Viral Video: ಬಸ್‌ ಡ್ರೈವರ್‌ನ ರೀಲ್ಸ್‌ ಕ್ರೇಜ್‌ಗೆ 2 ಎತ್ತುಗಳು ಬಲಿ; ರೈತನ ಸ್ಥಿತಿ ಗಂಭೀರ - Vistara News

Latest

Viral Video: ಬಸ್‌ ಡ್ರೈವರ್‌ನ ರೀಲ್ಸ್‌ ಕ್ರೇಜ್‌ಗೆ 2 ಎತ್ತುಗಳು ಬಲಿ; ರೈತನ ಸ್ಥಿತಿ ಗಂಭೀರ

Viral Video: ಪ್ರಯಾಣಿಕರನ್ನು ಸುರಕ್ಷಿತವಾಗಿ ತಲುಪಿಸುವ ಜವಾಬ್ದಾರಿ ಇರುವ ಬಸ್ ಡ್ರೈವರ್‌ಗಳೂ ರೀಲ್ಸ್ ಕ್ರೇಜ್‌ಗೆ ಒಳಗಾಗಿರುವುದು ಆತಂಕ ಮೂಡಿಸಿದೆ. ಬಸ್ ಡ್ರೈವ್ ಮಾಡುತ್ತಾ ರೀಲ್ಸ್‌ನ ಗುಂಗಿನೊಳಗೆ ಬಿದ್ದ ಡ್ರೈವರ್‌ನೊಬ್ಬ ಮಾಡಿದ ಅವಾಂತರದಿಂದ ಒಂದು ಕುಟುಂಬವೇ ಸಂಕಷ್ಟಕ್ಕೆ ಸಿಲುಕಿದೆ. ಜೀವನ ನಡೆಸುವುದಕ್ಕೆ ಆಧಾರವಾಗಿದ್ದ ಎರಡು ಎತ್ತುಗಳನ್ನು ರೈತ ಕಳೆದುಕೊಂಡಿದ್ದಾನೆ. ಅಪಘಾತದಿಂದ ರೈತನ ಸ್ಥಿತಿ ಕೂಡ ಗಂಭೀರವಾಗಿದೆ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹುಬ್ಬಳ್ಳಿ: ವಾಹನಗಳನ್ನು ವೇಗವಾಗಿ ಚಲಾಯಿಸುವುದರಿಂದ ಎಷ್ಟೊಂದು ಅಪಘಾತದ ಘಟನೆಗಳು ನಡೆದು ಅನೇಕ ಸಾವು ನೋವುಗಳಾದರೂ ಕೂಡ ಚಾಲಕರಿಗೆ ಇನ್ನೂ ಈ ಬಗ್ಗೆ ಅರಿವು ಮೂಡಿಲ್ಲ. ಇದೀಗ ಹುಬ್ಬಳ್ಳಿಯಲ್ಲಿ ಎತ್ತಿನ ಗಾಡಿಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎರಡು ಎತ್ತುಗಳು ಸ್ಥಳದಲ್ಲೇ ಮೃತಪಟ್ಟಿದೆ. ಅಲ್ಲದೇ ಎತ್ತಿನ ಗಾಡಿಯಯಲ್ಲಿದ್ದ ರೈತ ಕೂಡ ಗಂಭೀರವಾಗಿ ಗಾಯಗೊಂಡಿದ್ದಾನೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ವಿಡಿಯೊದಲ್ಲಿ, ಸಹಾಯಕ ರೀಲ್ ತಯಾರಿಸುವಾಗ ಬಸ್ ಚಾಲಕ ತನ್ನ ಸೀಟ್‌ನಲ್ಲಿ ಕುಳಿತು ಡ್ರೈವ್ ಮಾಡುತ್ತಿರುವುದನ್ನು ಕಾಣಬಹುದು. ಕೆಲವು ಕ್ಷಣಗಳ ನಂತರ, ಬಸ್ ಮುಂದೆ ಹೋಗುತ್ತಿದ್ದ ಎತ್ತಿನ ಗಾಡಿಗೆ ಹಿಂದಿನಿಂದ ಡಿಕ್ಕಿ ಹೊಡೆಯುವುದನ್ನು ವಿಡಿಯೊ ತೋರಿಸುತ್ತದೆ. ವರದಿ ಪ್ರಕಾರ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಬಾಗಲಕೋಟೆ ಕಡೆಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಎತ್ತುಗಳು ಕೆಳಗೆ ಬಿದ್ದು ರಕ್ತ ಸೋರಿ, ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿವೆ. ಎತ್ತಿನ ಗಾಡಿಯಲ್ಲಿದ್ದ ರೈತ ತೀವ್ರವಾಗಿ ಗಾಯಗೊಂಡಿದ್ದು, ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ರೈತನ ಸ್ಥಿತಿ ಗಂಭೀರವಾಗಿದೆ ಎಂಬುದಾಗಿ ತಿಳಿದು ಬಂದಿದೆ. ಈ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಗಾಯಗೊಂಡ ರೈತ ಮಂಜುನಾಥ್ ಆರ್. ವಗ್ಗೇನವರ್ (40) ಎಂಬುದಾಗಿ ತಿಳಿದು ಬಂದಿದೆ. ಮಂಗಳವಾರ ರಾತ್ರಿ ಮಂಜುನಾಥ್ ಕೆರೆಸೂರು ಗ್ರಾಮದ ತನ್ನ ಕೃಷಿ ಭೂಮಿಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಎತ್ತಿನ ಗಾಡಿಗೆ ಡಿಕ್ಕಿ ಹೊಡೆದಾಗ ಬಸ್ ಚಾಲಕ ರೀಲ್ ತಯಾರಿಸುತ್ತಿದ್ದ. ತಂಬಾಕು ತಿನ್ನುತ್ತಿದ್ದ. ಹಾಗಾಗಿ ಚಾಲಕನಿಗೆ ತನ್ನ ಮುಂದೆ ಇದ್ದ ಗಾಡಿಯನ್ನು ನೋಡಲು ಸಾಧ್ಯವಾಗಲಿಲ್ಲ ಎಂದು ಕೆಲವು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ.

ಅಲ್ಲದೇ ಮಂಜುನಾಥ್ ಒಬ್ಬ ಬಡ ರೈತನಾಗಿದ್ದು, ಎರಡು ಎಕರೆ ಭೂಮಿಯಲ್ಲಿ ಯಾವುದೇ ಲಾಭಾಂಶ ಸಿಗುತ್ತಿರಲಿಲ್ಲ ಎಂದು ಸಂತ್ರಸ್ತ ರೈತನ ಸ್ನೇಹಿತರು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಇತ್ತೀಚೆಗೆ, ಮಂಜುನಾಥ್ ಸಾಲ ಪಡೆದು ಎರಡು ಎತ್ತುಗಳನ್ನು ಖರೀದಿಸಿ ಅದನ್ನು ಇತರ ಹೊಲಗಳಲ್ಲಿ ಉಳುಮೆ ಮಾಡಲು ಬಳಸುತ್ತಿದ್ದರು ಎಂಬುದಾಗಿ ತಿಳಿದು ಬಂದಿದೆ.

ಇದನ್ನೂ ಓದಿ: ಪುಟ್ಟ ಮಗುವನ್ನು ಮುಂದೆ ಕೂರಿಸಿಕೊಂಡು ಬೈಕ್‌ ಸ್ಟಂಟ್‌! ಒದ್ದು ಒಳಗೆ ಹಾಕಿ ಅಂತಿದ್ದಾರೆ ನೆಟ್ಟಿಗರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Israel Palestine War: 50 ಕಿ.ಮೀ ದೂರದಿಂದಲೇ ಪ್ಯಾಲೆಸ್ತಿನ್‌ ಕಮಾಂಡರ್‌ನನ್ನು ಕೊಂದ ಇಸ್ರೇಲ್‌! ವಿಡಿಯೊ ನೋಡಿ

Israel Palestine War: ಜುಲೈ 18ರಂದು ಐಡಿಎಫ್ (ಇಸ್ರೇಲ್‌ ಡಿಫೇನ್ಸ್‌ ಪೋರ್ಸ್‌) ಪ್ಯಾಲೆಸ್ತಿನ್‌ ಉಗ್ರ ಸಂಘಟನೆಯ ಕಮಾಂಡರ್‌ನನ್ನು ಗುರಿಯಾಗಿಸಿಕೊಂಡು ಲೆಬನಾನ್‌ ಮೇಲೆ 50 ಕಿ.ಮೀ ದೂರದಿಂದಲೇ ದಾಳಿ ನಡೆಸಿದೆ. ಈತ ಗಾಜಾ ನಗರದಲ್ಲಿರುವ ಇಸ್ರೇಲ್ ವಿರೋಧಿ ಪಡೆಗಳ ಮುಖ್ಯಸ್ಥನಾಗಿದ್ದ. ವೈರಲ್ ಆಗಿರುವ ವಿಡಿಯೋದಲ್ಲಿ ಇಸ್ರೇಲ್ ಸೇನೆಯು ಅನಾಸ್ ಕಾರಿನ ಮೇಲೆ ದಾಳಿ ನಡೆಸಿದ ದೃಶ್ಯವನ್ನು ತೋರಿಸಿದೆ.

VISTARANEWS.COM


on

By

Israel Palestine War
Koo

ಲೆಬನಾನ್‌ನಲ್ಲಿ ಇಸ್ಲಾಮಿಕ್ ಜಿಹಾದ್‌ನ ನೌಕಾ ಪಡೆಗಳ ಕಮಾಂಡರ್‌ನ ( Islamic Jihad’s Naval Forces commander) ಕಾರಿನ ಮೇಲೆ ಇಸ್ರೇಲ್ ಸೇನೆ ದಾಳಿ (Israel Palestine War) ನಡೆಸಿದ್ದ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆಯಲ್ಲಿ ಪ್ಯಾಲೇಸ್ಟಿನಿಯನ್ ಇಸ್ಲಾಮಿಕ್ ಜಿಹಾದ್ ನೌಕಾ ಪಡೆಗಳ ಕಮಾಂಡರ್ ಅನಾಸ್ ಮುರಾದ್ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಜುಲೈ 18ರಂದು ಐಡಿಎಫ್ (ಇಸ್ರೇಲ್‌ ಡಿಫೇನ್ಸ್‌ ಪೋರ್ಸ್‌) ಉಗ್ರ ಸಂಘಟನೆಯ ಕಮಾಂಡರ್‌ನನ್ನು ಗುರಿಯಾಗಿಸಿಕೊಂಡು ಲೆಬನಾನ್‌ ಮೇಲೆ 50 ಕಿ.ಮೀ ದೂರದಿಂದಲೇ ದಾಳಿ ನಡೆಸಿತ್ತು.

Israel Palestine War


ಅನಾಸ್ ಮುರಾದ್ ಗಾಜಾ ನಗರದಲ್ಲಿ ಇಸ್ರೇಲ್ ವಿರೋಧಿ ಉಗ್ರ ಸಂಘಟನೆಯ ಮುಖ್ಯಸ್ಥನಾಗಿದ್ದ. ವೈರಲ್ ಆಗಿರುವ ವಿಡಿಯೋದಲ್ಲಿ ಇಸ್ರೇಲ್ ಸೇನೆಯು ಅನಾಸ್ ಕಾರಿನ ಮೇಲೆ ದಾಳಿ ನಡೆಸಿದ ದೃಶ್ಯವನ್ನು ತೋರಿಸಿದೆ.

Israel Palestine War


ಇನ್ನೊಂದು ದಾಳಿಯಲ್ಲಿ ಭಯೋತ್ಪಾದಕ ಅಹ್ಮದ್ ಅಲ್-ಮಸ್ರಿಯನ್ನು ಇಸ್ರೇಲ್‌ ಸೇನೆ ಹೊಡೆದು ಉರುಳಿಸಿದೆ. ಅಕ್ಟೋಬರ್ 7ರಂದು ಇಸ್ರೇಲ್‌ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ಇಸ್ಲಾಮಿಕ್ ಜಿಹಾದ್ ಭಯೋತ್ಪಾದಕ ಸಂಘಟನೆಯ ಮುಖಂಡನಾಗಿದ್ದ ಅಲ್‌-ಮಸ್ರಿ ಪ್ರಮುಖ ಪಾತ್ರ ವಹಿಸಿದ್ದ.

ಭಯೋತ್ಪಾದಕರು ಇಸ್ರೇಲ್‌ನೊಳಗೆ ನುಗ್ಗಿ ಹಲವಾರು ರಾಕೆಟ್‌ ದಾಳಿಗಳನ್ನು ನಡೆಸಿದ್ದರು. ಆ ಬಳಿಕ ಪ್ಯಾಲೆಸ್ತೀನ್‌ ಉಗ್ರ ಸಂಘಟನೆ ಹಮಾಸ್ ಮೇಲೆ ಪ್ರತಿ ದಾಳಿಯನ್ನು ಹೆಚ್ಚಿಸಲಾಗಿದೆ. ಕೇಂದ್ರ ಗಾಜಾದ ಮೇಲೆ ಗುರುವಾರ ನಡೆದ ಇಸ್ರೇಲ್ ದಾಳಿಯಲ್ಲಿ 12ಕ್ಕೂ ಹೆಚ್ಚು ಪ್ಯಾಲೆಸ್ತಿನಿಯನ್ನರನ್ನು ಕೊಲ್ಲಲಾಗಿದೆ. ಅನೇಕರು ಗಾಯಗೊಂಡಿದ್ದು, ಚಿಕಿತ್ಸೆಯ ಕೊರತೆಯಿಂದ ಸಾವುನೋವುಗಳು ಹೆಚ್ಚಾಗಲಿದೆ ಎನ್ನಲಾಗಿದೆ.

ಇದನ್ನೂ ಓದಿ: Oil Tanker Capsizes: ತೈಲ ತುಂಬಿದ್ದ ಹಡಗು ಮುಳುಗಡೆ; 13 ಭಾರತೀಯರು ಜಲಸಮಾಧಿ

Continue Reading

ಕ್ರೈಂ

Sexual Assualt Case: ಅಶ್ಲೀಲ ವಿಡಿಯೊ ವೀಕ್ಷಿಸಿ ಉದ್ರೇಕಗೊಂಡ ಮೂವರು ಶಾಲಾ ಬಾಲಕರಿಂದ ಬಾಲಕಿಯ ಅತ್ಯಾಚಾರ, ಕೊಲೆ

ಫೋನ್‌ನಲ್ಲಿ ಅಶ್ಲೀಲ ವಿಡಿಯೊ ನೋಡಿ ಬಾಲಕಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದ (Sexual Assualt Case) ಆರೋಪಿಗಳು ಮತ್ತು ಅವರ ಇಬ್ಬರು ಸಂಬಂಧಿಕರನ್ನು ಪೊಲೀಸರು ಬಂಧಿಸಿದ್ದಾರೆ. ಉದ್ಯಾನವನದ ಬಳಿ ಆಟವಾಡುತ್ತಿದ್ದ ಬಾಲಕಿಯನ್ನು ಬಾಲಕರು ಪುಸಲಾಯಿಸಿ ಕರೆದುಕೊಂಡು ಹೋಗಿದ್ದರು. ಈ ಭೀಭತ್ಸ ಘಟನೆ ನಾಗರಿಕ ಸಮಾಜವನ್ನು ಬೆಚ್ಚಿ ಬೀಳಿಸಿದೆ.

VISTARANEWS.COM


on

By

Sexual Assault case
Koo

ಮೊಬೈಲ್ ಫೋನ್‌ನಲ್ಲಿ ಅಶ್ಲೀಲ ವಿಡಿಯೋಗಳನ್ನು (porn video) ವೀಕ್ಷಿಸಿ ಉದ್ರೇಕಗೊಂಡ ಮೂವರು ಬಾಲಕರು ಎಂಟು ವರ್ಷದ ಬಾಲಕಿ ಮೇಲೆ ಅತ್ಯಾಚಾರ (Sexual Assualt Case) ನಡೆಸಿ ಕೊಲೆ (rape and murder) ಮಾಡಿರುವ ಸಂಗತಿ ಬೆಳಕಿಗೆ ಬಂದಿದೆ. ಮೂವರು ಬಾಲಕರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದರು. ಆಂಧ್ರಪ್ರದೇಶದ (Andhra school boys) ನಂದ್ಯಾಲ್ ಜಿಲ್ಲೆಯಲ್ಲಿ ಜುಲೈ 7ರಂದು ದೇವಸ್ಥಾನವೊಂದರಲ್ಲಿ 12 ವರ್ಷದ ಇಬ್ಬರು ಮತ್ತು 13 ವರ್ಷದ ಒಬ್ಬ ಸೇರಿ ಮೂವರು ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದರು. ಬಳಿಕ ಕೊಲೆ ಮಾಡಿದ್ದರು.

3ನೇ ತರಗತಿ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗಳನ್ನು ಜುಲೈ 10ರಂದು ಬಂಧಿಸಲಾಗಿತ್ತು. ವಿಚಾರಣೆ ವೇಳೆ ಮೂವರೂ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

ಆರೋಪಿಗಳಲ್ಲಿ ಇಬ್ಬರು ಆರನೇ ತರಗತಿಯಲ್ಲಿ ಓದುತ್ತಿದ್ದು, ಒಬ್ಬ 7ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ಅತ್ಯಾಚಾರದ ಬಳಿಕ ಬಾಲಕಿ ಪೋಷಕರಿಗೆ ದೂರು ನೀಡಬಹುದು ಎಂಬ ಭಯದಿಂದ ಮೂವರು ಅಪ್ರಾಪ್ತರನ್ನು ಕತ್ತು ಹಿಸುಕಿ ಕೊಂದಿದ್ದಾರೆ. ಆರೋಪಿಯ ತಂದೆ ಮತ್ತು ಚಿಕ್ಕಪ್ಪ ಸೇರಿ ಬಾಲಕಿಯ ಶವವನ್ನು ಕಾಲುವೆಗೆ ಎಸೆದಿದ್ದಾರೆ ಎಂದು ನಂದ್ಯಾಲ್ ಎಸ್ಪಿ ಅಧಿರಾಜ್ ಸಿಂಗ್ ರಾಣಾ ತಿಳಿಸಿದ್ದಾರೆ.

ಆರೋಪಿಗಳಲ್ಲಿ ಒಬ್ಬನು ಕೂಡಲೇ ತನ್ನ ಸಂಬಂಧಿಕರಿಗೆ ಕರೆ ಮಾಡಿ ಅಪರಾಧದ ಬಗ್ಗೆ ತಿಳಿಸಿದನು. ಮಕ್ಕಳ ಮೇಲೆ ಕಾನೂನು ಕ್ರಮ ಜರುಗಿಸಬಹುದೆಂಬ ಭಯದಿಂದ ಆತನ ತಂದೆ ಮತ್ತು ಚಿಕ್ಕಪ್ಪ ಸ್ಥಳಕ್ಕೆ ಧಾವಿಸಿ ಬಾಲಕಿಯ ಶವವನ್ನು ದ್ವಿಚಕ್ರ ವಾಹನದಲ್ಲಿ ಸಾಗಿಸಿ ಕಲ್ಲಿಗೆ ಕಟ್ಟಿ ಕೃಷ್ಣಾ ನದಿಗೆ ಎಸೆದಿದ್ದಾರೆ. ಅಪ್ರಾಪ್ತರು ಮತ್ತು ಸಂಬಂಧಿಕರನ್ನು ಬಂಧಿಸಲಾಗಿದೆ ಎಂದು ರಾಣಾ ತಿಳಿಸಿದ್ದಾರೆ.

ಮುಚ್ಚುಮರಿ ಉದ್ಯಾನವನದ ಬಳಿ ಆಟವಾಡುತ್ತಿದ್ದ ಬಾಲಕಿಗೆ ಈ ಬಾಲಕರ ಪರಿಚಯವಿತ್ತು. ಹೀಗಾಗಿ ಅವರು ತಮ್ಮೊಂದಿಗೆ ಆಟವಾಡಲು ಆಕೆಯ ಮನವೊಲಿಸಿ ಕರೆದುಕೊಂಡು ಹೋಗಿದ್ದರು. ಅನಂತರ ಅವರು ಆಕೆಯ ಬಾಯಿಯನ್ನು ಬಿಗಿದು ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದರು.

ಇದನ್ನೂ ಓದಿ: Sexual Abuse: ಶಾಲಾ ಬಾಲಕಿಯನ್ನು ಕ್ರೂರವಾಗಿ ಥಳಿಸಿ ಗುಪ್ತಾಂಗಕ್ಕೆ ಕೋಲು ತುರುಕಿದ ಮಹಿಳೆ!

ಬಾಲಕಿಯ ಶವಕ್ಕಾಗಿ ಶೋಧ

ಬಾಲಕಿಯ ಮೃತ ದೇಹ ಇನ್ನೂ ಪತ್ತೆಯಾಗಿಲ್ಲ. ಆದರೆ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ. ಆರು ಪೊಲೀಸ್ ತಂಡಗಳು, ಪರಿಣತ ಈಜುಗಾರರು, ಶ್ವಾನದಳ, ಡ್ರೋನ್ ಕೆಮರಾ, ತಾಂತ್ರಿಕ ತಂಡಗಳು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡಗಳು ಮೃತದೇಹಕ್ಕಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿವೆ ಎಂದು ರಾಣಾ ತಿಳಿಸಿದ್ದಾರೆ.

ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಅಪ್ರಾಪ್ತ ಬಾಲಕಿಯ ಕುಟುಂಬಕ್ಕೆ 10 ಲಕ್ಷ ರೂಪಾಯಿ ಆರ್ಥಿಕ ನೆರವು ಮಂಜೂರು ಮಾಡಿದ್ದಾರೆ.

Continue Reading

ಕ್ರಿಕೆಟ್

International Cricket Council : ಟಿ20 ವಿಶ್ವಕಪ್ ಆಯೋಜನೆಯಲ್ಲಿ ಐಸಿಸಿಗೆ 167 ಕೋಟಿ ರೂಪಾಯಿ ನಷ್ಟ

ಅಮೆರಿಕದಲ್ಲಿ ಮೊದಲ ಬಾರಿಗೆ ಟಿ20 ವಿಶ್ವಕಪ್ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು ಅತಿ ಹೆಚ್ಚು ಪಂದ್ಯಗಳು ನ್ಯೂಯಾರ್ಕ್ ನಲ್ಲಿ ನಡೆದಿದ್ದು, ಒಟ್ಟು 8 ಪಂದ್ಯಗಳು, ಫ್ಲೋರಿಡಾ ಮತ್ತು ಟೆಕ್ಸಾಸ್ ತಲಾ 4 ಪಂದ್ಯಗಳು ನಡೆದಿವೆ. ಇದರಲ್ಲಿ ಜೂನ್ 9 ರಂದು ನ್ಯೂಯಾರ್ಕ್ ನಲ್ಲಿ ಆಯೋಜಿಸಿದ್ದ ಭಾರತ ಮತ್ತು ಪಾಕಿಸ್ತಾನದ ಪಂದ್ಯದ ಬಳಿಕ 20 ಮಿಲಿಯನ್ ಡಾಲರ್ ನಷ್ಟವಾಗಿದೆ ಎನ್ನಲಾಗಿದೆ. ಈ ಕುರಿತು ಕೊಲಂಬೊದಲ್ಲಿ ಜುಲೈ 19 ರಿಂದ ಪ್ರಾರಂಭವಾಗುವ ಇಂಟರ್ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ ನ (International Cricket Council) ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಚರ್ಚೆ ನಡೆಯಲಿದೆ.

VISTARANEWS.COM


on

By

International Cricket Council
Koo

ಬೆಂಗಳೂರು : ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕದಲ್ಲಿ (United States America) 2024ರ ಟಿ20 ವಿಶ್ವಕಪ್ ನ (T20 World cup 2024) ಹಲವಾರು ಪಂದ್ಯಗಳನ್ನು ಆಯೋಜಿಸಿದ ಕಾರಣ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (International Cricket Council) 167 ಕೋಟಿ ರೂ. ನಷ್ಟ ಅನುಭವಿಸಿದೆ. ಜೂನ್ 9 ರಂದು ನ್ಯೂಯಾರ್ಕ್​ನಲ್ಲಿ (New York) ಆಯೋಜಿಸಿದ್ದ ಭಾರತ ಮತ್ತು ಪಾಕಿಸ್ತಾನದ (INDvsPAK) ಪಂದ್ಯದ ಬಳಿಕ 20 ಮಿಲಿಯನ್ ಡಾಲರ್ ನಷ್ಟವಾಗಿದೆ ಎನ್ನಲಾಗಿದೆ.

ಯುಎಸ್ಎ ಒಟ್ಟು 16 ವಿಶ್ವಕಪ್ ಪಂದ್ಯಗಳಿಗೆ ಆತಿಥ್ಯ ವಹಿಸಿದೆ ಮೊದಲ ಬಾರಿಗೆ ಅಮೆರಿಕದಲ್ಲಿ ವಿಶ್ವಕಪ್ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು ಅತಿ ಹೆಚ್ಚು ಪಂದ್ಯಗಳು ನ್ಯೂಯಾರ್ಕ್​​ನಲ್ಲಿ ನಡೆದಿದೆ. ಒಟ್ಟು 8 ಪಂದ್ಯಗಳು, ಫ್ಲೋರಿಡಾ ಮತ್ತು ಟೆಕ್ಸಾಸ್ ತಲಾ 4 ಪಂದ್ಯಗಳು ನಡೆದಿವೆ. ಆದರೆ, ಇದಕ್ಕೆ ವಿನಿಯೋಗ ಮಾಡಿರುವ ದುಡ್ಡು ವಿಶ್ವ ಕಪ್​ ಬಜೆಟ್​ಗಿಂತಲೂ ಹೆಚ್ಚಾಗಿದೆ. ಪ್ರಮುಖವಾಗಿ ತಾತ್ಕಾಲಿಕ ಮೈದಾನ ತಯಾರಿ, ಕ್ರಿಕೆಟ್ ಪಿಚ್ ಇಲ್ಲದ ನ್ಯೂಯಾರ್ಕ್​ನಲ್ಲಿ ಆಯೋಜನೆ ನಷ್ಟಕ್ಕೆ ಕಾರಣವಾಗಿದೆ. ಆಟಗಾರರ ಲಾಜಿಸ್ಟಿಕ್ ವ್ಯವಸ್ಥೆ (ಪ್ರಯಾಣ ಹಾಗೂ ವಸತಿ) ಮೂಲಕವೂ ಹೆಚ್ಚುವರಿ ಹೊರೆಯಾಗಿದೆ ಎನ್ನಲಾಗಿದೆ.

ಕೊಲಂಬೊದಲ್ಲಿ ಜುಲೈ 19ರಿಂದ ಪ್ರಾರಂಭವಾಗುವ ಐಸಿಸಿಯ ವಾರ್ಷಿಕ ಸಾಮಾನ್ಯ ಸಭೆಯಲ್ಲಿ (AGM) ನಷ್ಟದ ವಿಚಾರವೇ ಪ್ರಮುಖ ವಿಷಯಗಳಲ್ಲಿ ಒಂದಾಗಿದೆ. ವಾರ್ಷಿಕ ಸಾಮಾನ್ಯ ಸಭೆಯ ಒಂಬತ್ತು ಅಂಶಗಳ ಕಾರ್ಯಸೂಚಿಯಲ್ಲಿ ನಷ್ಟದ ವಿವರ ಇಲ್ಲ. ಆದರೆ, ಅದನ್ನೂ ಚರ್ಚಿಸಲಾಗುವುದು ಎನ್ನಲಾಗಿದೆ.

ಐಸಿಸಿಯ ಹೊಸ ಲೆಕ್ಕಪರಿಶೋಧಕರ ನೇಮಕಾತಿಯು ಐಸಿಸಿ ಸದಸ್ಯತ್ವ, ಅಸೋಸಿಯೇಟ್ ಸದಸ್ಯರ ಸಭೆಯ ವರದಿಗಳು ಮತ್ತು ಐಸಿಸಿ ಅಭಿವೃದ್ಧಿ ಪ್ರಶಸ್ತಿಗಳ ಪ್ರಸ್ತುತಿಯ ಚರ್ಚೆಗಳೊಂದಿಗೆ ಕಾರ್ಯಸೂಚಿಯಲ್ಲಿದೆ. ಇನ್ನೊಂದು ಪ್ರಮುಖ ಅಂಶವೆಂದರೆ ಮುಂದಿನ ವರ್ಷ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ಪಾಕಿಸ್ತಾನಕ್ಕೆ ಪ್ರಯಾಣಿಸದಿರುವ ಬಗ್ಗೆಯೂ ಐಸಿಸಿ ಚರ್ಚೆ ನಡೆಯಲಿದೆ.

International Cricket Council


ಜಯ್ ಶಾ ಅಧ್ಯಕ್ಷರಾಗುತ್ತಾರೆಯೇ?

ಶ್ರೀಲಂಕಾದಲ್ಲಿ ಐಸಿಸಿ ವಾರ್ಷಿಕ ಸಮ್ಮೇಳನ ನಡೆಯುತ್ತಿರುವುದರಿಂದ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ನ್ಯೂಜಿಲೆಂಡ್ ನ ಗ್ರೆಗ್ ಬಾರ್ಕ್ಲೇ ಬದಲಿಗೆ ಜಯ್ ಶಾ ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾವಾಗ ಏರುತ್ತಾರೆ ಎಂಬುದರ ಕುರಿತು ಊಹಾಪೋಹಗಳು ಎದ್ದಿವೆ.

ಜಯ್ ಶಾ ಅವರ ಭವಿಷ್ಯ ನಿರ್ಣಯ

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಉನ್ನತ ಹುದ್ದೆಗೆ ಶಾ ಅವರ ಆಯ್ಕೆ ವಿಚಾರ ಸಮ್ಮೇಳನದಲ್ಲಿ ನಿರ್ಣಾಯಕ ವಿಷಯವಾಗಿದೆ ಎಂದು ಐಸಿಸಿ ಸದಸ್ಯರೇ ತಿಳಿಸಿದ್ದಾರೆ. ಮಂಡಳಿಯ ನಿಯಮಗಳ ಪ್ರಕಾರ ಬಿಸಿಸಿಐ ಕಾರ್ಯದರ್ಶಿಯಾಗಿ ಜಯ್ ಶಾ ಅವರಿಗೆ ಇನ್ನೂ ಒಂದು ವರ್ಷ ಉಳಿದಿದೆ. ಕಡ್ಡಾಯ ಕೂಲಿಂಗ್-ಆಫ್ ಅವಧಿ ಪ್ರಾರಂಭವಾಗುವ ಮೊದಲು ಅವರ ಅಧಿಕಾರಾವಧಿ 2025ರಲ್ಲಿ ಕೊನೆಗೊಳ್ಳುತ್ತದೆ. ಆದರೂ ಅಮಿತ್​ ಶಾ ಅವರು 2025ರಲ್ಲಿ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಇದೆ. ಬಾರ್ಕ್ಲೇ ಅವರ ಎರಡು ವರ್ಷಗಳ ಅವಧಿ ಈ ವರ್ಷ ಕೊನೆಗೊಳ್ಳಲಿದೆ. ಅವರು ಮತ್ತೆ ಮೂರನೇ ಅವಧಿಗೆ ಅಧಿಕಾರ ವಹಿಸಿಕೊಳ್ಳುವುದು ಸಾಧ್ಯವಾಗುವುದಿಲ್ಲ.

ಅಧಿಕಾರಾವಧಿ ಬದಲಾಣೆ

ಐಸಿಸಿ ತನ್ನ ಅಧ್ಯಕ್ಷರ ಅಧಿಕಾರಾವಧಿಯನ್ನು ಸರಿಹೊಂದಿಸಬಹುದು ಎನ್ನುವ ಊಹೆಯೂ ಇದೆ. ಪ್ರಸ್ತುತ, ತಲಾ ಎರಡು ವರ್ಷಗಳ ಮೂರು ಅವಧಿಗಳಾಗಿ ರಚಿಸಲಾಗಿದೆ. ಇದನ್ನು ಪ್ರತಿ ಮೂರು ವರ್ಷಗಳ ಎರಡು ಅವಧಿಗಳಿಗೆ ಬದಲಾಯಿಸಲು ಪರಿಗಣಿಸಬಹುದು.

ಇದನ್ನೂ ಓದಿ: India Squad Announcement: ಶ್ರೀಲಂಕಾ ಸರಣಿಗೆ ಮರಳಿದ ಹಿಟ್​ಮ್ಯಾನ್​ ರೋಹಿತ್​!

ಅಧಿಕಾರಾವಧಿ ಬದಲಾವಣೆಯ ಪರಿಣಾಮ

ಬಾರ್ಕ್ಲೇ ಅವರ ಪ್ರಸ್ತುತ ಅವಧಿಯನ್ನು ಮೂರು ವರ್ಷಗಳಿಗೆ ಮಾರ್ಪಡಿಸಿದರೆ ಐಸಿಸಿಯ ಅಧಿಕಾರ ವಹಿಸುವ ಮುನ್ನ ಶಾ ಅವರು ಬಿಸಿಸಿಐ ಕಾರ್ಯದರ್ಶಿಯಾಗಿ ತಮ್ಮ ಅವಧಿಯನ್ನು ಮುಗಿಸಲು ಅನುವು ಮಾಡಿಕೊಟ್ಟಂತಾಗುತ್ತದೆ. ಈ ಸಂದರ್ಭದಲ್ಲಿ ಶಾ ಅವರು 2025 ರಲ್ಲಿ ಐಸಿಸಿ ಅಧ್ಯಕ್ಷ ಸ್ಥಾನವನ್ನು ಪಡೆದುಕೊಳ್ಳಬಹುದು. ಇದು ಬಿಸಿಸಿಐನಿಂದ ಅವರ ಕೂಲಿಂಗ್-ಆಫ್ ಅವಧಿಗೆ ಹೊಂದಿಕೆಯಾಗುತ್ತದೆ. 2028 ರ ವೇಳೆಗೆ ಶಾ ಅವರು ಮತ್ತೆ ಬಿಸಿಸಿಐ ಅಧ್ಯಕ್ಷರಾಗಲು ಮರಳಬಹುದು.

Continue Reading

Latest

Lady Police Officer: ಗೂಂಡಾಗಿರಿ ಮಾಡಿದರೆ ಹುಷಾರ್‌! ಪುಂಡರಿಗೆ ಲೇಡಿ ಪೊಲೀಸ್ ವಾರ್ನಿಂಗ್‌; ವಿಡಿಯೊ ವೈರಲ್

Lady Police Officer: ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ ಮಾಡುವುದೇ ಈಗಿನವರ ಶೋಕಿ. ಎಲ್ಲಿದ್ದೇವೆ, ಇದು ತಪ್ಪಾ, ಸರಿನಾ ಒಂದೂ ಕೂಡ ಯೋಚಿಸದೇ ರೀಲ್ಸ್ ಮಾಡುತ್ತಾ ತಿರುಗುತ್ತಾರೆ. ಹೀಗೆ ಧಾರ್ಮಿಕ ಸ್ಥಳವೊಂದರಲ್ಲಿ ಕಾರಿನ ಸನ್‌ರೂಫ್‌ ತೆರೆದುಕೊಂಡು ರೀಲ್ಸ್ ಮಾಡುತ್ತಿದ್ದ ಗುಂಪೊಂದನ್ನು ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಸಖತ್ ಆಗಿ ಬೆಂಡೆತ್ತಿದ್ದಾರೆ. ಇನ್ನು ಮಹಿಳಾ ಅಧಿಕಾರಿಗೆ ಆಮಿಷವೊಡ್ಡಲು ಬಂದಾಗ ಅದಕ್ಕೆ ಸೊಪ್ಪು ಹಾಕದೇ, ವಾಹನವನ್ನು ವಶಪಡಿಸಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

Lady Police Officer
Koo

ಕೆಲವೊಂದು ಧಾರ್ಮಿಕ ಸ್ಥಳಗಳಲ್ಲಿ (Lady Police Officer) ಮೊಬೈಲ್ ಬಳಸಲು, ವಿಡಿಯೊ ಶೂಟ್ ಮಾಡಲು ಅನುಮತಿ ಇರುವುದಿಲ್ಲ. ಹಿಮಾಚಲ ಪ್ರದೇಶದ ಧಾರ್ಮಿಕ ಪ್ರದೇಶದಲ್ಲಿ ಪುರುಷರ ಗುಂಪೊಂದು ಅನುಮತಿಯಿಲ್ಲದೆ ಕಾರು ಚಲಾಯಿಸುತ್ತ, ಕಾರಿನ ಟಾಪ್‌ ಮೇಲಿಂದ ಕೈ ಬೀಸುತ್ತ ರೀಲ್ಸ್‌ (Reels Obesession) ಮಾಡಿದ್ದಾರೆ. ಆಗ ಮಹಿಳಾ ಪೊಲೀಸರೊಬ್ಬರು ಅವರನ್ನು ಸಖತ್ತಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಈ ವಿಡಿಯೊವನ್ನು ‘ಘರ್ ಕೆ ಕಾಲೇಶ್’ ಎಂಬ ಹೆಸರಿನಲ್ಲಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಲಾಗಿದ್ದು, ಈ ವಿಡಿಯೊ ಪೊಲೀಸರು ವಾಹನವನ್ನು ನಿಲ್ಲಿಸುವ ಮೂಲಕ ಪ್ರಾರಂಭವಾಗಿದೆ. ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರು ತಮ್ಮ ವಾಹನವನ್ನು ನಿಲ್ಲಿಸಿ ಇನ್ನೊಂದು ಕಾರಿನಲ್ಲಿದ್ದ ಇಬ್ಬರು ಪುರುಷರು ಸನ್ ರೂಫ್‌ನಿಂದ ಹೊರಬಂದು ನಿಂತಿರುವುದನ್ನು ತೋರಿಸಿದರು. ಹಾಗೇ ಅವರ ರೀಲ್ಸ್‌ ಮಾಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಸನ್ ರೂಫ್ ಅನ್ನು ಮುಚ್ಚಿ ಕಾರಿನೊಳಗೆ ಕುಳಿತುಕೊಳ್ಳುವಂತೆ ಅವರಿಗೆ ಪಾಠ ಹೇಳಿದ್ದಾರೆ.

ನಂತರ ಧಾರ್ಮಿಕ ಸ್ಥಳದ ಪಕ್ಕದ ಪ್ರದೇಶದಲ್ಲಿ ಶೂಟಿಂಗ್ ಮಾಡಲು ಅನುಮತಿ ನೀಡಲಾಗಿದೆಯೇ ಎಂದು ಅಧಿಕಾರಿ ಪುರುಷರ ಗುಂಪನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿದ ಅವರಲ್ಲಿ ಒಬ್ಬರು ಇದು ಶೂಟಿಂಗ್ ಅಲ್ಲ ಎಂದು ಉತ್ತರಿಸಿದ್ದಾರೆ. ಆದರೆ ಅವರು ಸೋಶಿಯಲ್ ಮೀಡಿಯಾಗಳಿಗಾಗಿ ರೀಲ್ಸ್ ಮಾಡುತ್ತಿರುವುದಾಗಿ ಹೇಳಿದ್ದಾರೆ.

ನಂತರ ಈ ವಿಷಯವನ್ನು ಪರಿಶೀಲಿಸಲು ಮಹಿಳಾ ಪೊಲೀಸ್ ಜೀಪಿನಿಂದ ಕೆಳಗಿಳಿದು ಇಡೀ ಘಟನೆಯನ್ನು ಕ್ಯಾಮೆರಾದಲ್ಲಿ ವಿಡಿಯೊ ಮಾಡಿದ್ದಾರೆ. ಗುಡ್ಡಗಾಡು ಪ್ರದೇಶದಲ್ಲಿ ತೆರೆದ ಸನ್ ರೂಫ್‌ನೊಂದಿಗೆ ಸವಾರಿ ಮಾಡುವುದು ಮಾತ್ರವಲ್ಲದೆ ನಂಬರ್ ಪ್ಲೇಟ್ ಇಲ್ಲದ ವಾಹನವನ್ನು ಓಡಿಸುವ ಮೂಲಕ ದುಷ್ಕರ್ಮಿಗಳು ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳನ್ನು ಹೇಗೆ ಉಲ್ಲಂಘಿಸಿದ್ದಾರೆ ಎಂಬುದನ್ನು ಅವರು ತೋರಿಸಿದರು.

ಕರ್ತವ್ಯದಲ್ಲಿದ್ದ ಪೋಲೀಸ್ ಅಧಿಕಾರಿ ಪುರುಷರನ್ನು ತಮ್ಮ ವಾಹನದೊಳಗೆ ಕುಳಿತು ಸುರಕ್ಷಿತವಾಗಿ ಪ್ರಯಾಣಿಸುವಂತೆ ಸೂಚಿಸಿದ್ದಾರೆ. “ಗೂಂಡಾಗಿರಿ ಮಾಡಬೇಡಿ. ಇದು ಧಾರ್ಮಿಕ ಸ್ಥಳವಾಗಿದೆ. ಪವಿತ್ರ ಸ್ಥಳಕ್ಕೆ ಸಂಬಂಧಿಸಿದ ಭಾವನೆಗಳನ್ನು ನೋಯಿಸಬೇಡಿ” ಎಂದು ಅವರು ಪುಂಡು ಪುರುಷರಿಗೆ ತಿಳಿ ಹೇಳಿದ್ದಾರೆ.

ಇದನ್ನೂ ಓದಿ:  ನೀತಾ ಅಂಬಾನಿ ಪ್ರಸ್ತುತಪಡಿಸಿದ್ದಾರೆ ವಿಷ್ಣುವಿನ ‘ದಶಾವತಾರ’ದ ಚಿತ್ರಣ; ವಿಡಿಯೊ ನೋಡಿ

ಅಲ್ಲದೇ ವಿಡಿಯೊದಲ್ಲಿ, ಅವರಲ್ಲಿ ಕೆಲವರು ಪೊಲೀಸ್ ಅಧಿಕಾರಿಗೆ ಲಂಚ ನೀಡಲು ಅಥವಾ ಕೆಲವು ಪ್ರಭಾವ ಬೀರುವ ಕಾರ್ಡ್ ಅನ್ನು ಪ್ರದರ್ಶಿಸಲು ಪ್ರಯತ್ನಿಸಿದ್ದು ಕಂಡು ಬಂದಿದೆ. ಆದರೆ ಪೊಲೀಸ್ ಅಧಿಕಾರಿ ಈ ರೀತಿ ಮಾಡಿದರೆ ವಾಹನವನ್ನು ವಶಪಡಿಸಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ವಿಡಿಯೊ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

Continue Reading
Advertisement
Israel Palestine War
ವಿದೇಶ1 min ago

Israel Palestine War: 50 ಕಿ.ಮೀ ದೂರದಿಂದಲೇ ಪ್ಯಾಲೆಸ್ತಿನ್‌ ಕಮಾಂಡರ್‌ನನ್ನು ಕೊಂದ ಇಸ್ರೇಲ್‌! ವಿಡಿಯೊ ನೋಡಿ

Viral Video
ವೈರಲ್ ನ್ಯೂಸ್7 mins ago

Viral Video: ಮೂರು ಅಡಿಯ ಕುಳ್ಳನಿಗೆ ಏಳಡಿ ಎತ್ತರದ ಗರ್ಲ್ ಫ್ರೆಂಡ್! ಇವರ ಪ್ರಣಯದ ವಿಡಿಯೊ ನೋಡಿ!

Rain News;
ಪ್ರಮುಖ ಸುದ್ದಿ23 mins ago

Rain News : ಪ್ರಯಾಣಿಕರೇ ಗಮನಿಸಿ; ಗುಡ್ಡ ಕುಸಿತದ ಭೀತಿ, ಮಡಿಕೇರಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್​​

Sexual Assault case
ಕ್ರೈಂ35 mins ago

Sexual Assualt Case: ಅಶ್ಲೀಲ ವಿಡಿಯೊ ವೀಕ್ಷಿಸಿ ಉದ್ರೇಕಗೊಂಡ ಮೂವರು ಶಾಲಾ ಬಾಲಕರಿಂದ ಬಾಲಕಿಯ ಅತ್ಯಾಚಾರ, ಕೊಲೆ

International Cricket Council
ಕ್ರಿಕೆಟ್50 mins ago

International Cricket Council : ಟಿ20 ವಿಶ್ವಕಪ್ ಆಯೋಜನೆಯಲ್ಲಿ ಐಸಿಸಿಗೆ 167 ಕೋಟಿ ರೂಪಾಯಿ ನಷ್ಟ

Team India Srilanka Tour
ಪ್ರಮುಖ ಸುದ್ದಿ59 mins ago

Team India Srilanka Tour : ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡ ಪ್ರಕಟ, ಸೂರ್ಯಕುಮಾರ್​ಗೆ ಟಿ20 ನಾಯಕತ್ವ

Viral Video
Latest1 hour ago

Viral Video: ಬಸ್‌ ಡ್ರೈವರ್‌ನ ರೀಲ್ಸ್‌ ಕ್ರೇಜ್‌ಗೆ 2 ಎತ್ತುಗಳು ಬಲಿ; ರೈತನ ಸ್ಥಿತಿ ಗಂಭೀರ

Train Accident
ದೇಶ1 hour ago

Train Derail: ಹಳಿ ತಪ್ಪಿದ ರೈಲು; ಅಪಘಾತದ ಹಿಂದೆ ಇದ್ಯಾ ವಿಧ್ವಂಸಕ ಕೃತ್ಯ?

Crime News
ಪ್ರಮುಖ ಸುದ್ದಿ2 hours ago

Bangalore News : ಬೆಂಗಳೂರಲ್ಲಿ ಆಘಾತಕಾರಿ ಘಟನೆ; ಗಾಂಜಾ ನಶೆಯಲ್ಲಿ ಶಾಲೆ ಬಿಟ್ಟು ಮನೆಗೆ ಹೋಗುತ್ತಿದ್ದ ಬಾಲಕಿಯರನ್ನು ಬೆದರಿಸಿದ ಪುಂಡರು

Lady Police Officer
Latest2 hours ago

Lady Police Officer: ಗೂಂಡಾಗಿರಿ ಮಾಡಿದರೆ ಹುಷಾರ್‌! ಪುಂಡರಿಗೆ ಲೇಡಿ ಪೊಲೀಸ್ ವಾರ್ನಿಂಗ್‌; ವಿಡಿಯೊ ವೈರಲ್

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ4 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ6 hours ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ2 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ3 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ3 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ4 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ4 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ4 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ4 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

ಟ್ರೆಂಡಿಂಗ್‌