Viral Video: ಎಲ್ಲ ಬಿಟ್ಟು ಟ್ರಾನ್ಸ್‌ಫಾರ್ಮರ್‌ ಏರಿ ಸತ್ತ ಕರಡಿ; ಮೃತ ದೇಹದ ಮೇಲೆ ಕೂತ ಲೈನ್‌ಮನ್! - Vistara News

Latest

Viral Video: ಎಲ್ಲ ಬಿಟ್ಟು ಟ್ರಾನ್ಸ್‌ಫಾರ್ಮರ್‌ ಏರಿ ಸತ್ತ ಕರಡಿ; ಮೃತ ದೇಹದ ಮೇಲೆ ಕೂತ ಲೈನ್‌ಮನ್!

ಹಿಮಾಚಲ ಪ್ರದೇಶದ ಕಥಲಾಗ್ ಪ್ರದೇಶದಲ್ಲಿ‌ (Viral Video) ವಿದ್ಯುತ್ ಶಾಕ್ ತಗುಲಿ ಹೆಣ್ಣು ಕರಡಿ ಮತ್ತು ಅದರ ಮರಿ ಸಾವನಪ್ಪಿತ್ತು. ಆದರೆ ವ್ಯಕ್ತಿಯೊಬ್ಬ ಆ ಕರಡಿಯ ಮೃತದೇಹದ ಜೊತೆ ಪೋಸ್ ನೀಡುತ್ತಾ ಫೋಟೊಶೂಟ್ ಮಾಡಿದ್ದಲ್ಲದೇ ಅದರ ದೇಹವನ್ನು ಅಮಾನವೀಯವಾಗಿ ಎಸೆಯುವುದು ಕಂಡುಬಂದಿದೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಜನರ ಆಕ್ರೋಶಕ್ಕೆ ಕಾರಣವಾಗಿದೆ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo


ಮನಸ್ಸಿನಲ್ಲಿ ಕರುಣೆಯ ಭಾವನೆ ಇರುವವರನ್ನು ಮನುಷ್ಯರು ಎಂದು ಕರೆಯುತ್ತಾರೆ. ಆದರೆ ಇಂದಿನ ಕಾಲದ ಮನುಷ್ಯರಲ್ಲಿ ಮನುಷ್ಯತ್ವದ ಭಾವನೆ ಮಾಯವಾಗಿದೆ. ಸತ್ತ ದೇಹವನ್ನು ನೋಡಿ ಮಾನವೀಯತೆ ಇಲ್ಲದಂತಹ ಪ್ರಾಣಿಗಳು ಹೇಗೆ ವರ್ತಿಸುತ್ತವೆ ಹಾಗೇ ಇಂದಿನ ಜನರು ವರ್ತಿಸುತ್ತಿದ್ದಾರೆ. ಇದಕ್ಕೆ ಉದಾಹರಣೆಯೆಂಬಂತೆ ಇತ್ತೀಚೆಗೆ ಹಿಮಾಚಲ ಪ್ರದೇಶದಲ್ಲಿ ನಡೆದ ಘಟನೆಯೇ ಸಾಕ್ಷಿ. ಹಿಮಾಚಲ ಪ್ರದೇಶದ ಡಾಲ್‌ಹೌಸಿಯಲ್ಲಿ ಗುರುವಾರ ತಡರಾತ್ರಿ ವಿದ್ಯುತ್‌ ಶಾಕ್‌ ತಗುಲಿ ಹೆಣ್ಣು ಕರಡಿ ಮತ್ತು ಅದರ ಮರಿ ಸಾವನಪ್ಪಿದ ಘಟನೆ ನಡೆದಿದೆ. ಆದರೆ ವ್ಯಕ್ತಿಯೊಬ್ಬ ಆ ಕರಡಿಯ ಮೃತದೇಹದ ಜೊತೆ ಪೋಸ್ ನೀಡುತ್ತಾ ಫೋಟೊಶೂಟ್ ಮಾಡಿದ್ದಲ್ಲದೇ ಅದರ ದೇಹವನ್ನು ಅಮಾನವೀಯವಾಗಿ ಎಸೆಯುವುದು ಕಂಡುಬಂದಿದೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video)ಆಗಿ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಕಥಲಾಗ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಈ ವೈರಲ್ ವಿಡಿಯೊದಲ್ಲಿ ಟ್ರಾನ್ಸ್ ಫಾರ್ಮರ್ ಕಂಬದಲ್ಲಿ ಸಿಕ್ಕಿಬಿದ್ದ ಕರಡಿಯ ದೇಹವನ್ನು ತೆಗೆಯಲು ವ್ಯಕ್ತಿಯೊಬ್ಬರು ಮೇಲಕ್ಕೆ ಹತ್ತಿದ್ದಾರೆ. ಅವರು ಅದರ ದೇಹವನ್ನು ಕೆಳಗೆ ಎಸೆದಿದ್ದಾರೆ. ಆದರೆ ಈ ವ್ಯಕ್ತಿ ಅಧಿಕಾರಿಯೇ ಅಥವಾ ಸ್ಥಳೀಯರೇ ಎಂಬುದು ಸ್ಪಷ್ಟವಾಗಿಲ್ಲ, ಆದರೆ ಅವರು ಕರಡಿಯ ದೇಹವನ್ನು ಎಸೆದು ಅದರೊಂದಿಗೆ ಪೋಸ್ ನೀಡಿ ಫೋಟೊಶೂಟ್ ಮಾಡಿದ್ದಾರೆ. ನಂತರ ಅಮಾನುಷವಾಗಿ ಕರಡಿಯ ಮೃತದೇಹವನ್ನು ಎಸೆದಿದ್ದಾರೆ.

ಕೆಲವು ವರದಿಗಳ ಪ್ರಕಾರ, ಆ ವ್ಯಕ್ತಿಯನ್ನು ಮುನ್ಸಿಪಲ್ ಕೌನ್ಸಿಲ್ ಜೂನಿಯರ್ ಎಂಜಿನಿಯರ್ ಸಂಜೀವ್ ಶರ್ಮಾ ಎಂದು ಗುರುತಿಸಲಾದ ವಿದ್ಯುತ್ ಇಲಾಖೆ ಸಿಬ್ಬಂದಿ ಎನ್ನಲಾಗಿದೆ. ಅವರು ಕೆಲವು ಅರಣ್ಯ ಇಲಾಖೆ ಅಧಿಕಾರಿಗಳ ಸಹಾಯದಿಂದ ವಿದ್ಯುತ್ ಆಘಾತಕ್ಕೊಳಗಾದ ಕರಡಿಯ ದೇಹವನ್ನು ಟ್ರಾನ್ಸ್ ಫಾರ್ಮರರ್‌ನಿಂದ ಕೆಳಗೆ ಇಳಿಸಿದ್ದಾರೆ ಎನ್ನಲಾಗಿದೆ.

ಆದರೆ ವ್ಯಕ್ತಿಯ ಈ ಅಮಾನವೀಯ ಕೃತ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಕರಡಿಯ ಮೃತ ದೇಹದ ಜೊತೆ ಅವರು ವರ್ತಿಸಿದ ರೀತಿಯ ವಿರುದ್ಧ ಪ್ರಾಣಿ ಪ್ರಿಯರು ಮತ್ತು ಕಲ್ಯಾಣ ಕಾರ್ಯಕರ್ತರು ಧ್ವನಿ ಎತ್ತಿದ್ದಾರೆ. ಈ ವಿಡಿಯೊವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಾಗ, ವಿದ್ಯುತ್ ಆಘಾತಕ್ಕೊಳಗಾದ ಕರಡಿಯ ಮೃತ ದೇಹವನ್ನು ನಿರ್ದಯವಾಗಿ ಟ್ರಾನ್ಸ್ಫಾರ್ಮರ್ ನಿಂದ ಎಸೆದ ನಂತರ ಅದರ ಮೇಲೆ ಕುಳಿತು ಪೋಸ್ ನೀಡಿದ ವ್ಯಕ್ತಿಯ ಅಗೌರವ ಮತ್ತು ಅಮಾನವೀಯ ಕೃತ್ಯವನ್ನು ಖಂಡಿಸಿ ಜನರು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ:ಸಿರಾಜ್‌ ಅಹ್ಮದ್‌ ಎಂಬಾತನ ಕಿರುಕುಳ; ಕುತ್ತಿಗೆಗೆ ಇರಿದುಕೊಂಡು ಸಾಯಲೆತ್ನಿಸಿದ ಬಾಲಕಿ; ಆತಂಕಕಾರಿ ವಿಡಿಯೊ

“ಇದು ನೋಡಲು ನಾಚಿಕೆಗೇಡಿನ ದೃಶ್ಯವಾಗಿದೆ. ಸಾವಿನ ಬಗ್ಗೆ ಯಾವುದೇ ಗೌರವವಿಲ್ಲದ ಆತ ನಾಚಿಕೆಯಿಲ್ಲದ ವ್ಯಕ್ತಿ” ಎಂದು ಬಳಕೆದಾರರೊಬ್ಬರು ಬರೆದರೆ, ಇನ್ನೊಬ್ಬರು “ಮೃತ ದೇಹಗಳೊಂದಿಗೆ ಫೋಟೋ ತೆಗೆದುಕೊಳ್ಳುವುದು ಸಂಪೂರ್ಣವಾಗಿ ಭಯಾನಕ ಮತ್ತು ಸಂಪೂರ್ಣವಾಗಿ ಅಗೌರವದಿಂದ ಕೂಡಿದೆ” ಎಂದು ಬರೆದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಧಾರ್ಮಿಕ

Rayara Aradhane 2024: ನಾಳೆಯಿಂದ ರಾಘವೇಂದ್ರ ಸ್ವಾಮಿ ಆರಾಧನಾ ಮಹೋತ್ಸವ; ಗುರುಗಳ ಜೀವನ ಹೇಗಿತ್ತು, ಸಂದೇಶ ಏನಾಗಿತ್ತು?

ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿಗಳು ಬೃಂದಾವನವನ್ನು (Rayara Aradhane 2024) ಪ್ರವೇಶಿಸಿರುವ ದಿನವನ್ನು ಆರಾಧನಾ ಮಹೋತ್ಸವವಾಗಿ (Raghavendra Aradhana Mahotsava) ಆಚರಿಸಲಾಗುತ್ತದೆ. ದೇಶ ವಿದೇಶಗಳಲ್ಲಿ ಈ ಬಾರಿ ಗುರುಗಳ 353ನೇ ಆರಾಧನಾ ಮಹೋತ್ಸವವನ್ನು ಆಚರಿಸಲಾಗುತ್ತದೆ. ಗುರುಗಳ ಆರಾಧನೆಯು ಹೆಚ್ಚಿನ ಮಠಗಳು ಮತ್ತು ಸಂಸ್ಥೆಗಳಲ್ಲಿ ಪೂರ್ವಾರಾಧನೆಯಿಂದ ಪ್ರಾರಂಭವಾಗುತ್ತದೆ. ಆಗಸ್ಟ್ 20ರಂದು ಪೂರ್ವಾರಾಧನೆ, 21ರಂದು ಮಧ್ಯ ಆರಾಧನೆ ಮತ್ತು 22ರಂದು ಉತ್ತರಾರಾಧನೆ ನಡೆಯಲಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

By

Rayara Aradhane 2024
Koo

ಮಂತ್ರಾಲಯ ಗುರು (Mantralaya guru) ರಾಘವೇಂದ್ರ ಸ್ವಾಮಿಗಳ (Rayara Aradhane 2024) 353ನೇ ಆರಾಧನಾ ಮಹೋತ್ಸವ (Raghavendra Aradhana Mahotsava) ಮಂಗಳವಾರದಿಂದ ಮೂರು ದಿನಗಳ ಕಾಲ ನಡೆಯಲಿದೆ. ಗುರುಗಳು ಬೃಂದಾವನ ಪ್ರವೇಶಿಸಿದ ಈ ದಿನವನ್ನು ದೇಶ, ವಿದೇಶಗಳಲ್ಲಿ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಆಗಸ್ಟ್ 20ರಂದು ಪೂರ್ವಾರಾಧನೆ, 21ರಂದು ಮಧ್ಯ ಆರಾಧನೆ ಮತ್ತು 22ರಂದು ಉತ್ತರಾರಾಧನೆ ನಡೆಯಲಿದೆ.

16ನೇ ಶತಮಾನದ ಸಂತರು ಮತ್ತು ಗುರುಗಳಾದ ಶ್ರೀ ರಾಘವೇಂದ್ರ ಸ್ವಾಮಿಗಳು ವೈಷ್ಣವ ಧರ್ಮವನ್ನು ಪ್ರತಿಪಾದಿಸಿದ್ದು, ಮಧ್ವಾಚಾರ್ಯರ ದ್ವೈತ ತತ್ತ್ವವನ್ನು ಜನಪ್ರಿಯಗೊಳಿಸಿದರು. ಗುರುಗಳು ಬೃಂದಾವನ ಪ್ರವೇಶಿಸಿರುವ ಕ್ಷೇತ್ರವಾಗಿರುವ ಮಂತ್ರಾಲಯದಲ್ಲಿ ಗುರುಗಳ ಆರಾಧನೆ ಆಗಸ್ಟ್ 21ರಂದು ನಡೆಯಲಿದೆ.


ಗುರುಗಳ ಆರಾಧನೆ ಎಂದರೇನು?

ರಾಘವೇಂದ್ರ ಸ್ವಾಮಿ ಆರಾಧನೆ ಎಂದರೆ ರಾಯರು ಜೀವಂತವಾಗಿ ಬೃಂದಾವನವನ್ನು ಪ್ರವೇಶಿಸಿರುವ ದಿನ. ದೇಶ ವಿದೇಶಗಳಲ್ಲಿ ಆಚರಿಸಲ್ಪಡುವ ಗುರುಗಳ ಆರಾಧನೆಯು ಹೆಚ್ಚಿನ ಮಠಗಳು ಮತ್ತು ಸಂಸ್ಥೆಗಳಲ್ಲಿ ಪೂರ್ವಾರಾಧನೆಯಿಂದ ಪ್ರಾರಂಭವಾಗುತ್ತದೆ. ಇದನ್ನು ವಾರ್ಷಿಕವಾಗಿ ಶ್ರಾವಣ ಕೃಷ್ಣ ಪಕ್ಷ ದ್ವಿತೀಯ ಅಥವಾ ಕರ್ನಾಟಕದಲ್ಲಿ ಅನುಸರಿಸುವ ಸಾಂಪ್ರದಾಯಿಕ ಹಿಂದೂ ಚಂದ್ರನ ಕ್ಯಾಲೆಂಡರ್ ಪ್ರಕಾರ ಶ್ರಾವಣ ಮಾಸದಲ್ಲಿ ಚಂದ್ರನ ಕ್ಷೀಣಿಸುತ್ತಿರುವ ಎರಡನೇ ದಿನದಂದು ಆಚರಿಸಲಾಗುತ್ತದೆ.

ರಾಘವೇಂದ್ರ ಸ್ವಾಮಿಯು ವಿಷ್ಣುವಿನ ಶ್ರೇಷ್ಠ ಭಕ್ತರಾಗಿದ್ದರು. 1621 ರಿಂದ 1671ರವರೆಗೆ ಅವರು ಶ್ರೀ ಮಧ್ವಾಚಾರ್ಯರು ಸ್ಥಾಪಿಸಿದ ಶ್ರೀ ಮಠದ ಮುಖ್ಯಸ್ಥರಾಗಿದ್ದರು. ತಮ್ಮ ಜೀವನದಲ್ಲಿ ಹಲವಾರು ಪವಾಡಗಳನ್ನು ನಡೆಸಿರುವ ಅವರು ಮಧ್ವಾಚಾರ್ಯರ ಬೋಧನೆಗಳ ಮೇಲೆ ಹಲವಾರು ಭಜನೆ ಮತ್ತು ವ್ಯಾಖ್ಯಾನಗಳನ್ನು ರಚಿಸಿದ್ದಾರೆ. ಗುರು ಶ್ರೀ ರಾಘವೇಂದ್ರ ಸ್ವಾಮಿಗಳು 1671 ರಲ್ಲಿ ಸಮಾಧಿಯನ್ನು ಪ್ರವೇಶಿಸದರು. ಆವರ ಸಮಾಧಿ ಸ್ಥಳವನ್ನು ಬೃಂದಾವನ ಎಂದು ಕರೆಯಲಾಗುತ್ತದೆ. ಇದು ಮಂತ್ರಾಲಯದಲ್ಲಿದೆ.


ಗುರುಗಳ ಜನನ ಕಥೆ

ಗುರು ರಾಘವೇಂದ್ರ ಸ್ವಾಮಿಗಳು 1595ರಲ್ಲಿ ತಮಿಳುನಾಡಿನ ಭುವನಗಿರಿಯಲ್ಲಿ ತಿಮ್ಮಣ್ಣ ಭಟ್ಟ ಹಾಗೂ ಗೋಪಿಕಾಂಬೆ ಅವರ ಎರಡನೇ ಮಗನಾಗಿ ಜನಿಸಿದರು. ಇವರ ಮೊದಲ ಹೆಸರು ವೆಂಕಣ್ಣ ಭಟ್ಟ. ಇವರನ್ನು ವೆಂಕಟನಾಥ, ವೆಂಕಟಾಚಾರ್ಯ ಎಂದೂ ಕರೆಯುತ್ತಾರೆ. ಇವರಿಗೆ ಗುರುರಾಜ ಎಂಬ ಹೆಸರಿನ ಸಹೋದರ ಹಾಗೂ ವೆಂಕಟಾಂಬೆ ಎಂಬ ಸಹೋದರಿಯೂ ಇದ್ದರು. ರಾಯರ ತಂದೆ, ತಾಯಿಗೆ ಮಕ್ಕಳಾಗದೇ ಆಗದೇ ಇದ್ದಾಗ ಅವರು ತಿರುಪತಿಗೆ ಹೋಗಿ ದೇವರನ್ನು ಬೇಡಿಕೊಂಡ ಮೇಲೆ ಮಕ್ಕಳು ಜನಿಸಿದರು.

ರಾಘವೇಂದ್ರ ಅವರ ಹುಟ್ಟಿಗೂ ಮೊದಲು ತಿಮ್ಮಣ್ಣ ಭಟ್ಟ ದಂಪತಿ ತಿರುಪತಿಗೆ ತೆರಳಿ ಭಗವಂತನ ಸೇವೆ ಮಾಡುತ್ತಾರೆ. ಆಗ ಅವರ ಕನಸಿನಲ್ಲಿ ಬಂದು ವೆಂಕಟೇಶ, ಒಂದು ಮಹಾನ್ ಆತ್ಮ ಹಾಗೂ ಖ್ಯಾತಿ ಶಿಖರವನ್ನೇರುವ ಮಗನನ್ನು ನೀಡುವುದಾಗಿ ಆಶೀರ್ವದಿಸುತ್ತಾನೆ. ತಿರುಪತಿ ದೇವರ ಅನುಗ್ರಹದಿಂದ ರಾಯರು ಜನಿಸಿದರು ಎನ್ನಲಾಗುತ್ತದೆ.

Raghavendra Aradhana Mahotsava
Raghavendra Aradhana Mahotsava


ಕಡು ಬಡತನದಲ್ಲೇ ಜೀವನ

ವೆಂಕಟನಾಥ (ರಾಘವೇಂದ್ರ) ಅವರಿಗೆ ಸರಸ್ವತಿ ಎಂಬಾಕೆಯೊಂದಿಗೆ ವಿವಾಹವಾಗುತ್ತದೆ. ಇವರಿಗೆ ಒಬ್ಬ ಮಗ ಜನಿಸುತ್ತಾನೆ. ಅವನಿಗೆ ಲಕ್ಷಣರಾಯ ಎಂದು ಹೆಸರಿಡಲಾಗುತ್ತದೆ. ನುರಿತ ಸಂಗೀತಗಾರ ಮತ್ತು ಶ್ರೇಷ್ಠ ವಿದ್ವಾಂಸರೂ ಆಗಿದ್ದ ವೆಂಕಟನಾಥ ಅವರು ತಮ್ಮ ಸೇವೆಗಳಿಗೆ ಎಂದಿಗೂ ಹಣ ಕೇಳುತ್ತಿರಲಿಲ್ಲ. ಇದರಿಂದ ಅವರು ಕಡು ಬಡತನದಲ್ಲೇ ಜೀವನ ಸಾಗಿಸಬೇಕಾಯಿತು. ಆದರೂ ಭಗವಂತನ ಮೇಲೆ ಅಚಲವಾದ ನಂಬಿಕೆ ಇಟ್ಟಿದ್ದರು.

ಬಳಿಕ ಅವರು ಶ್ರೀ ಸುಧೀಂದ್ರ ತೀರ್ಥರ ಆಶ್ರಯ ಪಡೆದರು. ಅವರ ಬಳಿ ತಮ್ಮ ಶಿಕ್ಷಣವನ್ನು ಮುಂದುವರಿಸಿದರು.
ಅವರ ಜ್ಞಾನ ಮತ್ತು ವ್ಯಾಕರಣದ ಮೇಲಿನ ಪಾಂಡಿತ್ಯವನ್ನು ನೋಡಿ ಸಂತೋಷಗೊಂಡ ಸುಧೀಂದ್ರ ತೀರ್ಥರು ಅವರಿಗೆ “ಮಹಾಭಾಷ್ಯಾಚಾರ್ಯ” ಎಂಬ ಬಿರುದನ್ನು ನೀಡಿದರು.


ರಾಘವೇಂದ್ರ ಹೆಸರಿನ ವಿಶೇಷ

ಸುಧೀಂದ್ರ ತೀರ್ಥರು ಬೃಂದಾವನ ಪ್ರವೇಶಿಸಿದ ಮೇಲೆ ರಾಯರು ಮಠದ ಮುಖ್ಯಸ್ಥರಾದರು. ಇದಕ್ಕೂ ಮೊದಲು ಸನ್ಯಾಸ ದೀಕ್ಷೆ ಸ್ವೀಕರಿಸಿದ್ದ ವೆಂಕಟನಾಥನ ಹೆಸರನ್ನು ರಾಘವೇಂದ್ರ ಎಂದು ಬದಲಾಯಿಸಲಾಗಿತ್ತು.
ರಾಘವೇಂದ್ರ ಎನ್ನುವುದು ಭಗವಾನ್ ರಾಮನ ಹೆಸರು. ಇದರ ಅರ್ಥ ‘ಪಾಪಗಳನ್ನು ನಾಶಪಡಿಸುವ ಮತ್ತು ಬಯಸಿದ ವಸ್ತುಗಳನ್ನು ಕೊಡುವವನು’ ಎಂಬುದಾಗಿದೆ.

ಬೃಂದಾವನ ಪ್ರವೇಶ

ರಾಘವೇಂದ್ರ ಸ್ವಾಮಿಗಳು 1671ರ ಶ್ರಾವಣ ಕೃಷ್ಣ ಪಕ್ಷದ ದ್ವಿತೀಯ ದಿನದಂದು ಜೀವಂತ ಸಮಾಧಿ ಸೇರುತ್ತಾರೆ. ಆ ಕಾರಣದಿಂದ ಪ್ರತಿ ವರ್ಷ ಈ ದಿನದಂದು ರಾಯರ ಆರಾಧನಾ ಮಹೋತ್ಸವವನ್ನು ಆಚರಿಸಲಾಗುತ್ತದೆ.

ಅಂತಿಮ ಸಂದೇಶ

ಸಮಾಧಿ ಪಡೆಯುವ ಮುನ್ನ ಗುರುಗಳು ತಮ್ಮ ನಿತ್ಯದ ವಿಧಿವಿಧಾನಗಳನ್ನು ಅನುಸರಿಸಿ ಭಕ್ತರಿಗೆ ತಮ್ಮ ಕೊನೆಯ ಪ್ರವಚನವನ್ನು ನೀಡಿದರು. ಈ ವೇಳೆ ಅವರು, ನಾನು ನನ್ನ ದೇಹವನ್ನು ಮಾತ್ರ ತ್ಯಜಿಸುತ್ತೇನೆ. ಎಲ್ಲರ ಯೋಗಕ್ಷೇಮವನ್ನು ಕಾಪಾಡಲು ಭೌತಿಕವಾಗಿ ಇರುತ್ತೇನೆ ಎಂದು ಹೇಳಿದ್ದರು.

ಮಂತ್ರಾಲಯದಲ್ಲಿ ಅದ್ಧೂರಿ ಆಚರಣೆ

ಗುರುಗಳ ಆರಾಧನೆಯನ್ನು ಮಂತ್ರಾಲಯದಲ್ಲಿ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಈ ಹಬ್ಬವನ್ನು ಮಹಾ ಆರಾಧನೆ ಎಂದೂ ಕರೆಯಲಾಗುತ್ತದೆ. ಈ ಸಂದರ್ಭದಲ್ಲಿ, ಮಠದ ಸಂಕೀರ್ಣವನ್ನು ಹಾಗೂ ಮಂತ್ರಾಲಯ ಪಟ್ಟಣವನ್ನು ಸುಂದರವಾಗಿ ಅಲಂಕರಿಸಲಾಗುತ್ತದೆ. ಗುರುಗಳ ಮಹಾ ಆರಾಧನೆಯ ಅಂಗವಾಗಿ ನಡೆಯುವ ಮಹಾರಥೋತ್ಸವದಲ್ಲಿ ದೇಶ ವಿದೇಶಗಳಿಂದ ಸಾವಿರಾರು ಭಕ್ತರು ಪಾಲ್ಗೊಳ್ಳುತ್ತಾರೆ.


ವಿವಿಧ ಆಚರಣೆಗಳು

ಕಲಿಯುಗದ ಕಾಮಧೇನು ಎಂದೇ ಜಗತ್ಪ್ರಸಿದ್ಧಿ ಪಡೆದ ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ಮಂತ್ರಾಲಯದಲ್ಲಿ ಭಾನುವಾರವೇ ಆರಂಭಗೊಂಡಿದ್ದು, ಆಗಸ್ಟ್ 24ರವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ರಾಯರ ಉತ್ಸವ ಮೂರ್ತಿಯ ಬಲಿ, ರಥೋತ್ಸವ, ಗೋ ಪೂಜೆ, ಗಜಪೂಜೆ ಮತ್ತಿತರ ಪೂಜೆಗಳು ನಡೆಯುತ್ತವೆ. ಇದಕ್ಕೂ ಮೊದಲು ಧ್ವಜಾರೋಹಣ ನಡೆಸಿ ಮಹಾರಥೋತ್ಸವಕ್ಕೆ ಚಾಲನೆ ನೀಡಲಾಗುತ್ತದೆ.

ಪೂರ್ವ ಆರಾಧನಾ ದಿನದಂದು ಸಿಂಹ ವಾಹನ ಸವಾರಿ, ಮಧ್ಯ ಆರಾಧನಾ ದಿನದಂದು ಮಹಾ ಪಂಚಾಮೃತ ಅಭಿಷೇಕ, ಉತ್ತರ ಆರಾಧನಾ ದಿನದಂದು ಸ್ವರ್ಣ ರಥೋತ್ಸವವನ್ನು ನಡೆಸಲಾಗುತ್ತದೆ. ಮಠವು ಪ್ರತಿ ವರ್ಷ ಸಮಾಜ ಸೇವೆ ಮಾಡಿದ ಗಣ್ಯರಿಗೆ ಶ್ರೀ ರಾಘವೇಂದ್ರ ಅನುಗ್ರಹ ಪ್ರಶಸ್ತಿಗಳನ್ನು ನೀಡಿ ಗೌರವಿಸುತ್ತದೆ. ಈ ಸಂದರ್ಭದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿವಿಧ ಸಾಂಸ್ಕೃತಿಕ ಪ್ರದರ್ಶನಗಳನ್ನೂ ನಡೆಸಲಾಗುತ್ತದೆ.

ಇದನ್ನೂ ಓದಿ: Shravan 2024: ಶ್ರಾವಣ ಸೋಮವಾರದ ವಿಶೇಷತೆಗಳೇನು? ಶಿವನಿಗೆ ಏನು ಅರ್ಪಿಸಬೇಕು? ಏನನ್ನು ಅರ್ಪಿಸಬಾರದು?

ವಿಶೇಷತೆ

ರಾಘವೇಂದ್ರ ಸ್ವಾಮಿಯ ಬೃಂದಾವನಕ್ಕೆ ಪ್ರತಿ ವರ್ಷ ತಿರುಮಲ ತಿರುಪತಿ ದೇವಸ್ಥಾನಮ್ಸ್ (ಟಿಟಿಡಿ) ಅಧಿಕಾರಿಗಳು ಅರ್ಪಿಸುವ ಭಗವಾನ್ ವೆಂಕಟೇಶ್ವರ ಸ್ವಾಮಿಯ ಶೇಷವಸ್ತ್ರವನ್ನು ಅರ್ಪಿಸುವುದು ವಾಡಿಕೆಯಾಗಿದೆ. ತಿರುಪತಿ ಬಾಲಾಜಿ ದೇವಸ್ಥಾನದಿಂದ ಅಧಿಕಾರಿಗಳು ಮತ್ತು ಅರ್ಚಕರ ತಂಡ ತಂದ ಶೇಷವಸ್ತ್ರವನ್ನು ಮಠದ ಮುಖ್ಯಸ್ಥರು ಬೃಂದಾವನಕ್ಕೆ ಸ್ವೀಕರಿಸಿ ವಿಶೇಷ ಪಂಚಾಮೃತ ಅಭಿಷೇಕವನ್ನು ಮಾಡುತ್ತಾರೆ.

Continue Reading

ಕರ್ನಾಟಕ

Uttara Kannada News: ಪಿಎಂ ಸ್ವ-ನಿಧಿ ಯೋಜನೆ; ಕಾರವಾರ ನಗರಸಭೆಗೆ ರಾಜ್ಯ ಮಟ್ಟದ ಪ್ರಶಸ್ತಿಯ ಗರಿ

ಪಿಎಂ ಸ್ವ-ನಿಧಿ ಯೋಜನೆಯಡಿ (Uttara Kannada News) ಉತ್ತಮ ಪ್ರಗತಿ ಸಾಧಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರಸಭೆಯನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ. ಕಾರವಾರ ನಗರಸಭೆಯು “Best Performing ULB-in Loan performance at State Level” ಪ್ರಶಸ್ತಿಗೆ ಆಯ್ಕೆಯಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Uttara Kannada News
Koo

ಕಾರವಾರ: ಪಿಎಂ ಸ್ವ-ನಿಧಿ ಯೋಜನೆಯಡಿ ಉತ್ತಮ ಪ್ರಗತಿ ಸಾಧಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಉತ್ತರ ಕನ್ನಡ ಜಿಲ್ಲೆಯ (Uttara Kannada News) ಕಾರವಾರ ನಗರಸಭೆಯನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ. ಕಾರವಾರ ನಗರಸಭೆಯು “Best Performing ULB-in Loan performance at State Level” ಪ್ರಶಸ್ತಿಗೆ ಆಯ್ಕೆಯಾಗಿದೆ.

ಕೇಂದ್ರ ಸರ್ಕಾರದ ವತಿಯಿಂದ ಪಿಎಂ ಸ್ವ-ನಿಧಿ ಯೋಜನೆಯಡಿ ಉತ್ತಮ ಪ್ರಗತಿ ಸಾಧಿಸಿದ ರಾಜ್ಯಗಳಿಗೆ ನವದೆಹಲಿಯಲ್ಲಿ ಸಮಾರಂಭ ಆಯೋಜಿಸಿ ರಾಷ್ಟ್ರಮಟ್ಟದ Utkrishtata Ki ore Badhte Kadam & Celebreating Achivements, Inspiring Excellence ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಇದನ್ನೂ ಓದಿ: PM Narendra Modi : ಆಗಸ್ಟ್​ 23ರಂದು ಉಕ್ರೇನ್​ ಪ್ರವಾಸಕ್ಕೆ ತೆರಳಲಿದ್ದಾರೆ ಪ್ರಧಾನಿ ಮೋದಿ

ಕರ್ನಾಟಕ ರಾಜ್ಯದಲ್ಲಿ ಪಿಎಂ ಸ್ವ-ನಿಧಿ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು, ಇದೇ ಆಗಸ್ಟ್ 22 ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಇದನ್ನೂ ಓದಿ: Kannada New Movie: ಅಡ್ವೆಂಚರಸ್ ಕಾಮಿಡಿ ಕಾನ್ಸೆಪ್ಟ್‌ನ ʼಫಾರೆಸ್ಟ್ʼ ಚಿತ್ರದ ಟ್ರೈಲರ್ ಸದ್ಯದಲ್ಲೇ ರಿಲೀಸ್‌

ಕಾರವಾರ ನಗರಸಭೆಯಲ್ಲಿ ಈ ಯೋಜನೆಯನ್ನು ಯಶಸ್ವಿಗೊಳಿಸಲು ನಗರಸಭೆಯ ಪೌರಾಯುಕ್ತ ಜಗದೀಶ, ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕ ರಜತ್ ಕುಮಾರ ಹಬ್ಬು, ಕೌಶಲ್ಯಾಭಿವೃದ್ಧಿ ಇಲಾಖೆಯ ಮಲ್ಟಿಟಾಸ್ಕಿಂಗ್ ಆಫೀಸರ್ ಸುನೀಲ ವಸಂತ ನಾಯ್ಕ, ಸಮುದಾಯ ಸಂಘಟಕರಾದ ಪ್ರಭಾಕರ ನಾಯ್ಕ ಮತ್ತು ಮೇರಿ ಡಿಸೋಜಾ , ಸಿಆರ್‌ಪಿಗಳಾದ ಗೀತಾ, ನಂದಿನಿ ಶ್ರಮಿಸಿದ್ದರು.

Continue Reading

ಬೆಂಗಳೂರು

Pralhad Joshi: ಕಾಂಗ್ರೆಸ್‌ನಿಂದ ದೇಶದಲ್ಲಿ ಬಾಂಗ್ಲಾದಂತೆ ಅರಾಜಕತೆ ಸೃಷ್ಟಿಸುವ ಹುನ್ನಾರ; ಪ್ರಲ್ಹಾದ್‌ ಜೋಶಿ ಆರೋಪ

ಕಾಂಗ್ರೆಸ್ ಪಕ್ಷಕ್ಕೆ (Pralhad Joshi) ರಾಜ್ಯಪಾಲರ ಹುದ್ದೆ ಘನತೆಯ ಅರಿವೆ ಇಲ್ಲ. ಸಂವಿಧಾನದ ಹತ್ಯೆ ಮಾಡಿ, ದೇಶದಲ್ಲಿ ಎಮರ್ಜೆನ್ಸಿ ಹೇರಿ ಜನಜೀವನ ಅಸ್ತವ್ಯಸ್ಥಗೊಳಿಸಿದ್ದ ಕಾಂಗ್ರೆಸ್ ಪಕ್ಷ ಇನ್ನೂ ಅದೇ ವರ್ತನೆ, ಮನಸ್ಥಿತಿಯಲ್ಲಿದೆ. ಅದನ್ನಿನ್ನೂ ತಿದ್ದಿಕೊಂಡಿಲ್ಲ ಎಂದು ಆರೋಪಿಸಿರುವ ಸಚಿವ ಪ್ರಲ್ಹಾದ್‌ ಜೋಶಿ, ಇದಕ್ಕೆ ಜನರೇ ತಕ್ಕ ಪಾಠವ ಕಲಿಸುತ್ತಾರೆ ಎಂದು ಎಚ್ಚರಿಸಿದ್ದಾರೆ.

VISTARANEWS.COM


on

Pralhad Joshi
Koo

ನವದೆಹಲಿ: ಭಾರತದಲ್ಲೂ ಬಾಂಗ್ಲಾದಂತೆ ಅರಾಜಕತೆ ಸೃಷ್ಟಿಸುವ ಮನಸ್ಥಿತಿ, ದುಷ್ಟ ಉದ್ದೇಶ ಕಾಂಗ್ರೆಸ್ ಪಕ್ಷದ್ದಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ವೇಳೆ ಮುಖಂಡ ಐವಾನ್ ಡಿಸೋಜ ಅವರ ಹೇಳಿಕೆ ಅರಾಜಕತೆ ಸೃಷ್ಟಿಯನ್ನು ಪುಷ್ಟೀಕರಿಸುತ್ತಿದೆ ಎಂದು ವ್ಯಾಖ್ಯಾನಿಸಿ ಸಚಿವ ಜೋಶಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: PM Narendra Modi : ಆಗಸ್ಟ್​ 23ರಂದು ಉಕ್ರೇನ್​ ಪ್ರವಾಸಕ್ಕೆ ತೆರಳಲಿದ್ದಾರೆ ಪ್ರಧಾನಿ ಮೋದಿ

ಭ್ರಷ್ಟಾಚಾರದ ಜನಕ ಕಾಂಗ್ರೆಸ್ ಪಕ್ಷ ಈ ರೀತಿ ಅರಾಜಕತೆಯ ಮಾತುಗಳನ್ನಾಡುವುದು ಅಕ್ಷಮ್ಯ ಮತ್ತು ಅತ್ಯಂತ ಖಂಡನೀಯ ಎಂದು ತಿಳಿಸಿರುವ ಸಚಿವರು, ಕಾಂಗ್ರೆಸ್‌ನ ನಡೆ ನೋಡಿದರೆ ಬಾಂಗ್ಲಾ ದೇಶದಂತಹ ಅರಾಜಕತೆ ಸೃಷ್ಟಿಸುವ ರೀತಿ ವರ್ತಿಸುತ್ತಿರುವಂತಿದೆ ಎಂದು ಆರೋಪಿಸಿದ್ದಾರೆ.

ಸಂವಿಧಾನ ದತ್ತವಾಗಿರುವ ರಾಜ್ಯಪಾಲರ ಸ್ಥಾನಕ್ಕೆ ಘನತೆ-ಗೌರವ ತೋರುವ ಬದಲು ಅದಕ್ಕೆ ಧಕ್ಕೆ ತರುವ ರೀತಿ ಕಾಂಗ್ರೆಸ್ ವರ್ತಿಸುತ್ತಿದೆ. ರಾಜಭವನ ಮತ್ತು ರಾಜ್ಯಪಾಲರ ಗೃಹಕ್ಕೆ ಮುತ್ತಿಗೆ ಹಾಕುವುದಾಗಿ ಬೆದರಿಕೆ ಹಾಕುತ್ತಿರುವುದು ನಿಜಕ್ಕೂ ಆಡಳಿತಾರೂಢ ಸರ್ಕಾರದ ಸರ್ವಾಧಿಕಾರಿ ಧೋರಣೆ ಎನ್ನುವಂತಿದೆ ಎಂದು ಜೋಶಿ ಹರಿಹಾಯ್ದಿದ್ದಾರೆ.

ಇದನ್ನೂ ಓದಿ: Kannada New Movie: ಅಡ್ವೆಂಚರಸ್ ಕಾಮಿಡಿ ಕಾನ್ಸೆಪ್ಟ್‌ನ ʼಫಾರೆಸ್ಟ್ʼ ಚಿತ್ರದ ಟ್ರೈಲರ್ ಸದ್ಯದಲ್ಲೇ ರಿಲೀಸ್‌

ಕಾಂಗ್ರೆಸ್ ಪಕ್ಷಕ್ಕೆ ರಾಜ್ಯಪಾಲರ ಹುದ್ದೆ ಘನತೆಯ ಅರಿವೆ ಇಲ್ಲ. ಸಂವಿಧಾನದ ಹತ್ಯೆ ಮಾಡಿ ದೇಶದಲ್ಲಿ ಎಮರ್ಜೆನ್ಸಿ ಹೇರಿ ಜನಜೀವನ ಅಸ್ತವ್ಯಸ್ಥಗೊಳಿಸಿದ್ದ ಕಾಂಗ್ರೆಸ್ ಪಕ್ಷ ಇನ್ನೂ ಅದೇ ವರ್ತನೆ, ಮನಸ್ಥಿತಿಯಲ್ಲಿದೆ. ಅದನ್ನಿನ್ನೂ ತಿದ್ದಿಕೊಂಡಿಲ್ಲ ಎಂದು ಆರೋಪಿಸಿರುವ ಸಚಿವ ಪ್ರಲ್ಹಾದ್‌ ಜೋಶಿ, ಇದಕ್ಕೆ ಜನರೇ ತಕ್ಕ ಪಾಠವ ಕಲಿಸುತ್ತಾರೆ ಎಂದು ಎಚ್ಚರಿಸಿದ್ದಾರೆ.

Continue Reading

ವಿದೇಶ

Death Penalty: ಈ 7 ದೇಶಗಳಲ್ಲಿ ಅತ್ಯಾಚಾರ ನಡೆಸಿದರೆ ಮರಣ ದಂಡನೆಯೇ ಶಿಕ್ಷೆ!

ಅತ್ಯಾಚಾರವನ್ನು ಗಂಭೀರ ಪ್ರಕರಣವಾಗಿ ಪರಿಗಣಿಸಲು ದೇಶಾದ್ಯಂತ ಒತ್ತಾಯ ಕೇಳಿ ಬರುತ್ತಲೇ ಇದೆ. ಅದರಲ್ಲೂ ಅಪರಾಧಿಗಳಿಗೆ ಯಾವುದೇ ಮುಲಾಜಿಲ್ಲದೆ ಮರಣದಂಡನೆ ವಿಧಿಸಬೇಕು ಎನ್ನುವ ವರ್ಗವೇ ಇದೆ. ಭಾರತದಲ್ಲಿ ಅಪರೂಪದ ಪ್ರಕರಣಗಳಲ್ಲಿ ಮಾತ್ರ ಮರಣದಂಡನೆಯನ್ನು(Death Penalty ) ವಿಧಿಸಲಾಗುತ್ತದೆ. ಆದರೆ ವಿಶ್ವದ ಕೆಲವು ರಾಷ್ಟ್ರಗಳಲ್ಲಿ ಅತ್ಯಾಚಾರ ಆರೋಪಿಗಳಿಗೆ ಮರಣದಂಡನೆಯನ್ನೇ ವಿಧಿಸಲಾಗುತ್ತದೆ.

VISTARANEWS.COM


on

By

Death Penalty
Koo

ಭಾರತದಲ್ಲಿ ಅತ್ಯಾಚಾರ ಪ್ರಕರಣಗಳು (Physical Abuse) ಹೆಚ್ಚಾಗಿದ್ದರೂ ಆರೋಪಿಗಳಿಗೆ ಶಿಕ್ಷೆ ನೀಡುವಾಗ ಸಾಕಷ್ಟು ವಿಳಂಬವಾಗುತ್ತಿದೆ. ಇಂಥ ಘೋರ ಕೃತ್ಯಕ್ಕೆ ನಮ್ಮಲ್ಲಿ ಮರಣ ದಂಡನೆ ಶಿಕ್ಷೆ ಆಗುವುದೇ ಅಪರೂಪ. ಶಿಕ್ಷೆಯಿಂದ ಪಾರಾಗುವವರೇ ಹೆಚ್ಚು. ಅಪರೂಪದ ಪ್ರಕರಣಗಳಲ್ಲಿ ಮಾತ್ರ ಅಪರಾಧಿಗಳಿಗೆ ಮರಣದಂಡನೆ (Death Penalty) ವಿಧಿಸಲಾಗುತ್ತದೆ. ಆದರೆ ವಿಶ್ವದ ಕೆಲವು ರಾಷ್ಟ್ರಗಳಲ್ಲಿ ಅತ್ಯಾಚಾರ ಆರೋಪಿಗಳಿಗೆ (sexualy abuse case) ಮರಣದಂಡನೆಯನ್ನೇ ವಿಧಿಸಲಾಗುತ್ತದೆ.

ಭಾರತೀಯ ನ್ಯಾಯಾಲಯಗಳು ಮರಣದಂಡನೆಯನ್ನು ನೀಡುವಾಗ ಅಪರೂಪದ ಸಂದರ್ಭಗಳ ನಿಯಮವನ್ನು ಅನ್ವಯಿಸುತ್ತವೆ. 2012ರ ಡಿಸೆಂಬರ್‌ನಲ್ಲಿ ಭಾರತದ ಸರ್ವೋಚ್ಚ ನ್ಯಾಯಾಲಯವು ನಿರ್ಭಯ ಪ್ರಕರಣದಲ್ಲಿ ಅವರ ಮೇಲೆ ನಡೆದ ಮಾರಣಾಂತಿಕ ಸಾಮೂಹಿಕ ಅತ್ಯಾಚಾರದ ನಾಲ್ವರು ಅಪರಾಧಿಗಳಿಗೆ ಮರಣದಂಡನೆ ವಿಧಿಸಿತು. ಈ ಅತ್ಯಾಚಾರ ಪ್ರಕರಣ ರಾಷ್ಟ್ರವ್ಯಾಪಿ ಆಕ್ರೋಶಕ್ಕೆ ಕಾರಣವಾಗಿತ್ತು. ದೇಶದ ಅತ್ಯಾಚಾರ ಕಾನೂನುಗಳನ್ನು ಆಮೂಲಾಗ್ರವಾಗಿ ಮರುಪರಿಶೀಲಿಸುವಂತೆ ಮಾಡಿತು.

ಆದರೆ ವಿಶ್ವದ ಏಳು ರಾಷ್ಟ್ರಗಳಲ್ಲಿ ಅತ್ಯಾಚಾರಕ್ಕೆ ಮರಣದಂಡನೆಯನ್ನೇ ಶಿಕ್ಷೆಯಾಗಿ ನೀಡಲಾಗುತ್ತದೆ. ಅವುಗಳು ಯಾವುದು ಎನ್ನುವ ಕುರಿತು ಇಲ್ಲಿದೆ ಮಾಹಿತಿ.


ಸೌದಿ ಅರೇಬಿಯಾ

ಸರಣಿ ಅತ್ಯಾಚಾರ ಪ್ರಕರಣಗಳಲ್ಲಿ ಸೌದಿ ಅರೇಬಿಯಾದಲ್ಲಿ ಅತ್ಯಾಚಾರಕ್ಕೆ ಹದ್ ಅಥವಾ ತಝೀರ್ ಹೆಸರಿನಲ್ಲಿ ಮರಣದಂಡನೆಯನ್ನು ವಿಧಿಸಲಾಗುತ್ತದೆ.

Death Penalty
Death Penalty


ಬಾಂಗ್ಲಾದೇಶ

ಅತ್ಯಾಚಾರಕ್ಕೆ ಕಡ್ಡಾಯ ಮರಣದಂಡನೆಯನ್ನು ವಿಧಿಸಲು ಬಾಂಗ್ಲಾದೇಶದಲ್ಲಿ ಸುಪ್ರೀಂ ಕೋರ್ಟ್ 2015ರಲ್ಲಿ ತೀರ್ಪು ನೀಡಿತು. ಆದರೆ ಇಲ್ಲಿ ಮರಣದಂಡನೆಯು ಜೀವಾವಧಿ ಶಿಕ್ಷೆಯ ಜೊತೆಗೆ ಒಂದು ಆಯ್ಕೆಯಾಗಿ ಪರಿಗಣಿಸಬಹುದಾಗಿದೆ. ಇದು ಅಪರಾಧದ ತೀವ್ರತೆಯನ್ನು ಅವಲಂಬಿಸಿರುತ್ತದೆ.


ಜಪಾನ್

ದರೋಡೆ, ಅತ್ಯಾಚಾರದ ಅಪರಾಧಕ್ಕೆ ಇಪ್ಪತ್ತು ವರ್ಷಗಳ ಕಠಿಣ ಶಿಕ್ಷೆ ಅಥವಾ ಮರಣದಂಡನೆಯನ್ನು ವಿಧಿಸಲಾಗುತ್ತದೆ. ಮಾರಣಾಂತಿಕ ಅತ್ಯಾಚಾರವಾಗಿದ್ದರೆ ಮರಣದಂಡನೆಯೇ ಶಿಕ್ಷೆಯಾಗಿದೆ.


ಇರಾನ್

ಇಸ್ಲಾಮಿಕ್ ದಂಡ ಸಂಹಿತೆಯ ಆರ್ಟಿಕಲ್ 224ರ ಅಡಿಯಲ್ಲಿ ಬಲವಂತದಿಂದ ಅತ್ಯಾಚಾರ ನಡೆಸಿದ್ದಕ್ಕೆ ಮಾತ್ರವಲ್ಲ, ವ್ಯಭಿಚಾರ ನಡೆಸಿದರೂ ಮರಣದಂಡನೆಗೆ ಗುರಿಯಾಗಬೇಕಾಗುತ್ತದೆ.


ಪಾಕಿಸ್ತಾನ

ಸಾಮೂಹಿಕ ಅತ್ಯಾಚಾರ, ಮಕ್ಕಳಿಗೆ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರಕ್ಕೆ ಮರಣದಂಡನೆ ವಿಧಿಸಲಾಗುತ್ತದೆ. ಮಹಿಳೆಯ ಮೇಲೆ ಹಲ್ಲೆ ಮತ್ತು ಉದ್ದೇಶಪೂರ್ವಕವಾಗಿ ಆಕೆಯ ದೇಹವನ್ನು ಸಾರ್ವಜನಿಕವಾಗಿ ಪ್ರದರ್ಶಿಸಿದರೆ ಮರಣದಂಡನೆ ಶಿಕ್ಷೆ ನೀಡಲಾಗುತ್ತದೆ. 16 ವರ್ಷದೊಳಗಿನ ಬಾಲಕಿಯರ ಮೇಲೆ ಅತ್ಯಾಚಾರ, ಸಾಮೂಹಿಕ ಅತ್ಯಾಚಾರಕ್ಕೆ ಮರಣದಂಡನೆಯೇ ಶಿಕ್ಷೆಯಾಗಿದೆ.

ಇದನ್ನೂ ಓದಿ: Physical abuse: ಐದು ದಿನಗಳಿಂದ ನಿರಂತರ ಗ್ಯಾಂಗ್‌ರೇಪ್‌; ಕೈ-ಕಾಲು ಕಟ್ಟಿದ ಸ್ಥಿತಿಯಲ್ಲಿ ಬೆಲ್ಜಿಯಂ ಮಹಿಳೆ ರಸ್ತೆ ಬದಿಯಲ್ಲಿ ಪತ್ತೆ


ಕ್ಯೂಬಾ

ಗಂಭೀರವಾದ ಗಾಯಕ್ಕೆ ಕಾರಣವಾಗುವ ಅತ್ಯಾಚಾರಕ್ಕೆ ಮರಣದಂಡನೆ ವಿಧಿಸಲಾಗುತ್ತದೆ. 12 ವರ್ಷದೊಳಗಿನ ಮಗುವಿನ ಮೇಲೆ ಅತ್ಯಾಚಾರ ನಡೆಸುವ ಅಪರಾಧಿಗಳಿಗೆ ನಿರ್ದಾಕ್ಷಿಣ್ಯವಾಗಿ ಮರಣದಂಡನೆ ಶಿಕ್ಷೆಯನ್ನು ವಿಧಿಸಲಾಗುತ್ತದೆ.


ಯುನೈಟೆಡ್ ಸ್ಟೇಟ್ಸ್

ಲೂಯಿಸಿಯಾನ ಮತ್ತು ಫ್ಲೋರಿಡಾದಂತಹ ಅಮೆರಿಕದ ಕೆಲವು ರಾಜ್ಯಗಳು ಮಕ್ಕಳ ಅತ್ಯಾಚಾರ ಪ್ರಕರಣಗಳಲ್ಲಿ ಮರಣದಂಡನೆಯನ್ನು ವಿಧಿಸುತ್ತವೆ.

Continue Reading
Advertisement
Raksha Bandhan
ಪ್ರಮುಖ ಸುದ್ದಿ10 mins ago

Raksha Bandhan : ಪುಟಾಣಿ ಗೆಳೆಯರೊಂದಿಗೆ ರಕ್ಷಾ ಬಂಧನ ಆಚರಿಸಿಕೊಂಡ ನರೇಂದ್ರ ಮೋದಿ; ಇಲ್ಲಿವೆ ಚಿತ್ರಗಳು

Rayara Aradhane 2024
ಧಾರ್ಮಿಕ15 mins ago

Rayara Aradhane 2024: ನಾಳೆಯಿಂದ ರಾಘವೇಂದ್ರ ಸ್ವಾಮಿ ಆರಾಧನಾ ಮಹೋತ್ಸವ; ಗುರುಗಳ ಜೀವನ ಹೇಗಿತ್ತು, ಸಂದೇಶ ಏನಾಗಿತ್ತು?

Actor Chetan Ahimsa
ಕರ್ನಾಟಕ24 mins ago

Chetan Ahimsa: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಟ ಚೇತನ್ ಆಗ್ರಹ; ಆ.28ಕ್ಕೆ ಕಾಂಗ್ರೆಸ್ ಹಠಾವೋ, ದಲಿತ ಬಚಾವೋ ಹೋರಾಟ

Uttara Kannada News
ಕರ್ನಾಟಕ34 mins ago

Uttara Kannada News: ಪಿಎಂ ಸ್ವ-ನಿಧಿ ಯೋಜನೆ; ಕಾರವಾರ ನಗರಸಭೆಗೆ ರಾಜ್ಯ ಮಟ್ಟದ ಪ್ರಶಸ್ತಿಯ ಗರಿ

ಆರೋಗ್ಯ35 mins ago

Sodium reduction: ಉಪ್ಪು ಸೇವನೆ ಕಡಿಮೆಯಾದರೆ ಈ ಎಲ್ಲ ಸಮಸ್ಯೆಗಳು ಕಾಡುತ್ತವೆ

Pralhad Joshi
ಬೆಂಗಳೂರು37 mins ago

Pralhad Joshi: ಕಾಂಗ್ರೆಸ್‌ನಿಂದ ದೇಶದಲ್ಲಿ ಬಾಂಗ್ಲಾದಂತೆ ಅರಾಜಕತೆ ಸೃಷ್ಟಿಸುವ ಹುನ್ನಾರ; ಪ್ರಲ್ಹಾದ್‌ ಜೋಶಿ ಆರೋಪ

Virat kohli
ಕ್ರೀಡೆ41 mins ago

Virat Kohli : ಕೊಹ್ಲಿ ಕಿಂಗ್ ಅಲ್ಲ; ಭಾರತದ ಸೂಪರ್​​ ಸ್ಟಾರ್​ ಬ್ಯಾಟರ್​​ ಬಗ್ಗೆ ಕಳಪೆ ಕಾಮೆಂಟ್ ಮಾಡಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ

Contrast dupatta fashion
ಫ್ಯಾಷನ್50 mins ago

Contrast Dupatta Fashion: ಶ್ರಾವಣ ಮಾಸದಲ್ಲಿ ಟ್ರೆಂಡಿಯಾದ ಕಾಂಟ್ರಾಸ್ಟ್ ದುಪಟ್ಟಾ ಫ್ಯಾಷನ್‌

Actor Darshan
ಕರ್ನಾಟಕ1 hour ago

Pavithra gowda: ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಪವಿತ್ರಾ ಗೌಡ; ಆ.22ಕ್ಕೆ ವಿಚಾರಣೆ

Death Penalty
ವಿದೇಶ1 hour ago

Death Penalty: ಈ 7 ದೇಶಗಳಲ್ಲಿ ಅತ್ಯಾಚಾರ ನಡೆಸಿದರೆ ಮರಣ ದಂಡನೆಯೇ ಶಿಕ್ಷೆ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌