Vastu Tips: ಈ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಅಪಾಯ ಗ್ಯಾರಂಟಿ! - Vistara News

Latest

Vastu Tips: ಈ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಅಪಾಯ ಗ್ಯಾರಂಟಿ!

ವಾಸ್ತು ಶಾಸ್ತ್ರದಲ್ಲಿ ಶಕ್ತಿಗೆ ವಿಶೇಷ ಮಹತ್ವವಿದೆ. ವಾಸ್ತುವಿನಲ್ಲಿ (Vastu Tips) ಪ್ರತಿಯೊಂದಕ್ಕೂ ನಿರ್ದಿಷ್ಟ ದಿಕ್ಕನ್ನು ನಿಗದಿಪಡಿಸಲಾಗಿದೆ. ಮಲಗಲು ಸಹ ನಿಯಮಗಳನ್ನು ಮಾಡಲಾಗಿದೆ. ತಪ್ಪು ದಿಕ್ಕಿನಲ್ಲಿ ಮಲಗುವುದು ಮಾನಸಿಕ ಅಸ್ವಸ್ಥತೆ, ಒತ್ತಡ ಮತ್ತು ನಕಾರಾತ್ಮಕ ಶಕ್ತಿಗೆ ಕಾರಣವಾಗುತ್ತದೆ ಎನ್ನಲಾಗುತ್ತದೆ. ಹಾಗಾದರೆ ಸರಿಯಾದ ಮಲಗುವ ದಿಕ್ಕು ಯಾವುದಾಗಿರಬೇಕು ಗೊತ್ತೇ? ಈ ಲೇಖನ ಓದಿ.

VISTARANEWS.COM


on

Vastu Tips
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಪ್ರತಿಯೊಬ್ಬರ ಮನೆಯಲ್ಲೂ ಉತ್ತರ (north) ದಿಕ್ಕಿಗೆ ತಲೆ ಹಾಕಿ ಮಲಗಬಾರದು ಎಂದು ಹಿರಿಯರು ಹೇಳುವುದನ್ನು ಕೇಳಿರುತ್ತೇವೆ. ಇದರ ಹಿಂದೆ ಗಜಮುಖನಾದ ವಿನಾಯಕನ ಕಥೆಯೂ ಇದೆ. ಮಲಗುವ ದಿಕ್ಕು (direction of sleeping ) ಸರಿಯಾಗಿ ಇಲ್ಲದೇ ಹಲವು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ವಾಸ್ತು ಶಾಸ್ತ್ರದಲ್ಲೂ (Vastu Tips) ಮಲಗುವ ಸರಿಯಾದ ದಿಕ್ಕನ್ನು ಹೇಳಲಾಗಿದೆ. ಇದನ್ನು ಪಾಲಿಸದೇ ಇದ್ದರೆ ಏನಾಗುತ್ತದೆ ಎಂಬುದಕ್ಕೆ ವೈಜ್ಞಾನಿಕ ಕಾರಣಗಳು ಇವೆ.

ವಾಸ್ತು ಶಾಸ್ತ್ರದಲ್ಲಿ ಶಕ್ತಿಗೆ ವಿಶೇಷ ಮಹತ್ವವಿದೆ. ವಾಸ್ತುವಿನಲ್ಲಿ ಪ್ರತಿಯೊಂದಕ್ಕೂ ನಿರ್ದಿಷ್ಟ ದಿಕ್ಕನ್ನು ನಿಗದಿಪಡಿಸಲಾಗಿದೆ. ಮಲಗಲು ಸಹ ನಿಯಮಗಳನ್ನು ಮಾಡಲಾಗಿದೆ. ವಾಸ್ತು ಪ್ರಕಾರ ತಪ್ಪು ದಿಕ್ಕಿನಲ್ಲಿ ಮಲಗುವುದು ಮಾನಸಿಕ ಅಸ್ವಸ್ಥತೆ, ಒತ್ತಡ ಮತ್ತು ನಕಾರಾತ್ಮಕ ಶಕ್ತಿಗೆ ಕಾರಣವಾಗುತ್ತದೆ ಎನ್ನಲಾಗುತ್ತದೆ. ಹಾಗಾದರೆ ಸರಿಯಾದ ಮಲಗುವ ದಿಕ್ಕು ಯಾವುದಾಗಿರಬೇಕು? ಯಾವುದೇ ವ್ಯಕ್ತಿ ಆರೋಗ್ಯವಾಗಿರಲು ಉತ್ತಮ ನಿದ್ರೆ ಪಡೆಯುವುದು ಬಹಳ ಮುಖ್ಯ. ಸಂಪೂರ್ಣ ನಿದ್ದೆ ಮಾಡುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಉತ್ತಮವಾಗಿರುತ್ತದೆ.

ವಾಸ್ತು ಪ್ರಕಾರ ಸರಿಯಾದ ದಿಕ್ಕಿನಲ್ಲಿ ಮಲಗುವುದು ವಯಸ್ಸನ್ನು ಹೆಚ್ಚಿಸುತ್ತದೆ ಮತ್ತು ರೋಗವನ್ನು ಉಂಟುಮಾಡುವುದಿಲ್ಲ. ಆದರೆ ತಪ್ಪು ದಿಕ್ಕಿನಲ್ಲಿ ಮಲಗುವುದು ಮಾನಸಿಕ ಅಸ್ವಸ್ಥತೆ, ಒತ್ತಡ, ಸೋಮಾರಿತನ ಮತ್ತು ನಕಾರಾತ್ಮಕ ಶಕ್ತಿ ನಮ್ಮ ಸುತ್ತ ಸುತ್ತುವರಿಯುವಂತೆ ಮಾಡುತ್ತದೆ.

Vastu Tips


ಅಪ್ಪಿತಪ್ಪಿಯೂ ಈ ದಿಕ್ಕಿನಲ್ಲಿ ಮಲಗಬೇಡಿ

ವಾಸ್ತು ಪ್ರಕಾರ ಉತ್ತರ ದಿಕ್ಕಿಗೆ ತಲೆ ಇಟ್ಟು ಮಲಗಬಾರದು. ವಾಸ್ತುವಿನಲ್ಲಿ ಉತ್ತರ ದಿಕ್ಕನ್ನು ಮಲಗಲು ಅಶುಭವೆಂದು ಪರಿಗಣಿಸಲಾಗುತ್ತದೆ. ಈ ದಿಕ್ಕನ್ನು ನಕಾರಾತ್ಮಕ ಶಕ್ತಿಯ ಮೂಲ ಎನ್ನಲಾಗಿದೆ.

ಉತ್ತರ ದಿಕ್ಕಿಗೆ ಮಲಗುವುದರಿಂದ ವ್ಯಕ್ತಿಯು ಅನೇಕ ಪ್ರಮುಖ ಕಾಯಿಲೆಗಳನ್ನು ಎದುರಿಸುತ್ತಾನೆ ಮತ್ತು ನಿದ್ರೆಯಿಂದ ವಂಚಿತನಾಗಿರುತ್ತಾನೆ. ಉತ್ತರದ ಕಡೆಗೆ ತನ್ನ ತಲೆಯನ್ನು ಇಟ್ಟುಕೊಳ್ಳುವ ವ್ಯಕ್ತಿಯು ಖಂಡಿತವಾಗಿಯೂ ಸಾವಿನ ದೇವರನ್ನು ಆಹ್ವಾನಿಸುತ್ತಾನೆ. ಮೃತದೇಹದ ತಲೆಯನ್ನು ಮಾತ್ರ ಉತ್ತರ ದಿಕ್ಕಿಗೆ ಇಡಲಾಗುತ್ತದೆ.

ಮಲಗಲು ಸರಿಯಾದ ದಿಕ್ಕು

ವಾಸ್ತು ಪ್ರಕಾರ ದಕ್ಷಿಣ ದಿಕ್ಕಿಗೆ ತಲೆ ಇಟ್ಟು ಮಲಗುವುದನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಉತ್ತಮ ನಿದ್ರೆಗೆ ಈ ದಿಕ್ಕನ್ನು ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಇದು ಸಂತೋಷ ಮತ್ತು ಸಮೃದ್ಧಿ, ಉತ್ತಮ ಆರೋಗ್ಯ, ಅದೃಷ್ಟ, ಯಶಸ್ಸು ಮತ್ತು ಸಂಪತ್ತನ್ನು ಹೆಚ್ಚಿಸುತ್ತದೆ.

ವ್ಯಾಪಾರ, ರಾಜಕೀಯ ಅಥವಾ ವೃತ್ತಿಪರ ಕ್ಷೇತ್ರದಲ್ಲಿರುವ ವ್ಯಕ್ತಿಯು ದಕ್ಷಿಣಕ್ಕೆ ತಲೆಯಿಟ್ಟು ಮಲಗಬೇಕು. ಇದು ಅವರ ದಕ್ಷತೆ ಮತ್ತು ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯವನ್ನು ಸುಧಾರಿಸುತ್ತದೆ ಮತ್ತು ಮನಸ್ಸಿನ ಶಾಂತಿಯನ್ನು ನೀಡುತ್ತದೆ ಎಂದು ನಂಬಲಾಗಿದೆ. ಈ ದಿಕ್ಕನ್ನು ಧನಾತ್ಮಕ ಶಕ್ತಿಯ ಮೂಲ ಎಂದು ಕರೆಯಲಾಗುತ್ತದೆ.

Vastu Tips


ಇದನ್ನೂ ಓದಿ: Vastu Tips: ವಾಸ್ತು ಪ್ರಕಾರ ಮಕ್ಕಳ ಅಧ್ಯಯನ ಕೊಠಡಿ ಹೀಗಿರಬೇಕು

ಇನ್ನು ಪೂರ್ವಕ್ಕೆ ತಲೆಯಿಟ್ಟು ಮಲಗುವುದರಿಂದ ಜ್ಞಾಪಕ ಶಕ್ತಿ, ಏಕಾಗ್ರತೆ ಮತ್ತು ಆಧ್ಯಾತ್ಮಿಕತೆಯತ್ತ ಒಲವು ಹೆಚ್ಚಾಗುತ್ತದೆ. ವಾಸ್ತು ಪ್ರಕಾರ, ಈ ದಿಕ್ಕಿಗೆ ತಲೆಯಿಟ್ಟು ಮಲಗುವುದರಿಂದ ಶಿಕ್ಷಣ ಮತ್ತು ವೃತ್ತಿಗೆ ಹೊಸ ಅವಕಾಶಗಳು ಲಭಿಸುತ್ತವೆ. ಪ್ರತಿಯೊಬ್ಬ ವ್ಯಕ್ತಿಯು ಆರೋಗ್ಯಕರ ನಿದ್ರೆ ಪಡೆಯಲು ಪೂರ್ವ ದಿಕ್ಕಿಗೆ ಉತ್ತಮ ದಿಕ್ಕು ಎನ್ನುತ್ತಾರೆ ವಾಸ್ತು ತಜ್ಞರು.

ಈ ದಿಕ್ಕು ದೇಹಕ್ಕೆ ಎಲ್ಲಾ ರೀತಿಯ ಧನಾತ್ಮಕ ಶಕ್ತಿಯನ್ನು ನೀಡುತ್ತದೆ. ಒತ್ತಡ ಅಥವಾ ಆತಂಕದಿಂದ ಬಳಲುತ್ತಿರುವ ವ್ಯಕ್ತಿಯು ಪಶ್ಚಿಮಕ್ಕೆ ತಲೆಯಿಟ್ಟು ಮಲಗಬೇಕು. ಇದರಿಂದ ಮನಸ್ಸಿಗೆ ಶಾಂತಿ ಸಿಗುತ್ತದೆ ಎಂದು ವಾಸ್ತು ಶಾಸ್ತ್ರ ಹೇಳುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

VISTARANEWS.COM


on

ಪಂಚರಾಜ್ಯ ಚುನಾವಣೆಯ ಫಲಿತಾಂಶದ ಕುರಿತ ಎಕ್ಸಿಟ್ ಪೋಲ್‌ಗಳಿಗಿಂತ ಉತ್ತಮ ಫಲಿತಾಂಶ ನಿರೀಕ್ಷೆಯಿದೆ ತಮಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಕೆಲವು ಪ್ರದೇಶಗಳಲ್ಲಿ ಗೊಂದಲದ ವರದಿಗಳು ಬಂದಿವೆ ಎಂದಿದ್ದಾರೆ, ತಮಿಳುನಾಡು ಮತ್ತು ಕೇರಳದಲ್ಲಿ ನಮ್ಮ ಮೈತ್ರಿಕೂಟ ಗೆಲುವು ಸಾಧಿಸುತ್ತದೆ ಎಂದ ಅವರು ಅಸ್ಸಾಂ ನಲ್ಲಿ ಎಕ್ಸಿಟ್ ಪೋಲ್‌ ರಿಸಲ್ಟ್‌ಗಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪಶ್ಚಿಮ ಬಂಗಾಳದ ರಾಜಕೀಯ ಪರಿಸ್ಥಿತಿಯ ಬಗ್ಗೆ ಅವರು, ತೃಣಮೂಲ ಕಾಂಗ್ರೆಸ್ ಮುನ್ನಡೆ ಸಾಧಿಸುವ ಸಾಧ್ಯತೆ ಇದೆ ಎಂದು ಹೇಳಿದರು. ಪೂರ್ಣ ಫಲಿತಾಂಶ ಬಂದ ಬಳಿಕ ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಬೆಂಬಲ ನೀಡುವ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

Continue Reading

Latest

ರಾಜ್ಯದಲ್ಲಿ ನಾಯಕತ್ವ ಗೊಂದಲ: “ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ” – ಖರ್ಗೆ ಸ್ಪಷ್ಟನೆ

VISTARANEWS.COM


on

ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳುವ ಮೂಲಕ ನಾಯಕತ್ವ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಕಲಬುರಗಿಯಲ್ಲಿ ಇಂದು ಮಾತನಾಡಿದ ಅವರು ಈಗಾಗಲೇ ರಾಜ್ಯದಲ್ಲಿ ಸಿಎಂ ಇದ್ದಾರೆ. ಹೀಗಾಗಿ ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. ಭವಿಷ್ಯದಲ್ಲಿ ಅಂಥ ಪರಿಸ್ಥಿತಿ ಬಂದರೆ ನಾವು ಎಲ್ಲರೂ ಕೂಡಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಸಿಎಂ ಸ್ಥಾನಕ್ಕೆ ಸಂಬಂಧಿಸಿದಂತೆ ವಿವಿಧ ಅಭಿಪ್ರಾಯಗಳು ವ್ಯಕ್ತವಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾರು ಏನು ಹೇಳುತ್ತಾರೆ ಎನ್ನುವುದಕ್ಕಿಂತ ಪಕ್ಷದ ಐಡಿಯಾಲಜಿ ಮತ್ತು ಹಲವು ವರ್ಷಗಳ ಪರಿಶ್ರಮ ಮುಖ್ಯ ಎಂದು ಹೇಳಿಕೆ ನೀಡಿದ್ದಾರೆ. ಪಕ್ಷದ ಮಹತ್ವದ ನಿರ್ಧಾರಗಳನ್ನು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರೊಂದಿಗೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.

Continue Reading

Latest

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

VISTARANEWS.COM


on

ಬೆಂಗಳೂರು ನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇಂದು (ಏಪ್ರಿಲ್ 30) ಹಾಗೂ ನಾಳೆ (ಮೇ 1) ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Continue Reading

Latest

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

VISTARANEWS.COM


on

ಬೆಂಗಳೂರು: ಇಂದು ಸಂಜೆ ನಗರದಲ್ಲಿ ಸುರಿದ ಭಾರಿ ಮಳೆಗೆ ಶಿವಾಜಿನಗರ ಬಸ್‌ ನಿಲ್ದಾಣದ ಸಮೀಪವಿರುವ ಬೌರಿಂಗ್‌ ಆಸ್ಪತ್ರೆಯ ಕಾಂಪೌಂಡ್‌ ಗೋಡೆ ಕುಸಿದು 7 ಜನ ಸಾವನ್ನಪ್ಪಿದ್ದಾರೆ. ಮೃತರು ಬೀದಿಬದಿ ವ್ಯಾಪಾರಿಗಳು ಎಂದು ತಿಳಿದುಬಂದಿದೆ. 11 ಜನ ಗಾಯಾಳುಗಳನ್ನು ಆಸ್ಪತ್ರೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಅವಶೇಷಗಳಡಿ ಮತ್ತಷ್ಟು ಜನ ಸಿಲುಕಿರುವ ಶಂಕೆಯಿದ್ದು, ರಕ್ಷಣಾಕಾರ್ಯ ಮುಂದುವರೆಸಲಾಗಿದೆ. ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Continue Reading
Advertisement
Latest4 minutes ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

Latest11 minutes ago

ರಾಜ್ಯದಲ್ಲಿ ನಾಯಕತ್ವ ಗೊಂದಲ: “ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ” – ಖರ್ಗೆ ಸ್ಪಷ್ಟನೆ

Latest1 hour ago

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

Latest18 hours ago

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

Latest19 hours ago

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ

Latest19 hours ago

ಜಪಾನ್‌ಗೆ ಲಗ್ಗೆ ಇಡಲು ಸಜ್ಜಾದ ʼಧುರಂಧರ್’

bigbreaking19 hours ago

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಾ ಮೇ ಕ್ಲೈಮ್ಯಾಕ್ಸ್‌?

Latest21 hours ago

ಡಾಲಿ ಧನಂಜಯ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ಸ್ಯಾಂಡಲ್‌ವುಡ್ ಸ್ಟಾರ್ ದಂಪತಿ!

Latest22 hours ago

ಶಿಸ್ತು ಮರೆತರಾ ರಿಯಾನ್ ಪರಾಗ್? ಕಾನೂನು ಸಂಕಷ್ಟಕ್ಕೆ ಸಿಲುಕುತ್ತಾರಾ ರಾಜಸ್ಥಾನ ರಾಯಲ್ಸ್ ಆಟಗಾರ?

Latest23 hours ago

ಮತಯಂತ್ರದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌? ಚುನಾವಣಾ ಅಕ್ರಮ ಆರೋಪಿಸಿ ಕೇಸರಿ ಪಡೆ ಆಕ್ರೋಶ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌