Dog Attacks: ಬಡಪಾಯಿ ಡೆಲಿವರಿ ಮ್ಯಾನ್‌ನನ್ನು ಭೀಕರವಾಗಿ ಕಚ್ಚಿದ ಶ್ರೀಮಂತರ ಮನೆಯ ನಾಯಿಗಳು; ವಿಡಿಯೊ ಇದೆ - Vistara News

Latest

Dog Attacks: ಬಡಪಾಯಿ ಡೆಲಿವರಿ ಮ್ಯಾನ್‌ನನ್ನು ಭೀಕರವಾಗಿ ಕಚ್ಚಿದ ಶ್ರೀಮಂತರ ಮನೆಯ ನಾಯಿಗಳು; ವಿಡಿಯೊ ಇದೆ

Dog Attacks: ವೈದ್ಯರೊಬ್ಬರ ಮನೆಗೆ ಡೆಲಿವರಿ ಮಾಡಲು ಬಂದ ವ್ಯಕ್ತಿಯ ಮೇಲೆ ಅವರ ಮನೆಯಲ್ಲಿ ಸಾಕಿದ ಎರಡು ಪಿಟ್‌ಬುಲ್‌ ನಾಯಿಗಳು ಭೀಕರವಾಗಿ ದಾಳಿ ಮಾಡಿವೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸಂಧ್ಯಾ ರಾವ್ ಎಂಬ ವೈದ್ಯರ ಮನೆಗೆ ಡೆಲಿವರಿ ನೀಡಲು ಡೆಲಿವರಿ ಮ್ಯಾನ್‌ ಆಟೋದಲ್ಲಿ ಬಂದಿದ್ದಾಗ ಈ ಘಟನೆ ನಡೆದಿದೆ.

VISTARANEWS.COM


on

Dog Attacks
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವೈದ್ಯರೊಬ್ಬರ ಮನೆಗೆ ಫುಡ್ ಡೆಲಿವರಿ ಮಾಡಲು ಬಂದ ಡೆಲಿವರಿ ಮ್ಯಾನ್ ಮೇಲೆ ಅವರ ಮನೆಯಲ್ಲಿ ಸಾಕಿದ ಎರಡು ಪಿಟ್‌ ಬುಲ್‌ ನಾಯಿಗಳು ದಾಳಿ ಮಾಡಿದ ಘಟನೆ ಛತ್ತೀಸ್‌ಗಢದ ರಾಯ್ಪುರದ ಖಮರ್ದಿಹ್ ಪೊಲೀಸ್ ಠಾಣೆ ವ್ಯಾಪ್ತಿಯ ಅನುಪಮ್ ನಗರದಲ್ಲಿ ನಡೆದಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Dog Attacks) ಆಗಿದೆ. ಇಷ್ಟಾಗಿಯೂ ಆ ನಾಯಿಗಳ ಮಾಲಕಿ, ಡೆಲಿವರ್‌ ಮ್ಯಾನ್‌ನದ್ದೇ ತಪ್ಪು ಎಂದು ಆರೋಪಿಸಿದ್ದಾಳೆ. ಇದು ಜನಾಕ್ರೋಶಕ್ಕೆ ಕಾರಣವಾಗಿದೆ.

ನಾಯಿಗಳ ದಾಳಿಗೆ ಒಳಗಾದ ಡೆಲಿವರಿ ಮ್ಯಾನ್ ಸಲ್ಮಾನ್ ಎಂಬುದಾಗಿ ತಿಳಿದು ಬಂದಿದೆ. ವಿಡಿಯೊದಲ್ಲಿ ಸಲ್ಮಾನ್‌ ಅನ್ನು ನಾಯಿಗಳು ಕಚ್ಚುತ್ತಿರುವುದು ಕಂಡುಬಂದಿದೆ. ಈ ವೇಳೆ ಅವನು ನೋವಿನಿಂದ ನರಳುತ್ತಿದ್ದು, ಹಾಗೂ ನಾಯಿಗಳಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ. ದುರದೃಷ್ಟವಶಾತ್, ಅಲ್ಲಿ ಯಾರೂ ಕೂಡ ಸಲ್ಮಾನ್‌ ಸಹಾಯಕ್ಕೆ ಬರಲಿಲ್ಲ. ಕೊನೆಗೆ ಬೇರೆ ದಾರಿ ಕಾಣದೇ ಹೊರಗೆ ಓಡಿ ನಾಯಿಗಳಿಂದ ತನ್ನನ್ನು ರಕ್ಷಿಸಿಕೊಳ್ಳಲು ಅಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಹತ್ತಿ ಕುಳಿತು ಜೀವ ಉಳಿಸಿಕೊಂಡಿದ್ದಾನೆ. ನಾಯಿಗಳು ಹೊರಟುಹೋದ ನಂತರ, ಯಾರೋ ಒಬ್ಬ ವ್ಯಕ್ತಿ ಸಲ್ಮಾನ್‌ಗೆ ಕುಡಿಯಲು ನೀರಿನ ಬಾಟಲಿಯನ್ನು ನೀಡಿದ್ದಾರೆ. ಹಾಗೂ ನಂತರ ಸಲ್ಮಾನ್ ಅವರ ಕೈ ಮತ್ತು ಕಾಲುಗಳು ರಕ್ತಸಿಕ್ತವಾಗಿದ್ದು, ಅವರಿಗೆ ರಕ್ತವನ್ನು ಒರೆಸಿಕೊಳ್ಳುವಂತೆ ಮಹಿಳೆಯೊಬ್ಬರು ಬಟ್ಟೆ ತಂದು ಕೊಟ್ಟಿದ್ದಾರೆ.

ಈ ವಿಡಿಯೊ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇದಕ್ಕೆ ಹಲವರು ಕಾಮೆಂಟ್ ಮಾಡಿದ್ದಾರೆ. ನಾಯಿಯ ಮಾಲೀಕನನ್ನು ಜೈಲಿಗೆ ಕಳುಹಿಸಿಬೇಕೆಂದು ಒಬ್ಬರು ಹೇಳಿದ್ದಾರೆ. ಹಾಗೇ ಮತ್ತೊಬ್ಬರು ಅವರು ವೈದ್ಯಕೀಯ ಶುಲ್ಕಗಳನ್ನು ಡೆಲಿವರಿ ಮ್ಯಾನ್‌ಗೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ವರದಿ ಪ್ರಕಾರ, ಸಂಧ್ಯಾ ರಾವ್ ಎಂಬ ಮಹಿಳೆ ವೃತ್ತಿಯಲ್ಲಿ ವೈದ್ಯರಾಗಿದ್ದಾರೆ. ಡಾ. ಸಂಧ್ಯಾ ರಾವ್ ಅವರು ತಮ್ಮ ಮನೆಯಲ್ಲಿ 3 ನಾಯಿಗಳನ್ನು ಸಾಕಿದ್ದಾರೆ. ಮೂರು ನಾಯಿಗಳಲ್ಲಿ ಎರಡು ಅಪಾಯಕಾರಿ ಪಿಟ್‌ ಬುಲ್‌ ತಳಿಯಾಗಿವೆ. ಶುಕ್ರವಾರ ಡೆಲಿವರಿ ಮ್ಯಾನ್ ಸಂಧ್ಯಾ ರಾವ್ ಅವರ ಮನೆಗೆ ಆಟೋದಲ್ಲಿ ಬಂದಿದ್ದಾಗ ಅವರು ಮನೆಯೊಳಗೆ ಹೋಗಲು ಬಾಗಿಲನ್ನು ತಲುಪಿದ ಕೂಡಲೇ 2 ಪಿಟ್ಬುಲ್ ನಾಯಿಗಳು ಸಲ್ಮಾನ್‌ ಮೇಲೆ ದಾಳಿ ಮಾಡಿದವು. ನಾಯಿಗಳು ಆತನ ಕೈ ಮತ್ತು ಕಾಲುಗಳನ್ನು ತೀವ್ರವಾಗಿ ಕಚ್ಚಿವೆ.

Dog Attacks

ಇದನ್ನೂ ಓದಿ: 8 ವರ್ಷದ ಮಗನ ತಲೆ ನೆಲಕ್ಕೆ ಅಪ್ಪಳಿಸಿ, ಮೈಕೈಯೆಲ್ಲ ಕಚ್ಚಿದ ತಾಯಿ; ವಿಡಿಯೊ ನೋಡಿ ಜನಾಕ್ರೋಶ

ದಾಳಿಯ ನಂತರ ನೆರೆಹೊರೆಯವರು ಸಲ್ಮಾನ್ ಅನ್ನು ಆಸ್ಪತ್ರೆಗೆ ಕರೆದೊಯ್ದರು ಎಂದು ವರದಿಗಳು ತಿಳಿಸಿವೆ. ಅಲ್ಲದೇ ನಾಯಿ ಮಾಲೀಕರು ತಮ್ಮನ್ನು ಕರೆಯದೇ ಒಳಗೆ ಬಂದಿದ್ದಕ್ಕೆ ಹೀಗೆ ಆಗಿರುವುದಾಗಿ ಸಲ್ಮಾನ್‌ ಅನ್ನೇ ದೂಷಿಸಿದ್ದಾರೆ! ಸಲ್ಮಾನ್ ಅವರ ದೂರಿನ ನಂತರ ಸೋಮವಾರ ಬೆಳಗ್ಗೆ ಮುನ್ಸಿಪಲ್ ಕಾರ್ಪೊರೇಷನ್ ತಂಡವು ವೈದ್ಯರ ಮನೆಗೆ ನಾಯಿಗಳನ್ನು ಹಿಡಿಯಲು ಬಂದಿದ್ದರು. ಆದರೆ ಬರಿಗೈಯಲ್ಲಿ ವಾಪಸ್‌ ಹೋಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Viral Video: ಬಸ್‌ ಡ್ರೈವರ್‌ನ ರೀಲ್ಸ್‌ ಕ್ರೇಜ್‌ಗೆ 2 ಎತ್ತುಗಳು ಬಲಿ; ರೈತನ ಸ್ಥಿತಿ ಗಂಭೀರ

Viral Video: ಪ್ರಯಾಣಿಕರನ್ನು ಸುರಕ್ಷಿತವಾಗಿ ತಲುಪಿಸುವ ಜವಾಬ್ದಾರಿ ಇರುವ ಬಸ್ ಡ್ರೈವರ್‌ಗಳೂ ರೀಲ್ಸ್ ಕ್ರೇಜ್‌ಗೆ ಒಳಗಾಗಿರುವುದು ಆತಂಕ ಮೂಡಿಸಿದೆ. ಬಸ್ ಡ್ರೈವ್ ಮಾಡುತ್ತಾ ರೀಲ್ಸ್‌ನ ಗುಂಗಿನೊಳಗೆ ಬಿದ್ದ ಡ್ರೈವರ್‌ನೊಬ್ಬ ಮಾಡಿದ ಅವಾಂತರದಿಂದ ಒಂದು ಕುಟುಂಬವೇ ಸಂಕಷ್ಟಕ್ಕೆ ಸಿಲುಕಿದೆ. ಜೀವನ ನಡೆಸುವುದಕ್ಕೆ ಆಧಾರವಾಗಿದ್ದ ಎರಡು ಎತ್ತುಗಳನ್ನು ರೈತ ಕಳೆದುಕೊಂಡಿದ್ದಾನೆ. ಅಪಘಾತದಿಂದ ರೈತನ ಸ್ಥಿತಿ ಕೂಡ ಗಂಭೀರವಾಗಿದೆ.

VISTARANEWS.COM


on

Viral Video
Koo

ಹುಬ್ಬಳ್ಳಿ: ವಾಹನಗಳನ್ನು ವೇಗವಾಗಿ ಚಲಾಯಿಸುವುದರಿಂದ ಎಷ್ಟೊಂದು ಅಪಘಾತದ ಘಟನೆಗಳು ನಡೆದು ಅನೇಕ ಸಾವು ನೋವುಗಳಾದರೂ ಕೂಡ ಚಾಲಕರಿಗೆ ಇನ್ನೂ ಈ ಬಗ್ಗೆ ಅರಿವು ಮೂಡಿಲ್ಲ. ಇದೀಗ ಹುಬ್ಬಳ್ಳಿಯಲ್ಲಿ ಎತ್ತಿನ ಗಾಡಿಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎರಡು ಎತ್ತುಗಳು ಸ್ಥಳದಲ್ಲೇ ಮೃತಪಟ್ಟಿದೆ. ಅಲ್ಲದೇ ಎತ್ತಿನ ಗಾಡಿಯಯಲ್ಲಿದ್ದ ರೈತ ಕೂಡ ಗಂಭೀರವಾಗಿ ಗಾಯಗೊಂಡಿದ್ದಾನೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ವಿಡಿಯೊದಲ್ಲಿ, ಸಹಾಯಕ ರೀಲ್ ತಯಾರಿಸುವಾಗ ಬಸ್ ಚಾಲಕ ತನ್ನ ಸೀಟ್‌ನಲ್ಲಿ ಕುಳಿತು ಡ್ರೈವ್ ಮಾಡುತ್ತಿರುವುದನ್ನು ಕಾಣಬಹುದು. ಕೆಲವು ಕ್ಷಣಗಳ ನಂತರ, ಬಸ್ ಮುಂದೆ ಹೋಗುತ್ತಿದ್ದ ಎತ್ತಿನ ಗಾಡಿಗೆ ಹಿಂದಿನಿಂದ ಡಿಕ್ಕಿ ಹೊಡೆಯುವುದನ್ನು ವಿಡಿಯೊ ತೋರಿಸುತ್ತದೆ. ವರದಿ ಪ್ರಕಾರ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಬಾಗಲಕೋಟೆ ಕಡೆಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಎತ್ತುಗಳು ಕೆಳಗೆ ಬಿದ್ದು ರಕ್ತ ಸೋರಿ, ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿವೆ. ಎತ್ತಿನ ಗಾಡಿಯಲ್ಲಿದ್ದ ರೈತ ತೀವ್ರವಾಗಿ ಗಾಯಗೊಂಡಿದ್ದು, ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ರೈತನ ಸ್ಥಿತಿ ಗಂಭೀರವಾಗಿದೆ ಎಂಬುದಾಗಿ ತಿಳಿದು ಬಂದಿದೆ. ಈ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಗಾಯಗೊಂಡ ರೈತ ಮಂಜುನಾಥ್ ಆರ್. ವಗ್ಗೇನವರ್ (40) ಎಂಬುದಾಗಿ ತಿಳಿದು ಬಂದಿದೆ. ಮಂಗಳವಾರ ರಾತ್ರಿ ಮಂಜುನಾಥ್ ಕೆರೆಸೂರು ಗ್ರಾಮದ ತನ್ನ ಕೃಷಿ ಭೂಮಿಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಎತ್ತಿನ ಗಾಡಿಗೆ ಡಿಕ್ಕಿ ಹೊಡೆದಾಗ ಬಸ್ ಚಾಲಕ ರೀಲ್ ತಯಾರಿಸುತ್ತಿದ್ದ. ತಂಬಾಕು ತಿನ್ನುತ್ತಿದ್ದ. ಹಾಗಾಗಿ ಚಾಲಕನಿಗೆ ತನ್ನ ಮುಂದೆ ಇದ್ದ ಗಾಡಿಯನ್ನು ನೋಡಲು ಸಾಧ್ಯವಾಗಲಿಲ್ಲ ಎಂದು ಕೆಲವು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ.

ಅಲ್ಲದೇ ಮಂಜುನಾಥ್ ಒಬ್ಬ ಬಡ ರೈತನಾಗಿದ್ದು, ಎರಡು ಎಕರೆ ಭೂಮಿಯಲ್ಲಿ ಯಾವುದೇ ಲಾಭಾಂಶ ಸಿಗುತ್ತಿರಲಿಲ್ಲ ಎಂದು ಸಂತ್ರಸ್ತ ರೈತನ ಸ್ನೇಹಿತರು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಇತ್ತೀಚೆಗೆ, ಮಂಜುನಾಥ್ ಸಾಲ ಪಡೆದು ಎರಡು ಎತ್ತುಗಳನ್ನು ಖರೀದಿಸಿ ಅದನ್ನು ಇತರ ಹೊಲಗಳಲ್ಲಿ ಉಳುಮೆ ಮಾಡಲು ಬಳಸುತ್ತಿದ್ದರು ಎಂಬುದಾಗಿ ತಿಳಿದು ಬಂದಿದೆ.

ಇದನ್ನೂ ಓದಿ: ಪುಟ್ಟ ಮಗುವನ್ನು ಮುಂದೆ ಕೂರಿಸಿಕೊಂಡು ಬೈಕ್‌ ಸ್ಟಂಟ್‌! ಒದ್ದು ಒಳಗೆ ಹಾಕಿ ಅಂತಿದ್ದಾರೆ ನೆಟ್ಟಿಗರು

Continue Reading

Latest

Lady Police Officer: ಗೂಂಡಾಗಿರಿ ಮಾಡಿದರೆ ಹುಷಾರ್‌! ಪುಂಡರಿಗೆ ಲೇಡಿ ಪೊಲೀಸ್ ವಾರ್ನಿಂಗ್‌; ವಿಡಿಯೊ ವೈರಲ್

Lady Police Officer: ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ ಮಾಡುವುದೇ ಈಗಿನವರ ಶೋಕಿ. ಎಲ್ಲಿದ್ದೇವೆ, ಇದು ತಪ್ಪಾ, ಸರಿನಾ ಒಂದೂ ಕೂಡ ಯೋಚಿಸದೇ ರೀಲ್ಸ್ ಮಾಡುತ್ತಾ ತಿರುಗುತ್ತಾರೆ. ಹೀಗೆ ಧಾರ್ಮಿಕ ಸ್ಥಳವೊಂದರಲ್ಲಿ ಕಾರಿನ ಸನ್‌ರೂಫ್‌ ತೆರೆದುಕೊಂಡು ರೀಲ್ಸ್ ಮಾಡುತ್ತಿದ್ದ ಗುಂಪೊಂದನ್ನು ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಸಖತ್ ಆಗಿ ಬೆಂಡೆತ್ತಿದ್ದಾರೆ. ಇನ್ನು ಮಹಿಳಾ ಅಧಿಕಾರಿಗೆ ಆಮಿಷವೊಡ್ಡಲು ಬಂದಾಗ ಅದಕ್ಕೆ ಸೊಪ್ಪು ಹಾಕದೇ, ವಾಹನವನ್ನು ವಶಪಡಿಸಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

Lady Police Officer
Koo

ಕೆಲವೊಂದು ಧಾರ್ಮಿಕ ಸ್ಥಳಗಳಲ್ಲಿ (Lady Police Officer) ಮೊಬೈಲ್ ಬಳಸಲು, ವಿಡಿಯೊ ಶೂಟ್ ಮಾಡಲು ಅನುಮತಿ ಇರುವುದಿಲ್ಲ. ಹಿಮಾಚಲ ಪ್ರದೇಶದ ಧಾರ್ಮಿಕ ಪ್ರದೇಶದಲ್ಲಿ ಪುರುಷರ ಗುಂಪೊಂದು ಅನುಮತಿಯಿಲ್ಲದೆ ಕಾರು ಚಲಾಯಿಸುತ್ತ, ಕಾರಿನ ಟಾಪ್‌ ಮೇಲಿಂದ ಕೈ ಬೀಸುತ್ತ ರೀಲ್ಸ್‌ (Reels Obesession) ಮಾಡಿದ್ದಾರೆ. ಆಗ ಮಹಿಳಾ ಪೊಲೀಸರೊಬ್ಬರು ಅವರನ್ನು ಸಖತ್ತಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಈ ವಿಡಿಯೊವನ್ನು ‘ಘರ್ ಕೆ ಕಾಲೇಶ್’ ಎಂಬ ಹೆಸರಿನಲ್ಲಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಲಾಗಿದ್ದು, ಈ ವಿಡಿಯೊ ಪೊಲೀಸರು ವಾಹನವನ್ನು ನಿಲ್ಲಿಸುವ ಮೂಲಕ ಪ್ರಾರಂಭವಾಗಿದೆ. ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರು ತಮ್ಮ ವಾಹನವನ್ನು ನಿಲ್ಲಿಸಿ ಇನ್ನೊಂದು ಕಾರಿನಲ್ಲಿದ್ದ ಇಬ್ಬರು ಪುರುಷರು ಸನ್ ರೂಫ್‌ನಿಂದ ಹೊರಬಂದು ನಿಂತಿರುವುದನ್ನು ತೋರಿಸಿದರು. ಹಾಗೇ ಅವರ ರೀಲ್ಸ್‌ ಮಾಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಸನ್ ರೂಫ್ ಅನ್ನು ಮುಚ್ಚಿ ಕಾರಿನೊಳಗೆ ಕುಳಿತುಕೊಳ್ಳುವಂತೆ ಅವರಿಗೆ ಪಾಠ ಹೇಳಿದ್ದಾರೆ.

ನಂತರ ಧಾರ್ಮಿಕ ಸ್ಥಳದ ಪಕ್ಕದ ಪ್ರದೇಶದಲ್ಲಿ ಶೂಟಿಂಗ್ ಮಾಡಲು ಅನುಮತಿ ನೀಡಲಾಗಿದೆಯೇ ಎಂದು ಅಧಿಕಾರಿ ಪುರುಷರ ಗುಂಪನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿದ ಅವರಲ್ಲಿ ಒಬ್ಬರು ಇದು ಶೂಟಿಂಗ್ ಅಲ್ಲ ಎಂದು ಉತ್ತರಿಸಿದ್ದಾರೆ. ಆದರೆ ಅವರು ಸೋಶಿಯಲ್ ಮೀಡಿಯಾಗಳಿಗಾಗಿ ರೀಲ್ಸ್ ಮಾಡುತ್ತಿರುವುದಾಗಿ ಹೇಳಿದ್ದಾರೆ.

ನಂತರ ಈ ವಿಷಯವನ್ನು ಪರಿಶೀಲಿಸಲು ಮಹಿಳಾ ಪೊಲೀಸ್ ಜೀಪಿನಿಂದ ಕೆಳಗಿಳಿದು ಇಡೀ ಘಟನೆಯನ್ನು ಕ್ಯಾಮೆರಾದಲ್ಲಿ ವಿಡಿಯೊ ಮಾಡಿದ್ದಾರೆ. ಗುಡ್ಡಗಾಡು ಪ್ರದೇಶದಲ್ಲಿ ತೆರೆದ ಸನ್ ರೂಫ್‌ನೊಂದಿಗೆ ಸವಾರಿ ಮಾಡುವುದು ಮಾತ್ರವಲ್ಲದೆ ನಂಬರ್ ಪ್ಲೇಟ್ ಇಲ್ಲದ ವಾಹನವನ್ನು ಓಡಿಸುವ ಮೂಲಕ ದುಷ್ಕರ್ಮಿಗಳು ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳನ್ನು ಹೇಗೆ ಉಲ್ಲಂಘಿಸಿದ್ದಾರೆ ಎಂಬುದನ್ನು ಅವರು ತೋರಿಸಿದರು.

ಕರ್ತವ್ಯದಲ್ಲಿದ್ದ ಪೋಲೀಸ್ ಅಧಿಕಾರಿ ಪುರುಷರನ್ನು ತಮ್ಮ ವಾಹನದೊಳಗೆ ಕುಳಿತು ಸುರಕ್ಷಿತವಾಗಿ ಪ್ರಯಾಣಿಸುವಂತೆ ಸೂಚಿಸಿದ್ದಾರೆ. “ಗೂಂಡಾಗಿರಿ ಮಾಡಬೇಡಿ. ಇದು ಧಾರ್ಮಿಕ ಸ್ಥಳವಾಗಿದೆ. ಪವಿತ್ರ ಸ್ಥಳಕ್ಕೆ ಸಂಬಂಧಿಸಿದ ಭಾವನೆಗಳನ್ನು ನೋಯಿಸಬೇಡಿ” ಎಂದು ಅವರು ಪುಂಡು ಪುರುಷರಿಗೆ ತಿಳಿ ಹೇಳಿದ್ದಾರೆ.

ಇದನ್ನೂ ಓದಿ:  ನೀತಾ ಅಂಬಾನಿ ಪ್ರಸ್ತುತಪಡಿಸಿದ್ದಾರೆ ವಿಷ್ಣುವಿನ ‘ದಶಾವತಾರ’ದ ಚಿತ್ರಣ; ವಿಡಿಯೊ ನೋಡಿ

ಅಲ್ಲದೇ ವಿಡಿಯೊದಲ್ಲಿ, ಅವರಲ್ಲಿ ಕೆಲವರು ಪೊಲೀಸ್ ಅಧಿಕಾರಿಗೆ ಲಂಚ ನೀಡಲು ಅಥವಾ ಕೆಲವು ಪ್ರಭಾವ ಬೀರುವ ಕಾರ್ಡ್ ಅನ್ನು ಪ್ರದರ್ಶಿಸಲು ಪ್ರಯತ್ನಿಸಿದ್ದು ಕಂಡು ಬಂದಿದೆ. ಆದರೆ ಪೊಲೀಸ್ ಅಧಿಕಾರಿ ಈ ರೀತಿ ಮಾಡಿದರೆ ವಾಹನವನ್ನು ವಶಪಡಿಸಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ವಿಡಿಯೊ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

Continue Reading

Latest

Viral Video: ಗರ್ಭಗುಡಿಗೆ ನುಗ್ಗಿ ದೇವರ ಕಿರೀಟಕ್ಕೇ ಕನ್ನ ಹಾಕಿದ ಕಳ್ಳ! ಪರಾರಿಯಾಗುವಾಗ ಮಾಡಿದ್ದೇನು? ವಿಡಿಯೊ ನೋಡಿ!

Viral Video: ವ್ಯಕ್ತಿಯೊಬ್ಬ ಭಕ್ತನಂತೆ ಸೋಗು ಹಾಕಿಕೊಂಡು ದೇವಾಲಯಕ್ಕೆ ಪ್ರವೇಶಿಸಿ ದೇವರ ತಲೆಯಲ್ಲಿರುವ ಬೆಳ್ಳಿಯ ಕಿರೀಟಕ್ಕೆ ಕನ್ನ ಹಾಕಿದ್ದಾನೆ. ಕದ್ದು ಓಡಿಹೋಗುವ ಮೊದಲು ಅದನ್ನು ಚೀಲದಲ್ಲಿ ಇರಿಸಿ, ದೇವರ ವಿಗ್ರಹಕ್ಕೆ ಕೈಮುಗಿದು ಪ್ರಾರ್ಥಿಸುತ್ತಾ ಕ್ಷಮೆಯಾಚಿಸುವ ವಿಡಿಯೊವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿ ಪೊಲೀಸರಿಗೆ ದೂರು ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಶಂಕಿತನನ್ನು ಪತ್ತೆಹಚ್ಚಲು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

VISTARANEWS.COM


on

Viral Video
Koo

ಮುಂಬೈ: ಸಾಮಾನ್ಯವಾಗಿ ಕಳ್ಳರು ಕಳ್ಳತನ ಮಾಡಲು ಮನೆ, ಅಂಗಡಿಗಳನ್ನು ಆರಿಸಿಕೊಳ್ಳುತ್ತಾರೆ. ಆದರೆ ದೇವಸ್ಥಾನದಲ್ಲಿ ಕಳ್ಳತನ ಮಾಡಲು ಕೆಲವು ಕಳ್ಳರು ಹೆದರುತ್ತಾರೆ. ಯಾಕೆಂದರೆ ಇದರಿಂದ ದೇವರ ಶಾಪಕ್ಕೆ ಗುರಿಯಾಗಿ ಆಪತ್ತಾಗಬಹುದೆಂಬ ಭಯವಿರುತ್ತದೆ. ಆದರೆ ಇಲ್ಲೊಬ್ಬ ಕಳ್ಳ ಕಳ್ಳತನ ಮಾಡಲು ದೇವಸ್ಥಾನಕ್ಕೆ ನುಗ್ಗಿದಲ್ಲದೇ ಸೀದಾ ದೇವರ ಬೆಳ್ಳಿ ಕಿರೀಟಕ್ಕೆ ಕೈ ಹಾಕಿದ್ದಾನೆ. ಆತನ ಕಳ್ಳತನದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ಮುಂಬೈನ ಬೋರಿವಲಿಯ ದತ್ತಪ್ಡಾ ಪ್ರದೇಶದ ವಿಠ್ಠಲ ದೇವಸ್ಥಾನದಲ್ಲಿ ಈ ಕಳ್ಳತನದ ಘಟನೆ ನಡೆದಿದ್ದು, ದೇವಸ್ಥಾನದ ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ವಿಡಿಯೊದಲ್ಲಿ ವ್ಯಕ್ತಿಯೊಬ್ಬ ಭಕ್ತನಾಗಿ ದೇವಾಲಯಕ್ಕೆ ಪ್ರವೇಶಿಸಿ ದೇವರ ತಲೆಯಲ್ಲಿರುವ ಬೆಳ್ಳಿಯ ಕಿರೀಟಕ್ಕೆ ಕನ್ನ ಹಾಕಿದ್ದಾನೆ. ಕದ್ದು ಓಡಿಹೋಗುವ ಮೊದಲು ಅದನ್ನು ಚೀಲದಲ್ಲಿ ಇರಿಸಿ, ದೇವರ ವಿಗ್ರಹಕ್ಕೆ ಕೈಮುಗಿದು ಪ್ರಾರ್ಥಿಸುತ್ತಾ ಕ್ಷಮೆಯಾಚಿಸುವುದು ಕಂಡು ಬಂದಿದೆ. ವೈರಲ್ ಆಗಿರುವ ಸಿಸಿಟಿವಿ ವಿಡಿಯೊದಲ್ಲಿ, ಜುಲೈ 17ರ ಬುಧವಾರ ಬೆಳಗ್ಗೆ 10:07ರ ಸುಮಾರಿಗೆ ವ್ಯಕ್ತಿ ದೇವಾಲಯವನ್ನು ಪ್ರವೇಶಿಸುವುದನ್ನು ಕಾಣಬಹುದು. ಈ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿ ಪೊಲೀಸರಿಗೆ ದೂರು ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಶಂಕಿತನನ್ನು ಪತ್ತೆಹಚ್ಚಲು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

ದೇವಸ್ಥಾನದಲ್ಲಿ ಕಳ್ಳತನ ಪ್ರಕರಣ ಇದೇ ಮೊದಲಲ್ಲ. ಇದಕ್ಕೂ ಮೊದಲು ಹಲವು ಕಡೆ ದೇವಸ್ಥಾನದಲ್ಲಿ ಕಳ್ಳರು ದರೋಡೆ ಮಾಡಿದ್ದಾರೆ. ನವಿ ಮುಂಬೈನ ಐರೋಲಿ ಪ್ರದೇಶದ ದತ್ ಮಂದಿರದಲ್ಲಿ ಫೆಬ್ರವರಿ 21 ಮತ್ತು ಫೆಬ್ರವರಿ 22 ರ ಮಧ್ಯರಾತ್ರಿ ಕಳ್ಳರು ದೇವಾಲಯಕ್ಕೆ ನುಗ್ಗಿ ಆವರಣದಲ್ಲಿರುವ ದೇಣಿಗೆ ಪೆಟ್ಟಿಗೆಯಿಂದ 20,000 ರೂ.ಗಳನ್ನು ಕದ್ದ ನಂತರ ನವೀ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: 8 ವರ್ಷದ ಮಗನ ತಲೆ ನೆಲಕ್ಕೆ ಅಪ್ಪಳಿಸಿ, ಮೈಕೈಯೆಲ್ಲ ಕಚ್ಚಿದ ತಾಯಿ; ವಿಡಿಯೊ ನೋಡಿ ಜನಾಕ್ರೋಶ

ಅಲ್ಲದೇ ಜೂನ್ 20ರಂದು ಗರ್ಲದಿನ್ನೆ ಮಂಡಲದ ಕೋಟಂಕ ಗ್ರಾಮದ ಬಳಿಯ ಗುಂಟಿ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಳ್ಳರು ದೇವಾಲಯದ ಬೀಗಗಳನ್ನು ಮುರಿದು 16 ಕೆಜಿ ಬೆಳ್ಳಿ ಆಭರಣಗಳು, 8 ತೊಲ ಚಿನ್ನದ ಆಭರಣಗಳು ಮತ್ತು 13 ಲಕ್ಷ ರೂ.ಮೌಲ್ಯದ ಎರಡು ಹುಂಡಿಗಳನ್ನು ಮುರಿದು 15,000 ರೂ. ನಗದು ದೋಚಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಅಂತರರಾಜ್ಯ ಕಳ್ಳರ ಗುಂಪನ್ನು ಪೊಲೀಸರು ಬಂಧಿಸಿದ್ದರು.

Continue Reading

ವಿದೇಶ

Mashco Piro Tribe: ಮೊದಲ ಬಾರಿ ಹೊರ ಜಗತ್ತಿಗೆ ಕಾಣಿಸಿಕೊಂಡ ಮಾಶ್ಕೊ ಪಿರೋ ಬುಡಕಟ್ಟು ಸಮುದಾಯ!

ಪ್ರಪಂಚದ ಅತೀ ದೊಡ್ಡ ಬುಡಕಟ್ಟು ಸಮುದಾಯವೊಂದು (World’s Largest Tribe) ಪೆರುವಿಯನ್ ಅಮೆಜಾನ್‌ನ ನದಿ ದಡದಲ್ಲಿ ಕಾಣಿಸಿಕೊಂಡಿದೆ. ಹೊರ ಜಗತ್ತಿನ ಸಮರ್ಕವಿಲ್ಲದ ಇವರ ಅಪರೂಪದ ಫೋಟೋ, ವಿಡಿಯೋಗಳನ್ನು ʼಸರ್ವೈವಲ್ ಇಂಟರ್‌ನ್ಯಾಷನಲ್ʼ ಬಿಡುಗಡೆ ಮಾಡಿದೆ. ಮಾಶ್ಕೊ ಪಿರೋ ಬುಡಕಟ್ಟು ಸಮುದಾಯ ಎದುರಿಸುತ್ತಿರುವ ಅಪಾಯದ ಬಗ್ಗೆ ಕಳವಳ ವ್ಯಕ್ತವಾಗುತ್ತಿರುವುದರ ಬೆನ್ನಲ್ಲೇ ಈ ವಿಡಿಯೊ ಹೊರ ಬಂದಿದೆ.

VISTARANEWS.COM


on

By

World's Largest Tribe
Koo

ಪ್ರಪಂಚದ ಅತೀ ದೊಡ್ಡ ಬುಡಕಟ್ಟು ಸಮುದಾಯವೊಂದು (World’s Largest Tribe) ಪೆರುವಿಯನ್ ಅಮೆಜಾನ್ ನಲ್ಲಿ (Peruvian Amazon) ಇದೆ. ಆದರೆ ಇವರದು ಹೊರ ಜಗತ್ತಿನ ಸಂಪರ್ಕವಿಲ್ಲದ ಬುಡಕಟ್ಟು ಸಮುದಾಯ. ಇದೇ ಮೊದಲ ಬಾರಿಗೆ ಮಾಶ್ಕೊ ಪಿರೋ (Mashco Piro) ಸಮುದಾಯದ ಜನರ ಚಲನವಲನದ ಅಪರೂಪದ ದೃಶ್ಯಗಳನ್ನು ʼಸರ್ವೈವಲ್ ಇಂಟರ್ನ್ಯಾಷನಲ್ʼ ಬಿಡುಗಡೆ ಮಾಡಿದೆ.

ಮಾಶ್ಕೊ ಪಿರೋ ಬುಡಕಟ್ಟು ಸಮುದಾಯದ ಯೋಗಕ್ಷೇಮದ ಕಾಳಜಿ ಹೆಚ್ಚಾಗುತ್ತಿರುವ ಮಧ್ಯೆಯೇ ಈ ವಿಡಿಯೋ ತುಣುಕು ಬಿಡುಗಡೆಯಾಗಿದೆ. ಇದರಲ್ಲಿ ಮಾಶ್ಕೊ ಪಿರೋ ಬುಡಕಟ್ಟು ಸಮುದಾಯದ ಹಲವಾರು ಸದಸ್ಯರು ನದಿಯ ದಡದಲ್ಲಿ ವಿಶ್ರಾಂತಿ ಪಡೆಯುತ್ತಿರುವುದನ್ನು ಈ ದೃಶ್ಯದಲ್ಲಿ ತೋರಿಸಲಾಗಿದೆ.

ಈ ಪ್ರದೇಶದಲ್ಲಿ ಮರಗಳನ್ನು ಕಡಿಯುವುದು ಹೆಚ್ಚಾಗಿರುವುದರಿಂದ ಇಲ್ಲಿರುವ ಮಾಶ್ಕೊ ಪಿರೋ ಬುಡಕಟ್ಟು ಜನಾಂಗಕ್ಕೆ ಅಪಾಯ ಎದುರಾಗಿದೆ. ಅವರ ಸಾಂಪ್ರದಾಯಿಕ ಭೂಮಿಯಿಂದ ಅವರು ಹೊರಗೆ ತಳ್ಳಲ್ಪಡುತ್ತಿದ್ದಾರೆ. ಮಾಶ್ಕೊ ಪಿರೋ ಜನಾಂಗದವರು ಆಹಾರ ಮತ್ತು ಸುರಕ್ಷಿತ ಆಶ್ರಯಕ್ಕಾಗಿ ಹುಡುಕಾಡುತ್ತ ವಲಸೆ ಹೋಗುತ್ತಿರಬಹುದು ಎನ್ನಲಾಗಿದೆ.

ಬ್ರೆಜಿಲ್‌ನ ಗಡಿಯಲ್ಲಿರುವ ಆಗ್ನೇಯ ಪೆರುವಿಯನ್ ಪ್ರಾಂತ್ಯದ ಮ್ಯಾಡ್ರೆ ಡಿ ಡಿಯೋಸ್‌ನ ನದಿಯ ದಡದ ಬಳಿ ಜೂನ್ ಅಂತ್ಯದಲ್ಲಿ ಈ ವಿಡಿಯೋಗಳನ್ನು ತಗೆದಿರುವುದಾಗಿ ʼಸರ್ವೈವಲ್ ಇಂಟರ್‌ನ್ಯಾಷನಲ್ʼ ವರದಿ ಮಾಡಿದೆ.

ಮರಗಳನ್ನು ಕಡಿಯುವ ಕಾರ್ಯಾಚರಣೆ ಪ್ರಾರಂಭಿಸಿರುವ ಸ್ಥಳದಿಂದ ಕೆಲವು ಕಿಲೋಮೀಟರ್ ದೂರದಲ್ಲಿ ಹೆಚ್ಚಿನ ಸಂಖ್ಯೆಯ ಮ್ಯಾಶ್ಕೊ ಪಿರೋಗಳು ವಾಸಿಸುತ್ತಿದ್ದಾರೆ ಎಂದು ಸರ್ವೈವಲ್ ಇಂಟರ್ನ್ಯಾಷನಲ್ ನಿರ್ದೇಶಕಿ ಕ್ಯಾರೋಲಿನ್ ಪಿಯರ್ಸ್ ಹೇಳಿದ್ದಾರೆ.

ಮಾಂಟೆ ಸಾಲ್ವಾಡೊ ಎಂಬ ಯಿನ್ ಜನರ ಹಳ್ಳಿಯ ಬಳಿ ಇತ್ತೀಚಿಗೆ 50ಕ್ಕೂ ಹೆಚ್ಚು ಮ್ಯಾಶ್ಕೊ ಪಿರೋ ಜನರು ಕಾಣಿಸಿಕೊಂಡರು. 17 ಜನರ ಮತ್ತೊಂದು ಗುಂಪು ಪೋರ್ಟೊ ನ್ಯೂವೊ ಎಂಬ ಹಳ್ಳಿಯಲ್ಲಿ ಕಾಣಿಸಿಕೊಂಡಿದೆ ಎಂದು ಸ್ಥಳೀಯ ಹಕ್ಕುಗಳನ್ನು ರಕ್ಷಿಸುವ ಎನ್‌ಜಿಒ ಒಂದು ಹೇಳಿದೆ.

World's Largest Tribe


ಮಡ್ರೆ ಡಿ ಡಿಯೋಸ್‌ನ ಕಾಡಿನಲ್ಲಿ ಎರಡು ಪ್ರದೇಶದಲ್ಲಿ ವಾಸಿಸುವ ಮಾಶ್ಕೊ ಪಿರೋ ನಿಯಮದಂತೆ ವಿರಳವಾಗಿ ಕಾಣಿಸಿಕೊಂಡಿದ್ದಾರೆ. ಅವರು ಯಾರೊಂದಿಗೂ ಹೆಚ್ಚು ಸಂವಹನ ನಡೆಸುವುದಿಲ್ಲ. ಹಲವಾರು ಕಂಪೆನಿಗಳು ಮ್ಯಾಶ್ಕೊ ಪಿರೋ ವಾಸಿಸುವ ಪ್ರದೇಶದೊಳಗೆ ಮರವನ್ನು ಕಡಿಯಲು ಅನುಮತಿ ಹೊಂದಿವೆ. ಒಂದು ಕಂಪನಿ ಮರಗಳನ್ನು ಸಾಗಿಸಲು ಟ್ರಕ್‌ಗಳಿಗಾಗಿ 200 ಕಿಲೋಮೀಟರ್‌ಗಳಿಗಿಂತ ಹೆಚ್ಚು ದೂರ ರಸ್ತೆಗಳನ್ನು ನಿರ್ಮಿಸಿದೆ ಎಂದು ಸರ್ವೈವಲ್ ಇಂಟರ್ನ್ಯಾಷನಲ್ ತಿಳಿಸಿದೆ.

ಈ ಬಗ್ಗೆ ಲಿಮಾದಲ್ಲಿನ ಕ್ಯಾನಲ್ಸ್ ತಹುಮಾನು ಪ್ರತಿನಿಧಿಯು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕಂಪೆನಿಯು ಫಾರೆಸ್ಟ್ ಸ್ಟೀವರ್ಡ್‌ಶಿಪ್ ಕೌನ್ಸಿಲ್‌ನಿಂದ ಪ್ರಮಾಣೀಕರಿಸಲ್ಪಟ್ಟಿದೆ. ಅದರ ಪ್ರಕಾರ ಇದು ಕಾಡಿನ ನಿರ್ದಿಷ್ಟ ಸಂಪನ್ಮೂಲಗಳನ್ನು ಹೊರತೆಗೆಯಲು ಮ್ಯಾಡ್ರೆ ಡಿ ಡಿಯೋಸ್‌ನಲ್ಲಿ 53,000 ಹೆಕ್ಟೇರ್ ಕಾಡುಗಳನ್ನು ಹೊಂದಿದೆ ಎನ್ನಲಾಗಿದೆ.


ಈ ಕುರಿತು ಪ್ರತಿಕ್ರಿಯಿಸಿರುವ ಪೆರುವಿಯನ್ ಸರ್ಕಾರವು ಜೂನ್ 28ರಂದು ಮಡ್ರೆ ಡಿ ಡಿಯೋಸ್‌ನ ರಾಜಧಾನಿ ಪೋರ್ಟೊ ಮಾಲ್ಡೊನಾಡೊ ನಗರದಿಂದ 150 ಕಿಲೋಮೀಟರ್ ದೂರದಲ್ಲಿರುವ ಲಾಸ್ ಪೀಡ್ರಾಸ್ ನದಿಯ ದಡದಲ್ಲಿ ಮಾಶ್ಕೊ ಪಿರೊವನ್ನು ನೋಡಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ವರದಿ ಮಾಡಿದ್ದಾರೆ ಎಂದು ತಿಳಿಸಿದೆ. ಬ್ರೆಜಿಲ್‌ನ ಗಡಿಯುದ್ದಕ್ಕೂ ಮ್ಯಾಶ್ಕೊ ಪಿರೋ ಕಾಣಿಸಿಕೊಂಡಿದೆ ಎಂದು ಬ್ರೆಜಿಲಿಯನ್ ಕ್ಯಾಥೊಲಿಕ್ ಬಿಷಪ್‌ಗಳ ಸ್ಥಳೀಯ ಮಿಷನರಿ ಕೌನ್ಸಿಲ್‌ನಲ್ಲಿ ರೋಸಾ ಪಡಿಲ್ಹಾ ಹೇಳಿದ್ದಾರೆ.

ಇದನ್ನೂ ಓದಿ: United Nations: ಗಾಜಾದಲ್ಲಿ ಸಂಪೂರ್ಣ ಕದನ ವಿರಾಮ ಘೋಷಿಸಿ; ವಿಶ್ವಸಂಸ್ಥೆಯಲ್ಲಿ ಪುನರುಚ್ಚರಿಸಿದ ಭಾರತ

ಅವರು ಪೆರುವಿಯನ್ ಭಾಗದಲ್ಲಿ ಲಾಗರ್ಸ್‌ನಿಂದ ವಲಸೆ ಹೋಗುತ್ತಿದ್ದಾರೆ. ಈ ಸಮಯದಲ್ಲಿ ಅವರು ಟ್ರಾಕಾಜಾ ಅಂದರೆ ಅಮೆಜಾನ್ ಆಮೆಗಳ ಮೊಟ್ಟೆಗಳನ್ನು ತೆಗೆದುಕೊಳ್ಳಲು ಕಡಲತೀರಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಅವರು ಯಾವ ಕ್ಷಣ ಏನು ಮಾಡುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. ಶಾಂತಿಯ ವರ್ತನೆ ತೋರುವುದಿಲ್ಲ. ದಾಳಿಗೆ ಮುಂದಾಗುತ್ತಾರೆ. ಜನರನ್ನು ಕಂಡಾಕ್ಷಣ ಓಡಿ ಹೋಗುತ್ತಾರೆ ಎಂದು ಪಡಿಲ್ಹಾ ತಿಳಿಸಿದ್ದಾರೆ.

Continue Reading
Advertisement
Viral Video
Latest9 mins ago

Viral Video: ಬಸ್‌ ಡ್ರೈವರ್‌ನ ರೀಲ್ಸ್‌ ಕ್ರೇಜ್‌ಗೆ 2 ಎತ್ತುಗಳು ಬಲಿ; ರೈತನ ಸ್ಥಿತಿ ಗಂಭೀರ

Train Accident
ದೇಶ9 mins ago

Train Derail: ಹಳಿ ತಪ್ಪಿದ ರೈಲು; ಅಪಘಾತದ ಹಿಂದೆ ಇದ್ಯಾ ವಿಧ್ವಂಸಕ ಕೃತ್ಯ?

Crime News
ಪ್ರಮುಖ ಸುದ್ದಿ19 mins ago

Bangalore News : ಬೆಂಗಳೂರಲ್ಲಿ ಆಘಾತಕಾರಿ ಘಟನೆ; ಗಾಂಜಾ ನಶೆಯಲ್ಲಿ ಶಾಲೆ ಬಿಟ್ಟು ಮನೆಗೆ ಹೋಗುತ್ತಿದ್ದ ಬಾಲಕಿಯರನ್ನು ಬೆದರಿಸಿದ ಪುಂಡರು

Lady Police Officer
Latest30 mins ago

Lady Police Officer: ಗೂಂಡಾಗಿರಿ ಮಾಡಿದರೆ ಹುಷಾರ್‌! ಪುಂಡರಿಗೆ ಲೇಡಿ ಪೊಲೀಸ್ ವಾರ್ನಿಂಗ್‌; ವಿಡಿಯೊ ವೈರಲ್

kiccha sudeep‌ Fans
ಸಿನಿಮಾ56 mins ago

Kiccha Sudeep: ಸೆಲ್ಫಿಗಾಗಿ 2 ಗಂಟೆ ಕಾದ ಅಭಿಮಾನಿಗೆ ಕಿಚ್ಚ ಸುದೀಪ್ ಅವಮಾನ! ವಿಡಿಯೊ ನೋಡಿ

Ratna Bhandar
ದೇಶ1 hour ago

Ratna Bhandar: ಒಂದೇ ವಾರದಲ್ಲಿ ಎರಡನೇ ಬಾರಿ ತೆರೆದ ಪುರಿ ಜಗನ್ನಾಥನ ʼರತ್ನ ಭಂಡಾರʼ

GT World Mall
ಪ್ರಮುಖ ಸುದ್ದಿ1 hour ago

GT World Mall : ಜಿಟಿ ಮಾಲ್​ ಏಳು ದಿನಗಳ ಕಾಲ ಬಂದ್​, ಮಾಲೀಕರಿಂದಲೇ ಸ್ವಯಂಪ್ರೇರಿತ ಕ್ರಮ

Viral Video
Latest1 hour ago

Viral Video: ಗರ್ಭಗುಡಿಗೆ ನುಗ್ಗಿ ದೇವರ ಕಿರೀಟಕ್ಕೇ ಕನ್ನ ಹಾಕಿದ ಕಳ್ಳ! ಪರಾರಿಯಾಗುವಾಗ ಮಾಡಿದ್ದೇನು? ವಿಡಿಯೊ ನೋಡಿ!

Dog Attacks
Latest1 hour ago

Dog Attacks: ಬಡಪಾಯಿ ಡೆಲಿವರಿ ಮ್ಯಾನ್‌ನನ್ನು ಭೀಕರವಾಗಿ ಕಚ್ಚಿದ ಶ್ರೀಮಂತರ ಮನೆಯ ನಾಯಿಗಳು; ವಿಡಿಯೊ ಇದೆ

Kashmir Encounter
ದೇಶ2 hours ago

Kashmir Encounter: ಕಾಶ್ಮೀರದಲ್ಲಿ ಮತ್ತೆ ಎನ್‌ಕೌಂಟರ್‌; ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ3 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ4 hours ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ2 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ3 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ3 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ4 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ4 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ4 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ4 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

ಟ್ರೆಂಡಿಂಗ್‌