PM Modi: ಕುಣಿಯಲು ಬಾರದವರು ನೆಲ ಡೊಂಕು ಅಂದಂತೆ! ಮತಯಂತ್ರ ಆಕ್ಷೇಪಿಸುವ ಪ್ರತಿಪಕ್ಷಗಳಿಗೆ ಮೋದಿ ಟಾಂಗ್‌ - Vistara News

Latest

PM Modi: ಕುಣಿಯಲು ಬಾರದವರು ನೆಲ ಡೊಂಕು ಅಂದಂತೆ! ಮತಯಂತ್ರ ಆಕ್ಷೇಪಿಸುವ ಪ್ರತಿಪಕ್ಷಗಳಿಗೆ ಮೋದಿ ಟಾಂಗ್‌

PM Modi: ಜಾರಿ ನಿರ್ದೇಶನಾಲಯವನ್ನು ಕೇಂದ್ರ ಸರ್ಕಾರ ದುರುಪಯೋಗಪಡಿಸುತ್ತಿದೆ ಎಂಬ ವಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ಕೇವಲ ಶೇ. 3ರಷ್ಟು ಮಾತ್ರ ರಾಜಕೀಯ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಾಗಿದೆ. ಹಿಂದಿನದಕ್ಕೆ ಹೋಲಿಸಿದರೆ ಕಳೆದ 10 ವರ್ಷಗಳಲ್ಲಿ ಸಂಸ್ಥೆಯಿಂದ ಹೆಚ್ಚಿನ ಪ್ರಮಾಣದ ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

VISTARANEWS.COM


on

PM Modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ಕುಣಿಯಲು ಬಾರದವರು ನೆಲ ಡೊಂಕು ಅಂದಂತೆ ಎನ್ನುವ ಮೂಲಕ ನರೇಂದ್ರ ಮೋದಿ ಅವರು ಪ್ರತಿಪಕ್ಷಗಳಿಗೆ ಟಾಂಗ್‌ ಕೊಟ್ಟಿದ್ದಾರೆ.

ಜಾರಿ ನಿರ್ದೇಶನಾಲಯ (ED), ಸಿಬಿಐ (CBI) ಅಥವಾ ಚುನಾವಣಾ ಆಯೋಗ (EC) ಇದಕ್ಕೆ ಸಂಬಂಧಿಸಿದ ಕಾನೂನನ್ನು ನನ್ನ ಸರ್ಕಾರ ಮಾಡಿದಲ್ಲ. ಅವುಗಳಿಗೆ ಸಂಬಂಧಿಸಿದ ಕಾನೂನುಗಳನ್ನು ತಮ್ಮ ಅಧಿಕಾರವಧಿಯ ಮೊದಲೇ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Modi) ಹೇಳಿದರು.

ಎಎನ್‌ಐ ಸುದ್ದಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಲೋಕಸಭೆ ಚುನಾವಣೆಯಲ್ಲಿ (loksabha election) ಸಮಬಲದ ಕೊರತೆಯಿದೆ ಎಂಬ ಪ್ರತಿಪಕ್ಷಗಳ ಆರೋಪವನ್ನು ತಳ್ಳಿಹಾಕಿದ ಅವರು, ಮೂವರು ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡಲು ತ್ರಿಸದಸ್ಯ ಸಮಿತಿಯಲ್ಲಿ ವಿರೋಧ ಪಕ್ಷದ ನಾಯಕನಿಗೂ ಸ್ಥಾನ ನೀಡುವ ಮಸೂದೆಯನ್ನು ನಮ್ಮ ಸರ್ಕಾರ ಅಂಗೀಕರಿಸಿದೆ ಎಂದು ತಿಳಿಸಿದರು.

ಜಾರಿ ನಿರ್ದೇಶನಾಲಯವನ್ನು ಕೇಂದ್ರ ಸರ್ಕಾರ ದುರುಪಯೋಗಪಡಿಸುತ್ತಿದೆ ಎಂಬ ವಿಪಕ್ಷಗಳ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು, ಕೇವಲ ಶೇ. 3ರಷ್ಟು ಮಾತ್ರ ರಾಜಕೀಯ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಹಿಂದಿನದಕ್ಕೆ ಹೋಲಿಸಿದರೆ ಕಳೆದ 10 ವರ್ಷಗಳಲ್ಲಿ ಸಂಸ್ಥೆಯಿಂದ ಹೆಚ್ಚಿನ ಪ್ರಮಾಣದ ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Loksabha Election 2024: ಕೆ ಅಣ್ಣಾಮಲೈ ಗೆಲುವು ಸಾಧಿಸಬಹುದೆ? ಪ್ರಬಲ ಪೈಪೋಟಿಗೆ ಸಾಕ್ಷಿಯಾಗಲಿದೆ ಕೊಯಮತ್ತೂರು

ಚುನಾವಣಾ ಆಯೋಗದಲ್ಲಿ ನಾವು ಹೆಚ್ಚಿನ ಸುಧಾರಣೆ ಮಾಡಿದ್ದೇವೆ. ಪ್ರಸ್ತುತ ಚುನಾವಣಾ ಆಯೋಗ ರಚನೆಯಾಗುವುದಕ್ಕೆ ವಿರೋಧ ಪಕ್ಷದ ಅಧಿಕಾರವೂ ಇದೆ. ಆದರೆ ಈ ಹಿಂದೆ ಪ್ರಧಾನಿ ಕಡತಕ್ಕೆ ಸಹಿ ಹಾಕಿ ಚುನಾವಣಾ ಆಯೋಗವನ್ನು ರಚಿಸಲಾಗುತ್ತಿತ್ತು. ಅವರ ಕುಟುಂಬಗಳಿಗೆ ಹತ್ತಿರವಿರುವವರನ್ನು ಚುನಾವಣಾ ಆಯುಕ್ತರನ್ನಾಗಿ ಮಾಡಲಾಗಿತ್ತು ಎಂದು ದೂರಿದರು.

ಕಾಂಗ್ರೆಸ್ ಪಕ್ಷಕ್ಕೆ ಹತ್ತಿರವಾಗಿದ್ದವರು ಚುನಾವಣಾ ಆಯುಕ್ತರಾಗಿದ್ದರು. ಬಳಿಕ ಅವರಿಗೆ ರಾಜ್ಯಸಭಾ ಟಿಕೆಟ್ ಮತ್ತು ಮಂತ್ರಿ ಸ್ಥಾನವನ್ನು ನೀಡಲಾಯಿತು ಎಂದು ಆರೋಪಿಸಿದ ಅವರು, ಆದರೆ ನಾವು ಹಾಗೆ ಮಾಡಿಲ್ಲ. ನಾವು ಸರಿ ದಾರಿಯಲ್ಲಿ ಹೋಗಬೇಕು, ತಪ್ಪು ದಾರಿಯಲ್ಲಿ ಹೋಗಬಾರದು ಎಂದು ಪ್ರತಿಪಕ್ಷಗಳ ವಿರುದ್ಧ ಕಿಡಿಕಾರಿದರು.

ಪ್ರತಿಪಕ್ಷಗಳು ಸುಳ್ಳುಗಳನ್ನು ಸೃಷ್ಟಿಸುತ್ತಿವೆ ಮತ್ತು ತಮ್ಮ ಮುಂಬರುವ ಸೋಲಿಗೆ ಕಾರಣವನ್ನು ನೀಡುತ್ತಿವೆ ಎಂದ ಪ್ರಧಾನಿ ಮೋದಿ, ಒಂದು ಗಾದೆ ಮಾತಿದೆ… ನಾಚ್ ನಾ ಜಾನೆ ಅಂಗನ್ ತೇರಾ (ನೃತ್ಯ ಮಾಡಲು ಬಾರದವರು ನೆಲ ಸರಿ ಇಲ್ಲ ಎಂದರಂತೆ) ಹಾಗೆ ಇದು ಎಂದು ಹೇಳಿದರು.


2023ರ ಹೊಸ ಮಸೂದೆ

ಸಂಸತ್ತು ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ (ನೇಮಕಾತಿ, ಸೇವಾ ಷರತ್ತುಗಳು ಮತ್ತು ಅಧಿಕಾರಾವಧಿ) ಮಸೂದೆಯನ್ನು 2023ರ ಡಿಸೆಂಬರ್‌ನಲ್ಲಿ ಅಂಗೀಕರಿಸಿತು. ಹೊಸ ವ್ಯವಸ್ಥೆಯಡಿ ಪ್ರಧಾನ ಮಂತ್ರಿ, ಕೇಂದ್ರ ಸಚಿವರು ಮತ್ತು ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ತ್ರಿಸದಸ್ಯ ಸಮಿತಿಯು ಮೂವರು ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುತ್ತದೆ. ಕಳೆದ ತಿಂಗಳು ಹೊಸ ವ್ಯವಸ್ಥೆಯಡಿ ಇಬ್ಬರು ಚುನಾವಣಾ ಆಯುಕ್ತರಾಗಿ ಸುಖಬೀರ್ ಸಿಂಗ್ ಸಂಧು ಮತ್ತು ಜ್ಞಾನೇಶ್ ಕುಮಾರ್ ಅವರನ್ನು ನೇಮಿಸಲಾಗಿತ್ತು ಎಂದು ತಿಳಿಸಿದರು.


ವಿರೋಧ ಪಕ್ಷದ ನಾಯಕರನ್ನು ಜೈಲಿಗೆ ಹಾಕಲಾಗಿದೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಎಷ್ಟು ವಿರೋಧ ಪಕ್ಷದ ನಾಯಕರು ಜೈಲಿನಲ್ಲಿದ್ದಾರೆ? ಯಾರಾದರೂ ನನಗೆ ಹೇಳಬಹುದೇ? ಮತ್ತು ಈ ವಿರೋಧ ಪಕ್ಷದ ನಾಯಕರು ತಮ್ಮ ಸರ್ಕಾರವನ್ನು ಮಾತ್ರ ನಡೆಸುತ್ತಿದ್ದಾರೆಯೇ? ಒಬ್ಬ ಪ್ರಾಮಾಣಿಕ ವ್ಯಕ್ತಿಗೆ ಏನು ಭಯ? ಅವರು ನಮ್ಮ ಈಗಿನ ಗೃಹ ಸಚಿವ ಅಮಿತ್ ಶಾ ಅವರನ್ನೂ ಜೈಲಿಗೆ ಹಾಕಿದ್ದರು. ಆಗ ನಾನು ಮುಖ್ಯಮಂತ್ರಿಯಾಗಿದ್ದೆ ಎಂದರು.

1 ಲಕ್ಷ ಕೋಟಿ ಮೌಲ್ಯದ ಆಸ್ತಿ ಜಪ್ತಿ

ಜಾರಿ ನಿರ್ದೇಶನಾಲಯ ನಡೆಸಿದ ತನಿಖೆಗಳ ಬಗ್ಗೆ ವಿವರಿಸಿದ ಪ್ರಧಾನಿ ಮೋದಿ, 2014ರ ಮೊದಲು 5000 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿತ್ತು. ಆದರೆ ಕಳೆದ 10 ವರ್ಷಗಳಲ್ಲಿ 1 ಲಕ್ಷ ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು.

ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ

ಇಡಿ ದಾಖಲಿಸಿರುವ ಎಲ್ಲಾ ಪ್ರಕರಣಗಳಲ್ಲಿ ಕೇವಲ ಶೇ. 3ರಷ್ಟು ಮಾತ್ರ ರಾಜಕೀಯ ವ್ಯಕ್ತಿಗಳಿದ್ದಾರೆ. ಶೇ. 97ರಷ್ಟು ಮಂದಿಗೆ ರಾಜಕೀಯದೊಂದಿಗೆ ಯಾವುದೇ ಸಂಬಂಧವಿಲ್ಲ. ಅವರು ಡ್ರಗ್ ಮಾಫಿಯಾ ಅಥವಾ ಭ್ರಷ್ಟಾಚಾರದಲ್ಲಿ ತೊಡಗಿರುವ ಅಧಿಕಾರಿಗಳು, ಶೇ. 97ರಷ್ಟು ಬೇನಾಮಿ ಆಸ್ತಿಗಳನ್ನು ಸೃಷ್ಟಿಸಿದ ಅಧಿಕಾರಿಗಳ ವಿರುದ್ಧವೇ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಕೆಲಸ ಮಾಡಲು ಬಿಡಿ

ಜಾರಿ ನಿರ್ದೇಶನಾಲಯ ಸ್ವತಂತ್ರವಾಗಿ ಕೆಲಸ ಮಾಡಬೇಕಾದಾಗ ನಾವು ಅದನ್ನು ಮಾಡಲು ಬಿಡಬೇಕಲ್ಲವೇ? ಅದನ್ನು ಏಕೆ ರಚಿಸಲಾಯಿತು? 2014ರ ಮೊದಲು ಅದರ ಕಾರ್ಯಗಳನ್ನು ಯಾರು ತಡೆಯುತ್ತಿದ್ದರು. ಇದರಿಂದ ಯಾರಿಗೆ ಲಾಭವಾಗುತ್ತಿತ್ತು? ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ವ್ಯಕ್ತಿಗಳಿಂದ 1 ಲಕ್ಷ ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಇದು ದೇಶದ ಜನರ ಹಣವಲ್ಲವೇ ಎಂದು ಪ್ರಶ್ನಿಸಿದರು.

ಇಡಿ ತನ್ನ ಕೆಲಸವನ್ನು ಚೆನ್ನಾಗಿ ಮಾಡುತ್ತಿದೆ. ನಾವು ನಮ್ಮ ಸಂಪೂರ್ಣ ಶಕ್ತಿಯೊಂದಿಗೆ ಭ್ರಷ್ಟಾಚಾರದ ವಿರುದ್ಧ ಹೋರಾಡಬೇಕು. ಇದು ನನ್ನ ವೈಯಕ್ತಿಕ ನಿಲುವಾಗಿದೆ ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Labour Day 2024: ಮೇ 1ರ ಕಾರ್ಮಿಕ ದಿನಾಚರಣೆಯ ಹಿನ್ನೆಲೆ ಏನು? ಏನಿದರ ಸಂದೇಶ?

Labour Day 2024: ದುಡಿಯುವ ಜನರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಶೋಷಣೆಯಿಂದ ಅವರನ್ನು ರಕ್ಷಿಸಲು ವಿಶ್ವದಾದ್ಯಂತ ಮೇ 1ರಂದು ಕಾರ್ಮಿಕರ ದಿನವನ್ನು ಆಚರಿಸಲಾಗುತ್ತದೆ. ಇದು ಸಮಾಜದಲ್ಲಿ ಕಾರ್ಮಿಕ ವರ್ಗದ ಪ್ರಮುಖ ಪಾತ್ರವನ್ನು ನೆನಪಿಸುತ್ತದೆ. ಈ ದಿನದ ಹಿನ್ನೆಲೆಯ ವಿವರ ಇಲ್ಲಿದೆ.

VISTARANEWS.COM


on

By

International Labor Day-2024
Koo

ಬದುಕಿನ ಬಹುಪಾಲು ದಿನಗಳನ್ನು ದುಡಿಮೆಯಲ್ಲೇ ಕಳೆಯುವವರು ಕಾರ್ಮಿಕರು (Labour Day 2024). ಇವರಲ್ಲಿ ಕೆಲವರು ಒಂದು ಹೊತ್ತಿನ ಊಟಕ್ಕೂ ಪರದಾಡುವ ಪರಿಸ್ಥಿತಿ ಇದೆ. ಹೀಗಾಗಿ ಅವರ ಬದುಕು ನಿತ್ಯವೂ ಹೋರಾಟದಲ್ಲೇ ಕಳೆಯುತ್ತದೆ. ನಿತ್ಯದ ಕೆಲಸದ ಕೂಲಿಗಾಗಿ ಯಾವುದೇ ವಿಶೇಷ ಸವಲತ್ತುಗಳಿಲ್ಲದೆ ಹಗಲು, ರಾತ್ರಿ ಎನ್ನದೆ ದುಡಿಯುವ ಜೀವಗಳು ಲಕ್ಷಾಂತರ. ಇವರ ಹೋರಾಟ, ತ್ಯಾಗಗಳನ್ನು ಸ್ಮರಿಸಲು ಪ್ರತಿ ವರ್ಷ ಮೇ 1ರಂದು ಅಂತಾರಾಷ್ಟ್ರೀಯ ಕಾರ್ಮಿಕ ದಿನವನ್ನು (International Labour Day-2024) ಆಚರಿಸಲಾಗುತ್ತದೆ. ಇದನ್ನು ಮೇ ದಿನ (may day) ಎಂದೂ ಕರೆಯಲಾಗುತ್ತದೆ.

ಕಾರ್ಮಿಕರ ದಿನಾಚರಣೆಯ ಮೂಲ 19ನೇ ಶತಮಾನದ ಉತ್ತರಾರ್ಧ ಎಂದು ಹೇಳಬಹುದು. ಈ ಸಂದರ್ಭದಲ್ಲಿ ಜಗತ್ತಿನಾದ್ಯಂತ ಕಾರ್ಮಿಕರು ಉತ್ತಮ ಕೆಲಸದ ಪರಿಸ್ಥಿತಿಗಳು, ನ್ಯಾಯಯುತ ವೇತನ ಮತ್ತು ಕಡಿಮೆ ಕೆಲಸದ ಸಮಯಕ್ಕಾಗಿ ಒತ್ತಾಯಿಸಲು ಪ್ರಾರಂಭಿಸಿದರು.

ಭಾರತ (india), ಕ್ಯೂಬಾ (cuba) ಮತ್ತು ಚೀನಾ (china) ಸೇರಿದಂತೆ 80ಕ್ಕೂ ಹೆಚ್ಚು ದೇಶಗಳಲ್ಲಿ ಪ್ರಸ್ತುತ ಅಂತಾರಾಷ್ಟ್ರೀಯ ಕಾರ್ಮಿಕ ದಿನವನ್ನು ಆಚರಿಸಲಾಗುತ್ತದೆ. ದುಡಿಯುವ ವರ್ಗದ ಜನರ ಹಕ್ಕುಗಳನ್ನು ಉತ್ತೇಜಿಸಲು ಮತ್ತು ಶೋಷಣೆಯಿಂದ ಅವರನ್ನು ರಕ್ಷಿಸಲು ವಿಶ್ವದ ವಿವಿಧ ಭಾಗಗಳಲ್ಲಿನ ಜನರು ಈ ದಿನದಂದು ಮೆರವಣಿಗೆಗಳನ್ನು ನಡೆಸುತ್ತಾರೆ, ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಾರೆ. ನಿತ್ಯದ ಕೆಲಸದಲ್ಲಿ ಸಾಧನೆ ಮಾಡಿರುವ ಕೆಲವು ಕಾರ್ಮಿಕರನ್ನು ಗುರುತಿಸಿ ಸಮ್ಮಾನವನ್ನು ನಡೆಸಲಾಗುತ್ತದೆ.

ಇದನ್ನೂ ಓದಿ: Job Alert: 506 ಹುದ್ದೆಗಳ ಭರ್ತಿಗೆ ಯುಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಮೇ 14ರೊಳಗೆ ಆನ್‌ಲೈನ್‌ನಲ್ಲಿ ಅಪ್ಲೈ ಮಾಡಿ

ಇದರ ಇತಿಹಾಸ ಹೀಗಿದೆ

19ನೇ ಶತಮಾನದಲ್ಲಿ ಕಾರ್ಮಿಕ ದಿನಾಚರಣೆಯ ಪ್ರಾರಂಭವಾಯಿತು. ಅಮೆರಿಕದ ಚಿಕಾಗೋದಲ್ಲಿ 1886ರ ಮೇ 1 ರಂದು ಕಾರ್ಮಿಕರು ಕೆಲಸದ ದಿನವನ್ನು ಎಂಟು ಗಂಟೆಗೆ ನಿಗದಿ ಪಡಿಸುವಂತೆ ಒತ್ತಾಯಿಸಿ ಮುಷ್ಕರವನ್ನು ಆಯೋಜಿಸಿದ್ದರು. ಹೇಮಾರ್ಕೆಟ್ ಸ್ಕ್ವೇರ್‌ನಲ್ಲಿ ನಡೆದ ಕಾರ್ಮಿಕ ರ್ಯಾಲಿಯ ವೇಳೆ ಬಾಂಬ್ ಸ್ಫೋಟಗೊಂಡ ಅನಂತರ ಅಮೆರಿಕದಾದ್ಯಂತ ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ಮತ್ತು ಉತ್ತಮ ಕೆಲಸದ ಪರಿಸ್ಥಿತಿಗಳಿಗಾಗಿ ಹೋರಾಡಲು ಒಗ್ಗೂಡಿದರು.

1889ರಲ್ಲಿ ಸಮಾಜವಾದಿ ಪಕ್ಷಗಳ ಅಂತಾರಾಷ್ಟ್ರೀಯ ಕಾಂಗ್ರೆಸ್ ಪ್ಯಾರಿಸ್ ನಲ್ಲಿ ಸಭೆ ಸೇರಿತು. ಮೇ 1ರಂದು ಕಾರ್ಮಿಕರ ದಿನ ಅಥವಾ ಕಾರ್ಮಿಕರ ದಿನವನ್ನು ಆಚರಿಸಲು ನಿರ್ಧಾರ ಕೈಗೊಂಡಿತು.


ಚೆನ್ನೈನಲ್ಲಿ ಮೊದಲ ಕಾರ್ಯಕ್ರಮ

ಭಾರತದಲ್ಲಿ ಮೊದಲ ಬಾರಿಗೆ ಕಾರ್ಮಿಕ ದಿನವನ್ನು 1923ರ ಮೇ 1ರಂದು ಚೆನ್ನೈನಲ್ಲಿ ಆಚರಿಸಲಾಯಿತು. ಮೊದಲ ಮೇ ದಿನಾಚರಣೆಯನ್ನು ಲೇಬರ್ ಕಿಸಾನ್ ಪಾರ್ಟಿ ಆಫ್ ಹಿಂದೂಸ್ತಾನ್ ಆಯೋಜಿಸಿತ್ತು. ಪಕ್ಷದ ನಾಯಕ ಕಾಮ್ರೇಡ್ ಸಿಂಗರವೇಲರ್ ಈ ಕಾರ್ಯಕ್ರಮವನ್ನು ಆಚರಿಸಲು ಎರಡು ಸಭೆಗಳನ್ನು ಆಯೋಜಿಸಿದ್ದರು.
ಕಾರ್ಮಿಕರ ದಿನವನ್ನು ವಿವಿಧ ಭಾರತೀಯ ರಾಜ್ಯಗಳಲ್ಲಿ ವಿವಿಧ ಹೆಸರುಗಳಿಂದ ಆಚರಿಸಲಾಗುತ್ತದೆ. ಅತ್ಯಂತ ಜನಪ್ರಿಯ ಹೆಸರು ಮೇ ದಿನವಾಗಿದೆ.

ಕಾರ್ಮಿಕರ ದಿನವನ್ನು ಹಿಂದಿಯಲ್ಲಿ ಕಾಮ್‌ಗರ್ ದಿನ್, ಕನ್ನಡದಲ್ಲಿ ಕಾರ್ಮಿಕ ದಿನಚರಣೆ, ತೆಲುಗಿನಲ್ಲಿ ಕಾರ್ಮಿಕ ದಿನೋತ್ಸವ, ಮರಾಠಿಯಲ್ಲಿ ಕಾಮ್‌ಗರ್ ದಿವಸ್, ತಮಿಳಿನಲ್ಲಿ ಉಜೈಪಾಲರ್ ದೀನಂ, ಮಲಯಾಳಂನಲ್ಲಿ ಥೋಝಿಲಾಲಿ ದಿನಂ ಮತ್ತು ಬಂಗಾಳಿಯಲ್ಲಿ ಶ್ರೋಮಿಕ್ ದಿಬೋಶ್ ಎಂದು ಕರೆಯಲಾಗುತ್ತದೆ.

ಈ ದಿನದ ಉದ್ದೇಶ ಏನು?

ದುಡಿಯುವ ಜನರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಶೋಷಣೆಯಿಂದ ಅವರನ್ನು ರಕ್ಷಿಸಲು ಕಾರ್ಮಿಕರ ದಿನವನ್ನು ವಿಶ್ವದಾದ್ಯಂತ ಆಚರಿಸಲಾಗುತ್ತದೆ. ಇದು ನಮ್ಮ ಸಮಾಜದಲ್ಲಿ ಕಾರ್ಮಿಕ ವರ್ಗದ ಪ್ರಮುಖ ಪಾತ್ರವನ್ನು ನೆನಪಿಸುತ್ತದೆ. ಕಾರ್ಮಿಕರ ಶ್ರಮವನ್ನು ಗೌರವಿಸುವುದು ಮತ್ತು ಅವರ ಘನತೆಯನ್ನು ಎತ್ತಿ ಹಿಡಿಯುವುದು ಈ ದಿನದ ವಿಶೇಷವಾಗಿದೆ.

Continue Reading

ಮನಿ ಗೈಡ್

PF Balance Check: ಬಡ್ಡಿ ಬಂದಿದೆಯೋ ಇಲ್ಲವೋ… ಇಪಿಎಫ್ ಬ್ಯಾಲೆನ್ಸ್ ಚೆಕ್ ಮಾಡೋದು ಹೇಗೆ?

PF Balance Check: ಇನ್ನೇನು 2023 -2024ರ ಬಡ್ಡಿ ಹಣ ಇಪಿಎಫ್ ಖಾತೆಗೆ ಬೀಳಲಿದೆ. ನೌಕರರ ಭವಿಷ್ಯ ನಿಧಿ ಹೊಂದಿರುವ ಉದ್ಯೋಗಿಗಳು ತಮ್ಮ ಖಾತೆಗೆ ಇಪಿಎಫ್ ಬಡ್ಡಿ ಹಣ ಬಂದಿದೆಯೋ ಇಲ್ಲವೋ ಎಂಬುದನ್ನು ನೋಡಲು ನಾಲ್ಕು ದಾರಿಗಳಿವೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

PF Balance Check
Koo

ನವದೆಹಲಿ: ನೌಕರರ ಭವಿಷ್ಯ ನಿಧಿ (EPF) ಹೊಂದಿರುವ ಉದ್ಯೋಗಿಗಳಿಗೆ ಇನ್ನು ಕೆಲವೇ ದಿನಗಳಲ್ಲಿ 2023-2024ರ ಬಡ್ಡಿ ಹಣ (interest money) ಖಾತೆಗೆ ಬೀಳಲಿದೆ. ಹೀಗಾಗಿ ಈಗಾಗಲೇ ಇಪಿಎಫ್‌ಒ ಹೊಂದಿರುವ ಸದಸ್ಯರು ತಮ್ಮ ಖಾತೆಗೆ ಬಡ್ಡಿ ಹಣ (PF Balance Check) ಬಂದಿದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಲು ತೊಡಗಿದ್ದಾರೆ. ಸ್ಮಾರ್ಟ್ ಫೋನ್ (smart phone) ಕೈಯಲ್ಲಿ ಇರುವುದರಿಂದ ಈಗ ಇದು ಕಷ್ಟವೇನಲ್ಲ.

ಇಪಿಎಫ್ ಬಡ್ಡಿ ಕ್ರೆಡಿಟ್ ಸ್ಥಿತಿಯನ್ನು ಪರಿಶೀಲಿಸಲು ನಾಲ್ಕು ದಾರಿಗಳಿವೆ. ಆನ್‌ಲೈನ್ ಮೂಲಕ, ಸಂದೇಶ ಕಳುಹಿಸಿ, ಮಿಸ್ಡ್ ಕಾಲ್‌ ಅಥವಾ ಉಮಂಗ್ ಅಪ್ಲಿಕೇಶನ್ ಮೂಲಕ ಇಪಿಎಫ್ ಬಡ್ಡಿ ಕ್ರೆಡಿಟ್ ಆಗಿದೆಯೇ ಇಲ್ಲವೋ ಎಂದು ನೋಡಬಹುದು.

ಆನ್ ಲೈನ್ ನಲ್ಲಿ ಪರಿಶೀಲಿಸಿ

ಇಪಿಎಫ್ ಖಾತೆಯ ಬ್ಯಾಲೆನ್ಸ್ ಅನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸಲು epfindia.gov.in ಗೆ ಲಾಗಿನ್ ಮಾಡಿ. ಅಲ್ಲಿ UAN ಸಂಖ್ಯೆ, ಪಾಸ್‌ವರ್ಡ್ ಮತ್ತು ಕ್ಯಾಪ್ಚಾ ಕೋಡ್‌ ಅನ್ನು ಹಾಕಿ. ಬಳಿಕ ಇ-ಪಾಸ್‌ಬುಕ್ ಮೇಲೆ ಕ್ಲಿಕ್ ಮಾಡಿ. ಒಮ್ಮೆ ನೀವು ಎಲ್ಲಾ ವಿವರಗಳನ್ನು ಫೈಲ್ ಮಾಡಿದರೆ ಹೊಸ ಪುಟ ತೆರೆದುಕೊಳ್ಳುತ್ತದೆ. ಇಲ್ಲಿ ಸದಸ್ಯರ ಐಡಿ ತೆರೆದು ಖಾತೆಯಲ್ಲಿರುವ ಒಟ್ಟು EPF ಬ್ಯಾಲೆನ್ಸ್ ಅನ್ನು ನೋಡಬಹುದು.

ಇದನ್ನೂ ಓದಿ: Money Guide: ಮೇ 31ರೊಳಗೆ ಪ್ಯಾನ್‌-ಆಧಾರ್‌ ಲಿಂಕ್‌ ಆಗದಿದ್ದರೆ ಟಿಡಿಎಸ್ ದುಪ್ಪಟ್ಟು ಕಡಿತ; ಲಿಂಕ್‌ ಮಾಡುವ ವಿಧಾನ ಇಲ್ಲಿದೆ


ಉಮಂಗ್ ಅಪ್ಲಿಕೇಶನ್

ಉಮಂಗ್ ಅಪ್ಲಿಕೇಶನ್ ಮೂಲಕ EPF ಬ್ಯಾಲೆನ್ಸ್ ಅನ್ನು ಹೇಗೆ ಪರಿಶೀಲಿಸಲು UMANG ಅಪ್ಲಿಕೇಶನ್ ತೆರೆಯಿರಿ. EPFO ಮೇಲೆ ಕ್ಲಿಕ್ ಮಾಡಿ. ಉದ್ಯೋಗಿ ಕೇಂದ್ರಿತ ಸೇವೆಗಳ ಮೇಲೆ ಕ್ಲಿಕ್ ಮಾಡಿ, ಬಳಿಕ View Passbook ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ UAN ಸಂಖ್ಯೆ ಮತ್ತು ಪಾಸ್‌ವರ್ಡ್‌ ಫೀಡ್ ಮಾಡಿ. ನೋಂದಾಯಿತ ಮೊಬೈಲ್ ಸಂಖ್ಯೆಗೆ ಬರುವ ಒಟಿಪಿ ಅನ್ನು ಅಲ್ಲಿ ಹಾಕಿ ಇಪಿಎಫ್ ಬ್ಯಾಲೆನ್ಸ್ ಅನ್ನು ಪರಿಶೀಲಿಸಬಹುದು.

ಎಸ್‌ಎಂಎಸ್

ಇಪಿಎಫ್ ಬ್ಯಾಲೆನ್ಸ್ ಅನ್ನು ಎಸ್ ಎಂಎಸ್ ಕಳುಹಿಸಿಯೂ ಪರಿಶೀಲಿಸಬಹುದು. ಮೊಬೈಲ್ ಸಂಖ್ಯೆಯನ್ನು ಹೊರತುಪಡಿಸಿ, ಯುಎಎನ್ ಪೋರ್ಟಲ್‌ನಲ್ಲಿ ನೋಂದಾಯಿಸಲಾದ ಸದಸ್ಯರು ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗಳಿಂದ ಎಸ್ ಎಂಎಸ್ ಕಳುಹಿಸುವ ಮೂಲಕ ತಮ್ಮ ಪಿಎಫ್ ವಿವರಗಳನ್ನು ಪಡೆಯಬಹುದು. ಇದಕ್ಕಾಗಿ EPFOHO UAN ಅನ್ನು 7738299899ಗೆ ಎಸ್‌ಎಂಎಸ್ ಮಾಡಬೇಕು.

ಮಿಸ್ಡ್ ಕಾಲ್

ಮಿಸ್ಡ್ ಕಾಲ್ ನೀಡಿಯೂ ಇಪಿಎಫ್ ಬ್ಯಾಲೆನ್ಸ್ ಪರಿಶೀಲಿಸಬಹುದು. ಇದಕ್ಕಾಗಿ UAN ಪೋರ್ಟಲ್‌ನಲ್ಲಿ ನೋಂದಾಯಿಸಲಾದ EPFO ಚಂದಾದಾರರು UANನಲ್ಲಿ ನೋಂದಾಯಿಸಲಾದ ತಮ್ಮ ಮೊಬೈಲ್ ಸಂಖ್ಯೆಯಿಂದ 9966044425 ಈ ನಂಬರ್‌ಗೆ ಮಿಸ್ಡ್ ಕಾಲ್ ನೀಡುವ ಮೂಲಕ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ ತಮ್ಮ ಪಿಎಫ್ ವಿವರಗಳನ್ನು ಪಡೆಯಬಹುದು. ನೆನಪಿಡಿ, ನೀವು ಕರೆ ಮಾಡುವ ಸಂಖ್ಯೆ ನಿಮ್ಮ ಪಿಎಫ್‌ ಅಕೌಂಟ್‌ನಲ್ಲಿ ದಾಖಲಾಗಿರಬೇಕು.

Continue Reading

Lok Sabha Election 2024

Lok Sabha Election: ಒಂದೇ ಒಂದು ಕುಟುಂಬಕ್ಕಾಗಿ ಪ್ರತ್ಯೇಕ ಮತಗಟ್ಟೆ! ಹೀಗೂ ಉಂಟು!

Lok Sabha Election 2024: ಒಂದೇ ಕುಟುಂಬದ ಐದು ಮಂದಿಗಾಗಿ ಲೇಹ್ ಜಿಲ್ಲೆಯ ವಾಶಿ ಎಂಬ ಹಳ್ಳಿಯಲ್ಲಿಚುನಾವಣಾ ಅಧಿಕಾರಿಗಳು ಮತದಾನ ಕೇಂದ್ರವನ್ನು ಸ್ಥಾಪಿಸಿದ್ದಾರೆ. ಚುನಾವಣಾ ಆಯೋಗದ ಪ್ರಯತ್ನಗಳ ಭಾಗವಾಗಿ ಶೇ. 100ರಷ್ಟು ಮತದಾನವಾಗಬೇಕು ಎನ್ನುವ ಉದ್ದೇಶದಿಂದ ಚುನಾವಣಾ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕನೂ ಪಾಲ್ಗೊಳ್ಳಬೇಕು. ಇದಕ್ಕಾಗಿ ದೂರದೂರದ ಸ್ಥಳಗಳಲ್ಲೂ, ಅತ್ಯಲ್ಪ ಮತದಾರರು ಇರುವಲ್ಲೂ ಎಲ್ಲರಿಗೂ ಅನುಕೂಲವಾಗಬೇಕು ಎನ್ನುವ ಉದ್ದೇಶದಿಂದ ಮತದಾನ ಕೇಂದ್ರವನ್ನು ತೆರೆಯಲಾಗಿದೆ.

VISTARANEWS.COM


on

By

Lok Sabha Election-2024
Koo

ಶ್ರೀನಗರ: ಲೋಕಸಭಾ ಚುನಾವಣೆ 2024 (Lok Sabha Election-2024) ಹಲವು ವಿಶೇಷಗಳಿಗೆ ಸಾಕ್ಷಿಯಾಗಿದೆ. ಇದರಲ್ಲಿ ಕೇವಲ ಐದು ಮಂದಿ ಮತದಾರರಿಗಾಗಿ (voters) ಮತದಾನ ಕೇಂದ್ರವನ್ನು (voting booth) ತೆರೆದಿರುವುದು ಕೂಡ ಒಂದು. ಕೇಂದ್ರಾಡಳಿತ ಪ್ರದೇಶವಾದ ಲಡಾಖ್ ನ (Ladakh) ಲೇಹ್ (Leh) ಜಿಲ್ಲೆಯ ವಾಶಿ (Washi ) ಎಂಬ ದೂರದ ಹಳ್ಳಿಯಲ್ಲಿ ಒಂದು ಕುಟುಂಬದ ಐದು ಸದಸ್ಯರಿಗೆ ಚುನಾವಣಾ ಅಧಿಕಾರಿಗಳು ಮತದಾನ ಕೇಂದ್ರವನ್ನು ಸ್ಥಾಪಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಲಡಾಖ್ ನ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಯತೀಂದ್ರ ಎಂ. ಮರಾಲ್ಕರ್, ಲೇಹ್‌ನಿಂದ ಸುಮಾರು 170 ಕಿ.ಮೀ. ದೂರದಲ್ಲಿರುವ ನುಬ್ರಾದ ವಾಶಿ ಎಂಬ ದೂರದ ಹಳ್ಳಿಯಲ್ಲಿ ಟೆಂಟ್ ಅಡಿಯಲ್ಲಿ ಮತದಾನ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

ಚುನಾವಣಾ ಆಯೋಗದ ಪ್ರಯತ್ನಗಳ ಭಾಗವಾಗಿ ಶೇ. 100ರಷ್ಟು ಮತದಾನವಾಗಬೇಕು ಎನ್ನುವ ಉದ್ದೇಶದಿಂದ ಚುನಾವಣಾ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕನೂ ಪಾಲ್ಗೊಳ್ಳಬೇಕು. ಇದಕ್ಕಾಗಿ ದೂರದೂರದ ಸ್ಥಳಗಳಲ್ಲೂ, ಅತ್ಯಲ್ಪ ಮತದಾರರು ಇರುವಲ್ಲೂ ಎಲ್ಲರಿಗೂ ಅನುಕೂಲವಾಗಬೇಕು ಎನ್ನುವ ಉದ್ದೇಶದಿಂದ ಮತದಾನ ಕೇಂದ್ರವನ್ನು ತೆರೆಯಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Lok Sabha Election 2024: ಎಲೆಕ್ಷನ್‌ ಹೊತ್ತಲ್ಲೇ ಕಾಂಗ್ರೆಸ್‌ಗೆ ಬಿಗ್‌ ಶಾಕ್! ಕನ್ಹಯ್ಯ ಕುಮಾರ್‌ಗೆ ಸ್ವಪಕ್ಷದಲ್ಲೇ ವಿರೋಧ

ಮೇ 20ರಂದು ಮತದಾನ

ಲಡಾಖ್ ಲೋಕಸಭಾ ಸ್ಥಾನಕ್ಕೆ ಮೇ 20ರಂದು 5ನೇ ಹಂತದಲ್ಲಿ ಮತದಾನ ನಡೆಯಲಿದೆ. ಆರ್ಟಿಕಲ್ 370 ಅನ್ನು ರದ್ದುಗೊಳಿಸಿದ ಅನಂತರ ಮತ್ತು ಜಮ್ಮು ಮತ್ತು ಕಾಶ್ಮೀರದ ರಾಜ್ಯವನ್ನು ಎರಡು ಯುಟಿಗಳಾಗಿ ವಿಭಜಿಸಿದಬಳಿಕ ಶೀತ ಮರುಭೂಮಿ ಪ್ರದೇಶದಲ್ಲಿ ಮೊದಲ ಬಾರಿಗೆ ಮತದಾನ ನಡೆಯಲಿದೆ.


ಐವರು ಮತದಾರರು

ಒಂದೇ ಕುಟುಂಬದ ಐವರು ಗ್ರಾಮದಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದು, ಟೆಂಟ್‌ ಹಾಕಿದ ಮತಗಟ್ಟೆ ಅವರ ಮನೆ ಬಾಗಿಲಿಗೆ ಬಂದಿದೆ ಎಂದು ಮಾರಲ್ಕರ್ ಹೇಳಿದರು.

ಕುಟುಂಬವು ಆರು ಸದಸ್ಯರನ್ನು ಒಳಗೊಂಡಿದೆ ಮತ್ತು ಅವರಲ್ಲಿ ಇಬ್ಬರು ಪುರುಷರು ಮತ್ತು ಮೂವರು ಮಹಿಳೆಯರು ಮತ ಚಲಾಯಿಸಲು ಅರ್ಹರಾಗಿದ್ದಾರೆ. ಕುಟುಂಬದ ಮುಖ್ಯಸ್ಥ ರೈತನಾಗಿದ್ದಾನೆ.

ಲಡಾಖ್ ನಲ್ಲಿ 1,82,571 ಮತದಾರರು

ಲಡಾಖ್ ಯುಟಿಯು ಎರಡು ಜಿಲ್ಲೆಗಳನ್ನು ಒಳಗೊಂಡಿದೆ. ಮುಸ್ಲಿಂ ಪ್ರಾಬಲ್ಯದ ಕಾರ್ಗಿಲ್ ಮತ್ತು ಬೌದ್ಧ ಪ್ರಾಬಲ್ಯದ ಲೇಹ್. 91,703 ಪುರುಷರು ಮತ್ತು 90868 ಮಹಿಳೆಯರು ಸೇರಿದಂತೆ ಒಟ್ಟು 1,82,571 ಮತದಾರರು ಇಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದಾರೆ.

577 ಮತಗಟ್ಟೆಗಳು

ಚುನಾವಣಾ ಆಯೋಗವು ಯುಟಿಯಾದ್ಯಂತ 577 ಮತಗಟ್ಟೆಗಳನ್ನು ಸ್ಥಾಪಿಸಿದೆ. ಇದರಲ್ಲಿ 33 ನಗರ ಮತ್ತು 544 ಗ್ರಾಮೀಣ ಪ್ರದೇಶಗಳಲ್ಲಿ ಸೇರಿವೆ. ಲಡಾಖ್‌ನಲ್ಲಿ ಕೆಲವು ಮತಗಟ್ಟೆಗಳ ದುರ್ಗಮತೆಯನ್ನು ಗಮನದಲ್ಲಿಟ್ಟುಕೊಂಡು ದೂರದ ಹಳ್ಳಿಗಳಿಗೆ ಚುನಾವಣಾ ಸಾಮಗ್ರಿಗಳು ಮತ್ತು ಸಿಬ್ಬಂದಿಯನ್ನು ವಿಮಾನದಲ್ಲಿ ರವಾನಿಸಲಾಗುತ್ತದೆ.

Continue Reading

Latest

Politicians Scandals : ದೇಶದ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಲೈಂಗಿಕ ಹಗರಣಗಳಿವು!

Politicians Scandals: ರಾಜಕೀಯ ನಾಯಕರ ಮೇಲೆ ಆರೋಪಗಳು ಕೇಳಿ ಬರುವುದು ಸಾಮಾನ್ಯ. ಆದರೆ ಲೈಂಗಿಕ ಕಿರುಕುಳದ ಆರೋಪವು ಹಲವಾರು ಜನ ನಾಯಕರ ರಾಜಕೀಯ ಜೀವನವನ್ನು ತತ್ತರಿಸುವಂತೆ ಮಾಡಿತ್ತು. ಇದರಲ್ಲಿ ಪ್ರಮುಖ ಪ್ರಕರಣಗಳ ಹಿನ್ನೋಟ ಇಲ್ಲಿದೆ.

VISTARANEWS.COM


on

By

Politicians Scandals
Koo

ನವದೆಹಲಿ: ರಾಜಕಾರಣದಲ್ಲಿ (politics) ಆರೋಪ, ಪ್ರತ್ಯಾರೋಪಗಳು (Politicians Scandals) ಸಾಮಾನ್ಯ. ಕೆಲವೊಮ್ಮೆ ಈ ಆರೋಪಗಳು ಎಷ್ಟು ಗಂಭೀರವಾಗಿರುತ್ತದೆ ಎಂದರೆ ರಾಜಕಾರಣಿಗಳ ರಾಜಕೀಯ ಭವಿಷ್ಯವನ್ನೇ ಬುಡಮೇಲು ಮಾಡಿ ಬಿಡುತ್ತವೆ. ಇಂತಹ ಆರೋಪಗಳಲ್ಲಿ ಮುಖ್ಯವಾದದದ್ದು ಲೈಂಗಿಕ ಹಗರಣಗಳು.

ಆಕ್ಷೇಪಾರ್ಹ ಸಿಡಿಗಾಗಿ (CD case) ಆಪ್ ನ (AAP) ಸಚಿವ ಸಂಪುಟದಲ್ಲಿ ಮಕ್ಕಳ ಕಲ್ಯಾಣ ಮತ್ತು ಸಾಮಾಜಿಕ ನ್ಯಾಯದ ಸಚಿವರಾಗಿದ್ದ ಸಂದೀಪ್ ಕುಮಾರ್ (sundeep kumar) ಅವರನ್ನು ದೆಹಲಿ (delhi) ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು 2016ರಲ್ಲಿ ಸಚಿವ ಸಂಪುಟದಿಂದ ವಜಾಗೊಳಿಸಿದ್ದರು. ಲೈಂಗಿಕ ಹಗರಣದಿಂದಾಗಿ ರಾಜಕೀಯ ಜೀವನ ತತ್ತರಿಸಿ ಹೋದ ದೊಡ್ಡ ರಾಜಕಾರಣಿ ಇವರು ಮೊದಲೇನಲ್ಲ. ಲೈಂಗಿಕ ಹಗರಣ ಅನೇಕ ರಾಜಕಾರಣಿಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿತ್ತು. ಭಾರತೀಯ ರಾಜಕೀಯವನ್ನು ಅಲುಗಾಡಿಸಿರುವ 15 ಪ್ರಮುಖ ಲೈಂಗಿಕ ಹಗರಣಗಳ ಪಟ್ಟಿ ಇಲ್ಲಿದೆ.

ಇದನ್ನೂ ಓದಿ: PM Narendra Modi: ಸಂಪತ್ತು ಮರುಹಂಚಿಕೆಯ ರಾಹುಲ್ ಗಾಂಧಿ ಐಡಿಯಾ ನಗರ ನಕ್ಸಲ್ ಚಿಂತನೆ: ಪಿಎಂ ಮೋದಿ


ರಾಘವಜಿ ಲಖಂಸಿ ಸವಲಾ

2013ರಲ್ಲಿ ಮಧ್ಯಪ್ರದೇಶದ ಹಣಕಾಸು ಸಚಿವ ರಾಘವಜಿ ಲಖಂಸಿ ಸವಾಲಾ ವಿರುದ್ಧ ಮನೆಕೆಲಸಗಾರನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿತ್ತು. ಕಾಯಂ ಸರ್ಕಾರಿ ನೌಕರಿ ಕೊಡಿಸುವ ಆಮಿಷವೊಡ್ಡಿ ಸಚಿವರು ತನಗೆ ಕಿರುಕುಳ ನೀಡಿರುವುದಾಗಿ ಸಂತ್ರಸ್ತ ವ್ಯಕ್ತಿ ಆರೋಪಿಸಿದ್ದ. ಆಗ ರಾಘವಜಿಗೆ 79 ವರ್ಷ. ಸಿಡಿ ಹೊರಬಿದ್ದ ಕೂಡಲೇ ರಾಘವಜಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು.

ಬಾಬುಲಾಲ್ ನಗರ್

2013ರಲ್ಲಿ ಜೈಪುರದ ಮಹಿಳೆಯೊಬ್ಬರು ರಾಜಸ್ಥಾನದ ಮಾಜಿ ಸಚಿವ ಬಾಬುಲಾಲ್ ನಗರ್ ವಿರುದ್ಧ ಲೈಂಗಿಕವಾಗಿ ಶೋಷಣೆ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಸಚಿವರು ಸರ್ಕಾರಿ ನೌಕರಿ ಕೊಡಿಸುವುದಾಗಿ ಭರವಸೆ ನೀಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿತ್ತು. ಸಚಿವರ ವಿರುದ್ಧ ಬೆದರಿಕೆ ಆರೋಪವೂ ಕೇಳಿ ಬಂದಿತ್ತು. ಈ ಆರೋಪಗಳ ಹಿನ್ನೆಲೆಯಲ್ಲಿ ನಾಗರ್ ರಾಜೀನಾಮೆ ನೀಡಬೇಕಾಯಿತು.

ಗೋಪಾಲ್ ಕಾಂಡಾ

ಗಗನಸಖಿ ಗೀತಿಕಾ ಶರ್ಮಾ ಅವರು ಹರಿಯಾಣದ ಮಾಜಿ ಸಚಿವ ಗೋಪಾಲ್‌ ಕಾಂಡಾ ಅವರಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದಾರೆ ಎಂದು ಆರೋಪಿಸಲಾಗಿತ್ತು. ಗೀತಿಕಾ MLDR ಏರ್‌ಲೈನ್ಸ್‌ನಲ್ಲಿ ಉದ್ಯೋಗಿಯಾಗಿದ್ದರು. ಆದರೆ ಕಾಂಡಾ ನೀಡಿದ ಲೈಂಗಿಕ ಕಿರುಕುಳದ ಅನಂತರ ಅವರು 2012ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆ ಪತ್ರದಲ್ಲಿ ಗೀತಿಕಾ ಅವರು ತಮ್ಮ ಜೀವನ ಕೊನೆಯಾಗಲು ಕಾಂಡಾ ಅವರೇ ಕಾರಣ ಎಂದು ಆರೋಪಿಸಿದ್ದರು. ಬಳಿಕ ಕಾಂಡಾ ಅವರನ್ನು ಬಂಧಿಸಲಾಗಿದ್ದು, 2014ರಲ್ಲಿ ಅವರಿಗೆ ದೆಹಲಿ ಹೈಕೋರ್ಟ್‌ನಿಂದ ಜಾಮೀನು ನೀಡಲಾಯಿತು.

ಮಹಿಪಾಲ್ ಮಡೆರ್ನಾ

2011ರಲ್ಲಿ ಭನ್ವಾರಿ ದೇವಿ ಲೈಂಗಿಕ ಹಗರಣದಲ್ಲಿ ಆಗಿನ ರಾಜಸ್ಥಾನದ ಜಲಸಂಪನ್ಮೂಲ ಸಚಿವ ಮಹಿಪಾಲ್ ಮಡೆರ್ನಾ ಭಾಗಿಯಾಗಿದ್ದು, ಅಶೋಕ್ ಗೆಹ್ಲೋಟ್ ಸರ್ಕಾರವನ್ನು ಅಲುಗಾಡಿಸಿತು. ಭನ್ವಾರಿ ದೇವಿ ಸಹಾಯಕ ನರ್ಸ್ ಆಗಿದ್ದರು. ಆಕೆ ನಾಪತ್ತೆಯಾಗಿದ್ದು, ಮಡೆರ್ನಾ ಆಕೆಯನ್ನು ಅಪಹರಿಸಿದ್ದಾರೆ ಎಂದು ಆಕೆಯ ಪತಿ ಆರೋಪಿಸಿದಾಗ ಪ್ರಕರಣ ಬೆಳಕಿಗೆ ಬಂದಿತು. ಭನ್ವಾರಿ ದೇವಿ ಅವರೊಂದಿಗೆ ಮಡೆರ್ನಾ ರಾಜಿ ಮಾಡಿಕೊಳ್ಳಲು ಪ್ರಯತ್ನಿಸಿದರು. ಅಂತಿಮವಾಗಿ, ಗೆಹ್ಲೋಟ್ ಸರ್ಕಾರದಿಂದ ಮಡೆರ್ನಾ ಅವರನ್ನು ವಜಾಗೊಳಿಸಲಾಯಿತು.


ಎನ್‌ ಡಿ ತಿವಾರಿ

ಹಿರಿಯ ಕಾಂಗ್ರೆಸ್ ನಾಯಕ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಮಾಜಿ ಮುಖ್ಯಮಂತ್ರಿಯಾಗಿದ್ದ ಎನ್ ಡಿ ತಿವಾರಿ ಅವರು 2009ರಲ್ಲಿ ಆಂಧ್ರಪ್ರದೇಶದ ರಾಜ್ಯಪಾಲರಾಗಿದ್ದರು. ಆಗ ಅವರಿಗೆ 85 ವರ್ಷ. ರಾಜಭವನದಲ್ಲಿ ಲೈಂಗಿಕ ಕಿರುಕುಳದಲ್ಲಿ ಭಾಗಿಯಾಗಿರುವ ಆರೋಪ ಕೇಳಿ ಬಂದ ಅನಂತರ ತಿವಾರಿ ರಾಜೀನಾಮೆ ನೀಡಿದ್ದರು.
2008ರಲ್ಲಿ ರೋಹಿತ್ ಶೇಖರ್ ತಿವಾರಿ ಅವರು ಎನ್ ಡಿ ತಿವಾರಿ ಅವರು ತಮ್ಮ ತಂದೆ ಎಂದು ಹೇಳಿಕೊಂಡು ಪಿತೃತ್ವ ಮೊಕದ್ದಮೆಯನ್ನು ಹೂಡಿದರು. ತಿವಾರಿ ಅವರ ಡಿಎನ್‌ಎ ಮ್ಯಾಪಿಂಗ್ ಮಾಡುವಂತೆ ಕೋರ್ಟ್ ಆದೇಶಿಸಿತ್ತು. 2012ರಲ್ಲಿ ಡಿಎನ್‌ಎ ಪರೀಕ್ಷೆಯಿಂದ ತಿವಾರಿ ರೋಹಿತ್ ಶೇಖರ್ ತಿವಾರಿಯ ಜೈವಿಕ ತಂದೆ ಎಂದು ದೃಢಪಡಿಸಿತು.


ಸಂಜಯ್ ಜೋಷಿ

2005ರಲ್ಲಿ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಆಗಿದ್ದ ಸಂಜಯ್ ಜೋಶಿ ಅವರಿಗೆ ಲೈಂಗಿಕ ಹಗರಣ ಆರೋಪ ವೈಯಕ್ತಿಕ ಮತ್ತು ಸಾರ್ವಜನಿಕ ಜೀವನದಲ್ಲಿ ಭಾರಿ ಹಿನ್ನಡೆ ಉಂಟು ಮಾಡಿತ್ತು. ಬಿಜೆಪಿಯಲ್ಲಿ ಅವರು ಆರ್‌ಎಸ್‌ಎಸ್‌ ಪ್ರತಿನಿಧಿಯಾಗಿದ್ದರು. ಆದರೆ ಲೈಂಗಿಕ ಹಗರಣದಿಂದಾಗಿ ಅವರು ತಮ್ಮ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಕಳೆದುಕೊಳ್ಳಬೇಕಾಯಿತು. ಅನಂತರ ಅವರನ್ನು ಪಕ್ಷಕ್ಕೆ ಮತ್ತೆ ಸೇರಿಸಿಕೊಳ್ಳಲಾಯಿತು. ಆದರೆ ಅವರ ಮೇಲಿನ ಆರೋಪದಿಂದ ಅವರಿಗೆ ಹಿಂದಿದ್ದ ಅಧಿಕಾರ ಮರಳಿ ಸಿಗಲಿಲ್ಲ. ಜೋಶಿ ಅವರು ಮಹಿಳೆಯೊಂದಿಗಿದ್ದ ಸಿಡಿ ಭಾರಿ ಸದ್ದು ಮಾಡಿತ್ತು. ಆ ಬಳಿಕ ತನಿಖೆ ನಡೆದು, ಅದು ನಕಲಿ ಸಿಡಿ ಎಂಬ ವರದಿ ಬಂದಿತ್ತು.

ಅಮರಮಣಿ ತ್ರಿಪಾಠಿ

ಉತ್ತರ ಪ್ರದೇಶದ ಮಾಜಿ ಸಚಿವ ಅಮರಮಣಿ ತ್ರಿಪಾಠಿ ಅವರು ಕವಯಿತ್ರಿ ಮಧುಮಿತಾ ಶುಕ್ಲಾ ಅವರನ್ನು ಕೊಂದಿದ್ದಕ್ಕಾಗಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದರು. ಮಧುಮಿತಾರನ್ನು ತ್ರಿಪಾಠಿ ಪದೇಪದೇ ಬೆದರಿಕೆ ಹಾಕಿದ ಮತ್ತು ಗರ್ಭಪಾತ ಮಾಡಿಸಿಕೊಳ್ಳಲು ಬಲವಂತಪಡಿಸಿದ ಆರೋಪ ಕೇಳಿ ಬಂದಿತ್ತು. ಮಧುಮಿತಾ 2003ರಲ್ಲಿ ಗುಂಡೇಟಿಗೆ ಬಲಿಯಾಗಿದ್ದರು. ಈ ಹತ್ಯೆ ಉತ್ತರ ಪ್ರದೇಶದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿದ್ದು, ಮಾಯಾವತಿ ಸಂಪುಟದಿಂದ ತ್ರಿಪಾಠಿ ನಿರ್ಗಮನಕ್ಕೆ ಕಾರಣವಾಗಿತ್ತು.

ಹರಕ್ ಸಿಂಗ್ ರಾವತ್

ಉತ್ತರಾಖಂಡದ ಕಂದಾಯ ಸಚಿವರ ಮೇಲೆ 2003ರಲ್ಲಿ ಅಸ್ಸಾಮಿ ಮಹಿಳೆಯೊಬ್ಬರು ತನ್ನ ನವಜಾತ ಮಗುವಿನ ತಂದೆ ಎಂದು ಆರೋಪಿಸಿದರು. ಮಗುವಿನ ಡಿಎನ್‌ಎ ಕಾಂಗ್ರೆಸ್ ನಾಯಕನ ಡಿಎನ್‌ಎಗೆ ಹೊಂದಿಕೆಯಾಗುತ್ತಿಲ್ಲ ಎಂದು ಸಿಬಿಐ ತನ್ನ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರಿಂದ ಪ್ರಕರಣ ಆ ಬಳಿಕ ಮಹತ್ವ ಕಳೆದುಕೊಂಡಿತ್ತು.

ಸಾಧು ಯಾದವ್

ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ಸೋದರ ಮಾವ ಸಾಧು ಯಾದವ್ ಅವರಿಗೆ ಸಂಬಂಧಿಸಿ 1999ರಲ್ಲಿ ಹೈ ಪ್ರೊಫೈಲ್ ಲೈಂಗಿಕ ಹಗರಣಕ್ಕೆ ಬಿಹಾರ ಸಾಕ್ಷಿಯಾಯಿತು. ಬಾಲಕಿ ಶಿಲ್ಪಿ ಜೈನ್ ಮತ್ತು ಆಕೆಯ ಸ್ನೇಹಿತ ಗೌತಮ್ ಅವರ ಕೊಲೆ ನಡೆದಿತ್ತು. ಶಿಲ್ಪಿ ಮತ್ತು ಗೌತಮ್ ಇಬ್ಬರೂ ಸಾಧುಗೆ ಸ್ನೇಹಿತರಾಗಿದ್ದರು. ಅವರ ದೇಹಗಳು ಅರೆ ನಗ್ನ ಸ್ಥಿತಿಯಲ್ಲಿ ಕಾರಿನೊಳಗೆ ಪತ್ತೆಯಾಗಿದ್ದವು. ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಿಬಿಐ ಅಂತಿಮವಾಗಿ ವರದಿ ನೀಡಿತು. ಆಕೆಯ ಮೇಲೆ ಅತ್ಯಾಚಾರವೆಸಗಲಾಗಿದೆ ಮತ್ತು ಗೌತಮ್ ಆಕೆಯ ರಕ್ಷಣೆಗೆ ಬಂದಾಗ ಅವರಿಬ್ಬರಿಗೆ ಬಲವಂತವಾಗಿ ವಿಷ ಕುಡಿಸಲಾಯಿತು ಎಂದು ಆರೋಪಿಸಲಾಗಿತ್ತು.


ಗೋಪಿನಾಥ್ ಮುಂಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಗೋಪಿನಾಥ್ ಮುಂಡೆ ಮತ್ತು ನೃತ್ಯಗಾರ್ತಿ ಬರ್ಖಾ ಪಾಟೀಲ್ ಅಕ್ರಮ ಸಂಬಂಧ 1997ರಲ್ಲಿ ಬಹಿರಂಗವಾಗಿತ್ತು. ಮುಂಡೆ ಈ ಆರೋಪಗಳನ್ನು ನಿರಾಕರಿಸಿದ್ದರು. ಆದರೆ ಆ ದಿನಗಳಲ್ಲಿ ಈ ಪ್ರಕರಣ ಭಾರಿ ಸದ್ದು ಮಾಡಿತ್ತು.

ಜಲಗಾಂವ್ ಅತ್ಯಾಚಾರ ಪ್ರಕರಣ

ಪ್ರಭಾವಿ ರಾಜಕಾರಣಿಗಳು, ಉದ್ಯಮಿಗಳು ಮತ್ತು ಅಧಿಕಾರಿಗಳು ಜಲಗಾಂವ್ ಪಟ್ಟಣದಲ್ಲಿ ಲೈಂಗಿಕ ದಂಧೆಯನ್ನು ನಡೆಸುತ್ತಿದ್ದ ಪ್ರಕರಣ ಭಾರಿ ಕೋಲಾಹಲ ಸೃಷ್ಟಿಸಿತ್ತು. ಇವರ ಗ್ಯಾಂಗ್‌ ಶಾಲಾ-ಕಾಲೇಜಿಗೆ ಹೋಗುವ ಹುಡುಗಿಯರನ್ನು ತಮ್ಮ ಬಲೆಗೆ ಬೀಳಿಸಿ, ಅವರ ಮೇಲೆ ಅತ್ಯಾಚಾರ ನಡೆಸಿ ಬಳಿಕ ಅವರನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಕಾಂಗ್ರೆಸ್ಸಿಗರನ್ನು ಬಂಧಿಸಲಾಯಿತು. ಆದರೆ ಸಾಕ್ಷ್ಯಾಧಾರದ ಕೊರತೆಯಿಂದ ಹಲವು ವರ್ಷಗಳ ಬಳಿಕ ಖುಲಾಸೆಗೊಳಿಸಲಾಯಿತು.

ಬಿಹಾರದಲ್ಲಿ ಬಾಬಿ ಕೊಲೆ

1980ರಲ್ಲಿ ನಡೆದ ಬಾಬಿ ಕೊಲೆ ಪ್ರಕರಣದಲ್ಲಿ ಮಾಜಿ ಸ್ಪೀಕರ್ ಪುತ್ರ ಸೇರಿದಂತೆ ಹಲವು ಯೂತ್ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು ಎನ್ನಲಾಗಿತ್ತು. ಬಾಬಿ ಸೆಕ್ರೆಟರಿಯೇಟ್‌ನಲ್ಲಿ ಟೆಲಿಫೋನ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದಳು. ಆಕೆ ನಿಗೂಢವಾಗಿ ಕೊಲೆಯಾಗಿದ್ದಳು. ಇವರನ್ನು ಯುವ ಕಾಂಗ್ರೆಸ್‌ ಮುಖಂಡರು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಆಪಾದಿಸಲಾಗಿತ್ತು.


ಪಿಕೆ ಕುನ್ಹಾಲಿಕುಟ್ಟಿ

1997ರಲ್ಲಿ ಐಸ್ ಕ್ರೀಮ್ ಪಾರ್ಲರ್ ಲೈಂಗಿಕ ಹಗರಣವು ಕೇರಳವನ್ನು ಬೆಚ್ಚಿಬೀಳಿಸಿತು. ಈ ಪ್ರಕರಣದಲ್ಲಿ ಐಯುಎಂಎಲ್‌ಗೆ ಸೇರಿದ ಸಚಿವ ಪಿ.ಕೆ.ಕುನ್ಹಾಲಿಕುಟ್ಟಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದರು. ಯುವತಿಯರನ್ನು ವೇಶ್ಯಾವಾಟಿಕೆಗೆ ಸೆಳೆಯಲು ಕೋಝಿಕ್ಕೋಡ್‌ನಲ್ಲಿರುವ ಐಸ್‌ಕ್ರೀಂ ಪಾರ್ಲರ್‌ ಅನ್ನು ಬಳಸಲಾಗುತ್ತಿತ್ತು ಎಂಬ ಆರೋಪ ಕೇಳಿ ಬಂದಿತ್ತು. ಈ ಆರೋಪದ ಹಿನ್ನೆಲೆಯಲ್ಲಿ ಕುನ್ಹಾಲಿಕುಟ್ಟಿ ಕೈಗಾರಿಕೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಅವರು ಈ ಪ್ರಕರಣದಿಂದ ಖುಲಾಸೆಯಾಗಿದ್ದರು.

ಸುರೇಶ್ ರಾಮ್

1978ರಲ್ಲಿ ಜಗಜೀವನ್ ರಾಮ್ ಅವರ ಮಗ ಸುರೇಶ್ ರಾಮ್ ಲೈಂಗಿಕ ಹಗರಣದಲ್ಲಿ ಸಿಕ್ಕಿಹಾಕಿಕೊಂಡಿದ್ದರು. ಇದರಿಂದಾಗಿ, ಸ್ವತಂತ್ರ ಭಾರತದ ಮೊದಲ ದಲಿತ ಪ್ರಧಾನಿ ಆಗುವ ಅವಕಾಶದಿಂದ ಜಗಜೀವನ್ ರಾಮ್ ವಂಚಿತರಾದರು ಎಂದು ವ್ಯಾಖ್ಯಾನಿಸಲಾಗುತ್ತದೆ. ಸುರೇಶ್ ಅವರ ನಗ್ನ ಚಿತ್ರಗಳನ್ನು ನಿಯತಕಾಲಿಕವೊಂದರಲ್ಲಿ ಪ್ರಕಟಿಸಲಾಯಿತು. ಈ ಹಗರಣವನ್ನು ಬಯಲು ಮಾಡುವಲ್ಲಿ ಇಂದಿರಾ ಗಾಂಧಿಯವರ ಸೊಸೆ ಮೇನಕಾ ಗಾಂಧಿ ಪ್ರಮುಖ ಪಾತ್ರ ವಹಿಸಿದ್ದರು.

Continue Reading
Advertisement
Sadhguru Jaggi Vasudev
ಬೆಂಗಳೂರು5 mins ago

Sadhguru Jaggi Vasudev: ಮೆದುಳಿನ ಶಸ್ತ್ರಚಿಕಿತ್ಸೆಯ ತಿಂಗಳ ಬಳಿಕ ಕಾಂಬೋಡಿಯಾಗೆ ಸದ್ಗುರು ಪ್ರವಾಸ

Justin Trudeau
ದೇಶ10 mins ago

Justin Trudeau: ಕೆನಡಾ ಪ್ರಧಾನಿ ಕಾರ್ಯಕ್ರಮದಲ್ಲಿ ಖಲಿಸ್ತಾನ ಪರ ಘೋಷಣೆ; ಭಾರತ ಸಮನ್ಸ್!

M P Rudramba
ಕರ್ನಾಟಕ27 mins ago

M P Rudramba: ಮಾಜಿ ಡಿಸಿಎಂ ದಿವಂಗತ ಎಂ.ಪಿ. ಪ್ರಕಾಶ್ ಧರ್ಮ ಪತ್ನಿ ರುದ್ರಾಂಬಾ ನಿಧನ

KKR vs DC
ಕ್ರೀಡೆ36 mins ago

KKR vs DC: ಡೆಲ್ಲಿಗೆ ನೀರು ಕುಡಿಸಿದ ಸಾಲ್ಟ್​; ಪಂತ್​ ಪಡೆಯ ಪ್ಲೇ ಆಫ್ ಹಾದಿ ದುರ್ಗಮ

Patanjali
ದೇಶ45 mins ago

Patanjali: ಪತಂಜಲಿಯ 14 ಉತ್ಪನ್ನಗಳ ಲೈಸೆನ್ಸ್‌ ರದ್ದು, ಬಾಬಾ ರಾಮದೇವ್‌ ವಿರುದ್ಧ ಬಿತ್ತು ಕೇಸ್

Murder Case
ಕರ್ನಾಟಕ52 mins ago

Murder Case: ಹೆಂಡ್ತಿ ಬಿಟ್ಟು ಹೋಗುತ್ತಾಳೆಂದು ಕತ್ತು ಸೀಳಿ ಕೊಂದ ಪತಿರಾಯ!

CM Siddaramaiah inaugurated by prajadhwani lok sabha election campaign meeting at kushtagi
ಕೊಪ್ಪಳ1 hour ago

Lok Sabha Election 2024: ನಾಯಕತ್ವ ಕೊರತೆ ಇರುವುದು ಬಿಜೆಪಿಗೆ ಎಂದ ಸಿದ್ದರಾಮಯ್ಯ

DCM D K Shivakumar Latest statement in Belagavi
ಪ್ರಮುಖ ಸುದ್ದಿ1 hour ago

DK Shivakumar: ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಬಿಜೆಪಿ ನಿಲುವೇನು; ಶಿವಕುಮಾರ್ ಪ್ರಶ್ನೆ

Murder Case
ಕರ್ನಾಟಕ1 hour ago

Murder Case: ದ್ವಿತೀಯ ಪಿಯುಸಿಯಲ್ಲಿ ಮಾರ್ಕ್ಸ್‌ ಕಡಿಮೆ ಬಂದಿದ್ದಕ್ಕೆ ಚಾಕು ಇರಿದು ಮಗಳನ್ನೇ ಕೊಂದ ತಾಯಿ!

Chandrayaan 3
ದೇಶ2 hours ago

Chandrayaan 3: ಚಂದ್ರಯಾನ 3 ಆಗುತ್ತಿತ್ತು ಛಿದ್ರ; ಆ 4 ಸೆಕೆಂಡ್‌ಗಳಲ್ಲೇ ಮಿಷನ್‌ ಬಚಾವ್‌ ಆಗಿದ್ದು ಹೇಗೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 202411 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 202412 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ19 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20241 day ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌