Viral Video: ಗಡ್ಡ, ಮೀಸೆ ಬೋಳಿಸಿ ಶಿಸ್ತಾಗಿ ಬಂದ ಮಗನಿಗೆ ಅಪ್ಪನ ಕಪಾಳಮೋಕ್ಷ! ನೆಟ್ಟಿಗರ ಆಕ್ರೋಶ - Vistara News

Latest

Viral Video: ಗಡ್ಡ, ಮೀಸೆ ಬೋಳಿಸಿ ಶಿಸ್ತಾಗಿ ಬಂದ ಮಗನಿಗೆ ಅಪ್ಪನ ಕಪಾಳಮೋಕ್ಷ! ನೆಟ್ಟಿಗರ ಆಕ್ರೋಶ

Viral Video: ಮಗನೊಬ್ಬ ತಂದೆಯನ್ನು ಅಚ್ಚರಿಗೊಳಿಸಬೇಕು ಎಂದು ಹೋಗಿ ಕಪಾಳಮೋಕ್ಷ ಮಾಡಿಸಿಕೊಂಡ ಘಟನೆ ನಡೆದಿದೆ. ಕ್ಲೀನ್ ಶೇವ್ ಮಾಡಿಕೊಂಡು ಮಗ ತನ್ನ ಹೊಸ ಲುಕ್ ಅನ್ನು ತಂದೆಗೆ ತೋರಿಸಿ ಅವರಿಗೆ ಆಶ್ವರ್ಯವನ್ನುಂಟುಮಾಡಬೇಕು ಎಂಬ ಉತ್ಸಾಹದಿಂದ ತಂದೆಯ ಮುಖ ನೋಡಿದ್ದಾನೆ. ಆದರೆ ಮಗ ಕ್ಲೀವ್ ಶೇವ್ ಮಾಡಿದ್ದಕ್ಕೆ ಕೋಪಗೊಂಡ ತಂದೆ ಆತನ ಕೆನ್ನೆಗೆ ಬಾರಿಸಿದ್ದಾರೆ. ನಂತರ ಒಂದು ಸೆಕೆಂಡುಗಳ ಕಾಲ ಅವನನ್ನು ದಿಟ್ಟಿಸಿ ನೋಡುತ್ತಾ ಅವನ ಕುತ್ತಿಗೆ ಹಿಡಿದು ‘’ನಾನು ಹೇಳುವುದನ್ನು ನೀನು ಎಂದಿಗೂ ಕೇಳುವುದಿಲ್ಲ” ಎಂದು ಬೈಯುತ್ತಾ ಮತ್ತೊಮ್ಮೆ ಕೆನ್ನೆಗೆ ಬಾರಿಸಿದ್ದಾರೆ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಕ್ಕಳ ಭವಿಷ್ಯದ ಬಗೆಗಿನ ಕಾಳಜಿ ಪೋಷಕರಿಗೆ ಇರುತ್ತದೆ. ಹಾಗಾಗಿ ಪೋಷಕರಿಗೆ ತಮ್ಮ ಮಕ್ಕಳನ್ನು ದಂಡಿಸುವ , ಶಿಕ್ಷಿಸುವ ಹಕ್ಕು ಇರುತ್ತದೆ. ಅಂದಮಾತ್ರಕ್ಕೆ ಪೋಷಕರು ಮಕ್ಕಳನ್ನು ತಮಗೆ ಮನಬಂದಂತೆ ಶಿಕ್ಷಿಸುವ ಹಾಗೇ ಇಲ್ಲ. ಅವರು ಮಕ್ಕಳನ್ನು ದಂಡಿಸುವ ರೀತಿ ಎಲ್ಲೆ ಮೀರಬಾರದು. ಇಲ್ಲವಾದರೆ ಇದರಿಂದ ಮುಂದೆ ದೊಡ್ಡ ಸಮಸ್ಯೆ ಉದ್ಭವಿಸಬಹುದು. ಇದಕ್ಕೆ ಉದಾಹರಣೆ ಎಂಬಂತೆ ಇದೀಗ ತಂದೆ- ಮಗನಿಗೆ ಸಂಬಂಧಪಟ್ಟ ವಿಡಿಯೊ ಒಂದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್(Viral Video) ಆಗಿದೆ.

ಹುಡುಗನೊಬ್ಬ ಕ್ಲೀನ್ ಶೇವ್ ಮಾಡಿಕೊಂಡು ತನ್ನ ತಂದೆಗೆ ತೋರಿಸಿ ಅವರ ಮೆಚ್ಚುಗೆ ಗಳಿಸಬೇಕು ಎಂದು ಹೋಗಿ ಕಪಾಳಮೋಕ್ಷಕ್ಕೆ ಒಳಗಾದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಟ್ರೋಲ್ ಆಗುತ್ತಿದೆ.
ವಿಡಿಯೊದಲ್ಲಿ ಹುಡುಗ ಕ್ಲೀನ್ ಶೇವ್ ಮಾಡಿ ಕ್ಯಾಮರಾಕ್ಕೆ ಮುಖ ಮಾಡಿ ನಿಂತಿದ್ದಾಗ ತಂದೆ ‘’ಏನಾಗುತ್ತಿದೆ’’ ಎಂದು ಕೇಳುತ್ತಾ ಆತನ ಹಿಂದೆ ಬಂದಿದ್ದಾರೆ. ಆಗ ಆತ ತನ್ನ ತಂದೆಗೆ ತನ್ನ ಹೊಸ ಲುಕ್ ಅನ್ನು ತೋರಿಸಿ ಅವರಿಗೆ ಆಶ್ವರ್ಯವನ್ನುಂಟುಮಾಡಬೇಕು ಎಂಬ ಉತ್ಸಾಹದಿಂದ ಹಿಂದೆ ತಿರುಗಿದ್ದಾನೆ. ಆದರೆ ಮಗ ಕ್ಲೀವ್ ಶೇವ್ ಮಾಡಿದ್ದಕ್ಕೆ ಕೋಪಗೊಂಡ ತಂದೆ ಆತನ ಕೆನ್ನೆಗೆ ಬಾರಿಸಿದ್ದಾರೆ. ನಂತರ ಒಂದು ಸೆಕೆಂಡುಗಳ ಕಾಲ ಅವನನ್ನು ದಿಟ್ಟಿಸಿ ನೋಡುತ್ತಾ ಅವನ ಕುತ್ತಿಗೆ ಹಿಡಿದು ‘’ನಾನು ಹೇಳುವುದನ್ನು ನೀನು ಎಂದಿಗೂ ಕೇಳುವುದಿಲ್ಲ” ಎಂದು ಬೈಯುತ್ತಾ ಮತ್ತೊಮ್ಮೆ ಕೆನ್ನೆಗೆ ಬಾರಿಸಿದ್ದಾರೆ.

ಈ ವಿಡಿಯೊ ಘರ್ ಕೆ ಕಾಲೆಶ್ ಎಂಬ ಸೋಶಿಯಲ್ ಮೀಡಿಯಾ ಹ್ಯಾಂಡಲ್ ನಲ್ಲಿ ಪೋಸ್ಟ್ ಆಗಿದ್ದು, ತಕ್ಷಣವೇ ವೈರಲ್ ಆಗಿದೆ. ಈ ಪೋಸ್ಟ್ ಗೆ 3 ಮಿಲಿಯನ್ ವೀವ್ಸ್ ಬಂದಿದ್ದು, ಮಗನ ಮೇಲೆ ತಂದೆ ಕೈ ಮಾಡಿದ್ದಕ್ಕೆ ಹಲವರು ಟೀಕೆ ಮಾಡಿದ್ದಾರೆ. ಇದು ವಿವಾದವನ್ನು ಹುಟ್ಟುಹಾಕಿದೆ ಎನ್ನಲಾಗಿದೆ.

ಅನೇಕರು ಈ ವಿಡಿಯೊ ನೋಡಿ ‘ಇದು ಕೆಟ್ಟ ನಡತೆಯ ಪೋಷಕರಿಗೆ ಪರಿಪೂರ್ಣ ಉದಾಹರಣೆಯಾಗಿದೆ’ ಎಂದು ಬರೆದಿದ್ದಾರೆ. ಇನ್ನೂ ಕೆಲವರು ‘ತನ್ನ ಗಡ್ಡ ಮೀಸೆ ಮಾತ್ರ ಬೋಳಿಸಿದ್ದಕ್ಕೆ ತಂದೆ ತಮ್ಮ ಮಗನಿಗೆ ಹೊಡೆಯುವುದು ಇದು ಮಿತಿ ಮೀರಿದ ವರ್ತನೆಯಾಯಿತು’ ಎಂದು ಕಿಡಿಕಾರಿದ್ದಾರೆ. ‘ಜಗತ್ತಿನಲ್ಲಿ ಲೈಂಗಿಕ ಶಿಕ್ಷಣಕ್ಕಿಂತ ಪೋಷಕರಿಗೆ ಶಿಕ್ಷಣ ನೀಡುವ ಅಗತ್ಯವಿದೆ’ ಎಂದು ಒಬ್ಬ ಬಳಕೆದಾರರು ತಿಳಿಸಿದ್ದಾರೆ. ‘ಹೆಚ್ಚಿನ ಭಾರತೀಯ ಪೋಷಕರು ತಮ್ಮ ಹತಾಶೆ ಮತ್ತು ವೈಫಲ್ಯವನ್ನು ತಮ್ಮ ಸ್ವಂತ ಮಕ್ಕಳ ಮೂಲಕ ಹೊರಹಾಕುತ್ತಾರೆ’ ಎಂದು ಮತ್ತೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: Actor Darshan: ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಪವಿತ್ರಾ ಗೌಡ ಮಾಜಿ ಪತಿಯಿಂದ ಕೇಸ್!

ಈ ವಿಡಿಯೊದಲ್ಲಿ ಆ ತಂದೆ ಮಗ ಮೀಸೆ , ಗಡ್ಡ ಬೋಳಿಸಿದ್ದಕ್ಕೆ ಯಾಕೆ ಕೋಪಗೊಂಡು, ಹೊಡೆದರು ಎಂಬುದಕ್ಕೆ ಕಾರಣ ತಿಳಿದುಬಂದಿಲ್ಲ. ಆದರೆ ಭಾರತೀಯ ಸಂಪ್ರದಾಯದ ಪ್ರಕಾರ ಗಂಡು ಮಕ್ಕಳು ತನ್ನ ತಂದೆ ಅಥವಾ ತಾಯಿ ತೀರಿಕೊಂಡಾಗ ಮಾತ್ರ ಗಡ್ಡ, ಮೀಸೆ, ತಲೆ ಬೋಳಿಸುತ್ತಾರೆ. ಹಾಗಾಗಿ ತಮ್ಮ ಸಂಪ್ರದಾಯದ ನಿಯಮವನ್ನು ಉಲ್ಲಂಘಿಸಿದ್ದಕ್ಕೆ ತಂದೆ ಮಗನಿಗೆ ಹೊಡೆದಿರಬಹುದು ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Vande Bharath Train: ಬೆಂಗಳೂರು-ಮಧುರೈ ʼವಂದೇ ಭಾರತ್ʼ ರೈಲು ಜುಲೈನಿಂದ ಆರಂಭ

Vande Bharath Train ಬೆಂಗಳೂರಿನಲ್ಲಿ ಏಳನೇ ವಂದೇ ಭಾರತ್ ಎಕ್ಸ್ ಪ್ರೆಸ್ ಜುಲೈ ಆರಂಭದಿಂದ ಕಾರ್ಯ ನಿರ್ವಹಿಸಲಿದೆ. ಆದರೆ ಇದು ಪ್ರಯಾಣಿಕರ ಬೇಡಿಕೆಯ ಆಧಾರದ ಮೇಲೆ ಸೀಮಿತ ಅವಧಿಗಳಲ್ಲಿ ಮಾತ್ರ ವಿಶೇಷ ರೈಲು ಸೇವೆಯಾಗಿ ಕಾರ್ಯ ನಿರ್ವಹಿಸಲಿದೆ. ಈ ರೈಲು ಸೇವೆ ಜೂನ್ 20ರಂದು ಪ್ರಾರಂಭವಾಗಬೇಕಿತ್ತು. ಆದರೆ ಜೂನ್ 17ರಂದು ಪಶ್ಚಿಮ ಬಂಗಾಳದಲ್ಲಿ ನಡೆದ ರೈಲು ಅಪಘಾತದಿಂದಾಗಿ ಈ ವಿಶೇಷ ರೈಲು ಸೇವೆಯನ್ನು ವಿಳಂಬಗೊಳಿಸಲಾಗಿತ್ತು.

VISTARANEWS.COM


on

Vande Bharath Train
Koo


ಬೆಂಗಳೂರು: ಜುಲೈ ಆರಂಭದಲ್ಲಿ ಬೆಂಗಳೂರಿನಲ್ಲಿ ಏಳನೇ ́ವಂದೇ ಭಾರತ್́ ಎಕ್ಸ್‌ಪ್ರೆಸ್ ರೈಲು ಕಾರ್ಯ ನಿರ್ವಹಿಸಲಿದೆ. ಆದರೆ ಇದು ಪ್ರಯಾಣಿಕರ ಬೇಡಿಕೆಯ ಆಧಾರದ ಮೇಲೆ ಸೀಮಿತ ಅವಧಿಗಳಲ್ಲಿ ಮಾತ್ರ ವಿಶೇಷ ರೈಲು (Vande Bharath Train ) ಸೇವೆಯಾಗಿ ಕಾರ್ಯ ನಿರ್ವಹಿಸಲಿದೆ ಎಂಬುದಾಗಿ ತಿಳಿದುಬಂದಿದೆ.

ಜೂನ್ ಆರಂಭದಲ್ಲಿ ದಕ್ಷಿಣ ರೈಲ್ವೆ (ಎಸ್ ಆರ್) ಎಸ್‌ಎಂವಿಟಿ ಬೆಂಗಳೂರು ಮತ್ತು ಮಧುರೈ ನಡುವೆ ಈ ವಿಶೇಷ ರೈಲು ಸೇವೆಯನ್ನು ಪರಿಚಯಿಸುವುದಾಗಿ ಘೋಷಿಸಿತ್ತು ಮತ್ತು ಆ ಬಗ್ಗೆ ಪ್ರಯೋಗ ನಡೆಸಿ ಯಶಸ್ಸನ್ನು ಕಂಡಿತ್ತು. ಹಾಗಾಗಿ ಈ ರೈಲು ಸೇವೆ ಜೂನ್ 20ರಂದು ಪ್ರಾರಂಭವಾಗಬೇಕಿತ್ತು. ಆದರೆ ಜೂನ್ 17ರಂದು ಪಶ್ಚಿಮ ಬಂಗಾಳದಲ್ಲಿ ನಡೆದ ರೈಲು ಅಪಘಾತದಿಂದಾಗಿ ಈ ವಿಶೇಷ ರೈಲು ಸೇವೆಯನ್ನು ವಿಳಂಬಗೊಳಿಸಲಾಗಿತ್ತು.

ಹಾಗಾಗಿ ದಕ್ಷಿಣ ರೈಲ್ವೆ(ಎಸ್ ಆರ್) ಎಸ್ ಎಂವಿಟಿ ಅಧಿಕಾರಿಗಳು ರೈಲು ಪ್ರಾರಂಭವಾಗುವ ದಿನಾಂಕದ ಬಗೆಗಿನ ಅಧಿಕೃತ ಮಾಹಿತಿಗಾಗಿ ಕಾಯುತ್ತಿರುವುದಾಗಿ ತಿಳಿಸಿದ್ದರು. ಹಾಗೇ ಸದ್ಯಕ್ಕೆ ರೈಲ್ವೆ ಮಂಡಳಿಯು ತನ್ನ ನಿಯಮಿತ ಕಾರ್ಯಾಚರಣೆಯನ್ನು ತಿಳಿಸುವವರೆಗೂ ಈ ರೈಲು ವಿಶೇಷ ಸೇವೆಯಾಗಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದ್ದಾರೆ. ಅಲ್ಲದೇ ನಿರ್ದಿಷ್ಟ ಸಂಖ್ಯೆಯ ಟ್ರಿಪ್ ಗಳೊಂದಿಗೆ ವಿಶೇಷ ರೈಲು 14 ದಿನಗಳಲ್ಲಿ ಪ್ರಾರಂಭವಾಗಬಹುದು. ಈಗಾಗಲೇ ಮಧುರೈ ವಿಭಾಗವು ಟ್ರೈನ್ ಸೆಟ್ ಅನ್ನು ಪಡೆದಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸೀಸನ್ ಸಮಯದಲ್ಲಿ ಹೆಚ್ಚುವರಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ರೈಲ್ವೆಯು ವಿಶೇಷ ರೈಲುಗಳ ವ್ಯವಸ್ಥೆಯನ್ನು ಕಲ್ಪಿಸುತ್ತದೆ. ಆದರೆ ಈ ವಂದೇ ಭಾರತ್ ಸೇವೆ ವಿಶೇಷ ರೈಲುಗಳಂತೆ ಕಾರ್ಯನಿರ್ವಹಿಸುವುದು ಅಪರೂಪ ಎನ್ನಲಾಗಿದೆ. ಬೆಂಗಳೂರು-ಮಧುರೈ ವಂದೇ ಭಾರತ್ ಅನ್ನು ಮಧುರೈ ಜಂಕ್ಷನ್ ನಲ್ಲಿ ನಿರ್ವಹಿಸಲಾಗುವುದು. ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ ನಂತರ ಅದರ ಕಾರ್ಯಚರಣೆಯ ವೇಗ ಮತ್ತು ದರಗಳ ಬಗ್ಗೆ ಮಾಹಿತಿ ತಿಳಿಯುತ್ತದೆ ಎನ್ನಲಾಗಿದೆ.

ಪ್ರಸ್ತುತ ಬೆಂಗಳೂರು-ಮಧುರೈ ನಗರಗಳ ನಡುವಿನ ಅತಿವೇಗದ ರೈಲು 9.5 ಗಂಟೆಗಳನ್ನು ತೆಗೆದುಕೊಳ್ಳುತ್ತದೆ. ಆದರೆ ವಂದೇ ಭಾರತ್ ಎಂಟು ಗಂಟೆಗಳಲ್ಲಿ 430 ಕಿಮೀ ದೂರವನ್ನು ಕ್ರಮಿಸುತ್ತದೆ. ಹಾಗಾಗಿ ಇದನ್ನು ಬೆಂಗಳೂರು-ಮಧುರೈ ನಗರಗಳ ನಡುವಿನ ಅತಿವೇಗದ ರೈಲು ಎಂದು ಕರೆಯಲಾಗಿದೆ.
ಬೆಂಗಳೂರಿನಿಂದ ಈಗಾಗಲೇ ಧಾರವಾಡ, ಕಲಬುರಗಿ, ಹೈದರಾಬಾದ್ ಮತ್ತು ಕೊಯಮತ್ತೂರುಗಳಿಗೆ ವಂದೇ ಭಾರತ್ ರೈಲುಗಳಿವೆ. ಅಲ್ಲದೇ ಚೆನ್ನೈ/ಮೈಸೂರಿಗೆ ಎರಡು ವಂದೇ ಭಾರತ್ ರೈಲುಗಳಿವೆ. ಬೆಂಗಳೂರು ಮತ್ತು ಎರ್ನಾಕುಲಂ ನಡುವೆ ವಂದೇ ಭಾರತ್ ರೈಲು ಸೇವೆ ಬಗ್ಗೆ ಪ್ರಸ್ತಾಪವಾಗಿದೆ ಎನ್ನಲಾಗಿದೆ.

ಸಮಯ, ದರ ಮತ್ತು ನಿಲುಗಡೆ ಸ್ಥಳಗಳ ವಿವರ:

ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ, ರೈಲು ಮಧುರೈನಿಂದ ಬೆಳಿಗ್ಗೆ 5.15ಕ್ಕೆ ಹೊರಟು ಮಧ್ಯಾಹ್ನ 1.15ಕ್ಕೆ ಎಸ್‌ಎಂವಿಟಿ ಬೆಂಗಳೂರು ತಲುಪುತ್ತದೆ. ಬೆಂಗಳೂರಿನಿಂದ ಹೊರಡುವ ರೈಲು ಮಧ್ಯಾಹ್ನ 1.45ಕ್ಕೆ ಹೊರಟು ರಾತ್ರಿ 10.25ಕ್ಕೆ ಮಧುರೈ ತಲುಪುತ್ತದೆ.

ರೈಲಿನ ದರವು 1200-1300 ರೂ. ಆಗಿರಬಹುದು. ಎಕ್ಸಿಕ್ಯೂಟಿವ್‌ ವರ್ಗದ ಪ್ರಯಾಣಿಕರಿಗೆ 1800-2000 ರೂ. ದರ ನಿಗದಿ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ: ನೋಯ್ಡಾದಲ್ಲಿ ನಿರ್ಮಾಣವಾಗುತ್ತಿದೆ ಲಕ್ಷುರಿ ಅಪಾರ್ಟ್‌ಮೆಂಟ್‌! ಇದರ ಬೆಲೆ ಅಬ್ಬಬ್ಬಾ!

ಹಾಗೆಯೇ ದಿಂಡಿಗಲ್, ತಿರುಚಿರಾಪಳ್ಳಿ, ಕರೂರ್ ಮತ್ತು ಸೇಲಂಗಳಲ್ಲಿ ಈ ರೈಲು ನಿಲುಗಡೆಯಾಗಲಿದೆ. ನಮಕ್ಕಲ್ ಮತ್ತು ಬೆಂಗಳೂರಿನ ಕೆಆರ್‌ಪುರಂನಲ್ಲಿ ಈ ರೈಲಿಗೆ ನಿಲುಗಡೆ ಸೌಲಭ್ಯ ಇರುವ ಸಾಧ್ಯತೆ ಇದೆ.

Continue Reading

ಕ್ರೀಡೆ

Rohit Sharma : ಇಂಗ್ಲೆಂಡ್​ ಸೋಲಿಸುವ ಯೋಜನೆ ವಿವರಿಸಿದ ನಾಯಕ ರೋಹಿತ್ ಶರ್ಮಾ

Rohit Sharma: ಸೆಮಿಫೈನಲ್ ಪಂದ್ಯವನ್ನು ವಿಶ್ವ ಕಪ್​ನ ಮತ್ತೊಂದು ಪಂದ್ಯವೆಂದೇ ಪರಿಗಣಿಸುವುದಾಗಿ ಶರ್ಮಾ ಹೇಳಿದ್ದಾರೆ. ತಂಡ ಅದೇ ರೀತಿಯ ಭಾವನೆಯಲ್ಲಿದೆ. ಪ್ರತಿಯೊಬ್ಬರೂ ಅದರ ಪ್ರಾಮುಖ್ಯತೆಯ ಬಗ್ಗೆ ತಿಳಿದಿದ್ದರೂ ಸಮಾನ ಭಾವನೆ ಉತ್ತಮ ಎಂದು ಹೇಳಿದ್ದಾರೆ.

VISTARANEWS.COM


on

Rohit Sharma
Koo

ಬೆಂಗಳೂರು: ಗಯಾನಾದ ಪ್ರಾವಿಡೆನ್ಸ್​​ನಲ್ಲಿ ಜೂನ್ 27 ರಂದು ಇಂಗ್ಲೆಂಡ್ ವಿರುದ್ಧ ನಿರ್ಣಾಯಕ ಟಿ 20 ವಿಶ್ವಕಪ್ ಸೆಮಿಫೈನಲ್​​ನಲ್ಲಿ ಭಾರತ ತಂಡ ತಯಾರಿ ನಡೆಸುತ್ತಿದೆ. ಹಿಂದಿನ ಆವೃತ್ತಿಯಲ್ಲಿ ಸೆಮಿಫೈನಲ್​ ಸೋಲಿಗೆ ಪ್ರತೀಕಾರ ತೀರಿಸಲು ಸಜ್ಜಾಗುತ್ತಿದೆ. ಇವೆಲ್ಲದರ ನಡುವೆ ರೋಹಿತ್ ಶರ್ಮಾ (Rohit Sharma) ತಂಡದ ವಾತಾವರಣ ಮತ್ತು ಸ್ಪಷ್ಟ ಚಿಂತನೆಯನ್ನು ಅಭಿಮಾನಿಗಳಿಗೆ ವಿವರಿಸಿದ್ದಾರೆ. ಗೆದ್ದೇ ಗೆಲ್ಲುವೆವು ಎಂಬ ಭರವಸೆಯನ್ನು ನೀಡಿದ್ದಾರೆ.

ಸೆಮಿಫೈನಲ್ ಪಂದ್ಯವನ್ನು ವಿಶ್ವ ಕಪ್​ನ ಮತ್ತೊಂದು ಪಂದ್ಯವೆಂದೇ ಪರಿಗಣಿಸುವುದಾಗಿ ಶರ್ಮಾ ಹೇಳಿದ್ದಾರೆ. ತಂಡ ಅದೇ ರೀತಿಯ ಭಾವನೆಯಲ್ಲಿದೆ. ಪ್ರತಿಯೊಬ್ಬರೂ ಅದರ ಪ್ರಾಮುಖ್ಯತೆಯ ಬಗ್ಗೆ ತಿಳಿದಿದ್ದರೂ ಸಮಾನ ಭಾವನೆ ಉತ್ತಮ ಎಂದು ಹೇಳಿದ್ದಾರೆ.

“ನೋಡಿ, ಈ ಪಂದ್ಯವನ್ನು ನಾವು ವಿಶ್ವ ಕಪ್​ನಲ್ಲಿ ಆಡಲಿರುವ ಮತ್ತೊಂದು ಪಂದ್ಯವೆಂದು ಪರಿಗಣಿಸಲು ಬಯಸುತ್ತೇವೆ” ಎಂದು ಅವರು ಪಂದ್ಯದ ಮುನ್ನಾದಿನದಂದು ಸುದ್ದಿಗೋಷ್ಠೀಯಲ್ಲಿ ಹೇಳಿದ್ದಾರೆ. “ಮುಂದೆ ಏನಿದೆ ಮತ್ತು ಆಟದ ಸಂದರ್ಭ ಏನು ಮತ್ತು ಇವೆಲ್ಲದರ ಬಗ್ಗೆ ನಾವು ಯೋಚಿಸಲು ಬಯಸುವುದಿಲ್ಲ. ಪ್ರತಿಯೊಬ್ಬರಿಗೂ ಇದು ಸೆಮಿಫೈನಲ್ ಎಂದು ತಿಳಿದಿದೆ. ಆದರೆ ನಾವು ಅದರ ಬಗ್ಗೆ ಮತ್ತೆ ಮತ್ತೆ ಮಾತನಾಡಲು ಬಯಸುವುದಿಲ್ಲ. ಹಿಂದೆ ಏನಾಯಿತು ಎಂಬುದರ ಬಗ್ಗೆ ಯೋಚಿಸಬಾರದು.” ಎಂಬುದಾಗಿ ರೋಹಿತ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಪಂದ್ಯವು 2022 ರ ಸೆಮಿಫೈನಲ್​ನ ಪುನರಾವರ್ತನೆಯಾಗಿದೆ. ಅಡಿಲೇಡ್​​ನಲ್ಲಿ ಇಂಗ್ಲೆಂಡ್​ ವಿರುದ್ಧ ಭಾರತವು ಹತ್ತು ವಿಕೆಟ್​ಗಳ ಹೀನಾಯ ಸೋಲನ್ನು ಅನುಭವಿಸಿತ್ತು. ನೋವಿನ ಇತಿಹಾಸದ ಹೊರತಾಗಿಯೂ ತಂಡವು ಸಕಾರಾತ್ಮಕ ಮನಸ್ಥಿತಿಯಲ್ಲಿದೆ ಎಂದು ಶರ್ಮಾ ಹೇಳಿದ್ದಾರೆ.

“ನಾವೆಲ್ಲರೂ, ತಂಡದ ಮನಸ್ಥಿತಿಯಲ್ಲಿದ್ದೇವೆ ಎಂದು ನಾನು ಭಾವಿಸುತ್ತೇನೆ. ನಾವು ಒಂದು ತಂಡವಾಗಿ ಉತ್ತಮವಾಗಿ ಆಡುತ್ತಿದ್ದೇವೆ. ಪರಸ್ಪರರ ಸಹಕಾರವನ್ನು ಆನಂದಿಸುತ್ತಿದ್ದೇವೆ. ಕೆಲವೊಮ್ಮೆ ಪರಸ್ಪರರ ಯಶಸ್ಸನ್ನು ಕಂಡಿದ್ದೇವೆ. ಈ ಪಂದ್ಯಾವಳಿಯಲ್ಲಿ ಕೆಲವು ಪಂದ್ಯಗಳಲ್ಲಿ ನಾವು ಒತ್ತಡಕ್ಕೆ ಒಳಗಾಗಿದ್ದೇವೆ. ಆದರೆ ನಾವು ಉತ್ತಮವಾಗಿ ಪ್ರತಿಕ್ರಿಯಿಸಿದ್ದೇವೆ ಎಂದು ನಾನು ಭಾವಿಸಿದ್ದೇನೆ ಎಂದು ರೋಹಿತ್ ನುಡಿದಿದ್ದಾರೆ.

ಅತಿಯಾದ ಯೋಚನೆ ಇಲ್ಲ

ನಾವು ಎಷ್ಟು ಚೆನ್ನಾಗಿ ಆಡಬಹುದು ಮತ್ತು ನಾವು ಹುಡುಕುತ್ತಿರುವ ಫಲಿತಾಂಶವನ್ನು ಸಾಧಿಸಲು ತಂಡವಾಗಿ ನಾವು ಏನು ಮಾಡಬಹುದು ಎಂಬುದರ ಬಗ್ಗೆ ನಾವು ಯೋಚಿಸುತ್ತಿದ್ದೇವೆ. ಅತಿಯಾದ ಯೋಚನೆ ಇಲ್ಲ. ಹೆಚ್ಚು ಯೋಚಿಸಿದರೆ, ಮೈದಾನದಲ್ಲಿ ತೆಗೆದುಕೊಳ್ಳಲು ಬಯಸುವ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. , ನಾವು ಏನು ಮಾಡಲು ಬಯಸುತ್ತೇವೆ ಎಂಬುದನ್ನು ನಮ್ಮ ಮನಸ್ಸಿನಲ್ಲಿ ಸ್ಪಷ್ಟಪಡಿಸಿಕೊಂಡಿದ್ದೇವೆ. ನಾವು ಆಟಗಾರರೊಂದಿಗೆ ಸಾಕಷ್ಟು ಮಾತನಾಡಿದ್ದೇವೆ. ಪ್ರತಿಯೊಬ್ಬರಿಂದ ಏನನ್ನು ನಿರೀಕ್ಷಿಸಲಾಗಿದೆ ಎಂಬುದನ್ನು ವಿವರಿಸಲಾಗಿದೆ “ಎಂದು ಶರ್ಮಾ ಹೇಳಿದರು.

ಇದನ್ನೂ ಓದಿ: IND vs ENG : ಭಾರತದ ವಿರುದ್ಧ ಹೂಡಲಿರುವ ತಂತ್ರಗಳನ್ನು ವಿವರಿಸಿದ ಇಂಗ್ಲೆಂಡ್ ಕೋಚ್​ ಮ್ಯಾಥ್ಯೂ ಮಾಟ್​

ಈ ಟಿ 20 ವಿಶ್ವಕಪ್​​ನಲ್ಲಿ ಎರಡೂ ತಂಡಗಳು ಮೊದಲ ಬಾರಿಗೆ ಪ್ರಾವಿಡೆನ್ಸ್​​ನಲ್ಲಿ ಆಡುತ್ತಿರುವುದರಿಂದ ಪಿಚ್​ ಪರಿಸ್ಥಿತಿಗಳನ್ನು ತ್ವರಿತವಾಗಿ ನಿರ್ಣಯಿಸಬೇಕಾಗುತ್ತದೆ. ನಿರ್ದಿಷ್ಟ ಶಾಟ್​ಗಳನ್ನು ಆಡುವುದು ಅಥವಾ ನಿರ್ದಿಷ್ಟ ರೀತಿಯ ಚೆಂಡುಗಳನ್ನು ಎಸೆಯುವುದು ಸೇರಿದಂತೆ ಮೈದಾನದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳಲು ತಂಡವು ಆಟಗಾರರನ್ನು ಅವಲಂಬಿಸಿದೆ ಎಂಬುದಾಗಿ ರೋಹಿತ್​ ಹೇಳಿದ್ದಾರೆ.

ನಮ್ಮ ಮುಂದೆ ಯಾವ ಪರಿಸ್ಥಿತಿಗಳಿವೆ ಮತ್ತು ನಾವು ಏನು ಮಾಡಬೇಕು ಎಂಬುದನ್ನು ಅರ್ಥಮಾಡಿಕೊಳ್ಳುವುದು ಮುಖ್ಯ ಎಂದು ನಾನು ಭಾವಿಸುತ್ತೇನೆ. ನಾನು ಈ ಗುಂಪಿನ ಅನುಭವದ ಬಗ್ಗೆ ಮಾತನಾಡಿದ್ದೇನೆ, ಮತ್ತು ರಿವರ್ಸ್ ಸ್ವೀಪ್ ಆಡುತ್ತಿರಲಿ, ಯಾರ್ಕರ್ ಬೌಲಿಂಗ್ ಆಗಿರಲಿ, ಬೌನ್ಸರ್ ಬೌಲಿಂಗ್ ಮಾಡುತ್ತಿರಲಿ, ಆ ನಿರ್ಧಾರವನ್ನು ತೆಗೆದುಕೊಳ್ಳಲು ನಾವು ಪ್ರತಿಯೊಬ್ಬ ಆಟಗಾರನಿಗೆ ಸ್ವಾತಂತ್ರ್ಯ ಇದೆ ಎಂದು ರೋಹಿತ್​ ಹೇಳಿದರು

Continue Reading

ಪ್ರಮುಖ ಸುದ್ದಿ

Chris Silverwood : ಲಂಕಾ ಕೋಚ್​ ಕ್ರಿಸ್​ ಸಿಲ್ವರ್​ವುಡ್​​ ಏಕಾಏಕಿ ರಾಜೀನಾಮೆ

Chris Silverwood : ಅವರ ಮುಂದಾಳತ್ವದ ಶ್ರೀಲಂಕಾ ಏಕದಿನ ಸ್ವರೂಪದಲ್ಲಿ ಆಸ್ಟ್ರೇಲಿಯಾ ವಿರುದ್ಧ ತವರು ಸರಣಿ ಗೆಲುವು ಮತ್ತು ಬಾಂಗ್ಲಾದೇಶದ ವಿರುದ್ಧ ಎರಡು ವಿದೇಶ ಟೆಸ್ಟ್ ಸರಣಿ ಗೆಲುವುಗಳು ಸೇರಿದಂತೆ ಗಮನಾರ್ಹ ದ್ವಿಪಕ್ಷೀಯ ಸರಣಿ ಗೆಲುವುಗಳನ್ನು ಗಳಿಸಿತು. ಏತನ್ಮಧ್ಯೆ, ಸಿಲ್ವರ್​ವುಡ್​ ತನ್ನ ನಿರ್ಗಮನಕ್ಕೆ ವೈಯಕ್ತಿಕ ಕಾರಣಗಳನ್ನು ನೀಡಿದ್ದಾರೆ.

VISTARANEWS.COM


on

Chris Silverwood
Koo

ಬೆಂಗಳೂರು: ಶ್ರೀಲಂಕಾ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆಯಿಂದ ಕ್ರಿಸ್ ಸಿಲ್ವರ್​ವುಡ್​ (Chris Silverwood ) ಏಕಾಏಕಿ ರಾಜೀನಾಮೆ ಪಡೆದಿದ್ದಾರೆ. ಭಾರತದಲ್ಲಿ ನಡೆದ 2023 ರ ಏಕದಿನ ವಿಶ್ವಕಪ್ ಮತ್ತು ವೆಸ್ಟ್ ಇಂಡೀಸ್ ಮತ್ತು ಯುಎಸ್ಎಯಲ್ಲಿ ನಡೆದ 2024 ರ ಟಿ 20 ವಿಶ್ವಕಪ್​​ನಲ್ಲಿ ತಂಡದ ನಿರಾಶಾದಾಯಕ ಪ್ರದರ್ಶನದ ನಂತರ ಅವರು ರಾಜೀನಾಮೆ ಕೊಟ್ಟಿದ್ದಾರೆ. ಶ್ರೀಲಂಕಾದೊಂದಿಗಿನ ಸಿಲ್ವರ್​ವುಡ್​ ಅವರ ಅಧಿಕಾರಾವಧಿ ಉತ್ತಮವಾಗಿ ಪ್ರಾರಂಭಗೊಂಡಿದ್ದರು. ತಂಡವು 2022 ರ ಟಿ 20 ಏಷ್ಯಾ ಕಪ್​​ನಲ್ಲಿ ವಿಜಯಶಾಲಿಯಾಗಿ ಹೊರಹೊಮ್ಮಿತ್ತು. 2023 ರಲ್ಲಿ 50 ಓವರ್​ಗಳ ಏಷ್ಯಾ ಕಪ್​ನಲ್ಲಿ ಫೈನಲ್​ಗೆ ಅರ್ಹತೆ ಪಡೆದಿತ್ತು.

ಅವರ ಮುಂದಾಳತ್ವದ ಶ್ರೀಲಂಕಾ ಏಕದಿನ ಸ್ವರೂಪದಲ್ಲಿ ಆಸ್ಟ್ರೇಲಿಯಾ ವಿರುದ್ಧ ತವರು ಸರಣಿ ಗೆಲುವು ಮತ್ತು ಬಾಂಗ್ಲಾದೇಶದ ವಿರುದ್ಧ ಎರಡು ವಿದೇಶ ಟೆಸ್ಟ್ ಸರಣಿ ಗೆಲುವುಗಳು ಸೇರಿದಂತೆ ಗಮನಾರ್ಹ ದ್ವಿಪಕ್ಷೀಯ ಸರಣಿ ಗೆಲುವುಗಳನ್ನು ಗಳಿಸಿತು. ಏತನ್ಮಧ್ಯೆ, ಸಿಲ್ವರ್​ವುಡ್​ ತನ್ನ ನಿರ್ಗಮನಕ್ಕೆ ವೈಯಕ್ತಿಕ ಕಾರಣಗಳನ್ನು ನೀಡಿದ್ದಾರೆ.

ಅಂತಾರಾಷ್ಟ್ರೀಯ ಕೋಚ್ ಆಗಿರುವುದು ಎಂದರೆ ಪ್ರೀತಿಪಾತ್ರರಿಂದ ದೂರವಿರುವುದು ಎಂದರ್ಥ. ನನ್ನ ಕುಟುಂಬದೊಂದಿಗೆ ಸುದೀರ್ಘ ಸಂಭಾಷಣೆಯ ನಂತರ ಮತ್ತು ಭಾರವಾದ ಹೃದಯದಿಂದ, ನಾನು ಮನೆಗೆ ಮರಳಲು ಮತ್ತು ಒಟ್ಟಿಗೆ ಕೆಲವು ಗುಣಮಟ್ಟದ ಸಮಯವನ್ನು ಕಳೆಯಲು ನಿರ್ಧಾರ ತೆಗೆದುಕೊಂಡಿದ್ದೇನೆ. ಉತ್ತಮ ನಿರ್ಧಾರಕ್ಕೆ ಸೂಕ್ತ ಸಮಯ ಎಂದು ನಾನು ಭಾವಿಸುತ್ತೇನೆ “ಎಂದು ಸಿಲ್ವರ್​ ವುಡ್​ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಶ್ರೀಲಂಕಾದಲ್ಲಿದ್ದಾಗ ಬೆಂಬಲ ನೀಡಿದ ಆಟಗಾರರು, ತರಬೇತುದಾರರು, ಬ್ಯಾಕ್ರೂಮ್ ಸಿಬ್ಬಂದಿ ಮತ್ತು ಎಸ್ಎಲ್ಸಿಯ ಆಡಳಿತ ಮಂಡಳಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ನಿಮ್ಮ ಬೆಂಬಲವಿಲ್ಲದೆ, ಯಾವುದೇ ಯಶಸ್ಸು ಸಾಧ್ಯವಾಗುತ್ತಿರಲಿಲ್ಲ. ಶ್ರೀಲಂಕಾ ಕ್ರಿಕೆಟ್​ ಭಾಗವಾಗಿರುವುದು ನನಗೆ ನಿಜವಾದ ಗೌರವವಾಗಿದೆ ಮತ್ತು ನಾನು ಅನೇಕ ಪ್ರೀತಿಯ ನೆನಪುಗಳನ್ನು ತೆಗೆದುಹಾಕುತ್ತೇನೆ, “ಎಂದು ಅವರು ಹೇಳಿದರು.

ಸಲಹೆಗಾರ ಹುದ್ದೆಯಿಂದ ಮಹೇಲಾ ಜಯವರ್ಧನೆ ರಾಜೀನಾಮೆ

ಸಿಲ್ವರ್ವುಡ್ ರಾಜೀನಾಮೆ ನೀಡುವ ಮೊದಲು, ಶ್ರೀಲಂಕಾದ ಮಾಜಿ ನಾಯಕ ಮಹೇಲಾ ಜಯವರ್ಧನೆ ಅವರು 2022 ರಿಂದ ತಾವು ಹೊಂದಿದ್ದ ಸಲಹೆಗಾರ ಹುದ್ದೆಯಿಂದ ಕೆಳಗಿಳಿದಿದ್ದರು.

ಇದನ್ನೂ ಓದಿ: Louis Kimber: 127 ಎಸೆತಗಳಲ್ಲಿ 243 ರನ್ ಚಚ್ಚಿ ಹಲವು ದಾಖಲೆಗಳನ್ನು ಬರೆದ ಕೌಂಟಿ ಆಟಗಾರ ಲೂಯಿಸ್ ಕಿಂಬರ್

ಟಿ 20 ವಿಶ್ವಕಪ್​​ನಲ್ಲಿ ವನಿಂದು ಹಸರಂಗ ನೇತೃತ್ವದ ತಂಡದ ಪ್ರದರ್ಶನವು ವಿಶೇಷವಾಗಿ ನಿರಾಶಾದಾಯಕವಾಗಿತ್ತು. ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ, ನೇಪಾಳ ಮತ್ತು ನೆದರ್ಲ್ಯಾಂಡ್ಸ್ ಜೊತೆಗೆ ಮೊದಲ ಸುತ್ತಿನ ಗ್ರೂಪ್ ಡಿ ನಲ್ಲಿ ಸ್ಥಾನ ಪಡೆದ ಮಾಜಿ ಚಾಂಪಿಯನ್​​ಗಳು ಆರಂಭಿಕ ಹಂತವನ್ನು ಮೀರಿ ಮುನ್ನಡೆಯಲು ವಿಫಲಗೊಂಡಿದ್ದರು. ದಕ್ಷಿಣ ಆಫ್ರಿಕಾ ಮತ್ತು ಬಾಂಗ್ಲಾದೇಶದ ವಿರುದ್ಧದ ಆರಂಭಿಕ ಸೋಲುಗಳು ಅವರ ಅವಕಾಶಗಳನ್ನು ತೀವ್ರವಾಗಿ ದುರ್ಬಲಗೊಳಿಸಿತ್ತು. ನೇಪಾಳ ವಿರುದ್ಧದ ಪಂದ್ಯವು ರದ್ದಾಗಿತ್ತು. ತಂಡದ ಏಕೈಕ ಗೆಲುವು ನೆದರ್ಲ್ಯಾಂಡ್ಸ್​ ವಿರುದ್ಧ ಬಂದಿತು. ಇದು ಯಾವುದೇ ಪರಿಣಾಮ ಬೀರಿರಲಿಲ್ಲ.

ಈ ಹಿನ್ನಡೆಯ ನಂತರ ಶ್ರೀಲಂಕಾ ಪುನರ್ನಿರ್ಮಾಣ ಮಾಡಲು ನೋಡುತ್ತಿರುವುದರಿಂದ, ಅವರ ಗಮನವು ಜುಲೈ ಮತ್ತು ಆಗಸ್ಸ್​ನಲ್ಲಿ ಭಾರತದ ವಿರುದ್ಧ ಮುಂಬರುವ ವೈಟ್-ಬಾಲ್ ಸರಣಿಯತ್ತ ತಿರುಗಲಿದೆ. ಮೂರು ಟಿ 20 ಮತ್ತು ಮೂರು ಏಕದಿನ ಪಂದ್ಯಗಳನ್ನು ಒಳಗೊಂಡಿರುವ ಈ ಸರಣಿಯು ತಂಡಕ್ಕೆ ಮರುಸಂಘಟನೆ ಮಾಡಲು ಮತ್ತು ಇತ್ತೀಚಿನ ನಿರಾಶೆಗಳನ್ನು ಬದಿಗಿಡಲು ಅನುವು ಮಾಡಿಕೊಡಲಿದೆ.

Continue Reading

Latest

Viral Video : ನೋಯ್ಡಾದಲ್ಲಿ ನಿರ್ಮಾಣವಾಗುತ್ತಿದೆ ಲಕ್ಷುರಿ ಅಪಾರ್ಟ್‌ಮೆಂಟ್‌! ಇದರ ಬೆಲೆ ಅಬ್ಬಬ್ಬಾ!

Viral Video: ಮನೆ ಕಟ್ಟಿ ನೋಡು ಒಂದು ಮದುವೆ ಮಾಡಿ ನೋಡು ಎಂಬ ಮಾತಿನಂತೆ ಜನಸಾಮಾನ್ಯರಿಗೆ ಒಂದು ಮನೆಕಟ್ಟಿ ಅದರ ಇಎಂಐ ಕಟ್ಟುವಾಗ ಜೀವ ಬಾಯಿಗೆ ಬಂದ ಹಾಗೇ ಆಗುತ್ತದೆ. ಇರುವುದಕ್ಕೆ ಒಂದು ಸೂರು ಸಾಕು ಎನ್ನುವ ಕಾಲ ಈಗ ಬದಲಾಗಿದೆ. ನಾನಾ ವಿನ್ಯಾಸವಿರುವ ಮನೆ, ಅಪಾರ್ಟ್‌ಮೆಂಟ್‌ಗಳನ್ನು ತೆಗೆದುಕೊಳ್ಳಬೇಕು ಎಂಬ ಕನಸು ಇರುತ್ತದೆ. ಅಂಥವರು ನೋಯ್ಡಾದಲ್ಲಿ ನಿರ್ಮಾಣವಾಗುತ್ತಿರುವ ಈ ಅಪಾರ್ಟ್‌ಮೆಂಟ್‌ ಅನ್ನು ನೋಡಬಹುದು. ಇದರ ಬೆಲೆ ಕೇಳಿದ್ರೆ ನೀವು ಹೌಹಾರುತ್ತೀರಿ ಜೋಕೆ. ಟೆಕ್ಕಿಯೊಬ್ಬರು ಇದರ ವಿಡಿಯೊ ಮಾಡಿದ್ದು, ಇದು ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ.

VISTARANEWS.COM


on

Viral Video
Koo

ನೋಯ್ಡಾ: ಇತ್ತೀಚಿನ ದಿನಗಳಲ್ಲಿ ಜನಸಾಮಾನ್ಯರಿಗೆ ಒಂದು ಮನೆಯನ್ನು ಕಟ್ಟಿಕೊಳ್ಳುವುದು ಬಹಳ ಕಠಿಣವಾದ ಕೆಲಸವಾಗಿದೆ. ಸಿಮೆಂಟ್, ಮರಳು, ಕಲ್ಲು, ಕಬ್ಬಿಣದ ಬೆಲೆ ಕೇಳಿದರೆ ಜನರಿಗೆ ಮನೆಯೂ ಬೇಡ ಜೀವನವೇ ಬೇಡ ಎಂದೆನಿಸಿ ಬಿಡುತ್ತದೆ. ಹೀಗಿರುವಾಗ ದೆಹಲಿಯ ಎನ್ ಸಿಆರ್ ಇಂಜಿನಿಯರ್ ಒಬ್ಬರು ನೋಯ್ಡಾದಲ್ಲಿ ನಿರ್ಮಿಸುತ್ತಿರುವ ಅಪಾರ್ಟ್ ಮೆಂಟ್ ಬೆಲೆ ಕೇಳಿದರೆ ನೀವು ಶಾಕ್ ಆಗುವುದಂತು ಖಂಡಿತ. ಈ ಬಗ್ಗೆ ಟೆಕ್ಕಿಯೊಬ್ಬರು ವಿಡಿಯೊ ಮಾಡಿದ್ದು, ಇದು ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ.

ಟೆಕ್ಕಿ ಕಾಶಿಶ್ ಛಿಬ್ಬರ್ ಎನ್ನುವವರು ತಮ್ಮ ಇನ್ ಸ್ಟಾಗ್ರಾಂನಲ್ಲಿ ದೆಹಲಿಯ ಎನ್ ಸಿಆರ್ ಇಂಜಿನಿಯರ್ ಒಬ್ಬರು ನೋಯ್ಡಾದಲ್ಲಿ ಅಪಾರ್ಟ್ ಮೆಂಟ್ ಒಂದನ್ನು ನಿರ್ಮಿಸುತ್ತಿದ್ದು, ಇದರಲ್ಲಿ 4BHK ಗೆ 15 ಕೋಟಿ ರೂ ಹಾಗೂ 6BHK 25 ಕೋಟಿ ರೂ ಗೆ ಮಾರಾಟ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ಛಿಬ್ಬರ್ ಅವರು ತಮ್ಮ ಇನ್ ಸ್ಟಾಗ್ರಾಂ ನಲ್ಲಿ ವಿಡಿಯೊ ಮಾಡುತ್ತಾ ನೋಯ್ಡಾ ಸೆಕ್ಟರ್ 124 ರ ವರ್ಚುವಲ್ ಪ್ರದೇಶಕ್ಕೆ ಹೋಗಿದ್ದಾರೆ. ಅಲ್ಲಿ ಅವರು ಮುಂಬರುವ ದಿನಗಳಲ್ಲಿ ಎಟಿಎಸ್ ನೈಟ್ಸ್ ಬ್ರಿಡ್ಜ್ ಯೋಜನೆಯಲ್ಲಿ ನಿರ್ಮಾಣವಾಗುತ್ತಿರುವ ಅಪಾರ್ಟ್ ಮೆಂಟ್ ಅನ್ನು ಪರಿಶೀಲನೆ ಮಾಡಿದ್ದಾರೆ.

ಅಲ್ಲಿ 4BHK ಅಪಾರ್ಟ್ ಮೆಂಟ್ ಗೆ 15 ಕೋಟಿ ರೂ ಹಾಗೂ 6BHK ಅಪಾರ್ಟ್ ಮೆಂಟ್ ಗೆ 25 ಕೋಟಿ ರೂ ಗೆ ನೀಡಬೇಕಾಗುತ್ತದೆ ಎಂದು ತಿಳಿಸಿದ್ದಾರೆ. ಅಲ್ಲದೇ ಇಂತಹ ದುಬಾರಿ ವೆಚ್ಚದ ಅಪಾರ್ಟ್ ಮೆಂಟ್ ಅನ್ನು ಯಾರು ಖರೀದಿಸುತ್ತಾರೆ? ತಾನು ಎಷ್ಟೇ ಉದ್ಯೋಗ ಮಾಡಿದರೂ, ಎಷ್ಟೇ ವ್ಯಾಪಾರ, ಹೂಡಿಕೆ ಮಾಡಿದರೂ ಇಂತಹ ಅಪಾರ್ಟ್ ಮೆಂಟ್ ಅನ್ನು ಖರೀದಿಸಲು ಸಾಧ್ಯವಾಗುತ್ತದೆಯೇ? ಎಂದು ಅವರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.
ಛಿಬ್ಬರ್ ಅವರು ಕೆಲವು ದಿನಗಳ ಹಿಂದೆ ಈ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೊಗೆ ಒಟ್ಟು 4.4 ಮಿಲಿಯನ್ ವೀವ್ಸ್ ಹಾಗೂ ಹಲವು ಕಾಮೆಂಟ್ ಗಳು ಬಂದಿದೆ. ಹಾಗೇ ಇದು ಹಿಂದೆ ಟ್ವೀಟರ್ ನಲ್ಲಿಯೂ ಪೋಸ್ಟ್ ಆಗಿದ್ದು, ಅಲ್ಲಿ ಇದಕ್ಕೆ 1 ಮಿಲಿಯನ್ ವೀವ್ಸ್ ಬಂದಿತ್ತು ಎನ್ನಲಾಗಿದೆ.

ಇದನ್ನೂ ಓದಿ:ರೈಲಿನ ಮೇಲಿನ ಬರ್ತ್‌ನಲ್ಲಿದ್ದ ವ್ಯಕ್ತಿ ಉರುಳಿ ಬಿದ್ದು ಕೆಳ ಬರ್ತ್‌ನ ಪ್ರಯಾಣಿಕ ಸಾವು

ಈ ವಿಡಿಯೊ ನೋಡಿದ ಜನರು ಅಪಾರ್ಟ್ ಮೆಂಟ್ ನ ದುಬಾರಿ ಬೆಲೆಗಳ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ನೋಯ್ಡಾದ ರಿಯಲ್ ಎಸ್ಟೇಟ್ ಮಧ್ಯಮ ವರ್ಗದ ಭಾರತೀಯರಿಗೆ ತಲುಪುತ್ತಿಲ್ಲ ಎಂದು ಒಬ್ಬರು ಬೇಸರ ವ್ಯಕ್ತಪಡಿಸಿದರೆ, ಕೆಲವರು ಇಲ್ಲಿ ಅಪಾರ್ಟ್ ಮೆಂಟ್ ಖರೀದಿಸುವ ಬದಲು ನ್ಯೂಯಾರ್ಕ್, ಸಿಂಗಾಪುರ ನಲ್ಲಿ ಅಪಾರ್ಟ್ ಮೆಂಟ್ ಅಥವಾ ದುಬೈ ನಲ್ಲಿ ವಿಲ್ಲಾ ಖರೀದಿಸಬಹುದು ಎಂದು ಸಲಹೆ ನೀಡಿದ್ದಾರೆ. ಹಾಗೇ ಇನ್ನೊಬ್ಬರು ಸಮಸ್ಯೆಗಳ ಗೂಡಾದ ಇಂತಹ ದುಬಾರಿ ಅಪಾರ್ಟ್ ಮೆಂಟ್ ಖರೀದಿಸುವ ಬದಲು ಇದೇ ಹಣದಲ್ಲಿ ಬೇರೆ ಕಡೆ ಸ್ಥಳ ಖರೀದಿಸಿ ಮನೆ ನಿರ್ಮಿಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ.

Continue Reading
Advertisement
Vande Bharath Train
Latest3 mins ago

Vande Bharath Train: ಬೆಂಗಳೂರು-ಮಧುರೈ ʼವಂದೇ ಭಾರತ್ʼ ರೈಲು ಜುಲೈನಿಂದ ಆರಂಭ

Actor Darshan
ಸಿನಿಮಾ9 mins ago

Actor Darshan : ನಟ ದರ್ಶನ್‌ಗಾಗಿ ಊಟ ಬಿಟ್ಟು ಜೈಲಿನ ಹೊರಗೆ ವಿಶೇಷಚೇತನ ಯುವತಿ ಗೋಳಾಟ

cm siddaramaiah price hikes
ಕರ್ನಾಟಕ41 mins ago

CM Siddaramaiah: ₹2000 ಕೊಟ್ಟು ₹4740 ಕಿತ್ತುಕೊಳ್ಳುತ್ತಿರುವ ರಾಜ್ಯ ಸರಕಾರ! ನಿಮ್ಮ ಜೇಬಿಗೆ ಕತ್ತರಿ ಬೀಳುತ್ತಿರುವುದರ ಲೆಕ್ಕ ಇಲ್ಲಿದೆ ನೋಡಿ!

Mohan Yadav
ದೇಶ47 mins ago

Mohan Yadav: ಇನ್ಮುಂದೆ ಶಾಲಾ ಪಠ್ಯದಲ್ಲಿ ಇರಲಿದೆ ‘ತುರ್ತು ಪರಿಸ್ಥಿತಿ’ಯ ಅಧ್ಯಾಯ

Road Accident
ಕ್ರೈಂ58 mins ago

Road Accident : ರೈಲು ಬಡಿದು ವ್ಯಕ್ತಿ ಸಾವು;ನಿಂತಿದ್ದ ಬಸ್‌ಗೆ ಗುದ್ದಿ ಛಿದ್ರಗೊಂಡ ಹೊಸ ಕಾರು

Rohit Sharma
ಕ್ರೀಡೆ1 hour ago

Rohit Sharma : ಇಂಗ್ಲೆಂಡ್​ ಸೋಲಿಸುವ ಯೋಜನೆ ವಿವರಿಸಿದ ನಾಯಕ ರೋಹಿತ್ ಶರ್ಮಾ

Droupadi Murmu
ದೇಶ1 hour ago

Droupadi Murmu: ತುರ್ತು ಪರಿಸ್ಥಿತಿ ಸಂವಿಧಾನದ ಮೇಲೆ ನಡೆದಿರುವ ಅತಿದೊಡ್ಡ ದಾಳಿ; ದ್ರೌಪದಿ ಮುರ್ಮು

IND vs ENG
ಪ್ರಮುಖ ಸುದ್ದಿ1 hour ago

IND vs ENG : ಭಾರತದ ವಿರುದ್ಧ ಹೂಡಲಿರುವ ತಂತ್ರಗಳನ್ನು ವಿವರಿಸಿದ ಇಂಗ್ಲೆಂಡ್ ಕೋಚ್​ ಮ್ಯಾಥ್ಯೂ ಮಾಟ್​

karnataka Rains Effected
ಮಳೆ2 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

Share Market
ವಾಣಿಜ್ಯ2 hours ago

Share Market: ಮೊದಲ ಬಾರಿಗೆ 79,000 ಅಂಕಗಳ ಗಡಿ ದಾಟಿದ ಸೆನ್ಸೆಕ್ಸ್; ಗರಿಷ್ಠ ಮಟ್ಟ ತಲುಪಿದ ನಿಫ್ಟಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rains Effected
ಮಳೆ2 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ3 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ6 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ6 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ7 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 weeks ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 weeks ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 weeks ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

ಟ್ರೆಂಡಿಂಗ್‌