Viral Video: ವೃದ್ಧ ರೋಗಿಯ ಮೇಲೆ ದರ್ಪ ತೋರಿದ ಆಸ್ಪತ್ರೆ ಸಿಬ್ಬಂದಿ; ಆಘಾತಕಾರಿ ವಿಡಿಯೊ - Vistara News

Latest

Viral Video: ವೃದ್ಧ ರೋಗಿಯ ಮೇಲೆ ದರ್ಪ ತೋರಿದ ಆಸ್ಪತ್ರೆ ಸಿಬ್ಬಂದಿ; ಆಘಾತಕಾರಿ ವಿಡಿಯೊ

Viral Video: ಜನರಿಗೆ ಆಸ್ಪತ್ರೆ ಎಂದರೆ ಒಂದು ನಂಬಿಕೆ ಇರುತ್ತದೆ. ಇಲ್ಲಿ ನಮ್ಮ ಆರೋಗ್ಯ ಸಮಸ್ಯೆ ನಿವಾರಣೆಯಾಗಿ ಖುಷಿಯಿಂದ ಮನೆಗೆ ಹೋಗಬಹುದು ಎಂದು. ಆದರೆ ಈಗ ವ್ಯವಸ್ಥೆ ಬದಲಾಗಿದೆ. ಆಸ್ಪತ್ರೆ ಎಂದರೆ ಹೆದರುವ ಕಾಲ ಬಂದಿದೆ. ಇಂತಹದೊಂದು ಘಟನೆ ಇತ್ತೀಚೆಗೆ ನಡೆದಿದೆ.ಆಸ್ಪತ್ರೆಗೆ ದಾಖಲಾದ ವೃದ್ಧ ರೋಗಿಯ ಮೇಲೆ ಆಸ್ಪತ್ರೆಯ ಸಿಬ್ಬಂದಿಯೊಬ್ಬ ಹಲ್ಲೆ ಮಾಡಿದ್ದಾನೆ.. ಈ ದೃಶ್ಯ ಆಸ್ಪತ್ರೆಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನೆಟ್ಟಿಗರು ಈ ಬಗ್ಗೆ ಕಿಡಿಕಾರಿದ್ದಾರೆ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಆಸ್ಪತ್ರೆಗಳೆಂದರೆ ನೋವು, ಸಾವನ್ನು ದೂರ ಮಾಡುವಂತಹ ಸ್ಥಳವೆಂದು ಜನರು ಭಾವಿಸುತ್ತಾರೆ. ಹಾಗಾಗಿ ತಮಗೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇದ್ದರೂ ಅದನ್ನು ಪರಿಹರಿಸಿಕೊಳ್ಳಲು ಜನರು ಆಸ್ಪತ್ರೆಗೆ ಭೇಟಿ ನೀಡುತ್ತಾರೆ. ಆಸ್ಪತ್ರೆಯೊಳಗೆ ಕಾಲಿಟ್ಟಾಗ ಆತಂಕವಿದ್ದರೂ ಕೂಡ ನಮ್ಮ ನೋವು ಇಲ್ಲಿ ದೂರವಾಗುತ್ತದೆ ಎಂಬ ನಂಬಿಕೆ ಇರುತ್ತದೆ. ಆದರೆ ಇಂತಹ ಆಸ್ಪತ್ರೆಗಳಲ್ಲಿ ಜನರನ್ನು ಸರಿಯಾಗಿ ನೋಡಿಕೊಳ್ಳದೆ ಅವರ ನೋವಿನ ಮೇಲೆ ಬರೆ ಎಳೆಯುವಂತಹ ಕೆಲಸ ಮಾಡಿದರೆ ಜನರು ಹೋಗುವುದಾರೂ ಎಲ್ಲಿಗೆ? ಅಂತಹದೊಂದು ಘಟನೆ ಇದೀಗ ಆಸ್ಪತ್ರೆಯೊಂದರಲ್ಲಿ ನಡೆದಿದೆ. ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದ್ದು, ವೈರಲ್ (Viral Video )ಆಗಿದೆ.

ಆಸ್ಪತ್ರೆಗೆ ದಾಖಲಾದ ವೃದ್ಧ ರೋಗಿಯ ಮೇಲೆ ಆಸ್ಪತ್ರೆಯ ಸಿಬ್ಬಂದಿಯೊಬ್ಬ ಹಲ್ಲೆ ಮಾಡಿದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ. ಈ ದೃಶ್ಯ ಆಸ್ಪತ್ರೆಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನೆಟ್ಟಿಗರು ಈ ಬಗ್ಗೆ ಕಿಡಿಕಾರಿದ್ದಾರೆ.

ಈ ವಿಡಿಯೊ ಜೂನ್ 24ರಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಆಗಿದ್ದು, ಜೂನ್ 19ರಂದು ಘಟನೆ ನಡೆದಿರುವುದಾಗಿ ಸಿಸಿಟಿವಿ ದೃಶ್ಯವಾಳಿಗಳು ತೋರಿಸುತ್ತಿದೆ. ಹಾಗಾಗಿ ಆಸ್ಪತ್ರೆಯ ಹೆಸರು, ಸ್ಥಳ ನಿಖರವಾಗಿ ತಿಳಿದುಬಂದಿಲ್ಲ. ಆದರೆ ವಿಡಿಯೊದಲ್ಲಿ ಆಸ್ಪತ್ರೆಯ ಸಮವಸ್ತ್ರ ಧರಿಸಿರುವ ವಯೋವೃದ್ಧ ರೋಗಿ ಒಬ್ಬರು ಹಾಸಿಗೆಯ ಮೇಲೆ ಮಲಗಿದ್ದರು. ಅಲ್ಲಿಗೆ ಪರದೆ ಸರಿಸುತ್ತಾ ಬಂದ ಸಿಬ್ಬಂದಿ ಪರದೆಯನ್ನು ಮುಚ್ಚಿ ಆ ವೃದ್ಧನ ಹೊಟ್ಟೆಗೆ ಮೊಣಕೈಯಿಂದ ಹೊಡೆದಿದ್ದಾರೆ. ನಂತರ ಸಿಸಿಟಿವಿ ಕ್ಯಾಮರಾವನ್ನು ನೋಡಿ ಸ್ಥಳದಿಂದ ಪರಾರಿಯಾಗಿದ್ದಾನೆ. ಆದರೆ ಆ ದುಷ್ಟ ಸಿಬ್ಬಂದಿಯ ಗುರುತು ಪತ್ತೆಯಾಗಿಲ್ಲ.

ಇದನ್ನೂ ಓದಿ:Viral Video: ಶಾಪಿಂಗ್‌ ಮಾಲ್‌ನ ಆಟಿಕೆ ರೈಲು ಪಲ್ಟಿಯಾಗಿ ಬಾಲಕ ಸಾವು

ಆದರೆ ಈ ವಿಡಿಯೊವನ್ನು ಪ್ರೊ. ಸುಧಾಂಶು ತ್ರಿವೇದಿ ಎಂಬುವವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ, “ಜನರು ವೈದ್ಯರಿಗೆ ದೇವರ ಸ್ಥಾನ ನೀಡಿದ್ದಾರೆ. ಆದರೆ ಇಲ್ಲಿ ವೈದ್ಯರು ದೆವ್ವದ ರೂಪದಲ್ಲಿದ್ದಾರೆ ನೋಡಿ” ಎಂದು ಅದಕ್ಕೆ ಶೀರ್ಷಿಕೆ ನೀಡಿದ್ದಾರೆ. ಇದು ಪೋಸ್ಟ್ ಆಗುತ್ತಿದ್ದಂತೆ ಹಲವು ಜನರು ಸಿಬ್ಬಂದಿಯ ಅಮಾನವೀಯ ಕೃತ್ಯದ ವಿರುದ್ಧ ಕಿಡಿಕಾರಿದ್ದಾರೆ. ಮತ್ತು ಇದು ವೈದ್ಯರಲ್ಲ ಆಸ್ಪತ್ರೆ ಸಿಬ್ಬಂದಿ ಇರಬಹುದು ಎಂದು ಕೆಲವರು ಊಹಿಸಿದ್ದಾರೆ. ಹಾಗೇ ಇನ್ನೊಬ್ಬರು ಎಲ್ಲಾ ವೈದ್ಯರು ದೇವರಲ್ಲ, ಅವರಲ್ಲಿ ಕೆಟ್ಟವರಿದ್ದಾರೆ ಎಂದು ತಿಳಿಸಿದ್ದಾರೆ. ಮತ್ತೊಬ್ಬರು ಈ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಮತ್ತು ಅವರನ್ನು ಕೆಲಸದಿಂದ ತೆಗೆಯಬೇಕು. ಅವರು ದೆವ್ವಗಳೆಂದು ಕರೆಸಿಕೊಳ್ಳಲು ಅರ್ಹರು ಎಂದು ಕಿಡಿಕಾರಿದ್ದಾರೆ.ಇನ್ನೂ ಕೆಲವರು ಇದು ವೈದ್ಯರಲ್ಲ, ಸರಿಯಾಗಿ ತಿಳಿಯದೆ ವೈದ್ಯರನ್ನು ನಿಂದಿಸುವುದು ತಪ್ಪಾಗುತ್ತೆ ಎಂದು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Viral Video: ರೀಲ್ಸ್ ಮಾಡಲು ಹೋದ ಹುಡುಗರು; ರೈಲಿನ ಪ್ರಯಾಣಿಕರು ಏನು ಮಾಡಿದರು ನೋಡಿ!

Viral Video: ಕೆಲವೊಮ್ಮೆ ನಾವು ಮಾಡುವ ತಮಾಷೆ ನಮ್ಮ ಪಾಲಿಗೆ ಹೇಗೆ ಉಲ್ಟಾ ಹೊಡೆಯುತ್ತೆ ಎಂಬುದಕ್ಕೆ ಇಲ್ಲೊಂದು ಘಟನೆ ನಿದರ್ಶನವಾಗಿದೆ. ಪಾಕಿಸ್ತಾನದಲ್ಲಿ ಯುವಕರು ಗುಂಪೊಂದು ತಮಾಷೆ ರೀಲ್ ಮಾಡಲು ಕಠಿಣ ಮಾರ್ಗವನ್ನು ಅನುಸರಿಸಿದ್ದಾರೆ. ಚಲಿಸುವ ರೈಲು ಮಧ್ಯದಲ್ಲಿ ಎಲ್ಲೂ ನಿಲ್ಲುವುದಿಲ್ಲ ಎಂದು ಭಾವಿಸಿದ ಯುವಕರು ವೇಗವಾಗಿ ಬರುವ ರೈಲಿಗೆ ನೀರು ಚಿಮ್ಮುವಂತೆ ರೈಲು ಹಳಿ ಹಾದು ಹೋಗುವ ತೊರೆಗೆ ತಮ್ಮ ಬೈಕ್ ಅನ್ನು ಅಡ್ಡಲಾಗಿ ನಿಲ್ಲಿಸಿದ್ದಾರೆ. ಆಗ ಬಂದ ರೈಲಿಗೆ ಆ ನೀರು ಹಾರಿದೆ. ಆದರೆ ಅವರ ತಮಾಷೆ ಅವರಿಗೆ ದುಬಾರಿಯಾಗಿದೆ. ಈ ಸುದ್ದಿ ಓದಿ.

VISTARANEWS.COM


on

Viral Video
Koo

ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಬೇಕೆಂದು ಎಲ್ಲರೂ ಬಯಸುವುದು ಸಹಜ. ಅದಕ್ಕಾಗಿ ರೀಲ್ಸ್‌ಗಳನ್ನು ಮಾಡುತ್ತಾರೆ. ಆದರೆ ನೀವು ಮಾಡುವಂತಹ ರೀಲ್ಸ್ ನಿಮಗೂ ಹಾಗೂ ಬೇರೆಯರಿಗೆ ಹಾನಿ ಮಾಡುವಂತದಾಗಿರಬಾರದು. ಯಾಕೆಂದರೆ ಆಮೇಲೆ ಅದರ ಫಲವನ್ನು ನೀವೇ ಅನುಭವಿಸಬೇಕಾಗುತ್ತದೆ. ಇದಕ್ಕೆ ನಿದರ್ಶನವೆಂಬಂತೆ ಪಾಕಿಸ್ತಾನದಲ್ಲಿ ಇಂತಹದೊಂದು ಘಟನೆ ನಡೆದಿದೆ, ರೀಲ್ ಮಾಡಲು ಹೋಗಿ ಯುವಕರ ಗುಂಪೊಂದು ರಿಯಲ್ ಆಗಿ ಸಾರ್ವಜನಿಕರಿಂದ ಒದೆ ತಿಂದ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video )ಆಗಿದೆ.

ಪಾಕಿಸ್ತಾನದಲ್ಲಿ ಯುವಕರು ಗುಂಪೊಂದು ತಮಾಷೆ ರೀಲ್ ಮಾಡಲು ಕಠಿಣ ಮಾರ್ಗವನ್ನು ಅನುಸರಿಸಿದ್ದಾರೆ. ಚಲಿಸುವ ರೈಲು ಮಧ್ಯದಲ್ಲಿ ಎಲ್ಲೂ ನಿಲ್ಲುವುದಿಲ್ಲ ಎಂದು ಭಾವಿಸಿದ ಯುವಕರು ವೇಗವಾಗಿ ಬರುವ ರೈಲಿಗೆ ನೀರು ಚುಮ್ಮುವಂತೆ ರೈಲು ಹಳಿ ಹಾದು ಹೋಗುವ ತೊರೆಗೆ ತಮ್ಮ ಬೈಕ್ ಅನ್ನು ಅಡ್ಡಲಾಗಿ ನಿಲ್ಲಿಸಿದ್ದಾರೆ. ಆಗ ಬಂದ ರೈಲಿಗೆ ಆ ನೀರು ಹಾರಿದೆ. ಅವರ ತಮಾಷೆ ಅವರಿಗೆ ದುಬಾರಿಯಾಗಿದೆ. ಯಾಕೆಂದರೆ ರೈಲು ಮಧ್ಯದಲ್ಲಿ ನಿಲ್ಲಿಸಿ ಅದರಲ್ಲಿದ್ದ ಪ್ರಯಾಣಿಕರು ಕೋಪಗೊಂಡು ಯುವಕರ ಮೇಲೆ ದಾಳಿ ಮಾಡಿದ್ದಾರೆ.

ವಿಡಿಯೊದಲ್ಲಿ ವೇಗವಾಗಿ ಬರುತ್ತಿರುವ ರೈಲಿಗೆ ಇವರು ತೊರೆಗೆ ಅಡ್ಡಲಾಗಿ ಇಟ್ಟ ಬೈಕಿಂದ ನೀರು ಚಿಮ್ಮುತ್ತಿದೆ. ಆ ವೇಳೆ ರೈಲು ಮಧ್ಯದಲ್ಲೆ ನಿಂತು ಪ್ರಯಾಣಿಕರು ಕೋಪಗೊಂಡು ಯುವಕರನ್ನು ಅಡ್ಡಾಡಿಸಿಕೊಂಡು ಹೊಡೆಯುತ್ತಿರುವುದು ಕಾಣಿಸುತ್ತಿದೆ. ಆಗ ಪರಿಸ್ಥಿತಿ ವಿಕೋಪಕ್ಕೆ ಹೋದ ಕಾರಣ ಪೊಲೀಸರು ಮಧ್ಯ ಪ್ರವೇಶಿಸಿ ಅವರ ಬೈಕ್‌ನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈವರೆಗೆ ಇದಕ್ಕೆ 2.5 ಲಕ್ಷಕ್ಕೂ ಹೆಚ್ಚು ವೀವ್ಸ್ ಬಂದಿದೆ. ಅನೇಕರು ಕಾಮೆಂಟ್ ಕೂಡ ಮಾಡಿದ್ದಾರೆ. ನೆಟ್ಟಿಗರು ಯುವಕರು ರೈಲನ್ನು ಸ್ವಚ್ಛಗೊಳಿಸಲು ಸಹಾಯ ಮಾಡುತ್ತಿದ್ದಾರೆ ಎಂದು ತಮಾಷೆ ಮಾಡಿದ್ದಾರೆ.

Viral Video

ಈ ಘಟನೆ ಗಂಭೀರವಾಗಿದೆಯಾದರೂ ಇಲ್ಲಿಯವೆರೆಗೆ ಪೊಲೀಸರು ಯಾರನ್ನೂ ಬಂಧಿಸಿಲ್ಲ. ಹಾಗಾಗಿ ಇದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ಈ ರೀತಿಯ ಘಟನೆಗಳು ನಿರಂತರವಾಗಿ ನಡೆಯುತ್ತಿದ್ದರೂ ಕೂಡ ಪೊಲೀಸರು ಹಾಗೂ ರೈಲ್ವೆ ಅಧಿಕಾರಿಗಳು ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ ಹಾಗೂ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:  ಒಂಟಿ ಯುವತಿಯ ಮೇಲೆ ದುಷ್ಕರ್ಮಿಯ ದಾಳಿ; ಆಕೆ ಪಾರಾಗಿದ್ದು ಹೇಗೆ?

ಇನ್ನೊಬ್ಬರಿಗೆ ತಮಾಷೆ ಮಾಡುವುದು ಕೆಲವೊಮ್ಮೆ ನಮಗೆ ದುಬಾರಿಯಾಗಬಹುದು ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಪ್ರಯಾಣಿಕರನ್ನು ತಮಾಷೆ ಮಾಡಲು ಹೋದ ಯುವಕರಿಗೆ ಈ ಘಟನೆ ತಕ್ಕ ಪಾಠ ಕಲಿಸಿದೆ. ದುರುದ್ದೇಶವುಳ್ಳ ತಮಾಷೆ ಅನಗತ್ಯ ಸಮಸ್ಯೆಯನ್ನು, ಅಪಾಯವನ್ನು ತಂದೊಡ್ಡುತ್ತದೆ ಎಂಬುದು ಈ ಘಟನೆಯಿಂದ ಎಲ್ಲರಿಗೂ ತಿಳಿದಂತಾಗಿದೆ.

Continue Reading

Latest

Viral Video: ಒಂದು ದಿನದ ಮಟ್ಟಿಗೆ ಈ ಬಾಲಕ ಐಪಿಎಸ್‌ ಅಧಿಕಾರಿ; ಇವನ ಕಥೆ ಕಣ್ಣೀರು ತರಿಸುವಂಥದ್ದು

Viral Video: ಉತ್ತರ ಪ್ರದೇಶದ ವಾರಣಾಸಿಯ 9 ವರ್ಷದ ಬಾಲಕ ರಣವೀರ್ ಭಾರತಿಗೆ ದೊಡ್ಡವನಾದ ಮೇಲೆ ಓದಿ ಐಪಿಎಸ್ ಅಧಿಕಾರಿಯಾಗಬೇಕೆಂಬ ಕನಸಿತ್ತು. ಆದರೆ ಆತ ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿರುವುದರಿಂದ ಐಪಿಎಸ್ ಅಧಿಕಾರಿಯಾಗಲು ಸಾಧ್ಯವಿಲ್ಲ ಎಂಬ ಬೇಸರ ಕಾಡುತ್ತಿತ್ತು.ವಾರಣಾಸಿ ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪಿಯೂಷ್ ಮೊರ್ಡಿಯಾ ಈ ವಿಚಾರ ತಿಳಿದು ಆತನ ಕನಸನ್ನು ನನಸು ಮಾಡಲು ಒಂದು ದಿನದ ಮಟ್ಟಿಗೆ ಐಪಿಎಸ್ ಅಧಿಕಾರಿಯಾಗಲು ಅನುಮತಿ ನೀಡಿದ್ದರು.

VISTARANEWS.COM


on

Viral Video
Koo

ವಾರಣಾಸಿ : ಐಪಿಎಸ್, ಐಎಎಸ್ ಹುದ್ದೆ ಎನ್ನುವುದು ಬಹಳ ದೊಡ್ಡ ಹುದ್ದೆಗಳು. ಹಾಗಾಗಿ ಕೆಲವರು ಐಪಿಎಸ್, ಐಎಎಸ್ ಅಧಿಕಾರಿಯಾಗಬೇಕೆಂದು ಬಯಸುತ್ತಾರೆ. ಆದರೆ ಒಬ್ಬ ಐಪಿಎಸ್, ಐಎಎಸ್ ಆಗಬೇಕೆಂದರೆ ಅವರು ಕಠಿಣ ಶ್ರಮವನ್ನು ಹಾಕಬೇಕಾಗುತ್ತದೆ. ಈ ವೇಳೆ ಅನೇಕ ಸವಾಲುಗಳು ಎದುರಾಗುತ್ತದೆ. ಇವುಗಳನ್ನು ಎದುರಿಸಿ ಐಪಿಎಸ್, ಐಎಎಸ್ ಅಧಿಕಾರಿ ಆಗುವುದು ಸಾಮಾನ್ಯವಾದ ಕೆಲಸವಲ್ಲ. ಆದರೆ 9 ವರ್ಷದ ಬಾಲಕನೊಬ್ಬ ಐಪಿಎಸ್ ಅಧಿಕಾರಿ ಆಗಿದ್ದಾನಂತೆ. ಆತನ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ಉತ್ತರಪ್ರದೇಶದ ವಾರಾಣಾಸಿಯ 9 ವರ್ಷದ ಬಾಲಕ ರಣವೀರ್ ಭಾರತಿಗೆ ದೊಡ್ಡವನಾದ ಮೇಲೆ ಓದಿ ಐಪಿಎಸ್ ಅಧಿಕಾರಿಯಾಗಬೇಕೆಂಬ ಕನಸಿತ್ತು. ಆದರೆ ಆತ ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿರುವುದು ಇತ್ತೀಚೆಗೆ ತಿಳಿದಿದೆ. ಅದಕ್ಕಾಗಿ ಆತ ವಾರಣಾಸಿಯ ಮಹಾಮಾನ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹಾಗಾಗಿ ಆತ ಎಷ್ಟೇ ಪ್ರಯತ್ನಿಸಿದರೂ ಆತನಿಗೆ ಐಪಿಎಸ್ ಅಧಿಕಾರಿಯಾಗಲು ಸಾಧ್ಯವಿಲ್ಲ ಎಂದು ಅರಿತು ಬೇಸರಗೊಂಡಿದ್ದಾನೆ.

Viral Video

ಆದರೆ ವಾರಣಾಸಿ ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪಿಯೂಷ್ ಮೊರ್ಡಿಯಾ ಈ ವಿಚಾರ ತಿಳಿದು ಆತನ ಕನಸನ್ನು ನನಸು ಮಾಡಲು ಒಂದು ದಿನದ ಮಟ್ಟಿಗೆ ಐಪಿಎಸ್ ಅಧಿಕಾರಿಯಾಗಲು ಅನುಮತಿ ನೀಡಿದ್ದಾರೆ. ಹಾಗಾಗಿ ಬಾಲಕ ಖಾಕಿ ಸಮವಸ್ತ್ರ ಧರಿಸಿ ಐಪಿಎಸ್ ಅಧಿಕಾರಿಯ ಸೀಟಿನಲ್ಲಿ ಕುಳಿತುಕೊಂಡು ಅಧಿಕಾರಿಗಳಿಗೆ ಹಸ್ತಲಾಘವ ಮಾಡಿದ್ದಾನೆ.

ಇದಕ್ಕೆ ಸಂಬಂಧಪಟ್ಟ ವಿಡಿಯೊವನ್ನು ಎಡಿಜಿ ವಲಯ ವಾರಣಾಸಿಯ ಅಧಿಕೃತ ಟ್ವೀಟರ್ ಖಾತೆಯಲ್ಲಿ ಜೂನ್ 26ರಂದು ಪೋಸ್ಟ್ ಮಾಡಲಾಗಿದೆ. ಈ ವಿಡಿಯೊ ವೈರಲ್ ಆಗಿದ್ದು, ಬಾಲಕನ ಆಸೆಯನ್ನು ಪೂರ್ತಿ ಮಾಡಿದ ಪೊಲೀಸರ ಕೆಲಸಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪೊಲೀಸ್ ಇಲಾಖೆಯಿಂದ ಇದು ಉತ್ತಮ ಆಲೋಚನೆ ಎಂದು ಹಲವರು ಪೊಲೀಸರಿಗೆ ಧನ್ಯವಾದ ತಿಳಿಸಿದ್ದಾರೆ. ಇನ್ನೊಬ್ಬರು ಇದರಿಂದ ಮಗು ಬಹಳ ಬೇಗನೆ ಚೇತರಿಸಿಕೊಳ್ಳಲು ಸಹಾಯ ಮಾಡುತ್ತದೆ ಎಂದು ತಿಳಿಸಿದ್ದಾರೆ.

Viral Video

ಇದನ್ನೂ ಓದಿ:  ಒಂಟಿ ಯುವತಿಯ ಮೇಲೆ ದುಷ್ಕರ್ಮಿಯ ದಾಳಿ; ಆಕೆ ಪಾರಾಗಿದ್ದು ಹೇಗೆ?

ಪೊಲೀಸರೆಂದರೆ ಕರುಣೆ, ಕನಿಕರ ಇಲ್ಲದವರು, ಎಲ್ಲರ ಮೇಲೆ ದೌರ್ಜನ್ಯ ಎಸಗುತ್ತಾರೆ ಎಂದು ಹಲವರು ಹೇಳುತ್ತಿರುತ್ತಾರೆ. ಆದರೆ ಈ ಘಟನೆಯನ್ನು ನೋಡಿದರೆ ಪೊಲೀಸರಿಗೂ ಒಂದು ಒಳ್ಳೆ ಮನಸ್ಸಿದೆ ಎಂಬುದು ತಿಳಿಯುತ್ತದೆ.

Continue Reading

Latest

Viral Video: ಸಲಿಂಗ ಪ್ರೇಮ ಪ್ರಕರಣ; ಯುವತಿಯನ್ನು ಮೆಚ್ಚಿ ಮದುವೆಯಾದ ಟಿವಿ ನಟಿ!

Viral Video: ಒಂದು ಗಂಡು ಒಂದು ಹೆಣ್ಣು ಹೇಗೋ ಏನೋ ಹೊಂದಿಕೊಂಡು ಬಾಳುವುದು ಕೇಳಿದ್ದೀರಿ. ಆದರೆ ಈಗ ಒಂದು ಹೆಣ್ಣು ಇನ್ನೊಂದು ಹೆಣ್ಣನ್ನು ಪ್ರೀತಿಸುವುದು, ಒಂದು ಗಂಡು ಇನ್ನೊಂದು ಗಂಡನ್ನು ವಿವಾಹ ಆಗುವಂತಹ ಪ್ರಕರಣಗಳು ನಡೆಯುತ್ತಿವೆ. ಇಂಥದ್ದೇ ಒಂದು ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಅಂಜು ಶರ್ಮಾ ಎಂಬ ಯುವತಿ ಫತೇಹಾಬಾದ್‌ನ ಕವಿತಾ ಟಿಪ್ಪು ಎಂಬ ಯುವತಿಯನ್ನು ಮದುವೆಯಾಗಿದ್ದಾರೆ. ಇವರ ಮದುವೆ ವಿಡಿಯೊ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಮದುವೆಗೆ ಇಬ್ಬರ ಕುಟುಂಬಸ್ಥರು ಮೊದಲು ವಿರೋಧ ವ್ಯಕ್ತಪಡಿಸಿದ್ದರು ಆದರೆ ಈಗ ಇಬ್ಬರ ಕುಟುಂಬದವರು ಸಮ್ಮತಿ ನೀಡಿದ ಕಾರಣ ಬಂಧು ಬಳಗದವರ ಸಮ್ಮುಖದಲ್ಲಿ ಗುರುಗ್ರಾಮದ ಮದನಪುರಿ ಪ್ರದೇಶದ ಪಂಚಾಯತ್ ಧರ್ಮಸಾಲೆಯಲ್ಲಿ ಹಸೆಮಣೆ ಏರಿದ್ದಾರೆ ಎನ್ನಲಾಗಿದೆ.

VISTARANEWS.COM


on

Viral Video
Koo

ಗುರುಗ್ರಾಮ: ಸಾಮಾನ್ಯವಾಗಿ ಯುವತಿಯರು ಯುವಕನನ್ನು ಮದುವೆಯಾಗುವುದು ಕೇಳಿದ್ದೀರಿ. ಆದರೆ ಇಲ್ಲೊಬ್ಬ ಯುವತಿ ಯುವತಿಯನ್ನೇ ಇಷ್ಟಪಟ್ಟು ಪ್ರೀತಿಸಿ ಮದುವೆಯಾಗಿದ್ದಾಳಂತೆ. ಸಲಿಂಗ ವಿವಾಹಕ್ಕೆ ಕಾನೂನಿನಲ್ಲಿ ಮಾನ್ಯತೆ ಇಲ್ಲ ಎಂದು ತಿಳಿದರೂ ಕೂಡ ಇವರು ಮದುವೆಯಾಗಿದ್ದು, ಈ ಸುದ್ದಿ ವೈರಲ್ (Viral Video )ಆಗಿದೆ.

ಗುರುಗ್ರಾಮದ ಅಂಜುಶರ್ಮಾ ಅವರು ವರನ ರೂಪದಲ್ಲಿ ಫತೇಹಾಬಾದ್ ನ ಕವಿತಾ ಟಿಪ್ಪು ಅವರನ್ನು ವಧುವಿನ ರೂಪದಲ್ಲಿ ಮದುವೆಯಾಗಿದ್ದಾರೆ. ಇವರ ಮದುವೆ ವಿಡಿಯೊ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ಮದುವೆಗೆ ಇಬ್ಬರ ಕುಟುಂಬಸ್ಥರು ಮೊದಲು ವಿರೋಧ ವ್ಯಕ್ತಪಡಿಸಿದ್ದರು ಆದರೆ ಈಗ ಇಬ್ಬರ ಕುಟುಂಬದವರು ಸಮ್ಮತಿ ನೀಡಿದ ಕಾರಣ ಬಂಧು ಬಳಗದವರ ಸಮ್ಮುಖದಲ್ಲಿ ಗುರುಗ್ರಾಮದ ಮದನಪುರಿ ಪ್ರದೇಶದ ಪಂಚಾಯತ್ ಧರ್ಮಸಾಲೆಯಲ್ಲಿ ಹಸೆಮಣೆ ಏರಿದ್ದಾರೆ ಎನ್ನಲಾಗಿದೆ. ಇವರಲ್ಲಿ ಅಂಜುಶರ್ಮಾ ಪತಿಯಾಗಿ ಕವಿತಾ ಟಿಪ್ಪು ಪತ್ನಿಯಾಗಿ ದಾಂಪತ್ಯ ಜೀವನ ನಡೆಸಲಿದ್ದಾರೆ ಎನ್ನಲಾಗಿದೆ.

ಕವಿತಾ ಅವರಿಗೆ ಪೋಷಕರು ಇರದ ಕಾರಣ ಸೋದರ ಮಾವನ ಆಶ್ರಯದಲ್ಲಿದ್ದರು. ಇವರ ತಂಗಿಗೆ ಮದುವೆಯಾಗಿದೆ. ಅಂಜು ಶರ್ಮಾ ಅವರು ಟಿವಿ ಧಾರಾವಾಹಿ ನಟಿಯಾಗಿದ್ದರು. ಕೋವಿಡ್ ಸಮಯದಲ್ಲಿ ಕಾರ್ಯಕ್ರಮವೊಂದರ ಸಲುವಾಗಿ ಅಂಜು ಶರ್ಮಾ ಅವರಿಗೆ ಮೇಕಪ್ ಮಾಡಲು ಕವಿತಾ ಅವರು ಬಂದಿದ್ದಾರೆ.

ಆ ವೇಳೆ ಇಬ್ಬರೂ ಭೇಟಿಯಾಗಿದ್ದರು. ಮತ್ತು ಅವರಿಬ್ಬರು 22 ದಿನಗಳ ಕಾಲ ಜೊತೆಯಲ್ಲಿ ಇದ್ದರು. ಆ ವೇಳೆ ಅವರಿಬ್ಬರು ಪ್ರೀತಿಸಲು ಶುರುಮಾಡಿದ್ದರು. ಹಾಗಾಗಿ ಮುಂದೆ ಮದುವೆಯಾಗಲು ನಿರ್ಧರಿಸಿ ಇದೀಗ ನಾಲ್ಕು ವರ್ಷಗಳ ಬಳಿಕ ಮದುವೆಯಾಗಿದ್ದಾರೆ. ಈ ಮದುವೆಗೆ ಕವಿತಾ ಸೋದರ ಮಾವ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಈ ಇಬ್ಬರು ದಂಪತಿ ಸಂದರ್ಶನವೊಂದರಲ್ಲಿ ತಮ್ಮ ಪ್ರೇಮಕಥೆಯ ಬಗ್ಗೆ ಹಂಚಿಕೊಂಡಿದ್ದಾರೆ. ಮತ್ತು ತಾವಿಬ್ಬರು ಬಹಳ ಸಂತೋಷವಾಗಿರುವುದಾಗಿ ಹೇಳಿದ್ದಾರೆ. ಅಲ್ಲದೆ ಅವರು ಮಗುವನ್ನು ದತ್ತು ತೆಗೆದುಕೊಳ್ಳಲು ಯೋಜಿಸುತ್ತಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ನೋಡುಗರ ಕಣ್ಮನ ಸೆಳೆಯುತ್ತಿದೆ ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್ ವಿವಾಹ ಆಮಂತ್ರಣ ಪತ್ರಿಕೆ

ಅಕ್ಟೋಬರ್ 2023ರಲ್ಲಿ ಭಾತರದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ ನೇತೃತ್ವದ ಐವರು ನ್ಯಾಯಾಧೀಶರ ಪೀಠವು ಸಲಿಂಗ ವಿವಾಹಗಳನ್ನು ಕಾನೂನು ಬದ್ಧಗೊಳಿಸಲು ಸಾಧ್ಯವಿಲ್ಲ ಮತ್ತು ವಿಶೇಷ ವಿವಾಹ ಕಾಯ್ದೆಯನ್ನು ಬದಲಾಯಿಸಲು ಬಯಸುತ್ತದೆಯೇ ಅಥವಾ ಇಲ್ಲವೇ ಎಂಬ ಜವಾಬ್ದಾರಿಯನ್ನು ಸಂಸತ್ತಿನ ಮೇಲೆ ಹಾಕುತ್ತೇವೆ ಎಂದು ತಿಳಿಸಿದ್ದರು. ಹಾಗಾಗಿ ಈ ವಿಶೇಷ ಮದುವೆಗೂ ಇನ್ನೂ ಕಾನೂನಿನಲ್ಲಿ ಮಾನ್ಯತೆ ಸಿಕ್ಕಿಲ್ಲ. ಈ ನಡುವೆ ಇವರಿಬ್ಬರು ಸಲಿಂಗ ವಿವಾಹವಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದು ಚರ್ಚೆಗೆ ಕಾರಣವಾಗಿದೆ.

Continue Reading

ಸಿನಿಮಾ

Kalki 2898 AD 2: ಶೀಘ್ರದಲ್ಲೇ ಬರಲಿದೆ ಕಲ್ಕಿ 2898ಎಡಿ ಭಾಗ- 2!

2024ರ ಬಹು ನಿರೀಕ್ಷಿತ ಚಿತ್ರ ಕಲ್ಕಿ 2898ಎಡಿ ಭಾರತೀಯ ಚಿತ್ರರಂಗದಲ್ಲಿ ಮೂರನೇ ಅತೀ ದೊಡ್ಡ ಓಪನರ್ ಕಂಡ ಸಿನಿಮಾವಾಗಿ ಹೊರಹೊಮ್ಮಿದ್ದು ಮಾತ್ರವಲ್ಲದೇ ಚಿತ್ರದ ಮುಂದಿನ ಸರಣಿ ಶೀಘ್ರದಲ್ಲೇ ತೆರೆ ಕಾಣುವ ನಿರೀಕ್ಷೆಯನ್ನು ಮೂಡಿಸಿದೆ. ಈ ಬಗ್ಗೆ ಚಿತ್ರ ತಂಡ ಈಗ ಸುಳಿವನ್ನೂ ಕೊಟ್ಟಿದೆ. ಹಾಗಾದರೆ ಕಲ್ಕಿ 2898ಎಡಿ ಭಾಗ- 2 (Kalki 2898 AD 2) ಯಾವಾಗ ಬರಲಿದೆ ಎನ್ನುವ ಕುರಿತು ಚಿತ್ರ ತಂಡ ಹೇಳಿರುವುದೇನು ಎನ್ನುವ ಮಾಹಿತಿ ಇಲ್ಲಿದೆ.

VISTARANEWS.COM


on

By

Kalki 2898 AD 2
Koo

ವಿಶ್ವದಾದ್ಯಂತ (world) ಅದ್ಧೂರಿಯಾಗಿ ಬಿಡುಗಡೆಯಾದ 2024ರ ಬಹು ನಿರೀಕ್ಷಿತ ಚಿತ್ರ ಕಲ್ಕಿ 2898ಎಡಿ (Kalki 2898 AD) ಭಾರತೀಯ ಚಿತ್ರರಂಗದಲ್ಲಿ (Indian cinema) ಮೂರನೇ ಅತೀ ದೊಡ್ಡ ಓಪನರ್ ಕಂಡ ಸಿನಿಮಾವಾಗಿ ಹೊರಹೊಮ್ಮಿದ್ದು ಮಾತ್ರವಲ್ಲದೇ ಚಿತ್ರದ ಮುಂದಿನ ಸರಣಿ (Kalki 2898 AD 2) ಶೀಘ್ರದಲ್ಲೇ ತೆರೆ ಕಾಣುವ ನಿರೀಕ್ಷೆಯನ್ನು ಮೂಡಿಸಿದೆ.

ಕಲ್ಕಿ 2898ಎಡಿ ದೊಡ್ಡ ಪರದೆಯ ಮೇಲೆ ದಾಖಲೆಯನ್ನೇ ಬರೆದಿದೆ. ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಬ್ ಬಚ್ಚನ್ ಮತ್ತು ಕಮಲ್ ಹಾಸನ್ ಸೇರಿದಂತೆ ಬಹುದೊಡ್ಡ ತಾರಾ ಬಳಗವನ್ನೇ ಹೊಂದಿದ್ದು, ಪ್ರೇಕ್ಷಕರಿಂದ ಉತ್ತಮ ವಿಮರ್ಶೆಗಳನ್ನು ಗಳಿಸಿದೆ. ಮಾತ್ರವಲ್ಲದೆ ಇದೀಗ ಚಿತ್ರ ತಂಡ ಪ್ರೇಕ್ಷಕರಿಗೆ ಇನ್ನೊಂದು ಸಿಹಿ ಸುದ್ದಿಯನ್ನೂ ನೀಡಿದೆ.

ಚಿತ್ರದ ಮುಂದುವರಿದ ಭಾಗ ಶೀಘ್ರದಲ್ಲೇ ತೆರೆ ಕಾಣಲಿದೆ ಎಂಬ ಸಂದೇಶದೊಂದಿಗೆ ಕಲ್ಕಿ 2898ಎಡಿ ಚಲನಚಿತ್ರವು ಮುಕ್ತಾಯಗೊಂಡಿರುವುದರಿಂದ 2898ಎಡಿ ಚಿತ್ರ ಭಾಗ 2 ಸಾಕಷ್ಟು ಕುತೂಹಲ ಮೂಡುವಂತೆ ಮಾಡಿದೆ.

ಮಹಾಕಾವ್ಯವನ್ನು ಆಧರಿಸಿದ ಚಿತ್ರವೂ ಸಂಪೂರ್ಣವಾಗಿ ತೆರೆದುಕೊಳ್ಳಲು ಒಂದಕ್ಕಿಂತ ಹೆಚ್ಚು ಕಂತುಗಳ ಅಗತ್ಯವಿದೆ ಎಂದು ನಿರ್ದೇಶಕ ನಾಗ್ ಅಶ್ವಿನ್ ಕೂಡ ದೃಢಪಡಿಸಿದ್ದಾರೆ.

ಕಮಲ್ ಹಾಸನ್ ನಿರ್ವಹಿಸಿರುವ ಅಸಾಧಾರಣ ಪಾತ್ರ ಯಾಸ್ಕಿನ್ ನ ಅಪಾಯಕಾರಿ ಕಾರ್ಯಾಚರಣೆಯೊಂದಿಗೆ ‘ಕಲ್ಕಿ 2898ಎಡಿ ಭಾಗ 2 ಪ್ರಾರಂಭವಾಗುವ ನಿರೀಕ್ಷೆ ಇದೆ. ಚಿತ್ರದ ಮೊದಲ ಭಾಗದಲ್ಲಿ ಕಮಲ್ ಹಾಸನ್ ಅವರ ಚಿಕ್ಕ ಪಾತ್ರವನ್ನು ಮಾತ್ರ ತೋರಿಸಲಾಗಿದೆ. ಅಮಿತಾಬ್ ಬಚ್ಚನ್ ಅಶ್ವತ್ಥಾಮನ ಪಾತ್ರದಲ್ಲಿ, ಪ್ರಭಾಸ್ ಭೈರವ ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಯಾಸ್ಕಿನ್ ಅವರನ್ನು ಹೇಗೆ ಎದುರಿಸಲು ಯೋಜಿಸುತ್ತಾರೆ ಎಂಬುದರ ಸುತ್ತ ಕಥೆ ಕೇಂದ್ರೀಕೃತವಾಗಿದೆ.

ಕಲ್ಕಿ 2898ಎಡಿ ಭಾಗ 2 ಚಿತ್ರ ನಿರ್ಮಾಣಕ್ಕೆ ಮೂರು ವರ್ಷಗಳು ಬೇಕಾಗಬಹುದು ಎಂದು ನಿರೀಕ್ಷಿಸಲಾಗಿದೆ. ಪ್ರಭಾಸ್ ಈ ವಿಭಾಗವನ್ನು ಎರಡು ಭಾಗಗಳಾಗಿ ವಿಂಗಡಿಸುವ ಬಗ್ಗೆ ಸುಳಿವು ನೀಡಿದ್ದಾರೆ. ವಿವಿಧ ಸಂದರ್ಶನಗಳಲ್ಲಿ ತಮ್ಮ ಮುಂದಿನ ಸರಣಿಯ ಬಗ್ಗೆ ಉತ್ಸಾಹವನ್ನು ವ್ಯಕ್ತಪಡಿಸಿದ್ದಾರೆ. ಸುಮಾರು ಮೂರು ವರ್ಷಗಳಲ್ಲಿ ಎರಡನೇ ಕಂತನ್ನು ಅಭಿಮಾನಿಗಳು ಎದುರು ನೋಡಬಹುದು ಎಂದು ನಾಗ್ ಅಶ್ವಿನ್ ಕೂಡ ಖಚಿತಪಡಿಸಿದ್ದಾರೆ.

ಭವ್ಯವಾದ ವೈಜ್ಞಾನಿಕ ಮಹಾಕಾವ್ಯ ‘ಕಲ್ಕಿ 2898ಎಡಿ’ ಚಿತ್ರಮಂದಿರಗಳಿಗೆ ಆಗಮಿಸಿದ್ದು, ಹಿಂದೂ ಧರ್ಮಗ್ರಂಥಗಳಿಂದ ಪ್ರೇರಿತವಾಗಿದೆ. ದುಷ್ಟ ಶಕ್ತಿಗಳ ವಿರುದ್ಧ ಹೋರಾಡಲು ದೈವಿಕ ಜೀವಿಗಳ ಮೂಲವನ್ನು ವಿವರಿಸುವ ಈ ಚಿತ್ರವೂ ಪ್ರೇಕ್ಷಕರನ್ನು ಹಿಡಿದಿಟ್ಟುಕೊಳ್ಳುವ ಕಥಾಹಂದರ, ಉಸಿರುಕಟ್ಟುವ ದೃಶ್ಯವಳಿಗಳು ಮತ್ತು ವಿಶಿಷ್ಟ ಪರಿಕಲ್ಪನೆ ಮಂತ್ರಮುಗ್ಧರನ್ನಾಗಿಸುತ್ತದೆ. ಇದು ಭಾರತೀಯ ಚಿತ್ರರಂಗದಲ್ಲಿ ಒಂದು ಅದ್ಭುತ ಸಾಧನೆಯನ್ನು ಸೂಚಿಸುತ್ತದೆ.

ಈ ಚಿತ್ರವು ಭಾರತದ ‘ಅವೆಂಜರ್ಸ್ ಕ್ಷಣ’. ವೈಜ್ಞಾನಿಕ, ಕಾಲ್ಪನಿಕ ಮತ್ತು ಪುರಾಣದ ಅಂಶಗಳನ್ನು ಅದ್ಭುತವಾಗಿ ಸಂಯೋಜಿಸುತ್ತದೆ. ಚಿತ್ರದ ಸುತ್ತ ಹೆಚ್ಚಿನ ನಿರೀಕ್ಷೆಗಳಿವೆ ಎಂದು ರಾಣಾ ದಗ್ಗುಬಾಟಿ ಅಭಿಪ್ರಾಯ ಪಟ್ಟಿದ್ದಾರೆ.


Sacnilk.com ನ ಅಂದಾಜು ಪ್ರಕಾರ ಚಿತ್ರವು ಆರಂಭದ ದಿನದಂದು 180 ಕೋಟಿ ರೂ. ಗೂ ಅಧಿಕ ಆದಾಯ ಗಳಿಸಿ ಭಾರತೀಯ ಚಿತ್ರರಂಗದಲ್ಲಿ ಮೂರನೇ ಅತೀ ದೊಡ್ಡ ಓಪನರ್ ಆಗುವ ಮೂಲಕ ಬಾಕ್ಸ್ ಆಫೀಸ್‌ನಲ್ಲಿ ಇತಿಹಾಸವನ್ನು ಸೃಷ್ಟಿಸಿದೆ.

ಇಂಡಸ್ಟ್ರಿ ಟ್ರ್ಯಾಕರ್ ಪ್ರಕಾರ, ನಾಗ್ ಅಶ್ವಿನ್ ನಿರ್ದೇಶಿಸಿದ ಕಲ್ಕಿ 2898ಎಡಿ ಎಲ್ಲಾ ಭಾಷೆಗಳಲ್ಲಿ ಮೊದಲ ದಿನದಲ್ಲಿ ಭಾರತದಲ್ಲಿ ಸುಮಾರು 95 ಕೋಟಿ ರೂಪಾಯಿ ಗಳಿಸಿದೆ. ಆದರೆ ಅದರ ಒಟ್ಟು ಸಂಗ್ರಹವು ಸುಮಾರು 115 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: Kalki 2898 AD: ಮೊದಲ ದಿನವೇ ಗಳಿಕೆಯಲ್ಲಿ ದಾಖಲೆ ಬರೆದ ‘ಕಲ್ಕಿ 2898 ಎಡಿ’ ಸಿನಿಮಾ; ಕಲೆಕ್ಷನ್‌ ಎಷ್ಟು?

ಒಟ್ಟಾರೆಯಾಗಿ ಚಿತ್ರವು ಮೊದಲ ದಿನ ವಿಶ್ವದಾದ್ಯಂತ 180 ಕೋಟಿ ರೂ ಗಳಿಸಿದೆ. ಈ ಭಾರಿ ಸಂಗ್ರಹದೊಂದಿಗೆ ಕಲ್ಕಿ 2898 ಎಡಿ ಕೆಜಿಎಫ್ 2 ನ 159 ಕೋಟಿ ರೂ., ಸಲಾರ್ ನ 158 ಕೋಟಿ ರೂ., ಲಿಯೋ ನ 142.75 ಕೋಟಿ ರೂ. ಜಾಗತಿಕ ಆರಂಭಿಕ ದಾಖಲೆಗಳನ್ನು ಹಿಂದಿಕ್ಕಿದೆ.

ಸಾಹೂ 130 ಕೋಟಿ ರೂ., ಜವಾನ್ 129 ಕೋಟಿ ರೂ., ಆರ್ ಆರ್ ಆರ್ ಇನ್ನೂ 223 ಕೋಟಿ ರೂ. ಕಲೆಕ್ಷನ್‌ಗಳೊಂದಿಗೆ ಅತೀ ಹೆಚ್ಚು ಭಾರತೀಯ ಓಪನರ್ ಆಗಿ ಉಳಿದಿದೆ. ಬಾಹುಬಲಿ 2 ತನ್ನ ಆರಂಭಿಕ ದಿನದಲ್ಲಿ 217 ಕೋಟಿ ರೂ. ಗಳಿಸಿತು.

Continue Reading
Advertisement
Monsoon Footwear Fashion
ಫ್ಯಾಷನ್1 min ago

Monsoon Footwear Fashion: ಮಳೆಗಾಲಕ್ಕೆ ತಕ್ಕಂತೆ ಬದಲಾಗುವ ಫುಟ್‌ವೇರ್‌ ಸ್ಟೈಲಿಂಗ್‌

Narayana Health City Performs 300 Robotic Knee Replacements in Six Months
ಬೆಂಗಳೂರು5 mins ago

Narayana Health: ನಾರಾಯಣ ಹೆಲ್ತ್ ಸಿಟಿಯಲ್ಲಿ 6 ತಿಂಗಳಲ್ಲಿ 300 ರೊಬೊಟಿಕ್ ಮೊಣಕಾಲಿನ ಶಸ್ತ್ರಚಿಕಿತ್ಸೆಗಳು

Post Office
ಪ್ರಮುಖ ಸುದ್ದಿ7 mins ago

Post Office: ಪೋಸ್ಟ್‌ ಆಫೀಸ್‌ ಉಳಿತಾಯ ಯೋಜನೆಗಳ ಬಡ್ಡಿದರ ಬದಲಾವಣೆ ಇಲ್ಲ; ಬಡ್ಡಿಯ ಪಟ್ಟಿ ಇಲ್ಲಿದೆ

Congress government
ಕರ್ನಾಟಕ13 mins ago

Congress government: ಕೈ ಶಾಸಕರಿಂದಲೇ ರಾಜ್ಯ ಸರ್ಕಾರ ಪತನವಾಗಲಿದೆ ಎಂದ ಆರ್.ಅಶೋಕ್‌

BS Yediyurappa
ಪ್ರಮುಖ ಸುದ್ದಿ58 mins ago

BS Yediyurappa: ಪೋಕ್ಸೊ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್‌ವೈಗೆ ಮಧ್ಯಂತರ ಜಾಮೀನು ವಿಸ್ತರಣೆ

karnataka Weather Forecast
ಮಳೆ60 mins ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

Viral Video
Latest1 hour ago

Viral Video: ರೀಲ್ಸ್ ಮಾಡಲು ಹೋದ ಹುಡುಗರು; ರೈಲಿನ ಪ್ರಯಾಣಿಕರು ಏನು ಮಾಡಿದರು ನೋಡಿ!

Viral Video
Latest1 hour ago

Viral Video: ಒಂದು ದಿನದ ಮಟ್ಟಿಗೆ ಈ ಬಾಲಕ ಐಪಿಎಸ್‌ ಅಧಿಕಾರಿ; ಇವನ ಕಥೆ ಕಣ್ಣೀರು ತರಿಸುವಂಥದ್ದು

DCET 2024
ಬೆಂಗಳೂರು1 hour ago

DCET 2024 : ಡಿಸಿಇಟಿಯಲ್ಲಿ ರ‍್ಯಾಂಕ್‌ ಪಡೆದ ವಿಕಲ ಚೇತನರಿಗೆ ಜುಲೈ 1ರಂದು ವೈದ್ಯಕೀಯ ತಪಾಸಣೆ

Government Guarantee Schemes Progress Review Meeting at Karatagi
ಕೊಪ್ಪಳ1 hour ago

Koppala News: ಕಾರಟಗಿಯಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ60 mins ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ8 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು1 day ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

ಟ್ರೆಂಡಿಂಗ್‌