Lok sabha Election‌ 2024: ಲೋಕಸಭೆ ಚುನಾವಣೆಯಲ್ಲಿ ಈ 10 ವಿಷಯಗಳೇ ನಿರ್ಣಾಯಕ - Vistara News

Latest

Lok sabha Election‌ 2024: ಲೋಕಸಭೆ ಚುನಾವಣೆಯಲ್ಲಿ ಈ 10 ವಿಷಯಗಳೇ ನಿರ್ಣಾಯಕ

Lok sabha Election 2024: ಕಳೆದ ಒಂದು ದಶಕದಿಂದ ಕೇಂದ್ರದಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದೆ. ಆದರೆ ಈ ಸಂದರ್ಭದಲ್ಲಿ ಅದು ಹಲವು ಬಾರಿ ಎಡವಿದ್ದರೂ ಮತ್ತೆ ಹಲವು ಬಾರಿ ಪುಟಿದು ಎದ್ದೇಳುವ ಪ್ರಯತ್ನದಲ್ಲಿ ಯುಶಸ್ವಿಯಾಗಿದೆ. ಇದರಲ್ಲಿ ಈ ಬಾರಿ ಚುನಾವಣೆ ಮೇಲೆ ಪ್ರಭಾವ ಬೀರಬಹುದಾದ ಹಲವಾರು ಅಂಶಗಳಿವೆ ಅವು ಯಾವುದು ಗೊತ್ತೇ? ಇಲ್ಲಿದೆ ವಿಸ್ತೃತ ವಿಶ್ಲೇಷಣೆ.

VISTARANEWS.COM


on

Lok sabha election-2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದೇಶಾದ್ಯಂತ ಏಳು ಹಂತದಲ್ಲಿ ನಡೆಯಲಿರುವ 2024ರ ಲೋಕಸಭಾ ಚುನಾವಣೆಯ (Lok sabha election-2024) ಮೊದಲ ಹಂತದ ಮತದಾನ (voting) ಪ್ರಕ್ರಿಯೆ ಶುಕ್ರವಾರ ಆರಂಭಗೊಂಡಿದೆ. ವಿಶ್ವದ ಅತಿ ದೊಡ್ಡ ಚುನಾವಣೆಯಲ್ಲಿ ಸುಮಾರು 100 ಕೋಟಿ ಭಾರತೀಯರು (indians) ಮತ ಚಲಾಯಿಸಲಿದ್ದಾರೆ.

ಚುನಾವಣೆ ಪೂರ್ವದಲ್ಲೇ ಸಾಕಷ್ಟು ಸಮೀಕ್ಷೆಗಳನ್ನು ನಡೆಸಲಾಗಿದ್ದು, ಈ ಬಾರಿಯೂ ಪ್ರಧಾನಿ (PM) ನರೇಂದ್ರ ಮೋದಿ (narendra modi) ನೇತೃತ್ವದ ಭಾರತೀಯ ಜನತಾ ಪಕ್ಷ (BJP) ಸುಲಭವಾಗಿ ಗೆಲುವು ಸಾಧಿಸುತ್ತದೆ ಎಂಬುದು ತಿಳಿದು ಬಂದಿದೆ. ಒಂದು ವೇಳೆ ಈ ಬಾರಿಯೂ ಬಿಜೆಪಿ ಗೆಲುವು ದಾಖಲಿಸಿದರೆ ಸತತ ಮೂರನೇ ಅವಧಿಗೆ ಅಧಿಕಾರ ಬಿಜೆಪಿ ಪಾಲಾದಂತಾಗುತ್ತದೆ.

ಏಪ್ರಿಲ್ 19ರಿಂದ ಜೂನ್ 1ರವರೆಗೆ ನಡೆಯಲಿರುವ ಏಳು ಹಂತಗಳಲ್ಲಿಮತದಾನದ ಎಣಿಕೆ ಪ್ರಕ್ರಿಯೆ ಜೂನ್ 4ರಂದು ನಡೆಯಲಿದೆ. ಸಂಸತ್ತಿನ ಕೆಳಮನೆಯಾದ ಲೋಕಸಭೆಯ 543 ಸ್ಥಾನಗಳಿಗೆ ನಡೆಯುವ ಚುನಾವಣೆಯ ಮೇಲೆ ಪ್ರಭಾವ ಬೀರುವ ಹಲವಾರು ಅಂಶಗಳಿವೆ.

ಇದನ್ನೂ ಓದಿ: Lok Sabha Election 2024: ಮೊದಲ ಹಂತದ ಮತದಾನ ಆರಂಭ; 102 ಲೋಕಸಭಾ ಕ್ಷೇತ್ರಗಳ ಭವಿಷ್ಯ ಇಂದು ನಿರ್ಣಯ

1. ಆರ್ಥಿಕತೆಯ ಪ್ರಗತಿ

ಮಾರ್ಚ್ 31ರಂದು ಆರ್ಥಿಕ ವರ್ಷ ಕೊನೆಯಾಗಿದ್ದು, ಕಳೆದ ಆರ್ಥಿಕ ವರ್ಷದಲ್ಲಿ ಭಾರತದ ಆರ್ಥಿಕತೆಯು ಸುಮಾರು ಶೇ. 8ರಷ್ಟು ಬೆಳವಣಿಗೆಯಾಗಿದೆ. ಇದು ಅತ್ಯಂತ ವೇಗವಾದ ಬೆಳವಣಿಗೆ. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಅವಧಿಯಲ್ಲಿ ಕಳೆದ ಒಂದು ದಶಕದಲ್ಲಿ ಭಾರತದ ಆರ್ಥಿಕತೆಯು ಮೊದಲಿಗಿಂತ ಐದು ಸ್ಥಾನಗಳನ್ನು ಜಿಗಿದು ವಿಶ್ವದಲ್ಲಿ ಐದನೇ ಸ್ಥಾನಕ್ಕೆ ತಲುಪಿದೆ. ಈ ಬಾರಿ ಚುನಾವಣೆಯಲ್ಲಿ ತಾವು ಗೆದ್ದರೆ ಅದನ್ನು ಮೂರನೇ ಸ್ಥಾನಕ್ಕೆ ಏರಿಸುವ ಭರವಸೆ ನೀಡಿದ್ದಾರೆ.

2. ಅಭಿವೃದ್ಧಿಯ ತೀವ್ರಗತಿ

ನರೇಂದ್ರ ಮೋದಿ ಅವರ ಆಡಳಿತ ಅವಧಿಯಲ್ಲಿ ಪ್ರಮುಖ ನಗರಗಳಾದ ನವದೆಹಲಿ ಮತ್ತು ಮುಂಬಯಿ ಸೇರಿದಂತೆ ದೇಶದಾದ್ಯಂತ ಇರುವ ರಸ್ತೆಗಳು ಮತ್ತು ಸೇತುವೆಗಳು ಸಾಕಷ್ಟು ಅಭಿವೃದ್ಧಿಯಾಗಿದೆ. ಆದರೂ ಅಭಿವೃದ್ಧಿ ಕಾರ್ಯಗಳು ಗ್ರಾಮಾಂತರಕ್ಕಿಂತ ನಗರಗಳಲ್ಲೇ ಹೆಚ್ಚು ಕೇಂದ್ರಿತವಾಗಿವೆ ಎಂಬ ಆರೋಪವೂ ಇದೆ.


3. ಹಣದುಬ್ಬರ, ಬೆಲೆ ಏರಿಕೆ

2021-22 ರಲ್ಲಿ ಶೇ.5.5ರಷ್ಟು ಇದ್ದ ಹಣದುಬ್ಬರ 2022- 23ರಲ್ಲಿ ಶೇ. 6.7ಕ್ಕೆ ಏರಿದೆ. ಕೇವಲ ಫೆಬ್ರವರಿಯಲ್ಲಿ ಹಣದುಬ್ಬರ ಶೇ. 5.09 ರಷ್ಟು ಆಗಿತ್ತು. ಬೆಲೆ ಏರಿಕೆ ವಿಷಯ ಕೂಡ ಈ ಬಾರಿಯ ಚುನಾವಣೆಯಲ್ಲಿ ಪ್ರಮುಖವಾಗಿ ಕೇಳಿ ಬರುತ್ತಿದೆ.

4. ಮೋದಿ ಕಲ್ಯಾಣ ನೀತಿಗಳು

ಕೋವಿಡ್ ಸಾಂಕ್ರಾಮಿಕದ ಬಳಿಕ ಸರ್ಕಾರವು ಭಾರತದ 1.42 ಶತಕೋಟಿ ಜನರಲ್ಲಿ 814 ಮಿಲಿಯನ್ ಜನರಿಗೆ ಉಚಿತ ಆಹಾರ ಪಡಿತರವನ್ನು ನೀಡುತ್ತಿದೆ. ಭಾರತದ ಜನಸಂಖ್ಯೆಯ ಸುಮಾರು ಶೇ.60ರಷ್ಟು ಜನರಿಗೆ ಉಚಿತ ಸಿರಿಧಾನ್ಯಗಳನ್ನು ಸರ್ಕಾರ ಒದಗಿಸುತ್ತಿರುವುದು ದೇಶದ ಅಸಮ ಆರ್ಥಿಕ ಬೆಳವಣಿಗೆಯ ಸಂಕೇತ ಎನ್ನಲಾಗುತ್ತದೆ.
ಕಳೆದ ವರ್ಷದ ಅಂತ್ಯದ ವೇಳೆಗೆ ಭಾರತದ ಶ್ರೀಮಂತ ನಾಗರಿಕರು ಶೇ.40.1ರಷ್ಟು ಸಂಪತ್ತು ಹೊಂದಿದ್ದರು. ಇದು 1961ರ ಬಳಿಕ ಅತ್ಯಧಿಕವಾಗಿದೆ.

5. ಮಹಿಳೆಯರ ಪ್ರಭಾವ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯು ಮಹಿಳಾ ಮತದಾರರನ್ನು ಗೆಲ್ಲಲು ಪ್ರಯತ್ನಿಸುತ್ತಿದೆ. ಹಣ ಹಂಚಿಕೆ, ಪೈಪ್‌ಲೈನ್ ಮೂಲಕ ಮನೆಮನೆಗೆ ನೀರು, 24/7 ವಿದ್ಯುತ್ ಮತ್ತು ಅಡುಗೆ ಅನಿಲ ಸಂಪರ್ಕಗಳಂತಹ ಗೃಹೋಪಯೋಗಿ ಸೌಲಭ್ಯಗಳ ಮೂಲಕ ಅವರ ಕಲ್ಯಾಣಕ್ಕೆ ಕೇಂದ್ರ ಸರ್ಕಾರ ಹೆಚ್ಚಿನ ಕ್ರಮ ಕೈಗೊಳ್ಳುತ್ತಿದೆ. ಇವು ದೇಶದ ಮಹಿಳೆಯರು ಮೋದಿ ಆಡಳಿತ ಕುರಿತು ಸಕಾರಾತ್ಮಕ ಅಭಿಪ್ರಾಯ ಹೊಂದಲು ಕಾರಣವಾಗಿದೆ.


6. ಧಾರ್ಮಿಕ ಪ್ರಭಾವ

ಬಿಜೆಪಿ ಸುಮಾರು 35 ವರ್ಷಗಳ ಹಿಂದೆ ನೀಡಿದ ಭರವಸೆಯನ್ನು ಈಗ ಈಡೇರಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀ ರಾಮನ ಜನ್ಮ ಸ್ಥಳ ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಮಾಡಿದ್ದಾರೆ. ಮೊಘಲ್ ದೊರೆ ಬಾಬರ್ ನಿಂದ ಕೆಡವಲ್ಪಟ್ಟ ದೇವಾಲಯ ಈಗ ಪುನರ್ ನಿರ್ಮಾಣಗೊಂಡಿದೆ.

ಅಲ್ಲದೇ ಪ್ರಧಾನಿಯವರು ದೇಶಾದ್ಯಂತ ಇರುವ ಹಿಂದೂ ದೇವಾಲಯಗಳಿಗೆ ನಿರಂತರವಾಗಿ ಭೇಟಿ ನೀಡುತ್ತಿದ್ದಾರೆ. ಇದು ಬಿಜೆಪಿಗೆ ಹೆಚ್ಚು ಜನ ಬೆಂಬಲವನ್ನು ನೀಡಬಲ್ಲದು ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.

ಮೋದಿಯವರ ಸರ್ಕಾರವು ಮುಸ್ಲಿಂ ಶಾಲೆಗಳು ಅಥವಾ ಮದರಸಾಗಳಿಗೆ ಬೆಂಬಲವನ್ನು ಕೊನೆಗೊಳಿಸಿದೆ ಮತ್ತು ಕೆಲವು ಬಿಜೆಪಿ ರಾಜ್ಯಗಳು ಅವುಗಳಲ್ಲಿ ಹಲವನ್ನು ಮುಚ್ಚಿವೆ. ಆದರೆ ಮೋದಿ ಅವರು ಪೌರತ್ವ ಕಾನೂನನ್ನು ಜಾರಿಗೆ ತಂದು ಹೊರದೇಶಗಳಿಂದ ವಲಸೆ ಬಂದಿರುವ ಅನೇಕರಿಗೆ ಸಹಾಯ ಮಾಡಿದೆ.

7. ಭ್ರಷ್ಟಾಚಾರ

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ತೀವ್ರ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು ಕಳೆದ ಒಂದು ದಶಕದಲ್ಲಿ ವಿರೋಧ ಪಕ್ಷದ ಸುಮಾರು 150 ರಾಜಕಾರಣಿಗಳನ್ನು ಕರೆಸಿ, ಪ್ರಶ್ನಿಸಿದೆ. ಹಲವಾರು ಅಧಿಕಾರಿಗಳು, ರಾಜಕಾರಣಿಗಳ ಆಸ್ತಿ ಮೇಲೆ ದಾಳಿ ನಡೆಸಿ ಬಂಧಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು, ರಾಜಕೀಯ ಲಾಭಕ್ಕಾಗಿ ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪವೂ ವಿರೋಧ ಪಕ್ಷಗಳಿಂದ ಕೇಳಿ ಬರುತ್ತಿದೆ. ಆದರೆ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಳೆದ 10 ವರ್ಷಗಳ ಅವಧಿಯಲ್ಲಿ ಯಾವುದೇ ಭ್ರಷ್ಟಾಚಾರದ ಆರೋಪಗಳಿಲ್ಲ. ಹೀಗಾಗಿ ಈ ಅಂಶವೂ ಈ ಬಾರಿಯ ಚುನಾವಣೆ ಮೇಲೆ ಮಹತ್ವದ ಪ್ರಭಾವ ಬೀರಬಲ್ಲದು.

8. ನಿರುದ್ಯೋಗ

2014ರಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಯುವಜನರಿಗೆ ಹತ್ತಾರು ಮಿಲಿಯನ್ ಉದ್ಯೋಗಗಳನ್ನು ಸೃಷ್ಟಿಸುವ ಭರವಸೆ ನೀಡಿದ್ದು, ಇದರಲ್ಲಿ ಅರ್ಧದಷ್ಟು ಪೂರೈಕೆ ಮಾಡಲೂ ಸಾಧ್ಯವಾಗಿಲ್ಲ ಎಂಬ ಆರೋಪ ಇದೆ. ನಿರುದ್ಯೋಗ ದರವು ಫೆಬ್ರವರಿಯಲ್ಲಿ ಶೇ. 8ಕ್ಕೆ ಏರಿದೆ ಎಂದು ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ ತಿಳಿಸಿದೆ.

ಸರ್ಕಾರದ ಅಂಕಿ ಅಂಶಗಳ ಪ್ರಕಾರ 2023ರ ಮಾರ್ಚ್ ನಿಂದ ನಿರುದ್ಯೋಗ ದರವು ಶೇ.5.4ಕ್ಕೆ ಏರಿದೆ. ಮೋದಿ ಅಧಿಕಾರ ವಹಿಸಿಕೊಳ್ಳುವ ಮೊದಲು 2013-14 ರಲ್ಲಿ ಇದು ಶೇ. 4.9ರಷ್ಟಿತ್ತು.

15- 29 ವರ್ಷದ ಸುಮಾರು ಶೇ. 16ರಷ್ಟು ನಗರ ಯುವಕರು 2022-23 ರಲ್ಲಿ ಕಳಪೆ ಕೌಶಲ್ಯ ಮತ್ತು ಗುಣಮಟ್ಟದ ಉದ್ಯೋಗಗಳ ಕೊರತೆಯಿಂದಾಗಿ ನಿರುದ್ಯೋಗಿಗಳಾಗಿದ್ದಾರೆ ಎಂದು ಸರ್ಕಾರಿ ಅಂಕಿಅಂಶಗಳು ತಿಳಿಸಿದೆ. ಈ ವಿಷಯ ಮೋದಿ ಆಡಳಿತಕ್ಕೆ ನಕಾರಾತ್ಮಕವಾಗಿದೆ. ಪ್ರತಿಪಕ್ಷಗಳ ಪ್ರಬಲ ಅಸ್ತ್ರವಾಗಿದೆ.


9. ರೈತರ ಪ್ರತಿಭಟನೆ

ಕಳೆದ ಚುನಾವಣೆಯ ಪ್ರಣಾಳಿಕೆಯಲ್ಲಿ 2022ರ ವೇಳೆಗೆ ಕೃಷಿ ಆದಾಯವನ್ನು ದ್ವಿಗುಣಗೊಳಿಸುವುದಾಗಿ ಬಿಜೆಪಿ ಭರವಸೆ ನೀಡಿತ್ತು. ಆದರೆ ಅದರ ಲಕ್ಷಣ ಕಾಣುತ್ತಿಲ್ಲ. ವಿಶೇಷವಾಗಿ ರೈತರು ಪ್ರತಿಭಟನೆ ಇದಕ್ಕೆ ಸಾಕ್ಷಿಯಾಗಿದೆ. ದೇಶದ ರೈತರ ವಿಶ್ವಾಸವನ್ನು ಸಂಪೂರ್ಣವಾಗಿ ಗಳಿಸಲು ಮೋದಿಗಿನ್ನೂ ಸಾಧ್ಯವಾಗಿಲ್ಲ.

10. ಜಾಗತಿಕ ಸ್ಥಾನಮಾನ

ಕಳೆದ ವರ್ಷ ಜಿ 20 ಶೃಂಗಸಭೆಯನ್ನು ಆಯೋಜಿಸಿರುವುದು, ರಷ್ಯಾದ ದಾಳಿಯ ವೇಳೆ ಉಕ್ರೇನ್‌ನಲ್ಲಿ ಸಿಲುಕಿರುವ ತನ್ನ ನಾಗರಿಕರನ್ನು ಯಶಸ್ವಿಯಾಗಿ ಸ್ಥಳಾಂತರಿಸಿರುವುದು ಪ್ರಧಾನಿ ನರೇಂದ್ರ ಮೋದಿಯ ಪ್ರಮುಖ ಸಾಧನೆಯಾಗಿದೆ. ಇದರಿಂದ ದೇಶಕ್ಕೆ ಸಿಗುತ್ತಿರುವ ಆರ್ಥಿಕತೆ ಬೆಂಬಲದೊಂದಿಗೆ ಭಾರತದ ಏರುತ್ತಿರುವ ಜಾಗತಿಕ ಸ್ಥಾನಮಾನ ಬಿಜೆಪಿಗೆ ಪ್ಲಸ್ ಪಾಯಿಂಟ್ ಆಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ವಾಣಿಜ್ಯ

Aadhaar Update: ಹೊಸ ನಿಯಮ ಪ್ರಕಾರ ಆಧಾರ್ ವಿಳಾಸ ನವೀಕರಣಕ್ಕೆ ಯಾವ ದಾಖಲೆ ಬಳಸಬಹುದು?

ಬಹುತೇಕ ಕೆಲಸಗಳಿಗೆ ದಾಖಲೆಯಾಗಿ ಬಳಸಲ್ಪಡುವ ಭಾರತೀಯ ನಾಗರಿಕರ ಗುರುತಿನ ಪುರಾವೆಯಾಗಿರುವ ಆಧಾರ್ ಕಾರ್ಡ್ ನಲ್ಲಿ (Aadhaar Update) ವಿಳಾಸ ಬದಲಾವಣೆಗೆ ಇನ್ನು ಮುಂದೆ ವಿದ್ಯುತ್, ನೀರು, ದೂರವಾಣಿ ಬಿಲ್ ಗಳನ್ನು ಬಳಸಬಹುದು. ಆದರೆ ಇದಕ್ಕೆ ಕೆಲವು ನಿಯಮಗಳಿವೆ. ಅದು ಏನು, ಹೇಗೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

Aadhaar Update
Koo

ಆಧಾರ್ ಕಾರ್ಡ್ ಭಾರತೀಯ ನಾಗರಿಕರ ಗುರುತಿನ ( identity of Indian citizens) ದಾಖಲೆಯಾಗಿದೆ. ಈ ಸರ್ಕಾರಿ ದಾಖಲೆಯನ್ನು ಅನೇಕ ಕೆಲಸಗಳಿಗಾಗಿ ಬಳಸಲಾಗುತ್ತದೆ. ಆಧಾರ್ ಕಾರ್ಡ್ ನಲ್ಲಿ (Aadhaar Update) ಯಾವುದೇ ಮಾಹಿತಿ (name and address) ಹಳೆಯದಾಗಿದ್ದರೆ ಅದನ್ನು ಕಾಲಕಾಲಕ್ಕೆ ಅಪ್ಡೇಟ್ ಮಾಡಿಕೊಳ್ಳುವುದು ಬಹುಮುಖ್ಯವಾಗಿರುತ್ತದೆ. ಈ ಮಾಹಿತಿ ಅಪ್ಡೇಟ್ ಗೆ ಕೆಲವೊಂದು ಪೂರಕ ದಾಖಲೆಗಳನ್ನು ಒದಗಿಸಬೇಕಾಗುತ್ತದೆ.

ಆಧಾರ್ ಕಾರ್ಡ್‌ನಲ್ಲಿ ನೀಡಲಾದ ಮಾಹಿತಿಯು ಹಳೆಯದಾಗಿರಬಾರದು. ಯಾಕೆಂದರೆ ಆಗಾಗ್ಗೆ ಇದನ್ನು ಗುರುತಿನ ಪುರಾವೆಯಾಗಿ ಬಳಸಬೇಕಾಗುತ್ತದೆ. ಆಧಾರ್ ಕಾರ್ಡ್‌ನಲ್ಲಿರುವ ಹೆಸರು ಮತ್ತು ವಿಳಾಸ ಮಾಹಿತಿಯು ಸರಿಯಾಗಿರಬೇಕು. ಒಂದು ವೇಳೆ ಆಧಾರ್ ಕಾರ್ಡ್‌ನಲ್ಲಿರುವ ವಿಳಾಸವನ್ನು ನವೀಕರಿಸಲು ಯೋಚಿಸುತ್ತಿದ್ದರೆ ಇದಕ್ಕಾಗಿ ಬಳಸುವ ದಾಖಲೆಗಳು ಯಾವುದು ಎಂಬುದನ್ನು ತಿಳಿದುಕೊಳ್ಳುವುದು ಬಹುಮುಖ್ಯ.

ಆಧಾರ್ ಕಾರ್ಡ್ ಹೊಂದಿರುವವರು ಇನ್ನು ಮುಂದೆ ಹೆಸರು, ವಿಳಾಸ ನವೀಕರಣಕ್ಕೆ ಈ ಕೆಲವು ದಾಖಲೆಗಳನ್ನು ಬಳಸಬಹುದು ಎಂದು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ಸ್ಪಷ್ಟಪಡಿಸಲಾಗಿದೆ.

Aadhaar Update
Aadhaar Update


ಯಾವ ದಾಖಲೆಗಳು ಮುಖ್ಯ?

ಆಧಾರ್ ಕಾರ್ಡ್‌ನಲ್ಲಿರುವ ಹೆಸರು, ವಿಳಾಸವನ್ನು ನವೀಕರಿಸಲು ಮಾನ್ಯವಾದ ಭಾರತೀಯ ಪಾಸ್‌ಪೋರ್ಟ್, ಪಾನ್ ಕಾರ್ಡ್, ಡ್ರೈವಿಂಗ್ ಲೈಸನ್ಸ್ ಅನ್ನು ಪುರಾವೆಯಾಗಿ ಬಳಸಬಹುದು. ಆದರೆ ಎಲ್ಲರೂ ಪಾಸ್ ಪೋರ್ಟ್, ಪಾನ್ ಕಾರ್ಡ್ ಅಥವಾ ಡ್ರೈವಿಂಗ್ ಲೈಸನ್ಸ್ ಹೊಂದಿರುವುದಿಲ್ಲ. ಅಲ್ಲದೇ ಪಾನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್ ಅನ್ನು ಅನ್ನು ವಿಳಾಸದ ಪುರಾವೆಯಾಗಿ ಪರಿಗಣಿಸಲಾಗುವುದಿಲ್ಲ. ಆದರೆ ಪಡಿತರ ಮತ್ತು ಇ-ಪಡಿತರ ಕಾರ್ಡ್ ಅನ್ನು ವಿಳಾಸದ ಪುರಾವೆಯಾಗಿ ಪರಿಗಣಿಸಲಾಗುತ್ತದೆ.

ಇದನ್ನೂ ಓದಿ: Income Tax Return: ಹಳೆಯ ತೆರಿಗೆ ಪದ್ದತಿ ಕೊನೆಯಾಗುತ್ತಾ? CBDT ಅಧ್ಯಕ್ಷ ಹೇಳೋದೇನು?

ನೀರು, ವಿದ್ಯುತ್‌ ಬಿಲ್‌:

ಈಗ ಇದರೊಂದಿಗೆ ವಿದ್ಯುತ್, ನೀರು ಮತ್ತು ದೂರವಾಣಿ ಬಿಲ್‌ಗಳನ್ನು ವಿಳಾಸದ ಪುರಾವೆಯಾಗಿ ಬಳಸಬಹುದು. ಮುಖ್ಯವಾಗಿ ಆಧಾರ್ ಕಾರ್ಡ್‌ನಲ್ಲಿರುವ ವಿಳಾಸವನ್ನು ನವೀಕರಿಸಲು ಯಾರ ಹೆಸರಿನಲ್ಲಿ ವಿದ್ಯುತ್ ಬಿಲ್, ದೂರವಾಣಿ ಬಿಲ್, ನೀರಿನ ಬಿಲ್ ಅನ್ನು ಬಳಸಬಹುದು. ಆದರೆ ಇದು ಕನಿಷ್ಠ 3 ತಿಂಗಳಿಗಿಂತ ಹಳೆಯದಾಗಿರಬೇಕು.

ಪೋಸ್ಟ್‌ಪೇಯ್ಡ್ ಮೊಬೈಲ್ ಬಿಲ್:

ಇದಲ್ಲದೇ ಪೋಸ್ಟ್‌ಪೇಯ್ಡ್ ಮೊಬೈಲ್ ಬಿಲ್ ಅನ್ನು ಸಹ ಬಳಸಬಹುದು. ಆಧಾರ್ ಕಾರ್ಡ್ ಹೊಂದಿರುವವರು ತಮ್ಮ ಜೀವ ಮತ್ತು ವೈದ್ಯಕೀಯ ವಿಮಾ ಪಾಲಿಸಿಗಳನ್ನು ಬಳಸಬಹುದು ಎಂದು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಹೇಳುತ್ತದೆ. ಆದರೆ ಈ ನೀತಿಯು ಬಿಲ್ ವಿತರಿಸಿದ ದಿನಾಂಕದಿಂದ 1 ವರ್ಷದವರೆಗೆ ಮಾತ್ರ ಮಾನ್ಯವಾಗಿರುತ್ತದೆ.

Continue Reading

ಧಾರ್ಮಿಕ

Vastu Tips: ಮನೆಯಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಬೇಕೆಂದರೆ ಅಡುಗೆ ಮನೆ ಹೀಗಿರಬೇಕು!

ವಾಸ್ತು ಶಾಸ್ತ್ರದ (Vastu Tips) ಪ್ರಕಾರ ಅಡುಗೆ ಮನೆಯನ್ನು ಮನೆಯ ಪ್ರಮುಖ ಭಾಗವೆಂದು ಪರಿಗಣಿಸಲಾಗುತ್ತದೆ. ಮನೆಯೊಳಗಿನ ಅನೇಕ ವಿಷಯಗಳು ಯಾವ ದಿಕ್ಕಿನಲ್ಲಿ ಅಡುಗೆ ಮಾಡಿ ತಿನ್ನುತ್ತೀರಿ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. ಮನೆಗೆ ಶಾಂತಿ ಮತ್ತು ಸಮೃದ್ಧಿಯನ್ನು ತರಲು ಯಾವ ದಿಕ್ಕಿನಲ್ಲಿ ಅಡುಗೆ ಮಾಡಬೇಕೆಂದು ಎಂಬುದನ್ನು ನಾವು ತಿಳಿದುಕೊಂಡಿದ್ದರೆ ಒಳ್ಳೆಯದು.

VISTARANEWS.COM


on

By

Vastu Tips
Koo

ಮನೆಯಲ್ಲಿ (vastu for home) ಸುಖ, ಶಾಂತಿ, ನೆಮ್ಮದಿ ಇರಬೇಕಾದರೆ ವಾಸ್ತು ಪರಿಪಾಲನೆ ಬಹಳ ಮುಖ್ಯವಾಗಿದೆ. ಮನೆಯಲ್ಲಿ ವಾಸ್ತು (Vastu Tips) ಸರಿಯಾಗಿ ಇಲ್ಲದೇ ಇದ್ದರೆ ಆರ್ಥಿಕ ತೊಂದರೆ, ಅಶಾಂತಿ, ಆರೋಗ್ಯ ಸಮಸ್ಯೆಗಳು ಸೇರಿದಂತೆ ಹಲವು ರೀತಿಯ ತೊಂದರೆಗಳು ಎದುರಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ವಾಸ್ತುವಿಗೆ ಹಿಂದೂ ಸಂಪ್ರದಾಯದಲ್ಲಿ ಸಾಕಷ್ಟು ಮಾನ್ಯತೆ ನೀಡಲಾಗಿದೆ.

ವಾಸ್ತು ಶಾಸ್ತ್ರದ ಪ್ರಕಾರ ಅಡುಗೆ ಮನೆಯನ್ನು (kitchen room) ಮನೆಯ ಪ್ರಮುಖ ಭಾಗವೆಂದು ಪರಿಗಣಿಸಲಾಗುತ್ತದೆ. ಮನೆಯೊಳಗಿನ ಅನೇಕ ವಿಷಯಗಳು ಯಾವ ದಿಕ್ಕಿನಲ್ಲಿ (Cooking Directions) ಅಡುಗೆ ಮಾಡಿ ತಿನ್ನುತ್ತೀರಿ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. ಮನೆಗೆ ಶಾಂತಿ ಮತ್ತು ಸಮೃದ್ಧಿಯನ್ನು ತರಲು ಯಾವ ದಿಕ್ಕಿನಲ್ಲಿ ಅಡುಗೆ ಮಾಡಬೇಕೆಂದು ಎಂಬುದನ್ನು ನಾವು ತಿಳಿದುಕೊಂಡಿದ್ದರೆ ಒಳ್ಳೆಯದು

Vastu Tips
Vastu Tips

.

ಅಡುಗೆ ಮನೆಯಿಂದಲೂ ಬರುತ್ತೆ ವಾಸ್ತು ದೋಷಗಳು

ಅಡುಗೆ ಮನೆಯಲ್ಲಿನ ವಾಸ್ತು ದೋಷಗಳು ಮನೆಯಲ್ಲಿ ರೋಗ ಮತ್ತು ಇನ್ನಿತರ ಸಮಸ್ಯೆಗಳನ್ನು ಉಂಟು ಮಾಡುತ್ತದೆ. ಹೀಗಾಗಿ ಅಡುಗೆ ಮನೆಯಲ್ಲಿ ಯಾವ ರೀತಿಯಲ್ಲಿ ಆಹಾರವನ್ನು ಬೇಯಿಸುತ್ತೀರಿ ಎಂಬುದರ ಬಗ್ಗೆ ಗಮನ ಹರಿಸುವುದು ಅಗತ್ಯವಾಗಿದೆ.

ಅಲ್ಲದೇ ಅಡುಗೆ ಮಾಡುವಾಗ ಅಡುಗೆ ಮಾಡುವವರ ಭಾವನೆಗಳು ತಿನ್ನುವವರ ಮನಸ್ಸಿನ ಮೇಲೆ ಪರಿಣಾಮ ಬೀರುತ್ತವೆ. ಇದನ್ನು ಗಮನದಲ್ಲಿ ಇಟ್ಟುಕೊಂಡು ಅಡುಗೆ ಮಾಡುವುದು ಮನೆಯಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಯಾಗಲು ಕಾರಣವಾಗುತ್ತದೆ.

Vastu Tips
Vastu Tips


ತಪ್ಪಿಸಬೇಕಾದ ಸಂಗತಿಗಳು

ದಕ್ಷಿಣ ದಿಕ್ಕು: ಎಂದಿಗೂ ದಕ್ಷಿಣಕ್ಕೆ ಮುಖ ಮಾಡಿ ಅಡುಗೆ ಮಾಡಬೇಡಿ. ಇದು ಬಡತನವನ್ನು ತರಬಹುದು. ತಲೆನೋವು, ಕೀಲು ನೋವು ಮತ್ತು ಮೈಗ್ರೇನ್‌ಗಳನ್ನು ಉಂಟು ಮಾಡಬಹುದು.

ಪಶ್ಚಿಮ ದಿಕ್ಕು: ಪಶ್ಚಿಮಾಭಿಮುಖವಾಗಿ ಅಡುಗೆ ಮಾಡುವುದು ವೈವಾಹಿಕ ಜೀವನದಲ್ಲಿ ಅಪಶ್ರುತಿ ಮತ್ತು ಅತೃಪ್ತಿಯನ್ನು ಉಂಟುಮಾಡಬಹುದು.

ಉತ್ತರ ದಿಕ್ಕು: ಉತ್ತರ ದಿಕ್ಕಿಗೆ ಮುಖಮಾಡಿ ಅಡುಗೆ ಮಾಡುವುದು ಆರ್ಥಿಕ ಸಮಸ್ಯೆ ಮತ್ತು ಬಡತನಕ್ಕೆ ಕಾರಣವಾಗಬಹುದು.

Vastu Tips
Vastu Tips


ಅಡುಗೆಗೆ ಶುಭ ಸಲಹೆ

ಪೂರ್ವ ದಿಕ್ಕು: ಅಡುಗೆ ಮಾಡುವಾಗ ಪೂರ್ವ ದಿಕ್ಕಿಗೆ ಮುಖ ಮಾಡುವುದನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗುತ್ತದೆ.

ಪೂರ್ವವು ಸೂರ್ಯನ ದಿಕ್ಕು, ಧನಾತ್ಮಕ ಶಕ್ತಿಯನ್ನು ಹರಡುತ್ತದೆ. ಈ ದಿಕ್ಕಿನಲ್ಲಿ ಬೇಯಿಸಿದ ಆಹಾರವು ಮನೆಯಲ್ಲಿ ಧನಾತ್ಮಕ ಶಕ್ತಿಯನ್ನು ತುಂಬುತ್ತದೆ. ಜಗಳಗಳನ್ನು ಕಡಿಮೆ ಮಾಡುತ್ತದೆ ಮತ್ತು ಗಮನವನ್ನು ಹೆಚ್ಚಿಸುತ್ತದೆ. ಇದು ಉತ್ತಮ ಆದಾಯಕ್ಕೆ ಕಾರಣವಾಗಬಹುದು.

ವಾಸ್ತು ನಿಯಮಗಳು

ಅಗ್ನಿ ದೇವರು ವಾಸಿಸುತ್ತಾನೆ ಎಂದು ನಂಬಲಾದ ವಾಯುವ್ಯ ಅಥವಾ ಆಗ್ನೇಯ ದಿಕ್ಕಿನಲ್ಲಿ ಅಡುಗೆ ಮನೆ ಇರಬೇಕು.

ಅಡುಗೆ ಮಾಡುವಾಗ ಪೂರ್ವಕ್ಕೆ ಮುಖ ಮಾಡಿ ಮಾಡಬೇಕು.

ಅಡುಗೆ ಮನೆಯಲ್ಲಿ ಸಿಂಕ್ ಅನ್ನು ಈಶಾನ್ಯ ಮೂಲೆಯಲ್ಲಿ ಇರಿಸಬೇಕು.

ಅಡುಗೆ ಮನೆಯ ಕಿಟಕಿಗಳು ಪೂರ್ವ ಮತ್ತು ಪಶ್ಚಿಮದಲ್ಲಿ ಸ್ಥಾಪಿಸಿ.

ಅಲಂಕಾರಕ್ಕಾಗಿ ಅಡುಗೆ ಮನೆಯಲ್ಲಿ ಹಣ್ಣು ಮತ್ತು ತರಕಾರಿಗಳ ಚಿತ್ರಗಳು ಒಳ್ಳೆಯದು.

ಸಮೃದ್ಧಿ ಮತ್ತು ಉತ್ತಮ ಆರೋಗ್ಯವನ್ನು ಖಚಿತಪಡಿಸಿಕೊಳ್ಳಲು ಅಡುಗೆ ಮಾಡುವ ಸ್ಥಳ, ಓಲೆ ಸ್ವಚ್ಛವಾಗಿರಬೇಕು.

ಅಡುಗೆ ಮನೆಯ ಓಲೆ ಮನೆಯ ಮುಖ್ಯ ಬಾಗಿಲಿನ ಹೊರಗಿನಿಂದ ಗೋಚರಿಸಬಾರದು. ಅಗತ್ಯವಿದ್ದರೆ ಪರದೆಯನ್ನು ಬಳಸಿ.

ಶೌಚಾಲಯ, ಮೆಟ್ಟಿಲು ಅಥವಾ ಪೂಜಾ ಕೊಠಡಿಗಳ ಮೇಲೆ ಅಥವಾ ಕೆಳಗೆ ಅಡುಗೆಮನೆಯನ್ನು ಇಡಬೇಡಿ.

ಮಾನಸಿಕ ಸಮತೋಲನ ಮತ್ತು ಸಾಮರಸ್ಯವನ್ನು ಕಾಪಾಡಿಕೊಳ್ಳಲು ನೀರು ಮತ್ತು ಬೆಂಕಿಯ ಅಂಶಗಳನ್ನು ಪ್ರತ್ಯೇಕವಾಗಿ ಇರಿಸಿ.

ಅಡುಗೆ ಕೋಣೆಯು ಮಲಗುವ ಕೋಣೆ, ಪೂಜಾ ಕೊಠಡಿ ಅಥವಾ ಶೌಚಾಲಯಗಳ ಕೆಳಗೆ ಅಥವಾ ಮೇಲೆ ಇಡುವುದನ್ನು ತಪ್ಪಿಸಿ.

ಇದನ್ನೂ ಓದಿ: Vastu Tips: ಮಕ್ಕಳ ಮದುವೆ ವಿಳಂಬವಾಗುತ್ತಿದೆಯೆ? ವಾಸ್ತು ದೋಷವೂ ಕಾರಣವಿರಬಹುದು!

ಧನಾತ್ಮಕ ಕಂಪನಗಳನ್ನು ಹೆಚ್ಚಿಸಲು ಅಡುಗೆಮನೆಯನ್ನು ಸ್ವಚ್ಛವಾಗಿ ಮತ್ತು ಗೊಂದಲವಿಲ್ಲದೆ ಇರಿಸಿ.

ಶುದ್ಧತೆ ಮತ್ತು ನೈರ್ಮಲ್ಯವನ್ನು ಕಾಪಾಡಿಕೊಳ್ಳಲು ಮಾಂಸಾಹಾರಿ ಆಹಾರವನ್ನು ತಯಾರಿಸಲು ಪ್ರತ್ಯೇಕ ಸ್ಥಳವನ್ನು ಬಳಸಿ.

Continue Reading

ಧಾರ್ಮಿಕ

Shravan 2024: ಶ್ರಾವಣ ಮಾಸದಲ್ಲಿ ಯಾವ ಆಹಾರ ತಿನ್ನಬೇಕು, ಯಾವುದನ್ನು ತಿನ್ನಬಾರದು?

Shravan 2024: ಶ್ರಾವಣ ಮಾಸದಲ್ಲಿ (Shravan Month 2024) ಹೆಚ್ಚಾಗಿ ದೇವರ ಭಕ್ತಿ, ಪ್ರಾರ್ಥನೆಯಲ್ಲಿ ತೊಡಗುವುದರಿಂದ ಆಹಾರ ನಿಯಮಗಳನ್ನು ಕಠಿಣವಾಗಿ ಅನುಸರಿಸಲಾಗುತ್ತದೆ. ಉಪವಾಸ ಇರುವವರು ಈ ಸಂದರ್ಭದಲ್ಲಿ ಆಹಾರದ ಮಾರ್ಗಸೂಚಿಗಳನ್ನು ಅನುಸರಿಸಿ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಆಧ್ಯಾತ್ಮಿಕ ಗಮನವನ್ನು ಕೇಂದ್ರೀಕರಿಸಬಹುದು.

VISTARANEWS.COM


on

By

Shravan Month 2024
Koo

ಶ್ರಾವಣಾ ಬಂತು ಕಾಡಿಗೆ.. ಬಂತು ನಾಡಿಗೆ.. ಬಂತು ಬೀಡಿಗೆ.. ಕವಿ ದ. ರಾ. ಬೇಂದ್ರೆಯವರ (da.ra. bendre) ಕವನದ ಸಾಲುಗಳು ಶ್ರಾವಣ ಮಾಸದ (Shravan 2024) ಸಂಭ್ರಮವನ್ನು ವರ್ಣಿಸುವಂತೆ ಶ್ರಾವಣ ಮಾಸವು (Shravan Month) ಹಬ್ಬ ಹರಿದಿನಗಳನ್ನು ಹೊತ್ತುಕೊಂಡು ಬರುತ್ತದೆ. ಈ ಮಾಸವು ಶಿವನಿಗೆ ಸಮರ್ಪಿತವಾಗಿದ್ದು, ಈ ಸಂದರ್ಭದಲ್ಲಿ ಹಿಂದೂಗಳು ಉಪವಾಸ, ಪ್ರಾರ್ಥನೆಯಲ್ಲಿ ಕಳೆಯುತ್ತಾರೆ.

ಈ ಬಾರಿ ಆಗಸ್ಟ್ 4ರಿಂದ ಶ್ರಾವಣ ಮಾಸ ಆರಂಭಗೊಳ್ಳಲಿದ್ದು, ಈ ಮಂಗಳಕರ ಅವಧಿಯಲ್ಲಿ ವಿಶೇಷ ಪ್ರಾರ್ಥನೆ, ಆಚರಣೆ ಮತ್ತು ಆಹಾರದ ನಿರ್ಬಂಧ ಇರುತ್ತದೆ. ಶ್ರಾವಣ ಮಾಸದಲ್ಲಿ ಭಕ್ತರು ತಮ್ಮ ದೇಹ ಮತ್ತು ಮನಸ್ಸನ್ನು ಶುದ್ಧೀಕರಿಸಲು ನಿರ್ದಿಷ್ಟ ಆಹಾರ ಮಾರ್ಗಸೂಚಿಗಳನ್ನು ಅನುಸರಿಸುತ್ತಾರೆ. ಈ ಪವಿತ್ರ ಮಾಸದಲ್ಲಿ ಯಾವ ಆಹಾರಗಳನ್ನು ಸೇವಿಸಬೇಕು ಮತ್ತು ತಪ್ಪಿಸಬೇಕು ಎಂಬುದರ ಕುರಿತು ಮಾಹಿತಿ ಇಲ್ಲಿದೆ.

ಶ್ರಾವಣ ಮಾಸದಲ್ಲಿ ತಿನ್ನಬಹುದಾದ ಆಹಾರಗಳು

Shravan Month 2024
Shravan Month 2024


ತಾಜಾ ಹಣ್ಣುಗಳು: ಶ್ರಾವಣ ಮಾಸದಲ್ಲಿ ತಾಜಾ ಹಣ್ಣುಗಳು ಆಹಾರದ ಅತ್ಯಗತ್ಯ ಭಾಗವಾಗಿದೆ. ಅವುಗಳನ್ನು ಶುದ್ಧ ಮತ್ತು ಜೀರ್ಣಿಸಿಕೊಳ್ಳಲು ಸುಲಭವೆಂದು ಪರಿಗಣಿಸಲಾಗುತ್ತದೆ. ಅಗತ್ಯವಾದ ಪೋಷಕಾಂಶಗಳು ಮತ್ತು ಜಲಸಂಚಯನವನ್ನು ಒದಗಿಸುತ್ತದೆ.ಇದರಲ್ಲಿ ಬಾಳೆಹಣ್ಣು, ಸೇಬು, ದಾಳಿಂಬೆ ಮತ್ತು ಕಲ್ಲಂಗಡಿಗಳು ಸೇರಿವೆ.

ಡೇರಿ ಉತ್ಪನ್ನಗಳು: ಹಾಲು, ಮೊಸರು, ಪನೀರ್ ಮತ್ತು ತುಪ್ಪವನ್ನು ಶ್ರಾವಣ ಮಾಸದಲ್ಲಿ ಸೇವಿಸಬಹುದು. ಈ ಡೇರಿ ಉತ್ಪನ್ನಗಳು ಪೌಷ್ಟಿಕಾಂಶ ಮಾತ್ರವಲ್ಲದೇ ದೇಹವನ್ನು ತಂಪಾಗಿಸುತ್ತದೆ.

ಸಾಬುದಾನ: ಉಪವಾಸದ ಸಮಯದಲ್ಲಿ ಸಾಬುದಾನ ಖಿಚಡಿ ಅಥವಾ ವಡಾ ಶ್ರಾವಣ ಮಾಸದ ಮುಖ್ಯವಾದ ಆಹಾರವಾಗಿದೆ. ಸಾಬುದಾನವು ಕಾರ್ಬೋಹೈಡ್ರೇಟ್‌ಗಳು ಸಮೃದ್ಧವಾಗಿದ್ದು ದಿನವಿಡೀ ಶಕ್ತಿಯನ್ನು ನೀಡುತ್ತದೆ.

ಹುರುಳಿಕಾಳಿನ ಹಿಟ್ಟು: ಪೂರಿ, ಚಪಾತಿ ಅಥವಾ ಪ್ಯಾನ್ ಕೇಕ್‌ಗಳನ್ನು ತಯಾರಿಸಲು ಹುರುಳಿಕಾಳಿನ ಹಿಟ್ಟನ್ನು ಬಳಸಲಾಗುತ್ತದೆ. ಇದು ಜೀರ್ಣಿಸಿಕೊಳ್ಳಲು ಸುಲಭವಾಗಿದೆ ಮತ್ತು ಉಪವಾಸಕ್ಕೆ ಸೂಕ್ತವಾಗಿದೆ.

ಚೆಸ್ ನೆಟ್ ಹಿಟ್ಟು: ಹುರುಳಿ ಹಿಟ್ಟಿನಂತೆಯೇ ಇದು ಪೂರಿ ಮತ್ತು ಹಲ್ವಾದಂತಹ ವಿವಿಧ ಭಕ್ಷ್ಯಗಳನ್ನು ತಯಾರಿಸಲು ಬಳಸುವ ಮತ್ತೊಂದು ಉಪವಾಸ ಸ್ನೇಹಿ ಹಿಟ್ಟಾಗಿದೆ.

ಆಲೂಗಡ್ಡೆಗಳು ಮತ್ತು ಸಿಹಿ ಆಲೂಗಡ್ಡೆಗಳು: ಇದನ್ನು ವಿವಿಧ ಪಾಕವಿಧಾನಗಳಲ್ಲಿ ಬಳಸಬಹುದು. ಇದರಿಂದ ಉಪವಾಸದಲ್ಲಿರುವವರು ಅಗತ್ಯ ಶಕ್ತಿಯನ್ನು ತುಂಬುತ್ತಾರೆ ಮತ್ತು ಒದಗಿಸುತ್ತಾರೆ.

ಬೀಜಗಳು ಮತ್ತು ಒಣ ಹಣ್ಣುಗಳು: ಬಾದಾಮಿ, ವಾಲ್ ನಾಟ್, ಒಣದ್ರಾಕ್ಷಿ ಮತ್ತು ಇತರ ಒಣ ಹಣ್ಣುಗಳು ಲಘು ಆಹಾರಕ್ಕಾಗಿ ಮತ್ತು ಹೆಚ್ಚುವರಿ ಪೌಷ್ಟಿಕಾಂಶ ಮತ್ತು ಶಕ್ತಿಗಾಗಿ ಭಕ್ಷ್ಯಗಳಿಗೆ ಸೇರಿಸಲು ಉತ್ತಮವಾಗಿದೆ.

ತೆಂಗಿನಕಾಯಿ: ಶ್ರಾವಣ ಮಾಸದಲ್ಲಿ ತಾಜಾ ತೆಂಗಿನಕಾಯಿ, ತೆಂಗಿನ ನೀರು ಮತ್ತು ತೆಂಗಿನ ಹಾಲು ಸಾಮಾನ್ಯವಾಗಿ ಸೇವಿಸಲಾಗುತ್ತದೆ.

Shravan Month 2024
Shravan Month 2024


ಶ್ರಾವಣ ಮಾಸದಲ್ಲಿ ತಪ್ಪಿಸಬೇಕಾದ ಆಹಾರಗಳು

ಮಾಂಸಾಹಾರ: ಮಾಂಸ, ಮೀನು ಮತ್ತು ಮೊಟ್ಟೆಗಳನ್ನು ಶ್ರಾವಣ ಮಾಸದಲ್ಲಿ ಕಟ್ಟುನಿಟ್ಟಾಗಿ ತಪ್ಪಿಸಲಾಗುತ್ತದೆ. ಶುದ್ಧತೆ ಮತ್ತು ಆಧ್ಯಾತ್ಮಿಕ ಬೆಳವಣಿಗೆಯನ್ನು ಉತ್ತೇಜಿಸಲು ಸಸ್ಯಾಹಾರಿ ಆಹಾರಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುತ್ತದೆ.

ಈರುಳ್ಳಿ ಮತ್ತು ಬೆಳ್ಳುಳ್ಳಿ: ಇವುಗಳು ದೇಹದಲ್ಲಿ ಶಾಖವನ್ನು ಉಂಟುಮಾಡುತ್ತವೆ ಎಂದು ನಂಬಲಾಗಿದೆ. ಆದ್ದರಿಂದ ಶ್ರಾವಣ ಮಾಸದಲ್ಲಿ ಅವುಗಳನ್ನು ತಪ್ಪಿಸಲಾಗುತ್ತದೆ. ಇದು ನಕಾರಾತ್ಮಕ ಶಕ್ತಿಯನ್ನು ಉತ್ತೇಜಿಸುತ್ತದೆ.

ಧಾನ್ಯಗಳು ಮತ್ತು ಬೇಳೆಕಾಳುಗಳು: ಗೋಧಿ, ಅಕ್ಕಿ, ಧಾನ್ಯ ಮತ್ತು ಬೇಳೆಕಾಳುಗಳನ್ನು ಸಾಮಾನ್ಯವಾಗಿ ಶ್ರಾವಣ ಮಾಸದಲ್ಲಿ ಬಳಸಲಾಗುವುದಿಲ್ಲ. ಇದರ ಬದಲು ಹುರುಳಿ ಕಾಳು, ಚೆಸ್ಟ್ ಹಿಟ್ಟನ್ನು ಬಳಸಲಾಗುತ್ತದೆ.

ಮದ್ಯ ಮತ್ತು ತಂಬಾಕು: ಶ್ರಾವಣ ಮಾಸ ಪವಿತ್ರ ತಿಂಗಳಾಗಿರುವುದರಿಂದ ಮದ್ಯ ಮತ್ತು ತಂಬಾಕು ಸೇವನೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಇದನ್ನೂ ಓದಿ: Home Remedies for Dengue: ಡೆಂಗ್ಯು ಜ್ವರ ಬಂದರೂ ಪ್ಲೇಟ್‌ಲೆಟ್‌ ಸಂಖ್ಯೆ ಕುಸಿಯದಿರಲು ಯಾವ ಆಹಾರ ಸೇವಿಸಬೇಕು?

ಸಂಸ್ಕರಿಸಿದ ಮತ್ತು ಜಂಕ್ ಆಹಾರಗಳು: ಆರೋಗ್ಯಕರ ಮತ್ತು ನೈಸರ್ಗಿಕ ಆಹಾರಕ್ಕೆ ಹೆಚ್ಚಿನ ಒತ್ತು ನೀಡುವುದರಿಂದ ಚಿಪ್ಸ್, ಪ್ಯಾಕೆಟ್ ತಿಂಡಿಗಳು ಮತ್ತು ಇತರ ಸಂಸ್ಕರಿಸಿದ ಆಹಾರಗಳನ್ನು ಸೇವಿಸಲಾಗುವುದಿಲ್ಲ.

ಮಸಾಲೆಯುಕ್ತ ಮತ್ತು ಎಣ್ಣೆಯುಕ್ತ ಆಹಾರಗಳು: ಮಸಾಲೆಯುಕ್ತ ಮತ್ತು ಎಣ್ಣೆಯುಕ್ತ ಆಹಾರವನ್ನು ಸಾಮಾನ್ಯವಾಗಿ ತಪ್ಪಿಸಲಾಗುತ್ತದೆ ಏಕೆಂದರೆ ಅವು ಜೀರ್ಣಕ್ರಿಯೆಗೆ ಅಡ್ಡಿಪಡಿಸಬಹುದು ಮತ್ತು ಉಪವಾಸಕ್ಕೆ ತೊಂದರೆ ಉಂಟು ಮಾಡುವುದು.

Continue Reading

ಪ್ರಮುಖ ಸುದ್ದಿ

Viral News: ಜೈಲಿಂದ ಹೊರಬಂದ ಖುಷಿಗೆ ರೌಡಿಯ ಬೃಹತ್ ಮೆರವಣಿಗೆ; ಮತ್ತೆ ಜೈಲಿಗೇ ಕಳುಹಿಸಿದ ಪೊಲೀಸರು!

Viral News ಮಹಾರಾಷ್ಟ್ರ ಅಪಾಯಕಾರಿ ಚಟುವಟಿಕೆಗಳ ತಡೆ (ಎಂಪಿಡಿಎ) ಕಾಯ್ದೆಯಡಿ ಶಿಕ್ಷೆ ಅನುಭವಿಸುತ್ತಿದ್ದ ನಾಸಿಕ್‌ನ ಕುಖ್ಯಾತ ರೌಡಿ ಹರ್ಷದ್ ಪಟಾಂಕರ್ ಜುಲೈ 23 ರಂದು ಜೈಲಿನಿಂದ ಬಿಡುಗಡೆಯಾಗಿದ್ದ. ಜೈಲಿನಿಂದ ಬಿಡುಗಡೆಯಾದ ಹರ್ಷದ್ ಪಟಾಂಕರ್ ಅನ್ನು ಸ್ವಾಗತಿಸಲು ಆತನ ಬೆಂಬಲಿಗರು ಬೃಹತ್ ರ‍್ಯಾಲಿಯನ್ನು ಆಯೋಜಿಸಿದ್ದರು. ಇದರ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ ಈ ರ‍್ಯಾಲಿ ನಡೆಸಿ ಮತ್ತೆ ಆತ ಜೈಲು ಪಾಲಾಗಿದ್ದಾನೆ ಎನ್ನಲಾಗಿದೆ.

VISTARANEWS.COM


on

Viral News
Koo

ಮಹಾರಾಷ್ಟ್ರ : ಮದುವೆ, ದೇವಸ್ಥಾನದ ಪ್ರತಿಷ್ಠಾಪನೆ ಸಮಾರಂಭದ ವೇಳೆ ಬೃಹತ್ ಮೆರವಣಿಗೆಯನ್ನು ಮಾಡಲಾಗುತ್ತದೆ. ಆದರೆ ಇತ್ತೀಚೆಗೆ ಜೈಲಿನಿಂದ ಬಿಡುಗಡೆಯಾದ ಮಹಾರಾಷ್ಟ್ರದ ಕುಖ್ಯಾತ ರೌಡಿನೊಬ್ಬನನ್ನು ಸ್ವಾಗತಿಸಲು ಆತನ ಬೆಂಬಲಿಗರು ಬೃಹತ್‌ ರ‍್ಯಾಲಿಯನ್ನು  ಆಯೋಜಿಸಿದ್ದರು. ಇದರ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral News) ಆಗಿದೆ. ಆದರೆ ಈ ರ‍್ಯಾಲಿ ನಡೆಸಿ ಮತ್ತೆ ಆತ ಜೈಲು ಪಾಲಾಗಿದ್ದಾನೆ ಎನ್ನಲಾಗಿದೆ.

ಮಹಾರಾಷ್ಟ್ರ ಅಪಾಯಕಾರಿ ಚಟುವಟಿಕೆಗಳ ತಡೆ (ಎಂಪಿಡಿಎ) ಕಾಯ್ದೆಯಡಿ ಶಿಕ್ಷೆ ಅನುಭವಿಸುತ್ತಿದ್ದ ನಾಸಿಕ್‌ನ ಕುಖ್ಯಾತ ರೌಡಿ ಹರ್ಷದ್ ಪಟಾಂಕರ್ ಜುಲೈ 23 ರಂದು ಜೈಲಿನಿಂದ ಬಿಡುಗಡೆಯಾಗಿದ್ದ. ಹಾಗಾಗಿ ಆ ದಿನ ಮಧ್ಯಾಹ್ನ 3:30 ಕ್ಕೆ ಸುಮಾರು 15 ದ್ವಿಚಕ್ರ ವಾಹನಗಳೊಂದಿಗೆ ಬೃಹತ್ ಮೆರವಣಿಗೆ ನಡೆಸಲಾಗಿದೆ. ಈ ಮೆರವಣಿಗೆ ಬೆತೆಲ್ ನಗರದಿಂದ ಪ್ರಾರಂಭವಾಗಿ ಅಂಬೇಡ್ಕರ್ ಚೌಕ್, ಸಾಧು ವಾಸ್ವಾನಿ ರಸ್ತೆ ಮತ್ತು ಶರಣಪುರ ರಸ್ತೆ ಮೂಲಕ ಸಾಗಿದೆ. ಕಾರಿನ ಸನ್ ರೂಫ್‌ನಿಂದ ಕೈ ಬೀಸುತ್ತಿದ್ದ ಪಟಾಂಕರ್ ಅವರೊಂದಿಗೆ ಅವರ ಸ್ನೇಹಿತರು ಮತ್ತು ಕುಟುಂಬ ಸದಸ್ಯರು ಸಂಭ್ರಮಾಚರಣೆಯಲ್ಲಿ ಭಾಗವಹಿಸಿ ಘೋಷಣೆಗಳನ್ನು ಕೂಗುತ್ತಿದ್ದರು.

ವರದಿ ಪ್ರಕಾರ, ಪಟಾಂಕರ್ ಮಾತ್ರವಲ್ಲದೆ ಅವರ ಏಳು ಸಹಚರರ ವಿರುದ್ಧವೂ ಸರ್ಕಾರ್ವಾಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪಟಾಂಕರ್ ಅವರನ್ನು ಈ ಹಿಂದೆ ಕೊಲೆ ಯತ್ನ, ಕಳ್ಳತನ ಮತ್ತು ಹಿಂಸಾಚಾರ ಸೇರಿದಂತೆ ಹಲವಾರು ಅಪರಾಧಗಳಿಗಾಗಿ ಬಂಧಿಸಲಾಗಿತ್ತು ಮತ್ತು ಜೈಲಿಗೆ ಹಾಕಲಾಗಿತ್ತು.

ಇದನ್ನೂ ಓದಿ: 34 ಲಕ್ಷ ರೂ.ಗೆ ಮಾರಾಟವಾಯಿತು ʼರಾಮ ಜನ್ಮಭೂಮಿʼ ಸ್ಪೆಷಲ್‌ ವಾಚ್!

ಒಂದು ವರ್ಷದ ಹಿಂದೆ ಎಂಪಿಡಿಎ ಕಾಯ್ದೆಯಡಿ ಅವರನ್ನು ಬಂಧಿಸಲಾಗಿತ್ತು. ಆದಾಗ್ಯೂ, ಸಂಭ್ರಮಾಚರಣೆಯ ರ‍್ಯಾಲಿಯಿಂದಾಗಿ ಪೊಲೀಸ್ ಕ್ರಮಕೈಗೊಂಡು ಈಗ ಅವರನ್ನು ಮತ್ತೆ ಜೈಲಿಗೆ ತಳ್ಳಿದೆ ಎನ್ನಲಾಗಿದೆ. ಅವರ ಆರು ಸಹಚರರನ್ನು ಗೋಪಾಲ್ ನಾಗೋರ್ಕರ್, ವೇದಾಂತ್ ಚಾಲ್ಡೆ, ಶಾನ್ ಮೈಕೆಲ್, ಜಾಯ್ ಮೈಕೆಲ್, ರಾಬಿನ್ಸನ್ ಬ್ಯಾಟಿಸ್, ವೈಭವ್ ಖಂಡ್ರೆ ಮತ್ತು ವಿಕಾಸ್ ನೇಪಾಳಿ ಎಂದು ಗುರುತಿಸಲಾಗಿದೆ.

Continue Reading
Advertisement
puneeth kerehalli dog meat
ಕ್ರೈಂ12 mins ago

Dog Meat: ನಾಯಿ ಮಾಂಸದ ಗಲಾಟೆ, ಪುನೀತ್‌ ಕೆರೆಹಳ್ಳಿ ಪೊಲೀಸ್‌ ಠಾಣೆಯಲ್ಲೇ ತೀವ್ರ ಅಸ್ವಸ್ಥ

Family Drama Film Review
ಸಿನಿಮಾ25 mins ago

Family Drama Film Review: ಹೊಸ ಅನುಭವ ನೀಡುವ ಫ್ಯಾಮಿಲಿ ಡ್ರಾಮಾ

Michel Phelps ರಾಜಮಾರ್ಗ ಅಂಕಣ
ಅಂಕಣ50 mins ago

ರಾಜಮಾರ್ಗ ಅಂಕಣ: 28 ಒಲಿಂಪಿಕ್ ಪದಕಗಳ ವಿಶ್ವದಾಖಲೆ- ಮೈಕೆಲ್ ಫೆಲ್ಪ್ಸ್

Aadhaar Update
ವಾಣಿಜ್ಯ1 hour ago

Aadhaar Update: ಹೊಸ ನಿಯಮ ಪ್ರಕಾರ ಆಧಾರ್ ವಿಳಾಸ ನವೀಕರಣಕ್ಕೆ ಯಾವ ದಾಖಲೆ ಬಳಸಬಹುದು?

Health Tips Kannada
ಆರೋಗ್ಯ1 hour ago

Health Tips Kannada: ಚಹಾ, ಕಾಫಿಯನ್ನು ಯಾವ ಸಮಯದಲ್ಲಿ ಕುಡಿಯಬಾರದು ಗೊತ್ತೇ?

Vastu Tips
ಧಾರ್ಮಿಕ2 hours ago

Vastu Tips: ಮನೆಯಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಬೇಕೆಂದರೆ ಅಡುಗೆ ಮನೆ ಹೀಗಿರಬೇಕು!

Remedies For Fatty Liver
ಆರೋಗ್ಯ2 hours ago

Remedies For Fatty Liver: ಲಿವರ್‌ನ ಕೊಬ್ಬನ್ನು ನೈಸರ್ಗಿಕವಾಗಿ ಹೀಗೆ ಕರಗಿಸಲು ಸಾಧ್ಯ!

Shravan Month 2024
ಧಾರ್ಮಿಕ2 hours ago

Shravan 2024: ಶ್ರಾವಣ ಮಾಸದಲ್ಲಿ ಯಾವ ಆಹಾರ ತಿನ್ನಬೇಕು, ಯಾವುದನ್ನು ತಿನ್ನಬಾರದು?

karnataka Weather Forecast
ಮಳೆ2 hours ago

Karnataka Weather : ಕರಾವಳಿ-ಮಲೆನಾಡಿನಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ- ಇರಲಿ ಎಚ್ಚರ

dina bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರಿಗೆ ಮಾತೇ ಮೃತ್ಯು, ಮೌನಕ್ಕೆ ಶರಣಾಗಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ13 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ14 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ15 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ16 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ4 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌