OTT Release: ಈ ವಾರ ಒಟಿಟಿಯಲ್ಲಿ ನೋಡಬಹುದಾದ ಸಿನಿಮಾ, ವೆಬ್‌ ಸಿರೀಸ್‌ಗಳಿವು - Vistara News

Latest

OTT Release: ಈ ವಾರ ಒಟಿಟಿಯಲ್ಲಿ ನೋಡಬಹುದಾದ ಸಿನಿಮಾ, ವೆಬ್‌ ಸಿರೀಸ್‌ಗಳಿವು

OTT Release: ಈ ವಾರ ಕೂಡ ಒಟಿಟಿಯಲ್ಲಿ ಹಲವಾರು ಹಿಟ್ ಶೋಗಳು ರಿಲೀಸ್ ಆಗಲಿವೆ. ಹೌಸ್ ಆಫ್ ದಿ ಡ್ರ್ಯಾಗನ್, ಬ್ರಿಡ್ಜರ್ಟನ್, ದಿ ಬಾಯ್ಸ್, ಪ್ರಿಸ್ಯುಮಡ್ ಇನ್ನೊಸೆಂಟ್ ಹಾಗೂ ವಿದ್ಯಾಬಾಲನ್ ಹಾಗೂ ಪ್ರತೀಕ್ ಗಾಂಧಿ ಅಭಿನಯಿಸಿದ ಗಲ್ಲಾ ಪೆಟ್ಟಿಗೆಯಲ್ಲಿ ಕಳಪೆ ಪ್ರದರ್ಶನ ಕಂಡ ಬಾಲಿವುಡ್ ಚಲನಚಿತ್ರ ದೋ ಔರ್ ದೋ ಪ್ಯಾರ್ ಕೂಡ ಈ ಬಾರಿ ಒಟಿಟಿಯಲ್ಲಿ ರಿಲೀಸ್ ಆಗಲಿವೆ. ಒಟ್ಟಾರೆ ಈ ವಾರ ಸಿನಿ ಪ್ರಿಯರಿಗೆ ಹಬ್ಬದೂಟವನ್ನು ಉಣಬಡಿಸಲಿದೆ.

VISTARANEWS.COM


on

OTT Release
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಮುಂಬೈ : ಪ್ರತಿವಾರ ಒಟಿಟಿಯಲ್ಲಿ ಸಾಕಷ್ಟು ಸೂಪರ ಹಿಟ್ ಶೋಗಳು ರಿಲೀಸ್ ಆಗುತ್ತಿರುತ್ತವೆ. ಈ ಮೂಲಕ ಒಟಿಟಿ ಜನರಿಗೆ ಸಾಕಷ್ಟು ಮನರಂಜನೆಯನ್ನು ನೀಡುತ್ತಿದೆ. ಹಾಗಾಗಿ ಈ ವಾರವೂ ಕೂಡ ಒಟಿಟಿ(OTT Release)ಯಲ್ಲಿ ಹಲವಾರು ಹಿಟ್ ಶೋಗಳು ರಿಲೀಸ್ ಆಗಲಿವೆ. ಗಲ್ಲಾ ಪೆಟ್ಟಿಗೆಯಲ್ಲಿ ಕಳಪೆ ಪ್ರದರ್ಶನ ಕಂಡ ಕೆಲವು ಬಾಲಿವುಡ್ ಚಲನಚಿತ್ರಗಳೂ ಈ ಬಾರಿ ಒಟಿಟಿಯಲ್ಲಿ ರಿಲೀಸ್ ಆಗಲಿದೆ. ಅವುಗಳ ವಿವರ ಇಲ್ಲಿದೆ.

ಹೌಸ್ ಆಫ್ ದಿ ಡ್ರ್ಯಾಗನ್ (ಸೀಸನ್ 2)

ಎಚ್‌ಬಿಓನ ಸೀರಿಸ್ ʼಹೌಸ್ ಆಫ್ ದಿ ಡ್ರ್ಯಾಗನ್ʼ ಸೀಸನ್ 2 ಜೂನ್ 16ರಂದು ಹೊಸ ಸಂಘರ್ಷ, ಸೇಡು ತೀರಿಸಿಕೊಳ್ಳುವ ಹೊಸ ಕಥಾವಸ್ತುಗಳೊಂದಿಗೆ ಮತ್ತೆ ಪ್ರೇಕ್ಷಕರ ಮುಂದೆ ಬಂದಿದೆ. ಜಾರ್ಜ್ ಆರ್ ಆರ್ ಮಾರ್ಟಿನ್ ಅವರ ʼಫೈರ್ ಆ್ಯಂಡ್ ಬ್ಲಡ್ʼ ಆಧರಿಸಿದ ಈ ಸರಣಿಯು ರಾಜ ಕುಟುಂಬದ ಕಥೆಯನ್ನು ಒಳಗೊಂಡಿದೆ. ರಾಜ ಕುಟುಂಬ ಅಧಿಕಾರದ ಸಂಘರ್ಷ, ಒಳಸಂಚು, ಕೌಟುಂಬಿಕ ಶತ್ರುತ್ವವನ್ನು ಇದರಲ್ಲಿ ಕಾಣಬಹುದು.
ಇದು ಜೂನ್ 16ರಂದು ಜಿಯೋ ಸಿನಿಮಾದಲ್ಲಿ ಬೆಳಗ್ಗೆ 6.30ರಿಂದ ಲಭ್ಯವಾಗಲಿದೆ.

ಬ್ರಿಡ್ಜರ್ಟನ್(ಸೀಸನ್ 3, ಭಾಗ 2)

ಇದರಲ್ಲಿ ಕಾಲಿನ್ ಮತ್ತು ಪೆನೆಲೋಪ್ ಅವರ ಪ್ರಣಯವನ್ನು ಪ್ರೇಕ್ಷಕರು ಕಣ್ತುಂಬಿಸಿಕೊಳ್ಳಬಹುದು. ಇದು ರೀಜೆನ್ಸಿ ಯುಗದ ಪ್ರಣಯ ಸರಣಿಯು ಜೂಲಿಯಾ ಕ್ವಿನ್ ಅವರ ಪುಸ್ತಕಗಳನ್ನು ಆಧರಿಸಿದೆ. ಪ್ರತಿಯೊಂದು ದೃಶ್ಯ ಬ್ರಿಡ್ಜರ್ಟನ್ ಕುಟುಂಬದ ಒಡಹುಟ್ಟಿದವರ ಮೇಲೆ ಕೇಂದ್ರೀಕರಿಸುತ್ತದೆ. ಮೂರನೇ ಸೀಸನ್‌ನಲ್ಲಿ ಪೆನೆಲೋಪ್ ಲೇಡಿ ವಿಸ್ಲ್ ಡೌನ್‌ನ ರಹಸ್ಯ ಗುರುತಿನಿಂದಾಗಿ ತನ್ನ ಜೀವನದ ಪ್ರೀತಿಯನ್ನು ಕಳೆದುಕೊಳ್ಳುವ ಅಪಾಯವನ್ನು ಎದುರಿಸುತ್ತಾಳೆ. ಅವಳ ಸತ್ಯ ಬಯಲಾಗುವುದೋ? ಅಥವಾ ಅವಳು ಸುಖವಾಗಿ ಬದುಕುವಳೋ? ಎಂಬುದನ್ನು ನೋಡಬೇಕು. ಇದು ನೆಟ್ ಫ್ಲಿಕ್ಸ್ ನಲ್ಲಿ ಸ್ಟ್ರೀಮಿಂಗ್‌ನಲ್ಲಿ ನೋಡಬಹುದು.

ದೋ ಔರ್ ದೋ ಪ್ಯಾರ್

ಬಾಕ್ಸ್ ಆಫೀಸ್‌ನಲ್ಲಿ ಕಳಪೆ ಪ್ರದರ್ಶನ ಕಂಡ ವಿದ್ಯಾ ಬಾಲನ್ ಅವರ ರೊಮ್ಯಾಂಟಿಕ್ ಕಾಮಿಡಿ ಇದೀಗ ಒಟಿಟಿಯಲ್ಲಿ ಕಾಣಿಸಿಕೊಂಡಿದೆ. ʼದೋ ಔರ್ ದೋ ಪ್ಯಾರ್‌ʼನಲ್ಲಿ ಕಾವ್ಯ ಮತ್ತು ಅನಿಯ ಪಾತ್ರದಲ್ಲಿ ವಿದ್ಯಾ ಬಾಲನ್ ಹಾಗೂ ಪ್ರತೀಕ್ ಗಾಂಧಿ ಅಭಿನಯಿಸಿದ್ದಾರೆ. ಊಟಿ ಪ್ರವಾಸದ ನಂತರ ವಿವಾಹೇತರ ಸಂಬಂಧದಲ್ಲಿ ತೊಡಗಿಕೊಂಡಿದ್ದರೂ ಸಹ ಪರಸ್ಪರ ಪ್ರೀತಿಸುವ ವಿವಾಹಿತ ದಂಪತಿಗಳಂತೆ ಇವರಿಬ್ಬರು ನಟಿಸುತ್ತಾರೆ. ಇದನ್ನು ಡಿಸ್ನಿ ಹಾಟ್ ಸ್ಟಾರ್‌ನಲ್ಲಿ ಸ್ಟ್ರೀಮಿಂಗ್ ನಲ್ಲಿ ನೋಡಬಹುದು.

ದಿ ಬಾಯ್ಸ್ (ಸೀಸನ್ 4)

ವಿಡಂಬನಾತ್ಮಕ ಸೂಪರ್ ಹೀರೋ ಸರಣಿಯ ʼದಿ ಬಾಯ್ಸ್ʼ ಸೀಸನ್ 4ರ ಮೊದಲ ಮೂರು ಸಂಚಿಕೆಗಳನ್ನು ಗುರುವಾರ ಪ್ರೈಮ್ ವಿಡಿಯೊದಲ್ಲಿ ಬಿಡುಗಡೆ ಮಾಡಲಾಗಿದೆ. ಕಾರ್ಲ್ ಅರ್ಬನ್, ಜ್ಯಾಕ್ ಕ್ವೈಡ್, ಆಂಟೋನಿ ಸ್ಟಾರ್, ಜೆನ್ಸಿ ಟಿ ಉಷರ್, ಎರಿನ್ ಮೊರಿಯಾರ್ಟಿ ಮತ್ತು ಚೇಸ್ ಕ್ರಾಫೋರ್ಡ್ ಹಿಂದಿನ ಪಾತ್ರವರ್ಗದವರಾದರೆ ವ್ಯಾಲೋರಿ ಕರಿ ಮತ್ತು ಸುಸಾನ್ ಹೇವಾರ್ಡ್ ಇಬ್ಬರು ಹೊಸ ಸೂಪರ್ ಹೀರೋಗಳಾಗಿದ್ದಾರೆ. ಇದನ್ನು ಪ್ರೈಮ್ ವಿಡಿಯೋದಲ್ಲಿ ಸ್ಟ್ರೀಮಿಂಗ್ ನಲ್ಲಿ ನೋಡಬಹುದು.

ಇದನ್ನೂ ಓದಿ: Yogi Adityanath: ರಸ್ತೆಯಲ್ಲಿ ನಮಾಜ್ ಮಾಡಿದರೆ ಹುಷಾರ್! ಬಕ್ರೀದ್ ಹಿನ್ನೆಲೆಯಲ್ಲಿ ಮುಸ್ಲಿಮರಿಗೆ ಯೋಗಿ ವಾರ್ನಿಂಗ್!

ಪ್ರಿಸ್ಯುಮಡ್ ಇನ್ನೊಸೆಂಟ್ (Presumed Innocent)

ಜೇಕ್ ಗಿಲೆನ್ ಹಾಲ್ ʼಪ್ರಿಸ್ಯುಮಡ್ ಇನ್ನೊಸೆಂಟ್‌ʼನಲ್ಲಿ ಕೊಲೆ ಪ್ರಕರಣದಲ್ಲಿನ ಪ್ರಾಸಿಕ್ಯೂಟರ್ ಆಗಿ ನಟಿಸಿದ್ದಾರೆ. ಇದು ಸ್ಕಾಟ್ ಟುರೊವ್ ಅವರ ಕಾದಂಬರಿ ಆಧರಿಸಿದೆ. ನಿಜ ಜೀವನದಲ್ಲಿ ಜೇಕ್‌ನ ಸಹೋದರಿ ಮ್ಯಾಗಿಯನ್ನು ಮದುವೆಯಾಗಿರುವ ಪೀಟರ್ ಸರ್ಸ್ ಗಾರ್ಡ್, ಗಿಲೆನ್ ಹಾಲ್‌ನ ನ್ಯಾಯಾಲಯದಲ್ಲಿ ಎದುರಾಳಿಯಾಗಿ ನಟಿಸಿದ್ದಾರೆ. ಇದನ್ನು ಆಪಲ್ ಟಿವಿ ಸ್ಟ್ರೀಮಿಂಗ್‌ನಲ್ಲಿ ನೋಡಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಪಂಚರಾಜ್ಯ ಚುನಾವಣೆ ನಂತರ,ಪೆಟ್ರೋಲ್‌,ಡೀಸೆಲ್‌ ದರ ಏರಿಕೆ ಇಲ್ಲ : ಕೇಂದ್ರದ ಸ್ಪಷ್ಟನೆ

VISTARANEWS.COM


on

ನವದೆಹಲಿ: ತಮಿಳುನಾಡು, ಪಶ್ಚಿಮ ಬಂಗಾಳ ಸೇರಿದಂತೆ ಐದು ರಾಜ್ಯಗಳ ಚುನಾವಣೆ ನಂತರ ದೇಶಾದ್ಯಂತ ಪೆಟ್ರೋಲ್‌ ಮತ್ತು ಡೀಸಲ್‌ ಬೆಲೆ ಹೇಚ್ಚಾಗಬಹುದು ಎಂಬ ಮಾಧ್ಯಮಗಳ ವರದಿಗಳನ್ನು ಕೇಂದ್ರ ಸರ್ಕಾರ ನಿರಾಕರಿಸಿದೆ.


ಈ ಸಂಬಂಧ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ X ನಲ್ಲಿ ಮಾಡಿರುವ ಪೋಸ್ಟ್‌ ನಲ್ಲಿ ಸ್ಪಷ್ಟೀಕರಣ ನೀಡಿದೆ.


ಡೀಸೆಲ್‌ ಮತ್ತು ಪೆಟ್ರೋಲ್‌ ಬೆಲೆಗಳನ್ನು ಹೆಚ್ಚಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಪರಿಗಣನೆಯಲ್ಲಿ ಇಲ್ಲ ಎಂದು ಅದು ಸ್ಪಷ್ಟಪಡಿಸಿದೆ.


ಐದು ರಾಜ್ಯಗಳ ಪೈಕಿ ಪಶ್ಚಿಮ ಬಂಗಾಳ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಮತದಾನ ನಡೆಯುತ್ತಿದ್ದು, ಏಪ್ರಿಲ್‌ 29 ರಂದು ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನ ನಡೆಯಲಿದೆ. ಏಪ್ರಿಲ್‌ 4 ರಂದು ಫಲಿತಾಂಶ ಪ್ರಕಟವಾಗಲಿದೆ. ನಂತರ ಡೀಸೆಲ್‌ ಮತ್ತು ಪೆಟ್ರೋಲ್‌ ಬೆಲೆ ಏರಿಕೆಯಾಗಲಿದೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು.


ಕೇಂದ್ರದ ಈ ಸ್ಪಷ್ಟನೆ ವಾಹನ ಸವಾರರೂ ಸೇರಿದಂತೆ ದೇಶದ ಜನತೆ ನಿಟ್ಟುಸಿರು ಬಿಡುವಂತಾಗಿದೆ.

Continue Reading

Latest

ಯಡಿಯೂರಪ್ಪ ರಾಜಕೀಯ ಪ್ರವೇಶಿಸಿ 50 ವರ್ಷ: ಮೇ 9 ರಂದು ಅಭಿಮಾನೋತ್ಸವ: ಸಂಸದ ಗೋವಿಂದ ಕಾರಜೋಳ

VISTARANEWS.COM


on

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜಕೀಯ ಪ್ರವೇಶಿಸಿ 50 ವರ್ಷಗಳು ಪೂರ್ಣಗೊಳಿಸಿದ ಅಂಗವಾಗಿ ಬಿಜೆಪಿ ಅಭಿಮಾನೋತ್ಸವ ಹಮ್ಮಿಕೊಂಡಿದೆ. ಈ ಅಭಿಮಾನೋತ್ಸವವು ಚಿತ್ರದುರ್ಗದಲ್ಲಿ ಮೇ 9 ರಂದು ನಡೆಯಲಿದ್ದು, ಗೃಹಮಂತ್ರಿ ಅಮಿತ್ ಶಾ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ಕಾರ್ಯಕ್ರಮ ವಿವರ ನೀಡಿದರು.
ಅಭಿಮಾನೋತ್ಸವ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಏಪ್ರಿಲ್ 26ರಂದು ಬೆಳಿಗ್ಗೆ 10 ಗಂಟೆಗೆ ಭೂಮಿಪೂಜೆ ನೆರವೇರಿಸಲಾಗುತ್ತದೆ. ಭೂಮಿಪೂಜೆಗೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಸಂಸದರು, ಮಾಜಿ ಸಂಸದರು, ಶಾಸಕರು, ಮಾಜಿ ಶಾಸಕರು, ವಿಧಾನಪರಿಷತ್ ಸದಸ್ಯರು, ಸೇರಿ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಯಡಿಯೂರಪ್ಪ ಅವರು 50 ವರ್ಷಗಳ ಕಾಲ ರಾಜ್ಯವನ್ನು ಸುತ್ತಿದ್ದಾರೆ. ರೈತರ ಪರವಾಗಿ ಹೋರಾಡಿ, ದೀನದಲಿತರಿಗೆ ನ್ಯಾಯ ಒದಗಿಸಿ ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದವರು. ಅವರ ಜೀವನ ಮತ್ತು ಸಮಾಜಸೇವೆ ಕುರಿತು ಅವರ ಅಭಿಮಾನೋತ್ಸವ ಆಚರಿಸಲು ತೀರ್ಮಾನಿಸಿದ್ದೇವೆ ಎಂದರು.
ಅಭಿಮಾನೋತ್ಸವದ ಹಿಂದಿನ ದಿನ ಅಂದರೆ 8ರಂದು ಸಂಜೆ 6 ಗಂಟೆಗೆ ಯಡಿಯೂರಪ್ಪನವರ ಪುರಪ್ರವೇಶ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಸುಮಾರು 10 ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆ ಇದೆ. ವ್ಯವಸ್ಥಿತವಾಗಿ ಕಾರ್ಯಕ್ರಮ ನಡೆಸಲು ತಂಡಗಳನ್ನು ರಚಿಸಲಾಗಿದೆ ಎಂದು ಕಾರಜೋಳ ವಿವರ ನೀಡಿದರು.
ನಾಡಿನ ಎಲ್ಲಾ ಮಠಾಧೀಶರು, ಮಾಜಿ ಮುಖ್ಯಮಂತ್ರಿಗಳು, ಮಾಜಿ ಸಚಿವರು ಮತ್ತು ಗಣ್ಯರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುತ್ತಿದೆ. ಯಡಿಯೂರಪ್ಪ ಅವರನ್ನು ಬಲ್ಲ ಸಾಹಿತಿಗಳು, ಒಡನಾಡಿಗಳು, ಕಲಾವಿದರು ಸೇರಿ ಸಮಾಜದ ಎಲ್ಲ ರಂಗದವರು ಭಾಗವಹಿಸುತ್ತಾರೆ. ಅಲ್ಲದೇ ಸಾರ್ವಜನಿಕರು ಮತ್ತು ರೈತ ಮುಖಂಡರೂ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.
ಚಿತ್ರದುರ್ಗ ಕರ್ನಾಟಕದ ಕೇಂದ್ರ ಬಿಂದು. ಆದ್ದರಿಂದ ಆ ಸ್ಥಳವನ್ನೇ ಆಯ್ಕೆ ಮಾಡಿಕೊಳ್ಳಲಾಗಿದೆ. ಯಡಿಯೂರಪ್ಪ ಅವರು ಜನನಾಯಕರು. ಬಿಜೆಪಿಯನ್ನು ಕಟ್ಟಿ ಬೆಳೆಸಿದ ನಾಯಕರು. ಆದರೆ ಜನತಾದಳದಿಂದ ಕಾಂಗ್ರೆಸ್ಸಿಗೆ ಬಂದ ಸಿದ್ದರಾಮಯ್ಯನವರು ಬೇರೆಯವರ ಹೆಗಲ ಮೇಲೆ ಕುಳಿತು ಕಾರ್ಯಕ್ರಮ ಮಾಡಿಸಿಕೊಂಡಿದ್ದಾರೆ. ನಮ್ಮದು ಹಾಗಲ್ಲ; ಯಡಿಯೂರಪ್ಪನವರೇ ಕಟ್ಟಿ ಬೆಳೆಸಿದ ಪಕ್ಷ ಎಂದು ತಿಳಿಸಿದರು.
ಯಡಿಯೂರಪ್ಪ ಕೊಡುಗೆ ಅನನ್ಯ: ಬಿ.ವೈ.ವಿಜಯೇಂದ್ರ
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಮಾತನಾಡಿ, ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಪಯಣವನ್ನು ಸಂಭ್ರಮಾಚರಣೆ ಮೂಲಕ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಡಿಗೆ ಯಡಿಯೂರಪ್ಪ ಅವರ ಕೊಡುಗೆಯನ್ನು ಎಲ್ಲ ವರ್ಗದವರೂ ಪ್ರಶಂಸಿಸುತ್ತಾರೆ. ಇದಕ್ಕಾಗಿ ಅರ್ಥಪೂರ್ಣ, ಭವ್ಯ ಕಾರ್ಯಕ್ರಮ ನಡೆಸುತ್ತಿದ್ದೇವೆ ಎಂದರು.
ರಾಜ್ಯದ ಮೂಲೆಮೂಲೆಗಳಿಂದ ಅಭಿಮಾನಿಗಳು ಬರಲಿದ್ದಾರೆ. ಲಕ್ಷಾಂತರ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಜನರು ಬರಲಿದ್ದಾರೆ. ಒಂದು ಐತಿಹಾಸಿಕ ಕಾರ್ಯಕ್ರಮ ಇದಾಗಲಿದೆ ಎಂದು ವಿವರಿಸಿದರು. ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಲೋಗೋವನ್ನು ಬಿಡುಗಡೆ ಮಾಡಲಾಯಿತು.
ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ಹರೀಶ್ ಪೂಂಜಾ, ಮಾಜಿ ಶಾಸಕ ಅನಿಲ್ ಬೆನಕೆ, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ವಿಧಾನಪರಿಷತ್ ಮಾಜಿ ಸದಸ್ಯ ಅರುಣ್ ಶಹಾಪುರ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

Continue Reading

Fact Check

ವಾಹನ ಸವಾರರಿಗೆ ಬಿಗ್ ರಿಲೀಫ್: ಪೆಟ್ರೋಲ್-ಡೀಸೆಲ್ ದರ ಏರಿಕೆ ವದಂತಿಗೆ ಕೇಂದ್ರ ಸರ್ಕಾರ ಬ್ರೇಕ್!

VISTARANEWS.COM


on

ಕಳೆದ ಕೆಲವು ದಿನಗಳಿಂದ ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕ ಮೂಡಿಸಿದ್ದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವದಂತಿಗಳಿಗೆ ಕೇಂದ್ರ ಸರ್ಕಾರ ಅಧಿಕೃತವಾಗಿ ತೆರೆ ಎಳೆದಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಏರಿಕೆಯಾಗಲಿದೆ ಎಂಬ ವರದಿಗಳನ್ನು ಸರ್ಕಾರ ಸಂಪೂರ್ಣವಾಗಿ ತಳ್ಳಿಹಾಕಿದೆ. ಈ ಕುರಿತು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಸ್ಪಷ್ಟನೆ ನೀಡಿದ್ದು, ಅಂತಹ ಯಾವುದೇ ದರ ಏರಿಕೆಯ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ದೃಢಪಡಿಸಿದೆ. ಇಂತಹ ಸುದ್ದಿಗಳು ಕೇವಲ ಜನರಲ್ಲಿ ಭಯ ಹುಟ್ಟಿಸುವ ದುರುದ್ದೇಶದಿಂದ ಕೂಡಿದ್ದು, ಸಾರ್ವಜನಿಕರು ಇವುಗಳಿಗೆ ಕಿವಿಗೊಡಬಾರದು ಎಂದು ವಿನಂತಿಸಿದೆ.

ವಿಧಾನಸಭಾ ಚುನಾವಣೆಗಳು ಏಪ್ರಿಲ್ 29ಕ್ಕೆ ಕೊನೆಗೊಳ್ಳುತ್ತಿದ್ದಂತೆ ಇಂಧನ ದರ ಗಗನಕ್ಕೇರಲಿದೆ ಮತ್ತು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಬ್ಯಾರೆಲ್‌ಗೆ 120 ಡಾಲರ್ ತಲುಪಿರುವುದು ಇದಕ್ಕೆ ಕಾರಣ ಎಂಬ ವರದಿಗಳು ಹರಿದಾಡುತ್ತಿದ್ದವು. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರ, ಕಳೆದ ನಾಲ್ಕು ವರ್ಷಗಳಲ್ಲಿ ಜಾಗತಿಕವಾಗಿ ತೈಲ ಬೆಲೆ ಏರಿಕೆಯಾಗಿದ್ದರೂ ಭಾರತದಲ್ಲಿ ಬೆಲೆಗಳನ್ನು ನಿಯಂತ್ರಣದಲ್ಲಿಟ್ಟಿರುವ ಏಕೈಕ ದೇಶ ನಮ್ಮದಾಗಿದೆ ಎಂದು ಪುನರುಚ್ಚರಿಸಿದೆ. ಮಧ್ಯಪ್ರಾಚ್ಯದ ಸಂಘರ್ಷದಂತಹ ಕಠಿಣ ಪರಿಸ್ಥಿತಿಯಲ್ಲೂ ನಾಗರಿಕರನ್ನು ರಕ್ಷಿಸಲು ಸರ್ಕಾರ ಅಬಕಾರಿ ಸುಂಕವನ್ನು ಈಗಾಗಲೇ ಲೀಟರ್‌ಗೆ 10 ರೂಪಾಯಿಗಳಷ್ಟು ಕಡಿತಗೊಳಿಸಿರುವುದನ್ನು ನೆನಪಿಸಿದೆ.

ದೇಶದ ಇಂಧನ ಭದ್ರತೆಯ ಬಗ್ಗೆಯೂ ಭರವಸೆ ನೀಡಿರುವ ಸರ್ಕಾರ, ಸದ್ಯ ಎಲ್ಲಾ ರಿಫೈನರಿಗಳು ಪೂರ್ಣ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತಿವೆ ಮತ್ತು ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಲಭ್ಯತೆಗೆ ಯಾವುದೇ ಕೊರತೆಯಿಲ್ಲ ಎಂದು ತಿಳಿಸಿದೆ. ಕಚ್ಚಾ ತೈಲ ಪೂರೈಕೆಯ ಮೇಲೆ ಸರ್ಕಾರ ನಿರಂತರ ನಿಗಾ ವಹಿಸಿದ್ದು, ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆಯಾಗದಂತೆ ಕ್ರಮ ವಹಿಸುತ್ತಿದೆ. ಇದರಿಂದಾಗಿ ಪೆಟ್ರೋಲ್ ಬೆಲೆ ಏರಿಕೆಯ ಭೀತಿಯಲ್ಲಿದ್ದ ವಾಹನ ಸವಾರರು ಮತ್ತು ಸಾರ್ವಜನಿಕರು ಸದ್ಯಕ್ಕೆ ನಿಟ್ಟುಸಿರು ಬಿಡುವಂತಾಗಿದೆ.

Continue Reading

Latest

ಅಮೆರಿಕದಲ್ಲಿ ಜನ್ಮಸಿದ್ಧ ಪೌರತ್ವ; ಭಾರತ, ಚೀನಾ ವಿರುದ್ಧ ಟ್ರಂಪ್ ಆಕ್ರೋಶ

VISTARANEWS.COM


on

ವಾಷಿಂಗ್ಟನ್: ಅಮೆರಿಕದಲ್ಲಿ ಸುಲಭವಾಗಿ ಜನ್ಮಸಿದ್ಧ ಪೌರತ್ವ ಹಕ್ಕು ಪಡೆಯುತ್ತಿದ್ದು ಅಮೆರಿಕನ್ನರ ಉದ್ಯೋಗದ ಹಕ್ಕುಗಳನ್ನು ಕಸಿದುಕೊಳ್ಳುತ್ತಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟೀಕಿಸಿದ್ದಾರೆ.
ಭಾರತ ಮತ್ತು ಚೀನಾ ವಿರುದ್ಧ ಜನಾಂಗೀಯ ನಿಂದನೆ ಇರುವ ಪತ್ರವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮದೇ ಒಡೆತನದ ಸಾಮಾಜಿಕ ಜಾಲತಾಣ ಟ್ರುತ್‌ನಲ್ಲಿ ಮರು ಪೋಸ್ಟ್ ಮಾಡಿದ್ದಾರೆ.
ಭಾರತೀಯರು ಮತ್ತು ಚೀನೀ ವಲಸಿಗರನ್ನು ‘ಲ್ಯಾಪ್‌ಟಾಪ್ ಹೊಂದಿರುವ ದರೋಡೆಕೋರರು’ ಎಂದೂ ಆಪಾದಿಸಿದ್ದಾರೆ.
ಏಷ್ಯಾದ ಎರಡು ದೇಶಗಳಾದ ಚೀನಾ ಮತ್ತು ಭಾರತ ದೇಶಗಳಿಂದ ಅಮೆರಿಕಕ್ಕೆ ಆಗಮಿಸುವ ಜನರು ಇಲ್ಲಿಯೇ ಮಗುವನ್ನು ಹೆರುತ್ತಾರೆ. ಆಗ ಮಗು ಸಹಜವಾಗಿಯೇ ಜನ್ಮಸಿದ್ಧ ಪೌರತ್ವ ಪಡೆಯುತ್ತದೆ. ನಂತರ ಚೀನಾ, ಭಾರತ ಮತ್ತು ಇತರ ‘ನರಕಕೂಪ’ಗಳಿಂದ ಸಂಪೂರ್ಣ ಕುಟುಂಬವನ್ನು ಇಲ್ಲಿಗೆ ಕರೆತಂದು ನೆಲೆಸುತ್ತಾರೆ ಎಂದು ಟ್ರಂಪ್ ಆಪಾದಿಸಿದ್ದಾರೆ.
ತಮ್ಮ ಪೋಸ್ಟ್‌ ನಲ್ಲಿ ಅವರು ಭಾರತೀಯರು ಮತ್ತು ಚೀನೀ ವಲಸಿಗರನ್ನು ‘ಲ್ಯಾಪ್‌ಟಾಪ್ ಹೊಂದಿರುವ ದರೋಡೆಕೋರರು’ ಮತ್ತು ‘ನಮ್ಮ ಧ್ವಜದ ಮೇಲೆ ಕಾಲಿಟ್ಟಿರುವವರು’ ಎಂದೂ ಟೀಕಿಸಿದ್ದಾರೆ. ಎಲ್ಲ ಮಾಫಿಯಾಗಳು ಒಟ್ಟಾಗಿ ಸೇರಿ ಮಾಡಿದ ಹಾನಿಗಿಂತಲೂ ಹೆಚ್ಚಾಗಿ ಈ ಎರಡೂ ದೇಶಗಳ ಜನತೆ ಹೆಚ್ಚಿನ ಹಾನಿ ಉಂಟು ಮಾಡಿದ್ದಾರೆ. ನನ್ನ ಅಭಿಪ್ರಾಯದಲ್ಲಿ ಅವರು. ನಮ್ಮನ್ನು ದೋಚಿ ನಮ್ಮನ್ನೇ ಎರಡನೇ ದರ್ಜೆಯ ನಾಗರಿಕರಂತೆ ನಡೆಸಿಕೊಂಡಿದ್ದಾರೆ. ನಮ್ಮ ಧ್ವಜದ ಮೇಲೆ ಹೆಜ್ಜೆ ಹಾಕಿದ್ದಾರೆ ಎಂದೂ ಕಿಡಿ ಕಾರಿದ್ದಾರೆ.
ಅಮೆರಿಕದ ಬಹುತೇಕ ಎಲ್ಲ ಆಂತರಿಕ ಕಾರ್ಯವಿಧಾನಗಳನ್ನು ಭಾರತೀಯರು ಮತ್ತು ಚೀನಿಯರಿಗೆ ಅನುಕೂಲವಾಗುವಂತೆ ಸ್ಥಾಪಿಸಲಾಗಿದೆ. ಹಾಗಾಗಿ, ನೀವು ಇಲ್ಲಿ ಕೆಲಸ ಮಾಡಲು ಭಾರತ ಅಥವಾ ಚೀನಾದಿಂದ ಬಂದಿರಬೇಕು. 9 ತಿಂಗಳ ಗರ್ಭಿಣಿಯರು ಇಲ್ಲಿಗೆ ಬಂದು ಮಗುವನ್ನು ಹೆರುವ ಮೂಲಕ ಆ ಮಗು ಸಹಜವಾಗಿ ನೆಲದ ಕಾನೂನಿನಂತೆ ಜನ್ಮಸಿದ್ಧ ಪೌರತ್ವ ಪಡೆಯುವುದನ್ನು ಹೇಗೆ ಸಮರ್ಥಿಸಲು ಸಾಧ್ಯ ಎಂದಿದು ಟ್ರಂಪ್‌ ಪ್ರಶ್ನಿಸಿದ್ದಾರೆ.
ಅಮೆರಿಕದ ಸಂವಿಧಾನವು ಅತ್ಯಂತ ಹಳೆಯದಾಗಿದೆ. ಹೆರಿಗೆ ಪ್ರವಾಸದಿಂದಾಗಿ ಸದ್ಯದ ಅಮೆರಿಕದ ವ್ಯವಸ್ಥೆ ಹಾಳಾಗುತ್ತಿದೆ. ನಮ್ಮ ದೇಶದ ಸಂವಿಧಾನವನ್ನು ವೈಮಾನಿಕ ಪ್ರಯಾಣ, ಟಿವಿ, ಇಂಟರ್‌ನೆಟ್, ರೇಡಿಯೊ ಬರುವುದಕ್ಕೂ ಮುನ್ನ ರಚಿಸಲಾಗಿದೆ ಎಂದು ಹೇಳಿದ್ದಾರೆ.

Continue Reading
Advertisement
Latest5 minutes ago

ಪಂಚರಾಜ್ಯ ಚುನಾವಣೆ ನಂತರ,ಪೆಟ್ರೋಲ್‌,ಡೀಸೆಲ್‌ ದರ ಏರಿಕೆ ಇಲ್ಲ : ಕೇಂದ್ರದ ಸ್ಪಷ್ಟನೆ

Latest7 minutes ago

ಯಡಿಯೂರಪ್ಪ ರಾಜಕೀಯ ಪ್ರವೇಶಿಸಿ 50 ವರ್ಷ: ಮೇ 9 ರಂದು ಅಭಿಮಾನೋತ್ಸವ: ಸಂಸದ ಗೋವಿಂದ ಕಾರಜೋಳ

Fact Check8 minutes ago

ವಾಹನ ಸವಾರರಿಗೆ ಬಿಗ್ ರಿಲೀಫ್: ಪೆಟ್ರೋಲ್-ಡೀಸೆಲ್ ದರ ಏರಿಕೆ ವದಂತಿಗೆ ಕೇಂದ್ರ ಸರ್ಕಾರ ಬ್ರೇಕ್!

Latest28 minutes ago

ಅಮೆರಿಕದಲ್ಲಿ ಜನ್ಮಸಿದ್ಧ ಪೌರತ್ವ; ಭಾರತ, ಚೀನಾ ವಿರುದ್ಧ ಟ್ರಂಪ್ ಆಕ್ರೋಶ

Latest41 minutes ago

ನೇಪಾಳದಲ್ಲಿ ‘ರ‍್ಯಾಪರ್’ ಪ್ರಧಾನಿ ಬಾಲೆನ್ ಶಾ ಕ್ರಾಂತಿ: ಭ್ರಷ್ಟಾಚಾರಕ್ಕೆ ಜಾಗವಿಲ್ಲ, ಆರೋಪ ಕೇಳಿಬಂದ 26 ದಿನಕ್ಕೇ ಇಬ್ಬರು ಸಚಿವರ ಔಟ್!

Latest1 hour ago

ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಚುರುಕುಗೊಂಡ ಮತದಾನ; ಮುರ್ಶಿದಾಬಾದ್‌ನಲ್ಲಿ ಕಚ್ಚಾ ಬಾಂಬ್ ಸ್ಫೋಟ

Latest1 hour ago

ಸ್ಟೇಜ್ ಪರ್ಫಾರ್ಮೆನ್ಸ್ ವೇಳೆ ಲಿಪ್‌ಸಿಂಕ್‌ ಮಾಡಿದ ‘ಧುರಂಧರ್‌’ ಗಾಯಕಿ: ನೆಟ್ಟಿಗರು ಫುಲ್ ಗರಂ!

Narendra Modi
Latest1 hour ago

ಪಶ್ಚಿಮ ಬಂಗಾಳ-ತಮಿಳುನಾಡುಗಳಲ್ಲಿ ದಾಖಲೆ ಮತದಾನ: ಪ್ರಧಾನಿ ಮೋದಿ ವಿಶ್ವಾಸ

Latest1 hour ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವು: ಪ್ರಧಾನಿ ಮೋದಿ ವಿಶ್ವಾಸ

Latest2 hours ago

ಎಸ್‌ಎಸ್‌ಎಲ್‌ಸಿ ಮರುಪರೀಕ್ಷೆ ದಿನಾಂಕ ಪ್ರಕಟ: ಅನುತ್ತೀರ್ಣರಾದವರಿಗೆ ಉಚಿತವಾಗಿ ಪರೀಕ್ಷೆ ಬರೆಯಲು ಅವಕಾಶ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌