Site icon Vistara News

Sexual Abuse: ಸಿರಾಜ್‌ ಅಹ್ಮದ್‌ ಎಂಬಾತನ ಕಿರುಕುಳ; ಕುತ್ತಿಗೆಗೆ ಇರಿದುಕೊಂಡು ಸಾಯಲೆತ್ನಿಸಿದ ಬಾಲಕಿ; ಆತಂಕಕಾರಿ ವಿಡಿಯೊ

Sexual Abuse


ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚಾಗುತ್ತಿದೆ. ವಿದ್ಯಾರ್ಥಿನಿಯರಿಗೆ ಎಲ್ಲೆಂದರಲ್ಲಿ ಯುವಕರು ಲೈಂಗಿಕ ಕಿರುಕುಳ ನೀಡಿ ಬೆದರಿಕೆಯೊಡ್ಡುತ್ತಿದ್ದಾರೆ. ಇದರಿಂದ ಹೆದರಿದ ಎಷ್ಟೋ ಮಂದಿ ವಿದ್ಯಾರ್ಥಿನಿಯರು ಜೀವ ಕಳೆದುಕೊಳ್ಳಲು ಮುಂದಾಗುತ್ತಿದ್ದಾರೆ. ಇದೀಗ ಅಂತಹದೊಂದು ಘಟನೆ ಮಧ್ಯಪ್ರದೇಶದಲ್ಲಿ ನಡೆದಿರುವುದಾಗಿ ತಿಳಿದು ಬಂದಿದೆ. ಆಗಸ್ಟ್ 13ರಂದು ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಸೆಮಾರಿಯಾ ಪಟ್ಟಣದಲ್ಲಿ ವ್ಯಕ್ತಿಯೊಬ್ಬನಿಂದ ಪದೇಪದೇ ಕಿರುಕುಳಕ್ಕೆ (Sexual Abuse) ಒಳಗಾದ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹಾಡಹಗಲೇ ಕುತ್ತಿಗೆಗೆ ಅನೇಕ ಬಾರಿ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಇದಕ್ಕೆ ಸಂಬಂಧಪಟ್ಟ ಆಘಾತಕಾರಿ ವಿಡಿಯೊ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.

ಸಿರಾಜ್ ಅಹ್ಮದ್ ಎಂಬ ವ್ಯಕ್ತಿ ಪದೇಪದೇ ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸುವುದಲ್ಲದೇ ಆಕೆಗೆ ಬೆದರಿಕೆಯೊಡ್ಡುತ್ತಿದ್ದನು. ಇದರಿಂದ ಆಕೆ ಹೆದರಿ ಆತ್ಮಹತ್ಯೆಗೆ ಮುಂದಾಗಿದ್ದಾಳೆ. ಮಧ್ಯಾಹ್ನ 2.30ರ ಸುಮಾರಿಗೆ ಈ ಘಟನೆ ನಡೆದಿದೆ. ಅವಳು ಮಾರುಕಟ್ಟೆಯ ಮಧ್ಯದಲ್ಲಿರುವ ಅಂಗಡಿಯಿಂದ ಚಾಕುವನ್ನು ತೆಗೆದುಕೊಂಡು ಕುತ್ತಿಗೆಗೆ ಅನೇಕ ಬಾರಿ ಇರಿದುಕೊಂಡಿದ್ದಾಳೆ. ಈ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ. ವಿಡಿಯೊದಲ್ಲಿ, ಹುಡುಗಿ ತನ್ನ ಸ್ನೇಹಿತನೊಂದಿಗೆ ಚಮ್ಮಾರನ ಅಂಗಡಿಗೆ ಬಂದಿದ್ದಾಳೆ. ಅಲ್ಲಿ ಅವಳು ಅಂಗಡಿಯಲ್ಲಿಟ್ಟ ಹರಿತವಾದ ಚಾಕುವನ್ನು ಎತ್ತಿಕೊಂಡು ಪದೇ ಪದೇ ತನ್ನ ಕುತ್ತಿಗೆಗೆ ತಾನೇ ಇರಿದುಕೊಂಡಿದ್ದಾಳೆ.

ಅವಳ ಸ್ನೇಹಿತ ಅವಳನ್ನು ತಡೆಯಲು ಪ್ರಯತ್ನಿಸಿದಳು ಆದರೆ ಅವಳು ಆಕೆಯನ್ನು ತಡೆದು ತನ್ನನ್ನು ತಾನೇ ಇರಿದುಕೊಳ್ಳುವುದನ್ನು ಮುಂದುವರಿಸಿದಳು. ಕೆಲವು ಕ್ಷಣಗಳ ನಂತರ, ಹುಡುಗಿ ನೆಲದ ಮೇಲೆ ಕುಸಿದುಬಿದ್ದಳು. ಆಗ ಅಲ್ಲೇ ಹತ್ತಿರದಲ್ಲಿದ್ದ ಜನರು ಅವಳ ಬಳಿಗೆ ಬಂದು ಅವಳ ಸ್ಥಿತಿಯನ್ನು ನೋಡಿ ತಕ್ಷಣ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯದಿದ್ದಾರೆ. ವೈದ್ಯರು ಆಕೆಯನ್ನು ರೇವಾ ಸಂಜಯ್ ಗಾಂಧಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದಾರೆ. ಅಲ್ಲಿ ಆಕೆ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಇದನ್ನೂ ಓದಿ:  ಲೈಂಗಿಕ ಕಿರುಕುಳ ನೀಡಿದವನನ್ನು ನಡು ರಸ್ತೆಯಲ್ಲಿ ಥಳಿಸಿದ ಅಕ್ಕತಂಗಿ; ವಿಡಿಯೊ ವೈರಲ್

ಬಾಲಕಿಯ ಸಂಬಂಧಿಕರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಸಿರಾಜ್ ಅಹ್ಮದ್ ಎಂಬುವವನ ವಿರುದ್ಧ ದೂರು ದಾಖಲಿಸಿ ಆತನನ್ನು ಬಂಧಿಸಿದ್ದಾರೆ. ಸಂತ್ರಸ್ತೆ ತೀವ್ರವಾಗಿ ಗಾಯಗೊಂಡಿದ್ದರಿಂದ, ಅವಳ ಹೇಳಿಕೆಯನ್ನು ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ. ಕಳೆದ ಕೆಲವು ದಿನಗಳಿಂದ ಸಿರಾಜ್ ತನ್ನನ್ನು ಹಿಂಬಾಲಿಸುತ್ತಿದ್ದ ಮತ್ತು ಹುಡುಗಿ ತುಂಬಾ ಅಸಮಾಧಾನಗೊಂಡಿದ್ದಳು ಎಂದು ಸಂಬಂಧಿಕರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ವರದಿಗಳ ಪ್ರಕಾರ, ಸಿರಾಜ್ ಶಾಲಾ ಆವರಣದಲ್ಲಿ ಮಾತ್ರವಲ್ಲದೆ ಹಳ್ಳಿಯಲ್ಲಿಯೂ ಅವಳನ್ನು ಹಿಂಬಾಲಿಸುತ್ತಿದ್ದನು ಎನ್ನಲಾಗಿದೆ.

Exit mobile version