Panaji tour: ಮೋಡಿ ಮಾಡುವ ಪಣಜಿ; ಗೋವಾ ಸುಂದರ ಲೋಕದ ಗೇಟ್‌ವೇ! - Vistara News

Latest

Panaji tour: ಮೋಡಿ ಮಾಡುವ ಪಣಜಿ; ಗೋವಾ ಸುಂದರ ಲೋಕದ ಗೇಟ್‌ವೇ!

Panaji tour: ಪಣಜಿಯನ್ನು ಇಷ್ಟಪಡಲು ಸಾಕಷ್ಟು ಕಾರಣಗಳಿವೆ. ಶ್ರೀಮಂತ ಸಂಸ್ಕೃತಿ ಮತ್ತು ಇತಿಹಾಸವನ್ನು ಹೊಂದಿರುವ ಸುಂದರ ದೃಶ್ಯಾವಳಿಗಳನ್ನು ನಗರದಲ್ಲಿ ಕಾಣಬಹದು. ಜನನಿಬಿಡ ಪ್ರದೇಶವಾಗಿರುವ ನಗರದ ಬೀದಿಗಳು ಯಾವಾಗಲೂ ಗದ್ದಲದಿಂದ ಕೂಡಿರುತ್ತದೆ. ಈ ನಡುವೆಯೇ ಅತ್ಯಂತ ಸುಂದರವಾದ ವಸಾಹತುಶಾಹಿ ವಾಸ್ತುಶೈಲಿಯು ಗಮನ ಸೆಳೆಯುತ್ತದೆ.

VISTARANEWS.COM


on

Panaji tour
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗೋವಾ ಪ್ರವಾಸ (goa tour) ಮಾಡುವ ಯೋಚನೆಯಲ್ಲಿದ್ದರೆ ಗೋವಾದ ರಾಜಧಾನಿ ಪಣಜಿಗೆ (panaji tour) ಭೇಟಿ ನೀಡಲು ಮರೆಯದಿರಿ. ಮಹಾನದಿ (mahanadi), ಮಹದಾಯಿ ಎಂದು ಕರೆಯಲ್ಪಡುವ ಮಾಂಡೋವಿ ನದಿ ದಡದಲ್ಲಿರುವ ಈ ಸುಂದರ ನಗರ ಜನನಿಬಿಡವಾಗಿದ್ದರೂ ಅಲ್ಲಿನ ದೃಶ್ಯಾವಳಿಗಳು ಪ್ರವಾಸಿಗರನ್ನು ಮಂತ್ರಮುಗ್ದರಾಗುವಂತೆ ಮಾಡುತ್ತದೆ. ಪ್ರಪಂಚದಾದ್ಯಂತ ಇಲ್ಲಿಗೆ ದೋಣಿ, ಹಡಗುಗಳ ಸಂಪರ್ಕವಿದೆ. ಹೊರದೇಶಗಳಿಂದಲೂ ಸಾಕಷ್ಟು ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಾರೆ.

ಪಣಜಿಯನ್ನು ಇಷ್ಟಪಡಲು ಸಾಕಷ್ಟು ಕಾರಣಗಳಿವೆ. ಶ್ರೀಮಂತ ಸಂಸ್ಕೃತಿ ಮತ್ತು ಇತಿಹಾಸವನ್ನು ಹೊಂದಿರುವ ಸುಂದರ ದೃಶ್ಯಾವಳಿಗಳನ್ನು ನಗರದಲ್ಲಿ ಕಾಣಬಹದು. ಜನನಿಬಿಡ ಪ್ರದೇಶವಾಗಿರುವ ನಗರದ ಬೀದಿಗಳು ಯಾವಾಗಲೂ ಗದ್ದಲದಿಂದ ಕೂಡಿರುತ್ತದೆ. ಈ ನಡುವೆಯೇ ಅತ್ಯಂತ ಸುಂದರವಾದ ವಸಾಹತುಶಾಹಿ ವಾಸ್ತುಶೈಲಿಯು ಗಮನ ಸೆಳೆಯುತ್ತದೆ.

ಇಲ್ಲಿನ ಶ್ರೀಮಂತ ಪರಂಪರೆ, ಸಾಂಸ್ಕೃತಿಕ ಆಕರ್ಷಣೆಗಳು, ಪ್ರಶಾಂತ ವಾತಾವರಣ ದೇಹಕ್ಕೆ ವಿಶ್ರಾಂತಿ, ಮನಸ್ಸಿಗೆ ಶಾಂತಿ ನೀಡುವುದರಲ್ಲಿ ಯಾವುದೇ ಸಂದೇಹವಿಲ್ಲ. ಹೀಗಾಗಿ ದೇಶ, ವಿದೇಶಗಳಿಂದ ಸಾಕಷ್ಟು ಪ್ರವಾಸಿಗರು ಇಲ್ಲಿಗೆ ಬರುತ್ತಾರೆ. ಪಣಜಿ ಅಷ್ಟೊಂದು ಪ್ರಸಿದ್ಧವಾಗಲು ಹಲವು ಕಾರಣಗಳಿವೆ. ಅದೇನು ಗೊತ್ತೇ?

ಇದನ್ನೂ ಓದಿ: Tour Guide: ದೇವಾಲಯಗಳ ಪಟ್ಟಣ ತಿರುವಣ್ಣಾಮಲೈ; ಒಮ್ಮೆ ನೋಡಲೇಬೇಕಾದ ಸ್ಥಳ

ವಸಾಹತುಶಾಹಿ ಪರಂಪರೆ

ಭೂತಕಾಲಕ್ಕೆ ಒಂದು ಹೆಜ್ಜೆಯಂತೆ ಕಾಣುವ ಪಣಜಿ ವಸಾಹತು ಪರಂಪರೆ ಹಜ್ಜೆಗುರುತಾಗಿದೆ. ಇಲ್ಲಿನ ನಗರದ ಬೀದಿಗಳು ವರ್ಣಮಯವಾಗಿದ್ದು, ನಡೆದಾಡುವಾಗ ಉದ್ದಕ್ಕೂ ಚಿತ್ರಕಲೆಯೊಳಗೆ ಹೆಜ್ಜೆ ಹಾಕಿದಂತೆ ಭಾಸವಾಗುತ್ತದೆ. ಎಲ್ಲಿ ನೋಡಿದರೂ ಗೋವಾದ ಮೇಲೆ ಪೋರ್ಚುಗಲ್‌ನ ಸ್ಟಾಂಪ್‌ನ ಪುರಾವೆಗಳನ್ನು ಕಾಣಬಹುದು. ಎಷ್ಟು ನೋಡಿದರೂ ಕಣ್ಣಿಗೆ ದಣಿವಾಗದು. ಅಂಕುಡೊಂಕಾದ ದಾರಿಯಲ್ಲಿ ನಡೆದು ನೀಲಿಬಣ್ಣದ ಮನೆಗಳನ್ನು ಕಾಣಬಹುದು. ಇಲ್ಲಿ ಪ್ರಸಿದ್ದವಾಗಿರುವ ಫಾಂಟೈನ್‌ಹಾಸ್‌ ಪೋರ್ಚುಗೀಸ್ ಆಳ್ವಿಕೆಯಲ್ಲಿದ್ದಾಗ ಪಣಜಿಯ ಐತಿಹಾಸಿಕ ಕ್ವಾರ್ಟರ್ ಎಂದು ಕರೆಯಲಾಗುತ್ತಿತ್ತು. ಸಂಕೀರ್ಣವಾದ ಬಾಲ್ಕನಿಗಳು, ಅಲಂಕೃತ ಬಾಗಿಲುಗಳನ್ನು ಹೊಂದಿರುವ ಕಟ್ಟಡ ಗಳು ಖಂಡಿತಾ ಎಲ್ಲರಿಗೂ ಇಷ್ಟವಾಗುತ್ತದೆ.

ಚರ್ಚು, ದೇವಾಲಯಗಳು

ಪಣಜಿಯಲ್ಲಿ ಪ್ರತಿ ಕಿಲೋ ಮೀಟರ್‌ಗೆ ಒಂದರಂದೇ ಧಾರ್ಮಿಕ ಹೆಗ್ಗುರುತುಗಳಿವೆ. ಪ್ರಪಂಚದ ಎಲ್ಲೂ ಇರದಷ್ಟು ಚರ್ಚು, ದೇವಾಲಯಗಳು ಇಲ್ಲಿ ನೆಲೆಯಾಗಿದೆ. ಅವರ್ ಲೇಡಿ ಆಫ್ ದಿ ಇಮ್ಯಾಕ್ಯುಲೇಟ್ ಕಾನ್ಸೆಪ್ಶನ್ ಚರ್ಚ್ ಗೋವಾದ ಅತ್ಯಂತ ಹಳೆಯ ಕ್ಯಾಥೋಲಿಕ್ ಚರ್ಚ್‌ಗಳಲ್ಲಿ ಒಂದು. ಇದರ ಹೊರಗೆ ಪ್ರಕಾಶಮಾನವಾದ ಬಿಳಿ ಬಣ್ಣವು ಸೂರ್ಯನ ಬೆಳಕಿನಲ್ಲಿ ಮತ್ತಷ್ಟು ಪ್ರಕಾಶಮಾನವಾಗಿ ಹೊಳೆಯುತ್ತದೆ. ಇಲ್ಲಿನ ಮತ್ತೊಂದು ಪ್ರಸಿದ್ಧ ದೇವಾಲಯ ಸಂಪತ್ತು ಮತ್ತು ಸಮೃದ್ಧಿಯ ಸಂಕೇತವಾಗಿರುವ ಮಹಾಲಕ್ಷ್ಮಿ ದೇವಸ್ಥಾನ. ಸಾಕಷ್ಟು ಮಂದಿ ಭಕ್ತರು ಮತ್ತು ಯಾತ್ರಾರ್ಥಿಗಳು ಇಲ್ಲಿಗೆ ಆಗಮಿಸುತ್ತಾರೆ.

ವಾಯುವಿಹಾರ ತಾಣ

ಮನಸ್ಸಿಗೆ ಶಾಂತಿ, ನಿಶ್ಯಬ್ದವಿರುವ ಸ್ಥಳವನ್ನು ಅರಸುತ್ತಿದ್ದರೆ ಪಣಜಿ ನದಿಯ ಮುಂಭಾಗದಲ್ಲಿರುವ ವಾಯುವಿಹಾರ ತಾಣಕ್ಕೆ ಭೇಟಿ ನೀಡಬಹುದು. ಇಲ್ಲಿ ಕುಳಿತುಕೊಳ್ಳಲು ನೂರಾರು ಬೆಂಚುಗಳು ಅಥವಾ ನೀನೆರಳು ನೀಡುವ ತಾಳೆ ಮರಗಳು ಇವೆ. ಒಂದಕ್ಕೊಂದು ಸಾಲಾಗಿ ನಿಂತಿರುವ ತಾಳೆ ಮರಗಳನ್ನು ನೋಡುವುದು ಕಣ್ಣಿಗೆ ಹಬ್ಬವನ್ನು ಉಂಟು ಮಾಡುತ್ತದೆ. ಉದ್ಯಾನಗಳು ಸುತ್ತಲೂ ನಡೆಯಲು ಉತ್ತಮವಾದ ಸ್ಥಳವಿದೆ.

Panaji tour


ಸಾಂಸ್ಕೃತಿಕ ಕೇಂದ್ರ

ಪಣಜಿಯನ್ನು ಸಾಂಸ್ಕೃತಿಕ ಕೇಂದ್ರವೆಂದು ಪರಿಗಣಿಸಲಾಗಿದೆ. ಇಲ್ಲಿನ ಸ್ಥಳೀಯ ಗ್ಯಾಲರಿಗಳಲ್ಲಿ ನಿರಂತರ ಕಲಾ ಪ್ರದರ್ಶನಗಳು ನಡೆಯುತ್ತಿರುತ್ತದೆ. ಪಟ್ಟಣದಾದ್ಯಂತ ಇರುವ ಥಿಯೇಟರ್‌ಗಳಲ್ಲಿ ವಿವಿಧ ಪ್ರದರ್ಶನಗಳು, ಲೈವ್ ಸಂಗೀತ ಕಛೇರಿಗಳು ನಿರಂತರವಾಗಿ ನಡೆಯುತ್ತದೆ. ಇಲ್ಲಿ ಫೆಬ್ರವರಿಯಲ್ಲಿ ಕಾರ್ನೀವಲ್ ಆಚರಣೆ ನಡೆಯುತ್ತದೆ. ಈ ಸಂದರ್ಭದಲ್ಲಿ ವರ್ಣರಂಜಿತ ಮೆರವಣಿಗೆ, ನೃತ್ಯ ಪ್ರದರ್ಶನಗಳು ತಿಂಗಳಾದ್ಯಂತ ಬೀದಿಯಲ್ಲಿ ನಡೆಯುತ್ತದೆ. ಕಣ್ಣಿಗೆ ಹಬ್ಬವನ್ನುಂಟು ಮಾಡುತ್ತದೆ.

ಆಹಾರ ವಿಶೇಷ

ಪಣಜಿಯಲ್ಲಿ ಬಗೆಬಗೆಯ ಖಾದ್ಯಗಳ ರುಚಿ ನೋಡಬಹುದು. ಎಲ್ಲಾ ರೀತಿಯ ಸುವಾಸನೆಗಳಿಂದ ತುಂಬಿರುವ ಈ ನಗರವು ಸಾಂಪ್ರದಾಯಿಕ ಪಾಕವಿಧಾನಗಳಿಗೆ ಮತ್ತು ಅಂತಾರಾಷ್ಟ್ರೀಯ ಭಕ್ಷ್ಯಗಳಿಗೆ ಹೆಸರುವಾಸಿಯಾಗಿದೆ. ರುಚಿಕರವಾದ ಆಹಾರವನ್ನೊದಗಿಸುವ ಸಾಕಷ್ಟು ರೆಸ್ಟೋರೆಂಟ್‌ ಗಳು ಇಲ್ಲಿವೆ. ಅದರಲ್ಲೂ ಇಲ್ಲಿನ ತಾಜಾ ಸಮುದ್ರಾಹಾರ ವಿಶ್ವಪ್ರಸಿದ್ಧವಾಗಿದೆ. ಇಲ್ಲಿ ಪೋರ್ಚುಗೀಸರ ಖಾದ್ಯಗಳ ಅದರಲ್ಲೂ ಮುಖ್ಯವಾಗಿ ಚೊರಿಜೊ ಪಾವೊ ನ ರುಚಿ ನೋಡಲು ಮರೆಯದಿರಿ.

Panaji tour


ಗೋವಾ ಗೇಟ್‌ವೇ

ಗೋವಾದ ರಾಜಧಾನಿ ಪಣಜಿಯನ್ನು ಗೋವಾದ ಗೇಟ್ ವೇ ಎಂದು ಕರೆಯಬಹುದು. ಪ್ರತಿ ವರ್ಷ ಅಪಾರ ಸಂಖ್ಯೆಯ ಜನರನ್ನು ಆಕರ್ಷಿಸುವ ಈ ನಗರವು ಹಲವಾರು ಸಾಂಸ್ಕೃತಿಕ ತಾಣಗಳು ಮತ್ತು ನೈಸರ್ಗಿಕ ವಿಸ್ಮಯಗಳನ್ನು ಹೊಂದಿದೆ.

ಪಣಜಿಗೆ ಹತ್ತಿರವಾಗಿ ಬೀಚ್‌ಗಳಾದ ಕಾಲಾಂಗುಟ್, ಬಾಗಾ ಅಥವಾ ಅಂಜುನಾ ಕ್ಕೂ ಪ್ರವಾಸಿಗರು ಭೇಟಿ ನೀಡಬಹುದು. ಇಲ್ಲಿ ಈಜಬಹುದು, ಸರ್ಫಿಂಗ್ ಮಾಡಬಹುದು. ಅಲ್ಲದೇ ಹಳೆಯ ಗೋವಾದ ಚರ್ಚ್‌ಗಳು, ಫೋರ್ಟ್ ಅಗುಡಾ ಮತ್ತು ದೂದ್‌ಸಾಗರ್ ಜಲಪಾತಗಳು ಪಣಜಿಗೆ ಹತ್ತಿರವಾಗಿ ಇದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Ayushman Bharat Diwas: ಇಂದು ಆಯುಷ್ಮಾನ್ ಭಾರತ್ ದಿನ; ಏನಿದರ ಮಹತ್ವ?

Ayushman Bharat Diwas: ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯ ಗುರಿಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಪ್ರತಿ ವರ್ಷ ಏಪ್ರಿಲ್ 30 ರಂದು ಭಾರತವು ಆಯುಷ್ಮಾನ್ ಭಾರತ್ ದಿನವನ್ನು ಆಚರಿಸುತ್ತದೆ. ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನೆ (PMJAY) ಎಂದೂ ಕರೆಯಲ್ಪಡುವ ಈ ಯೋಜನೆಯಿಂದ ಭಾರತ ಸರ್ಕಾರವು ಸುಮಾರು 50 ಕೋಟಿ ಆರ್ಥಿಕವಾಗಿ ಹಿಂದುಳಿದ ಜನರಿಗೆ ಅಗ್ಗದ ಮತ್ತು ಸುಲಭವಾದ ಆರೋಗ್ಯ ಸೇವೆಯನ್ನು ನೀಡುತ್ತಿದೆ.

VISTARANEWS.COM


on

By

Ayushman Bharat Diwas
Koo

ಕೋಟ್ಯಂತರ ಭಾರತೀಯರಿಗೆ(indians) ಉಚಿತ ಆರೋಗ್ಯ ಸೇವೆ (free health service) ಒದಗಿಸುವ ಉದ್ದೇಶದಿಂದ ಜಾರಿಗೊಳಿಸಿರುವ ಆಯುಷ್ಮಾನ್ ಭಾರತ್ ಯೋಜನೆಯ (Ayushman Bharat Yojana) ಕುರಿತು ಜನರಲ್ಲಿ ಅರಿವು ಮೂಡಿಸಲು ಪ್ರತಿ ವರ್ಷ ಏಪ್ರಿಲ್ ಕೊನೆಯ ದಿನವಾದ ಏಪ್ರಿಲ್ 30ರಂದು ಆಯುಷ್ಮಾನ್ ಭಾರತ್ ದಿನವನ್ನು (Ayushman Bharat Diwas) ಆಚರಿಸಲಾಗುತ್ತದೆ.

ಸರ್ಕಾರವು ಆಯುಷ್ಮಾನ್ ಭಾರತ್ ಯೋಜನೆ ಮತ್ತು ಅದರ ಗುರಿ ಏನು ಎಂಬುದರ ಕುರಿತು ಜನರಿಗೆ ತಿಳಿಸಲು ಈ ದಿನ ಆಚರಣೆ ನಡೆಸಲು ಕರೆ ನೀಡಿದೆ. ಈ ಯೋಜನೆಯೊಂದಿಗೆ ಭಾರತ ಸರ್ಕಾರವು ಪ್ರತಿಯೊಬ್ಬರೂ ಸರ್ಕಾರದಿಂದ ನಿಭಾಯಿಸಲ್ಪಡುವ ಉತ್ತಮ ಆರೋಗ್ಯವನ್ನು ಪಡೆಯಬಹುದೆಂದು ಖಚಿತಪಡಿಸಿಕೊಳ್ಳಲು ಬಯಸುತ್ತದೆ.

ಬಡವರಿಗೆ ಆರೋಗ್ಯ ರಕ್ಷಣೆ ಒದಗಿಸಲು ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯನ್ನು ಜಾರಿ ಮಾಡಿದ್ದು ಈ ಮೂಲಕ ಸರ್ಕಾರಿ ಆಸ್ಪತ್ರೆ ಮತ್ತು ಚಿಕಿತ್ಸಾಲಯಗಳಲ್ಲಿ ಉಚಿತ ವೈದ್ಯಕೀಯ ಚಿಕಿತ್ಸೆ ನೀಡಲಾಗುವುದು. ಈ ಯೋಜನೆಯು ಲಕ್ಷಾಂತರ ನಾಗರಿಕರಿಗೆ ಗುಣಮಟ್ಟದ ವೈದ್ಯಕೀಯ ಆರೈಕೆಯನ್ನು ಉಚಿತವಾಗಿ ಹೆಚ್ಚು ಸುಲಭವಾಗಿ ಸಿಗುವಂತೆ ಮಾಡುವ ಗುರಿಯನ್ನು ಹೊಂದಿದೆ.

ಇದನ್ನೂ ಓದಿ:  Ayushman Bharat Yojana: ಆಪತ್ಕಾಲದಲ್ಲಿ ಆಯುಷ್ಮಾನ್‌ ಭಾರತ್‌ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?


ಇದು ಜಾರಿಯಾಗಿದ್ದು ಯಾವಾಗ?

ಆಯುಷ್ಮಾನ್ ಭಾರತ್ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು 2018ರಲ್ಲಿ ಘೋಷಿಸಿದರು. ಇದು ಎರಡು ಮುಖ್ಯ ಸ್ತಂಭಗಳನ್ನು ಹೊಂದಿದೆ.

1. ಆಯುಷ್ಮಾನ್ ಭಾರತ್ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳು (AB-HWCs)
ಆಯುಷ್ಮಾನ್ ಭಾರತ್ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳು ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಜನರ ಮನೆಗಳಿಗೆ ಹತ್ತಿರ ತರುವ ಗುರಿಯನ್ನು ಹೊಂದಿವೆ.

2. ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (PM-JAY)
ಇದು ಆರೋಗ್ಯ ವಿಮಾ ಯೋಜನೆಯಾಗಿದ್ದು, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ವರ್ಷಕ್ಕೆ 5 ಲಕ್ಷ ರೂ. ವರೆಗೆ ನಗದು ರಹಿತ ಮತ್ತು ಕೈಗೆಟುಕುವ ವೈದ್ಯಕೀಯ ರಕ್ಷಣೆಯನ್ನು ನೀಡುವ ಉದ್ದೇಶ ಹೊಂದಿದೆ.


ಆಯುಷ್ಮಾನ್ ಭಾರತ್ ದಿವಸ್‌ನ ಮಹತ್ವ

ಆಯುಷ್ಮಾನ್ ಭಾರತ್ ದಿವಸ್ ಹಲವಾರು ಉದ್ದೇಶಗಳನ್ನು ಹೊಂದಿದೆ. ಅವುಗಳಲ್ಲಿ ಮುಖ್ಯವಾಗಿ:
1. ಆಯುಷ್ಮಾನ್ ಭಾರತ್ ಯೋಜನೆಯ ಗುರಿ ಮತ್ತು ಅದರ ಪ್ರಯೋಜನಗಳ ಬಗ್ಗೆ ಜನರಿಗೆ ತಿಳಿಸಲು ಆಯುಷ್ಮಾನ್ ಭಾರತ್ ದಿವಸ್ ಅನ್ನು ಆಚರಿಸಲಾಗುತ್ತದೆ.
2. ಆಯುಷ್ಮಾನ್ ಭಾರತ್ ಯೋಜನೆಯು ಭಾರತ ಸರ್ಕಾರವು ಮಾಡಿದ ದೊಡ್ಡ ಆರೋಗ್ಯ ಯೋಜನೆಯಾಗಿದೆ. ಈ ಯೋಜನೆಯು ಭಾರತದಲ್ಲಿ 10 ಕೋಟಿಗೂ ಹೆಚ್ಚು ಬಡ ಮತ್ತು ದುರ್ಬಲ ಕುಟುಂಬಗಳಿಗೆ ಆರ್ಥಿಕ ರಕ್ಷಣೆ ನೀಡುವ ಗುರಿಯನ್ನು ಹೊಂದಿದೆ.
3. ಅರ್ಹ ಕುಟುಂಬಗಳು ದೇಶಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ವರ್ಷಕ್ಕೆ 5 ಲಕ್ಷ ರೂ.ವರೆಗೆ ವೈದ್ಯಕೀಯ ಸೇವೆಗಳನ್ನು ಪಡೆಯಬಹುದು.
4. ಸರ್ಕಾರವು ಆಯುಷ್ಮಾನ್ ಮಿತ್ರ ಎಂಬ ಹೊಸ ಉದ್ಯೋಗವನ್ನು ಆರೋಗ್ಯ ಕ್ಷೇತ್ರದಲ್ಲಿ ಸೃಷ್ಟಿಸಿದೆ. ಇದಕ್ಕಾಗಿ ಸಾಕಷ್ಟು ಯುವಕರನ್ನು ನೇಮಿಸಿಕೊಳ್ಳಲಾಗಿದೆ.
5. ಆಯುಷ್ಮಾನ್ ಭಾರತ್ ಯೋಜನೆಯಡಿ ಯುವಜನರಿಗೆ ಉದ್ಯೋಗ ನೀಡಲು ಆಯುಷ್ಮಾನ್ ಮಿತ್ರರನ್ನು ಆಸ್ಪತ್ರೆಗಳು ನೇಮಿಸಿಕೊಂಡಿವೆ.
6. ಆಯುಷ್ಮಾನ್ ಭಾರತ್ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಉತ್ತಮ ಆರೋಗ್ಯ ವಿಮಾ ಯೋಜನೆಯ ಅಗತ್ಯವಿದೆ.

Continue Reading

ಉದ್ಯೋಗ

Labour Day 2024: ಮೇ 1ರ ಕಾರ್ಮಿಕ ದಿನಾಚರಣೆಯ ಹಿನ್ನೆಲೆ ಏನು? ಏನಿದರ ಸಂದೇಶ?

Labour Day 2024: ದುಡಿಯುವ ಜನರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಶೋಷಣೆಯಿಂದ ಅವರನ್ನು ರಕ್ಷಿಸಲು ವಿಶ್ವದಾದ್ಯಂತ ಮೇ 1ರಂದು ಕಾರ್ಮಿಕರ ದಿನವನ್ನು ಆಚರಿಸಲಾಗುತ್ತದೆ. ಇದು ಸಮಾಜದಲ್ಲಿ ಕಾರ್ಮಿಕ ವರ್ಗದ ಪ್ರಮುಖ ಪಾತ್ರವನ್ನು ನೆನಪಿಸುತ್ತದೆ. ಈ ದಿನದ ಹಿನ್ನೆಲೆಯ ವಿವರ ಇಲ್ಲಿದೆ.

VISTARANEWS.COM


on

By

International Labor Day-2024
Koo

ಬದುಕಿನ ಬಹುಪಾಲು ದಿನಗಳನ್ನು ದುಡಿಮೆಯಲ್ಲೇ ಕಳೆಯುವವರು ಕಾರ್ಮಿಕರು (Labour Day 2024). ಇವರಲ್ಲಿ ಕೆಲವರು ಒಂದು ಹೊತ್ತಿನ ಊಟಕ್ಕೂ ಪರದಾಡುವ ಪರಿಸ್ಥಿತಿ ಇದೆ. ಹೀಗಾಗಿ ಅವರ ಬದುಕು ನಿತ್ಯವೂ ಹೋರಾಟದಲ್ಲೇ ಕಳೆಯುತ್ತದೆ. ನಿತ್ಯದ ಕೆಲಸದ ಕೂಲಿಗಾಗಿ ಯಾವುದೇ ವಿಶೇಷ ಸವಲತ್ತುಗಳಿಲ್ಲದೆ ಹಗಲು, ರಾತ್ರಿ ಎನ್ನದೆ ದುಡಿಯುವ ಜೀವಗಳು ಲಕ್ಷಾಂತರ. ಇವರ ಹೋರಾಟ, ತ್ಯಾಗಗಳನ್ನು ಸ್ಮರಿಸಲು ಪ್ರತಿ ವರ್ಷ ಮೇ 1ರಂದು ಅಂತಾರಾಷ್ಟ್ರೀಯ ಕಾರ್ಮಿಕ ದಿನವನ್ನು (International Labour Day-2024) ಆಚರಿಸಲಾಗುತ್ತದೆ. ಇದನ್ನು ಮೇ ದಿನ (may day) ಎಂದೂ ಕರೆಯಲಾಗುತ್ತದೆ.

ಕಾರ್ಮಿಕರ ದಿನಾಚರಣೆಯ ಮೂಲ 19ನೇ ಶತಮಾನದ ಉತ್ತರಾರ್ಧ ಎಂದು ಹೇಳಬಹುದು. ಈ ಸಂದರ್ಭದಲ್ಲಿ ಜಗತ್ತಿನಾದ್ಯಂತ ಕಾರ್ಮಿಕರು ಉತ್ತಮ ಕೆಲಸದ ಪರಿಸ್ಥಿತಿಗಳು, ನ್ಯಾಯಯುತ ವೇತನ ಮತ್ತು ಕಡಿಮೆ ಕೆಲಸದ ಸಮಯಕ್ಕಾಗಿ ಒತ್ತಾಯಿಸಲು ಪ್ರಾರಂಭಿಸಿದರು.

ಭಾರತ (india), ಕ್ಯೂಬಾ (cuba) ಮತ್ತು ಚೀನಾ (china) ಸೇರಿದಂತೆ 80ಕ್ಕೂ ಹೆಚ್ಚು ದೇಶಗಳಲ್ಲಿ ಪ್ರಸ್ತುತ ಅಂತಾರಾಷ್ಟ್ರೀಯ ಕಾರ್ಮಿಕ ದಿನವನ್ನು ಆಚರಿಸಲಾಗುತ್ತದೆ. ದುಡಿಯುವ ವರ್ಗದ ಜನರ ಹಕ್ಕುಗಳನ್ನು ಉತ್ತೇಜಿಸಲು ಮತ್ತು ಶೋಷಣೆಯಿಂದ ಅವರನ್ನು ರಕ್ಷಿಸಲು ವಿಶ್ವದ ವಿವಿಧ ಭಾಗಗಳಲ್ಲಿನ ಜನರು ಈ ದಿನದಂದು ಮೆರವಣಿಗೆಗಳನ್ನು ನಡೆಸುತ್ತಾರೆ, ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಾರೆ. ನಿತ್ಯದ ಕೆಲಸದಲ್ಲಿ ಸಾಧನೆ ಮಾಡಿರುವ ಕೆಲವು ಕಾರ್ಮಿಕರನ್ನು ಗುರುತಿಸಿ ಸಮ್ಮಾನವನ್ನು ನಡೆಸಲಾಗುತ್ತದೆ.

ಇದನ್ನೂ ಓದಿ: Job Alert: 506 ಹುದ್ದೆಗಳ ಭರ್ತಿಗೆ ಯುಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಮೇ 14ರೊಳಗೆ ಆನ್‌ಲೈನ್‌ನಲ್ಲಿ ಅಪ್ಲೈ ಮಾಡಿ

ಇದರ ಇತಿಹಾಸ ಹೀಗಿದೆ

19ನೇ ಶತಮಾನದಲ್ಲಿ ಕಾರ್ಮಿಕ ದಿನಾಚರಣೆಯ ಪ್ರಾರಂಭವಾಯಿತು. ಅಮೆರಿಕದ ಚಿಕಾಗೋದಲ್ಲಿ 1886ರ ಮೇ 1 ರಂದು ಕಾರ್ಮಿಕರು ಕೆಲಸದ ದಿನವನ್ನು ಎಂಟು ಗಂಟೆಗೆ ನಿಗದಿ ಪಡಿಸುವಂತೆ ಒತ್ತಾಯಿಸಿ ಮುಷ್ಕರವನ್ನು ಆಯೋಜಿಸಿದ್ದರು. ಹೇಮಾರ್ಕೆಟ್ ಸ್ಕ್ವೇರ್‌ನಲ್ಲಿ ನಡೆದ ಕಾರ್ಮಿಕ ರ್ಯಾಲಿಯ ವೇಳೆ ಬಾಂಬ್ ಸ್ಫೋಟಗೊಂಡ ಅನಂತರ ಅಮೆರಿಕದಾದ್ಯಂತ ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ಮತ್ತು ಉತ್ತಮ ಕೆಲಸದ ಪರಿಸ್ಥಿತಿಗಳಿಗಾಗಿ ಹೋರಾಡಲು ಒಗ್ಗೂಡಿದರು.

1889ರಲ್ಲಿ ಸಮಾಜವಾದಿ ಪಕ್ಷಗಳ ಅಂತಾರಾಷ್ಟ್ರೀಯ ಕಾಂಗ್ರೆಸ್ ಪ್ಯಾರಿಸ್ ನಲ್ಲಿ ಸಭೆ ಸೇರಿತು. ಮೇ 1ರಂದು ಕಾರ್ಮಿಕರ ದಿನ ಅಥವಾ ಕಾರ್ಮಿಕರ ದಿನವನ್ನು ಆಚರಿಸಲು ನಿರ್ಧಾರ ಕೈಗೊಂಡಿತು.


ಚೆನ್ನೈನಲ್ಲಿ ಮೊದಲ ಕಾರ್ಯಕ್ರಮ

ಭಾರತದಲ್ಲಿ ಮೊದಲ ಬಾರಿಗೆ ಕಾರ್ಮಿಕ ದಿನವನ್ನು 1923ರ ಮೇ 1ರಂದು ಚೆನ್ನೈನಲ್ಲಿ ಆಚರಿಸಲಾಯಿತು. ಮೊದಲ ಮೇ ದಿನಾಚರಣೆಯನ್ನು ಲೇಬರ್ ಕಿಸಾನ್ ಪಾರ್ಟಿ ಆಫ್ ಹಿಂದೂಸ್ತಾನ್ ಆಯೋಜಿಸಿತ್ತು. ಪಕ್ಷದ ನಾಯಕ ಕಾಮ್ರೇಡ್ ಸಿಂಗರವೇಲರ್ ಈ ಕಾರ್ಯಕ್ರಮವನ್ನು ಆಚರಿಸಲು ಎರಡು ಸಭೆಗಳನ್ನು ಆಯೋಜಿಸಿದ್ದರು.
ಕಾರ್ಮಿಕರ ದಿನವನ್ನು ವಿವಿಧ ಭಾರತೀಯ ರಾಜ್ಯಗಳಲ್ಲಿ ವಿವಿಧ ಹೆಸರುಗಳಿಂದ ಆಚರಿಸಲಾಗುತ್ತದೆ. ಅತ್ಯಂತ ಜನಪ್ರಿಯ ಹೆಸರು ಮೇ ದಿನವಾಗಿದೆ.

ಕಾರ್ಮಿಕರ ದಿನವನ್ನು ಹಿಂದಿಯಲ್ಲಿ ಕಾಮ್‌ಗರ್ ದಿನ್, ಕನ್ನಡದಲ್ಲಿ ಕಾರ್ಮಿಕ ದಿನಚರಣೆ, ತೆಲುಗಿನಲ್ಲಿ ಕಾರ್ಮಿಕ ದಿನೋತ್ಸವ, ಮರಾಠಿಯಲ್ಲಿ ಕಾಮ್‌ಗರ್ ದಿವಸ್, ತಮಿಳಿನಲ್ಲಿ ಉಜೈಪಾಲರ್ ದೀನಂ, ಮಲಯಾಳಂನಲ್ಲಿ ಥೋಝಿಲಾಲಿ ದಿನಂ ಮತ್ತು ಬಂಗಾಳಿಯಲ್ಲಿ ಶ್ರೋಮಿಕ್ ದಿಬೋಶ್ ಎಂದು ಕರೆಯಲಾಗುತ್ತದೆ.

ಈ ದಿನದ ಉದ್ದೇಶ ಏನು?

ದುಡಿಯುವ ಜನರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಶೋಷಣೆಯಿಂದ ಅವರನ್ನು ರಕ್ಷಿಸಲು ಕಾರ್ಮಿಕರ ದಿನವನ್ನು ವಿಶ್ವದಾದ್ಯಂತ ಆಚರಿಸಲಾಗುತ್ತದೆ. ಇದು ನಮ್ಮ ಸಮಾಜದಲ್ಲಿ ಕಾರ್ಮಿಕ ವರ್ಗದ ಪ್ರಮುಖ ಪಾತ್ರವನ್ನು ನೆನಪಿಸುತ್ತದೆ. ಕಾರ್ಮಿಕರ ಶ್ರಮವನ್ನು ಗೌರವಿಸುವುದು ಮತ್ತು ಅವರ ಘನತೆಯನ್ನು ಎತ್ತಿ ಹಿಡಿಯುವುದು ಈ ದಿನದ ವಿಶೇಷವಾಗಿದೆ.

Continue Reading

ಮನಿ ಗೈಡ್

PF Balance Check: ಬಡ್ಡಿ ಬಂದಿದೆಯೋ ಇಲ್ಲವೋ… ಇಪಿಎಫ್ ಬ್ಯಾಲೆನ್ಸ್ ಚೆಕ್ ಮಾಡೋದು ಹೇಗೆ?

PF Balance Check: ಇನ್ನೇನು 2023 -2024ರ ಬಡ್ಡಿ ಹಣ ಇಪಿಎಫ್ ಖಾತೆಗೆ ಬೀಳಲಿದೆ. ನೌಕರರ ಭವಿಷ್ಯ ನಿಧಿ ಹೊಂದಿರುವ ಉದ್ಯೋಗಿಗಳು ತಮ್ಮ ಖಾತೆಗೆ ಇಪಿಎಫ್ ಬಡ್ಡಿ ಹಣ ಬಂದಿದೆಯೋ ಇಲ್ಲವೋ ಎಂಬುದನ್ನು ನೋಡಲು ನಾಲ್ಕು ದಾರಿಗಳಿವೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

PF Balance Check
Koo

ನವದೆಹಲಿ: ನೌಕರರ ಭವಿಷ್ಯ ನಿಧಿ (EPF) ಹೊಂದಿರುವ ಉದ್ಯೋಗಿಗಳಿಗೆ ಇನ್ನು ಕೆಲವೇ ದಿನಗಳಲ್ಲಿ 2023-2024ರ ಬಡ್ಡಿ ಹಣ (interest money) ಖಾತೆಗೆ ಬೀಳಲಿದೆ. ಹೀಗಾಗಿ ಈಗಾಗಲೇ ಇಪಿಎಫ್‌ಒ ಹೊಂದಿರುವ ಸದಸ್ಯರು ತಮ್ಮ ಖಾತೆಗೆ ಬಡ್ಡಿ ಹಣ (PF Balance Check) ಬಂದಿದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಲು ತೊಡಗಿದ್ದಾರೆ. ಸ್ಮಾರ್ಟ್ ಫೋನ್ (smart phone) ಕೈಯಲ್ಲಿ ಇರುವುದರಿಂದ ಈಗ ಇದು ಕಷ್ಟವೇನಲ್ಲ.

ಇಪಿಎಫ್ ಬಡ್ಡಿ ಕ್ರೆಡಿಟ್ ಸ್ಥಿತಿಯನ್ನು ಪರಿಶೀಲಿಸಲು ನಾಲ್ಕು ದಾರಿಗಳಿವೆ. ಆನ್‌ಲೈನ್ ಮೂಲಕ, ಸಂದೇಶ ಕಳುಹಿಸಿ, ಮಿಸ್ಡ್ ಕಾಲ್‌ ಅಥವಾ ಉಮಂಗ್ ಅಪ್ಲಿಕೇಶನ್ ಮೂಲಕ ಇಪಿಎಫ್ ಬಡ್ಡಿ ಕ್ರೆಡಿಟ್ ಆಗಿದೆಯೇ ಇಲ್ಲವೋ ಎಂದು ನೋಡಬಹುದು.

ಆನ್ ಲೈನ್ ನಲ್ಲಿ ಪರಿಶೀಲಿಸಿ

ಇಪಿಎಫ್ ಖಾತೆಯ ಬ್ಯಾಲೆನ್ಸ್ ಅನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸಲು epfindia.gov.in ಗೆ ಲಾಗಿನ್ ಮಾಡಿ. ಅಲ್ಲಿ UAN ಸಂಖ್ಯೆ, ಪಾಸ್‌ವರ್ಡ್ ಮತ್ತು ಕ್ಯಾಪ್ಚಾ ಕೋಡ್‌ ಅನ್ನು ಹಾಕಿ. ಬಳಿಕ ಇ-ಪಾಸ್‌ಬುಕ್ ಮೇಲೆ ಕ್ಲಿಕ್ ಮಾಡಿ. ಒಮ್ಮೆ ನೀವು ಎಲ್ಲಾ ವಿವರಗಳನ್ನು ಫೈಲ್ ಮಾಡಿದರೆ ಹೊಸ ಪುಟ ತೆರೆದುಕೊಳ್ಳುತ್ತದೆ. ಇಲ್ಲಿ ಸದಸ್ಯರ ಐಡಿ ತೆರೆದು ಖಾತೆಯಲ್ಲಿರುವ ಒಟ್ಟು EPF ಬ್ಯಾಲೆನ್ಸ್ ಅನ್ನು ನೋಡಬಹುದು.

ಇದನ್ನೂ ಓದಿ: Money Guide: ಮೇ 31ರೊಳಗೆ ಪ್ಯಾನ್‌-ಆಧಾರ್‌ ಲಿಂಕ್‌ ಆಗದಿದ್ದರೆ ಟಿಡಿಎಸ್ ದುಪ್ಪಟ್ಟು ಕಡಿತ; ಲಿಂಕ್‌ ಮಾಡುವ ವಿಧಾನ ಇಲ್ಲಿದೆ


ಉಮಂಗ್ ಅಪ್ಲಿಕೇಶನ್

ಉಮಂಗ್ ಅಪ್ಲಿಕೇಶನ್ ಮೂಲಕ EPF ಬ್ಯಾಲೆನ್ಸ್ ಅನ್ನು ಹೇಗೆ ಪರಿಶೀಲಿಸಲು UMANG ಅಪ್ಲಿಕೇಶನ್ ತೆರೆಯಿರಿ. EPFO ಮೇಲೆ ಕ್ಲಿಕ್ ಮಾಡಿ. ಉದ್ಯೋಗಿ ಕೇಂದ್ರಿತ ಸೇವೆಗಳ ಮೇಲೆ ಕ್ಲಿಕ್ ಮಾಡಿ, ಬಳಿಕ View Passbook ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ UAN ಸಂಖ್ಯೆ ಮತ್ತು ಪಾಸ್‌ವರ್ಡ್‌ ಫೀಡ್ ಮಾಡಿ. ನೋಂದಾಯಿತ ಮೊಬೈಲ್ ಸಂಖ್ಯೆಗೆ ಬರುವ ಒಟಿಪಿ ಅನ್ನು ಅಲ್ಲಿ ಹಾಕಿ ಇಪಿಎಫ್ ಬ್ಯಾಲೆನ್ಸ್ ಅನ್ನು ಪರಿಶೀಲಿಸಬಹುದು.

ಎಸ್‌ಎಂಎಸ್

ಇಪಿಎಫ್ ಬ್ಯಾಲೆನ್ಸ್ ಅನ್ನು ಎಸ್ ಎಂಎಸ್ ಕಳುಹಿಸಿಯೂ ಪರಿಶೀಲಿಸಬಹುದು. ಮೊಬೈಲ್ ಸಂಖ್ಯೆಯನ್ನು ಹೊರತುಪಡಿಸಿ, ಯುಎಎನ್ ಪೋರ್ಟಲ್‌ನಲ್ಲಿ ನೋಂದಾಯಿಸಲಾದ ಸದಸ್ಯರು ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗಳಿಂದ ಎಸ್ ಎಂಎಸ್ ಕಳುಹಿಸುವ ಮೂಲಕ ತಮ್ಮ ಪಿಎಫ್ ವಿವರಗಳನ್ನು ಪಡೆಯಬಹುದು. ಇದಕ್ಕಾಗಿ EPFOHO UAN ಅನ್ನು 7738299899ಗೆ ಎಸ್‌ಎಂಎಸ್ ಮಾಡಬೇಕು.

ಮಿಸ್ಡ್ ಕಾಲ್

ಮಿಸ್ಡ್ ಕಾಲ್ ನೀಡಿಯೂ ಇಪಿಎಫ್ ಬ್ಯಾಲೆನ್ಸ್ ಪರಿಶೀಲಿಸಬಹುದು. ಇದಕ್ಕಾಗಿ UAN ಪೋರ್ಟಲ್‌ನಲ್ಲಿ ನೋಂದಾಯಿಸಲಾದ EPFO ಚಂದಾದಾರರು UANನಲ್ಲಿ ನೋಂದಾಯಿಸಲಾದ ತಮ್ಮ ಮೊಬೈಲ್ ಸಂಖ್ಯೆಯಿಂದ 9966044425 ಈ ನಂಬರ್‌ಗೆ ಮಿಸ್ಡ್ ಕಾಲ್ ನೀಡುವ ಮೂಲಕ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ ತಮ್ಮ ಪಿಎಫ್ ವಿವರಗಳನ್ನು ಪಡೆಯಬಹುದು. ನೆನಪಿಡಿ, ನೀವು ಕರೆ ಮಾಡುವ ಸಂಖ್ಯೆ ನಿಮ್ಮ ಪಿಎಫ್‌ ಅಕೌಂಟ್‌ನಲ್ಲಿ ದಾಖಲಾಗಿರಬೇಕು.

Continue Reading

Lok Sabha Election 2024

Lok Sabha Election: ಒಂದೇ ಒಂದು ಕುಟುಂಬಕ್ಕಾಗಿ ಪ್ರತ್ಯೇಕ ಮತಗಟ್ಟೆ! ಹೀಗೂ ಉಂಟು!

Lok Sabha Election 2024: ಒಂದೇ ಕುಟುಂಬದ ಐದು ಮಂದಿಗಾಗಿ ಲೇಹ್ ಜಿಲ್ಲೆಯ ವಾಶಿ ಎಂಬ ಹಳ್ಳಿಯಲ್ಲಿಚುನಾವಣಾ ಅಧಿಕಾರಿಗಳು ಮತದಾನ ಕೇಂದ್ರವನ್ನು ಸ್ಥಾಪಿಸಿದ್ದಾರೆ. ಚುನಾವಣಾ ಆಯೋಗದ ಪ್ರಯತ್ನಗಳ ಭಾಗವಾಗಿ ಶೇ. 100ರಷ್ಟು ಮತದಾನವಾಗಬೇಕು ಎನ್ನುವ ಉದ್ದೇಶದಿಂದ ಚುನಾವಣಾ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕನೂ ಪಾಲ್ಗೊಳ್ಳಬೇಕು. ಇದಕ್ಕಾಗಿ ದೂರದೂರದ ಸ್ಥಳಗಳಲ್ಲೂ, ಅತ್ಯಲ್ಪ ಮತದಾರರು ಇರುವಲ್ಲೂ ಎಲ್ಲರಿಗೂ ಅನುಕೂಲವಾಗಬೇಕು ಎನ್ನುವ ಉದ್ದೇಶದಿಂದ ಮತದಾನ ಕೇಂದ್ರವನ್ನು ತೆರೆಯಲಾಗಿದೆ.

VISTARANEWS.COM


on

By

Lok Sabha Election-2024
Koo

ಶ್ರೀನಗರ: ಲೋಕಸಭಾ ಚುನಾವಣೆ 2024 (Lok Sabha Election-2024) ಹಲವು ವಿಶೇಷಗಳಿಗೆ ಸಾಕ್ಷಿಯಾಗಿದೆ. ಇದರಲ್ಲಿ ಕೇವಲ ಐದು ಮಂದಿ ಮತದಾರರಿಗಾಗಿ (voters) ಮತದಾನ ಕೇಂದ್ರವನ್ನು (voting booth) ತೆರೆದಿರುವುದು ಕೂಡ ಒಂದು. ಕೇಂದ್ರಾಡಳಿತ ಪ್ರದೇಶವಾದ ಲಡಾಖ್ ನ (Ladakh) ಲೇಹ್ (Leh) ಜಿಲ್ಲೆಯ ವಾಶಿ (Washi ) ಎಂಬ ದೂರದ ಹಳ್ಳಿಯಲ್ಲಿ ಒಂದು ಕುಟುಂಬದ ಐದು ಸದಸ್ಯರಿಗೆ ಚುನಾವಣಾ ಅಧಿಕಾರಿಗಳು ಮತದಾನ ಕೇಂದ್ರವನ್ನು ಸ್ಥಾಪಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಲಡಾಖ್ ನ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಯತೀಂದ್ರ ಎಂ. ಮರಾಲ್ಕರ್, ಲೇಹ್‌ನಿಂದ ಸುಮಾರು 170 ಕಿ.ಮೀ. ದೂರದಲ್ಲಿರುವ ನುಬ್ರಾದ ವಾಶಿ ಎಂಬ ದೂರದ ಹಳ್ಳಿಯಲ್ಲಿ ಟೆಂಟ್ ಅಡಿಯಲ್ಲಿ ಮತದಾನ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

ಚುನಾವಣಾ ಆಯೋಗದ ಪ್ರಯತ್ನಗಳ ಭಾಗವಾಗಿ ಶೇ. 100ರಷ್ಟು ಮತದಾನವಾಗಬೇಕು ಎನ್ನುವ ಉದ್ದೇಶದಿಂದ ಚುನಾವಣಾ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕನೂ ಪಾಲ್ಗೊಳ್ಳಬೇಕು. ಇದಕ್ಕಾಗಿ ದೂರದೂರದ ಸ್ಥಳಗಳಲ್ಲೂ, ಅತ್ಯಲ್ಪ ಮತದಾರರು ಇರುವಲ್ಲೂ ಎಲ್ಲರಿಗೂ ಅನುಕೂಲವಾಗಬೇಕು ಎನ್ನುವ ಉದ್ದೇಶದಿಂದ ಮತದಾನ ಕೇಂದ್ರವನ್ನು ತೆರೆಯಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Lok Sabha Election 2024: ಎಲೆಕ್ಷನ್‌ ಹೊತ್ತಲ್ಲೇ ಕಾಂಗ್ರೆಸ್‌ಗೆ ಬಿಗ್‌ ಶಾಕ್! ಕನ್ಹಯ್ಯ ಕುಮಾರ್‌ಗೆ ಸ್ವಪಕ್ಷದಲ್ಲೇ ವಿರೋಧ

ಮೇ 20ರಂದು ಮತದಾನ

ಲಡಾಖ್ ಲೋಕಸಭಾ ಸ್ಥಾನಕ್ಕೆ ಮೇ 20ರಂದು 5ನೇ ಹಂತದಲ್ಲಿ ಮತದಾನ ನಡೆಯಲಿದೆ. ಆರ್ಟಿಕಲ್ 370 ಅನ್ನು ರದ್ದುಗೊಳಿಸಿದ ಅನಂತರ ಮತ್ತು ಜಮ್ಮು ಮತ್ತು ಕಾಶ್ಮೀರದ ರಾಜ್ಯವನ್ನು ಎರಡು ಯುಟಿಗಳಾಗಿ ವಿಭಜಿಸಿದಬಳಿಕ ಶೀತ ಮರುಭೂಮಿ ಪ್ರದೇಶದಲ್ಲಿ ಮೊದಲ ಬಾರಿಗೆ ಮತದಾನ ನಡೆಯಲಿದೆ.


ಐವರು ಮತದಾರರು

ಒಂದೇ ಕುಟುಂಬದ ಐವರು ಗ್ರಾಮದಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದು, ಟೆಂಟ್‌ ಹಾಕಿದ ಮತಗಟ್ಟೆ ಅವರ ಮನೆ ಬಾಗಿಲಿಗೆ ಬಂದಿದೆ ಎಂದು ಮಾರಲ್ಕರ್ ಹೇಳಿದರು.

ಕುಟುಂಬವು ಆರು ಸದಸ್ಯರನ್ನು ಒಳಗೊಂಡಿದೆ ಮತ್ತು ಅವರಲ್ಲಿ ಇಬ್ಬರು ಪುರುಷರು ಮತ್ತು ಮೂವರು ಮಹಿಳೆಯರು ಮತ ಚಲಾಯಿಸಲು ಅರ್ಹರಾಗಿದ್ದಾರೆ. ಕುಟುಂಬದ ಮುಖ್ಯಸ್ಥ ರೈತನಾಗಿದ್ದಾನೆ.

ಲಡಾಖ್ ನಲ್ಲಿ 1,82,571 ಮತದಾರರು

ಲಡಾಖ್ ಯುಟಿಯು ಎರಡು ಜಿಲ್ಲೆಗಳನ್ನು ಒಳಗೊಂಡಿದೆ. ಮುಸ್ಲಿಂ ಪ್ರಾಬಲ್ಯದ ಕಾರ್ಗಿಲ್ ಮತ್ತು ಬೌದ್ಧ ಪ್ರಾಬಲ್ಯದ ಲೇಹ್. 91,703 ಪುರುಷರು ಮತ್ತು 90868 ಮಹಿಳೆಯರು ಸೇರಿದಂತೆ ಒಟ್ಟು 1,82,571 ಮತದಾರರು ಇಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದಾರೆ.

577 ಮತಗಟ್ಟೆಗಳು

ಚುನಾವಣಾ ಆಯೋಗವು ಯುಟಿಯಾದ್ಯಂತ 577 ಮತಗಟ್ಟೆಗಳನ್ನು ಸ್ಥಾಪಿಸಿದೆ. ಇದರಲ್ಲಿ 33 ನಗರ ಮತ್ತು 544 ಗ್ರಾಮೀಣ ಪ್ರದೇಶಗಳಲ್ಲಿ ಸೇರಿವೆ. ಲಡಾಖ್‌ನಲ್ಲಿ ಕೆಲವು ಮತಗಟ್ಟೆಗಳ ದುರ್ಗಮತೆಯನ್ನು ಗಮನದಲ್ಲಿಟ್ಟುಕೊಂಡು ದೂರದ ಹಳ್ಳಿಗಳಿಗೆ ಚುನಾವಣಾ ಸಾಮಗ್ರಿಗಳು ಮತ್ತು ಸಿಬ್ಬಂದಿಯನ್ನು ವಿಮಾನದಲ್ಲಿ ರವಾನಿಸಲಾಗುತ್ತದೆ.

Continue Reading
Advertisement
T20 World Cup 2024
ಕ್ರೀಡೆ8 mins ago

T20 World Cup 2024: ಇಂದು ಟಿ20 ವಿಶ್ವಕಪ್​ಗೆ ಭಾರತ ತಂಡ ಪ್ರಕಟ; ಸಂಭಾವ್ಯ ತಂಡ ಹೀಗಿದೆ

Manipur Violence
ದೇಶ12 mins ago

Manipur Violence:ಮಹಿಳೆಯರ ವಿವಸ್ತ್ರ ಕೇಸ್‌; ಪೊಲೀಸರೆದುರೇ ನಡೆದಿತ್ತು ನೀಚ ಕೃತ್ಯ

taliban writing muniraju
ಕ್ರೈಂ32 mins ago

Taliban Writing: ಗೋಡೆ ಮೇಲೆ ತಾಲಿಬಾನ್‌ ಬರಹ ಬರೆದ ಪೇದೆ ಮುನಿರಾಜು ಈಗ ಮುಸ್ಲಿಂ ಅಂತೆ!

IPL 2024 Points Table
ಕ್ರೀಡೆ39 mins ago

IPL 2024 Points Table: ಡೆಲ್ಲಿ ಕ್ಯಾಪಿಟಲ್ಸ್​ ಸೋಲಿನ ಬಳಿಕ ಹೀಗಿದೆ ಅಂಕಪಟ್ಟಿ

Rohit Sharma Birthday
ಕ್ರೀಡೆ1 hour ago

Rohit Sharma Birthday: ಹಿಟ್​ಮ್ಯಾನ್​ ಖ್ಯಾತಿಯ ರೋಹಿತ್​ಗೆ 37ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ

road accident anekal
ಬೆಂಗಳೂರು ಗ್ರಾಮಾಂತರ1 hour ago

Road Accident: ಪಂಚರ್‌ ಹಾಕುತ್ತಿದ್ದ ಲಾರಿ ಚಾಲಕ ಬೈಕ್‌ ಡಿಕ್ಕಿಯಾಗಿ ಸಾವು, ಹಿಟ್‌ ಆ್ಯಂಡ್‌ ರನ್‌ನಲ್ಲಿ ಯುವಕ ಮೃತ

Baba Ramdev
ದೇಶ1 hour ago

Patanjali Case: ಪತಂಜಲಿಗೆ ಮತ್ತೆ ಸಂಕಷ್ಟ; ಬ್ಯಾನ್‌ ಆಗುತ್ತಾ ಈ ಉತ್ಪನ್ನಗಳು?

CET exam 2024
ಪ್ರಮುಖ ಸುದ್ದಿ2 hours ago

CET Exam: ಸಿಇಟಿ ಕೀ ಉತ್ತರಗಳು ಪ್ರಕಟ, ಪಠ್ಯೇತರ ಪ್ರಶ್ನೆಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ

Covishield Vaccine
ಪ್ರಮುಖ ಸುದ್ದಿ2 hours ago

Covishield Vaccine: ಕೋವಿಶೀಲ್ಡ್‌ನಿಂದ ಅಡ್ಡ ಪರಿಣಾಮವಿದೆ ಎಂದು ಕೊನೆಗೂ ಒಪ್ಪಿಕೊಂಡ ತಯಾರಿಕೆ ಕಂಪನಿ ಅಸ್ಟ್ರಾಜೆನೆಕಾ

ದೇಶ2 hours ago

Viral Video: ಆರಾಮಾಗಿ ಆಟವಾಡ್ತಿದ್ದ ಬಾಲಕಿ ಮೇಲೆ ಜರ್ಮನ್‌ ಶೆಫರ್ಡ್‌ ಡೆಡ್ಲಿ ಅಟ್ಯಾಕ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ5 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 202421 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 202422 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌