ನೀಟ್‌ ಪರೀಕ್ಷೆ ರದ್ದು: ಕೇಂದ್ರ ಸರ್ಕಾರವೇ ಹೊಣೆ- ಡಾ.ಎಂ.ಸಿ.ಸುಧಾಕರ್‌ - Vistara News

Latest

ನೀಟ್‌ ಪರೀಕ್ಷೆ ರದ್ದು: ಕೇಂದ್ರ ಸರ್ಕಾರವೇ ಹೊಣೆ- ಡಾ.ಎಂ.ಸಿ.ಸುಧಾಕರ್‌

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ನೀಟ್ ಪರೀಕ್ಷೆ ರದ್ದು ವಿಚಾರದಲ್ಲಿ ಕೇಂದ್ರ ಸರ್ಕಾರವೇ ಹೊಣೆ ಹೊರಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್‌ ಕಿಡಿಕಾರಿದ್ದಾರೆ.

ಶ್ರಮವಹಿಸಿ ವಿದ್ಯಾರ್ಥಿಗಳು ಬರೆದಿದ್ದ ನೀಟ್‌ ಪರೀಕ್ಷೆಯನ್ನು ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿದೆ. ಇದರ ಸಂಪೂರ್ಣ ಹೊರೆಯನ್ನು ನೇರವಾಗಿ ಕೇಂದ್ರ ಸರ್ಕಾರ ಹೊರಬೇಕು ಎಂದಿದ್ದಾರೆ.
ವಿದ್ಯಾರ್ಥಿಗಳು ಕಷ್ಟಪಟ್ಟು ಪರೀಕ್ಷೆ ಬರೆದಿದ್ದು, ಅವರ ಬಾಳಲ್ಲಿ ಯಾರೂ ಚೆಲ್ಲಾಟವಾಡಬಾರದು. ನೀಟ್‌ ಪರೀಕ್ಷೆ ವೈಫಲ್ಯದ ಕುರಿತು ಬಿಜೆಪಿ ನಾಯಕರು ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು.
ಎನ್‌ಟಿಎ ಸಾಕಷ್ಟು ಬಾರಿ ನೀಟ್‌ ಪರೀಕ್ಷೆ ನಡೆಸಲು ವಿಫಲವಾಗಿದ್ದು, ಅಯಾ ರಾಜ್ಯಗಳಿಗೆ ವೈದ್ಯಕೀಯ ಪ್ರವೇಶ ಪರೀಕ್ಷೆ ‌ನಡೆಸಲು ಅವಕಾಶ ‌ಮಾಡಿಕೊಡಬೇಕು. ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅವರ ಭವಿಷ್ಯದ ಜೊತೆ ಚೆಲ್ಲಾಟವಾಡಬಾರದು. ಈ ಬಗ್ಗೆ ರಾಜ್ಯ ಬಿಜೆಪಿ ನಾಯಕರು, ಸಂಸದ ತೇಜಸ್ವಿ ಸೂರ್ಯ ಈ ಬಗ್ಗೆ ಮಾತನಾಡಬೇಕು. ಜೊತೆಗೆ, ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಸಚಿವ ಸುಧಾಕರ್ ಆಗ್ರಹಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಪ್ರಮುಖ ಸುದ್ದಿ

ಅಗ್ನಿ ಪರೀಕ್ಷೆ ಗೆದ್ದ ‘ವಿಜಯ್‌‌‌’, ಎಐಎಡಿಎಂಕೆಯಲ್ಲಿ ಭಿನ್ನಮತ ಸ್ಫೋಟ

VISTARANEWS.COM


on

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್​ ವಿಧಾನಸಭೆಯಲ್ಲಿ ವಿಶ್ವಾಸ ಮತ ಸಾಬೀತು ಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಮಿಳುನಾಡು ಅಸೆಂಬ್ಲಿಯಲ್ಲಿ ವಿಜಯ್​ ನೇತೃತ್ವದ ಟಿವಿಕೆಗೆ 144 ಸದಸ್ಯರ ಬೆಂಬಲ ಸಿಕ್ಕಿದೆ. 22 ಶಾಸಕರು ವಿಶ್ವಾಸ ಮತದ ವಿರುದ್ಧ ಮತ ಚಲಾಯಿಸಿದ್ದರು. ಐವರು ಶಾಸಕರು ಮತದಾನದಿಂದ ದೂರ ಉಳಿದಿದ್ದರು. ಎಐಡಿಎಂಕೆಯ ಒಂದು ಬಣ ಅಸೆಂಬ್ಲಿಯಲ್ಲಿ ಟಿವಿಕೆ ಪರ ಮತ ಚಲಾಯಿಸಿದೆ. ವಿರೋಧಪಕ್ಷ ಡಿಎಂಕೆ ಸಭಾತ್ಯಾಗ ಮಾಡಿತ್ತು. 108 ಸ್ಥಾನಗಳನ್ನು ಗೆಲ್ಲುವ ಮೂಲಕ ವಿಜಯ್ ನೇತೃತ್ವದ ಟಿವಿಕೆ ತಮಿಳುನಾಡಿನಲ್ಲಿ ಅತಿದೊಡ್ಡ ಪಕ್ಷವಾಗಿ ಹೊಮ್ಮಿತ್ತು. ವಿಜಯ್ ಮುಖ್ಯಮಂತ್ರಿಯಾಗಿ ಭಾನುವಾರ ಪ್ರಮಾಣವಚನ ಸ್ವೀಕರಿಸಿದ್ದರು.


ಎಐಎಡಿಎಂಕೆಯಲ್ಲಿ ಭಿನ್ನಮತ ಸ್ಫೋಟ, 30 ಶಾಸಕರಿಂದ ಟಿವಿಕೆಗೆ ಮತ
ವಿಜಯ್ ವಿಶ್ವಾಸ ಮತ ಯಾಚನೆ ವೇಳೆ 30 ಎಐಎಡಿಎಂಕೆ ಶಾಸಕರು ಟಿವಿಕೆ ಪರ ಮತಚಲಾಯಿಸಿದ್ದು, ತಮಿಳುನಾಡಿನಲ್ಲಿ ಸಂಚಲನ ಮೂಡಿಸಿದೆ. ಇದರೊಂದಿಗೆ ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದ ಎಐಡಿಎಂಕೆಯಲ್ಲಿ ಈಗ ಅತಿ ದೊಡ್ಡ ಆಂತರಿಕ ಸಂಘರ್ಷ ಏರ್ಪಟ್ಟಿದೆ. ತಮಿಳುನಾಡು ವಿಧಾನಸಭೆಯಲ್ಲಿ ಎಐಎಡಿಎಂಕೆ 47 ಶಾಸಕರನ್ನು ಹೊಂದಿದೆ. ಇದರಲ್ಲಿ 30 ಶಾಸಕರು ಟಿವಿಕೆ ಪರ ಮತ ಚಲಾಯಿಸಿದ್ದಾರೆ ಎನ್ನಲಾಗಿದೆ. ಪಕ್ಷದ ವಿಪ್​​ ಹೊರತಾಗಿಯೂ, ಈ ಶಾಸಕರು ವಿಜಯ್​​ಗೆ ಜೈ ಎಂದಿದ್ದಾರೆ. ವಿಜಯ್​ ಪರ ಮತ ಚಲಾಯಿಸಿದ ಎಐಎಡಿಎಂಕೆ ಶಾಸಕರು ಪಕ್ಷಾಂತರ ನಿಷೇಧ ಕಾಯಿದೆ ತೂಗು ಕತ್ತಿಯಿಂದ ಪಾರಾಗ್ತಾರಾ ಅನ್ನೋದು ಸದ್ಯದ ಕುತೂಹಲವಾಗಿದೆ.

Continue Reading

ಸಿನಿಮಾ

ನಟ, ನಿರ್ಮಾಪಕ ದಿಲೀಪ್‌ ರಾಜ್‌ ಇನ್ನಿಲ್ಲ

VISTARANEWS.COM


on

ಸ್ಯಾಂಡಲ್‌ವುಡ್‌ ನಟ ಹಾಗೂ ನಿರ್ಮಾಪಕ ದಿಲೀಪ್‌ ರಾಜ್‌ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. 47 ವರ್ಷ ವಯಸ್ಸಿನ ದಿಲೀಪ್‌ ರಾಜ್‌ ಅವರನ್ನು ಬೆಳಗಿನ ಜಾವ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.


ದಿಲೀಪ್ ರಾಜ್ ಕನ್ನಡ ಕಿರುತೆರೆ ಮತ್ತು ಬೆಳ್ಳಿತೆರೆಯಲ್ಲಿ ಎರಡು ದಶಕಗಳಿಗೂ ಹೆಚ್ಚು ಕಾಲ ಸಕ್ರಿಯರಾಗಿದ್ದರು.
‘ಮಿಲನ’, ‘ಯು ಟರ್ನ್’, ‘ಆರ್ಕೆಸ್ಟ್ರಾ ಮೈಸೂರು’, ಲವ್‌ ಮಾಕ್‌ಟೇಲ್‌-3 ಸೇರಿದಂತೆ ಹಲವು ಚಿತ್ರಗಳಲ್ಲಿ ಅವರು ವಿಭಿನ್ನ ಪಾತ್ರಗಳಲ್ಲಿ ಅಭಿನಯಿಸಿದ್ದರು. ‘ಹಿಟ್ಲರ್ ಕಲ್ಯಾಣ’ ಧಾರಾವಾಹಿ ಮೂಲಕ ಮನೆಮಾತಾಗಿದ್ದರು. ನಿರ್ಮಾಪಕರಾಗಿಯೂ ಅವರು ಹಲವು ಧಾರಾವಾಹಿಗಳನ್ನು ನಿರ್ಮಾಣ ಮಾಡಿದ್ದರು.


ಸ್ಯಾಂಡಲ್‌ವುಡ್‌ನ ನಟರು, ನಿರ್ದೇಶಕರು,ನಿರ್ಮಾಪಕರು ಸೇರಿದಂತೆ ಚಿತ್ರರಂಗ ಗಣ್ಯರು ದಿಲೀಪ್‌ ರಾಜ್‌ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ದಿಲೀಪ್ ರಾಜ್ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟಾಗಿದ್ದು, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದಿದ್ದಾರೆ.

Continue Reading

Latest

ಪ್ರಶ್ನೆ ಪತ್ರಿಕೆ ಸೋರಿಕೆ : ನೀಟ್‌ ಪರೀಕ್ಷೆ ರದ್ದು, ಮರುಪರೀಕ್ಷೆಗೆ ಆದೇಶ

VISTARANEWS.COM


on

ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ NTA 2026ನೇ ಸಾಲಿನ ನೀಟ್‌-ಯುಜಿ, ಪರೀಕ್ಷೆಯನ್ನು ರದ್ದುಗೊಳಿಸಿದೆ.
ಮೇ ಮೂರರಂದು ದೇಶಾದ್ಯಂತ ನೀಟ್‌ ಪರೀಕ್ಷೆ ನಡೆದಿತ್ತು. ರಾಜಾಸ್ಥಾನದಲ್ಲಿ ನೀಟ್‌ ಪ್ರಶ್ನೆ ಪತ್ರಿಕೆಗಳು ಲೀಕ್‌ ಆದ ಹಿನ್ನೆಲೆಯಲ್ಲಿ ಎನ್‌ಟಿಎ ಈ ಆದೇಶ ಹೊರಡಿಸಿದೆ. ಪ್ರಶ್ನೆ ಪತ್ರಿಕೆ ಲೀಕ್‌ ಆಗಿರುವುದನ್ನು ಎನ್‌ಟಿಎ ಸೇರಿ ವಿವಿಧ ಏಜೆನ್ಸಿಗಳು ದೃಢಪಡಿಸಿರುವ ಹಿನ್ನೆಲೆಯಲ್ಲಿ ಎನ್‌ಟಿಎ ನೀಟ್‌-ಯುಜಿ ಪರೀಕ್ಷೆಯನ್ನು ರದ್ದು ಪಡಿಸಿದೆ.
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ – ಎನ್‌ಟಿಎ ಮತ್ತೊಮ್ಮೆ ನೀಟ್‌ ಪರೀಕ್ಷೆ ನಡೆಸಲು ತೀರ್ಮಾನಿಸಿದ್ದು, ಸದ್ಯದಲ್ಲೇ ಅದರ ದಿನಾಂಕ ಪ್ರಕಟಿಸಲಿದೆ. ಇದೇ ವೇಳೆ, ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣರಾದವರನ್ನು ಪತ್ತೆ ಹಚ್ಚಲು ಸರ್ಕಾರ ನಿರ್ಧರಿಸಿದೆ. ಹಾಗಾಗಿ, ಸಿಬಿಐ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ನಡೆಸಲಿದೆ.
ಮೇ 3ರಂದು ದೇಶವ್ಯಾಪಿ ನಡೆದಿದ್ದ ನೀಟ್‌ ಪರೀಕ್ಷೆಯಲ್ಲಿ 22.79 ಲಕ್ಷ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಏನಿದು ಪ್ರಕರಣ?:
ಮೇ ಮೂರರ ನೀಟ್‌ ಪರೀಕ್ಷೆಯಲ್ಲಿ ರಾಜಾಸ್ಥಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ವರದಿಗಳು ಹರಿದಾಡಿದ್ದವು. ರಾಜಸ್ಥಾನ ಸ್ಪೆಷಲ್‌ ಆಪರೇಷನ್‌ ಗ್ರೂಪ್‌ ಸಂಸ್ಥೆ ಈ ಪ್ರಕರಣದ ತನಿಖೆ ನಡೆಸುತ್ತಿದೆ. ತನಿಖೆ ವೇಳೆ ಅಸಲಿ ನೀಟ್‌ ಪರೀಕ್ಷೆಯ 120 ಪ್ರಶ್ನೆಗಳು ಸಲಹೆ ಪತ್ರಿಕೆ ಅಂದರೆ ಸಜೆಶನ್‌ ಪೇಪರ್‌ನ ಪ್ರಶ್ನೆಗಳ ಜೊತೆ ತಾಳೆಯಾಗಿದ್ದುದ್ದು ಬಹಿರಂಗವಾಗಿತ್ತು. ಹಾಗಾಗಿ, ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ ಎಂಬ ಅನುಮಾನ ದೃಢಪಟ್ಟಿತ್ತು. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆಯಾದ ಕಾರಣ, ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ, ಸಿಬಿಐ ತನಿಖೆಗೆ ಆದೇಶಿಸಿದೆ.

Continue Reading

Latest

ಅಸ್ಸಾಂ ಸಿಎಂ ಆಗಿ ಹಿಮಂತ್‌ ಬಿಸ್ವಾ ಪದಗ್ರಹಣ

VISTARANEWS.COM


on


ಅಸ್ಸಾಂ ಸಿಎಂ ಆಗಿ ಹಿಮಂತ್‌ ಬಿಸ್ವಾ ಶರ್ಮಾ ಇಂದು ಪದಗ್ರಹಣ ಮಾಡಿದರು. ಗುವಾಹುಟಿಯ ಪಶು ವೈದ್ಯಕೀಯ ಕಾಲೇಜು ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿಯಾಗಿ ಹಿಮಂತ್‌ ಬಿಸ್ವಾ ಶರ್ಮಾ ಪ್ರಮಾಣ ವಚನ ಸ್ವೀಕರಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್‌, ನಿತಿನ್‌ ಗಡ್ಕರಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌, ಪಶ್ಚಿಮ ಬಂಗಾಳ ಸಿಎಂ ಸುವೇಂದು ಅಧಿಕಾರಿ, ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್‌. ಚಂದ್ರಬಾಬು ನಾಯ್ಡು ಸೇರಿದಂತೆ ಬಿಜೆಪಿ ಆಡಳಿತದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಭಾಗಿಯಾಗಿದ್ದರು.
ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬಂದಿದು, 2 ನೇ ಬಾರಿಗೆ ಹಿಮಂತ್‌ ಬಿಸ್ವಾ ಶರ್ಮಾ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಭಾರಿ ಸಂಭ್ರಮಾಚರಣೆ ನಡೆಸಿದರು.

Continue Reading
Advertisement
ಪ್ರಮುಖ ಸುದ್ದಿ22 minutes ago

ಅಗ್ನಿ ಪರೀಕ್ಷೆ ಗೆದ್ದ ‘ವಿಜಯ್‌‌‌’, ಎಐಎಡಿಎಂಕೆಯಲ್ಲಿ ಭಿನ್ನಮತ ಸ್ಫೋಟ

ಸಿನಿಮಾ42 minutes ago

ನಟ, ನಿರ್ಮಾಪಕ ದಿಲೀಪ್‌ ರಾಜ್‌ ಇನ್ನಿಲ್ಲ

Latest21 hours ago

ನೀಟ್‌ ಪರೀಕ್ಷೆ ರದ್ದು: ಕೇಂದ್ರ ಸರ್ಕಾರವೇ ಹೊಣೆ- ಡಾ.ಎಂ.ಸಿ.ಸುಧಾಕರ್‌

Latest24 hours ago

ಪ್ರಶ್ನೆ ಪತ್ರಿಕೆ ಸೋರಿಕೆ : ನೀಟ್‌ ಪರೀಕ್ಷೆ ರದ್ದು, ಮರುಪರೀಕ್ಷೆಗೆ ಆದೇಶ

Latest1 day ago

ಅಸ್ಸಾಂ ಸಿಎಂ ಆಗಿ ಹಿಮಂತ್‌ ಬಿಸ್ವಾ ಪದಗ್ರಹಣ

Latest2 days ago

ಸಿಎಂ ಆದ ಮರುದಿನವೇ ಮಾಜಿ ಸಿಎಂ ಸ್ಟಾಲಿನ್‌ ಭೇಟಿಯಾದ ವಿಜಯ್‌

Latest3 days ago

ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್‌ ಕಡ್ಡಿ ಪತ್ತೆ

ಚಿತ್ರದುರ್ಗ3 days ago

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

Latest3 days ago

ಸಿಎಂ ವಿಜಯ್‌ ಮೊದಲ ಭಾಷಣ : “8 ಕೋಟಿ ಜನರೂ ನನ್ನವರೇ” ಎಂದ ವಿಜಯ್‌

Latest3 days ago

ತಮಿಳುನಾಡು ಸಿಎಂ ಆಗಿ ವಿಜಯ್‌ ಪದಗ್ರಹಣ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌