Ragging Case: ಜೂನಿಯರ್ ವಿದ್ಯಾರ್ಥಿಗಳನ್ನು ಕ್ರೂರವಾಗಿ ಥಳಿಸಿದ ಸೀನಿಯರ್‌ಗಳು! ತಲ್ಲಣ ಮೂಡಿಸುವ ವಿಡಿಯೊ - Vistara News

Latest

Ragging Case: ಜೂನಿಯರ್ ವಿದ್ಯಾರ್ಥಿಗಳನ್ನು ಕ್ರೂರವಾಗಿ ಥಳಿಸಿದ ಸೀನಿಯರ್‌ಗಳು! ತಲ್ಲಣ ಮೂಡಿಸುವ ವಿಡಿಯೊ

Ragging Case: ಎನ್‍ಸಿಸಿ ತರಬೇತಿಯ ನೆಪದಲ್ಲಿ ಸೀನಿಯರ್ ವಿದ್ಯಾರ್ಥಿಗಳ ಗುಂಪು ಮಧ್ಯರಾತ್ರಿಯಲ್ಲಿ ಜೂನಿಯರ್ ವಿದ್ಯಾರ್ಥಿಗಳನ್ನು ತಮ್ಮ ಕೋಣೆಗೆ ಕರೆದು ಕೋಲುಗಳಿಂದ ಹೊಡೆದಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವಿಡಿಯೊದಲ್ಲಿ, ಜೂನಿಯರ್ ವಿದ್ಯಾರ್ಥಿಗಳನ್ನು ಹೊಡೆಯುವ ಮುನ್ನ ಅವರನ್ನು ಮಲಗಿಸಿ ನಂತರ ಕೋಲುಗಳಿಂದ ಎಲ್ಲರೂ ಹೊಡೆಯುತ್ತಾರೆ. ಸೀನಿಯರ್ ವಿದ್ಯಾರ್ಥಿಗಳು ತಾವು ಮಾಡಿದ ಕಾರ್ಯಕ್ಕೆ ನಗುತ್ತಾ ತಮಾಷೆ ಮಾಡಿಕೊಳ್ಳುತ್ತಿದ್ದರೆ ಪೆಟ್ಟು ತಿಂದ ಜೂನಿಯರ್ ವಿದ್ಯಾರ್ಥಿಗಳು ಅಳುತ್ತಿದ್ದಾರೆ. ಬೇಸರ ಮೂಡಿಸುವ ವಿಡಿಯೊ ಇದು.

VISTARANEWS.COM


on

Ragging Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಠಿಣ ಕಾನೂನು ಜಾರಿಯಾದ ಬಳಿಕವೂ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಆಗಾಗ ರ‍್ಯಾಗಿಂಗ್ ಮಾಡುತ್ತಲೇ ಇರುತ್ತಾರೆ. ಆಂಧ್ರಪ್ರದೇಶದ ಪಲ್ನಾಡಿನ ಎಸ್ಎಸ್ಎನ್ ಕಾಲೇಜಿನಲ್ಲಿ ನಡೆದ ರ‍್ಯಾಗಿಂಗ್ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಅದರ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ (Ragging Case) ಸಂಚಲನ ಮೂಡಿಸಿದೆ.

ಎನ್‍ಸಿಸಿ ತರಬೇತಿ ನೆಪದಲ್ಲಿ ಸೀನಿಯರ್ ವಿದ್ಯಾರ್ಥಿಗಳ ಗುಂಪು ಮಧ್ಯರಾತ್ರಿಯಲ್ಲಿ ಜೂನಿಯರ್ ವಿದ್ಯಾರ್ಥಿಗಳನ್ನು ತಮ್ಮ ಕೋಣೆಗೆ ಕರೆದು ಕೋಲುಗಳಿಂದ ಹೊಡೆದಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಗುರುವಾರ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವಿಡಿಯೊದಲ್ಲಿ, ಜೂನಿಯರ್ ವಿದ್ಯಾರ್ಥಿಗಳನ್ನು ಹೊಡೆಯುವ ಮುನ್ನ ಅವರನ್ನು ಮಲಗಿಸಿ ನಂತರ ಕೋಲುಗಳಿಂದ ಎಲ್ಲರೂ ಹೊಡೆಯುತ್ತಾರೆ. ಸೀನಿಯರ್ ವಿದ್ಯಾರ್ಥಿಗಳು ತಾವು ಮಾಡಿದ ಕಾರ್ಯಕ್ಕೆ ನಗುತ್ತಾ ತಮಾಷೆ ಮಾಡಿಕೊಳ್ಳುತ್ತಿದ್ದರೆ ಪೆಟ್ಟು ತಿಂದ ಜೂನಿಯರ್ ವಿದ್ಯಾರ್ಥಿಗಳು ಅಳುತ್ತಿದ್ದಾರೆ. ಆ ಕೋಣೆಯೊಳಗೆ ಯಾರೋ ಈ ಕೃತ್ಯವನ್ನು ವಿಡಿಯೊ ಮಾಡಿದ್ದಾರೆ.

ಈ ವಿಡಿಯೊವನ್ನು ವೈಎಸ್ಆರ್ ಸಿಪಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಈ ಕುರಿತಾದ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಗೆ ಪ್ರಸ್ತುತ ಸರ್ಕಾರವನ್ನು ಟೀಕಿಸಿದ್ದಾರೆ. “ಪಲ್ನಾಡು ಜಿಲ್ಲೆಯ ನರಸರಾವ್ಪೇಟೆಯ ಎಸ್ಎಸ್ಎನ್ ಕಾಲೇಜಿನಲ್ಲಿ ಎನ್‍ಸಿಸಿ ತರಬೇತಿಯ ನೆಪದಲ್ಲಿ ವಿದ್ಯಾರ್ಥಿಗಳನ್ನು ತೀವ್ರ ರ‍್ಯಾಗಿಂಗ್‌ ಮಾಡಲಾಗಿದೆ. ಜೂನಿಯರ್ ವಿದ್ಯಾರ್ಥಿಗಳನ್ನು ಮಧ್ಯರಾತ್ರಿ ಕಾಲೇಜಿಗೆ ಕರೆಸಿಕೊಂಡು ಸೀನಿಯರ್ ವಿದ್ಯಾರ್ಥಿಗಳು ಕೋಲುಗಳಿಂದ ಥಳಿಸಿದ್ದಾರೆ. ಮುಖ್ಯ ರಸ್ತೆಗಳಲ್ಲಿ ಕೊಲೆ ನಡೆದಾಗಲೇ ಪೊಲೀಸರಿಗೆ ಏನೂ ಮಾಡಲು ಆಗಲಿಲ್ಲ, ಅಂತಹದರಲ್ಲಿ ಕೋಲುಗಳನ್ನು ಬಳಸಿ ಹಲ್ಲೆ ಮಾಡಿದ್ದಕ್ಕೆ ಅವರು ಏನು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಗೃಹ ಸಚಿವ @Anitha_TDP ಪ್ರತಿಕ್ರಿಯಿಸಿದ್ದಾರೆ. ಇದು ನಮ್ಮ ರಾಜ್ಯದ ಪ್ರಸ್ತುತ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ” ಎಂದು ಪಕ್ಷವು ತಿಳಿಸಿದೆ.

ಇದನ್ನೂ ಓದಿ:ಜಾರಿ ಬಿದ್ದ ವಧುವನ್ನು ಎತ್ತದ ವರ; ಸಹೋದರನಿಂದ ಮದುವೆ ಮಂಟಪದಲ್ಲೇ ಬಿತ್ತು ಗೂಸಾ!

ಈ ಘಟನೆಗೆ ಸಂಬಂಧಿಸಿದಂತೆ ಬುಧವಾರ ವಿದ್ಯಾರ್ಥಿಯೊಬ್ಬನನ್ನು ಬಂಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಪೊಲೀಸರ ಪ್ರಕಾರ, ಫೆಬ್ರವರಿ 2ರಂದು ಆರು ಅಂತಿಮ ವರ್ಷದ ವಿದ್ಯಾರ್ಥಿಗಳು ಎನ್‍ಸಿಸಿ ತರಬೇತಿಯ ಸೋಗಿನಲ್ಲಿ ಹತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳನ್ನು ರ‍್ಯಾಗಿಂಗ್‌ಗೆ ಒಳಪಡಿಸಿದರು. ಅಂತಿಮ ವರ್ಷದ ವಿದ್ಯಾರ್ಥಿಗಳು ತಮ್ಮ ಜೂನಿಯರ್‌ ಅನ್ನು ಕೋಲುಗಳಿಂದ ಹೊಡೆದಿದ್ದಾರೆ ಎಂದು ವರದಿಯಾಗಿದೆ. ವಿಡಿಯೊ ಕ್ಲಿಪ್ ಅನ್ನು ಸೋಶಿಯಲ್ ಮೀಡಿಯಾದಲ್ಲಿ ಪ್ರಸಾರ ಮಾಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಪೊಲೀಸ್ ತಂಡವು ಕಾಲೇಜಿಗೆ ಭೇಟಿ ನೀಡಿ ವಿಚಾರಣೆ ನಡೆಸಿತು. ವಿದ್ಯಾರ್ಥಿಗಳ ಹೇಳಿಕೆಗಳು ಮತ್ತು ವಿಡಿಯೊ ಪುರಾವೆಗಳ ಆಧಾರದ ಮೇಲೆ, ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಮತ್ತು ಒಬ್ಬನನ್ನು ಬಂಧಿಸಿದ್ದಾರೆ, ಉಳಿದವರನ್ನು ಬಂಧಿಸುವ ನಿರೀಕ್ಷೆ ಇದೆ ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Dengue Fever: ರಾಜ್ಯದಲ್ಲಿ ನಿಫಾ ವೈರಸ್ ಪ್ರಕರಣ ಪತ್ತೆಯಾಗಿಲ್ಲ: ದಿನೇಶ್ ಗುಂಡೂರಾವ್

Dengue Fever: ಕೇರಳದಲ್ಲಿ ನಿಫಾ ವೈರಸ್ ಕಂಡುಬಂದಿರುವ ಹಿನ್ನೆಲೆಯಲ್ಲಿ ಕೇರಳ ಗಡಿ ಭಾಗದಲ್ಲಿ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ರಾಜ್ಯದಲ್ಲಿ ನಿಫಾ ವೈರಸ್‌ನ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ತಿಳಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ರಾಜ್ಯದಿಂದ ಕೇರಳಕ್ಕೆ ಪ್ರವಾಸ ಕೈಗೊಳ್ಳುವವರು ಎಚ್ಚರಿಕೆ ವಹಿಸಿ ಎಂದು ಮಾರ್ಗಸೂಚಿ ಹೊರಡಿಸಿದ್ದೇವೆ. ತೀರಾ ಅಗತ್ಯವಾಗಿದ್ದರೆ ಮಾತ್ರ ಕೇರಳ ಪ್ರವಾಸ ಕೈಗೊಳ್ಳಿ. ಅನಗತ್ಯವಾಗಿ ಕೇರಳಕ್ಕೆ ತೆರಳುವುದು ಬೇಡ ಎಂದು ಅವರು ರಾಜ್ಯದ ಜನರಲ್ಲಿ ಮನವಿ ಮಾಡಿದ್ದಾರೆ.

VISTARANEWS.COM


on

No cases of Nipah virus have been detected in the state says Minister Dinesh Gundurao
Koo

ಬೆಂಗಳೂರು: ಡೆಂಗ್ಯೂಗೆ (Dengue Fever) ತುತ್ತಾದ ಪ್ರತಿಯೊಬ್ಬರ ಮೇಲೆ 14 ದಿನಗಳವರೆಗೆ ನಿಗಾ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರಿನ ಯಲಹಂಕದಲ್ಲಿ ಇಂದು ಡೆಂಗ್ಯೂ ಹಾಟ್‌ಸ್ಪಾಟ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಬೆಂಗಳೂರಿನಲ್ಲಿ ಹೆಚ್ಚಿನ ಗಮನ ಹರಿಸಲಾಗುತ್ತಿದೆ ಎಂದರು.

ಯಲಹಂಕದ ಶಿಂಗೇನಹಳ್ಳಿಯಲ್ಲಿ ಇಂದು ಈಡಿಸ್ ಸೊಳ್ಳೆಯ ಲಾರ್ವಾ ನಾಶಪಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಚಿವರು, ಸ್ಥಳೀಯ ಶಾಲೆಗಳಿಗೆ ತೆರಳಿ ಡೆಂಗ್ಯೂ ಕುರಿತು ಜಾಗೃತಿ ಮೂಡಿಸಿದರು. ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಆರೋಗ್ಯ ಇಲಾಖೆ ಸತತ ಪ್ರಯತ್ನಗಳನ್ನ ಮುಂದುವರಿಸಿದೆ. ಮುಂದಿನ ತಿಂಗಳಿನಿಂದ ಡೆಂಗ್ಯೂ ಪ್ರಕರಣಗಳಲ್ಲಿ ಇಳಿಮುಖ ಕಾಣುವ ನಿರೀಕ್ಷೆ ಹೊಂದಿದ್ದೇವೆ ಎಂದರು.

ಇದನ್ನೂ ಓದಿ: Jio Air Fiber: ಗ್ರಾಹಕರಿಗೆ ಭರ್ಜರಿ ರಿಯಾಯಿತಿ ಘೋಷಿಸಿದ ಜಿಯೊ! ಎಲ್ಲಿಯವರೆಗೆ ಈ ಆಫರ್‌?

ಕೆಲವು ಜಿಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣಗಳು ಇಳಿಮುಖವಾಗಿವೆ. ರಾಜ್ಯದ ಒಟ್ಟು ಡೆಂಗ್ಯೂ ಪ್ರಕರಣಗಳಲ್ಲಿ ಬೆಂಗಳೂರಿನಲ್ಲಿಯೇ ಶೇ. 50 ರಷ್ಟು ಡೆಂಗ್ಯೂ ಪ್ರಕರಣಗಳಿವೆ. ಹೀಗಾಗಿ ಬೆಂಗಳೂರಿನಲ್ಲಿ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಹೆಚ್ವಿನ ಗಮನ ಹರಿಸಿ ಡೆಂಗ್ಯೂ ಹತೋಟಿಗೆ ತರುವಂತೆ ಸೂಚಿಸಿದ್ದೇನೆ ಎಂದರು.

10 ಜಿಲ್ಲೆಗಳ ಡೆಂಗ್ಯೂ ಹಾಟ್‌ಸ್ಪಾಟ್‌ಗಳಿಗೆ ಉಪನಿರ್ದೇಶಕರ ಮಟ್ಟದ ಅಧಿಕಾರಿಗಳನ್ನು ಕಳುಹಿಸಿಕೊಡಲಾಗುತ್ತಿದೆ. ಸೋಮವಾರ ಹಾಗೂ ಮಂಗಳವಾರ ಅಧಿಕಾರಿಗಳು ಹಾಟ್‌ಸ್ಪಾಟ್‌ಗಳಿಗೆ ಭೇಟಿ ನೀಡಿ ಡೆಂಗ್ಯೂ ನಿಯಂತ್ರಣ ಕ್ರಮಗಳ ಅನುಷ್ಠಾನ ಆಗಿರುವ ಬಗ್ಗೆ ವಿಶೇಷ ಗಮನ ಹರಿಸಲಿದ್ದಾರೆ.

ಎರಡಕ್ಕಿಂತ ಹೆಚ್ಚು ಡೆಂಗ್ಯೂ ಪಾಸಿಟಿವ್ ಪ್ರಕರಣಗಳು ಗೋಚರಿಸಿದರೆ ಡೆಂಗ್ಯೂ ಹಾಟ್‌ಸ್ಪಾಟ್ ಎಂದು ಗುರುತಿಸಲಾಗುತ್ತಿದೆ. ಹೆಚ್ಚಿನ ಪ್ರಕರಣಗಳು ಕಂಡುಬಂದರೆ ಅಲ್ಲಿ ಫೀವರ್ ಕ್ಲಿನಿಕ್‌ಗಳನ್ನು ತೆರೆದು, ಜ್ವರ ಕಾಣಿಸಿಕೊಳ್ಳುವ ಎಲ್ಲರನ್ನು ಡೆಂಗ್ಯೂ ಟೆಸ್ಟಿಂಗ್‌ಗೆ ಒಳಪಡಿಸಲಾಗುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ರಾಜ್ಯದಲ್ಲಿ ನಿಫಾ ವೈರಸ್ ಪ್ರಕರಣಗಳು ಪತ್ತೆಯಾಗಿಲ್ಲ

ಕೇರಳದಲ್ಲಿ ನಿಫಾ ವೈರಸ್ ಕಂಡುಬಂದಿರುವ ಹಿನ್ನೆಲೆಯಲ್ಲಿ ಕೇರಳ ಗಡಿ ಭಾಗದಲ್ಲಿ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ ಎಂದು ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ರಾಜ್ಯದಲ್ಲಿ ನಿಪಾ ವೈರಸ್‌ನ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. ರಾಜ್ಯದಿಂದ ಕೇರಳಕ್ಕೆ ಪ್ರವಾಸ ಕೈಗೊಳ್ಳುವವರು ಎಚ್ಚರಿಕೆ ವಹಿಸಿ ಎಂದು ಮಾರ್ಗಸೂಚಿ ಹೊರಡಿಸಿದ್ದೇವೆ. ತೀರಾ ಅಗತ್ಯವಾಗಿದ್ದರೆ ಮಾತ್ರ ಕೇರಳ ಪ್ರವಾಸ ಕೈಗೊಳ್ಳಿ. ಅನಗತ್ಯವಾಗಿ ಕೇರಳಕ್ಕೆ ತೆರಳುವುದು ಬೇಡ ಎಂದು ರಾಜ್ಯದ ಜನರಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು.

ಇದನ್ನೂ ಓದಿ: Kannada New Movie: ʼಜೀನಿಯಸ್ ಮುತ್ತʼನಿಗೆ ಸಾಥ್ ನೀಡಿದ ʼಚಿನ್ನಾರಿ ಮುತ್ತʼ; ಆಗಸ್ಟ್‌ನಲ್ಲಿ ಸಿನಿಮಾ ರಿಲೀಸ್‌

ರಾಜ್ಯದಲ್ಲಿ ಇತ್ತೀಚೆಗೆ ಝೀಕಾ ವೈರಸ್ ಪತ್ತೆಯಾಗಿತ್ತು. ಝೀಕಾ ವೈರಸ್ ಅಷ್ಟೊಂದು ಅಪಾಯಕಾರಿಯಲ್ಲ. ಆದರೆ ನಿಪಾ ಬಗ್ಗೆ ಎಚ್ಚರಿಕೆ ವಹಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಕೂಡ ಮುಂಜಾಗೃತೆ ಕ್ರಮಗಳನ್ನು ಅನುಸರಿಸಲಿದೆ ಎಂದರು.

Continue Reading

Latest

Viral Video: ಸಿಂಧೂರ ಹಚ್ಚುವಾಗ ಕುಸಿದುಬಿದ್ದ ವಧು; ಎದ್ದೂಬಿದ್ದು ಓಡಿದ ವರ!

Viral Video ಮದುವೆ ಮಂಟಪದಲ್ಲಿ ವಧು ಕುಳಿತಿದ್ದಾಗ ವರ ವಧುವಿನ ಹಣೆಗೆ ಸಿಂಧೂರ ಹಚ್ಚಲು ಹೋಗಿದ್ದಾನೆ. ಆ ವೇಳೆಗೆ ವಧು ಕಿರುಚುತ್ತಾ ನೆಲದ ಮೇಲೆ ಬಿದ್ದಿದ್ದಾಳೆ. ಇದನ್ನು ನೋಡಿದ ವರ ತಲೆಯ ಮೇಲಿದ್ದ ಪೇಟವನ್ನು ಎಸೆದು ಓಡಲು ಪ್ರಾರಂಭಿಸಿದ್ದಾನೆ. ಆಗ ಅಲ್ಲಿದ್ದ ಮಹಿಳೆಯರಿಬ್ಬರು ಆತನನ್ನು ತಡೆಯಲು ಪ್ರಯತ್ನಿಸುತ್ತಾ ಜೊತೆಗೆ ವಧುವನ್ನು ಮೇಲೆತ್ತಲು ಪ್ರಯತ್ನಿಸುತ್ತಿದ್ದಾರೆ. ಆದರೂ ವರ ಅಲ್ಲಿಂದ ಹೋಗಿದ್ದಾನೆ. ಈ ಘಟನೆ ವಿಡಿಯೊದಲ್ಲಿ ಸೆರೆಯಾಗಿದೆ. ಈ ಘಟನೆಯಿಂದ ಗಂಭೀರವಾಗಿ ನಡೆಯಬೇಕಿದ್ದ ವಿವಾಹ ಸಮಾರಂಭ ಹಾಸ್ಯಾಸ್ಪದವಾಗಿದೆ.

VISTARANEWS.COM


on

Viral Video
Koo


ಮದುವೆ ಎನ್ನುವುದು ಎಲ್ಲರ ಜೀವನದಲ್ಲೂ ಬಹಳ ವಿಶೇಷವಾದುದು. ಹಾಗಾಗಿ ಮದುವೆಯ ಸಮಾರಂಭವನ್ನು ಬಹಳ ವಿಶೇಷವಾಗಿ ಮಾಡಲು ಹಲವು ದಿನಗಳಿಂದ ಯೋಜನೆ ಮಾಡುತ್ತಾರೆ. ಈ ದಿನ ವಧುವರರು ತುಂಬಾ ಖುಷಿಯಲ್ಲಿರುತ್ತಾರೆ. ಆದರೆ ಇಲ್ಲೊಂದು ಮದುವೆಯಲ್ಲಿ ವರ ಸಿಂಧೂರ ಹಚ್ಚಲು ಬಂದಾಗ ವಧು ಕುಸಿದು ಬಿದ್ದ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ವಿಡಿಯೊದಲ್ಲಿ ಮದುವೆ ಮಂಟಪದಲ್ಲಿ ವಧು ಕುಳಿತಿದ್ದಾಗ ವರ ವಧುವಿನ ಹಣೆಗೆ ಸಿಂಧೂರ ಹಚ್ಚಲು ಹೋಗಿದ್ದಾನೆ. ಆ ವೇಳೆಗೆ ವಧು ಕಿರುಚುತ್ತಾ ನೆಲದ ಮೇಲೆ ಬಿದ್ದಿದ್ದಾಳೆ. ಇದನ್ನು ನೋಡಿದ ವರ ತಲೆಯ ಮೇಲಿದ್ದ ಪೇಟವನ್ನು ಎಸೆದು ಓಡಲು ಪ್ರಾರಂಭಿಸಿದ್ದಾನೆ. ಆಗ ಅಲ್ಲಿದ್ದ ಮಹಿಳೆಯರಿಬ್ಬರು ಆತನನ್ನು ತಡೆಯಲು ಪ್ರಯತ್ನಿಸುತ್ತಾ ಜೊತೆಗೆ ವಧುವನ್ನು ಮೇಲೆತ್ತಲು ಪ್ರಯತ್ನಿಸುತ್ತಿದ್ದಾರೆ. ಆದರೂ ವರ ಅಲ್ಲಿಂದ ಹೋಗಿದ್ದಾನೆ. ಈ ಘಟನೆ ವಿಡಿಯೊದಲ್ಲಿ ಸೆರೆಯಾಗಿದೆ. ಈ ಘಟನೆಯಿಂದ ಗಂಭೀರವಾಗಿ ನಡೆಯಬೇಕಿದ್ದ ವಿವಾಹ ಸಮಾರಂಭ ಹಾಸ್ಯಾಸ್ಪದವಾಗಿದೆ. ಮತ್ತು ಈ ಘಟನೆ ನೋಡಿದವರಿಗೆ ದಿಗ್ಭ್ರಮೆಯಾಗುವುದಂತು ಖಂಡಿತ.

ಈ ವೈರಲ್ ವಿಡಿಯೊ ನೋಡಿ ಅನೇಕರು ತಮಾಷೆಯಿಂದ ನಕ್ಕಿದ್ದಾರೆ. ಈ ಮದುವೆ ದಿನ ನಡೆದ ಘಟನೆಯನ್ನು ನೋಡಿದವರಿಗೆ ಇದು ನಿಜವಾಗಿಯೂ ಸ್ಮರಣೀಯವಾಗಿರುತ್ತದೆ. ಯಾಕೆಂದರೆ ವಧು ಕುಸಿದು ಬಿದ್ದಿದ್ದನ್ನು ಕಂಡು ವರನ ಪ್ರತಿಕ್ರಿಯೆ ಬಹಳ ತಮಾಷೆಯಾಗಿದೆ. ಅದನ್ನು ನೋಡಿದ ಎಲ್ಲರಿಗೂ ಪದೇ ಪದೇ ಈ ಘಟನೆ ನೆನಪಾಗುವುದು ಖಂಡಿತ. ಇದು ತಮಾಷೆಗಾಗಿಯೇ ಮಾಡಿದ ವಿಡಿಯೊದಂತಿದೆ.

ನಾವು ಆಗಾಗ್ಗೆ ಅಂತರ್ಜಾಲದಲ್ಲಿ ಹಲವಾರು ಮದುವೆಗೆ ಸಂಬಂಧಪಟ್ಟ ವಿಡಿಯೊಗಳನ್ನು ನೋಡುತ್ತಿರುತ್ತೇವೆ, ಇದು ಕೆಲವೊಮ್ಮೆ ಮನರಂಜನೆಯನ್ನು ನೀಡುತ್ತದೆ. ಇತ್ತೀಚೆಗೆ, ಇದೇ ರೀತಿಯ ವಿವಾಹದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ವಿಡಿಯೊದಲ್ಲಿ, ವಧು ಮತ್ತು ವರ ಕುರ್ಚಿಯ ಮೇಲೆ ಒಟ್ಟಿಗೆ ಕುಳಿತಿದ್ದರು. ವಧು ಇದ್ದಕ್ಕಿದ್ದಂತೆ ತಲೆ ತಗ್ಗಿಸಿ ಅಳಲು ಪ್ರಾರಂಭಿಸುತ್ತಾಳೆ.

ಇದನ್ನೂ ಓದಿ: ವಿಮಾನದಲ್ಲಿ ಸಾರಾ ಅಲಿ ಖಾನ್‌ ಮೇಲೆ ಜ್ಯೂಸ್‌ ಚೆಲ್ಲಿದ ಗಗನಸಖಿ! ಮುಂದೇನಾಯ್ತು? ವಿಡಿಯೊ ನೋಡಿ

ವಧು ಸಂತೋಷವಾಗಿರದ ಕಾರಣ ಆಕೆಗೆ ಏನೋ ತೊಂದರೆಯಾಗಿದೆ ಎಂಬುದನ್ನು ಇದರಿಂದ ತಿಳಿಯಬಹುದು. ಅವಳು ಸ್ವಲ್ಪ ಹೊತ್ತು ಮೌನವಾಗಿ ಕುಳಿತು ನಂತರ ಕಣ್ಣೀರು ಹಾಕಿದಳು. ವಧುವಿನ ಹಠಾತ್ ನಡವಳಿಕೆ ಎಲ್ಲರನ್ನೂ ಆಶ್ಚರ್ಯಚಕಿತಗೊಳಿಸಿತು. ಪತಿ ನೋಡಲು ಸುಂದರವಾಗಿಲ್ಲ ಎಂದು ಆಕೆ ಕಣ್ಣೀರು ಹಾಕುತ್ತಿದ್ದಾಳೆ ಎಂದು ಹಲವಾರು ನೆಟ್ಟಿಗರು ಕಾಮೆಂಟ್ ಮಾಡಿದ್ದರು.

Continue Reading

Latest

Ram Mandir Watch: 34 ಲಕ್ಷ ರೂ.ಗೆ ಮಾರಾಟವಾಯಿತು ʼರಾಮ ಜನ್ಮಭೂಮಿʼ ಸ್ಪೆಷಲ್‌ ವಾಚ್!

Ram Mandir Watch: ಸ್ವಿಸ್ ವಾಚ್ ತಯಾರಕ ಕಂಪನಿಯೊಂದು ರಾಮ ಜನ್ಮಭೂಮಿ ಲಿಮಿಟೆಡ್ ಎಡಿಷನ್ ವಾಚ್ ಅನ್ನು ಬಿಡುಗಡೆ ಮಾಡಿದೆ. ಈ ವಾಚ್ ಎರಡು ಆವೃತ್ತಿಗಳಲ್ಲಿ ಬರುತ್ತದೆ. ಇದೀಗ ಈ ವಾಚ್ 34 ಲಕ್ಷ ರೂ.ಗೆ ಮಾರಾಟವಾಗಿದ್ದು, ಇದು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಾಚ್‌ನಲ್ಲಿ ಮುಳ್ಳು 9 ಗಂಟೆಗೆ ಬಂದಾಗ ರಾಮ ಮಂದಿರವನ್ನು ತೋರಿಸಿದರೆ, 6 ಗಂಟೆಗೆ “ಜೈ ಶ್ರೀ ರಾಮ್” ಎಂದು ಹೇಳುತ್ತದೆ. ಕೇಸರಿ ಬಣ್ಣದ ಬೆಲ್ಟ್ ಹೊಂದಿರುವ ಈ ವಾಚ್‌ನಲ್ಲಿ ಭಗವಾನ್ ರಾಮ ಮತ್ತು ಭಗವಾನ್ ಹನುಮಂತನ ಚಿತ್ರ ಸಹ ಕಾಣಿಸುತ್ತದೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Ram Mandir Watch
Koo


ನವದೆಹಲಿ: ಅಯೋಧ್ಯೆಯಲ್ಲಿ ಈ ವರ್ಷದ ಆರಂಭದಲ್ಲಿ ಹಿಂದೂಗಳ ಆರಾಧ್ಯ ದೇವರಾದ ಶ್ರೀರಾಮ ಮಂದಿರದ ಉದ್ಘಾಟನೆಯನ್ನು ಬಹಳ ವಿಜೃಂಭಣೆಯಿಂದ ನಡೆಸಲಾಗಿತ್ತು. ಲಕ್ಷಾಂತರ ಹಿಂದೂಗಳು ದೂರದೂರಿನಿಂದ ಶ್ರೀರಾಮನ ದರ್ಶನಕ್ಕೆ ಬಂದಿದ್ದರು. ಶ್ರೀರಾಮ ಮಂದಿರದ ಪ್ರತಿಷ್ಠಾಪನೆಯ ಬಳಿಕ ಇದೀಗ ರಾಮ ಮಂದಿರ ಪ್ರತಿಷ್ಠಾಪನಾ ಸಮಾರಂಭವನ್ನು ನೆನಪಿಸುವಂತಹ ವಾಚ್ (Ram Mandir Watch) ಒಂದನ್ನು ಬಿಡುಗಡೆ ಮಾಡಲಾಗಿದೆ.

ಸ್ವಿಸ್ ವಾಚ್ ತಯಾರಕ ಕಂಪನಿಯೊಂದು ಭಾರತೀಯ ರಿಟೇಲ್‌ ಉದ್ದಿಮೆಯ ಸಹಯೋಗದೊಂದಿಗೆ ರಾಮ ಜನ್ಮಭೂಮಿ ಲಿಮಿಟೆಡ್ ಎಡಿಷನ್ ವಾಚ್ ಅನ್ನು ಬಿಡುಗಡೆ ಮಾಡಿದೆ. ಈ ವಾಚ್ ಎರಡು ಆವೃತ್ತಿಗಳಲ್ಲಿ ಬರುತ್ತದೆ. ಇದೀಗ ಈ ವಾಚ್ 34 ಲಕ್ಷ ರೂ.ಗೆ ಮಾರಾಟವಾಗಿದ್ದು, ಇದು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸಿಗ್ನೇಚರ್ ಎಪಿಕ್ ಎಸ್ಕ್‌ಸ್ಕೆಲೆಟನ್ ಸೀರಿಸ್ ಅನ್ನು ಆಧರಿಸಿ ಎಥೋಸ್ ಮತ್ತು ಜಾಕೋಬ್ ಅಂಡ್ ಕೋ ಸಹಯೋಗದೊಂದಿಗೆ ಈ ಐಷಾರಾಮಿ ವಾಚ್ ಅನ್ನು ಬಿಡುಗಡೆ ಮಾಡಲಾಗಿದೆ. “ಈ ವಾಚ್ ಅನ್ನು ಭಾರತದ ಆಳವಾದ ಸಾಂಸ್ಕೃತಿಕ ಪರಂಪರೆಗೆ ಗೌರವ ಸಲ್ಲಿಸಲು ವಿನ್ಯಾಸಗೊಳಿಸಲಾಗಿದೆ ಮತ್ತು ಇದು ಇದುವರೆಗೆ ಮಾಡಿದ ಅತ್ಯಂತ ವಿಶಿಷ್ಟವಾದ ಸಹಯೋಗದ ವಾಚ್‍ಗಳಲ್ಲಿ ಒಂದಾಗಿದೆ” ಎಂದು ಕಂಪನಿ ಹೇಳಿಕೊಂಡಿದೆ.

ಈ ವಾಚ್‍ನಲ್ಲಿ ಮುಳ್ಳು 9 ಗಂಟೆಗೆ ಬಂದಾಗ ರಾಮ ಮಂದಿರವನ್ನು ತೋರಿಸಿದರೆ, 6 ಗಂಟೆಗೆ “ಜೈ ಶ್ರೀ ರಾಮ್” ಎಂದು ಹೇಳುತ್ತದೆ! ಕೇಸರಿ ಬಣ್ಣದ ಬೆಲ್ಟ್ ಹೊಂದಿರುವ ಈ ವಾಚ್‍ನಲ್ಲಿ ಭಗವಾನ್ ರಾಮ ಮತ್ತು ಭಗವಾನ್ ಹನುಮಂತನ ಚಿತ್ರ ಸಹ ಕಾಣಿಸುತ್ತದೆ. ಈ ವಾಚ್‍ಗಾಗಿ ಆಯ್ಕೆ ಮಾಡಿದ ಬಣ್ಣವು ಆಧ್ಯಾತ್ಮಿಕತೆ, ಶುದ್ಧತೆ ಮತ್ತು ಭಕ್ತಿಯ ಸಾರವನ್ನು ಪ್ರತಿನಿಧಿಸುತ್ತದೆ. ಇದು ಹಿಂದೂ ಧರ್ಮದ ಮೌಲ್ಯಗಳನ್ನು ಬಿಂಬಿಸುತ್ತದೆ. ಈ ವಾಚ್‍ನ ಪ್ರತಿಯೊಂದು ವಿವರವನ್ನು ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಮಹತ್ವದೊಂದಿಗೆ ವಿನ್ಯಾಸಗೊಳಿಸಲಾಗಿದೆ. ಕಂಪನಿಯ ಪ್ರಕಾರ, ಕೇವಲ 49 ಸೀಮಿತ ಆವೃತ್ತಿಯ ವಾಚ್‍ಗಳನ್ನು ತಯಾರಿಸಲಾಗಿದ್ದು, ಅದರಲ್ಲಿ 35 ವಾಚುಗಳು ಈಗಾಗಲೇ ಮಾರಾಟಕ್ಕೆ ಸಿದ್ಧವಾಗಿವೆ ಎನ್ನಲಾಗಿದೆ.

ಹಲವು ವರ್ಷಗಳ ನ್ಯಾಯಾಂಗ ಹೋರಾಟ ಮತ್ತು ಹಲವಾರು ವಿವಾದಗಳು, ಸಂಘರ್ಷದ ನಂತರ ಸುಪ್ರೀಂ ಕೋರ್ಟ್ 2019ರಲ್ಲಿ ದೇವಾಲಯವನ್ನು ನಿರ್ಮಿಸಲು ಹಿಂದೂಗಳಿಗೆ ವಿವಾದಿತ ಭೂಮಿಯನ್ನು ಹಸ್ತಾಂತರಿಸಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 2020ರಲ್ಲಿ ರಾಮಮಂದಿರಕ್ಕೆ (ಭೂಮಿ ಪೂಜೆ) ಅಡಿಪಾಯ ಹಾಕಿದ್ದರು. ನಾಲ್ಕು ವರ್ಷಗಳ ನಂತರ ಭವ್ಯ ದೇವಾಲಯವನ್ನು ನಿರ್ಮಿಸಿ ಗರ್ಭಗುಡಿಯಲ್ಲಿ ರಾಮ್ ಲಲ್ಲಾರನ್ನು ಸ್ಥಾಪಿಸಿ ಭರ್ಜರಿಯಾಗಿ ಪ್ರತಿಷ್ಠಾಪನಾ ಸಮಾರಂಭ ನಡೆಸಿದ್ದರು.

ಇದನ್ನೂ ಓದಿ: ‘ಮಿಸ್ಟರ್ ಬೀನ್’ ಖ್ಯಾತಿಯ ರೋವನ್ ಅಟ್ಕಿನ್ಸನ್ ಹಾಸಿಗೆ ಹಿಡಿದಿದ್ದಾರೆಯೇ? ಭಾರೀ ವೈರಲಾಗ್ತಿದೆ ಈ ಫೋಟೊ

ಈ ದೇವಾಲಯವು ಹಿಂದೂಗಳ ನಂಬಿಕೆಯ ಕೇಂದ್ರ ಬಿಂದುವಾಗಿದೆ. ಇಡೀ ಸಂಕೀರ್ಣವನ್ನು ಸಾಂಪ್ರದಾಯಿಕ ನಾಗರ ಶೈಲಿಯಲ್ಲಿ ನಿರ್ಮಿಸಲಾಗಿದೆ. ಅಯೋಧ್ಯೆಯ ರಾಮ ಮಂದಿರಕ್ಕೆ ನಿತ್ಯ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ.

Continue Reading

Latest

Viral News: ಸಾಯುವ ಮುನ್ನ ವಿದ್ಯಾರ್ಥಿಗಳ ಜೀವ ಕಾಪಾಡಿದ ಶಾಲಾ ಬಸ್ ಚಾಲಕ!

Viral News: ತಮಿಳುನಾಡಿನಲ್ಲಿ ಮಲಯಪ್ಪನ್ ಎಂಬುವರು ಖಾಸಗಿ ಶಾಲಾ ಬಸ್ ಚಾಲನೆ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿತು. ಅವರ ಸಾಯುವ ಸ್ಥಿತಿಯಲ್ಲಿದ್ದರೂ ಕೂಡ ಮಕ್ಕಳಿಗೆ ಯಾವುದೇ ಹಾನಿಯಾಗಬಾರದೆಂದು ವಾಹನವನ್ನು ರಸ್ತೆಯ ಬದಿಗೆ ತಂದು ನಿಲ್ಲಿಸಿ ಪ್ರಾಣ ಬಿಟ್ಟಿದ್ದಾರೆ. ಶಾಲಾ ಬಸ್ ಚಾಲಕನ ಈ ನಿಸ್ವಾರ್ಥ ಕಾರ್ಯವು ಅನೇಕ ವಿದ್ಯಾರ್ಥಿಗಳ ಜೀವವನ್ನು ಉಳಿಸಿದೆ.

VISTARANEWS.COM


on

Viral News
Koo

ಚೆನ್ನೈ: ನಾವು ಪ್ರತಿದಿನ ನೋಡುವ ಹಾಗೆ ಕೆಲವೊಂದು ಶಾಲಾ ಬಸ್‍ಗಳು ಬಹಳ ವೇಗವಾಗಿ ಚಲಿಸುತ್ತಿರುತ್ತವೆ. ಆ ಬಸ್ಸಿನ ಚಾಲಕರಿಗೆ ತಮ್ಮ ವಾಹನದಲ್ಲಿ ಚಿಕ್ಕ ಮಕ್ಕಳು ಇರುತ್ತಾರೆ ಎಂಬ ಪ್ರಜ್ಞೆ ಕೂಡ ಇರುವುದಿಲ್ಲ. ಅಷ್ಟು ಬೇಜವಾಬ್ದಾರಿಯಿಂದ ವರ್ತಿಸುತ್ತಾರೆ. ಆದರೆ ತಮಿಳುನಾಡಿನ ತಿರುಪ್ಪೂರಿನಲ್ಲಿ ಶಾಲಾ ಬಸ್ ಚಾಲಕನೊಬ್ಬ ಶಾಲಾ ವಿದ್ಯಾರ್ಥಿಗಳನ್ನು ರಕ್ಷಿಸಿ ತನ್ನ ಪ್ರಾಣವನ್ನೇ ತ್ಯಾಗ ಮಾಡಿದ ಹೃದಯ ವಿದ್ರಾವಕ ಘಟನೆ ನಡೆದಿದೆ. ಅದಕ್ಕೆ ಸಂಬಂಧಪಟ್ಟ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral news) ಆಗಿದೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ತಿರುಪುರ್ ಜಿಲ್ಲೆಯ ಗಂಗೇಯಂ ನಿವಾಸಿ ಮಲಯಪ್ಪನ್ ಖಾಸಗಿ ಶಾಲಾ ಬಸ್ ಚಾಲನೆ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿತು. ಅವರ ಸಾಯುವ ಸ್ಥಿತಿಯಲ್ಲಿದ್ದರೂ ಕೂಡ ಮಕ್ಕಳಿಗೆ ಯಾವುದೇ ಹಾನಿಯಾಗಬಾರದೆಂದು ಅವರು ವಾಹನವನ್ನು ರಸ್ತೆಯ ಬದಿಗೆ ತಂದು ನಿಲ್ಲಿಸಿ ತಮ್ಮ ಪ್ರಾಣಬಿಟ್ಟಿದ್ದಾರೆ. ಶಾಲಾ ಬಸ್ ಚಾಲಕನ ಈ ನಿಸ್ವಾರ್ಥ ಕಾರ್ಯವು ಅನೇಕ ವಿದ್ಯಾರ್ಥಿಗಳ ಜೀವವನ್ನು ಉಳಿಸಿತು.

ಮಲಯಪ್ಪನ್ ಅವರನ್ನು ಆಸ್ಪತ್ರೆ ಕರೆದುಕೊಂಡು ಹೋದರೂ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು ಎಂಬುದಾಗಿ ತಿಳಿದುಬಂದಿದೆ. ಅವರ ನಿಸ್ವಾರ್ಥ ಕಾರ್ಯವನ್ನು ವೀರೋಚಿತ ಎಂದು ಶ್ಲಾಘಿಸಲಾಗಿದ್ದು, ಶಾಲಾ ಮಕ್ಕಳ ಸುರಕ್ಷತೆಗಾಗಿ ಅವರ ಸಮರ್ಪಣೆಯನ್ನು ಅನೇಕರು ಹೊಗಳಿದ್ದಾರೆ.

ಇದನ್ನೂ ಓದಿ: ʼಸಾಫ್ಟ್ ಟಚ್ʼ ಸ್ಪಾಗೆ ಹೋಗಿದ್ದ ಕ್ರಿಮಿನಲ್‌ನನ್ನು ಪ್ರೇಯಸಿ ಎದುರೇ ತುಂಡು ತುಂಡಾಗಿ ಕತ್ತರಿಸಿದರು!

ಮೃತ ವ್ಯಕ್ತಿ ವೆಲ್ಲಕೋಯಿಲ್‌ನ ಎಎನ್‍ವಿ ಮೆಟ್ರಿಕ್ ಶಾಲೆಯಲ್ಲಿ ಶಾಲಾ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದರು . ಗುರುವಾರ ಸಂಜೆ ಶಾಲಾ ಮಕ್ಕಳನ್ನು ಮನೆಗೆ ಕರೆದೊಯ್ಯುತ್ತಿದ್ದಾಗ ವೆಲ್ಲಕೋಯಿಲ್-ಕರೂರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿದೆ. ಅವರು ತಕ್ಷಣ ವಾಹನವನ್ನು ರಸ್ತೆಯ ಬದಿಯಲ್ಲಿ ನಿಲ್ಲಿಸಿ ಮಕ್ಕಳ ಜೀವವನ್ನು ಉಳಿಸಿದರು, ಮತ್ತು ತಮ್ಮ ಪ್ರಾಣಬಿಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಸ್ ಚಾಲಕನ ಸಾವಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸಂತಾಪ ವ್ಯಕ್ತಪಡಿಸಿದ್ದು, ‘ಸಾವಿನ ಅಂಚಿನಲ್ಲಿದ್ದರೂ ಅವರು ಮಕ್ಕಳ ಜೀವವನ್ನು ಉಳಿಸಿದ್ದಾರೆ ಎಂದು ಹೊಗಳಿದ್ದಾರೆ. ಈ ಘಟನೆಯು ಅವರ ಕುಟುಂಬಕ್ಕೆ ಆಘಾತವನ್ನುಂಟು ಮಾಡಿದೆ, ಅನೇಕರು ಮಲಯಪ್ಪನ್ ಅವರ ಧೈರ್ಯಕ್ಕೆ ಗೌರವ ಸಲ್ಲಿಸಿದ್ದಾರೆ. ಈ ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ.

Continue Reading
Advertisement
No cases of Nipah virus have been detected in the state says Minister Dinesh Gundurao
ಕರ್ನಾಟಕ2 mins ago

Dengue Fever: ರಾಜ್ಯದಲ್ಲಿ ನಿಫಾ ವೈರಸ್ ಪ್ರಕರಣ ಪತ್ತೆಯಾಗಿಲ್ಲ: ದಿನೇಶ್ ಗುಂಡೂರಾವ್

Kampli Gangavathi link bridge inundation fear
ಬಳ್ಳಾರಿ6 mins ago

Ballari News: ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆ ಮುಳುಗಡೆ ಭೀತಿ; ಸಂಚಾರಕ್ಕೆ ನಿರ್ಬಂಧ

KAS Recruitment 2024
ನೌಕರರ ಕಾರ್ನರ್8 mins ago

KAS Recruitment 2024: ಕೆಎಎಸ್‌ ಪರೀಕ್ಷೆಗೆ ಅರ್ಜಿ ಸಲ್ಲಿಸಲು ವಿಶೇಷ ಅವಕಾಶ; ಸಚಿವ ಸಂಪುಟ ಅನುಮೋದನೆ

Karnataka Rain
ಮಳೆ12 mins ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Samantha Ruth Prabhu Citadel Honey Bunny Varun Dhawan
ಸಿನಿಮಾ16 mins ago

Samantha Ruth Prabhu: ಆ.1ಕ್ಕೆ ‘ಸಿಟಾಡೆಲ್’ ಬಿಗ್‌ ಅಪ್‌ಡೇಟ್‌ : ಸಮಂತಾ ಫ್ಯಾನ್ಸ್‌ಗೆ ಸಿಗಲಿದೆ ಗುಡ್‌ ನ್ಯೂಸ್‌!

Kanwar Yatra
ದೇಶ19 mins ago

Kanwar Yatra: ಕನ್ವರ್‌ ಯಾತ್ರೆ ವೇಳೆ ನಾಮ ಫಲಕ ಕಡ್ಡಾಯ; ಸುಪ್ರೀಂಕೋರ್ಟ್‌ನಿಂದ ಮತ್ತೊಂದು ಮಹತ್ವದ ಆದೇಶ

Womens Asia Cup T20
ಕ್ರೀಡೆ22 mins ago

Womens Asia Cup T20: ಬಾಂಗ್ಲಾ ಮಣಿಸಿ ಫೈನಲ್​ ಪ್ರವೇಶಿಸಿದ ಭಾರತ

Paris Olympics 2024
ಪ್ರಮುಖ ಸುದ್ದಿ23 mins ago

Paris Olympics 2024 : ಒಲಿಂಪಿಕ್ಸ್​ಗೆ ಕೆಲವೇ ಗಂಟೆಗಳ ಮೊದಲು ಫ್ರಾನ್ಸ್​ನ ರೈಲ್ವೆ ವ್ಯವಸ್ಥೆ ಮೇಲೆ ವಿಧ್ವಂಸಕ ದಾಳಿ

Kamala Harris
ವಿದೇಶ28 mins ago

Kamala Harris: ಅಮೆರಿಕ ಅಧ್ಯಕ್ಷೀಯ ಚುನಾವಣೆ; ಕಮಲಾ ಹ್ಯಾರಿಸ್‌ ಪರ ನಿಂತ ಬರಾಕ್‌ ಒಬಾಮಾ

Kannada New Movie children's adventure story-based film bhavati
ಸ್ಯಾಂಡಲ್ ವುಡ್38 mins ago

Kannada New Movie: ಮಕ್ಕಳ ಸಾಹಸ ಕಥೆಯಾಧಾರಿತ `ಭಗವತಿ’ ಚಿತ್ರಕ್ಕೆ ಚಾಲನೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ12 mins ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 hour ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ24 hours ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್1 day ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ1 day ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ1 day ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ2 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ3 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ3 days ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ3 days ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

ಟ್ರೆಂಡಿಂಗ್‌