Robbery Case: ಹಾಡಹಗಲೇ ಬಂದೂಕು ತೋರಿಸಿ ಆಭರಣ ಮಳಿಗೆ ದೋಚಿದ ದರೋಡೆಕೋರರು; ವಿಡಿಯೊ ನೋಡಿ - Vistara News

Latest

Robbery Case: ಹಾಡಹಗಲೇ ಬಂದೂಕು ತೋರಿಸಿ ಆಭರಣ ಮಳಿಗೆ ದೋಚಿದ ದರೋಡೆಕೋರರು; ವಿಡಿಯೊ ನೋಡಿ

Robbery Case: ಹಾಡಹಗಲೇ ಮೂವರು ವ್ಯಕ್ತಿಗಳು ಬಂದೂಕು ತೋರಿಸಿ ಆಭರಣ ಅಂಗಡಿಯನ್ನು ಲೂಟಿ ಮಾಡಿದ ಘಟನೆ ಪುಣೆಯಲ್ಲಿ ನಡೆದಿದೆ. ದರೋಡೆಕೋರರು ಅಂಗಡಿಗೆ ನುಗ್ಗಿ ಅಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಆಭರಣಗಳನ್ನು ದೋಚಿದ್ದಾರೆ. ಅಂಗಡಿಯೊಳಗಿನ ವ್ಯಕ್ತಿಯ ಮೇಲೆ ಬಂದೂಕನ್ನು ಗುರಿಯಾಗಿಸಿಕೊಂಡು ಆಭರಣ ಮಳಿಗೆಯಲ್ಲಿದ್ದ ವಸ್ತುಗಳನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ಇಡೀ ಘಟನೆ ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

VISTARANEWS.COM


on

Robbery Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo


ಪುಣೆ: ಇತ್ತೀಚಿನ ದಿನಗಳಲ್ಲಿ ಹಾಡಹಗಲಿನಲ್ಲಿ ಕಳ್ಳರು ಕಳ್ಳತನ ಶುರುಮಾಡಿದ್ದಾರೆ. ಹಗಲಿನಲ್ಲಿ ಜನಸಂದಣಿ ಇರುವಂತಹ ಸ್ಥಳಗಳಲ್ಲೇ ದರೋಡೆಕೋರರು ಜನರ ಮೇಲೆ, ಅಂಗಡಿಗಳ ಮೇಲೆ ದಾಳಿ ಮಾಡಿ ಲೂಟಿ ಮಾಡುತ್ತಿದ್ದಾರೆ. ಅದೇರೀತಿ ಇತ್ತೀಚೆಗೆ ಹಾಡಹಗಲೇ ಮೂವರು ವ್ಯಕ್ತಿಗಳು ಬಂದೂಕು ತೋರಿಸಿ ಆಭರಣ ಅಂಗಡಿಯನ್ನು ಲೂಟಿ ಮಾಡಿದ ಘಟನೆ ಪುಣೆಯಲ್ಲಿ ನಡೆದಿದೆ. ಇಡೀ ಘಟನೆ ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Robbery Case) ಆಗಿದೆ.

ದರೋಡೆಕೋರರು ಅಂಗಡಿಗೆ ನುಗ್ಗಿ ಅಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಆಭರಣಗಳನ್ನು ದೋಚಿದ್ದಾರೆ. ವಿಡಿಯೊದಲ್ಲಿ, ದರೋಡೆಕೋರರಲ್ಲಿ ಒಬ್ಬರು ಅಂಗಡಿಯೊಳಗಿನ ವ್ಯಕ್ತಿಯ ಮೇಲೆ ಬಂದೂಕನ್ನು ಗುರಿಯಾಗಿಸಿಕೊಂಡರೆ, ಇನ್ನೊಬ್ಬ ವ್ಯಕ್ತಿಯ ಕಾಲರ್ ಹಿಡಿದು ಕೆಳಕ್ಕೆ ತಳ್ಳುತ್ತಿದ್ದಾನೆ. ಮೂರನೆಯವನು ಅಂಗಡಿಯೊಳಗೆ ಇದ್ದ ವಸ್ತುಗಳನ್ನು ತೆಗೆದುಕೊಂಡಿದ್ದಾನೆ ಮತ್ತು ನಂತರ, ಮೂವರು ಅಂಗಡಿಯಿಂದ ಹೊರಗೆ ಹೋಗಿದ್ದಾರೆ.

ಪುಣೆಯ ಲಕ್ಷ್ಮಿ ಚೌಕ್ ಹಿಂಜೇವಾಡಿಯಲ್ಲಿ ಬೆಳಿಗ್ಗೆ 10:30 ಕ್ಕೆ ಈ ಘಟನೆ ನಡೆದಿದ್ದು, ಕೆಲವೇ ಸೆಕೆಂಡುಗಳಲ್ಲಿ ದರೋಡೆಕೋರರು ಅಂಗಡಿಯಲ್ಲಿರುವ ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡು ಜಾಗ ಖಾಲಿ ಮಾಡಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಈಗಾಗಲೇ ಸಿಸಿಟಿವಿಯಲ್ಲಿ ಕಳ್ಳತನದ ದೃಶ್ಯ ಸೆರೆಯಾಗಿದ್ದು, ಪೊಲೀಸರು ಅದನ್ನು ಪರೀಶಿಲಿಸಿ ಕಳ್ಳರನ್ನು ಹುಡುಕುವ ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:ನಿನಗೆಷ್ಟು ಬಾಯ್‌ಫ್ರೆಂಡ್‌ ಎನ್ನುತ್ತ ಗೆಳತಿಗೆ ಭೀಕರವಾಗಿ ಇರಿದ ಯುವ ಕಾಂಗ್ರೆಸ್ ಮುಖಂಡ!

ಕಳೆದ ತಿಂಗಳು, ಇದೇ ರೀತಿಯ ಕಳ್ಳತನದ ಪ್ರಕರಣ ನಡೆದಿದ್ದು, ಖಾರ್ಘರ್ ಪ್ರದೇಶದಲ್ಲಿ ರಾತ್ರಿ 10:00 ರ ಸುಮಾರಿಗೆ ಮೂವರು ದರೋಡೆಕೋರರು ಹೆಲ್ಮೆಟ್ ಧರಿಸಿ ಆಭರಣ ಅಂಗಡಿಗೆ ನುಗ್ಗಿ ಬಂದೂಕು ತೋರಿಸಿ ಆಭರಣ ಅಂಗಡಿಯನ್ನು ಲೂಟಿ ಮಾಡಿದ್ದರು. ಕಳ್ಳತನದ ದೃಶ್ಯ ಅಂಗಡಿಯಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಹಿಡಿಯಾಗಿದೆ, ಮುಖವಾಡ ಧರಿಸಿದ ಮೂವರು ದರೋಡೆಕೋರರನ್ನು ಪತ್ತೆಹಚ್ಚಲು ಪೊಲೀಸರು ತಂಡಗಳನ್ನು ರಚಿಸಿದ್ದಾರೆ. ದರೋಡೆಯ ಸಮಯದಲ್ಲಿ, ದರೋಡೆಕೋರರು ಅಂಗಡಿಯೊಳಗೆ ಹಲವಾರು ಬಾರಿ ಗುಂಡುಗಳನ್ನು ಹಾರಿಸಿದರು. ಅವರು ತಪ್ಪಿಸಿಕೊಳ್ಳುವಾಗ, ಅವರು ಹೆಚ್ಚುವರಿ ಸುತ್ತು ಗುಂಡು ಹಾರಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆಟೋಮೊಬೈಲ್

Bike Mileage Tips: ಬೈಕ್‌‌ಗೆ ಟ್ಯೂಬ್, ಟ್ಯೂಬ್ ಲೆಸ್ ಟಯರ್; ಇವೆರಡರಲ್ಲಿ ಯಾವುದು ಬೆಸ್ಟ್?

ಬೈಕ್ ಉತ್ತಮ ಮೈಲೇಜ್ (Bike Mileage Tips) ನೀಡಬೇಕಾದರೆ ಉತ್ತಮ ಗುಣಮಟ್ಟದ ಟಯರ್ ಬಳಕೆ ಮಾಡುವುದು ಎಷ್ಟು ಮುಖ್ಯವೋ ಅದನ್ನು ನಿರ್ವಹಣೆ ಮಾಡುವುದು ಕೂಡ ಅಷ್ಟೇ ಮುಖ್ಯವಾಗಿರುತ್ತದೆ. ಟಯರ್ ನ ಪ್ರಕಾರವು ಬೈಕ್ ನ ಮೈಲೇಜ್ ಅನ್ನು ಹೆಚ್ಚಿಸಬಹುದು ಅಥವಾ ಕಡಿಮೆ ಮಾಡಬಹುದು. ಯಾವ ಟಯರ್ ಸೂಕ್ತ? ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

By

Bike Mileage Tips
Koo

ವಾಹನದ ಮೈಲೇಜ್ (Bike Mileage Tips) ಹಲವಾರು ಅಂಶಗಳ ಮೇಲೆ ನಿರ್ಧರಿಸಲ್ಪಡುತ್ತದೆ. ಇದರಲ್ಲಿ ಯಾವ ಟಯರ್ (tyres) ಬಳಸುತ್ತಿದ್ದೀರಿ ಎಂಬುದು ಕೂಡ ಒಂದಾಗಿದೆ. ಬೈಕ್ ಉತ್ತಮ ಮೈಲೇಜ್ (Bike mileage) ನೀಡಬೇಕಾದರೆ ಉತ್ತಮ ಗುಣಮಟ್ಟದ ಟಯರ್ (bike tyres) ಬಳಕೆ ಮಾಡುವುದು ಎಷ್ಟು ಮುಖ್ಯವೋ ಅದನ್ನು ನಿರ್ವಹಣೆ ಮಾಡುವುದು ಕೂಡ ಅಷ್ಟೇ ಮುಖ್ಯವಾಗಿರುತ್ತದೆ. ಟಯರ್ ನ ಪ್ರಕಾರವು ಬೈಕ್ ನ ಮೈಲೇಜ್ ಅನ್ನು ಹೆಚ್ಚಿಸಬಹುದು ಅಥವಾ ಕಡಿಮೆ ಮಾಡಬಹುದು.

ಸಾಮಾನ್ಯವಾಗಿ ಟ್ಯೂಬ್ ಲೆಸ್ ಬೈಕ್ ಟಯರ್ ಗಳು ಟ್ಯೂಬ್ ಟಯರ್ ಗಳಿಗಿಂತ ಹೆಚ್ಚು ದುಬಾರಿ. ಇದರ ಹಿಂದೆ ಕೆಲವು ಕಾರಣಗಳಿವೆ. ಟ್ಯೂಬ್‌ಲೆಸ್ ಟಯರ್ ಗಳ ಉತ್ಪಾದನಾ ಪ್ರಕ್ರಿಯೆ ಮತ್ತು ತಾಂತ್ರಿಕ ಸಂಕೀರ್ಣತೆ ಹೆಚ್ಚಾಗಿರುತ್ತದೆ. ಗಾಳಿಯ ಸೋರಿಕೆಯನ್ನು ಕಡಿಮೆ ಮಾಡಲು ಅವರಿಗೆ ವಿಶೇಷ ರಬ್ಬರ್ ಮತ್ತು ಸೀಲಿಂಗ್ ಅಗತ್ಯವಿರುತ್ತದೆ. ಇದು ತಯಾರಿಸಲು ಹೆಚ್ಚು ದುಬಾರಿಯಾಗಿದೆ. ಅಲ್ಲದೇ ಟ್ಯೂಬ್‌ಲೆಸ್ ಟಯರ್ ಗಳು ಹೆಚ್ಚು ಪಂಕ್ಚರ್ ನಿರೋಧಕವಾಗಿರುತ್ತವೆ ಮತ್ತು ರೋಲಿಂಗ್ ಪ್ರತಿರೋಧವನ್ನು ಹೊಂದಿರುತ್ತವೆ. ಇದು ದೀರ್ಘಾವಧಿಯಲ್ಲಿ ಉತ್ತಮ ಕಾರ್ಯಕ್ಷಮತೆ ಮತ್ತು ಕಡಿಮೆ ನಿರ್ವಹಣೆಗೆ ಕಾರಣವಾಗುತ್ತದೆ.

ಇನ್ನು ಟ್ಯೂಬ್ಡ್ ಟಯರ್ ಗಳು ಸಾಮಾನ್ಯವಾಗಿ ಅಗ್ಗವಾಗಿರುತ್ತವೆ. ಯಾಕೆಂದರೆ ಅವುಗಳ ಉತ್ಪಾದನಾ ಪ್ರಕ್ರಿಯೆಯು ಸರಳವಾಗಿದೆ ಮತ್ತು ಟ್ಯೂಬ್ ಅನ್ನು ಬದಲಾಯಿಸಲು ಮತ್ತು ಸರಿಪಡಿಸಲು ಸಹ ಸುಲಭವಾಗಿದೆ.

ಟ್ಯೂಬ್ಲೆಸ್ ಮತ್ತು ಟ್ಯೂಬ್ಡ್ ಟಯರ್ ಗಳ ನಡುವಿನ ವ್ಯತ್ಯಾಸ ಏನು?

Bike Mileage Tips
Bike Mileage Tips


ರಚನೆ

ಟ್ಯೂಬ್‌ಲೆಸ್ ಟಯರ್ ಗಳಿಗೆ ಟ್ಯೂಬ್ ಅಗತ್ಯವಿಲ್ಲ. ಟಯರ್ ಮತ್ತು ರಿಮ್ ನಡುವೆ ಏರ್ ಸೀಲ್ ಅನ್ನು ರಚಿಸಲು ವಿಶೇಷ ರೀತಿಯ ರಬ್ಬರ್ ಸೀಲಿಂಗ್ ಇದೆ. ಗಾಳಿಯು ನೇರವಾಗಿ ಟಯರ್ ಒಳಗೆ ಉಳಿಯುತ್ತದೆ ಮತ್ತು ರಿಮ್ ನೊಂದಿಗೆ ಸೀಲ್ ಅನ್ನು ರೂಪಿಸುತ್ತದೆ.

ಟ್ಯೂಬ್ ಟಯರ್ ಒಳಗೆ ಗಾಳಿಯನ್ನು ಆವರಿಸುವ ಒಳಗಿನ ಟ್ಯೂಬ್ ಅನ್ನು ಹೊಂದಿರುತ್ತವೆ. ಈ ಟ್ಯೂಬ್ ರಬ್ಬರ್‌ನಿಂದ ಮಾಡಲ್ಪಟ್ಟಿದೆ ಮತ್ತು ಟಯರ್ ಒಳಗೆ ಗಾಳಿಯನ್ನು ಇರಿಸಲು ಕೆಲಸ ಮಾಡುತ್ತದೆ.

ಪಂಕ್ಚರ್ ಪ್ರೂಫ್ನೆಸ್

ಟ್ಯೂಬ್‌ಲೆಸ್ ಟಯರ್ ಗಳು ಪಂಕ್ಚರ್‌ಗಳಿಗೆ ಹೆಚ್ಚು ನಿರೋಧಕವಾಗಿರುತ್ತವೆ. ಯಾಕೆಂದರೆ ಕಡಿಮೆ ಗಾಳಿಯ ಸೋರಿಕೆ ಇರುತ್ತದೆ. ಸಣ್ಣ ಪಂಕ್ಚರ್‌ಗಳು ಸ್ವಯಂಚಾಲಿತವಾಗಿ ಮುಚ್ಚಿಕೊಳ್ಳಬಹುದು, ತುರ್ತು ಪರಿಸ್ಥಿತಿಯಲ್ಲಿ ಕಡಿಮೆ ಸಮಸ್ಯೆಗಳನ್ನು ಉಂಟುಮಾಡಬಹುದು.

ಟ್ಯೂಬ್ ಟಯರ್ ಪಂಕ್ಚರ್ ಆದ ಸಂದರ್ಭದಲ್ಲಿ ಗಾಳಿಯು ಟ್ಯೂಬ್ ನಿಂದ ವೇಗವಾಗಿ ಹೊರಬರುತ್ತದೆ.

ಉತ್ತಮ ಮೈಲೇಜ್

ಟ್ಯೂಬ್ ಲೆಸ್ ಟಯರ್ ಗಳು ಸಾಮಾನ್ಯವಾಗಿ ಟ್ಯೂಬ್ ಟಯರ್ ಗಳಿಗಿಂತ ಉತ್ತಮ ಮೈಲೇಜ್ ನೀಡಬಲ್ಲವು. ಇದಕ್ಕೆ ಕೆಲವು ಕಾರಣಗಳಿವೆ.

ಪ್ಯಾಚಿಂಗ್ ಮತ್ತು ಪಂಕ್ಚರ್ ಪ್ರೂಫ್ನೆಸ್

ಟ್ಯೂಬ್‌ಲೆಸ್ ಟಯರ್ ಗಳು ಕಡಿಮೆ ಗಾಳಿಯನ್ನು ಸೋರಿಕೆ ಮಾಡುತ್ತವೆ ಮತ್ತು ಪಂಕ್ಚರ್‌ಗಳಿಗೆ ಹೆಚ್ಚು ನಿರೋಧಕವಾಗಿರುತ್ತವೆ. ಇದರರ್ಥ ಕಡಿಮೆ ಬಾರಿ ಗಾಳಿಯನ್ನು ತುಂಬಿದರೆ ಸಾಕಾಗುತ್ತದೆ. ಈ ಟಯರ್ ನ ಬಾಳಿಕೆ ಹೆಚ್ಚು.

ಕಡಿಮೆ ರೋಲಿಂಗ್ ಪ್ರತಿರೋಧ

ಟ್ಯೂಬ್‌ಲೆಸ್ ಟಯರ್ ಗಳು ಕಡಿಮೆ ರೋಲಿಂಗ್ ಪ್ರತಿರೋಧವನ್ನು ಹೊಂದಿವೆ. ಇದು ಬೈಕ್‌ನ ಇಂಧನ ದಕ್ಷತೆಯನ್ನು ಸುಧಾರಿಸುತ್ತದೆ.

ಹಗುರ

ಟ್ಯೂಬ್‌ಲೆಸ್ ಟಯರ್ ಗಳು ಸಾಮಾನ್ಯವಾಗಿ ಹಗುರವಾಗಿರುತ್ತವೆ. ಯಾಕೆಂದರೆ ಅವುಗಳಿಗೆ ಟ್ಯೂಬ್ ಅಗತ್ಯವಿಲ್ಲ. ಇದು ಬೈಕಿನ ಒಟ್ಟಾರೆ ತೂಕವನ್ನು ಕಡಿಮೆ ಮಾಡುತ್ತದೆ. ಇದು ಮೈಲೇಜ್ ಮೇಲೆ ಧನಾತ್ಮಕ ಪರಿಣಾಮ ಬೀರುತ್ತದೆ.

ಇದನ್ನೂ ಓದಿ: 4 ಲಕ್ಷ ಬೈಕ್‌, ಸ್ಕೂಟರ್‌ ಹಿಂಪಡೆಯಲು ಮುಂದಾದ ಸುಜುಕಿ ಇಂಡಿಯಾ; ಈ ಪಟ್ಟಿಯಲ್ಲಿ ನಿಮ್ಮ ವಾಹನವೂ ಇದ್ಯಾ? ಹೀಗೆ ಚೆಕ್‌ ಮಾಡಿ

ಇನ್ನು ಕೆಲವು ಕಾರಣಗಳಿವೆ

ಸರಿಯಾದ ಟಯರ್ ಅನ್ನು ಆಯ್ಕೆ ಮಾಡುವುದು ಚಾಲನಾ ಶೈಲಿ, ರಸ್ತೆ ಪರಿಸ್ಥಿತಿಗಳು ಮತ್ತು ಬೈಕು ಪ್ರಕಾರವನ್ನು ಅವಲಂಬಿಸಿರುತ್ತದೆ. ಕೆಲವು ಸಂದರ್ಭಗಳಲ್ಲಿ, ಟ್ಯೂಬ್ಡ್ ಟಯರ್ ಗಳು ಉತ್ತಮ ಕಾರ್ಯಕ್ಷಮತೆಯನ್ನು ನೀಡುತ್ತವೆ.

ಟ್ಯೂಬ್‌ಲೆಸ್ ನ ಪ್ರಯೋಜನವೇನು?

ಟ್ಯೂಬ್‌ಲೆಸ್ ಟಯರ್ ಗಳು ಟ್ಯೂಬ್ಡ್ ಟಯರ್ ಗಳಿಗೆ ಹೋಲಿಸಿದರೆ ಹೆಚ್ಚು ದುಬಾರಿಯಾಗಿರುತ್ತವೆ. ಆದರೆ ಹೆಚ್ಚು ಕಾಲ ಬಾಳಿಕೆ ಬರುತ್ತವೆ ಮತ್ತು ಸುಲಭವಾಗಿ ದುರಸ್ತಿ ಮಾಡಬಹುದಾಗಿದೆ.

Continue Reading

Latest

Land Dispute: ಭೂ ವಿವಾದ ಪ್ರಕರಣ; ಜೀವಂತ ಸಮಾಧಿಯಾದವನನ್ನು ರಕ್ಷಿಸಿದ ಬೀದಿನಾಯಿಗಳು!

Land Dispute: ಭೂ ವಿವಾದದಲ್ಲಿ ಜೀವಂತವಾಗಿ ಸಮಾಧಿ ಮಾಡಿದ ವ್ಯಕ್ತಿಯನ್ನು ನಾಯಿಗಳು ರಕ್ಷಿಸಿದ್ದು ಹೇಗೆ ಗೊತ್ತಾ?ಆಸ್ತಿ, ಹಣದ ಆಸೆಗೆ ಜನರು ಮನುಷ್ಯತ್ವವನ್ನು ಮರೆಯುತ್ತಿದ್ದಾರೆ.ಇದರ ಮುಂದೆ ಸಂಬಂಧಗಳಿಗೂ ಬೆಲೆಯಿಲ್ಲ.ಆಸ್ತಿಗಾಗಿ ತಮ್ಮವರನ್ನೇ ಕೊಲ್ಲುವ ಮಟ್ಟಕ್ಕೂ ಹೋಗುತ್ತಿದ್ದಾರೆ. ಇಂತಹ ಪ್ರಕರಣಗಳು ಹಲವು ನಡೆದಿದೆ. ಇದೀಗ ಭೂ ವಿವಾದಕ್ಕೆ ಸಂಬಂಧಿಸಿದಂತೆ 24 ವರ್ಷದ ವ್ಯಕ್ತಿಯನ್ನು ನಾಲ್ವರು ಜೀವಂತವಾಗಿ ಸಮಾಧಿ ಮಾಡಿದ್ದು, ಬೀದಿನಾಯಿಗಳು ಆತನನ್ನು ರಕ್ಷಿಸಿದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.

VISTARANEWS.COM


on

Land Dispute
Koo


ಆಗ್ರಾ: ಹಣ, ಆಸ್ತಿ, ಅಧಿಕಾರದ ಆಸೆಗೆ ಮನುಷ್ಯರು ತಮ್ಮವರನ್ನೇ ಕೊಲ್ಲುವ ಮಟ್ಟಕ್ಕೆ ಹೋಗುತ್ತಾರೆ ಎಂಬುದಕ್ಕೆ ರಾಮಾಯಣ, ಮಹಾಭಾರತ ಸಾಕ್ಷಿಯಾಗಿದೆ. ಇಂದಿಗೂ ಆಸ್ತಿ, ಹಣದ ಆಸೆಗೆ ಜನರು ಮನುಷ್ಯತ್ವವನ್ನು ಕಳೆದುಕೊಂಡು ಬಹಳ ಕ್ರೂರವಾಗುತ್ತಿದ್ದಾರೆ. ಅದಕ್ಕಾಗಿ ಅವರು ತಮ್ಮವರನ್ನೇ ಕೊಲ್ಲುವ ಮಟ್ಟಕ್ಕೂ ಹೋಗುತ್ತಿದ್ದಾರೆ. ಇಂತಹ ಪ್ರಕರಣಗಳು ಹಲವು ನಡೆದಿದೆ. ಇದೀಗ ಭೂ ವಿವಾದಕ್ಕೆ (Land Dispute )ಸಂಬಂಧಿಸಿದಂತೆ 24 ವರ್ಷದ ವ್ಯಕ್ತಿಯನ್ನು ನಾಲ್ವರು ಜೀವಂತವಾಗಿ ಸಮಾಧಿ ಮಾಡಿದ್ದು, ನಾಯಿಗಳು ಆತನನ್ನು ರಕ್ಷಿಸಿದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.

ಸಂತ್ರಸ್ತ ರೂಪ್ ಕಿಶೋರ್ (24) ಎಂಬುದಾಗಿ ತಿಳಿದುಬಂದಿದೆ. ಆಗ್ರಾದ ಆರ್ಟೋನಿ ಪ್ರದೇಶದಲ್ಲಿ ಜುಲೈ 18 ರಂದು ರೂಪ್ ಕಿಶೋರ್ ಮೇಲೆ ಅಂಕಿತ್, ಗೌರವ್, ಕರಣ್ ಮತ್ತು ಆಕಾಶ್ ಎಂಬ ನಾಲ್ವರು ಹಲ್ಲೆ ನಡೆಸಿದ್ದರು. ಅವರು ಅವನನ್ನು ಕತ್ತು ಹಿಸುಕಿ ನಂತರ ಅವನು ಸತ್ತಿದ್ದಾನೆಂದು ಭಾವಿಸಿ ತಮ್ಮ ಜಮೀನಿನಲ್ಲಿ ಹೂತುಹಾಕಿದ್ದಾರೆ. ಆದರೆ ಅದೃಷ್ಟವಶಾತ್ ಕಿಶೋರ್ ಅವರನ್ನು ಸಮಾಧಿ ಮಾಡಿದ ಪ್ರದೇಶವನ್ನು ಬೀದಿ ನಾಯಿಗಳು ಅಗೆದು ಅವರ ದೇಹವನ್ನು ಕಚ್ಚಿ ತಿನ್ನಲು ಮುಂದಾದಾಗ ಕಿಶೋರ್ ಗೆ ಪ್ರಜ್ಞೆ ಬಂದಿದೆ. ಆಗ ಅವರು ಅಲ್ಲೇ ಹತ್ತಿರದ ಪ್ರದೇಶಕ್ಕೆ ನಡೆದುಕೊಂಡು ಹೋಗಿ ಅಲ್ಲಿನ ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆರೋಪಿಗಳು ತನ್ನ ಮಗನನ್ನು ಬಲವಂತವಾಗಿ ಮನೆಯಿಂದ ಕರೆದೊಯ್ದು, ಕ್ರೂರವಾಗಿ ಹಲ್ಲೆ ನಡೆಸಿ ಕತ್ತು ಹಿಸುಕಿ, ನಂತರ ತಮ್ಮ ಜಮೀನಿನಲ್ಲಿ ಹೂತುಹಾಕಿದ್ದಾರೆ ಎಂದು ಕಿಶೋರ್ ತಾಯಿ ಹೇಳಿದ್ದಾರೆ. ಈ ಬಗ್ಗೆ ಕಿಶೋರ್ ತಾಯಿ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ಧ ದೂರು ದಾಖಲಿಸಿದ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಿಸಿದ ಪೊಲೀಸರು ಆರೋಪಿಗಳ ವಿರುದ್ಧ ತನಿಖೆ ನಡೆಸುತ್ತಿದ್ದಾರೆ. ಪ್ರಸ್ತುತ ತಲೆಮರೆಸಿಕೊಂಡಿರುವ ನಾಲ್ವರು ಆರೋಪಿಗಳನ್ನು ಹಿಡಿಯುವ ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಪ್ಯಾರಿಸ್‌ಗೆ ಹೋದರೂ ಅಂಬಾನಿ ಸೊಸೆ ಕರಿಮಣಿ ಮರೆಯಲಿಲ್ಲ! ಸೋಷಿಯಲ್‌ ಮೀಡಿಯಾದಲ್ಲೀಗ ಇದೇ ಚರ್ಚೆ!

ಆಸ್ತಿಯ ವಿಚಾರಕ್ಕೆ ಜನರು ತಮ್ಮವರ ಮೇಲೆ ಹಲ್ಲೆ ಮಾಡುವ ಪ್ರಕರಣ ಇದೇ ಮೊದಲಲ್ಲಾ. ಈ ಹಿಂದೆ ಜುಲೈ ತಿಳಗಳಿನಲ್ಲಿ ಅನಂತಪುರ ಜಿಲ್ಲೆಯ ಗರ್ಲದಿನ್ನೆ ಮಂಡಲದ ಪೆನಕಚೆರ್ಲಾ ಗ್ರಾಮದಲ್ಲಿ ಆಸ್ತಿ, ಮನೆ ವಿಚಾರಕ್ಕೆ ವ್ಯಕ್ತಿಯೊಬ್ಬ ತನ್ನ ಸಹೋದರಿಯ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿ ಆಕೆಯನ್ನು ತೀವ್ರವಾಗಿ ಗಾಯಗೊಳಿಸಿದ್ದಾನೆ. ಜಿಲಾನಿ ಎಂಬ ವ್ಯಕ್ತಿ ತನ್ನ ಸಹೋದರಿ ಮೆಹಬೂಬಿ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

Continue Reading

Latest

Radhika Merchant: ಪ್ಯಾರಿಸ್‌ಗೆ ಹೋದರೂ ಅಂಬಾನಿ ಸೊಸೆ ಕರಿಮಣಿ ಮರೆಯಲಿಲ್ಲ! ಸೋಷಿಯಲ್‌ ಮೀಡಿಯಾದಲ್ಲೀಗ ಇದೇ ಚರ್ಚೆ!

Radhika Merchant: ಹಿಂದೂ ಧರ್ಮದಲ್ಲಿ ಕರಿಮಣಿಗೆ ಅದರದ್ದೇ ಆದ ಸ್ಥಾನವಿದೆ. ಆದರೆ ಈಗ ಫ್ಯಾಷನ್ ನೆಪದಲ್ಲಿ ಕರಿಮಣಿಯನ್ನು ಹಾಕದೇ ಹಾಗೇ ಹೋಗುವವರೂ ಇದ್ದಾರೆ. ಆಗರ್ಭ ಶ್ರೀಮಂತ ಮನೆತನದ ಸೊಸೆ ರಾಧಿಕಾ ಮರ್ಚೆಂಟ್ ತಮ್ಮ ಕುತ್ತಿಗೆಯಲ್ಲಿ ಕರಿಮಣಿಯನ್ನು ಧರಿಸಿರುವುದಕ್ಕೆ ಈಗ ಸಾಕಷ್ಟು ಜನ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ವಿದೇಶದಲ್ಲಿ ತಾವು ವಿದೇಶಿಯರ ತರಹ ಇರಬೇಕು ಎಂಬ ಹಪಾಹಪಿ ಕೆಲವರಿಗೆ ಇರುತ್ತದೆ. ಆದರೆ ಪ್ಯಾರಿಸ್ ಒಲಿಂಪಿಕ್ಸ್ ವೀಕ್ಷಿಸಲು ಇಂಡಿಯಾ ಹೌಸ್‌ಗೆ ಭೇಟಿ ನೀಡಿದ ರಾಧಿಕಾ ಮರ್ಚೆಂಟ್ ಕುತ್ತಿಗೆಯಲ್ಲಿ ಕರಿಮಣಿ ನೋಡಿ ಸಂಪ್ರದಾಯವಾದಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ!

VISTARANEWS.COM


on

Radhika Merchant
Koo

ಮುಂಬೈ : ಮದುವೆಯಾದ ಮಹಿಳೆಯರು ಮಂಗಳಸೂತ್ರ ಧರಿಸುವುದು ಹಿಂದೂ ಸಂಸ್ಕೃತಿಯಾಗಿದೆ. ಹಾಗಾಗಿ ಆಗಿನ ಕಾಲದಲ್ಲಿ ಮದುವೆಯಾದ ಎಲ್ಲಾ ಮಹಿಳೆಯರು ಕೊರಳಿನಲ್ಲಿ ಮಂಗಳಸೂತ್ರ ಧರಿಸುತ್ತಿದ್ದರು. ಆದರೆ ಇಂದಿನ ಕಾಲದಲ್ಲಿ ಕೆಲವು ಮಹಿಳೆಯರು ಮಂಗಳಸೂತ್ರ ಧರಿಸುವುದಿಲ್ಲ. ಫ್ಯಾಷನ್‌ ಹೆಸರಿನಲ್ಲಿ ಕೆಲವರು ಮಂಗಳಸಸೂತ್ರವನ್ನು ಕಾಲಿಗೆ ಕಟ್ಟಿಕೊಂಡಿದ್ದೂ ಇದೆ! ಅಂತಹದರಲ್ಲಿ ಆಗರ್ಭ ಶ್ರೀಮಂತ ಮುಖೇಶ್ ಅಂಬಾನಿ ಸೊಸೆ ರಾಧಿಕಾ ಮರ್ಚೆಂಟ್ (Radhika Merchant) ಅವರು ಕೊರಳಿನಲ್ಲಿ ಮಂಗಳಸೂತ್ರ ಧರಿಸಿ ಪ್ಯಾರಿಸ್‌ನಲ್ಲಿ ಮಿಂಚಿದ್ದು ಸಾಮಾನ್ಯ ಜನರಲ್ಲಿ ಚರ್ಚೆಗೆ ಕಾರಣವಾಗಿದೆ. ಅದಕ್ಕೆ ಸಂಬಂಧಪಟ್ಟ ಪೋಟೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದನ್ನು ಕಂಡು ಹಲವರು ರಾಧಿಕಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಿಲಯನ್ಸ್ ಫೌಂಡೇಶನ್ ಮತ್ತು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ) ಅಡಿಯಲ್ಲಿ ಬರುವ ಇಂಡಿಯಾ ಹೌಸ್‍ಗೆ ಐಒಸಿ ಸದಸ್ಯೆಯಾದ ಅನಂತ್ ಅವರ ತಾಯಿ ನೀತಾ ಅಂಬಾನಿಯವರ ಜೊತೆ ಅವರ ಕುಟುಂಬ ಸದಸ್ಯರು 2024ರ ಪ್ಯಾರಿಸ್ ಒಲಿಂಪಿಕ್ಸ್ ವೀಕ್ಷಿಸಲು ಇಂಡಿಯಾ ಹೌಸ್‍ಗೆ ಭೇಟಿ ನೀಡಿದ್ದಾರೆ. ಆ ವೇಳೆ ನವವಿವಾಹಿತರಾದ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ದಂಪತಿ ತಮ್ಮ ಕುಟುಂಬದ ಜೊತೆ ಇಂಡಿಯಾ ಹೌಸ್‍ಗೆ ಹೋಗಿದ್ದಾರೆ. ಅವರ ವಿಡಿಯೊಗಳು ಮತ್ತು ಪೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡಿವೆ.

ಈ ವೇಳೆ ರಾಧಿಕಾ ಕಿತ್ತಳೆ ಬಣ್ಣದ ವೆಸ್ಟರ್ನ್ ಡ್ರೆಸ್ ಧರಿಸಿದ್ದರೆ, ಅನಂತ್ ಪ್ರಾಣಿಗಳ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸುವ ಪ್ರಾಣಿಗಳ ಗುರುತುಗಳನ್ನು ಹೊಂದಿರುವ ಶರ್ಟ್‍ನ್ನು ಧರಿಸಿದ್ದರು. ಆದರೆ ಪ್ಯಾರಿಸ್‍ನಲ್ಲಿ ಫ್ಯಾಶನ್‍ಗಾಗಿ ರಾಧಿಕಾ ವೆಸ್ಟರ್ನ್ ಡ್ರೆಸ್ ಧರಿಸಿದ್ದರೂ ಕೂಡ ಭಾರತದ ಸಂಸ್ಕೃತಿಯನ್ನು ಮರೆಯಲಿಲ್ಲ. ಅವರು ತಮ್ಮ ಕೊರಳಿನಲ್ಲಿ ಮಂಗಳಸೂತ್ರವನ್ನು ಧರಿಸಿದ್ದರು. ಇದನ್ನು ಕಂಡು ಹಲವರು ರಾಧಿಕಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಶ್ರೀಮಂತ ಮನೆತನದ ಸೊಸೆಯಾದರೂ ಸಂಪ್ರದಾಯವನ್ನು ಪಾಲಿಸಿದ್ದಕ್ಕೆ ಹಲವರು ರಾಧಿಕಾಳನ್ನು ಹೊಗಳಿದ್ದಾರೆ.

ಅನಂತ್ ಅಂಬಾನಿ ಮತ್ತು ರಾಧಿಕಾ ಅವರ ವಿವಾಹ ಮಹೋತ್ಸವವು ಭಾರತೀಯ ಆಚರಣೆಗಳು, ಪದ್ಧತಿಗಳು ಮತ್ತು ಸಂಪ್ರದಾಯಗಳ ಬಗ್ಗೆ ಅವರ ಕುಟುಂಬಗಳಿಗೆ ಆಳವಾದ ಗೌರವವನ್ನು ಬಹಿರಂಗಪಡಿಸಿತ್ತು. ಮದುವೆ ಆಮಂತ್ರಣ ಪತ್ರಿಕೆಯಲ್ಲೂ ಹಿಂದೂದೇವರ ಪೋಟೊಗಳನ್ನು ಹಾಕುವುದನ್ನು ಈ ಕುಟುಂಬ ಮರೆಯಲಿಲ್ಲ. ಹಾಗೇ ಮದುವೆಗೂ ಮುನ್ನಕುಟುಂಬದವರು ಮನೆಯಲ್ಲಿ ದೇವರ ಪೂಜೆ, ಹೋಮಗಳನ್ನು ಮಾಡಿಸಿದ್ದರು. ಅಲ್ಲದೇ ಜುಲೈ 12ರಿಂದ 14ರ ತನಕ ಆಚರಿಸಲಾದ ವಿವಾಹಮಹೋತ್ಸವದಲ್ಲಿ ಕೂಡ ಈ ಕುಟುಂಬದವರು ತಮ್ಮ ಸಂಸ್ಕೃತಿ, ಸಂಪ್ರದಾಯವನ್ನು ಚಾಚು ತಪ್ಪದೇ ಪಾಲಿಸಿದ್ದಾರೆ.

ಅಮಿತಾಭ್ ಬಚ್ಚನ್, ಶಾರುಖ್ ಖಾನ್, ಗೌರಿ ಖಾನ್, ರಣವೀರ್ ಸಿಂಗ್, ದೀಪಿಕಾ ಪಡುಕೋಣೆ, ಕಿಮ್ ಕಾರ್ದಶಿಯಾನ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಮದುವೆಗೆ ಸಾಕ್ಷಿಯಾದರು.

ಇದನ್ನೂ ಓದಿ: ಅಮೆಜಾನ್‌ನಲ್ಲಿ 55,000 ರೂ. ಮೊಬೈಲ್ ಫೋನ್ ಆರ್ಡರ್ ಮಾಡಿದವನಿಗೆ ಸಿಕ್ಕಿದ್ದು ಟೀ ಕಪ್!

ಜುಲೈ 12ರಂದು ಭವ್ಯ ಸಮಾರಂಭದೊಂದಿಗೆ ವಿವಾಹ ಮಹೋತ್ಸವ ಪ್ರಾರಂಭವಾಯಿತು, ನಂತರ ಜುಲೈ 13ರಂದು ‘ಶುಭ ಆಶೀರ್ವಾದ್’ ಸಮಾರಂಭ ನಡೆಯಿತು, ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪ್ರಸಿದ್ಧ ಧಾರ್ಮಿಕ ಮುಖಂಡರು ಉಪಸ್ಥಿತರಿದ್ದರು. ಜುಲೈ 14ರಂದು ನಡೆದ ನಂತರದ ಭವ್ಯ ಆರತಕ್ಷತೆಯಲ್ಲಿ ಮನರಂಜನಾ ಉದ್ಯಮದ ಪ್ರಮುಖ ವ್ಯಕ್ತಿಗಳು ಭಾಗವಹಿಸಿದ್ದರು.

Continue Reading

ದೇಶ

FASTag new rule: ಫಾಸ್ಟ್ ಟ್ಯಾಗ್ ಹೊಸ ನಿಯಮ; ನವೀಕರಣ ಹೇಗೆ? ಕೊನೆಯ ದಿನ ಯಾವಾಗ?

FASTag new rule: ಹೆದ್ದಾರಿಗಳಲ್ಲಿ ಸುಗಮ ಸಂಚಾರಕ್ಕಾಗಿ ಫಾಸ್ಟ್ ಟ್ಯಾಗ್‌ಗೆ ಸಂಬಂಧಿಸಿ ಹೊಸ ನಿಯಮವನ್ನು ಜಾರಿಗೆ ತರಲಾಗಿದೆ. ಎಲ್ಲಾ ಬಳಕೆದಾರರು ಹೊಸ ನಿಯಮ ಮತ್ತು ನಿಬಂಧನೆಗಳಿಗೆ ಬದ್ಧವಾಗಿರುವುದು ಅತ್ಯಗತ್ಯ. ಒಂದು ವೇಳೆ ಅಕ್ಟೋಬರ್ 31ರೊಳಗೆ ತಮ್ಮ ಖಾತೆಗಳನ್ನು ನವೀಕರಿಸದೇ ಇದ್ದರೆ ಟೋಲ್ ಪ್ಲಾಜಾಗಳಲ್ಲಿ ಹೆಚ್ಚಿನ ದಂಡ ತೆರಬೇಕಾಗುತ್ತದೆ. ಈ ಕುರಿತ ಉಪಯುಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

By

FASTag new rule
Koo

ಟೋಲ್ ಸಂಗ್ರಹ (toll collection) ವ್ಯವಸ್ಥೆಯನ್ನು ಸುವ್ಯಸ್ಥಿತಗೊಳಿಸಲು ನ್ಯಾಷನಲ್ ಪೇಮೆಂಟ್ ಆಫ್ ಇಂಡಿಯಾ (NPCI) ಆಗಸ್ಟ್ 1ರಿಂದ ಜಾರಿಯಾಗುವಂತೆ ಹೊಸ ಫಾಸ್ಟ್ ಟ್ಯಾಗ್ ನಿಯಮಗಳನ್ನು (FASTag new rule) ಪರಿಚಯಿಸಿದೆ. ಟೋಲ್ ಪ್ಲಾಜಾಗಳಲ್ಲಿ ಉಂಟಾಗುವ ತೊಂದರೆಯನ್ನು ತಪ್ಪಿಸಲು ವಾಹನ ಬಳಕೆದಾರರು ಫಾಸ್ಟ್ ಟ್ಯಾಗ್ ಗಾಗಿ (FASTag) ತಮ್ಮ ಖಾತೆಗಳನ್ನು ನವೀಕರಿಸುವ ಅಗತ್ಯವಿದೆ.

ಹೆದ್ದಾರಿಗಳಲ್ಲಿ ಸುಗಮ ಸಂಚಾರಕ್ಕಾಗಿ ಈ ಹೊಸ ನಿಯಮವನ್ನು ಜಾರಿಗೆ ತರಲಾಗಿದೆ. ಎಲ್ಲಾ ಬಳಕೆದಾರರಿಗೆ ಹೊಸ ನಿಯಮಗಳು ಮತ್ತು ನಿಬಂಧನೆಗಳಿಗೆ ಬದ್ಧವಾಗಿರುವುದು ಅತ್ಯಗತ್ಯ. ಒಂದು ವೇಳೆ ಅಕ್ಟೋಬರ್ 31ರೊಳಗೆ ತಮ್ಮಖಾತೆಗಳನ್ನು ನವೀಕರಿಸದೇ ಇದ್ದರೆ ಟೋಲ್ ಪ್ಲಾಜಾಗಳಲ್ಲಿ ತೊಂದರೆಯನ್ನು ಎದುರಿಸಬೇಕಾಗಬಹುದು. ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ನವೀಕರಿಸಿರುವ ಮಾರ್ಗಸೂಚಿಗಳನ್ನು ಪಾಲನೆ ಮಾಡಲು ಗ್ರಾಹಕರು ಕೆವೈಸಿ (KYC) ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕಾಗುತ್ತದೆ.

ಆಗಸ್ಟ್ 1ರಿಂದ ಫಾಸ್ಟ್‌ಟ್ಯಾಗ್ ಸೇವೆಗಳನ್ನು ಒದಗಿಸುವ ಕಂಪನಿಗಳು 3- 5 ವರ್ಷಗಳ ಹಿಂದೆ ನೀಡಲಾದ ಎಲ್ಲಾ ಫಾಸ್ಟ್‌ಟ್ಯಾಗ್‌ಗಳಿಗೆ ಕೆವೈಸಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಅಕ್ಟೋಬರ್ 31ರವರೆಗೆ ಸಮಯಾವಕಾಶ ನೀಡಿದೆ. ಈ ಅವಧಿಯಲ್ಲಿ ಫಾಸ್ಟ್‌ಟ್ಯಾಗ್ ಹೊಂದಿರುವವರು ಸೇವೆಯಲ್ಲಿ ಯಾವುದೇ ಅಡಚಣೆಗಳು ಉಂಟಾಗದಂತೆ ತಡೆಗಟ್ಟಲು ಕೆವೈಸಿ ಮಾಹಿತಿಯನ್ನು ನವೀಕರಿಸುವುದು ಕಡ್ಡಾಯವಾಗಿದೆ.

ಇದರೊಂದಿಗೆ ಐದು ವರ್ಷಕ್ಕಿಂತ ಹಳೆಯದಾದ ಫಾಸ್ಟ್ ಟ್ಯಾಗ್ ಅನ್ನು ಬದಲಾಯಿಸಬೇಕು. ವಾಹನ ಮಾಲೀಕರು ತಮ್ಮ ಫಾಸ್ಟ್ ಟ್ಯಾಗ್ ಗಳ ವಿತರಣೆಯ ದಿನಾಂಕಗಳನ್ನು ಪರಿಶೀಲಿಸಬೇಕು ಮತ್ತು ಸಮಸ್ಯೆಗಳನ್ನು ತಪ್ಪಿಸಲು ತ್ವರಿತವಾಗಿ ಕ್ರಮ ತೆಗೆದುಕೊಳ್ಳಬೇಕು.

FASTag new rule
FASTag new rule


ವಾಹನ ಮಾಹಿತಿ ಲಿಂಕ್ ಮುಖ್ಯ

ಆಗಸ್ಟ್ 1ರಿಂದ ಎಲ್ಲಾ ಫಾಸ್ಟ್ ಟ್ಯಾಗ್ ಬಳಕೆದಾರರು ತಮ್ಮ ವಾಹನದ ನೋಂದಣಿ ಸಂಖ್ಯೆ, ಚಾಸಿಸ್ ಸಂಖ್ಯೆ ಮತ್ತು ಮಾಲೀಕರ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಬೇಕು. ಇತ್ತೀಚೆಗೆ ವಾಹನವನ್ನು ಖರೀದಿಸಿದವರು ಖರೀದಿಸಿದ 90 ದಿನಗಳಲ್ಲಿ ಫಾಸ್ಟ್ ಟ್ಯಾಗ್ ನಲ್ಲಿ ನೋಂದಣಿ ಸಂಖ್ಯೆಯನ್ನು ನವೀಕರಿಸುವುದು ಮುಖ್ಯ.

ಈ ಬದಲಾವಣೆಗಳ ಜೊತೆಗೆ ಸುಲಭವಾಗಿ ಗುರುತಿಸಲು ಅನುಕೂಲವಾಗುವಂತೆ ವಾಹನದ ಮುಂಭಾಗ ಮತ್ತು ಬದಿಯ ಸ್ಪಷ್ಟ ಫೋಟೋಗಳನ್ನು ಅಪ್‌ಲೋಡ್ ಮಾಡಬೇಕು. ಸುಗಮ ಸಂವಹನ ಮತ್ತು ನವೀಕರಣಗಳನ್ನು ಖಚಿತಪಡಿಸಿಕೊಳ್ಳಲು ಪ್ರತಿ ಫಾಸ್ಟ್‌ಟ್ಯಾಗ್ ಅನ್ನು ಮೊಬೈಲ್ ಸಂಖ್ಯೆಯೊಂದಿಗೆ ಲಿಂಕ್ ಮಾಡಬೇಕು.

ಫಾಸ್ಟ್ ಟ್ಯಾಗ್ ಸೇವಾ ಪೂರೈಕೆದಾರರು ತಮ್ಮ ಡೇಟಾಬೇಸ್‌ಗಳ ಸಂಪೂರ್ಣ ಪರಿಶೀಲನೆಯನ್ನು ನಡೆಸಬೇಕು. ಪ್ರತಿ ಫಾಸ್ಟ್‌ಟ್ಯಾಗ್‌ಗೆ ಲಿಂಕ್ ಮಾಡಲಾದ ವಿವರಗಳು ಭಾರತದ ರಾಷ್ಟ್ರೀಯ ವಾಹನ ನೋಂದಣಿಯಾದ VAHAN ವೆಬ್ ಸೈಟ್ ನಲ್ಲಿರುವ ಮಾಹಿತಿಯೊಂದಿಗೆ ಹೊಂದಾಣಿಕೆಯಾಗುತ್ತವೆ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ನಿಖರವಾದ ಮತ್ತು ಪ್ರಸ್ತುತ ಮಾಹಿತಿಯನ್ನು ನಿರ್ವಹಿಸಲು ಈ ಪರಿಶೀಲನೆ ಅತ್ಯವಶ್ಯಕವಾಗಿದೆ.

ಇದನ್ನೂ ಓದಿ: New Traffic Rules: ಹೆದ್ದಾರಿಯಲ್ಲಿ ವೇಗದ ಮಿತಿ 130 ಕಿ.ಮೀ ದಾಟಿದರೆ ದಂಡ, ಜೈಲು ಶಿಕ್ಷೆ; ಇಂದಿನಿಂದಲೇ ಹೊಸ ರೂಲ್ಸ್‌

ಈ ಹೊಸ ನಿಯಮಾವಳಿಗಳನ್ನು ಅನುಸರಿಸುವ ಮೂಲಕ ದೇಶಾದ್ಯಂತ ಟೋಲ್ ಸಂಗ್ರಹಣೆಯ ದಕ್ಷತೆ ಮತ್ತು ಪರಿಣಾಮಕಾರಿತ್ವವನ್ನು ಸುಧಾರಿಸಲು ಬಳಕೆದಾರರು ಸಹಾಯ ಮಾಡಬಹುದು. ಸುಗಮ ಮತ್ತು ಹೆಚ್ಚು ಅನುಕೂಲಕರ ಪ್ರಯಾಣದ ಅನುಭವವನ್ನು ಖಾತ್ರಿಪಡಿಸಿಕೊಳ್ಳಬಹುದು.

Continue Reading
Advertisement
Ismail Haniyeh
ವಿದೇಶ7 mins ago

Ismail Haniyh Killing: ಹನಿಯೆಹ್‌ ಹತ್ಯೆ ಹಿಂದೆ ಇಸ್ರೇಲ್‌ನ ಮಾಸ್ಟರ್‌ ಪ್ಲ್ಯಾನ್‌? ಮೊಸಾದ್‌ನ ಸೀಕ್ರೆಟ್‌ ಏಜೆಂಟ್‌ಗಳಿಂದ ಬಾಂಬ್‌ ಸ್ಫೋಟ?

karnataka rain
ಮಳೆ9 mins ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

hd kumaraswamy muda
ಪ್ರಮುಖ ಸುದ್ದಿ12 mins ago

HD Kumaraswamy: ಇನ್ನೂ ಹತ್ತು ತಿಂಗಳು ಸರ್ಕಾರ ನಡೆಸಿ ನೋಡೋಣ: ಕಾಂಗ್ರೆಸ್‌ಗೆ ಎಚ್‌ಡಿಕೆ ಸವಾಲ್

Actor Darshan Sonal says I don't want to see Darshan in jail
ಸ್ಯಾಂಡಲ್ ವುಡ್20 mins ago

Actor Darshan: ದರ್ಶನ್‌ರನ್ನು ಜೈಲಿನಲ್ಲಿ ನೋಡೋಕೆ ನನಗೆ ಮನಸಿಲ್ಲ ಎಂದ ಸೋನಾಲ್!

Wayanad Landslide
ದೇಶ35 mins ago

Wayanad Landslide: ಭೂಕುಸಿತದ ಹಾಟ್‌ಸ್ಪಾಟ್‌ಗಳಲ್ಲಿ ಕಾಮಗಾರಿಗೆ ಅನುಮತಿ ನೀಡಿದ್ದೇಕೆ? ಹಸಿರು ನ್ಯಾಯ ಮಂಡಳಿ ಪ್ರಶ್ನೆ

Rohit Sharma
ಕ್ರೀಡೆ47 mins ago

Rohit Sharma: ನಿಜಕ್ಕೂ ನಿರಾಸೆಗೊಂಡಿದ್ದೇನೆ ಎಂದ ರೋಹಿತ್​; ಕಾರಣವೇನು?

murder case
ಶಿವಮೊಗ್ಗ1 hour ago

Murder case : ಮಲೆನಾಡಲ್ಲಿ ಒಂಟಿ ಮಹಿಳೆ ಕೊಲೆ; ಕತ್ತು ಹಿಸುಕಿ ಕೊಂದವರು ಯಾರು?

Tharun Sudhir And Sonal Montero Gave Update On their Wedding
ಸ್ಯಾಂಡಲ್ ವುಡ್1 hour ago

Tharun Sudhir: ಸುಧೀರ್-ಸೋನಲ್ ವಿವಾಹ; ಲವ್‌ ಸ್ಟೋರಿ ರಿವೀಲ್‌ ಮಾಡಿದ   ಸ್ಯಾಂಡಲ್​ವುಡ್ ಜೋಡಿ!

Physical abuse
ದೇಶ1 hour ago

Physical Abuse: ಹಾಸಿಗೆ ಹಿಡಿದಿದ್ದ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ್ದ ಪಾಪಿಗೆ 12 ವರ್ಷಗಳ ಕಠಿಣ ಜೈಲು ಶಿಕ್ಷೆ

BJP-JDS Padayatra ST Somashekhar
ಪ್ರಮುಖ ಸುದ್ದಿ1 hour ago

BJP-JDS Padayatra: ಅಸಮಾಧಾನಗೊಂಡ ಬಿಜೆಪಿ ಶಾಸಕರಿಂದ ಕಾಂಗ್ರೆಸ್ ಜನಾಂದೋಲನಕ್ಕೆ ಬೆಂಬಲ?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka rain
ಮಳೆ9 mins ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ4 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ4 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ5 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ5 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ5 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

ಟ್ರೆಂಡಿಂಗ್‌