Gunfire On School: ಶಾಲೆಯೊಳಗೆ ಗನ್‌ ತಂದು 10 ವರ್ಷದ ಹುಡುಗನಿಗೆ ಗುಂಡು ಹಾರಿಸಿದ 5 ವರ್ಷದ ಬಾಲಕ! - Vistara News

Latest

Gunfire On School: ಶಾಲೆಯೊಳಗೆ ಗನ್‌ ತಂದು 10 ವರ್ಷದ ಹುಡುಗನಿಗೆ ಗುಂಡು ಹಾರಿಸಿದ 5 ವರ್ಷದ ಬಾಲಕ!

Gunfire On School: ಶಾಲೆಗ ಹೋಗುವ ಮಕ್ಕಳ ಬ್ಯಾಗ್‌ನಲ್ಲಿ ಈಗ ಪುಸ್ತಕದ ಬದಲು ಗನ್ ಕುಳಿತು ಬಿಟ್ಟಿದೆ.ನರ್ಸರಿ ವಿದ್ಯಾರ್ಥಿಯಾಗಿರುವ ಆರೋಪಿ ಬಾಲಕ ತನ್ನ ಸ್ಕೂಲ್ ಬ್ಯಾಗ್‌ನಲ್ಲಿ ಬಂದೂಕನ್ನು ಅಡಗಿಸಿಕೊಂಡು ಶಾಲೆಗೆ ಹೋಗಿದ್ದ. ಶಾಲೆಗೆ ಬಂದ ಕೂಡಲೇ ಆತ ತನ್ನ ಬ್ಯಾಗ್‌ನಿದ ಬಂದೂಕು ತೆಗೆದು ಗುಂಡು ಹಾರಿಸಿದ್ದಾನೆ. ಗುಂಡು 3ನೇ ತರಗತಿಯ ವಿದ್ಯಾರ್ಥಿಗೆ ತಗುಲಿದೆ. ಇದರಿಂದ ಆತ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಅವನನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

VISTARANEWS.COM


on

Gunfire On School
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo


ಐದು ವರ್ಷದ ಬಾಲಕನೊಬ್ಬ ಹ್ಯಾಂಡ್‍ಗನ್‌ನೊಂದಿಗೆ ಶಾಲೆಗೆ ಬಂದು 3ನೇ ತರಗತಿಯಲ್ಲಿ ಓದುತ್ತಿದ್ದ 10 ವರ್ಷದ ಬಾಲಕನ ಮೇಲೆ ಗುಂಡು (Gunfire On School) ಹಾರಿಸಿದ ಆಘಾತಕಾರಿ ಘಟನೆ ಉತ್ತರ ಬಿಹಾರದ ಸುಪಾಲ್ ಜಿಲ್ಲೆಯ ತ್ರಿವೇಣಿಗಂಜ್‍ನ ಲಾಲ್ಪಟ್ಟಿಯಲ್ಲಿರುವ ಸೇಂಟ್ ಜಾನ್ಸ್ ಬೋರ್ಡಿಂಗ್ ಸ್ಕೂಲ್‍ನಲ್ಲಿ ಬುಧವಾರ ನಡೆದಿದೆ. ಇದರಿಂದ ಸಂತ್ರಸ್ತ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ನರ್ಸರಿ ವಿದ್ಯಾರ್ಥಿಯಾಗಿರುವ ಆರೋಪಿ ಬಾಲಕ ತನ್ನ ಸ್ಕೂಲ್ ಬ್ಯಾಗ್‍ನಲ್ಲಿ ಬಂದೂಕನ್ನು ಅಡಗಿಸಿಕೊಂಡು ಶಾಲೆಗೆ ಹೋಗಿದ್ದ. ಶಾಲೆಗೆ ಬಂದ ಕೂಡಲೇ ಆತ ತನ್ನ ಬ್ಯಾಗ್‍ನಿಂದ ಬಂದೂಕು ತೆಗೆದು ಗುಂಡು ಹಾರಿಸಿದ್ದಾನೆ. ಗುಂಡು 3 ನೇ ತರಗತಿಯ ವಿದ್ಯಾರ್ಥಿ ಆಸಿಫ್ ಎಂಬ ಬಾಲಕನಿಗೆ ತಗುಲಿದೆ. ಇದರಿಂದ ಆತ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಅವನನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯ ಬಳಿಕ ಇಬ್ಬರು ವಿದ್ಯಾರ್ಥಿಗಳ ಪೋಷಕರನ್ನು ಶಾಲೆಗೆ ಕರೆದು ವಿಚಾರಣೆ ನಡೆಸಲಾಗುತ್ತಿದೆ. ಆದರೆ ಗುಂಡು ಹಾರಿಸಿದ ಬಾಲಕ ಹಾಗೂ ಆತನ ಪೋಷಕರು ಶಾಲೆಯಿಂದ ಓಡಿ ಹೋಗಿದ್ದಾರೆ. ಇದರಿಂದ ಕೋಪಗೊಂಡ ಸಂತ್ರಸ್ತ ಬಾಲಕನ ಕುಟುಂಬದವರು ಶಾಲೆಯನ್ನು ಧ್ವಂಸಗೊಳಿಸಿದ್ದಾರೆ.

ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಹಾಗೂ ತಲೆಮರೆಸಿಕೊಂಡಿರುವ ಆರೋಪಿ ಬಾಲಕ ಹಾಗೂ ಆತನ ಕುಟುಂಬದವರನ್ನು ಪೊಲೀಸರು ಹುಡುಕಾಡುತ್ತಿದ್ದಾರೆ. ಈ ಬಗ್ಗೆ ಮಾತನಾಡಿದ ಪೊಲೀಸ್ ಅಧಿಕಾರಿ “ಅದೇ ಶಾಲೆಯಲ್ಲಿ 3 ನೇ ತರಗತಿಯಲ್ಲಿ ಓದುತ್ತಿರುವ 10 ವರ್ಷದ ಹುಡುಗನ ಮೇಲೆ ವಿದ್ಯಾರ್ಥಿ ಗುಂಡು ಹಾರಿಸಿದ್ದಾನೆ. ಗುಂಡು ಅವನ ತೋಳಿಗೆ ತಗುಲಿತು. ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮಹಿಳೆಯ ಎದೆ, ಕುತ್ತಿಗೆಗೆ ಭೀಕರವಾಗಿ ತಿವಿದ ಬೀದಿ ಹಸು; ಮೈ ನಡುಗಿಸುವ ವಿಡಿಯೊ

ಬಾಲಕ ಬ್ಯಾಗ್‍ನಲ್ಲಿ ಬಂದೂಕನ್ನು ಇರಿಸಿಕೊಂಡು ಅದನ್ನು ಲಾಲ್ಪಟ್ಟಿ ಪ್ರದೇಶದಲ್ಲಿರುವ ಖಾಸಗಿ ಶಾಲೆಗೆ ಹೇಗೆ ಸಾಗಿಸುವಲ್ಲಿ ಯಶಸ್ವಿಯಾದನು ಎಂಬುದನ್ನು ಕಂಡುಹಿಡಿಯಲು ನಾವು ಪ್ರಯತ್ನಿಸುತ್ತಿದ್ದೇವೆ” ಎಂದು ಹೇಳಿದ್ದಾರೆ. ಅಲ್ಲದೇ “ವಿದ್ಯಾರ್ಥಿಗಳ ಚೀಲಗಳನ್ನು ನಿಯಮಿತವಾಗಿ ಕೂಲಂಕಷವಾಗಿ ಪರಿಶೀಲಿಸಬೇಕೆಂದು ಜಿಲ್ಲೆಯಾದ್ಯಂತ ಶಾಲೆಗಳಿಗೆ ಕೇಳುತ್ತಿದ್ದೇವೆ. ಈ ಘಟನೆಯು ಶಿಕ್ಷಕರು ಮತ್ತು ಪೋಷಕರಲ್ಲಿ ಹೆಚ್ಚಿನ ಆತಂಕವನ್ನುಂಟು ಮಾಡಿದೆ” ಎಂಬುದಾಗಿ ತಿಳಿಸಿದ್ದಾರೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Sexual Abuse: ಕ್ಲಾಸ್‌ಗೆ ಹೋಗಲು ಆಟೊ ಹತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ; ಚಾಲಕ ಮೊಹಮ್ಮದ್‌ ಬಂಧನ

Sexual Abuse: ಉತ್ತರಾಖಂಡದ ಹಲ್ದ್ವಾನಿಯಲ್ಲಿ ಬಾಲಕಿಯ ಮೇಲೆ ಮುಸ್ಲಿಂ ಯುವಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಬಾಲಕಿ ಸ್ವಲ್ಪ ಮಾನಸಿಕ ಅಸ್ವಸ್ಥೆಯಾಗಿದ್ದು, ಆಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಆಟೋ ಚಾಲಕ ಮೊಹಮ್ಮದ್ ನದೀಮ್ ಎಂದು ಗುರುತಿಸಲಾಗಿದೆ. ಈ ಪ್ರಕರಣದ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳು ವ್ಯಾಪಕ ಪ್ರತಿಭಟನೆ ನಡೆಸಿವೆ.

VISTARANEWS.COM


on

Sexual Abuse
Koo


ಹಿಂದೂ ಯುವತಿಯರನ್ನು ಲವ್ ಮಾಡಿ ಮದುವೆಯಾಗಿ ಮತಾಂತರಗೊಳಿಸುವಂತಹ ಲವ್ ಜಿಹಾದ್ ಪ್ರಕರಣಗಳು ದೇಶದಲ್ಲಿ ಹೆಚ್ಚುತ್ತಿವೆ ಎಂಬ ಆಪಾದನೆಗಳ ನಡುವೆಯೇ, ಮತ್ತೊಂದು ಘಟನೆ ವರದಿಯಾಗಿದೆ. ಇತ್ತೀಚೆಗೆ ಉತ್ತರಾಖಂಡದ ಹಲ್ದ್ವಾನಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಮುಸ್ಲಿಂ ಯುವಕನೊಬ್ಬ ಲೈಂಗಿಕ ದೌರ್ಜನ್ಯ (Sexual Abuse) ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಇದು ಹಿಂದೂಪರ ಸಂಘಟನೆಯಗಳ ಆಕ್ರೋಶಕ್ಕೆ ಕಾರಣವಾಗಿದ್ದು, ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಪ್ರತಿಭಟನೆ ನಡೆಸಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಅಪ್ರಾಪ್ತ ಬಾಲಕಿ ಮಾನಸಿಕ ಅಸ್ವಸ್ಥೆಯಾಗಿದ್ದು, ಆಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಆಟೋ ಚಾಲಕ ಮೊಹಮ್ಮದ್ ನದೀಮ್ ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಈ ಘಟನೆ ಭಾನುವಾರ ಜುಲೈ 28, 2024 ನಡೆದಿದೆ. 16 ವರ್ಷದ ಸಂತ್ರಸ್ತೆ ಕೊಟ್ವಾಲಿ ಪ್ರದೇಶದ ನಿವಾಸಿಯಾಗಿದ್ದಾಳೆ. ಆಕೆ ಪ್ರತಿಷ್ಠಿತ ಶಾಲೆಯೊಂದರಲ್ಲಿ 11ನೇ ತರಗತಿ ಓದುತ್ತಿದ್ದಾಳೆ. ಆರೋಪಿ ನದೀಮ್ ಹಲ್ದ್ವಾನಿಯ ಬನ್ಭೂಲ್ಪುರ ಪ್ರದೇಶದ ನಿವಾಸಿಯಾಗಿದ್ದಾನೆ. ಘಟನೆ ನಡೆದ ದಿನದಂದು, ಅಪ್ರಾಪ್ತ ಸಂತ್ರಸ್ತೆ ಮ್ಯೂಸಿಕ್ ಕ್ಲಾಸ್‍ಗೆ ಹಾಜರಾಗಲು ಮಂಗಲ್ ಪಾರಾವ್‍ನಲ್ಲಿ ನಿಂತು, ಆಟೋಗಾಗಿ ಕಾಯುತ್ತಿದ್ದಳು. ಆಗ ಆಟೋ ಚಾಲಕ ನದೀಮ್ ಅಲ್ಲಿಗೆ ಬಂದು ಮ್ಯೂಸಿಕ್ ಕ್ಲಾಸ್ ಬಳಿ ಅವಳನ್ನು ಬಿಡುವುದಾಗಿ ಭರವಸೆ ನೀಡಿದ. ಆಟೋ ಹತ್ತಿದ ಬಾಲಕಿಯನ್ನು ನಗರದ ಎಂಬಿ ಇಂಟರ್ ಕಾಲೇಜು ಬಳಿಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆಟೋದಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಅಪ್ರಾಪ್ತ ಬಾಲಕಿ ಇದನ್ನು ವಿರೋಧಿಸಿದಾಗ, ಘಟನೆಯನ್ನು ಯಾರಿಗಾದರೂ ಹೇಳಿದರೆ ಕೊಲ್ಲುವುದಾಗಿ ನದೀಮ್ ಬೆದರಿಕೆ ಹಾಕಿದ್ದಾನೆ. ಈ ಘೋರ ಕೃತ್ಯ ಎಸಗಿದ ನಂತರ, ಅವನು ಅವಳನ್ನು ಮಂಗಲ್ ಪಾರಾವ್ ಬಳಿ ಬಿಟ್ಟು ಪರಾರಿಯಾಗಿದ್ದಾನೆ. ಮನೆ ತಲುಪಿದ ಸಂತ್ರಸ್ತೆ ತನ್ನ ಕುಟುಂಬಕ್ಕೆ ನಡೆದ ಘಟನೆಯನ್ನು ವಿವರಿಸಿದಳು. ನಂತರ ಆಕೆಯ ಕುಟುಂಬವು ಪೊಲೀಸ್ ಠಾಣೆಗೆ ತಲುಪಿ ದೂರು ದಾಖಲಿಸಿದೆ.

ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳು ಮತ್ತು ಇತರ ಪುರಾವೆಗಳ ಆಧಾರದ ಮೇಲೆ, ಆರೋಪಿಯನ್ನು ಪೊಲೀಸರು ಕಂಡುಹುಡುಕಿದ್ದಾರೆ. ಸೋಮವಾರ (ಜುಲೈ 29, 2024) ಪೊಲೀಸರು ದಾಳಿ ನಡೆಸಿ ಮೊಹಮ್ಮದ್ ನದೀಮ್ ಅವರನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 351 (2) (3), 64 (2) ಕೆ, 65 (1) ಮತ್ತು ಪೋಕ್ಸೊ ಕಾಯ್ದೆಯ ಸೆಕ್ಷನ್ 3/4 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಪೊಲೀಸರ ಪ್ರಕಾರ, ಸಂತ್ರಸ್ತೆ ಸಂಜೆ ಸಂಗೀತ ತರಗತಿಗಳಿಗೆ ಹಾಜರಾಗಲು ಆಟೋಗಾಗಿ ಕಾಯುತ್ತಿದ್ದಳು. ವಿದ್ಯಾರ್ಥಿ ಮಾನಸಿಕವಾಗಿ ದುರ್ಬಲಳಾಗಿದ್ದು, ಆರೋಪಿ ಆಟೋ ಚಾಲಕ ನದೀಮ್ ಅದರ ಲಾಭವನ್ನು ಪಡೆದುಕೊಂಡು, ಅವಳನ್ನು ಮನೆಗೆ ಬಿಡುವ ಬದಲು ಏಕಾಂತ ಸ್ಥಳಕ್ಕೆ ಕರೆದೊಯ್ದು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲ್ಲುವುದಾಗಿ ಸಂತ್ರಸ್ತೆಗೆ ಬೆದರಿಕೆ ಹಾಕಿದ್ದಾನೆ ಎಂಬುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಶಾಲೆಯೊಳಗೆ ಗನ್‌ ತಂದು 10 ವರ್ಷದ ಹುಡುಗನಿಗೆ ಗುಂಡು ಹಾರಿಸಿದ 5 ವರ್ಷದ ಬಾಲಕ!

ಈ ಘಟನೆಯು ಹಲ್ದ್ವಾನಿಯ ಹಿಂದೂ ಸಂಘಟನೆಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದ್ದು, ಆರೋಪಿ ಆಟೋ ಚಾಲಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಈ ಕುರಿತು ಪ್ರತಿಭಟನೆ ನಡೆಸಿದ್ದಾರೆ.

Continue Reading

ತಂತ್ರಜ್ಞಾನ

FASTag new rule: ಫಾಸ್ಟ್‌ಟ್ಯಾಗ್‌ ಬಳಕೆದಾರರೇ ಗಮನಿಸಿ; ನಾಳೆಯಿಂದ ಹೊಸ ನಿಯಮ ಜಾರಿ!

ಆಗಸ್ಟ್ 1ರಿಂದ ಫಾಸ್ಟ್ ಟ್ಯಾಗ್ ಗೆ ಸಂಬಂಧಿಸಿ ಹೊಸ ನಿಯಮಗಳು (FASTag new rule) ಜಾರಿಗೆ ಬರಲಿದ್ದು, ಇದಕ್ಕಾಗಿ ಗ್ರಾಹಕರು ಕೆವೈಸಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವುದು ಕಡ್ಡಾಯವಾಗಿದೆ. ಟೋಲ್ ಪಾವತಿಗಳನ್ನು ಸರಳಗೊಳಿಸಲು ಮತ್ತು ಟೋಲ್ ಪ್ಲಾಜಾಗಳಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಎನ್ ಪಿಸಿಐ ಜಾರಿಗೊಳಿಸಿರುವ ಹೊಸ ನಿಯಮಗಳು ಯಾವುದು ಎನ್ನುವ ಮಾಹಿತಿ ಇಲ್ಲಿದೆ.

VISTARANEWS.COM


on

By

FASTag new rule
Koo

ಫಾಸ್ಟ್ ಟ್ಯಾಗ್ ಬಳಕೆದಾರರಿಗೆ ನಾಳೆಯಿಂದ ಅಂದರೆ ಆಗಸ್ಟ್ 1ರಿಂದ ಹೊಸ ನಿಯಮಗಳು (FASTag new rule) ಜಾರಿಗೆ ಬರಲಿದೆ. ಯಾಕೆಂದರೆ ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ನವೀಕರಿಸಿದ ಮಾರ್ಗಸೂಚಿಗಳನ್ನು ಪರಿಚಯಿಸಿದ್ದು, ಇದಕ್ಕಾಗಿ ಗ್ರಾಹಕರು ಕೆವೈಸಿ (KYC) ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕಾಗುತ್ತದೆ.

ಟೋಲ್ ಪಾವತಿಗಳನ್ನು ಸರಳಗೊಳಿಸಲು ಮತ್ತು ಟೋಲ್ ಪ್ಲಾಜಾಗಳಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಫಾಸ್ಟ್ ಟ್ಯಾಗ್ ಅತ್ಯಗತ್ಯವಾಗಿದೆ. ಆದರೆ ಎನ್ ಪಿಸಿಐ ಮಾಡಿರುವ ಈ ಬದಲಾವಣೆಗಳು ಬಳಕೆದಾರರ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುವ ಸಾಧ್ಯತೆ ಇದೆ.

ಆಗಸ್ಟ್ 1ರಿಂದ ಫಾಸ್ಟ್‌ಟ್ಯಾಗ್ ಸೇವೆಗಳನ್ನು ಒದಗಿಸುವ ಕಂಪನಿಗಳು 3- 5 ವರ್ಷಗಳ ಹಿಂದೆ ನೀಡಲಾದ ಎಲ್ಲಾ ಫಾಸ್ಟ್‌ಟ್ಯಾಗ್‌ಗಳಿಗೆ ಕೆವೈಸಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಅಕ್ಟೋಬರ್ 31ರವರೆಗೆ ಸಮಯಾವಕಾಶವನ್ನು ನೀಡಲಿದೆ. ಈ ಅವಧಿಯಲ್ಲಿ ಫಾಸ್ಟ್‌ಟ್ಯಾಗ್ ಹೊಂದಿರುವವರು ಸೇವೆಯಲ್ಲಿ ಯಾವುದೇ ಅಡಚಣೆಗಳು ಉಂಟಾಗದಂತೆ ತಡೆಗಟ್ಟಲು ಕೆವೈಸಿ ಮಾಹಿತಿಯನ್ನು ನವೀಕರಿಸುವುದು ಕಡ್ಡಾಯವಾಗಿದೆ.

ಐದು ವರ್ಷಕ್ಕಿಂತ ಹಳೆಯದಾದ ಫಾಸ್ಟ್ ಟ್ಯಾಗ್ ಅನ್ನು ಬದಲಾಯಿಸಬೇಕು. ವಾಹನ ಮಾಲೀಕರು ತಮ್ಮ ಫಾಸ್ಟ್ ಟ್ಯಾಗ್ ಗಳ ವಿತರಣೆಯ ದಿನಾಂಕಗಳನ್ನು ಪರಿಶೀಲಿಸಬೇಕು ಮತ್ತು ಸಮಸ್ಯೆಗಳನ್ನು ತಪ್ಪಿಸಲು ತ್ವರಿತವಾಗಿ ಕ್ರಮ ತೆಗೆದುಕೊಳ್ಳಬೇಕು.

ಹಳೆಯ ವಾಹನಗಳನ್ನು ಹೊಂದಿರುವ ಚಾಲಕರಿಗೆ ಈ ನವೀಕರಣಗಳು ವಿಶೇಷವಾಗಿ ಮುಖ್ಯವಾಗಿದೆ. ಆಗಸ್ಟ್ 1 ಮತ್ತು ಅಕ್ಟೋಬರ್ 31ರ ಗಡುವಿನೊಳಗೆ ಫಾಸ್ಟ್ ಟ್ಯಾಗ್ ಸೇವೆಗಳನ್ನು ಒದಗಿಸುವ ಕಂಪೆನಿಗಳು ಮೂರು ಮತ್ತು ಐದು ವರ್ಷಗಳ ಹಿಂದೆ ನೀಡಲಾದ ಎಲ್ಲಾ ಫಾಸ್ಟ್‌ಟ್ಯಾಗ್‌ಗಳಿಗೆ ಕೆವೈಸಿ ಅನ್ನು ಪೂರ್ಣಗೊಳಿಸಬೇಕಾಗುತ್ತದೆ. ಈ ಗಡುವುಗಳನ್ನು ತಪ್ಪಿಸಿಕೊಂಡರೆ ಮುಂದೆ ಹಲವು ತೊಂದರೆಗಳನ್ನು ಎದುರಿಸಬೇಕಾಗಬಹುದು.

ಹೊಸ ನಿಯಮಗಳು ಆಗಸ್ಟ್ 1ರಿಂದ ಎಲ್ಲಾ ಫಾಸ್ಟ್‌ಟ್ಯಾಗ್‌ಗಳನ್ನು ವಾಹನದ ನೋಂದಣಿ ಸಂಖ್ಯೆ ಮತ್ತು ಚಾಸಿಸ್ ಸಂಖ್ಯೆಗೆ ಲಿಂಕ್ ಮಾಡಬೇಕು ಎಂಬ ಷರತ್ತು ವಿಧಿಸಲಾಗಿದೆ.

ಹೊಸ ವಾಹನ ಮಾಲೀಕರು ವಾಹನವನ್ನು ಖರೀದಿಸಿದ 90 ದಿನಗಳಲ್ಲಿ ತಮ್ಮ ನೋಂದಣಿ ಸಂಖ್ಯೆಯನ್ನು ನವೀಕರಿಸಬೇಕು. ಫಾಸ್ಟ್‌ಟ್ಯಾಗ್ ಪೂರೈಕೆದಾರರು ತಮ್ಮ ಡೇಟಾಬೇಸ್‌ಗಳು ನಿಖರ ಮತ್ತು ಪ್ರಸ್ತುತ ಎಂದು ಖಚಿತಪಡಿಸಿಕೊಳ್ಳಲು ಅಗತ್ಯವಿದೆ. ಇದು ಎಲ್ಲಾ ವಿವರಗಳನ್ನು ಪರಿಶೀಲಿಸುವುದು ಮತ್ತು ನವೀಕರಿಸುವುದನ್ನು ಒಳಗೊಂಡಿರುತ್ತದೆ.

ಈ ಬದಲಾವಣೆಗಳ ಜೊತೆಗೆ ಸುಲಭವಾಗಿ ಗುರುತಿಸಲು ಅನುಕೂಲವಾಗುವಂತೆ ವಾಹನದ ಮುಂಭಾಗ ಮತ್ತು ಬದಿಯ ಸ್ಪಷ್ಟ ಫೋಟೋಗಳನ್ನು ಅಪ್‌ಲೋಡ್ ಮಾಡಬೇಕು. ಸುಗಮ ಸಂವಹನ ಮತ್ತು ನವೀಕರಣಗಳನ್ನು ಖಚಿತಪಡಿಸಿಕೊಳ್ಳಲು ಪ್ರತಿ ಫಾಸ್ಟ್‌ಟ್ಯಾಗ್ ಅನ್ನು ಮೊಬೈಲ್ ಸಂಖ್ಯೆಯೊಂದಿಗೆ ಲಿಂಕ್ ಮಾಡಬೇಕು.

ಇದನ್ನೂ ಓದಿ: New Toll System: ಫಾಸ್ಟ್‌ ಟ್ಯಾಗ್‌ಗೂ ಉಪಗ್ರಹ ಆಧರಿತ ಟೋಲ್‌ ಸಂಗ್ರಹಕ್ಕೂ ಏನು ವ್ಯತ್ಯಾಸ? ಏನು ಪ್ರಯೋಜನ?

ನಿಯಮ ಏನಿದೆ?

5 ವರ್ಷಕ್ಕಿಂತ ಹಳೆಯದಾದ ಫಾಸ್ಟ್‌ಟ್ಯಾಗ್‌ಗಳನ್ನು ಬದಲಾಯಿಸಬೇಕು.

3 ವರ್ಷಗಳ ಹಿಂದೆ ನೀಡಲಾದ ಫಾಸ್ಟ್‌ಟ್ಯಾಗ್‌ಗಳಿಗೆ ಕೆವೈಸಿ ಅನ್ನು ನವೀಕರಿಸಬೇಕು.

ವಾಹನ ನೋಂದಣಿ ಸಂಖ್ಯೆ ಮತ್ತು ಚಾಸಿಸ್ ಸಂಖ್ಯೆಯನ್ನು ಫಾಸ್ಟ್‌ಟ್ಯಾಗ್‌ನೊಂದಿಗೆ ಲಿಂಕ್ ಮಾಡಬೇಕು.

ಹೊಸ ವಾಹನವನ್ನು ಖರೀದಿಸಿದ 90 ದಿನಗಳಲ್ಲಿ ನೋಂದಣಿ ಸಂಖ್ಯೆಯನ್ನು ನವೀಕರಿಸಬೇಕು.

ಫಾಸ್ಟ್ ಟ್ಯಾಗ್ ಪೂರೈಕೆದಾರರು ತಮ್ಮ ಡೇಟಾಬೇಸ್‌ಗಳನ್ನು ಪರಿಶೀಲಿಸಬೇಕು.

ಕಾರಿನ ಮುಂಭಾಗ ಮತ್ತು ಬದಿಯ ಸ್ಪಷ್ಟ ಫೋಟೋಗಳನ್ನು ಅಪ್‌ಲೋಡ್ ಮಾಡಬೇಕು.

ಫಾಸ್ಟ್ ಟ್ಯಾಗ್ ಅನ್ನು ಮೊಬೈಲ್ ಸಂಖ್ಯೆಗೆ ಲಿಂಕ್ ಮಾಡಬೇಕು.

Continue Reading

Latest

Viral Video: ಮಹಿಳೆಯ ಎದೆ, ಕುತ್ತಿಗೆಗೆ ಭೀಕರವಾಗಿ ತಿವಿದ ಬೀದಿ ಹಸು; ಮೈ ನಡುಗಿಸುವ ವಿಡಿಯೊ

Viral Video: ಬೀದಿಯಲ್ಲಿ ಹಸುಗಳು ಮಹಿಳೆಯ ಮೇಲೆ ಕ್ರೂರವಾಗಿ ದಾಳಿ ಮಾಡುವುದನ್ನು ವಿಡಿಯೊದಲ್ಲಿ ಸೆರೆಹಿಡಿಯಲಾಗಿದೆ. ವೈರಲ್ ಆಗಿರುವ ಈ ವಿಡಿಯೊದಲ್ಲಿ, ಬೀದಿ ದನಗಳ ಗುಂಪು ಮಹಿಳೆಯ ಮೇಲೆ ದಾಳಿ ಮಾಡಿದೆ. ಹಸುವೊಂದು ಮಹಿಳೆಯ ಎದೆ ಹಾಗೂ ಕುತ್ತಿಗೆಗೆ ತೀವ್ರವಾಗಿ ತಿವಿದಿದೆ. ಕಾಲಿನಿಂದ ತುಳಿದು ತುಳಿದು ಘಾಸಿಗೊಳಿಸಿದೆ. ಈ ವಿಡಿಯೊ ಆತಂಕ ಮೂಡಿಸುತ್ತದೆ.

VISTARANEWS.COM


on

Viral Video
Koo


ಇತ್ತೀಚಿನ ದಿನಗಳಲ್ಲಿ ಪ್ರಾಣಿಗಳು ಮನುಷ್ಯರ ಮೇಲೆ ದಾಳಿ ಮಾಡುವಂತಹ ಘಟನೆಗಳು ಹೆಚ್ಚು ಕಂಡುಬರುತ್ತಿದೆ. ಸಾಧು ಪ್ರಾಣಿಗಳಾದ ಹಸು, ಎಮ್ಮೆಗಳು ಕ್ರೂರ ಪ್ರಾಣಿಗಳಂತೆ ವರ್ತಿಸಲು ಶುರು ಮಾಡಿವೆ. ಎಲ್ಲೆಂದರಲ್ಲಿ ಜನರನ್ನು ಅಟ್ಟಾಡಿಸಿಕೊಂಡು ದಾಳಿ ಮಾಡುತ್ತಿವೆ. ಇದೀಗ ಅಂತಹದೊಂದು ಆಘಾತಕಾರಿ ಘಟನೆ ಹರಿಯಾಣದ ಕುರುಕ್ಷೇತ್ರದಲ್ಲಿ ನಡೆದಿದ್ದು, ಬೀದಿ ಹಸುವಿನ ದಾಳಿಗೆ ಮಹಿಳೆಯೊಬ್ಬರು ತುತ್ತಾಗಿ ಭೀಕರವಾಗಿ ಗಾಯಗೊಂಡಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ (Viral Video) ಹರಿದಾಡುತ್ತಿದೆ.

ಬೀದಿಯಲ್ಲಿ ಹಸುಗಳು ಮಹಿಳೆಯ ಮೇಲೆ ಕ್ರೂರವಾಗಿ ದಾಳಿ ಮಾಡುವುದನ್ನು ವಿಡಿಯೊದಲ್ಲಿ ಸೆರೆಹಿಡಿಯಲಾಗಿದೆ. ವೈರಲ್ ಆಗಿರುವ ಈ ವಿಡಿಯೊದಲ್ಲಿ, ಬೀದಿ ಹಸುಗಳ ಗುಂಪು ಮಹಿಳೆಯ ಮೇಲೆ ದಾಳಿ ಮಾಡಿದೆ. ಹಸುವೊಂದು ಮಹಿಳೆಯ ಎದೆ ಹಾಗೂ ಕುತ್ತಿಗೆಗೆ ತಿವಿದಿದೆ. ಕಾಲಿನಿಂದ ತುಳಿದು ತುಳಿದು ಘಾಸಿಗೊಳಿಸಿದೆ. ಹಲವಾರು ಜನರು ಮಹಿಳೆಯನ್ನು ಉಳಿಸಲು ಪ್ರಯತ್ನಿಸಿದರು. ಆದರೆ ದನಗಳು ಮಾತ್ರ ತಮ್ಮ ಕೃತ್ಯವನ್ನು ನಿಲ್ಲಿಸಲಿಲ್ಲ. ಇದರ ಪರಿಣಾಮವಾಗಿ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಸು ಮಹಿಳೆಯನ್ನು ತಿವಿದ ಭಯಾನಕ ದೃಶ್ಯದ ಬಗ್ಗೆ ಹಾಗೂ ಇದರ ಪರಿಣಾಮ ಮಹಿಳೆಯ ಎದೆ ಮತ್ತು ಗಂಟಲು ಹರಿದುಹಾಕಿರುವ ಬಗ್ಗೆ ಪ್ರತ್ಯಕ್ಷದರ್ಶಿಗಳು ವಿವರಿಸಿದಾಗ ಎಂಥವರಿಗೂ ಮೈ ಜುಮ್ಮೆನಿಸುತ್ತದೆ.

ಈ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಭವಿಷ್ಯದಲ್ಲಿ ಇದೇ ರೀತಿಯ ದುರಂತಗಳು ನಡೆಯದಂತೆ ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಜನಾಗ್ರಹ ಕೇಳಿ ಬಂದಿದೆ. ಆದರೆ ಕುರುಕ್ಷೇತ್ರದ ಅಧಿಕಾರಿಗಳು ಘಟನೆಗೆ ಸಂಬಂಧಿಸಿದಂತೆ ಇನ್ನೂ ಕಠಿಣ ಕ್ರಮ ಕೈಗೊಂಡಿಲ್ಲ.

ಇದನ್ನೂ ಓದಿ: 1 ಸಾವಿರ ರೂ. ಲಂಚ ಪ್ರಕರಣ 25 ವರ್ಷಗಳ ಬಳಿಕ ಇತ್ಯರ್ಥ! ಹಿಂಗಾಂದ್ರೆ ಹೆಂಗೆ ಅಂತಿದ್ದಾರೆ ಜನ!

ಈ ಘಟನೆಗೆ ಸಂಬಂಧಿಸಿದಂತೆ ನಗರ ಪ್ರದೇಶಗಳಲ್ಲಿ ಆಕ್ರಮಣಕಾರಿ ಪ್ರಾಣಿಗಳ ಅನಿಯಂತ್ರಿತ ಉಪಸ್ಥಿತಿಯ ಬಗ್ಗೆ ಸಂಬಂಧಪಟ್ಟ ನಾಗರಿಕರು ಮತ್ತು ಸ್ಥಳೀಯ ನಿವಾಸಿಗಳು ಆಕ್ರೋಶ ಮತ್ತು ಭಯವನ್ನು ವ್ಯಕ್ತಪಡಿಸಿದ್ದಾರೆ. ಈ ಘಟನೆಯು ಕುರುಕ್ಷೇತ್ರದಲ್ಲಿ ಬೀದಿ ಪ್ರಾಣಿಗಳ ಸಮಸ್ಯೆಯನ್ನು ಪರಿಹರಿಸಲು ಅಧಿಕಾರಿಗಳಿಂದ ತುರ್ತು ಕ್ರಮ ಅಗತ್ಯವಿದೆ ಎಂಬುದನ್ನು ತಿಳಿಸುತ್ತದೆ.

Continue Reading

Latest

Viral Video: ಕೆಸರು ಗದ್ದೆಯಲ್ಲಿ ಹೊರಳಾಡಿದ ದಂಪತಿ; ವೈರಲ್ ಆಯ್ತು ಇವರಿಬ್ಬರ ನಾಗಿನಿ ಡ್ಯಾನ್ಸ್‌!

Viral Video: ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಈ ವಿಡಿಯೊದಲ್ಲಿ, ದಂಪತಿ ನೀರಿನಿಂದ ತುಂಬಿರುವ ಹೊಲದಲ್ಲಿ ಹಾವಿನಂತೆ ನೃತ್ಯ ಮಾಡಿದ್ದಾರೆ. ಅವರಿಬ್ಬರು ಹೊಲದಲ್ಲಿನ ಕೆಸರಿನಲ್ಲಿ ಮಲಗಿಕೊಂಡು, ನಂತರ ನಿಂತು ಹಾವಿನಂತೆ ಹೊರಳಾಡಿದ್ದಾರೆ. ಇಲ್ಲಿ ಮಹಿಳೆ ರೊಮ್ಯಾಂಟಿಕ್ ಭಂಗಿಯಲ್ಲಿ ಕುಣಿದಿದ್ದಾಳೆ. ಇನ್ನು ಹೊಲದಲ್ಲಿ ಕೆಸರೇ ತುಂಬಿರುವುದರಿಂದ ದಂಪತಿಯ ಬಟ್ಟೆ, ಮೈ ಕೇಸರಿನಿಂದ ಬಳಿದುಕೊಂಡಿದೆ. ಈ ದೃಶ್ಯವು ಅನೇಕ ವೀಕ್ಷಕರನ್ನು ರಂಜಿಸಿದೆ!

VISTARANEWS.COM


on

Viral Video
Koo


ಜನರು ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಲು ಹಲವು ಬಗೆಯ ರೀಲ್ಸ್‌ಗಳನ್ನ ಮಾಡಿ ಹರಿಬಿಡುತ್ತಾರೆ. ಈ ರೀಲ್ಸ್ ಮೂಲಕ ಅನೇಕ ಪ್ರತಿಭೆಗಳು ಹೊರಗೆ ಬರುತ್ತವೆ. ಇದೀಗ ದಂಪತಿಯ ಅಂತಹದೊಂದು ಪ್ರತಿಭೆ ಹೊರಗೆ ಬಂದಿದೆ. ಇನ್ನೇನು ನಾಗರ ಪಂಚಮಿ ಹಬ್ಬ ಹತ್ತಿರ ಬರುತ್ತಿದೆ. ಜನರು ನಾಗದೇವರನ್ನು ನೆನೆದು ದೇವರಿಗೆ ಪೂಜೆ ಸಲ್ಲಿಸಲಿದ್ದಾರೆ. ಈ ಸಮಯದಲ್ಲಿ ಇದೀಗ ದಂಪತಿ ನಾಗಿನಿ ಡ್ಯಾನ್ಸ್ ಮೂಲಕ ಜನರಿಗೆ ನಾಗದೇವರ ದರ್ಶನ ನೀಡಿದ್ದಾರೆ. ಅವರ ಡ್ಯಾನ್ಸ್ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ (Viral Video) ಆಗಿದೆ. ಅವರ ಡ್ಯಾನ್ಸ್ ವೀಕ್ಷಕರ ಮುಖದಲ್ಲಿ ನಗುವನ್ನು ಮೂಡಿಸಿದೆ.

ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಈ ವಿಡಿಯೊದಲ್ಲಿ, ದಂಪತಿ ನೀರಿನಿಂದ ತುಂಬಿರುವ ಹೊಲದಲ್ಲಿ ಹಾವಿನಂತಹ ಚಲನೆಗಳಿಂದ ಸ್ಫೂರ್ತಿ ಪಡೆದ ನಾಗಿನ್ ಡ್ಯಾನ್ಸ್ ಅನ್ನು ಪ್ರದರ್ಶಿಸಿದ್ದಾರೆ. ಅವರಿಬ್ಬರು ಹೊಲದಲ್ಲಿನ ಕೆಸರಿನಲ್ಲಿ ಮಲಗಿಕೊಂಡು, ನಂತರ ನಿಂತು ಹಾವಿನಂತೆ ಬಳಕುತ್ತಾ ನೃತ್ಯ ಮಾಡಿದ್ದಾರೆ. ಇಲ್ಲಿ ಮಹಿಳೆ ರೊಮ್ಯಾಂಟಿಕ್ ಭಂಗಿಗಳನ್ನು ನೀಡಿದ್ದಾಳೆ. ಆ ಹೊಲದಲ್ಲಿ ಕೆಸರೇ ತುಂಬಿರುವುದರಿಂದ ದಂಪತಿಯ ಬಟ್ಟೆ, ಮೈ ಕೇಸರಿನಿಂದ ಬಳಿದುಕೊಂಡಿದೆ. ಈ ದೃಶ್ಯವು ಅನೇಕ ವೀಕ್ಷಕರನ್ನು ರಂಜಿಸಿದೆ ಮತ್ತು ಗೊಂದಲಕ್ಕೀಡು ಮಾಡಿದೆ.

ವಿನಯ್ ವಿಕೆ 9351 ಎಂಬ ಬಳಕೆದಾರರು ಯೂಟ್ಯೂಬ್‍ನಲ್ಲಿ ಹಂಚಿಕೊಂಡಿರುವ ಈ ವಿಡಿಯೊ ಶೀಘ್ರದಲ್ಲೇ ವೈರಲ್ ಆಗಿದ್ದು, ಸಾವಿರಾರು ವೀಕ್ಷಣೆಗಳನ್ನು ಗಳಿಸಿದೆ ಮತ್ತು ಅನೇಕರು ಕಾಮೆಂಟ್‌ಗಳನ್ನು ಮಾಡಿದ್ದಾರೆ. “ಲೈಕ್‌ಗಳು ಮತ್ತು ವೀಕ್ಷಣೆಗಳ ಹಸಿವು ಜನರನ್ನು ಹುಚ್ಚರನ್ನಾಗಿ ಮಾಡುತ್ತಿದೆ” ಎಂದು ಒಬ್ಬ ವೀಕ್ಷಕರು ಕಾಮೆಂಟ್ ಮಾಡಿದರೆ, ಇನ್ನೊಬ್ಬರು “ನಾಗಿನ್ ಈ ರೀತಿ ನೃತ್ಯ ಮಾಡುತ್ತಾರೆಯೇ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: 1 ಸಾವಿರ ರೂ. ಲಂಚ ಪ್ರಕರಣ 25 ವರ್ಷಗಳ ಬಳಿಕ ಇತ್ಯರ್ಥ! ಹಿಂಗಾಂದ್ರೆ ಹೆಂಗೆ ಅಂತಿದ್ದಾರೆ ಜನ!

ಸಾಮಾನ್ಯವಾಗಿ ಜನರು ಕೆಸರು ಕಾಲಿಗೆ ತಗುಲಿದರೆ ಅದನ್ನು ಕಂಡು ಅಸಹ್ಯಪಟ್ಟುಕೊಂಡು ಬೇಗನೆ ಹೋಗಿ ಸ್ವಚ್ಛಗೊಳಿಸಿಕೊಳ್ಳುತ್ತಾರೆ. ಅಂತಹದರಲ್ಲಿ ಈ ದಂಪತಿ ಕೆಸರು ಗದ್ದೆಯಲ್ಲೇ ಬಿದ್ದು ಉರುಳಾಡುತ್ತಿದ್ದಾರೆ. ಇದನ್ನು ನೋಡಿದರೆ ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಲು ಜನರು ಎಷ್ಟು ದೂರ ಹೋಗುತ್ತಾರೆ ಮತ್ತು ಯಾವ ಕೆಲಸಕ್ಕೂ ಮುಂದಾಗುತ್ತಾರೆ ಎಂಬುದನ್ನು ಎತ್ತಿ ತೋರಿಸುತ್ತದೆ. ಕೆಲವು ವೀಕ್ಷಕರು ವಿಡಿಯೊವನ್ನು ಮನರಂಜನೆಯಾಗಿ ಕಂಡುಕೊಂಡರೆ, ಇತರರು ಆನ್‍ಲೈನ್‍ ಖ್ಯಾತಿಯಗಾಗಿ ಜನರು ಎಷ್ಟು ದೂರ ಹೋಗಬಹುದು ಎಂಬ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

Continue Reading
Advertisement
Wayanad Landslide
ದೇಶ29 mins ago

Wayanad Landslide: ವಯನಾಡು ಈಗ ಸಾವಿನ ಮನೆ: ಮೃತರ ಸಂಖ್ಯೆ 240, 160 ಶವ ಪತ್ತೆ, 220 ಜನ ಮಿಸ್ಸಿಂಗ್; ಭೀಕರ ಚಿತ್ರಣ ಇಲ್ಲಿದೆ

Sexual Abuse
Latest57 mins ago

Sexual Abuse: ಕ್ಲಾಸ್‌ಗೆ ಹೋಗಲು ಆಟೊ ಹತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ; ಚಾಲಕ ಮೊಹಮ್ಮದ್‌ ಬಂಧನ

Karnataka Rain
ಕರ್ನಾಟಕ59 mins ago

Karnataka Rain: ಭದ್ರಾ ನದಿಯ ಆರ್ಭಟಕ್ಕೆ ಬಾಳೆಹೊನ್ನೂರು ಮುಳುಗಡೆ; ನದಿ ತಟದ ಸಂತೆ, ಮನೆ, ಅಂಗಡಿಗಳಿಗೆ ಜಲ ದಿಗ್ಬಂಧನ

FASTag new rule
ತಂತ್ರಜ್ಞಾನ1 hour ago

FASTag new rule: ಫಾಸ್ಟ್‌ಟ್ಯಾಗ್‌ ಬಳಕೆದಾರರೇ ಗಮನಿಸಿ; ನಾಳೆಯಿಂದ ಹೊಸ ನಿಯಮ ಜಾರಿ!

Koti Koti Rokka Galisi kannada song released
ಕರ್ನಾಟಕ1 hour ago

Kannada New Song: ಹೂಡಿ ಚಿನ್ನಿ ಕಂಠಸಿರಿಯಲ್ಲಿ ಮೂಡಿಬಂದ ʼಕೋಟಿ ಕೋಟಿ ರೊಕ್ಕ ಗಳಿಸಿʼ ಹಾಡು ರಿಲೀಸ್‌

Paris Olympics Archery
ಕ್ರೀಡೆ1 hour ago

Paris Olympics Archery: ಪ್ರೀ-ಕ್ವಾರ್ಟರ್‌ ಫೈನಲ್​ಗೇರಿದ ದೀಪಿಕಾ ಕುಮಾರಿ

ITR Filing
ವಾಣಿಜ್ಯ1 hour ago

ITR Filing: ಐಟಿ ರಿಟರ್ನ್ಸ್‌ ಗಡುವು ವಿಸ್ತರಣೆ ಇಲ್ಲ, ಕೊನೇ ಕ್ಷಣದಲ್ಲಿ ಪೋರ್ಟಲ್‌ ಕ್ರ್ಯಾಶ್;‌ ಇನ್ಫೋಸಿಸ್‌ ವಿರುದ್ಧ ಆಕ್ರೋಶ!

Gunfire On School
Latest2 hours ago

Gunfire On School: ಶಾಲೆಯೊಳಗೆ ಗನ್‌ ತಂದು 10 ವರ್ಷದ ಹುಡುಗನಿಗೆ ಗುಂಡು ಹಾರಿಸಿದ 5 ವರ್ಷದ ಬಾಲಕ!

Ibbani Thabbida Ileyali movie Helu Gelati song released
ಕರ್ನಾಟಕ2 hours ago

Kannada New Movie: ರೆಟ್ರೋ ಸ್ಟೈಲ್‌ನಲ್ಲಿ ಮೂಡಿಬಂದ ʼಹೇಳು ಗೆಳತಿʼ; ಚರಣ್‌ರಾಜ್ ಕಂಠಸಿರಿಗೆ ಕೇಳುಗರು ಫಿದಾ

Ashwini Ponnappa
ಕ್ರೀಡೆ2 hours ago

Ashwini Ponnappa: ‘ಇದು ನನ್ನ ಕೊನೆಯ ಒಲಿಂಪಿಕ್ಸ್​’; ನಿವೃತ್ತಿ ಘೋಷಿಸಿದ ಶಟ್ಲರ್​ ಅಶ್ವಿನಿ ಪೊನ್ನಪ್ಪ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 day ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ2 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ2 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ2 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ3 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ3 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ3 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ3 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌