Viral Video: 12 ವರ್ಷದ ಬಾಲಕಿಯನ್ನು ಬಲವಂತವಾಗಿ ಮದುವೆಯಾದ 62ರ ಮುದುಕ! ಹೃದಯ ಕರಗಿಸುತ್ತದೆ ಈ ವಿಡಿಯೊ - Vistara News

Latest

Viral Video: 12 ವರ್ಷದ ಬಾಲಕಿಯನ್ನು ಬಲವಂತವಾಗಿ ಮದುವೆಯಾದ 62ರ ಮುದುಕ! ಹೃದಯ ಕರಗಿಸುತ್ತದೆ ಈ ವಿಡಿಯೊ

Viral Video: 12 ವರ್ಷದ ಬಾಲಕಿಗೆ ಆಕೆಯ ಮನೆಯವರು 62ರ ವೃದ್ಧನನ್ನು ಮದುವೆಯಾಗುವಂತೆ ಒತ್ತಾಯಿಸುತ್ತಿರುವ ವಿಡಿಯೊವೊಂದು ವೈರಲ್ ಆಗಿದೆ. ಸಹಿ ಹಾಕುವಂತೆ ಬಾಲಕಿಗೆ ಹಿಂಸಿಸುತ್ತಿದ್ದಾರೆ. ಆಕೆ ನನಗೆ ಈ ಮದುವೆ ಬೇಡ ಎಂದು ಅತ್ತು ಕರೆದು ಕೇಳಿಕೊಂಡರೂ ಆಕೆಯ ಮನೆಯವರು ಅದನ್ನು ಕೇಳದೆ ಸಹಿ ಹಾಕುವಂತೆ ಬಲವಂತ ಮಾಡುತ್ತಿದ್ದಾರೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಸಂಚಲನ ಮೂಡಿಸಿದೆ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo


ದೇಶ ಎಷ್ಟೇ ಮುಂದುವರಿದಿದ್ದರೂ ಕೆಲವು ಜನರಿಗೆ ಮಾತ್ರ ಬುದ್ಧಿ ಬರುವುದಿಲ್ಲ. ಯಾಕೆಂದರೆ ಬಾಲ್ಯವಿವಾಹ ಪದ್ಧತಿಯಂತಹ ಅನಿಷ್ಟ ಪದ್ಧತಿಗಳನ್ನು ತೊಲಗಿಸಲು ಅನೇಕ ಹೋರಾಟಗಾರರು ಹೋರಾಡಿ ಅದರ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಅಲ್ಲದೇ ಈ ಅನಿಷ್ಟ ಪದ್ಧತಿಯನ್ನು ಕಾನೂನಿನ ಪ್ರಕಾರ ಅಪರಾಧವೆಂದು, ಇದನ್ನು ಪಾಲಿಸಿದವರಿಗೆ ಕಠಿಣ ಜೈಲು ಶಿಕ್ಷೆ ವಿಧಿಸುವುದಾಗಿ ನ್ಯಾಯಾಲಯದಲ್ಲಿ ತಿಳಿಸಿದರೂ ಕೂಡ ಇನ್ನೂ ಈ ಅನಿಷ್ಟ ಪದ್ಧತಿ ನಮ್ಮನ್ನು ಬಿಟ್ಟು ತೊಲಗಲಿಲ್ಲ. ಕೆಲವು ಕಡೆ ಯಾರಿಗೂ ತಿಳಿಯದಂತೆ ಬಾಲಕಿಯರನ್ನು ಈ ಅನಿಷ್ಟ ಪದ್ಧತಿಗೆ ಬಲಿ ಕೊಡುತ್ತಿದ್ದಾರೆ. ಇದೀಗ ಅಂತಹದೊಂದು ಆಘಾತಕಾರಿ ಘಟನೆ ನಡೆದಿದ್ದು, 12 ವರ್ಷದ ಬಾಲಕಿಗೆ 62 ವರ್ಷದ ವೃದ್ಧನ ಜೊತೆ ಆಕೆಯ ಕುಟುಂಬದವರು ಬಲವಂತವಾಗಿ ಮದುವೆ ಮಾಡಿಸಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ (Viral Video)ಆಗುತ್ತಿದೆ.

ವೈರಲ್ ವಿಡಿಯೊದಲ್ಲಿ 12 ವರ್ಷದ ಬಾಲಕಿಗೆ ಆಕೆಯ ಮನೆಯವರು 62ರ ವೃದ್ಧನನ್ನು ಮದುವೆಯಾಗುವಂತೆ ಒತ್ತಾಯಿಸುತ್ತಿದ್ದಾರೆ. ಮತ್ತು ಅದಕ್ಕಾಗಿ ಸಹಿ ಮಾಡುವಂತೆ ಹಿಂಸಿಸುತ್ತಿದ್ದಾರೆ. ಆಕೆ ನನಗೆ ಈ ಮದುವೆ ಬೇಡಾ ಎಂದು ಅತ್ತು ಕರೆದು ಕೇಳಿಕೊಂಡರೂ ಆಕೆಯ ಮನೆಯವರು ಅದನ್ನು ಕೇಳದೆ ಸಹಿ ಹಾಕುವಂತೆ ಬಲವಂತ ಮಾಡುತ್ತಿದ್ದಾರೆ. ಅವರೆಲ್ಲರೂ ಮುಸ್ಲಿಂ ಸಮುದಾಯದವರು ಎಂಬುದು ತಿಳಿಯುತ್ತದೆ. ಈ ಘೋರ ದೃಶ್ಯವನ್ನು ಅಲ್ಲಿದ್ದವರಲ್ಲಿ ಒಬ್ಬರು ವಿಡಿಯೊ ರೆಕಾರ್ಡ್ ಮಾಡಿದ್ದಾರೆ.

TaraBull ಹೆಸರಿನ ಎಕ್ಸ್ ಖಾತೆಯಲ್ಲಿ ಈ ವಿಡಿಯೊವನ್ನು ಹಂಚಿಕೊಳ್ಳಲಾಗಿದ್ದು, “12 ವರ್ಷದ ಬಾಲಕಿಯನ್ನು ಆಕೆಯ ಮನೆಯವರೇ 62 ವರ್ಷದ ವ್ಯಕ್ತಿಯೊಂದಿಗೆ ಮದುವೆಯಾಗುವಂತೆ ಒತ್ತಾಯಿಸಿದ್ದಾರೆ. ಇದಕ್ಕೆಲ್ಲ ಆಕ್ರೋಶ ಎಲ್ಲಿದೆ?” ಎಂಬ ಶೀರ್ಷಿಕೆಯನ್ನು ಬರೆದಿದ್ದಾರೆ. ಆಗಸ್ಟ್ 15 ರಂದು ಹಂಚಿಕೊಳ್ಳಲಾದ ಈ ವಿಡಿಯೊ 5.6 ಮಿಲಿಯನ್ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್‍ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ‘ಇದು ಅಪರಾಧವಾಗಿದ್ದು, ನಾವೆಲ್ಲರೂ ಇದರ ವಿರುದ್ಧ ಧ್ವನಿ ಎತ್ತಬೇಕಿದೆ’ ಎಂಬ ಕಾಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ಕೋಲ್ಕತ್ತಾ ವೈದ್ಯೆಯ ಅತ್ಯಾಚಾರಿಗೆ ಮರಣದಂಡನೆ ವಿಧಿಸುವಂತೆ ಬಾಲಿವುಡ್ ತಾರೆಯರ ಆಗ್ರಹ

ಇನ್ನೊಬ್ಬ ಬಳಕೆದಾರರು ‘ಇದಕ್ಕಿಂತ ದುಷ್ಟತನ ಮತ್ತೊಂದಿಲ್ಲ” ಎಂದು ಹೇಳಿದ್ದಾರೆ. ಆದರೆ ಈ ಘಟನೆ ಎಲ್ಲಿ ನಡೆದಿದ್ದು ಎಂಬ ಬಗ್ಗೆ ಯಾವುದೇ ಮಾಹಿತಿ ತಿಳಿದುಬಂದಿಲ್ಲ. ಆದರೆ ಬಾಲ್ಯ ವಿವಾಹದಂತಹ ಅನಿಷ್ಟ ಪದ್ಧತಿ ಇನ್ನೂ ನಮ್ಮನ್ನ ಬಿಟ್ಟು ತೊಲಗಿಲ್ಲ ಎಂಬುದು ಇದರಿಂದ ತಿಳಿಯುತ್ತದೆ. ಇದು ಇನ್ನೂ ಎಷ್ಟು ಮಂದಿ ಬಾಲಕಿಯರನ್ನು ಬಲಿತೆಗೆದುಕೊಳ್ಳಲಿದೆಯೋ ತಿಳಿಯುತ್ತಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Murder Case: ಮಮತಾ ರಾಜ್ಯದಲ್ಲಿ ಕೊಲೆ ಸರಣಿ; ಬೆಂಗಳೂರಿನಿಂದ ಊರಿಗೆ ಬಂದಿದ್ದ ಯುವತಿಯ ರುಂಡ ಕಡಿದು ಕೊಲೆ!

Murder Case: ಪಶ್ಚಿಮ ಬಂಗಾಳದಲ್ಲಿ 25 ವರ್ಷದ ಯುವತಿಯ ತಲೆ ಕಡಿದ ರಕ್ತಸಿಕ್ತ ದೇಹವು ಅವರ ಕುಟುಂಬದ ಹೊಲದಲ್ಲಿ ಪತ್ತೆಯಾಗಿದೆ. ಇದು ಅಲ್ಲಿನ ಜನರಲ್ಲಿ ಆಘಾತವನ್ನುಂಟು ಮಾಡಿದೆ. ಈ ಪ್ರದೇಶದ ಮಹಿಳೆಯರ ಸುರಕ್ಷತೆಯ ಬಗ್ಗೆ ಕಳವಳಗಳನ್ನು ಹುಟ್ಟುಹಾಕಿದೆ. ಯುವತಿ ಬಾತ್‌ ರೂಮ್‌ಗೆ ಹೋಗಿ ಬರುತ್ತಿರುವುದಾಗಿ ಹೇಳಿ ಹೋಗಿದ್ದಳು. ನಂತರ ನಾಪತ್ತೆಯಾಗಿದ್ದಳು. ಈ ಪ್ರಕರಣ ಪಶ್ಚಿಮ ಬಂಗಾಲದಲ್ಲಿ ನಡೆಯುತ್ತಿರುವ ಕೊಲೆ, ಹಿಂಸಾಚಾರ ಪ್ರಕರಣಕ್ಕೆ ಮತ್ತೊಂದು ಸೇರ್ಪಡೆಯಾದಂತಾಗಿದೆ.

VISTARANEWS.COM


on

Murder Case
Koo


ಒಂದು ಕಾಲದಲ್ಲಿ ಶಾಂತಿಯುತವಾದ ಗ್ರಾಮ ಎಂದು ಕರೆಸಿಕೊಂಡ ಶಕ್ತಿಗಢದ ನಾಡುರ್ ಝಪನತಾಲಾ ಆದಿವಾಸಿ ಪ್ಯಾರಾ ಎಂಬ ಗ್ರಾಮದಲ್ಲಿ (ಪಶ್ಚಿಮ ಬಂಗಾಲ) ಈಗ ಹಿಂಸಾಚಾರದ ಕೃತ್ಯಗಳೇ ನಡೆಯುತ್ತಿವೆ. ಈ ಗ್ರಾಮದಲ್ಲಿ 25 ವರ್ಷದ ಪ್ರಿಯಾಂಕಾ ಹನ್ಸ್ಡಾ ಎಂಬ ಯುವತಿಯ ತಲೆ ಕಡಿದ (Murder Case) ರಕ್ತಸಿಕ್ತ ದೇಹವು ಅವರ ಕುಟುಂಬದ ಹೊಲದಲ್ಲಿ ಪತ್ತೆಯಾಗಿದೆ. ಇದು ಅಲ್ಲಿನ ಜನರಲ್ಲಿ ಆಘಾತವನ್ನುಂಟು ಮಾಡಿದೆ. ಈ ಪ್ರದೇಶದ ಮಹಿಳೆಯರ ಸುರಕ್ಷತೆಯ ಬಗ್ಗೆ ಕಳವಳಗಳನ್ನು ಹುಟ್ಟು ಹಾಕಿದೆ.

ವರದಿ ಪ್ರಕಾರ, ಇತ್ತೀಚೆಗೆ ಬೆಂಗಳೂರಿನಿಂದ ಮನೆಗೆ ಮರಳಿದ್ದ ಪ್ರಿಯಾಂಕಾ, ಬಾತ್‍ರೂಂಗೆ ಹೋಗುತ್ತಿರುವುದಾಗಿ ಕುಟುಂಬದವರಿಗೆ ತಿಳಿಸಿದ್ದಳು. ನಂತರ ನಾಪತ್ತೆಯಾಗಿದ್ದಳು. ಅವಳು ಹಿಂತಿರುಗಿ ಬರದಿದ್ದಾಗ, ಚಿಂತೆಗೀಡಾದ ಅವಳ ತಾಯಿ ಅವಳನ್ನು ಹುಡುಕಲು ಪ್ರಾರಂಭಿಸಿದರು. ಆದರೆ ಪ್ರಿಯಾಂಕಾ ಅವಳ ನಿರ್ಜೀವ ದೇಹವು ಕುಟುಂಬದವರ ಹೊಲದಲ್ಲೇ ಬಿದ್ದಿತ್ತು. ಅವಳ ಕುತ್ತಿಗೆಯನ್ನು ಕತ್ತರಿಸಲಾಗಿತ್ತು. ಈ ಭಯಾನಕ ದೃಶ್ಯವು ಅವಳ ಕುಟುಂಬವನ್ನು ಆಘಾತಕ್ಕೀಡುಮಾಡಿದೆ. ಈ ಬಗ್ಗೆ ಅವಳ ಸಮುದಾಯವು ಆಕ್ರೋಶಗೊಂಡಿದೆ.

ಸ್ಥಳೀಯ ಪೊಲೀಸರು ಈ ಪ್ರಕರಣದ ಬಗ್ಗೆ ತೀವ್ರ ತನಿಖೆ ಆರಂಭಿಸಿದ್ದಾರೆ. ಈ ಘಟನೆಯು ಪಶ್ಚಿಮ ಬಂಗಾಳದಲ್ಲಿ ಮಹಿಳೆಯರ ವಿರುದ್ಧ ಹೆಚ್ಚುತ್ತಿರುವ ಕ್ರೂರ ದಾಳಿಗಳ ಪಟ್ಟಿಗೆ ಮತ್ತೊಂದು ಸೇರ್ಪಡೆಯಾದಂತಾಗಿದೆ. ಅಪರಾಧಿಗಳನ್ನು ಕೂಡಲೇ ಕಂಡುಹಿಡಿದು ಶಿಕ್ಷಿಸುವಂತೆ ಜನಾಗ್ರಹ ಕೇಳಿ ಬರುತ್ತಿದೆ. ಪ್ರಿಯಾಂಕಾ ಅವರ ಹತ್ಯೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಮಹಿಳೆಯರನ್ನು ರಕ್ಷಿಸುವ ಮಮತಾ ಬ್ಯಾನರ್ಜಿ ಅವರ ರಾಜ್ಯ ಸರ್ಕಾರದ ಬದ್ಧತೆಯನ್ನು ಜನರು ಪ್ರಶ್ನಿಸುತ್ತಿದ್ದಾರೆ.

ಈ ನಡುವೆ ಅಧಿಕಾರಿಗಳು ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಅವಳು ಕೊನೆಯದಾಗಿ ಚಾಟ್ ಮಾಡಿದ ಮತ್ತು ಅವಳು ಮನೆಯಿಂದ ಹೊರಟಾಗ ಕರೆ ಮಾಡಿದ ಜನರನ್ನು ಪತ್ತೆ ಹಚ್ಚಿದ್ದಾರೆ. ಜಿಲ್ಲಾ ಪೊಲೀಸರ ಅಧಿಕಾರಿಗಳ ಪ್ರಕಾರ, ಮನೆಯಿಂದ ಹೊರಡುವ ಮೊದಲು ಸಂತ್ರಸ್ತೆಗೆ ಬಂದ ಕರೆ ಅವಳಿಗೆ ಚೆನ್ನಾಗಿ ತಿಳಿದಿರುವ ವ್ಯಕ್ತಿಯಿಂದ ಬಂದಿದೆ ಎಂದು ತನಿಖೆಯಿಂದ ತಿಳಿದು ಬಂದಿದೆ.

ಇದನ್ನೂ ಓದಿ: ಅಟಲ್ ಸೇತು ಮೇಲಿಂದ ಸಮುದ್ರಕ್ಕೆ ಹಾರಲೆತ್ನಿಸಿದ ಮಹಿಳೆಯನ್ನು ರಕ್ಷಿಸಿದ್ದು ಹೇಗೆ? ವಿಡಿಯೊ ನೋಡಿ

ಆಗಸ್ಟ್ 12ರಂದು ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಕ್ರೂರ ಸಾವಿನ ಬಗ್ಗೆ ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ ಈ ಬೆಳವಣಿಗೆ ಸಂಭವಿಸಿದೆ. ವೈದ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತಾ ಪೊಲೀಸರು ಶಂಕಿತನನ್ನು ಬಂಧಿಸಿದ್ದಾರೆ. ಕೋಲ್ಕತಾ ಹೈಕೋರ್ಟ್‍ನ ಆದೇಶದ ಮೇರೆಗೆ ಕೇಂದ್ರ ತನಿಖಾ ದಳ (ಸಿಬಿಐ) ತನಿಖೆಯನ್ನು ವಹಿಸಿಕೊಂಡಿದೆ.

Continue Reading

ಆರೋಗ್ಯ

Dengue Vaccine: ಭಾರತದ ಮೊದಲ ಡೆಂಗ್ಯೂ ಲಸಿಕೆ; 3ನೇ ಹಂತದ ಪ್ರಯೋಗ ಪ್ರಾರಂಭ

ಡೆಂಗ್ಯೂಗೆ ಭಾರತೀಯ ಲಸಿಕೆ (Dengue Vaccine) 3ನೇ ಹಂತದ ಪ್ರಯೋಗದಲ್ಲಿದೆ. ಈ ಹಿಂದೆ ನಡೆಸಿರುವ ಎರಡು ಪ್ರಯೋಗಗಳು ಯಶಸ್ವಿಯಾಗಿದ್ದು, ಐಸಿಎಂಆರ್ ಸಹಯೋಗದೊಂದಿಗೆ 3 ಹಂತದ ಪ್ರಯೋಗವು 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 19 ಪ್ರದೇಶಗಳಲ್ಲಿ 10,335ಕ್ಕೂ ಹೆಚ್ಚು ಆರೋಗ್ಯವಂತ ವಯಸ್ಕರ ಮೇಲೆ ನಡೆಯಲಿದೆ. ಈ ಲಸಿಕೆ ಯಶಸ್ವಿಯಾದರೆ ಡೆಂಗ್ಯೂ ರೋಗದಿಂದ ಉಂಟಾಗುತ್ತಿರುವ ಸಾವು ತಪ್ಪಿಸಬಹುದು.

VISTARANEWS.COM


on

By

Dengue Vaccine
Koo

ಪಂಡಿತ್ ಭಾಗವತ್ ದಯಾಳ್ ಶರ್ಮಾ ಪೋಸ್ಟ್ ಗ್ರಾಜುಯೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (PGIMS) ರೋಹ್ಟಕ್‌ನಲ್ಲಿ ಭಾರತದ ಮೊದಲ ಸ್ಥಳೀಯ ಡೆಂಗ್ಯೂ ಲಸಿಕೆ (Dengue Vaccine) 3ನೇ ಹಂತದ ಪ್ರಯೋಗವನ್ನು ಪ್ರಾರಂಭಿಸಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಮತ್ತು ಪ್ಯಾನೇಸಿಯಾ ಬಯೋಟೆಕ್ (Panacea Biotec) ಘೋಷಿಸಿದೆ.

ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಈ ಉಪಕ್ರಮವನ್ನು ಶ್ಲಾಘಿಸಿದ್ದು, ಡೆಂಗ್ಯೂ ಚಿಕೆತ್ಸೆಗಾಗಿ ಭಾರತದ ಮೊದಲ ಸ್ಥಳೀಯ ಲಸಿಕೆಯ 3 ಕ್ಲಿನಿಕಲ್ ಪ್ರಯೋಗದ ಪ್ರಾರಂಭವು ಡೆಂಗ್ಯೂ ವಿರುದ್ಧದ ನಮ್ಮ ಹೋರಾಟದಲ್ಲಿ ನಿರ್ಣಾಯಕ ಪ್ರಗತಿಯನ್ನು ಸೂಚಿಸುತ್ತದೆ ಎಂದು ಹೇಳಿದರು.

ಡೆಂಗ್ಯೂ ಲಸಿಕೆ ಅಭಿವೃದ್ಧಿಗೆ ಐಸಿಎಂಆರ್ ಮತ್ತು ಪ್ಯಾನೇಸಿಯಾ ಬಯೋಟೆಕ್ ನಡುವಿನ ಸಹಯೋಗದ ಪ್ರಾಮುಖ್ಯತೆಯನ್ನು ತಿಳಿಸಿದ ಕೇಂದ್ರ ಆರೋಗ್ಯ ಸಚಿವರು, ಈ ಪಾಲುದಾರಿಕೆಯ ಮೂಲಕ ನಾವು ನಮ್ಮ ಜನರ ಆರೋಗ್ಯ ಮತ್ತು ಯೋಗಕ್ಷೇಮವನ್ನು ಖಾತ್ರಿಪಡಿಸುವತ್ತ ಹೆಜ್ಜೆ ಇಡುತ್ತಿದ್ದೇವೆ. ಆರೋಗ್ಯ ಕ್ಷೇತ್ರದಲ್ಲಿ ಆತ್ಮನಿರ್ಭರ ಭಾರತ್‌ನ ನಮ್ಮ ದೃಷ್ಟಿಯನ್ನು ಬಲಪಡಿಸುತ್ತದೆ ಎಂದು ತಿಳಿಸಿದರು.


ಪ್ರಸ್ತುತ ದೇಶವು ಡೆಂಗ್ಯೂಗೆ ಯಾವುದೇ ಆಂಟಿವೈರಲ್ ಚಿಕಿತ್ಸೆ ಅಥವಾ ಪರವಾನಗಿ ಪಡೆದ ಲಸಿಕೆಯನ್ನು ಹೊಂದಿಲ್ಲ. ಪರಿಣಾಮಕಾರಿ ಲಸಿಕೆಯನ್ನು ಅಭಿವೃದ್ಧಿಪಡಿಸುವುದು ಸಂಕೀರ್ಣ ಮತ್ತು ತುರ್ತು ಅಗತ್ಯವಾಗಿದೆ. ಡೆಂಗ್ಯೂ ವೈರಸ್‌ನ ಎಲ್ಲಾ ನಾಲ್ಕು ಸಿರೊಟೈಪ್‌ಗಳಲ್ಲಿ ಹೆಚ್ಚಿನ ಪರಿಣಾಮಕಾರಿತ್ವವನ್ನು ಸಾಧಿಸುವಲ್ಲಿ ಸವಾಲು ಇದೆ. ಇದು ದೇಶದ ಅನೇಕ ಪ್ರದೇಶಗಳಲ್ಲಿ ಹರಡುತ್ತಿದೆ ಎಂದರು.

ಟೆಟ್ರಾವಲೆಂಟ್ ಡೆಂಗ್ಯೂ ಲಸಿಕೆ ಸ್ಟ್ರೈನ್ (TV003/TV005) ಆರಂಭದಲ್ಲಿ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹೆಲ್ತ್ (NIH), ಯುಎಸ್ ಎನಿಂದ ಅಭಿವೃದ್ಧಿಪಡಿಸಲಾಯಿತು. ಜಾಗತಿಕವಾಗಿ ಪೂರ್ವಭಾವಿ ಮತ್ತು ಕ್ಲಿನಿಕಲ್ ಪ್ರಯೋಗಗಳಲ್ಲಿ ಭರವಸೆಯ ಫಲಿತಾಂಶಗಳನ್ನು ತೋರಿಸಿದೆ. ಇದರ ಪ್ರಯೋಗ ಆರಂಭಿಸಿದ ಮೂರು ಭಾರತೀಯ ಕಂಪೆನಿಗಳಲ್ಲಿ ಒಂದಾದ Panacea Biotec ಸಂಪೂರ್ಣ ಲಸಿಕೆಯನ್ನು ಅಭಿವೃದ್ಧಿಪಡಿಸುವಲ್ಲಿ ಹೆಚ್ಚು ಪ್ರಗತಿ ಸಾಧಿಸಿದೆ.

ಈ ಕೆಲಸಕ್ಕಾಗಿ ಕಂಪನಿಯು ಪ್ರಕ್ರಿಯೆಯ ಪೇಟೆಂಟ್ ಅನ್ನು ಹೊಂದಿದೆ. 2018-19ರಲ್ಲಿ ಭಾರತೀಯ ಲಸಿಕೆ ಕ್ಲಿನಿಕಲ್ ಪ್ರಯೋಗ ಹಂತ 1 ಮತ್ತು 2 ಪೂರ್ಣಗೊಂಡಿವೆ. ಇದು ಭರವಸೆಯ ಫಲಿತಾಂಶಗಳನ್ನು ನೀಡಿದೆ.
ಐಸಿಎಂಆರ್ ಸಹಯೋಗದೊಂದಿಗೆ ನಡೆಸಲಾದ ಹಂತ 3 ಕ್ಲಿನಿಕಲ್ ಪ್ರಯೋಗವು 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 10,335 ಕ್ಕೂ ಹೆಚ್ಚು ಆರೋಗ್ಯವಂತ ವಯಸ್ಕ ಭಾಗವಹಿಸುವವರನ್ನು ಒಳಗೊಂಡ 19 ಪ್ರದೇಶಗಳಲ್ಲಿ ನಡೆಯಲಿದೆ.

ಇದನ್ನೂ ಓದಿ: Bridge Collapse: 9 ವರ್ಷಗಳಿಂದ ನಿರ್ಮಾಣವಾಗುತ್ತಿರುವ ಸೇತುವೆ 3ನೇ ಬಾರಿ ಕುಸಿದು ಬಿತ್ತು; ವಿಡಿಯೊ ನೋಡಿ

ಭಾರತವು ಡೆಂಗ್ಯೂ ರೋಗದ ಅತಿ ಹೆಚ್ಚು ಸಂಭವವಿರುವ ಟಾಪ್ 30 ದೇಶಗಳಲ್ಲಿ ಒಂದಾಗಿದೆ. ಡಬ್ಲ್ಯೂ ಹೆಚ್‌ಒ ವರದಿಯ ಪ್ರಕಾರ ಭಾರತದಲ್ಲಿ ಸುಮಾರು ಶೇ. 75-80ರಷ್ಟು ಸೋಂಕುಗಳು ಲಕ್ಷಣ ರಹಿತವಾಗಿವೆ. ಆದರೂ ಈ ವ್ಯಕ್ತಿಗಳು ಈಡಿಸ್ ಸೊಳ್ಳೆಗಳ ಕಡಿತದ ಮೂಲಕ ಸೋಂಕನ್ನು ಹರಡಬಹುದು. ರೋಗ ಲಕ್ಷಣಗಳು ಪ್ರಾಯೋಗಿಕವಾಗಿ ಸ್ಪಷ್ಟವಾಗಿ ಕಂಡುಬರುವ ಶೇ. 20-25 ಪ್ರಕರಣಗಳಲ್ಲಿ ಮಕ್ಕಳು ಹೆಚ್ಚಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದು, ಮರಣದ ಅಪಾಯವೂ ಹೆಚ್ಚಾಗಿರುತ್ತದೆ.

Continue Reading

Latest

Viral Video: ಕಂಬಕ್ಕೆ ಸಿಲುಕಿದ ತ್ರಿವರ್ಣ ಧ್ವಜ; ಮಿಂಚಂತೆ ಬಂದು ಧ್ವಜ ಬಿಡಿಸಿದ ಹಕ್ಕಿ; ಅಪರೂಪದ ಘಟನೆ!

Viral Video: ಸ್ವಾತಂತ್ರ್ಯ ದಿನಾಚರಣೆ, ರಾಷ್ಟ್ರಧ್ವಜವೆಂದರೆ ಎಲ್ಲರೊಳಗೂ ಒಂದು ಭಕ್ತಿ ಭಾವವಿರುತ್ತದೆ. ಸಾಕಷ್ಟು ರಕ್ತಹರಿಸಿ ನಾವು ನಮ್ಮ ದೇಶದ ಸ್ವಾತಂತ್ರ್ಯವನ್ನು ಪಡೆದುಕೊಂಡಿದ್ದೇವೆ. ಹಾಗೇ ಈ ಸ್ವಾತಂತ್ಯ ದಿನಾಚರಣೆಯಂದು ನಡೆದ ಘಟನೆಯೊಂದು ಈ ಸಿಕ್ಕಾಪಟ್ಟೆ ವೈರಲ್ ಆಗಿದೆ. ಈ ವೈರಲ್ ವಿಡಿಯೊದಲ್ಲಿ ರಾಷ್ಟ್ರಧ್ವಜವನ್ನು ಹಗ್ಗಕ್ಕೆ ಕಟ್ಟಿ ಮೇಲಕ್ಕೆ ಎಳೆಯುವಾಗ ಎಷ್ಟೇ ಎಳೆದರೂ ಧ್ವಜ ಬಿಡಿಸಿಕೊಂಡು ಹಾರಲಿಲ್ಲ. ಆಗ ಇದ್ದಕ್ಕಿದ್ದಂತೆ ಎಲ್ಲಿಂದಲೋ ಬಂದ ಹಕ್ಕಿಯೊಂದು ಧ್ವಜವನ್ನು ಬಿಡಿಸಿ ಅದು ಹಾರುವಂತೆ ಮಾಡಿ ಹಾರಿ ಹೋಗಿದೆ. ವಿಡಿಯೊ ಸಿಕ್ಕಾಪಟ್ಟೆ ವೈರಲ್ ಆಗಿದೆ.

VISTARANEWS.COM


on

Viral Video
Koo


ಆಗಸ್ಟ್ 15ರಂದು ದೇಶದ ಸ್ವಾತಂತ್ರ್ಯೋತ್ಸವವನ್ನು ಎಲ್ಲಾ ಕಡೆ ಧ್ವಜ ಹಾರಿಸುವ ಮೂಲಕ ಸಂಭ್ರಮದಿಂದ ಆಚರಿಸಲಾಗಿತ್ತು. ಸೋಶಿಯಲ್ ಮೀಡಿಯಾಗಳಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮಕ್ಕೆ ಸಂಬಂಧಿಸಿದ ಹಲವು ವಿಡಿಯೊಗಳನ್ನು ಪೋಸ್ಟ್ ಮಾಡಲಾಗಿತ್ತು. ಆದರೆ ಒಂದು ವಿಡಿಯೊ ಮಾತ್ರ ಸೋಶಿಯಲ್ ಮೀಡಿಯಾದಲ್ಲಿ ಎಲ್ಲರಲ್ಲೂ ಆಶ್ಚರ್ಯ ಮೂಡಿಸುವ ಮೂಲಕ ಗಮನ ಸೆಳೆದಿದ್ದು, ಸಿಕ್ಕಾಪಟ್ಟೆ ವೈರಲ್(Viral Video) ಆಗಿದೆ.

ಈ ವೈರಲ್ ವಿಡಿಯೊದಲ್ಲಿ ಶಾಲೆಯ ಮಕ್ಕಳು ಝಂಡಾ ಊಂಚಾ ರಹೆ ಹಮಾರಾ ಎಂಬ ಹಿಂದಿ ಭಾಷೆಯ ದೇಶ ಭಕ್ತಿಗೀತೆ ಹಾಡುತ್ತಿರುವುದು ಕೇಳುತ್ತಿದೆ. ಆ ವೇಳೆ ರಾಷ್ಟ್ರಧ್ವಜವನ್ನು ಹಗ್ಗಕ್ಕೆ ಕಟ್ಟಿ ಮೇಲಕ್ಕೆ ಎಳೆಯುತ್ತಿದ್ದಾರೆ. ಆದರೆ ಧ್ವಜ ಮೇಲೆ ಹೋಗಿ ಎಷ್ಟೇ ಎಳೆದರೂ ಅದು ಬಿಡಿಸಿಕೊಂಡು ಹಾರಲಿಲ್ಲ. ಆಗ ಇದ್ದಕ್ಕಿದ್ದಂತೆ ಎಲ್ಲಿಂದಲೋ ಬಂದ ಹಕ್ಕಿಯೊಂದು ಧ್ವಜವನ್ನು ಬಿಡಿಸಿ ಅದು ಹಾರುವಂತೆ ಮಾಡಿ ಹಾರಿ ಹೋಗಿದೆ. ವಿಡಿಯೊ ಕೊನೆಯಲ್ಲಿ ಮಲಯಾಳಂನಲ್ಲಿ ಕೈಯಡಿ ಕೈಯಡಿ ( ಚಪ್ಪಾಳೆ ತಟ್ಟಿ, ಚಪ್ಪಾಳೆ ತಟ್ಟಿ) ಎನ್ನುತ್ತಿರುವುದು ಕೇಳಿದೆ.

ಈ ವಿಡಿಯೊವನ್ನು ನಚಿಕೇತಸ್ (@nach1keta) ಎಂಬ ಮೈಕ್ರೋ ಬ್ಲಾಗಿಂಗ್ ತಾಣ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಆಗಸ್ಟ್ 16ರ ರಾತ್ರಿ 11.24ಕ್ಕೆ ಈ ವಿಡಿಯೊವನ್ನು ಹಂಚಿಕೊಳ್ಳಲಾಗಿದ್ದು, ಈಗ ಇದು ವೈರಲ್ ಆಗಿದೆ. ಈ ವಿಡಿಯೊ ಈಗಾಗಲೇ 7700ಕ್ಕೂ ಹೆಚ್ಚು ಲೈಕ್ಸ್ ,11 ಸಾವಿರಕ್ಕೂ ಹೆಚ್ಚು ವೀವ್ಸ್, 1600ಕ್ಕೂ ಹೆಚ್ಚು ರೀಟ್ವೀಟ್ ಮತ್ತು 50ರಷ್ಟು ಕಾಮೆಂಟ್ ಕೂಡ ಬಂದಿದೆ. ಹಲವರು ಈ ವಿಡಿಯೊವನ್ನು ಡೌನ್ಲೋಡ್ ಮಾಡಿ ತಮ್ಮ ಖಾತೆಯಿಂದ ಶೇರ್ ಕೂಡ ಮಾಡಿದ್ದಾರೆ. ಇದು ಕೇರಳದ ವಿಡಿಯೊ ಎಂದು ಹೇಳಲಾಗುತ್ತಿದ್ದು, ಈ ಘಟನೆ ಯಾವಾಗ ಮತ್ತು ಎಲ್ಲಿ ನಡೆಯಿತು ಎಂಬುದು ತಿಳಿದುಬಂದಿಲ್ಲ.

ಈ ವಿಡಿಯೊ ನೋಡಿದವರು ಒಂದೊಂದು ರೀತಿ ಕಾಮೆಂಟ್ ಮಾಡಿದ್ದಾರೆ. ಹಲವರು ವಾವ್ ಎಂದು ಬರೆದರೆ, ಅನೇಕರು ಈ ವಿಡಿಯೊ ಬಗ್ಗೆ ಸಂದೇಹ ವ್ಯಕ್ತಪಡಿಸಿದ್ದಾರೆ.ಈ ವಿಡಿಯೊಗೆ ಕಾಮೆಂಟ್ ಮಾಡಿದ ಒಬ್ಬರು ಆ ಹಕ್ಕಿ ಹಿಂದಿನ ಜನ್ಮದಲ್ಲಿ ಸೈನಿಕನಾಗಿ ಕೆಲಸ ಮಾಡಿರಬೇಕು ಎಂದು ಹೇಳಿದರೆ, ಇನ್ನೊಬ್ಬರು , ಆ ಹಕ್ಕಿ ಉದ್ದೇಶಪೂರ್ವಕವಾಗಿಯೇ ಧ್ವಜದ ಹತ್ತಿರ ಬಂದಿದೆ. ಧ್ವಜ ಹಾರಿದ ಕೂಡಲೇ ಅಲ್ಲಿಂದ ಹಿಂತಿರುಗಿದೆ, ನಿಜಕ್ಕೂ ಪವಾಡದಂತೆಯೇ ಇದೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಆ ಹಕ್ಕಿ ದೂರದಲ್ಲೆಲ್ಲೋ ತೆಂಗಿನ ಮರದ ಮೇಲಿತ್ತು. ಅದು ರಾಷ್ಟ್ರಧ್ವಜಕ್ಕೆ ಸಮೀಪದಲ್ಲೆಲ್ಲೂ ಇರಲಿಲ್ಲ. ಇದ್ದಕ್ಕಿದ್ದಂತೆ ಬಂದಿದೆ ಎಂದರೆ ಅದು ವಿಷುವಲ್ ಎಫೆಕ್ಟ್ ಇರಬೇಕು ಎಂದು ಕಾಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ:ನಡು ರಸ್ತೆಯಲ್ಲಿ ಸ್ಟಂಟ್ ಮಾಡುತ್ತ ಬೈಕ್‍ ಸವಾರರ ರೀಲ್ಸ್; ಮುಂದೇನಾಯ್ತು ನೋಡಿ!

ಇತ್ತೀಚೆಗಷ್ಟೇ ಜಪಾನಿನ ಫೇಮಸ್ ಕೋಕಿ ಶಿಶಿಡೋ ಅವರು ‘ಜಪಾನ್ ನಲ್ಲಿ 24 ಗಂಟೆಗಳ ಭಾರತೀಯ ಆಹಾರ ಚಾಲೆಂಜ್’ ಅನ್ನು ಸ್ವೀಕರಿಸಿ ಜಪಾನ್‌ನ ಭಾರತೀಯ ಪಾಕಪದ್ಧತಿ ರೆಸ್ಟೋರೆಂಟ್‌ಗೆ ಭೇಟಿ ನೀಡುವ ವಿಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಅವರು ರೆಸ್ಟೋರೆಂಟ್‍ಗೆ ಭೇಟಿ ನೀಡಿದಾಗ, ಜನರು ವಿಡಿಯೊ ನೋಡಿ ಅದರಲ್ಲಿ ಏನೋ ಸರಿಯಾಗಿಲ್ಲ ಎಂದು ಕಂಡುಕೊಂಡರು. ಆದರೆ ಜನರ ಗಮನವನ್ನು ಸೆಳೆದದ್ದು ಆಹಾರ ಅಥವಾ ಸಿಬ್ಬಂದಿಯ ನಡವಳಿಕೆಯಲ್ಲ ಬದಲಾಗಿ ಭಾರತೀಯ ತ್ರಿವರ್ಣ ಧ್ವಜವನ್ನು ಪ್ರದರ್ಶಿಸಿದ ರೀತಿ ಅಲ್ಲಿ ತಪ್ಪಾಗಿತ್ತು. ಭಾರತದ ತ್ರಿವರ್ಣ ಧ್ವಜವನ್ನು ತಲೆಕೆಳಗಾಗಿ ನೇತುಹಾಕಲಾಗಿದೆ ಎಂದು ನೆಟ್ಟಿಗರು ತಿಳಿಸಿದ್ದಾರೆ.

Continue Reading

ಕ್ರೈಂ

sexual abuse: ಪ್ರತಿ ಗಂಟೆಗೆ ನಡೆಯುವ 4 ಅತ್ಯಾಚಾರದಲ್ಲಿ 3 ಪ್ರಕರಣಗಳ ಆರೋಪಿಗಳು ಪರಿಚಿತರೇ! ಆಘಾತಕಾರಿ ಅಂಕಿಅಂಶ

ಕೋಲ್ಕತ್ತಾದಲ್ಲಿ 31 ವರ್ಷದ ಟ್ರೈನಿ ವೈದ್ಯೆಯ ಅತ್ಯಾಚಾರ (sexual abuse) ಮತ್ತು ಹತ್ಯೆಯ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಹೆಣ್ಣು ಮಕ್ಕಳು, ಇವರ ಪೋಷಕರು ಆತಂಕ ಪಡುವ ಸುದ್ದಿಯೊಂದನ್ನು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಬಿಡುಗಡೆ ಮಾಡಿದೆ. ಅದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

sexual abuse
Koo

ಹೆಣ್ಣು ಮಕ್ಕಳು, ಇವರ ಪೋಷಕರು ಆತಂಕ ಪಡುವ (sexual abuse) ಸುದ್ದಿಯೊಂದಿದೆ. ದೇಶದಲ್ಲಿ ಪ್ರತಿ ಗಂಟೆಗೆ ನಾಲ್ಕು ಅತ್ಯಾಚಾರ (Rape Case) ಪ್ರಕರಣಗಳು ನಡೆಯುತ್ತಿದ್ದು, ಶೇ. 95 ಪ್ರಕರಣಗಳಲ್ಲಿ ತಿಳಿದಿರುವ ವ್ಯಕ್ತಿಗಳಿಂದಲೇ (Known person) ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆಯುತ್ತಿರುವುದು ಆತಂಕದ ಸಂಗತಿಯಾಗಿದೆ. ಅದರಲ್ಲೂ 18ರಿಂದ 30 ವರ್ಷದೊಳಗಿನವರೇ ಹೆಚ್ಚಿನ ಪ್ರಕರಣಗಳಲ್ಲಿ ಬಲಿಪಶುಗಳಾಗಿದ್ದಾರೆ. 2017ರಿಂದ 2022ರ ನಡುವೆ ಪ್ರತಿದಿನ ಸರಾಸರಿ 86 ಅತ್ಯಾಚಾರ ಪ್ರಕರಣಗಳು ವರದಿಯಾಗಿದೆ. ಇದರಲ್ಲಿ 82 ಪ್ರಕರಣಗಳಲ್ಲಿ ಸಂತ್ರಸ್ತ ಮಹಿಳೆಗೆ ಗೊತ್ತಿರುವವರಿಂದಲೇ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ.

ಗಂಟೆಗೆ ನಾಲ್ಕು ಪ್ರಕರಣ

ದೇಶದಲ್ಲಿ ಪ್ರತಿ ಗಂಟೆಗೆ ಸುಮಾರು ನಾಲ್ಕು ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿದ್ದು, ಇವುಗಳಲ್ಲಿ ಮೂರಕ್ಕೂ ಹೆಚ್ಚು ಪ್ರಕರಣಗಳಲ್ಲಿ ಸಂತ್ರಸ್ತೆಯು ಅತ್ಯಾಚಾರ ನಡೆಸಿದವರನ್ನು ಬಲ್ಲವಳಾಗಿದ್ದಳು ಎಂದು ದಾಖಲೆಗಳು ಹೇಳಿವೆ.

ವಾರ್ಷಿಕ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ವರದಿಯ ಪ್ರಕಾರ 2017ರಿಂದ 2022ರ ನಡುವೆ ಭಾರತದಲ್ಲಿ ಒಟ್ಟು 1.91 ಲಕ್ಷ ಅತ್ಯಾಚಾರ ಪ್ರಕರಣಗಳು ನಡೆದಿದೆ ಎನ್ನಲಾಗಿದ್ದು, 1.89 ಲಕ್ಷ ಅತ್ಯಾಚಾರ ಪ್ರಕರಣಗಳು ವರದಿಯಾಗಿದೆ. ಕನಿಷ್ಠ 1.79 ಲಕ್ಷ ಪ್ರಕರಣಗಳಲ್ಲಿ ಅತ್ಯಾಚಾರಿ ತಿಳಿದಿರುವ ವ್ಯಕ್ತಿಯಾಗಿದ್ದು, 9,670 ಪ್ರಕರಣಗಳಲ್ಲಿ ಅಷ್ಟೇ ಬಲಿಪಶುವಿಗೆ ತಿಳಿದಿಲ್ಲ.

18ರಿಂದ 30 ವರ್ಷದೊಳಗಿನವರೇ ಹೆಚ್ಚಿನ ಬಲಿಪಶುಗಳು

1.89 ಲಕ್ಷ ಪ್ರಕರಣಗಳಲ್ಲಿ 1.13 ಲಕ್ಷ ಅತ್ಯಾಚಾರ ಸಂತ್ರಸ್ತರು 18ರಿಂದ 30 ವರ್ಷ ವಯಸ್ಸಿನವರಾಗಿದ್ದಾರೆ. ಹೀಗಾಗಿ ಪ್ರತಿದಿನ ದಾಖಲಾಗುವ 86 ಅತ್ಯಾಚಾರ ಪ್ರಕರಣದಲ್ಲಿ 52 ಮಂದಿ 18ರಿಂದ 30 ವರ್ಷದೊಳಗಿನವರು. ಉಳಿದ ಪ್ರಕರಣಗಳು ದಿನಕ್ಕೆ 35 ಆಗಿದ್ದು, ಇತರ ವಯಸ್ಸಿನವರು ಎನ್ನಲಾಗಿದೆ.

ಕೆಲಸದ ಸ್ಥಳ ಸುರಕ್ಷಿತವೇ?

ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳದ ಪ್ರಕರಣಗಳು ಬಹಳ ಕಡಿಮೆಯಾದರೂ ಸರಾಸರಿಯಾಗಿ ಪ್ರತಿದಿನ ಕನಿಷ್ಠ ಒಬ್ಬ ಮಹಿಳೆ ಕೆಲಸದಲ್ಲಿ ಅಥವಾ ಕಚೇರಿ ಆವರಣದಲ್ಲಿ ಲೈಂಗಿಕ ಕಿರುಕುಳವನ್ನು ಎದುರಿಸುತಿದ್ದರೆ ಎನ್ನುವುದನ್ನು ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಅಂಕಿ ಅಂಶ ತಿಳಿಸಿದೆ. 2014ರಿಂದ ಎನ್‌ಸಿಆರ್‌ಬಿ ಕಚೇರಿಯು ಐಪಿಸಿಯ ಸೆಕ್ಷನ್ 509 ಅವಮಾನದ ವರ್ಗದ ಅಡಿಯಲ್ಲಿ ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳದ ಕುರಿತು ಡೇಟಾವನ್ನು ಸಂಗ್ರಹಿಸಲು ಪ್ರಾರಂಭಿಸಿತು.

ಆರಂಭಿಕ ವರ್ಷಗಳಲ್ಲಿ ಅಂದರೆ 2014 ಮತ್ತು 2015ರಲ್ಲಿ ಕಚೇರಿ ಆವರಣದಲ್ಲಿ ಲೈಂಗಿಕ ಕಿರುಕುಳ ಮತ್ತು ಇನ್ನೊಂದು ಕೆಲಸಕ್ಕೆ ಸಂಬಂಧಿಸಿದ ಸ್ಥಳಗಳು ಎಂಬ ಎರಡು ವಿಭಿನ್ನ ವಿಭಾಗಗಳನ್ನು ಹೊಂದಿದ್ದವು. ಆದರೆ 2016 ರ ಅನಂತರ ಈ ವರ್ಗಗಳನ್ನು ಲೈಂಗಿಕ ಕಿರುಕುಳ ‘ಕೆಲಸ ಅಥವಾ ಕಚೇರಿ ಆವರಣದಲ್ಲಿ’ ಎಂಬುದಾಗಿ ವಿಲೀನಗೊಳಿಸಲಾಗಿದೆ.

2014 ಮತ್ತು 2022ರ ನಡುವೆ ಕೆಲಸ ಅಥವಾ ಕಚೇರಿ ಆವರಣದಲ್ಲಿ ಕನಿಷ್ಠ 4,231 ಲೈಂಗಿಕ ಕಿರುಕುಳ ಪ್ರಕರಣಗಳು ದಾಖಲಾಗಿವೆ. ಆರಂಭದಲ್ಲಿ ಕಚೇರಿ ಆವರಣದಲ್ಲಿ ಲೈಂಗಿಕ ಕಿರುಕುಳದ ಪ್ರಕರಣಗಳ ಸಂಖ್ಯೆಯು ಕಡಿಮೆಯಿತ್ತು. ಆದರೆ 2017 ರ ಅನಂತರ ಪ್ರತಿ ವರ್ಷ 400 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತವೆ.

2014, 2015 ಮತ್ತು 2016 ರಲ್ಲಿ ಎನ್‌ಸಿಆರ್‌ಬಿ ಉದ್ಯೋಗದಾತರು ಅಥವಾ ಸಹೋದ್ಯೋಗಿಗಳಿಂದ ಅತ್ಯಾಚಾರಗಳ ಸಂಖ್ಯೆಯನ್ನು ಬಹಿರಂಗಪಡಿಸಿದೆ. ಆರಂಭದ ಮೂರು ವರ್ಷಗಳಲ್ಲಿ ಉದ್ಯೋಗದಾತರು ಅಥವಾ ಸಹೋದ್ಯೋಗಿಗಳಿಂದ 1,795 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಪ್ರತಿದಿನ ಸುಮಾರು ಎರಡು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Child Trafficking: ಗೋವಾಗೆ ಕಳ್ಳಸಾಗಣೆ ಮಾಡುತ್ತಿದ್ದ ಹೆಣ್ಣು ಶಿಶು ರಕ್ಷಣೆ ವೇಳೆ ಅಧಿಕಾರಿಗಳ ಮೇಲೆ‌ ಹಲ್ಲೆ

ಕೆಲಸದ ಸ್ಥಳದಲ್ಲಿ ಮಹಿಳೆಯರ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ ಕಾಯಿದೆಯ ಅಡಿಯಲ್ಲಿ 2013ರಿಂದ ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳದ ದೂರುಗಳನ್ನು ಸ್ವೀಕರಿಸಲು 10ಕ್ಕಿಂತ ಹೆಚ್ಚು ಕೆಲಸಗಾರರನ್ನು ಹೊಂದಿರುವ ಎಲ್ಲಾ ಕೆಲಸದ ಸ್ಥಳಗಳಲ್ಲಿ ಆಂತರಿಕ ಸಮಿತಿಗಳನ್ನು ರಚಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ನೊಂದ ಮಹಿಳೆ ಅಥವಾ ಆಕೆಯ ಪರವಾಗಿ ಅಧಿಕಾರ ಹೊಂದಿರುವ ಯಾವುದೇ ವ್ಯಕ್ತಿ ಲೈಂಗಿಕ ಕಿರುಕುಳದ ಲಿಖಿತ ದೂರನ್ನು ಸಲ್ಲಿಸಬಹುದು.

Continue Reading
Advertisement
tungabhadra dam gate
ಪ್ರಮುಖ ಸುದ್ದಿ20 mins ago

Tungabhadra Dam: ಮುರಿದುಹೋದ 19ನೇ ಗೇಟ್‌ಗೆ ಸ್ಟಾಪ್‌ ಲಾಗ್‌ ಅಳವಡಿಕೆ ಯಶಸ್ವಿ, ಪೋಲಾಗುತ್ತಿದ್ದ ನೀರು ಬಂದ್!

CM Siddaramaiah
ಪ್ರಮುಖ ಸುದ್ದಿ30 mins ago

CM Siddaramaiah : ಸಿಎಂ ಸಿದ್ದರಾಮಯ್ಯಗೆ ಉರುಳಾಗಿರುವ ಮುಡಾ ಹಗರಣ ಏನು? ಇಲ್ಲಿದೆ ಎಲ್ಲ ಮಾಹಿತಿ

Murder Case
Latest41 mins ago

Murder Case: ಮಮತಾ ರಾಜ್ಯದಲ್ಲಿ ಕೊಲೆ ಸರಣಿ; ಬೆಂಗಳೂರಿನಿಂದ ಊರಿಗೆ ಬಂದಿದ್ದ ಯುವತಿಯ ರುಂಡ ಕಡಿದು ಕೊಲೆ!

cm siddaramaiah congress protest
ಪ್ರಮುಖ ಸುದ್ದಿ49 mins ago

CM Siddaramaiah: ರಾಜ್ಯಪಾಲರ ನಡೆ ಖಂಡಿಸಿ ಸೋಮವಾರ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

Mohammed Shami comeback
ಕ್ರಿಕೆಟ್52 mins ago

Mohammed Shami Comeback: ಟೀಮ್​ ಇಂಡಿಯಾಕ್ಕೆ ಮರಳುವ ಸೂಚನೆ ನೀಡಿದ ಶಮಿ; ಎನ್​ಸಿಎಯಲ್ಲಿ ಕಠಿಣ ಅಭ್ಯಾಸ

ಕಾಲಿವುಡ್58 mins ago

Thangalaan Movie: ಸೀಕ್ವೆಲ್ ಆಗಿ ಬರಲಿದೆ ‘ತಂಗಲಾನ್ʼ; ಹೊಸ ದಾಖಲೆ ಬರೆದ ಚಿಯಾನ್ ವಿಕ್ರಮ್‍!

Dengue Vaccine
ಆರೋಗ್ಯ1 hour ago

Dengue Vaccine: ಭಾರತದ ಮೊದಲ ಡೆಂಗ್ಯೂ ಲಸಿಕೆ; 3ನೇ ಹಂತದ ಪ್ರಯೋಗ ಪ್ರಾರಂಭ

ಫ್ಯಾಷನ್1 hour ago

Nail Extension Beauty Trend: ಬ್ಯೂಟಿ ಲೋಕದಲ್ಲಿ ಟ್ರೆಂಡಿಯಾದ ನೇಲ್ ಎಕ್ಸ್‌ಟೆನ್ಷನ್ ಕಾನ್ಸೆಪ್ಟ್

governor Thawarchand gehlot and CM Siddaramaiah
ಪ್ರಮುಖ ಸುದ್ದಿ1 hour ago

CM Siddaramaiah: ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವ 6 ಪುಟಗಳ ಪತ್ರದಲ್ಲಿ ಏನೇನಿದೆ? ಕೊಟ್ಟ ಸಮರ್ಥನೆಗಳು ಹೀಗಿವೆ

Rakshit Shetty Copyright Infringement 20 lakhs for Delhi High Court orders deposit
ಸ್ಯಾಂಡಲ್ ವುಡ್1 hour ago

Rakshit Shetty: ಕಾಪಿ ರೈಟ್ ಉಲ್ಲಂಘನೆ; ರಕ್ಷಿತ್ ಶೆಟ್ಟಿಗೆ 20 ಲಕ್ಷ ರೂ. ಠೇವಣಿ ಇಡುವಂತೆ ದೆಹಲಿ ಹೈಕೋರ್ಟ್ ಆದೇಶ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌