Endoscopy: ಬಟನ್ ಬ್ಯಾಟರಿ ನುಂಗಿದ ಮಗು; ವೈದ್ಯರು ಮಾಡಿದ್ದೇನು? ಪೋಷಕರು ಓದಬೇಕಾದ ಸುದ್ದಿ - Vistara News

Latest

Endoscopy: ಬಟನ್ ಬ್ಯಾಟರಿ ನುಂಗಿದ ಮಗು; ವೈದ್ಯರು ಮಾಡಿದ್ದೇನು? ಪೋಷಕರು ಓದಬೇಕಾದ ಸುದ್ದಿ

Button Battery: ಎಲೆಕ್ಟ್ರಾನಿಕ್ ಸ್ಕ್ರ್ಯಾಚ್ ಪ್ಯಾಡ್‌ ನ ಬಟನ್ ಬ್ಯಾಟರಿ ನುಂಗಿ ಅಸ್ವಸ್ಥಗೊಂಡಿದ್ದ ಮಗುವಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಸಕಾಲದಲ್ಲಿ ಚಿಕಿತ್ಸೆ ನೀಡಿದ್ದರಿಂದ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಬಟನ್ ಬ್ಯಾಟರಿ ನುಂಗಿದರೆ ಪ್ರಾಣಕ್ಕೆ ಸಂಚಕಾರ ಬರುವ ಸಾಧ್ಯತೆ ಇದೆ ಎಂದು ಎಚ್ಚರಿಸಿರುವ ವೈದ್ಯರು ಪುಟ್ಟ ಮಕ್ಕಳಿರುವ ಮನೆಯಲ್ಲಿ ಈ ಬಗ್ಗೆ ಪೋಷಕರು ಹೆಚ್ಚು ಜಾಗ್ರತೆ ವಹಿಸಲು ಸೂಚಿಸಿದ್ದಾರೆ.

VISTARANEWS.COM


on

Endoscopy: manipal hospital
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಎಲೆಕ್ಟ್ರಾನಿಕ್ ಸ್ಕ್ರ್ಯಾಚ್ ಪ್ಯಾಡ್‌ನ (electronic scratch pad) ಬಟನ್ ಬ್ಯಾಟರಿ (Button Battery) ನುಂಗಿದ ಒಂದು ವರ್ಷದ ಬಾಲಕ ಶ್ರೀಜಿತ್‌ಗೆ (Shreejit) ಬೆಂಗಳೂರಿನ (bengaluru) ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ (old airport road) ಮಣಿಪಾಲ್ ಆಸ್ಪತ್ರೆಯಲ್ಲಿ (manipal hospital) ಸಕಾಲದಲ್ಲಿ ಎಂಡೋಸ್ಕೋಪಿ (Endoscopy) ಚಿಕಿತ್ಸೆ ನೀಡುವ ಮೂಲಕ ಪ್ರಾಣಾಪಾಯದಿಂದ ಪಾರು ಮಾಡಲಾಗಿದೆ.

ಸಹೋದರಿಯ ಎಲೆಕ್ಟ್ರಾನಿಕ್ ಸ್ಕ್ರ್ಯಾಚ್ ಪ್ಯಾಡ್‌ ನ ಬಟನ್ ಬ್ಯಾಟರಿಯನ್ನು ನುಂಗಿದ ಬಾಲಕ ಶ್ರೀಜಿತ್‌ನನ್ನು ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ಇತ್ತೀಚೆಗೆ ದಾಖಲಿಸಲಾಗಿತ್ತು. ಸರಿಯಾದ ಸಮಯದಲ್ಲಿ ಎಂಡೋಸ್ಕೋಪಿ ಮಾಡಿದ್ದರಿಂದ ಅವನು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಯಾವಾಗ ನಡೆದಿದ್ದು?

ಫೆಬ್ರವರಿ 29ರಂದು ಶ್ರೀಜಿತ್ ಬ್ಯಾಟರಿ ನುಂಗಿದ್ದು, ಉಸಿರಾಟದ ಸಮಸ್ಯೆ ಪ್ರಾರಂಭವಾಗಿ ಮಗು ಕೆಮ್ಮಲು ಪ್ರಾರಂಭಿಸಿತ್ತು. ಇದನ್ನು ಗಮನಿಸಿದ ಮಗುವಿನ ಪೋಷಕರಾದ ಸುಚೇತಾ ಎಸ್. ರೇವಣಕರ್ ಪ್ರಕಾಶ್ ಮತ್ತು ಭಗವಂತ್ ಶೇಟ್ ಕೂಡಲೇ ಮಗುವನ್ನು ಕರೆದುಕೊಂಡು ಬಂದು ಆಸ್ಪತ್ರೆಗೆ ದಾಖಲಿಸಿದ್ದರು.

ಇದನ್ನೂ ಓದಿ: High Court: ಹೈಕೋರ್ಟ್‌ನಲ್ಲಿ ಬ್ಲೇಡ್‌ನಿಂದ ಕೈ ಕೊಯ್ದುಕೊಂಡು ವ್ಯಕ್ತಿ ಆತ್ಮಹತ್ಯೆ ಯತ್ನ

ಆಸ್ಪತ್ರೆ ವೈದ್ಯರು ಮಗುವನ್ನು ಪರಿಶೀಲಿಸಿ ಬ್ಯಾಟರಿ ಸ್ವಾಭಾವಿಕವಾಗಿ ಹೊರಹೋಗುವಂತೆ ಪ್ರಯತ್ನಿಸಿದರು. ಆದರೆ ಇದು ಸಾಧ್ಯವಾಗದೇ ಇದ್ದಾಗ ಮಗುವನ್ನು ಮಕ್ಕಳ ಆರೈಕೆಗಾಗಿ ಮಣಿಪಾಲ್ ಆಸ್ಪತ್ರೆಗಳಿಗೆ ದಾಖಲಿಸಲಾಯಿತು.

ಎಕ್ಸ್ ರೇಯಲ್ಲಿ ದೃಢ

ಶ್ರೀಜಿತ್ ಎದೆಯಲ್ಲಿ ಬಟನ್ ಬ್ಯಾಟರಿ ಇರುವುದನ್ನು ಎಕ್ಸ್ ರೇ ದೃಢಪಡಿಸಿತ್ತು. ಆಸ್ಪತ್ರೆಯ ಪೀಡಿಯಾಟ್ರಿಕ್ ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿಯ ಸಲಹೆಗಾರರಾದ ಡಾ. ಶ್ರೀಕಾಂತ್ ಕೆ.ಪಿ. ಅವರು, ಬಟನ್ ಬ್ಯಾಟರಿಯ ಅಪಾಯದ ಬಗ್ಗೆ ಅರಿತು ಅದು ಅನ್ನನಾಳಕ್ಕೆ ಹೋದರೆ ಅನ್ನನಾಳದ ರಂಧ್ರ, ಪ್ರಮುಖ ಅಂಗಗಳಿಗೆ ಹಾನಿಯಾಗಬಹುದು ಮಾತ್ರವಲ್ಲದೇ ಮಗುವಿನ ಸಾವಿನ ಅಪಾಯವೂ ಇದೆ ಎಂದು ಎಚ್ಚರಿಸಿದರು.

ಎಂಡೋಸ್ಕೋಪಿ ಚಿಕಿತ್ಸೆ

ಶ್ರೀಜಿತ್ ದೇಹದಿಂದ ತ್ವರಿತವಾಗಿ ಬ್ಯಾಟರಿ ಹೊರತೆಗೆಯಲು ಮತ್ತು ಆ ಭಾಗವನ್ನು ಸ್ವಚ್ಛಗೊಳಿಸಲು ಎಂಡೋಸ್ಕೋಪಿಯನ್ನು ನಡೆಸಲಾಯಿತು. ಬ್ಯಾಟರಿಯಿಂದಾಗಿ ಮಗುವಿಗೆ ತೀವ್ರವಾದ ಆಂತರಿಕ ಸುಟ್ಟಗಾಯಗಳಾಗುವ ಲಕ್ಷಣವಿತ್ತು. ಆದರೆ ಸಮಯೋಚಿತ ವೈದ್ಯಕೀಯ ಆರೈಕೆಯಿಂದಾಗಿ ಶ್ರೀಜಿತ್ ದೇಹದಿಂದ ಬ್ಯಾಟರಿಯನ್ನು ಹೊರತೆಗೆದು ಯಾವುದೇ ತೊಂದರೆಗಳಿಲ್ಲದಂತೆ ಮಗುವನ್ನು ರಕ್ಷಿಸಲಾಗಿದೆ. ಇದೇ ಸಂದರ್ಭದಲ್ಲಿ ಮಗುವಿಗೆ ಕಾಂಟ್ರಾಸ್ಟ್ ಸ್ವಾಲೋ ಪರೀಕ್ಷೆ ನಡೆಸಿದ್ದು, ಮಗುವಿನ ಅನ್ನನಾಳಕ್ಕೆ ಯಾವುದೇ ಹೆಚ್ಚಿನ ಹಾನಿಯಾಗದಂತೆ ಎಚ್ಚರಿಕೆ ವಹಿಸಲಾಗಿದೆ.

48 ಗಂಟೆಗಳ ವೀಕ್ಷಣೆಯ ಬಳಿಕ ಶ್ರೀಜಿತ್ ನನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಪೋಷಕರು ಬಟನ್ ಬ್ಯಾಟರಿಗಳಿಂದ ಮಕ್ಕಳಿಗೆ ಉಂಟಾಗುವ ಅಪಾಯಗಳ ಬಗ್ಗೆ ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವಂತೆ ವೈದರು ಹೇಳಿದ್ದಾರೆ.

ಮೊಬೈಲ್ ಚಾರ್ಜರ್ ಶಾಕ್ ನಿಂದ ಮಗು ಸತ್ತಿತ್ತು

ಮಕ್ಕಳ ಬಗ್ಗೆ ಎಷ್ಟು ಜಾಗ್ರತೆ ವಹಿಸಿದರೂ ಸಾಲದು. ಇತ್ತೀಚೆಗಷ್ಟೇ ಮಗುವೊಂದು ಆಟವಾಡುತ್ತ ಮೊಬೈಲ್ ಚಾರ್ಜರ್ ಅನ್ನು ಬಾಯಲ್ಲಿ ಹಾಕಿದ್ದು ವಿದ್ಯುತ್ ಶಾಕ್ ತಗಲಿ ಸಾವನ್ನಪ್ಪಿದ ಘಟನೆ ನಡೆದಿತ್ತು.
ಕಾರವಾರದ ಸಿದ್ಧರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು 8 ತಿಂಗಳ ಹೆಣ್ಣು ಮಗು ಸಾನಿಧ್ಯ ಮನೆಯಲ್ಲಿ ಮೃತಪಟ್ಟಿತ್ತು.
ಮಲಗಿದ್ದ ಮಗು ಸಾನಿಧ್ಯಳ ಪಕ್ಕದಲ್ಲೇ ನೇತಾಡುತ್ತಿದ್ದ ಮೊಬೈಲ್‌ನ್ನು ಚಾರ್ಜ್‌ ನ ತುದಿಯನ್ನು ಬಾಯಿಗೆ ಹಾಕಿಕೊಂಡಿದೆ. ಚಾರ್ಜರ್‌ನಲ್ಲಿ ಹರಿದು ಬರುವ ಸಣ್ಣ ಪ್ರಮಾಣದ ವಿದ್ಯುತ್‌ ಮಗುವಿಗೆ ಆಘಾತವನ್ನು ಉಂಟು ಮಾಡಿದೆ. ಆಘಾತಕ್ಕೆ ಒಳಗಾದ ಮಗು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿತ್ತು. ಈ ಕುರಿತು ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆಟೋಮೊಬೈಲ್

Maruti Suzuki: ಮಾರುತಿ ಸುಜುಕಿ ಸಿಎನ್‌ಜಿ ವಾಹನದ ಟೀಸರ್ ಔಟ್‌; ಹಲವು ವೈಶಿಷ್ಟ್ಯಗಳ ನಿರೀಕ್ಷೆ

ಮಾರುತಿ ಸುಜುಕಿ (Maruti Suzuki) ತನ್ನ ಎಸ್ ಸಿಎನ್‌ಜಿ ಶ್ರೇಣಿಗಾಗಿ ಹೊಸ ತಂತ್ರಜ್ಞಾನವನ್ನು ಪರಿಚಯಿಸಲು ಸಿದ್ಧವಾಗಿದೆ. ಕಂಪನಿಯು ಬಿಡುಗಡೆ ಮಾಡಿರುವ ಹೊಸ ಸಿಎನ್‌ಜಿ ಟೀಸರ್‌ನಲ್ಲಿ ಮಾರುತಿ ಸುಜುಕಿಯಲ್ಲಿನ ಅತ್ಯಾಕರ್ಷಕ ಬೆಳವಣಿಗೆಗಳ ಮುನ್ನೋಟವನ್ನು ನೀಡುತ್ತಿದೆ. ಸಿಎನ್‌ಜಿ ವಾಹನಗಳ ಕುರಿತಾದ ಮಾರುತಿ ಸುಜುಕಿಯ ಟೀಸರ್‌ ನೀವೇ ನೋಡಿ.

VISTARANEWS.COM


on

By

Maruti Suzuki
Koo

ಭಾರತದ (India) ಮಾರುಕಟ್ಟೆಗೆ (market) ಶೀಘ್ರದಲ್ಲೇ ಪ್ರವೇಶಿಸಲಿರುವ ಮಾರುತಿ ಸುಜುಕಿಯ (Maruti Suzuki) ಸಿಎನ್‌ಜಿ (CNG) ವಾಹನಗಳಲ್ಲಿರುವ ವಿಶೇಷತೆ ಕುರಿತು ಹೊಸ ಟೀಸರ್ (New Teaser) ಅನ್ನು ಬಿಡುಗಡೆ ಮಾಡಿದೆ. ಒಇಎಂ ಬಿಡುಗಡೆ ಮಾಡಿರುವ ಈ ಸಣ್ಣ ವಿಡಿಯೋ ಕ್ಲಿಪ್ ಸಿಎನ್‌ಜಿಯ ಮಾದರಿಗಳ ಮೇಲೆ ಕೇಂದ್ರೀಕರಿಸಿದೆ. ಇದು ಬ್ರ್ಯಾಂಡ್ ಎಸ್‌ಸಿಎನ್‌ಜಿ (S CNG) ಬ್ಯಾಡ್ಜ್‌ನೊಂದಿಗೆ ಬರಲಿದೆ. ಸಿಎನ್‌ಜಿಯಲ್ಲಿ ಕಾರ್ಯನಿರ್ವಹಿಸಲು ಅಗತ್ಯವಿರುವ ಅತ್ಯಾಧುನಿಕ ಸಾಧನಗಳನ್ನು ಹೊಂದಿವೆ.

ಮಾರುತಿ ಸುಜುಕಿ ಭಾರತೀಯ ಕಾರು ಮಾರುಕಟ್ಟೆಯಲ್ಲಿ ದೊಡ್ಡ ಮಾರುಕಟ್ಟೆ ಪಾಲನ್ನು ಹೊಂದಿದೆ. ಅದರ ಮಾರಾಟ ಸಂಖ್ಯೆಗೆ ದೊಡ್ಡ ಕೊಡುಗೆಯನ್ನು ಸಿಎನ್‌ಜಿ ಪವರ್‌ಟ್ರೇನ್‌ಗಳೊಂದಿಗೆ ಮಾಡೆಲ್‌ಗಳು ಮಾಡುತ್ತವೆ.
ಮಾರುತಿ ಸುಜುಕಿ ತನ್ನ ಹೆಚ್ಚಿನ ಫ್ಲೀಟ್ ಅನ್ನು ಸಿಎನ್‌ಜಿ ಪವರ್‌ಟ್ರೇನ್ ಆಯ್ಕೆಗಳೊಂದಿಗೆ ಒದಗಿಸುವ ಏಕೈಕ ವಾಹನ ತಯಾರಕ ಕಂಪೆನಿಯಾಗಿದೆ. ಗ್ರಾಹಕರಿಗೆ ಇಂಧನ ಸಾಮರ್ಥ್ಯ ಆಯ್ಕೆಯನ್ನು ನೀಡಲು ಬ್ರ್ಯಾಂಡ್ ತನ್ನ ಹೆಚ್ಚಿನ ಕಾರುಗಳಲ್ಲಿ ಎಸ್ ಸಿಎನ್ ಜಿ ಕಿಟ್‌ಗಳನ್ನು ನೀಡುತ್ತದೆ.

ಈಗ ಮಾರುತಿ ಸುಜುಕಿ ತನ್ನ ಎಸ್ ಸಿಎನ್‌ಜಿ ಶ್ರೇಣಿಗಾಗಿ ಹೊಸ ತಂತ್ರಜ್ಞಾನವನ್ನು ಪರಿಚಯಿಸಲು ಸಿದ್ಧವಾಗಿದೆ. ಕಂಪೆನಿಯು ಬಿಡುಗಡೆ ಮಾಡಿರುವ ಹೊಸ ಸಿಎನ್‌ಜಿ ಟೀಸರ್ ನಲ್ಲಿ ಮಾರುತಿ ಸುಜುಕಿಯಲ್ಲಿನ ಅತ್ಯಾಕರ್ಷಕ ಬೆಳವಣಿಗೆಗಳು ನಡೆಯುತ್ತಿವೆ ಎಂಬುದನ್ನು ಸೂಚಿಸುತ್ತದೆ.


ಅವಳಿ ಸಿಲಿಂಡರ್ ನಿರೀಕ್ಷೆ

ಟಾಟಾದಂತಹ ಕಾರು ತಯಾರಕರು ತಮ್ಮ ಸಿಎನ್‌ಜಿ ಕೊಡುಗೆಗಳನ್ನು ಟ್ವಿನ್- ಸಿಲಿಂಡರ್ ತಂತ್ರಜ್ಞಾನ ಮತ್ತು ಸಿಎನ್‌ಜಿಗೆ ಹೊಂದಿಕೆಯಾಗುವ ಎಎಂಟಿ ಗೇರ್‌ಬಾಕ್ಸ್‌ಗಳಂತಹ ವೈಶಿಷ್ಟ್ಯಗಳೊಂದಿಗೆ ಹೆಚ್ಚಿಸಿದ್ದಾರೆ. ಸಿಎನ್‌ಜಿ ವಾಹನ ವಿಭಾಗದಲ್ಲಿನ ಈ ಸುಧಾರಣೆಯು ಟಾಟಾ ಸಿಎನ್‌ಜಿ ವಾಹನಗಳ ಮಾರಾಟವನ್ನು ಹೆಚ್ಚಿಸಿದೆ. ಮಾರುತಿ ಸುಜುಕಿ ಇನ್ನೂ ಒಂದೇ ಸಿಎನ್‌ಜಿ ಟ್ಯಾಂಕ್ ಅನ್ನು ನೀಡುತ್ತದೆ.

ಈಗಿನ ಟೀಸರ್ ನಲ್ಲಿ ಮಾರುತಿ ಕೆಲವು ಹೊಸ ತಂತ್ರಜ್ಞಾನವನ್ನು ಪ್ರಾರಂಭಿಸಲು ಯೋಜಿಸುತ್ತಿದೆ ಎಂದು ಸೂಚಿಸುತ್ತದೆ. ಸಿಎನ್ ಜಿ ವಾಹನಗಳಲ್ಲಿ ನೇರ ಸಿಎನ್ ಜಿ ಪ್ರಾರಂಭ ಮತ್ತು ಸ್ವಿಚ್‌ಓವರ್ ವ್ಯವಸ್ಥೆಯೊಂದಿಗೆ ಅವಳಿ ಸಿಲಿಂಡರ್ ತಂತ್ರಜ್ಞಾನವನ್ನು ಬ್ರ್ಯಾಂಡ್ ಪ್ರಾರಂಭಿಸುತ್ತದೆ ಎಂಬುದನ್ನು ನಿರೀಕ್ಷಿಸಬಹುದು.

ಇದನ್ನೂ ಓದಿ: Tata Motors: ಟಾಟಾ ಮೋಟಾರ್ಸ್‌ನಿಂದ ʼಆಲ್ಟ್ರೋಜ್ ರೇಸರ್ʼ ಬಿಡುಗಡೆ; ದರ ಎಷ್ಟು?

ಅವಳಿ ಸಿಲಿಂಡರ್ ತಂತ್ರಜ್ಞಾನವು ಎರಡು 25- 30 ಲೀಟರ್ ಸಿಲಿಂಡರ್‌ಗಳನ್ನು ಸ್ಪೇರ್ ವೀಲ್‌ನ ಜಾಗದಲ್ಲಿ ಇರಿಸುವ ನಿರೀಕ್ಷೆಯಿದೆ. ಬಿಡಿ ಚಕ್ರವನ್ನು ಬೂಟ್ ಅಡಿಯಲ್ಲಿ ಇರಿಸಬಹುದು. ಆದರೆ, ಹೊಸ ತಂತ್ರಜ್ಞಾನದಲ್ಲಿ ಏನನ್ನು ತರಲಿದೆ ಎಂಬುದನ್ನು ಕಂಪನಿ ಇನ್ನೂ ಬಹಿರಂಗಪಡಿಸಿಲ್ಲ.

ಅರೆನಾ ಔಟ್‌ಲೆಟ್‌ಗಳ ಮೂಲಕ ಮಾರಾಟವಾಗುವ ಮಾದರಿಗಳ ಪಟ್ಟಿಯಲ್ಲಿ ಮಾರುತಿ ಸುಜುಕಿ ಡಿಜೈರ್, ಆಲ್ಟೊ, ಎರ್ಟಿಗಾ, ವ್ಯಾಗನ್ಆರ್, ಸೆಲೆರಿಯೊ, ಇಕೊ, ಎಸ್-ಪ್ರೆಸ್ಸೊ ಮತ್ತು ಬ್ರೆಝಾ ಸೇರಿವೆ. ಏತನ್ಮಧ್ಯೆ, ಫ್ರಾಂಕ್ಸ್, ಬಲೆನೊ, ಗ್ರ್ಯಾಂಡ್ ವಿಟಾರಾ ಮತ್ತು ಎಕ್ಸ್‌ಎಲ್ 6 ನಂತಹ ಇತರ ಮಾದರಿಗಳನ್ನು ನೆಕ್ಸಾ ಔಟ್‌ಲೆಟ್‌ಗಳ ಮೂಲಕ ಮಾರಾಟ ಮಾಡಲಾಗುತ್ತದೆ.

Continue Reading

ದೇಶ

Joshimath Teshil Now Jyotirmath: ಉತ್ತರಾಖಂಡದ ಜೋಶಿಮಠ ಈಗ ಜ್ಯೋತಿರ್ಮಠ!

ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಕಳೆದ ವರ್ಷ ನಡೆದ ಕಾರ್ಯಕ್ರಮವೊಂದರಲ್ಲಿ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಮಿ ಅವರು ಜೋಶಿಮಠ ತಹಸಿಲ್ (Joshimath Teshil Now Jyotirmath) ಅನ್ನು ಮರುನಾಮಕರಣ ಮಾಡುವುದಾಗಿ ಭರವಸೆ ನೀಡಿದ್ದರು. ಆ ಮಾತನ್ನು ಅವರು ಈಗ ಪೂರ್ಣಗೊಳಿಸಿದ್ದಾರೆ.

VISTARANEWS.COM


on

By

Joshimath Teshil Now Jyotirmath
Koo

ಉತ್ತರಾಖಂಡದ (Uttarakhand) ಚಮೋಲಿ (Chamoli) ಜಿಲ್ಲೆಯಲ್ಲಿರುವ ಜೋಶಿಮಠ ತಾಲೂಕು (Joshimath tehsil) ಅನ್ನು ‘ಜ್ಯೋತಿರ್ಮಠ’ (Joshimath Teshil Now Jyotirmath) ಎಂಬ ಹೊಸ ಹೆಸರಿನಿಂದ ಕರೆಯಲಾಗುವುದು ಎಂದು ಮುಖ್ಯಮಂತ್ರಿ (Chief Minister) ಪುಷ್ಕರ್ ಸಿಂಗ್ ಧಮಿ (Pushkar Singh Dhami) ಘೋಷಣೆ ಮಾಡಿದ್ದಾರೆ. ಜ್ಯೋತಿರ್ಮಠವು ಜೋಶಿಮಠದ ಪ್ರಾಚೀನ ಹೆಸರಾಗಿದೆ.

ತಹಸಿಲ್‌ನ ಹೆಸರು ಬದಲಾವಣೆ ಕುರಿತು ಉತ್ತರಾಖಂಡ ಸರ್ಕಾರ ಸಲ್ಲಿಸಿರುವ ಪ್ರಸ್ತಾವನೆಯನ್ನು ಕೇಂದ್ರವು ಅನುಮೋದಿಸಿದೆ.

ಸ್ಥಳೀಯರಿಂದ ಸ್ವಾಗತ

ಜೋಶಿಮಠ ತಹಸಿಲ್ ಅನ್ನು ‘ಜ್ಯೋತಿರ್ಮಠ’ ಎಂದು ಹೆಸರು ಬದಲಾವಣೆ ಮಾಡಿರುವುದನ್ನು ಜೋಶಿಮಠದ ನಿವಾಸಿಗಳು ಸ್ವಾಗತಿಸಿದ್ದಾರೆ. ಯಾಕೆಂದರೆ ತಹಸಿಲ್ ಅನ್ನು ಅದರ ಮೂಲ ಹೆಸರಿಗೆ ಹಿಂತಿರುಗಿಸುವುದರಿಂದ ಅದರ ಪ್ರಾಚೀನ ಮೂಲವನ್ನು ಎತ್ತಿ ತೋರಿಸುತ್ತದೆ. ಮಾತ್ರವಲ್ಲದೆ ಅದರ ವಿಶಾಲವಾದ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಗೆ ಗೌರವ ಸಲ್ಲಿಸುತ್ತದೆ ಎಂದಿದ್ದಾರೆ.

ಕಳೆದ ವರ್ಷ ಚಮೋಲಿ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ತಹಸಿಲ್ ಅನ್ನು ಮರುನಾಮಕರಣ ಮಾಡುವ ಸರ್ಕಾರದ ನಿರ್ಣಯದ ಬಗ್ಗೆ ಸಾರ್ವಜನಿಕ ಪ್ರಕಟಣೆಯನ್ನು ಮಾಡಿದರು. ಆ ಮೂಲಕ ಅದರ ಐತಿಹಾಸಿಕ ವೈಭವವನ್ನು ಮರುಸ್ಥಾಪನೆಗೆ ಯೋಚಿಸಿರುವುದಾಗಿ ಹೇಳಿದ್ದರು.

ಬಹುಕಾಲದ ಬೇಡಿಕೆ

ಜೋಶಿ ಮಠದ ಸ್ಥಳೀಯರು ಬಹಳ ಹಿಂದಿನಿಂದಲೂ ಹೆಸರು ಬದಲಾವಣೆಗೆ ಒತ್ತಾಯಿಸುತ್ತಿದ್ದರು. ಜನರ ಭಾವನೆಗಳಿಗೆ ಸ್ಪಂದಿಸಿ ಧಾಮಿ ಸರ್ಕಾರ ತಹಸಿಲ್ ಹೆಸರನ್ನು ಮರುನಾಮಕರಣ ಮಾಡುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಬುಧವಾರ ಅನುಮೋದನೆ ಪಡೆದಿದೆ.

ಇದನ್ನೂ ಓದಿ: Jagannath Temple: 4 ವರ್ಷದ ಬಳಿಕ ಜಗನ್ನಾಥ ದೇಗುಲದ ಬಾಗಿಲು ಓಪನ್;‌ ಇದಕ್ಕೂ ಬಿಜೆಪಿ ಪ್ರಣಾಳಿಕೆಗೂ ಇದೆ ಸಂಬಂಧ!


ಶಂಕರಾಚಾರ್ಯರಿಗೂ ಇದೆ ನಂಟು

8ನೇ ಶತಮಾನದಲ್ಲಿ ಆದಿ ಗುರು ಶಂಕರಾಚಾರ್ಯರು ಈ ಕ್ಷೇತ್ರಕ್ಕೆ ಬಂದಿದ್ದರು ಎಂಬುದು ಸ್ಥಳೀಯರ ನಂಬಿಕೆ. ಅವರು ಅಮ6ರ ಕಲ್ಪ ವೃಕ್ಷದ ಕೆಳಗೆ ತಪಸ್ಸು ಕೈಗೊಂಡರು ಎಂದು ಹೇಳಲಾಗುತ್ತದೆ. ಇದರಿಂದಾಗಿ ದೈವಿಕ ಜ್ಞಾನೋದಯ ಮತ್ತು ಜ್ಞಾನವನ್ನು ಸಾಧಿಸಿದರು. ಈ ಸ್ಥಳವನ್ನು ಮೂಲತಃ ಜ್ಯೋತಿರ್ಮಠ ಎಂದು ಕರೆಯಲಾಗುತ್ತಿತ್ತು. ಆದರೆ ಕಾಲಾನಂತರದಲ್ಲಿ ಇದು ಜೋಶಿಮಠ ಎಂಬ ಬೇರೆ ಹೆಸರಿನಲ್ಲಿ ಜನಪ್ರಿಯತೆಯನ್ನು ಗಳಿಸಿತು.

ಜ್ಯೋತಿರ್ಮಠವು 6,150 ಅಡಿ ಅಂದರೆ ಸರಿಸುಮಾರು 1,875 ಮೀಟರ್ ಎತ್ತರದಲ್ಲಿದೆ. ಹಲವಾರು ಹಿಮಾಲಯ ಪರ್ವತಾರೋಹಣ, ಚಾರಣ ಮತ್ತು ಬದರಿನಾಥದಂತಹ ಯಾತ್ರಾ ಕೇಂದ್ರಗಳಿಗೆ ಇದು ಹೆಬ್ಬಾಗಿಲಾಗಿದೆ.

Continue Reading

ವಾಣಿಜ್ಯ

ATM Cash Withdrawal Fee: ಎಟಿಎಂ ನಗದು ಹಿಂಪಡೆಯುವಿಕೆ ಶುಲ್ಕ 21 ರೂ.ಗೆ ಏರಿಕೆ?

ಎಟಿಎಂ ಉದ್ಯಮದ ಒಕ್ಕೂಟ (ಸಿಎಟಿಎಂಐ) ವ್ಯವಹಾರಕ್ಕೆ ಹೆಚ್ಚಿನ ನಿಧಿಯನ್ನು ಪಡೆಯಲು ಎಟಿಎಂ ಆಪರೇಟರ್‌ಗಳು ಎಟಿಎಂಗಳಲ್ಲಿ ನಗದು ಹಿಂಪಡೆಯುವಿಕೆಯ ಮೇಲಿನ ಇಂಟರ್‌ಚೇಂಜ್ ಶುಲ್ಕವನ್ನು (ATM Cash Withdrawal Fee) ಪ್ರತಿ ವಹಿವಾಟಿಗೆ ಗರಿಷ್ಠ 23 ರೂ. ಹೆಚ್ಚಿಸಲು ಒತ್ತಾಯಿಸಿದೆ. ಇವರ ಬೇಡಿಕೆ ಏನು ಇತ್ಯಾದಿ ವಿವರ ಇಲ್ಲಿದೆ.

VISTARANEWS.COM


on

By

ATM Cash Withdrawal Fee
Koo

ಎಟಿಎಂನಲ್ಲಿ (ATM) ಇನ್ನು ಮುಂದೆ ಹಣ ಪಡೆಯುವ (Cash Withdrawal) ಮುನ್ನ ಯೋಚಿಸಿ. ಯಾಕೆಂದರೆ ಈಗಾಗಲೇ ಬ್ಯಾಂಕ್‌ಗಳು ವಿಧಿಸುತ್ತಿರುವ ಎಟಿಎಂ ಸೇವಾ ಶುಲ್ಕ (ATM Cash Withdrawal Fee) ಇನ್ನೂ ಹೆಚ್ಚಾಗಬಹುದು. ಎಟಿಎಂ ಆಪರೇಟರ್‌ಗಳು ನಗದು ಹಿಂಪಡೆಯುವಿಕೆಯ ಮೇಲಿನ ಶುಲ್ಕವನ್ನು ಹೆಚ್ಚಿಸಲು ಒತ್ತಾಯಿಸುತ್ತಿದ್ದು, ಈಗಾಗಲೇ ಇವರು ತಮ್ಮ ಮನವಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್ (RBI) ಮತ್ತು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾಗೆ (NPCI) ಸಲ್ಲಿಸಿದ್ದಾರೆ.

ಎಟಿಎಂ ಉದ್ಯಮದ ಒಕ್ಕೂಟ (ಸಿಎಟಿಎಂಐ) ವ್ಯವಹಾರಕ್ಕೆ ಹೆಚ್ಚಿನ ನಿಧಿಯನ್ನು ಪಡೆಯಲು ಎಟಿಎಂ ಆಪರೇಟರ್‌ಗಳು ಎಟಿಎಂಗಳಲ್ಲಿ ನಗದು ಹಿಂಪಡೆಯುವಿಕೆಯ ಮೇಲಿನ ಇಂಟರ್‌ಚೇಂಜ್ ಶುಲ್ಕವನ್ನು ಪ್ರತಿ ವಹಿವಾಟಿಗೆ ಗರಿಷ್ಠ 23 ರೂ. ಹೆಚ್ಚಿಸಲು ಒತ್ತಾಯಿಸಿದೆ. ಎರಡು ವರ್ಷಗಳ ಹಿಂದೆ ಈ ವಿನಿಮಯ ದರವನ್ನು ಕೊನೆಯದಾಗಿ ಹೆಚ್ಚಿಸಲಾಗಿತ್ತು ಎಂದು ಎಜಿಎಸ್ ಟ್ರಾನ್ಸಾಕ್ಟ್ ಟೆಕ್ನಾಲಜೀಸ್‌ನ ಕಾರ್ಯನಿರ್ವಾಹಕ ನಿರ್ದೇಶಕ ಸ್ಟಾನ್ಲಿ ಜಾನ್ಸನ್ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

ಈ ಕುರಿತು ಭಾರತೀಯ ರಿಸರ್ವ್ ಅನ್ನು ಸಂಪರ್ಕಿಸಲಾಗುತ್ತಿದೆ. ಅವರು ನಮ್ಮ ವಿನಂತಿಯನ್ನು ಬೆಂಬಲಿಸುವಂತೆ ತೋರುತ್ತಿದೆ. ಸಿಎಟಿಎಂಐ ಶುಲ್ಕವನ್ನು 21 ರೂ. ಗೆ ಏರಿಸಲು ಪ್ರಸ್ತಾಪಿಸಿದೆ. ಆದರೆ ಕೆಲವು ಎಟಿಎಂ ತಯಾರಕರು 23 ರೂ. ಗೆ ಹೆಚ್ಚಿಸುವಂತೆ ಸೂಚಿಸಿದ್ದಾರೆ ಎಂದು ಅವರು ತಿಳಿಸಿದರು.


ಎಟಿಎಂ ವಹಿವಾಟಿನ ಇಂಟರ್ಚೇಂಜ್ ಶುಲ್ಕವನ್ನು ಕೊನೆಯದಾಗಿ 2021ರಲ್ಲಿ 15 ರಿಂದ 17ಕ್ಕೆ ಹೆಚ್ಚಿಸಲಾಗಿತ್ತು. ಹಿಂದಿನ ಬಾರಿ ಈ ಶುಲ್ಕ ಹೆಚ್ಚಳಕ್ಕೆ ಹಲವಾರು ವರ್ಷಗಳನ್ನು ತೆಗೆದುಕೊಂಡಿತು. ಆದರೆ ಈಗ ಎಲ್ಲರೂ ಇದಕ್ಕೆ ಹೊಂದಿಕೊಂಡಿದ್ದಾರೆ. ಶುಲ್ಕ ಹೆಚ್ಚಳಕ್ಕೆ ಇನ್ನು ಅನುಮೋದನೆ ಸಿಕ್ಕಿಲ್ಲ. ಶೀಘ್ರದಲ್ಲೇ ಸಿಗಬಹುದು ಎಂದು ಜಾನ್ಸನ್ ತಿಳಿಸಿದ್ದಾರೆ.

ಇದನ್ನೂ ಓದಿ: Money Guide: ಪಿಎಫ್‌ ಅಕೌಂಟ್‌ಗೆ ಹೊಸ ಮೊಬೈಲ್‌ ನಂಬರ್‌ ಸೇರಿಸಬೇಕೆ? ಜಸ್ಟ್‌ ಹೀಗೆ ಮಾಡಿ ಸಾಕು

ಇಂಟರ್‌ಚೇಂಜ್ ಶುಲ್ಕ ಎಂದರೇನು?

ಎಟಿಎಂ ಇಂಟರ್ ಚೇಂಚ್ ಶುಲ್ಕವು ಎಟಿಎಂ ಕಾರ್ಡ್ ಅನ್ನು ವಿತರಿಸುವ ಬ್ಯಾಂಕ್ (ವಿತರಕರು) ಪಾವತಿಸುವ ಶುಲ್ಕವಾಗಿದೆ. ಎಟಿಎಂ ಕಾರ್ಡ್ ಅನ್ನು ನಗದು ಹಿಂಪಡೆಯಲು ಬಳಸಲಾಗುತ್ತದೆ. ಇದು ಹೆಚ್ಚುವರಿಯಾಗಿ ಗ್ರಾಹಕರಿಗೆ ವಿಧಿಸಬಹುದಾದ ಶುಲ್ಕವಾಗಿದೆ. ಪ್ರಸ್ತುತ ಆರು ಪ್ರಮುಖ ನಗರಗಳಲ್ಲಿ ಬೆಂಗಳೂರು, ಚೆನ್ನೈ, ಹೈದರಾಬಾದ್, ಕೋಲ್ಕತ್ತಾ, ಮುಂಬಯಿ ಮತ್ತು ನವದೆಹಲಿ ಬ್ಯಾಂಕ್‌ಗಳು ತಮ್ಮ ಉಳಿತಾಯ ಖಾತೆದಾರರಿಗೆ ತಿಂಗಳಿಗೆ ಕನಿಷ್ಠ ಐದು ಉಚಿತ ವಹಿವಾಟುಗಳನ್ನು ಹಾಗೂ ಇತರ ಬ್ಯಾಂಕ್‌ಗಳ ಎಟಿಎಂಗಳಲ್ಲಿ ತಿಂಗಳಿಗೆ ಮೂರು ಉಚಿತ ವಹಿವಾಟು ಸೌಲಭ್ಯವನ್ನು ಒದಗಿಸುತ್ತದೆ. ಬಳಿಕ ನಡೆಯುವ ಪ್ರತಿ ವಹಿವಾಟಿಗೆ ಶುಲ್ಕ ವಿಧಿಸಲಾಗುತ್ತದೆ.

Continue Reading

ಶಿಕ್ಷಣ

NEET UG Result 2024: ಏನಿದು ನೀಟ್‌ ವಿವಾದ? ಗ್ರೇಸ್‌ ಅಂಕ ಕೊಟ್ಟಿದ್ಯಾಕೆ? ಮರು ಪರೀಕ್ಷೆ ಮಾಡೋದ್ಯಾಕೆ?

ಅಕ್ರಮ ಆರೋಪದ ನಡುವೆಯೇ ಕೇಂದ್ರ ಸರ್ಕಾರ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ ಮರು ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಿದೆ. ಗ್ರೇಸ್ ಅಂಕ ಪಡೆದ 1,563 ವಿದ್ಯಾರ್ಥಿಗಳಿಗೆ ಜೂನ್ 23ರಂದು ಮರು ಪರೀಕ್ಷೆ ನಡೆಸಿ ಜೂನ್ 30ರಂದು ಫಲಿತಾಂಶ (NEET UG Result 2024) ಪ್ರಕಟಿಸುವುದಾಗಿ ಘೋಷಿಸಿದೆ. ಎಂಬಿಬಿಎಸ್, ಬಿಡಿಎಸ್ ಮತ್ತು ಇತರ ಕೋರ್ಸ್‌ಗಳ ಪ್ರವೇಶಕ್ಕಾಗಿ ಜುಲೈ 6ರಂದು ಕೌನ್ಸೆಲಿಂಗ್ ಪ್ರಾರಂಭವಾಗಲಿದೆ. ನೀಟ್‌ ವಿವಾದದ ಸಂಪೂರ್ಣ ಚಿತ್ರಣ ಇಲ್ಲಿದೆ.

VISTARANEWS.COM


on

By

NEET UG Result 2024
Koo

ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET UG Result 2024) ಅಕ್ರಮ ನಡೆದಿದೆ ಎಂದು ನೀಟ್ ಆಕಾಂಕ್ಷಿಗಳು ಒಂದೆಡೆ ಪ್ರತಿಭಟನೆ ನಡೆಸುತ್ತಿದ್ದರೆ, ಮತ್ತೊಂದೆಡೆ ನೀಟ್ ಯುಜಿ (NEET UG) ಪರೀಕ್ಷೆಯಲ್ಲಿ (exam) ಗ್ರೇಸ್ ಅಂಕಗಳನ್ನು (grace marks) ಪಡೆದ 1,563 ವಿದ್ಯಾರ್ಥಿಗಳಿಗೆ ಜೂನ್ 23ರಂದು ಮರುಪರೀಕ್ಷೆ (retest) ನಡೆಸಲು ಕೇಂದ್ರ ಸರ್ಕಾರ (central govt) ಗುರುವಾರ ಪ್ರಸ್ತಾವನೆ ಸಲ್ಲಿಸಿದೆ. ನೀಟ್ ಫಲಿತಾಂಶ ಘೋಷಣೆಯಾದ ಬಳಿಕ ಆಕಾಂಕ್ಷಿಗಳು ಮತ್ತು ಪೋಷಕರು ಕೆಲವು ಕೇಂದ್ರಗಳಲ್ಲಿ ಪತ್ರಿಕೆ ಸೋರಿಕೆಯಾಗಿದೆ ಎಂದು ಆರೋಪಿಸಿ ತನಿಖೆ ಮತ್ತು ಮರು ಪರೀಕ್ಷೆಗೆ ಒತ್ತಾಯಿಸುತ್ತಿದ್ದಾರೆ.

ನೀಟ್- ಯುಜಿ ಅನ್ನು ಮೊದಲು ಆಲ್ ಇಂಡಿಯಾ ಪ್ರಿ ಮೆಡಿಕಲ್ ಟೆಸ್ಟ್ (AIPMT) ಎಂದು ಕರೆಯಲಾಗುತ್ತಿತ್ತು. ಇದು ದೇಶದಾದ್ಯಂತ ಎಲ್ಲಾ ವೈದ್ಯಕೀಯ ಸಂಸ್ಥೆಗಳಲ್ಲಿ ಪದವಿಪೂರ್ವ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ನಡೆಯುವ ಏಕೈಕ ಪ್ರವೇಶ ಪರೀಕ್ಷೆಯಾಗಿದೆ.

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಇಂಗ್ಲಿಷ್, ಹಿಂದಿ, ಅಸ್ಸಾಮಿ, ಬೆಂಗಾಲಿ, ಗುಜರಾತಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು ಮತ್ತು ಉರ್ದು ಸೇರಿದಂತೆ ಹದಿಮೂರು ಭಾಷೆಗಳಲ್ಲಿ ಪರೀಕ್ಷೆಯನ್ನು ನಡೆಸುವ ಉಸ್ತುವಾರಿ ವಹಿಸಿಕೊಂಡಿದೆ. ಈ ಹಿಂದೆ ಸೆಂಟ್ರಲ್ ಬೋರ್ಡ್ ಆಫ್ ಸ್ಕೂಲ್ ಎಜುಕೇಶನ್ (CBSE) ಇದನ್ನು ನಡೆಸುತ್ತಿತ್ತು.

ನೀಟ್ ಯುಜಿ ಫಲಿತಾಂಶಗಳ ಸುತ್ತ ವಿವಾದ

2024ರ ಮೇ 5ರಂದು 14 ಅಂತಾರಾಷ್ಟ್ರೀಯ ಸ್ಥಳಗಳು ಸೇರಿದಂತೆ 571 ನಗರಗಳಲ್ಲಿ, 4,750 ಕೇಂದ್ರಗಳಲ್ಲಿ 24 ಲಕ್ಷ ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹಾಜರಾಗಿದ್ದರು. ಜೂನ್ 4ರಂದು ಫಲಿತಾಂಶವನ್ನು ಪ್ರಕಟಿಸಲಾಯಿತು. ಬಳಿಕ 1,500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳು ದೊರೆತಿರುವುದು ಭಾರಿ ಸುದ್ದಿ ಆಯಿತು. ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಪರಿಪೂರ್ಣ ಅಂಕಗಳನ್ನು ಸಾಧಿಸಲು ಪ್ರಶ್ನೆ ಪತ್ರಿಕೆ ಸೋರಿಕೆಯೇ ಕಾರಣ ಎಂಬ ಆರೋಪಗಳೂ ಕೇಳಿ ಬಂದಿದೆ.

ನೀಟ್ ಯುಜಿ ಪರೀಕ್ಷೆ ಬರೆದ 67 ವಿದ್ಯಾರ್ಥಿಗಳು ಒಟ್ಟು 720 ಅಂಕಗಳನ್ನು ಗಳಿಸಿದ್ದಾರೆ ಎಂಬುದು ಫಲಿತಾಂಶ ತೋರಿಸಿವೆ. ಇದು ಹಿಂದಿನ ವರ್ಷಗಳ ಫಲಿತಾಂಶಗಳಿಗೆ ಹೋಲಿಸಿದರೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. 2023ರಲ್ಲಿ ಇಬ್ಬರು ವಿದ್ಯಾರ್ಥಿಗಳು ಮಾತ್ರ ಪೂರ್ಣ ಅಂಕ ಗಳಿಸಿದ್ದರೆ, 2022ರಲ್ಲಿ ಮೂವರು, 2021ರಲ್ಲಿ ಇಬ್ಬರು, 2020ರಲ್ಲಿ ಒಬ್ಬರು ಮಾತ್ರ ಪೂರ್ಣ ಅಂಕ ಗಳಿಸಿದ್ದರು. ಈ ಬಾರಿ ಹರ್ಯಾಣದ ಒಂದೇ ಕೇಂದ್ರದಲ್ಲಿ ಆರು ಮಂದಿ ಟಾಪರ್‌ಗಳಾಗಿ ಹೊರಹೊಮ್ಮಿದ್ದಾರೆ. ಇದು ಸಂಶಯಕ್ಕೆ ಆಸ್ಪದ ಮಾಡಿ ಕೊಟ್ಟಿದೆ.


ಸುಪ್ರೀಂ ಕೋರ್ಟ್ ಹೇಳಿದ್ದೇನು?

ನೀಟ್ ಯುಜಿ 2024ರಲ್ಲಿ ಗ್ರೇಸ್ ಅಂಕಗಳನ್ನು ಪಡೆದ 1,563 ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ನಡೆಸುವುದಾಗಿ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಮರು ಪರೀಕ್ಷೆಯು ಜೂನ್ 23ರಂದು ನಡೆಯಲಿದೆ. ಆದರೆ ಪ್ರವೇಶ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ನಿಲ್ಲಿಸದಿರಲು ಸುಪ್ರೀಂ ಕೋರ್ಟ್ ಆದೇಶಿಸಿದೆ. 1,563 ಅಭ್ಯರ್ಥಿಗಳಲ್ಲಿ ಯಾರಾದರೂ ಮರುಪರೀಕ್ಷೆಯಿಂದ ಹೊರಗುಳಿದಿದ್ದರೆ ಗ್ರೇಸ್ ಅಂಕಗಳಿಲ್ಲದ ಅವರ ಹಿಂದಿನ ಅಂಕಗಳನ್ನು ಫಲಿತಾಂಶಗಳಿಗಾಗಿ ಬಳಸಲಾಗುತ್ತದೆ.

ಜುಲೈ 6ರಂದು ಕೌನ್ಸೆಲಿಂಗ್ ಪ್ರಾರಂಭ

ಮರು ಪರೀಕ್ಷೆಯ ಫಲಿತಾಂಶವನ್ನು ಜೂನ್ 30ರಂದು ಪ್ರಕಟಿಸಲಾಗುವುದು ಮತ್ತು ಎಂಬಿಬಿಎಸ್, ಬಿಡಿಎಸ್ ಮತ್ತು ಇತರ ಕೋರ್ಸ್‌ಗಳ ಪ್ರವೇಶಕ್ಕಾಗಿ ಜುಲೈ 6 ರಂದು ಕೌನ್ಸೆಲಿಂಗ್ ಪ್ರಾರಂಭವಾಗಲಿದೆ ಎಂದು ಕೇಂದ್ರ ಸರ್ಕಾರ ಪ್ರಕಟಿಸಿದೆ.

ಸುಪ್ರೀಂ ಕೋರ್ಟ್‌ಗೆ ಮೊರೆ

ನೀಟ್ ಯುಜಿ 2024 ಪರೀಕ್ಷೆಯನ್ನು ರದ್ದುಗೊಳಿಸುವಂತೆ ಮತ್ತು ಗ್ರೇಸ್ ಮಾರ್ಕ್‌ ಗಳಲ್ಲಿ ಆಗಿರುವ ತಪ್ಪುಗಳನ್ನು ಸರಿಪಡಿಸಲು ಮರುಪರೀಕ್ಷೆಯನ್ನು ನಡೆಸುವಂತೆ ಕೋರಿ ಮೂರು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸಲಾಗಿತ್ತು. ನ್ಯಾಯಾಧೀಶರಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಅರ್ಜಿಗಳನ್ನು ಆಲಿಸಿತು.

ಫಿಸಿಕ್ಸ್ ವಾಲಾ ಸಿಇಒ ಅಲಖ್ ಪಾಂಡೆ, ಅರ್ಜಿದಾರರಲ್ಲಿ ಒಬ್ಬರು ಗ್ರೇಸ್ ಅಂಕಗಳನ್ನು ನೀಡುವ ಎನ್‌ಟಿಎ ನಿರ್ಧಾರವು ನಿರಂಕುಶ ಎಂದು ವಾದಿಸಿದರು. ಅವರು ಸುಮಾರು 20,000 ವಿದ್ಯಾರ್ಥಿಗಳ ಪ್ರತಿಕ್ರಿಯೆಯನ್ನು ಸಂಗ್ರಹಿಸಿದ್ದಾರೆ. ಸುಮಾರು 70-80 ಅಂಕಗಳನ್ನು ಕನಿಷ್ಠ 1,500 ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳಾಗಿ ನೀಡಿರುವುದು ಆಕ್ಷೇಪಕಾರಿ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Teachers Recruitment: ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು, ಮುಖ್ಯ ಶಿಕ್ಷಕರ ನೇಮಕಾತಿ: ಕೌನ್ಸೆಲಿಂಗ್‌ಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಎರಡನೇ ಅರ್ಜಿಯನ್ನು ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ (ಎಸ್‌ಐಒ) ಸದಸ್ಯರಾದ ಅಬ್ದುಲ್ಲಾ ಮೊಹಮ್ಮದ್ ಫೈಜ್ ಮತ್ತು ಡಾ. ಶೇಕ್ ರೋಷನ್ ಮೊಹಿದ್ದೀನ್ ಅವರು ಎನ್‌ಇಇಟಿ ಮರುಪರೀಕ್ಷೆಗೆ ವಿನಂತಿಸಿದ್ದರು. ಹಲವಾರು ವಿದ್ಯಾರ್ಥಿಗಳು ಗ್ರೇಸ್ ಅಂಕಗಳನ್ನು ಪಡೆದಿರುವುದು ಇಡೀ ನೀಟ್‌ ಪರೀಕ್ಷಾ ವ್ಯವಸ್ಥೆಯನ್ನೇ ಬುಡಮೇಲು ಮಾಡಿದೆ ಎಂದು ಅವರು ವಾದಿಸಿದ್ದರು.

ಮೂರನೇ ಅರ್ಜಿಯನ್ನು ನೀಟ್ ಅಭ್ಯರ್ಥಿ ಜಾರಿಪಿಟಿ ಕಾರ್ತೀಕ್ ಅವರು ಸಲ್ಲಿಸಿದ್ದು, ಪರೀಕ್ಷೆಯ ಸಮಯದಲ್ಲಿ ಕಳೆದುಹೋದ ಸಮಯಕ್ಕೆ ಪರಿಹಾರವಾಗಿ ಗ್ರೇಸ್ ಅಂಕಗಳನ್ನು ನೀಡುವುದನ್ನು ಪ್ರಶ್ನಿಸಿದ್ದರು.

Continue Reading
Advertisement
Jammu Kashmir
ದೇಶ2 hours ago

Jammu Kashmir: ಕಾಶ್ಮೀರದಲ್ಲಿ ಮತ್ತೊಂದು ದುರಂತ; ಸೇನಾ ವಾಹನ ಕಣಿವೆಗೆ ಬಿದ್ದು ಯೋಧ ಸಾವು, ನಾಲ್ವರಿಗೆ ಗಾಯ

Forest department agrees to give 500 acres for yEttina hole project work says DCM DK Shivakumar
ಕರ್ನಾಟಕ2 hours ago

DK Shivakumar: ಎತ್ತಿನಹೊಳೆ ಕಾಮಗಾರಿಗೆ 500 ಎಕರೆ ನೀಡಲು ಅರಣ್ಯ ಇಲಾಖೆ ಒಪ್ಪಿಗೆ

Maharaj
ಸಿನಿಮಾ2 hours ago

Maharaj: ಹಿಂದುಗಳಿಗೆ ಅವಮಾನ; ಆಮೀರ್‌ ಖಾನ್‌ ಪುತ್ರನ ‘ಮಹಾರಾಜ್’‌ ಸಿನಿಮಾ ಬಿಡುಗಡೆಗೆ ಕೋರ್ಟ್‌ ತಡೆ

ISIS Terrorists
ಕರ್ನಾಟಕ3 hours ago

ದೇಶದ ಪ್ರತಿ ಜಿಲ್ಲೆಗೂ ಉಗ್ರರ ನೇಮಿಸಲು ಬಳ್ಳಾರಿಯಲ್ಲಿ ಸಂಚು; ಎನ್‌ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ!

Actress Ramya
ಕರ್ನಾಟಕ4 hours ago

Actress Ramya: ಕಾನೂನಿಗಿಂತ ಯಾರೂ ದೊಡ್ಡೋರಲ್ಲ; ದರ್ಶನ್‌ಗೆ ಮತ್ತೆ ನಟಿ ರಮ್ಯಾ ಕ್ಲಾಸ್!

Namma Clinic
ಕರ್ನಾಟಕ4 hours ago

Namma Clinic: ಬಸ್‌ ನಿಲ್ದಾಣ ಸೇರಿದಂತೆ 254 ಕಡೆ ʼನಮ್ಮ ಕ್ಲಿನಿಕ್‌ʼ ಸ್ಥಾಪನೆ

Maruti Suzuki
ಆಟೋಮೊಬೈಲ್5 hours ago

Maruti Suzuki: ಮಾರುತಿ ಸುಜುಕಿ ಸಿಎನ್‌ಜಿ ವಾಹನದ ಟೀಸರ್ ಔಟ್‌; ಹಲವು ವೈಶಿಷ್ಟ್ಯಗಳ ನಿರೀಕ್ಷೆ

Reliance Retail Tira unveils skin care brand Akind
ದೇಶ5 hours ago

Reliance Retail: ಚರ್ಮ ರಕ್ಷಣೆಯ ʼಅಕೈಂಡ್ʼ ಬ್ರಾಂಡ್‌ನ ಕ್ರೀಮ್‌ ಬಿಡುಗಡೆ

Union Budget 2024
ದೇಶ5 hours ago

Union Budget 2024: ಮೋದಿ 3.0 ಸರ್ಕಾರದ ಮೊದಲ ಬಜೆಟ್‌ ಯಾವಾಗ? ಇಲ್ಲಿದೆ ಬಿಗ್‌ ಅಪ್‌ಡೇಟ್‌

AIDSO protest demanding investigation into corruption in NEET entrance exam
ರಾಯಚೂರು5 hours ago

Raichur News: ನೀಟ್ ಭ್ರಷ್ಟಾಚಾರದ ತನಿಖೆಗೆ ಆಗ್ರಹಿಸಿ ಮಾನ್ವಿಯಲ್ಲಿ ಎಐಡಿಎಸ್ಒ ಪ್ರತಿಭಟನೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ2 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ6 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ6 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌