Viral Video: ಮೆಟ್ರೊದಲ್ಲಿ ಕುಳಿತು ಜೋಡಿಯ ಖುಲ್ಲಂಖುಲ್ಲಾ ಕಿಸ್ಸಿಂಗ್‌; ಪ್ರಯಾಣಿಕರಿಗೆ ಟೆನ್ಶನ್‌! - Vistara News

Latest

Viral Video: ಮೆಟ್ರೊದಲ್ಲಿ ಕುಳಿತು ಜೋಡಿಯ ಖುಲ್ಲಂಖುಲ್ಲಾ ಕಿಸ್ಸಿಂಗ್‌; ಪ್ರಯಾಣಿಕರಿಗೆ ಟೆನ್ಶನ್‌!

ದೆಹಲಿ ಮೆಟ್ರೊ (Viral Video) ಸದಾ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿರುತ್ತದೆ. ಈ ಹಿಂದೆ ದೆಹಲಿ ಮೆಟ್ರೊ ಜಗಳ, ಡ್ಯಾನ್ಸ್, ಮೇಕಪ್ ಮಾಡಿಕೊಳ್ಳುವ ವಿಚಾರಕ್ಕೆ ಸುದ್ದಿಯಾಗಿತ್ತು. ಇದೀಗ ದೆಹಲಿ ಮೆಟ್ರೋ ಮತ್ತೆ ರೊಮ್ಯಾನ್ಸ್ ವಿಚಾರಕ್ಕೆ ಸುದ್ಧಿಯಾಗಿದೆ. ದೆಹಲಿ ಮೆಟ್ರೋದಲ್ಲಿ ಪ್ರಯಾಣಿಕರಾದ ದಂಪತಿ ಸಾರ್ವಜನಿಕರ ಮುಂದೆ ಚುಂಬಿಸುವುದು ಮತ್ತು ಮುದ್ದಾಡುತ್ತಿರುವುದು ಕಂಡುಬಂದಿದೆ. ಈ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo


ನವದೆಹಲಿ: ದೆಹಲಿ ಮೆಟ್ರೊ ಪ್ರತಿಬಾರಿ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿ ಆಗುತ್ತಿರುತ್ತದೆ. ಈ ಹಿಂದೆ ದೆಹಲಿ ಮೆಟ್ರೊ ಜಗಳ, ಡ್ಯಾನ್ಸ್, ಮೇಕಪ್ ಮಾಡಿಕೊಳ್ಳುವ ವಿಚಾರಕ್ಕೆ ಸುದ್ದಿಯಾಗಿತ್ತು. ಇದೀಗ ದೆಹಲಿ ಮೆಟ್ರೋ ಮತ್ತೆ ರೊಮ್ಯಾನ್ಸ್ ವಿಚಾರಕ್ಕೆ ಸುದ್ದಿಯಾಗಿದೆ. ದೆಹಲಿ ಮೆಟ್ರೋದಲ್ಲಿ ಪ್ರಯಾಣಿಕರಾದ ದಂಪತಿ ಸಾರ್ವಜನಿಕರ ಮುಂದೆ ಚುಂಬಿಸುವುದು ಮತ್ತು ಮುದ್ದಾಡುತ್ತಿರುವುದು ಕಂಡುಬಂದಿದೆ. ಇದನ್ನು ಕಂಡು ಅವರ ಸುತ್ತಲಿನ ಪ್ರಯಾಣಿಕರು ತಬ್ಬಿಬ್ಬಾಗುವಂತಾಯಿತು. ಅವರ ಹತ್ತಿರದಲ್ಲಿ ಕುಳಿತಿದ್ದ ಇನ್ನೊಬ್ಬ ಪ್ರಯಾಣಿಕರು ಈ ದೃಶ್ಯವನ್ನು ರೆಕಾರ್ಡ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅದು ಈಗ ವೈರಲ್ (Viral Video) ಆಗಿದೆ.

ಈ ಘಟನೆ ನಡೆದ ದಿನಾಂಕ ತಿಳಿದುಬಂದಿಲ್ಲ. ಆದರೆ ವ್ಯಕ್ತಿ ವಿಡಿಯೊ ಶೂಟ್ ಮಾಡುತ್ತಿರುವುದು ಆ ದಂಪತಿಗೆ ತಿಳಿದಿದ್ದರೂ ಕೂಡ ಅವರು ಮಾತ್ರ ರೊಮ್ಯಾನ್ಸ್ ಮಾಡುವುದನ್ನು ನಿಲ್ಲಿಸಲಿಲ್ಲ. ಇವರ ನಡವಳಿಕೆ ನೋಡಿ ಕೆಲವರು ಬೇಸರಗೊಂಡಿದ್ದರೆ ಇನ್ನೂ ಕೆಲವರು ಇವರಿಬ್ಬರನ್ನು ನೋಡಿ ಗೇಲಿ ಮಾಡಿದರು. ಈ ವಿಡಿಯೊವನ್ನು ‘ದೆಹಲಿ ಮೇರಿ ಜಾನ್’ ಎಂಬ ಹ್ಯಾಂಡಲ್ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಳ್ಳಲಾಗಿದೆ. “ಇಂತಹ ಜನರಿಗೆ ಏನು ಮಾಡಬೇಕು” ಎಂದು ಪೋಸ್ಟ್‌ಗೆ ಶೀರ್ಷಿಕೆ ನೀಡಿದ್ದಾರೆ.

ಈ ವಿಡಿಯೊವನ್ನು ಒಂದು ದಿನದ ಹಿಂದೆ ಹಂಚಿಕೊಳ್ಳಲಾಗಿದ್ದು, ಇದು ಜನರಿಂದ 12 ಸಾವಿರಕ್ಕೂ ಹೆಚ್ಚು ಲೈಕ್‍ಗಳನ್ನು ಪಡೆದಿದೆ. ಹಾಗೆಯೇ ಕಾಮೆಂಟ್ ವಿಭಾಗದಲ್ಲಿ, ಹಲವು ಜನರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಹುಡುಗ ನಿಂತಿರುವಾಗ, ಒಂದು ರೀತಿಯ ಬಟ್ಟೆಗಳು ಮತ್ತು ಚಪ್ಪಲಿಗಳನ್ನು ಧರಿಸಿದ್ದರೆ ಆತ ಕುಳಿತಾಗ, ಬೇರೆ ಬಟ್ಟೆಗಳು ಮತ್ತು ಚಪ್ಪಲಿಗಳನ್ನು ಧರಿಸಿದ್ದಾನೆ. ಆದ್ದರಿಂದ ಇದನ್ನು ರೆಕಾರ್ಡ್ ಮಾಡಲಾಗುತ್ತಿದೆ. ಮತ್ತು ಹುಡುಗನಿಗೆ ಬೇರೆ ವ್ಯಕ್ತಿ ವಿಡಿಯೊ ರೆಕಾರ್ಡ್ ಮಾಡುತ್ತಿರುವುದು ತಿಳಿದಿದ್ದರೂ ಅದಕ್ಕೆ ಏನು ಪ್ರತಿಕ್ರಿಯೆ ನೀಡಲಿಲ್ಲ. ಹಾಗೇ ಜನರು ಕೂಡ ಈ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಚಂದ್ರ ಮತ್ತು ದೆಹಲಿ; ಇವುಗಳಲ್ಲಿ ಯಾವುದು ದೂರದಲ್ಲಿದೆ? ಈ ಹುಡುಗನ ಉತ್ತರವನ್ನೊಮ್ಮೆ ಕೇಳಿ ಬಿಡಿ!

ಇಂಥ ಘಟನೆಗಳು ಎಲ್ಲಿ ನಡೆಯುತ್ತವೆ? ದೆಹಲಿಯ ಯಾವ ಪ್ರದೇಶದಲ್ಲಿ ನಡೆಯುತ್ತಿದೆ ಎಂದು ನನಗೆ ಅರ್ಥವಾಗುತ್ತಿಲ್ಲ? ಏಕೆಂದರೆ ಅಂತಹ ಯಾವುದೇ ವಿಷಯಗಳನ್ನು ನಾನು ಏಕೆ ನೋಡುವುದಿಲ್ಲ?” ಎಂದು ಬಳಕೆದಾರರೊಬ್ಬರು ಬರೆದಿದ್ದಾರೆ. ವೈರಲ್ ಆಗಲು ಇದೆನೆಲ್ಲ ಮಾಡುತ್ತಾರೆ. ಅವರು ಈಗಾಗಲೇ ಕಳೆದ ಕೆಲವು ದಿನಗಳಲ್ಲಿ ಇದನ್ನು ಮಾಡಿದ್ದಾರೆ ಮತ್ತು ಕೆಲವು ದಿನಗಳ ನಂತರ, ಅವರು ಅದನ್ನು ಮೆಟ್ರೋ ಟ್ರ್ಯಾಕ್‍ನಲ್ಲಿಯೇ ಮಾಡಲು ಶುರುಮಾಡುತ್ತಾರೆ ಎಂದು ಮತ್ತೊಬ್ಬರು ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಗ್ಯಾಜೆಟ್ಸ್

TRAI New Rules: ನಿಮಗೆ ಗೊತ್ತಿರಲಿ; ಸೆ.1ರಿಂದ ಈ ಸಿಮ್ ಕಾರ್ಡ್‌ಗಳು ಕಪ್ಪು ಪಟ್ಟಿಗೆ!

ಸೆಪ್ಟೆಂಬರ್ 1ರಿಂದ ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (TRAI New Rules) ದೇಶಾದ್ಯಂತ ನಕಲಿ ಮತ್ತು ಸ್ಕ್ಯಾಮ್ ಕರೆಗಳನ್ನು ತಡೆಯುವ ಗುರಿಯನ್ನು ಹೊಂದಿರುವ ಹೊಸ ನಿಯಮವನ್ನು ಜಾರಿಗೆ ತರಲಿದೆ. ಟೆಲಿಕಾಂ ವಲಯದಲ್ಲಿ ಮೋಸದ ಚಟುವಟಿಕೆಗಳನ್ನು ಎದುರಿಸಲು ಸರ್ಕಾರದ ನಡೆಯುತ್ತಿರುವ ಪ್ರಯತ್ನಗಳ ಭಾಗವಾಗಿ ಈ ಕ್ರಮವನ್ನು ಕೈಗೊಳ್ಳಲಾಗುತ್ತಿದೆ.

VISTARANEWS.COM


on

By

TRAI New Rules
Koo

ಭಾರತೀಯ ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (Telecom Regulatory Authority of India) ಅನಗತ್ಯ ಕರೆಗಳಿಗೆ ಬಳಸುತ್ತಿರುವ ಸಂಖ್ಯೆಗಳನ್ನು ಕಪ್ಪುಪಟ್ಟಿಗೆ ಸೇರಿಸುವ ಹೊಸ ನಿಯಮವನ್ನು (TRAI New Rules) ಜಾರಿಗೆ ತರಲು ಸಜ್ಜಾಗಿದೆ. ದೇಶಾದ್ಯಂತ ನಕಲಿ (fake call) ಮತ್ತು ಜಾಹೀರಾತು ಕರೆಗಳಿಂದ ಬಳಕೆದಾರರಿಗೆ ತೊಂದರೆಯಾಗುತ್ತಿರುವುದರಿಂದ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.

ಸೆಪ್ಟೆಂಬರ್ 1ರಿಂದ ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ ದೇಶಾದ್ಯಂತ ನಕಲಿ ಮತ್ತು ಸ್ಕ್ಯಾಮ್ ಕರೆಗಳನ್ನು ತಡೆಯುವ ಗುರಿಯನ್ನು ಹೊಂದಿರುವ ಹೊಸ ನಿಯಮವನ್ನು ಜಾರಿಗೆ ತರಲಿದೆ. ಟೆಲಿಕಾಂ ವಲಯದಲ್ಲಿ ಮೋಸದ ಚಟುವಟಿಕೆಗಳನ್ನು ಎದುರಿಸಲು ಸರ್ಕಾರದ ನಡೆಯುತ್ತಿರುವ ಪ್ರಯತ್ನಗಳ ಭಾಗವಾಗಿ ಈ ಕ್ರಮವನ್ನು ಕೈಗೊಳ್ಳಲಾಗುತ್ತಿದೆ.

ಹೊಸ ಸಿಮ್ ಕಾರ್ಡ್ ನಿಯಮಗಳು

ಹೊಸ ನಿಯಮಗಳ ಅಡಿಯಲ್ಲಿ ಟೆಲಿಕಾಂ ಕಂಪನಿಗಳು ತಮ್ಮ ನೆಟ್‌ವರ್ಕ್‌ಗಳ ಮೂಲಕ ಮಾಡುವ ನಕಲಿ ಕರೆಗಳಿಗೆ ಜವಾಬ್ದಾರರಾಗಿರುತ್ತಾರೆ.

ಗ್ರಾಹಕರು ನಕಲಿ ಕರೆಯನ್ನು ವರದಿ ಮಾಡಿದರೆ ಟೆಲಿಕಾಂ ಪೂರೈಕೆದಾರರು ಸಮಸ್ಯೆಯನ್ನು ಪರಿಹರಿಸಲು ಮತ್ತು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವ ಜವಾಬ್ದಾರಿಯನ್ನು ಹೊಂದಿರಬೇಕಾಗುತ್ತದೆ. ಈ ಬದಲಾವಣೆಯು ಬಳಕೆದಾರರನ್ನು ಕಾಡುತ್ತಿರುವ ನಕಲಿ ಕರೆಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ ಎಂದು ನಿರೀಕ್ಷಿಸಲಾಗಿದೆ.


ವಂಚನೆಯ ವಿರುದ್ಧ ಕಠಿಣ ನಿಲುವು

ಅನುಮಾನಾಸ್ಪದ ಗ್ರಾಹಕರನ್ನು ಬಳಸಿಕೊಳ್ಳಲು ವಿವಿಧ ತಂತ್ರಗಳನ್ನು ಬಳಸುತ್ತಿರುವ ವಂಚಕರಿಗೆ ಟಿಆರ್‌ಎಐ ಎಚ್ಚರಿಕೆ ನೀಡಿದೆ. ಟೆಲಿಕಾಂ ಕಂಪನಿಗಳ ಮೇಲೆ ಕಟ್ಟುನಿಟ್ಟಾದ ನಿಯಮಗಳನ್ನು ಜಾರಿಗೊಳಿಸುವ ಮೂಲಕ ಈ ದುರುದ್ದೇಶಪೂರಿತ ಚಟುವಟಿಕೆಗಳಿಂದ ಬಳಕೆದಾರರನ್ನು ರಕ್ಷಿಸಲು ಹೊಸ ನಿಯಮವನ್ನು ವಿನ್ಯಾಸಗೊಳಿಸಲಾಗಿದೆ.
ನಕಲಿ ಮತ್ತು ಪ್ರಚಾರದ ಕರೆಗಳಿಗೆ ಮೋಸಗೊಳಿಸುವ ವಿಧಾನಗಳನ್ನು ಬಳಸುವುದು ದೂರಸಂಪರ್ಕ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಮತ್ತು ಈ ಸಮಸ್ಯೆಯನ್ನು ಪರಿಹರಿಸಲು ಪ್ರಾಧಿಕಾರವು ದೃಢವಾದ ಕ್ರಿಯಾ ಯೋಜನೆಯನ್ನು ರೂಪಿಸಿದೆ ಎಂದು ಟಿಆರ್‌ಎಐ ಹೇಳಿದೆ.

ಎರಡು ವರ್ಷಗಳ ಕಾಲ ಕಪ್ಪುಪಟ್ಟಿಗೆ

ಟಿಆರ್‌ಎಐ ಪ್ರಕಾರ ಯಾವುದೇ ವ್ಯಕ್ತಿ ತಮ್ಮ ಮೊಬೈಲ್ ಸಂಖ್ಯೆಯನ್ನು ಟೆಲಿಮಾರ್ಕೆಟಿಂಗ್ ಅಥವಾ ಪ್ರಚಾರದ ಉದ್ದೇಶಗಳಿಗಾಗಿ ಬಳಸಿದರೆ ಅವರ ಸಂಖ್ಯೆಯನ್ನು ಎರಡು ವರ್ಷಗಳವರೆಗೆ ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ.

ಹಣಕಾಸಿನ ವಂಚನೆಯನ್ನು ತಡೆಯಲು ಸರ್ಕಾರವು ಈ ಹಿಂದೆ ನಿರ್ದಿಷ್ಟ ಸಂಖ್ಯೆಯ ಸರಣಿ 160 ಅನ್ನು ಪರಿಚಯಿಸಿತ್ತು. ಆದರೂ ಅನೇಕ ಬಳಕೆದಾರರಿಗೆ ಖಾಸಗಿ ಸಂಖ್ಯೆಗಳಿಂದ ಪ್ರಚಾರದ ಕರೆಗಳು ಬರುವುದು ಮುಂದುವರಿದಿದೆ. ಇದು ಹೆಚ್ಚು ಕಠಿಣ ಕ್ರಮಗಳ ಅಗತ್ಯವನ್ನು ಪ್ರೇರೇಪಿಸುತ್ತದೆ.

ನಿಯಮ ಉಲ್ಲಂಘನೆ ಪರಿಣಾಮ

ವಂಚನೆ ಅಥವಾ ಸ್ಕ್ಯಾಮ್ ಕರೆಗಳಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಟಿಆರ್‌ಎಐ ಸ್ಪಷ್ಟಪಡಿಸಿದೆ. ಹೀಗಾಗಿ ಪ್ರಚಾರದ ಕರೆಗಳಿಗಾಗಿ ತಮ್ಮ ಸಂಖ್ಯೆಗಳನ್ನು ಬಳಸುವ ವ್ಯಕ್ತಿಗಳು ಜಾಗರೂಕರಾಗಿರಬೇಕು. ಯಾಕೆಂದರೆ ಹೊಸ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಹೊಸ ನಿಯಮಾವಳಿಗಳನ್ನು ಜಾರಿಗೊಳಿಸುವ ಮೂಲಕ ಎಲ್ಲಾ ಬಳಕೆದಾರರಿಗೆ ಸುರಕ್ಷಿತ ಟೆಲಿಕಾಂ ವಾತಾವರಣವನ್ನು ಸೃಷ್ಟಿಸುವ ಗುರಿಯನ್ನು ಟಿಆರ್ ಎಐ ಹೊಂದಿದೆ.


ದೂರು ನೀಡಬಹುದು

ದೂರಸಂಪರ್ಕ ಇಲಾಖೆಯ ಮಾಹಿತಿ ಪ್ರಕಾರ ಕಳೆದ 3 ತಿಂಗಳಲ್ಲಿ 10 ಸಾವಿರಕ್ಕೂ ಹೆಚ್ಚು ವಂಚನೆಯ ಸಂದೇಶಗಳನ್ನು ಕಳುಹಿಸಲಾಗಿದೆ. ಅಂತಹ ಸಂದೇಶಗಳನ್ನು ಸ್ವೀಕರಿಸಿರುವವರು ‘ಸಂಚಾರ್ ಸಾತಿ ಪೋರ್ಟಲ್’ ನಲ್ಲಿ ದೂರು ನೀಡಬಹುದು ಅಥವಾ ಅದರ ಬಗ್ಗೆ ನೇರವಾಗಿ 1909 ಗೆ ಕರೆ ಮಾಡಿ ದೂರು ಸಲ್ಲಿಸಬಹುದು.

ಇದನ್ನೂ ಓದಿ BSNL 4G Plan: ಜಿಯೋಗೆ ಪೈಪೋಟಿ ನೀಡಲು ಸಜ್ಜಾಗಿದೆ ಬಿಎಸ್‌ಎನ್‌ಎಲ್ 4ಜಿ; ಹೊಸ ರಿಚಾರ್ಜ್ ಪ್ಲ್ಯಾನ್‌ ಪ್ರಕಟ

ದೂರು ದಾಖಲಿಸುವುದು ಹೇಗೆ?

sancharsathi.gov.in ವೆಬ್‌ಸೈಟ್‌ನಲ್ಲಿ ಸಿಟಿಜನ್ ಸೆಂಟ್ರಿಕ್ ಸೇವೆಗೆ ಸ್ಕ್ರಾಲ್ ಮಾಡಿ. ಅನಂತರ ಟ್ಯಾಬ್‌ನ ಕೆಳಗೆ ನೀಡಲಾದ ಚಕ್ಷು ಆಯ್ಕೆಯನ್ನು ಆರಿಸಿ ವರದಿ ಮಾಡುವಿಕೆ ಮೇಲೆ ಕ್ಲಿಕ್ ಮಾಡಿ. ಡ್ರಾಪ್-ಡೌನ್ ಮೆನುವಿನಿಂದ ವಂಚನೆ ವರ್ಗವನ್ನು ಆಯ್ಕೆ ಮಾಡಿ ಮತ್ತು ಅದರ ಸ್ಕ್ರೀನ್‌ಶಾಟ್ ಅನ್ನು ಲಗತ್ತಿಸಿ. ವಂಚನೆ ಕರೆ ಸಂದೇಶವನ್ನು ಸ್ವೀಕರಿಸಿದ ಮೊಬೈಲ್ ಸಂಖ್ಯೆಯನ್ನು ನಮೂದಿಸಿ. ವಂಚನೆಯ ಕರೆ ದಿನಾಂಕ ಮತ್ತು ಸಮಯವನ್ನು ನಮೂದಿಸಿ ಮತ್ತು ಅದನ್ನು ವರದಿ ಮಾಡಿ. ಅನಂತರ ನಿಮ್ಮ ವಿವರಗಳನ್ನು ನಮೂದಿಸಿ. ಒಟಿಪಿ ಹಾಕಿ ಪರಿಶೀಲಿಸಿ ಮತ್ತು ದೂರನ್ನು ಸಲ್ಲಿಸಿ.

Continue Reading

ಧಾರ್ಮಿಕ

Rayara Aradhane 2024: ನಾಳೆಯಿಂದ ರಾಘವೇಂದ್ರ ಸ್ವಾಮಿ ಆರಾಧನಾ ಮಹೋತ್ಸವ; ಗುರುಗಳ ಜೀವನ ಹೇಗಿತ್ತು, ಸಂದೇಶ ಏನಾಗಿತ್ತು?

ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿಗಳು ಬೃಂದಾವನವನ್ನು (Rayara Aradhane 2024) ಪ್ರವೇಶಿಸಿರುವ ದಿನವನ್ನು ಆರಾಧನಾ ಮಹೋತ್ಸವವಾಗಿ (Raghavendra Aradhana Mahotsava) ಆಚರಿಸಲಾಗುತ್ತದೆ. ದೇಶ ವಿದೇಶಗಳಲ್ಲಿ ಈ ಬಾರಿ ಗುರುಗಳ 353ನೇ ಆರಾಧನಾ ಮಹೋತ್ಸವವನ್ನು ಆಚರಿಸಲಾಗುತ್ತದೆ. ಗುರುಗಳ ಆರಾಧನೆಯು ಹೆಚ್ಚಿನ ಮಠಗಳು ಮತ್ತು ಸಂಸ್ಥೆಗಳಲ್ಲಿ ಪೂರ್ವಾರಾಧನೆಯಿಂದ ಪ್ರಾರಂಭವಾಗುತ್ತದೆ. ಆಗಸ್ಟ್ 20ರಂದು ಪೂರ್ವಾರಾಧನೆ, 21ರಂದು ಮಧ್ಯ ಆರಾಧನೆ ಮತ್ತು 22ರಂದು ಉತ್ತರಾರಾಧನೆ ನಡೆಯಲಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

By

Rayara Aradhane 2024
Koo

ಮಂತ್ರಾಲಯ ಗುರು (Mantralaya guru) ರಾಘವೇಂದ್ರ ಸ್ವಾಮಿಗಳ (Rayara Aradhane 2024) 353ನೇ ಆರಾಧನಾ ಮಹೋತ್ಸವ (Raghavendra Aradhana Mahotsava) ಮಂಗಳವಾರದಿಂದ ಮೂರು ದಿನಗಳ ಕಾಲ ನಡೆಯಲಿದೆ. ಗುರುಗಳು ಬೃಂದಾವನ ಪ್ರವೇಶಿಸಿದ ಈ ದಿನವನ್ನು ದೇಶ, ವಿದೇಶಗಳಲ್ಲಿ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಆಗಸ್ಟ್ 20ರಂದು ಪೂರ್ವಾರಾಧನೆ, 21ರಂದು ಮಧ್ಯ ಆರಾಧನೆ ಮತ್ತು 22ರಂದು ಉತ್ತರಾರಾಧನೆ ನಡೆಯಲಿದೆ.

16ನೇ ಶತಮಾನದ ಸಂತರು ಮತ್ತು ಗುರುಗಳಾದ ಶ್ರೀ ರಾಘವೇಂದ್ರ ಸ್ವಾಮಿಗಳು ವೈಷ್ಣವ ಧರ್ಮವನ್ನು ಪ್ರತಿಪಾದಿಸಿದ್ದು, ಮಧ್ವಾಚಾರ್ಯರ ದ್ವೈತ ತತ್ತ್ವವನ್ನು ಜನಪ್ರಿಯಗೊಳಿಸಿದರು. ಗುರುಗಳು ಬೃಂದಾವನ ಪ್ರವೇಶಿಸಿರುವ ಕ್ಷೇತ್ರವಾಗಿರುವ ಮಂತ್ರಾಲಯದಲ್ಲಿ ಗುರುಗಳ ಆರಾಧನೆ ಆಗಸ್ಟ್ 21ರಂದು ನಡೆಯಲಿದೆ.


ಗುರುಗಳ ಆರಾಧನೆ ಎಂದರೇನು?

ರಾಘವೇಂದ್ರ ಸ್ವಾಮಿ ಆರಾಧನೆ ಎಂದರೆ ರಾಯರು ಜೀವಂತವಾಗಿ ಬೃಂದಾವನವನ್ನು ಪ್ರವೇಶಿಸಿರುವ ದಿನ. ದೇಶ ವಿದೇಶಗಳಲ್ಲಿ ಆಚರಿಸಲ್ಪಡುವ ಗುರುಗಳ ಆರಾಧನೆಯು ಹೆಚ್ಚಿನ ಮಠಗಳು ಮತ್ತು ಸಂಸ್ಥೆಗಳಲ್ಲಿ ಪೂರ್ವಾರಾಧನೆಯಿಂದ ಪ್ರಾರಂಭವಾಗುತ್ತದೆ. ಇದನ್ನು ವಾರ್ಷಿಕವಾಗಿ ಶ್ರಾವಣ ಕೃಷ್ಣ ಪಕ್ಷ ದ್ವಿತೀಯ ಅಥವಾ ಕರ್ನಾಟಕದಲ್ಲಿ ಅನುಸರಿಸುವ ಸಾಂಪ್ರದಾಯಿಕ ಹಿಂದೂ ಚಂದ್ರನ ಕ್ಯಾಲೆಂಡರ್ ಪ್ರಕಾರ ಶ್ರಾವಣ ಮಾಸದಲ್ಲಿ ಚಂದ್ರನ ಕ್ಷೀಣಿಸುತ್ತಿರುವ ಎರಡನೇ ದಿನದಂದು ಆಚರಿಸಲಾಗುತ್ತದೆ.

ರಾಘವೇಂದ್ರ ಸ್ವಾಮಿಯು ವಿಷ್ಣುವಿನ ಶ್ರೇಷ್ಠ ಭಕ್ತರಾಗಿದ್ದರು. 1621 ರಿಂದ 1671ರವರೆಗೆ ಅವರು ಶ್ರೀ ಮಧ್ವಾಚಾರ್ಯರು ಸ್ಥಾಪಿಸಿದ ಶ್ರೀ ಮಠದ ಮುಖ್ಯಸ್ಥರಾಗಿದ್ದರು. ತಮ್ಮ ಜೀವನದಲ್ಲಿ ಹಲವಾರು ಪವಾಡಗಳನ್ನು ನಡೆಸಿರುವ ಅವರು ಮಧ್ವಾಚಾರ್ಯರ ಬೋಧನೆಗಳ ಮೇಲೆ ಹಲವಾರು ಭಜನೆ ಮತ್ತು ವ್ಯಾಖ್ಯಾನಗಳನ್ನು ರಚಿಸಿದ್ದಾರೆ. ಗುರು ಶ್ರೀ ರಾಘವೇಂದ್ರ ಸ್ವಾಮಿಗಳು 1671 ರಲ್ಲಿ ಸಮಾಧಿಯನ್ನು ಪ್ರವೇಶಿಸದರು. ಆವರ ಸಮಾಧಿ ಸ್ಥಳವನ್ನು ಬೃಂದಾವನ ಎಂದು ಕರೆಯಲಾಗುತ್ತದೆ. ಇದು ಮಂತ್ರಾಲಯದಲ್ಲಿದೆ.


ಗುರುಗಳ ಜನನ ಕಥೆ

ಗುರು ರಾಘವೇಂದ್ರ ಸ್ವಾಮಿಗಳು 1595ರಲ್ಲಿ ತಮಿಳುನಾಡಿನ ಭುವನಗಿರಿಯಲ್ಲಿ ತಿಮ್ಮಣ್ಣ ಭಟ್ಟ ಹಾಗೂ ಗೋಪಿಕಾಂಬೆ ಅವರ ಎರಡನೇ ಮಗನಾಗಿ ಜನಿಸಿದರು. ಇವರ ಮೊದಲ ಹೆಸರು ವೆಂಕಣ್ಣ ಭಟ್ಟ. ಇವರನ್ನು ವೆಂಕಟನಾಥ, ವೆಂಕಟಾಚಾರ್ಯ ಎಂದೂ ಕರೆಯುತ್ತಾರೆ. ಇವರಿಗೆ ಗುರುರಾಜ ಎಂಬ ಹೆಸರಿನ ಸಹೋದರ ಹಾಗೂ ವೆಂಕಟಾಂಬೆ ಎಂಬ ಸಹೋದರಿಯೂ ಇದ್ದರು. ರಾಯರ ತಂದೆ, ತಾಯಿಗೆ ಮಕ್ಕಳಾಗದೇ ಆಗದೇ ಇದ್ದಾಗ ಅವರು ತಿರುಪತಿಗೆ ಹೋಗಿ ದೇವರನ್ನು ಬೇಡಿಕೊಂಡ ಮೇಲೆ ಮಕ್ಕಳು ಜನಿಸಿದರು.

ರಾಘವೇಂದ್ರ ಅವರ ಹುಟ್ಟಿಗೂ ಮೊದಲು ತಿಮ್ಮಣ್ಣ ಭಟ್ಟ ದಂಪತಿ ತಿರುಪತಿಗೆ ತೆರಳಿ ಭಗವಂತನ ಸೇವೆ ಮಾಡುತ್ತಾರೆ. ಆಗ ಅವರ ಕನಸಿನಲ್ಲಿ ಬಂದು ವೆಂಕಟೇಶ, ಒಂದು ಮಹಾನ್ ಆತ್ಮ ಹಾಗೂ ಖ್ಯಾತಿ ಶಿಖರವನ್ನೇರುವ ಮಗನನ್ನು ನೀಡುವುದಾಗಿ ಆಶೀರ್ವದಿಸುತ್ತಾನೆ. ತಿರುಪತಿ ದೇವರ ಅನುಗ್ರಹದಿಂದ ರಾಯರು ಜನಿಸಿದರು ಎನ್ನಲಾಗುತ್ತದೆ.

Raghavendra Aradhana Mahotsava
Raghavendra Aradhana Mahotsava


ಕಡು ಬಡತನದಲ್ಲೇ ಜೀವನ

ವೆಂಕಟನಾಥ (ರಾಘವೇಂದ್ರ) ಅವರಿಗೆ ಸರಸ್ವತಿ ಎಂಬಾಕೆಯೊಂದಿಗೆ ವಿವಾಹವಾಗುತ್ತದೆ. ಇವರಿಗೆ ಒಬ್ಬ ಮಗ ಜನಿಸುತ್ತಾನೆ. ಅವನಿಗೆ ಲಕ್ಷಣರಾಯ ಎಂದು ಹೆಸರಿಡಲಾಗುತ್ತದೆ. ನುರಿತ ಸಂಗೀತಗಾರ ಮತ್ತು ಶ್ರೇಷ್ಠ ವಿದ್ವಾಂಸರೂ ಆಗಿದ್ದ ವೆಂಕಟನಾಥ ಅವರು ತಮ್ಮ ಸೇವೆಗಳಿಗೆ ಎಂದಿಗೂ ಹಣ ಕೇಳುತ್ತಿರಲಿಲ್ಲ. ಇದರಿಂದ ಅವರು ಕಡು ಬಡತನದಲ್ಲೇ ಜೀವನ ಸಾಗಿಸಬೇಕಾಯಿತು. ಆದರೂ ಭಗವಂತನ ಮೇಲೆ ಅಚಲವಾದ ನಂಬಿಕೆ ಇಟ್ಟಿದ್ದರು.

ಬಳಿಕ ಅವರು ಶ್ರೀ ಸುಧೀಂದ್ರ ತೀರ್ಥರ ಆಶ್ರಯ ಪಡೆದರು. ಅವರ ಬಳಿ ತಮ್ಮ ಶಿಕ್ಷಣವನ್ನು ಮುಂದುವರಿಸಿದರು.
ಅವರ ಜ್ಞಾನ ಮತ್ತು ವ್ಯಾಕರಣದ ಮೇಲಿನ ಪಾಂಡಿತ್ಯವನ್ನು ನೋಡಿ ಸಂತೋಷಗೊಂಡ ಸುಧೀಂದ್ರ ತೀರ್ಥರು ಅವರಿಗೆ “ಮಹಾಭಾಷ್ಯಾಚಾರ್ಯ” ಎಂಬ ಬಿರುದನ್ನು ನೀಡಿದರು.


ರಾಘವೇಂದ್ರ ಹೆಸರಿನ ವಿಶೇಷ

ಸುಧೀಂದ್ರ ತೀರ್ಥರು ಬೃಂದಾವನ ಪ್ರವೇಶಿಸಿದ ಮೇಲೆ ರಾಯರು ಮಠದ ಮುಖ್ಯಸ್ಥರಾದರು. ಇದಕ್ಕೂ ಮೊದಲು ಸನ್ಯಾಸ ದೀಕ್ಷೆ ಸ್ವೀಕರಿಸಿದ್ದ ವೆಂಕಟನಾಥನ ಹೆಸರನ್ನು ರಾಘವೇಂದ್ರ ಎಂದು ಬದಲಾಯಿಸಲಾಗಿತ್ತು.
ರಾಘವೇಂದ್ರ ಎನ್ನುವುದು ಭಗವಾನ್ ರಾಮನ ಹೆಸರು. ಇದರ ಅರ್ಥ ‘ಪಾಪಗಳನ್ನು ನಾಶಪಡಿಸುವ ಮತ್ತು ಬಯಸಿದ ವಸ್ತುಗಳನ್ನು ಕೊಡುವವನು’ ಎಂಬುದಾಗಿದೆ.

ಬೃಂದಾವನ ಪ್ರವೇಶ

ರಾಘವೇಂದ್ರ ಸ್ವಾಮಿಗಳು 1671ರ ಶ್ರಾವಣ ಕೃಷ್ಣ ಪಕ್ಷದ ದ್ವಿತೀಯ ದಿನದಂದು ಜೀವಂತ ಸಮಾಧಿ ಸೇರುತ್ತಾರೆ. ಆ ಕಾರಣದಿಂದ ಪ್ರತಿ ವರ್ಷ ಈ ದಿನದಂದು ರಾಯರ ಆರಾಧನಾ ಮಹೋತ್ಸವವನ್ನು ಆಚರಿಸಲಾಗುತ್ತದೆ.

ಅಂತಿಮ ಸಂದೇಶ

ಸಮಾಧಿ ಪಡೆಯುವ ಮುನ್ನ ಗುರುಗಳು ತಮ್ಮ ನಿತ್ಯದ ವಿಧಿವಿಧಾನಗಳನ್ನು ಅನುಸರಿಸಿ ಭಕ್ತರಿಗೆ ತಮ್ಮ ಕೊನೆಯ ಪ್ರವಚನವನ್ನು ನೀಡಿದರು. ಈ ವೇಳೆ ಅವರು, ನಾನು ನನ್ನ ದೇಹವನ್ನು ಮಾತ್ರ ತ್ಯಜಿಸುತ್ತೇನೆ. ಎಲ್ಲರ ಯೋಗಕ್ಷೇಮವನ್ನು ಕಾಪಾಡಲು ಭೌತಿಕವಾಗಿ ಇರುತ್ತೇನೆ ಎಂದು ಹೇಳಿದ್ದರು.

ಮಂತ್ರಾಲಯದಲ್ಲಿ ಅದ್ಧೂರಿ ಆಚರಣೆ

ಗುರುಗಳ ಆರಾಧನೆಯನ್ನು ಮಂತ್ರಾಲಯದಲ್ಲಿ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಈ ಹಬ್ಬವನ್ನು ಮಹಾ ಆರಾಧನೆ ಎಂದೂ ಕರೆಯಲಾಗುತ್ತದೆ. ಈ ಸಂದರ್ಭದಲ್ಲಿ, ಮಠದ ಸಂಕೀರ್ಣವನ್ನು ಹಾಗೂ ಮಂತ್ರಾಲಯ ಪಟ್ಟಣವನ್ನು ಸುಂದರವಾಗಿ ಅಲಂಕರಿಸಲಾಗುತ್ತದೆ. ಗುರುಗಳ ಮಹಾ ಆರಾಧನೆಯ ಅಂಗವಾಗಿ ನಡೆಯುವ ಮಹಾರಥೋತ್ಸವದಲ್ಲಿ ದೇಶ ವಿದೇಶಗಳಿಂದ ಸಾವಿರಾರು ಭಕ್ತರು ಪಾಲ್ಗೊಳ್ಳುತ್ತಾರೆ.


ವಿವಿಧ ಆಚರಣೆಗಳು

ಕಲಿಯುಗದ ಕಾಮಧೇನು ಎಂದೇ ಜಗತ್ಪ್ರಸಿದ್ಧಿ ಪಡೆದ ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ಮಂತ್ರಾಲಯದಲ್ಲಿ ಭಾನುವಾರವೇ ಆರಂಭಗೊಂಡಿದ್ದು, ಆಗಸ್ಟ್ 24ರವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ರಾಯರ ಉತ್ಸವ ಮೂರ್ತಿಯ ಬಲಿ, ರಥೋತ್ಸವ, ಗೋ ಪೂಜೆ, ಗಜಪೂಜೆ ಮತ್ತಿತರ ಪೂಜೆಗಳು ನಡೆಯುತ್ತವೆ. ಇದಕ್ಕೂ ಮೊದಲು ಧ್ವಜಾರೋಹಣ ನಡೆಸಿ ಮಹಾರಥೋತ್ಸವಕ್ಕೆ ಚಾಲನೆ ನೀಡಲಾಗುತ್ತದೆ.

ಪೂರ್ವ ಆರಾಧನಾ ದಿನದಂದು ಸಿಂಹ ವಾಹನ ಸವಾರಿ, ಮಧ್ಯ ಆರಾಧನಾ ದಿನದಂದು ಮಹಾ ಪಂಚಾಮೃತ ಅಭಿಷೇಕ, ಉತ್ತರ ಆರಾಧನಾ ದಿನದಂದು ಸ್ವರ್ಣ ರಥೋತ್ಸವವನ್ನು ನಡೆಸಲಾಗುತ್ತದೆ. ಮಠವು ಪ್ರತಿ ವರ್ಷ ಸಮಾಜ ಸೇವೆ ಮಾಡಿದ ಗಣ್ಯರಿಗೆ ಶ್ರೀ ರಾಘವೇಂದ್ರ ಅನುಗ್ರಹ ಪ್ರಶಸ್ತಿಗಳನ್ನು ನೀಡಿ ಗೌರವಿಸುತ್ತದೆ. ಈ ಸಂದರ್ಭದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿವಿಧ ಸಾಂಸ್ಕೃತಿಕ ಪ್ರದರ್ಶನಗಳನ್ನೂ ನಡೆಸಲಾಗುತ್ತದೆ.

ಇದನ್ನೂ ಓದಿ: Shravan 2024: ಶ್ರಾವಣ ಸೋಮವಾರದ ವಿಶೇಷತೆಗಳೇನು? ಶಿವನಿಗೆ ಏನು ಅರ್ಪಿಸಬೇಕು? ಏನನ್ನು ಅರ್ಪಿಸಬಾರದು?

ವಿಶೇಷತೆ

ರಾಘವೇಂದ್ರ ಸ್ವಾಮಿಯ ಬೃಂದಾವನಕ್ಕೆ ಪ್ರತಿ ವರ್ಷ ತಿರುಮಲ ತಿರುಪತಿ ದೇವಸ್ಥಾನಮ್ಸ್ (ಟಿಟಿಡಿ) ಅಧಿಕಾರಿಗಳು ಅರ್ಪಿಸುವ ಭಗವಾನ್ ವೆಂಕಟೇಶ್ವರ ಸ್ವಾಮಿಯ ಶೇಷವಸ್ತ್ರವನ್ನು ಅರ್ಪಿಸುವುದು ವಾಡಿಕೆಯಾಗಿದೆ. ತಿರುಪತಿ ಬಾಲಾಜಿ ದೇವಸ್ಥಾನದಿಂದ ಅಧಿಕಾರಿಗಳು ಮತ್ತು ಅರ್ಚಕರ ತಂಡ ತಂದ ಶೇಷವಸ್ತ್ರವನ್ನು ಮಠದ ಮುಖ್ಯಸ್ಥರು ಬೃಂದಾವನಕ್ಕೆ ಸ್ವೀಕರಿಸಿ ವಿಶೇಷ ಪಂಚಾಮೃತ ಅಭಿಷೇಕವನ್ನು ಮಾಡುತ್ತಾರೆ.

Continue Reading

ಕರ್ನಾಟಕ

Uttara Kannada News: ಪಿಎಂ ಸ್ವ-ನಿಧಿ ಯೋಜನೆ; ಕಾರವಾರ ನಗರಸಭೆಗೆ ರಾಜ್ಯ ಮಟ್ಟದ ಪ್ರಶಸ್ತಿಯ ಗರಿ

ಪಿಎಂ ಸ್ವ-ನಿಧಿ ಯೋಜನೆಯಡಿ (Uttara Kannada News) ಉತ್ತಮ ಪ್ರಗತಿ ಸಾಧಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರಸಭೆಯನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ. ಕಾರವಾರ ನಗರಸಭೆಯು “Best Performing ULB-in Loan performance at State Level” ಪ್ರಶಸ್ತಿಗೆ ಆಯ್ಕೆಯಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Uttara Kannada News
Koo

ಕಾರವಾರ: ಪಿಎಂ ಸ್ವ-ನಿಧಿ ಯೋಜನೆಯಡಿ ಉತ್ತಮ ಪ್ರಗತಿ ಸಾಧಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಉತ್ತರ ಕನ್ನಡ ಜಿಲ್ಲೆಯ (Uttara Kannada News) ಕಾರವಾರ ನಗರಸಭೆಯನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ. ಕಾರವಾರ ನಗರಸಭೆಯು “Best Performing ULB-in Loan performance at State Level” ಪ್ರಶಸ್ತಿಗೆ ಆಯ್ಕೆಯಾಗಿದೆ.

ಕೇಂದ್ರ ಸರ್ಕಾರದ ವತಿಯಿಂದ ಪಿಎಂ ಸ್ವ-ನಿಧಿ ಯೋಜನೆಯಡಿ ಉತ್ತಮ ಪ್ರಗತಿ ಸಾಧಿಸಿದ ರಾಜ್ಯಗಳಿಗೆ ನವದೆಹಲಿಯಲ್ಲಿ ಸಮಾರಂಭ ಆಯೋಜಿಸಿ ರಾಷ್ಟ್ರಮಟ್ಟದ Utkrishtata Ki ore Badhte Kadam & Celebreating Achivements, Inspiring Excellence ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಇದನ್ನೂ ಓದಿ: PM Narendra Modi : ಆಗಸ್ಟ್​ 23ರಂದು ಉಕ್ರೇನ್​ ಪ್ರವಾಸಕ್ಕೆ ತೆರಳಲಿದ್ದಾರೆ ಪ್ರಧಾನಿ ಮೋದಿ

ಕರ್ನಾಟಕ ರಾಜ್ಯದಲ್ಲಿ ಪಿಎಂ ಸ್ವ-ನಿಧಿ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು, ಇದೇ ಆಗಸ್ಟ್ 22 ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಇದನ್ನೂ ಓದಿ: Kannada New Movie: ಅಡ್ವೆಂಚರಸ್ ಕಾಮಿಡಿ ಕಾನ್ಸೆಪ್ಟ್‌ನ ʼಫಾರೆಸ್ಟ್ʼ ಚಿತ್ರದ ಟ್ರೈಲರ್ ಸದ್ಯದಲ್ಲೇ ರಿಲೀಸ್‌

ಕಾರವಾರ ನಗರಸಭೆಯಲ್ಲಿ ಈ ಯೋಜನೆಯನ್ನು ಯಶಸ್ವಿಗೊಳಿಸಲು ನಗರಸಭೆಯ ಪೌರಾಯುಕ್ತ ಜಗದೀಶ, ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕ ರಜತ್ ಕುಮಾರ ಹಬ್ಬು, ಕೌಶಲ್ಯಾಭಿವೃದ್ಧಿ ಇಲಾಖೆಯ ಮಲ್ಟಿಟಾಸ್ಕಿಂಗ್ ಆಫೀಸರ್ ಸುನೀಲ ವಸಂತ ನಾಯ್ಕ, ಸಮುದಾಯ ಸಂಘಟಕರಾದ ಪ್ರಭಾಕರ ನಾಯ್ಕ ಮತ್ತು ಮೇರಿ ಡಿಸೋಜಾ , ಸಿಆರ್‌ಪಿಗಳಾದ ಗೀತಾ, ನಂದಿನಿ ಶ್ರಮಿಸಿದ್ದರು.

Continue Reading

ಬೆಂಗಳೂರು

Pralhad Joshi: ಕಾಂಗ್ರೆಸ್‌ನಿಂದ ದೇಶದಲ್ಲಿ ಬಾಂಗ್ಲಾದಂತೆ ಅರಾಜಕತೆ ಸೃಷ್ಟಿಸುವ ಹುನ್ನಾರ; ಪ್ರಲ್ಹಾದ್‌ ಜೋಶಿ ಆರೋಪ

ಕಾಂಗ್ರೆಸ್ ಪಕ್ಷಕ್ಕೆ (Pralhad Joshi) ರಾಜ್ಯಪಾಲರ ಹುದ್ದೆ ಘನತೆಯ ಅರಿವೆ ಇಲ್ಲ. ಸಂವಿಧಾನದ ಹತ್ಯೆ ಮಾಡಿ, ದೇಶದಲ್ಲಿ ಎಮರ್ಜೆನ್ಸಿ ಹೇರಿ ಜನಜೀವನ ಅಸ್ತವ್ಯಸ್ಥಗೊಳಿಸಿದ್ದ ಕಾಂಗ್ರೆಸ್ ಪಕ್ಷ ಇನ್ನೂ ಅದೇ ವರ್ತನೆ, ಮನಸ್ಥಿತಿಯಲ್ಲಿದೆ. ಅದನ್ನಿನ್ನೂ ತಿದ್ದಿಕೊಂಡಿಲ್ಲ ಎಂದು ಆರೋಪಿಸಿರುವ ಸಚಿವ ಪ್ರಲ್ಹಾದ್‌ ಜೋಶಿ, ಇದಕ್ಕೆ ಜನರೇ ತಕ್ಕ ಪಾಠವ ಕಲಿಸುತ್ತಾರೆ ಎಂದು ಎಚ್ಚರಿಸಿದ್ದಾರೆ.

VISTARANEWS.COM


on

Pralhad Joshi
Koo

ನವದೆಹಲಿ: ಭಾರತದಲ್ಲೂ ಬಾಂಗ್ಲಾದಂತೆ ಅರಾಜಕತೆ ಸೃಷ್ಟಿಸುವ ಮನಸ್ಥಿತಿ, ದುಷ್ಟ ಉದ್ದೇಶ ಕಾಂಗ್ರೆಸ್ ಪಕ್ಷದ್ದಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ವೇಳೆ ಮುಖಂಡ ಐವಾನ್ ಡಿಸೋಜ ಅವರ ಹೇಳಿಕೆ ಅರಾಜಕತೆ ಸೃಷ್ಟಿಯನ್ನು ಪುಷ್ಟೀಕರಿಸುತ್ತಿದೆ ಎಂದು ವ್ಯಾಖ್ಯಾನಿಸಿ ಸಚಿವ ಜೋಶಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: PM Narendra Modi : ಆಗಸ್ಟ್​ 23ರಂದು ಉಕ್ರೇನ್​ ಪ್ರವಾಸಕ್ಕೆ ತೆರಳಲಿದ್ದಾರೆ ಪ್ರಧಾನಿ ಮೋದಿ

ಭ್ರಷ್ಟಾಚಾರದ ಜನಕ ಕಾಂಗ್ರೆಸ್ ಪಕ್ಷ ಈ ರೀತಿ ಅರಾಜಕತೆಯ ಮಾತುಗಳನ್ನಾಡುವುದು ಅಕ್ಷಮ್ಯ ಮತ್ತು ಅತ್ಯಂತ ಖಂಡನೀಯ ಎಂದು ತಿಳಿಸಿರುವ ಸಚಿವರು, ಕಾಂಗ್ರೆಸ್‌ನ ನಡೆ ನೋಡಿದರೆ ಬಾಂಗ್ಲಾ ದೇಶದಂತಹ ಅರಾಜಕತೆ ಸೃಷ್ಟಿಸುವ ರೀತಿ ವರ್ತಿಸುತ್ತಿರುವಂತಿದೆ ಎಂದು ಆರೋಪಿಸಿದ್ದಾರೆ.

ಸಂವಿಧಾನ ದತ್ತವಾಗಿರುವ ರಾಜ್ಯಪಾಲರ ಸ್ಥಾನಕ್ಕೆ ಘನತೆ-ಗೌರವ ತೋರುವ ಬದಲು ಅದಕ್ಕೆ ಧಕ್ಕೆ ತರುವ ರೀತಿ ಕಾಂಗ್ರೆಸ್ ವರ್ತಿಸುತ್ತಿದೆ. ರಾಜಭವನ ಮತ್ತು ರಾಜ್ಯಪಾಲರ ಗೃಹಕ್ಕೆ ಮುತ್ತಿಗೆ ಹಾಕುವುದಾಗಿ ಬೆದರಿಕೆ ಹಾಕುತ್ತಿರುವುದು ನಿಜಕ್ಕೂ ಆಡಳಿತಾರೂಢ ಸರ್ಕಾರದ ಸರ್ವಾಧಿಕಾರಿ ಧೋರಣೆ ಎನ್ನುವಂತಿದೆ ಎಂದು ಜೋಶಿ ಹರಿಹಾಯ್ದಿದ್ದಾರೆ.

ಇದನ್ನೂ ಓದಿ: Kannada New Movie: ಅಡ್ವೆಂಚರಸ್ ಕಾಮಿಡಿ ಕಾನ್ಸೆಪ್ಟ್‌ನ ʼಫಾರೆಸ್ಟ್ʼ ಚಿತ್ರದ ಟ್ರೈಲರ್ ಸದ್ಯದಲ್ಲೇ ರಿಲೀಸ್‌

ಕಾಂಗ್ರೆಸ್ ಪಕ್ಷಕ್ಕೆ ರಾಜ್ಯಪಾಲರ ಹುದ್ದೆ ಘನತೆಯ ಅರಿವೆ ಇಲ್ಲ. ಸಂವಿಧಾನದ ಹತ್ಯೆ ಮಾಡಿ ದೇಶದಲ್ಲಿ ಎಮರ್ಜೆನ್ಸಿ ಹೇರಿ ಜನಜೀವನ ಅಸ್ತವ್ಯಸ್ಥಗೊಳಿಸಿದ್ದ ಕಾಂಗ್ರೆಸ್ ಪಕ್ಷ ಇನ್ನೂ ಅದೇ ವರ್ತನೆ, ಮನಸ್ಥಿತಿಯಲ್ಲಿದೆ. ಅದನ್ನಿನ್ನೂ ತಿದ್ದಿಕೊಂಡಿಲ್ಲ ಎಂದು ಆರೋಪಿಸಿರುವ ಸಚಿವ ಪ್ರಲ್ಹಾದ್‌ ಜೋಶಿ, ಇದಕ್ಕೆ ಜನರೇ ತಕ್ಕ ಪಾಠವ ಕಲಿಸುತ್ತಾರೆ ಎಂದು ಎಚ್ಚರಿಸಿದ್ದಾರೆ.

Continue Reading
Advertisement
TRAI New Rules
ಗ್ಯಾಜೆಟ್ಸ್21 seconds ago

TRAI New Rules: ನಿಮಗೆ ಗೊತ್ತಿರಲಿ; ಸೆ.1ರಿಂದ ಈ ಸಿಮ್ ಕಾರ್ಡ್‌ಗಳು ಕಪ್ಪು ಪಟ್ಟಿಗೆ!

Raksha Bandhan
ಪ್ರಮುಖ ಸುದ್ದಿ12 mins ago

Raksha Bandhan : ಪುಟಾಣಿ ಗೆಳೆಯರೊಂದಿಗೆ ರಕ್ಷಾ ಬಂಧನ ಆಚರಿಸಿಕೊಂಡ ನರೇಂದ್ರ ಮೋದಿ; ಇಲ್ಲಿವೆ ಚಿತ್ರಗಳು

Rayara Aradhane 2024
ಧಾರ್ಮಿಕ17 mins ago

Rayara Aradhane 2024: ನಾಳೆಯಿಂದ ರಾಘವೇಂದ್ರ ಸ್ವಾಮಿ ಆರಾಧನಾ ಮಹೋತ್ಸವ; ಗುರುಗಳ ಜೀವನ ಹೇಗಿತ್ತು, ಸಂದೇಶ ಏನಾಗಿತ್ತು?

Actor Chetan Ahimsa
ಕರ್ನಾಟಕ26 mins ago

Chetan Ahimsa: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಟ ಚೇತನ್ ಆಗ್ರಹ; ಆ.28ಕ್ಕೆ ಕಾಂಗ್ರೆಸ್ ಹಠಾವೋ, ದಲಿತ ಬಚಾವೋ ಹೋರಾಟ

Uttara Kannada News
ಕರ್ನಾಟಕ36 mins ago

Uttara Kannada News: ಪಿಎಂ ಸ್ವ-ನಿಧಿ ಯೋಜನೆ; ಕಾರವಾರ ನಗರಸಭೆಗೆ ರಾಜ್ಯ ಮಟ್ಟದ ಪ್ರಶಸ್ತಿಯ ಗರಿ

ಆರೋಗ್ಯ37 mins ago

Sodium reduction: ಉಪ್ಪು ಸೇವನೆ ಕಡಿಮೆಯಾದರೆ ಈ ಎಲ್ಲ ಸಮಸ್ಯೆಗಳು ಕಾಡುತ್ತವೆ

Pralhad Joshi
ಬೆಂಗಳೂರು39 mins ago

Pralhad Joshi: ಕಾಂಗ್ರೆಸ್‌ನಿಂದ ದೇಶದಲ್ಲಿ ಬಾಂಗ್ಲಾದಂತೆ ಅರಾಜಕತೆ ಸೃಷ್ಟಿಸುವ ಹುನ್ನಾರ; ಪ್ರಲ್ಹಾದ್‌ ಜೋಶಿ ಆರೋಪ

Virat kohli
ಕ್ರೀಡೆ43 mins ago

Virat Kohli : ಕೊಹ್ಲಿ ಕಿಂಗ್ ಅಲ್ಲ; ಭಾರತದ ಸೂಪರ್​​ ಸ್ಟಾರ್​ ಬ್ಯಾಟರ್​​ ಬಗ್ಗೆ ಕಳಪೆ ಕಾಮೆಂಟ್ ಮಾಡಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ

Contrast dupatta fashion
ಫ್ಯಾಷನ್52 mins ago

Contrast Dupatta Fashion: ಶ್ರಾವಣ ಮಾಸದಲ್ಲಿ ಟ್ರೆಂಡಿಯಾದ ಕಾಂಟ್ರಾಸ್ಟ್ ದುಪಟ್ಟಾ ಫ್ಯಾಷನ್‌

Actor Darshan
ಕರ್ನಾಟಕ1 hour ago

Pavithra gowda: ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಪವಿತ್ರಾ ಗೌಡ; ಆ.22ಕ್ಕೆ ವಿಚಾರಣೆ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌