Sexual Abuse: ಮಹಿಳೆ ಮೇಲೆ ಅತ್ಯಾಚಾರ ಎಸಗಿ ಜನನಾಂಗದೊಳಗೆ ಗನ್ ತೂರಿಸಿದ ತೃಣಮೂಲ ಕಾರ್ಯಕರ್ತ! - Vistara News

Latest

Sexual Abuse: ಮಹಿಳೆ ಮೇಲೆ ಅತ್ಯಾಚಾರ ಎಸಗಿ ಜನನಾಂಗದೊಳಗೆ ಗನ್ ತೂರಿಸಿದ ತೃಣಮೂಲ ಕಾರ್ಯಕರ್ತ!

Sexual Abuse: ಬಹಿರಿ ಪಂಚಚೋವಾ ಗ್ರಾಮ ಪಂಚಾಯತ್ ಪ್ರದೇಶದ ಕರೀಂಪುರದ ನಿವಾಸಿಯಾದ ಫಿರೋಜ್ ಖಾನ್ ಎಂಬಾತ ವಿವಾಹಿತ ಮಹಿಳೆಯನ್ನು ಬಂದೂಕು ತೋರಿಸಿ ಬಲವಂತವಾಗಿ ಅಪಹರಿಸಿ ದನದ ಕೊಟ್ಟಿಗೆಗೆ ಕರೆದೊಯ್ದು, ಅಲ್ಲಿ ಆಕೆಯ ಕೈ ಮತ್ತು ಕಾಲುಗಳನ್ನು ಕಟ್ಟಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲದೇ ಆರೋಪಿಯು ಸಂತ್ರಸ್ತೆಯ ಜನನಾಂಗಕ್ಕೆ ಗನ್ ತೂರಿಸುವ ಮೂಲಕ ಚಿತ್ರಹಿಂಸೆ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.

VISTARANEWS.COM


on

Sexual Abuse
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo


ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ (Sexual Abuse)ಮತ್ತು ಚಿತ್ರಹಿಂಸೆ ನೀಡಿದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ವಿರುದ್ಧ ಬಿರ್ಭುಮ್ ಜಿಲ್ಲೆಯ ಬೋಲ್ಪುರ್ ಪೊಲೀಸ್ ಠಾಣೆಯಲ್ಲಿ ಬುಧವಾರ ಎಫ್ಐಆರ್ ದಾಖಲಿಸಲಾಗಿದೆ. ಆರೋಪಿ ಫಿರೋಜ್ ಖಾನ್ ಎಂಬುದಾಗಿ ತಿಳಿದುಬಂದಿದ್ದು, ಘಟನೆಯ ನಂತರ ಆರೋಪಿ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದೆ.

ಬಹಿರಿ ಪಂಚಚೋವಾ ಗ್ರಾಮ ಪಂಚಾಯತ್ ಪ್ರದೇಶದ ಕರೀಂಪುರದ ನಿವಾಸಿಯಾದ ಫಿರೋಜ್ ಖಾನ್, ವಿವಾಹಿತ ಮಹಿಳೆಯನ್ನು ಗನ್ ತೋರಿಸಿ ಬಲವಂತವಾಗಿ ಅಪಹರಿಸಿ ದನದ ಕೊಟ್ಟಿಗೆಗೆ ಕರೆದೊಯ್ದು, ಅಲ್ಲಿ ಆಕೆಯ ಕೈ ಮತ್ತು ಕಾಲುಗಳನ್ನು ಕಟ್ಟಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲದೇ ಆರೋಪಿಯು ಸಂತ್ರಸ್ತೆಯ ಜನನಾಂಗಕ್ಕೆ ಗನ್ ತೂರಿಸುವ ಮೂಲಕ ಚಿತ್ರಹಿಂಸೆ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.

ಹಲ್ಲೆಯ ಸಮಯದಲ್ಲಿ ಆತ ಸಂತ್ರಸ್ತೆಯ ಪೋಟೊಗಳನ್ನು ಸಹ ತೆಗೆದುಕೊಂಡಿದ್ದಾನೆ ಎನ್ನಲಾಗಿದೆ. ನಂತರ ಅವಳ ನಾಲ್ಕು ವರ್ಷದ ಮಗ, ತನ್ನ ತಾಯಿಯನ್ನು ಹುಡುಕುತ್ತಾ ದನದ ಕೊಟ್ಟಿಗೆಗೆ ಬಂದಾಗ ತಾಯಿಯನ್ನು ಆ ಸ್ಥಿತಿಯಲ್ಲಿ ನೋಡಿದ ಮಗು ಅಳಲು ಪ್ರಾರಂಭಿಸಿತು. ಆಗ ಆರೋಪಿ ಟಿಎಂಸಿ ಕಾರ್ಯಕರ್ತ ಮಗುವನ್ನು ಬೆದರಿಸಿ ಗೋಣಿ ಚೀಲದಲ್ಲಿ ಕಟ್ಟಿಹಾಕಿದ್ದಾನೆ ಎಂಬುದಾಗಿ ವರದಿಯಾಗಿದೆ.

ಆರೋಪಿ ಫಿರೋಜ್ ಖಾನ್ ಹಲವಾರು ದಿನಗಳಿಂದ ತನಗೆ ಕಿರುಕುಳ ನೀಡುತ್ತಿದ್ದ. ಅವನು ತನ್ನೊಂದಿಗೆ ಅಕ್ರಮ ಸಂಬಂಧ ಹೊಂದುವಂತೆ ಅವಳಿಗೆ ಮುಂಗಡ ಹಣವನ್ನು ನೀಡಿದ್ದ. ಆದರೆ ಅವಳು ಅವನ ಪ್ರಸ್ತಾಪವನ್ನು ತಿರಸ್ಕರಿಸಿದಾಗ, ಅವನು ಅವಳ ತಲೆಗೆ ಗನ್ ಹಿಡಿದು ಕೊಲ್ಲುವುದಾಗ ಬೆದರಿಕೆ ಹಾಕಿದ. ಆನಂತರ ಆಕೆ ನೀರು ತರಲು ಹೋಗಿದಾಗ ಆಕೆ ಒಂಟಿಯಾಗಿರುವುದನ್ನು ತಿಳಿದ ಖಾನ್ ಅವಳನ್ನು ಗನ್‍ಪಾಯಿಂಟ್‌ನಲ್ಲಿ ಬೆದರಿಸಿ ಬಲವಂತವಾಗಿ ಏಕಾಂತ ಸ್ಥಳಕ್ಕೆ ಕರೆದೊಯ್ದನು, ಅಲ್ಲಿ ಅವನು ಅತ್ಯಾಚಾರ ಮಾಡಿದ. ಹಾಗೇ ಆಕೆಯ ಮಗನನ್ನು ಗೋಣಿಚೀಲದಲ್ಲಿ ಕಟ್ಟಿ ಕೊಲ್ಲಲು ಪ್ರಯತ್ನಿಸಿದ. ಘಟನೆಯ ನಂತರ, ಆಕೆ ಆತ್ಮಹತ್ಯೆಗೆ ಪ್ರಯತ್ನಿಸಿದಳು ಎಂದು ಸಂತ್ರಸ್ತೆ ಪೊಲೀಸರಿಗೆ ತಿಳಿಸಿದ್ದಾಳೆ. ಹಲ್ಲೆಯ ನಂತರ, ಸಂತ್ರಸ್ತೆಯನ್ನು ಬೋಲ್ಪುರ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ:ಶವಾಗಾರದಲ್ಲಿ ಶವಗಳ ಪಕ್ಕದಲ್ಲೇ ಲೈಂಗಿಕ ಕ್ರಿಯೆ! ಸಂಚಲನ ಮೂಡಿಸಿದೆ ಈ ವಿಡಿಯೊ

ಪೊಲೀಸರ ಪ್ರಕಾರ, ಮರ್ಯಾದೆಗೆ ಹೆದರಿ ಸಂತ್ರಸ್ತೆ ಹಲವಾರು ದಿನಗಳವರೆಗೆ ಘಟನೆಯನ್ನು ವರದಿ ಮಾಡಲು ಹಿಂಜರಿಯುತ್ತಿದ್ದಳು. ಅಂತಿಮವಾಗಿ, ಆಕೆಯ ಪತಿ ಆರೋಪಿಗಳ ವಿರುದ್ಧ ದೂರು ದಾಖಲಿಸಲು ಹೇಳಿದ್ದಾರೆ. ಹಾಗಾಗಿ ಸಂತ್ರಸ್ತೆ ಆಕೆಯ ಪತಿಯೊಂದಿಗೆ ನೀಡಿದ ದೂರಿನ ಆಧಾರದ ಮೇಲೆ ಬೋಲ್ಪುರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ಆರೋಪಿ ಖಾನ್ ಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಆಗಸ್ಟ್ 21 ರ ಬುಧವಾರ ಸಂತ್ರಸ್ತೆ ಮತ್ತು ಆಕೆಯ ಪತಿಯ ಹೇಳಿಕೆಯನ್ನು ದಾಖಲಿಸಿದ ನಂತರ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಖಾನ್ ನಿವಾಸ ಮತ್ತು ಇತರ ಅಡಗುತಾಣಗಳ ಮೇಲೆ ಪೊಲೀಸರು ದಾಳಿ ನಡೆಸುತ್ತಿದ್ದಾರೆ. ಈ ಘಟನೆಯು ಬೋಲ್ಪುರದ ಸಾರ್ವಜನಿಕರಲ್ಲಿ ಆಕ್ರೋಶವನ್ನು ಹುಟ್ಟುಹಾಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Salman Khan: ನಿಮ್ಮ ಚಿತ್ರವನ್ನು ನಾವು ಒಪ್ಪುತ್ತೇವೆ, ಆದರೆ ನಮ್ಮ ಚಿತ್ರವನ್ನು ನೀವು ಒಪ್ಪುವುದಿಲ್ಲವಲ್ಲ? ಚಿರುಗೆ ಸಲ್ಲು ಹೀಗೆ ಹೇಳಿದ್ದೇಕೆ?

ಕಾರ್ಯಕ್ರಮವೊಂದರ ವೇದಿಕೆಯಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಮತ್ತು ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಒಟ್ಟಿಗೆ ಕಾಣಿಸಿಕೊಂಡಿದ್ದು, ಈ ಸಂದರ್ಭದಲ್ಲಿ ಸಲ್ಮಾನ್ ಖಾನ್ ಕಠಿಣವಾದ ಧ್ವನಿಯಲ್ಲಿ ದಕ್ಷಿಣದಲ್ಲಿ ಬಾಲಿವುಡ್ ಚಿತ್ರಗಳನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಚಿರಂಜೀವಿಗೆ ಹೇಳಿದ್ದಾರೆ. ಈ ಮಾತನ್ನು ಹೇಳಿದ್ದು ಕೇಳಿ ಚಿರಂಜೀವಿ ಅವರು ಜೋರಾಗಿ ನಕ್ಕಿದ್ದಾರೆ. ಈ ಸಂವಾದದ ತುಣುಕು ರೆಡ್ಡಿಟ್‌ನಲ್ಲಿ ವೈರಲ್ ಆಗಿದೆ.

VISTARANEWS.COM


on

By

Salman Khan
Koo

ನಿಮ್ಮ ಚಿತ್ರವನ್ನು ಬಾಲಿವುಡ್‌ನವರು (bollywood) ಒಪ್ಪಿಕೊಳ್ಳುತ್ತಾರೆ. ಆದರೆ ನಮ್ಮ ಚಿತ್ರವನ್ನು ದಕ್ಷಿಣದವರು ಒಪ್ಪಿಕೊಳ್ಳುವುದಿಲ್ಲ ಎಂದು ಬಾಲಿವುಡ್‌ನ ಸೂಪರ್ ಸ್ಟಾರ್ ಸಲ್ಮಾನ್ ಖಾನ್ (Salman Khan) ಅವರು ಮೆಘಾಸ್ಟಾರ್‌ ಚಿರಂಜೀವಿ (Chiranjeevi) ಅವರಿಗೆ ಹೇಳಿರುವುದು ಈಗ ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (viral news) ಆಗಿದೆ. ಇದಕ್ಕೆ ನೆಟ್ಟಿಗರಿಂದ ಸಾಕಷ್ಟು ಪ್ರತಿಕ್ರಿಯೆಗಳು ಬರುತ್ತಿವೆ.

ಸಂವಾದ ಕಾರ್ಯಕ್ರಮವೊಂದರ ವೇದಿಕೆಯಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಮತ್ತು ಬಾಲಿವುಡ್ ನಟ ಸಲ್ಮಾನ್ ಖಾನ್ ಒಟ್ಟಿಗೆ ಕಾಣಿಸಿಕೊಂಡರು. ಈ ಸಂದರ್ಭದಲ್ಲಿ ಸಲ್ಮಾನ್ ಖಾನ್ ಈ ಮಾತನ್ನು ಹೇಳಿದ್ದು ಕೇಳಿ ಚಿರಂಜೀವಿ ಅವರು ಜೋರಾಗಿ ನಕ್ಕರು. ಕಠಿಣವಾದ ಧ್ವನಿಯಲ್ಲಿ ಸಲ್ಮಾನ್ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು, ದಕ್ಷಿಣದಲ್ಲಿ ಬಾಲಿವುಡ್ ಚಿತ್ರಗಳನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಚಿರಂಜೀವಿಗೆ ಹೇಳಿದ್ದಾರೆ.

ರೆಡಿಟ್‌ನಲ್ಲಿ ವೈರಲ್ ಆಗಿರುವ ಕ್ಲಿಪ್‌ನಲ್ಲಿ ಸಲ್ಮಾನ್ ಖಾನ್ “”ಚಿರುಗಾರು, ನಿಮ್ಮ ಚಿತ್ರಗಳನ್ನು ಉತ್ತರ ಭಾರತದಲ್ಲಿ ಸ್ವೀಕರಿಸಲಾಗಿದೆ. ಆದರೆ ಅಲ್ಲಿಯ ಜನ ನಮ್ಮ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲʼʼ ಎಂದು ಚಿರಂಜೀವಿ ಹೇಳುತ್ತಲೇ ಜೋರಾಗಿ ನಗಲು ಪ್ರಾರಂಭಿಸಿದರು.

ʼರೆಡ್ಡಿಟರ್‌ʼಗಳು ಸ್ಟಾರ್ ಗಳ ಈ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಒಬ್ಬ, ಇದು ತಪ್ಪಾದ ಹೇಳಿಕೆಯಾಗಿದೆ. ಹಿಂದಿ ಸಿನಿಮಾಗಳ ಪ್ರಾದೇಶಿಕ ಡಬ್ಬಿಂಗ್ ಗೆ ದಕ್ಷಿಣದಲ್ಲಿ ಅಷ್ಟಾಗಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿಲ್ಲ. ಆದರೆ ಹಿಂದಿ ಚಲನಚಿತ್ರಗಳ ಹಿಂದಿ ಆವೃತ್ತಿಗಳು ದಕ್ಷಿಣದಲ್ಲಿ ಉತ್ತಮ ವ್ಯಾಪಾರವನ್ನು ಮಾಡುತ್ತವೆ ಎಂದು ಹೇಳಿದ್ದಾರೆ.

ಮತ್ತೊಬ್ಬರು ಬಾಲಿವುಡ್ ಚಿತ್ರಗಳನ್ನು ಉತ್ತರದಲ್ಲಿ ಸ್ವೀಕರಿಸಲಾಗುತ್ತಿದೆಯಂತೆ ಎಂದು ಹೇಳಿದ್ದಾರೆ. ಅವರ ಚಿತ್ರಗಳು ಇಲ್ಲಿ ಸಾರ್ವಕಾಲಿಕ ಉತ್ತಮ ವ್ಯಾಪಾರವನ್ನು ಮಾಡುತ್ತವೆ ಎಂಬುದು ತಪ್ಪು ಹೇಳಿಕೆಯಾಗಿದೆ. ಉತ್ತರ ಭಾರತದಲ್ಲಿ ಸೌತ್ ಚಿತ್ರಗಳು ಹಿಟ್ ಅಂಡ್ ಮಿಸ್ ಆಗಿವೆ. ಅವು ಫ್ಲಾಪ್ ಆಗಿರಲೂಬಹುದು. ಅಪರೂಪಕ್ಕೆ ಹಿಟ್ ಆಗುತ್ತೆ. ಹಿಟ್ ಆಗಿದ್ದು ಕೂಡ ಸಾಮಾನ್ಯವಾಗಿ ಪ್ಯಾನ್ ಇಂಡಿಯಾ ಚಿತ್ರಗಳು ಎಂದಿದ್ದಾರೆ. ಇನ್ನೊಬ್ಬರು ಶಾರುಖ್ ಚಲನಚಿತ್ರಗಳನ್ನು ದಕ್ಷಿಣದಲ್ಲಿ ಚೆನ್ನಾಗಿ ಸ್ವೀಕರಿಸಲಾಗಿದೆ. ಕೇರಳದ ಜನರು ವಿಶೇಷವಾಗಿ ಅವರನ್ನು ಮತ್ತು ಅವರ ಪಾತ್ರಗಳನ್ನು ತುಂಬಾ ಇಷ್ಟಪಡುತ್ತಾರೆ ಎಂದಿದ್ದಾರೆ.


ಇತ್ತೀಚೆಗೆ ಗಮನ ಸೆಳೆದಿರುವ ಪ್ರಭಾಸ್ ಕುರಿತ ಅರ್ಷದ್ ವಾರ್ಸಿ ಅವರ ಕಾಮೆಂಟ್‌ಗಳ ನಡುವೆ ಸಲ್ಮಾನ್ ಅವರ ಈ ವಿಡಿಯೋ ಮರುಕಳಿಸಿದೆ. ಕಲ್ಕಿ 2898 ಎಡಿಯಲ್ಲಿ ಪ್ರಭಾಸ್ ‘ಜೋಕರ್’ನಂತೆ ಕಾಣುತ್ತಿದ್ದರು ಎಂದು ಅರ್ಷದ್ ವಾರ್ಸಿ ಹೇಳಿದ್ದರು. ನಾಗ್ ಅಶ್ವಿನ್ ನಿರ್ದೇಶನದ ಈ ಚಿತ್ರದಲ್ಲಿ ಅಶ್ವತ್ಥಾಮ ಪಾತ್ರದಲ್ಲಿ ಅಮಿತಾಭ್ ಬಚ್ಚನ್ ಅವರನ್ನು ನೋಡಲು ಇಷ್ಟವಾದರೂ ಪ್ರಭಾಸ್ ಅವರು ಪ್ರಭಾವಿತರಾಗಲಿಲ್ಲ ಎಂದು ಅರ್ಷದ್ ಹೇಳಿದ್ದರು.

ಇದನ್ನೂ ಓದಿ: Rishab Shetty : ಕಂಬಳ ಬಳಿಕ ಕಾಂತಾರ- 2ನಲ್ಲಿ ಕಳರಿ ಪಯಟ್ಟು ಪ್ರದರ್ಶನಕ್ಕೆ ಸಜ್ಜಾದ ಡಿವೈನ್‌ ಸ್ಟಾರ್‌ ರಿಷಬ್‌ ಶೆಟ್ಟಿ

ಅರ್ಷದ್ ಅವರ ಈ ಹೇಳಿಕೆಯು ಪ್ರಭಾಸ್ ಅಭಿಮಾನಿಗಳನ್ನು ಕೆರಳಿಸಿತ್ತು. ಸಾಕಷ್ಟು ಮಂದಿ ಇದಕ್ಕೆ ಕಾಮೆಂಟ್ ಮಾಡಿ ಅರ್ಷದ್ ಅವರನ್ನು ದೂಷಿಸಿದ್ದಾರೆ.

Continue Reading

ಕ್ರೈಂ

Kolkata Doctor Murder Case: ಮಮತಾ ಬ್ಯಾನರ್ಜಿ ಆಡಳಿತದ ಕರಾಳ ಅಧ್ಯಾಯ ತೆರೆದಿಟ್ಟಿದೆ ಕೋಲ್ಕತಾ ವೈದ್ಯೆ ಕೊಲೆ ಪ್ರಕರಣ

ಕೋಲ್ಕತಾ ಮಹಿಳಾ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯು (Kolkata Doctor Murder Case) ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಮುಖ್ಯವಾಗಿ ಪಶ್ಚಿಮ ಬಂಗಾಳ ಸರ್ಕಾರದ ನಡೆಯ ಬಗ್ಗೆ ಸುಪ್ರೀಂ ಕೋರ್ಟ್ ಅನೇಕ ಪ್ರಶ್ನೆಗಳನ್ನು ಎತ್ತಿದೆ. ಇದು ರಾಜ್ಯದಲ್ಲಿ ನಡೆದ ಹಿಂಸಾಚಾರ, ಮಹಿಳೆಯರ ಸುರಕ್ಷತೆ ಮತ್ತು ಅಧಿಕಾರದಲ್ಲಿರುವವರ ಸಮಗ್ರತೆಯ ಬಗ್ಗೆ ಕಳವಳ ವ್ಯಕ್ತಪಡಿಸುವಂತೆ ಮಾಡಿದೆ.

VISTARANEWS.COM


on

By

Kolkata Doctor Murder Case
Koo

ಕೋಲ್ಕತಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ (Kolkata Doctor Murder Case) ಪಶ್ಚಿಮ ಬಂಗಾಳದ (West Bengal) ಆಡಳಿತದಲ್ಲಿ ಒಂದು ಕರಾಳ ಅಧ್ಯಾಯ. ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಸರ್ಕಾರ ಎಡವಿದೆ ಎಂದು ಸುಪ್ರೀಂ ಕೋರ್ಟ್‌ (Supreme Court) ಖಾರವಾಗಿ ಹೇಳಿರುವುದು ಅಲ್ಲಿಯ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ನೀಡಿರುವ ತಪರಾಕಿ ಎನ್ನಬಹುದಾಗಿದೆ. ಸರ್ಕಾರದ ಕ್ರಮಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ನ್ಯಾಯಾಲಯವು, ಪಶ್ಚಿಮ ಬಂಗಾಳ ಸರ್ಕಾರವು (west bengal govt) ಪ್ರಕರಣವನ್ನು ನಿಭಾಯಿಸುವಲ್ಲಿ ಅಸಮರ್ಥವಾಗಿತ್ತು ಎಂದು ತಿಳಿಸಿದೆ.

ಜನಸಮೂಹವು ಆರ್‌ಜಿ ಕರ್ ಆಸ್ಪತ್ರೆಯನ್ನು ಧ್ವಂಸಗೊಳಿಸಲು ಪಶ್ಚಿಮ ಬಂಗಾಳ ಹೇಗೆ ಅವಕಾಶ ಮಾಡಿಕೊಟ್ಟಿತು ಎಂದು ಪ್ರಶ್ನಿಸಿರುವ ನ್ಯಾಯಾಲಯ, ‘ಅಪರಾಧ ನಡೆದ ಸ್ಥಳದಲ್ಲಿ 24 ಗಂಟೆಯೂ ಭದ್ರತೆ ನೀಡುವುದು ಪೊಲೀಸರ ಕರ್ತವ್ಯವಾಗಿತ್ತು. ಬೆಳಗ್ಗೆಯೇ ಅಪರಾಧ ಪತ್ತೆಯಾಗಿದ್ದು, ವೈದ್ಯಕೀಯ ಕಾಲೇಜು ಪ್ರಾಂಶುಪಾಲರು ಆತ್ಮಹತ್ಯೆ ಎಂದು ಬಿಂಬಿಸಲು ಪ್ರಯತ್ನಿಸಿದ್ದಾರೆʼ ಎಂದು ಖಾರವಾಗಿ ಹೇಳಿದೆ. ಎಫ್‌ಐಆರ್ ದಾಖಲಿಸುವಲ್ಲಿ ವಿಳಂಬ, ದುಃಖಿತ ಪೋಷಕರಿಗೆ ಸಂತ್ರಸ್ತೆಯ ದೇಹವನ್ನು ನೋಡಲು ಬಿಡದಿರುವುದು ಹಲವು ಅನುಮಾನಕ್ಕೆ ಕಾರಣವಾಗಿತ್ತು ಎಂದು ತಿಳಿಸಿದೆ.

ಸುಪ್ರೀಂ ಕೋರ್ಟ್ ನ ಈ ಅವಲೋಕನ ಪಶ್ಚಿಮ ಬಂಗಾಳ ಸರ್ಕಾರ ಮತ್ತು ಪೊಲೀಸರ ಕರ್ತವ್ಯ ನಿರ್ಲಕ್ಷ್ಯವನ್ನು ಎತ್ತಿ ತೋರಿಸಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಆಡಳಿತದಲ್ಲಿ ಆಸ್ಪತ್ರೆ ಅಧಿಕಾರಿಗಳು ಮತ್ತು ರಾಜ್ಯ ಸರ್ಕಾರದ ಕ್ರಮಗಳ ಬಗ್ಗೆ ಕಳವಳವನ್ನು ಹುಟ್ಟುಹಾಕಿದೆ.

Kolkata Doctor Murder Case
Kolkata Doctor Murder Case


ಯುವ ಮಹಿಳಾ ವೈದ್ಯೆಯ ಸಾವು ಆರಂಭದಲ್ಲಿ ದುರಂತ ಆತ್ಮಹತ್ಯೆಯಂತೆ ಕಂಡು ಬಂದಿತು. ಆದರೆ ವಿವರಗಳು ಹೊರಬರುತ್ತಿದ್ದಂತೆ ಆಕೆಯನ್ನು ಕ್ರೂರವಾಗಿ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂಬುದು ಸ್ಪಷ್ಟವಾಯಿತು. ಕಾಲೇಜು ಪ್ರಾಂಶುಪಾಲರಾದ ಸಂದೀಪ್ ಘೋಷ್ ಅವರು ಘಟನೆಯನ್ನು ಆತ್ಮಹತ್ಯೆ ಎಂದು ಬಿಂಬಿಸಲು ಪ್ರಯತ್ನಿಸಿದರು. ಇದು ಅನಂತರ ಭಾರೀ ಟೀಕೆಗೆ ಗುರಿಯಾಯಿತು.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರಾಗಿ ಮಮತಾ ಬ್ಯಾನರ್ಜಿ ಅವರು ಘಟನೆಯ ಮಹತ್ವದ ಜವಾಬ್ದಾರಿಯನ್ನು ಹೊಂದಿದ್ದಾರೆ. ಮಮತಾ ಗಂಭೀರ ಸಮಸ್ಯೆಯನ್ನು ಪರಿಹರಿಸುವ ಬದಲು, ತಮ್ಮದೇ ಆಡಳಿತದ ವೈಫಲ್ಯಗಳ ವಿರುದ್ಧ ಪ್ರತಿಭಟನೆಗಳನ್ನು ಆಯೋಜಿಸಿದ್ದು ಹಾಸ್ಯಾಸ್ಪದವಾಗಿದೆ.

ರಾಜ್ಯದ ನಾಯಕಿಯಾಗಿ 14 ವರ್ಷಗಳ ಅಧಿಕಾರಾವಧಿ ಮತ್ತು ಕೇಂದ್ರ ಸಚಿವರಾಗಿ ಅನುಭವ ಇರುವ ಅವರು, ಈ ವಿಷಯದ ಬಗ್ಗೆ ಕೇಂದ್ರೀಯ ತನಿಖಾ ದಳದ (ಸಿಬಿಐ) ತನಿಖೆಗೆ ಅವರು ನೀಡಿರುವ ಕರೆಗಳು ವಿರೋಧಾಭಾಸವೆಂದು ತೋರುತ್ತದೆ. ಅವಾಸ್ತವಿಕ ಡೆಡ್‌ಲೈನ್‌ನೊಂದಿಗೆ ತ್ವರಿತಗತಿಯ ಸಿಬಿಐ ತನಿಖೆಗಾಗಿ ಅವರ ಬೇಡಿಕೆಯು ನ್ಯಾಯವನ್ನು ಪಡೆಯುವ ನಿಜವಾದ ಪ್ರಯತ್ನಕ್ಕಿಂತ ಹೆಚ್ಚಾಗಿ ರಾಜಕೀಯ ಸಾಹಸವಾಗಿದೆ ಎಂದು ಅನೇಕ ವಿಮರ್ಶಕರು ವಾದಿಸಿದ್ದಾರೆ.

ಮಮತಾ ಅವರು ಮುಚ್ಚಿಟ್ಟ ಆರೋಪಗಳು, ತಡರಾತ್ರಿ ಆಸ್ಪತ್ರೆ ಆವರಣದಲ್ಲಿ ಭುಗಿಲೆದ್ದ ಗಲಭೆಯಿಂದ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿದೆ. ಆಡಳಿತ ಪಕ್ಷ ಟಿಎಂಸಿಗೆ ಸಂಬಂಧವಿದೆ ಎಂದು ನಂಬಲಾದ ಗೂಂಡಾಗಳು, ತಮ್ಮ ಸಹೋದ್ಯೋಗಿಗೆ ನ್ಯಾಯಕ್ಕಾಗಿ ಒತ್ತಾಯಿಸಿ ವೈದ್ಯರು ನಡೆಸಿದ ಶಾಂತಿಯುತ ಪ್ರದರ್ಶನಗಳನ್ನು ಅಡ್ಡಿಪಡಿಸಿದ್ದರು. ಈ ಗಲಭೆಯು ಪ್ರಕರಣಕ್ಕೆ ಸಂಬಂಧಿಸಿದ ನಿರ್ಣಾಯಕ ಸಾಕ್ಷ್ಯಗಳನ್ನು ನಾಶಪಡಿಸಲು ಕಾರಣವಾಯಿತು. ಇದು ತನಿಖೆಗೆ ಅಡ್ಡಿಪಡಿಸುವ ಉದ್ದೇಶಪೂರ್ವಕ ಪ್ರಯತ್ನ ಎಂದು ಹಲವರು ಊಹಿಸಿದ್ದಾರೆ.

ಸಿಸಿಟಿವಿ ದೃಶ್ಯಾವಳಿಗಳು ಹಿಂಸಾತ್ಮಕ ಏಕಾಏಕಿ ಟಿಎಂಸಿ ಸದಸ್ಯರಿಗೆ ಹತ್ತಿರವಿರುವ ವ್ಯಕ್ತಿಗಳ ಒಳಗೊಳ್ಳುವಿಕೆಯನ್ನು ತೋರಿಸುತ್ತವೆ. ಇದು ಮುಚ್ಚಿಡುವಿಕೆಯ ಅನುಮಾನಗಳನ್ನು ಮತ್ತಷ್ಟು ಹೆಚ್ಚಿಸಿದೆ.


ಹಲವು ಪ್ರಶ್ನೆಗಳು

ಸಂತ್ರಸ್ತೆಯ ದೇಹವನ್ನು ಪೋಷಕರಿಗೆ ಏಕೆ ತೋರಿಸಲಿಲ್ಲ ಮತ್ತು ಇದಕ್ಕೆ ಆದೇಶಿಸಿದವರು ಯಾರು, ಅಪರಾಧದ ಸ್ಥಳದಲ್ಲಿ ಏನು ನಡೆಯಿತು, ಅಪರಾಧ ನಡೆದಿದೆ ಎನ್ನಲಾದ ಇಲಾಖೆಯಲ್ಲಿಯೇ ಹಠಾತ್ ನಿರ್ವಹಣೆ ಕಾರ್ಯವನ್ನು ಏಕೆ ಪ್ರಾರಂಭಿಸಲಾಯಿತು, ಔಷಧ ಮಾಫಿಯಾ ಆರೋಪಗಳು ಎಷ್ಟು ಸರಿ ಈ ಎಲ್ಲ ಪ್ರಶ್ನೆಗಳು ವೈದ್ಯೆಯ ಸಾವಿನ ಬಳಿಕ ಎಲ್ಲರಲ್ಲೂ ಉದ್ಭವಿಸಿದೆ.

ಇದನ್ನೂ ಓದಿ: Kolkata Doctor Murder Case: ಟ್ರೈನಿ ವೈದ್ಯೆ ಕೊಲೆ ಪ್ರಕರಣ- ಪ್ರಧಾನಿ ಮೋದಿಗೆ ದಿಢೀರ್‌ ಪತ್ರ ಬರೆದ ಮಮತಾ ಬ್ಯಾನರ್ಜಿ

ಈ ಘಟನೆಯಲ್ಲಿ ರಾಜ್ಯದೊಳಗಿನ ಪ್ರಬಲ ಶಕ್ತಿಗಳೇ ಸಂಚು ರೂಪಿಸಿರುವ ಸಾಧ್ಯತೆ ಇದೆ. ಭ್ರಷ್ಟಾಚಾರ ಮತ್ತು ಪ್ರಕರಣದ ದುರುಪಯೋಗ ಎರಡರ ಆರೋಪ ಹೊತ್ತಿರುವ ಕಾಲೇಜು ಪ್ರಾಂಶುಪಾಲರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಹಿಂದೇಟು ಹಾಕುತ್ತಿರುವುದು ಅನೇಕ ಊಹಾಪೋಹಗಳಿಗೆ ಇನ್ನಷ್ಟು ಪುಷ್ಟಿ ನೀಡಿದೆ. ಈ ಪ್ರಕರಣವು ಪಶ್ಚಿಮ ಬಂಗಾಳದ ಕಾನೂನು ಜಾರಿ ಮತ್ತು ಆಡಳಿತದಲ್ಲಿನ ಗಂಭೀರ ನ್ಯೂನತೆಗಳನ್ನು ಬಹಿರಂಗಪಡಿಸಿದೆ. ಹೀಗಾಗಿ ಇದು ಮಮತಾ ಬ್ಯಾನರ್ಜಿಗೆ ಇದು ಅಗ್ನಿಪರೀಕ್ಷೆ ಎನ್ನಬಹುದಾಗಿದೆ.

Continue Reading

Latest

Viral Video: ಹರಿದ ಬಟ್ಟೆ ಧರಿಸಿ ತನ್ನ ಮೇಲೆ ಅತ್ಯಾಚಾರ ಆಗಿದೆ ಎಂದ ಮಹಿಳೆ; ಅಸಲಿಗೆ ಆಗಿದ್ದೇನು?

Viral Video: ವಿಡಿಯೊದಲ್ಲಿ, ಮಹಿಳೆ ಹಾಡಹಗಲೇ ಲಾಲ್ ಕುವಾನ್ ಪೊಲೀಸ್ ಹೊರಠಾಣೆಯ ವ್ಯಾಪ್ತಿಯಲ್ಲಿ ರಸ್ತೆಯ ಬದಿಯಲ್ಲಿ ಕುಳಿತಿದ್ದಳು. ಅಪರಿಚಿತ ವ್ಯಕ್ತಿಯೊಬ್ಬ ತನ್ನನ್ನು ಎಳೆದೊಯ್ದು, ಹಲ್ಲೆ ನಡೆಸಿ ಅತ್ಯಾಚಾರ ಎಸಗಿದ್ದಾನೆ ಎಂದು ದಾರಿಹೋಕನಿಗೆ ಹೇಳುತ್ತಿರುವುದನ್ನು ವಿಡಿಯೊದಲ್ಲಿ ಸೆರೆಹಿಡಿಯಲಾಗಿತ್ತು. ಈ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾಗಿದ್ದು, ಇದು ವೈರಲ್ ಆಗಿತ್ತು. ಆಗ ಪೊಲೀಸರು ಈ ವೈರಲ್ ವಿಡಿಯೊವನ್ನು ನೋಡಿ ಅದರ ಸತ್ಯಾಂಶವನ್ನು ತಿಳಿಯುವ ಪ್ರಯತ್ನ ಮಾಡಿದ್ದಾರೆ. ಅಸಲಿ ವಿಷಯ ಏನು? ಈ ವರದಿ ಓದಿ.

VISTARANEWS.COM


on

Viral Video
Koo

ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿದ್ದು, ಪೊಲೀಸರಿಗೆ ಈ ಪ್ರಕರಣಗಳನ್ನು ಬೇಧಿಸುವುದು ಒಂದು ತಲೆನೋವಾಗಿದೆ. ಈ ಮಧ್ಯೆ ಹರಿದ ಬಟ್ಟೆ ಧರಿಸಿದ ಮಹಿಳೆಯೊಬ್ಬಳು ತನ್ನನ್ನು ಅಪಹರಿಸಿ ಅತ್ಯಾಚಾರ ಎಸಗಲಾಗಿದೆ ಎಂದು ಆರೋಪಿಸಿ ರಸ್ತೆ ಬದಿಯಲ್ಲಿ ಕುಳಿತಿರುವ ವಿಡಿಯೊ ಒಂದು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡಿತ್ತು. ಇದು ಅನೇಕ ಜನರ ಗಮನ ಸೆಳೆದ ಹಿನ್ನಲೆಯಲ್ಲಿ ಇದು ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಆದರೆ ಈ ವಿಡಿಯೊ ವೈರಲ್ (Viral Video)ಆದ ಒಂದು ದಿನದ ನಂತರ, ಉತ್ತರ ಪ್ರದೇಶ ಪೊಲೀಸರು ಗುರುವಾರ ಆಕೆ ಮಾನಸಿಕ ಅಸ್ವಸ್ಥೆ ಮತ್ತು ಆಕೆಯ ಹೇಳಿಕೆ ಸುಳ್ಳು ಎಂದು ಹೇಳಿದ್ದಾರೆ.

ವಿಡಿಯೊದಲ್ಲಿ, ಮಹಿಳೆ ಹಾಡಹಗಲೇ ಲಾಲ್ ಕುವಾನ್ ಪೊಲೀಸ್ ಹೊರಠಾಣೆಯ ವ್ಯಾಪ್ತಿಯಲ್ಲಿ ರಸ್ತೆಯ ಬದಿಯಲ್ಲಿ ಕುಳಿತಿದ್ದಾಳೆ. ಬುಧವಾರ ಸಂಜೆ ಅಪರಿಚಿತ ವ್ಯಕ್ತಿಯೊಬ್ಬ ತನ್ನನ್ನು ಎಳೆದೊಯ್ದು, ಹಲ್ಲೆ ನಡೆಸಿ ಅತ್ಯಾಚಾರ ಎಸಗಿದ್ದಾನೆ ಎಂದು ದಾರಿಹೋಕನಿಗೆ ಹೇಳುತ್ತಿರುವುದನ್ನು ವಿಡಿಯೊದಲ್ಲಿ ಸೆರೆಹಿಡಿಯಲಾಗಿದೆ. ಈ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾಗಿದ್ದು, ಇದು ಸಖತ್ ವೈರಲ್ ಆಗಿತ್ತು. ಆಗ ಪೊಲೀಸರು ಈ ವೈರಲ್ ವಿಡಿಯೊವನ್ನು ನೋಡಿ ಅದರ ಸತ್ಯಾಂಶವನ್ನು ತಿಳಿಯುವ ಪ್ರಯತ್ನ ಮಾಡಿದ್ದಾರೆ. ಇದರಿಂದ ಪೊಲೀಸರಿಗೆ ಮಹಿಳೆಯ ಬಗ್ಗೆ ಮಾಹಿತಿ ದೊರಕಿದೆ. ಆ ಮಹಿಳೆ ಅನೇಕ ಬಾರಿ ಮನೆಯಿಂದ ಓಡಿಹೋಗಿದ್ದಾಳೆ ಎಂದು ಮಹಿಳೆಯ ಸಹೋದರ ದೃಢಪಡಿಸಿದ್ದಾರೆ ಎಂದು ವರದಿಯಾಗಿದೆ.

ಮಹಿಳೆಯನ್ನು ಪೊಲೀಸ್ ತಂಡವು ಸ್ಥಳದಿಂದ ಪೊಲೀಸ್ ಠಾಣೆಗೆ ಕರೆದೊಯ್ದು ನಂತರ ಆಕೆಯ ಕುಟುಂಬ ಸದಸ್ಯರನ್ನು ಕರೆಸಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ (ವೇವ್ ಸಿಟಿ) ಪೂನಂ ಮಿಶ್ರಾ ತಿಳಿಸಿದ್ದಾರೆ. ಆಕೆ ಮಾನಸಿಕ ಅಸ್ವಸ್ಥಳಾಗಿದ್ದಾಳೆ ಮತ್ತು ಅದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಅವಳು ಹೀಗೆ ಎಲ್ಲರ ಮೇಲೂ ಉದ್ದೇಶಪೂರ್ವಕವಾಗಿ ಆರೋಪಗಳನ್ನು ಮಾಡುತ್ತಾಳೆ ಎಂದು ಆಕೆಯ ಸಹೋದರ ನಮಗೆ ತಿಳಿಸಿದರು” ಎಂದು ಮಿಶ್ರಾ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದರು.

ಇದನ್ನೂ ಓದಿ:ಕಾಶ್ಮೀರದಲ್ಲಿ ಹಿಂದೂ ಬಾಲಕಿ ಮೇಲೆ ಅತ್ಯಾಚಾರ; ಬೃಹತ್‌ ಪ್ರತಿಭಟನೆ

“ವಿಡಿಯೊದಲ್ಲಿ ಆಕೆ ಮಾಡುತ್ತಿರುವ ಆರೋಪಗಳು ಸುಳ್ಳು” ಎಂದು ಪೊಲೀಸರು ಹೇಳಿದ್ದಾರೆ. ಈ ಹಿಂದೆ ಈ ರೀತಿ ಹುಚ್ಚಿಯಂತೆ ತಿರುಗಾಡುತ್ತಿದ್ದ ಆಕೆಯನ್ನು ಉತ್ತರಾಖಂಡದ ಹರಿದ್ವಾರ, ರೂರ್ಕಿ ಮತ್ತು ತೆಹ್ರಿ ಮುಂತಾದ ಸ್ಥಳಗಳಿಂದ ರಕ್ಷಿಸಲಾಗಿತ್ತು ಎಂದು ಎಸಿಪಿ ಹೇಳಿದರು.”ಮಹಿಳೆಯನ್ನು ಆಕೆಯ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ” ಎಂದು ಅವರು ತಿಳಿಸಿದ್ದಾರೆ.

Continue Reading

ವಿದೇಶ

Monkey Pox: ಏನಿದು ಡೇಂಜರಸ್ ಮಂಕಿ ಪಾಕ್ಸ್? ಇದು ಹೇಗೆ ಹರಡುತ್ತದೆ? ಪಾರಾಗೋದು ಹೇಗೆ?

ಮಂಕಿ ಪಾಕ್ಸ್ (Monkey Pox) ವೈರಸ್ ಸೋಂಕಿತರಲ್ಲಿ ಸುಮಾರು ನಾಲ್ಕು ವಾರಗಳವರೆಗೆ ವಿವಿಧ ರೀತಿಯ ರೋಗ ಲಕ್ಷಣಗಳನ್ನು ಉಂಟು ಮಾಡುತ್ತದೆ. ಸೋಂಕಿತರ ಮಧ್ಯೆಯೇ ಇದ್ದರೂ ಸೋಂಕಿನ ಅಪಾಯವನ್ನು ಕಡಿಮೆ ಮಾಡಲು ಹಲವು ದಾರಿಗಳಿವೆ. ಇದಕ್ಕಾಗಿ ಮಂಕಿ ಪಾಕ್ಸ್ ಎಂದರೇನು, ಇದು ಹೇಗೆ ಬರುತ್ತದೆ, ಇದರ ಲಕ್ಷಣಗಳು ಏನು ಎನ್ನುವ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

Monkey Pox
Koo

ಮಧ್ಯ ಆಫ್ರಿಕಾದ (Central Africa) ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯ ( Democratic Republic of the Congo) ಮತ್ತು ನೆರೆಹೊರೆಯ ದೇಶಗಳಲ್ಲಿ ಮಂಕಿ ಪಾಕ್ಸ್ (Monkey Pox) ವೈರಸ್‌ನ ಹೊಸ ರೂಪಾಂತರ ಆತಂಕ ಮೂಡಿಸಿದೆ. ಸುಮಾರು ನಾಲ್ಕು ವಾರಗಳವರೆಗೆ ಕಾಡುವ ಈ ಸೋಂಕು ಕೀವು ತುಂಬಿದ ಚರ್ಮದ ದದ್ದುಗಳಿಗೆ ಕಾರಣವಾಗುತ್ತದೆ, ಇದು ತುಂಬಾ ನೋವಿನಿಂದ ಕೂಡಿರುತ್ತದೆ. ಸೋಂಕಿತರ ಮಧ್ಯೆಯೇ ಇದ್ದರೂ ಸೋಂಕಿನ ಅಪಾಯವನ್ನು ಕಡಿಮೆ ಮಾಡಲು ಹಲವು ದಾರಿಗಳಿವೆ. ಇದಕ್ಕಾಗಿ ಮಂಕಿ ಪಾಕ್ಸ್ ಎಂದರೇನು, ಇದು ಹೇಗೆ ಬರುತ್ತದೆ, ಇದರ ಲಕ್ಷಣಗಳು ಏನು ಎನ್ನುವ ಕುರಿತು ತಿಳಿದುಕೊಳ್ಳಬೇಕು.

ಮಂಕಿ ಪಾಕ್ಸ್ ಎಂದರೇನು?

ಮಂಕಿ ಪಾಕ್ಸ್ ಎಂಬುದು ವೈರಸ್‌ನಿಂದ ಹರಡುವ ಸಾಂಕ್ರಾಮಿಕ ಕಾಯಿಲೆಯಾಗಿದೆ. ಇದು ಮೊದಲ ಬಾರಿಗೆ 1958ರಲ್ಲಿ ಡೆನ್ಮಾರ್ಕ್‌ನಲ್ಲಿ ಪತ್ತೆಯಾಯಿತು. ಇದು ಸಿಡುಬು ರೋಗವನ್ನು ಹೋಲುತ್ತದೆ.

“ಮಂಕಿಪಾಕ್ಸ್ ವೈರಸ್” ಎಂದು ಕರೆಯಲಾಗಿದ್ದರೂ ಈ ವೈರಸ್‌ನ ಮೂಲವು ಇನ್ನೂ ತಿಳಿದಿಲ್ಲ. ಅಳಿಲು, ಸಸ್ತನಿಗಳಲ್ಲಿ ಈ ವೈರಸ್ ಕಂಡು ಬರುತ್ತದೆ ಎನ್ನುತ್ತಾರೆ ಸಂಶೋಧಕರು.

ಈ ವೈರಸ್ ಮಧ್ಯ ಮತ್ತು ಪಶ್ಚಿಮ ಆಫ್ರಿಕಾದಲ್ಲಿ ಹೆಚ್ಚಾಗಿ ಕಂಡು ಬಂದಿದೆ. ಕಳೆದ ಎರಡು ವರ್ಷಗಳ ಅವಧಿಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ (WHO) ಎರಡು ಬಾರಿ ಮಂಕಿ ಪಾಕ್ಸ್ ಹರಡುವಿಕೆಯ ಬಗ್ಗೆ ಎಚ್ಚರಿಕೆಯನ್ನು ನೀಡಿತ್ತು. 2022ರಲ್ಲಿ 70 ಕ್ಕೂ ಹೆಚ್ಚು ದೇಶಗಳಿಗೆ ಮಂಕಿ ಪಾಕ್ಸ್ ಹರಡಿತ್ತು. ಈ ವರ್ಷದ ಮಂಕಿ ಪಾಕ್ಸ್ ನ ಹೊಸ ರೂಪಾಂತರವು ಕಾಂಗೋ ಮತ್ತು ನೆರೆಯ ದೇಶಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದ್ದು, ಸಾವಿನ ಉಲ್ಬಣಕ್ಕೆ ಕಾರಣವಾಗಿದೆ.

Monkey Pox
Monkey Pox


ಎಂಪಾಕ್ಸ್‌‌ಗೆ ಚಿಕಿತ್ಸೆ

ಇದಕ್ಕೆ ನಿರ್ದಿಷ್ಟವಾಗಿ ಯಾವುದೇ ಚಿಕಿತ್ಸೆಗಳಿಲ್ಲ. ಬಲವಾದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೊಂದಿದ್ದರೆ ಮತ್ತು ಚರ್ಮ ರೋಗವನ್ನು ಹೊಂದಿಲ್ಲದಿದ್ದರೆ ನೋವು ನಿವಾರಣೆ ಸೇರಿದಂತೆ ಸೂಕ್ತವಾದ ವೃತ್ತಿಪರ ಆರೈಕೆಯಿಂದ ಚೇತರಿಸಿಕೊಳ್ಳಬಹುದು. 2022ರಲ್ಲಿ ಎಂಪಾಕ್ಸ್ ಚಿಕಿತ್ಸೆಗಾಗಿ tecovirimat ಎಂದು ಕರೆಯಲ್ಪಡುವ ಒಂದು ಆಂಟಿವೈರಲ್ ಔಷಧವನ್ನು ಅನುಮತಿಸಲಾಗಿದೆ.

ಪಾಕ್ಸ್ ಹೇಗೆ ಹರಡುತ್ತದೆ?

ಕಣ್ಣು, ಬಾಯಿ, ಚರ್ಮ, ಮೂಗಿನಿಂದ ಸ್ರವಿಸುವ ದ್ರವ ಮತ್ತು ಉಸಿರಾಟದ ಮೂಲಕ ಈ ವೈರಸ್ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ. ಎಂಪಾಕ್ಸ್ ಇರುವ ಜನರ ನಿಕಟ ಸಂಪರ್ಕಕ್ಕೆ ಬಂದಾಗ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ರೋಗಲಕ್ಷಣಗಳನ್ನು ತೋರಿಸುವ ಮೊದಲೇ ಇದು ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ.

ಎಂಪಾಕ್ಸ್ ನ ಲಕ್ಷಣಗಳು ಯಾವುವು?

ಸಾಮಾನ್ಯವಾಗಿ ಈ ವೈರಲ್ ಸೋಂಕು ಗುದದ್ವಾರ, ಜನನಾಂಗ, ಎದೆ, ಮುಖ ಅಥವಾ ಬಾಯಿಯ ಮೇಲೆ ದದ್ದುಗಳಿಂದ ಪ್ರಾರಂಭವಾಗುತ್ತದೆ. ಅನಂತರ ದೇಹದ ಇತರ ಭಾಗಗಳಿಗೆ ವಿಸ್ತರಿಸಬಹುದು. ದದ್ದುಗಳು ನೋವಿನಿಂದ ಕೂಡಿರುತ್ತವೆ. ತುರಿಕೆಯು ಹೆಚ್ಚಾಗಿರುತ್ತದೆ. ಈ ದದ್ದುಗಳು ಮೊಡವೆ ಅಥವಾ ಗುಳ್ಳೆಗಳನ್ನು ಹೋಲುತ್ತವೆ. ಜ್ವರ, ತಲೆನೋವು, ಊದಿಕೊಂಡ ದುಗ್ಧರಸ ಗ್ರಂಥಿಗಳು, ಸ್ನಾಯು ನೋವು ಅಥವಾ ಶೀತ ಇತರ ರೋಗಲಕ್ಷಣಗಳಾಗಿವೆ.

ವೈರಸ್‌ಗೆ ಒಡ್ಡಿಕೊಂಡ 21 ದಿನಗಳಲ್ಲಿ ರೋಗಲಕ್ಷಣಗಳು ಸಾಮಾನ್ಯವಾಗಿ ಪ್ರಾರಂಭವಾಗುತ್ತವೆ. ಗಾಯಗಳು ಸೋಂಕಿಗೆ ಒಳಗಾದಾಗ ಅಪಾಯಕಾರಿಯಾಗಬಹುದು. ಅತಿಸಾರ, ವಾಂತಿ, ನ್ಯುಮೋನಿಯಾ, ಮೆದುಳಿನ ಉರಿಯೂತ, ನಿರ್ಜಲೀಕರಣ, ಉಸಿರಾಟದ ತೊಂದರೆಗಳೂ ಕೆಲವರಲ್ಲಿ ಕಾಣಿಸಿಕೊಳ್ಳಬಹುದು.


ಯಾರಿಗೆ ಹೆಚ್ಚು ಅಪಾಯ?

ರೋಗನಿರೋಧಕ ಶಕ್ತಿ ಹೊಂದಿಲ್ಲದವರು ಈ ಸೋಂಕಿನಿಂದ ಹೆಚ್ಚು ಅಪಾಯವನ್ನು ಎದುರಿಸಬೇಕಾಗುತ್ತದೆ. ಲೈಂಗಿಕ ಕಾರ್ಯಕರ್ತರು, ಆರೋಗ್ಯ ಕಾರ್ಯಕರ್ತರಿಗೆ ಸೋಂಕಿನ ಅಪಾಯ ಹೆಚ್ಚಾಗಿರುತ್ತದೆ. ಗರ್ಭಿಣಿಯರು, ವರ್ಷದೊಳಗಿನ ಮಕ್ಕಳು, ಎಸ್ಜಿಮಾದಂತಹ ಕಾಯಿಲೆ ಹೊಂದಿರುವವರಿಗೆ ಇದರ ಅಪಾಯ ಅಧಿಕವಾಗಿರುತ್ತದೆ.

ಇದನ್ನೂ ಓದಿ: MonkeyPox: ತೀವ್ರಗೊಳ್ಳುತ್ತಿದೆ ಮಂಕಿ ಪಾಕ್ಸ್; ಮತ್ತೊಮ್ಮೆ ಲಾಕ್‌ಡೌನ್ ಘೋಷಣೆ?

ಮಂಕಿ ಪಾಕ್ಸ್ ಬರುವುದನ್ನು ತಡೆಯುವುದು ಹೇಗೆ?

ಸೋಂಕಿತರು ಎರಡರಿಂದ ನಾಲ್ಕು ವಾರಗಳಲ್ಲಿ ಚೇತರಿಸಿಕೊಳ್ಳುತ್ತಾರೆ. ಸೋಂಕಿತರಿಂದ ದೂರವಿರುವುದು, ಹೆಚ್ಚಿನ ಮುನ್ನೆಚ್ಚರಿಕೆ ವಹಿಸಿ ಅವರ ಕಾಳಜಿ ಮಾಡುವುದರಿಂದ ಸೋಂಕು ಹರಡುವ ಅಪಾಯವನ್ನು ಕಡಿಮೆ ಮಾಡಬಹುದು. ಸೋಂಕಿತರು ಮನೆಯಲ್ಲಿ ಇದ್ದರೆ ಆದಷ್ಟು ಸ್ವಚ್ಛತೆ ಪಾಲಿಸಿ.

ಸೋಂಕು ಹರಡುವುದನ್ನು ತಡೆಯಲು ಲಸಿಕೆಯನ್ನು ಸಹ ಪಡೆಯಬಹುದು. ಅಮೆರಿಕದಲ್ಲಿ ಸೋಂಕು ಅಥವಾ ತೊಡಕುಗಳ ಹೆಚ್ಚಿನ ಅಪಾಯವನ್ನು ತಡೆಗಟ್ಟಲು ಸಿಡುಬಿನ ಲಸಿಕೆಯನ್ನು ನೀಡಲಾಗಿತ್ತು.

Continue Reading
Advertisement
DK Shivakumar
ಪ್ರಮುಖ ಸುದ್ದಿ6 mins ago

DK Shivakumar: ಬಿಜೆಪಿಯವರ ಮಾತು ಕೇಳಿ 15 ಬಿಲ್ ವಾಪಸ್ ಕಳುಹಿಸಿದ ರಾಜ್ಯಪಾಲರು: ಕಿಡಿಕಾರಿದ ಡಿಕೆಶಿ

Yettinahole project
ಬೆಂಗಳೂರು18 mins ago

Yettinahole Project: ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಏತ ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿ

Salman Khan
ಸಿನಿಮಾ29 mins ago

Salman Khan: ನಿಮ್ಮ ಚಿತ್ರವನ್ನು ನಾವು ಒಪ್ಪುತ್ತೇವೆ, ಆದರೆ ನಮ್ಮ ಚಿತ್ರವನ್ನು ನೀವು ಒಪ್ಪುವುದಿಲ್ಲವಲ್ಲ? ಚಿರುಗೆ ಸಲ್ಲು ಹೀಗೆ ಹೇಳಿದ್ದೇಕೆ?

Accident case
ಶಿವಮೊಗ್ಗ40 mins ago

Accident Case : ಈಜಲು ಚಂಪಕ ಸರಸು ಕಲ್ಯಾಣಿಗೆ ಜಿಗಿದ ಎಂಜಿನಿಯರ್‌ ಶವವಾಗಿ ಹೊರ ಬಂದ

Shraddha Kapoor- Shreyas Iyer
ಕ್ರೀಡೆ42 mins ago

Shraddha Kapoor- Shreyas Iyer: ಕ್ರಿಕೆಟಿಗ ಅಯ್ಯರ್​ ಜತೆ ಡೇಟಿಂಗ್ ಆರಂಭಿಸಿದ ನಟಿ ಶ್ರದ್ಧಾ ಕಪೂರ್‌; ಫೋಟೊ ವೈರಲ್​

Road Accident
ವಿದೇಶ56 mins ago

ನೇಪಾಳ: ನದಿಗೆ ಉರುಳಿದ ಭಾರತೀಯರು ಸೇರಿ 40 ಮಂದಿ ಪ್ರಯಾಣಿಸುತ್ತಿದ್ದ ಬಸ್‌; 14 ಮಂದಿ ಸಾವು?

Kolkata Doctor Murder Case
ಕ್ರೈಂ1 hour ago

Kolkata Doctor Murder Case: ಮಮತಾ ಬ್ಯಾನರ್ಜಿ ಆಡಳಿತದ ಕರಾಳ ಅಧ್ಯಾಯ ತೆರೆದಿಟ್ಟಿದೆ ಕೋಲ್ಕತಾ ವೈದ್ಯೆ ಕೊಲೆ ಪ್ರಕರಣ

Bwssb water price hike
ಪ್ರಮುಖ ಸುದ್ದಿ1 hour ago

Water Price Hike: ಬೆಂಗಳೂರು ಜಲಮಂಡಳಿಗೆ ₹87 ಕೋಟಿ ಬಾಕಿ ಉಳಿಸಿಕೊಂಡು ಶ್ರೀಸಾಮಾನ್ಯನ ಬೆನ್ನಿಗೆ ಬರೆ ಹಾಕಲು ಮುಂದಾದ ರಾಜ್ಯ ಸರ್ಕಾರ!

Ritika Sajdeh
ಕ್ರೀಡೆ2 hours ago

Ritika Sajdeh: ಜೂನಿಯರ್​ ಹಿಟ್​ಮ್ಯಾನ್​ ನಿರೀಕ್ಷೆಯಲ್ಲಿ ರೋಹಿತ್​; ಪತ್ನಿಯ ಬೇಬಿ ಬಂಪ್‌ ವಿಡಿಯೊ ವೈರಲ್​

Narendra Modi
ವಿದೇಶ2 hours ago

Narendra Modi: ಉಕ್ರೇನ್‌ಗೆ ಬಂದಿಳಿದ ಪ್ರಧಾನಿ ಮೋದಿ; ರಷ್ಯಾ ಜತೆಗಿನ ಸಂಘರ್ಷದ ಚರ್ಚೆ ಸಾಧ್ಯತೆ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌