OTT Releases : ಈ ವಾರ ಥಿಯೇಟರ್ ಮತ್ತು ಒಟಿಟಿಯಲ್ಲಿ ಬಿಡುಗಡೆ ಆಗಲಿವೆ ಈ ಚಿತ್ರಗಳು; ಟ್ರೇಲರ್‌ ನೋಡಿ - Vistara News

Latest

OTT Releases : ಈ ವಾರ ಥಿಯೇಟರ್ ಮತ್ತು ಒಟಿಟಿಯಲ್ಲಿ ಬಿಡುಗಡೆ ಆಗಲಿವೆ ಈ ಚಿತ್ರಗಳು; ಟ್ರೇಲರ್‌ ನೋಡಿ

OTT Releases: ಈ ವಾರ ಒಟಿಟಿಯಲ್ಲಿ ಬಿಡುಗಡೆ ಆಗಲಿರುವ ಚಿತ್ರಗಳು ರೊಮ್ಯಾಂಟಿಕ್ ಮತ್ತು ಥ್ರಿಲ್ಲರ್‌ಗಳಿಂದ ಹಿಡಿದು ಪ್ರೇಕ್ಷಕರನ್ನು ಬೆಚ್ಚಿಬೀಳಿಸುವ ಭಯಾನಕ ಮತ್ತು ಆಕ್ಷನ್‌ವರೆಗೆ ಎಲ್ಲ ಕುತೂಹಲಕರ ಸಂಗತಿಗಳನ್ನೂ ಒಳಗೊಂಡಿವೆ. ಬ್ಯಾಡ್ ನ್ಯೂಸ್, ಟ್ವಿಸ್ಟರ್ಸ್, ಇಮ್ಮಾಕ್ಯುಲೇಟ್, ಆ್ಯಕ್ಸಿಡೆಂಟ್ ಆರ್ ಕಾನ್‌ಸ್ಪೈರ್ಸಿ: ಗೋಧ್ರಾ, ಮುಂತಾದ ಚಿತ್ರಗಳು ನಿಮ್ಮನ್ನು ರಂಜಿಸಲಿವೆ. ಈ ಚಿತ್ರಗಳ ಕಿರು ಮಾಹಿತಿ ಮತ್ತು ವಿಡಿಯೊಗಳು ಇಲ್ಲಿವೆ.

VISTARANEWS.COM


on

OTT Releases
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo


ಮುಂಬೈ : ಒಟಿಟಿ ತನ್ನ ಪ್ರೇಕ್ಷಕರಿಗಾಗಿ ಪ್ರತಿವಾರ ವಿಭಿನ್ನ ಬಗೆಯ ಚಿತ್ರಗಳನ್ನು ಬಿಡುಗಡೆ ಮಾಡುತ್ತಿರುತ್ತದೆ. ಈ ವಾರ ಒಟಿಟಿಯಲ್ಲಿ (OTT Releases) ಬಿಡುಗಡೆಯಾಗಲಿರುವ ಚಿತ್ರಗಳು ರೊಮ್ಯಾಂಟಿಕ್ ಮತ್ತು ಥ್ರಿಲ್ಲರ್‌ಗಳಿಂದ ಹಿಡಿದು ಪ್ರೇಕ್ಷಕರನ್ನು ಬೆಚ್ಚಿಬೀಳಿಸುವ ಭಯಾನಕ ಮತ್ತು ಆಕ್ಷನ್‌ವರೆಗೆ ಎಲ್ಲವನ್ನೂ ಒಳಗೊಂಡಿವೆ. ನೀವು ಚಿತ್ರಮಂದಿರಗಳಿಗೆ ಹೋಗಬಹುದು ಅಥವಾ ಮನೆಯಲ್ಲಿ ಆರಾಮವಾಗಿ ಕುಳಿತು ಈ ವಾರ ಕಳೆಯಬಹುದು. ಈ ವಾರ ಥಿಯೇಟರ್ ಹಾಗೂ ಒಟಿಟಿಯಲ್ಲಿ ಬಿಡುಗಡೆಯಾಗಲಿರುವ ಚಿತ್ರಗಳ ವಿವರ ಇಲ್ಲಿದೆ.

ಈ ವಾರ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿರುವ ಚಿತ್ರಗಳು:

ಬ್ಯಾಡ್ ನ್ಯೂಸ್

ಆನಂದ್ ತಿವಾರಿ ಅವರ ʼಬ್ಯಾಡ್ ನ್ಯೂಸ್ʼ ಚಿತ್ರದಲ್ಲಿ ತೃಪ್ತಿ ದಿಮ್ರಿ, ವಿಕ್ಕಿ ಕೌಶಲ್ ಮತ್ತು ಅಮ್ಮಿ ಎರ್ಕ್ ಮುಖ್ಯ ಪಾತ್ರಗಳಲ್ಲಿದ್ದಾರೆ. ಇಶಿತಾ ಮೊಯಿತ್ರಾ ಮತ್ತು ತರುಣ್ ದುಡೇಜಾ ಬರೆದಿರುವ ಈ ಚಿತ್ರವನ್ನು ಕರಣ್ ಜೋಹರ್, ಅಪೂರ್ವ ಮೆಹ್ತಾ ಮತ್ತು ಆನಂದ್ ತಿವಾರಿ ನಿರ್ಮಿಸಿದ್ದಾರೆ. ಇದು ಕುತೂಹಲಕರ ಕತೆ ಹೊಂದಿದೆ.

ಟ್ವಿಸ್ಟರ್ಸ್

ಟ್ವಿಸ್ಟರ್ಸ್ 1996ರ ಅಪ್ರತಿಮ ಚಲನಚಿತ್ರ ʼಟ್ವಿಸ್ಟರ್‌ʼನ ಮುಂದುವರಿದ ಭಾಗವಾಗಿದೆ. ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ಲೀ ಐಸಾಕ್ ಚುಂಗ್ ನಿರ್ದೇಶನದ ಈ ಚಿತ್ರದಲ್ಲಿ ಡೈಸಿ ಎಡ್ಗರ್-ಜೋನ್ಸ್, ಗ್ಲೆನ್ ಪೊವೆಲ್ ಮತ್ತು ಆಂಥೋನಿ ರಾಮೋಸ್ ನಟಿಸಿದ್ದಾರೆ.

ಪ್ರಾಯೋಗಿಕ ಹವಾಮಾನ ಎಚ್ಚರಿಕೆ ವ್ಯವಸ್ಥೆಯನ್ನು ಪರೀಕ್ಷಿಸುವ ಸಲುವಾಗಿ ಒಕ್ಲಹಾಮ್‌ನಲ್ಲಿ ಅಭೂತಪೂರ್ವ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳೊಂದಿಗೆ ಹೋರಾಡುತ್ತಿರುವ ವ್ಯಕ್ತಿಯ ಕಥೆಯನ್ನು ಈ ಚಿತ್ರವು ಹೇಳುತ್ತದೆ.

ಇಮ್ಮಾಕ್ಯುಲೇಟ್ (Immaculate)

ಮೈಕೆಲ್ ಮೋಹನ್ ಅವರ ಭಯಾನಕ ಚಿತ್ರದಲ್ಲಿ ಸಿಡ್ನಿ ಸ್ವೀನಿ, ಅಲ್ವಾರೊ ಮೊರ್ಟೆ ಮತ್ತು ಬೆನೆಡೆಟ್ಟಾ ಪೊರ್ಕರೋಲಿ ನಟಿಸಿದ್ದಾರೆ. ದೂರದ ಇಟಾಲಿಯನ್ ಕಾನ್ವೆಂಟ್‌ನಲ್ಲಿ ಡೆಟ್ರಾಯಿಟ್‌ನ ಸಿಸಿಲಿಯಾ ಎಂಬ ಸನ್ಯಾಸಿನಿ ಭಯಂಕರ ಅಗ್ನಿಪರೀಕ್ಷೆಯಲ್ಲಿ ಸಿಲುಕುತ್ತಾಳೆ.

ಅವಳು ಆಳವಾದ, ಭಯಾನಕ ರಹಸ್ಯಗಳನ್ನು ಕಂಡುಹಿಡಿಯಲು ಕಾನ್ವೆಂಟ್‌ಗೆ ಹೋಗುತ್ತಾಳೆ. ಪವಾಡವೆಂದು ಆಚರಿಸಲಾಗುವ ರಹಸ್ಯ ಗರ್ಭಧಾರಣೆ ಶೀಘ್ರದಲ್ಲೇ ಅವಳ ಜೀವನವನ್ನು ಮತ್ತೊಂದು ಸುಳಿಗೆ ಸಿಲುಕಿಸುತ್ತದೆ. ʼಪ್ಯಾರಾಸೈಟ್ʼ ಮತ್ತು ಟ್ರಯಂಗಲ್‌ ಆಫ್‌ ಸ್ಯಾಡ್‌ನೆಸ್‌ ಚಿತ್ರಗಳಿಗೆ ಹೆಸರುವಾಸಿಯಾದ ನಿಯಾನ್ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಸ್ಪೈ x ಫ್ಯಾಮಿಲಿ

ಟಕುಯಾ ಎಗುಚಿ (ಲಾಯ್ಡ್ ಫೋರ್ಗರ್), ಅಟ್ಸುಮಿ ತನೆಜಾಕಿ (ಅನ್ಯಾ) ಮತ್ತು ಸಾರಿ ಹಯಾಮಿ (ಯೋರ್) ಧ್ವನಿ ನೀಡಿರುವ ಈ ಜಪಾನಿನ ಅನಿಮೆಷನ್ ಚಿತ್ರ ಭರಪೂರ ಸಾಹಸಗಳಿಂದ ತುಂಬಿದೆ. ಮುಖ್ಯವಾಗಿ ಮಕ್ಕಳಿಗೆ ಖುಷಿ ಕೊಡುತ್ತದೆ.

ಒಬ್ಬ ಗೂಢಚಾರಿ, ಒಬ್ಬ ಕೊಲೆಗಾರ ಮತ್ತು ಟೆಲಿಪಥಿಕ್ ಮಗು ಇವರ ಸುತ್ತ ಕತೆ ಸುತ್ತುತ್ತದೆ. ಅನಿರೀಕ್ಷಿತ ತಿರುವುಗಳು ಈ ಚಿತ್ರದಲ್ಲಿವೆ..

ಟ್ರೆಷರ್(Treasure)

ಲೀನಾ ಡನ್ಹ್ಯಾಮ್ ಮತ್ತು ಸ್ಟೀಫನ್ ಫ್ರೈ ನಟಿಸಿರುವ ʼಟ್ರೆಷರ್ʼ 1990ರ ಪೋಲೆಂಡ್ ಹಿನ್ನೆಲೆಯನ್ನು ಆಧರಿಸಿದ ಹೃದಯಸ್ಪರ್ಶಿ ಮತ್ತು ದುರಂತದ ಹಿನ್ನೆಲೆಯ ಹಾಸ್ಯ ಚಿತ್ರವಾಗಿದೆ. ಇದು ಲಿಲಿ ಬ್ರೆಟ್ ಅವರ 1999ರ ಕಾದಂಬರಿ ಟೂ ಮ್ಯಾನ್ ಮೆನ್ ಅನ್ನು ಆಧರಿಸಿದೆ. ಜೂಲಿಯಾ ವಾನ್ ಹೈಂಜ್ ನಿರ್ದೇಶನದ ಈ ಚಿತ್ರವು ಅಮೇರಿಕದ ಸಂಗೀತ ಪತ್ರಕರ್ತೆ ರೂತ್ ಮತ್ತು ಹತ್ಯಾಕಾಂಡದಿಂದ ಬದುಕುಳಿದ ಅವಳ ತಂದೆ ಎಡೆಕ್ ಅವರ ಸುತ್ತ ಈ ಕತೆ ಇದೆ. ರೂತ್ ತನ್ನ ತಂದೆಯ ಬಾಲ್ಯದ ತಾಣಗಳಿಗೆ ಪ್ರಯಾಣವನ್ನು ಪ್ರಾರಂಭಿಸುತ್ತಾಳೆ. ತಮ್ಮ ಕುಟುಂಬದ ಸಾವಿನ ರಹಸ್ಯಗಳನ್ನು ಭೇದಿಸುವ ಭರದಲ್ಲಿ ದುಷ್ಕೃತ್ಯಗಳಲ್ಲಿ ತೊಡಗುತ್ತಾಳೆ.

ಆ್ಯಕ್ಸಿಡೆಂಟ್ ಆರ್ ಕಾನ್‌ಸ್ಪೈರ್ಸಿ: ಗೋಧ್ರಾ

ಗೋಧ್ರಾ ಭಾರತದ ಕರಾಳ ಘಟನೆಗಳಲ್ಲಿ ಒಂದಾಗಿದೆ. 2002ರ ಫೆಬ್ರವರಿಯಲ್ಲಿ ಗೋಧ್ರಾ ರೈಲು ಬೆಂಕಿ ದುರಂತದಲ್ಲಿ ಹಲವಾರು ಜನರು ಭೀಕರವಾಗಿ ಸಾಯುತ್ತಾರೆ. ಈ ಘಟನೆ ಗುಜರಾತಿನಾದ್ಯಂತ ವ್ಯಾಪಕವಾದ ಹಿಂದೂ-ಮುಸ್ಲಿಂ ಗಲಭೆಗಳಿಗೆ ಕಾರಣವಾಗಿತ್ತು. ಈ ಚಿತ್ರದ ಕತೆಯು ಈ ಘಟನೆಯ ಹಿನ್ನೆಲೆಯನ್ನು ಹೊಂದಿದೆ.

ಎಂ.ಕೆ.ಶಿವಾಕ್ಷ್ ನಿರ್ದೇಶನದ ಮತ್ತು ಬಿ.ಜೆ.ಪುರೋಹಿತ್ ನಿರ್ಮಾಣದ ರಣವೀರ್ ಶೋರೆ ಅಭಿನಯದ ಈ ಚಿತ್ರವು ನಾನಾವತಿ-ಮೆಹ್ತಾ ಆಯೋಗದ ತನಿಖೆಗೆ ಜೀವ ತುಂಬುತ್ತದೆ.

ಈ ವಾರ ಒಟಿಟಿಯಲ್ಲಿ ಬಿಡುಗಡೆಯಾಗಲಿರುವ ಚಿತ್ರಗಳು

ಆಡುಜೀವಿತಂ

ಇದು ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ಬಿಡುಗಡೆಯಾಗಲಿದೆ. ನೈಜ ಘಟನೆಗಳಿಂದ ಸ್ಫೂರ್ತಿ ಪಡೆದ ಆಡುಜೀವಿತಂ – ದಿ ಗೋಟ್‌ ಲೈಫ್ ಚಿತ್ರವನ್ನು ಬ್ಲೆಸ್ಸಿ ನಿರ್ದೇಶಿಸಿದ್ದಾರೆ. ಪೃಥ್ವಿರಾಜ್ ಸುಕುಮಾರನ್ ಮತ್ತು ಅಮಲಾ ಪೌಲ್ ನಟಿಸಿದ್ದಾರೆ. ಇದು ಬೆನ್ಯಾಮಿನ್ ಅವರ ಕಾದಂಬರಿಯನ್ನು ಆಧರಿಸಿದೆ. ಈ ಮಲಯಾಳಂ ಚಿತ್ರವು ಸೌದಿ ಅರೇಬಿಯಾದಲ್ಲಿ ಸ್ಥಳೀಯ ಅರಬ್ಬರಿಂದ ಮರುಭೂಮಿಯ ಹೊಲಗಳಲ್ಲಿ ಮೇಕೆ ಮೇಯಿಸುವವರಾಗಿ ಗುಲಾಮಗಿರಿಗೆ ತಳ್ಳಲ್ಪಟ್ಟ ಸಾವಿರಾರು ಭಾರತೀಯರಲ್ಲಿ ಒಬ್ಬರಾದ ಮಲಯಾಳಿ ವಲಸೆ ಕಾರ್ಮಿಕ ನಜೀಬ್ ಅವರ ನಿಜ ಜೀವನದ ಕಥೆಯನ್ನು ನಿರೂಪಿಸುತ್ತದೆ.

ಲೇಡಿ ಇನ್ ದಿ ಲೇಕ್

ಇದು ಆಪಲ್ ಟಿವಿ+ ನಲ್ಲಿ ಬಿಡುಗಡೆಯಾಗಲಿದೆ. ಲಾರಾ ಲಿಪ್ಮನ್ ಅವರ ನಟಾಲಿಯಾ ಪೋರ್ಟ್ ಮ್ಯಾನ್ ಲೇಡಿ ಇನ್ ದಿ ಲೇಕ್ ಕಾದಂಬರಿಯನ್ನು ಆಧರಿಸಿದೆ. 1960ರಲ್ಲಿ ಬಾಲ್ಟಿಮೋರ್‌ನಲ್ಲಿ ಚಿತ್ರೀಕರಿಸಲಾದ ಈ ಚಿತ್ರ ಯಹೂದಿ ಗೃಹಿಣಿಯೊಬ್ಬಳು ತನ್ನ ಜೀವನವನ್ನು ಮರುಶೋಧಿಸಿ ತನಿಖಾ ಪತ್ರಕರ್ತೆ ಆಗುವ ಕಥೆಯನ್ನು ಹೇಳುತ್ತದೆ.

1996ರಲ್ಲಿ ʼಥ್ಯಾಂಕ್ಸ್ ಗೀವಿಂಗ್ ಡೇʼಯಂದು ಯುವತಿಯೊಬ್ಬಳು ಕಣ್ಮರೆಯಾಗಿರುವುದರ ಘಟನೆಗಳ ಸರಣಿಯನ್ನು ಈ ಚಿತ್ರ ಬಿಚ್ಚಿಡುತ್ತದೆ.

ಇದನ್ನೂ ಓದಿ: ಪುಟ್ಟ ಮಗುವನ್ನು ಮುಂದೆ ಕೂರಿಸಿಕೊಂಡು ಬೈಕ್‌ ಸ್ಟಂಟ್‌! ಒದ್ದು ಒಳಗೆ ಹಾಕಿ ಅಂತಿದ್ದಾರೆ ನೆಟ್ಟಿಗರು

ಸ್ವೀಟ್ ಹೋಮ್ (ಸೀಸನ್ 3)

ಇದು ನೆಟ್‌ಫ್ಲಿಕ್ಸ್‌ನಲ್ಲಿ ಲಭ್ಯವಿದೆ. ದಕ್ಷಿಣ ಕೊರಿಯಾಕ್ಕೆ ಸಂಬಂಧಿಸಿದ ಈ ಸರಣಿಯ ಮೂರನೇ ಸೀಸನ್ ಮಾನವರು, ರಾಕ್ಷಸರು ಮತ್ತು ನವಮಾನವರ ನಡುವಿನ ಉದ್ವಿಗ್ನತೆಯನ್ನು ಬಿಂಬಿಸುತ್ತದೆ. ಇದು ರಾಕ್ಷಸ ವಿಕಸನಗಳಿಂದ ಪೀಡಿತವಾದ ಜಗತ್ತಿನಲ್ಲಿ ಬದುಕುಳಿಯಲು ಹೆಣಗಾಡುತ್ತಿರುವ ಚಾ ಹ್ಯುನ್-ಸು ಮತ್ತು ಅವನ ಸ್ನೇಹಿತರ ಭಯಾನಕ ಕಥೆಯನ್ನು ಹೇಳುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Accident Video: ಸ್ಕೂಟರ್‌ಗೆ ಅಪ್ಪಳಿಸಿದ ಕಾರು; 30 ಅಡಿ ದೂರ ಎಗರಿ ಬಿದ್ದ ಮಹಿಳಾ ಕಾನ್‌ಸ್ಟೇಬಲ್‌

Accident Video: ಅತೀ ವೇಗ ಒಳ್ಳೆಯದಲ್ಲ ಎಂದು ಎಷ್ಟು ಹೇಳಿದರೂ ಜನ ಮುನ್ನುಗ್ಗಿ ಬಿಡುತ್ತಾರೆ. ಇದರಿಂದಲೇ ಸಾಕಷ್ಟು ಅಪಘಾತಗಳಿಗೆ ತುತ್ತಾಗುತ್ತಾರೆ. ವೇಗವಾಗಿ ಚಲಿಸುತ್ತಿದ್ದ ಕಾರೊಂದು ಟರ್ನ್ ಮಾಡಲು ಹೋದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಎದುರಿನಿಂದ ಬರುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸ್ಕೂಟರ್‌ಗೆ ಮುಂಭಾಗದಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳಾ ಪೊಲೀಸ್ ಪೇದೆ ಹಾರಿ ಹೋಗಿ 30 ಅಡಿ ದೂರಕ್ಕೆ ಬಿದ್ದಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ.

VISTARANEWS.COM


on

Hit and Run Case
Koo


ಚೆನ್ನೈ: ಅತಿ ವೇಗ ಅಪಘಾತಕ್ಕೆ ಕಾರಣವೆಂದು (Accident Video) ತಿಳಿದರೂ ಕೂಡ ಕೆಲವರು ವೇಗವಾಗಿ ವಾಹನಗಳನ್ನು ಚಲಾಯಿಸಿ ತಮ್ಮ ಜೀವದ ಜೊತೆಗೆ ಜನರ ಜೀವಕ್ಕೂ ಅಪಾಯವನ್ನು ತಂದೊಡ್ಡುತ್ತಾರೆ. ಇದೀಗ ಅಂತಹದೊಂದು ಅಪಘಾತದ (Hit and Run Case) ಘಟನೆ ಚೆನ್ನೈನಲ್ಲಿ ನಡೆದಿದ್ದು, ಈ ಅಪಘಾತದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ಆ ಗಿದೆ. ಚೆನ್ನೈನಲ್ಲಿ ವೇಗವಾಗಿ ಬಂದ ಕಾರೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ 24 ವರ್ಷದ ಮಹಿಳಾ ಪೊಲೀಸ್ ಅಧಿಕಾರಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚೆನ್ನೈನಲ್ಲಿ ಬುಧವಾರ ನಡೆದಿದೆ.

ಚೆನ್ನೈ ಪೊಲೀಸರ ಪ್ರಕಾರ, ಚೆನ್ನೈನ ತಿರುಮುಲ್ಲೈವಾಯಲ್ ಪ್ರದೇಶದ ನಿವಾಸಿ ಪವಿತ್ರಾ ಅವರು ಪೋರೂರಿನ ಮಹಿಳಾ ಪೊಲೀಸ್ ಠಾಣೆಯಿಂದ ತಮ್ಮ ನಿವಾಸಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಕಾರನ್ನು ಚಾಲಕ ಟರ್ನ್ ಮಾಡಲು ಹೋದಾಗ ನಿಯಂತ್ರಣ ಕಳೆದುಕೊಂಡು ರಸ್ತೆಯ ಎದುರಿನಿಂದ ಬರುತ್ತಿದ್ದ ಪವಿತ್ರಾ ಅವರ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದಾನೆ. ಪವಿತ್ರಾ ಅವರ ಸ್ಕೂಟರ್ ಹಿಂದೆ ಕಪ್ಪು ಕಾರೊಂದು ಬರುತ್ತಿತ್ತು. ಹಾಗೇ ಅದರ ಹಿಂದೆ ಗ್ಯಾಸ್ ಸಿಲಿಂಡರ್‌ಗಳನ್ನು ಹೊತ್ತಿರುವ ಟೆಂಪೊ ಬರುತ್ತಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೊದಲ್ಲಿ ಪವಿತ್ರಾ ಅವರ ಸ್ಕೂಟರ್ ಅನ್ನು ಮುಂಭಾಗದಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಅವರ ಸ್ಕೂಟರ್ ಹಿಂದೆ ಇದ್ದ ಕಪ್ಪು ಕಾರಿಗೆ ಡಿಕ್ಕಿ ಹೊಡೆದು ಅವರು ಹಾರಿ ಹೋಗಿ 30 ಅಡಿ ದೂರಕ್ಕೆ ಬಿದ್ದಿರುವುದು ಕಂಡುಬಂದಿದೆ.

ಅದೃಷ್ಟವಶಾತ್, ಗ್ಯಾಸ್ ಸಿಲಿಂಡರ್‌ಗಳನ್ನು ಹೊಂದಿರುವ ಟೆಂಪೊ ಕಪ್ಪು ಕಾರಿನ ಹಿಂದೆ ಇದ್ದ ಕಾರಣ ದೊಡ್ಡ ಅಪಘಾತ ಸಂಭವಿಸಲಿಲ್ಲ ಎನ್ನಲಾಗಿದೆ. ಪವಿತ್ರಾ ಅವರ ಸ್ಥಿತಿ ಬಹಳ ಗಂಭೀರವಾಗಿದ್ದು, ತಕ್ಷಣ ಅವರನ್ನು ರಾಮಚಂದ್ರ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ಬಳಿಕ ಚಾಲಕ ಪರಾರಿಯಾಗಿದ್ದಾನೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತಲುಪಿ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಚಾಲಕನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಬಸ್‌ ಡ್ರೈವರ್‌ನ ರೀಲ್ಸ್‌ ಕ್ರೇಜ್‌ಗೆ 2 ಎತ್ತುಗಳು ಬಲಿ; ರೈತನ ಸ್ಥಿತಿ ಗಂಭೀರ

ಪ್ರತಿದಿನ ಒಂದಲ್ಲ ಒಂದು ಅಪಘಾತದ ಪ್ರಕರಣಗಳು ವರದಿಯಾಗುತ್ತಿರುತ್ತದೆ. ಜುಲೈ 8ರಂದು ರಸ್ತೆ ದಾಟಲು ಕಾಯುತ್ತಿದ್ದ 61 ವರ್ಷದ ಮಹಿಳೆಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಮೃತಪಟ್ಟಿರುವ ಘಟನೆ ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಕಾಣಿಯೂರು ನಿವಾಸಿ ಗೋಮತಿ ಎಂದು ಗುರುತಿಸಲಾಗಿದೆ. ಸಿಸಿಟಿವಿಯಲ್ಲಿ ಈ ಘಟನೆಯನ್ನು ಸೆರೆಹಿಡಿಯಲಾಗಿದ್ದು, ಗೋಮತಿ ಜೀಬ್ರಾ ಕ್ರಾಸಿಂಗ್ ಬಳಿ ನಿಂತಿದ್ದಾಗ ಅತಿ ವೇಗದಲ್ಲಿ ಬಂದ ಕಾರು ನಿಂತಿದ್ದ ಆಕೆಗೆ ಡಿಕ್ಕಿ ಹೊಡೆದಿದೆ.

Continue Reading

Latest

Sexual Abuse : ಬಿಸ್ಕೆಟ್‌ಗೆ ಆಸೆ ಪಟ್ಟು ಹೋಗಿದ್ದ ಪುಟ್ಟ ಬಾಲಕಿ ಕಾಮುಕನ ಕೈಗೆ ಸಿಕ್ಕಿ ಕೊಲೆಯಾದಳು

Sexual Abuse: ಚಿಕ್ಕಮಕ್ಕಳು, ಚಾಕೋಲೆಟ್ ಐಸ್‌ಕ್ರೀಂ, ಬಿಸ್ಕತ್ ಕೊಟ್ಟರೆ ಯಾರೇ ಕರೆದರೂ ಬಂದು ಬಿಡುತ್ತಾರೆ. ಮಕ್ಕಳಿಗೆ ಯಾರು ಒಳ್ಳೆಯವರು, ಯಾರು ಕೆಟ್ಟವರು ಎಂಬ ಪರಿವೆ ಇರುವುದಿಲ್ಲ. ತಿಂಡಿಯ ಮೇಲಿನ ಆಸೆಗೆ ಅವರು ಯಾರೇ ಕರೆದರೂ ಹೋಗಿ ಬಿಡುತ್ತಾರೆ. ಇಲ್ಲೊಬ್ಬಳು ಬಾಲಕಿ ಬಿಸ್ಕೆತ್‌ನ ಆಮಿಷಕ್ಕೆ ಒಳಗಾಗಿ ಕಾಮುಕನ ಕೈಗೆ ಸಿಲುಕಿ ಜೀವವನ್ನೇ ಕಳೆದುಕೊಂಡಿದ್ದಾಳೆ. ಗಾಂಜಾ ಪ್ರಭಾವದಲ್ಲಿ ಕಾರ್ಮಿಕನೊಬ್ಬ ಈ ಹೀನ ಕೃತ್ಯ ಎಸಗಿದ್ದಾನೆ.

VISTARANEWS.COM


on

Sexual Abuse
Koo


ದಿನೇದಿನೇ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ. ಕಾಮುಕರ ಕೆಟ್ಟ ಚಟಕ್ಕೆ ಬಾಲಕಿಯರು ಬಲಿಯಾಗುತ್ತಿದ್ದಾರೆ. ಇದೀಗ ಆಂಧ್ರಪ್ರದೇಶದ ತಿರುಪತಿಯಲ್ಲಿ ಭಯಾನಕ ಅತ್ಯಾಚಾರ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Sexual Abuse)ಆಗಿದೆ. ಜನರು ಘಟನೆ ನೋಡಿ ಬೆಚ್ಚಿಬಿದ್ದಿದ್ದಾರೆ.

ದೋರಾವರಿಸತ್ರಮ್ ಮಂಡಲದ ನೆಲಬಳ್ಳಿ ಗ್ರಾಮದಲ್ಲಿ ಜುಲೈ 17ರಂದು ಈ ಘಟನೆ ನಡೆದಿದ್ದು, ಗಾಂಜಾ ಪ್ರಭಾವದಲ್ಲಿ ಕಾರ್ಮಿಕನೊಬ್ಬ ಎಂಟು ವರ್ಷದ ಬಾಲಕಿಯನ್ನು ಕಾಡಿಗೆ ಕರೆದೊಯ್ದು ಆಕೆಯ ಮೇಲೆ ಕ್ರೂರವಾಗಿ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದಾನೆ. ವರದಿ ಪ್ರಕಾರ, ಬಿಹಾರ ಮೂಲದ ಆರೋಪಿ, ಸ್ಥಳೀಯ ಅಕ್ಕಿ ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದು, ಬಿಸ್ಕತ್ತು ನೀಡುವ ನೆಪದಲ್ಲಿ ಬಾಲಕಿಯನ್ನು ಹತ್ತಿರದ ಕಾಡಿಗೆ ಕರೆದೊಯ್ದಿದ್ದಾನೆ. ಯಾರೂ ಇಲ್ಲದ ಆ ಪ್ರದೇಶದಲ್ಲಿ, ಅವನು ಅವಳ ಮೇಲೆ ಅತ್ಯಾಚಾರ ಎಸಗಿ ಕ್ರೂರವಾಗಿ ಕೊಲೆ ಮಾಡಿದ್ದಾನೆ. ಘಟನೆಯ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಬೆಳಗ್ಗೆ ಬಾಲಕಿ ಕಾಣೆಯಾದ ನಂತರ, ಅವಳ ಪೋಷಕರು ದಿನವಿಡೀ ಅವಳನ್ನು ಹುಡುಕಿದರು. ಗ್ರಾಮದ ಹೊರವಲಯದಲ್ಲಿರುವ ಅರಣ್ಯ ಪ್ರದೇಶದಲ್ಲಿ ದನಕಾಯುವವರು ಶವವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಾಲಕಿ ಬಿಹಾರದ ದರ್ಭಾಂಗ ಜಿಲ್ಲೆಯ ವಲಸೆ ಕಾರ್ಮಿಕನ ಮಗಳಾಗಿದ್ದು, ಶಂಕಿತ ಕೂಡ ಅದೇ ರಾಜ್ಯದವನಾಗಿದ್ದ. ತಿರುಪತಿ ಜಿಲ್ಲಾ ಎಸ್ಪಿ ಎಲ್ ಸುಬ್ಬರಾಯುಡು ಅವರ ಪ್ರಕಾರ, ಬಿಹಾರದಿಂದ ಸುಮಾರು 40 ಜನರು ಎರಡು ತಿಂಗಳ ಹಿಂದೆ ನೆಲಬಳ್ಳಿ ಗ್ರಾಮದ ಬಳಿಯ ಧನ್ಯಲಕ್ಷ್ಮಿ ಅಕ್ಕಿ ಗಿರಣಿಯಲ್ಲಿ ಕೆಲಸ ಮಾಡಲು ಬಂದಿದ್ದರು. ಅವರಲ್ಲಿ ಒಬ್ಬ ಅಡುಗೆಯವನು ತನ್ನ ಎಂಟು ವರ್ಷದ ಮಗಳನ್ನು ಕರೆತಂದಿದ್ದನು. ಆಕೆಯೇ ಈಗ ಕೊಲೆಯಾದ ಬಾಲಕಿ ಎನ್ನಲಾಗಿದೆ.

ಇದನ್ನೂ ಓದಿ: ಬಡಪಾಯಿ ಡೆಲಿವರಿ ಮ್ಯಾನ್‌ನನ್ನು ಭೀಕರವಾಗಿ ಕಚ್ಚಿದ ಶ್ರೀಮಂತರ ಮನೆಯ ನಾಯಿಗಳು; ವಿಡಿಯೊ ಇದೆ

ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರದ ಮತ್ತೊಂದು ಪ್ರಕರಣ ಮಧ್ಯಪ್ರದೇಶದಲ್ಲಿ ನಡೆದಿರುವುದಾಗಿ ಬೆಳಕಿಗೆ ಬಂದಿದೆ. ಚಲಿಸುತ್ತಿದ್ದ ಕಾರಿನಲ್ಲಿ 9ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ. ಅಲ್ಲದೆ, ಆರೋಪಿಗಳು ಅಪ್ರಾಪ್ತೆಯ ಅಶ್ಲೀಲ ವೀಡಿಯೊವನ್ನು ಚಿತ್ರೀಕರಿಸಿ ಅವಳ ಕುಟುಂಬ ಸದಸ್ಯರಿಗೆ ಕಳುಹಿಸಿದ್ದಾರೆ. ಇದಕ್ಕೆ ಸಂಬಂಧಪಟ್ಟಂತೆ ಕುಟುಂಬದವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಆದರೆ ಆರೋಪಿಗಳು ಪರಾರಿಯಾಗಿದ್ದು, ಪೊಲೀಸರು ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

Continue Reading

ದೇಶ

School Transfer Certificate: ಶಾಲಾ ಪ್ರವೇಶಕ್ಕೆ ವರ್ಗಾವಣೆ ಪ್ರಮಾಣಪತ್ರದ ಅಗತ್ಯ ಇಲ್ಲ; ಹೈಕೋರ್ಟ್‌ ಮಹತ್ವದ ತೀರ್ಪು

School Transfer Certificate: ತಮಿಳುನಾಡಿನಲ್ಲಿ ಹೊಸ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲು ಹಿಂದಿನ ಶಿಕ್ಷಣ ಸಂಸ್ಥೆಗಳಿಂದ ವರ್ಗಾವಣೆ ಪ್ರಮಾಣಪತ್ರಗಳನ್ನು ತಯಾರಿಸಲು ಒತ್ತಾಯಿಸದಂತೆ ಸೂಚನೆ ನೀಡಿ ರಾಜ್ಯಾದ್ಯಂತ ಶಾಲಾ ಆಡಳಿತ ಮಂಡಳಿಗಳಿಗೆ ಸುತ್ತೋಲೆ ಹೊರಡಿಸುವಂತೆ ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ (Madras High Court) ನಿರ್ದೇಶನ ನೀಡಿದೆ.

VISTARANEWS.COM


on

By

School Transfer Certificate
Koo

ಶಾಲಾ ಪ್ರವೇಶಕ್ಕೆ (School Admission) ಯಾವುದೇ ರೀತಿಯ (School Transfer Certificate) ವರ್ಗಾವಣೆ ಪ್ರಮಾಣ ಪತ್ರಗಳ (Transfer Certificates) ಅಗತ್ಯವಿಲ್ಲ. ಶಾಲಾ ವರ್ಗಾವಣೆ ಪ್ರಕ್ರಿಯೆಯನ್ನು ಸರಳಗೊಳಿಸುವಂತೆ ಮದ್ರಾಸ್ ಹೈಕೋರ್ಟ್ (Madras High Court) ತಮಿಳುನಾಡಿನ (Tamil Nadu Schools) ಎಲ್ಲ ಶಾಲೆಗಳಿಗೆ ನಿರ್ದೇಶನ ನೀಡಿದೆ. ಹೊಸ ವಿದ್ಯಾರ್ಥಿಗಳ ಸೇರ್ಪಡೆಗೆ ವರ್ಗಾವಣೆ ಪ್ರಮಾಣ ಪತ್ರ ತರಲು ಒತ್ತಾಯಿಸದಂತೆ ಸೂಚಿಸಿದೆ.

ತಮಿಳುನಾಡಿನಲ್ಲಿ ಹೊಸ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲು ಹಿಂದಿನ ಶಿಕ್ಷಣ ಸಂಸ್ಥೆಗಳಿಂದ ವರ್ಗಾವಣೆ ಪ್ರಮಾಣಪತ್ರಗಳನ್ನು ತಯಾರಿಸಲು ಒತ್ತಾಯಿಸದಂತೆ ಸೂಚನೆ ನೀಡಿ ರಾಜ್ಯಾದ್ಯಂತ ಶಾಲಾ ಆಡಳಿತ ಮಂಡಳಿಗಳಿಗೆ ಸುತ್ತೋಲೆ ಹೊರಡಿಸುವಂತೆ ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ನಿರ್ದೇಶನ ನೀಡಿದೆ.

ಹೈಕೋರ್ಟ್ ಬಾರ್ ಮತ್ತು ಬೆಂಚ್ ವರದಿ ಮಾಡಿದಂತೆ, ವರ್ಗಾವಣೆ ಪ್ರಮಾಣ ಪತ್ರಗಳಲ್ಲಿ ಶಾಲಾ ಶುಲ್ಕವನ್ನು ಪಾವತಿಸದಿರುವ ಅಥವಾ ವಿಳಂಬವಾದ ಪಾವತಿಗೆ ಸಂಬಂಧಿಸಿದ ಅನಗತ್ಯ ನಮೂದುಗಳನ್ನು ಶಾಲೆಗಳು ಮಾಡುವುದಕ್ಕೆ ನ್ಯಾಯಾಲಯವು ನಿಷೇಧ ವಿಧಿಸಿದೆ. ನ್ಯಾಯಮೂರ್ತಿಗಳಾದ ಎಸ್‌.ಎಂ. ಸುಬ್ರಮಣ್ಯಂ ಮತ್ತು ಸಿ. ಕುಮಾರಪ್ಪನ್ ಅವರ ಪೀಠವು, ಶಾಲೆಗಳು ವಿದ್ಯಾರ್ಥಿಯ ಟಿಸಿಯನ್ನು ಶುಲ್ಕದ ಬಾಕಿ ವಸೂಲಿ ಮಾಡುವ ಸಾಧನವಾಗಿ ದುರ್ಬಳಕೆ ಮಾಡಬಾರದು ಎಂದು ಎಚ್ಚರಿಸಿದೆ.

ನ್ಯಾಯಾಲಯದ ನಿರ್ದೇಶನಗಳು ಎಲ್ಲಾ ಶುಲ್ಕ ಬಾಕಿಗಳನ್ನು ತೆರವುಗೊಳಿಸುವವರೆಗೆ ಶಾಲೆಗಳು ಟಿಸಿಗಳನ್ನು ಹಿಡಿದಿಟ್ಟುಕೊಳ್ಳುವುದನ್ನು ತಡೆಯುವ ಗುರಿಯನ್ನು ಹೊಂದಿವೆ. ಟಿಸಿಯಲ್ಲಿ ಬಾಕಿ ಇರುವ ಅಥವಾ ಶುಲ್ಕವನ್ನು ಪಾವತಿಸದಿರುವ ನಮೂದುಗಳನ್ನು ಮಾಡುವುದನ್ನು ಇದು ತಡೆಯುತ್ತದೆ. ಯಾಕೆಂದರೆ ಇದು ಶಿಕ್ಷಣ ಹಕ್ಕು (RTE) ಕಾಯಿದೆಯ ಉಲ್ಲಂಘನೆಯಾಗಿದೆ ಮತ್ತು ಮಾನಸಿಕ ಕಿರುಕುಳವನ್ನು ಉಂಟು ಮಾಡುತ್ತದೆ ಎಂದು ಆರ್ಟಿಇ ಕಾಯಿದೆಯ ಸೆಕ್ಷನ್ 17ರ ಅಡಿಯಲ್ಲಿ ವ್ಯಾಖ್ಯಾನಿಸಲಾಗಿದೆ.

ಇದನ್ನೂ ಓದಿ: Udhayanidhi Stalin: ತಮಿಳುನಾಡು ಉಪ ಮುಖ್ಯಮಂತ್ರಿಯಾಗಿ ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್?

Continue Reading

ಕ್ರೈಂ

Khalistani Terrorist: ಖಲಿಸ್ತಾನಿ ಭಯೋತ್ಪಾದಕ ಲಾಂಡಾನ ಪ್ರಮುಖ ಸಹಾಯಕ ಬಲ್ಜೀತ್ ಸಿಂಗ್ ಬಂಧನ

ಮಾರಕಾಸ್ತ್ರಗಳ ಪೂರೈಕೆಗೆ ಸಂಬಂಧಿಸಿದ ಪ್ರಮುಖ ಖಲಿಸ್ತಾನಿ ಭಯೋತ್ಪಾದಕ (Khalistani Terrorist) ಜಾಲವನ್ನು ಭೇದಿಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆಯು, ಮಧ್ಯಪ್ರದೇಶದ ಬದ್ವಾನಿ ಜಿಲ್ಲೆಯಲ್ಲಿ ಬಲ್ಜೀತ್ ಸಿಂಗ್ ಅಲಿಯಾಸ್ ರಾಣಾ ಭಾಯ್ ಅಲಿಯಾಸ್ ಬಲ್ಲಿ ಎಂಬಾತನನ್ನು ಗುರುವಾರ ಪಂಜಾಬ್‌ನಲ್ಲಿ ಬಂಧಿಸಿದೆ. ಈ ಮೂಲಕ ಖಲಿಸ್ತಾನಿ ಉಗ್ರರ ವಿರುದ್ಧ ತನಿಖಾ ಸಂಸ್ಥೆಗಳು ಯಶ ಸಾಧಿಸಿದಂತಾಗಿದೆ.

VISTARANEWS.COM


on

By

Khalistani Terrorist
Koo

ನವದೆಹಲಿ: ಭಯೋತ್ಪಾದಕ ಚಟುವಟಿಕೆಗಳಿಗೆ ಮಾರಾಕಾಸ್ತ್ರಗಳ ಪೂರೈಕೆಗೆ (supply of deadly weapons) ಸಂಬಂಧಿಸಿ ಖಲಿಸ್ತಾನಿ ಭಯೋತ್ಪಾದಕ (Khalistani Terrorist) ಲಖ್ಬೀರ್ ಸಿಂಗ್ ಸಂಧು ಅಲಿಯಾಸ್ ಲಾಂಡಾನ ಪ್ರಮುಖ ಸಹಾಯಕನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (National Investigation Agency) ಶುಕ್ರವಾರ ಬಂಧಿಸಿದೆ.

ಮಾರಕಾಸ್ತ್ರಗಳ ಪೂರೈಕೆಗೆ ಸಂಬಂಧಿಸಿದ ಪ್ರಮುಖ ಭಯೋತ್ಪಾದನಾ ಜಾಲವನ್ನು ಭೇದಿಸಿದ ಎನ್‌ಐಎ, ಮಧ್ಯಪ್ರದೇಶದ ಬದ್ವಾನಿ ಜಿಲ್ಲೆಯ ಬಲ್ಜೀತ್ ಸಿಂಗ್ ಅಲಿಯಾಸ್ ರಾಣಾ ಭಾಯ್ ಅಲಿಯಾಸ್ ಬಲ್ಲಿ ಎಂಬಾತನನ್ನು ಗುರುವಾರ ಪಂಜಾಬ್‌ನಲ್ಲಿ ಬಂಧಿಸಿದೆ. ಬಲ್ಜೀತ್ ಸಿಂಗ್ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಪಂಜಾಬ್‌ನಲ್ಲಿರುವ ಲಾಂಡಾನ ಏಜೆಂಟ್‌ಗಳಿಗೆ ಪ್ರಮುಖ ಶಸ್ತ್ರಾಸ್ತ್ರ ಪೂರೈಕೆದಾರ ಎಂದು ತಿಳಿದು ಬಂದಿದೆ.

Khalistani Terrorist


ಭಯೋತ್ಪಾದನಾ ವಿರೋಧಿ ಏಜೆನ್ಸಿ ಪ್ರಕಾರ, ಈ ಶಸ್ತ್ರಾಸ್ತ್ರಗಳನ್ನು ಉದ್ಯಮಿಗಳು ಮತ್ತು ಇತರರಿಂದ ಹಣ ಸುಲಿಗೆ ಸೇರಿದಂತೆ ದೊಡ್ಡ ಪ್ರಮಾಣದ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಬಳಸಲಾಗುತ್ತಿತ್ತು. ಗುರುಪ್ರೀತ್ ಸಿಂಗ್ ಮತ್ತು ಸತ್ನಾಮ್ ಸಿಂಗ್ ಸತ್ತಾ ಎಂಬುವರನ್ನು ಈ ಹಿಂದೆ ಬಂಧಿಸಲಾಗಿತ್ತು. ಅವರು ನೀಡಿದ ಸುಳಿವು ಆಧರಿಸಿ ಎನ್‌ಐಎ ಈ ಬಂಧನ ನಡೆಸಿದೆ.

ಕಳೆದ ವರ್ಷ ಜುಲೈ 10ರಂದು ಎನ್‌ಐಎ ಸ್ವಯಂಪ್ರೇರಿತವಾಗಿ ದಾಖಲಿಸಿದ ಪ್ರಕರಣದ ತನಿಖೆ ವೇಳೆ ಪಂಜಾಬ್ ಮತ್ತು ಇತರ ಕೆಲವು ಸ್ಥಳಗಳಲ್ಲಿ ನಡೆದಿದ್ದ ಹಿಂಸಾತ್ಮಕ ಕೃತ್ಯಗಳಲ್ಲಿ ಖಲಿಸ್ತಾನಿ ಭಯೋತ್ಪಾದಕ ಸಂಘಟನೆಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಸಲು ಸತ್ನಾಮ್ ಸಿಂಗ್ ಸತ್ತಾಗೆ ಬಲ್ಜೀತ್ ಸಿಂಗ್ ಶಸ್ತ್ರಾಸ್ತ್ರಗಳನ್ನು ಒದಗಿಸಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: Khalistani Terrorists: ಬಿಜೆಪಿ ತೊರೆಯದಿದ್ದರೆ ಸಾಯಲು ಸಿದ್ಧರಾಗಿ; ಸಿಖ್‌ ನಾಯಕರಿಗೆ ಖಲಿಸ್ತಾನಿ ಉಗ್ರರಿಂದ ಜೀವ ಬೆದರಿಕೆ

ಖಲಿಸ್ತಾನಿ ಭಯೋತ್ಪಾದಕ ಸಂಘಟನೆಗಳ ವಿರುದ್ಧದ ಕಾರ್ಯಾಚರಣೆಯ ಭಾಗವಾಗಿ ತನಿಖೆಯನ್ನು ಮುಂದುವರಿಸಿರುವ ಎನ್‌ಐಎ, ಭಾರತದಲ್ಲಿ ಭಯೋತ್ಪಾದನೆಯನ್ನು ಉತ್ತೇಜಿಸಲು ಲಾಂಡಾ ಮತ್ತು ಸತ್ತಾ ಇಬ್ಬರೂ ವಿದೇಶಗಳಿಂದ ಕಾರ್ಯನಿರ್ವಹಿಸುತ್ತಿದ್ದರು ಎಂದು ಹೇಳಿದೆ.

Continue Reading
Advertisement
Krishan Kumar Daughter Tishaa Dies Of Cancer At 21
ಬಾಲಿವುಡ್3 mins ago

Krishan Kumar: ಕೇವಲ 21ನೇ ವಯಸ್ಸಿಗೆ ನಿಧನ ಹೊಂದಿದ ‘ಅನಿಮಲ್’ ಸಿನಿಮಾ ನಿರ್ಮಾಪಕನ ಮಗಳು

Indian Navy Recruitment
ಉದ್ಯೋಗ18 mins ago

Indian Navy Recruitment: ಭಾರತೀಯ ನೌಕಾ ಪಡೆಯಲ್ಲಿದೆ 741 ಹುದ್ದೆ; 10ನೇ ತರಗತಿ ಪಾಸಾದವರಿಗೂ ಇದೆ ಅವಕಾಶ

Microsoft Windows Outage
ಪ್ರಮುಖ ಸುದ್ದಿ24 mins ago

Microsoft Windows Outage: ಮೈಕ್ರೊಸಾಫ್ಟ್​​ ಸಮಸ್ಯೆ ; ಬೆಂಗಳೂರು ಸೇರಿದಂತೆ ದೇಶದ ವಿಮಾನ ನಿಲ್ದಾಣಗಳಲ್ಲಿ ಅಲ್ಲೋಲಕಲ್ಲೋಲ

Dengue Fever
ಬೆಂಗಳೂರು32 mins ago

Dengue Fever : ಡೆಂಗ್ಯೂ ಭೀತಿ- ಸೊಳ್ಳೆಗಳ ನಾಶಕ್ಕೆ ಫೀಲ್ಡಿಗಿಳಿದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

Hit and Run Case
Latest34 mins ago

Accident Video: ಸ್ಕೂಟರ್‌ಗೆ ಅಪ್ಪಳಿಸಿದ ಕಾರು; 30 ಅಡಿ ದೂರ ಎಗರಿ ಬಿದ್ದ ಮಹಿಳಾ ಕಾನ್‌ಸ್ಟೇಬಲ್‌

Indian Olympics History
ಕ್ರೀಡೆ42 mins ago

Indian Olympics History: ಭಾರತಕ್ಕೆ ಒಲಿಂಪಿಕ್ಸ್​ನಲ್ಲಿ ವೈಯಕ್ತಿಕ ಚಿನ್ನ ಗೆದ್ದ ಮೊದಲ ಸಾಧಕ ಅಭಿನವ್‌ ಬಿಂದ್ರಾ

Sexual Abuse
Latest47 mins ago

Sexual Abuse : ಬಿಸ್ಕೆಟ್‌ಗೆ ಆಸೆ ಪಟ್ಟು ಹೋಗಿದ್ದ ಪುಟ್ಟ ಬಾಲಕಿ ಕಾಮುಕನ ಕೈಗೆ ಸಿಕ್ಕಿ ಕೊಲೆಯಾದಳು

KPSC Recruitment 2024
ಕರ್ನಾಟಕ56 mins ago

KPSC Recruitment 2024: ಕೆಪಿಎಸ್‌ಸಿ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

Dengue Fever
ಹಾಸನ57 mins ago

Dengue Fever: ಹಾಸನದಲ್ಲಿ ಡೆಂಗ್ಯೂಗೆ ಎಂಬಿಬಿಎಸ್‌ ವಿದ್ಯಾರ್ಥಿ ಬಲಿ; ಧಾರವಾಡದಲ್ಲಿ 5 ತಿಂಗಳ ಮಗು ಸಾವು

Tharun Sudhir says Darshan Will Attend My Marriage
ಸ್ಯಾಂಡಲ್ ವುಡ್1 hour ago

Tharun Sudhir: ಮದುವೆ ಡೇಟ್‌ ಚೇಂಜ್‌ ಮಾಡಬೇಡ, ನಾನು ಬರ್ತೀನಿ ಅಂದ್ರು ದರ್ಶನ್‌ ಎಂದ ತರುಣ್​ ಸುಧೀರ್

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ4 hours ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ4 hours ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ24 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ1 day ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ3 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ4 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ4 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ4 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ5 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

ಟ್ರೆಂಡಿಂಗ್‌