯದಲ್ಲಿ ಆಕೆ ಕೋಪದಿಂದ ತನ್ನ ಮಗನ ತಲೆಯನ್ನು ನೆಲಕ್ಕೆ ಅಪ್ಪಳಿಸುತ್ತಿರುವುದು ಕಂಡುಬಂದಿದೆ. ಈ ವಿಡಿಯೊ ನೋಡಿದವರಿಗೆ ಕರುಳು ಚುರುಕ್ ಅನ್ನುವುದಂತು ಸಹಜ. ಮಹಿಳೆಯ ಈ ಕೃತ್ಯ ವೈರಲ್ ಆದ ಹಿನ್ನಲೆಯಲ್ಲಿ ಮಾಹಿತಿ ಪಡೆದ ಅಧಿಕಾರಿಗಳು ಮಧ್ಯಪ್ರವೇಶಿಸಿ ಮಹಿಳೆಯ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಮತ್ತು ತನಿಖೆ ಮುಂದುವರೆದಿರುವುದರಿಂದ ಮಹಿಳೆ ಈಗ ಪೊಲೀಸ್ ವಶದಲ್ಲಿದ್ದಾಳೆ ಎನ್ನಲಾಗಿದೆ.

ತಾಯಿ ತನ್ನ ಮಕ್ಕಳ ಮೇಲೆ ಹಲ್ಲೆ ಮಾಡುವಂತಹ ಘಟನೆ ಇದೆ ಮೊದಲಲ್ಲಾ. ಇದಕ್ಕೂ ಮೊದಲು ಈ ವರ್ಷದ ಮಾರ್ಚ್ ತಿಂಗಳಿನಲ್ಲಿ ಬೆಂಗಳೂರಿನ ಗಿರಿನಗರದ ವೀರಭದ್ರೇಶ್ವರ ನಗರದಲ್ಲಿ ಪತಿಯಿಂದ ದೂರವಿದ್ದು ತನ್ನ ಗೆಳೆಯನ ಜೊತೆ ಜೀವನ ನಡೆಸುತ್ತಿದ್ದ ಮಹಿಳೆಯೊಬ್ಬಳು ತನ್ನ 3 ವರ್ಷ ವಯಸ್ಸಿನ ಗಂಡು ಮಗುವಿಗೆ ನಿತ್ಯ ದೈಹಿಕ ಕಿರುಕುಳ ನೀಡುತ್ತಿದ್ದಳು. ಆಕೆಯ ಕುರಿತು ಅನುಮಾನಗೊಂಡ ಸ್ಥಳೀಯರು ಮನೆ ಬಳಿ ಹೋಗಿ ನೋಡಿದಾಗ ಮಗುವಿನ ಅಸಹಾಯಕ ಸ್ಥಿತಿ ಕಂಡುಬಂದಿದೆ.

ಇದನ್ನೂ ಓದಿ: ಇನ್‌ಸ್ಟಾಗ್ರಾಂನಲ್ಲಿಯೇ ಗಂಡನಿಗೆ ಡಿವೋರ್ಸ್‌‌ ನೀಡಿದ ದುಬೈ ರಾಜಕುಮಾರಿ! ಏನು ಬರೆದಿದ್ದಾಳೆ ನೋಡಿ!

ತಾಯಿ ಹಾಗೂ ಆಕೆಯ ಸ್ನೇಹಿತ ನೀಡುವ ಕಿರುಕುಳವನ್ನು ಅಕ್ಕಪಕ್ಕದವರ ಬಳಿ ಆ ಮಗು ಹೇಳಿಕೊಂಡಿದೆ. ಆಗ ಸಿಟ್ಟಿಗೆದ್ದ ಜನರು ಮಹಿಳೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆರೋಪಿ ಮಹಿಳೆಯನ್ನು ಠಾಣೆಗೆ ಕರೆಸಿ ಪೊಲೀಸರು ಬುದ್ಧಿವಾದ ಹೇಳಿದ್ದರು. ಮಗುವನ್ನು ತನ್ನ ಸುಪರ್ದಿಗೆ ಪಡೆದುಕೊಂಡಿರುವ ಮಕ್ಕಳ ಆಯೋಗ ತನಿಖೆ ನಡೆಸುತ್ತಿದೆ ಎನ್ನಲಾಗಿದೆ.

Continue Reading

ಪ್ರಮುಖ ಸುದ್ದಿ

Viral Video: ಇನ್‌ಸ್ಟಾಗ್ರಾಂನಲ್ಲಿಯೇ ಗಂಡನಿಗೆ ಡಿವೋರ್ಸ್‌‌ ನೀಡಿದ ದುಬೈ ರಾಜಕುಮಾರಿ! ಏನು ಬರೆದಿದ್ದಾಳೆ ನೋಡಿ!

Viral Video: ಮದುವೆ ಅನ್ನುವ ಮೂರು ಅಕ್ಷರಕ್ಕೆ ಈಗ ಬೆಲೆಯೇ ಇಲ್ಲದ ಹಾಗೇ ಆಗಿದೆ. ಇನ್ಸ್ಟಾಗ್ರಾಂನಲ್ಲಿ ರೀಲ್ಸ್, ಫೋಟೊ ಅಪ್ಲೋಡ್ ಆಗುತ್ತಿತ್ತು. ಈಗ ಡಿವೋರ್ಸ್ ಕೂಡ ಇನ್ಸ್ಟಾಗ್ರಾಂನಲ್ಲಿಯೇ ನೀಡುವಂತಹ ಪರಿಸ್ಥಿತಿ ಬಂದಿದೆ. ದುಬೈ ರಾಜಕುಮಾರಿ ಶೇಖಾ ಮಹ್ರಾ ಕಳೆದ ವರ್ಷ ಮೇ ತಿಂಗಳಲ್ಲಿ ಶೇಖ್ ಮಾನಾ ಅವರನ್ನು ವಿವಾಹವಾದರು. ಇದೀಗ ರಾಜಕುಮಾರಿ ಶೇಖಾ ಮಹ್ರಾ ಇನ್ಸ್ಟಾಗ್ರಾಂನಲ್ಲಿ ಆಘಾತಕಾರಿ ಪೋಸ್ಟ್ ಹಾಕಿದ್ದು, ಅದರಲ್ಲಿ ತಮ್ಮ ಪತಿಗೆ ಡಿವೋರ್ಸ್ ನೀಡುವುದಾಗಿ ಘೋಷಿಸಿದ್ದಾರೆ. ಶೇಖಾ ಮಹ್ರಾ ಮತ್ತು ಅವರ ಪತಿ ಈ ವರ್ಷದ ಮೇ ತಿಂಗಳಲ್ಲಿ ತಮ್ಮ ಮೊದಲ ಮಗುವನ್ನು ಸ್ವಾಗತಿಸಿದರು. ತಮ್ಮ ಮೊದಲ ಮಗುವನ್ನು ಸ್ವಾಗತಿಸಿದ ಎರಡು ತಿಂಗಳ ನಂತರ ಪತಿಯಿಂದ ಡಿವೋರ್ಸ್ ಕೇಳಿದ್ದು, ಅವರ ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿದೆ.

VISTARANEWS.COM


on

Viral Video
Koo

ದುಬೈ : ಸೋಶಿಯಲ್ ಮೀಡಿಯಾಗಳನ್ನು ನಾವು ಹೆಚ್ಚಾಗಿ ಮನೋರಂಜನೆಗಾಗಿ, ಪ್ರತಿದಿನ ನಡೆಯುವ ಸುದ್ದಿಗಳನ್ನು ತಿಳಿದುಕೊಳ್ಳಲು ಬಳಸುತ್ತೇವೆ. ಪ್ರಪಂಚದ ಹಲವೆಡೆ ನಡೆಯುವಂತಹ ಘಟನೆಗಳನ್ನು ನಾವು ಸೋಶಿಯಲ್ ಮೀಡಿಯಾಗಳ ಸಹಾಯದಿಂದ ಮನೆಯಲ್ಲೇ ಕುಳಿತು ತಿಳಿಯಬಹುದು. ಆದರೆ ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾಗಳನ್ನು ಪತಿ ಪತ್ನಿಯರು ಡಿವೋರ್ಸ್ ನೀಡಲು ಬಳಸುತ್ತಿದ್ದಾರೆ ಎಂದು ಕೇಳಿದರೆ ಎಲ್ಲರಿಗೂ ಆಶ್ವರ್ಯವಾಗುವುದಂತು ಖಂಡಿತ. ಅಂತಹದೊಂದು ಘಟನೆ ಇದೀಗ ದುಬೈನಲ್ಲಿ ನಡೆದಿದೆ. ದುಬೈ ರಾಜಕುಮಾರಿ ಶೇಖಾ ಮಹ್ರಾ ಅವರು ತಮ್ಮ ಪತಿಗೆ ಇನ್‍ಸ್ಟಾಗ್ರಾಂನಲ್ಲಿ ಡಿವೋರ್ಸ್ ನೀಡಿದ್ದು, ಇದು ಸಖತ್ ವೈರಲ್ (Viral Video) ಆಗಿದೆ.

ದುಬೈ ಆಡಳಿತಗಾರನ ಮಗಳಾದ ದುಬೈ ರಾಜಕುಮಾರಿ ಶೇಖಾ ಮಹ್ರಾ ಕಳೆದ ವರ್ಷ ಮೇ ತಿಂಗಳಲ್ಲಿ ಶೇಖ್ ಮಾನಾ ಅವರನ್ನು ವಿವಾಹವಾದರು. ಇದೀಗ ರಾಜಕುಮಾರಿ ಶೇಖಾ ಮಹ್ರಾ ಇನ್‍ಸ್ಟಾಗ್ರಾಂನಲ್ಲಿ ಆಘಾತಕಾರಿ ಪೋಸ್ಟ್ ಹಾಕಿದ್ದು, ಅದರಲ್ಲಿ ತಮ್ಮ ಪತಿಗೆ ಡಿವೋರ್ಸ್ ನೀಡುವುದಾಗಿ ಘೋಷಿಸಿದ್ದಾರೆ. ಶೇಖಾ ಮಹ್ರಾ ಮತ್ತು ಅವರ ಪತಿ ಈ ವರ್ಷದ ಮೇ ತಿಂಗಳಲ್ಲಿ ತಮ್ಮ ಮೊದಲ ಮಗುವನ್ನು ಸ್ವಾಗತಿಸಿದರು. ತಮ್ಮ ಮೊದಲ ಮಗುವನ್ನು ಸ್ವಾಗತಿಸಿದ ಎರಡು ತಿಂಗಳ ನಂತರ ಪತಿಯಿಂದ ಡಿವೋರ್ಸ್ ಕೇಳಿದ್ದು, ಅವರ ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿದೆ.

ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ, ತಮ್ಮ ಪತಿ ಬೇರೆ ಸಂಗಾತಿಯೊಂದಿಗೆ ಸಂಬಂಧ ಹೊಂದಿರುವ ಕಾರಣ ಪತಿಗೆ ಡಿವೋರ್ಸ್ ನೀಡುತ್ತಿರುವುದಾಗಿ ತಿಳಿಸಿ “ನಾನು ನಿಮಗೆ ವಿಚ್ಛೇದನ ನೀಡುತ್ತೇನೆ” ಎಂದು ಮೂರು ಬಾರಿ ಬರೆದು ಮಂಗಳವಾರ ಪೋಸ್ಟ್ ಮಾಡಿದ್ದಾರೆ. ಹಾಗೇ ಅವರು ತಮ್ಮ ಪತಿಯೊಂದಿಗಿನ ಫೋಟೋಗಳನ್ನು ಇನ್‍ಸ್ಟಾಗ್ರಾಂನಿಂದ ಡಿಲೀಟ್ ಮಾಡಿದ್ದಾರೆ.

ಶೇಖಾ ಮಹ್ರಾ ಕಳೆದ ವರ್ಷ ಮೇ ತಿಂಗಳಲ್ಲಿ ಎಮಿರೇಟ್ಸ್ ಉದ್ಯಮಿ ಶೇಖ್ ಮನ ಬಿನ್ ಮೊಹಮ್ಮದ್ ಬಿನ್ ರಶೀದ್ ಬಿನ್ ಮಾನಾ ಅಲ್ ಮಕ್ತೌಮ್ ಅವರನ್ನು ವಿವಾಹವಾದರು. ಒಂದು ವರ್ಷದ ನಂತರ, ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. 20ರ ಹರೆಯದ ಶೇಖ್ ಮಾನಾ ಅನೇಕ ಬ್ಯುಸಿನೆಸ್‍ಗಳನ್ನು ಹೊಂದಿದ್ದಾರೆ. ಈ ವರ್ಷದ ಮೇ ತಿಂಗಳಲ್ಲಿ, ದುಬೈ ರಾಜಕುಮಾರಿ ಹೆರಿಗೆಯಾದ ಕೆಲವೇ ಕ್ಷಣಗಳಲ್ಲಿ ಆಸ್ಪತ್ರೆಯಿಂದ ಫೋಟೋಗಳನ್ನು ಬಿಡುಗಡೆ ಮಾಡಿದ್ದರು. ತಮ್ಮ ಮಗಳನ್ನು ಜಗತ್ತಿಗೆ ಕರೆತಂದ ವೈದ್ಯರು ಮತ್ತು ಆಸ್ಪತ್ರೆಯ ಸಿಬ್ಬಂದಿಗೆ ಧನ್ಯವಾದ ಅರ್ಪಿಸಿದ್ದರು.

ಹಾಗೇ ತನ್ನ ಪತಿ ಹಾಗೂ ಮಗಳ ಜೊತೆಗಿನ ಪೋಟೊವನ್ನು ಪೋಸ್ಟ್ ಮಾಡಿದ್ದರು. ಈ ಹಿಂದೆ ಅವರು ಗರ್ಭಿಣಿಯಾಗಿದ್ದಾಗ “ನಾವು ಮೂವರು” ಎಂದು ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿದ್ದರು. ಆದರೆ ಜೂನ್‍ನಲ್ಲಿ ಅವರು ಇನ್‍ಸ್ಟಾಗ್ರಾಂ ಪೋಸ್ಟ್‌ನಲ್ಲಿ ಪತಿಯಿಲ್ಲದೆ ತಮ್ಮ ಮಗುವಿನೊಂದಿಗೆ ಇರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅದಕ್ಕೆ “ನಾವಿಬ್ಬರೇ” ಎಂದು ಶೇಖಾ ಮಹ್ರಾ ಶೀರ್ಷಿಕೆಯಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಕಿಮೋಥೆರಪಿ ಅನುಭವ ಹಂಚಿಕೊಂಡಿದ್ದಾರೆ ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿರುವ ಖ್ಯಾತ ಬಾಲಿವುಡ್‌ ನಟಿ

ಶೇಖಾ ಮಹ್ರಾ ಅವರ ತಂದೆ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಯುಎಇಯ ಉಪಾಧ್ಯಕ್ಷ, ಪ್ರಧಾನಿ ಮತ್ತು ರಕ್ಷಣಾ ಸಚಿವರಾಗಿದ್ದಾರೆ. ಇವರಿಗೆ 26 ಮಂದಿ ಮಕ್ಕಳಿದ್ದು, ಅವರಲ್ಲಿ ಶೇಖಾ ಮಹ್ರಾ ಕೂಡ ಒಬ್ಬರು. ಆಕೆಯ ತಾಯಿ ಜೊಯಿ ಗ್ರಿಗೊರಾಕೋಸ್ ಗ್ರೀಸ್ ಮೂಲದವರಾಗಿದ್ದಾರೆ. ಆದರೆ ಶೇಖಾ ಮಹ್ರಾ ತಂದೆ, ಆಕೆಯ ತಾಯಿಗೆ ವಿಚ್ಛೇದನ ನೀಡಿದ್ದರು..

Continue Reading
Advertisement
Golden Designer Fashion Wears Trendy Golden Designer Wedding Fashion
ಫ್ಯಾಷನ್4 mins ago

Golden Designer Fashion Wears: ವೆಡ್ಡಿಂಗ್‌ ಫ್ಯಾಷನ್‌ನಲ್ಲಿ ಟ್ರೆಂಡಿಯಾದ 3 ಶೈಲಿಯ ಗೋಲ್ಡನ್‌ ಡಿಸೈನರ್‌ವೇರ್ಸ್!

NEET-UG 2024
ದೇಶ8 mins ago

NEET UG 2024: “ವಿದ್ಯಾರ್ಥಿಗಳ ಗುರುತು ಬಹಿರಂಗ ಪಡಿಸದೇ ನೀಟ್‌ ಫಲಿತಾಂಶ ಪ್ರಕಟಿಸಿ”-NTAಗೆ ಸುಪ್ರೀಂ ಸೂಚನೆ; ವಿಚಾರಣೆ ಮುಂದೂಡಿಕೆ

Money Guide
ಮನಿ-ಗೈಡ್14 mins ago

Money Guide: ಇಎಂಐ ಮೂಲಕ ಮೊಬೈಲ್‌ ಖರೀದಿಸುವ ಯೋಚನೆಯಲ್ಲಿದ್ದೀರಾ? ಈ ಅಂಶ ನಿಮಗೆ ತಿಳಿದಿರಲೇ ಬೇಕು

Babar Azam
ಕ್ರೀಡೆ26 mins ago

Babar Azam: 18 ವರ್ಷದ ನೆಟ್​ ಬೌಲರ್​ ಮುಂದೆ ಪರದಾಡಿದ ಪಾಕ್​ ನಾಯಕ ಬಾಬರ್​ ಅಜಂ; ವಿಡಿಯೊ ವೈರಲ್​

Train Accident
ಪ್ರಮುಖ ಸುದ್ದಿ46 mins ago

Train Accident : ಎಕ್ಸ್​ಪ್ರೆಸ್​ ರೈಲು ಅಪಘಾತ; ಇಬ್ಬರ ಸಾವು, ಹಲವರಿಗೆ ಗಾಯ

Uttar pradesh Politics
ದೇಶ49 mins ago

Uttar Pradesh Politics: ಉತ್ತರಪ್ರದೇಶದಲ್ಲಿ ಬಿಜೆಪಿ ಹೀನಾಯ ಸೋಲಿಗೆ ಇತ್ತು ಆ 6 ಪ್ರಮುಖ ಕಾರಣಗಳು

ಯಾದಗಿರಿ1 hour ago

Murder case : ಪತ್ನಿ, ಅತ್ತೆ ಹಾಗೂ ಮಾವನಿಗೆ ಕಬ್ಬಿಣದ ರಾಡ್‌ನಿಂದ ಹೊಡೆದು, ಚಾಕುವಿನಿಂದ ಇರಿದು ಕೊಂದ

b nagendra valmiki corporation scam 2
ಕ್ರೈಂ1 hour ago

Valmiki Corporation Scam: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಮತ್ತೆ 5 ದಿನ ಇಡಿ ಕಸ್ಟಡಿಗೆ

INDW vs PAKW
ಕ್ರೀಡೆ1 hour ago

INDW vs PAKW: ನಾಳೆಯಿಂದ ಮಹಿಳಾ ಏಷ್ಯಾ ಕಪ್​; ಭಾರತಕ್ಕೆ ಪಾಕ್​ ಎದುರಾಳಿ

gt world mall assembly live
ಪ್ರಮುಖ ಸುದ್ದಿ1 hour ago

GT World Mall: ರೈತರಿಗೆ ಅವಮಾನ ಮಾಡಿದ ಜಿಟಿ ಮಾಲ್‌ಗೆ ಬೀಗ ಹಾಕಲು ಸಾಧ್ಯವಿಲ್ಲ! ಸಚಿವರ ಮಾತಿಗೆ ಬೆಲೆ ಇಲ್ವಾ?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Uttara Kannada Landslide
ಮಳೆ2 hours ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ2 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ3 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ3 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ3 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ4 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ4 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ4 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

ಟ್ರೆಂಡಿಂಗ್‌