Food Poisoning : ಹೃದಯ ವಿದ್ರಾವಕ ಘಟನೆ; ವಿಷ ಆಹಾರ ಸೇವಿಸಿ ಇಬ್ಬರು ಮಕ್ಕಳ ಸಾವು, ಮೂವರು ಅಸ್ವಸ್ಥ - Vistara News

Latest

Food Poisoning : ಹೃದಯ ವಿದ್ರಾವಕ ಘಟನೆ; ವಿಷ ಆಹಾರ ಸೇವಿಸಿ ಇಬ್ಬರು ಮಕ್ಕಳ ಸಾವು, ಮೂವರು ಅಸ್ವಸ್ಥ

Food Poisoning: ಆರತಿ (7).ಪ್ರಿಯಾಂಕ್ (9) ಮೃತಪಟ್ಟ ಮಕ್ಕಳು. ಹುಸೇನಮ್ಮ (35).ಮಾರುತಿ (40) ಲಕ್ಷ್ಮಣ್ (60) ಅಸ್ವಸ್ಥರಾಗಿದ್ದಾರೆ. ಕೂಲಿ ಕೆಲಸಕ್ಕೆಂದು ವಡ್ಲೂರು ಗ್ರಾಮಕ್ಕೆ ಬಂದಿದ್ದ ಕುಟುಂಬವು ವಿಷಾಹಾರ ಸೇವನೆಯಿಂದ ಸಂಕಷ್ಟಕ್ಕೆ ಬಿದ್ದಿದೆ.

VISTARANEWS.COM


on

Food Poisoning
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಯಚೂರು: ವಿಷ ಆಹಾರ ಸೇವನೆಯಿಂದಾಗಿ (Food Poisoning) ಅಸ್ವಸ್ಥಗೊಂಡ ಒಂದೇ ಕುಟುಂಬಕ್ಕೆ ಸೇರಿದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಮೂವರು ಸಂಪೂರ್ಣ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ. ರಾಯಚೂರು ತಾಲೂಕಿನ ವಡ್ಲೂರು ಗ್ರಾಮದಲ್ಲಿ ಘಟನೆ ನಡೆದಿದೆ. ಅಸ್ವಸ್ಥಗೊಂಡಿರುವ ಮೂವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.

ಆರತಿ (7).ಪ್ರಿಯಾಂಕ್ (9) ಮೃತಪಟ್ಟ ಮಕ್ಕಳು. ಹುಸೇನಮ್ಮ (35).ಮಾರುತಿ (40) ಲಕ್ಷ್ಮಣ್ (60) ಅಸ್ವಸ್ಥರಾಗಿದ್ದಾರೆ. ಕೂಲಿ ಕೆಲಸಕ್ಕೆಂದು ವಡ್ಲೂರು ಗ್ರಾಮಕ್ಕೆ ಬಂದಿದ್ದ ಕುಟುಂಬವು ವಿಷಾಹಾರ ಸೇವನೆಯಿಂದ ಸಂಕಷ್ಟಕ್ಕೆ ಬಿದ್ದಿದೆ.
ಅವರೆಲ್ಲರೂ ಮೂಲತ ಲಿಂಗಸಗೂರು ತಾಲೂಕಿನ ಕಮಲದಿನ್ನಿ ಗ್ರಾಮದ ನಿವಾಸಿಗಳು. ಇಟ್ಟಿಗೆ ತಯಾರಿಕೆಯಲ್ಲಿ ಕೂಲಿ ಕಾರ್ಮಿಕರಾಗಿ ವಡ್ಲೂರಿಗೆ ಬಂದಿದ್ದರು. ರಜೆ ನಿಮಿತ್ತ ಪೋಷಕರ ಬಳಿ ಇಬ್ಬರೂ ಮಕ್ಕಳು ಬಂದಿದ್ದರು.

ಅವರೆಲ್ಲರೂ ರಾತ್ರಿ ಊಟಕ್ಕೆ ಚಪಾತಿ. ಹೆಸರಕಾಳು. ಅನ್ನ.ಸಾಂಬಾರು ಸೇವಿಸಿದ್ದರು. ಆ ಬಳಿಕ ಅವರೆಲ್ಲರ ಆರೋಗ್ಯದಲ್ಲಿ ಏರುಪೇರಾಗಿದೆ. ಮಕ್ಕಳು ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಯಮವೇಗದಲ್ಲಿ ಬಂದ ಇನೋವಾ ಕಾರು ಪಲ್ಟಿ, ಯುವತಿ ಸಾವು

ಉಡುಪಿ: ಅತಿ ವೇಗದಲ್ಲಿ ಸಾಗುತ್ತಿದ್ದ ಇನೋವಾ ಕಾರು ಪಲ್ಟಿಯಾಗಿ ಯುವತಿಯೊಬ್ಬಳು ಮೃತಪಟ್ಟ (Car Accident) ಘಟನೆ ನಡೆದಿದೆ. ಕುಂದಾಪುರ ಸಮೀಪದ ಹುಣ್ಸೆಮಕ್ಕಿ ಬಳಿಯ ಗುಡ್ಡೆಯಂಗಡಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಚೆನ್ನಪಟ್ಟಣ ಮೂಲದ ಯುವತಿ ಕೀರ್ತಿ ಎಂಬುವರು ಅಪಘಾತದಲ್ಲಿ ಮೃತಪಟ್ಟವರು.

ಚೆನ್ನಪಟ್ಟಣ ಮೂಲದ ಅವರು ಧರ್ಮಸ್ಥಳಕ್ಕೆ ಬಂದಿದ್ದರು. ಅಲ್ಲಿಂದ ಅವರು ಮುರುಡೇಶ್ವರಕ್ಕೆ ಹೊರಟಿದ್ದರು. ಅತಿ ವೇಗದಲ್ಲಿ ಸಾಗುತ್ತಿದ್ದ ಕಾರು ಹುಣ್ಸೆಮಕ್ಕಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿಗೆ ಡಿಕ್ಕಿ ಹೊಡೆದಿದೆ. ಬಳಿಕ ಬಳಿಕ ರಸ್ತೆ ಬದಿಯ ಮರಕ್ಕೂ ಢಿಕ್ಕಿ ಹೊಡೆದು ಇನ್ನೋವಾ ಮಾತು ಪಲ್ಟಿಯಾಗಿದೆ. ಕಾರು ಪಲ್ಟಿಯಾದ ತೀವ್ರತೆಗೆ ಕಾರಿನಲ್ಲಿದ್ದ 5 ಮಂದಿಗೆ ಗಂಭೀರ ಗಾಯಗೊಂಡಿದ್ದಾರೆ. ಅಲ್ಲದೆ ಯುವತಿಯೊಬ್ಬಳು ಮೃತಪಟ್ಟಿದ್ದಾಳೆ. ಕೋಟ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Most Costly Medicine: ಒಂದೇ ಒಂದು ಡೋಸ್ ಗೆ 17 ಕೋಟಿ ರೂ! ಈ ಔಷಧ ಏಕೆ ಇಷ್ಟೊಂದು ದುಬಾರಿ?

ಒಂದೂವರೆ ವರ್ಷದ ಬಾಲಕ ಸೊಂಟದ ಕೆಳಗಿನ ದೈಹಿಕ ಬಲವನ್ನು ಕಳೆದುಕೊಂಡಿದ್ದ. ಆತನ ಸಾಮಾನ್ಯ ಜೀವನ ನಡೆಸುವಂತೆ ಸಾಧ್ಯವಾಗಿಸಲು ಆತನಿಗೆ ಒಂದು ಚುಚ್ಚು ಮದ್ದು ನೀಡಲೇ ಬೇಕಿತ್ತು. ಇದರ ಮೌಲ್ಯ ಬರೋಬ್ಬರಿ 17.5 ಕೋಟಿ ರೂಪಾಯಿ. ತಂದೆ ತಾಯಿ ತಮ್ಮಿಂದ ಇದು ಸಾಧ್ಯವಾಗದು (Most costly medicine) ಎಂದು ಕೈಚೆಲ್ಲಿದ್ದರು. ಆದರೂ ಕೊನೆಯ ಪ್ರಯತ್ನವೆಂಬಂತೆ ಸಾರ್ವಜನಿಕರ ನೆರವು ಕೇಳಲು ಮುಂದಾಗಿ ಅದರಲ್ಲಿ ಯಶಸ್ವಿಯಾಗಿದ್ದಾರೆ.

VISTARANEWS.COM


on

By

Most costly medicine
Koo

ಜೈಪುರ: ಜನಪ್ರಿಯ ನಟ (actor), ಭಾರತ ತಂಡದ ಕ್ರಿಕೆಟಿಗ (cricketer), ವ್ಯಾಪಾರಿಗಳು (Vendor), ತರಕಾರಿ ಮಾರಾಟಗಾರರು ಮತ್ತು ಸಾಮಾನ್ಯ ಜನರು ಒಗ್ಗಟ್ಟಾಗಿ 22 ತಿಂಗಳ ಮಗುವೊಂದರ ಜೀವ ಉಳಿಸಲು ದುಬಾರಿ ಔಷಧ ಖರೀದಿಗಾಗಿ (Most costly medicine) ಹೊರಡಿರುವ ಹೃದಯಸ್ಪರ್ಶಿ ಕಥೆ ರಾಜಸ್ಥಾನದ (Rajasthan) ಜೈಪುರದಲ್ಲಿ (jaipur) ನಡೆದಿದೆ. ಈ ಔಷಧದ ಹಿನ್ನೆಲೆ ಕುತೂಹಲಕರವಾಗಿದೆ.

ಒಂದೂವರೆ ವರ್ಷದ ಬಾಲಕ ಸೊಂಟದ ಕೆಳಗಿನ ದೈಹಿಕ ಬಲವನ್ನು ಕಳೆದುಕೊಂಡಿದ್ದ. ಆತನ ಸಾಮಾನ್ಯ ಜೀವನ ನಡೆಸುವಂತೆ ಸಾಧ್ಯವಾಗಿಸಲು ಆತನಿಗೆ ಒಂದು ಚುಚ್ಚು ಮದ್ದು ನೀಡಲೇ ಬೇಕಿತ್ತು. ಇದರ ಮೌಲ್ಯ ಬರೋಬ್ಬರಿ 17.5 ಕೋಟಿ ರೂಪಾಯಿ. ತಂದೆ ತಾಯಿ ತಮ್ಮಿಂದ ಇದು ಸಾಧ್ಯವಾಗದು ಎಂದು ಕೈಚೆಲ್ಲಿದ್ದರು. ಆದರೂ ಕೊನೆಯ ಪ್ರಯತ್ನವೆಂಬಂತೆ ಸಾರ್ವಜನಿಕರ ನೆರವು ಕೇಳಲು ಮುಂದಾದರು.

ರಾಜಸ್ಥಾನ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನರೇಶ್ ಶರ್ಮಾ ಅವರ ಪುತ್ರ ಹೃದಯಾಂಶ್ ಶರ್ಮಾ ಬೆನ್ನುಮೂಳೆಯ ಸ್ನಾಯು ಕ್ಷೀಣತೆ ಎಂಬ ಅಪರೂಪದ ಆನುವಂಶಿಕ ಕಾಯಿಲೆಯಿಂದ ಬಳಲುತ್ತಿದ್ದಾರೆ. ಇದನ್ನು ವಿಶ್ವದ ಅತ್ಯಂತ ದುಬಾರಿ ಔಷಧಿಗಳಲ್ಲಿ ಒಂದಾದ ಝೋಲ್ಗೆನ್ಸ್ಮಾ (Zolgensma) ಎಂಬ ಜೀನ್ ಥೆರಪಿ ಇಂಜೆಕ್ಷನ್‌ನೊಂದಿಗಿನ ಚಿಕಿತ್ಸೆಯಿಂದ ಮಾತ್ರ ಗುಣಪಡಿಸಬಹುದಾಗಿದೆ. ಇದರ ಬೆಲೆ 17.5 ಕೋಟಿ ರೂ.


ಚುಚ್ಚು ಮದ್ದು ನೀಡಲು ಗಡುವು

ಬಾಲಕ 20 ತಿಂಗಳ ಮಗುವಾಗಿದ್ದಾಗ ಫೆಬ್ರವರಿಯಲ್ಲಿ ರಾಜಸ್ಥಾನ ಪೊಲೀಸರು ಕಟ್ಟುನಿಟ್ಟಾದ ಗಡುವನ್ನು ಹೊಂದಿದ್ದ ಕ್ರೌಡ್‌ಫಂಡಿಂಗ್ ಅಭಿಯಾನವನ್ನು ಪ್ರಾರಂಭಿಸಿದರು. ಏಕೆಂದರೆ ಮಗುವಿಗೆ 2 ವರ್ಷ ವಯಸ್ಸಿನವರೆಗೆ ಮಾತ್ರ ಈ ಚುಚ್ಚುಮದ್ದನ್ನು ನೀಡಬಹುದು.

ನಟ, ಕ್ರಿಕೆಟಿಗನ ಬೆಂಬಲ

ಇವರ ಈ ಅಭಿಯಾನಕ್ಕೆ ಕ್ರಿಕೆಟಿಗ ದೀಪಕ್ ಚಾಹರ್ ಮತ್ತು ನಟ ಸೋನು ಸೂದ್ ಅವರೂ ಬೆಂಬಲ ನೀಡಿದರು. ಅವರು ಸಾಮಾಜಿಕ ಮಾಧ್ಯಮದಲ್ಲಿ ಮನವಿಗಳನ್ನು ಪೋಸ್ಟ್ ಮಾಡಿದರು ಮತ್ತು ಜೈಪುರದಾದ್ಯಂತ ಜನರಿಂದ ಹಣವನ್ನು ಸಂಗ್ರಹಿಸುವ ಚಾಲನೆ ನೀಡಲಾಯಿತು.

ಹಣ್ಣು, ತರಕಾರಿ ಮಾರಾಟಗಾರರು, ವ್ಯಾಪಾರಿಗಳು ಸೇರಿದಂತೆ ಎಲ್ಲಾ ವರ್ಗಗಳ ಜನರಿಂದ ಹಣದ ಸಹಾಯ ಪಡೆಯಲಾಯಿತು. ವಿವಿಧ ಎನ್‌ಜಿಒಗಳು ಮತ್ತು ಸಾಮಾಜಿಕ ಸಂಸ್ಥೆಗಳು ಪ್ರಚಾರಕ್ಕಾಗಿ ಹಣವನ್ನು ಸಂಗ್ರಹಿಸಲು ಸಹಾಯ ಮಾಡಿದವು.


ಮೂರು ತಿಂಗಳಲ್ಲಿ 9 ಕೋಟಿ ರೂ. ಸಂಗ್ರಹ

ರಾಜಸ್ಥಾನದಲ್ಲಿ ಈ ಪ್ರಮಾಣದಲ್ಲಿ ಕ್ರೌಡ್‌ಫಂಡಿಂಗ್ ನಡೆಯುತ್ತಿರುವುದು ಇದೇ ಮೊದಲು. ಮೂರು ತಿಂಗಳಿಗಿಂತ ಕಡಿಮೆ ಅವಧಿಯಲ್ಲಿ 9 ಕೋಟಿ ರೂ. ಸಂಗ್ರಹವಾಗಿದ್ದು, ಜೈಪುರದ ಜೆಕೆ ಲೋನ್ ಆಸ್ಪತ್ರೆಯಲ್ಲಿ ಹೃದಯಾಂಶ್‌ಗೆ ಚುಚ್ಚುಮದ್ದನ್ನು ನೀಡಲಾಯಿತು. ಉಳಿದ ಮೊತ್ತವನ್ನು ಮೂರು ಕಂತುಗಳಲ್ಲಿ ಒಂದು ವರ್ಷದೊಳಗೆ ಆಸ್ಪತ್ರೆಗೆ ಜಮಾ ಮಾಡಬೇಕಿದೆ.

ಬೆನ್ನುಮೂಳೆಯ ಸ್ನಾಯು ಕ್ಷೀಣತೆ ಎಂದರೇನು?

ಬೆನ್ನುಮೂಳೆಯ ಸ್ನಾಯುವಿನ ಕ್ಷೀಣತೆ ಅಥವಾ ಸ್ಪೈನಲ್ ಮಸ್ಕ್ಯುಲರ್ ಅಟ್ರೋಫಿ (SMA) ಎಂಬುದು ಒಂದು ಆನುವಂಶಿಕ ಅಸ್ವಸ್ಥತೆಯಾಗಿದೆ. ಇದರಲ್ಲಿ ಬೆನ್ನುಹುರಿ ಮತ್ತು ಮೆದುಳಿನ ಕಾಂಡದಲ್ಲಿನ ನರ ಕೋಶಗಳ ನಷ್ಟದಿಂದಾಗಿ ವ್ಯಕ್ತಿಯು ಸ್ನಾಯುಗಳ ಚಲನೆಯನ್ನು ನಿಯಂತ್ರಿಸಲು ಸಾಧ್ಯವಾಗುವುದಿಲ್ಲ. ಇದು ಸ್ನಾಯು ದೌರ್ಬಲ್ಯಕ್ಕೆ ಕಾರಣವಾಗುತ್ತದೆ ಮತ್ತು ಕೈಕಾಲುಗಳ ಚಲನೆ ಮತ್ತು ಉಸಿರಾಟದ ಮೇಲೆ ಪರಿಣಾಮ ಬೀರುತ್ತದೆ.

ಬೆನ್ನುಮೂಳೆಯ ಸ್ನಾಯುವಿನ ಕ್ಷೀಣತೆಯು ಸರ್ವೈವಲ್ ಮೋಟಾರ್ ನ್ಯೂರಾನ್‌ಗಳು 1 ಎಂಬ ಜೀನ್‌ನ ನಷ್ಟದಿಂದ ಉಂಟಾಗುತ್ತದೆ. ಇದು ಪ್ರೋಟೀನ್ ತಯಾರಿಸಲು ಅಗತ್ಯವಾದ ಮಾಹಿತಿಯನ್ನು ಹೊಂದಿರುತ್ತದೆ. ಇದು ದೇಹದ ಪ್ರತಿಯೊಂದು ಜೀವಕೋಶಕ್ಕೂ ಅಗತ್ಯವಾಗಿರುತ್ತದೆ. ಮಾನವ ಸಾಮಾನ್ಯವಾಗಿ ಹೆಚ್ಚುವರಿ ಜೀನ್ (SMN2) ಅನ್ನು ಹೊಂದಿರುತ್ತಾನೆ. ಆದರೆ ಅದು SMN1 ನಷ್ಟವನ್ನು ಭಾಗಶಃ ಸರಿದೂಗಿಸುತ್ತದೆ.

SMN1 ಗೆ ಹೋಲಿಸಿದರೆ SMN2 ಕೇವಲ ಒಂದು ಸಣ್ಣ ಪ್ರಮಾಣದ ಅಗತ್ಯ ಪ್ರೋಟೀನ್ ಅನ್ನು ಉತ್ಪಾದಿಸುತ್ತದೆ ಮತ್ತು ದೇಹದಲ್ಲಿನ ಅನೇಕ ಜೀವಕೋಶಗಳು ಮತ್ತು ಅಂಗಗಳು ಈ ಕಡಿಮೆ ಪೂರೈಕೆಯೊಂದಿಗೆ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ತೋರುತ್ತದೆಯಾದರೂ ಮೆದುಳಿನಿಂದ ಸ್ನಾಯುಗಳಿಗೆ ಸಂದೇಶಗಳನ್ನು ಕಳುಹಿಸುವ ಜವಾಬ್ದಾರಿಯುತ ಮೋಟಾರ್ ನ್ಯೂರಾನ್ ಗಳು ಕಡಿಮೆ ಮಟ್ಟದ SMNಗೆ ಸ್ಪಂದಿಸುವುದಿಲ್ಲ. ಹೀಗಾಗಿ ಇದು ಸ್ನಾಯು ನಿಯಂತ್ರಣವನ್ನು ಕಳೆದುಕೊಳ್ಳುವಂತೆ ಮಾಡುತ್ತದೆ.

17 ಕೋಟಿ ರೂ. ನ ದುಬಾರಿ ಔಷಧ

ಐಎಎನ್ ಎಸ್ ವರದಿ ಮಾಡಿದಂತೆ 17 ಕೋಟಿ ರೂ. ವೆಚ್ಚದ ವಿಶ್ವದ ಅತ್ಯಂತ ದುಬಾರಿ ಚುಚ್ಚುಮದ್ದನ್ನು ಬೆನ್ನುಮೂಳೆಯ ಸ್ನಾಯು ಕ್ಷೀಣತೆಯಿಂದ ಬಳಲುತ್ತಿರುವ ಎರಡು ವರ್ಷದೊಳಗಿನ ಮಕ್ಕಳಿಗೆ ನೀಡಬೇಕು. ಈ ಔಷಧವನ್ನು ಕ್ರೌಡ್‌ಫಂಡಿಂಗ್ ಸಹಾಯದಿಂದ ಝೋಲ್ಗೆನ್ಸ್ಮಾ ಎಂಬ ಈ ಇಂಜೆಕ್ಷನ್ ಅನ್ನು ಯುಎಸ್ ನಿಂದ ಜೈಪುರಕ್ಕೆ ತರಲಾಯಿತು. ಈ ಔಷಧ ಪಡೆಯಲು ಹಲವಾರು ಭಾರತೀಯ ಕುಟುಂಬಗಳು ಪರದಾಡುತ್ತಿವೆ.

ಭಾರತದಲ್ಲಿ ಬೆನ್ನುಮೂಳೆಯ ಸ್ನಾಯು ಕ್ಷೀಣತೆ

ಬೆನ್ನುಮೂಳೆಯ ಸ್ನಾಯು ಕ್ಷೀಣತೆ ಕಾಯಿಲೆ ಹೊಂದಿರುವ ಭಾರತೀಯರ ಸಂಖ್ಯೆಯ ಬಗ್ಗೆ ಯಾವುದೇ ಅಧಿಕೃತ ಮಾಹಿತಿಯಿಲ್ಲದಿದ್ದರೂ, ಅಸ್ತಿತ್ವದಲ್ಲಿರುವ ಪ್ರಕಾರ 10,000 ಜೀವಂತವಾಗಿ ಜನಿಸಿದ ಶಿಶುಗಳಲ್ಲಿ 1ರಲ್ಲಿ ಬೆನ್ನುಮೂಳೆಯ ಸ್ನಾಯು ಕ್ಷೀಣತೆ ಕಾಣಿಸಿಕೊಳ್ಳುತ್ತಿದೆ. ಒಂದು ಅಧ್ಯಯನದ ಪ್ರಕಾರ 38 ಭಾರತೀಯರಲ್ಲಿ ಒಬ್ಬರು ಬೆನ್ನುಮೂಳೆಯ ಸ್ನಾಯು ಕ್ಷೀಣತೆಗೆ ಒಳಗಾಗುತ್ತಾರೆ.

ಅತ್ಯಂತ ದುಬಾರಿ ಔಷಧ ಇದು

ಅಪರೂಪದ ಆನುವಂಶಿಕ ಕಾಯಿಲೆಯಾದ ಬೆನ್ನುಮೂಳೆಯ ಸ್ನಾಯು ಕ್ಷೀಣತೆಯೊಂದಿಗೆ ಜನಿಸಿದ ಶಿಶುಗಳು ಚಿಕಿತ್ಸೆಯಿಲ್ಲದೆ ಎರಡು ವರ್ಷ ಕೂಡ ಪೂರ್ಣಗೊಳಿಸುವುದಿಲ್ಲ. 1990ರ ದಶಕದವರೆಗೂ ಇದಕ್ಕೆ ಯಾವುದೇ ಚಿಕಿತ್ಸೆಗಳು ಇರಲಿಲ್ಲ. ಇದನ್ನು ತಡೆಗಟ್ಟಲು ಇತ್ತೀಚೆಗೆ ಪರವಾನಗಿ ಪಡೆದ ಎರಡು ಔಷಧಿಗಳಿವೆ. ಇದರಲ್ಲಿ ಒಂದು Zolgensma, ಯುಕೆಯಲ್ಲಿ ಶಿಶುಗಳಿಗೆ ಚಿಕಿತ್ಸೆ ನೀಡಲು ಇದು ಇತ್ತೀಚೆಗೆ ಅಷ್ಟೇ ಲಭ್ಯವಾಗುತ್ತಿದೆ. ಇದನ್ನು “ವಿಶ್ವದ ಅತ್ಯಂತ ದುಬಾರಿ ಔಷಧ” ಎಂದು ಕರೆಯಲಾಗುತ್ತದೆ. ಯಾಕೆಂದರೆ ಇದರ ಒಂದು ಡೋಸ್ ಗೆ ಸುಮಾರು 1.79 ಮಿಲಿಯನ್ ಡಾಲರ್ ಅಂದರೆ ಭಾರತೀಯ ಕರೆನ್ಸ್ ಮೌಲ್ಯ 17 ಕೋಟಿ ರೂ. ಪಾವತಿಸಬೇಕು.

ಇದನ್ನೂ ಓದಿ: Covaxin: ಕೋವಾಕ್ಸಿನ್‌ ಲಸಿಕೆ ಪಡೆದವರಿಗೂ ಬಿಗ್‌ ಶಾಕ್‌! ಆಘಾತಕಾರಿ ವರದಿ ಔಟ್‌

ಈ ಕಾಯಿಲೆಗೆ ಲಭ್ಯವಿರುವ ಇನ್ನೊಂದು ಔಷಧ ಸ್ಪಿನ್ರಾಜಾ (ಜೆನೆರಿಕ್ ಹೆಸರು ನುಸಿನೆರ್ಸೆನ್) ಇದು SMN2 ಜೀನ್ ದೇಹಕ್ಕೆ ಅಗತ್ಯವಿರುವ ಪ್ರೋಟೀನ್ ಅನ್ನು ಒದಗಿಸಲು ಸಹಾಯ ಮಾಡುವ ಡಿಎನ್‌ಎಯ ಒಂದು ಸಣ್ಣ ಭಾಗವಾಗಿದೆ. ಇದನ್ನು ನೇರವಾಗಿ ಬೆನ್ನುಮೂಳೆಯ ನಿರ್ಧಿಷ್ಟ ಭಾಗಕ್ಕೆ ಚುಚ್ಚಬೇಕಾಗುತ್ತದೆ. ಇದನ್ನು ನಿಯಮಿತವಾಗಿ ವರ್ಷದಲ್ಲಿ ಆರು ಬಾರಿ ಮಾಡಬೇಕು. ಚಿಕಿತ್ಸೆಯ ಮೊದಲ ವರ್ಷದಲ್ಲಿ ಆರು ಚುಚ್ಚುಮದ್ದುಗಳು ಪ್ರತಿ ಇಂಜೆಕ್ಷನ್‌ಗೆ 75,000 ಡಾಲರ್ ಪಾವತಿಸಬೇಕಾಗುತ್ತದೆ.

2021 ರಿಂದ ಲಭ್ಯವಿರುವ Zolgensma ಮಾನವನ SMN1 ಜೀನ್ ನ ನಕಲು ಮಾಡಲು ಸಹಾಯ ಮಾಡುತ್ತದೆ. SMN1 ಜೀನ್ ಅನ್ನು ರಕ್ತಪ್ರವಾಹಕ್ಕೆ ಚುಚ್ಚಿದಾಗ ಇದು ವ್ಯಕ್ತಿಗೆ ಅಗತ್ಯವಿರುವ ಹೆಚ್ಚಿನ ಪ್ರೋಟೀನ್‌ಗಳನ್ನು ಉತ್ಪಾದಿಸುತ್ತದೆ. ನಿರ್ವಹಣೆಗೆ ಸುಲಭ ಮತ್ತು ಕಡಿಮೆ ಅಡ್ಡ ಪರಿಣಾಮ ಉಂಟು ಮಾಡುವ Zolgensmaನ ಕೇವಲ ಒಂದು ಡೋಸ್ ಸಾಕಾಗುತ್ತದೆ.

ಭಾರತಕ್ಕೆ ಈ ಔಷಧ ತರಿಸಲು ಯಾವುದೇ ತೆರಿಗೆ ಪಾವತಿಸಬೇಕಿಲ್ಲ. ಆದರೆ ತೆರಿಗೆ ಇಲ್ಲದೇ ಇಲ್ಲಿ ಈ ಔಷಧೀಯ ದರ ಸುಮಾರು 17 ಕೋಟಿ ರೂ. ಆಗುತ್ತದೆ!

ನೊವಾರ್ಟಿಸ್ ವೆಬ್‌ಸೈಟ್‌ನ ಪ್ರಕಾರ, ಈ ಔಷಧವನ್ನು 45 ದೇಶಗಳಲ್ಲಿ ಅನುಮೋದಿಸಲಾಗಿದೆ. 2 500 ಕ್ಕೂ ಹೆಚ್ಚು ರೋಗಿಗಳು ಜಾಗತಿಕವಾಗಿ ಇದರ ಚಿಕಿತ್ಸೆ ಪಡೆಯುತ್ತಾರೆ. ಕಂಪೆನಿಯು 36 ದೇಶಗಳಲ್ಲಿ ಸುಮಾರು 300 ಮಕ್ಕಳಿಗೆ ಇದರ ಥೆರಪಿಯನ್ನು ಉಚಿತವಾಗಿ ನೀಡಿದೆ.

Continue Reading

ಮಹಿಳೆ

Indian Railway: ಮಹಿಳಾ ಪ್ರಯಾಣಿಕರಿಗೆ ರೈಲಿನಲ್ಲಿ ಎಷ್ಟೊಂದು ಸುರಕ್ಷತಾ ಕ್ರಮಗಳಿವೆ ನೋಡಿ!

ಭಾರತೀಯ ರೈಲ್ವೇಯ (Indian Railway) ಏಕ ವ್ಯಕ್ತಿ ಪ್ರಯಾಣಿಕ ಮಹಿಳೆಯರ ರಕ್ಷಣೆಗಾಗಿ ಹಲವು ಕ್ರಮ ಕೈಗೊಂಡಿದೆ. ಇದು 1989ರಲ್ಲಿ ಜಾರಿಗೆ ಬಂದಿದ್ದರೂ ಹೆಚ್ಚಿನವರಿಗೆ ಈ ಬಗ್ಗೆ ಗೊತ್ತಿಲ್ಲ. ಈ ಕುರಿತು ಮಾಹಿತಿ ಇಲ್ಲಿದೆ.

VISTARANEWS.COM


on

By

Indian Railway
Koo

ಮನೆಯ ಮಗಳು ರೈಲಿನಲ್ಲಿ (Indian Railway) ಒಬ್ಬಳೇ ಪ್ರಯಾಣ (Solo trip) ಮಾಡಬೇಕಾದ ಅನಿವಾರ್ಯತೆ ಬಂದಾಗ ಪೋಷಕರಿಗೆ ಒಂದು ಕ್ಷಣ ಗಾಬರಿಯಾಗುವುದು ಸಹಜ. ಇನ್ನು ಮಹಿಳೆಯರಿಗೂ ಅಷ್ಟೇ.. ಏಕಾಂಗಿಯಾಗಿ ರೈಲು ಪ್ರಯಾಣ (solo women travellers) ಮಾಡಬೇಕಾದ ಸಂದರ್ಭ ಬಂದರೆ ಕೊಂಚ ಆತಂಕವಂತೂ ಮನದಲ್ಲಿ ಇದ್ದೇ ಇರುತ್ತದೆ. ಆದರೆ ಭಾರತೀಯ ರೈಲ್ವೆಯಲ್ಲಿ ಪ್ರಯಾಣಿಸಬೇಕಾದರೆ ಈ ಚಿಂತೆ ಬೇಕಾಗಿಲ್ಲ.

ಭಾರತೀಯ ರೈಲ್ವೇಯ ಏಕ ವ್ಯಕ್ತಿ ಪ್ರಯಾಣಿಕ ಮಹಿಳೆಯರ ರಕ್ಷಣೆಗಾಗಿ ಹಲವು ಕ್ರಮ ಕೈಗೊಂಡಿದೆ. ಇದು 1989ರಲ್ಲಿ ಜಾರಿಗೆ ಬಂದಿದ್ದರೂ ಹೆಚ್ಚಿನವರಿಗೆ ಈ ಬಗ್ಗೆ ಗೊತ್ತಿಲ್ಲ. ಈ ಕುರಿತು ಮಾಹಿತಿ ಇಲ್ಲಿದೆ.

1989ರಲ್ಲಿ ಜಾರಿಗೆ ಬಂದ ಈ ವಿಶೇಷ ಕಾನೂನು ಭಾರತೀಯ ರೈಲ್ವೇ ಕಾಯಿದೆ 1989 ರ ಸೆಕ್ಷನ್ 139 ರಲ್ಲಿ ವಿವರಿಸಲಾಗಿದೆ. ಒಂಟಿ ಮಹಿಳಾ ಪ್ರಯಾಣಿಕರಿಗೆ ವಿಶೇಷವಾಗಿ ಮಕ್ಕಳೊಂದಿಗೆ ಇರುವವರಿಗೆ ಇದು ರಕ್ಷಣೆ ನೀಡುತ್ತದೆ. ಉದಾಹರಣೆಗೆ ಈ ವಿಭಾಗದ ಪ್ರಕಾರ ಒಬ್ಬ ಮಹಿಳೆ ಪುರುಷ ಪ್ರಯಾಣಿಕರಿಲ್ಲದೆ ಒಂಟಿಯಾಗಿ ಪ್ರಯಾಣಿಸುತ್ತಿದ್ದರೆ ಮತ್ತು ಆಕೆ ತನ್ನ ಮಗುವಿನೊಂದಿಗೆ ಇದ್ದರೆ ಅವಳು ರೈಲು ಪಾಸ್ ಅಥವಾ ಟಿಕೆಟ್ ಇಲ್ಲದೆ ಕಂಡುಬಂದರೆ ರಾತ್ರಿಯಲ್ಲಿ ರೈಲಿನಿಂದ ಇಳಿಯಲು ಆದೇಶಿಸಲಾಗುವುದಿಲ್ಲ.

ಹದಿಹರೆಯದ ಹುಡುಗಿ ಅಥವಾ ಮಹಿಳೆ ಏಕಾಂಗಿಯಾಗಿ ಪ್ರಯಾಣಿಸುತ್ತಿದ್ದರೆ ಟಿಕೆಟ್ ಹೊಂದಿಲ್ಲದಿದ್ದರೆ ಟಿಟಿಇ ಅವರನ್ನು ರೈಲಿನಿಂದ ಹೊರಹಾಕಲು ಅನುಮತಿ ಇಲ್ಲ ಎಂದು ಭಾರತೀಯ ರೈಲ್ವೆ ಸ್ಪಷ್ಟವಾಗಿ ಹೇಳಿದೆ.

ಮಹಿಳೆಯ ಬಳಿ ಹಣವಿದ್ದರೆ ದಂಡ ಪಾವತಿಸಿ ಪ್ರಯಾಣ ಮುಂದುವರಿಸಬಹುದು. ಮಹಿಳೆಗೆ ಹಣದ ಕೊರತೆಯಿರುವ ಸಂದರ್ಭಗಳಲ್ಲಿ ಸಹ ಟಿಟಿಇ ಅವರನ್ನು ಕಂಪಾರ್ಟ್‌ಮೆಂಟ್‌ನಿಂದ ಹೊರಹಾಕಲು ಅನುಮತಿ ಇಲ್ಲ. ಆದರೆ ಹೆಚ್ಚಿನ ಮಹಿಳಾ ಪ್ರಯಾಣಿಕರಿಗೆ ಈ ಬಗ್ಗೆ ತಿಳಿದಿಲ್ಲ. ಒಂಟಿಯಾಗಿ ಪ್ರಯಾಣಿಸುವ ಪ್ರತಿಯೊಬ್ಬ ಮಹಿಳೆ ತಿಳಿದಿರಬೇಕಾದ ಪ್ರಮುಖ ಪ್ರಯಾಣಿಕರ ನಿಯಮಗಳಲ್ಲಿ ಇದು ಒಂದು. ಮಹಿಳಾ ಪ್ರಯಾಣಿಕರಿಗಾಗಿ ಅಧಿಕಾರಿಗಳು ಜಾರಿಗೆ ತಂದಿರುವ ಇನ್ನೂ ಕೆಲವು ನಿಯಮಗಳನ್ನು ಇಲ್ಲಿವೆ.


ಮಹಿಳಾ ಸುರಕ್ಷತೆಗಾಗಿ ಭಾರತೀಯ ರೈಲ್ವೇಯಲ್ಲಿ ಹಲವು ನಿಯಮಗಳು ಜಾರಿಯಲ್ಲಿವೆ
1. ಭಾರತೀಯ ರೈಲ್ವೆ ಕಾಯಿದೆ 1989 ರ ಸೆಕ್ಷನ್ 311 ರ ಅಡಿಯಲ್ಲಿ ಮಿಲಿಟರಿ ಸಿಬ್ಬಂದಿಗೆ ಮಹಿಳಾ ಕಂಪಾರ್ಟ್‌ಮೆಂಟ್‌ಗಳನ್ನು ಪ್ರವೇಶಿಸಲು ಅನುಮತಿಸಲಾಗುವುದಿಲ್ಲ.

2. ಅಧಿಕಾರಿಗಳೊಂದಿಗೆ ಮಹಿಳಾ ಕಾನ್‌ಸ್ಟೆಬಲ್ ಇದ್ದಾಗ ಮಾತ್ರ ಮಹಿಳೆಯನ್ನು ಹೊರಹೋಗುವಂತೆ ಹೇಳಬಹುದು.

3. ಸೆಕ್ಷನ್ 162 ರ ಪ್ರಕಾರ 12 ವರ್ಷದೊಳಗಿನ ಹುಡುಗರು ಮಹಿಳಾ ಕಂಪಾರ್ಟ್‌ಮೆಂಟ್‌ಗಳಲ್ಲಿ ಪ್ರಯಾಣಿಸಬಹುದು.

4. ಮಹಿಳಾ ಕೋಚ್‌ಗೆ ಪ್ರವೇಶಿಸುವ ಯಾವುದೇ ಪುರುಷ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ.

5. ಮಹಿಳೆಯರಿಗಾಗಿ ದೂರದ ಮೇಲ್/ ಎಕ್ಸ್‌ಪ್ರೆಸ್ ರೈಲುಗಳ ಸ್ಲೀಪರ್ ವರ್ಗದಲ್ಲಿ ಆರು ಬರ್ತ್‌ಗಳನ್ನು ಕಾಯ್ದಿರಿಸಲಾಗಿದೆ. ಅಲ್ಲದೆ, ಗರೀಬ್ ರಥ/ರಾಜಧಾನಿ/ ದುರೊಂಟೊ/ ಸಂಪೂರ್ಣ ಹವಾನಿಯಂತ್ರಿತ ಎಕ್ಸ್‌ಪ್ರೆಸ್ ರೈಲುಗಳ ಮೂರನೇ ಹಂತದ AC (3AC) ಕೋಚ್‌ಗಳಲ್ಲಿ ಆರು ಬರ್ತ್‌ಗಳನ್ನು ಮಹಿಳಾ ಪ್ರಯಾಣಿಕರಿಗೆ ಕಾಯ್ದಿರಿಸಲಾಗಿದೆ. ಅವರ ವಯಸ್ಸನ್ನು ಲೆಕ್ಕಿಸದೆ ಅಥವಾ ಅವರು ಏಕಾಂಗಿಯಾಗಿ ಅಥವಾ ಗುಂಪಿನಲ್ಲಿ ಪ್ರಯಾಣಿಸುತ್ತಿದ್ದರೆ ಇದನ್ನು ಮಾಡಲಾಗುತ್ತದೆ.

6. ಭಾರತೀಯ ರೈಲ್ವೇ ನಿಲ್ದಾಣಗಳಲ್ಲಿ ಸಿಸಿಟಿವಿಗಳು ಮತ್ತು ಮೇಲ್ವಿಚಾರಣಾ ಕೊಠಡಿಗಳನ್ನು ಸ್ಥಾಪಿಸುವ ಮೂಲಕ ಮಹಿಳೆಯರ ಸುರಕ್ಷತೆಯನ್ನು ಹೆಚ್ಚಿಸಿದೆ.

7. ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (RPF) 2020ರ ಅಕ್ಟೋಬರ್ 17ರಂದು ‘ಮೇರಿ ಸಹೇಲಿ’ ಎಂಬ ಪ್ಯಾನ್ ಇಂಡಿಯಾ ಉಪಕ್ರಮವನ್ನು ಪ್ರಾರಂಭಿಸಿದೆ.

ಇದನ್ನೂ ಓದಿ: Driving Tips: ವಾಹನ ಚಾಲನೆ ಮಾಡುತ್ತಿರುವಾಗ ಪ್ರಾಣಿಗಳಿಂದಾಗುವ ಅಪಘಾತ ತಪ್ಪಿಸಿಕೊಳ್ಳುವುದು ಹೇಗೆ?

8. ರೈಲಿನಲ್ಲಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರಿಗೆ ಬೋರ್ಡಿಂಗ್‌ನಿಂದ ಡಿ-ಬೋರ್ಡಿಂಗ್‌ವರೆಗಿನ ಸಂಪೂರ್ಣ ಪ್ರಯಾಣಕ್ಕಾಗಿ ವರ್ಧಿತ ಸುರಕ್ಷತೆ ಮತ್ತು ಭದ್ರತೆಯನ್ನು ಒದಗಿಸುವ ಉದ್ದೇಶವನ್ನು ಇದು ಹೊಂದಿದೆ.

9. ಮಹಿಳಾ ಪ್ರಯಾಣಿಕರಿಗೆ ವಿಶೇಷವಾಗಿ ಒಂಟಿಯಾಗಿ ಪ್ರಯಾಣಿಸುವವರಿಗೆ ಭದ್ರತೆಯನ್ನು ಒದಗಿಸುವುದು ಉಪಕ್ರಮದ ಕಡೆಗೆ ಹೆಚ್ಚಿನ ಗಮನ ನೀಡಲಾಗುತ್ತದೆ.

Continue Reading

ಆರೋಗ್ಯ

Tips For Healthy Skin: ಈ ಐದು ಸಲಹೆಗಳನ್ನು ಪಾಲಿಸಿ, ಮೊಡವೆಗಳಿಂದ ಪಾರಾಗಿ!

ಉಸಿರಾಟದ ವ್ಯಾಯಾಮ (breathing exercises), ಕೂಲಿಂಗ್ ತಂತ್ರಗಳ (cooling techniques) ಜೊತೆಗೆ ಮುಖದ ಯೋಗವನ್ನು (Tips For Healthy Skin) ಸರಿಯಾಗಿ ಮಾಡುವುದರಿಂದ ಮುಖದಲ್ಲಿ ರಕ್ತದ ಹರಿವನ್ನು ಹೆಚ್ಚಿಸುತ್ತದೆ. ಇದು ಚರ್ಮದ ತೈಲಗಳನ್ನು ಸಮತೋಲನಗೊಳಿಸುತ್ತದೆ. ಇದು ಮೊಡವೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಮೊಡವೆಗಳನ್ನು ಕಡಿಮೆ ಮಾಡಲು ಎಲ್ಲರೂ ನೆನಪಿಟ್ಟುಕೊಳ್ಳಬಹುದಾದ ಫೇಸ್ ಯೋಗದ 5 ವಿಷಯಗಳ ಕುರಿತು ಮಾಹಿತಿ (Tips For Healthy Skin) ಇಲ್ಲಿದೆ.

VISTARANEWS.COM


on

By

Tips For Healthy Skin
Koo

ಪಿಸಿಓಎಸ್ (PCOS) ಅಥವಾ ಪಿಸಿಓಡಿ (PCOD), ದೇಹದ ಶಾಖ, ಚರ್ಮದ ರಂಧ್ರಗಳನ್ನು ಮುಚ್ಚಿಹಾಕುವ ಉತ್ಪನ್ನಗಳ ತಪ್ಪು ಬಳಕೆ, ಹಾರ್ಮೋನ್ ಗಳ ಅಸಮತೋಲನ (hormonal imbalances), ನಾವು ಸೇವಿಸುವ ಅಸುರಕ್ಷಿತ ಆಹಾರ.. ಹೀಗೆ ಅನೇಕ ಕಾರಣಗಳಿಂದ ಮುಖದಲ್ಲಿ ಮೊಡವೆ (acne) ಉಂಟಾಗುತ್ತದೆ. ಇದು ಬ್ಯಾಕ್ಟೀರಿಯಾದ ಸೋಂಕಿನಿಂದ (bacterial infection ) ಹೆಚ್ಚಾಗುತ್ತದೆ.

ಉಸಿರಾಟದ ವ್ಯಾಯಾಮ (breathing exercises), ಕೂಲಿಂಗ್ ತಂತ್ರಗಳ (cooling techniques) ಜೊತೆಗೆ ಮುಖದ ಯೋಗವನ್ನು (Tips For Healthy Skin) ಸರಿಯಾಗಿ ಮಾಡುವುದರಿಂದ ಮುಖದಲ್ಲಿ ರಕ್ತದ ಹರಿವನ್ನು ಹೆಚ್ಚಿಸುತ್ತದೆ. ಇದು ಚರ್ಮದ ತೈಲಗಳನ್ನು ಸಮತೋಲನಗೊಳಿಸುತ್ತದೆ. ಇದು ಮೊಡವೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಮೊಡವೆಗಳನ್ನು ಕಡಿಮೆ ಮಾಡಲು ನೆನಪಿಟ್ಟುಕೊಳ್ಳಬಹುದಾದ ಫೇಸ್ ಯೋಗದ 5 ವಿಷಯಗಳ ಕುರಿತ ಮಾಹಿತಿ ಇಲ್ಲಿದೆ.


1. ಬಹಳಷ್ಟು ನೀರು ಕುಡಿಯಿರಿ

ಫೇಸ್ ಯೋಗವು ಮುಖದಲ್ಲಿನ ಹೆಚ್ಚುವರಿ ತೈಲವನ್ನು ತೊಡೆದು ಹಾಕಲು ಸಹಾಯ ಮಾಡುತ್ತದೆ. ನೀರಿನಿಂದ ನಿರ್ಗಮಿಸುವ ದೇಹದ ವಿಷಕಾರಿ ದ್ರವವನ್ನು ತೆಗೆದುಹಾಕಿ ಚರ್ಮವನ್ನು ಸ್ವಚ್ಛಗೊಳಿಸುತ್ತದೆ. ನೀರು ಚರ್ಮದ ರಂಧ್ರಗಳನ್ನು ತೆರೆಯಲು ಸಹಾಯ ಮಾಡುತ್ತದೆ ಮತ್ತು ದೇಹದ ತೇವಾಂಶದ ಮಟ್ಟವನ್ನು ಕಾಪಾಡಲು ಸಹಾಯ ಮಾಡುತ್ತದೆ.

2. ಪ್ರಾಣಾಯಾಮ

ಮೊಡವೆ ಪೀಡಿತ ಚರ್ಮಕ್ಕಾಗಿ ಕೂಲಿಂಗ್ ಡೌನ್ ತಂತ್ರಗಳು ಅಥವಾ ಪ್ರಾಣಾಯಾಮವನ್ನು ದಿನಚರಿಯಲ್ಲಿ ಸೇರಿಸಿಕೊಳ್ಳಬೇಕು. ಇದು ಮುಖಕ್ಕೆ ರಕ್ತದ ಹರಿವಿನ ಪ್ರಮಾಣವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

3. ಸರಿಯಾದ ತೈಲವನ್ನು ಬಳಸಿ

ತೆಂಗಿನ ಎಣ್ಣೆಯಂತಹ ಹೆಚ್ಚು ಗಾಢವಾದ ಎಣ್ಣೆಯನ್ನು ಮುಖಕ್ಕೆ ಬಳಸಬೇಡಿ. ಮೊಡವೆಗಳನ್ನು ತೊಡೆದು ಹಾಕಲು ಮತ್ತು ಸುಲಭವಾಗಿ ಚರ್ಮಕ್ಕೆ ಹೀರಿಕೊಳ್ಳಲು ಸಹಾಯವಾಗುವ ಚಹಾ ಮರ ಅಥವಾ ಬೇವಿನ ಎಣ್ಣೆಯಂತಹ ಹಗುರವಾದ ತೈಲಗಳನ್ನು ಬಳಸಿ.

ಇದನ್ನೂ ಓದಿ: Health Tips in Kannada: ಕುತ್ತಿಗೆ ನೋವಿನಿಂದ ಬಳಲುತ್ತಿದ್ದೀರಾ? ಈ ಸಂಗತಿ ತಿಳಿದುಕೊಂಡಿರಿ

4. ಕನಿಷ್ಠ ಸ್ಪರ್ಶ

ಮುಖದ ಮೇಲೆ ಕನಿಷ್ಠ ಸ್ಪರ್ಶವನ್ನು ಬಳಸುವ ಮೇಕಪ್ ಸಾಮಗ್ರಿಗಳನ್ನು ಬಳಸಿ. ಇದರಿಂದ ಯಾವುದೇ ಮೊಡವೆಗಳು ಉಂಟಾಗುವುದಿಲ್ಲ ಅಥವಾ ಯಾವುದೇ ಬ್ಯಾಕ್ಟೀರಿಯಾ ಸೋಂಕು ಆಗುವುದಿಲ್ಲ. ಒಂದು ಸ್ಥಳದಿಂದ ಇನ್ನೊಂದಕ್ಕೆ ವರ್ಗಾಯಿಸುವುದಿಲ್ಲ.

5. ಮುಖವನ್ನು ತೊಳೆಯುತ್ತಿರಿ

ಸೌಂದರ್ಯ ವರ್ಧಕಗಳು ಚರ್ಮದ ಮೇಲೆ ಬಿಡಬಹುದಾದ ಎಣ್ಣೆಗಳಿಂದ ಮಾಡಲಾಗುತ್ತದೆ. ದೀರ್ಘಕಾಲದವರೆಗೆ ಇರಿಸಲಗುವ ಉತ್ಪನ್ನಗಳು ಹೆಚ್ಚು ಮೊಡವೆಗಳಿಗೆ ಕಾರಣವಾಗಬಹುದು. ಮೇಕಪ್ ನ ಅಗತ್ಯವಿಲ್ಲದೆ ಇದ್ದಾಗ ಚೆನ್ನಾಗಿ ಮುಖವನ್ನು ತೊಳೆಯುವುದರಿಂದ ಚರ್ಮದ ರಂಧ್ರಗಳು ಮುಚ್ಚಿಹೋಗುವುದಿಲ್ಲ ಅಥವಾ ತೈಲಗಳನ್ನು ಬಳಸಿದ ನಂತರ ಮೊಡವೆಗಳನ್ನು ಹುಟ್ಟುಹಾಕುವುದಿಲ್ಲ.

Continue Reading

ಕ್ರೈಂ

Driving Tips: ವಾಹನ ಚಾಲನೆ ಮಾಡುತ್ತಿರುವಾಗ ಪ್ರಾಣಿಗಳಿಂದಾಗುವ ಅಪಘಾತ ತಪ್ಪಿಸಿಕೊಳ್ಳುವುದು ಹೇಗೆ?

ಪ್ರಾಣಿಗಳಿಂದಾಗಿ ರಸ್ತೆ ಅಪಘಾತಗಳು ಭಾರತದಲ್ಲಿ ಸಾಕಷ್ಟು ಹೆಚ್ಚಾಗುತ್ತಿದೆ. ಪ್ರಾಣಿಗಳು ಓಡಾಡುವ ಸಾಧ್ಯತೆಗಳಿರುವ ರಸ್ತೆಗಳಲ್ಲಿ ನಾವು ಬಹಳ ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕಿದೆ. ಇದಕ್ಕಾಗಿ ಕೆಲವು ಸಲಹೆಗಳು (Driving Tips) ಇಲ್ಲಿವೆ.

VISTARANEWS.COM


on

By

Driving Tips
Koo

ತಮಿಳುನಾಡಿನಲ್ಲಿ (tamilnadu) ಇತ್ತೀಚೆಗೆ ನಡೆದ ಭೀಕರ ರಸ್ತೆ (Driving Tips) ಅಪಘಾತದಲ್ಲಿ (Road Accident) ಐದು ಮಂದಿ (five death) ಸಾವನ್ನಪ್ಪಿದ್ದರು. ರಸ್ತೆಯಲ್ಲಿದ್ದ ಜಾನುವಾರುಗಳಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಕಾರು (car) ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿತ್ತು. ಕಾರಿನಲ್ಲಿದ್ದ ಐವರು ಪುದುಚೇರಿಯಿಂದ ಹಿಂತಿರುಗುತ್ತಿದ್ದಾಗ ಕಲಾಪಕ್ಕಂನಲ್ಲಿ ಈ ಅಪಘಾತ ಸಂಭವಿಸಿತ್ತು. ಗೋವಾದಲ್ಲಿ (goa) ನಡೆದ ಮತ್ತೊಂದು ಘಟನೆಯಲ್ಲಿ ಮುಖ್ಯರಸ್ತೆಯಲ್ಲಿ ಹಸು ಹಠಾತ್ ಕಾಣಿಸಿಕೊಂಡಿದ್ದರಿಂದ ಕಾರಿಗೆ ಭಾರಿ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಪ್ರಾಣಿಗಳಿಂದಾಗಿ ರಸ್ತೆ ಅಪಘಾತಗಳು ಭಾರತದಲ್ಲಿ ಸಾಕಷ್ಟು ಹೆಚ್ಚಾಗುತ್ತಿದೆ. ಪ್ರಾಣಿಗಳು ಓಡಾಡುವ ಸಾಧ್ಯತೆಗಳಿರುವ ರಸ್ತೆಗಳಲ್ಲಿ ನಾವು ಬಹಳ ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕಿದೆ. ನೀವು ಕಾರನ್ನು ಓಡಿಸುತ್ತಿದ್ದರೆ ಮತ್ತು ಇದ್ದಕ್ಕಿದ್ದಂತೆ ಪ್ರಾಣಿಯು ನಿಮ್ಮ ಮುಂದೆ ಬಂದರೆ ನೀವು ಈ ಕೆಳಗಿನ ಸಲಹೆಗಳನ್ನು ಅನುಸರಿಸಬಹುದು.


1. ವೇಗದ ಮಿತಿಯಲ್ಲಿ ಚಾಲನೆ

ಅತಿ ವೇಗವಾಗಿ ವಾಹನ ಓಡಿಸುವುದು ಸರಿಯಲ್ಲ. ಇದರಿಂದ ಅಪಘಾತ ಸಂಭವಿಸುವ ಅಪಾಯ ಹೆಚ್ಚಾಗಿರುತ್ತದೆ. ಹೀಗಾಗಿ ವೇಗದ ವಾಹನ ಚಾಲನೆಗೆ ನಿಯಂತ್ರಣ ಹೇರಿ. ವಿಶೇಷವಾಗಿ ರಸ್ತೆಗಳಲ್ಲಿ ಪ್ರಾಣಿಗಳ ಸಾಧ್ಯತೆಗಳಿರುವ ಪ್ರದೇಶಗಳಲ್ಲಿ ನಿಧಾನವಾಗಿ ವಾಹನ ಚಲಾಯಿಸಿ.

2. ಶಾಂತವಾಗಿರಿ

ಭಯಭೀತರಾಗಬೇಡಿ ಅಥವಾ ಹಠಾತ್ ಚಲನೆಯನ್ನು ಮಾಡಬೇಡಿ. ಅದು ಪ್ರಾಣಿಗಳನ್ನು ಗಾಬರಿಗೊಳಿಸಬಹುದು ಅಥವಾ ನಿಮ್ಮ ಕಾರಿನ ನಿಯಂತ್ರಣವನ್ನು ಕಳೆದುಕೊಳ್ಳುವಂತೆ ಮಾಡಬಹುದು.

3. ನಿಧಾನಗೊಳಿಸಿ

ಪ್ರಾಣಿಗಳು ಹಠಾತ್ ಎದುರು ಬಂದಾಗ ವೇಗವನ್ನು ತಕ್ಷಣವೇ ಆದರೆ ಕ್ರಮೇಣ ಕಡಿಮೆ ಮಾಡಿ. ಬ್ರೇಕ್‌ಗಳ ಮೇಲೆ ಸ್ಲ್ಯಾಮ್ ಮಾಡುವುದನ್ನು ತಪ್ಪಿಸಿ, ಇದು ನಿಮ್ಮ ಕಾರನ್ನು ಸ್ಕಿಡ್ ಮಾಡಲು ಕಾರಣವಾಗಬಹುದು.

4. ಹಾರ್ನ್ ಬಳಸಿ

ಪ್ರಾಣಿಗಳು ಮತ್ತು ನಿಮ್ಮ ವಾಹನ ಬರುತ್ತಿರುವುದನ್ನು ಇತರ ಚಾಲಕರು ಗಮನ ಹರಿಸುವಂತೆ ಎಚ್ಚರಿಸಲು ವಾಹನದಲ್ಲಿರುವ ಹಾರ್ನ್ ಅನ್ನು ಸದ್ದು ಮಾಡುತ್ತ ಚಲಾಯಿಸಿ.

5. ಏಕಾಏಕಿ ತಿರುಗಿಸಬೇಡಿ

ರಸ್ತೆಯಲ್ಲಿ ವಾಹನವನ್ನು ನೇರವಾಗಿ ಚಲಿಸಲು ಪ್ರಯತ್ನಿಸಿ ಮತ್ತು ಹಠಾತ್ ವಾಹನ ತಿರುಗಿಸಬೇಡಿ. ವಿಶೇಷವಾಗಿ ಹತ್ತಿರದಲ್ಲಿ ಇತರ ವಾಹನಗಳು ಇದ್ದಲ್ಲಿ ಸ್ಟೇರಿಂಗ್ ನಿಯಂತ್ರಣ ಕಷ್ಟವಾದಾಗ ಇತರ ವಸ್ತು ಅಥವಾ ವಾಹನಕ್ಕೆ ಡಿಕ್ಕಿಯಾಗಬಹುದು.

6. ವಾಹನದ ಲೈಟ್‌ಗಳನ್ನು ಫ್ಲ್ಯಾಶ್ ಮಾಡಿ

ಕತ್ತಲೆಯಾಗಿದ್ದರೆ ಅಥವಾ ಗೋಚರತೆ ಕಡಿಮೆಯಿದ್ದರೆ ಪ್ರಾಣಿಗಳು ಮತ್ತು ಇತರ ಚಾಲಕರಿಗೆ ನೀವು ಹೆಚ್ಚು ಗೋಚರಿಸುವಂತೆ ಮಾಡಲು ನಿಮ್ಮ ಕಾರಿನ ಹೆಡ್‌ಲೈಟ್‌ಗಳು ಮತ್ತು ಅಪಾಯದ ದೀಪಗಳನ್ನು ಬೆಳಗಿಸಿ.

ಇದನ್ನೂ ಓದಿ: Road Accident: ಸ್ಕೂಟರ್‌ಗೆ ಟ್ರಕ್‌, ಲಾರಿಗೆ ಬಸ್‌, ಡಿವೈಡರ್‌ಗೆ ಕಾರು ಡಿಕ್ಕಿ; ಅಪಾಯದಿಂದ ಜಸ್ಟ್‌ ಮಿಸ್‌

7. ಪ್ರಾಣಿಗಳು ಹೋಗಲು ಜಾಗ ಬಿಡಿ

ಸಾಧ್ಯವಾದರೆ ಪ್ರಾಣಿಗೆ ರಸ್ತೆಯಿಂದ ದೂರ ಸರಿಯಲು ಸಾಕಷ್ಟು ಜಾಗವನ್ನು ನೀಡಿ. ಅದನ್ನು ಬಲವಂತವಾಗಿ ಅಥವಾ ಹತ್ತಿರ ಹೋಗಲು ಪ್ರಯತ್ನಿಸಬೇಡಿ.

8. ಸಿದ್ಧರಾಗಿರಿ

ಪ್ರಯಾಣ ಮಾಡುವಾಗ ಯಾವಾಗಲೂ ಸುತ್ತಮುತ್ತಲಿನ ಬಗ್ಗೆ ತಿಳಿದುಕೊಂಡಿರಿ. ವಿಶೇಷವಾಗಿ ಪ್ರಾಣಿಗಳು ಮುಕ್ತವಾಗಿ ತಿರುಗಾಡಲು ತಿಳಿದಿರುವ ಪ್ರದೇಶಗಳಲ್ಲಿ ಚಾಲನೆ ಮಾಡುವಾಗ ಜಾನುವಾರುಗಳ ಉಪಸ್ಥಿತಿಯನ್ನು ಸೂಚಿಸುವ ಎಚ್ಚರಿಕೆ ಚಿಹ್ನೆಗಳು ಅಥವಾ ಸಂಕೇತಗಳನ್ನು ಗಮನಿಸಿ.

Continue Reading
Advertisement
Karnataka Weather Forecast
ಮಳೆ6 mins ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

BMW X3 xDrive20d
ಪ್ರಮುಖ ಸುದ್ದಿ20 mins ago

BMW X3 : ಬಿಎಂಡಬ್ಲ್ಯು ಎಕ್ಸ್3 ಎಕ್ಸ್ ಡ್ರೈವ್ 20ಡಿ ಎಂ ಸ್ಪೋರ್ಟ್ ಶಾಡೋ ಎಡಿಷನ್ ಬಿಡುಗಡೆ

Most costly medicine
ಆರೋಗ್ಯ22 mins ago

Most Costly Medicine: ಒಂದೇ ಒಂದು ಡೋಸ್ ಗೆ 17 ಕೋಟಿ ರೂ! ಈ ಔಷಧ ಏಕೆ ಇಷ್ಟೊಂದು ದುಬಾರಿ?

Cannes 2024 Fashion celebrities trend
ಫ್ಯಾಷನ್27 mins ago

Cannes 2024 Fashion: ಕಾನ್‌ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಸೆಲೆಬ್ರೆಟಿಗಳ ಫ್ಯಾಷನ್‌ ಟ್ರೆಂಡ್‌ ಹೇಗಿದೆ ನೋಡಿ!

PM Narendra Modi
ದೇಶ31 mins ago

PM Narendra Modi:”ಅಬ್ಬಾ.. ಎಂಥಾ ಮೇಕಪ್!”- ಮತ್ತೆ ಗಮನ ಸೆಳೆದ ಮೋದಿ; ವಿಡಿಯೋ ವೈರಲ್‌

viral video
ಕ್ರಿಕೆಟ್35 mins ago

Viral Video: ವಿಚ್ಛೇದನ ಕೇಸ್​ ಹೆಚ್ಚಳಕ್ಕೆ ಇದುವೇ ಪ್ರಮುಖ ಕಾರಣ ಎಂದ ಪಾಕ್​ ಕ್ರಿಕೆಟ್​ ತಂಡದ ಮಾಜಿ ನಾಯಕ

Sita Temple
ದೇಶ38 mins ago

Sita Temple: ಬಿಜೆಪಿಯಿಂದ ಶೀಘ್ರವೇ ಸೀತೆಗಾಗಿ ಮಂದಿರ ನಿರ್ಮಾಣ; ಅಮಿತ್‌ ಶಾ ಮಹತ್ವದ ಘೋಷಣೆ

Prajwal Revanna Case pen drive and hard disk were found during the raids in Hassan and Bengaluru
ಕ್ರೈಂ47 mins ago

Prajwal Revanna Case: ಹಾಸನ, ಬೆಂಗಳೂರು ದಾಳಿ ವೇಳೆ ಸಿಕ್ಕ ಪೆನ್‌ಡ್ರೈವ್‌, ಹಾರ್ಡ್‌ ಡಿಸ್ಕ್‌ ಎಷ್ಟು? ಎಫ್‌ಎಸ್‌ಎಲ್‌ಗೆ ರವಾನೆ

Chandu Champion Injured Kartik Aaryan looks intense
ಸಿನಿಮಾ51 mins ago

Chandu Champion: ಗುರುತೇ ಸಿಗದಂತೆ ಬದಲಾದ ಈ ಸ್ಟಾರ್‌ ನಟ ಯಾರು? ಪೋಸ್ಟರ್​ ವೈರಲ್​!

Money Guide
ಮನಿ-ಗೈಡ್1 hour ago

Money Guide: ಎನ್‌ಪಿಎಸ್‌ಗೆ 15 ವರ್ಷ; ಇಲ್ಲಿದೆ ಯೋಜನೆಯ ಸಂಪೂರ್ಣ ವಿವರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ6 mins ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Suspicious Case
ಬೆಂಗಳೂರು6 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

ಟ್ರೆಂಡಿಂಗ್‌