Hit and Run Case: ಮೈನಡುಗಿಸುವ ಆಕ್ಸಿಡೆಂಟ್ ವಿಡಿಯೊ; ಸೈಕಲ್‌ ಸವಾರನ ಜೀವ ತೆಗೆದ ಬಸ್‌ - Vistara News

Latest

Hit and Run Case: ಮೈನಡುಗಿಸುವ ಆಕ್ಸಿಡೆಂಟ್ ವಿಡಿಯೊ; ಸೈಕಲ್‌ ಸವಾರನ ಜೀವ ತೆಗೆದ ಬಸ್‌

Hit and Run Case: ಮಹಾರಾಷ್ಟ್ರದ ನಾಗ್ಪುರದಲ್ಲಿ ವೇಗವಾಗಿ ಚಲಿಸುತ್ತಿದ್ದ ಬಸ್‌ವೊಂದು ಸೈಕಲ್‌ನಲ್ಲಿ ಹೋಗುತ್ತಿದ್ದ 60 ವರ್ಷದ ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದಿದೆ. ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಕಾರಣ ಅವರ ಸೈಕಲ್ ತಿರುಗುತ್ತಾ ಬಸ್ಸಿನ ಹಿಂಭಾಗದ ಚಕ್ರಗಳ ಅಡಿಯಲ್ಲಿ ಸಿಕ್ಕಿದೆ. ಇದರ ಪರಿಣಾಮ ಅವರು ಚಕ್ರದ ಅಡಿಭಾಗಕ್ಕೆ ಸಿಲುಕಿಕೊಂಡು ಭೀಕರವಾಗಿ ಗಾಯಗೊಂಡಿದ್ದರು.

VISTARANEWS.COM


on

Hit and Run Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo


ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳು ಹೆಚ್ಚು ಸಂಭವಿಸುತ್ತಿರುತ್ತದೆ. ಡಬಲ್‌ ರೋಡ್‌ ಆದ ನಂತರವಂತೂ ವಾಹನಗಳ ಸ್ಪೀಡ್‌ಗೆ ಬ್ರೇಕ್ ಇಲ್ಲದಂತಾಗಿದೆ. ತಮ್ಮ ಎದುರಿಗಿದ್ದವರನ್ನು ಗುದ್ದಿಕೊಂಡು ಹೋಗುವಷ್ಟು ಸ್ಪೀಡ್‌ನಲ್ಲಿ ಇರುತ್ತಾರೆ. ಇದರಿಂದ ಅನೇಕರು ಸಾವನಪ್ಪಿದ್ದಾರೆ ಕೂಡ. ಇದೀಗ ಮಹಾರಾಷ್ಟ್ರದಲ್ಲಿ ಇಂಥದೊಂದು ಘೋರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Hit and Run Case) ಆಗಿದೆ.

ಮಹಾರಾಷ್ಟ್ರದ ನಾಗ್ಪುರದಲ್ಲಿ ಸೋಮವಾರ ವೇಗವಾಗಿ ಚಲಿಸುತ್ತಿದ್ದ ಬಸ್‌ವೊಂದು ಸೈಕಲ್‌ನಲ್ಲಿ ಹೋಗುತ್ತಿದ್ದ 60 ವರ್ಷದ ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ ಘಟನೆ ನಡೆದಿದೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಡಿಕ್ಕಿ ಹೊಡೆದ ಬಸ್ ಚಾಲಕ ಪರಾರಿಯಾಗಿದ್ದಾನೆ. ನಾಗ್ಪುರದ ರಘುಜಿ ನಗರ ಪ್ರದೇಶದಲ್ಲಿ ಬೆಳಗ್ಗೆ 8.38ಕ್ಕೆ ಈ ಅಪಘಾತ ಸಂಭವಿಸಿದೆ ಎಂಬುದಾಗಿ ತಿಳಿದುಬಂದಿದೆ.

ರತ್ನಾಕರ್ ದೀಕ್ಷಿತ್ (60) ಸಾವನಪ್ಪಿದ ವ್ಯಕ್ತಿ. ವಿಡಿಯೊದಲ್ಲಿ ರತ್ನಾಕರ್ ದೀಕ್ಷಿತ್ ಅವರು ತಮ್ಮ ಸೈಕಲ್‍ನಲ್ಲಿ ಜನನಿಬಿಡ ರಸ್ತೆಯ ಬದಿಯಲ್ಲಿ ಹೋಗುತ್ತಿದ್ದಾಗ ಬಸ್ ಅವರ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಅವರ ಸೈಕಲ್ ತಿರುಗುತ್ತಾ ಬಸ್ಸಿನ ಹಿಂಭಾಗದ ಚಕ್ರಗಳ ಅಡಿಯಲ್ಲಿ ಬಂದ ಪರಿಣಾಮ ಅವರು ಚಕ್ರದ ಅಡಿಭಾಗಕ್ಕೆ ಸಿಲುಕಿಕೊಂಡಿದ್ದಾರೆ.

ಅಪಘಾತದ ನಂತರ, ಬಸ್ ಚಾಲಕ ಗಾಯಗೊಂಡ ವ್ಯಕ್ತಿಯನ್ನು ಅಲ್ಲಿಯೇ ಬಿಟ್ಟು ಬಸ್‍ನ ಜೊತೆಗೆ ಸ್ಥಳದಿಂದ ಪರಾರಿಯಾಗಿದ್ದಾನೆ. ನಂತರ ಸ್ಥಳೀಯರು ಗಾಯಗೊಂಡ ರತ್ನಾಕರ್ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಅವರು ಆಸ್ಪತ್ರೆಯಲ್ಲಿ ನಿಧನರಾದರು ಎನ್ನಲಾಗಿದೆ. ಇಡೀ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾದ ಕಾರಣ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸಿ ಬಸ್ ಅನ್ನು ಗುರುತಿಸಿದ್ದು, ಬಸ್ ಚಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಮುಂಬೈನ ವರ್ಲಿಯಲ್ಲಿ ಶಿವಸೇನೆ ನಾಯಕನ ಮಗ ತನ್ನ ತಂದೆಯ ಬಿಎಂಡಬ್ಲ್ಯೂ ಕಾರಿನಿಂದ ಡಿಕ್ಕಿ ಹೊಡೆದು ಮೀನುಗಾರ ಮಹಿಳೆಯನ್ನು ಕೊಂದ ಕೆಲವು ದಿನಗಳ ನಂತರ ಈ ವಿಡಿಯೊ ಬಂದಿದೆ.

Hit and Run Case

ಶಿವಸೇನೆ ಉಪ ನಾಯಕ ರಾಜೇಶ್ ಶಾ ಅವರ ಪುತ್ರ ಮಿಹಿರ್ ಶಾ ಜುಹುನಲ್ಲಿ ನಡೆದ ಪಾರ್ಟಿಯಲ್ಲಿ ಭಾಗವಹಿಸಿ ಡ್ರಿಂಕ್ಸ್ ಮಾಡಿ ತನ್ನ ತಂದೆಯ ಬಿಎಂಡಬ್ಲ್ಯೂ ಕಾರಿನಲ್ಲಿ ವೇಗವಾಗಿ ಚಲಿಸುತ್ತಿದ್ದ ಕಾರಣ ವರ್ಲಿಯ ಅಟ್ರಿಯಾ ಮಾಲ್ ಬಳಿ ಮೀನುಗಾರ ಮಹಿಳೆ ಕಾವೇರಿ ತನ್ನ ಪತಿ ಪ್ರದೀಪ್ ನಖ್ವಾ ಅವರ ಜೊತೆ ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ. ಇದೀಗ ಆತನನ್ನು ಬಂಧಿಸಲಾಗಿದೆ.

ಇದನ್ನೂ ಓದಿ:ಪ.ಬಂಗಾಳದಲ್ಲಿ ಮತ್ತೊಬ್ಬ ಮಹಿಳೆ ಮೇಲೆ ಬರ್ಬರ ಹಲ್ಲೆ; ರಾಹುಲ್ ಗಾಂಧಿ, ಮಮತಾ ಬ್ಯಾನರ್ಜಿ‌ ಮೇಲೆ ಕಿಡಿಕಾರಿದ ಜನ

ಹಾನಿಗೊಳಗಾದ ಕಾರನ್ನು ಅಪಘಾತದ ಸ್ಥಳದಿಂದ ಸುಮಾರು 10 ಕಿ.ಮೀ ದೂರದಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆದರೆ ಆರೋಪಿ ಪತ್ತೆಯಾಗದ ಹಿನ್ನೆಲೆಯಲ್ಲಿ ಶಿವಸೇನೆ ಉಪ ನಾಯಕ ರಾಜೇಶ್ ಶಾ ಅವರ ಪುತ್ರ ಮಿಹಿರ್ ಶಾ ವಿರುದ್ಧ ಮುಂಬೈ ಪೊಲೀಸರು ಲುಕ್ ಔಟ್ ಸುತ್ತೋಲೆ (ಎಲ್ ಒಸಿ) ಹೊರಡಿಸಿದ್ದರು. ವಿಚಾರಣೆಯ ನಂತರ ಅವರ ತಂದೆ ರಾಜೇಶ್ ಶಾ ಮತ್ತು ಕುಟುಂಬ ಚಾಲಕ ರಾಜೇಂದ್ರ ಸಿಂಗ್ ಬಿಡಾವತ್ ಅವರನ್ನು ಬಂಧಿಸಿದ್ದರು. ರಾಜೇಶ್‌ ಶಾ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಗ್ಯಾಜೆಟ್ಸ್

SIM Cards: ಮಿತಿ ಮೀರಿ ಮೊಬೈಲ್‌ ಸಿಮ್ ಹೊಂದಿದ್ದೀರಾ? ಕಾದಿದೆ ಭಾರಿ ದಂಡ, ಶಿಕ್ಷೆ!

ಒಬ್ಬರ ಹೆಸರಿನಲ್ಲಿ ಹಲವಾರು ಸಿಮ್ ಕಾರ್ಡ್‌ಗಳನ್ನು (SIM Cards) ಹೊಂದಿರುವುದು ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು. ಈ ನಿಟ್ಟಿನಲ್ಲಿ ಟೆಲಿಕಾಂ ಕಾನೂನುಗಳು ನಿಗದಿಪಡಿಸಿದ ಮಿತಿಯನ್ನು ಮೀರಿದರೆ ಭಾರೀ ದಂಡವನ್ನು ಎದುರಿಸಬೇಕಾಗಬಹುದು. ನಮ್ಮ ಹೆಸರಿನಲ್ಲಿ ಇರುವ ಸಿಮ್‌ ಕಾರ್ಡ್‌ಗಳನ್ನು ಪತ್ತೆ ಹಚ್ಚುವುದು ಹೇಗೆ? ಇಲ್ಲಿದೆ ಉಪಯುಕ್ತ ಮಾಹಿತಿ.

VISTARANEWS.COM


on

By

SIM Cards
Koo

ನವದೆಹಲಿ: ಹಲವಾರು ಸಿಮ್ ಕಾರ್ಡ್‌ಗಳು ನಿಮ್ಮ (SIM Cards) ಹೆಸರಲ್ಲಿದೆಯೆ? ಹಾಗಿದ್ದರೆ ಎಚ್ಚರಿಕೆ (alert) ಸೂಚನೆ ಒಂದಿದೆ ಗಮನಿಸಿ. ಕಾನೂನು ಪ್ರಕಾರ ನಿಗದಿಪಡಿಸಿದ ಸಿಮ್‌ಗಿಂತ ಹೆಚ್ಚಿನ ಸಂಖ್ಯೆಯ ಸಿಮ್ ನಿಮ್ಮ ಬಳಿ ಇದ್ದರೆ ಭಾರಿ ದಂಡ (fine) ಜೊತೆಗೆ ಜೈಲು ಶಿಕ್ಷೆಗೂ ಗುರಿಯಾಗಬೇಕಾಬಹುದು. ನಿಮ್ಮ ಹೆಸರಲ್ಲಿ ಬೇರೆ ಯಾರೋ ಸಿಮ್‌ ಕಾರ್ಡ್‌ಗಳನ್ನು ಬಳಸುತ್ತಿದ್ದರೆ ಕೂಡಲೇ ಪತ್ತೆ ಹಚ್ಚಿ ಆದಷ್ಟು ಬೇಗ ನಿಷ್ಕ್ರಿಯಗೊಳಿಸಿ.

ಈಗಿನ ಡಿಜಿಟಲ್ ಯುಗದಲ್ಲಿ, ಗೌಪ್ಯತೆ ಮತ್ತು ಸುರಕ್ಷತೆಯನ್ನು ಕಾಪಾಡಿಕೊಳ್ಳುವುದು ಬಹುಮುಖ್ಯ. ಅದಕ್ಕಾಗಿ ವಿಶೇಷವಾಗಿ ಅನಧಿಕೃತ ಸಿಮ್ ಕಾರ್ಡ್ ವಿತರಣೆಯ ಬಗ್ಗೆ ಕಾಳಜಿಯೊಂದಿಗೆ ಮೊಬೈಲ್ ಸಂಪರ್ಕಗಳನ್ನು ಎಚ್ಚರಿಕೆಯಿಂದ ನಿರ್ವಹಿಸುವುದು ಕೂಡ ಮುಖ್ಯವಾಗಿದೆ. ಒಬ್ಬರ ಹೆಸರಿನಲ್ಲಿ ಹಲವಾರು ಸಿಮ್ ಕಾರ್ಡ್‌ಗಳನ್ನು ಹೊಂದಿರುವುದು ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು. ಈ ನಿಟ್ಟಿನಲ್ಲಿ ಟೆಲಿಕಾಂ ಕಾನೂನುಗಳು ನಿಗದಿಪಡಿಸಿದ ಮಿತಿಯನ್ನು ಮೀರಿದರೆ ಭಾರೀ ದಂಡವನ್ನು ಎದುರಿಸಬೇಕಾಗಬಹುದು.

ಏನು ಶಿಕ್ಷೆ?

2023ರ ದೂರಸಂಪರ್ಕ ಕಾಯ್ದೆಯ ಪ್ರಕಾರ, ಒಬ್ಬ ವ್ಯಕ್ತಿಯು ಎಷ್ಟು ಸಿಮ್ ಕಾರ್ಡ್‌ಗಳನ್ನು ಹೊಂದಬಹುದು ಎಂಬುದರ ಕುರಿತು ಕಟ್ಟುನಿಟ್ಟಾದ ನಿಯಮಗಳಿವೆ. ಈ ನಿಯಮಗಳನ್ನು ಉಲ್ಲಂಘಿಸುವುದು ಜೈಲು ಶಿಕ್ಷೆಗೆ ಕಾರಣವಾಗಬಹುದು. ಮೊದಲ ಅಪರಾಧಕ್ಕಾಗಿ 50,000 ರೂ. ವರೆಗೆ ದಂಡ ವಿಧಿಸಬಹುದು ಮತ್ತು ಅ ನಂತರದ ಅಪರಾಧಗಳಿಗೆ 2 ಲಕ್ಷ ರೂ. ದಂಡ ತೆರಬೇಕಾಗುತ್ತದೆ.

SIM Cards


ಗರಿಷ್ಠ ಎಷ್ಟು ಸಿಮ್ ಹೊಂದಿರಬಹುದು?

ಅನುಮತಿಸಲಾದ ಗರಿಷ್ಠ ಸಂಖ್ಯೆಯ ಸಿಮ್ ಕಾರ್ಡ್‌ಗಳು ಪ್ರದೇಶವಾರು ಬದಲಾಗುತ್ತವೆ. ರಾಷ್ಟ್ರೀಯವಾಗಿ ಪ್ರತಿ ವ್ಯಕ್ತಿಗೆ ಒಂಬತ್ತು ಸಿಮ್ ಕಾರ್ಡ್‌ಗಳ ಮಿತಿ ಇದೆ. ಆದರೆ ಜಮ್ಮು ಮತ್ತು ಕಾಶ್ಮೀರ, ಅಸ್ಸಾಂ ಮತ್ತು ಕೆಲವು ಈಶಾನ್ಯ ಪ್ರದೇಶಗಳಲ್ಲಿ ಇದು ಆರಕ್ಕೆ ಸೀಮಿತವಾಗಿದೆ.

ಸಿಮ್ ಕಾರ್ಡ್ ಮಾಲೀಕತ್ವದ ಪ್ರಸ್ತುತ ನಿಯಮಗಳ ಬಗ್ಗೆ ಮಾಹಿತಿ ನೀಡುವುದು ಮುಖ್ಯವಾಗಿದೆ ಮತ್ತು ಆನ್‌ಲೈನ್‌ನಲ್ಲಿ ನಿಮ್ಮ ಹೆಸರಿನಲ್ಲಿ ಎಷ್ಟು ಸಿಮ್ ಕಾರ್ಡ್‌ಗಳನ್ನು ನೋಂದಾಯಿಸಲಾಗಿದೆ ಎಂಬುದನ್ನು ನಿಯಮಿತವಾಗಿ ಪರಿಶೀಲಿಸುವುದು ಅಷ್ಟೇ ಅಗತ್ಯವಾಗಿದೆ.

ಹೇಗೆ ಪರಿಶೀಲಿಸುವುದು?

ಆಧಾರ್ ಕಾರ್ಡ್‌ಗೆ ನೀಡಲಾದ ಸಿಮ್ ಕಾರ್ಡ್‌ಗಳ ಸಂಖ್ಯೆಯನ್ನು ಆನ್‌ಲೈನ್ ಮೂಲಕ ನಾವೇ ಪರೀಕ್ಷಿಸಿಕೊಳ್ಳಬಹುದು. ಇದಕ್ಕಾಗಿ TAFCOP ವೆಬ್‌ಸೈಟ್‌ಗೆ ಭೇಟಿ ನೀಡಿ. ಬಳಿಕ ಅಲ್ಲಿ ಇರುವ ಬಾಕ್ಸ್ ನಲ್ಲಿ ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿ.

ಬಳಿಕ ಒದಗಿಸಲಾಗುವ ಕ್ಯಾಪ್ಚಾ ಕೋಡ್ ಅನ್ನು ನಮೂದಿಸಿ. ಅನಂತರ ಒಟಿಪಿ ಬಟನ್ ಕ್ಲಿಕ್ ಮಾಡಿ.
ಒಟಿಪಿ ನೀವು ನಮೂದಿಸಿರುವ ಮೊಬೈಲ್ ಸಂಖ್ಯೆಗೆ ಬರುತ್ತದೆ. ಅದನ್ನು ಬಳಿಕ ಅಲ್ಲಿ ನಮೂದಿಸಿ ಮತ್ತು ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿ.

ಇದನ್ನೂ ಓದಿ: BSNL New Plan: 395 ದಿನಗಳ ವ್ಯಾಲಿಡಿಟಿಯ ಬಿಎಸ್‌ಎನ್‌ಎಲ್ ಹೊಸ ಪ್ಲ್ಯಾನ್‌; ಜಿಯೊ, ಏರ್‌ಟೆಲ್‌ಗೆ ಸೆಡ್ಡು

ನಿಮ್ಮ ಹೆಸರಿನಲ್ಲಿ ನೋಂದಾಯಿಸಲಾಗಿರುವ ಮೊಬೈಲ್ ಸಂಖ್ಯೆಗಳ ಪಟ್ಟಿಯನ್ನು ಕಾಣಬಹುದು. ಎಲ್ಲಾ ಸಕ್ರಿಯ ಮೊಬೈಲ್ ಸಂಖ್ಯೆಗಳು ನಿಮಗೆ ಅಥವಾ ನಿಮ್ಮ ಸಂಬಂಧಿಕರಿಗೆ ಸೇರಿವೆ ಎಂಬುದನ್ನು ಪರಿಶೀಲಿಸಿ ಮತ್ತು ಖಚಿತಪಡಿಸಿಕೊಳ್ಳಿ.

ಯಾವುದೇ ಗುರುತಿಸದ ಸಂಖ್ಯೆಗಳನ್ನು ಕಂಡುಕೊಂಡರೆ, ವೆಬ್‌ಸೈಟ್ ಮೂರು ಆಯ್ಕೆಗಳನ್ನು ನೀಡುತ್ತದೆ. ನನ್ನ ಸಂಖ್ಯೆ ಅಲ್ಲ, ಅಗತ್ಯವಿಲ್ಲ ಮತ್ತು ಬೇಕಾಗಿದೆ. ಇದರಲ್ಲಿ ನಿಮ್ಮ ಅಗತ್ಯ ಯಾವುದು ಎಂಬುದನ್ನು ತಿಳಿಸಿ. ನನ್ನ ಸಂಖ್ಯೆ ಅಲ್ಲ ಅಥವಾ ಅಗತ್ಯವಿಲ್ಲ ಎಂಬುದನ್ನು ಕ್ಲಿಕ್ ಮಾಡಿದರೆ ನಿಮ್ಮ ಹೆಸರಿನಲ್ಲಿರುವ ಅನಗತ್ಯ ಸಿಮ್‌ಗಳು ನಿಷ್ಕ್ರಿಯಗೊಳ್ಳುತ್ತವೆ.

Continue Reading

ಫ್ಯಾಷನ್

Ananth Ambani Fashion: ಅನಂತ್‌ ಅಂಬಾನಿ ಬಳಿ ಇದೆ ಡೈಮಂಡ್‌ ಬ್ರೂಚ್‌ಗಳ ಕಲೆಕ್ಷನ್‌! ಇವುಗಳ ಮೌಲ್ಯ ಎಷ್ಟಿರಬಹುದು?

Ananth Ambani Fashion: ಅನಂತ್‌ ಅಂಬಾನಿಯವರಿಗೆ ಡೈಮಂಡ್‌ ಹಾಗೂ ಎಮರಾಲ್ಡ್‌ನ ಬ್ರೂಚ್‌ ಕಲೆಕ್ಷನ್‌ ಕ್ರೇಜ್‌ ಇದೆ! ಇದಕ್ಕೆ ಸಾಕ್ಷಿ ಎಂಬಂತೆ ಅವರ ಬಳಿ ನೂರಾರು ಕೋಟಿ ರೂ. ಬೆಲೆಬಾಳುವ ಹಲವಾರು ಬ್ರೂಚ್‌ಗಳಿವೆ. ಅವುಗಳಲ್ಲಿ ಒಂದಿಷ್ಟು ಬ್ರೂಚ್‌ಗಳ ಕುರಿತಂತೆ ಇಲ್ಲಿದೆ ಡಿಟೇಲ್ಸ್.

VISTARANEWS.COM


on

By

Ananth Ambani Fashion
Koo
ಶೀಲಾ ಸಿ. ಶೆಟ್ಟಿ, ಬೆಂಗಳೂರು

ಅನಂತ್‌ ಅಂಬಾನಿಯವರ (Ananth Ambani Fashion) ಬ್ರೂಚ್‌ (Brooch) ಜ್ಯುವೆಲರಿಗಳು ಇದೀಗ ಮೆನ್ಸ್ ವೆಡ್ಡಿಂಗ್‌ ಜ್ಯುವೆಲರಿ ಫ್ಯಾಷನ್‌ನಲ್ಲಿ (Mens Wedding Jewelery Fashion) ಟಾಪ್‌ ಲಿಸ್ಟ್‌ಗೆ ಸೇರಿವೆ.

ಮೆನ್ಸ್ ಜ್ಯುವೆಲರಿ ಲಿಸ್ಟ್‌ಗೆ ಬ್ರೂಚ್‌

ಕೇವಲ ರಾಯಲ್‌ ವೆಡ್ಡಿಂಗ್‌ ಜ್ಯುವೆಲರಿ ಕಲೆಕ್ಷನ್‌ನಲ್ಲಿ ಮಾತ್ರವಲ್ಲ, ಸಾಮಾನ್ಯ ಮೆನ್ಸ್ ಆಭರಣಗಳ ಲಿಸ್ಟ್‌ಗೂ ಇವು ಸೇರಿಕೊಂಡಿವೆ.

Ananth Ambani Fashion


ಹೌದು, ಅಂಬಾನಿ ಫ್ಯಾಮಿಲಿಯ ಮದುವೆಗಳಲ್ಲಿ ಜ್ಯುವೆಲರಿಗಳಲ್ಲಿ ಅತಿ ಹೆಚ್ಚು ಹೈಲೈಟಾಗಿದ್ದು, ಮಹಿಳೆಯರ ನೆಕ್ಲೇಸ್‌ ಹಾಗೂ ಆಭರಣದ ಸೆಟ್‌ಗಳು. ಆದನ್ನು ಹೊರತುಪಡಿಸಿದಲ್ಲಿ ಮೆನ್ಸ್ ಲುಕ್‌ಗೆ ಸಾಥ್‌ ನೀಡುವಂತಹ ಶೆರ್ವಾನಿ ಹಾಗೂ ಬಂದ್ಗಾಲ ಡಿಸೈನ್‌ಗಳು ಕೊಂಚ ಫ್ಯಾಷನ್‌ ಲೋಕದಲ್ಲಿ ಹೈಲೈಟ್‌ ಆಯಿತಾದರೂ, ಬಂಗಾರದ ಡಿಸೈನರ್‌ವೇರ್‌ಗಳನ್ನು ಯಾರೂ ವಿನ್ಯಾಸ ಮಾಡಿಸಲು ಸಾಧ್ಯವಿಲ್ಲದ್ದರಿಂದ ಇವುಗಳು ಕೇವಲ ಫ್ಯಾಷನ್‌ ಹಿಸ್ಟರಿ ಪುಸ್ತಕದಲ್ಲಿಯೇ ಉಳಿದವು.

ಇನ್ನು ಅಂಬಾನಿ ಮನೆಯ ಮೆನ್ಸ್ ಜ್ಯುವೆಲರಿ ಫ್ಯಾಷನ್‌ನಲ್ಲಿ ಅತಿ ಹೆಚ್ಚು ಹೈಲೈಟ್‌ ಆಗಿದ್ದು, ಅನಂತ್‌ ಧರಿಸಿದ್ದ ಬ್ರೂಚ್‌ಗಳು. ಅಂದಹಾಗೆ, ಯಾವ್ಯಾವ ಬಗೆಯ ಬ್ರೂಚ್‌ ಅತಿ ಹೆಚ್ಚು ಆಕರ್ಷಿಸಿದವು? ಅವುಗಳ ವಿಶೇಷತೆಯೇನು? ಎಂಬುದರ ಬಗ್ಗೆ ಜ್ಯುವೆಲ್‌ ಡಿಸೈನರ್‌ಗಳು ಇಲ್ಲಿ ವಿವರಿಸಿದ್ದಾರೆ.

Ananth Ambani Fashion


14 ಕೋಟಿ ರೂ.ಗಳ ಗಣೇಶನ ಆಕೃತಿಯ ಬ್ರೂಚ್‌

ಮದುವೆಯ ಹಿಂದಿನ ದಿನ ಅನಂತ್‌ ಅಂಬಾನಿಯವರು 214 ಕೋಟಿಯ ಗೋಲ್ಡನ್‌ ಶೆರ್ವಾನಿಯೊಂದಿಗೆ 14 ಕೋಟಿ ರೂ. ಬೆಲೆ ಬಾಳುವ ವಂತರಾ ಡ್ರೀಮ್‌ ಪ್ರಾಜೆಕ್ಟ್ ಪ್ರತಿನಿಧಿಸುವ ಗಣೇಶನ ಮುಖ ಹೊಂದಿರುವ ಆನೆಯ ಆಕೃತಿಯ ಮುಖವನ್ನು ಹೋಲುವ ಅತ್ಯಾಕರ್ಷಕ ಬ್ರೂಚ್‌ ಮೆನ್ಸ್ ಜ್ಯುವೆಲರಿ ಫ್ಯಾಷನ್‌ನಲ್ಲಿ ಹಿಟ್‌ ಲಿಸ್ಟ್ ಸೇರಿತು.

ಎಮರಾಲ್ಡ್ ಚಿರತೆಯ ಬ್ರೂಚ್‌

ಎಮರಾಲ್ಡ್ ಸ್ಟೋನ್‌ ಮೇಲೆ ಚಿರತೆ ಕುಳಿತಿರುವಂತಹ ಅಪರೂಪದ ಬ್ರೂಚ್‌ ಅನಂತ್‌ ಮದುವೆಯ ಸಮಾರಂಭಗಳಲ್ಲಿ ಎಲ್ಲರನ್ನು ಸೆಳೆದಿತ್ತು. ಇನ್ನು, ಇದೇ ಸಂದರ್ಭದಲ್ಲಿ ಪೇಟಾಗೆ ಧರಿಸಿದ್ದ ಡೈಮಂಡ್‌ನ ಸರ್ಪೆಚ್‌ ಕೂಡ ರಾಜ-ಮಹಾರಾಜರ ಜ್ಯುವೆಲರಿ ಕಲೆಕ್ಷನನ್ನು ಪ್ರತಿನಿಧಿಸಿತ್ತು. ಇದಕ್ಕೂ ಬಹಳ ಹಿಂದೆ
ರೋಕಾ ಕಾರ್ಯಕ್ರಮದಲ್ಲೂ ಪ್ಲಾಟಿನಂ ಹಾಗೂ ಚಿನ್ನದಿಂದ ತಯಾರಾದ ಚಿರತೆಯ ಆಕೃತಿಯ ಡೈಮಂಡ್‌ ಬ್ರೂಚನ್ನು ಅನಂತ್‌ ಧರಿಸಿದ್ದರು.

ಶ್ರೀನಾಥ್‌ ದೇವರ ಬ್ರೂಚ್‌

ಶುಭ್‌ ಆಶಿರ್ವಾದ್‌ ಕಾರ್ಯಕ್ರಮದಲ್ಲಿ ಕುಟುಂಬದ ದೈವ ಶ್ರೀನಾಥ್‌ ಭಗವಾನ್‌ ಆಕೃತಿ ಬ್ರೂಚ್‌, ಅನಂತ್‌ರ ಮರೂನ್‌ ಶೆರ್ವಾನಿಯ ಸೌಂದರ್ಯ ಹೆಚ್ಚಿಸಿತ್ತು.

Ananth Ambani Fashion

ಇದನ್ನೂ ಓದಿ: Model Fashion: ಸೀಸನ್‌ ಗೆ ತಕ್ಕಂತೆ ಫ್ಯಾಷನ್‌ ಬದಲಿಸುವ ಮಿಸೆಸ್‌ ಬೆಂಗಳೂರು ಟೈಟಲ್‌ ವಿಜೇತೆ ಪ್ರತಿಭಾ ನಟರಾಜ್‌

ಸಿಂಹದ ಬ್ರೂಚ್‌

ಈ ಮೇಲಿನವುಗಳಲ್ಲದೇ 50 ಕ್ಯಾರೆಟ್‌ ಡೈಮಂಡ್‌ನ ಲೊರೈನ್‌ ಸ್ಕಾವರ್ಟ್ಞ್ ಡಿಸೈನ್‌ ಮಾಡಿದ ಸಿಂಹದ ಆಕೃತಿಯ ಬ್ರೂಚ್‌ ಈ ಹಿಂದೆ ಜಾಮ್‌ನಗರದಲ್ಲಿ ನಡೆದ ಪ್ರಿ-ವೆಡ್ಡಿಂಗ್‌ನಲ್ಲಿ ಸಖತ್‌ ಹೈಲೈಟ್‌ ಆಗಿತ್ತು.
ಈ ಎಲ್ಲಾ ಮೇಲಿನ ಬ್ರೂಚ್‌ ವಿವರಣೆಗಳು ಕೇವಲ ಸ್ಯಾಂಪಲ್‌ ಅಷ್ಟೇ! ಇದೇ ರೀತಿ ಅನಂತ್‌ ಅವರ ಬಳಿ ನೂರಾರು ಡೈಮಂಡ್‌ ಹಾಗೂ ಎಮರಾಲ್ಡ್ನ ಬ್ರೂಚ್‌ಗಳಿವೆಯಂತೆ. ಕಡಿಮೆಯೆಂದರೂ ನೂರಾರು ಕೋಟಿ ರೂ.ಗಳು ಬೆಲೆಬಾಳುತ್ತವಂತೆ.

(ಲೇಖಕಿ ಫ್ಯಾಷನ್‌ ಪತ್ರಕರ್ತೆ )
Continue Reading

Latest

Sexual Abuse: ಮಧ್ಯವಯಸ್ಕ ಮಹಿಳೆಯ ಮೇಲೆ ಮಗನ ಸ್ನೇಹಿತನಿಂದಲೇ ಅತ್ಯಾಚಾರ!

Rape Case: ಕಾಮಾಸಕ್ತರಿಗೆ ಭಯ ಮತ್ತು ಲಜ್ಜೆ ಎರಡೂ ಇರುವುದಿಲ್ಲವಂತೆ. ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಸ್ನೇಹಿತನ ತಾಯಿಯ ಮೇಲೆ ಅತ್ಯಾಚಾರ ಎಸಗಿದ ಹೇಯವಾದ ಘಟನೆಯೊಂದು ನಡೆದಿದೆ. ಸ್ನೇಹಿತನು ಇಲ್ಲದ ವೇಳೆ ನೋಡಿಕೊಂಡು ಮನೆಗೆ ಬಂದ ಆತನ ಕಾಮುಕ ಗೆಳೆಯ ಸ್ನೇಹಿತನ ತಾಯಿಯನ್ನೇ ತನ್ನ ಚಪಲಕ್ಕೆ ಬಳಸಿಕೊಂಡಿದ್ದಾನೆ. ತಾಯಿ ಇದಕ್ಕೆ ವಿರೋಧಿಸಿದಾಗ ಮಗನನ್ನು ಕೊಲ್ಲುವುದಾಗಿ ಬೆದರಿಯೊಡ್ಡಿದ್ದಾನೆ. ಮಹಿಳೆ ಪೊಲೀಸರನ್ನು ಸಂಪರ್ಕಿಸಿ ಆರೋಪಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮತ್ತು ತಲೆಮರೆಸಿಕೊಂಡಿರುವ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

VISTARANEWS.COM


on

Rape Case
Koo

ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕೇಳಿಬರುತ್ತಿದೆ. ಕಾಮುಕರು ತಮ್ಮ ಕಾಮತೃಷೆಯನ್ನು ತೀರಿಸಿಕೊಳ್ಳಲು ಮುಗ್ಧ ಬಾಲಕಿ, ಯುವತಿರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದಾರೆ. ಅಷ್ಟೇ ಅಲ್ಲದೇ ತಮ್ಮ ತಾಯಿಯ ವಯಸ್ಸಿನವರನ್ನು ಕೂಡ ಬಿಡುತ್ತಿಲ್ಲ. ಅಂತಹದೊಂದು ಘಟನೆ ಇದೀಗ ಮಧ್ಯಪ್ರದೇಶದ ಅವಧ್ಪುರಿಯಲ್ಲಿ ನಡೆದಿದೆ. ಮಹಿಳೆಯ ಮಗನ ಸ್ನೇಹಿತನೇ ಆಕೆಯ ಮೇಲೆ ಅತ್ಯಾಚಾರ (Rape Case) ಎಸಗಿದ್ದಾನೆ.

ಮಧ್ಯಪ್ರದೇಶದ ಭೋಪಾಲ್‌ನ ಅವಧ್ಪುರಿಯಲ್ಲಿ ಜುಲೈ 12ರಂದು 43 ವರ್ಷದ ಮಹಿಳೆಯ ಮೇಲೆ ಆಕೆಯ ಮಗನ ಸ್ನೇಹಿತ, ಮಗನನ್ನು ಕೊಲ್ಲುವುದಾಗಿ ಬೆದರಿಕೆಯೊಡ್ಡಿ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಆರೋಪಿ ಮತ್ತು ಸಂತ್ರಸ್ತೆ ಒಂದೇ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಅಲ್ಲದೆ ಸಂತ್ರಸ್ತೆಯ ಮಗ ಹಾಗೂ ಆರೋಪಿ ಸ್ನೇಹಿತರಾಗಿದ್ದರು. ಹಾಗಾಗಿ ಆರೋಪಿ ಆಗಾಗ ಆಕೆಯ ಮನೆಗೆ ಬರುತ್ತಿದ್ದ ಎನ್ನಲಾಗಿದೆ. ಆದರೆ ಶುಕ್ರವಾರ ರಾತ್ರಿ ಆಕೆಯ ಮಗ ಮತ್ತು ಆರೋಪಿ ಹೊರಗೆ ಹೋಗಿದ್ದರು. ಸಂತ್ರಸ್ತೆ ಮನೆಯಲ್ಲಿ ಒಬ್ಬಳೆ ಇರುವುದನ್ನು ಅರಿತ ಆತ ಒಬ್ಬನೇ ತನ್ನ ಸ್ನೇಹಿತನ ಮನೆಗೆ ಹಿಂದಿರುಗಿ ಸಂತ್ರಸ್ತೆಯ ಬಾಗಿಲು ತಟ್ಟಿದ್ದಾನೆ. ಆಗ ಬಾಗಿಲು ತೆರೆದ ಸಂತ್ರಸ್ತೆಯ ಮನೆಗೆ ನುಗ್ಗಿದ್ದಾನೆ.

ಆಗ ಸಂತ್ರಸ್ತೆ ತನ್ನ ಮಗನ ಬಗ್ಗೆ ಕೇಳಿದಾಗ ಆತ ಚೆನ್ನಾಗಿ ಕುಡಿದು ಮಲಗಿರುವುದಾಗಿ ತಿಳಿಸಿದ್ದಾನೆ. ಬಳಿಕ ಆತ ಆಕೆಯ ಜತೆ ಅಸಭ್ಯವಾಗಿ ವರ್ತಿಸಲು ಪ್ರಯತ್ನಿಸಿದ್ದಾನೆ. ಆಗ ಆಕೆ ಅದನ್ನು ವಿರೋಧಿಸಿದಾಗ ಅತ್ಯಾಚಾರ ಪ್ರಯತ್ನವನ್ನು ವಿರೋಧಿಸಿದರೆ ಅವಳ ಮಗನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಘಟನೆಯ ನಂತರ ಆರೋಪಿ ಅಲ್ಲಿಂದ ಪರಾರಿಯಾಗಿದ್ದಾನೆ. ಮರುದಿನ ಮಹಿಳೆ ಪೊಲೀಸರನ್ನು ಸಂಪರ್ಕಿಸಿ ಆರೋಪಿಯ ವಿರುದ್ಧ ದೂರು ದಾಖಲಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಹುಡುಗಿಯ ಮೇಲೆ ಏಕಾಏಕಿ ದಾಳಿ ಮಾಡಿದ ಕೋತಿ; ವಿಡಿಯೊ ಇದೆ

ಮಹಿಳೆಯ ಮೇಲಿನ ದೌರ್ಜನ್ಯ ಹೆಚ್ಚಾಗಿದ್ದು, ಇಂತಹ ಪ್ರಕರಣಗಳು ಈ ಹಿಂದೆ ಹಲವು ನಡೆದಿದ್ದು, ಇದರಲ್ಲಿ ಮಹಿಳೆಯರು ಬಲಿಯಾಗಿದ್ದಾರೆ. ಪತ್ನಿಯ ಮೇಲಿನ ಅನುಮಾನದಿಂದ ಪತಿಯೇ ಆಕೆಯ ಕತ್ತು ಹಿಸುಕಿ ಶವವನ್ನು ಸುಟ್ಟು ಹೂತು ಹಾಕಿದ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದ್ದು, ಪತಿಯನ್ನು ಬಂಧಿಸಲಾಗಿತ್ತು. ಮತ್ತೊಂದು ಘಟನೆಯಲ್ಲಿ, ಜಬಲ್ಪುರ ನಗರದ ಓಮ್ತಿ ಪ್ರದೇಶದಲ್ಲಿ ಜುಲೈ 1 ರಂದು 17 ವರ್ಷದ ಬಾಲಕಿಯನ್ನು 20 ವರ್ಷದ ಗುಫ್ರಾನ್ ಎಂಬ ವ್ಯಕ್ತಿ ಕ್ರೂರವಾಗಿ ಕೊಲೆ ಮಾಡಿದ್ದಾನೆ. ಆರೋಪಿಯೊಂದಿಗೆ ಮಾತನಾಡಲು ಸಂತ್ರಸ್ತೆ ನಿರಾಕರಿಸಿದ್ದು ಈ ಅಪರಾಧದ ಹಿಂದಿನ ಉದ್ದೇಶವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Ambani Video: 3 ವರ್ಷದ ಅಂಬಾನಿ ಮೊಮ್ಮಗ ವೇದಿಕೆ ಮೇಲೆ ಜಾರಿ ಬಿದ್ದ, ಆದರೆ ಜನರ ಹೃದಯ ಗೆದ್ದ!

Ambani Video: ಮುಂಬೈನ ಬಾಂದ್ರಾದ ಕುರ್ಲಾ ಕಾಂಪ್ಲೆಕ್ಸ್ (ಬಿಕೆಸಿ)ನಲ್ಲಿರುವ ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಇಡೀ ಅಂಬಾನಿ ಕುಟುಂಬ ಹಾಜರಿತ್ತು. ಈ ಸಂದರ್ಭದಲ್ಲಿ ನೀತಾ ಅಂಬಾನಿ ಮೂರು ವರ್ಷದ ಮೊಮ್ಮಗ ಪೃಥ್ವಿಯನ್ನು ವೇದಿಕೆಗೆ ಕರೆಮದರು. ಆಗ ತನ್ನ ಪುಟ್ಟ ಪುಟ್ಟ ಹೆಜ್ಜೆಗಳನ್ನಿಟ್ಟು ಓಡುತ್ತಾ ವೇದಿಕೆ ಬಂದ ಪೃಥ್ವಿ ಕಾಲು ಜಾರಿ ಬಿದ್ದ. ಆದರೆ ಸಾವರಿಸಿಕೊಂಡು ಎದ್ದು “ಜೈ ಶ್ರೀ ಕೃಷ್ಣ” ಎನ್ನುತ್ತ ಅತಿಥಿಗಳ ಮನ ಗೆದ್ದಿದ್ದಾನೆ.

VISTARANEWS.COM


on

Ambani Video
Koo


ಮುಂಬೈ: ಮುಖೇಶ್‌ ಅಂಬಾನಿ ಅವರ ಪುತ್ರ (Ambani Video) ಅನಂತ್ ಅಂಬಾನಿ ಹಾಗೂ ರಾಧಿಕಾ ಅವರ ವಿವಾಹ ಸಮಾರಂಭದಾಚರಣೆಗಳು ಬಹಳ ಭರ್ಜರಿಯಿಂದ ನಡೆದಿವೆ. ಇದೀಗ ಮುಖೇಶ್ ಮತ್ತು ನೀತಾ ಅಂಬಾನಿ (Ambani Family )ಸೋಮವಾರ ಸಂಜೆ ಮತ್ತೊಂದು ಸುತ್ತಿನ ಆರತಕ್ಷತೆಯನ್ನು ಆಯೋಜಿಸಿದ್ದರು. ಈ ವೇಳೆ ಅವರ ಹಿರಿಯ ಮೊಮ್ಮಗ ಮೂರು ವರ್ಷದ ಪೃಥ್ವಿ ಅಂಬಾನಿ ತಮ್ಮ ಚಿಕ್ಕಪ್ಪ ಅನಂತ್ ಅಂಬಾನಿ ಅವರ ವಿವಾಹ ಆರತಕ್ಷತೆಯಲ್ಲಿ ತನ್ನ ಮುದ್ದು ಮುದ್ದಾದ ಮಾತಿನಲ್ಲಿ ಭಾಷಣ ಮಾಡಿ ಅತಿಥಿಗಳಿಗೆ ಮನೋರಂಜನೆ ನೀಡಿದೆ! ಅದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ (ಬಿಕೆಸಿ)ನಲ್ಲಿರುವ ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಧು ರಾಧಿಕಾ ಮರ್ಚೆಂಟ್ ಅವರ ಕುಟುಂಬ ಸೇರಿದಂತೆ ಇಡೀ ಅಂಬಾನಿ ಕುಟುಂಬ ಹಾಜರಿತ್ತು. ನೀತಾ ಅಂಬಾನಿ ಮೂರು ವರ್ಷದ ಪೃಥ್ವಿಯನ್ನು ಪರಿಚಯಿಸಿ ವೇದಿಕೆಗೆ ಬರುವಂತೆ ಆಹ್ವಾನಿಸಿದರು. “ನಮ್ಮ ಅತ್ಯಂತ ಪ್ರೀತಿಯ ಪೃಥ್ವಿ ಕೂಡ ಇಲ್ಲಿದ್ದಾನೆ, ಪೃಥ್ವಿ, ಬಾ” ಎಂದರು. ಆಗ ತನ್ನ ಪುಟ್ಟ ಪುಟ್ಟ ಹೆಜ್ಜೆಗಳನ್ನಿಟ್ಟು ಓಡುತ್ತಾ ವೇದಿಕೆ ಬಂದ ಪೃಥ್ವಿ ಕಾಲು ಜಾರಿ ಉರುಳಿ ಬಿದ್ದ! ನಂತರ ಎದ್ದು ನೀತಾ ಅಂಬಾನಿಯಿಂದ ಮೈಕ್ರೊಫೋನ್ ತೆಗೆದುಕೊಂಡು, ಪ್ರೇಕ್ಷಕರನ್ನು ಆತ್ಮವಿಶ್ವಾಸದಿಂದ “ಹಲೋ” ಎಂದು ಸ್ವಾಗತಿಸಿದ. ನಂತರ “ಜೈ ಶ್ರೀ ಕೃಷ್ಣ” ಎಂದು ಹೇಳಿದ. ಪ್ರೇಕ್ಷಕರು ಪ್ರತಿಯಾಗಿ “ಜೈ ಶ್ರೀ ಕೃಷ್ಣ” ಎಂದು ಒಕ್ಕೊರಲಿನಿಂದ ಪ್ರತಿಕ್ರಿಯಿಸಿದರು. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಪೃಥ್ವಿ ಅಂಬಾನಿ ಶ್ಲೋಕಾ ಮೆಹ್ತಾ ಮತ್ತು ಆಕಾಶ್ ಅಂಬಾನಿಯವರ ಪುತ್ರ. ಇವನಿಗೆ ವೇದಾ ಎಂಬ ಸಹೋದರಿ ಕೂಡ ಇದ್ದಾಳೆ. ಪೃಥ್ವಿ 2020ರ ಡಿಸೆಂಬರ್‌ನಲ್ಲಿ ಜನಿಸಿದರೆ, ವೇದಾ ಈ ವರ್ಷದ ಮೇ ತಿಂಗಳಲ್ಲಿ ಒಂದು ವರ್ಷ ಪೂರೈಸಿದ್ದಾಳೆ. ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ಪೂರ್ವ ಆಚರಣೆಗಳ ನಡುವೆ ಯುರೋಪಿನ ಐಷಾರಾಮಿ ಕ್ರೂಸ್ ಹಡಗಿನಲ್ಲಿ ವೇದಾಳ ಮೊದಲ ಹುಟ್ಟುಹಬ್ಬವನ್ನು ಆಚರಿಸಲಾಗಿತ್ತು.

ಇದನ್ನೂ ಓದಿ: ಅಂಬಾನಿ ಮದುವೆ ಸಮಾರಂಭದೊಳಗೆ ನುಸುಳಿದ್ದ ಇಬ್ಬರು ʼನಕಲಿ ಅತಿಥಿʼಗಳ ಬಂಧನ!

ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಕಳೆದ ಶುಕ್ರವಾರ ಅದ್ಧೂರಿಯಾಗಿ ವಿವಾಹವಾದರು. ವಿವಿಧ ಕ್ಷೇತ್ರಗಳ ಉನ್ನತ ಜಾಗತಿಕ ಮತ್ತು ಭಾರತೀಯ ಪ್ರಸಿದ್ಧ ವ್ಯಕ್ತಿಗಳು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ರಾತ್ರಿ ನಡೆದ “ಶುಭ ಆಶೀರ್ವಾದ್” ಸಮಾರಂಭದಲ್ಲಿ ಭಾಗವಹಿಸಿ ನವವಿವಾಹಿತರನ್ನು ಆಶೀರ್ವದಿಸಿದ್ದರು.

Continue Reading
Advertisement
SIM Cards
ಗ್ಯಾಜೆಟ್ಸ್4 mins ago

SIM Cards: ಮಿತಿ ಮೀರಿ ಮೊಬೈಲ್‌ ಸಿಮ್ ಹೊಂದಿದ್ದೀರಾ? ಕಾದಿದೆ ಭಾರಿ ದಂಡ, ಶಿಕ್ಷೆ!

Assembly Session
ಕರ್ನಾಟಕ9 mins ago

Assembly Session: ಲೂಟಿಕೋರರ ಪಿತಾಮಹ ನೀನು: ಸದನದಲ್ಲಿ ಅಶ್ವತ್ಥ್ ನಾರಾಯಣ ವಿರುದ್ಧ ಗುಡುಗಿದ ಡಿಕೆಶಿ!

Ananth Ambani Fashion
ಫ್ಯಾಷನ್20 mins ago

Ananth Ambani Fashion: ಅನಂತ್‌ ಅಂಬಾನಿ ಬಳಿ ಇದೆ ಡೈಮಂಡ್‌ ಬ್ರೂಚ್‌ಗಳ ಕಲೆಕ್ಷನ್‌! ಇವುಗಳ ಮೌಲ್ಯ ಎಷ್ಟಿರಬಹುದು?

Entrepreneurship Development Training Concluding Ceremony at Kanakagiri
ಕೊಪ್ಪಳ26 mins ago

Koppala News: ಕನಕಗಿರಿಯಲ್ಲಿ ಉದ್ಯಮಶೀಲತಾಭಿವೃದ್ಧಿ ತರಬೇತಿಯ ಸಮಾರೋಪ

Pooja Khedkar
ದೇಶ28 mins ago

Pooja Khedkar: ಪೂಜಾ ಖೇಡ್ಕರ್‌ಗೆ ಮತ್ತೊಂದು ಬಿಗ್‌ ಶಾಕ್‌; ತರಬೇತಿಗೆ ತಡೆ, ಅಕಾಡೆಮಿಗೆ ವಾಪಸ್‌

Clearance of footpaths in Shira
ತುಮಕೂರು28 mins ago

Shira News: ಶಿರಾದಲ್ಲಿ ಫುಟ್‌ಪಾತ್‌ಗಳ ತೆರವು ಕಾರ್ಯಾಚರಣೆ

karnataka weather Forecast
ಮಳೆ30 mins ago

Karnataka Weather : ನಾಳೆಗೂ ಮಳೆ ಮುನ್ನೆಚ್ಚರಿಕೆ; ಸೆ.30ರವರೆಗೆ ಈ ಪ್ರವಾಸಿ ತಾಣಗಳಲ್ಲಿ ಟ್ರಕ್ಕಿಂಗ್‌ ನಿಷೇಧ

R Ashok demands that Valmiki Development Corporation scam should be investigated by CBI and CM Siddaramaiah should resign
ಕರ್ನಾಟಕ31 mins ago

Assembly Session: ಸರ್ಕಾರಕ್ಕೆ ವಾಲ್ಮೀಕಿ ಜನಾಂಗದ ಶಾಪ ತಟ್ಟಬಾರದೆಂದರೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ; ಆರ್‌. ಅಶೋಕ್‌ ಆಗ್ರಹ

Necessary action will be taken for salary revision of special schools teachers says minister Lakshmi Hebbalkar
ಕರ್ನಾಟಕ34 mins ago

Lakshmi Hebbalkar: ವಿಶೇಷ ಶಾಲೆಗಳ ಶಿಕ್ಷಕರ ವೇತನ ಪರಿಷ್ಕರಣೆಗೆ ಅಗತ್ಯ ಕ್ರಮ: ಹೆಬ್ಬಾಳಕರ್ ಭರವಸೆ

Assembly Session Minister Santosh Lad gave a huge gift to the film workers from the labor department
ಕರ್ನಾಟಕ36 mins ago

Assembly Session: ಕಾರ್ಮಿಕ ಇಲಾಖೆಯಿಂದ ಸಿನಿ ಕಾರ್ಮಿಕರಿಗೆ ಭರ್ಜರಿ ಗಿಫ್ಟ್!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ6 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ8 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 day ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ2 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌