Murder case: 3 ವರ್ಷಗಳ ಹಿಂದಿನ ಉದ್ಯಮಿ ಕೊಲೆಗೆ ಟ್ವಿಸ್ಟ್‌; ಕೊಲೆ ಮಾಡಿಸಿದವಳೇ ಹೆಂಡತಿ! - Vistara News

Latest

Murder case: 3 ವರ್ಷಗಳ ಹಿಂದಿನ ಉದ್ಯಮಿ ಕೊಲೆಗೆ ಟ್ವಿಸ್ಟ್‌; ಕೊಲೆ ಮಾಡಿಸಿದವಳೇ ಹೆಂಡತಿ!

Murder case: ಅನೈತಿಕ ಸಂಬಂಧ ತಪ್ಪು ಎನ್ನುವುದು ಗೊತ್ತಿದ್ದೂ ಮತ್ತೆ ಮತ್ತೆ ಅದೇ ಕೆಲಸಕ್ಕೆ ಮುಂದಾಗುತ್ತಾರೆ. ಇನ್ನು ತಾವು ಮಾಡುತ್ತಿರುವ ತಪ್ಪು ಇತರರಿಗೆ ಗೊತ್ತಾದ ತಕ್ಷಣ ತಮ್ಮ ಜೊತೆ ಜೀವನ ಹಂಚಿಕೊಂಡವರ ಪ್ರಾಣವನ್ನು ತೆಗೆಯುವುದಕ್ಕೂ ಹಿಂದು ಮುಂದು ನೋಡಲ್ಲ. ಇಂತಹ ಘಟನೆ ಸಮಾಜದಲ್ಲಿ ದಿನ ನಿತ್ಯ ನಡೆಯುತ್ತಲೇ ಇರುತ್ತದೆ. ಹೆಂಡತಿಯೊಬ್ಬಳು ಜಿಮ್ ಟ್ರೈನರ್ ಬಲೆಗೆ ಬಿದ್ದು ಗಂಡನ ಜೀವಕ್ಕೆ ಕುತ್ತು ತಂದ ಘಟನೆ ನಡೆದಿದೆ. ಮೂರು ವರ್ಷದ ಬಳಿಕ ಈ ಕೊಲೆಯ ಸಂಚು ಬಯಲಾಗಿದೆ.

VISTARANEWS.COM


on

Murder case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜಿಮ್ ಟ್ರೈನರ್ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಸಂಚು ರೂಪಿಸಿ ತನ್ನ ಪತಿಯನ್ನೇ ಕೊಲೆ(Murder case) ಮಾಡಿದ ಘಟನೆಯ ಹಿಂದಿನ ಕತೆ ಕುತೂಹಲಕರವಾಗಿದೆ. ಮೂರು ವರ್ಷಗಳ ಹಿಂದೆ ಹರಿಯಾಣದ ಪಾಣಿಪತ್‌ನಲ್ಲಿ ಕೊಲೆ ನಡೆದಿತ್ತು. ಇದೀಗ ಈ ಘಟನೆಯ ಸತ್ಯಾಂಶ ಬೆಳಕಿಗೆ ಬಂದಿದೆ.

ಹರಿಯಾಣದಲ್ಲಿ ಪಾಣಿಪತ್‌ನಲ್ಲಿ ಡಿಸೆಂಬರ್ 15, 2021ರಂದು ಉದ್ಯಮಿಯೊಬ್ಬರನ್ನು ಅವರ ಮನೆಯಲ್ಲಿಯೇ ಗುಂಡಿಕ್ಕಿ ಕೊಲ್ಲಲಾಗಿತ್ತು. ವಿನೋದ್ ಭರಾರ ಕೊಲೆಯಾದ ವ್ಯಕ್ತಿ, ಶೂಟ್ ಮಾಡಿದ ಟ್ರಕ್ ಚಾಲಕ ದೇವ್ ಸುನರ್ ಎನ್ನಲಾಗಿತ್ತು. ಆರೋಪಿಯನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದರು. ಆರೋಪಿ ಕೂಡ ಜೈಲಿನಲ್ಲಿದ್ದ. ಆದರೆ ಇದೀಗ ಪೊಲೀಸ್ ಅಧಿಕಾರಿಗಳ ಮೊಬೈಲ್‌ಗೆ ವಾಟ್ಸಾಪ್ ಸಂದೇಶವೊಂದು ಬಂದಿದ್ದು, ವಿನೋದ್ ಅವರಿಗೆ ಬಹಳ ಹತ್ತಿರದಲ್ಲಿ ಸಂಬಂಧವಿರುವ ವ್ಯಕ್ತಿ ಅವರ ಕೊಲೆಗೆ ಸಂಚು ರೂಪಿಸಿದ್ದಾರೆ. ಹಾಗಾಗಿ ಈ ಪ್ರಕರಣವನ್ನು ಕೂಲಂಕುಶವಾಗಿ ತನಿಖೆ ಮಾಡುವಂತೆ ಮನವಿ ಮಾಡಲಾಗಿತ್ತು. ಪೊಲೀಸರು ಈ ಸಂದೇಶದ ಬಗ್ಗೆ ಮಾಹಿತಿ ಕಲೆಹಾಕಿದಾಗ ಈ ಸಂದೇಶ ಆಸ್ಟ್ರೇಲಿಯಾದಲ್ಲಿ ನೆಲೆಸಿರುವ ವಿನೋದ್ ಅವರ ಸಹೋದರ ಪ್ರಮೋದ್ ಎಂಬಾತ ಕಳುಹಿಸಿರುವುದಾಗಿ ತಿಳಿದು ಬಂತು.

ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಈ ಪ್ರಕರಣದ ಬಗ್ಗೆ ಸಂಶಯ ವ್ಯಕ್ತವಾದ ಹಿನ್ನೆಲೆಯಲ್ಲಿ ಇನ್ವೆಸ್ಟಿಗೇಶನ್ ಏಜೆನ್ಸಿಗೆ ಈ ಪ್ರಕರಣದ ತನಿಖೆಯನ್ನು ವಹಿಸಲಾಯಿತು. ಆಗ ತನಿಖೆಯ ವೇಳೆ, ಕೊಲೆ ಮಾಡಿದ ಆರೋಪಿ ದೇವ್ ಸುನರ್‌ಗೂ ಕೊಲೆಯಾದ ವಿನೋದ್ ಅವರಿಗೂ ಯಾವುದೇ ಸಂಬಂಧವಿರಲಿಲ್ಲ. ಆದರೆ ಆರೋಪಿ ದೇವ್, ಜಿಮ್ ಟ್ರೈನರ್ ಸುಮಿತ್ ಎಂಬಾತನಿಗೆ ಹತ್ತಿರದವನಾಗಿದ್ದ. ವಿನೋದ್ ಭರಾರ ಅವರ ಪತ್ನಿ ನಿಧಿ, ಜಿಮ್ ಟ್ರೈನರ್ ಜೊತೆ ಅಕ್ರಮ ಸಂಬಂಧ ಹೊಂದಿದ್ದಳು ಎಂಬುದು ತನಿಖೆಯ ವೇಳೆ ತಿಳಿದುಬಂತು.

ಈ ಬಗ್ಗೆ ವಿಚಾರಣೆ ನಡೆಸಿದಾಗ ನಿಧಿ ಅವರು ತಮ್ಮ ಮಗಳ ಜೊತೆ ಆಗಾಗ ಜಿಮ್‌ಗೆ ಭೇಟಿ ನೀಡುತ್ತಿದ್ದರು. ಅಲ್ಲಿ ಜಿಮ್ ಟ್ರೈನರ್ ಸುಮಿತ್‌ನನ್ನು ಭೇಟಿಯಾದ ನಿಧಿ ಆತನೊಂದಿಗೆ ಸಲುಗೆ ಬೆಳೆದು ಸಂಬಂಧದಲ್ಲಿದ್ದರು. ಈ ವಿಚಾರ ತಿಳಿದ ವಿನೋದ್ ಅವರು ಆತನಿಂದ ದೂರವಿರುವಂತೆ ಆಗಾಗ ಮನೆಯಲ್ಲಿ ಜಗಳ ಮಾಡುತ್ತಿದ್ದರು. ಹೀಗಾಗಿ ನಿಧಿ ಮತ್ತು ಸುಮಿತ್ ಸೇರಿ ವಿನೋದ್ ಅವರ ಕೊಲೆಗೆ ಸಂಚು ರೂಪಿಸಿದರು.

ಅದಕ್ಕಾಗಿ ಸುಮಿತ್ ಪಂಜಾಬ್‌ನ ಟ್ರಕ್ ಚಾಲಕ ದೇವ್ ಸುನಾರ್‌ನನ್ನು ಈ ಕೆಲಸಕ್ಕೆ ಸಂಪರ್ಕಿಸಿ ಆತನಿಗೆ 10 ಲಕ್ಷ ರೂ. ನೀಡಿ ಜನವರಿ 2, 2021ರಂದು ದೇವ್ ವಿನೋದ್ ಅವರ ಕಾರಿಗೆ ಡಿಕ್ಕಿ ಹೊಡೆಸಿದ್ದಾನೆ. ಆದರೆ ಈ ಅಪಘಾತದಲ್ಲಿ ವಿನೋದ್ ಗಂಭೀರವಾಗಿ ಗಾಯಗೊಂಡರೂ ಬದುಕುಳಿದಿದ್ದರು. ದೇವ್ ಈ ಪ್ರಕರಣವನ್ನು ಇತ್ಯರ್ಥಗೊಳಿಸುವಂತೆ ವಿನೋದ್ ಮನೆಗೆ ಭೇಟಿ ನೀಡಿದ್ದಾನೆ. ಆಗ ವಿನೋದ್ ಇದಕ್ಕೆ ಒಪ್ಪದಿದ್ದಾಗ ಅವರನ್ನು ಗುಂಡಿಕ್ಕಿ ಕೊಂದಿದ್ದಾನೆ ಎಂದು ಮೊದಲು ಕತೆ ಕಟ್ಟಲಾಗಿತ್ತು. ಆದರೆ ಆಳವಾದ ತನಿಖೆ ನಡೆಸಿದಾಗ ಇದು ಕಟ್ಟು ಕತೆ. ದೇವ್‌ ಅಪಘಾತ ಮಾಡಿ ಉದ್ಯಮಿಯನ್ನು ಆಕ್ಸಿಡೆಂಟ್‌ ಮಾಡಿ ಕೊಲ್ಲಲು ಯತ್ನಿಸಿದ್ದ. ಅದು ವಿಫಲವಾದಾಗ ಗುಂಡಿಕ್ಕಿ ಕೊಂದ ಎನ್ನುವುದು ಖಚಿತವಾಯಿತು.

ಇದನ್ನೂ ಓದಿ:Pakistan Begger: ಪಾಕಿಸ್ತಾನವೇ ಒಂದು ಭಿಕ್ಷುಕ ದೇಶ! ಆದರೆ ಅಲ್ಲಿಯ ಈ ಭಿಕ್ಷುಕ ಎಷ್ಟು ಶ್ರೀಮಂತ ನೋಡಿ!

ಪತಿ ಕೊಲೆಯಾದ ಬಳಿಕ ನಿಧಿ ಮಕ್ಕಳನ್ನು ಆಸ್ಟ್ರೇಲಿಯಾದಲ್ಲಿರುವ ವಿನೋದ್ ಸಹೋದರ ಪ್ರಮೋದ್ ಬಳಿಗೆ ಕಳುಹಿಸಿ ಸುಮಿತ್ ಜೊತೆ ಸುತ್ತಾಡಲು ಶುರು ಮಾಡಿದ್ದಳು. ಇದೀಗ ಇವರಿಬ್ಬರು ತಮ್ಮ ತಪ್ಪನ್ನು ಒಪ್ಪಿಕೊಂಡು ಜೈಲು ಪಾಲಾಗಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೀಡೆ

Medal Biting: ಒಲಂಪಿಕ್ಸ್‌ನಲ್ಲಿ ಕ್ರೀಡಾಪಟುಗಳು ಪದಕ ಕಚ್ಚುವುದು ಏಕೆ?

Medal Biting: ಒಲಿಂಪಿಕ್ಸ್‌ನಲ್ಲಿ ಪದಕ ವಿಜೇತ ಕ್ರೀಡಾಪಟುಗಳು ಪದಕಗಳನ್ನು ಕಚ್ಚಿ (Medal Biteing) ಫೋಟೋಗೆ ಪೋಸ್ ಕೊಡುತ್ತಾರೆ. ಇದು ಯಾಕಾಗಿ? ಪದಕದ ಶುದ್ಧತೆಯನ್ನು ಪರಿಶೀಲಿಸಲೇ ಅಥವಾ ಇದೊಂದು ಸಂಪ್ರದಾಯವೇ? ಇದು ಯಾವಾಗದಿಂದ ಆಚರಣೆಯಲ್ಲಿದೆ ಎನ್ನುವ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

Medal Biteing
Koo

ಬೆಂಗಳೂರು: ಒಲಂಪಿಕ್ಸ್‌ನಲ್ಲಿ (Olympic) ಪದಕ ವಿಜೇತ ( winners ) ಕ್ರೀಡಾಪಟುಗಳು ಪದಕವನ್ನು ಕಚ್ಚಿ (Medal Biting) ಫೋಟೋಗೆ ಪೋಸ್ ಕೊಡುವುದನ್ನು ನೋಡಿರುತ್ತೇವೆ. ಇವರು ಯಾಕೆ ಹೀಗೆ ಮಾಡುತ್ತಾರೆ ಎನ್ನುವ ಪ್ರಶ್ನೆಯಂತೂ ಒಂದಲ್ಲಾ ಒಂದು ಬಾರಿ ನಮ್ಮ ಮನದಲ್ಲಿ ಮೂಡಿರುತ್ತದೆ. ಒಲಿಂಪಿಕ್ ಪದಕ ವಿಜೇತರು ಪದಕ ಕಚ್ಚಲು ಕಾರಣವಿದೆ ಮಾತ್ರವಲ್ಲ ಇದಕ್ಕೆ ದೊಡ್ಡ ಇತಿಹಾಸವೇ ಇದೆ.

ಒಲಿಂಪಿಕ್ಸ್ ಪದಕ ವಿಜೇತ ಗಣ್ಯ ಕ್ರೀಡಾಪಟುಗಳು ವೇದಿಕೆಯ ಮೇಲೆ ನಿಂತು ತಮ್ಮ ಪದಕಗಳನ್ನು ಕಚ್ಚುವುದು ಒಲಿಂಪಿಕ್ಸ್‌ನಲ್ಲಿ ಚಿರಪರಿಚಿತ ದೃಶ್ಯವಾಗಿದೆ. ಮೈಕೆಲ್ ಫೆಲ್ಪ್ಸ್, ಉಸೇನ್ ಬೋಲ್ಟ್ ಮತ್ತು ಸಿಮೋನ್ ಬೈಲ್ಸ್ ಅವರ ಇಂತಹ ಚಿತ್ರಗಳು ಇಂದಿಗೂ ಬಹುತೇಕ ಮಂದಿಯ ಮನದಲ್ಲಿ ಅಚ್ಚಳಿಯದೆ ಉಳಿದಿದೆ. ಒಲಿಂಪಿಯನ್‌ಗಳು ಹೀಗೆ ಪದಕಗಳನ್ನು ಏಕೆ ಕಚ್ಚುತ್ತಾರೆ, ಇದರ ಹಿಂದಿರುವ ಕಾರಣ ಏನು ಗೊತ್ತೇ?

ಶುದ್ಧತೆ ಪರಿಶೀಲನೆ?

ಒಲಿಂಪಿಕ್ಸ್ ನ ಆರಂಭಿಕ ದಿನಗಳು. ಬೆಲೆಬಾಳುವ ಚಿನ್ನವನ್ನು ಕರೆನ್ಸಿಯ ರೂಪದಲ್ಲಿ ಬಳಸಲು ಪ್ರಾರಂಭಿಸಲಾಯಿತು. ಚಿನ್ನದ ಪರಿಶುದ್ಧತೆಯನ್ನು ಪರಿಶೀಲಿಸಲು ವ್ಯಾಪಾರಿಗಳು ಚಿನ್ನದ ನಾಣ್ಯಗಳನ್ನು ಕಚ್ಚಿ ನೋಡುತ್ತಿದ್ದರು ಎಂದು ಇತಿಹಾಸ ಹೇಳುತ್ತದೆ. ಚಿನ್ನವು ಮೃದುವಾದ ಲೋಹವಾಗಿದೆ. ಇದರ ಮೇಲೆ ಸ್ವಲ್ಪ ಒತ್ತಡ ಬಿದ್ದರೂ ಗುರುತು ಬೀಳುತ್ತದೆ. ಹೀಗಾಗಿ ಒಲಿಂಪಿಕ್ಸ್‌ನಲ್ಲಿ ಪದಕ ವಿಜೇತ ಕ್ರೀಡಾಪಟುಗಳು ತಮಗೆ ಸಿಗುವ ಚಿನ್ನದ ಪದಕವನ್ನು ಪರಿಶೀಲಿಸಲು ಹೀಗೆ ಮಾಡುತ್ತಿದ್ದರು. ಕ್ರಮೇಣ ಇದೊಂದು ಅಭ್ಯಾಸದ ಭಾಗವಾಯಿತು.


ಒಲಿಂಪಿಕ್ ಚಾಂಪಿಯನ್‌ಗಳು ತಮ್ಮ ಬಾಯಿಯಲ್ಲಿ ಚಿನ್ನದ ಪದಕವನ್ನು ಕಚ್ಚುವುದು ಈಗ ಶುದ್ಧತೆಯನ್ನು ಪರಿಶೀಲಿಸುವುದಕ್ಕಾಗಿ ಅಲ್ಲ. ಯಾಕೆಂದರೆ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) 1912 ರಲ್ಲಿ ಶುದ್ಧ ಚಿನ್ನದ ಪದಕಗಳನ್ನು ನೀಡುವುದನ್ನು ನಿಲ್ಲಿಸಿತ್ತು. ಆದರೆ ಅದರ ಅಭ್ಯಾಸ ಕ್ರಮ ಇನ್ನೂ ಮುಂದುವರಿದಿದೆ.


ಕ್ರೀಡಾಪಟುಗಳು ಪದಕಗಳನ್ನು ಏಕೆ ಕಚ್ಚುತ್ತಾರೆ?

ಒಲಿಂಪಿಕ್ ಕ್ರೀಡಾಪಟುಗಳಿಗೆ ಪದಕಗಳನ್ನು ಕಚ್ಚಿ ಫೋಟೋಗೆ ಪೋಸ್ ಕೊಡಲು ಕ್ರೀಡಾ ಛಾಯಾಚಿತ್ರ ಗ್ರಾಹಕರು ಕೇಳುತ್ತಾರೆ. ಇದೀಗ ಗೀಳಾಗಿ ಪರಿಣಮಿಸಿದೆ ಎನ್ನುತ್ತಾರೆ ಇಂಟರ್ನ್ಯಾಷನಲ್ ಸೊಸೈಟಿ ಆಫ್ ಒಲಿಂಪಿಕ್ ಇತಿಹಾಸಕಾರರ ಅಧ್ಯಕ್ಷ ಡೇವಿಡ್ ವಾಲೆಚಿನ್ಸ್ ಕಿ.

ಪದಕವನ್ನು ಕಚ್ಚುವ ಭಂಗಿಯು ಪತ್ರಿಕೆಗಳ ಮೊದಲ ಪುಟಕ್ಕೆ ಕೊಡಬಹುದಾದ ಚಿತ್ರ ಎಂದು ಅವರು ಪರಿಗಣಿಸುತ್ತಾರೆ ಹೀಗಾಗಿ ಕ್ರೀಡಾಪಟುಗಳಿಗೆ ಹಾಗೆ ಮಾಡಲು ಪತ್ರಕರ್ತರೇ ವಿನಂತಿಸುತ್ತಾರೆ. ಅವರು ಅದನ್ನು ಒಂದು ಸಾಂಪ್ರದಾಯ ಎನ್ನುವಂತೆ ನೋಡುತ್ತಾರೆ. ಅಥ್ಲೀಟ್‌ಗಳು ಇದನ್ನು ಸ್ವಂತವಾಗಿ ಮಾಡುತ್ತಾರೆ ಎಂದು ನಾನು ಭಾವಿಸುವುದಿಲ್ಲ ಎಂದು ವಾಲೆಚಿನ್ಸ್ ಕಿ ವಿವರಿಸಿದರು.


ಇದನ್ನೂ ಓದಿ: Suryakumar Yadav Catch: ಸೂರ್ಯಕುಮಾರ್​ ಕ್ಯಾಚ್ ಎಡವಟ್ಟು; ವಿಶ್ವಕಪ್​ ವಾಪಸ್​ ನೀಡಬೇಕಾ ಭಾರತ?

ಹಲ್ಲು ಮುರಿದುಕೊಂಡ ಡೇವಿಡ್ ಮೊಲ್ಲರ್

2010ರ ಚಳಿಗಾಲದ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಗೆದ್ದ ಜರ್ಮನ್ ಲೂಗರ್ ಡೇವಿಡ್ ಮೊಲ್ಲರ್ ಅವರಿಗೆ ಈ ಭಂಗಿಯಲ್ಲಿ ಫೋಟೋಗೆ ಪೋಸ್ ಕೊಡಲು ಪತ್ರಕರ್ತರು ಕೇಳಿಕೊಂಡರು, ಆದರೆ ಇದರಿಂದ ಬಳಿಕ ಅವರು ಒಂದು ಹಲ್ಲು ಮುರಿದುಕೊಂಡಿರುವುದಾಗಿ ಹೇಳಿಕೊಂಡಿದ್ದರು.

Continue Reading

Latest

Amarnath Tragedy: ಬಸ್‌ ಬ್ರೇಕ್ ಫೇಲ್; ಜೀವ ಉಳಿಸಿಕೊಳ್ಳಲು ಬಸ್‌ನಿಂದ ಜಿಗಿದ ಅಮರನಾಥ ಯಾತ್ರಿಕರು! ವಿಡಿಯೊ ಇದೆ

Amarnath Tragedy: ಅಮರನಾಥ ಯಾತ್ರೆಗೆ ತೆರಳಿದವರಿಗೆ ದುರಂತವೊಂದು ಎದುರಾಗಿದೆ. ಅಮರನಾಥ ಯಾತ್ರೆಯಿಂದ ಹಿಂದಿರುಗುತ್ತಿದ್ದ ಕೆಲವು ಯಾತ್ರಾರ್ಥಿಗಳು ಜಮ್ಮು ಮತ್ತು ಕಾಶ್ಮೀರದ ರಂಬನ್ ಜಿಲ್ಲೆಯಲ್ಲಿ ಚಲಿಸುತ್ತಿರುವ ಬಸ್ಸಿನಿಂದ ಜಿಗಿದು ಗಾಯಗೊಂಡಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬಸ್‌ ಬ್ರೇಕ್ ಫೇಲ್ ಆದ ಕಾರಣ ಬನಿಹಾಲ್ ಬಳಿಯ ನಾಚ್ಲಾನಾ ಬಳಿ ಚಾಲಕನಿಗೆ ಬಸ್ ಅನ್ನು ನಿಯಂತ್ರಿಸಲು ಆಗಲಿಲ್ಲ. ಇದರಿಂದ ಬಸ್‌ನಲ್ಲಿದ್ದ ಪ್ರಯಾಣಿಕರು ಭಯಗೊಂಡು ತಮ್ಮ ಜೀವ ಉಳಿಸಿಕೊಳ್ಳಲು ಬಸ್ಸಿನಿಂದ ಜಿಗಿದು ಗಾಯಗೊಂಡಿದ್ದಾರೆ.

VISTARANEWS.COM


on

Amarnath Tragedy
Koo

ಶ್ರೀನಗರ : ಪ್ರತಿವರ್ಷ ಅಮರನಾಥ ಯಾತ್ರೆಗೆ (Amarnath Tragedy) ಹಲವಾರು ಮಂದಿ ಯಾತ್ರಾರ್ಥಿಗಳು ಪ್ರಯಾಣ ಮಾಡುತ್ತಿರುತ್ತಾರೆ. ಆದರೆ ಇತ್ತೀಚೆಗೆ ಅಮರನಾಥ ಯಾತ್ರೆಗೆ ತೆರಳಿದವರಿಗೆ ದುರಂತವೊಂದು ಎದುರಾಗಿದೆ. ಅಮರನಾಥ ಯಾತ್ರೆಯಿಂದ ಹಿಂದಿರುಗುತ್ತಿದ್ದ ಕೆಲವು ಯಾತ್ರಾರ್ಥಿಗಳು ಜಮ್ಮು ಮತ್ತು ಕಾಶ್ಮೀರದ ರಂಬನ್ ಜಿಲ್ಲೆಯಲ್ಲಿ ಚಲಿಸುತ್ತಿರುವ ಬಸ್ಸಿನಿಂದ ಜಿಗಿದು ಗಾಯಗೊಂಡಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅನೇಕರು ವಿಡಿಯೊ ನೋಡಿ ಶಾಕ್ ಆಗಿದ್ದಾರೆ.

ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಪಂಜಾಬ್‌ನ ಹೋಶಿಯಾರ್ಪುರಕ್ಕೆ ತೆರಳುತ್ತಿದ್ದ ಬಸ್‌ನಲ್ಲಿ ಹದಿನೇಳು ಮಂದಿ ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ ಒಟ್ಟು 45 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಆದರೆ ರಸ್ತೆ ಮಧ್ಯದಲ್ಲಿ ಬಸ್‌ನ ಬ್ರೇಕ್ ಫೇಲ್ ಆಗಿದೆ. ಇದರ ಪರಿಣಾಮ ಬನಿಹಾಲ್ ಬಳಿಯ ನಾಚ್ಲಾನಾ ಬಳಿ ಚಾಲಕನಿಗೆ ಬಸ್ ಅನ್ನು ನಿಯಂತ್ರಿಸಲು ಆಗಲಿಲ್ಲ. ಇದರಿಂದ ಬಸ್‌ನಲ್ಲಿದ್ದ ಪ್ರಯಾಣಿಕರು ಭಯಗೊಂಡು ತಮ್ಮ ಜೀವ ಉಳಿಸಿಕೊಳ್ಳಲು ಮೂವರು ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ ಹಲವಾರು ಪ್ರಯಾಣಿಕರು ಬಸ್ಸಿನಿಂದ ಜಿಗಿದ ಗಾಯಗೊಂಡಿದ್ದಾರೆ.

ವಿಡಿಯೊದಲ್ಲೊ ರಸ್ತೆಯಲ್ಲಿ ಚಲಿಸುತ್ತಿದ್ದ ಬಸ್‌ನಿಂದ ಪ್ರಯಾಣಿಕರು ಒಬ್ಬರಾಗಿಯೇ ಜಿಗಿದು ಕೆಳಗೆ ಬೀಳುತ್ತಿದ್ದಾರೆ. ಹಾಗೇ ಬಿದ್ದ ಪ್ರಯಾಣಿಕರಲ್ಲಿ ಕೆಲವರು ತಮ್ಮವರನ್ನು ಕಾಪಾಡಲು ಬಸ್ಸಿನ ಹಿಂದೆ ಓಡುತ್ತಿರುವುದು ಕಂಡುಬಂದಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಪೊಲೀಸರು ಸೇನೆಯ ಜೊತೆಗೆ ಬಸ್ ಇದ್ದ ಕಡೆ ಬಂದು ತ್ವರಿತ ಕ್ರಮ ತೆಗೆದುಕೊಂಡಿದ್ದಾರೆ. ಸೈನಿಕರು ಬಸ್ ಅನ್ನು ನಿಲ್ಲಿಸಲು ಮತ್ತು ಹತ್ತಿರದ ಹೊಳೆಗೆ ಹೋಗದಂತೆ ತಡೆಯಲು ಕಲ್ಲುಗಳನ್ನು ಬಸ್‌ ನ ಚಕ್ರದ ಕೆಳಗೆ ಇಟ್ಟಿದ್ದಾರೆ. ಇದರಿಂದ ಆಗಬಹುದಾದ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ. ಸೇನೆಯ ತಂಡಗಳು, ಆಂಬ್ಯುಲೆನ್ಸ್ ನೊಂದಿಗೆ ಘಟನಾ ಸ್ಥಳಕ್ಕೆ ಆಗಮಿಸಿ ಗಾಯಾಳುಗಳಿಗೆ ವೈದ್ಯಕೀಯ ನೆರವು ಮತ್ತು ಪ್ರಥಮ ಚಿಕಿತ್ಸೆಯನ್ನು ನೀಡಿದ್ದಾರೆ.

Amarnath Tragedy

ಇದನ್ನೂ ಓದಿ: ನೀವೂ ಕೂಡ ನಿಮ್ಮ ಹೆಂಡತಿಯನ್ನು ಇವರಂತೆ ಪ್ರೀತಿಸಬಲ್ಲಿರಾ? ಈ ಫೋಟೊ, ವಿಡಿಯೊ ನೋಡಿ ಹೇಳಿ!

ಈ ಹಿಂದೆ ಈ ವರ್ಷದ ಜೂನ್ ತಿಂಗಳಿನಲ್ಲಿ ಭಯೋತ್ಪಾದಕರು ಶಿವಖೋರಿ ದೇವಸ್ಥಾನದಿಂದ ಮಾತಾ ವೈಷ್ಣೋದೇವಿ ದೇಗುಲಕ್ಕೆ ಹಿಂದಿರುಗುತ್ತಿದ್ದ ಪ್ರಯಾಣಿಕರಿದ್ದ ಬಸ್‌ನ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಭಯೋತ್ಪಾದಕರ ಗುಂಡಿನ ದಾಳಿಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಅಪಘಾತಕ್ಕೀಡಾಗಿ ಕಂದಕಕ್ಕೆ ಬಿದ್ದಿದೆ. ಈ ಅಪಘಾತದಲ್ಲಿ 10 ಜನರು ಸಾವನ್ನಪ್ಪಿದ್ದರು.

Continue Reading

ಆಟೋಮೊಬೈಲ್

Safe Drive Tips: ಮಳೆಯಲ್ಲಿ ಬೈಕ್ ಓಡಿಸುವಾಗ ಈ ಸಂಗತಿಗಳು ಗಮನದಲ್ಲಿರಲಿ

ಮಳೆಯಲ್ಲಿ ಬೈಕ್ ಸವಾರಿ ಮಾಡುವಾಗ ಸಾಕಷ್ಟು ಎಚ್ಚರಿಕೆ (Safe Drive Tips) ವಹಿಸುವುದು ಮುಖ್ಯ. ಪ್ರಯಾಣದಲ್ಲಿ ಸುರಕ್ಷತೆ ಮತ್ತು ಆನಂದವನ್ನು ಅನುಭವಿಸಬೇಕಾದರೆ ಬೈಕು, ಗೇರ್ ಮತ್ತು ರೈಡಿಂಗ್ ಶೈಲಿಯ ಬಗ್ಗೆ ಚೆನ್ನಾಗಿ ತಿಳಿದುಕೊಂಡಿರುವುದು ಬಹು ಮುಖ್ಯ.

VISTARANEWS.COM


on

By

Safe Drive Tips
Koo

ಮಳೆಗಾಲದಲ್ಲಿ (rainy season) ವಾಹನ ಓಡಿಸುವಾಗ ಎಷ್ಟು ಎಚ್ಚರವಾಗಿದ್ದರೂ ಸಾಲದು. ಅದರಲ್ಲೂ ಬೈಕ್ ರೈಡಿಂಗ್ (bike riding) ಮಾಡುವವರು ಕೆಲವು ಸೂಕ್ಷ್ಮ ವಿಷಯಗಳನ್ನು (Safe Drive Tips) ಗಮನಿಸಬೇಕಾಗುವುದು. ದೂರ ಪ್ರಯಾಣವನ್ನು ಪ್ರಾರಂಭಿಸುವ ಮೊದಲು ವಾತಾವರಣದ ಪರಿಸ್ಥಿತಿ, ಬೈಕ್ ಸುಸ್ಥಿತಿಯಲ್ಲಿ ಇದೆಯೇ ಎಂಬುದನ್ನು ಖಚಿತ ಪಡಿಸಿಕೊಳ್ಳುವುದು ಕೂಡ ಬಹು ಮುಖ್ಯವಾಗಿರುತ್ತದೆ.

ಮಳೆಗಾಲದಲ್ಲಿ ಬೈಕ್ ನಲ್ಲಿ ದೂರ ಪ್ರಯಾಣ ಪ್ರಾರಂಭಿಸುವ ಮೊದಲು ಕೆಲವೊಂದು ವಿಷಯಗಳನ್ನು ಗಮನಿಸಬೇಕು. ಅವುಗಳಲ್ಲಿ ಮುಖ್ಯವಾದದ್ದು ಯಾವುದು ಎನ್ನುವ ಮಾಹಿತಿ ಇಲ್ಲಿದೆ.

ಟಯರ್, ಬ್ರೇಕ್‌ಗಳನ್ನು ಪರಿಶೀಲಿಸಿ

ಮಳೆಯಲ್ಲಿ ಸುರಕ್ಷಿತ ಪ್ರಯಾಣಕ್ಕಾಗಿ ಬೈಕ್‌ನ ಟಯರ್, ಬ್ರೇಕ್‌ಗಳ ಸ್ಥಿತಿಯು ನಿರ್ಣಾಯಕವಾಗಿದೆ. ಟಯರ್‌ನ ಹೊರ ಭಾಗದ ಆಳವನ್ನು ಮೊದಲು ಪರೀಕ್ಷಿಸಿ. ಚಕ್ರದ ಹೊರಮೈಯಲ್ಲಿರುವ ಟಯರ್ ಗಳು ಒದ್ದೆಯಾದ ಮೇಲ್ಮೈಗಳಲ್ಲಿ ಉತ್ತಮ ಹಿಡಿತವನ್ನು ಒದಗಿಸುತ್ತವೆ, ಜಾರಿಬೀಳುವ ಅಥವಾ ಸ್ಕಿಡ್ ಆಗುವ ಅಪಾಯವನ್ನು ಕಡಿಮೆ ಮಾಡುತ್ತದೆ. ಟೈರ್‌ಗಳು ಸವೆದಿದ್ದರೆ ಅವುಗಳನ್ನು ಬದಲಾಯಿಸಿ. ಸಾಮಾನ್ಯವಾಗಿ ಆಳವಾದ ಚಕ್ರದ ಹೊರಮೈಗಳು ಮತ್ತು ಒದ್ದೆಯಾದ ರಸ್ತೆಗಳಲ್ಲಿ ಜಾರುವ ಸಾಧ್ಯತೆ ಹೆಚ್ಚಾಗಿರುತ್ತದೆ. ಬ್ರೇಕ್‌ಗಳು ಯಾವುದೇ ವಿಳಂಬ ಅಥವಾ ಹೆಚ್ಚಿನ ಬಲದ ಅಗತ್ಯವಿಲ್ಲದೆ ಸರಾಗವಾಗಿ ಹಿಡಿಯುವಂತಿರಬೇಕು. ಬ್ರೇಕ್‌ಗಳು ಸ್ಪಂಜಿಯಾಗಿದ್ದರೆ ಅಥವಾ ತಕ್ಷಣವೇ ಪ್ರತಿಕ್ರಿಯಿಸದಿದ್ದರೆ ಕೂಡಲೇ ಸರಿಪಡಿಸಿ.

ಹೆಡ್ ಲೈಟ್, ಸಿಗ್ನಲ್ ಲೈಟ್

ಮಳೆಯ ವಾತಾವರಣದಲ್ಲಿ ಗೋಚರತೆಯು ಕಡಿಮೆಯಾಗಿರುತ್ತದೆ. ಬೈಕ್‌ನ ದೀಪ ಮತ್ತು ಸಿಗ್ನಲ್‌ಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವುದು ಅತ್ಯಗತ್ಯ. ಹೆಡ್‌ಲೈಟ್‌, ಸಿಗ್ನಲ್ ಲೈಟ್ ಗಳು ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ ಕೂಡಲೇ ದುರಸ್ತಿ ಪಡಿಸಿ. ಮಳೆಯಿರುವಾಗ ಹಗಲಿನಲ್ಲಿ ಸ್ಪಷ್ಟವಾಗಿ ಗೋಚರಿಸುವಂತಾಗಲು ಹೆಡ್ ಲೈಟ್ ಗಳನ್ನು ಬಳಸಿ.

ಬ್ರೇಕ್ ದೀಪಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿವೆಯೇ ಎಂದು ಪರಿಶೀಲಿಸಿ. ಬ್ರೇಕ್‌ಗಳನ್ನು ಅನ್ವಯಿಸಿದಾಗ ಬ್ರೇಕ್ ಲೈಟ್‌ಗಳು ನಿಮ್ಮ ಹಿಂದಿರುವ ವಾಹನಗಳನ್ನು ನಿಧಾನಗೊಳಿಸಲು ಅಥವಾ ನಿಲ್ಲಿಸಲು ಎಚ್ಚರಿಕೆ ವಹಿಸಲು ತಕ್ಷಣವೇ ಬೆಳಗಬೇಕು.


ಸೂಕ್ತವಾದ ಗೇರ್

ಮಳೆಯಲ್ಲಿ ಸವಾರಿ ಮಾಡುವಾಗ ಶುಷ್ಕ, ಆರಾಮದಾಯಕ ಮತ್ತು ಸುರಕ್ಷಿತವಾಗಿ ಉಳಿಯಲು ಸರಿಯಾಗಿ ಗೇರ್ ಅನ್ನು ಆಯ್ಕೆ ಮಾಡುವುದು ಮುಖ್ಯವಾಗಿದೆ.

ರೈನ್ ಕೋಟ್

ಮಳೆಗಾಲದಲ್ಲಿ ಉತ್ತಮ ಗುಣಮಟ್ಟದ ರೈನ್ ಕೋಟ್‌ಗಳನ್ನು ಧರಿಸುವುದು ಬಹಳ ಮುಖ್ಯ. ಮಳೆಯಿಂದ ಬೆಚ್ಚಗಿರಲು ಇದು ಬಹುಮುಖ್ಯ. ಜೊತೆಗೆ ಮಳೆ ನೀರು ಹೋಗದ ಬೂಟುಗಳನ್ನು ಹಾಕಿ. ಪಾದಗಳನ್ನು ಶುಷ್ಕ ಮತ್ತು ಬೆಚ್ಚಗಾಗಲು ಇದು ಸಹಾಯ ಮಾಡುತ್ತದೆ. ಒದ್ದೆಯಾದ ಬಟ್ಟೆ, ಪಾದಗಳು ತ್ವರಿತವಾಗಿ ತಣ್ಣಗಾಗಬಹುದು ಮತ್ತು ಅಹಿತಕರವಾಗಬಹುದು. ಸವಾರಿ ಮಾಡುವಾಗ ಏಕಾಗ್ರತೆ ಮತ್ತು ನಿಯಂತ್ರಣದ ಮೇಲೆ ಪರಿಣಾಮ ಬೀರುತ್ತದೆ.

ಹೆಲ್ಮೆಟ್ ತಪ್ಪದೇ ಧರಿಸಿ

ಮಳೆಗಾಲದಲ್ಲಿ ಗೋಚರತೆಯನ್ನು ಕಾಪಾಡಿಕೊಳ್ಳಲು ಸ್ಪಷ್ಟವಾದ ಹೆಲ್ಮೆಟ್ ಧರಿಸುವುದು ಕೂಡ ಬಹುಮುಖ್ಯ. ಆಂಟಿ-ಫಾಗ್ ಲೇಪನವನ್ನು ಹೊಂದಿರುವ ಹೆಲ್ಮೆಟ್ ಧರಿಸಿ. ಹೆಲ್ಮೆಟ್ ಮೇಲೆ ಮಳೆಹನಿಗಳು ವೀಕ್ಷಣೆಗೆ ಅಡ್ಡಿಯಾಗಬಹುದು.

ರಸ್ತೆ ಬಗ್ಗೆ ತಿಳಿದುಕೊಳ್ಳಿ

ಮಳೆಗಾಲದಲ್ಲಿ ದೂರ ಸವರಿ ಮಾಡುವಾಗ ರಸ್ತೆ ಬಗ್ಗೆ ಮೊದಲೇ ತಿಳಿದಿದ್ದರೆ ಉತ್ತಮ. ಆರ್ದ್ರ ಮತ್ತು ಜಾರು ರಸ್ತೆಗಳಲ್ಲಿ ಚಾಲನೆ ಮಾಡುವಾಗ ನಿಯಂತ್ರಣ ಮತ್ತು ಸುರಕ್ಷತೆಯನ್ನು ಕಾಪಾಡಿಕೊಳ್ಳಲು ಸವಾರಿ ತಂತ್ರವನ್ನು ಸರಿಹೊಂದಿಸುವುದು ಕೂಡ ಅತ್ಯಗತ್ಯ.

ನಿಧಾನವಾಗಿ ಸಂಚರಿಸಿ

ಬ್ರೇಕ್ ಹಾಕುವಾಗ, ವಾಹನ ತಿರುಗಿಸುವಾಗ ವಾಹನದ ವೇಗವನ್ನು ನಿಧಾನಗೊಳಿಸಿ. ಹಠಾತ್ ಅಥವಾ ಆಕ್ರಮಣಕಾರಿ ಕುಶಲತೆಯು ವಾಹನ ರಸ್ತೆಯಲ್ಲಿ ಜಾರಿ ಬೀಳಲು ಕಾರಣವಾಗಬಹುದು.

ವಾಹನಗಳ ನಡುವೆ ಅಂತರವಿರಲಿ

ಒದ್ದೆಯಾದ ರಸ್ತೆಗಳಲ್ಲಿ ವಾಹನಗಳ ನಡುವೆ ಸಾಕಷ್ಟು ಅಂತರ ಕಾಯ್ದುಕೊಳ್ಳಿ. ಒದ್ದೆಯಾದ ರಸ್ತೆಯಲ್ಲಿ ವಾಹನ ನಿಲುಗಡೆ ಮಾಡಲು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ ಎಂಬುದನ್ನು ನೆನಪಿನಲ್ಲಿರಲಿ. ಮಳೆಯಲ್ಲಿ ಟ್ರಾಫಿಕ್, ರಸ್ತೆ ಪರಿಸ್ಥಿತಿಗಳಲ್ಲಿನ ಬದಲಾವಣೆಗಳಿಗೆ ಪ್ರತಿಕ್ರಿಯಿಸಲು ಸಾಕಷ್ಟು ಸಮಯ ಬೇಕಾಗುತ್ತದೆ. ಹೀಗಾಗಿ ವಾಹನಗಳ ನಡುವೆ ಸಾಕಷ್ಟು ಅಂತರ ಕಾಯ್ದುಕೊಳ್ಳುವುದು ಸುರಕ್ಷತೆ ದೃಷ್ಟಿಯಿಂದ ಒಳ್ಳೆಯದು.

ಗೋಚರತೆ

ಇತರ ರಸ್ತೆ ಬಳಕೆದಾರರಿಗೆ ನಿಮ್ಮ ಗೋಚರತೆಯನ್ನು ಹೆಚ್ಚಿಸುವುದು ಮಳೆಯಲ್ಲಿ ಅತ್ಯಗತ್ಯ. ಇದಕ್ಕಾಗಿ ಹಗಲು ಹೊತ್ತಿನಲ್ಲಿಯೂ ಬೈಕ್‌ನ ಹೆಡ್‌ಲೈಟ್‌ಗಳನ್ನು ಬಳಸಿ. ಬೈಕ್ ಫ್ರೇಮ್ ಮತ್ತು ಚಕ್ರಗಳಿಗೆ ಪ್ರತಿಫಲಿತ ಸ್ಟಿಕ್ಕರ್‌ ಅಥವಾ ಟೇಪ್ ಗಳನ್ನು ಹಾಕುವುದು ಇತರ ವಾಹನಗಳಿಗೆ ನಿಮ್ಮ ಉಪಸ್ಥಿತಿಯನ್ನು ಕಡಿಮೆ ಬೆಳಕಿನಲ್ಲೂ ಪ್ರತಿಬಿಂಬಿಸುವಂತೆ ಮಾಡುತ್ತದೆ.

ಸಿಗ್ನಲ್ ಸ್ಪಷ್ಟವಾಗಿರಲಿ

ಇತರ ರಸ್ತೆ ಬಳಕೆದಾರರಿಗೆ ನಿಮ್ಮ ಉದ್ದೇಶಗಳನ್ನು ತಿಳಿಸಲು ಕೈ ಸಂಕೇತಗಳು ಮತ್ತು ಸೂಚಕಗಳನ್ನು ಬಳಸಿ. ಹಿಂದೆ ಮೋಟಾರು ಚಾಲಕರು ಮತ್ತು ಸೈಕ್ಲಿಸ್ಟ್‌ಗಳಿಗೆ ಪ್ರತಿಕ್ರಿಯಿಸಲು ಸಮಯವನ್ನು ನೀಡಲು ನಿಮ್ಮ ತಿರುವುಗಳು ಮತ್ತು ಲೇನ್ ಬದಲಾವಣೆಗಳನ್ನು ಮೊದಲೇ ಸೂಚಿಸಿ. ಸ್ಪಷ್ಟವಾದ ಮತ್ತು ಸ್ಥಿರವಾದ ಸಿಗ್ನಲಿಂಗ್ ತಪ್ಪುಗ್ರಹಿಕೆಯನ್ನು ತಡೆಯುತ್ತದೆ ಮತ್ತು ಅಪಾಯವನ್ನು ಕಡಿಮೆ ಮಾಡುತ್ತದೆ.

ಇದನ್ನೂ ಓದಿ: Top 10 Motar Bike: ಭಾರತದಲ್ಲಿ ಅತಿ ಹೆಚ್ಚು ಮಾರಾಟವಾಗುವ ಟಾಪ್ 10 ಬೈಕ್‌ಗಳಿವು

ಜಾಗರೂಕರಾಗಿರಿ

ಮಳೆಯಲ್ಲಿ ರಸ್ತೆ ಪರಿಸ್ಥಿತಿಗಳು ಅಪಾಯಕಾರಿಯಾಗಿರುತ್ತದೆ. ಹೀಗಾಗಿ ಹೆಚ್ಚಿನ ಜಾಗೃತಿಯನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ. ದೊಡ್ಡ ಕೊಚ್ಚೆ ಗುಂಡಿಗಳು ಅಥವಾ ನಿಂತಿರುವ ನೀರಿನ ಮೂಲಕ ಸವಾರಿ ಮಾಡುವುದನ್ನು ತಪ್ಪಿಸಿ.

ಜಾರುವ ರಸ್ತೆಗಳ ಮೇಲೆ ಗಮನವಿರಲಿ

ಮಳೆಯಲ್ಲಿ ರಸ್ತೆಯಲ್ಲಿ ಚಿತ್ರಿಸಿದ ರೇಖೆಗಳು ಅಥವಾ ರಸ್ತೆ ಗುರುತುಗಳ ಮೇಲೆ ಸವಾರಿ ಮಾಡುವಾಗ ಸಾಕಷ್ಟು ಎಚ್ಚರಿಕೆ ವಹಿಸಬೇಕು. ತೇವವಾದ ಮೇಲ್ಮೈಗಳು ಜಾರುವ ಅಪಾಯ ಹೆಚ್ಚಾಗಿರುತ್ತದೆ. ಟಯರ್ ನ ಹಿಡಿತವನ್ನು ಕಡಿಮೆ ಮಾಡುತ್ತದೆ. ಸ್ಕಿಡ್ಡಿಂಗ್ ಅಥವಾ ಸ್ಲೈಡಿಂಗ್ ಅಪಾಯವನ್ನು ಹೆಚ್ಚಿಸುತ್ತದೆ. ಹೀಗಾಗಿ ಈ ಪ್ರದೇಶಗಳಲ್ಲಿ ಎಚ್ಚರಿಕೆಯಿಂದ ವಾಹನ ಚಲಾಯಿಸಿ.

Continue Reading

Latest

Viral News: ನೀವೂ ಕೂಡ ನಿಮ್ಮ ಹೆಂಡತಿಯನ್ನು ಇವರಂತೆ ಪ್ರೀತಿಸಬಲ್ಲಿರಾ? ಈ ಫೋಟೊ, ವಿಡಿಯೊ ನೋಡಿ ಹೇಳಿ!

Viral News: ಗಂಡ-ಹೆಂಡತಿಯ ಸಂಬಂಧ ಚೆನ್ನಾಗಿದ್ದರೆ ಮನೆಯಲ್ಲಿ ಸುಖ ಶಾಂತಿ ಇರುತ್ತದೆ ಎನ್ನುತ್ತಾರೆ.ಇದು ಗಂಡಸಿನ ವೃತ್ತಿ ಜೀವನದ ಮೇಲೂ ಪ್ರಭಾವ ಬೀರುತ್ತದೆ. ಕೆಲವರು ಹೆಂಡತಿಯನ್ನು ಕಾಲ ಕಸದ ರೀತಿ ನೋಡಿದರೆ ಇನ್ನು ಕೆಲವರು ಶಿವನ ಹಾಗೇ ಹೆಂಡತಿಯೇ ಸರ್ವಸ್ವ ಅನ್ನುತ್ತಾರೆ. ಹೌದು ಹೆಂಡತಿಯನ್ನು ಅತೀಯಾಗಿ ಪ್ರೀತಿಸುವ ಗಂಡಂದಿರ ಪಟ್ಟಿ ಇಲ್ಲಿದೆ.

VISTARANEWS.COM


on

Viral News
Koo

ಎಷ್ಟೋ ಸಿನಿಮಾಗಳಲ್ಲಿ ಹೀರೊ ತಮ್ಮ ಕುಟುಂಬದವರ ಜೊತೆ ಅನ್ಯೋನ್ಯವಾಗಿರುವುದನ್ನು ನಾವು ನೋಡಿರುತ್ತೇವೆ ಮತ್ತು ಹೀರೊ ತನ್ನ ಪತ್ನಿ ಮತ್ತು ಮಕ್ಕಳ ಬಗ್ಗೆ ತೋರುವ ಕಾಳಜಿ ಕಂಡು ನಾವು ಖುಷಿ ಪಡುತ್ತೇವೆ. ಆದರೆ ಅದೇ ಜೋಡಿ ನಿಜ ಜೀವನದಲ್ಲಿ ದಂಪತಿಯಾದರೆ ಅದರ ನಡುವೆ ಅಷ್ಟೊಂದು ಅನ್ಯೋನ್ಯತೆ ಇರುವುದಿಲ್ಲ. ಅದು ನಮಗೆಲ್ಲರಿಗೂ ಗೊತ್ತು. ಯಾಕೆಂದರೆ ಸಿನಿಮಾದಲ್ಲಿ ಜೊತೆಯಾಗಿ ನಟಿಸಿ ಜನರ ಮನಗೆದ್ದ ಜೋಡಿಗಳಲ್ಲಿ ಕೆಲವು ನಿಜ ಜೀವನದಲ್ಲಿ ಬೇರೆಯಾಗಿದ್ದಾರೆ. ಆದರೆ ಎಲ್ಲಾ ಜೋಡಿ ಹಾಗಿಲ್ಲ. ಕೆಲವು ಸೆಲೆಬ್ರಿಟಿಗಳು ತಮ್ಮ ಪತ್ನಿ ಮತ್ತು ಮಕ್ಕಳನ್ನು ತುಂಬಾ ಪ್ರೀತಿಸುತ್ತಾರೆ. ಅಂತಹ ಸೆಲೆಬ್ರಿಟಿಗಳ ಬಗ್ಗೆ ಮಾಹಿತಿ ವೈರಲ್‌ (Viral News) ಆಗಿದೆ.

ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ

ಜೂನ್ 29ರಂದು ಭಾರತ ಕ್ರಿಕೆಟ್ ತಂಡವು 17 ವರ್ಷಗಳ ನಂತರ ಐಸಿಸಿಟಿ 20 ವಿಶ್ವಕಪ್ ಟ್ರೋಫಿಯನ್ನು ಗೆದ್ದುಕೊಂಡಿತು. ಈ ವೇಳೆ ಸಂಭ್ರಮಾಚರಣೆ ಬಹಳ ಅವಿಸ್ಮರಣೀಯವಾಗಿತ್ತು. ಆದರೆ ಆ ಕ್ಷಣ ವಿರಾಟ್ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಮತ್ತು ಹಾಗೂ ಮಗಳಿಗೆ ವಿಡಿಯೊ ಕರೆ ಮಾಡಿ ಗೆಲುವನ್ನು ಹಂಚಿಕೊಂಡರು. ಇದು ಲಕ್ಷಾಂತರ ಜನರ ಮನಸ್ಸನ್ನು ಸೆಳೆಯಿತು.

ಇನ್ನು ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಟ್ರೋಫಿಯನ್ನು ಅನುಷ್ಕಾಗೆ ಅರ್ಪಿಸಿ ಈ ದಂಪತಿ ನಡುವೆ ಪ್ರೀತಿ ಎಷ್ಟಿದೆ ಎಂಬುದನ್ನು ತೋರಿಸಿದ್ದಾರೆ.

ರಣವೀರ್ ಸಿಂಗ್ – ದೀಪಿಕಾ ಪಡುಕೋಣೆ

ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಬಾಲಿವುಡ್ ಚಿತ್ರರಂಗದ ಜನಪ್ರಿಯ ಜೋಡಿಗಳಲ್ಲಿ ಒಬ್ಬರು. ಅವರು ಒಟ್ಟಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಾಗಲೆಲ್ಲಾ ಜೋಡಿ ಹಕ್ಕಿಗಳ ಹಾಗೇ ಇರುತ್ತಾರೆ.

ಕಾಫಿ ವಿತ್ ಕರಣ್ ಸೀಸನ್ 8ರಲ್ಲಿ ರಣವೀರ್ ಸಿಂಗ್ ದೀಪಿಕಾ ಬಗ್ಗೆ ತಮ್ಮ ಭಾವನೆಗಳು ಮತ್ತು ಪ್ರೀತಿಯನ್ನು ಬಹಿರಂಗಪಡಿಸಿದಾಗ ಅವರು ಒಬ್ಬ ಉತ್ತಮ ಪತಿ ಎಂಬುದು ತಿಳಿಯುತ್ತದೆ. ಅವರು ತಮ್ಮ ಪತ್ನಿ ದೀಪಿಕಾ ಬಗ್ಗೆ ಮಾತನಾಡುವಾಗ ತಮಗೆ ಅವಳೊಬ್ಬಳೆ ಸಾಕು ಎಂಬ ರೀತಿಯಲ್ಲಿ ಮಾತನಾಡಿ ಎಲ್ಲರ ಹೃದಯವನ್ನು ಗೆದ್ದಿದ್ದರು.

Viral News

ವಿಕ್ಕಿ ಕೌಶಲ್- ಕತ್ರಿನಾ ಕೈಫ್

ವಿಕ್ಕಿ ಕೌಶಲ್ ಅವರು ಸಂದರ್ಶನವೊಂದರಲ್ಲಿ ತಮ್ಮ ಫೋನ್‌ನಲ್ಲಿರುವ ವಾಲ್ಪೇಪರ್ ಮೇಲೆ ಕತ್ರಿನಾ ಕೈಫ್ ಅವರ ಬಾಲ್ಯದ ಪೋಟೊ ಹಾಕಿಕೊಂಡಿದ್ದರು. ಆದರೆ ಅದು ಯಾರು ಎಂದು ಯಾರಿಗೂ ಮೊದಲು ತಿಳಿದಿರಲಿಲ್ಲ.

ಹಾಗಾಗಿ ಅವರು ಅದು ತಮ್ಮ ಪತ್ನಿ ಕತ್ರಿನಾ ಕೈಫ್ ಅವರ ಬಾಲ್ಯದ ಪೋಟೊ ಎಂದು ಹೇಳುವುದರ ಮೂಲಕ ಇವರು ಪತ್ನಿಯನ್ನು ಪ್ರೀತಿಸುವ ಪತಿ ಎಂಬುದನ್ನು ಸಾಬೀತುಪಡಿಸಿದ್ದಾರೆ.

ಸೋನಾಕ್ಷಿ ಸಿನ್ಹಾ -ಜಹೀರ್ ಇಕ್ಬಾಲ್

ಸೋನಾಕ್ಷಿ ಸಿನ್ಹಾ ಮತ್ತು ಜಹೀರ್ ಇಕ್ಬಾಲ್ ಇತ್ತೀಚೆಗೆ ವಿವಾಹವಾಗಿದ್ದು, ಆ ಮೂಲಕ ಬಾಲಿವುಡ್‌ನ ಹೊಸ ಜೋಡಿ ಎನಿಸಿಕೊಂಡಿದ್ದಾರೆ.

ಸೋನಾಕ್ಷಿ ಸಿನ್ಹಾ ಇತ್ತೀಚೆಗೆ ಜಹೀರ್ ತನ್ನ ಹಿಮ್ಮಡಿಗಳನ್ನು ಹಿಡಿದುಕೊಂಡು ಮಾಲ್‌ನಲ್ಲಿ ಕರೆದುಕೊಂಡು ಹೋಗುತ್ತಿರುವ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಜಹೀರ್ ಇಕ್ಬಾಲ್, ಸೋನಾಕ್ಷಿ ಸಿನ್ಹಾ ಅವರಿಗೆ ಉತ್ತಮ ಪತಿ ಎಂಬುದನ್ನು ತಿಳಿಸಿದ್ದಾರೆ.

ಇದನ್ನೂ ಓದಿ: ಭಾರತದ ಶ್ರೀಮಂತ ಕುಟುಂಬಗಳ ಅತ್ಯಂತ ಅದ್ಧೂರಿ ಮದುವೆ ಯಾರದು? ಪಟ್ಟಿ ಇಲ್ಲಿದೆ

ನಿಕ್ ಜೊನಾಸ್ ಮತ್ತು ಪ್ರಿಯಾಂಕಾ ಚೋಪ್ರಾ

ನಿಕ್ ಜೊನಾಸ್ ವಿದೇಶಿಗರಾದರೂ ಕೂಡ ತನ್ನ ಹೆಂಡತಿ ಮತ್ತು ಅವಳ ಸಂಸ್ಕೃತಿಯ ಬಗ್ಗೆ ತನ್ನ ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತಾರೆ.

ನಿಕ್‌ ಕೂಡ ತಮ್ಮ ಪತ್ನಿಯ ಜೊತೆಗೆ ಭಾರತೀಯ ಸಂಸ್ಕೃತಿಯನ್ನು ಪ್ರೀತಿ, ಗೌರವ ಮತ್ತು ಭಕ್ತಿಯಿಂದ ಆಚರಿಸುತ್ತಾರೆ. ಆ ಮೂಲಕ ಅವರು ಕೂಡ ನಟಿ ಪ್ರಿಯಾಂಕ ಚೋಪ್ರಾ ಅವರಿಗೆ ಮುದ್ದಿನ ಗಂಡನಾಗಿದ್ದಾರೆ.

Continue Reading
Advertisement
Physical Abuse
ಕರ್ನಾಟಕ40 mins ago

Physical Abuse: ಬೆಂಗಳೂರಲ್ಲಿ 6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ

Narendra Modi
ದೇಶ46 mins ago

Narendra Modi: ಮುಂದಿನ 5 ವರ್ಷ ಬಡತನ ವಿರುದ್ಧದ ಹೋರಾಟಕ್ಕೆ ಮೀಸಲು; ರಾಜ್ಯಸಭೆಯಲ್ಲಿ ಮೋದಿ ಭರವಸೆ

Double Ismart Steppa Maar electrifies with mass beats
ಟಾಲಿವುಡ್49 mins ago

Double Ismart: ಪ್ರಚಾರ ಅಖಾಡದಲ್ಲಿ ‘ಡಬಲ್ ಇಸ್ಮಾರ್ಟ್’: ಮೊದಲ ಹಾಡು ರಿಲೀಸ್!

Actor Darshan
ಕರ್ನಾಟಕ1 hour ago

Actor Darshan: ಮಗುವನ್ನು ಕೈದಿ ಮಾಡಿದವರಿಗೆ ಕಾನೂನು ಕಂಟಕ; ಪಾಲಕರಿಗೆ ನೋಟಿಸ್‌!

IPL 2025
ಕ್ರೀಡೆ1 hour ago

IPL 2025: ಮುಂದಿನ ವರ್ಷ ಆರ್​ಸಿಬಿಗೆ ವಿರಾಟ್​ ಕೊಹ್ಲಿ ನಾಯಕ?

Kannada New Movie kannnajaru teaser teaser Out
ಸಿನಿಮಾ1 hour ago

Kannada New Movie: ‘ಕಣಂಜಾರು’ ಟೀಸರ್ ಮೆಚ್ಚಿದ ಚಂದನವನ!

viral news signboard
ವೈರಲ್ ನ್ಯೂಸ್2 hours ago

Viral News: ʼತುರ್ತಾಗಿ ಒಂದು ಅಪಘಾತ ಮಾಡಿʼ ಅನ್ನುತ್ತಿದೆ ಈ ಸೈನ್‌ಬೋರ್ಡ್‌!

Hijab Row
ದೇಶ2 hours ago

Hijab Row: ಹಿಬಾಬ್‌ ನಿಷೇಧದ ಬೆನ್ನಲ್ಲೇ ಜೀನ್ಸ್‌, ಟೀ-ಶರ್ಟ್‌ ಬ್ಯಾನ್‌- ಪ್ರಕಟಣೆ ಹೊರಡಿಸಿದ ಮುಂಬೈ ಕಾಲೇಜು

Stray Dogs Attack
ಕರ್ನಾಟಕ2 hours ago

Stray Dogs Attack: ಸುರಪುರದಲ್ಲಿ ಬೀದಿ ನಾಯಿಗಳ ದಾಳಿಗೆ 15 ಕುರಿಗಳು ಬಲಿ

Gold Rate Today
ಚಿನ್ನದ ದರ2 hours ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಷ್ಟಿದೆ ಇಂದಿನ ಬೆಲೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ19 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌