Site icon Vistara News

Konkan Railway: ಕಾರವಾರ – ಬೆಂಗಳೂರು ನಡುವಿನ ಎಲ್ಲಾ ರೈಲುಗಳ ಸಂಚಾರ ಆ. 8ರವರೆಗೆ ರದ್ದು

Karnataka Trains

ಬೆಂಗಳೂರು : ರಾಜ್ಯದೆಲ್ಲೆಡೆ ಭಾರೀ ಮಳೆ ಸುರಿಯುತ್ತಿರುವ ಕಾರಣ ಹಲವೆಡೆ ಜನ ಜೀವನ ಅಸ್ತವ್ಯಸ್ಥವಾಗಿದೆ. ಅಲ್ಲದೇ ಕೆಲವು ಕಡೆಗಳಲ್ಲಿ ಭೂಕುಸಿತ ಉಂಟಾದ ಕಾರಣ ಬಸ್ ಹಾಗೂ ರೈಲ್ವೆ ಸಂಚಾರದಲ್ಲಿ ಸಮಸ್ಯೆ ಎದುರಾಗಿದೆ. ಪಶ್ಚಿಮ ಘಟ್ಟ ಭಾಗದ ಎಡಕುಮೇರಿ – ಕಡಗರವಳ್ಳಿ ರೈಲು ಮಾರ್ಗದಲ್ಲಿ ಭೂಕುಸಿತ ಉಂಟಾಗಿದ್ದರಿಂದ ರೈಲು ಹಳಿಗಳ ಮೇಲೆ ಮಣ್ಣು ಕುಸಿದ ಕಾರಣ ರೈಲು ಸಂಚಾರಕ್ಕೆ ತಡೆಯಾಗಿದೆ. ಹಾಗಾಗಿ ಇಲ್ಲಿ ದುರಸ್ತಿ ಕಾರ್ಯಗಳು ನಡೆಯುತ್ತಿದ್ದ ಹಿನ್ನಲೆಯಲ್ಲಿ ಕೊಂಕಣ ರೈಲು (Konkan Railway) ಮಾರ್ಗದಲ್ಲಿ ಕಾರವಾರ ಹಾಗೂ ಬೆಂಗಳೂರು ನಡುವಿನ ಎಲ್ಲಾ ರೈಲುಗಳ ಸಂಚಾರವನ್ನು ಆಗಸ್ಟ್ 8ರವರೆಗೆ ರದ್ದುಪಡಿಸಲಾಗಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.
ರದ್ದಾದ ರೈಲುಗಳ ವಿವರ ಹೀಗಿದೆ:

ಇದನ್ನೂ ಓದಿ: Railway Rules: ರೈಲು ಪ್ರಯಾಣಿಕರು ತಿಳಿದುಕೊಳ್ಳಲೇಬೇಕಾದ ನಿಯಮಗಳು

ಈ ಕುರಿತು ಕೊಂಕಣ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿಯವರ ಪ್ರಕಟಣೆ ತಿಳಿಸಿದೆ. ಈ ಮೂಲಕ ರೈಲ್ವೆ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಕಹಿ ಸುದ್ದಿಯನ್ನು ನೀಡಿದೆ. ದುರಸ್ತಿ ಕಾರ್ಯ ನಡೆಯುತ್ತಿರುವ ಸ್ಥಳ ಹಾಗೂ ಆಸುಪಾಸಿನಲ್ಲಿ ಗೂಡ್ಸ್ ರೈಲು ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಆದರೆ ಪ್ರಯಾಣಿಕರ ರೈಲು ಸಂಚಾರಕ್ಕೆ ಇನ್ನೂ ಅವಕಾಶ ನೀಡಿಲ್ಲ. ಆದರೆ ಸದ್ಯದಲ್ಲೇ ದುರಸ್ಥಿ ಕಾರ್ಯ ಸಂಪೂರ್ಣವಾಗಲಿದ್ದು, ನಂತರ ರೈಲು ಸಂಚಾರ ಮುಂದುವರಿಯಲಿದೆ. ಅಲ್ಲಿಯವರೆಗೆ ರೈಲು ಪ್ರಯಾಣಿಕರು ಸಹಕರಿಸುವಂತೆ ವಿನಂತಿಸಲಾಗಿದೆ.

Exit mobile version