Sonakshi Sinha: ಸೋನಾಕ್ಷಿ ಸಿನ್ಹಾ ಮದುವೆ ಲವ್ ಜಿಹಾದ್?; ಶತ್ರುಘ್ನ ಸಿನ್ಹಾ ಹೇಳಿದ್ದೇನು? - Vistara News

Latest

Sonakshi Sinha: ಸೋನಾಕ್ಷಿ ಸಿನ್ಹಾ ಮದುವೆ ಲವ್ ಜಿಹಾದ್?; ಶತ್ರುಘ್ನ ಸಿನ್ಹಾ ಹೇಳಿದ್ದೇನು?

Sonakshi Sinha: ಜಹೀರ್ ಇಕ್ಬಾಲ್ ಜೊತೆ ಪುತ್ರಿ ಸೋನಾಕ್ಷಿ ಸಿನ್ಹಾ ಮದುವೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವವರ ವಿರುದ್ಧ ತಂದೆ ಶತ್ರುಘ್ನ ಸಿನ್ಹಾ ವಾಗ್ದಾಳಿ ನಡೆಸಿದ್ದಾರೆ. ದ್ವೇಷವನ್ನು ಹರಡುವುದನ್ನು ನಿಲ್ಲಿಸಬೇಕೆಂದು ಅವರು ಒತ್ತಾಯಿಸಿದ್ದಾರೆ. ವಿವಾಹವು ಇಬ್ಬರು ವ್ಯಕ್ತಿಗಳ ನಡುವಿನ ವೈಯಕ್ತಿಕ ನಿರ್ಧಾರ. ಮಧ್ಯಪ್ರವೇಶಿಸಲು ಯಾರಿಗೂ ಹಕ್ಕಿಲ್ಲ. ಈ ಪ್ರತಿಭಟನೆ ಮೊದಲಾದವು ನಿರುದ್ಯೋಗಿಗಳ ಕೆಲಸ. ಜೀವನದಲ್ಲಿ ಉಪಯೋಗಕ್ಕೆ ಬರುವಂತಹ ಕೆಲಸದಲ್ಲಿ ತೊಡಗಿಕೊಳ್ಳಿ. ಇದಕ್ಕಿಂತ ಹೆಚ್ಚಿನದನ್ನು ಹೇಳಲು ನನಗೆ ಸಾಧ್ಯವಿಲ್ಲ ಎಂದು ಹಿರಿಯ ನಟ ಬೇಸರ ವ್ಯಕ್ತಪಡಿಸಿದರು.

VISTARANEWS.COM


on

Sonakshi Sinha
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಜಹೀರ್ ಇಕ್ಬಾಲ್ ಜೊತೆ ಪುತ್ರಿ ಸೋನಾಕ್ಷಿ ಸಿನ್ಹಾ (Sonakshi Sinha) ಮದುವೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವವರ ವಿರುದ್ಧ ತಂದೆ ಶತ್ರುಘ್ನ ಸಿನ್ಹಾ ವಾಗ್ದಾಳಿ ನಡೆಸಿದ್ದಾರೆ. ದ್ವೇಷವನ್ನು ಹರಡುವುದನ್ನು ನಿಲ್ಲಿಸಬೇಕೆಂದು ಅವರು ಒತ್ತಾಯಿಸಿದ್ದಾರೆ. ತಮ್ಮ ಮಗಳು ಯಾವುದೇ ತಪ್ಪು ಮಾಡಿಲ್ಲ ಎಂದು ಒತ್ತಿ ಹೇಳಿದ್ದಾರೆ.

ಜೂನ್ 23ರಂದು ಮುಂಬೈಯಲ್ಲಿ ನಡೆದ ಖಾಸಗಿ ಸಮಾರಂಭದಲ್ಲಿ ಸೋನಾಕ್ಷಿ ಸಿನ್ಹಾ, ಜಹೀರ್ ಇಕ್ಬಾಲ್ ಜೊತೆ ವಿವಾಹಬಂಧನಕ್ಕೆ ಸಾಕ್ಷಿಯಾಗಿದ್ದರು. ಅವರ ಮದುವೆ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ಶತ್ರುಘ್ನ ಸಿನ್ಹಾ ಅವರ ತವರು ಬಿಹಾರದ ಪಾಟ್ನಾದಲ್ಲಿ ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಲಾಗಿತ್ತು. ಹಿಂದೂ ಶಿವ ಭವಾನಿ ಸೇನೆ ಹೆಸರಿನ ಸಂಘಟನೆ ಈ ಅಂತಧರ್ಮಿಯ ವಿವಾಹವನ್ನು “ಲವ್ ಜಿಹಾದ್’ ಎಂದು ಕರೆದಿದೆ ಹಾಗೂ ರಾಜಧಾನಿಗೆ ಎಂದಿಗೂ ಭೇಟಿ ನೀಡದಂತೆ ಎಚ್ಚರಿಸಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಶತ್ರುಘ್ನ ಸಿನ್ಹಾ “ವಿವಾಹವು ಇಬ್ಬರು ವ್ಯಕ್ತಿಗಳ ನಡುವಿನ ವೈಯಕ್ತಿಕ ನಿರ್ಧಾರ. ಮಧ್ಯಪ್ರವೇಶಿಸಲು ಯಾರಿಗೂ ಹಕ್ಕಿಲ್ಲ. ಈ ಪ್ರತಿಭಟನೆ ಮೊದಲಾದವು ನಿರುದ್ಯೋಗಿಗಳ ಕೆಲಸ. ಜೀವನದಲ್ಲಿ ಉಪಯೋಗಕ್ಕೆ ಬರುವಂತಹ ಕೆಲಸದಲ್ಲಿ ತೊಡಗಿಕೊಳ್ಳಿ. ಇದಕ್ಕಿಂತ ಹೆಚ್ಚಿನದನ್ನು ಹೇಳಲು ನನಗೆ ಸಾಧ್ಯವಿಲ್ಲ’ ಎಂದು ಹಿರಿಯ ನಟ ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿ ಸುಷ್ಮಾ ಸ್ವರಾಜ್‌ರನ್ನು ನೆನಪಿಸಿದ ಮಗಳು! ವಿಡಿಯೊ ನೋಡಿ

ವಿವಾಹದ ಬಳಿಕ ಸೋನಾಕ್ಷಿ ಹಾಗೂ ಜಹೀರ್ ದಂಪತಿ ಬಾಂದ್ರಾ ನಿವಾಸದಲ್ಲಿ ಆತ್ಮೀಯ ಸಮಾರಂಭ ಆಯೋಜಿಸಿದ್ದರು. ಬಳಿಕ ಮದುವೆಯ ಚಿತ್ರಗಳನ್ನು ಆನ್ ಲೈನ್ ನಲ್ಲಿ ಹಂಚಿಕೊಂಡು “ಏಳು ವರ್ಷಗಳ ಹಿಂದೆ ಇದೇ ದಿನದಂದು ನಾವು ಪರಸ್ಪರರ ಕಣ್ಣುಗಳಲ್ಲಿ ಪ್ರೀತಿಯನ್ನು ಕಂಡುಕೊಂಡೆವು. ಅದನ್ನು ಶಾಶ್ವತವಾಗಿ ಹಿಡಿದಿಡಲು ವಿವಾಹವಾದೆವು. ಇಂದು ಆ ಪ್ರೀತಿ ಎಲ್ಲಾ ಸವಾಲುಗಳನ್ನು ಮೆಟ್ಟಿ ನಿಂತು ವಿಜಯಿಯಾಗಲು ಮಾರ್ಗದರ್ಶನ ನೀಡಿದೆ. ಎರಡೂ ಕುಟುಂಬಗಳ ಆರ್ಶೀವಾದದೊಂದಿಗೆ ನಾವು ಗಂಡ ಹೆಂಡತಿಯರಾಗಿದ್ದೇವೆ’ ಎಂದು ಬರೆದುಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ತಂತ್ರಜ್ಞಾನ

Tulu Translate Google: ಗೂಗಲ್ ಟ್ರಾನ್ಸ್‌ಲೇಟ್‌ನಲ್ಲಿ ತುಳು ಭಾಷೆ ಸೇರ್ಪಡೆ

ಗೂಗಲ್ ಟ್ರಾನ್ಸ್‌ಲೇಟ್‌ನಲ್ಲಿ ಫೋನ್, ಲುವೊ, ಗಾ, ಕಿಕೊಂಗೊ, ಸ್ವಾತಿ, ವೆಂಡಾ ಮತ್ತು ವುಲ್ಫ್‌ನಂತಹ ಹೆಚ್ಚಿನ ಆಫ್ರಿಕನ್ ಭಾಷೆಗಳನ್ನು ಸೇರಿಸಲಾಗಿದ್ದು, ಇದರಲ್ಲಿ ಏಳು ಭಾರತೀಯ ಭಾಷೆಗಳಾದ ಅವಧಿ, ಬೋಡೋ, ಖಾಸಿ, ಕೊಕ್ಬೊರೊಕ್, ಮಾರ್ವಾಡಿ, ಸಂತಾಲಿ ಮತ್ತು ತುಳು (Tulu language) ಕೂಡ ಸೇರ್ಪಡೆಗೊಂಡಿದೆ.

VISTARANEWS.COM


on

By

Tulu language
Koo

ಲಕ್ಷಾಂತರ ಜನರ ಸಂವಹನಕ್ಕೆ (communication) ಸಹಾಯ ಮಾಡುತ್ತಿರುವ ಗೂಗಲ್‌ನಲ್ಲಿ ಈಗ ತುಳು ಭಾಷೆ (Tulu language) ಸೇರಿ 110 ಹೊಸ ಭಾಷೆಗಳನ್ನು (new languages) ಅನುವಾದಕ್ಕೆ ಲಭ್ಯವಾಗಿದೆ. ಅನುವಾದದಲ್ಲಿ ಹೊಸ ನವೀಕರಣವನ್ನು ಗೂಗಲ್ (google) ಪ್ರಕಟಿಸಿದ್ದು, ಅಪ್ಲಿಕೇಶನ್ ಮೂಲಕ ವಿವಿಧ ಭಾಷೆಗಳನ್ನು ಅನುವಾದಗೊಳಿಸಲು ಆರ್ಟಿಫಿಷಿಯಲ್ ತಂತ್ರಜ್ಞಾನವನ್ನು ಬಳಸುತ್ತಿರುವುದಾಗಿ ಗೂಗಲ್ ಹೇಳಿದೆ.

PaLM 2 ಭಾಷೆಯ ಮಾದರಿಯ ಬೆಂಬಲದೊಂದಿಗೆ ಗೂಗಲ್ ಈಗ 110 ಹೊಸ ಭಾಷೆಗಳನ್ನು ಅನುವಾದಗೊಳಿಸುತ್ತಿದೆ. ಆಲ್ಫಾಬೆಟ್ ಇಂಕ್ ಕಂಪೆನಿಯು ಇದು ತನ್ನ ಅತಿದೊಡ್ಡ ವಿಸ್ತರಣೆಯಾಗಿದೆ ಎಂದು ಹೇಳಿಕೊಂಡಿದೆ. ಗೂಗಲ್‌ನಲ್ಲಿ ಅನುವಾದವನ್ನು 2006ರಲ್ಲಿ ಪರಿಚಯಿಸಲಾಯಿತು. 2024ರ ಜೂನ್ ವೇಳೆಗೆ ಈ ವೈಶಿಷ್ಟ್ಯವು 243 ಭಾಷೆಗಳನ್ನು ಬೆಂಬಲಿಸುತ್ತದೆ. ಹೆಚ್ಚು ಜನರಿಗೆ ಅನುಕೂಲವಾಗುವಂತೆ ಮಾಡಲು ಈ ವೈಶಿಷ್ಟ್ಯಕ್ಕೆ ಇತ್ತೀಚಿನ ತಂತ್ರಜ್ಞಾನಗಳನ್ನು ಸತತವಾಗಿ ಅನ್ವಯಿಸಲಾಗುತ್ತಿದೆ ಎಂದು ಕಂಪನಿ ಹೇಳಿದೆ.

2022ರಲ್ಲಿ ಕಂಪನಿಯು ಝೀರೋ- ಶಾಟ್ ಮೆಷಿನ್ ಅನುವಾದವನ್ನು ಬಳಸಿಕೊಂಡು 24 ಹೊಸ ಭಾಷೆಗಳನ್ನು ಸೇರಿಸಿತು. ಈ ತಂತ್ರದ ಮೂಲಕ ಯಂತ್ರ ಕಲಿಕೆಯ ಮಾದರಿಗಳು ಹೇಗೆ ಅನುವಾದಿಸಬೇಕೆಂದು ಕಲಿಯಬಹುದು. ಆಗ ಕಂಪೆನಿಯು ತನ್ನ 1,000 ಭಾಷೆಯ ಉಪಕ್ರಮವನ್ನು ಘೋಷಿಸಿತ್ತು. ಉಪಕ್ರಮದ ಭಾಗವಾಗಿ ಕಂಪೆನಿಯು ಪ್ರಪಂಚದಾದ್ಯಂತ ಹೆಚ್ಚು ಮಾತನಾಡುವ 1,000 ಭಾಷೆಗಳನ್ನು ಬೆಂಬಲಿಸುವ ಎಐ ಮಾದರಿಗಳನ್ನು ನಿರ್ಮಿಸುವ ಗುರಿಯನ್ನು ಹೊಂದಿದೆ.

ಸುಮಾರು ಅರ್ಧ ಬಿಲಿಯನ್ ಅನುವಾದಿಸಲು ಸಹಾಯ

ಗೂಗಲ್ ತನ್ನ ಅಧಿಕೃತ ಬಿಡುಗಡೆಯಲ್ಲಿ ಹೊಸ ಭಾಷೆಗಳು 614 ಮಿಲಿಯನ್‌ಗಿಂತಲೂ ಹೆಚ್ಚು ಮಾತನಾಡುವವರನ್ನು ಪ್ರತಿನಿಧಿಸುತ್ತವೆ. ಇದರಿಂದಾಗಿ ಪ್ರಪಂಚದ ಜನಸಂಖ್ಯೆಯ ಸುಮಾರು ಎಂಟು ಪ್ರತಿಶತದಷ್ಟು ಜನರ ಭಾಷೆಗಳನ್ನು ಅನುವಾದ ಮಾಡಬಹುದು. ಇವುಗಳಲ್ಲಿ ಕೆಲವು 100 ಮಿಲಿಯನ್‌ಗಿಂತಲೂ ಹೆಚ್ಚು ಮಾತನಾಡುವ ಪ್ರಮುಖ ಭಾಷೆಗಳಾಗಿವೆ. ಆದರೆ ಇತರವು ಸ್ಥಳೀಯ ಜನರ ಸಣ್ಣ ಸಮುದಾಯಗಳಿಂದ ಮಾತನಾಡುತ್ತವೆ.


ಏಳು ಭಾರತೀಯ ಭಾಷೆಗಳು

ಇತ್ತೀಚಿನ ವಿಸ್ತರಣೆಯು ಫೋನ್, ಲುವೊ, ಗಾ, ಕಿಕೊಂಗೊ, ಸ್ವಾತಿ, ವೆಂಡಾ ಮತ್ತು ವುಲ್ಫ್‌ನಂತಹ ಹೆಚ್ಚಿನ ಆಫ್ರಿಕನ್ ಭಾಷೆಗಳನ್ನು ಅಪ್ಲಿಕೇಶನ್‌ಗೆ ಸೇರಿಸಿದೆ. ಹೊಸ ಸೇರ್ಪಡೆಯು ಏಳು ಭಾರತೀಯ ಭಾಷೆಗಳಾದ ಅವಧಿ, ಬೋಡೋ, ಖಾಸಿ, ಕೊಕ್ಬೊರೊಕ್, ಮಾರ್ವಾಡಿ, ಸಂತಾಲಿ ಮತ್ತು ತುಳುವನ್ನು ಒಳಗೊಂಡಿದೆ.

ಹೇಗೆ ಅನ್ವಯ?

ಅನುವಾದಕ್ಕೆ ಹೊಸ ಭಾಷೆಗಳನ್ನು ಹೇಗೆ ಸೇರಿಸುತ್ತದೆ ಎಂಬುದನ್ನು ಗೂಗಲ್ ಉಲ್ಲೇಖಿಸಿದೆ. ಟೆಕ್ ದೈತ್ಯ ಪ್ರಾದೇಶಿಕ ಪ್ರಭೇದಗಳು, ಉಪಭಾಷೆಗಳು ಮತ್ತು ಕಾಗುಣಿತ ಮಾನದಂಡಗಳಂತಹ ಹಲವಾರು ಅಂಶಗಳನ್ನು ಇದಕ್ಕಾಗಿ ಪರಿಗಣಿಸುತ್ತದೆ ಎಂದು ಹೇಳಿದರು.

ಇದನ್ನೂ ಓದಿ: Tata Motors: ನೆಕ್ಸಾನ್, ಪಂಚ್‌ ಮೂಲಕ ಎಸ್‌ಯುವಿ ಮಾರುಕಟ್ಟೆಯಲ್ಲಿ ಮುನ್ನಡೆ ಸಾಧಿಸಿದ ಟಾಟಾ ಮೋಟಾರ್ಸ್

ಅನೇಕ ಭಾಷೆಗಳು ಒಂದೇ ಪ್ರಮಾಣಿತ ರೂಪವನ್ನು ಹೊಂದಿರದ ಕಾರಣ ಸಾಮಾನ್ಯವಾಗಿ ಬಳಸುವ ಪ್ರಭೇದಗಳಿಗೆ ಆದ್ಯತೆ ನೀಡುವುದಾಗಿ ಗೂಗಲ್ ಹೇಳಿದೆ. ಪಾಲ್ಎಮ್ 2 ತಂತ್ರಜ್ಞಾನವು ಹಿಂದಿ ಮತ್ತು ಫ್ರೆಂಚ್ ಕ್ರಿಯೋಲ್‌ಗಳಂತಹ ಪರಸ್ಪರ ನಿಕಟ ಸಂಬಂಧ ಹೊಂದಿರುವ ಭಾಷೆಗಳನ್ನು ಕಲಿಯಲು ಸಹಾಯ ಮಾಡುತ್ತದೆ ಎಂದು ಕಂಪೆನಿ ಹೇಳಿದೆ.

ಭಾಷಾಶಾಸ್ತ್ರಜ್ಞರು ಮತ್ತು ಸ್ಥಳೀಯ ಭಾಷಿಕರೊಂದಿಗೆ ಸಹಯೋಗ ಮಾಡುವ ಮೂಲಕ ಕಾಲಾನಂತರದಲ್ಲಿ ಹೆಚ್ಚಿನ ಭಾಷಾ ಪ್ರಭೇದಗಳು ಮತ್ತು ಕಾಗುಣಿತ ಸಂಪ್ರದಾಯಗಳನ್ನು ಬೆಂಬಲಿಸುವ ಗುರಿಯನ್ನು ಹೊಂದಿದೆ ಎಂದು ಗೂಗಲ್ ಹೇಳಿದೆ.

Continue Reading

Latest

Viral Video: ಈ ಆರು ಯೂಟ್ಯೂಬರ್‌ಗಳು ಜೈಲು ಪಾಲಾಗಲು ಶಾರುಖ್‌ ಖಾನ್‌ ಕಾರಣವಂತೆ!

Viral Video: ಈಗ ಸೋಶಿಯಲ್ ಮೀಡಿಯಾದ್ದೇ ಹವಾ. ಕೈಲ್ಲೊಂದು ಮೊಬೈಲ್ ಇದ್ದರೆ ಜಗತ್ತೇ ಮೆರಯುವ ಯುವಜನಾಂಗ ಏನು ಮಾಡುತ್ತಿದ್ದೇವೆ? ಇದು ಸರಿನಾ… ತಪ್ಪಾ…? ಇದರ ಪರಿವೇ ಇಲ್ಲದೇ ವರ್ತಿಸುತ್ತಿದ್ದಾರೆ. ಉತ್ತರ ಪ್ರದೇಶದ ಬುಲಂದ್ ಶಹರ್ನ ದಿಬಾಯ್‌ನಲ್ಲಿ ಆರು ಯುಟ್ಯೂಬರ್‌ಗಳು ಜವಾನ್ ಚಿತ್ರದಲ್ಲಿ ನಟ ಶಾರುಖ್ ಖಾನ್ ಅವರು ಬ್ಯಾಂಡೇಜ್ ಧರಿಸಿದ ಲುಕ್ ಅನ್ನು ನಕಲು ಮಾಡಿ ಇಡೀ ಪಟ್ಟಣವನ್ನು ಸುತ್ತಿದ್ದಾರೆ. ಇವರನ್ನು ಕಂಡು ಸ್ಥಳೀಯರು ಗಾಬರಿಗೊಂಡಿದ್ದಾರೆ ಎನ್ನಲಾಗಿದೆ. ಈ ವಿಡಿಯೊ ಸೋಶಿಯಲ್ ವೀಡಿಯಾದಲ್ಲಿ ವೈರಲ್ ಆಗಿದ್ದು, ಮಾತ್ರವಲ್ಲ ಇದರಿಂದ ಪೊಲೀಸರು ಇವರನ್ನು ಹುಡುಕಿಕೊಂಡು ಬರುವಂತಾಯಿತು!

VISTARANEWS.COM


on

Viral Video
Koo

ಸೋಶಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಲೈಕ್ಸ್ , ಕಾಮೆಂಟ್‌ ಪಡೆಯಲು ಯುವಕರು ಅನೇಕ ದುಸ್ಸಾಹಸಗಳಿಗೆ ಕೈ ಹಾಕಿ ಸಂಕಷ್ಟಕ್ಕೀಡಾಗುತ್ತಿದ್ದಾರೆ. ಅದೇ ರೀತಿ ಇದೀಗ ಯುವಕರು ಸಿನಿಮಾವೊಂದರಲ್ಲಿ ಹೀರೊ ಲುಕ್‌ ಅನ್ನು ನಕಲು ಮಾಡಲು ಹೋಗಿ ಪೊಲೀಸರ ಅತಿಥಿಯಾಗಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೊ ವೈರಲ್
(Viral Video) ಆಗಿದೆ.

ಉತ್ತರ ಪ್ರದೇಶದ ಬುಲಂದ್ ಶಹರ್‌ನ ದಿಬಾಯ್‌ನಲ್ಲಿ ಆರು ಯುಟ್ಯೂಬರ್‌ಗಳು ಜವಾನ್ ಚಿತ್ರದಲ್ಲಿ ನಟ ಶಾರುಖ್ ಖಾನ್ ಅವರು ಬ್ಯಾಂಡೇಜ್ ಧರಿಸಿದ ಲುಕ್ ಅನ್ನು ನಕಲು ಮಾಡಿ ಇಡೀ ಪಟ್ಟಣವನ್ನು ಸುತ್ತಿದ್ದಾರೆ. ಇವರನ್ನು ಕಂಡು ಸ್ಥಳೀಯರು ಗಾಬರಿಗೊಂಡಿದ್ದಾರೆ ಎನ್ನಲಾಗಿದೆ.

ಈ ವಿಡಿಯೊದಲ್ಲಿ ಆರು ಮಂದಿ ಯುವಕರು ರಕ್ತದಂತೆ ಕಾಣುವ ಬಣ್ಣವನ್ನು ಬ್ಯಾಂಡೇಜ್‌ಗೆ ಬಳಿದುಕೊಂಡು ಅದನ್ನು ಮುಖಕ್ಕೆ ಸುತ್ತಿಕೊಂಡು ಕೈಯಲ್ಲಿ ಕೋಲುಗಳನ್ನು ಹಿಡಿದು ಜವಾನ್ ಚಿತ್ರದಲ್ಲಿ ನಟ ಶಾರುಖ್ ಖಾನ್ ಅವರ ಲುಕ್ ಅನ್ನು ನಕಲು ಮಾಡಿ ಇಡೀ ಪಟ್ಟಣವನ್ನು ಸುತ್ತಿಹಾಕಿದ್ದಾರೆ. ಇವರಲ್ಲಿ ಒಬ್ಬ ಶರ್ಟ್ ಧರಿಸಿದೆ ತನ್ನ ಇಡೀ ದೇಹವನ್ನು ರಕ್ತದ ಕಲೆಯಂತೆ ಕಾಣುವ ಬ್ಯಾಂಡೇಜ್‌ನಿಂದ ಮುಚ್ಚಿಕೊಂಡಿದ್ದಾನೆ. ಇವರನ್ನು ಕಂಡು ಸ್ಥಳೀಯರು ಗಾಬರಿಗೊಂಡಿರುವುದು ವಿಡಿಯೊದಲ್ಲಿ ಕಂಡುಬಂದಿದೆ. ಈ ವಿಡಿಯೊ ಸೋಶಿಯಲ್ ವೀಡಿಯಾದಲ್ಲಿ ವೈರಲ್ ಆಗಿದ್ದು, ಮಾತ್ರವಲ್ಲ ಇದರಿಂದ ಪೊಲೀಸರು ಇವರನ್ನು ಹುಡುಕಿಕೊಂಡು ಬರುವಂತಾಗಿದೆ. ಈ ಆರು ಮಂದಿ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.

ವಿಡಿಯೊ 15 ನಿಮಿಷಗಳ ಕಾಲವಿದ್ದು, ಸಮಾಜದ ಜನತೆಗೆ ಉಪದ್ರವ ನೀಡುವಂತಹ ಈ ರೀಲ್ಸ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಇದಕ್ಕೆ ಶೀರ್ಷಿಕೆ ನೀಡಲಾಗಿದೆ. ಈ ಆರು ಮಂದಿ ಸ್ಥಳೀಯರನ್ನು ಹೆದರಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಮತ್ತು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಹಾಗೇ ಮುಂದೆ ಇಂತಹ ಕುಚೇಷ್ಠೆಗಳನ್ನು ಮಾಡದಂತೆ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ರೀಲ್ಸ್ ಮಾಡಲು ಹೋದ ಹುಡುಗರು; ರೈಲಿನ ಪ್ರಯಾಣಿಕರು ಏನು ಮಾಡಿದರು ನೋಡಿ!

ರೀಲ್ಸ್‌ಗಾಗಿ ಯುವಕರು ಇಂತಹ ಕುಚೇಷ್ಠೆಗಳನ್ನು ಈ ಹಿಂದೆ ಹಲವು ಬಾರಿ ಮಾಡಿದ್ದಾರೆ. ಈ ಬಗ್ಗೆ ಪೊಲೀಸರು ಅನೇಕ ಬಾರಿ ಎಚ್ಚರಿಕೆ ನೀಡಿದರೂ ಕೂಡ ಇಂತಹ ಘಟನೆಗಳು ನಡೆಯುತ್ತಿರುತ್ತದೆ. ಈ ಹಿಂದೆ ಪಾಕಿಸ್ತಾನದಲ್ಲಿ ಯುವಕರು ಗುಂಪೊಂದು ತಮಾಷೆ ರೀಲ್ ಮಾಡಲು ವೇಗವಾಗಿ ಬರುವ ರೈಲಿಗೆ ನೀರು ಚುಮ್ಮುವಂತೆ ರೈಲು ಹಳಿ ಮೇಲೆ ಹಾದು ಹೋಗುವ ತೊರೆಗೆ ತಮ್ಮ ಬೈಕ್ ಅನ್ನು ಅಡ್ಡಲಾಗಿ ನಿಲ್ಲಿಸಿ ರೈಲಿನ ಪ್ರಯಾಣಿಕರಿಂದ ಒದೆ ತಿಂದಿದ್ದಾರೆ. ಹಾಗೇ ರೀಲ್ಸ್ ಗಾಗಿ ಪಾಳುಬಿದ್ದ ಕಟ್ಟಡದ ಮೇಲಿಂದ ಸ್ನೇಹಿತನ ಕೈಹಿಡಿದು ಕೆಳಗಿಳಿದು ನೇತಾಡಿದ ಯುವತಿಯನ್ನು ಈ ಹಿಂದೆ ಪೊಲೀಸರು ಬಂಧಿಸಿದ್ದರು.

Continue Reading

Latest

Sonakshi Sinha: ಈಗಷ್ಟೇ ಮದುವೆಯಾಗಿರುವ ನಟಿ ಸೋನಾಕ್ಷಿ ಸಿನ್ಹಾ ಗರ್ಭಿಣಿ?

Sonakshi Sinha: ಇತ್ತೀಚೆಗಷ್ಟೇ ಜಹೀರ್ ಇಕ್ಬಾಲ್ ಜೊತೆ ಹೊಸ ಬದುಕಿಗೆ ಕಾಲಿಟ್ಟ ಸೋನಾಕ್ಷಿ ಸಿನ್ಹಾ ಈಗ ಪ್ರೆಗ್ನೆಂಟ್ ಎಂಬ ಗುಸುಗುಸು ಸುದ್ದಿ ಹರಿದಾಡುತ್ತಿದೆ. ಸೋನಾಕ್ಷಿ ಸಿನ್ಹಾ ಹಾಗೂ ಜಹೀರ್ ಮುಂಬೈನ ಲೀಲಾವತಿ ಆಸ್ಪತ್ರೆಯ ಹೊರಗೆ ಕಾರಿನಲ್ಲಿ ಕಾಣಿಸಿಕೊಂಡಿದ್ದಾರೆ. ಆ ವೇಳೆ ಕೆಲವರು ಅವರನ್ನು ಪೋಟೊ ತೆಗೆಯಲು ಪ್ರಯತ್ನಿಸಿದ್ದಾರೆ. ದಂಪತಿ ಪೋಟೊ ಕ್ಲಿಕ್ ನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿರುವುದು ಇದರಲ್ಲಿ ಕಂಡುಬಂದಿದೆ. ಈ ವಿಡಿಯೊ ಹಾಗೂ ಪೋಟೊಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದ್ದು, ನಟಿ ಸೋನಾಕ್ಷಿ ಸಿನ್ಹಾ ಗರ್ಭಿಣಿಯೇ ಎಂಬ ಸಂಶಯನ್ನು ನೆಟ್ಟಿಗರು ವ್ಯಕ್ತಪಡಿಸಿದ್ದಾರೆ.

VISTARANEWS.COM


on

Sonakshi Sinha
Koo

ನವದೆಹಲಿ: ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ಅವರು ಇತ್ತೀಚೆಗಷ್ಟೇ ತಮ್ಮ ಪ್ರೇಮಿ ಜಹೀರ್ ಇಕ್ಬಾಲ್ ಅವರನ್ನು ಮದುವೆಯಾಗಿದ್ದರು. ಆದರೆ ಮದುವೆಯಾದ ಹೊಸತರಲ್ಲೇ ನಟಿ ತಮ್ಮ ಪತಿಯ ಜೊತೆ ಆಸ್ಪತ್ರೆಯೊಂದರ ಹೊರಗೆ ಕಾಣಿಸಿಕೊಂಡಿದ್ದು, ಇದಕ್ಕೆ ಸಂಬಂಧಪಟ್ಟ ಪೋಟೊ, ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹಾಗಾಗಿ ಆಕೆ ಗರ್ಭಿಣಿಯೇ ಎಂಬ ಸಂಶಯ ನೆಟ್ಟಿಗರಲ್ಲಿ ವ್ಯಕ್ತವಾಗಿದೆ.

ಮುಂಬೈನ ಲೀಲಾವತಿ ಆಸ್ಪತ್ರೆಯ ಹೊರಗೆ ನಟಿ ಸೋನಾಕ್ಷಿ ಅವರು ತಮ್ಮ ಪತಿ ಜಹೀರ್ ಅವರ ಜೊತೆ ಕಾರಿನಲ್ಲಿ ಕಾಣಿಸಿಕೊಂಡಿದ್ದಾರೆ. ಆ ವೇಳೆ ಕೆಲವರು ಅವರನ್ನು ಪೋಟೊಗಳಲ್ಲಿ ಸೆರೆ ಹಿಡಿದಿದ್ದಾರೆ. ದಂಪತಿ ಪೋಟೊ ಕ್ಲಿಕ್ ನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿರುವುದು ಇದರಲ್ಲಿ ಕಂಡುಬಂದಿದೆ. ಈ ವಿಡಿಯೊ ಹಾಗೂ ಪೋಟೊಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದ್ದು, ನಟಿ ಸೋನಾಕ್ಷಿ ಸಿನ್ಹಾ ಗರ್ಭಿಣಿಯೇ ಎಂಬ ಸಂಶಯನ್ನು ನೆಟ್ಟಿಗರು ವ್ಯಕ್ತಪಡಿಸಿದ್ದಾರೆ.

Sonakshi Sinha

ಯಾಕೆಂದರೆ ಈ ಹಿಂದೆ ಮದುವೆಯಾದ ಬಾಲಿವುಡ್ ನಟಿಯರಾದ ಆಲಿಯಾ ಭಟ್, ಸ್ವರಾ ಭಾಸ್ಕರ್ ಅವರು ತಮ್ಮ ಮದುವೆಯಾದ ಕೆಲವೇ ದಿನಗಳಲ್ಲಿ ತಾವು ಗರ್ಭಿಣಿ ಎಂದು ಘೋಷಣೆ ಮಾಡಿದ್ದು, ಈ ಬಗ್ಗೆ ಅನೇಕರು ಗಾಸಿಪ್ ಮಾಡಿದ್ದರು. ಹಾಗಾಗಿ ಸೋನಾಕ್ಷಿ ಅವರು ಕೂಡ ಇವರಂತೆ ಮಾಡಲಿದ್ದಾರೆಯೇ? ಎಂಬ ಪ್ರಶ್ನೆ ನೆಟ್ಟಿಜನ್ ಮನಸ್ಸಿನಲ್ಲಿ ಮೂಡಿದೆ ಎನ್ನಲಾಗಿದೆ. ಹಾಗಾಗಿ ನೆಟ್ಟಿಜನ್ ಸೋನಾಕ್ಷಿಯವರನ್ನು ಗರ್ಭಿಣಿ ಅವತಾರದಲ್ಲಿ ನೋಡಲು ಬಯಸುವುದಾಗಿ ತಿಳಿಸಿದ್ದಾರೆ.

ಸೋನಾಕ್ಷಿ ಸಿನ್ಹಾ ಮತ್ತು ಜಹೀರ್ ಇಕ್ಬಾಲ್ ಅವರು ಜೂನ್ 23ರಂದು ವಿವಾಹವಾದರು. ಅವರ ಮದುವೆಯ ಪೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಅನೇಕರು ಅವರ ಜೋಡಿ ನೋಡಿ ಸ್ವರ್ಗದಲ್ಲಿ ಮಾಡಿದ ಪರಿಪೂರ್ಣ ಜೋಡಿ ಎಂದು ಹೊಗಳಿದ್ದಾರೆ.

Sonakshi Sinha

ಆದರೆ ಇವರಿಬ್ಬರು ಅಂತರ್ಧಮೀಯ ವಿವಾಹವಾಗಿದ್ದರಿಂದ ಈ ಬಗ್ಗೆ ಟೀಕೆಗಳು ವ್ಯಕ್ತವಾಗಿದ್ದವು. ಇದಕ್ಕೆ ಸೋನಾಕ್ಷಿ ಅವರ ತಂದೆ ಶತ್ರುಘ್ನ ಸಿನ್ಹಾ ಕೂಡ ಅಸಮಾಧಾನಗೊಂಡಿದ್ದರು. ಅವರ ಮದುವೆಯಿಂದ ಅವರ ಕುಟುಂಬದವರು ಸಂತೋಷವಾಗಿಲ್ಲ ಎನ್ನಲಾಗಿತ್ತು. ಆದರೆ ಆ ಬಳಿಕ ಶತ್ರುಘ್ನ ಸಿನ್ಹಾ ಅವರು ಈ ಮದುವೆಗೆ ಒಪ್ಪಿಗೆ ಸೂಚಿಸಿದ್ದರು.

ಈ ದಂಪತಿ ಮದುವೆಗೂ ಮುನ್ನ 7 ವರ್ಷಗಳ ಕಾಲ ಸಂಬಂಧದಲ್ಲಿದ್ದರು. ಹಾಗಾಗಿ ಇವರು ಲಿವಿಂಗ್ ಟು ಗೇದರ್ ರಿಲೆಷನ್ಶಿಪ್‌ನಲ್ಲಿದ್ದರು ಎಂದು ಅನೇಕರು ಊಹಿಸಿದ್ದರು.

ಆದರೆ ನಟಿ ಈ ವದಂತಿಯನ್ನು ಅಲ್ಲಗೆಳೆದಿದ್ದು, ತಾನು ಹೆತ್ತವರೊಂದಿಗೆ ವಾಸಿಸುತ್ತಿರುವುದಾಗಿ ತಿಳಿಸುವ ಮೂಲಕ ಈ ವದಂತಿಗೆ ತೆರೆ ಎಳೆದಿದ್ದರು.

Continue Reading

ಆರೋಗ್ಯ

What Is Stage 3 Breast Cancer: ಮೂರನೇ ಹಂತದ ಸ್ತನ ಕ್ಯಾನ್ಸರ್‌ ಎಂದರೇನು? ಇದರ ಲಕ್ಷಣಗಳೇನು?

What is Stage 3 Breast Cancer?: ಹಿರಿತೆರೆ ಮತ್ತು ಕಿರುತೆರೆ ನಟಿ ಹಿನಾ ಖಾನ್‌ ಅವರಿಗೆ ಮೂರನೇ ಹಂತದ ಸ್ತನ ಕ್ಯಾನ್ಸರ್‌ ಇದೆಯೆಂಬ ಸುದ್ದಿ ಅಧಿಕೃತ ಆಗುತ್ತಿದ್ದಂತೆಯೇ, ಈ ಕುರಿತಾದ ಚರ್ಚೆಗಳು ಇನ್ನಷ್ಟು ತೀವ್ರವಾಗುತ್ತಿವೆ. ಮೂರನೇ ಹಂತದ ಕ್ಯಾನ್ಸರ್‌ ಎಂದರೇನು? ಅದು ಗುಣವಾಗುತ್ತದೆಯೇ? ಅದಕ್ಕೆ ಚಿಕಿತ್ಸೆಯೇನು ಎಂಬೆಲ್ಲ ಆತಂಕಗಳ ನಡುವೆ, ಮಹಿಳೆಯರಿಗೆ ಉಪಯುಕ್ತವಾಗುವ ಒಂದಿಷ್ಟು ಮಾಹಿತಿ ಇಲ್ಲಿದೆ.

VISTARANEWS.COM


on

Breast Cancer Awareness
Koo

ಬಾಲಿವುಡ್‌ ಮತ್ತು ಕಿರುತೆರೆ (What is Stage 3 Breast) Cancer? ನಟಿ ಹಿನಾ ಖಾನ್‌ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ತಮ್ಮ ಆರೋಗ್ಯದ ಬಗ್ಗೆ ಮಹತ್ವದ ಮಾಹಿತಿಯನ್ನು ನೀಡಿದ್ದು, ಮೂರನೇ ಹಂತದಲ್ಲಿರುವ ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿರುವುದಾಗಿ ತಿಳಿಸಿದ್ದಾರೆ. ಹೆಚ್ಚಿನ ಮಂದಿಗೆ ಕ್ಯಾನ್ಸರ್‌ ಎಂಬ ಹೆಸರು ಕೇಳುತ್ತಿದ್ದಂತೆಯೇ, ಮರಣ ಶಾಸನದಂತೆ ಕೇಳುತ್ತದೆ. ಅದರಲ್ಲೂ ಮೂರನೇ ಹಂತ ಎಂಬುದು ಇನ್ನೂ ಕಷ್ಟವಾಗುತ್ತದೆ. ಹಿನಾ ಖಾನ್ ಅವರಿಗೆ ರೋಗ ಆರಂಭಿಕ ಹಂತವನ್ನು ದಾಟಿದೆ ಎಂಬುದು ಹೌದು. ಆದರೆ ರೋಗಮುಕ್ತರಾಗುವ ಆಸೆಯನ್ನು ತ್ಯಜಿಸುವ ಅಗತ್ಯವಿಲ್ಲ. ಮೂರನೇ ಹಂತದ ಸ್ತನ ಕ್ಯಾನ್ಸರ್‌ ಎಂದರೇನು ಎಂಬ ವಿವರಗಳು ಇಲ್ಲಿವೆ.

hina khan

ಹಂತಗಳೆಂದರೇನು?

ಕ್ಯಾನ್ಸರ್‌ ಗಡ್ಡೆ ಎಷ್ಟು ದೊಡ್ಡದಿದೆ ಮತ್ತು ಎಲ್ಲೆಲ್ಲಿ ಹಬ್ಬಿದೆ ಎನ್ನುವುದರ ಆಧಾರದ ಮೇಲೆ ಅದನ್ನು ಭಿನ್ನ ಹಂತಗಳನ್ನಾಗಿ ವಿಂಗಡಿಸಲಾಗುತ್ತದೆ. ಮೂರನೇ ಹಂತವೆಂದರೆ ಆರಂಭದ ಹಂತಗಳನ್ನು ದಾಟಿ ಬೆಳೆದಿದ್ದು, ಸ್ತನಗಳಿಂದ ಹೊರಗೂ ಕ್ಯಾನ್ಸರ್‌ ಹರಡಿದೆ ಎಂದು ಹೇಳಬಹುದು. ಆದರೆ ದೇಹದಲ್ಲಿ ಎಲ್ಲೆಲ್ಲೋ ಇರುವಂಥ ಅಂಗಾಂಗಗಳಿಗೆ ಇನ್ನೂ ಹರಡಿಲ್ಲ. ಸುತ್ತಮುತ್ತಲಿನ ಭಾಗದಲ್ಲಿ ಮಾತ್ರವೇ ವಿಸ್ತರಿಸಿದೆ ಎಂದು ಅರ್ಥ.

ಮೂರನೇ ಹಂತದಲ್ಲೂ ಮೂರು ಉಪವಿಭಾಗಗಳನ್ನು ವೈದ್ಯ ವಿಜ್ಞಾನ ಮಾಡುತ್ತದೆ. ಮೊದಲನೆಯದು 3ಎ ಹಂತ. ಇದರಲ್ಲಿ-

  • ಸ್ತನಗಳಲ್ಲಿ ಯಾವುದೇ ಗಡ್ಡೆಗಳಿಲ್ಲ. ಆದರೆ 4ರಿಂದ 9 ದುಗ್ಧ ರಸ ಗ್ರಂಥಿ (lymph nodes) ಗಳಲ್ಲಿ ಕ್ಯಾನ್ಸರ್‌ ಕೋಶಗಳು ಕಾಣುತ್ತಿವೆ.
  • 5 ಸೆಂ.ಮೀ. ಗಿಂತ ದೊಡ್ಡದಾದ ಕ್ಯಾನ್ಸರ್‌ನ ಗಡ್ಡೆಯಿದ್ದು, ಲಿಂಫ್‌ ನೋಡ್‌ಗಳಲ್ಲಿ ಸಣ್ಣದಾದ ಕ್ಯಾನ್ಸರ್‌ ಕೋಶಗಳ ಗೊಂಚಲುಗಳಿವೆ.
  • 5 ಸೆಂ.ಮೀ.ಗಿಂತ ದೊಡ್ಡದಾದ ಕ್ಯಾನ್ಸರ್‌ ಗಡ್ಡೆಯಿದ್ದು, ಕಂಕುಳಿನ 3 ಲಿಂಫ್‌ ನೋಡ್‌ಗಳಿಗೆ ಹರಡಿದೆ. ಎದೆಯ ಮೂಳೆಗಳ ದುಗ್ಧ ರಸ ಗ್ರಂಥಿಗಳಿಗೂ ಹರಡಿರಬಹುದು.
  • ಎರಡನೇ ಹಂತ 3ಬಿ- ಎದೆಯ ಗೋಡೆಗಳಿಗೆ ಅಥವಾ ಚರ್ಮಕ್ಕೆ ಅಂಟಿ, ಉರಿಯೂತ ಕಾಣಿಸಿರಬಹುದು. ಜೊತೆಗೆ 9 ಲಿಂಫ್‌ ನೋಡ್‌ಗಳವರೆಗೆ ಹರಡಿರಬಹುದು.
  • ಮೂರನೇ ಹಂತ 3ಸಿ- ಇದರಲ್ಲಿ 10ಕ್ಕಿಂತ ಹೆಚ್ಚು ಲಿಂಫ್‌ ನೋಡ್‌ಗಳಿಗೆ ಕ್ಯಾನ್ಸರ್‌ ಹರಡಿದೆ. ಕಾಲರ್‌ಬೋನ್‌ ಕೆಳಗೆ ಮೇಲೆಲ್ಲ ವ್ಯಾಪಿಸಿದೆ.

ಇದಕ್ಕೇನು ಕಾರಣ?

ಇದಕ್ಕೆ ನಿಖರವಾದ ಕಾರಣವನ್ನು ಇನ್ನೂ ಪತ್ತೆ ಮಾಡಲಾಗಿಲ್ಲ. ಆದರೆ ಇದರ ಭೀತಿಯನ್ನು ಹೆಚ್ಚಿಸುವಂಥ ಹಲವು ಕಾರಣಗಳನ್ನು ಪಟ್ಟಿ ಮಾಡಲಾಗಿದೆ.

  • ಆನುವಂಶಿಕ ಕಾರಣಗಳು: BRCA1 ಮತ್ತು BRCA2 ವಂಶವಾಹಿಗಳು ಬದಲಾಗುವುದು.
  • ಕೌಟುಂಬಿಕ ಹಿನ್ನೆಲೆ: ಕುಟುಂಬದಲ್ಲಿ ಯಾರಿಗಾದರೂ ಕ್ಯಾನ್ಸರ್‌ ಇದ್ದರೆ ಭೀತಿ ಹೆಚ್ಚು
  • ವಯಸ್ಸು: ವಯಸ್ಸು ಹೆಚ್ಚುತ್ತಿದ್ದಂತೆ ಈ ತೊಂದರೆಗಳು ಹತ್ತಿರವಾಗಬಹುದು
  • ಹಾರ್ಮೋನು: ಈಸ್ಟ್ರೋಜೆನ್‌ನಂಥ ಚೋದಕಗಳಿಗೆ ದೀರ್ಘಕಾಲ ಒಡ್ಡಿಕೊಳ್ಳುವುದು
  • ಜೀವನಶೈಲಿ: ಬೊಜ್ಜು, ಜಡ ಜೀವನ, ಆಲ್ಕೋಹಾಲ್‌ನಂಥ ಚಟಗಳು ಈ ರೋಗವನ್ನು ಹತ್ತಿರ ತರುತ್ತವೆ
Breast Cancer picture

ಲಕ್ಷಣಗಳೇನು?

ಕ್ಯಾನ್ಸರ್‌ನ ಮೂರನೇ ಹಂತದಲ್ಲಿ ಸ್ತನಗಳಲ್ಲಿ ಕಾಣುವಂಥ ಲಕ್ಷಣಗಳೇನು ಎಂಬುದನ್ನು ತಿಳಿಯೋಣ. ಸ್ತನಗಳಲ್ಲಿ ಅಥವಾ ಕಂಕುಳಲ್ಲಿ ಗಡ್ಡೆ ಕಾಣಿಸುತ್ತದೆ. ಸ್ತನಗಳು ಮೇಲ್ನೋಟಕ್ಕೆ ಬದಲಾದಂತೆ ಗೋಚರಿಸುತ್ತವೆ. ಸ್ತನಗಳಲ್ಲಿ ಸ್ರಾವ ಕಾಣಬಹುದು. ನೋವು, ಊತವೂ ಇದ್ದೀತು. ಚರ್ಮ ಕೆಂಪಾಗಿ ಹೆಕ್ಕಳಿಕೆ ಎದ್ದಂತೆ ಕಾಣಬಹುದು. ಇಂಥ ಯಾವುದೇ ಲಕ್ಷಣಗಳು ಕಂಡರೂ ತುರ್ತಾಗಿ ವೈದ್ಯರನ್ನು ಕಾಣಬೇಕು.

ತಪಾಸಣೆ

ಮೊದಲಿಗೆ ವೈದ್ಯರು ದೈಹಿಕ ಬದಲಾವಣೆಗಳನ್ನು ತಪಾಸಣೆ ಮಾಡುತ್ತಾರೆ. ಮೊಮೊಗ್ರಾಮ್‌, ಅಲ್ಟ್ರಾಸೌಂಡ್‌ಗಳ ಮೂಲಕ ಈ ಗಡ್ಡೆಗಳು ಮತ್ತು ಕೋಶಗಳನ್ನು ಪರಿಶೀಲಿಸಲಾಗುತ್ತದೆ. ಇವುಗಳ ಸಣ್ಣ ಭಾಗವನ್ನು ತೆಗೆದು ಬಯಾಪ್ಸಿ ಮಾಡಲಾಗುತ್ತದೆ. ದುಗ್ಧರಸ ಗ್ರಂಥಿಗಳಿಗೆ ಅಂಟಿದೆಯೇ ಎಂಬುದನ್ನು ಪರಿಶೀಲಿಸಲಾಗುತ್ತದೆ.

ಇದನ್ನೂ ಓದಿ: Hina Khan: ಬಿಗ್ ಬಾಸ್ ಸ್ಪರ್ಧಿ, ʻಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈʼ ಧಾರಾವಾಹಿ ಖ್ಯಾತಿಯ ನಟಿಗೆ ಸ್ತನ ಕ್ಯಾನ್ಸರ್!

ಚಿಕಿತ್ಸೆ

ಶಸ್ತ್ರಚಿಕಿತ್ಸೆಯ ಮೂಲಕ ಗಡ್ಡೆಗಳನ್ನು ತೆಗೆಯಲಾಗುತ್ತದೆ. ಕೆಲವೊಮ್ಮೆ ಸ್ತನಗಳನ್ನೇ ಸಂಪೂರ್ಣವಾಗಿ ತೆಗೆದು ಹಾಕುವುದು ಅನಿವಾರ್ಯವಾಗುತ್ತದೆ. ತೀವ್ರ ಶಕ್ತಿಯ ಕಿರಣಗಳ ಮೂಲಕ (ರೇಡಿಯೇಶನ್)‌ ಕ್ಯಾನ್ಸರ್‌ ಕೋಶಗಳನ್ನು ಸಾಯಿಸಲಾಗುತ್ತದೆ. ಇರುವ ಕೋಶಗಳನ್ನು ಸಾಯಿಸಿ, ಮುಂದೆ ಹರಡದಂತೆ ಮಾಡಲು ಕಿಮೊ ಸಹ ಅಗತ್ಯ. ಉಳಿದಂತೆ ಹಾರ್ಮೋನ್‌ ಥೆರಪಿ, ಇಮ್ಯುನೋಥೆರಪಿಯಂಥ ಚಿಕಿತ್ಸೆಗಳನ್ನು ವೈದ್ಯರು ನಿರ್ಧರಿಸುತ್ತಾರೆ.

Continue Reading
Advertisement
UGC NET Exam
ದೇಶ3 mins ago

UGC NET Exam: ರದ್ದಾಗಿದ್ದ ಯುಜಿಸಿ ನೆಟ್‌ ಪರೀಕ್ಷೆಗೆ ಹೊಸ ದಿನಾಂಕ ಘೋಷಣೆ; ಪರೀಕ್ಷೆಗೆ ಹೊಸ ವಿಧಾನ, ಇಲ್ಲಿದೆ ವಿವರ‌

Vodafone Idea
ದೇಶ17 mins ago

Vodafone Idea: ಜಿಯೋ, ಏರ್‌ಟೆಲ್‌ ಬೆನ್ನಲ್ಲೇ ವೋಡಾಫೋನ್‌ ಐಡಿಯಾ ಪ್ಲಾನ್‌ ಬೆಲೆ ಏರಿಕೆ; ಹೀಗಿದೆ ವಿವರ

T20 World Cup 2024
ಪ್ರಮುಖ ಸುದ್ದಿ35 mins ago

T20 World Cup 2024 : ಭಾರತ ತಂಡವನ್ನು ಟೀಕಿಸಿದ ಮೈಕೆಲ್​ ವಾನ್​ಗೆ ತಿರುಗೇಟು ಕೊಟ್ಟ ಗಂಗೂಲಿ

CM SIddaramaiah
ಪ್ರಮುಖ ಸುದ್ದಿ37 mins ago

Siddaramaiah: ಅಮಿತ್‌ ಶಾ-ಸಿದ್ದರಾಮಯ್ಯ ಭೇಟಿ; ರಾಜ್ಯದ 5 ನಗರಗಳಲ್ಲಿ ಸೇಫ್‌ ಸಿಟಿ ಯೋಜನೆ ಜಾರಿಗೆ ಒತ್ತಾಯ

Religious Freedom
ದೇಶ2 hours ago

Religious Freedom: ಧಾರ್ಮಿಕ ಸ್ವಾತಂತ್ರ್ಯದ ಕುರಿತು ಅಮೆರಿಕ ಹುಸಿ ಕಳವಳ; ಭಾರತ ತಿರುಗೇಟು

Virat Kohli
ಪ್ರಮುಖ ಸುದ್ದಿ2 hours ago

Virat Kohli : ಫಾರ್ಮ್​ ಕಳೆದುಕೊಂಡಿರುವ ವಿರಾಟ್​ ಕೊಹ್ಲಿಯ ಬೆಂಬಲಕ್ಕೆ ನಿಂತ ಗಂಗೂಲಿ

Application Invitation to Join Air Wing NCC July 09 is the last day for submission of application
ಕರ್ನಾಟಕ3 hours ago

Air Wing NCC: ಏರ್ ವಿಂಗ್ ಎನ್‌ಸಿಸಿ ಸೇರಲು ಅರ್ಜಿ ಆಹ್ವಾನ; ಜುಲೈ 9 ಕೊನೆಯ ದಿನ

Tulu language
ತಂತ್ರಜ್ಞಾನ3 hours ago

Tulu Translate Google: ಗೂಗಲ್ ಟ್ರಾನ್ಸ್‌ಲೇಟ್‌ನಲ್ಲಿ ತುಳು ಭಾಷೆ ಸೇರ್ಪಡೆ

India is a secular nation because Hindus are the majority says Union Minister Pralhad Joshi
ಕರ್ನಾಟಕ3 hours ago

Pralhad Joshi: ಹಿಂದೂಗಳು ಅಲ್ಪಸಂಖ್ಯಾತರಾದ ದಿನ ಭಾರತ ಜಾತ್ಯತೀತವಾಗಿ ಉಳಿಯದು; ಪ್ರಲ್ಹಾದ್‌ ಜೋಶಿ ಆತಂಕ

IND vs SA
ಪ್ರಮುಖ ಸುದ್ದಿ3 hours ago

IND vs SA: ದಕ್ಷಿಣ ಆಫ್ರಿಕಾದ ಬೌಲಿಂಗ್​ ಶಕ್ತಿ ಭಾರತದ ಬ್ಯಾಟಿಂಗ್​ಗೆ ಲೆಕ್ಕಕ್ಕೇ ಇಲ್ಲ; ಮಾಜಿ ಆಟಗಾರನ ಭವಿಷ್ಯ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ6 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ13 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು1 day ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

ಟ್ರೆಂಡಿಂಗ್‌