Shravan 2024: ನಾಳೆಯಿಂದ ಶ್ರಾವಣ ಮಾಸ ಆರಂಭ; ಶುಭ ಕಾರ್ಯಗಳನ್ನು ಮಾಡಲು ಈ ತಿಂಗಳು ಸೂಕ್ತ ಏಕೆ? - Vistara News

Latest

Shravan 2024: ನಾಳೆಯಿಂದ ಶ್ರಾವಣ ಮಾಸ ಆರಂಭ; ಶುಭ ಕಾರ್ಯಗಳನ್ನು ಮಾಡಲು ಈ ತಿಂಗಳು ಸೂಕ್ತ ಏಕೆ?

Shravan 2024: ಶ್ರಾವಣ ಮಾಸ ಧಾರ್ಮಿಕ ಕಾರ್ಯಗಳಿಗೆ ಬಹಳ ಉತ್ತಮವಾದ ಮಾಸವಾಗಿದೆ. ಈ ಮಾಸವನ್ನು ಬಹಳ ಪವಿತ್ರವೆಂದು ಪರಿಗಣಿಸಲಾಗುತ್ತದೆ. ಹಾಗಾಗಿ ಜಪ-ತಪ, ವ್ರತ-ನಿಯಮ, ಪೂಜೆ-ಪುರಾಣಶಾಸ್ತ್ರ, ಪ್ರವಚನ, ಭಜನೆ, ಕೀರ್ತನೆ, ಸತ್ಸಾಂಗ, ಪುಣ್ಯ ಕ್ಷೇತ್ರಗಳ ದರ್ಶನ, ಯಜ್ಞ-ಯಾಗ, ಹೋಮ-ಹವನ ಮುಂತಾದವುಗಳನ್ನು ಈ ಮಾಸದಲ್ಲಿಯೇ ಹೆಚ್ಚು ಮಾಡುತ್ತಾರೆ. ಅಲ್ಲದೇ ಯಾವುದೇ ಶುಭ ಕಾರ್ಯಗಳನ್ನು ಮಾಡಲು ಹಾಗೂ ಹೊಸ ಕೆಲಸಗಳನ್ನು ಆರಂಭಿಸಲು ಈ ಮಾಸ ಬಹಳ ಪ್ರಶಸ್ತವಾಗಿದೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Shravan 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo


ಬೆಂಗಳೂರು: ಹಿಂದೂ ಪಂಚಾಂಗದಲ್ಲಿ ಬರುವ 12 ಮಾಸಗಳಲ್ಲಿ ಶ್ರಾವಣ ಮಾಸ (Shravan 2024) ಐದನೇ ಮಾಸವಾಗಿದೆ. ಎಲ್ಲಾ ಮಾಸಗಳು ಹುಣ್ಣಿಮೆಯ ದಿನ ಪ್ರಾರಂಭವಾಗುತ್ತದೆ ಮತ್ತು ಆ ದಿನ ಬರುವ ನಕ್ಷತ್ರದ ಹೆಸರಿನಿಂದ ಆ ಮಾಸವನ್ನು ಕರೆಯಲಾಗುತ್ತದೆ. ಅದರಂತೆ ಈ ಮಾಸ ಪ್ರಾರಂಭವಾಗುವ ಹುಣ್ಣಿಮೆಯ ದಿನ ಶ್ರವಣ ನಕ್ಷತ್ರ ಬಂದ ಕಾರಣ ಈ ಮಾಸಕ್ಕೆ ಶ್ರಾವಣ ಮಾಸ ಎಂದು ಕರೆಯುತ್ತಾರೆ. ಈ ಮಾಸ ಹಿಂದೂಗಳಿಗೆ ಬಹಳ ಶ್ರೇಷ್ಠವಾದ ಹಾಗೂ ವಿಶೇಷವಾದ ಮಾಸವಾಗಿದೆ. ಯಾಕೆಂದರೆ ಈ ಮಾಸದಲ್ಲಿ ಹಬ್ಬಗಳು ಸಾಲು ಸಾಲಾಗಿ ಬರುತ್ತಿರುತ್ತದೆ. ಹಾಗಾಗಿ ಈ ಮಾಸದಲ್ಲಿ ಶಿವ, ಪಾರ್ವತಿ, ಲಕ್ಷ್ಮಿ, ವಿಷ್ಣು ಸೇರಿದಂತೆ ಅನೇಕ ದೇವಾನುದೇವತೆಗಳ ಪೂಜೆ ಮಾಡುತ್ತಾರೆ. ಹಾಗೇ ಮದುವೆ, ಮುಂಜಿಯಂತಹ ಶುಭ ಕಾರ್ಯಗಳನ್ನು ಈ ಮಾಸದಲ್ಲಿ ಮಾಡಲಾಗುತ್ತದೆ. ಹಿಂದೂ ಕ್ಯಾಲೆಂಡರ್‌ನಲ್ಲಿ 2024ರಲ್ಲಿ ಶ್ರಾವಣ ಮಾಸ ಆಗಸ್ಟ್ 5ರ ಸೋಮವಾರದಂದು ಪ್ರಾರಂಭವಾಗಿ ಸೆಪ್ಟೆಂಬರ್ 3, 2024 ಮಂಗಳವಾರದ ಅಮಾವಾಸ್ಯೆಯ ತಿಥಿಯಂದು ಕೊನೆಗೊಳ್ಳುತ್ತದೆ. ಹಾಗಾಗಿ ಈ ಮಾಸದ ವಿಶೇಷತೆ ಏನು ಮತ್ತು ಶುಭ ಕಾರ್ಯಗಳನ್ನು ಮಾಡಲು ಈ ಮಾಸ ಸೂಕ್ತ ಏಕೆ ಎಂಬುದನ್ನು ತಿಳಿಯೋಣ.

Shravanmasa 2024
Shravanmasa 2024

ಶ್ರಾವಣ ಮಾಸದ ವಿಶೇಷತೆ:

ಶ್ರಾವಣ ಮಾಸ ಧಾರ್ಮಿಕ ಕಾರ್ಯಗಳಿಗೆ ಬಹಳ ಉತ್ತಮವಾದ ಮಾಸವಾಗಿದೆ. ಈ ಮಾಸವನ್ನು ಬಹಳ ಪವಿತ್ರವೆಂದು ಪರಿಗಣಿಸಲಾಗುತ್ತದೆ. ಹಾಗಾಗಿ ಜಪ-ತಪ, ವ್ರತ-ನಿಯಮ, ಪೂಜೆ-ಪುರಾಣಶಾಸ್ತ್ರ, ಪ್ರವಚನ, ಭಜನೆ, ಕೀರ್ತನೆ, ಸತ್ಸಾಂಗ, ಪುಣ್ಯ ಕ್ಷೇತ್ರಗಳ ದರ್ಶನ, ಯಜ್ಞ-ಯಾಗ, ಹೋಮ-ಹವನ ಮುಂತಾದವುಗಳನ್ನು ಈ ಮಾಸದಲ್ಲಿಯೇ ಹೆಚ್ಚು ಮಾಡುತ್ತಾರೆ. ಅಲ್ಲದೇ ಯಾವುದೇ ಶುಭ ಕಾರ್ಯಗಳನ್ನು ಮಾಡಲು ಹಾಗೂ ಹೊಸ ಕೆಲಸಗಳನ್ನು ಆರಂಭಿಸಲು ಈ ಮಾಸ ಬಹಳ ಪ್ರಶಸ್ತವಾಗಿದೆ.

ಶ್ರಾವಣ ಮಾಸದಲ್ಲಿ ಹಬ್ಬ ಹರಿದಿನಗಳು ಒಂದರ ನಂತರ ಒಂದು ಸಾಲು ಸಾಲಾಗಿ ಬರುತ್ತದೆ. ಶ್ರಾವಣ ಮಾಸದ ಪ್ರತಿದಿನವೂ ಹಬ್ಬವೇ ಇರುತ್ತದೆ. ಹಾಗಾಗಿ ಶ್ರಾವಣ ಮಾಸದ ಎಲ್ಲಾ ದಿನಗಳು ಬಹಳ ಶುಭವೇ ಆಗಿರುತ್ತದೆ. ಆದಕಾರಣ ಈ ಶುಭ ದಿನಗಳಲ್ಲಿ ಶುಭ ಕಾರ್ಯ ಮಾಡಿದರೆ ಅದಕ್ಕೆ ಬಹಳ ಉತ್ತಮವಾದ ಫಲ ಶೀಘ್ರದಲ್ಲಿಯೇ ಸಿಗುತ್ತದೆ ಎಂಬ ನಂಬಿಕೆ ಇದೆ.

ಅಲ್ಲದೇ ಈ ಮಾಸದಲ್ಲಿ ಪ್ರಕೃತಿಯಲ್ಲಿನ ಗಿಡಮರಗಳು ಚಿಗುರೊಡೆದು ಹಚ್ಚಹಸಿರಾಗಿ, ಹೂಗಳನ್ನು ಬಿಟ್ಟು ಬಣ್ಣಗಳಿಂದ ಕಂಗೊಳಿಸುತ್ತಾ ಸಂತಸದಿಂದ ಇರುತ್ತದೆಯಂತೆ. ಹಾಗೇ ಪ್ರಾಣಿ ಪಕ್ಷಿಗಳು ಕೂಡ ಉಲ್ಲಾಸದಿಂದ ಇರುತ್ತದೆಯಂತೆ. ಇದನ್ನು ಕಂಡು ದೈವಾನುದೇವತೆಗಳು ಕೂಡ ಸಂಭ್ರಮ ಪಡುತ್ತಾರಂತೆ. ಹಾಗಾಗಿ ಈ ಸಮಯದಲ್ಲಿ ಯಾವುದೇ ಶುಭ ಕಾರ್ಯ ಮಾಡಿದರೂ ದೇವರು ಬಹಳ ಬೇಗನೇ ಪ್ರಸನ್ನರಾಗಿ ಅನುಗ್ರಹ ನೀಡುತ್ತಾರೆ ಎನ್ನಲಾಗುತ್ತದೆ.

Shravanmasa 2024
Shravanmasa 2024

ಶ್ರಾವಣ ಮಾಸದಲ್ಲಿ ಬರುವ ಹಬ್ಬಗಳು :

  • ಉಪಕರ್ಮ:
  • ಶ್ರಾವಣ ಮಾಸ ಹುಣ್ಣಿಮೆ ಜ್ಞಾನಕ್ಕೆ ಕಾರಣವಾಗಿದ್ದರಿಂದ ಈ ದಿನ ಜನೀವಾರ ಹಬ್ಬ ಅಥವಾ ಉಪಕರ್ಮ ಅಥವಾ ನೂಲು ಹುಣ್ಣಿಮೆಯನ್ನು ಆಚರಿಸುತ್ತಾರೆ.
  • ರಕ್ಷಾಬಂಧನ :
  • ಶ್ರಾವಣ ಹುಣ್ಣಿಮೆಯಂದು ಸಹೋದರ ಪ್ರೇಮಕ್ಕೆ ಹೆಚ್ಚು ಮಹತ್ವವಿರುವುದರಿಂದ ರಕ್ಷಾಬಂಧನವನ್ನು ಆಚರಿಸುವ ಮೂಲಕ ಸಹೋದರಿ ಸಹೋದರನಿಗೆ ರಾಖಿ ಕಟ್ಟುತ್ತಾರೆ.
  • ಹಯಗ್ರೀವ ಜಯಂತಿ :
  • ಮಕ್ಕಳಿಗೆ ವಿದ್ಯೆ ಬುದ್ಧಿ ಕರುಣಿಸಲಿ ಎಂದು ವಿದ್ಯೆಯನ್ನು ಅನುಗ್ರಹಿಸುವ ಹಯಗ್ರೀವನನ್ನು ಪೂಜಿಸಿ ಪ್ರಾರ್ಥಿಸುತ್ತಾರೆ.
  • ಸಂಕಷ್ಟ ಚತುರ್ಥಿ :
  • ಅಪಘಾತ, ಆರೋಗ್ಯ ಸಮಸ್ಯೆ, ಸಂಕಷ್ಟಗಳು ಜೀವನದಲ್ಲಿ ಬರಬಾರದೆಂದು ಸಂಕಷ್ಟಹರ ಚತುರ್ಥಿಯನ್ನು ಮಾಡುತ್ತಾರೆ.
  • ಕೃಷ್ಣಾಷ್ಟಮಿ :
  • ದುಷ್ಟ ಸಂಹಾರಕ್ಕಾಗಿ ಶ್ರಾವಣ ಮಾಸದ ಕೃಷ್ಣ ಪಕ್ಷದ ಅಷ್ಟಮಿಯ ದಿನ ಶ್ರೀಕೃಷ್ಣ ಜನ್ಮ ತಾಳಿದ ಕಾರಣ ಈ ಮಾಸದಲ್ಲಿ ಕೃಷ್ಣಾಷ್ಟಮಿಯನ್ನು ಆಚರಿಸುವ ಮೂಲಕ ಕೃಷ್ಣನನ್ನು ಪೂಜಿಸುತ್ತಾರೆ.
  • ಶ್ರಾವಣ ಸೋಮವಾರ:
  • ಶ್ರಾವಣ ಮಾಸದಲ್ಲಿ ಬರುವ ಪ್ರತಿ ಸೋಮವಾರದಂದು ಶಿವನ ಆರಾಧನೆ ಮಾಡಲಾಗುತ್ತದೆ. ಇದರಿಂದ ಶಿವನು ಬೇಗನೆ ಪ್ರಸನ್ನನಾಗಿ ನಿಮ್ಮ ಇಷ್ಟಾರ್ಥಗಳನ್ನು ಈಡೇರಿಸುತ್ತಾನೆ.
  • ಕಾಮನ ಏಕಾದಶಿ:
  • ನಿಮ್ಮ ಕೋರಿಕೆಗಳು ಈಡೇರಲು ಶ್ರಾವಣ ಮಾಸದಲ್ಲಿ ಕಾಮನ ಏಕಾದಶಿಯನ್ನು ಆಚರಿಸುವ ಮೂಲಕ ವಿಷ್ಣುವಿನ ಪೂಜೆ ಮಾಡಲಾಗುತ್ತದೆ.
  • ಪುತ್ರ ಏಕಾದಶಿ :
  • ಸಂತಾನ ಭಾಗ್ಯ ಬಯಸುವವರು ಶ್ರಾವಣ ಮಾಸದಲ್ಲಿ ಬರುವ ಪುತ್ರ ಏಕಾದಶಿಯನ್ನು ಆಚರಿಸುತ್ತಾರೆ.
  • ಶ್ರಾವಣ ಮಂಗಳವಾರ :
  • ಶ್ರಾವಣ ಮಾಸದಲ್ಲಿ ಬರುವ ಪ್ರತಿ ಮಂಗಳವಾರದಂದು ಮಂಗಳಗೌರಿ ವ್ರತವನ್ನು ಮಾಡಲಾಗುತ್ತದೆ. ಇದು ಮದುವೆಯಾದ ಹೆಣ್ಣುಮಕ್ಕಳು ಮಾಡಿದರೆ ಅವರ ವೈವಾಹಿಕ ಜೀವನ ಸುಖಕರವಾಗಿರುತ್ತದೆಯಂತೆ.
  • ವರಮಹಾಲಕ್ಷ್ಮಿ ವ್ರತ:
  • ಈ ದಿನ ಮಹಿಳೆಯರು ಲಕ್ಷ್ಮಿದೇವಿಯನ್ನು ಕಳಸದ ಮೇಲೆ ಪ್ರತಿಷ್ಠಾಪನೆ ಮಾಡಿ ಜರಿ ಸೀರೆ ಉಡಿಸಿ, ಧನ, ಚಿನ್ನದ ಆಭರಣಗಳಿಂದ ದೇವಿಯನ್ನು ಅಲಂಕರಿಸಿ ಪೂಜೆ ಮಾಡಿ ವರವನ್ನು ಬೇಡಿಕೊಳ್ಳುತ್ತಾರೆ.
  • ಶ್ರಾವಣ ಶುಕ್ರವಾರ :
  • ಶ್ರಾವಣ ಮಾಸದಲ್ಲಿ ಬರುವ ಪ್ರತಿ ಶುಕ್ರವಾರದಂದು ಸಂಪತ್ತಿನ ಅಧಿದೇವತೆಯಾದ ಲಕ್ಷ್ಮಿದೇವಿಯನ್ನು ಪೂಜಿಸುವ ಮೂಲಕ ಸಂಪತ್ ಗೌರಿ ವ್ರತವನ್ನು ಆಚರಿಸುತ್ತಾರೆ.
  • ನಾಗರಪಂಚಮಿ :
  • ಶ್ರಾವಣ ಮಾಸದ ಪ್ರಾರಂಭವಾದ 5ನೇ ದಿನದಂದು ಬರುವ ನಾಗರ ಪಂಚಮಿ ಹಬ್ಬದಂದು ಮಹಿಳೆಯರು ನಾಗ ದೇವರಿಗೆ ಪೂಜೆ ಸಲ್ಲಿಸುತ್ತಾರೆ.
  • ದೂರ್ವಾ ಗಣಪತಿ ವ್ರತ :
  • ಶ್ರಾವಣ ಮಾಸದಲ್ಲಿ ಬರುವ ಈ ವ್ರತದಂದು ಗಣಪತಿಗೆ ಪ್ರಿಯವಾದ ದೂರ್ವಾ ಅಥವಾ ಗರಿಕೆಯನ್ನು ಅರ್ಪಿಸಿ ಪೂಜಿಸಲಾಗುತ್ತದೆ.
  • ಶ್ರಾವಣ ಶನಿವಾರ:
  • ಶ್ರಾವಣ ಮಾಸದ ಪ್ರತಿ ಶನಿವಾರ ಶ್ರಾವಣ ಶನಿವಾರವೆಂದು ಕರೆಯುತ್ತಾರೆ. ಈ ದಿನ ಲಕ್ಷ್ಮಿ ಮತ್ತು ವೆಂಕಟೇಶ್ವರನನ್ನು ಆರಾಧಿಸುತ್ತಾರೆ. ಹಾಗೇ ಕೆಲವರು ಶ್ರಾವಣ ಶನಿವಾರದಂದು ಉಪವಾಸ ವ್ರತವನ್ನು ಆಚರಿಸುತ್ತಾರೆ. ಹಾಗೇ ಈ ದಿನ ಆಂಜನೇಯ ಸ್ವಾಮಿಯ ಪೂಜೆ ಹಾಗೂ ಶನಿ ಶಾಂತಿ ಪೂಜೆಗೆ ಬಹಳ ಉತ್ತಮ ಎನ್ನಲಾಗಿದೆ.

ಇದನ್ನೂ ಓದಿ:ವಯನಾಡ್ ಭೂಕುಸಿತ; ಜೀವ ಉಳಿಸಿಕೊಳ್ಳಲು ಪರದಾಡುತ್ತಿದ್ದ ಕುಟುಂಬಕ್ಕೆ ಕಣ್ಣೀರು ಸುರಿಸುತ್ತ ಆಶ್ರಯ ನೀಡಿದ ಆನೆ!
ಒಟ್ಟಾರೆ ಈ ಎಲ್ಲಾ ಶುಭ ದಿನಗಳು ಮತ್ತು ಹಬ್ಬಗಳಿಂದ ಶ್ರಾವಣ ಮಾಸ ತುಂಬಾ ವಿಶೇಷವಾದ ಹಾಗೂ ಪವಿತ್ರವಾದ ಮಾಸವಾಗಿದೆ. ಹಾಗಾಗಿ ಇಂತಹ ಶುಭಕರವಾದ ಶ್ರಾವಣ ಮಾಸವನ್ನು ಎಲ್ಲರೂ ಸಂತೋಷದಿಂದ ಸ್ವಾಗತಿಸಿ. ಹಾಗೇ ಈ ಮಾಸದಲ್ಲಿ ಎಲ್ಲರೂ ಶ್ರದ್ಧೆ, ಭಕ್ತಿಯಿಂದ ದೇವರ ಆರಾಧನೆ ಮಾಡಿ ನಿಮ್ಮ ಇಷ್ಟಾರ್ಥಗಳನ್ನು ಈಡೇರಿಸಿಕೊಳ್ಳಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರವಾಸ

Kerala Tour: ಕೇರಳದಲ್ಲಿ ನೋಡಲೇಬೇಕಾದ 10 ಅದ್ಭುತ ಸ್ಥಳಗಳಿವು!

ಪ್ರಕೃತಿಯ ಶೃಂಗಾರಕ್ಕೆ ಕಳಶವಿಟ್ಟಂತೆ ಕೇರಳದ (Kerala Tour) ಸಂಸ್ಕೃತಿ ಶ್ರೀಮಂತ ಐತಿಹಾಸಿಕ ಪರಂಪರೆಯನ್ನು ನೆನಪಿಸುತ್ತದೆ. ಕಡಲ ತೀರದಲ್ಲಿ ಹೆಜ್ಜೆ ಹಾಕುತ್ತ ಇಲ್ಲಿನ ಸೌಂದರ್ಯವನ್ನು ಸವಿಯುತ್ತ, ಬೆಟ್ಟ ಗುಡ್ಡಗಳಲ್ಲಿ ಅಡಗಿರುವ ಗುಪ್ತ ರತ್ನಗಳನ್ನು ಶೋಧಿಸುತ್ತಾ ಹೊರಟರೆ ಪ್ರವಾಸ ಸುಂದರ ನೆನಪುಗಳನ್ನು ಕಟ್ಟಿಕೊಡುವುದು. ಶ್ರೀಮಂತ ಸಾಂಸ್ಕೃತಿಕ ಪರಂಪರೆ, ಬೆರಗುಗೊಳಿಸುವ ನೈಸರ್ಗಿಕ ಸೌಂದರ್ಯ ಮತ್ತು ಬೆಚ್ಚಗಿನ ಆತಿಥ್ಯ ಪ್ರವಾಸಿಗರಿಗೆ ಮರೆಯಲಾಗದ ಅನುಭವವನ್ನು ಕೊಡುವುದು. ಕೇರಳದ ಹತ್ತು ಅದ್ಭುತ ಸ್ಥಳಗಳ ಪರಿಚಯ ಇಲ್ಲಿದೆ.

VISTARANEWS.COM


on

By

Kerala Tour
Koo

ದೇವರನಾಡು ಕೇರಳ (Kerala Tour) ಈಗ ವಯನಾಡಿನಲ್ಲಿ ಭೂಕುಸಿತದಿಂದಾಗಿ (wayanad landslide) ದೇಶಾದ್ಯಂತ ಸುದ್ದಿಯಲ್ಲಿದೆ. ಇದನ್ನು ಹೊರತುಪಡಿಸಿದರೆ ಪ್ರವಾಸೋದ್ಯಮದಲ್ಲೂ (kerala tourism) ಇದು ಹೆಸರುವಾಸಿಯಾಗಿದೆ. ಹಚ್ಚ ಹಸುರಿನ ಪ್ರಕೃತಿಯ ಸೊಬಗು ಒಂದೆಡೆಯಾದರೆ ಹಿನ್ನೀರು, ಸುಂದರವಾದ ಸಮುದ್ರ ತೀರಗಳು ಮತ್ತೊಂದು ಇಲ್ಲಿನ ಆಕರ್ಷಣೆ. ಜೊತೆಗೆ ಸಾಂಸ್ಕೃತಿಕ ಪರಂಪರೆಯ ಸೊಬಗನ್ನು ಇಲ್ಲಿ ಅನುಭವಿಸಬಹುದು.

ಕೇರಳಕ್ಕೆ ಪ್ರವಾಸ ಹೊರಡುವ ಯೋಜನೆಯಲ್ಲಿದ್ದರೆ ಇಲ್ಲಿ ಹತ್ತು ಸ್ಥಳಗಳಿಗೆ ಭೇಟಿ ನೀಡಲು ಮರೆಯದಿರಿ. ಪ್ರಕೃತಿಯ ಸೌಂದರ್ಯವನ್ನು ಬೊಗಸೆಯಲ್ಲಿ ತುಂಬಿಕೊಡುವ ಇದು ಸುಂದರ ನೆನಪುಗಳ ಅನುಭವವನ್ನು ಮನದಾಳದಲ್ಲಿ ಬಿತ್ತುವುದು.


ಗವಿ

ಕೇರಳದ ಅತ್ಯಂತ ಸುಂದರ ತಾಣ ಗವಿ. ನಗರ ಜೀವನದ ಜಂಜಾಟದಿಂದ ಇದು ಪರಿಪೂರ್ಣವಾಗಿ ದೂರ ಮಾಡುತ್ತದೆ. ಇಲ್ಲಿನ ಹಸಿರು ಕಾಡುಗಳು, ರೋಮಾಂಚಕ ಬೆಟ್ಟಗಳು ಮತ್ತು ಶಾಂತ ಸರೋವರಗಳು ಮನಸ್ಸಿಗೆ ಉಲ್ಲಾಸವನ್ನು ತುಂಬುತ್ತದೆ.


ವಾಗಮೋನ್

ಕೇರಳದ ಅತ್ಯಂತ ಸುಂದರವಾದ ಗಿರಿಧಾಮ ವಾಗ್ ಮೋನ್ ಪ್ರಶಾಂತ ವಾತಾವರಣ ಮತ್ತು ಚಹಾ ತೋಟಗಳಿಗೆ ಹೆಸರುವಾಸಿಯಾಗಿದೆ. ಇಲ್ಲಿ ಪ್ರಕೃತಿಯ ಸೊಬಗನ್ನು ಕಣ್ತುಂಬಿಕೊಳ್ಳಬಹುದು. ಈ ಸ್ಥಳವು ಪಾದಯಾತ್ರೆ, ವಿಶ್ರಾಂತಿ ಪಡೆಯಲು ಮತ್ತು ಪ್ರಕೃತಿಯನ್ನು ಆನಂದಿಸಲು ಕೆಲವು ಸ್ಪಷ್ಟ ಕಾರಣಗಳಿಗಾಗಿ ಕೇರಳವನ್ನು ದೇವರ ಸ್ವಂತ ನಾಡು ಎಂದು ಕರೆಯಲಾಗುತ್ತದೆ. ಇದರ ರೋಮಾಂಚಕ ಹಸಿರು, ಪ್ರಶಾಂತ ಹಿನ್ನೀರು ಮತ್ತು ಶ್ರೀಮಂತ ಸಾಂಸ್ಕೃತಿಕ ಪರಂಪರೆಯು ಪ್ರಯಾಣಿಸಲು ಯೋಗ್ಯವಾಗಿದೆ.

Kerala Tour
Kerala Tour


ಪೊನ್ಮುಡಿ

ಹಸಿರು ಬೆಟ್ಟಗಳು ಮತ್ತು ತಂಪಾದ ವಾತಾವರಣಕ್ಕೆ ಹೆಸರುವಾಸಿಯಾದ ಕೇರಳದ ಸುಂದರವಾದ ಗಿರಿಧಾಮ ಪೊನ್ಮುಡಿ. ಈ ಸ್ಥಳವು ಟ್ರೆಕ್ಕಿಂಗ್ ಮತ್ತು ವಿಶ್ರಾಂತಿಗೆ ಸೂಕ್ತವಾಗಿದೆ.


ಕಪ್ಪಿಲ್ ಬೀಚ್

ಶಾಂತಿಯುತ ಮತ್ತು ರಮಣೀಯ ತಾಣವಾಗಿರುವ ಕಪ್ಪಿಲ್ ಬೀಚ್ ಕಡಿಮೆ ಜನಸಂದಣಿ ಇರುವ ಪ್ರದೇಶ. ಸ್ನೇಹಿತರೊಂದಿಗೆ ಸಮಯ ಕಳೆಯಲು ಮತ್ತು ಪ್ರಶಾಂತವಾದ ಸೂರ್ಯಾಸ್ತವನ್ನು ಆನಂದಿಸಲು ಇದು ಪರಿಪೂರ್ಣ ಸ್ಥಳ. ಇಲ್ಲಿ ಕೇರಳದ ಪ್ರಶಾಂತ ಕರಾವಳಿಯ ಸೌಂದರ್ಯದಲ್ಲಿ ಮಿಂದೇಳಬಹುದು.


ಕೊಲುಕ್ಕುಮಲೈ ಟೀ ಎಸ್ಟೇಟ್

ಈ ತಾಣವು ಪಶ್ಚಿಮ ಘಟ್ಟದಲ್ಲಿದೆ. ವಾರಾಂತ್ಯವನ್ನು ಕಳೆಯಲು ಸೂಕ್ತವಾದ ಸ್ಥಳವಾಗಿದೆ. ಇದು ವಿಶ್ವದ ಅತಿ ಎತ್ತರದ ಟೀ ಎಸ್ಟೇಟ್‌ಗಳಲ್ಲಿ ಇದು ಒಂದಾಗಿದೆ.


ಎಡಕ್ಕಲ್ ಗುಹೆಗಳು

ಕೇರಳದ ವಯನಾಡ್ ಜಿಲ್ಲೆಯಲ್ಲಿರುವ ಶಿಲಾ ಕೆತ್ತನೆಗಳು ಇರುವ ಪುರಾತನ ಮತ್ತು ಪ್ರಸಿದ್ಧವಾದ ಎಡಕ್ಕಲ್ ಗುಹೆಗಳು ಭೇಟಿ ನೀಡಬಹುದಾದ ಸುಂದರ ತಾಣವಾಗಿದೆ. ಈ ಪ್ರದೇಶದ ಸಾಂಸ್ಕೃತಿಕ ಶ್ರೀಮಂತಿಕೆ ಮತ್ತು ಸುಂದರವಾದ ಭೂದೃಶ್ಯಗಳನ್ನು ಆನಂದಿಸಬಹುದು.


ಅಷ್ಟಮುಡಿ ಸರೋವರ

ಭವ್ಯವಾದ ಹಸಿರಿನಿಂದ ಆವೃತವಾಗಿರುವ ಸುಂದರವಾದ ಸರೋವರವಾಗಿದೆ. ಮೀನುಗಾರಿಕೆ, ವಿಶ್ರಾಂತಿ ಮತ್ತು ಪಕ್ಷಿಗಳನ್ನು ವೀಕ್ಷಿಸಲು ಇದು ಪರಿಪೂರ್ಣ ತಾಣವಾಗಿದೆ.


ಪೂವಾರ್

ಕೇರಳದ ಈ ಸುಂದರ ಪಟ್ಟಣವು ರೋಮಾಂಚಕ ಸ್ಥಳಗಳು ಮತ್ತು ಬೆರಗುಗೊಳಿಸುವ ನೋಟಗಳಿಗೆ ಹೆಸರುವಾಸಿಯಾಗಿದೆ. ವಿಶ್ರಾಂತಿ ಪಡೆಯಲು ಬಯಸುವವರಿಗೆ ಇಷ್ಟವಾಗುವ ಸ್ಥಳವಾಗಿದೆ. ಇಲ್ಲಿ ದೋಣಿ ವಿಹಾರವನ್ನು ಆನಂದಿಸಬಹುದು.

ಇದನ್ನೂ ಓದಿ: Lakshadweep Tour: ಲಕ್ಷದ್ವೀಪದಲ್ಲಿ ಪ್ರವಾಸಿಗರನ್ನು ಸೆಳೆಯುವ ಪಂಚರತ್ನಗಳಿವು


ವಯನಾಡ್ ವನ್ಯಜೀವಿ ಅಭಯಾರಣ್ಯ

ವನ್ಯಜೀವಿ ಅಭಯಾರಣ್ಯವು ಶ್ರೀಮಂತ ಜೀವವೈವಿಧ್ಯಕ್ಕೆ ಹೆಸರುವಾಸಿಯಾಗಿದೆ. ಇದು ಆನೆಗಳು ಮತ್ತು ಹುಲಿಗಳು ಸೇರಿದಂತೆ ವಿವಿಧ ವನ್ಯಜೀವಿಗಳಿಗೆ ನೆಲೆಯಾಗಿದೆ.


ಬೇಕಲ ಕೋಟೆ

ಕಲ್ಲಿನ ಗೋಡೆಗಳು ಮತ್ತು ದೀಪಸ್ತಂಭಕ್ಕೆ ಹೆಸರುವಾಸಿಯಾದ ಈ ಐತಿಹಾಸಿಕ ಕೋಟೆಯನ್ನು 17 ನೇ ಶತಮಾನದಲ್ಲಿ ನಿರ್ಮಿಸಲಾಗಿದೆ. ಇತಿಹಾಸದ ಉತ್ಸಾಹಿಗಳಿಗೆ ಮತ್ತು ನೆಮ್ಮದಿಯ ವಿಹಾರವನ್ನು ಬಯಸುವವರಿಗೆ ಇದು ಸೂಕ್ತ ತಾಣವಾಗಿದೆ.

Continue Reading

ಕರ್ನಾಟಕ

BJP-JDS Padayatra: ವಾಲ್ಮೀಕಿ ನಿಗಮ, ಮುಡಾ ಹಗರಣದಲ್ಲಿ ಕಾಂಗ್ರೆಸ್ ಹೈಕಮಾಂಡ್ ಶೇರ್ ಹೋಲ್ಡರ್: ಪ್ರಲ್ಹಾದ್‌ ಜೋಶಿ ಆರೋಪ

BJP-JDS Padayatra: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಾತೆತ್ತಿದರೆ ತಮ್ಮ ಜೀವನ ತೆರೆದ ಪುಸ್ತಕ, ತಾವು ಶುದ್ಧ ಹಸ್ತದ ರಾಜಕಾರಣ ಎನ್ನುತ್ತಾರೆ ಆದರೆ, 2013-18 ರವರೆಗೆ ರಿಡು ಮಾಡಿದ್ಯಾರು? 80 ಲಕ್ಷ ರೂ. ವಾಚ್ ಕಟ್ಟಿ ವಿವಾದವಾಗುತ್ತಲೇ ವಾಪಸ್ ಕೊಟ್ಟಿದ್ಯಾರು ಎಂದು ಪ್ರಶ್ನಿಸಿದ ಪ್ರಲ್ಹಾದ್‌ ಜೋಶಿ, ಸಿಎಂ ಸಿದ್ದರಾಮಯ್ಯ ಅಂದೂ ಭ್ರಷ್ಟಾಚಾರಿ, ಇಂದೂ ಭ್ರಷ್ಟಾಚಾರಿಯೇ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

VISTARANEWS.COM


on

Union Minister Pralhad Joshi latest statement at Mysore Chalo Padayatra
Koo

ಬೆಂಗಳೂರು: ವಾಲ್ಮೀಕಿ ನಿಗಮ ಮತ್ತು ಮುಡಾ ಹಗರಣದಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಹ ಶೇರ್ ಹೋಲ್ಡರ್ಸ್ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (BJP-JDS Padayatra) ನೇರ ಆರೋಪ ಮಾಡಿದರು.

ಬೆಂಗಳೂರಿನಲ್ಲಿ ಇಂದು ಎನ್‌ಡಿಎ ಮೈತ್ರಿಕೂಟದ ನೇತೃತ್ವದಲ್ಲಿ ನಡೆಸಿದ ಮೈಸೂರು ಚಲೋ ಪಾದಯಾತ್ರೆ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಿದ ಸಚಿವರು, ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರು ಈ ಹಗರಣಗಳಲ್ಲಿ ಪಾಲುದಾರರು. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುವ ಧೈರ್ಯ ಅವರಿಗಿಲ್ಲವಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Pralhad Joshi: ವಯನಾಡ್ ದುರಂತದ ವಿಚಾರದಲ್ಲಿ ಕಾಂಗ್ರೆಸ್‌‌ನಿಂದ ರಾಜಕೀಯ; ಪ್ರಲ್ಹಾದ್‌ ಜೋಶಿ

ಕಾಂಗ್ರೆಸ್ ಹೈಕಮಾಂಡ್‌ನ ಈ ಇಬ್ಬರೂ ನಾಯಕರು ಭ್ರಷ್ಟಾಚಾರ ಪ್ರಕರಣದಲ್ಲಿ ಬೇಲ್ ಪಡೆದು ಹೊರಗಿದ್ದಾರೆ. ಈಗ ರಾಜ್ಯದಲ್ಲಿ ವಾಲ್ಮೀಕಿ, ಮುಡಾ ಹಗರಣದಲ್ಲಿ ಜೈಲಿಗೆ ಹೋಗುವವರನ್ನು ತಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಸಿಎಂ ಮನೆಗೆ ಹೋಗೋ ಕಾಲ ಬಂದಿದೆ

ವಾಲ್ಮೀಕಿ ನಿಗಮ ಮತ್ತು ಭ್ರಷ್ಟಾಚಾರ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇರ ಪಾತ್ರವಿದೆ. ಹಾಗಾಗಿ ಇದರ ವಿರುದ್ಧ ಕಾನೂನು ಮತ್ತು ರಾಜಕೀಯವಾಗಿ ಹೋರಾಟ ಮಾಡಿ ಈ ಭ್ರಷ್ಟಾಚಾರ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಹಾಡುತ್ತೇವೆ ಎಂದು ಸಚಿವ ಪ್ರಲ್ಹಾದ್‌ ಜೋಶಿ ಎಚ್ಚರಿಸಿದರು.

ರಿಡು- 80 ಲಕ್ಷ ವಾಚ್ ರೂವಾರಿ ಯಾರು?

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಾತೆತ್ತಿದರೆ ತಮ್ಮ ಜೀವನ ತೆರೆದ ಪುಸ್ತಕ, ತಾವು ಶುದ್ಧ ಹಸ್ತದ ರಾಜಕಾರಣ ಎನ್ನುತ್ತಾರೆ ಆದರೆ, 2013-18 ರವರೆಗೆ ರಿಡು ಮಾಡಿದ್ಯಾರು? 80 ಲಕ್ಷ ರು. ವಾಚ್ ಕಟ್ಟಿ ವಿವಾದವಾಗುತ್ತಲೇ ವಾಪಸ್ ಕೊಟ್ಟಿದ್ಯಾರು? ಎಂದು ಪ್ರಶ್ನಿಸಿದ ಪ್ರಲ್ಹಾದ್‌ ಜೋಶಿ, ಸಿಎಂ ಸಿದ್ದರಾಮಯ್ಯ ಅಂದೂ ಭ್ರಷ್ಟಾಚಾರಿ, ಇಂದೂ ಭ್ರಷ್ಟಾಚಾರಿಯೇ ಎಂದು ಆರೋಪಿಸಿದರು.

ಇದನ್ನೂ ಓದಿ: National Cricket Academy : ಬೆಂಗಳೂರಿನಲ್ಲಿ ನಿರ್ಮಾಣವಾಗುತ್ತಿದೆ 45 ಪಿಚ್​ಗಳಿರುವ ಬೃಹತ್​​ ರಾಷ್ಟ್ರೀಯ ಕ್ರಿಕೆಟ್​ ಅಕಾಡೆಮಿ

ಭ್ರಷ್ಟ ಕಾಂಗ್ರೆಸ್ ಕಿತ್ತೊಗೆಯಿರಿ

ದೇಶದಲ್ಲೇ ಆಗಲಿ, ರಾಜ್ಯದಲ್ಲೇ ಆಗಲಿ ಕಾಂಗ್ರೆಸ್ ಆಡಳಿತ ಇದ್ದಾಗ ಭ್ರಷ್ಟಾಚಾರದಲ್ಲಿ ಮುಳುಗಿದೆ. ಭ್ರಷ್ಟಾಚಾರ ಕಾಂಗ್ರೆಸ್ಸಿಗರಿಗೆ ರಕ್ತಗತವಾಗಿ ಬಂದಿದ್ದು, ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ಕಿತ್ತೆಸೆಯಿರಿ ಎಂದು ಸಚಿವರು ತಿಳಿಸಿದರು.

Continue Reading

ಕರ್ನಾಟಕ

MB Patil: ರಾಜ್ಯ ಸರ್ಕಾರವನ್ನು ಉರುಳಿಸಲು ಬಿಜೆಪಿ, ಜೆಡಿಎಸ್ ಷಡ್ಯಂತ್ರ; ಎಂ‌.ಬಿ. ಪಾಟೀಲ ಆರೋಪ

MB Patil: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪಾತ್ರ ಏನೇನೂ ಇಲ್ಲ. ಸ್ವತಃ ಮುಡಾ ತನ್ನ ತಪ್ಪನ್ನು ಒಪ್ಪಿಕೊಂಡು, ಮುಖ್ಯಮಂತ್ರಿಗಳ ಪತ್ನಿಗೆ ಬದಲಿ ನಿವೇಶನಗಳನ್ನು ಕೊಟ್ಟಿದೆ. ಇದೆಲ್ಲ ನಡೆದಿರುವುದು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೇ. ಆಗ ಮುಡಾದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಾಯಕರಾದ ಸಾ.ರಾ. ಮಹೇಶ್, ಜಿ.ಟಿ. ದೇವೇಗೌಡ ಮತ್ತು ರಾಮದಾಸ್ ಅವರೇ ಇದ್ದರು ಎಂದು ಬೃಹತ್ ಕೈಗಾರಿಕಾ ಸಚಿವ ಎಂ‌.ಬಿ. ಪಾಟೀಲ ಆರೋಪಿಸಿದ್ದಾರೆ.

VISTARANEWS.COM


on

Minister MB Patil statement in janandolana programme by congress party at ramanagara
Koo

ರಾಮನಗರ: ಭಾರೀ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ಅವರ ಸರ್ಕಾರವನ್ನು ಉರುಳಿಸಲು ಬಿಜೆಪಿ ಮತ್ತು ಜೆಡಿಎಸ್ ಷಡ್ಯಂತ್ರ ರೂಪಿಸಿವೆ. ಇದರ ಹಿಂದೆ ನರೇಂದ್ರ ಮೋದಿ ಮತ್ತು ಅಮಿತ್ ಷಾ ಇದ್ದಾರೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ‌.ಬಿ. ಪಾಟೀಲ (MB Patil) ಆರೋಪಿಸಿದ್ದಾರೆ.

ಬಿಜೆಪಿ ಮತ್ತು ಜೆಡಿಎಸ್ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಯ ವಿರುದ್ಧ ಕಾಂಗ್ರೆಸ್ ಪಕ್ಷವು ಶನಿವಾರ ಇಲ್ಲಿ ಹಮ್ಮಿಕೊಂಡಿದ್ದ ಜನಾಂದೋಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪಾತ್ರ ಏನೇನೂ ಇಲ್ಲ. ಸ್ವತಃ ಮುಡಾ ತನ್ನ ತಪ್ಪನ್ನು ಒಪ್ಪಿಕೊಂಡು, ಮುಖ್ಯಮಂತ್ರಿಗಳ ಪತ್ನಿಗೆ ಬದಲಿ ನಿವೇಶನಗಳನ್ನು ಕೊಟ್ಟಿದೆ. ಇದೆಲ್ಲ ನಡೆದಿರುವುದು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೇ. ಆಗ ಮುಡಾದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಾಯಕರಾದ ಸಾ.ರಾ. ಮಹೇಶ್, ಜಿ.ಟಿ. ದೇವೇಗೌಡ ಮತ್ತು ರಾಮದಾಸ್ ಅವರೇ ಇದ್ದರು ಎಂದು ಅವರು ಆರೋಪಿಸಿದರು.

ಇದನ್ನೂ ಓದಿ: KCET 2024 : ನೀಟ್‌ ಮೊದಲ ಸುತ್ತಿನ ಕೌನ್ಸೆಲಿಂಗ್ ನಂತರವೇ ಕೆಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆ ಶುರು

ಈಗ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಒಂದು ಖಾಸಗಿ ದೂರಿನ ಮೇಲೆ ರಾಜ್ಯಪಾಲರು ಸಿದ್ದರಾಮಯ್ಯ ಅವರಿಗೆ ನೋಟಿಸ್ ಕೊಟ್ಟಿದ್ದಾರೆ. ಈ ಮೂಲಕ ಅವರು ಬಿಜೆಪಿ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಆದರೆ ನಾವು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಅವ್ಯವಹಾರಗಳನ್ನು ಬಯಲಿಗೆ ಎಳೆಯಲಿದ್ದೇವೆ ಎಂದು ಸಚಿವರು ತಿಳಿಸಿದರು.

ಯಡಿಯೂರಪ್ಪನವರು ಮಾರಿಷಸ್‌ನಲ್ಲಿ ಹತ್ತು ಸಾವಿರ ಕೋಟಿ ರೂಪಾಯಿ ಇಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಅವರೇ ಆರೋಪಿಸಿದ್ದಾರೆ. ಮೋದಿ ಸರ್ಕಾರವು ನಮಗೆ ಬರ ಪರಿಹಾರ, ಬಜೆಟ್ ಹಂಚಿಕೆ, ತೆರಿಗೆ ವಿತರಣೆ ಎಲ್ಲದರಲ್ಲೂ ಅನ್ಯಾಯ ಮಾಡುತ್ತಿದೆ. ಈಗ ಚುನಾಯಿತ ಸರ್ಕಾರವನ್ನು ಉರುಳಿಸುವ ದುಸ್ಸಾಹಸಕ್ಕೆ ಬಿಜೆಪಿ ಮತ್ತು ಜೆಡಿಎಸ್ ಇಳಿದಿವೆ ಎಂದು ಆರೋಪಿಸಿದರು.

ಎಚ್.ಡಿ. ಕುಮಾರಸ್ವಾಮಿ ಅವರಿಗೆ ಯಾವ ಸಿದ್ಧಾಂತವೂ ಇಲ್ಲ. ಹೇಗಾದರೂ ಮಾಡಿ ಅಧಿಕಾರ ಹಿಡಿಯುವುದೇ ಅವರ ಸೂತ್ರ. ಹಿಂದೆ ಕಾಂಗ್ರೆಸ್‌ನಿಂದ ಮುಖ್ಯಮಂತ್ರಿ ಆದರು. ಈಗ ಬಿಜೆಪಿಯನ್ನು ಹಿಡಿದುಕೊಂಡು ಹೋಗಿದ್ದಾರೆ. ಹಿಂದುಳಿದವರು ಮತ್ತು ದಮನಿತರ ಪರವಾಗಿ ಕೆಲಸ ಮಾಡುತ್ತಿರುವ ಸಿದ್ದರಾಮಯ್ಯ ವಿರುದ್ಧ ಈಗ ಅವರು ಕಾಲು‌ ಕೆರೆಯುತ್ತಿದ್ದಾರೆ ಎಂದು ಸಚಿವ ಎಂ.ಬಿ. ಪಾಟೀಲ ಟೀಕಿಸಿದರು.

ಇದನ್ನೂ ಓದಿ: Ginger Benefits: ಮಳೆಗಾಲದ ಸೋಂಕುಗಳಿಗೆ ಬೇಕು ಶುಂಠಿಯೆಂಬ ಮದ್ದು!

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ರಾಮಲಿಂಗಾರೆಡ್ಡಿ ಡಾ.ಎಂ.ಸಿ.ಸುಧಾಕರ, ಜಮೀರ್ ಅಹಮದ್, ಕೆ.ಎಚ್. ಮುನಿಯಪ್ಪ, ಡಾ. ಶರಣು ಪ್ರಕಾಶ ಪಾಟೀಲ್, ಶಾಸಕ ಇಕ್ಬಾಲ್ ಹುಸೇನ್, ಮಾಜಿ ಸಂಸದ ಡಿ.ಕೆ. ಸುರೇಶ್‌ ಹಾಗೂ ಇತರರು ಪಾಲ್ಗೊಂಡಿದ್ದರು.

Continue Reading

Latest

Wayanad Tragedy: ವಯನಾಡ್ ಭೂಕುಸಿತ; ದಕ್ಷಿಣ ಭಾರತದ ಸಿನಿಮಾ ನಟರಿಂದ ಸಂತ್ರಸ್ತರಿಗೆ ನೆರವಿನ‌ ಮಹಾಪೂರ

Wayanad Tragedy: ಭಾರೀ ಮಳೆಯಿಂದಾಗಿ ಕೇರಳದ ವಯನಾಡ್ ಗುಡ್ಡಗಾಡು ಪ್ರದೇಶಗಳಲ್ಲಿ ಮುಂಜಾನೆ ಭಾರಿ ಭೂಕುಸಿತ ಉಂಟಾಗಿದೆ. ಇದರಿಂದ ಮುನ್ನೂರಕ್ಕೂ ಹೆಚ್ಚು ಜನರು ಸಾವನಪ್ಪಿದ್ದಾರೆ. ನೂರಾರು ಜನ ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಚಲನಚಿತ್ರೋದ್ಯಮದ ಸೆಲೆಬ್ರಿಟಿಗಳಾದ ಮೋಹನ್‌‌ಲಾಲ್, ನಟಿ ಜ್ಯೋತಿಕಾ, ನಟ ಕಾರ್ತಿ ಮತ್ತು ಸೂರ್ಯ, ಫಹಾದ್ ಫಾಸಿಲ್ ಮತ್ತು ನಜ್ರಿಯಾ ನಜೀಮ್, ನಟ ವಿಕ್ರಮ್, ಮಮ್ಮುಟ್ಟಿ ಮತ್ತು ಅವರ ಪುತ್ರ ಮತ್ತು ದುಲ್ಕರ್ ಸಲ್ಮಾನ್, ರಶ್ಮಿಕಾ ಮಂದಣ್ಣ ಸಂತ್ರಸ್ತರಿಗೆ ಸಹಾಯ ಮಾಡಲು ಮುಂದೆ ಬಂದಿದ್ದಾರೆ.

VISTARANEWS.COM


on

Wayanad Tragedy
Koo

ಭಾರೀ ಮಳೆಯಿಂದಾಗಿ ಕೇರಳದ ವಯನಾಡ್ ಜಿಲ್ಲೆಯ (Wayanad Tragedy )ಗುಡ್ಡಗಾಡು ಪ್ರದೇಶಗಳಲ್ಲಿ ಮಂಗಳವಾರ (ಜುಲೈ 30) ಮುಂಜಾನೆ ಭಾರಿ ಭೂಕುಸಿತ ಉಂಟಾಗಿದೆ. ಇದರಿಂದ ಹಲವು ಜನರು ಸಾವನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ. ಬದುಕುಳಿದವರಲ್ಲಿ ಅನೇಕ ಜನರು ತಮ್ಮ ಮನೆ, ಕುಟುಂಬದವರನ್ನು ಕಳೆದುಕೊಂಡು ಅನಾಥರಾಗಿದ್ದಾರೆ. ಈ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಚಲನಚಿತ್ರೋದ್ಯಮದ ಹಲವಾರು ಸೆಲೆಬ್ರಿಟಿಗಳು ಸಂತ್ರಸ್ತರಿಗೆ ಸಹಾಯ ಮಾಡಲು ಮುಂದೆ ಬಂದಿದ್ದಾರೆ. ಅದಕ್ಕಾಗಿ ತಮ್ಮ ಕೈಲಾದಷ್ಟು ಸಹಾಯ ಹಸ್ತ ನೀಡಿದ್ದಾರೆ.

ಖ್ಯಾತ ನಟ ಮೋಹನ್ ಲಾಲ್ 3 ಕೋಟಿ ರೂ. ನೆರವು ನೀಡಿದ್ದಾರೆ. ನಟಿ ಜ್ಯೋತಿಕಾ, ನಟ ಕಾರ್ತಿ ಮತ್ತು ನಟ ಸೂರ್ಯ ಅವರು ಕೇರಳದ ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ರೂ. ದೇಣಿಗೆ ನೀಡಿದ್ದಾರೆ.

ಹಾಗೇ ಮಲಯಾಳಂ ನಟ ದಂಪತಿ ಫಹಾದ್ ಫಾಸಿಲ್ ಮತ್ತು ನಜ್ರಿಯಾ ನಜೀಮ್ ಕೂಡ ಸಂತ್ರಸ್ತರಿಗೆ ಸಹಾಯ ಮಾಡಲು 25 ಲಕ್ಷ ರೂ. ನೀಡಿದ್ದಾರೆ. ಅವರು ಈ ಕುರಿತು ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿ, “ನಾವು ಸಿಎಂಡಿಆರ್ ಎಫ್ ಗೆ 25 ಲಕ್ಷ ರೂ.ಗಳ ದೇಣಿಗೆ ನೀಡುತ್ತಿದ್ದೇವೆ. ಇದನ್ನು ತೀವ್ರ ಅಗತ್ಯವಿರುವವರಿಗೆ ಅಗತ್ಯತೆಗಳನ್ನು ಪೂರೈಸಲು ಸಹಾಯ ಮಾಡುತ್ತದೆ ಎಂದು ನಾವು ಭಾವಿಸುತ್ತೇವೆ” ಎಂಬುದಾಗಿ ತಿಳಿಸಿದ್ದಾರೆ.

ಹಾಗೇ ಪೊನ್ನಿಯಿನ್ ಸೆಲ್ವನ್ ಪಾರ್ಟ್ 1 ಮತ್ತು ರಾವಣನ್‍ನಂತಹ ಚಿತ್ರಗಳಲ್ಲಿ ನಟಿಸಿದ ಖ್ಯಾತ ತಮಿಳು ನಟ ವಿಕ್ರಮ್ ಭೂಕುಸಿತದ ಸಂತ್ರಸ್ತರಿಗೆ 20 ಲಕ್ಷ ರೂ. ನೀಡಿದ್ದಾರೆ. ಈ ವಿಚಾರವನ್ನು ಅವರ ಮ್ಯಾನೇಜರ್ ಯುವರಾಜ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ: ತಬ್ಬಲಿ ಶಿಶುಗಳಿಗೆ ಎದೆಹಾಲು ನೀಡಿ ಪೋಷಿಸಿದ ʼಮಹಾತಾಯಿʼಗೆ ವ್ಯಾಪಕ ಪ್ರಶಂಸೆ

ಅಲ್ಲದೇ ಮಲಯಾಳಂ ನಟ ಮಮ್ಮುಟ್ಟಿ ಮತ್ತು ಅವರ ಪುತ್ರ ಮತ್ತು ನಟ ದುಲ್ಕರ್ ಸಲ್ಮಾನ್ ಕೂಡ ಪರಿಹಾರ ನಿಧಿಗೆ 35 ಲಕ್ಷ ರೂ. ನೀಡಿದ್ದಾರೆ. ಈ ವಿಚಾರವನ್ನು ನಟ ಮುಮ್ಮಟಿ ಮಾಧ್ಯಮಗಳ ಮೂಲಕ ತಿಳಿಸಿದ್ದಾರೆ. ವರದಿಗಳ ಪ್ರಕಾರ, ಅವರ ಚಾರಿಟಬಲ್ ಟ್ರಸ್ಟ್ ತೀವ್ರ ಅಗತ್ಯವಿರುವವರಿಗೆ ಸಹಾಯ ಮಾಡುತ್ತಿದೆ ಮತ್ತು ಸಂತ್ರಸ್ತರಿಗೆ ಅಗತ್ಯ ವಸ್ತುಗಳಾದ ಆಹಾರ ಪದಾರ್ಥಗಳು, ಔಷಧಿಗಳು, ಬಟ್ಟೆಗಳು ಮತ್ತು ಇತರ ಪ್ರಮುಖ ವಸ್ತುಗಳನ್ನು ಪೂರೈಸುತ್ತಿದೆ ಎಂಬುದಾಗಿ ತಿಳಿದುಬಂದಿದೆ. ಹಾಗೇ ನಟಿ ರಶ್ಮಿಕಾ ಮಂದಣ್ಣ ಕೂಡ ಸಂತ್ರಸ್ತರಿಗೆ 10 ಲಕ್ಷ ರೂ. ದೇಣಿಗೆ ನೀಡಿರುವುದಾಗಿ ತಿಳಿದುಬಂದಿದೆ.

Continue Reading
Advertisement
friendshipday fashion
ಫ್ಯಾಷನ್2 hours ago

Friendshipday Fashion: ಮಾನ್ಸೂನ್‌‌‌ನಲ್ಲಿ ಟ್ರೆಂಡಿಯಾದ ಫ್ರೆಂಡ್‌‌‌ಶಿಪ್‌ ಡೇ ಫ್ಯಾಷನ್‌ ಥೀಮ್‌

Kerala Tour
ಪ್ರವಾಸ2 hours ago

Kerala Tour: ಕೇರಳದಲ್ಲಿ ನೋಡಲೇಬೇಕಾದ 10 ಅದ್ಭುತ ಸ್ಥಳಗಳಿವು!

Paris Olympics 2024
ಪ್ರಮುಖ ಸುದ್ದಿ2 hours ago

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಇಂದು ಭಾರತದ ಅಥ್ಲೀಟ್​ಗಳ ಸ್ಪರ್ಧೆಗಳ ವಿವರ ಇಲ್ಲಿದೆ

karnataka weather Forecast
ಮಳೆ2 hours ago

Karnataka Weather : ಮುಂದುವರಿಯಲಿದೆ ವಿಪರೀತ ಮಳೆ; ಕರಾವಳಿಗೆ ಆರೆಂಜ್‌, ಮಲೆನಾಡಿಗೆ ಯೆಲ್ಲೋ ಅಲರ್ಟ್‌

Shravan 2024
Latest2 hours ago

Shravan 2024: ನಾಳೆಯಿಂದ ಶ್ರಾವಣ ಮಾಸ ಆರಂಭ; ಶುಭ ಕಾರ್ಯಗಳನ್ನು ಮಾಡಲು ಈ ತಿಂಗಳು ಸೂಕ್ತ ಏಕೆ?

Dina Bhavishya
ಭವಿಷ್ಯ3 hours ago

Dina Bhavishya : ಕೌಟುಂಬಿಕ ಕಲಹಗಳಿಗೆ ಧ್ವನಿ ಆಗ್ಬೇಡಿ; ಅನಿರೀಕ್ಷಿತ ಲಾಭಗಳನ್ನು ನಿರೀಕ್ಷಿಸಬಹುದು

Uttar Pradesh
ದೇಶ7 hours ago

ಪತ್ನಿ ಇದ್ದರೂ ಮಹಿಳಾ ಇನ್ಸ್‌ಪೆಕ್ಟರ್‌ ಜತೆ ವ್ಯಕ್ತಿ ಸರಸ; ರೆಡ್‌ ಹ್ಯಾಂಡ್‌ ಆಗಿ ಹಿಡಿದ ಪತ್ನಿ ಮಾಡಿದ್ದೇನು? Video ಇದೆ

Wasim Jaffer
ಕ್ರೀಡೆ8 hours ago

Wasim Jaffer : ಪಂಜಾಬ್ ತಂಡದ ಕೋಚ್​ ಆಗಿ ಮಾಜಿ ಬ್ಯಾಟರ್​ ವಾಸಿಮ್​ ಜಾಫರ್ ನೇಮಕ

Ayodhya
ದೇಶ8 hours ago

Ayodhya: ಅಯೋಧ್ಯೆಗೆ ವಿಮಾನ ತಲುಪುತ್ತಲೇ ಭೂಮಿಗೆ ನಮಸ್ಕರಿಸಿದ ಗಗನಸಖಿ; ಭುಗಿಲೆದ್ದಿತು ವಿವಾದ!

Wayanad Landslide
ಕರ್ನಾಟಕ9 hours ago

Wayanad Landslide: ವಯನಾಡು ಸಂತ್ರಸ್ತರಿಗೆ ಮಿಡಿದ ಕರುನಾಡು; ಸರ್ಕಾರದ ಜತೆಗೆ ಜನರಿಂದಲೂ ನೆರವು!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka rain
ಮಳೆ19 hours ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ5 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ5 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ6 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ6 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ6 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

ಟ್ರೆಂಡಿಂಗ್‌