Viral Video: ತಲೆಕೂದಲಿನಲ್ಲಿ ಟೀಪಾಟ್ ತಯಾರಿಸಿ ಅದರಿಂದ ನೀರು ಕುಡಿದ ಕೇಶ ವಿನ್ಯಾಸಕಿ! - Vistara News

Latest

Viral Video: ತಲೆಕೂದಲಿನಲ್ಲಿ ಟೀಪಾಟ್ ತಯಾರಿಸಿ ಅದರಿಂದ ನೀರು ಕುಡಿದ ಕೇಶ ವಿನ್ಯಾಸಕಿ!

Viral Video: ತಲೆಯಲ್ಲಿ ಕೂದಲಿದ್ದರೆ ನಾನಾ ರೀತಿಯ ಹೇರ್‌ಸ್ಟೈಲ್‌ ಮಾಡಬಹುದು ಎಂಬುದಕ್ಕೆ ಇಲ್ಲೊಂದು ವಿಡಿಯೊ ಸಾಕ್ಷಿಯಾಗಿದೆ! ಈಗ ಉಡುಪಿಗೆ ತಕ್ಕ ಹಾಗೇ ಹೊಸ ಬಗೆಯ ಹೇರ್‌ಸ್ಟೈಲ್‌ ಮಾಡುವ ಕಾಲವಿದು. ಇರಾನಿನ ಕೇಶ ವಿನ್ಯಾಸಕಿ ಸೈದೇಹ್ ಅರಿಯಾಯಿ ತಮ್ಮ ಮಾಡೆಲ್ ಸಬುರ್ ನಗರ್ ಅವರ ಕೂದಲನ್ನು ‘ಟೀಪಾಟ್’ ಆಕಾರದಲ್ಲಿ ವಿನ್ಯಾಸಗೊಳಿಸಿದ್ದು, ಈ ವೀಡಿಯೊವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಇದರಲ್ಲಿ ‘ಟೀಪಾಟ್’ ಆಕಾರದಲ್ಲಿ ವಿನ್ಯಾಸವನ್ನು ಯಾವ ರೀತಿಯಲ್ಲಿ ಮಾಡಿದರು ಎಂಬುದನ್ನು ಹಂತ ಹಂತವಾಗಿ ತೋರಿಸಿದ್ದಾರೆ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹುಡುಗಿಯರು ಯಾವುದೇ ಕಾರ್ಯಕ್ರಮಕ್ಕೆ ಹೋಗುವಾಗ ಬ್ಯೂಟಿ ಪಾರ್ಲರ್‌ಗೆ ಹೋಗಿ ವಿವಿಧ ರೀತಿಯ ಸ್ಟೈಲಿಶ್ ಆಗಿರುವಂತಹ ಕೇಶ ವಿನ್ಯಾಸಗಳನ್ನು ಮಾಡಿಸಿಕೊಳ್ಳುತ್ತಾರೆ. ಇತ್ತೀಚಿನ ದಿನಗಳಲ್ಲಿ ಹಲವು ರೀತಿಯ ಆಕರ್ಷಕವಾದ ಕೇಶ ವಿನ್ಯಾಸಗಳನ್ನು ನಾವು ಕಾಣಬಹುದು. ಆದರೆ ಇರಾನಿನ ಕೇಶ ವಿನ್ಯಾಸಕಿಯೊಬ್ಬರು ತನ್ನ ವಿಭಿನ್ನವಾದ ಕೇಶ ವಿನ್ಯಾಸವನ್ನು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದು, ಅದು ವೈರಲ್ (Viral Video )ಆಗಿದೆ.

ಇತ್ತೀಚೆಗೆ, ಇರಾನಿನ ಕೇಶ ವಿನ್ಯಾಸಕಿ ಸೈದೇಹ್ ಅರಿಯಾಯಿ ತಮ್ಮ ಮಾಡೆಲ್ ಸಬುರ್ ನಗರ್ ಅವರ ಕೂದಲನ್ನು ‘ಟೀಪಾಟ್’ ಆಕಾರದಲ್ಲಿ ವಿನ್ಯಾಸಗೊಳಿಸಿದ್ದು, ಈ ವೀಡಿಯೊವನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಇದರಲ್ಲಿ ‘ಟೀಪಾಟ್’ ಆಕಾರದಲ್ಲಿ ವಿನ್ಯಾಸವನ್ನು ಯಾವ ರೀತಿಯಲ್ಲಿ ಮಾಡಿದರು ಎಂಬುದನ್ನು ಹಂತ ಹಂತವಾಗಿ ತೋರಿಸಿದ್ದಾರೆ.

ವಿಡಿಯೊದಲ್ಲಿ ಕೇಶ ವಿನ್ಯಾಸಕಿ ಮಾಡೆಲ್ ಕೂದಲನ್ನು ಎಲ್ಲಾ ಒಟ್ಟಿಗೆ ಸೇರಿಸಿ ಎತ್ತರದಲ್ಲಿ ಹೇರ್ ಬ್ಯಾಂಡ್ ಹಾಕಿ ಕಟ್ಟಿದ್ದಾರೆ. ನಂತರ ಟೀ ಪಾಟ್ ಆಕಾರದಲ್ಲಿ ತಂತಿಗಳನ್ನು ಸಿದ್ಧಪಡಿಸಿ ಅದನ್ನು ಆಕೆಯ ನೆತ್ತಿಯ ಮೇಲೆ ಗಮ್ ಹಾಕಿ ಅಂಟಿಸಿದ್ದಾರೆ. ಇಲ್ಲಿ ಅವರು ಬ್ಯಾಕ್ಕೋಂಬಿಂಗ್ ತಂತ್ರವನ್ನು ಬಳಸುವುದನ್ನು ಕಾಣಬಹುದು. ನಂತರ, ಅವರು ಹೇರ್ ಸ್ಪ್ರೇ ಸಹಾಯದಿಂದ ಟೀಪಾಟ್ ಗೆ ಮೆಟಾಲಿಕ್ ಫ್ರೇಮ್ ಸುತ್ತಿದ್ದಾರೆ, ನಂತರ ಕೂದಲಿನಿಂದ ಜಡೆ ಹಾಕಿ ಅದನ್ನು ಟೀ ಪಾಟ್ ಸುತ್ತಲೂ ಸುತ್ತಿದ್ದಾರೆ. ಆದರೆ ಇದರಲ್ಲಿ ಆಶ್ಚರ್ಯವೆನೆಂದರೆ ಹೇರ್ ಸ್ಟೈಲ್ ಟೀಪಾಟ್ ನಲ್ಲಿ ನೀರನ್ನು ತುಂಬಿಸಿ ಅದರಿಂದ ಒಂದು ಕಪ್ ನೀರನ್ನು ತೆಗೆದು ಕುಡಿದಿದ್ದಾರೆ.

ಈ ಕೇಶ ವಿನ್ಯಾಸ ಮಾಡಲು ಅವರಿಗೆ ಹಲವು ಗಂಟೆಗಳ ಸಮಯ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಈ ವಿಡಿಯೊಗೆ ಈಗಾಗಲೇ 4 ಮಿಲಿಯನ್ ವೀವ್ಸ್ ಬಂದಿದೆ. ಇದಕ್ಕೆ ಅನೇಕರು ಪ್ರತಿಕ್ರಿಯೆ ನೀಡಿದ್ದು, ಕೆಲವರು ಇದು ಟೈಮ್ ವೇಸ್ಟ್ ಎಂದು ಹೇಳಿದರೆ ಕೆಲವರು ಅವರ ಕೆಲಸಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ನಡುರಸ್ತೆಯಲ್ಲೇ ಕಳ್ಳರು ಬ್ಯಾಗ್‌ ಕಸಿದು ಓಡುತ್ತಾರೆ! ಪೋಲಿಸ್ರು ಏನ್‌ ಮಾಡ್ತಿದ್ದಾರೋ!

ಈ ವಿಡಿಯೊದ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಕೇಶ ವಿನ್ಯಾಸಕಿ ಸೈದೇಹ್ ಅರಿಯಾಯಿ ತನಗೆ ಏನಾದರೂ ನೈಸರ್ಗಿಕವಾದುದನ್ನು ಮಾಡಬೇಕೆನಿಸುತ್ತು. ಹಾಗಾಗಿ ಟೀ ಪಾಟ್ ಮಾಡುವ ನಿರ್ಧಾರ ಮಾಡಿದೆ. ಇದಕ್ಕೆ ತನ್ನ ಮಾಡೆಲ್ ಸಬುರ್ ನಗರ್ ಸಹಾಯ ಮಾಡಿದರು. ಅವರಿಬ್ಬರ ಎರಡು ದಿನದ ಪ್ರಯತ್ನದಿಂದ ಉತ್ತಮ ಫಲಿತಾಂಶ ಸಿಕ್ಕಿದೆ ಎಂದು ಶೀರ್ಷಿಕೆ ಬರೆದಿದ್ದಾರೆ. ಸೈದೇಹ್ ಅರಿಯಾಯಿ ಇನ್‌ಸ್ಟಾಗ್ರಾಂನಲ್ಲಿ 1 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಗಳನ್ನು ಹೊಂದಿದ್ದಾರೆ ಮತ್ತು ಇಂತಹ ಕೇಶವಿನ್ಯಾಸವನ್ನು ಮಾಡುವಲ್ಲಿ ಹೆಸರುವಾಸಿಯಾಗಿದ್ದಾರೆ ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Deepika Padukone: 1.92 ಲಕ್ಷ ರೂ. ಬೆಲೆಯ ʼಹುಕುಮ್‌ ಕಿ ರಾಣಿʼ ಸೀರೆಯಲ್ಲಿ ಮಿಂಚಿದ ದೀಪಿಕಾ ಪಡುಕೋಣೆ!

Deepika Padukone: ತಾಯ್ತನ ಎನ್ನುವುದು ಹೆಣ್ಣಿಗೆ ಒಂದು ಸಂಭ್ರಮ. ನಟಿ ದೀಪಿಕಾ ಪಡುಕೋಣೆ ಕೂಡ ಈಗ ಆ ಸಂಭ್ರಮದಲ್ಲಿ ತೇಲುತ್ತಿದ್ದಾರೆ. ಈಗಾಗಲೇ ತಮ್ಮ ಬೇಬಿ ಬಂಪ್ ತೋರಿಸಿ ಸಖತ್ ಸುದ್ದಿಯಲ್ಲಿರುವ ದೀಪಿಕಾ ಈಗ ರಾಧಿಕಾ ಮರ್ಚೆಂಟ್ ಮತ್ತು ಅನಂತ್ ಅಂಬಾನಿ ಅವರ ಸಂಗೀತ ಸಮಾರಂಭದಲ್ಲಿ ವಿಶೇಷವಾದ ಸೀರೆಯೊಂದನ್ನು ಧರಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.ತೋರಣಿಯ ಹುಕುಮ್ ಕಿ ರಾಣಿ ಸೀರೆಯಲ್ಲಿ ಸಖತ್ ಆಗಿ ಕಂಗೊಳಿಸಿದ್ದಾರೆ. ಈ ಸೀರೆಯ ವಿಶೇಷತೆ ಏನೆಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Deepika Padukone
Koo

ಮುಂಬೈ : ಸಿನಿಮಾ ತಾರೆಯರು ಹಾಗೂ ಪ್ರಸಿದ್ಧ ಶ್ರೀಮಂತ ಕುಟುಂಬದವರು ಯಾವುದೇ ವಸ್ತುಗಳನ್ನು ಧರಿಸಿದರೂ ಅದು ಹೆಚ್ಚು ಸುದ್ದಿಯಾಗುತ್ತದೆ. ಅದರಲ್ಲೂ ಬಾಲಿವುಡ್ ನಟಿಯರು ತೊಡುವ ಸೀರೆ, ಫ್ಯಾಶನ್ ಡ್ರೆಸ್‌ಗಳು ಹೆಚ್ಚು ಜನರ ಗಮನವನ್ನು ಸೆಳೆಯುತ್ತದೆ. ಇದೀಗ ನಟಿ ದೀಪಿಕಾ ಪಡುಕೋಣೆ(Deepika Padukone )ಯವರ ಸೀರೆಯೊಂದು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಸದ್ದು ಮಾಡುತ್ತಿದೆ.

ತಾಯಿಯಾಗುವ ಸಂಭ್ರಮದಲ್ಲಿರುವ ನಟಿ ದೀಪಿಕಾ ಪಡುಕೋಣೆ ತನ್ನ ಬೇಬಿ ಬಂಪ್ ಅನ್ನು ತುಂಬಾ ವಿಶೇಷವಾದ ಲುಕ್‌ನಲ್ಲಿ ತೋರಿಸಲು ಪ್ರಾರಂಭಿಸಿದ್ದಾರೆ. ಹಾಗೇ ಗರ್ಭಿಣಿಯರು ತಮ್ಮ ಬೇಬಿ ಬಂಪ್‌ನಲ್ಲಿ ಯಾವ ರೀತಿ ಫ್ಯಾಷನ್ ಡ್ರೆಸ್ ಧರಿಸಬಹುದು ಎಂದು ತೋರಿಸಿಕೊಡುತ್ತಿದ್ದಾರೆ.

ಇತ್ತೀಚೆಗೆ ರಾಧಿಕಾ ಮರ್ಚೆಂಟ್ ಮತ್ತು ಅನಂತ್ ಅಂಬಾನಿ ಅವರ ಸಂಗೀತ ಸಮಾರಂಭಕ್ಕಾಗಿ ಅವರು ಧರಿಸಿದ ಸೀರೆ ಅನೇಕರನ್ನು ಆಕರ್ಷಿಸಿದೆ. ದೀಪಿಕಾ ಪಡುಕೋಣೆ ಸೊಗಸಾದ ತೋರಣಿ ಸೀರೆಯಲ್ಲಿ ಸಖತ್‌ ಆಗಿ ಕಾಣಿಸಿಕೊಂಡಿದ್ದಾರೆ.

ಈ ಕಾರ್ಯಕ್ರಮದಲ್ಲಿ ನಟಿ ದೀಪಿಕಾ ಪಡುಕೋಣೆಯವರು ತೋರಣಿಯ ‘ಹುಕುಮ್‌ ಕಿ ರಾಣಿ’ ಸೀರೆಯನ್ನು ಧರಿಸಿದ್ದರು, ಇದರ ಬೆಲೆ 1.92 ಲಕ್ಷ ರೂ.ಗಳಾಗಿವೆ. ಈ ಸೀರೆ ಸಮಕಾಲೀನ ವಿನ್ಯಾಸದೊಂದಿಗೆ ಐಷಾರಾಮಿ ಮತ್ತು ಸಾಂಪ್ರದಾಯಿಕ ಸೌಂದರ್ಯವನ್ನು ಒಳಗೊಂಡಿದೆ ಎನ್ನಲಾಗಿದೆ. ನಟಿ ದೀಪಿಕಾ ಅವರು ನೇರಳೆ ಬಣ್ಣದಲ್ಲಿ ವಿನ್ಯಾಸಗೊಳಿಸಲಾದ ಸೀರೆಯನ್ನು ಧರಿಸಿದ್ದು, ಸೆರಗಿನ ಮೇಲಿನ ಫ್ರೇಮಿಂಗ್ ಅನ್ನು ಸುಚಾ ಜರ್ದೋಜ್‌ನಲ್ಲಿ ರಚಿಸಲಾಗಿದೆ. ಮತ್ತು ಕೈ ಕಸೂತಿ ಡೋರಿಯಾ ಕೂಡ ಎಲ್ಲರ ಕಣ್ಮನ ಸೆಳೆಯುವಂತಿದೆ.

ಬ್ರಾಂಡ್ ಪ್ರಕಾರ, ಇದರೊಂದಿಗೆ ಬರುವ ರವಿಕೆಯು ಸಾಂಪ್ರದಾಯಿಕ ರಜಪೂತಾನಾ ಚನಿಯಾ ಚೋಲಿಯಿಂದ ಸ್ಫೂರ್ತಿ ಪಡೆದಿದೆ. ಆದರೆ ಸುಚಾ ಜರ್ದೋಜ್ ಮತ್ತು ಶುದ್ಧ ಮೋಟಿಯಾ ಕೈಯಿಂದ ನೇಯ್ದ ಟ್ಯಾಸೆಲ್‌ಗಳಲ್ಲಿನ ಚಿಡಿ ವಿನ್ಯಾಸಗಳು ಸುಂದರವಾಗಿದೆ. ದೀಪಿಕಾ ಅವರು ಈ ಸೊಗಸಾದ ಸೀರೆಗೆ ಸರಿ ಹೊಂದುವಂತಹ ಆಭರಣಗಳನ್ನು ಧರಿಸಿದ್ದು, ಅವರ ನೋಟವನ್ನು ಮತ್ತಷ್ಟು ಹೆಚ್ಚಿಸಿದೆ. ಕಿವಿಯೋಲೆಗಳು ಮತ್ತು ಚೋಕರ್ ಸೇರಿದಂತೆ ಅವರು ಧರಿಸಿದ ಆಭರಣ ಆ ಸೀರೆಯ ವಿನ್ಯಾಸಗಳಿಗೆ ಸಖತ್‌ ಮ್ಯಾಚಿಂಗ್‌ ಆಗಿದೆ.

ಭದ್ರ ಸಂಜಲಿ ಎಂಬ ಹೆಸರಿನ ಸೀರೆಯು ತೋರಣಿ ಕ್ಲಾಸಿಕ್ಸ್‌ನ ಒಂದು ಭಾಗವಾಗಿದೆ. ಭದ್ರ ಸಂಜಲಿ ಸೀರೆಯು ಸುಂದರವಾದ ಕಸೂತಿಯಿಂದ ಅಲಂಕರಿಸಲ್ಪಟ್ಟಿದೆ. ಸಂಗೀತ ಸಮಾರಂಭದಂತಹ ಭವ್ಯವಾದ ಆಚರಣೆಗಳಿಗೆ ಇದು ಪರಿಪೂರ್ಣವಾಗಿ ಹೊಂದಿಕೊಳ್ಳುತ್ತದೆ. ಸೀರೆಯ ಮೇಲಿನ ವಿನ್ಯಾಸಗಳು ಕರಣ್ ತೋರಣಿಯವರ ವಿನ್ಯಾಸಗಳ ವಿಶಿಷ್ಟ ಲಕ್ಷಣವನ್ನು ಮತ್ತು ಕುಶಲಕರ್ಮಿಗಳ ಪ್ರಯತ್ನಗಳನ್ನು ಪ್ರತಿಬಿಂಬಿಸುತ್ತದೆ ಎನ್ನಲಾಗಿದೆ. ಭಾರತದ ಸಂಪ್ರದಾಯದ ಸೌಂದರ್ಯವನ್ನು ಎತ್ತಿ ತೋರಿಸುವಲ್ಲಿ ಹೆಸರುವಾಸಿಯಾದ ಕರಣ್ ತೋರಣಿ ಅವರು ಭದ್ರ ಸಂಜಲಿ ಸೀರೆಯೊಂದಿಗೆ ಮತ್ತೊಮ್ಮೆ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ.

ಇದನ್ನೂ ಓದಿ: ಸ್ವಾಗತಿಸಲು ಖುಷಿಯಿಂದ ಕಾಯುತ್ತಿದ್ದ ಕಪ್ಪು ವರ್ಣದ ಮಹಿಳೆಗೆ ಜೋ ಬೈಡನ್ ಅವಮಾನ; ನಾಚಿಕೆಯಾಗಬೇಕು ಅಮೆರಿಕಕ್ಕೆ!

ಆದರೆ ಈ ಸೀರೆಯನ್ನು ತಯಾರು ಮಾಡಲು ಸುಮಾರು 3400 ಗಂಟೆಗಳಿಗಿಂತ ಹೆಚ್ಚು ಸಮಯ ತೆಗೆದುಕೊಂಡಿತು ಎನ್ನಲಾಗಿದೆ. 16ನೇ ಶತಮಾನದ ಹೈದರಾಬಾದ್‌ನ ಚೌ ಮೊಹಲ್ಲಾ ಅರಮನೆಯಿಂದ ಇದು ಸ್ಫೂರ್ತಿ ಪಡೆದಿದೆ.

Continue Reading

Latest

Viral Video: ಸ್ವಾಗತಿಸಲು ಖುಷಿಯಿಂದ ಕಾಯುತ್ತಿದ್ದ ಕಪ್ಪು ವರ್ಣದ ಮಹಿಳೆಗೆ ಜೋ ಬೈಡನ್ ಅವಮಾನ; ನಾಚಿಕೆಯಾಗಬೇಕು ಅಮೆರಿಕಕ್ಕೆ!

Viral Video: ವಿಸ್ಕಾನ್ಸಿನ್‍ನ ಮ್ಯಾಡಿಸನ್‍ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬೆಂಬಲಿಗರನ್ನುದ್ದೇಶಿಸಿ ಮಾತನಾಡಿದ ಯುಎಸ್ ಅಧ್ಯಕ್ಷ ಜೋ ಬೈಡನ್ ಜನರನ್ನು ಭೇಟಿ ಮಾಡಲು ಮುಂದಾಗಿದ್ದಾರೆ. ಆ ವೇಳೆ ಅಲ್ಲಿ ಇವರಿಗಾಗಿ ಕಾತುರದಿಂದ ಕಾಯುತ್ತಿದ್ದ ಕಪ್ಪು ವರ್ಣದ ಅಮೆರಿಕನ್ ಮಹಿಳೆಯನ್ನು ಅವರು ನಿರ್ಲಕ್ಷ್ಯ ಮಾಡಿದ್ದಾರೆ. ಡೊನಾಲ್ಡ್ ಟ್ರಂಪ್ ವಿರುದ್ಧದ ಚರ್ಚೆಯ ನಂತರ ರಿಪಬ್ಲಿಕನ್ನರು ಈ ವಿಡಿಯೊವನ್ನು ಬಳಸಿಕೊಂಡು ಇದೀಗ ಜೋ ಬೈಡನ್ ವಿರುದ್ಧ ವಾಗ್ದಾಳಿ ನಡೆಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಈ ವಿಡಿಯೊ ನೋಡಿದರೆ ಆ ಯುವತಿಯ ಕುರಿತು ಕನಿಕರ ಬರುತ್ತದೆ.

VISTARANEWS.COM


on

Viral Video
Koo

ಕೆಲವೊಂದು ದೇಶಗಳಲ್ಲಿ ಕಪ್ಪು ವರ್ಣದ ಜನರನ್ನು ಕಡೆಗಣಿಸುತ್ತಾರೆ. ಈ ಬಗ್ಗೆ ಅನೇಕರು ಹೋರಾಟ ನಡೆಸಿದರೂ ಕೂಡ ಕಪ್ಪು ಮತ್ತು ಬಿಳಿ ಮನುಷ್ಯರ ನಡುವಿನ ತಾರತಮ್ಯ ನಿಂತಿಲ್ಲ. ಅದರಲ್ಲೂ ಎಲ್ಲರಿಗೂ ಮಾದರಿಯಾಗಬೇಕಾಗಿದ್ದ ದೇಶದ ದೊಡ್ಡ ದೊಡ್ಡ ವ್ಯಕ್ತಿಗಳೇ ಇಂತಹ ತಾರತಮ್ಯ ಮಾಡುತ್ತಿರುವುದು ನಿಜವಾಗಲೂ ಬೇಸರದ ವಿಚಾರವೇ ಸರಿ. ಅಮೆರಿಕದಲ್ಲಂತೂ ಇಂತಹ ಘಟನೆಗಳು ಹೆಚ್ಚು ನಡೆಯುತ್ತಿರುತ್ತದೆ. ಇದೀಗ ಯುಎಸ್ ಅಧ್ಯಕ್ಷ ಜೋ ಬೈಡನ್ ಕಪ್ಪು ವರ್ಣದ ಅಮೆರಿಕನ್ ಮಹಿಳೆಯನ್ನು ನಿರ್ಲಕ್ಷಿಸಿದ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್(Viral Video) ಆಗಿದೆ. ಇದು ಚರ್ಚೆಗೆ ಕಾರಣವಾಗಿದೆ.

ವಿಸ್ಕಾನ್ಸಿನ್‍ನ ಮ್ಯಾಡಿಸನ್‍ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬೆಂಬಲಿಗರನ್ನುದ್ದೇಶಿಸಿ ಮಾತನಾಡಿದ ಯುಎಸ್ ಅಧ್ಯಕ್ಷ ಜೋ ಬೈಡನ್ ಜನರನ್ನು ಭೇಟಿ ಮಾಡಲು ಮುಂದಾಗಿದ್ದಾರೆ. ಆ ವೇಳೆ ಅಲ್ಲಿ ಇವರಿಗಾಗಿ ಕಾತುರದಿಂದ ಕಾಯುತ್ತಿದ್ದ ಕಪ್ಪು ವರ್ಣದ ಅಮೆರಿಕನ್ ಮಹಿಳೆಯನ್ನು ಅವರು ನಿರ್ಲಕ್ಷ್ಯ ಮಾಡಿದ್ದಾರೆ. ಡೊನಾಲ್ಡ್ ಟ್ರಂಪ್ ವಿರುದ್ಧದ ಚರ್ಚೆಯ ನಂತರ ರಿಪಬ್ಲಿಕನ್ನರು ಈ ವಿಡಿಯೊವನ್ನು ಬಳಸಿಕೊಂಡು ಇದೀಗ ಜೋ ಬೈಡನ್ ವಿರುದ್ಧ ವಾಗ್ದಾಳಿ ನಡೆಸಲು ಮುಂದಾಗಿದ್ದಾರೆ ಎನ್ನಲಾಗಿದೆ.

ಈ ವಿಡಿಯೊದಲ್ಲಿ, ಕಪ್ಪು ಅಮೆರಿಕನ್ ಯುವತಿ ಕೈಯಲ್ಲಿ ಬೈಡನ್‌-ಹ್ಯಾರಿಸ್ ಬೋರ್ಡ್‌ ಹಿಡಿದು ಬೈಡನ್ ಅವರನ್ನು ಸ್ವಾಗತಿಸಲು ಆ ಮಹಿಳೆ ಕಾಯುತ್ತಿದ್ದಳು. ಆದರೆ ಯುಎಸ್ ಅಧ್ಯಕ್ಷ ಬೈಡನ್ ಮಹಿಳೆಯನ್ನು ಕಡೆಗಣಿಸಿದ್ದಾರೆ. ಆಕೆಯ ಮೊದಲು ನಿಂತಿದ್ದ ಬಿಳಿ ವರ್ಣದ ಮಹಿಳೆಯರನ್ನು ಹಗ್ ಮಾಡಿದ ಅವರು ಆಕೆಯನ್ನು ಬಿಟ್ಟು ಆಕೆಯ ನಂತರ ನಿಂತ ಬಿಳಿ ವರ್ಣದ ಮತ್ತೊಬ್ಬ ಮಹಿಳೆಯನ್ನು ಹಗ್ ಮಾಡಿದ್ದಾರೆ. ಆಕೆಯನ್ನು ಕಣ್ಣೆತ್ತಿ ನೋಡದ ಅಧ್ಯಕ್ಷರನ್ನು ಕಂಡು ಆಕೆ ಬೇಸರಗೊಂಡಿದ್ದು ಆಕೆಯ ಮುಖದಲ್ಲಿ ಎದ್ದು ಕಾಣುತ್ತಿತ್ತು. ಈ ವೀಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆಕೆ ಅಧ್ಯಕ್ಷರನ್ನು ನೋಡಿದಾಗ ತುಂಬಾ ಖುಷಿಯಾಗಿದ್ದರು ಆದರೆ ಅವಳನ್ನು ಗುರುತಿಸದಿದ್ದಾಗ ನಿರಾಶೆಗೊಂಡರು ಎಂದು ಅದರಲ್ಲಿ ಬರೆಯಲಾಗಿದೆ. ಅಲ್ಲದೇ “ತನ್ನ “ಹೀರೋ ತನ್ನ ಬಣ್ಣದ ಜನರನ್ನು ಇಷ್ಟಪಡುವುದಿಲ್ಲ ಎಂದು ಅವಳು ಅರಿತುಕೊಂಡ ಕ್ಷಣ” ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರೊಬ್ಬರು ಎಕ್ಸ್ ನಲ್ಲಿ ಬರೆದು ಪೋಸ್ಟ್ ಮಾಡಿದ್ದಾರೆ.

ಈ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಬೈಡನ್ ಪ್ರಚಾರದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎನ್ನಲಾಗಿದೆ. ಯಾಕೆಂದರೆ ಬೈಡನ್ ಅವರನ್ನು ಶ್ವೇತಭವನಕ್ಕೆ ಕರೆದೊಯ್ದ ಕಪ್ಪು ವರ್ಣದ ಮತದಾರ ಬೆಂಬಲ ಕಳೆದುಕೊಳ್ಳುತ್ತಿದ್ದಾರೆ ಎಂದು ಹಲವಾರು ಸಮೀಕ್ಷೆಗಳು ತೋರಿಸಿವೆ. ಅಲ್ಲದೇ ಕೆಲವು ಕಪ್ಪು ಮತದಾರರು, ವಿಶೇಷವಾಗಿ ಯುವಕರ ಆರ್ಥಿಕತೆ ಮತ್ತು ಮತದಾರರ ಹಕ್ಕುಗಳ ಆದ್ಯತೆಗಳನ್ನು ನಿಭಾಯಿಸುವಲ್ಲಿ ಬೈಡನ್ ವಿಫಲರಾಗಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಐಷಾರಾಮಿ ಹೋಟೆಲ್‌ನಲ್ಲಿ ವಾಸ, ಫ್ಲೈಟ್‌ನಲ್ಲಿ ಓಡಾಟ; ಶ್ರೀಮಂತ ಕಳ್ಳನೀಗ ಪೊಲೀಸರ ಬಲೆಗೆ!

“ಟ್ರಂಪ್ ಇದನ್ನು ಪ್ರಚಾರದ ಜಾಹೀರಾತಾಗಿ ನಡೆಸಬೇಕು” ಎಂದು ಕೆಲವರು ಹೇಳಿದ್ದಾರೆ. ಈಗಾಗಲೇ ಜೂನ್‌ನಲ್ಲಿ ಡೆಟ್ರಾಯಿಟ್‍ನ 180 ಚರ್ಚ್‍ನಲ್ಲಿ ಸುಮಾರು 200 ಜನರನ್ನುದ್ದೇಶಿಸಿ ಮಾತನಾಡಿದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅಧ್ಯಕ್ಷ ಜೋ ಬೈಡನ್ ಅವರ ಪಾತ್ರವನ್ನು ಟೀಕಿಸುವ ಮೂಲಕ ಕಪ್ಪು ಮತದಾರರನ್ನು ಆಕರ್ಷಿಸಿದರು ಎನ್ನಲಾಗಿದೆ. ಹಾಗಾಗಿ ಅಮೆರಿಕದಲ್ಲಿ ಹೆಚ್ಚಿನ ಬೆಂಬಲ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗಿದೆ ಎನ್ನಲಾಗಿದೆ.

Continue Reading

ಪ್ರಮುಖ ಸುದ್ದಿ

Viral Video : ಮೆಟ್ರೊದಲ್ಲಿ ಪರ್ಸ್ ಕದಿಯಲು ಮುಂದಾದ ಕಳ್ಳನಿಗೆ ಬಿತ್ತು ಗೂಸಾ! ವಿಡಿಯೊ ನೋಡಿ

Viral Video: ಕೆಲವರು ದುಡಿಯುವುದಕ್ಕೆ ಆಗದೇ ಕಳ್ಳತನ ಮಾರ್ಗ ಹಿಡಿಯುತ್ತಾರೆ. ಇನ್ನು ಕೆಲವರು ಕಳ್ಳತನವನ್ನೇ ದುಡಿಮೆಯನ್ನಾಗಿಸಿಕೊಳ್ಳುತ್ತಾರೆ. ದೆಹಲಿ ಮೆಟ್ರೋದಲ್ಲಿ ಪರ್ಸ್ ಕಳ್ಳತನ ಮಾಡಿ ಸಿಕ್ಕಿಬಿದ್ದ ಕಳ್ಳನಿಗೆ ಪ್ರಯಾಣಿಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಬೆಳಕಿಗೆ ಬಂದಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ಪೊಲೀಸ್ ಕ್ರಮದ ಬಗ್ಗೆ ವರದಿಯಾಗಿಲ್ಲ. ಈ ಘಟನೆಗಳು ಬೆಳಕಿಗೆ ಬರುತ್ತಿದ್ದಂತೆ, ರೈಲಿನ ಒಳಗೆ ಮತ್ತು ನಿಲ್ದಾಣಗಳಲ್ಲಿ ಇಂತಹ ಘಟನೆಗಳನ್ನು ತಡೆಯಲು ನೇಮಿಸಲಾದ ಮೆಟ್ರೋ ಮಾರ್ಷಲ್‌ಗಳು ಎಲ್ಲಿದ್ದಾರೆ ಎಂದು ಜನರು ಆಶ್ಚರ್ಯ ಪಡುತ್ತಿದ್ದಾರೆ.

VISTARANEWS.COM


on

Viral Video
Koo

ನವದೆಹಲಿ : ಇತ್ತೀಚಿನ ದಿನಗಳಲ್ಲಿ ಕಳ್ಳತನದ ಪ್ರಕರಣ ಹೆಚ್ಚಾಗಿ ನಡೆಯುತ್ತಿವೆ. ಬಸ್, ರೈಲು, ಮಾರುಕಟ್ಟೆ, ರಸ್ತೆಗಳಲ್ಲಿ ಜನರ ಬೆಲೆಬಾಳುವ ವಸ್ತುಗಳನ್ನು, ಪರ್ಸ್‌ಗಳನ್ನು ಹಾಡುಹಗಲಿನಲ್ಲಿಯೇ ಜನಸಂದಣಿ ಇರುವಂತಹ ಸ್ಥಳಗಳಲ್ಲಿಯೇ ದರೋಡೆ ಮಾಡುತ್ತಿದ್ದಾರೆ. ಇದೀಗ ದೆಹಲಿ ಮೆಟ್ರೋದಲ್ಲಿ ಪರ್ಸ್ ಕಳ್ಳತನ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video )ಆಗಿದೆ.

ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಪರ್ಸ್ ಕದಿಯಲು ಕಳ್ಳ ಮುಂದಾದಾಗ ವ್ಯಕ್ತಿಯೊಬ್ಬ ಕಳ್ಳನನ್ನು ಹಿಡಿದು ಥಳಿಸಿದ್ದಾನೆ. ಮೆಟ್ರೋ ಒಳಗೆ ಕಳ್ಳನನ್ನು ಥಳಿಸುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವಿಡಿಯೊದಲ್ಲಿ, ಮಧ್ಯವಯಸ್ಕ ವ್ಯಕ್ತಿಯೊಬ್ಬ ಜನಜಂಗುಳಿ ಇರುವ ರೈಲಿನಲ್ಲಿ ಪರ್ಸ್ ಕದಿಯುತ್ತಿದ್ದ ಕಳ್ಳನನ್ನು ಒದೆಯುವುದು ಮತ್ತು ಕಪಾಳಮೋಕ್ಷ ಮಾಡುವುದನ್ನು ಕಾಣಬಹುದು. ಆರೋಪಿಯು ಆ ವ್ಯಕ್ತಿಯ ಬಳಿ ಮತ್ತೆ ಈ ಕೆಲಸ ಮಾಡುವುದಿಲ್ಲ ಎಂದು ಬೇಡಿಕೊಳ್ಳುತ್ತಿರುವುದು ಕಂಡುಬಂದಿದೆ. ಆದರೆ ಆ ವ್ಯಕ್ತಿಯು ಅವನ ವಿನಂತಿಯನ್ನು ಕೇಳದೆ ಜನಗಳ ಮುಂದೆ ಅವನಿಗೆ ಕಪಾಳಮೋಕ್ಷ ಮಾಡುತ್ತಿದ್ದಾನೆ. ನಂತರ ಆರೋಪಿಯು ತನ್ನ ಕೃತ್ಯಕ್ಕಾಗಿ ಕ್ಷಮೆಯಾಚಿಸುತ್ತಾ ವ್ಯಕ್ತಿಯ ಪಾದಗಳನ್ನು ಹಿಡಿಯಲು ಪ್ರಯತ್ನಿಸುತ್ತಾನೆ. ಆದರೆ ಆರೋಪಿಯು ಅವನ ಪಾದಗಳನ್ನು ಸ್ಪರ್ಶಿಸಲು ಬಂದಾಗ ಆ ವ್ಯಕ್ತಿ ಅವನ ಎದೆಗೆ ಒದೆಯುತ್ತಾನೆ ಮತ್ತು ನಂತರ ಪದೇ ಪದೇ ಕಪಾಳಮೋಕ್ಷ ಮಾಡುತ್ತಾನೆ.

ಕಾಶ್ಮೀರಿ ಗೇಟ್ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಘಟನೆ ನೆಡೆದ ನಿಖರವಾದ ದಿನಾಂಕ ಇನ್ನೂ ತಿಳಿದುಬಂದಿಲ್ಲ. ಆದಾಗ್ಯೂ, ಈ ವಿಡಿಯೊ ಭಾನುವಾರ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಸಖತ್ ವೈರಲ್ ಆಗುತ್ತಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ಪೊಲೀಸ್ ಕ್ರಮದ ಬಗ್ಗೆ ವರದಿಯಾಗಿಲ್ಲ. ಈ ಘಟನೆಗಳು ಬೆಳಕಿಗೆ ಬರುತ್ತಿದ್ದಂತೆ, ರೈಲಿನ ಒಳಗೆ ಮತ್ತು ನಿಲ್ದಾಣಗಳಲ್ಲಿ ಇಂತಹ ಘಟನೆಗಳನ್ನು ತಡೆಯಲು ನೇಮಿಸಲಾದ ಮೆಟ್ರೋ ಮಾರ್ಷಲ್‌ಗಳು ಎಲ್ಲಿದ್ದಾರೆ ಎಂದು ಜನರು ಆಶ್ಚರ್ಯ ಪಡುತ್ತಿದ್ದಾರೆ.

ಇದನ್ನೂ ಓದಿ: ಪುರಿ ಜಗನ್ನಾಥ ದೇವಾಲಯದ 10 ಅದ್ಭುತ ಸಂಗತಿಗಳಿವು!

ಇಂತಹ ಕಳ್ಳತನದ ಪ್ರಕರಣಗಳು ದಿನಕ್ಕೊಂದು ಬೆಳಕಿಗೆ ಬರುತ್ತಿದೆ. ಅದರಲ್ಲೂ ಮೆಟ್ರೋ ಸಿಟಿಗಳಾದ ದೆಹಲಿ, ಬೆಂಗಳೂರಿನಂತಹ ಸ್ಥಳಗಳಲ್ಲಿ ಈ ಪ್ರಕರಣಗಳು ಹೆಚ್ಚು ನಡೆಯುತ್ತಿವೆ. ಇತ್ತೀಚೆಗಷ್ಟೆ ಬೆಂಗಳೂರಿನಲ್ಲಿ ಜನಸಂದಣಿ ಇರುವ ಸ್ಥಳದಲ್ಲಿ ಹಾಡುಹಗಲಿನಲ್ಲಿಯೇ ಕಳ್ಳನೊಬ್ಬ ವಯಸ್ಕ ವ್ಯಕ್ತಿಯ ಕೈಯಲ್ಲಿದ್ದ ಬ್ಯಾಗ್ ಅನ್ನು ಕಳ್ಳತನ ಮಾಡಿ ಓಡಿ ಹೋಗುತ್ತಿರುವುದು ಕಂಡುಬಂದಿದೆ.

Continue Reading

ರಾಜಕೀಯ

Rahul Gandhi: ವಿರೋಧ ಪಕ್ಷದ ನಾಯಕನಾಗಿ ರಾಹುಲ್ ಗಾಂಧಿಗೆ ಇರುವ ಅಧಿಕಾರ ಏನೇನು?

2014 ಮತ್ತು 2019ರಲ್ಲಿ ಲೋಕಸಭೆಯಲ್ಲಿ ಶೇ.10ಕ್ಕಿಂತ ಕಡಿಮೆ ಸ್ಥಾನಗಳನ್ನು ಹೊಂದಿದ್ದ ಕಾಂಗ್ರೆಸ್‌ನ ಇದೀಗ ಹತ್ತು ವರ್ಷಗಳ ಬಳಿಕ ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪಡೆಯಲು ವಿರೋಧ ಪಕ್ಷಕ್ಕೆ ಕನಿಷ್ಠ 55 ಸ್ಥಾನಗಳ ಅಗತ್ಯವಿದೆ. 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 99 ಸ್ಥಾನಗಳನ್ನು ಗಳಿಸಿದೆ. ವಿರೋಧ ಪಕ್ಷದ ನಾಯಕನಾಗಿರುವ ರಾಹುಲ್‌ ಗಾಂಧಿ ಅವರಿಗೆ ಇರುವ ಅಧಿಕಾರ ಏನೇನು ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

By

Rahul Gandhi
Koo

ಇಂಡಿಯಾ ಮೈತ್ರಿ ಕೂಟವು (India alliance) ಎನ್‌ಡಿಎ (NDA) ಸರ್ಕಾರದ ವಿರುದ್ಧ ಕಾಂಗ್ರೆಸ್ (congress) ನಾಯಕ ರಾಹುಲ್ ಗಾಂಧಿ (rahul gandhi) ಅವರನ್ನು ಲೋಕಸಭೆಯ (loksabha) ವಿರೋಧ ಪಕ್ಷದ ನಾಯಕರನ್ನಾಗಿ (Leader of the Opposition) ನೇಮಿಸಿದೆ. ವಿರೋಧ ಪಕ್ಷದ ನಾಯಕನಿಗೆ ಸಂಸತ್ತಿನಲ್ಲಿ ಕೆಲವು ಅಧಿಕಾರಗಳಿವೆ. ಹತ್ತು ವರ್ಷಗಳ ಬಳಿಕ ಕಾಂಗ್ರೆಸ್ ಈ ಬಾರಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪಡೆದಿದೆ.

2014 ಮತ್ತು 2019ರಲ್ಲಿ ಲೋಕಸಭೆಯಲ್ಲಿ ಶೇ.10ಕ್ಕಿಂತ ಕಡಿಮೆ ಸ್ಥಾನಗಳನ್ನು ಹೊಂದಿದ್ದ ಕಾಂಗ್ರೆಸ್‌ನ ಇದೀಗ ಹತ್ತು ವರ್ಷಗಳ ಬಳಿಕ ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪಡೆಯಲು ವಿರೋಧ ಪಕ್ಷಕ್ಕೆ ಕನಿಷ್ಠ 55 ಸ್ಥಾನಗಳ ಅಗತ್ಯವಿದೆ. 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 99 ಸ್ಥಾನಗಳನ್ನು ಗಳಿಸಿತು.

ವಿರೋಧ ಪಕ್ಷದ ನಾಯಕ ಸಾಂವಿಧಾನಿಕ ಹುದ್ದೆಯಲ್ಲದಿದ್ದರೂ, ಪ್ರಮುಖ ನೇಮಕಾತಿಗಳನ್ನು ಒಳಗೊಂಡಿರುವ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಕೆಲವು ಅಧಿಕಾರಗಳನ್ನು ಹೊಂದಿದೆ. ಈ ಬಾರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಈ ಅಧಿಕಾರ ಚಲಾಯಿಸುವ ಅವಕಾಶ ಸಿಕ್ಕಿದೆ.

ವಿರೋಧ ಪಕ್ಷದ ನಾಯಕನಿಗೆ ಯಾವ ಅಧಿಕಾರವಿದೆ?

ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಅವರು ನಿರ್ಣಾಯಕ ಸಂಸದೀಯ ಸಮಿತಿಗಳ ಸದಸ್ಯರಾಗಿರಲಿದ್ದಾರೆ. ಅವರು ಹಲವಾರು ಜಂಟಿ ಸಂಸದೀಯ ಸಮಿತಿಗಳು, ಸಾರ್ವಜನಿಕ ಖಾತೆಗಳ ಸಮಿತಿಗಳು, ಸಾರ್ವಜನಿಕ ಉದ್ಯಮ ಸೇರಿದಂತೆ ಹಲವು ಸಮಿತಿಗಳ ಸದಸ್ಯರಾಗಿರುತ್ತಾರೆ. ಪ್ರಮುಖ ಹುದ್ದೆಗಳಿಗೆ ಅಧಿಕಾರಿಗಳನ್ನು ನೇಮಿಸುವ ವಿಚಾರದಲ್ಲಿಯೂ ಅವರ ಮಾತಿಗೆ ಪ್ರಾಮುಖ್ಯತೆ ಇರುತ್ತದೆ.

ಇದಲ್ಲದೆ ಶಾಸನಬದ್ಧ ಸಂಸ್ಥೆಗಳಾದ ಸೆಂಟ್ರಲ್ ವಿಜಿಲೆನ್ಸ್ ಕಮಿಷನ್, ಸೆಂಟ್ರಲ್ ಇನ್ಫಾರ್ಮೇಶನ್ ಕಮಿಷನ್, ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್, ನ್ಯಾಷನಲ್ ಹ್ಯೂಮನ್ ರೈಟ್ಸ್ ಕಮಿಷನ್ ಆಫ್ ಇಂಡಿಯಾ, ಲೋಕಪಾಲ್ ಮತ್ತು ಹೆಚ್ಚಿನವುಗಳ ಮುಖ್ಯಸ್ಥರನ್ನು ನೇಮಿಸುವ ಜವಾಬ್ದಾರಿಯನ್ನು ಹೊಂದಿರುವ ಕೆಲವು ಸಮಿತಿಗಳ ಸದಸ್ಯರಾಗಿಯೂ ಸಹ ರಾಹುಲ್ ಗಾಂಧಿ ಅರ್ಹರಾಗಿದ್ದಾರೆ.

ಗಾಂಧಿ ಕುಟುಂಬದ ಮೂರನೇ ಸದಸ್ಯ

ರಾಹುಲ್ ಗಾಂಧಿ ಅವರು ಗಾಂಧಿ ಕುಟುಂಬದ ಮೂರನೇ ಸದಸ್ಯರಾಗಿ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಅವರಿಗಿಂತ ಮೊದಲು ಅವರ ಅವರ ತಾಯಿ ಸೋನಿಯಾ ಗಾಂಧಿ ಮತ್ತು ತಂದೆ ರಾಜೀವ್ ಗಾಂಧಿ ಈ ಅಧಿಕಾರ ನಿಭಾಯಿಸಿದ್ದರು. ರಾಜೀವ್ ಗಾಂಧಿ ಅವರು 1989- 1990ರವರೆಗೆ ಈ ಹುದ್ದೆಯಲ್ಲಿದ್ದರೆ, ಸೋನಿಯಾ 1999ರಿಂದ 2004ರವರೆಗೆ ಈ ಅಧಿಕಾರ ವಹಿಸಿಕೊಂಡಿದ್ದರು.

ಉತ್ತರ ಪ್ರದೇಶದ ರಾಯ್ಬರೇಲಿಯ ಕಾಂಗ್ರೆಸ್ ಸಂಸದ ರಾಹುಲ್‌ ಗಾಂಧಿಯವರು ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿ ಹೆಚ್ಚುವರಿ ಸಂಬಳ ಮತ್ತು ಭತ್ಯೆ ಪಡೆಯಲಿದ್ದಾರೆ.

ಇದನ್ನೂ ಓದಿ: Narendra Modi: ಅಂಬೇಡ್ಕರ್‌ರನ್ನು ಷಡ್ಯಂತ್ರದಿಂದ ಸೋಲಿಸಿದ ನೆಹರೂ; ಕಾಂಗ್ರೆಸ್‌ನಿಂದ ದಲಿತರ ಶೋಷಣೆ ಎಂದ ಮೋದಿ


Continue Reading
Advertisement
Self Harming
ಕ್ರೈಂ3 mins ago

Self Harming: ನವೋದಯ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು

Karnataka weather Forecast
ಮಳೆ13 mins ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜುಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Deepika Padukone
Latest16 mins ago

Deepika Padukone: 1.92 ಲಕ್ಷ ರೂ. ಬೆಲೆಯ ʼಹುಕುಮ್‌ ಕಿ ರಾಣಿʼ ಸೀರೆಯಲ್ಲಿ ಮಿಂಚಿದ ದೀಪಿಕಾ ಪಡುಕೋಣೆ!

CM Siddaramaiah
ಕರ್ನಾಟಕ18 mins ago

CM Siddaramaiah: ಡಿಸಿಗಳು ಮಹಾರಾಜರಲ್ಲ; ಬೀದಿಗಿಳಿದು ಡೆಂಗ್ಯು ನಿಯಂತ್ರಿಸದಿದ್ದರೆ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

Sourav Ganguly
ಪ್ರಮುಖ ಸುದ್ದಿ36 mins ago

Sourav Ganguly : ಸೌರವ್​ ಗಂಗೂಲಿಗೆ 52ನೇ ಜನ್ಮದಿನ; ದಾದಾನ ಅಭೂತಪೂರ್ವ ವೃತ್ತಿ ಜೀವನದ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ವಿವರ

Riteish Deshmukh Genelia Deshmukh Pledge To Donate Their Organ
ಬಾಲಿವುಡ್38 mins ago

Riteish Deshmukh: ಅಂಗಾಗ ದಾನ ಮಾಡುವ ಘೋಷಣೆ ಮಾಡಿದ  ರಿತೇಶ್- ಜೆನಿಲಿಯಾ ದಂಪತಿ!

Mumbai hit and run
ದೇಶ1 hour ago

Mumbai Hit And Run: ಮುಂಬೈ ಹಿಟ್‌ ಆ್ಯಂಡ್‌ ರನ್‌ ಕೇಸ್‌; ಘಟನೆಗೂ ಮುನ್ನ ಬಾರ್‌ಗೆ ಹೋಗಿದ್ದ ಆರೋಪಿ, 18 ಸಾವಿರ ಬಿಲ್‌!

Actor Darshan Will Attend The Court Hearing From Online
ಕ್ರೈಂ1 hour ago

Actor Darshan: ಆರೋಪಿಗಳಿಗೆ ಗಂಟಲು ಮುಳ್ಳಾದ ಗುರುತು ಪತ್ತೆ ಪರೇಡ್‌, ಬೆಟ್ಟು ಮಾಡಿ ತೋರಿಸಿದ ಸಾಕ್ಷಿಗಳು

Vicky Pedia I love you sanjana song trend
ವೈರಲ್ ನ್ಯೂಸ್1 hour ago

Vicky Pedia: ಸಂಜನಾ..ಸಂಜನಾ …`I Love You’ ಸಂಜನಾ; ಬಾಲಕನ ಹಾಡಿಗೆ ಹೊಸ ಟಚ್ ಕೊಟ್ಟ ವಿಕಾಸ್ ವಿಕ್ಕಿಪಿಡಿಯ! 

Murder case
ಬೆಂಗಳೂರು1 hour ago

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ13 mins ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜುಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

karnataka weather Forecast
ಮಳೆ17 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ19 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ20 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ1 day ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ2 days ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ2 days ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು2 days ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ2 days ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

ಟ್ರೆಂಡಿಂಗ್‌