Self Harming : ವಾಟರ್‌ ಟ್ಯಾಂಕ್‌ ಮೇಲಿನಿಂದ ಜಿಗಿದ ವಿದ್ಯಾರ್ಥಿ; ವಿಡಿಯೋ ಇದೆ - Vistara News

Latest

Self Harming : ವಾಟರ್‌ ಟ್ಯಾಂಕ್‌ ಮೇಲಿನಿಂದ ಜಿಗಿದ ವಿದ್ಯಾರ್ಥಿ; ವಿಡಿಯೋ ಇದೆ

Self Harming ದುಡ್ಡಿದ್ದವರದ್ದು ಒಂದು ಸಮಸ್ಯೆಯಾದರೆ, ದುಡ್ಡಿಲ್ಲದವರದ್ದು ಇನ್ನು ರೀತಿಯ ಪರಿಸ್ಥಿತಿ. ಪಂಜಾಬ್‌ನ 19 ವರ್ಷದ ವಿದ್ಯಾರ್ಥಿಯೊಬ್ಬ ಆರ್ಥಿಕ ಸಮಸ್ಯೆಗಳಿಂದ ಬೇಸತ್ತು ಸಾವಿನ ಮೊರೆ ಹೋಗಿದ್ದಾನೆ. ನೀರಿನ ಟ್ಯಾಂಕ್ ಹತ್ತಿ ಅದರ ಮೇಲಿನಿಂದ ಕೆಳಕ್ಕೆ ಹಾರಿದ್ದಾನೆ.ಈ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಯುವಕನ ಎರಡೂ ಕಾಲುಗಳು ಮುರಿದು ಕಾಲುಗಳ ಮೂಳೆಗಳು ಹೊರಗೆ ಬಂದಿದ್ದು, ಗಂಭೀರವಾಗಿ ಗಾಯಗೊಂಡ ಯುವಕನನ್ನು ಇಲ್ಲಿನ ವೈದ್ಯರು ಪರೀಕ್ಷಿಸಿದಾಗ, ಅವನು ಮೃತಪಟ್ಟಿದ್ದಾನೆ ಎಂಬುದಾಗಿ ತಿಳಿದುಬಂದಿದೆ.

VISTARANEWS.COM


on

Self Harming
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ


ಪಂಜಾಬ್: ಇತ್ತೀಚೆಗೆ ಸಣ್ಣ-ಪುಟ್ಟ ಕಾರಣಕ್ಕೆ ಪ್ರಾಣ ಕಳೆದುಕೊಳ್ಳುವ ಅನೇಕ ಘಟನೆಗಳು ಆಗಾಗ ವರದಿಯಾಗುತ್ತಿರುತ್ತದೆ. ಅದರಲ್ಲೂ ಯುವಕರೇ ಹೆಚ್ಚಾಗಿ ದುಡುಕಿ ಇಂತಹ ನಿರ್ಧಾರಕ್ಕೆ ಬರುತ್ತಾರೆ. ಅಂತಹದ್ದೇ ಒಂದು ಘಟನೆ ಹರ್ಯಾಣದಲ್ಲಿ ನಡೆದಿದೆ. ಈ ಹಣಕಾಸಿನ ಸಮಸ್ಯೆಯಿಂದ ನೊಂದು 19 ವರ್ಷದ ವಿದ್ಯಾರ್ಥಿಯೊಬ್ಬ ನೀರಿನ ಟ್ಯಾಂಕ್‍ ಮೇಲಿನಿಂದ ಹಾರಿ ಆತ್ಮಹತ್ಯೆ (Self Harming)ಮಾಡಿಕೊಂಡಿದ್ದಾನೆ. ಈ ಆಘಾತಕಾರಿ ಘಟನೆ ಹರ್ಯಾಣದ ಖರಾರ್ ನ ಖಾನ್ಪುರ್ ಗ್ರಾಮದಲ್ಲಿ ಗುರುವಾರ ನಡೆದಿದ್ದು, ಈ ಭಯಾನಕ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಸುಮಿತ್ ಚಿಕ್ರಾ(19)ಎಂದು ಗುರುತಿಸಲಾಗಿದೆ. ಈತ ಪಂಜಾಬ್‍ನ ಘರುವಾನ್ ಗ್ರಾಮದ ಚಂಡೀಗಢ ವಿಶ್ವವಿದ್ಯಾಲಯದಲ್ಲಿ ಓದುತ್ತಿದ್ದ. ಆತ ತನ್ನ ಹೆತ್ತವರಿಗೆ ಏಕೈಕ ಮಗ ಎನ್ನಲಾಗಿದೆ. ಆರ್ಥಿಕ ಸಮಸ್ಯೆಗಳಿಂದಾಗಿ ಒತ್ತಡವನ್ನು ಅನುಭವಿಸುತ್ತಿದ್ದ ವಿದ್ಯಾರ್ಥಿ ಈ ರೀತಿ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ನೀರಿನ ಟ್ಯಾಂಕ್‍ನಿಂದ ಜಿಗಿಯುವ ಮೊದಲು ವಿದ್ಯಾರ್ಥಿ ತನ್ನ ಕೈಯ ಮಣಿಕಟ್ಟನ್ನು ಕತ್ತರಿಸಲು ಪ್ರಯತ್ನಿಸಿದನು ಎಂಬುದಾಗಿ ತಿಳಿದುಬಂದಿದೆ. ಈ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ವಿಡಿಯೊದಲ್ಲಿ ಯುವಕ ನೀರಿನ ಟ್ಯಾಂಕ್ ಹತ್ತಿ ಟ್ಯಾಂಕ್‍ನ ಅಂಚಿನಲ್ಲಿ ನಿಂತಿರುವುದನ್ನು ಕಾಣಬಹುದು. ಯುವಕ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಡೆಯಲು ಇಬ್ಬರು ಪುರುಷರು ನೀರಿನ ಟ್ಯಾಂಕ್‍ನ ಮೆಟ್ಟಿಲುಗಳನ್ನು ಹತ್ತುತ್ತಿರುವುದನ್ನು ಸಹ ಕಾಣಬಹುದು. ಅವರು ನೀರಿನ ಟ್ಯಾಂಕ್‍ನ ನಾಲ್ಕನೇ ಮಹಡಿಯನ್ನು ತಲುಪಿದಾಗ, ಯುವಕ ಅವರನ್ನು ಮೇಲಿನಿಂದ ಗಮನಿಸಿದನು. ನಂತರ ಅವರು ತನನ್ನು ರಕ್ಷಿಸಲು ಬರುತ್ತಿರುವುದನ್ನು ನೋಡಿ ಅವನು ಮುಂದೆ ಓಡಿ ನೀರಿನ ಟ್ಯಾಂಕ್‍ನಿಂದ ಹಾರಿದನು. ಈ ಘಟನೆಯನ್ನು ತನ್ನ ಮೊಬೈಲ್ ಪೋನಿನಲ್ಲಿ ರೆಕಾರ್ಡ್ ಮಾಡುತ್ತಿದ್ದ ವ್ಯಕ್ತಿಯು ಯುವಕ ನೆಲಕ್ಕೆ ಬೀಳುತ್ತಿದ್ದಂತೆ ಆಘಾತದಿಂದ ಕಿರುಚುವುದನ್ನು ಕೇಳಬಹುದು. ಜಿಗಿತದ ಪರಿಣಾಮ ಎಷ್ಟಿತ್ತೆಂದರೆ ಯುವಕ ನೆಲದ ಮೇಲೆ ಬಿದ್ದ ನಂತರ ಮತ್ತೆ ಮೇಲೆ ಜಿಗಿದು ನಂತರ ಮತ್ತೆ ಬಿದ್ದಿದ್ದಾನೆ.

ನೆಲಕ್ಕೆ ಬಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ನೀರಿನ ಟ್ಯಾಂಕ್‍ನ ಮೆಟ್ಟಿಲುಗಳನ್ನು ಏರುತ್ತಿದ್ದ ಇಬ್ಬರು ಪುರುಷರು, ಯುವಕ ಜೀವಂತವಾಗಿದ್ದಾನೆಯೇ ಎಂದು ಪರೀಕ್ಷಿಸಲು ಕೆಳಗೆ ಓಡಿ ಬರುತ್ತಿರುವುದು ಕಂಡುಬಂದಿದೆ.
ಯುವಕನನ್ನು ತಕ್ಷಣ ಖರಾರ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಯುವಕನ ಎರಡೂ ಕಾಲುಗಳು ಮುರಿದು ಕಾಲುಗಳ ಮೂಳೆಗಳು ಹೊರಗೆ ಬಂದಿದ್ದು, ಗಂಭೀರವಾಗಿ ಗಾಯಗೊಂಡ ಯುವಕನನ್ನು ಇಲ್ಲಿನ ವೈದ್ಯರು ಪರೀಕ್ಷಿಸಿದಾಗ, ಅವನು ಮೃತಪಟ್ಟಿದ್ದಾನೆ ಎಂಬುದಾಗಿ ತಿಳಿದುಬಂದಿದೆ.

ಇದನ್ನೂ ಓದಿ: ಬಿಸ್ಕೆಟ್‌ಗೆ ಆಸೆ ಪಟ್ಟು ಹೋಗಿದ್ದ ಪುಟ್ಟ ಬಾಲಕಿ ಕಾಮುಕನ ಕೈಗೆ ಸಿಕ್ಕಿ ಕೊಲೆಯಾದಳು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಪಶ್ಚಿಮ ಬಂಗಾಳದಲ್ಲಿ ಕೇಸರಿ, ತಮಿಳುನಾಡಲ್ಲಿ ದಳಪತಿ, ಕೇರಳಂನಲ್ಲಿ ಕಾಂಗ್ರೆಸ್‌ ದರ್ಬಾರ್‌

VISTARANEWS.COM


on

ಪಂಚರಾಜ್ಯಗಳ ಫಲಿತಾಂಶ ಹೊರಬಿದ್ದಿದೆ. ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ಭರ್ಜರಿ ಗೆಲುವಿನ ನಗೆ ಬೀರಿದೆ. ತಮಿಳುನಾಡಿನಲ್ಲಿ ಟಿವಿಕೆ ಅಚ್ಚರಿ ಮೂಡಿಸಿದ್ದು, ಅಧಿಕಾರದ ಸನಿಹದಲ್ಲಿದೆ. ಕೇರಳಂ ಸೋಲಿನೊಂದಿಗೆ ಭಾರತದಲ್ಲಿ ಎಡರಂಗದ ಅಧಿಕಾರ ಕೊನೆಗೊಂಡಿದೆ. ಮಲೆಯಾಳಿಗಳ ರಾಜ್ಯದಲ್ಲಿ ಹತ್ತು ವರ್ಷಗಳ ಬಳಿಕ ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ ಅಧಿಕಾರಕ್ಕೆ ಬಂದಿದೆ.
ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಮಮತಾ ಆಡಳಿತವನ್ನು ಬಿಜೆಪಿ ಕೊನೆಗಾಣಿಸಿದೆ. ಪಶ್ಚಿಮ ಬಂಗಾಳ ಗೆಲುವಿಗಾಗಿ ಹಠವಿಡಿದ ಬಿಜೆಪಿ ಕೊನೆಗೂ ಯಶ ಸಾಧಿಸಿದೆ. 294 ಸದಸ್ಯ ಬಲದ ಪಶ್ಚಿಮ ಬಂಗಾಳ ಅಸೆಂಬ್ಲಿಯಲ್ಲಿ, ಬಿಜೆಪಿ ಮೂರನೇ ಎರಡು ಭಾಗದಷ್ಟು ಸೀಟುಗಳನ್ನು ಗೆದ್ದಿದೆ. ಕಾಂಗ್ರೆಸ್‌, ಎಡರಂಗ ತಲಾ ಎರಡು ಸೀಟುಗಳಿಗೆ ತೃಪ್ತಿಪಡಬೇಕಾಗಿದೆ. ಇದು ಬಿಜೆಪಿಯ ಅತಿದೊಡ್ಡ ಗೆಲುವಾಗಿದೆ.
ನಟ ವಿಜಯ್‌ ಸುನಾಮಿಗೆ ತಮಿಳುನಾಡಿನಲ್ಲಿ ಆಡಳಿತಾರೂಢ ಡಿಎಂಕೆ ಕೊಚ್ಚಿ ಹೋಗಿದೆ. ಸ್ಟಾಲಿನ್‌, ಉದಯನಿಧಿ ಸ್ಟಾಲಿನ್‌ ಸೇರಿದಂತೆ ಘಟಾನುಘಟಿ ನಾಯಕರು ನೆಲಕಚ್ಚಿದ್ದಾರೆ. ನಟ ವಿಜಯ್‌ ನೇತೃತ್ವದ ಟಿವಿಕೆ ತನ್ನ ಚೊಚ್ಚಲ ಚುನಾವಣೆಯಲ್ಲೇ ಅಧಿಕಾರಕ್ಕೆ ಹತ್ತಿರದಲ್ಲಿದೆ. 234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ ಟಿವಿಕೆ 108 ಕ್ಷೇತ್ರಗಳನ್ನು ಗೆದ್ದಿದೆ. ಡಿಎಂಕೆ 79 ಮತ್ತು ಎಐಎಡಿಎಂಕೆ 54 ಕಡೆ ಗೆಲುವು ದಾಖಲಿಸಿವೆ. ದ್ರಾವಿಡ ನಾಡಲ್ಲಿ ನಟ ವಿಜಯ್‌ ಇತಿಹಾಸ ಸೃಷ್ಟಿಸಿದ್ದಾರೆ.
ಇನ್ನು ಕೇರಳಂನಲ್ಲಿ ಆಡಳಿತ ವಿರೋಧಿ ಅಲೆಗೆ ಆಡಳಿತಾರೂಢ ಲೆಫ್ಟ್‌ ಡೆಮಾಕ್ರಾಟಿಕ್‌ ಫ್ರಂಟ್‌ ನೆಲಕಚ್ಚಿದೆ. ಕೇರಳಂ ಫಲಿತಾಂಶ ಮಾತ್ರ ಕಾಂಗ್ರೆಸ್‌ ಖುಷಿಗೆ ಕಾರಣವಾಗಿದೆ. 140 ಸದಸ್ಯ ಬಲದ ವಿಧಾನಸಭೆಯಲ್ಲಿ ಯುಡಿಎಫ್‌ 100 ಕ್ಷೇತ್ರಗಳನ್ನು ಗೆದ್ದಿದೆ. ಎಲ್‌ಡಿಎಫ್‌ 35ಕ್ಕೆ ಸ್ಥಾನಗಳಿಗೆ ಸೀಮಿತವಾಗಿದೆ. ಇದರೊಂದಿಗೆ ದೇಶದಲ್ಲಿ ಎಡರಂಗದ ಆಡಳಿತ ಅಂತ್ಯವಾಗಿದೆ.
ಅಸ್ಸಾಂನಲ್ಲಿ ಬಿಜೆಪಿ ಗೆಲುವಿನ ಹ್ಯಾಟ್ರಿಕ್‌ ಬಾರಿಸಿದೆ. ಹಿಮಂತ ಬಿಸ್ವ ಶರ್ಮಾ ನಾಯಕತ್ವದ ಮುಂದೆ ಗೌರವ್‌ ಗೊಗೊಯಿ ನೇತೃತ್ವದ ಕಾಂಗ್ರೆಸ್‌ ಹೀನಾಯವಾಗಿ ಸೋತಿದೆ. 126 ಸದಸ್ಯ ಬಲದ ಅಸ್ಸಾಂ ಅಸೆಂಬ್ಲಿಯಲ್ಲಿ ಬಿಜೆಪಿ 102 ಸ್ಥಾನಗಳಲ್ಲಿ ಜಯಭೇರಿ ದಾಖಲಿಸಿದೆ. ಕಾಂಗ್ರೆಸ್‌ 21 ಕ್ಷೇತ್ರಗಳನ್ನು ಗೆದ್ದುಕೊಂಡಿದೆ.
ಇನ್ನು ಪುದುಚೇರಿಯಲ್ಲಿ ಎನ್‌ಡಿಎ ಅಧಿಕಾರ ಉಳಿಸಿಕೊಂಡಿದೆ. 30 ಸದಸ್ಯ ಬಲದ ಅಸೆಂಬ್ಲಿಯಲ್ಲಿ ಎನ್‌ಡಿಎ 18 ಸ್ಥಾನಗಳನ್ನು ಗೆದ್ದಿದೆ. ಡಿಎಂಕೆ ಮೈತ್ರಿಕೂಟ 7 ಹಾಗೂ ಟಿವಿಕೆಯ ಮೂವರು ಗೆಲುವಿನ ನಗೆ ಬೀರಿದ್ದಾರೆ.

Continue Reading

Latest

ಕೇರಳಂ: ಯುಡಿಎಫ್‌ ಗೆಲುವಿನ ಹಿಂದಿನ ಏಳು ರಣತಂತ್ರ!

VISTARANEWS.COM


on

ಕೇರಳಂನಲ್ಲಿ ಹತ್ತು ವರ್ಷಗಳ ನಂತರ ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ ಭರ್ಜರಿ ಬಹುಮತ ಪಡೆದಿದೆ. ಕರ್ನಾಟಕ, ತೆಲಂಗಾಣ ನಂತರ ಕೇರಳಂನಲ್ಲೂ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ. ದಶಕದ ಆಡಳಿತದ ನಂತರ ಎಲ್‌ಡಿಎಫ್‌ ಅಧಿಕಾರ ಕಳೆದು ಕೊಂಡಿದೆ.
ಕಾಂಗ್ರೆಸ್‌ ಕೇರಳ ಜಯಭೇರಿಗೆ ಸಪ್ತ ಕಾರಣಗಳು
1. ಕಾಂಗ್ರೆಸ್‌ನಲ್ಲಿ ಒಗ್ಗಟ್ಟು:
ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್‌ ಗೆದ್ದಾಗಲೇ, ಅಸೆಂಬ್ಲಿಯ ಚುನಾವಣೆ ದಿಕ್ಸೂಚಿ ಸ್ಪಷ್ಟವಾಗಿತ್ತು. ಗೆಲ್ಲಲೇ ಬೇಕೆಂಬ ಹಠಕ್ಕೆ ಬಿದ್ದ ಕಾಂಗ್ರೆಸ್‌, ಮೊದಲು ಪಕ್ಷದಲ್ಲಿ ಇದ್ದ ಭಿನ್ನಮತ ಬಗೆಹರಿಸಿತು. ಎಲ್ಲಾ ನಾಯಕರನ್ನು ಮಾತುಕತೆ ಮೂಲಕ ಮನವೊಲಿಸಿ ಅಭೂತಪೂರ್ವ ಒಗ್ಗಟ್ಟು ಪ್ರದರ್ಶಿಸಿತು. ಇದು ಗೆಲುವಿಗೆ ಮೂಲ ಕಾರಣ
2. ಟಿಕೆಟ್‌ ನೀಡುವಲ್ಲಿ ಸ್ಪಷ್ಟತೆ:
ಟಿಕೆಟ್‌ ಗೊಂದಲ ತಪ್ಪಿಸಲು ಕಾಂಗ್ರೆಸ್‌ ಹೈಕಮಾಂಡ್‌, ಕೇರಳಕ್ಕೆ ಮದುಸೂಧನ್‌ ಮಿಸ್ತ್ರಿ ಅವರನ್ನು ರವಾನಿಸಿತ್ತು. ಹಾಲಿ ಸಂಸದರಿಗೆ ಟಿಕೆಟ್‌ ನೀಡಲೇ ಇಲ್ಲ. ಪ್ರಬಲ ಅಭ್ಯರ್ಥಿಗಳಿಗೆ ಮೊದಲು ಮಣೆ ಹಾಕಿತು. ಕೇರಳ ಕಾಂಗ್ರೆಸ್‌ನಲ್ಲಿ ಟಿಕೆಟ್‌ ಗೊಂದಲ ಉಂಟಾಗದಂತೆ ನೋಡಿಕೊಳ್ಳಲಾಯಿತು.
3. ಶಿಸ್ತಿನ ಪಕ್ಷವಾಗಿ ರೂಪುಗೊಂಡಿದ್ದು :
ಚುನಾವಣೆಗೆ ಕೆಲವೇ ತಿಂಗಳು ಮೊದಲು ಕಾಂಗ್ರೆಸ್‌ನಲ್ಲಿ ಅದ್ಭುತ ಬದಲಾವಣೆ ಉಂಟಾಗಿತ್ತು. ಪರಸ್ಪರ ಕಿತ್ತಾಡುತ್ತಿದ್ದ ನಾಯಕರು ಒಂದಾಗಿದ್ದರು. ಪಕ್ಷದ ಇಮೇಜ್‌ ಸಂಪೂರ್ಣವಾಗಿ ಬದಲಾಗಿತ್ತು. ಕಾಂಗ್ರೆಸ್‌ ಘಟಕ ಸಂಪೂರ್ಣ ಸಂಯೋಜಿತ ತಂಡವಾಗಿ ಮಾರ್ಪಾಡಾಗಿತ್ತು. ಈ ರಣತಂತ್ರ ರೂಪಿಸಿದ್ದು ಪಕ್ಷದ ಉಸ್ತುವಾರಿ ದೀಪ್‌ ದಾಸ್‌ ಮುನ್ಶಿ.
4. ಯುವ, ಹೊಸ ಮುಖಗಳಿಗೆ ಮಣೆ:
ಎಲ್‌ಡಿಎಫ್‌ ಶಾಸಕರ ದೌರ್ಬಲ್ಯಗಳನ್ನು ಕಾಂಗ್ರೆಸ್‌ ಚೆನ್ನಾಗಿ ಅಧ್ಯಯನ ಮಾಡಿತ್ತು. ಹಾಗಾಗಿ, ಶಾಸಕರ ವಿರೋಧಿ ಅಲೆ ಹೆಚ್ಚಿರುವ ಕಡೆ ಯುವ ಹಾಗೂ ಹೊಸ ಮುಖಗಳಿಗೆ ಮಣೆ ಹಾಕಿತ್ತು. ಹಾಗಾಗಿ, ಬದಲಾವಣೆ ಬಯಸುವ ಮತದಾರ ಹೊಸ ನಾಯಕತ್ವಕ್ಕೆ ಮತಹಾಕಿದ್ದ. ಯುವಕರಿಗೆ ಮಣೆ ಹಾಕುವ ರಣತಂತ್ರ ಫಲ ನೀಡಿತ್ತು.
5. ಆಡಳಿತ ವಿರೋಧಿ ಅಲೆ:
ಪಿಣರಾಯಿ ಸರ್ಕಾರದ ಲೋಪದೋಷಗಳನ್ನು ಕಾಂಗ್ರೆಸ್‌ ಯಶಸ್ವಿಯಾಗಿಯೇ ಎಕ್ಸ್‌ಪೋಸ್‌ ಮಾಡಿತ್ತು. ಅಲ್ಲದೇ, ಹತ್ತು ವರ್ಷಗಳ ಆಡಳಿತದ ಕಾರಣ ಸಹಜವಾಗಿಯೇ ಆಡಳಿತ ವಿರೋಧಿ ಅಲೆ ದಟ್ಟವಾಗಿತ್ತು. ಆ ಅಲೆಯ ಮೇಲೆ ಸವಾರಿ ಮಾಡಿದ್ದ ಕಾಂಗ್ರೆಸ್‌ ಗೆಲುವಿನ ದಡ ಸೇರಿತ್ತು.
6. ಪವರ್‌ಫುಲ್‌ ಪ್ರಚಾರ:
ಪ್ರಚಾರದಲ್ಲಿ ಕೂಡಾ ಕಾಂಗ್ರೆಸ್‌ ಹಿಂದೆ ಬೀಳಲಿಲ್ಲ. ಗ್ಯಾರಂಟಿ ಯೋಜನೆಗಳು ಮುನ್ನೆಲೆಗೆ ಬಂತು. ರಾಹುಲ್‌ ಗಾಂಧಿ ಖುದ್ದು ಪ್ರಚಾರದ ಚುಕ್ಕಾಣಿ ಹಿಡಿದಿದ್ದರು. ಎಡರಂಗ ಸರ್ಕಾರದ ಲೋಪದೋಷಗಳನ್ನು ಜನರ ಮುಂದಿಡುವಲ್ಲಿ ಕಾಂಗ್ರೆಸ್‌ ಸಕ್ಸಸ್‌ ಆಯಿತು. ಕಾಂಗ್ರೆಸ್‌ ಪಿಣರಾಯಿಯವರನ್ನು ಟಾರ್ಗೆಟ್‌ ಮಾಡಿ ಪ್ರಚಾರ ನಡೆಸುತಿತ್ತು. ಕರ್ನಾಟಕವೂ ಸೇರಿ, ದೇಶಾದ್ಯಂತ ಇರುವ ಕಾಂಗ್ರೆಸ್‌ ನಾಯಕರ ನೆರವನ್ನೂ ಪಡೆಯಲಾಗಿತ್ತು.
೭. ಮುಸ್ಲಿಂ, ಕ್ರೈಸ್ತ ಹಾಗೂ ನಾಯರ್‌ ಸಮುದಾಯದ ಬೆಂಬಲ:
ಮುಸ್ಲಿಂ ಲೀಗ್‌ ಜೊತೆ ಮೈತ್ರಿ ಇತ್ತು. ಈ ಕಾರಣಕ್ಕೆ ಮುಸ್ಲಿಂ ಮತಗಳು ಸುಲಭವಾಗಿ ಸಿಕ್ಕಿತು. ಇಮ್ರಾನ್‌ ಪ್ರತಾಪ್‌ಗಡಿಯಂತಹ ನಾಯಕರನ್ನು ಮುಸ್ಲಿಮ್‌ ಮತಗಳಿಗಾಗಿಯೇ ನಿಯೋಜಿಸಲಾಗಿತ್ತು. ಸಂಪ್ರದಾಯಿಕ ಕ್ರೈಸ್ತರ ಮತಗಳೂ ಕಾಂಗ್ರೆಸ್‌ ಪಾಲಾಗಿತ್ತು. ಸಿಎಂ ರೇಸ್‌ನಲ್ಲಿರುವ ಕೆ.ಸಿ ವೇಣುಗೋಪಾಲ್‌, ವಿ.ಡಿ ಸತೀಶನ್‌ ಮತ್ತು ರಮೇಶ್‌ ಚೆನ್ನಿಂತಲ – ಮೂವರೂ ನಾಯರ್‌ ಸಮುದಾಯದ ನಾಯಕರಾಗಿರುವ ಕಾರಣಕ್ಕೆ, ಆ ಸಮುದಾಯವೂ ಕಾಂಗ್ರೆಸ್‌ನ್ನು ಸಂಪೂರ್ಣವಾಗಿ ಬೆಂಬಲಿಸಿತ್ತು.

Continue Reading

Latest

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

VISTARANEWS.COM


on

ಕಾಂಗ್ರೆಸ್‌ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌‌‌ ಅಭ್ಯರ್ಥಿ ಸಮರ್ಥ್​ ಮಲ್ಲಿಕಾರ್ಜುನ್‌‌‌‌‌‌ ವಿಜಯ ಪತಾಕೆ ಹಾರಿಸಿದ್ದಾರೆ. ದಿವಂಗತ ಶಾಮನೂರು ಶಿವಶಂಕರಪ್ಪ ಮೊಮ್ಮಗ ಹಾಗೂ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌, ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ ಅವರ ಪುತ್ರ ಸಮರ್ಥ್‌ ಉಪಸಮರದಲ್ಲಿ ಗೆದ್ದು ಬೀಗಿದ್ದಾರೆ. ಇವರಿಗೆ ಪ್ರಬಲ ಪೈಪೋಟಿ ನೀಡಿದ್ದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಸೋಲನುಭವಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಏ.9ರಂದು ಉಪಚುನಾವಣೆ ನಡೆದಿತ್ತು.

Continue Reading

Latest

ಬಾಗಲಕೋಟೆಯಲ್ಲಿ ಕಾಂಗ್ರೆಸ್‌‌‌ನ ಉಮೇಶ್‌ ಮೇಟಿ ಭರ್ಜರಿ ಗೆಲುವು

VISTARANEWS.COM


on

ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌‌ ಮೇಟಿ ಗೆಲುವು ಸಾಧಿಸಿದ್ದಾರೆ. 21,866 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಮಠ ವಿರುದ್ಧ ಕಾಂಗ್ರೆಸ್‌‌ನ ಉಮೇಶ್‌ ಮೇಟಿ ಗೆಲುವು ಪಡೆದಿದ್ದಾರೆ. ಉಮೇಶ್‌ ಮೇಟಿ 97,941 ಮತಗಳನ್ನು ಪಡೆದಿದ್ರೆ, ವೀರಣ್ಣ ಚರಂತಿಮಠ 76,075 ಮತಗಳನ್ನು ಪಡೆದುಕೊಂಡಿದ್ದರು. ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಉಮೇಶ್‌‌ ಮೇಟಿಯವರ ತಂದೆ ಹೆಚ್‌.ವೈ.ಮೇಟಿ ಯವರ ನಿಧನದಿಂದ ತೆರವಾಗಿದ್ದ ಕ್ಷೇತ್ರವನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್‌ ಪಕ್ಷ ಯಶಸ್ವಿಯಾಗಿದೆ.

Continue Reading
Advertisement
Latest20 hours ago

ಪಶ್ಚಿಮ ಬಂಗಾಳದಲ್ಲಿ ಕೇಸರಿ, ತಮಿಳುನಾಡಲ್ಲಿ ದಳಪತಿ, ಕೇರಳಂನಲ್ಲಿ ಕಾಂಗ್ರೆಸ್‌ ದರ್ಬಾರ್‌

Latest21 hours ago

ಕೇರಳಂ: ಯುಡಿಎಫ್‌ ಗೆಲುವಿನ ಹಿಂದಿನ ಏಳು ರಣತಂತ್ರ!

Latest21 hours ago

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

Latest22 hours ago

ಬಾಗಲಕೋಟೆಯಲ್ಲಿ ಕಾಂಗ್ರೆಸ್‌‌‌ನ ಉಮೇಶ್‌ ಮೇಟಿ ಭರ್ಜರಿ ಗೆಲುವು

Latest23 hours ago

ದ್ರಾವಿಡ ನಾಡಲ್ಲಿ ʼದಳಪತಿʼ ಯುಗಾರಂಭ

Rakshit Shetty Richard Anthony Produce By Hombale
ಅವಿಭಾಗೀಕೃತ1 day ago

ಪಂಚರಾಜ್ಯ ವಿಧಾನಸಭಾ ಚುನಾವಣೆ , ಕರ್ನಾಟಕ ಉಪಚುನಾವಣೆ ಫಲಿತಾಂಶದ ಕ್ಷಣಕ್ಷಣದ ಅಪ್‌ಡೇಟ್‌

Latest2 days ago

‘ಟಾಕ್ಸಿಕ್’ ಸಿನಿಮಾದಲ್ಲಿ ಬೋಲ್ಡ್ ದೃಶ್ಯಕ್ಕೆ ಕತ್ತರಿ ಹಾಕಿ ಕಿಯಾರಾ ಅಡ್ವಾಣಿ ಮನವಿ?

Latest3 days ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಬಾಂಗ್ಲಾದೇಶಕ್ಕೆ ಏಕೆ ಟೆನ್ಶನ್‌?

Latest3 days ago

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

Latest4 days ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌