Viral Video: ಮೆಟ್ಟಿಲುಗಳ ಮೇಲೆ ಬೈಕ್‌ ಸವಾರಿ; ರೋಚಕ ವಿಡಿಯೊ ವೈರಲ್‌ - Vistara News

Latest

Viral Video: ಮೆಟ್ಟಿಲುಗಳ ಮೇಲೆ ಬೈಕ್‌ ಸವಾರಿ; ರೋಚಕ ವಿಡಿಯೊ ವೈರಲ್‌

Viral Video: ಸೋಷಿಯಲ್ ಮೀಡಿಯಾದಲ್ಲಿ ಈಗ ರೀಲ್ಸ್‌ಗಳದ್ದೇ ಹಾವಳಿ. ಒಬ್ಬರಿಗಿಂತ ಇನ್ನೊಬ್ಬರು ತಾವು ಮುಂದೆ ಎನ್ನುವ ಹಾಗೇ ರೀಲ್ಸ್ ಮಾಡಿ ಪೋಸ್ಟ್ ಮಾಡುತ್ತಾರೆ. ಈ ರೀಲ್ಸ್‌ಗಳನ್ನು ನೋಡುವಾಗ ಎದೆ ಝಲ್ ಅನ್ನುತ್ತದೆ.ವ್ಯಕ್ತಿಯೊಬ್ಬರು ಮೆಟ್ಟಿಲುಗಳ ಮೇಲೆ ಬೈಕ್ ಓಡಿಸುತ್ತಿರುವ ವಿಡಿಯೊವೊಂದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಈ ವಿಡಿಯೊ ನೋಡಲು ರೋಮಾಂಚನಕಾರಿಯಾಗಿದ್ದು, ನೋಡುಗರನ್ನು ಬೆರಗುಗೊಳಿಸುವುದಂತು ಸತ್ಯ. ಆದರೆ ಈ ಸ್ಟಂಟ್ ಅಪಾಯಕಾರಿಯಾಗಿದ್ದು, ಒಂದು ವೇಳೆ ಎಡವಿ ಬಿದ್ದರೆ ಸಾವಿಗೆ ಕಾರಣವಾಗಬಹುದು.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇತ್ತೀಚಿನ ದಿನಗಳಲ್ಲಿ ಜನರು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಲು, ಹೆಚ್ಚು ಫಾಲೋವರ್ಸ್ ಅನ್ನು ಪಡೆಯಲು ಹಲವಾರು ಸರ್ಕಸ್‌ಗಳನ್ನು ಮಾಡುತ್ತಾರೆ. ಅದಕ್ಕಾಗಿ ಅಪಾಯಕಾರಿ ರೀಲ್ಸ್ ಮಾಡುವುದು, ಸ್ಟಂಟ್ ಮಾಡುವುದು ಮುಂತಾದವುಗಳನ್ನು ಮಾಡುತ್ತಿರುತ್ತಾರೆ. ಈ ಬಗ್ಗೆ ಪೊಲೀಸರು ಎಚ್ಚರಿಕೆ ನೀಡಿದರೂ ಕೂಡ ಜನರು ತಮ್ಮ ಜೀವಕ್ಕೆ ಅಪಾಯ ತಂದುಕೊಳ್ಳುವಂತಹ ಕೆಲಸ ಬಿಟ್ಟಿಲ್ಲ. ಇದೀಗ ವ್ಯಕ್ತಿಯೊಬ್ಬ ಬೈಕ್‌ನಿಂದ ಮೆಟ್ಟಿಲು ಹತ್ತುವ ದುಸ್ಸಾಹಸ ಮಾಡಿದ್ದು, ಈ ವಿಡಿಯೊ ವೈರಲ್ (Viral Video) ಆಗಿದೆ.

ಈ ವಿಡಿಯೊದಲ್ಲಿ ವ್ಯಕ್ತಿಯೊಬ್ಬ ಎತ್ತರವಾಗಿರುವ ಮೆಟ್ಟಿಲುಗಳನ್ನು ತಮ್ಮ ಬೈಕ್ ಮೂಲಕ ಹತ್ತುತ್ತಿರುವುದು ಕಂಡುಬಂದಿದೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೊ ನೋಡಲು ರೋಮಾಂಚನಕಾರಿಯಾಗಿದ್ದು, ನೋಡುಗರನ್ನು ಬೆರಗುಗೊಳಿಸುವುದಂತು ಸತ್ಯ. ಆದರೆ ಈ ಸ್ಟಂಟ್ ಅಪಾಯಕಾರಿಯಾಗಿದ್ದು, ಒಂದು ವೇಳೆ ಎಡವಿ ಬಿದ್ದರೆ ಸಾವಿಗೆ ಕಾರಣವಾಗಬಹುದು. ಇದನ್ನು ಸ್ಟಂಟ್ ಮಾಡುವಲ್ಲಿ ಪರಿಣತರು ಮಾತ್ರ ಮಾಡಬಹುದು ಎಂಬುದನ್ನು ವೀಕ್ಷಕರು ತಿಳಿದಿರಬೇಕು.

ಈ ಬೈಕ್ ಸವಾರಿ ವಿಡಿಯೊವನ್ನು ಲೂಯಿಜಿನ್ಹೋ ಫೆರೆರಾ (@luizinhoferreiraa) ಎಂಬುವವರು ತಮ್ಮ ಇನ್ ಸ್ಟಾಗ್ರಾಂ ಪೇಜ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋವನ್ನು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ ಕೆಲವೇ ದಿನಗಳಲ್ಲಿ ವೈರಲ್ ಆಗಿದ್ದು, 2.3 ಕೋಟಿಗೂ ಹೆಚ್ಚು ವೀವ್ಸ್‌ಗಳನ್ನು ಗಳಿಸಿದೆ. ಈ ಪೋಸ್ಟ್ ಅನ್ನು 9.8 ಲಕ್ಷಕ್ಕೂ ಹೆಚ್ಚು ವೀಕ್ಷಕರು ಲೈಕ್ ಮಾಡಿದ್ದಾರೆ. ಸಾವಿರಾರು ಜನರು ವೀಡಿಯೊಗೆ ಕಾಮೆಂಟ್ ಮಾಡಿದ್ದಾರೆ. ಮೆಟ್ಟಿಲುಗಳ ಮೇಲೆ ವ್ಯಕ್ತಿ ಬಹಳ ಸುಲಭವಾಗಿ ಬೈಕ್ ಸವಾರಿ ಮಾಡುತ್ತಿರುವುದನ್ನು ನೋಡಿದ ನೆಟ್ಟಿಗರು ಆಶ್ಚರ್ಯಚಕಿತರಾದರು. ಯಮಹಾ ಕಂಪನಿಯು ಇದನ್ನು ತಮ್ಮ ಅಧಿಕೃತ ಜಾಹೀರಾತಾಗಿ ಮಾಡಬೇಕು ಎಂದು ಒಬ್ಬರು ಕಾಮೆಂಟ್ ಮಾಡಿದರೆ, ಇನ್ನೊಬ್ಬರು ವ್ಯಕ್ತಿಯ ಸ್ಟಂಟ್‌ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಮತ್ತು ಮತ್ತೊಬ್ಬರು ವ್ಯಕ್ತಿಯನ್ನು ಸ್ಟಂಟ್ ಮಾಸ್ಟರ್ ಎಂದು ಹೊಗಳಿದ್ದಾರೆ.

ಇದನ್ನೂ ಓದಿ: ಮಹಿಳೆಯ ಬೆತ್ತಲೆ ದೇಹದ ಮೇಲೆ ಮೃಷ್ಟಾನ್ನ ಬಡಿಸುವ ರೆಸ್ಟೋರೆಂಟ್‌!

ಬೈಕ್ ಸಂಬಂಧಿತ ಸ್ಟಂಟ್ ವೀಡಿಯೊಗಳನ್ನು ಪೋಸ್ಟ್ ಮಾಡಲು ಈ ಬಳಕೆದಾರರು ಹೆಚ್ಚು ಪ್ರಸಿದ್ಧರಾಗಿದ್ದಾರೆ. ಹಾಗಾಗಿ ಇವರು ತಮ್ಮ ಇನ್‌ಸ್ಟಾಗ್ರಾಂ ಹ್ಯಾಂಡಲ್ ನಲ್ಲಿ 91 ಸಾವಿರಕ್ಕೂ ಹೆಚ್ಚು ಫಾಲೋವರ್ಸ್‌ಗಳನ್ನು ಹೊಂದಿದ್ದಾರೆ. ಮತ್ತೊಂದು ವೀಡಿಯೊದಲ್ಲಿ, ಅವರು ಬೈಕ್ ಸವಾರಿ ಮೂಲಕ ಮೆಟ್ಟಿಲುಗಳಿಂದ ಕೆಳಗೆ ಇಳಿಯುತ್ತಿರುವುದು ಕಂಡುಬಂದಿದೆ, ಇದು ಸೋಶಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Robbery Video: ಬೆಂಗಳೂರಿನಲ್ಲಿ ನಡುರಸ್ತೆಯಲ್ಲೇ ಕಳ್ಳರು ಬ್ಯಾಗ್‌ ಕಸಿದು ಓಡುತ್ತಾರೆ! ಪೋಲಿಸ್ರು ಏನ್‌ ಮಾಡ್ತಿದ್ದಾರೋ!

Robbery Video: ಬೆಂಗಳೂರಿನ ಸಿಲ್ಕ್ ಬೋರ್ಡ್‌ನಲ್ಲಿ ಮಧ್ಯ ವಯಸ್ಕ ವ್ಯಕ್ತಿಯೊಬ್ಬರು ಚೀಲವನ್ನು ಹಿಡಿದು ನಿಂತಿದ್ದು, ಹಿಂದಿನಿಂದ ಬಂದ ಕಳ್ಳ ಅದನ್ನು ಕಸಿದುಕೊಂಡು ಓಡಿದ್ದಾನೆ. ಹಾಡಹಗಲಿನಲ್ಲಿ ಜನಸಂದಣಿ ಇರುವ ಕಡೆಯಲ್ಲೇ ಈತ ಕಳ್ಳತನ ಮಾಡಿದ್ದನ್ನು ಕಂಡು ಜನರು ಭಯಗೊಂಡಿದ್ದಾರೆ. ಈ ವಿಡಿಯೊ ಈಗ ವಿಡಿಯೊ ವೈರಲ್ ಆಗಿದೆ. ಬೆಂಗಳೂರು ಪೊಲೀಸರ ನಿಷ್ಕ್ರಿಯತೆಯ ಬಗ್ಗೆ ಜನ ಪ್ರಶ್ನೆ ಮಾಡಲಾರಂಭಿಸಿದ್ದಾರೆ.

VISTARANEWS.COM


on

Robbery Video
Koo

ಬೆಂಗಳೂರು: ಕಳ್ಳತನದ ಪ್ರಕರಣ ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಡೆ ಕೇಳಿ ಬರುತ್ತಿದೆ. ಜನರಿಗೆ ದುಡಿಮೆ ಬಗ್ಗೆ ಆಸಕ್ತಿ ಕಡಿಮೆಯಾಗಿ ಸುಲಭವಾಗಿ ಹಣ ಸಂಪಾದಿಸಲು ಕಳ್ಳತನದ ಮಾರ್ಗವನ್ನು ಕಂಡುಕೊಳ್ಲುತ್ತಿದ್ದಾರೆ. ಇದರಿಂದ ಎಷ್ಟೋ ಜನರ ಜೀವವೂ ಹೋಗಿದೆ. ಹಾಗಾಗಿ (Robbery Video) ಇಂತಹ ಕಳ್ಳತನ(Robbery Case )ವನ್ನು ಮಟ್ಟ ಹಾಕಲೇಬೇಕು. ಇದೀಗ ಬೆಂಗಳೂರಿನಲ್ಲಿ ಹಾಡಹಗಲಿನಲ್ಲೇ ವ್ಯಕ್ತಿಯೊಬ್ಬ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಧ್ಯವಯಸ್ಕರೊಬ್ಬರ ಬ್ಯಾಗನ್ನು ಕಿತ್ತುಕೊಂಡು ಓಡಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇಡೀ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಬೆಂಗಳೂರಿನ ಸಿಲ್ಕ್ ಬೋರ್ಡ್‍ನಲ್ಲಿ ಮಧ್ಯವಯಸ್ಕ ವ್ಯಕ್ತಿಯೊಬ್ಬರು ಚೀಲವನ್ನು ಹಿಡಿದು ನಿಂತಿದ್ದು, ಹಿಂದಿನಿಂದ ಬಂದ ಕಳ್ಳ ಅದನ್ನು ಕಸಿದುಕೊಂಡು ಓಡಿದ್ದಾನೆ. ಹಾಡಹಗಲಿನಲ್ಲಿ ಜನಸಂದಣಿ ಇರುವ ಕಡೆಯಲ್ಲಿ ಈತ ಕಳ್ಳತನ ಮಾಡಿದ್ದನ್ನು ಕಂಡು ಜನರು ಭಯಗೊಂಡಿದ್ದಾರೆ. ವೀಡಿಯೊದಲ್ಲಿ, ಯುವಕನೊಬ್ಬ ಜನಸಂದಣಿ ಇರುವ ಬಸ್ ನಿಲ್ದಾಣದಲ್ಲಿ ಮಧ್ಯವಯಸ್ಕ ವ್ಯಕ್ತಿಯನ್ನು ಗಮನಿಸುತ್ತಾ ಅವರ ಹಿಂದಿನಿಂದ ಬಂದು ಚೀಲವನ್ನು ಹಿಡಿದು ಕಸಿದುಕೊಂಡು ಪೇರಿ ಕಿತ್ತಿದ್ದಾನೆ. ಕಳ್ಳನು ಕೈಯಲ್ಲಿ ಚೀಲದೊಂದಿಗೆ ಓಡಿಹೋಗುತ್ತಿರುವುದು ಕಂಡು ಮಧ್ಯವಯಸ್ಕ ವ್ಯಕ್ತಿ ಸಹಾಯಕ್ಕಾಗಿ ಕೂಗಿದ್ದಾರೆ.

ಸಿಟಿಜನ್ಸ್ ಮೂವ್ಮೆಂಟ್ ಈಸ್ಟ್ ಬೆಂಗಳೂರು ಎಂಬ ಕಮ್ಯುನಿಟಿ ಎಕ್ಸ್ ಹ್ಯಾಂಡಲ್ ಈ ವಿಡಿಯೋವನ್ನು ಹಂಚಿಕೊಂಡಿದ್ದು, “ಬೆಂಗಳೂರಿನ ಸಿಲ್ಕ್ ಬೋರ್ಡ್ ಜಂಕ್ಷನ್‍ನಲ್ಲಿ ಹಾಡಹಗಲೇ ಬ್ಯಾಗ್ ಸ್ನ್ಯಾಚಿಂಗ್ ಮಾಡಲಾಗುತ್ತಿದೆ. ಈ ಜನರಿಗೆ ಧೈರ್ಯ ಎಲ್ಲಿಂದ ಬರುತ್ತಿದೆ. ದಯವಿಟ್ಟು ನಿಮ್ಮ ಜಾಗರೂಕತೆಯನ್ನು ಕಳೆದುಕೊಳ್ಳಬೇಡಿ!” ಎಂದು ಬರೆದಿದ್ದಾರೆ.

ಈ ವಿಡಿಯೊ ನೋಡಿ ಹಲವರು ಕಾಮೆಂಟ್ ಮಾಡಿದ್ದಾರೆ. ಈ ಘಟನೆ ಮತ್ತೊಮ್ಮೆ ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡಿದೆ. ಹೊಸೂರು ರಸ್ತೆಯಲ್ಲಿ ಹಾಡಹಗಲೇ ಸರಗಳ್ಳತನ ಸಾಮಾನ್ಯವಾಗಿದೆ. ಬೆಂಗಳೂರು ಸಿಟಿ ಪೊಲೀಸರು ದಯವಿಟ್ಟು ಪ್ರಕರಣದ ಪರಿಸ್ಥಿತಿಯನ್ನು ಪರಿಶೀಲಿಸಿ. ಪ್ರತಿದಿನ ಕಾರುಗಳ ಮೂಲಕ ಬ್ಯಾಗ ಕಳ್ಳತನ ಮಾಡಲಾಗುತ್ತಿದೆ. ಇದರ ಹಿಂದೆ ಮಾಫಿಯಾ ಇದೆ. ನಾಗರಿಕರೇ, ಬೆಲೆಬಾಳುವ ವಸ್ತುಗಳನ್ನು ಎಂದಿಗೂ ಎಲ್ಲರಿಗೂ ಕಾಣುವಂತೆ ತೋರಿಸಬೇಡಿ” ಎಂದು ಬಳಕೆದಾರರೊಬ್ಬರು ಬರೆದಿದ್ದಾರೆ.

ಇದನ್ನೂ ಓದಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಗೆ ಅಶ್ಲೀಲ ವಿಡಿಯೊ ತೋರಿಸಿ ಲೈಂಗಿಕ ಕಿರುಕುಳ

ಇನ್ನೊಬ್ಬ ಬಳಕೆದಾರರು “ಈ ಕೃತ್ಯದಲ್ಲಿ ಕೆಲವು ಪೊಲೀಸರು, ಬಿಎಂಟಿಸಿ ಅಧಿಕಾರಿಗಳು ಸಹ ಭಾಗಿಯಾಗಿದ್ದಾರೆ. ಹಾಗಾಗಿ ದರೋಡೆಕೋರರು ಸರಳವಾಗಿ ಈ ಕೆಲಸ ಮಾಡುತ್ತಿದ್ದಾರೆ. ಇಲ್ಲವಾದರೆ ಇಂತಹ ಘಟನೆ ಪ್ರತಿದಿನ ನಡೆಯುವುದಿಲ್ಲ” ಎಂಬುದಾಗಿ ತಿಳಿಸಿದ್ದಾರೆ. ಇಂತಹ ಪ್ರಕರಣದಿಂದ ಬೆಂಗಳೂರು ಜನರ ಜೀವನ ನರಕವಾಗಿದೆ ಎಂದು ನೆಟ್ಟಿಜನ್ ಬೇಸರ ವ್ಯಕ್ತಪಡಿಸಿದ್ದಾರೆ.

Continue Reading

ಸಿನಿಮಾ

Kalki 2898 AD: ಕಲ್ಕಿ 2898 ಎಡಿ ಚಿತ್ರದ 10 ಕುತೂಹಲಕರ ಸಂಗತಿಗಳಿವು!

ಬಾಕ್ಸ್ ಆಫೀಸ್ ನಲ್ಲಿ ದಾಖಲೆ ಮೇಲೆ ದಾಖಲೆ ಬರೆಯುತ್ತಿರುವ ಕಲ್ಕಿ 2898ಎಡಿ (Kalki 2898 AD) ಚಿತ್ರ ಸಾಕಷ್ಟು ಪ್ರೇಕ್ಷಕರ ಮನ ಗೆದ್ದಿದೆ. ಪ್ರಭಾಸ್- ದೀಪಿಕಾ ಪಡುಕೋಣೆ ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿರುವ ಈ ಚಿತ್ರ ಹಲವು ಕಾರಣಗಳಿಂದ ವಿಶೇಷ ಎಂದೆನಿಸಿದೆ. ನಾಗ್ ಅಶ್ವಿನ್ ನಿರ್ದೇಶನದ ಈ ಚಿತ್ರದ ಹತ್ತು ಪ್ರಮುಖ ಸಂಗತಿಗಳು ಚಿತ್ರ ನೋಡುವ ಮುನ್ನವೇ ಮನಸ್ಸನ್ನು ಚಿತ್ರ ನೋಡಲು ಪ್ರೇರೇಪಿಸುವಂತೆ ಮಾಡುತ್ತದೆ. ಅದು ಯಾವುದು ಗೊತ್ತೇ?

VISTARANEWS.COM


on

By

Kalki 2898 AD
Koo

ವಿಶ್ವದಾದ್ಯಂತ (world) ಅದ್ಧೂರಿಯಾಗಿ ಜೂನ್ 27ರಂದು ತೆರೆ ಕಂಡಿರುವ ಕಲ್ಕಿ 2898 ಎಡಿ (Kalki 2898 AD) ಸಿನಿಮಾ ಈಗಾಗಲೇ ಬಾಕ್ಸ್ ಆಫೀಸ್​ನಲ್ಲಿ (box office) ದಾಖಲೆ ಬರೆದಿದೆ. ಭಾರತೀಯ ಚಿತ್ರರಂಗದಲ್ಲಿ (Indian cinema) ಮೂರನೇ ಅತೀ ದೊಡ್ಡ ಓಪನರ್ ಕಂಡ ಈ ಚಿತ್ರ ಹಲವಾರು ಕಾರಣಗಳಿಗಾಗಿ ಪ್ರೇಕ್ಷಕರ ಮನ ಗೆದ್ದಿದೆ. ಚಿತ್ರ ನೋಡದವರಿಗೂ ಈ ಸಿನಿಮಾ ಬಗ್ಗೆ ಕುತೂಹಲ ಮೂಡಿದೆ.

ನಾಗ್ ಅಶ್ವಿನ್ (Nag Ashwin) ನಿರ್ದೇಶಿಸಿರುವ ಈ ಚಿತ್ರ ಹಿಂದೂ (hindu) ಧರ್ಮಗ್ರಂಥಗಳಿಂದ ಪ್ರೇರಿತವಾಗಿದೆ. ಈಗಾಗಲೇ ಸಾಕಷ್ಟು ಮಂದಿಯ ಉತ್ಸಾಹವನ್ನು ಹೆಚ್ಚಿಸಿರುವ ಕಲ್ಕಿ 2898ಎಡಿ ಚಿತ್ರ ಪೌರಾಣಿಕ ಕಥೆಯ ಸಾರವನ್ನು ಒಳಗೊಂಡಿರುವ ವೈಜ್ಞಾನಿಕ ಚಿತ್ರ. ಈ ಚಿತ್ರವನ್ನು ವೀಕ್ಷಿಸಲು ಚಿತ್ರಮಂದಿರಗಳಿಗೆ ತೆರಳವಾ ಯೋಚನೆಯಲ್ಲಿದ್ದರೆ ನಿಮ್ಮ ಉತ್ಸಾಹವನ್ನು ಹೆಚ್ಚಿಸುವ ಚಿತ್ರದ ಹತ್ತು ಪ್ರಮುಖ ಸಂಗತಿಗಳು ಇಲ್ಲಿವೆ.


  1. 1. ಕಲ್ಕಿ 2898 ಎಡಿ ಚಿತ್ರವನ್ನು 600 ಕೋಟಿ ರೂಪಾಯಿ ಬಜೆಟ್‌ನಲ್ಲಿ ನಿರ್ಮಿಸಲಾಗಿದೆ. ಇದು ಈವರೆಗೆ ನಿರ್ಮಿಸಲಾದ ಅತ್ಯಂತ ದುಬಾರಿ ಭಾರತೀಯ ಚಲನಚಿತ್ರವಾಗಿದೆ.

2. ಚಿತ್ರವು ಭಗವಾನ್ ವಿಷ್ಣುವಿನ 10ನೇ ಮತ್ತು ಕೊನೆಯ ಅವತಾರದ ಬಗ್ಗೆ ಹೇಳುತ್ತದೆ. ಮಹಾಭಾರತ ಮತ್ತು ಕಲ್ಕಿ ಪುರಾಣದಿಂದ ಪ್ರೇರಿತವಾಗಿದೆ.

3. ಚಿತ್ರದ ಕಥೆಯು ಮಹಾಭಾರತದಿಂದ ಪ್ರಾರಂಭವಾಗುತ್ತದೆ. ಕಲ್ಕಿ 2898 ಎಡಿಯಲ್ಲಿ ವಿಷ್ಣು ಅವತಾರ ಭಗವಾನ್ ಕೃಷ್ಣ ಲೋಕದಿಂದ ನಿರ್ಗಮಿಸುವಾಗ ಕೊನೆಗೊಳ್ಳುತ್ತದೆ.


4. ಅಮಿತಾಭ್ ಬಚ್ಚನ್ ಮತ್ತು ಕಮಲ್ ಹಾಸನ್ 39 ವರ್ಷಗಳ ಅನಂತರ ಈ ಸಿನಿಮಾದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಅವರು ಕೊನೆಯದಾಗಿ 1985ರ ಚಲನಚಿತ್ರ ಗಿರಫ್ತಾರ್ ನಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು.

5. ಕಲ್ಕಿ ಚಿತ್ರವನ್ನು ARRI ಅಲೆಕ್ಸಾ 65 ಕೆಮರಾದಲ್ಲಿ ಚಿತ್ರೀಕರಿಸಲಾಗಿದೆ. ಹೀಗಾಗಿ ಈ ತಂತ್ರಜ್ಞಾನವನ್ನು ಬಳಸಿದ ಮೊದಲ ಭಾರತೀಯ ಚಲನಚಿತ್ರ ಇದಾಗಿದೆ. ಅಲೆಕ್ಸಾ 65 ಕೆಮರಾವು A3ಎಕ್ಸ್ ಸಂವೇದಕವನ್ನು ಹೊಂದಿದೆ. ಇದು ಮೂರು ಲಂಬವಾಗಿ ಜೋಡಿಸಲಾದ ALEV III ಸಂವೇದಕಗಳಿಂದ ಮಾಡಲ್ಪಟ್ಟಿದೆ. ಗರಿಷ್ಠ ರೆಸಲ್ಯೂಶನ್ 6560×3100 ಅನ್ನು ಕೊಡುತ್ತದೆ. ಈ ಕೆಮರದಲ್ಲಿ ಚಿತ್ರೀಕರಿಸಿದ ಮೊದಲ ಚಲನಚಿತ್ರ ಮಿಷನ್: ಇಂಪಾಸಿಬಲ್ – ರೋಗ್ ನೇಷನ್ (2015). ಇದನ್ನು ನೀರೊಳಗಿನ ದೃಶ್ಯಗಳನ್ನು ಸೆರೆಹಿಡಿಯಲು ಬಳಸಲಾಯಿತು. The Revenant (2015) ನ ಸರಿಸುಮಾರು 40 ಪ್ರತಿಶತವನ್ನು ಚಿತ್ರೀಕರಿಸಲು ಸಹ ಇದನ್ನು ಬಳಸಲಾಗಿದೆ.


6. ಭಾರೀ ಗಾತ್ರದ ಆರು-ಟನ್ ಎಐ ಚಾಲಿತ ರೋಬೋಟಿಕ್ ಮೂರು-ಚಕ್ರದ ಬುಜ್ಜಿ ಎಂಬ ವಾಹನವು ಮುಂದಿನ ಪೀಳಿಗೆಯ ವಾಹನವಾಗಿದ್ದು, ಇದನ್ನು ಕಲ್ಕಿ ಚಲನಚಿತ್ರಕ್ಕಾಗಿ ಪ್ರತ್ಯೇಕವಾಗಿ ಮಾಡಿಸಲಾಗಿದೆ. ಈ ಚಿತ್ರದಲ್ಲಿ ಪ್ರಭಾಸ್ ಓಡಿಸುವ ವಾಹನವನ್ನು ಓಡಿಸಲು ನಿರ್ದೇಶಕ ನಾಗ್ ಅಶ್ವಿನ್ ಅವರು ಉದ್ಯಮಿ ಎಲಾನ್ ಮಸ್ಕ್ ಅವರನ್ನು ಆಹ್ವಾನಿಸಿದ್ದರು.

7. ಅಮಿತಾಭ್ ಬಚ್ಚನ್ ಅವರ ಪಾತ್ರವು ನಿಜ ಜೀವನದ ಅಶ್ವತ್ಥಾಮನಿಂದ ಪ್ರೇರಿತವಾಗಿದೆ. ಟ್ರೈಲರ್‌ನಲ್ಲಿ ಬಿಗ್ ಬಿ ಪಾತ್ರಗಳ ಹಣೆಯ ಮೇಲೆ ಕಾಣುವ ಮಣಿಯಂತಹ ವಸ್ತುವಿನ ಮಹತ್ವ ಮತ್ತು ಪ್ರಸ್ತುತತೆಯ ಬಗ್ಗೆಯೂ ಈ ಚಿತ್ರದಲ್ಲಿ ತಿಳಿಯಬಹುದು.

8. ಡ್ಯೂನ್, ಓಪನ್‌ಹೈಮರ್, ಇಂಟರ್‌ಸ್ಟೆಲ್ಲರ್, ಇನ್‌ಸೆಪ್ಶನ್, ಟೆನೆಟ್ ಮತ್ತು ಬ್ಲೇಡ್ ರನ್ನರ್ 2049ನಂತಹ ಕೆಲವು ಸಾಂಪ್ರದಾಯಿಕ ಹಾಲಿವುಡ್ ಚಲನಚಿತ್ರಗಳಲ್ಲಿ ಕೆಲಸ ಮಾಡಿದ ವಿಎಫ್ ಎಕ್ಸ್ ತಂಡವು ಕಲ್ಕಿ 2989 ಎಡಿಯಲ್ಲಿ ಕೆಲಸ ಮಾಡಿದೆ.


9. ಕಲ್ಕಿ ಚಿತ್ರದಲ್ಲಿ ಎಸ್‌.ಎಸ್. ರಾಜಮೌಳಿ, ರಾಮ್ ಗೋಪಾಲ್ ವರ್ಮಾ, ವಿಜಯ್ ದೇವರಕೊಂಡ, ನಾನಿ, ರಾಣಾ ದಗುಬಾಟಿ, ದುಲ್ಕರ್ ಸಲ್ಮಾನ್ ಮತ್ತು ಮೃಣಾಲ್ ಠಾಕೂರ್ ಅವರ ವಿಶೇಷ ಅತಿಥಿ ಪಾತ್ರಗಳಿವೆ.

ಇದನ್ನೂ ಓದಿ: Kalki 2898 AD: 1000 ಕೋಟಿ ರೂ. ಗಳಿಕೆಯತ್ತ ‘ಕಲ್ಕಿ 2898  ಎಡಿʼ; ಇಲ್ಲಿಯವರೆಗೆ ಕಲೆಕ್ಷನ್‌ ಮಾಡಿದ್ದೆಷ್ಟು?


10. ಕಮಲ್ ಹಾಸನ್ ಅವರು ಸುಪ್ರೀಂ ಯಾಸ್ಕಿನ್ ಪಾತ್ರವನ್ನು ನಿರ್ವಹಿಸಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಅವರು ತಮ್ಮ ಪಾತ್ರವನ್ನು ಚಿತ್ರದಲ್ಲಿ ಕೆಟ್ಟ ಉದ್ದೇಶಗಳನ್ನು ಹೊಂದಿರುವ ದುಷ್ಟ ಋಷಿ ಎಂದು ವಿವರಿಸಿದ್ದಾರೆ. ಇದು ಚಿತ್ರದ ಬಗ್ಗೆ ಸಾಕಷ್ಟು ಕುತೂಹಲವನ್ನು ಮೂಡಿಸುತ್ತದೆ.

Continue Reading

ದೇಶ

Costliest City: ಮುಂಬಯಿ ಈಗ ಭಾರತದ ಅತ್ಯಂತ ದುಬಾರಿ ನಗರ; ಬೆಂಗಳೂರಿಗೆ ಎಷ್ಟನೇ ಸ್ಥಾನ?

ಮರ್ಸರ್ಸ್ ಕಾಸ್ಟ್ ಆಫ್ ಲಿವಿಂಗ್ ಸಿಟಿ ಶ್ರೇಯಾಂಕ 2024ರಲ್ಲಿ ವಾಸಿಸಲು ಅತ್ಯಂತ ದುಬಾರಿಯಾದ (Costliest City) ನಗರಗಳನ್ನು ಪಟ್ಟಿ ಮಾಡಲಾಗಿದ್ದು, ಇದಕ್ಕಾಗಿ ವಿಶ್ವದ 226 ನಗರಗಳನ್ನು ವಿಶ್ಲೇಷಿಸಲಾಗಿದೆ. ಇದರಲ್ಲಿ ಮುಂಬಯಿ 136, ಚೆನ್ನೈ 189ನೇ ಸ್ಥಾನಗಳನ್ನು ಗಳಿಸಿದೆ. ಹೈದರಾಬಾದ್ 202, ಪುಣೆ 205 ಮತ್ತು ಕೋಲ್ಕತ್ತಾ 207ನೇ ಸ್ಥಾನದಲ್ಲಿದೆ.

VISTARANEWS.COM


on

By

Costliest City
Koo

ವಾಣಿಜ್ಯ ನಗರಿ ಮುಂಬಯಿ (mumbai) ಈಗ ವಿಶ್ವದ ಅತ್ಯಂತ ದುಬಾರಿ ನಗರಗಳಲ್ಲಿ (Costliest City) ಒಂದಾಗಿ ಹೊರ ಹೊಮ್ಮಿದೆ. ಜಾಗತಿಕವಾಗಿ 136ನೇ ಸ್ಥಾನದಲ್ಲಿದೆ. ಮರ್ಸರ್ಸ್ ಕಾಸ್ಟ್ ಆಫ್ ಲಿವಿಂಗ್ ಸಿಟಿ (Mercer’s Cost of Living City) ಶ್ರೇಯಾಂಕ 2024ರ ವರದಿಯನ್ನು ಪ್ರಕಟಿಸಿದ್ದು, ಕಳೆದ ವರ್ಷದಂತೆ ಈ ಬಾರಿಯೂ ಹಾಂಗ್‌ಕಾಂಗ್ (Hong Kong), ಸಿಂಗಾಪುರ್ (Singapore) ಮತ್ತು ಜ್ಯೂರಿಚ್ (Zurich) ವಲಸಿಗರಿಗೆ ವಿಶ್ವದ ಅತ್ಯಂತ ದುಬಾರಿ ನಗರಗಳಾಗಿ ಗುರುತಿಸಿಕೊಂಡಿದೆ.

ಜೀವನ ವೆಚ್ಚದ ವಿಚಾರದಲ್ಲಿ ಇಸ್ಲಾಮಾಬಾದ್, ಲಾಗೋಸ್ ಮತ್ತು ಅಬುಜಾ ಅತ್ಯಂತ ಕೆಳಗಿನ ಸ್ಥಾನದಲ್ಲಿವೆ. ಭಾರತದಲ್ಲಿ ಮುಂಬಯಿ ಅತ್ಯುನ್ನತ ಸ್ಥಾನದಲ್ಲಿದೆ. ಮುಂಬಯಿ ಕಳೆದ ವರ್ಷಕ್ಕಿಂತ 11 ಸ್ಥಾನಗಳನ್ನು ಏರಿಸಿಕೊಂಡಿದೆ. ಮುಂಬಯಿ ಈಗ ವಲಸಿಗರಿಗೆ ಭಾರತದ ಅತ್ಯಂತ ದುಬಾರಿ ನಗರವಾಗಿ ಗುರುತಿಸಲ್ಪಟ್ಟಿದೆ. ದೆಹಲಿಯು ನಾಲ್ಕು ಪ್ರದೇಶಗಳನ್ನು ಕೆಳಕ್ಕೆ ತಳ್ಳಿ ವಿಶ್ವದಲ್ಲಿ 165ನೇ ದುಬಾರಿ ನಗರವಾಗಿ ಗುರುತಿಸಿಕೊಂಡಿದೆ.


ದುಬಾರಿ ಪಟ್ಟಿಯಲ್ಲಿರುವ ಭಾರತದ ನಗರಗಳು

ಐದು ಅಂಕಗಳನ್ನು ಕಳೆದುಕೊಂಡು ಚೆನ್ನೈ 189 ಮತ್ತು ಬೆಂಗಳೂರು 195 ಅಂಕಗಳಿಗೆ ಕುಸಿದಿದೆ. ಹೈದರಾಬಾದ್ 202ರಲ್ಲಿದೆ. ವಲಸಿಗರಿಗೆ ವಿಶ್ವದ ಅತ್ಯಂತ ದುಬಾರಿ ನಗರಗಳ ಪಟ್ಟಿಯಲ್ಲಿ ಪುಣೆ 205 ಮತ್ತು ಕೋಲ್ಕತ್ತಾ 207 ನೇ ಸ್ಥಾನದಲ್ಲಿದೆ.

ಮರ್ಸರ್ಸ್ ಕಾಸ್ಟ್ ಆಫ್ ಲಿವಿಂಗ್ ಸಿಟಿ ಶ್ರೇಯಾಂಕ 2024ರ ಪಟ್ಟಿಗೆ ಮಾಹಿತಿ ಪಡೆಯಲು ವಿಶ್ವದ 226 ನಗರಗಳನ್ನು ವಿಶ್ಲೇಷಿಸಲಾಗಿದೆ. ಇದರಲ್ಲಿ ವಸತಿ, ಸಾರಿಗೆ, ಆಹಾರ, ಬಟ್ಟೆ ಮತ್ತು ಮನೋರಂಜನೆಯಂತಹ 200 ಕ್ಕೂ ಹೆಚ್ಚು ವಸ್ತುಗಳ ವೆಚ್ಚವನ್ನು ಅಳೆಯಲಾಗಿದೆ.

ಸಮೀಕ್ಷೆಯ ಮೂಲ ನ್ಯೂಯಾರ್ಕ್ ನಗರವಾಗಿದೆ. ಸಮೀಕ್ಷೆಯ ಪ್ರಕಾರ ಹಣದುಬ್ಬರ, ವಿನಿಮಯ ದರದ ವ್ಯತ್ಯಾಸಗಳು, ಆರ್ಥಿಕ ಮತ್ತು ಭೌಗೋಳಿಕ ರಾಜಕೀಯ ಚಂಚಲತೆ ಮತ್ತು ಹೆಚ್ಚುತ್ತಿರುವ ಸಂಘರ್ಷಗಳಂತಹ ಜೀವನ ವೆಚ್ಚದ ಹೆಚ್ಚಳಕ್ಕೆ ಕಾರಣವಾಗಿವೆ.


ಹಾಂಗ್‌ಕಾಂಗ್ ಏಕೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ?

ಹಾಂಗ್‌ಕಾಂಗ್‌ನಂತಹ ನಗರಗಳಲ್ಲಿ ದುಬಾರಿ ವಸತಿ, ಹೆಚ್ಚಿನ ಸಾರಿಗೆ ವೆಚ್ಚಗಳು ಮತ್ತು ದುಬಾರಿ ಸರಕು ಮತ್ತು ಸೇವೆಗಳ ಕಾರಣದಿಂದಾಗಿ ಜೀವನ ವೆಚ್ಚ ಹೆಚ್ಚಾಗಿದೆ ಎಂದು ಸಮೀಕ್ಷೆಯು ತೋರಿಸಿದೆ. ಆದರೆ ಆರ್ಥಿಕ ಕುಸಿತದಿಂದಾಗಿ ಇಸ್ಲಾಮಾಬಾದ್, ಲಾಗೋಸ್ ಮತ್ತು ಅಬುಜಾದಲ್ಲಿ ಜೀವನ ವೆಚ್ಚವನ್ನು ಕಡಿಮೆಯಾಗಿದೆ ಎಂದು ಹೇಳಿದೆ.

ಇದನ್ನೂ ಓದಿ: Maya Neelakantan: ಅಮೆರಿಕವನ್ನು ಹುಚ್ಚೆಬ್ಬಿಸಿದ 10 ವರ್ಷದ ಭಾರತೀಯ ಗಿಟಾರ್‌ ಬಾಲೆ ಮಾಯಾ ನೀಲಕಂಠನ್‌, ಯಾರೀಕೆ?

ಇತರ ಅತ್ಯಂತ ದುಬಾರಿ ನಗರಗಳು

ಯುರೋಪಿಯನ್ ನಗರಗಳಲ್ಲಿ ಟಾಪ್ 10 ಅತ್ಯಂತ ದುಬಾರಿ ನಗರಗಳಲ್ಲಿ ಕಾಣಿಸಿಕೊಂಡಿವೆ. ಲಂಡನ್ 8ನೇ ಸ್ಥಾನದಲ್ಲಿದೆ, ಕೋಪನ್ ಹ್ಯಾಗನ್ 11, ವಿಯೆನ್ನಾ 24, ಪ್ಯಾರಿಸ್ 29, ಮತ್ತು ಆಮ್ಸ್ಟರ್‌ಡ್ಯಾಮ್ 30, ದುಬೈ ಮಧ್ಯಪ್ರಾಚ್ಯದಲ್ಲಿ ಅಂತಾರಾಷ್ಟ್ರೀಯ ಉದ್ಯೋಗಿಗಳಿಗೆ 15 ನೇ ಶ್ರೇಯಾಂಕದಲ್ಲಿ ಅತ್ಯಂತ ದುಬಾರಿ ನಗರವಾಗಿದೆ, ದಕ್ಷಿಣ ಅಮೆರಿಕಾದಲ್ಲಿ ಉರುಗ್ವೆ 42 ನೇ ಶ್ರೇಣಿಯಲ್ಲಿದೆ. ಉತ್ತರ ಅಮೆರಿಕಾದಲ್ಲಿ ನ್ಯೂಯಾರ್ಕ್ ನಗರವು 7ನೇ ಶ್ರೇಣಿಯಲ್ಲಿದ್ದು ಅಗ್ರಸ್ಥಾನದಲ್ಲಿದೆ.

Continue Reading

Latest

Hathras Case: ಭೋಲೆ ಬಾಬಾ ಇರುತ್ತಿದ್ದುದು ಫೈವ್‌ ಸ್ಟಾರ್‌ ಆಶ್ರಮದಲ್ಲಿ! ಅವರಿಗಿದೆ ಅಪಾರ ಆಸ್ತಿ!

Hathras Case: ಹತ್ರಾಸ್‌ನಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮಹಿಳೆಯರು, ಮಕ್ಕಳು ಮತ್ತು ವೃದ್ಧರು ಸೇರಿದಂತೆ 121 ಜನರು ಸಾವನ್ನಪ್ಪಿದ್ದಾರೆ. ಇದರ ನಡುವೆ ಈ ದುರಂತಕ್ಕೆ ಕಾರಣವಾಗಿದ್ದ ಸ್ವಯಂ ಘೋಷಿತ ದೇವಮಾನವ ಭೋಲೆ ಬಾಬಾ ಅಲಿಯಾಸ್ ನಾರಾಯಣ್ ಸಾಕರ್ ಹರಿ ಬಗ್ಗೆ ಹೆಚ್ಚಿನ ಕುತೂಹಲಕಾರಿ ಮಾಹಿತಿಗಳು ಹೊರಬರುತ್ತಿವೆ. ಉತ್ತರ ಪ್ರದೇಶದ ಮೈನ್ಪುರಿಯಲ್ಲಿರುವ 13 ಎಕರೆ “ಪಂಚತಾರಾ” ಆಶ್ರಮ ಸೇರಿದಂತೆ ಅವರ ಅಪಾರ ಸಂಪತ್ತಿನ ಬಗ್ಗೆ ವಿವರ ನೀಡುವಂತಹ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

VISTARANEWS.COM


on

Bhole Baba
Koo

ಲಕ್ನೋ: ಉತ್ತರ ಪ್ರದೇಶದ ಹತ್ರಾಸ್‍ನಲ್ಲಿ (Hathras Case) ಕಾಲ್ತುಳಿತಕ್ಕೆ ಸಿಲುಕಿ ಮಹಿಳೆಯರು, ಮಕ್ಕಳು ಮತ್ತು ವೃದ್ಧರು ಸೇರಿದಂತೆ 121 ಜನರು ಸಾವನ್ನಪ್ಪಿದ ಘಟನೆಯ ನಂತರ, ಈ ದುರಂತಕ್ಕೆ ಕಾರಣವಾಗಿದ್ದ ಸ್ವಯಂ ಘೋಷಿತ ದೇವಮಾನವ ಭೋಲೆ ಬಾಬಾ ಅಲಿಯಾಸ್ ನಾರಾಯಣ್ ಸಾಕರ್ ಹರಿ ಬಗ್ಗೆ ಹೆಚ್ಚಿನ ಕುತೂಹಲಕಾರಿ ಮಾಹಿತಿಗಳು ಹೊರಬರುತ್ತಿವೆ.

ಬಾಬಾನ ವಿರುದ್ಧ ಲೈಂಗಿಕ ದೌರ್ಜನ್ಯದ ಪ್ರಕರಣಗಳಿರುವ ಬಗ್ಗೆ ಬಹಿರಂಗವಾದ ಕೆಲವೇ ಗಂಟೆಗಳಲ್ಲಿ, ಉತ್ತರ ಪ್ರದೇಶದ ಮೈನ್ಪುರಿಯಲ್ಲಿರುವ 13 ಎಕರೆ “ಪಂಚತಾರಾ” ಆಶ್ರಮ ಸೇರಿದಂತೆ ಅವರ ಅಪಾರ ಸಂಪತ್ತಿನ ಬಗ್ಗೆ ವಿವರ ನೀಡುವಂತಹ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

Bhole Baba

ಉತ್ತರ ಪ್ರದೇಶದ ಮೈನ್ಪುರಿಯಲ್ಲಿರುವ 13 ಎಕರೆ “ಪಂಚತಾರಾ” ಆಶ್ರಮದ ಜಮೀನಿನ ಮೌಲ್ಯ 4 ಕೋಟಿ ರೂ. ಎಂಬುದಾಗಿ ತಿಳಿದುಬಂದಿದೆ. ಇನ್ನು ಮೈನ್ಪುರಿ ಆಶ್ರಮವು ಪಂಚತಾರಾ ಹೋಟೆಲ್‌ನಲ್ಲಿರುವ ಸೌಲಭ್ಯಗಳನ್ನು ಹೊಂದಿವೆ ಎನ್ನಲಾಗಿದೆ. ಈ ಆಶ್ರಮದಲ್ಲಿ ವಾಸವಾಗಿದ್ದ, ದೇವತಾಮಾನ ಎಂದು ಕರೆಯುವ ಬಾಬಾರಿಗೆ ಈ ಆಶ್ರಮದಲ್ಲಿ ಆರು ಕೊಠಡಿಗಳನ್ನು ಮೀಸಲಿಡಲಾಗಿದೆ. ಇನ್ನೂ ಆರು ಕೊಠಡಿಗಳನ್ನು ಸಮಿತಿಯ ಸದಸ್ಯರು ಮತ್ತು ಅವರ ಸಂಸ್ಥೆಯ ಸ್ವಯಂಸೇವಕರಿಗೆ ಮೀಸಲಿಡಲಾಗಿದೆ. ಆಶ್ರಮವು ಖಾಸಗಿ ರಸ್ತೆಯನ್ನು ಮಾತ್ರವಲ್ಲದೆ ಅತ್ಯಾಧುನಿಕ ಕೆಫೆಟೇರಿಯಾವನ್ನು ಸಹ ಹೊಂದಿದೆ ಎನ್ನಲಾಗಿದೆ.

Bhole Baba

ಆಶ್ರಮಕ್ಕಾಗಿ ಭೂಮಿಯನ್ನು 3-4 ವರ್ಷಗಳ ಹಿಂದೆ ತನಗೆ ಉಡುಗೊರೆಯಾಗಿ ನೀಡಲಾಗಿದೆ ಎಂದು ಬಾಬಾ ಹೇಳಿದ್ದಾರೆ. ಆದರೆ ದಾಖಲೆಗಳು ಅವರು ಕೋಟಿಗಟ್ಟಲೆ ಮೌಲ್ಯದ ಹಲವಾರು ಆಸ್ತಿಗಳನ್ನು ಹೊಂದಿದ್ದಾರೆ ಎಂದು ಬಹಿರಂಗಪಡಿಸುತ್ತವೆ. ದೇಶದ ಇತರ ಸ್ಥಳಗಳಲ್ಲಿನ ಹೆಚ್ಚಿನ ಆಶ್ರಮಗಳು ಈ ಆಸ್ತಿಗಳ ವ್ಯಾಪ್ತಿಯಲ್ಲಿ ಬರುತ್ತದೆ ಎನ್ನಲಾಗಿದೆ.

Hathras Case

ಉತ್ತರ ಪ್ರದೇಶದ ಹತ್ರಾಸ್‍ನಲ್ಲಿ ಬಾಬಾ ಮತ್ತು ಅವರ ಸಂಸ್ಥೆ ಆಯೋಜಿಸಿದ್ದ ‘ಸತ್ಸಂಗ’ (ಧಾರ್ಮಿಕ ಕಾರ್ಯಕ್ರಮ) ದಲ್ಲಿ ಕಾಲ್ತುಳಿತದಿಂದ ಕನಿಷ್ಠ ಏಳು ಮಕ್ಕಳು ಸೇರಿದಂತೆ 121 ಜನರ ಸಾವು ಸಂಭವಿಸಿದೆ. 80,000 ಜನರಿಗೆ ಅನುಮತಿ ನೀಡಲಾಗಿದ್ದು, 2.5 ಲಕ್ಷ ಜನರು ಕಾರ್ಯಕ್ರಮಕ್ಕೆ ಜಮಾಯಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬಾಬಾ ತನ್ನ ಕಾರಿನಲ್ಲಿ ಹೊರಟಾಗ, ಜನಸಮೂಹವು ಅವರ ಆಶೀರ್ವಾದ ಪಡೆಯಲು ಅವರ ಹಿಂದೆ ಓಡಿದ್ದಾರೆ. ಜನಸಂದಣಿಯನ್ನು ನಿಯಂತ್ರಿಸುವ ಪ್ರಯತ್ನದಲ್ಲಿ, ಸ್ವಯಂಸೇವಕರು ಮತ್ತು ಬಾಬಾ ಅವರ ಭದ್ರತಾ ಪಡೆ ಜನರನ್ನು ಹಿಂದಕ್ಕೆ ತಳ್ಳಲು ಪ್ರಾರಂಭಿಸಿದರು. ಇದರಿಂದ ಹಲವಾರು ಭಕ್ತರು ಕೆಳೆಗೆ ಬಿದ್ದು ಕಾಲ್ತುಳಿತಕ್ಕೆ ಒಳಗಾದರು.
ಈ ಪ್ರಕರಣದ ಬಗ್ಗೆ ಮಾತನಾಡಿದ ಬಾಬಾ ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದರು ಮತ್ತು ಈ ದುರಂತದ ಹಿಂದೆ ಸಮಾಜ ವಿರೋಧಿ ಶಕ್ತಿಗಳ ಕೈವಾಡವಿದೆ ಎಂದು ಹೇಳಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ:  34 ವರ್ಷಗಳ ಬಳಿಕ ತಾಯ್ನಾಡಿಗೆ ಮರಳಿದ ಕಾಶ್ಮೀರಿ ಪಂಡಿತ; ಪಾಳುಬಿದ್ದ ಮನೆ ನೋಡಿ ಭಾವುಕ

ಈ ಘಟನೆಯ ಬಗ್ಗೆ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿ ಬಂದ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ತಕ್ಷಣ ಪರಿಹಾರ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಹಾಗೇ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಲ್ಲದೇ ಗಾಯಾಳುಗಳು ಬೇಗನೆ ಗುಣಮುಖರಾಗುವಂತೆ ಹಾರೈಸಿದ್ದಾರೆ ಎನ್ನಲಾಗಿದೆ.

Continue Reading
Advertisement
Kannada Serials TRP Gowri in trp puttakkana makkalu number 1
ಕಿರುತೆರೆ7 mins ago

Kannada Serials TRP: ಟ್ರ್ಯಾಕ್‌ಗೆ ಮರಳಿದ `ಶ್ರೀಗೌರಿ’; ಟಿಆರ್​ಪಿಯಲ್ಲಿ ‘ಪುಟ್ಟಕ್ಕನ ಮಕ್ಕಳು’ ನಂಬರ್‌ 1!

Arecanut Import
ಕೃಷಿ10 mins ago

Arecanut Import: ಅಕ್ರಮ ಅಡಿಕೆ ಆಮದು ರೋಗಕ್ಕೆ ಔಷಧವೇ ಇಲ್ಲವೇ?

Team India
ಕ್ರೀಡೆ19 mins ago

Team India: ಟೀಮ್ ಇಂಡಿಯಾದ ವಿಕ್ಟರಿ ಪೆರೇಡ್​ಗೆ ಕ್ಷಣಗಣನೆ; ಮುಂಬೈ ತಲುಪಿದ ಆಟಗಾರರು

ಪ್ರಮುಖ ಸುದ್ದಿ23 mins ago

Virat kohli: ಏಕಾಂಗಿಯಾಗಿ ಎದುರಾಳಿಯನ್ನು ಧ್ವಂಸಗೊಳಿಸುವ ವೀರ ಹೋರಾಟಗಾರ ವಿರಾಟ್​​​

Om Birla
ದೇಶ33 mins ago

Om Birla: ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸುವಾಗ ಸಂಸದರು ಘೋಷಣೆ ಕೂಗುವಂತಿಲ್ಲ; ಹೊಸ ನಿಯಮದಲ್ಲಿ ಏನಿದೆ?

Hathras Stampede
ದೇಶ34 mins ago

Hathras Stampede: ಹತ್ರಾಸ್‌ನಲ್ಲಿ ಕಾಲ್ತುಳಿತ; 6 ಜನರನ್ನು ಬಂಧಿಸಿದ ಉತ್ತರ ಪ್ರದೇಶ ಪೊಲೀಸರು

wild animal attack
ಬೆಂಗಳೂರು ಗ್ರಾಮಾಂತರ42 mins ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Agnipath Scheme
ದೇಶ42 mins ago

Agnipath Scheme: ಅಗ್ನಿವೀರರಿಗೆ ಪರಿಹಾರ ಸಿಕ್ಕಿಲ್ಲ ಎಂದ ರಾಹುಲ್‌ ಗಾಂಧಿಗೆ ಭಾರತೀಯ ಸೇನೆ ತಿರುಗೇಟು

Robbery Video
Latest44 mins ago

Robbery Video: ಬೆಂಗಳೂರಿನಲ್ಲಿ ನಡುರಸ್ತೆಯಲ್ಲೇ ಕಳ್ಳರು ಬ್ಯಾಗ್‌ ಕಸಿದು ಓಡುತ್ತಾರೆ! ಪೋಲಿಸ್ರು ಏನ್‌ ಮಾಡ್ತಿದ್ದಾರೋ!

Sumalatha Ambareesh Reaction about darshan
ಸ್ಯಾಂಡಲ್ ವುಡ್51 mins ago

Sumalatha Ambareesh: ಕೊಲೆ ಮಾಡುವ ವ್ಯಕ್ತಿತ್ವ ದರ್ಶನ್ ಅವರದ್ದಲ್ಲ ಎಂದ ಸುಮಲತಾ; ದೊಡ್ಡ ಮಗನ ಬಗ್ಗೆ ಹೇಳಿದಿಷ್ಟು!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

wild animal attack
ಬೆಂಗಳೂರು ಗ್ರಾಮಾಂತರ42 mins ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ2 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ3 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ4 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ5 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು4 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ5 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

ಟ್ರೆಂಡಿಂಗ್‌