Viral Video: ಯುವತಿ ಜತೆ ಡ್ಯಾನ್ಸ್ ಮಾಡ್ತಾ ಮಾಡ್ತಾ ಪ್ರಾಣಬಿಟ್ಟ ಯುವಕ; ಆಘಾತಕಾರಿ ವಿಡಿಯೊ - Vistara News

Latest

Viral Video: ಯುವತಿ ಜತೆ ಡ್ಯಾನ್ಸ್ ಮಾಡ್ತಾ ಮಾಡ್ತಾ ಪ್ರಾಣಬಿಟ್ಟ ಯುವಕ; ಆಘಾತಕಾರಿ ವಿಡಿಯೊ

Viral Video: ಸಾವು ಹೇಗೆ ಬರುತ್ತದೆ ಎನ್ನುವುದು ಯಾರಿಗೂ ಗೊತ್ತಿರುವುದಿಲ್ಲ. ಇಲ್ಲೊಬ್ಬ ವ್ಯಕ್ತಿ ಡ್ಯಾನ್ಸ್ ಮಾಡುತ್ತಾ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ರಾಜಸ್ಥಾನದ ಭೈನ್ಸ್ ಲಾನಾ ಗ್ರಾಮದಲ್ಲಿ ನಡೆದಿದೆ. ಮನ್ನಾ ಲಾಲ್ ಜಖರ್ ಅವರ ಹಿರಿಯ ಸಹೋದರ ಕೆಲಸದಿಂದ ನಿವೃತ್ತಿಯನ್ನು ಹೊಂದಿದ ಪ್ರಯುಕ್ತ ‘ಸತ್ಸಂಗ’ ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆ ಸಮಯದಲ್ಲಿ ಇವರು ಸಂಭ್ರಮದಿಂದ ಡ್ಯಾನ್ಸ್ ಮಾಡಿದ್ದು, ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಇವರು ಕುಸಿದು ಬಿದ್ದ ಆ ಆಘಾತಕಾರಿ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo


ಜೀವನ ಎನ್ನುವುದು ನೀರ ಮೇಲಿನ ಗುಳ್ಳೆಯಂತೆ ಕ್ಷಣಿಕ ಮಾತ್ರ. ಅದು ಯಾವ ಕ್ಷಣದಲ್ಲಾದರೂ ಒಡೆಯಬಹುದು. ಹಾಗಾಗಿ ಸಾವು ಯಾರಿಗೆ ಯಾವಾಗ ಸಂಭವಿಸುತ್ತದೆ ಎಂದು ಹೇಳಲು ಆಗುವುದಿಲ್ಲ. ಇದೀಗ ಶಿಕ್ಷಕನೊಬ್ಬ ಕುಟುಂಬದ ಕಾರ್ಯಕ್ರಮವೊಂದರಲ್ಲಿ ಡ್ಯಾನ್ಸ್ ಮಾಡುವಾಗ ಕುಸಿದು ಬಿದ್ದು ಸಾವನಪ್ಪಿದ ಆಘಾತಕಾರಿ ಘಟನೆ ರಾಜಸ್ಥಾನದ ಭೈನ್ಸ್ ಲಾನಾ ಗ್ರಾಮದಲ್ಲಿ ನಡೆದಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video)ಆಗಿದೆ.

ಮನ್ನಾ ಲಾಲ್ ಜಖರ್ ಡ್ಯಾನ್ಸ್ ಮಾಡುತ್ತಾ ಸಾವನಪ್ಪಿದ ವ್ಯಕ್ತಿ. ಇವರು ವೃತ್ತಿಯಲ್ಲಿ ಶಿಕ್ಷಕನಾಗಿದ್ದು, ಇವರ ಹಿರಿಯ ಸಹೋದರ ಕೆಲಸದಿಂದ ನಿವೃತ್ತಿಯನ್ನು ಹೊಂದಿದ ಪ್ರಯುಕ್ತ ‘ಸತ್ಸಂಗ’ ಕಾರ್ಯಕ್ರಮವನ್ನು ಆಚರಿಸಲಾಗಿದೆ. ಆ ಸಮಯದಲ್ಲಿ ಇವರು ಸಂಭ್ರಮದಿಂದ ಡ್ಯಾನ್ಸ್ ಮಾಡಿದ್ದು, ಆ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಇವರು ಕುಸಿದು ಬಿದ್ದ ಆ ಆಘಾತಕಾರಿ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ವಿಡಿಯೊದಲ್ಲಿ ಮಹಿಳೆಯೊಬ್ಬಳ ಜೊತೆ ಜಖರ್ ಡ್ಯಾನ್ಸ್ ಮಾಡುವಾಗ ಅವರು ಇದ್ದಕ್ಕಿದ್ದಂತೆ ನೆಲದ ಮೇಲೆ ಬಿದ್ದಿದ್ದಾರೆ. ಅವರನ್ನು ಮೇಲೆತ್ತಲು ಕುಟುಂಬಸ್ಥರು ಮತ್ತು ಮತ್ತು ಗ್ರಾಮಸ್ಥರು ಎಷ್ಟೇ ಪ್ರಯತ್ನಿಸಿದರೂ ಅವರು ಎದ್ದೇಳದ ಕಾರಣ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ವೈದ್ಯರು ಜಖರ್ ಮೃತಪಟ್ಟಿದ್ದಾರೆ ಎಂದ ತಿಳಿಸಿದ್ದಾರೆ. ಜಖರ್‌ಗೆ ಹೃದಯಾಘಾತವಾಗಿದೆ ಎಂದು ವೈದ್ಯರು ಶಂಕಿಸಿದ್ದಾರೆ. ಈ ಘಟನೆಯು ಕುಟುಂಬ ಮತ್ತು ಗ್ರಾಮವನ್ನು ಆಘಾತಕ್ಕೀಡು ಮಾಡಿದೆ, ಸಂತೋಷದ ಸಂದರ್ಭದ ನಡುವೆ ಈ ಘಟನೆ ಗೊಂದಲವನ್ನುಂಟು ಮಾಡಿದೆ.

ಜೋಧಪುರದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ಜಖರ್, ಈ ಕಾರ್ಯಕ್ರಮಕ್ಕಾಗಿ ತಮ್ಮ ಗ್ರಾಮಕ್ಕೆ ಬಂದಿದ್ದರು. ಆದರೆ ಈ ರೀತಿಯಲ್ಲಿ ದುರಂತಕ್ಕೀಡಾದರು. ಅವರ ಸಾವಿನ ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಮನುಷ್ಯ ಹೇಗೆ ಅಕಾಲಿಕ ಸಾವಿಗೆ ಗುರುಯಾಗುತ್ತಾನೆ ಎಂಬುದನ್ನು ಈ ವಿಡಿಯೊ ಎತ್ತಿ ತೋರಿಸುತ್ತದೆ.

ಇದನ್ನೂ ಓದಿ: ಮೈಗೆ ಟವೆಲ್ ಸುತ್ತಿಕೊಂಡು ಬೀದಿ ತುಂಬಾ ಓಡಾಡಿದ ಯುವತಿ; ನೋಡಿದ ಜನ ಸುಸ್ತು!

Viral Video
Viral Video

ಈ ಹಿಂದೆ ಈ ವರ್ಷದ ಮೇ ತಿಂಗಳಿನಲ್ಲಿ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಮಲನ್ವಾಸಾ ಗ್ರಾಮದಲ್ಲಿ ಭಜನೆಗೆ ನೃತ್ಯ ಮಾಡುವಾಗ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದರು. ಈ ಘಟನೆಯ ಆಘಾತಕಾರಿ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಮೃತರನ್ನು ರಾಜಸ್ಥಾನ ಪಂಚಾಯತ್ ರಾಜ್ ಇಲಾಖೆಯಲ್ಲಿ ಕಿರಿಯ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಜೋಧ್ರಾಜ್ ನಗರ್ ಎಂದು ಗುರುತಿಸಲಾಗಿದೆ. ಗ್ರಾಮದಲ್ಲಿ ಸಂಜೆ ಆಯೋಜಿಸಿದ್ದ ಭಜನಾ ಕಾರ್ಯಕ್ರಮದಲ್ಲಿ ನಾಗರ್ ನೃತ್ಯ ಮಾಡುತ್ತಿದ್ದಾಗ ಹೃದಯಾಘಾತದಿಂದ ಇದ್ದಕ್ಕಿದ್ದಂತೆ ಕುಸಿದುಬಿದ್ದು ಸಾವನಪ್ಪಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಧಾರ್ಮಿಕ

Shravana 2024: ಶ್ರಾವಣ ಉಪವಾಸದ ವೇಳೆ ಈ 5 ಪಾನೀಯ ಆರೋಗ್ಯಕರ

Shravana 2024:ಶ್ರಾವಣ ಮಾಸದಲ್ಲಿ (Shravana Masa) ಉಪವಾಸ ಕೈಗೊಳ್ಳುವಾಗ ದೇಹಾರೋಗ್ಯವನ್ನು ಕಾಪಾಡಿಕೊಳ್ಳುವುದು ಕೂಡ ಮುಖ್ಯವಾಗಿರುತ್ತದೆ. ದೇವರ ಧ್ಯಾನ, ಪೂಜೆಯಲ್ಲಿ ನಿರತರಾಗಿರುವಾಗ ದೇಹದಲ್ಲಿ ನಿರ್ಜಲೀಕರಣವಾಗದಂತೆ ನೋಡಿಕೊಳ್ಳುವುದು ಅತ್ಯಗತ್ಯ. ಉಪವಾಸದ ಸಮಯದಲ್ಲಿ ಸೇವಿಸಬಹುದಾದ ಕೆಲವು ಆರೋಗ್ಯಕರ ಪಾನೀಯಗಳು ಇಲ್ಲಿವೆ.

VISTARANEWS.COM


on

By

Shravana 2024
Koo

ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಸಂತೋಷದಿಂದ (Shravana 2024) ಆಚರಿಸಲಾಗುವ ಶ್ರಾವಣ ಮಾಸ (Shravana Masa) ಹಿಂದೂ ಚಂದ್ರನ ಕ್ಯಾಲೆಂಡರ್‌ನಲ್ಲಿ (Hindu Lunar calendar) ಪವಿತ್ರವಾದ ತಿಂಗಳು (sacred month). ಇದು ಸಾಂಸ್ಕೃತಿಕ ಚೈತನ್ಯ ಮತ್ತು ಧಾರ್ಮಿಕ ಮಹತ್ವಕ್ಕಾಗಿ ಹೆಸರುವಾಸಿಯಾಗಿದೆ. ಇಂದಿನಿಂದ (ಆ.5) ಶ್ರಾವಣ ಮಾಸ ಆರಂಭ. ಬಹುತೇಕ ಹಿಂದೂಗಳು ಈ ತಿಂಗಳು ಪೂರ್ತಿ ದೇವರ ಪೂಜೆ, ಧ್ಯಾನ, ಜಪ, ತಪಗಳಲ್ಲಿ ನಿರತರಾಗುತ್ತಾರೆ. ಹೆಚ್ಚಿನವರು ಸೋಮವಾರ, ಮಂಗಳವಾರ, ಶುಕ್ರವಾರ, ಶನಿವಾರದಂದು ಉಪವಾಸ ವ್ರತ ಕೈಗೊಳ್ಳುತ್ತಾರೆ.

ಶ್ರಾವಣ ಮಾಸ ಶಿವ ಮತ್ತು ಪಾರ್ವತಿ ದೇವಿಗೆ ಸಮರ್ಪಿತವಾಗಿದೆ. ವಿವಿಧ ಧಾರ್ಮಿಕ ಆಚರಣೆಗಳನ್ನು ನಡೆಸಲಾಗುತ್ತದೆ. ಶ್ರಾವಣ ಮಾಸದಲ್ಲಿ ಆಚರಿಸಲಾಗುವ ಪ್ರಮುಖ ಆಚರಣೆಗಳಲ್ಲಿ ಉಪವಾಸವೂ ಒಂದಾಗಿದೆ. ಶಿವ ಭಕ್ತರು ಶಿವನ ಆಶೀರ್ವಾದ ಪಡೆಯಲು ಈ ತಿಂಗಳ ಪ್ರತಿ ಸೋಮವಾರ ಉಪವಾಸವನ್ನು ಆಚರಿಸುತ್ತಾರೆ.

ಜನರು ಈ ಸಂದರ್ಭದಲ್ಲಿ ಮಾಂಸಾಹಾರಿ ಆಹಾರಗಳು, ಈರುಳ್ಳಿ, ಬೆಳ್ಳುಳ್ಳಿ ಸೇವನೆಯನ್ನು ತ್ಯಜಿಸುತ್ತಾರೆ.
ಉಪವಾಸದೊಂದಿಗೆ ದೇಹಾರೋಗ್ಯವನ್ನು ಕಾಪಾಡಿಕೊಳ್ಳುವುದು ಕೂಡ ಮುಖ್ಯವಾಗಿರುತ್ತದೆ. ದೇವರ ಧ್ಯಾನ, ಪೂಜೆಯಲ್ಲಿ ನಿರತರಾಗಿರುವಾಗ ದೇಹದಲ್ಲಿ ನಿರ್ಜಲೀಕರಣವಾಗದಂತೆ ನೋಡಿಕೊಳ್ಳುವುದು ಅತ್ಯಗತ್ಯ. ಉಪವಾಸದ ಸಮಯದಲ್ಲಿ ಸೇವಿಸಬಹುದಾದ ಕೆಲವು ಆರೋಗ್ಯಕರ ಪಾನೀಯಗಳು ಇಲ್ಲಿವೆ.

Shravana Masa
Shravana Masa


ಎಳನೀರು

ತೆಂಗಿನ ನೀರು ಉಪವಾಸ ನಿರತರಿಗೆ ಅತ್ಯತ್ತಮ ಆಯ್ಕೆಯಾಗಿದೆ. ಇದು ಕಡಿಮೆ ಕ್ಯಾಲೋರಿ ಮತ್ತು ಕೊಬ್ಬನ್ನು ಹೊಂದಿದ್ದು, ಡಿಟಾಕ್ಸ್ ಪಾನೀಯವಾಗಿದೆ. ತೆಂಗಿನ ನೀರಿನಲ್ಲಿ ಪೊಟ್ಯಾಸಿಯಮ್, ಕ್ಯಾಲ್ಸಿಯಂ, ರಂಜಕ, ಮೆಗ್ನೀಸಿಯಮ್, ಕಾರ್ಬೋಹೈಡ್ರೇಟ್‌ ಮತ್ತು ಸಕ್ಕರೆಯ ಅದ್ಭುತ ಮೂಲವಾಗಿದೆ. ಇದು ಆರೋಗ್ಯಕರ ದೇಹದ ಬೆಳವಣಿಗೆಗೆಯನ್ನು ಉತ್ತೇಜಿಸುತ್ತದೆ.

Shravana Masa
Shravana Masa


ಸೌತೆಕಾಯಿ ಪುದೀನಾ ರಸ

ಶೇ. 95ಕ್ಕಿಂತ ಹೆಚ್ಚು ನೀರನ್ನು ಹೊಂದಿರುವ ಸೌತೆಕಾಯಿ ಪೌಷ್ಟಿಕಾಂಶದಿಂದ ತುಂಬಿರುವ ಸಮೃದ್ಧ ಆಹಾರ. ಹಲವಾರು ಆರೋಗ್ಯ ಪ್ರಯೋಜನಗಳಿಂದಾಗಿ ಉಪವಾಸ ನಿರತರು ಇದನ್ನು ಸೇವಿಸಬಹುದು. ಅಗತ್ಯ ಜೀವಸತ್ವ, ಖನಿಜಾಂಶಗಳು ಸೌತೆಕಾಯಿಗಳಲ್ಲಿ ಹೇರಳವಾಗಿವೆ.


ನಿಂಬೆ ನೀರು

ಉಪವಾಸದ ಸಮಯದಲ್ಲಿ ಸೇವಿಸುವ ಆರೋಗ್ಯಕರ ಪಾನೀಯವೆಂದರೆ ನಿಂಬೆ ನೀರು. ಶ್ರಾವಣ ಮಾಸದಲ್ಲಿ ಉಪವಾಸ ನಿರತರಾಗಿರುವವರು ನಿಂಬೆ ರಸ ಅಥವಾ ನಿಂಬೆ ಪಾನಕವನ್ನು ಕುಡಿಯುವುದು ಹೈಡ್ರೇಟೆಡ್ ಆಗಿರಲು ಮತ್ತು ಹೆಚ್ಚು ಕಾಲ ಹೊಟ್ಟೆ ತುಂಬಿದ ಅನುಭವ ಕೊಡಲು ಇದು ಸಹಾಯ ಮಾಡುತ್ತದೆ.


ಹಣ್ಣಿನ ರಸಗಳು

ಸೇಬು, ಕಿತ್ತಳೆ, ದಾಳಿಂಬೆ ಮತ್ತು ಇತರ ತಾಜಾ ಹಣ್ಣುಗಳನ್ನು ಜ್ಯೂಸ್ ಮಾಡಿ ಉಪವಾಸ ನಿರತರು ದಿನವಿಡೀ ಸೇವಿಸಬಹುದು. ಇದು ದೇಹವನ್ನು ಹೈಡ್ರೀಕರಿಸುವುದರ ಜೊತೆಗೆ ತಾಜಾ ಹಣ್ಣಿನ ರಸಗಳು ದೇಹದ ಆರೋಗ್ಯಕ್ಕೆ ಬೇಕಾದ ಪ್ರಮುಖ ಪೋಷಕಾಂಶಗಳನ್ನು ಪೂರೈಸುತ್ತವೆ.

ಇದನ್ನೂ ಓದಿ: Health Tips: ಪಾದಗಳ ಊತ, ನೋವನ್ನು ಕಡಿಮೆ ಮಾಡಲು ಇಲ್ಲಿದೆ ಸರಳ ಉಪಾಯ

Shravana Masa
Shravana Masa


ಚಿಯಾ ಬೀಜಗಳು

ಚಿಯಾ ಬೀಜದ ನೀರು ಅನೇಕ ಗಮನಾರ್ಹವಾದ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಉಪವಾಸದ ದಿನವನ್ನು ಪ್ರಾರಂಭಿಸಲು ತುಂಬಾ ಆರೋಗ್ಯಕರ ಮಾರ್ಗವಾಗಿದೆ. ಉತ್ಕರ್ಷಣ ನಿರೋಧಕಗಳು, ಖನಿಜಗಳು, ಫೈಬರ್ ಮತ್ತು ಒಮೆಗಾ -3 ಕೊಬ್ಬಿನಾಮ್ಲಗಳ ಸಮೃದ್ಧಿಯಿಂದಾಗಿ, ಚಿಯಾ ಬೀಜಗಳು ದೇಹವನ್ನು ನಿರ್ಜಲೀಕರಣಗೊಳ್ಳದಂತೆತಡೆಯುತ್ತದೆ. ಹೆಚ್ಚು ಗಂಟೆಗಳ ಕಾಲ ದೇಹಕ್ಕೆ ಶಕ್ತಿಯನ್ನು ಕೊಡುತ್ತದೆ.

Continue Reading

Latest

Sex Racket: ಹೋಟೆಲ್‍ನಲ್ಲಿ ಸೆಕ್ಸ್ ದಂಧೆ ಪತ್ತೆ; ನಗ್ನ ಸ್ಥಿತಿಯಲ್ಲಿದ್ದ 10 ಜೋಡಿಗಳು ಪೊಲೀಸ್‌ ಬಲೆಗೆ!

Sex Racket ವಾರಣಾಸಿ ಪೊಲೀಸ್ ತಂಡ ಹೋಟೆಲ್‌ನಲ್ಲಿ ಸೆಕ್ಸ್ ದಂಧೆಯನ್ನು ಪತ್ತೆಹಚ್ಚಿದ್ದು, ಅಲ್ಲಿದ್ದ 20 ಮಂದಿ ಹುಡುಗ-ಹುಡುಗಿಯರನ್ನು ಬಂಧಿಸಿದ್ದಾರೆ. ಮಾಹಿತಿದಾರರೊಬ್ಬರು ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಹೋಟೆಲ್‌ ಮೇಲೆ ದಾಳಿ ನಡೆಸಿ ಈ ದಂಧೆ ಪತ್ತೆ ಹಚ್ಚಿದರು. ಆಗ ಅಲ್ಲಿ ದಂಧೆಯಲ್ಲಿ ತೊಡಗಿದ್ದ 10 ಮಂದಿ ಹುಡುಗರು ಹಾಗೂ 10 ಮಂದಿ ಹುಡುಗಿಯರು ನಗ್ನ ಸ್ಥಿತಿಯಲ್ಲಿ ಕಂಡು ಬಂದರು. ತಕ್ಷಣ ಪೊಲೀಸರು ಅವರನ್ನು ಬಂಧಿಸಿ ಠಾಣೆಗೆ ಎಳೆದೊಯ್ದಿದ್ದಾರೆ.

VISTARANEWS.COM


on

Sex Racket
Koo


ವಾರಣಾಸಿ : ಅಲ್ಲಲ್ಲಿ ಸೆಕ್ಸ್ ದಂಧೆ ಪ್ರಕರಣಗಳು ನಡೆಯುತ್ತಿದ್ದು, ಹೋಟೆಲ್, ರೆಸ್ಟೋರೆಂಟ್‍ಗಳಲ್ಲಿ ಈ ದಂಧೆ ನಡೆಸುತ್ತಿದ್ದ ಹಲವರು ಸಿಕ್ಕಿಬಿದ್ದಿದ್ದಾರೆ. ಹಣ ಸಂಪಾದಿಸಲು ಹಲವರು ಈ ದಂಧೆಯಲ್ಲಿ ತೊಡಗುತ್ತಾರೆ. ಇದೀಗ ಅಂತಹದೊಂದು ಪ್ರಕರಣ ವಾರಾಣಾಸಿಯ ಹೋಟೆಲ್‍ವೊಂದರಲ್ಲಿ ಪತ್ತೆಯಾಗಿದೆ. ವಾರಣಾಸಿ ಪೊಲೀಸ್ ಕಮಿಷನರೇಟ್ ಆಗಸ್ಟ್ 4 ರಂದು ರಂಜಿತ್ ಹೋಟೆಲ್‍ನಲ್ಲಿ ಸೆಕ್ಸ್ ದಂಧೆ(sex racket) ಯನ್ನು ಪತ್ತೆಹಚ್ಚಿದ್ದು, ಅಲ್ಲಿದ್ದ 20 ಮಂದಿ ಹುಡುಗ ಹುಡುಗಿಯರನ್ನು ಬಂಧಿಸಿದ್ದಾರೆ.

ಮಾಹಿತಿದಾರರೊಬ್ಬರು ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಹೋಟೆಲ್‍ನ ಮೇಲೆ ದಾಳಿ ನಡೆಸಿದರು. ಆಗ ಅಲ್ಲಿ ದಂಧೆಯಲ್ಲಿ ತೊಡಗಿದ್ದ 10 ಮಂದಿ ಹುಡುಗರು ಹಾಗೂ 10 ಮಂದಿ ಹುಡುಗಿಯರು ಆಕ್ಷೇಪಾರ್ಹ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತಕ್ಷಣ ಪೊಲೀಸರು ಅವರನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಮಾತನಾಡಿದ ಹೆಚ್ಚುವರಿ ಉಪ ಪೊಲೀಸ್ ಆಯುಕ್ತರಾದ ಎಡಿಸಿಪಿ ನೀತು ಕುಮಾರಿ ಅವರು, “ರಂಜಿತ್ ಹೋಟೆಲ್‍ನಲ್ಲಿ ಯುವಕರು ಮತ್ತು ಹುಡುಗಿಯರು ಸೆಕ್ಸ್ ರಾಕೆಟ್‍ನಲ್ಲಿ ಭಾಗಿಯಾಗಿರಬಹುದು ಎಂದು ಮಾಹಿತಿದಾರರಿಂದ ನಮಗೆ ಮಾಹಿತಿ ಬಂದಿದೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳಿಗೆ, ರೂಂನಲ್ಲಿ ಕನಿಷ್ಠ 10 ಹುಡುಗಿಯರು ಮತ್ತು ಅಷ್ಟೇ ಸಂಖ್ಯೆಯ ಹುಡುಗರು ಆಕ್ಷೇಪಾರ್ಹ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಎಲ್ಲಾ ಆರೋಪಿಗಳನ್ನು ಬಂಧಿಸಲಾಯಿತು. ಮತ್ತು ಈ ದಂಧೆಯಲ್ಲಿ ಭಾಗಿಯಾಗಿರುವ ಎಲ್ಲಾ ಪಕ್ಷಗಳನ್ನು ಗುರುತಿಸಲು ಅಧಿಕಾರಿಗಳು ಈಗ ಸಮಗ್ರ ತನಿಖೆ ನಡೆಸುತ್ತಿದ್ದಾರೆ” ಎಂಬುದಾಗಿ ಹೇಳಿದ್ದಾರೆ.

ಅಲ್ಲದೇ ಪೊಲೀಸರ ತಂಡವು ಪ್ರಾರಂಭಿಸಿದ ತ್ವರಿತ ಕ್ರಮದಿಂದ ಹೋಟೆಲ್ ಸಿಬ್ಬಂದಿಗೆ ರೂಂನಲ್ಲಿ ದಂಧೆಯಲ್ಲಿ ತೊಡಗಿದ್ದವರನ್ನು ಎಚ್ಚರಿಸಲು ಅವಕಾಶ ಸಿಗಲಿಲ್ಲ. ಆದರೆ ಹೋಟೆಲ್ ಸಿಬ್ಬಂದಿ ತಕ್ಷಣ ಎಲ್ಲಾ ರೂಂಗಳಿಗೆ ಬೀಗ ಹಾಕಿದ್ದಾರೆ, ಆದರೆ ಸಿಸಿಟಿವಿಯನ್ನು ಪರಿಶೀಲಿಸಿದ ನಂತರ ಪೊಲೀಸರು ಹೋಟೆಲ್ ಸಿಬ್ಬಂದಿಗೆ ಆ ರೂಂಗಳನ್ನು ತೆರೆಯಲು ಹೇಳಿದ್ದಾರೆ. ಪೊಲೀಸರು ಸಿಸಿಟಿವಿ ನೆಟ್‍ವರ್ಕ್ ಡಿವಿಆರ್ ಅನ್ನು ಸಹ ವಶಪಡಿಸಿಕೊಂಡಿದ್ದಾರೆ. ದಂಧೆಯಲ್ಲಿ ಭಾಗಿಯಾಗಿರುವ ಇತರ ಸದಸ್ಯರನ್ನು ಕಂಡುಹಿಡಿಯಲು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಎಡಿಸಿಪಿ ತಿಳಿಸಿದ್ದಾರೆ.

ಇದನ್ನೂ ಓದಿ:ನಿನಗೆಷ್ಟು ಬಾಯ್‌ಫ್ರೆಂಡ್‌ ಎನ್ನುತ್ತ ಗೆಳತಿಗೆ ಭೀಕರವಾಗಿ ಇರಿದ ಯುವ ಕಾಂಗ್ರೆಸ್ ಮುಖಂಡ!

ಇದೇರೀತಿಯ ಪ್ರಕರಣ ಥಾಣೆ ಜಿಲ್ಲೆಯಲ್ಲಿ ನಡೆದಿದ್ದು, ಪೊಲೀಸರು ಸೆಕ್ಸ್ ರಾಕೆಟ್ ನಡೆಸುತ್ತಿದ್ದ ಆರೋಪದ ಮೇಲೆ 23 ವರ್ಷದ ಮಹಿಳೆಯನ್ನು ಬಂಧಿಸಿದ್ದಾರೆ. ಮಾನವ ಕಳ್ಳಸಾಗಣೆ ಮಾಡುತ್ತಿದ್ದ ಭಿವಾಂಡಿಯ ರೆಸ್ಟೋರೆಂಟ್ ಮೇಲೆ ದಾಳಿ ನಡೆಸಿ ಶಂಕಿತನನ್ನು ಬಂಧಿಸಿದ್ದು, 22 ಮತ್ತು 28 ವರ್ಷದ ಇತರ ಇಬ್ಬರು ಮಹಿಳೆಯರನ್ನು ರಕ್ಷಿಸಿ ಅವರನ್ನು ರಕ್ಷಣಾ ಗೃಹಕ್ಕೆ ಕಳುಹಿಸಲಾಯಿತು. ಭಾರತೀಯ ನ್ಯಾಯ ಸಂಹಿತಾ ಮತ್ತು ಅನೈತಿಕ ಸಂಚಾರ (ತಡೆಗಟ್ಟುವಿಕೆ) ಕಾಯ್ದೆಯ ಸೆಕ್ಷನ್‍ಗಳ ಅಡಿಯಲ್ಲಿ ಈ ಪ್ರಕರಣವನ್ನು ದಾಖಲಿಸಲಾಗಿದೆ.

Continue Reading

Latest

Viral Video: ಅಳುತ್ತಿರುವ ಹುಡುಗನನ್ನು ಸಮಾಧಾನಪಡಿಸಿದ ನಾಯಿ ಮರಿ! ಆನಂದ್‌ ಮಹೀಂದ್ರಾ ಹಂಚಿಕೊಂಡ ವಿಡಿಯೊ ಇದು

Viral Video: ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಇತ್ತೀಚೆಗೆ ಅಂತಾರಾಷ್ಟ್ರೀಯ ಸ್ನೇಹಿತರ ದಿನದಂದು ನಾಯಿಮರಿ ಮತ್ತು ಮಗುವಿನ ಸ್ನೇಹದ ಮುದ್ದಾದ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಅಳುತ್ತಿರುವ ಹುಡುಗನನ್ನು ಆತನ ಸ್ನೇಹಿತನಂತೆ ಇದ್ದ ಸಾಕುಪ್ರಾಣಿ ನಾಯಿಮರಿ ಸಂತೈಸುತ್ತಿದೆ. 39 ಸೆಕೆಂಡುಗಳ ಈ ವಿಡಿಯೊದಲ್ಲಿ ಪುಟ್ಟ ಹುಡುಗನೊಬ್ಬ ನೆಲದ ಮೇಲೆ ಕುಳಿತು ತನ್ನ ಬೆನ್ನನ್ನು ಮಂಚದ ಮೇಲೆ ಇಟ್ಟುಕೊಂಡು ಬೇಸರದಿಂದ ಅಳುತ್ತಿದ್ದಾನೆ. ಆಗ ಅವನ ಪಕ್ಕ ಇದ್ದ ನಾಯಿಮರಿ ಅವನನ್ನು ಸಮಾಧಾನಪಡಿಸುತ್ತಿದೆ.ಈ ಮುದ್ದಾದ ವಿಡಿಯೊ ಸಖತ್ ವೈರಲ್ ಆಗಿದೆ.

VISTARANEWS.COM


on

Viral Video
Koo


ನವದೆಹಲಿ: ಜಗತ್ತಿನೆಲ್ಲೆಡೆ ಆಗಸ್ಟ್ 4ರಂದು ಸ್ನೇಹಿತರ ದಿನವನ್ನು ಆಚರಿಸಲಾಗಿದೆ. ನಮ್ಮ ರಕ್ತ ಸಂಬಂಧಿಕರ ಜೊತೆ ನಮ್ಮ ಸಂಬಂಧ ಬೆಸೆದುಕೊಳ್ಳುವುದು ಸಹಜ. ಆದರೆ ನಮ್ಮ ಜೊತೆ ಯಾವುದೇ ಸಂಬಂಧವಿಲ್ಲದೇ ಬೆಸೆದುಕೊಳ್ಳುವುದೇ ಸ್ನೇಹ. ಜಗತ್ತಿನಲ್ಲಿ ಹೆಚ್ಚಿನ ಜನರಿಗೆ ಸಂಬಂಧಿಕರಿಗಿಂತ ಹೆಚ್ಚು ನೆರವಾಗುವವರು ಸ್ನೇಹಿತರು. ತಮ್ಮ ಸುಖ, ದುಃಖಗಳನ್ನು ಹಂಚಿಕೊಳ್ಳುವ ಮನಸ್ಸೆಂದರೆ ಅದು ಸ್ನೇಹ. ಎಷ್ಟೋ ಜನರು ತಮ್ಮ ಕಷ್ಟಗಳನ್ನು ಸಂಬಂಧಿಕರಿಗಿಂತ ಹೆಚ್ಚು ಸ್ನೇಹಿತರ ಬಳಿಯೇ ಹಂಚಿಕೊಳ್ಳುತ್ತಾರೆ. ಯಾಕೆಂದರೆ ಸ್ನೇಹ ಸಂಬಂಧ ಅಷ್ಟೋಂದು ಬಲವಾಗಿರುತ್ತದೆ. ನಾವು ಸ್ನೇಹವನ್ನು ಮನುಷ್ಯರ ಜೊತೆಯೇ ಮಾಡಬೇಕೆಂದಿಲ್ಲ. ಕೆಲವರು ತಮ್ಮ ಸಾಕು ಪ್ರಾಣಿಗಳ ಜೊತೆಯೂ ಸ್ನೇಹ ಬೆಳೆಸುತ್ತಾರೆ. ಇಂತಹ ಸ್ನೇಹವನ್ನು ವ್ಯಕ್ತಪಡಿಸುವ ಸ್ನೇಹಿತರ ದಿನದಂದು ಉದ್ಯಮಿಯೊಬ್ಬರು ಉತ್ತಮ ಸ್ನೇಹಕ್ಕೆ ನಿರ್ದಶನವೆಂಬಂತೆ ಮುದ್ದಾದ ವಿಡಿಯೊವನ್ನು ಹಂಚಿಕೊಂಡಿದ್ದು ಅದು ಸಖತ್ ವೈರಲ್ (Viral Video) ಆಗಿದೆ.

ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಇತ್ತೀಚೆಗೆ ಅಂತರರಾಷ್ಟ್ರೀಯ ಸ್ನೇಹಿತರ ದಿನದಂದು ನಾಯಿಮರಿ ಮತ್ತು ಮಗುವಿನ ಸ್ನೇಹದ ಮುದ್ದಾದ ವಿಡಿಯೊವನ್ನು ಹಂಚಿಕೊಂಡಿದ್ದಾರೆ, ಇದರಲ್ಲಿ ಅಳುತ್ತಿರುವ ಹುಡುಗನನ್ನು ಆತನ ಸ್ನೇಹಿತನಂತೆ ಇದ್ದ ಸಾಕುಪ್ರಾಣಿ ನಾಯಿಮರಿ ಸಂತೈಸುತ್ತಿದೆ. 39 ಸೆಕೆಂಡುಗಳ ಈ ವಿಡಿಯೊದಲ್ಲಿ ಪುಟ್ಟ ಹುಡುಗನೊಬ್ಬ ನೆಲದ ಮೇಲೆ ಕುಳಿತು ತನ್ನ ಬೆನ್ನನ್ನು ಮಂಚದ ಮೇಲೆ ಇಟ್ಟುಕೊಂಡು ಬೇಸರದಿಂದ ಅಳುತ್ತಿದ್ದಾನೆ. ಆಗ ಅವನ ಪಕ್ಕ ಇದ್ದ ನಾಯಿಮರಿ ಅವನನ್ನು ಸಮಾಧಾನಪಡಿಸುತ್ತಿದೆ. ಹಾಗೇ ಅವನ ಕಣ್ಣೀರನ್ನು ಒರೆಸಿಕೊಳ್ಳಲು ಅದು ಟಿಶ್ಯೂವನ್ನು ಅವನಿಗೆ ತಂದು ನೀಡಿದೆ. ಮತ್ತು ಅಳುತ್ತಿರುವ ಅವನ ಮುಖವನ್ನೇ ಬೇಸರದಿಂದ ನೋಡುತ್ತಿದೆ. ಆ ಹುಡುಗ ಕೂಡ ನಾಯಿಮರಿಯನ್ನು ಗಟ್ಟಿಯಾಗಿ ತಬ್ಬಿಕೊಳ್ಳುತ್ತಾನೆ. ಈ ದೃಶ್ಯವನ್ನು ನೋಡಿದ ಎಂತವರಿಗೂ ಹೃದಯ ಭಾರವೆನಿಸುತ್ತದೆ. ಮೂಕ ಪ್ರಾಣಿಗಳಲ್ಲಿರುವ ಸ್ನೇಹದ ಮನೋಭಾವನೆಯನ್ನು ಈ ವಿಡಿಯೊ ಎತ್ತಿ ತೋರಿಸಿದೆ.

Viral Video
Viral Video

ಇದನ್ನೂ ಓದಿ: ವಯನಾಡ್ ಭೂಕುಸಿತ; ಜೀವ ಉಳಿಸಿಕೊಳ್ಳಲು ಪರದಾಡುತ್ತಿದ್ದ ಕುಟುಂಬಕ್ಕೆ ಕಣ್ಣೀರು ಸುರಿಸುತ್ತ ಆಶ್ರಯ ನೀಡಿದ ಆನೆ!

“ನಿಜವಾದ ಸ್ನೇಹಿತರು ನಮ್ಮ ಪ್ರತಿ ಕಣ್ಣೀರನ್ನು ಹಂಚಿಕೊಳ್ಳುತ್ತಾರೆ” ಎಂದು ಬಳಕೆದಾರರೊಬ್ಬರು ಬರೆದಿದ್ದಾರೆ. “ಈ ದೃಶ್ಯ ನಿಜವಾಗಿಯೂ ಸುಂದರವಾಗಿದೆ,” ಎಂದು ಇನ್ನೊಬ್ಬರು ಹೇಳಿದರು. “ಇದು ಮುದ್ದಾದ ಸಂಬಂಧ,” ಎಂದು ಮೂರನೆಯವರು ತಿಳಿಸಿದ್ದಾರೆ. “ಸ್ನೇಹವು ಎಂದಿಗೂ ವಿಶೇಷ ಜನರೊಂದಿಗೆ ಇರುವುದಿಲ್ಲ … ನಾವು ಸ್ನೇಹಿತರಾಗಿರುವ ಜನರು ವಿಶೇಷವಾಗುತ್ತಾರೆ” ಎಂದು ಬಳಕೆದಾರ ಸುಲೇಮಾನ್ ಖಾನ್ ಎಂಬುವವರು ಹಂಚಿಕೊಂಡಿದ್ದಾರೆ.

Continue Reading

ಕ್ರೀಡೆ

Independence Day 2024: ಸ್ವಾತಂತ್ರ್ಯಪೂರ್ವದಲ್ಲಿ ಭಾರತದ ಎದುರು ಸೋಲುವ ಭಯ; ಹಾಕಿ ತಂಡವನ್ನೇ ಒಲಿಂಪಿಕ್ಸ್‌ಗೆ ಕಳುಹಿಸಿರಲಿಲ್ಲ ಗ್ರೇಟ್‌ ಬ್ರಿಟನ್‌!

Independence Day 2024: ಸ್ವಾತಂತ್ರ್ಯ ಪೂರ್ವದಲ್ಲಿ, ಹಾಲಿ ಹಾಕಿ ಚಾಂಪಿಯನ್‌ ಆಗಿದ್ದ ಗ್ರೇಟ್‌ ಬ್ರಿಟನ್‌ 1928, 1932 ಮತ್ತು 1936ರಲ್ಲಿ ಧ್ಯಾನ್‌ ಚಂದ್‌ ನೇತೃತ್ವದ ಭಾರತೀಯ ಹಾಕಿ ತಂಡದ ಎದುರು ಸೋತು ಅವಮಾನ ಅನುಭವಿಸುವ ಭಯದಿಂದ ತನ್ನ ತಂಡವನ್ನೇ ಒಲಿಂಪಿಕ್ಸ್‌ಗೆ ಕಳುಹಿಸಲಿಲ್ಲ! ತನ್ನ ವಸಾಹತು ದೇಶವಾದ ಭಾರತದ ಎದುರು ಸೋತರೆ ಪ್ರತಿಷ್ಠೆಗೆ ಧಕ್ಕೆ ಆಗುತ್ತದೆ ಎನ್ನುವುದು ಬ್ರಿಟಿಷರ ಲೆಕ್ಕಾಚಾರವಾಗಿತ್ತು. ಕೊನೆಗೆ 1948ರ ಒಲಿಂಪಿಕ್ಸ್‌ನಲ್ಲಿ ಸ್ವತಂತ್ರ ಭಾರತದ ಎದುರು ಬ್ರಿಟನ್‌ ತನ್ನ ತಂಡವನ್ನು ಕಳುಹಿಸಿತು. ಆದರೆ ಈ ಕೂಟದಲ್ಲಿ ಭಾರತೀಯ ತಂಡವು ಗ್ರೇಟ್‌ ಬ್ರಿಟನ್‌ ತಂಡವನ್ನು ಹೀನಾಯವಾಗಿ ಸೋಲಿಸಿ ಚಾಂಪಿಯನ್‌ ಆಯಿತು!

VISTARANEWS.COM


on

By

Independence Day 2024
Koo

ಪ್ಯಾರಿಸ್‌ನಲ್ಲಿ ಆರಂಭವಾಗಿರುವ ಒಲಿಂಪಿಕ್ಸ್‌ನಲ್ಲಿ (paris olympics 2024) ಸರಬ್ಜೋತ್‌ ಸಿಂಗ್‌ (Bronze Medalist Sarabjot Singh), ಮನು ಭಾಕರ್​ (Bronze Medalist Manu Bhaker) ಮತ್ತು ಸ್ವಪ್ನಿಲ್‌ ಈಗಾಗಲೇ ಪದಕ ಗೆದ್ದು ಸಾಧನೆ ಮಾಡಿದ್ದಾರೆ. ಹಾಗೆ ನೋಡಿದರೆ ಸ್ವಾತಂತ್ರ್ಯ ಪೂರ್ವವೇ ನಮ್ಮ ಕ್ರೀಡಾಪಟುಗಳು ಬಂಗಾರದ ಸಾಧನೆ ಮಾಡಿದ್ದರು. ಸ್ವತಂತ್ರ ಭಾರತದಲ್ಲಿ (Independence Day 2024) ನಮ್ಮ ಕ್ರೀಡಾಪಟುಗಳ ಸಾಧನೆಯೂ ಗಮನಾರ್ಹ. ಆದರೆ ತೀರಾ ಆಶಾದಾಯಕವೇನೂ ಅಲ್ಲ. ಭಾರತ ಒಲಿಂಪಿಕ್ ಇತಿಹಾಸದಲ್ಲಿ ಇದುವರೆಗೆ 10 ಚಿನ್ನದ ಪದಕಗಳು ಸೇರಿ ಒಟ್ಟು 35 ಪದಕಗಳನ್ನು ಗೆದ್ದಿದೆ. ಆ ಸುವರ್ಣ ಕ್ಷಣ ಯಾವುದು, ಹೇಗಿತ್ತು ಎನ್ನುವ ಕುರಿತು ಮಾಹಿತಿ ಇಲ್ಲಿದೆ. ವಿಶೇಷವೆಂದರೆ ಸ್ವಾತಂತ್ರ್ಯ ಪೂರ್ವದಲ್ಲಿ, ಹಾಲಿ ಹಾಕಿ ಚಾಂಪಿಯನ್‌ ಆಗಿದ್ದ ಗ್ರೇಟ್‌ ಬ್ರಿಟನ್‌ 1928, 1932 ಮತ್ತು 1936ರಲ್ಲಿ ಧ್ಯಾನ್‌ ಚಂದ್‌ ನೇತೃತ್ವದ ಭಾರತೀಯ ಹಾಕಿ ತಂಡದ ಎದುರು ಸೋತು ಅವಮಾನ ಅನುಭವಿಸುವ ಭಯದಿಂದ ತನ್ನ ತಂಡವನ್ನೇ ಒಲಿಂಪಿಕ್ಸ್‌ಗೆ ಕಳುಹಿಸಲಿಲ್ಲ! ತನ್ನ ವಸಾಹತು ದೇಶವಾದ ಭಾರತದ ಎದುರು ಸೋತರೆ ಪ್ರತಿಷ್ಠೆಗೆ ಧಕ್ಕೆ ಆಗುತ್ತದೆ ಎನ್ನುವುದು ಬ್ರಿಟಿಷರ ಲೆಕ್ಕಾಚಾರವಾಗಿತ್ತು. ಕೊನೆಗೆ 1948ರ ಒಲಿಂಪಿಕ್ಸ್‌ನಲ್ಲಿ ಸ್ವತಂತ್ರ ಭಾರತದ ಎದುರು ಬ್ರಿಟನ್‌ ತನ್ನ ತಂಡವನ್ನು ಕಳುಹಿಸಿತು. ಆದರೆ ಈ ಕೂಟದಲ್ಲಿ ಭಾರತೀಯ ತಂಡವು ಗ್ರೇಟ್‌ ಬ್ರಿಟನ್‌ ತಂಡವನ್ನು ಹೀನಾಯವಾಗಿ ಸೋಲಿಸಿ ಚಾಂಪಿಯನ್‌ ಆಯಿತು! 1928ರಲ್ಲಿ ಮೊದಲ ಬಾರಿ ಭಾರತೀಯ ಹಾಕಿ ತಂಡ ಮೊದಲ ಬಾರಿ ಒಲಿಂಪಿಕ್ಸ್‌ ಪ್ರವೇಶಿಸಿತ್ತು. ಗಮನಾರ್ಹ ಸಂಗತಿ ಎಂದರೆ ಈಗ ನಡೆಯುತ್ತಿರುವ ಪ್ಯಾರಿಸ್ ಒಲಿಂಪಿಕ್ಸ್ ‌‌ನಲ್ಲಿ ಭಾರತೀಯ ಹಾಕಿ ತಂಡ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಗ್ರೇಟ್ ಬ್ರಿಟನ್‌‌ನನ್ನು ರೋಚಕವಾಗಿ ಸೋಲಿಸಿ ಸೆಮಿ ಫೈನಲ್‌‌ಗೆ ಲಗ್ಗೆ ಹಾಕಿದೆ.

ಜಾಗತಿಕ ಕ್ರೀಡಾಕೂಟವಾದ ಒಲಿಂಪಿಕ್ಸ್​ನಲ್ಲಿ ಭಾರತ ಇದುವರೆಗೂ ಹೆಚ್ಚಿನ ಪದಕ ಗೆದ್ದಿಲ್ಲ. ಆದರೆ ಪುರುಷರ ಹಾಕಿಯಲ್ಲಿ 8 ಬಾರಿ ಸ್ವರ್ಣ ಗೆದ್ದ ಏಕೈಕ ತಂಡವೆಂಬ ಹೆಗ್ಗಳಿಕೆಯನ್ನು ಭಾರತ ತಂಡ ಇನ್ನೂ ಉಳಿಸಿಕೊಂಡಿದೆ.

Independence Day 2024
Independence Day 2024


1928ರಲ್ಲಿ ಮೊದಲ ಚಿನ್ನ

1928ರಲ್ಲಿ ಆಮ್‌ಸ್ಟರ್‌ಡ್ಯಾಮ್‌ನಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆಲ್ಲುವ ಮೂಲಕ ಭಾರತದ ಹಾಕಿ ಸ್ವರ್ಣ ಯುಗ ಆರಂಭವಾಯಿತು. ಮುಂದೆ ಮೂರು ದಶಕಗಳ ಕಾಲ ಇದು ಮುಂದುವರಿಯಿತು. ಹಾಲೆಂಡ್ ತಂಡವನ್ನು 6-0 ಅಂತರದಿಂದ ಸೋಲಿಸುವ ಮೂಲಕ ಭಾರತೀಯರು ಹಾಕಿಯಲ್ಲಿ ಚೊಚ್ಚಲ ಒಲಿಂಪಿಕ್ ಚಿನ್ನ ಗೆದ್ದರು. ಆಮ್‌ಸ್ಟರ್‌ಡ್ಯಾಮ್‌ನಲ್ಲಿ ಭಾರತ ಬಾರಿಸಿದ 29 ಗೋಲುಗಳಲ್ಲಿ 14 ಗೋಲುಗಳನ್ನು ಧ್ಯಾನ್ ಚಂದ್ ಅವರೇ ಹೊಡೆದಿದ್ದರು. ಈ ಒಲಿಂಪಿಕ್‌ಗೆ ಗ್ರೇಟ್ ಬ್ರಿಟನ್ ತನ್ನ ಹಾಕಿ ತಂಡವನ್ನು ಕಳುಹಿಸರಲಿಲ್ಲ. ಏಕೆಂದರೆ ಒಲಿಂಪಿಕ್ಸ್‌ಗೆ ಸ್ವಲ್ಪ ಮೊದಲು ಗ್ರೇಟ್ ಬ್ರಿಟನ್ ಭಾರತದ ಎದುರು 4-0 ಅಂತರದಿಂದ ಸೋಲಿಸಲ್ಪಟ್ಟಿತು. ಇದು ‘ವಸಾಹತುಶಾಹಿಗಳು’ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ತಮ್ಮ ‘ವಸಾಹತು’ವನ್ನು ಕಳೆದುಕೊಳ್ಳುವ ಭಯದಲ್ಲಿದೆ ಎಂಬ ಚರ್ಚೆ ಹುಟ್ಟು ಹಾಕಿತ್ತು. ಈ ಮುಜುಗರವೇ ಬೇಡ ಎಂದು ಗ್ರೇಟ್‌ ಬ್ರಿಟನ್‌ ಹಾಕಿ ತಂಡವನ್ನೇ ಕಳುಹಿಸಿರಲಿಲ್ಲ ಎನ್ನಲಾಗುತ್ತದೆ!

1932ರಲ್ಲಿ ಎರಡನೇ ಪದಕ

1928ರಲ್ಲಿ ಭಾರತ, ಜಪಾನ್ ಮತ್ತು ಯುನೈಟೆಡ್ ಸ್ಟೇಟ್ಸ್ ಮಾತ್ರ ಲಾಸ್ ಏಂಜಲೀಸ್ ಕ್ರೀಡಾಕೂಟದಲ್ಲಿ ಹಾಕಿ ಗೌರವಕ್ಕಾಗಿ ಪ್ರವೇಶ ಪಡೆಯಿತು. ಇದರಲ್ಲಿ ಭಾರತೀಯರು ಜಪಾನ್ ಅನ್ನು 11- 1ರಿಂದ ಸೋಲಿಸಿ ಬಳಿಕ ಯುನೈಟೆಡ್ ಸ್ಟೇಟ್ ಅನ್ನು 24- 1ರಿಂದ ಪರಾಭವಗೊಳಿಸಿ ಮತ್ತೊಂದು ಚಿನ್ನದ ಪದಕವನ್ನು ಮಡಿಲಿಗೆ ಹಾಕಿಕೊಂಡಿತ್ತು.

Independence Day 2024
Independence Day 2024


1936ರಲ್ಲಿ ಗೋಲ್ಡನ್ ಹ್ಯಾಟ್ರಿಕ್

1928 ಮತ್ತು 1932ರಲ್ಲಿ ಹಾಕಿ ಜಗತ್ತನ್ನು ಭಾರತ ಸಮಗ್ರವಾಗಿ ಗೆದ್ದಿದ್ದರೂ, 1936ರಲ್ಲಿ ಬರ್ಲಿನ್ ಕ್ರೀಡಾಕೂಟ ವಿಶೇಷವಾಗಿತ್ತು. ಧ್ಯಾನ್ ಚಂದ್ ನೇತೃತ್ವದಲ್ಲಿ ಭಾರತೀಯರು ಆ ಬಾರಿಯೂ ಸವಾಲನ್ನು ಎದುರಿಸಿದರು. ಜರ್ಮನಿಯನ್ನು 8-1ರಿಂದ ಸೋಲಿಸಿ ಸತತ ಮೂರನೇ ಒಲಿಂಪಿಕ್ ಚಿನ್ನವನ್ನು ಗೆದ್ದರು.

Independence Day 2024
Independence Day 2024


1948ರಲ್ಲಿ ಸ್ವತಂತ್ರ ಭಾರತದ ಮೊದಲ ಚಿನ್ನ

ಭಾರತವು ವಸಾಹತುಶಾಹಿಯಾಗಿ ಉಳಿಯುವವರೆಗೂ ಒಲಿಂಪಿಕ್ ಹಾಕಿಯಿಂದ ದೂರ ಉಳಿದಿದ್ದ ಗ್ರೇಟ್ ಬ್ರಿಟನ್ ಸ್ವತಂತ್ರ ಭಾರತವನ್ನು ಎದುರಿಸಲು ಸಜ್ಜಾಯಿತು. ಈ ಸಂದರ್ಭದಲ್ಲೂ ಭಾರತವು ಬ್ರಿಟಿಷರನ್ನು 4-0 ಗೋಲುಗಳಿಂದ ಸೋಲಿಸಿ ಹಾಕಿ ಯುದ್ಧವನ್ನು ಗೆದ್ದಿತು. ಕೆಸರುಮಯವಾದ ಟರ್ಫ್ ಮತ್ತು ಹಗುರವಾದ ಮಳೆಯ ಕಾರಣದಿಂದ ಈ ಆಟ ಸಾಕಷ್ಟು ಕಠಿಣ ಸವಾಲನ್ನು ಒಡ್ಡಿತ್ತು. ಆದರೂ ಭಾರತೀಯರು ತಮ್ಮ ಅತ್ಯುತ್ತಮ ಚೆಂಡಿನ ನಿಯಂತ್ರಣ, ನಿಖರವಾದ ಪಾಸಿಂಗ್ ಮತ್ತು ಬುದ್ಧಿವಂತ ಆಟದಿಂದ ಬ್ರಿಟಿಷ್ ತಂಡವನ್ನು ಸೋಲಿಸಿ ಚಾರಿತ್ರಿಕ ಜಯ ದಾಖಲಿಸಿತು.

1952ರಲ್ಲಿ ಬಲ್ಬೀರ್ ಮ್ಯಾಜಿಕ್

ಹಾಲೆಂಡ್ ವಿರುದ್ಧದ 1952ರ ಹಾಕಿ ಫೈನಲ್ ಎರಡು ಕಾರಣಗಳಿಗಾಗಿ ಹೆಚ್ಚು ನಿರೀಕ್ಷೆ ಮೂಡಿಸಿತ್ತು. ಮೊದಲನೆಯದಾಗಿ ಮಳೆಯು ನೆಲವನ್ನು ತೇವಗೊಳಿಸಿದ್ದು ಮಾತ್ರವಲ್ಲ ಹೆಚ್ಚು ಜಾರುವಂತೆ ಮಾಡಿತ್ತು. ಪರಿಸ್ಥಿತಿಗಳು ಭಾರತೀಯರಿಗಿಂತ ಡಚ್ಚರಿಗೆ ಹೆಚ್ಚು ಅನುಕೂಲಕರವೆಂದು ನಿರೀಕ್ಷಿಸಲಾಗಿತ್ತು. ಎರಡನೆಯದಾಗಿ ಭಾರತೀಯರು ಬಲ್ಬೀರ್ ಸಿಂಗ್ ಸೀನಿಯರ್ ಮೇಲೆ ಹೆಚ್ಚು ಅವಲಂಬಿತರಾಗಿದ್ದರು. ಆದರೆ ಭಾರತೀಯರು ಫೈನಲ್‌ನಲ್ಲಿ 3- 1ರಿಂದ ಹಾಲೆಂಡ್ ಅನ್ನು ಸೋಲಿಸಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ಬಲ್ಬೀರ್ ಸಿಂಗ್ ಸೀನಿಯರ್ ಮತ್ತೊಮ್ಮೆ ತಾರೆಯಾದರು. 13 ಭಾರತೀಯ ಗೋಲುಗಳಲ್ಲಿ 9 ಗೋಲುಗಳನ್ನು ಅವರೇ ಹೊಡೆದಿದ್ದರು.

ಒಲಿಂಪಿಕ್ಸ್‌ ಇತಿಹಾಸದಲ್ಲಿ ಭಾರತದ ಕ್ರೀಡಾಪಟುವೊಬ್ಬರು ವೈಯಕ್ತಿಕ ವಿಭಾಗದಲ್ಲಿ ಪದಕ ಜಯಿಸಿದ್ದು 1952ರಲ್ಲಿ. ಮಹಾರಾಷ್ಟ್ರದ ಖಾಸಾಬಾ ದಾದಾ ಸಾಹೆಬ್‌ ಜಾಧವ್‌ ಕುಸ್ತಿಯ ಫ್ರೀಸ್ಟೈಲ್‌ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದರು. ಒಲಿಂಪಿಕ್ಸ್‌ ಇತಿಹಾಸದಲ್ಲಿ ಭಾರತದ ಕ್ರೀಡಾಪಟುವೊಬ್ಬರು ವೈಯಕ್ತಿಕ ವಿಭಾಗದಲ್ಲಿ ಗೆದ್ದ ಮೊದಲ ಪದಕ ಇದಾಗಿತ್ತು.

Independence Day 2024
Independence Day 2024


1956ರಲ್ಲಿ ಐದನೇ ಚಿನ್ನ

ಮೆಲ್ಬೋರ್ನ್‌ನಲ್ಲಿ ನಡೆದ ಫೈನಲ್‌ ಪಂದ್ಯವು ಪಾಕಿಸ್ತಾನದ ವಿರುದ್ಧ ಒಲಿಂಪಿಕ್‌ ಹಂತದಲ್ಲಿ ಭಾರತದ ಮೊದಲ ಕೂಟವಾಗಿತ್ತು. ಎರಡೂ ತಂಡಗಳ ಆಟಗಾರರ ಮೇಲೆ ಸಾಕಷ್ಟು ನಿರೀಕ್ಷೆಯ ತೂಗುಕತ್ತಿ ತೂಗುತ್ತಿತ್ತು. ಈ ಪಂದ್ಯದಲ್ಲಿ ಪಾಕಿಸ್ತಾನ ಬೆಳ್ಳಿ ಪದಕ ಗೆದ್ದು ಬೀಗಿದರೆ, ಭಾರತವು 1-0 ಗೋಲುಗಳ ಕಿರಿದಾದ ಅಂತರದಿಂದ ಚಿನ್ನವನ್ನು ಗೆದ್ದುಕೊಂಡಿತ್ತು.

1964ರಲ್ಲಿ ಮರಳಿ ಚಿನ್ನ

ಭಾರತವು ಪಾಕಿಸ್ತಾನವನ್ನು 1-0 ಗೋಲುಗಳಿಂದ ಸೋಲಿಸುವ ಮೂಲಕ ವಿಶ್ವ ಹಾಕಿಯಲ್ಲಿ ತನ್ನ ಪ್ರಾಬಲ್ಯವನ್ನು ಮರುಸ್ಥಾಪಿಸಿತು. ಎರಡು ಉತ್ತಮ ತಂಡಗಳು ಗೆಲ್ಲಲು ಸಾಕಷ್ಟು ಪರಿಶ್ರಮ ಪಟ್ಟಿತು. ಭಾರತವು ಅಂತಿಮವಾಗಿ ಕಡಿಮೆ ಅಂತರದಿಂದ ವಿಜಯಿಯಾಯಿತು.

Independence Day 2024
Independence Day 2024


1980ರಲ್ಲಿ ಕೊನೆಯ ಹಾಕಿ ಚಿನ್ನ

ಭಾರತ 16 ವರ್ಷಗಳ ಅನಂತರ ಮಾಸ್ಕೋದಲ್ಲಿ 4– 3 ಗೋಲುಗಳಿಂದ ಸ್ಪೇನ್ ಅನ್ನು ಸೋಲಿಸಿ ಚಿನ್ನವನ್ನು ಗೆದ್ದುಕೊಂಡಿತು. ಆದರೆ ಇದು ಒಲಂಪಿಕ್ ಹಾಕಿಯಲ್ಲಿ ಭಾರತದ ಕೊನೆಯ ಚಿನ್ನದ ಪದಕವಾಯಿತು.

1996ರಲ್ಲಿ ಟೆನಿಸ್​ನಲ್ಲಿ ಮೊದಲ ಪದಕ

1996ರಲ್ಲಿ ಅಮೆರಿಕದಲ್ಲಿ ನಡೆದ ಕ್ರೀಡಾಕೂಟದಲ್ಲಿ ಭಾರತ ಏಕೈಕ ಕಂಚಿನ ಪದಕ ಜಯಿಸಿತ್ತು. ಲಿಯಾಂಡರ್‌ ಪೇಸ್‌ ಟೆನಿಸ್‌ ಸಿಂಗಲ್ಸ್‌ ವಿಭಾಗದಲ್ಲಿ ಕಂಚು ಜಯಿಸಿದ್ದರು. ವೈಯಕ್ತಿಕ ವಿಭಾಗದಲ್ಲಿ 44 ವರ್ಷಗಳ ಬಳಿಕ ಭಾರತಕ್ಕೆ ಒಲಿದ ಪದಕ ಇದಾಗಿತ್ತು. ಇಲ್ಲಿ ಲಿಯಾಂಡರ್‌ ಪೇಸ್‌ ಬ್ರೆಜಿಲ್‌ನ ಫೆರ್ನಾಂಡೊ ಮೆಲಿಗಿನಿ ಅವರನ್ನು ಮಣಿಸಿ ಪದಕಕ್ಕೆ ಕೊರಳೊಡ್ಡಿದ್ದರು.

Independence Day 2024
Independence Day 2024


2000ರಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳೆ

2000ದಲ್ಲಿ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆದಿದ್ದ ಒಲಿಂಪಿಕ್ಸ್​ ಕ್ರೀಡಾಕೂಟದಲ್ಲಿ ಆಂಧ್ರ ಪ್ರದೇಶ ಮೂಲದ ಕರ್ಣಂ ಮಲ್ಲೇಶ್ವರಿ ವೇಟ್‌ಲಿಫ್ಟಿಂಗ್‌ನಲ್ಲಿ ಕಂಚಿನ ಪದಕ ಜಯಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದರು. ಒಲಿಂಪಿಕ್ಸ್‌ನಲ್ಲಿ ಪದಕ ಜಯಿಸಿದ ಭಾರತದ ಮೊಟ್ಟ ಮೊದಲ ಮಹಿಳಾ ಕ್ರೀಡಾಪಟು ಎನಿಸಿಕೊಂಡಿದ್ದರು. 69 ಕೆಜಿ ವಿಭಾಗದಲ್ಲಿ ಮಲ್ಲೇಶ್ವರಿ ಈ ಸಾಧನೆ ಮಾಡಿದ್ದರು.

2004ರಲ್ಲಿ ಒಂದು ಪದಕ

2004ರಲ್ಲಿ ಗ್ರೀಸ್‌ನ ಅಥೆನ್ಸ್‌ನಲ್ಲಿ ನಡೆದ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಭಾರತಕ್ಕೆ ಏಕೈಕ ಪದಕ ಮಾತ್ರ ಲಭಿಸಿತು. ರಾಜಸ್ಥಾನದ ಶೂಟರ್‌ ರಾಜ್ಯವರ್ಧನ್‌ ಸಿಂಗ್‌ ರಾಥೋಡ್‌ ಪುರುಷರ ಡಬಲ್‌ ಟ್ರಾಯಪ್‌ ವಿಭಾಗದಲ್ಲಿ ಬೆಳ್ಳಿ ಪದಕಕ್ಕೆ ಗುರಿ ಇರಿಸಿ ಈ ಪದಕ ತಂದುಕೊಟ್ಟಿದ್ದರು. ಈ ಸಾಧನೆಯೊಂದಿಗೆ ವೈಯಕ್ತಿಕ ವಿಭಾಗದಲ್ಲಿ ರಜತ ಗೆದ್ದ ಮೊದಲ ಭಾರತೀಯರೆನಿಸಿದರು.

Independence Day 2024
Independence Day 2024


2008ರಲ್ಲಿ ಮೊದಲ ವೈಯಕ್ತಿಕ ಚಿನ್ನ

ಖಾಸಾಬಾ ದಾದಾ ಸಾಹೇಬ್‌ ಜಾಧವ್‌ ಬಳಿಕ 2008ರ ಚೀನದ ಬೀಜಿಂಗ್ ಕ್ರೀಡಾಕೂಟದ ಶೂಟಿಂಗ್‌ನಲ್ಲಿ ಅಭಿನವ್ ಬಿಂದ್ರಾ ವೈಯಕ್ತಿಕ ಚಿನ್ನದ ಕನಸು ನನಸು ಮಾಡಿದರು. ಬಿಂದ್ರಾ ಅವರ ಸಾಧನೆ ರಾತ್ರೋರಾತ್ರಿ ಅವರನ್ನು ದೇಶಾದ್ಯಂತ ಪ್ರಸಿದ್ಧರನ್ನಾಗಿ ಮಾಡಿತು.

ಒಲಿಂಪಿಕ್ಸ್‌ ಭಾರತದ ಕ್ರೀಡಾ ಇತಿಹಾಸದಲ್ಲೇ ಅತ್ಯಂತ ಅವಿಸ್ಮರಣೀಯ ಕೂಟ ಇದಾಗಿದೆ. ಸ್ವತಂತ್ರ ಭಾರತದಲ್ಲಿ ವೈಯಕ್ತಿಕ ವಿಭಾಗದಲ್ಲಿ ಮೊದಲ ಸ್ವರ್ಣ ಸಾಧನೆ ಮಾಡಿದ್ದು ಇದೇ ಕೂಟದಲ್ಲಿ. ಅಲ್ಲದೆ ಮೊಟ್ಟ ಮೊದಲ ಬಾರಿಗೆ ಒಂದೇ ಕೂಟದಲ್ಲಿ 3 ಪದಕಗಳು ಭಾರತದ ಪಾಲಾಗಿದ್ದವು.

ಅಭಿನವ್‌ ಬಿಂದ್ರ 10 ಮೀ. ಏರ್‌ ರೈಫ‌ಲ್‌ನಲ್ಲಿ ಸ್ವರ್ಣ ಗೆದ್ದು ಇತಿಹಾಸ ನಿರ್ಮಿಸಿದ್ದರು. ಕುಸ್ತಿಪಟು ಸುಸೀಲ್‌ ಕುಮಾರ್‌ ಪುರುಷರ ಕುಸ್ತಿಯ 75 ಕೆಜಿ ವಿಭಾಗದಲ್ಲಿ ಕಂಚು ಗೆದ್ದರೆಮ ಬಾಕ್ಸಿಂಗ್‌ನಲ್ಲಿ ವಿಜೇಂದರ್‌ ಸಿಂಗ್‌ 66 ಕೆಜಿ ವಿಭಾಗದಲ್ಲಿ ಕಂಚು ಜಯಿಸಿದ್ದರು.

2012ರಲ್ಲಿ ಆರು ಪದಕ

ಲಂಡನ್‌ನಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಭಾರತ ಅಮೋಘ ಸಾಧನೆಯೊಂದನ್ನು ಮಾಡಿತು. ಶೂಟಿಂಗ್‌, ಬಾಕ್ಸಿಂಗ್‌, ಬ್ಯಾಡ್ಮಿಂಟನ್‌, ಕ್ಷೇತ್ರಕ್ಕೆ ಹೊಸ ಆಯಾಮ ಸೃಷ್ಟಿಸಿದ ಕೂಟ ಇದಾಗಿತ್ತು. 2 ಬೆಳ್ಳಿ ಹಾಗೂ 4 ಕಂಚಿನ ಪದಕಗಳು ಭಾರತದ ಪಾಲಾದವು. ಶೂಟಿಂಗ್‌ನಲ್ಲಿ ವಿಜಯ್‌ ಕುಮಾರ್‌ 25 ಮೀ. ರ್ಯಾಪಿಟ್‌ ಫೈರ್‌ ಪಿಸ್ತೂಲ್‌ನಲ್ಲಿ ಬೆಳ್ಳಿ ಗೆದ್ದರೆ, ಸುಶೀಲ್‌ ಕುಮಾರ್‌ ಪುರುಷರ 66 ಕೆಜಿ ಫ್ರೀ ಸ್ಟೈಲ್‌ನಲ್ಲಿ ರಜತ ಸಾಧನೆಯೊಂದಿಗೆ ಸತತ 2ನೇ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಪದಕ ಜಯಿಸಿದರು. ಮತ್ತೊಬ್ಬ ಶೂಟರ್‌ ಗಗನ್‌ ನಾರಂಗ್‌ (10 ಮೀ ಏರ್‌ ರೈಫ‌ಲ್‌), ಬ್ಯಾಡ್ಮಿಂಟನ್‌ ತಾರೆ ಸೈನಾ ನೆಹ್ವಾಲ್‌, ಬಾಕ್ಸರ್‌ ಮೇರಿ ಕೋಮ್‌ ಹಾಗೂ ಮತ್ತೊಬ್ಬ ಕುಸ್ತಿಪಟು ಯೋಗೇಶ್ವರ್‌ ದತ್‌ ಕಂಚಿನ ಪದಕ ಜಯಿಸಿದರು.

2016ರಲ್ಲಿ ಬೆಳ್ಳಿ, ಕಂಚು

ಲಂಡನ್‌ನಲ್ಲಿ ಅರ್ಧ ಡಜನ್‌ ಪದಕ ಗೆದ್ದಿದ್ದ ಭಾರತದ ಕ್ರೀಡಾಪಟುಗಳ ಮೇಲೆ ರಿಯೋ ಒಲಿಂಪಿಕ್ಸ್‌ನಲ್ಲಿ ಅಪಾರ ಪದಕ ನಿರೀಕ್ಷೆ ಮಾಡಲಾಗಿತ್ತು. ಆದರೆ, ಈ ಎಲ್ಲ ನಿರೀಕ್ಷೆ ಹುಸಿಗೊಂಡಿತು.

ಭಾರತ ಕೇವಲ 2 ಪದಕಕ್ಕೆ ಮಾತ್ರ ಸೀಮಿತವಾಯಿತು. ಭಾರತದ ಸ್ಟಾರ್‌ ಬ್ಯಾಡ್ಮಿಂಟನ್‌ ಆಟಗಾರ್ತಿ ಪಿ.ವಿ. ಸಿಂಧು ಕೊನೆಯ ಹಂತದಲ್ಲಿ ಎಡವಿ ಚಿನ್ನದ ಪದಕದಿಂದ ವಂಚಿತರಾಗಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟರು. ಆದರೆ, ಸಿಂಧು ಬ್ಯಾಡ್ಮಿಂಟನ್‌ ಮಹಿಳಾ ಸಿಂಗಲ್ಸ್‌ ವಿಭಾಗದಲ್ಲಿ ಫೈನಲ್‌ ಪ್ರವೇಶಿಸಿದ ಮೊದಲ ಭಾರತೀಯ ಶಟ್ಲರ್‌ ಎನಿಸಿಕೊಂಡರು. ಇತ್ತೀಚೆಗೆ ಕುಸ್ತಿಗೆ ನಿವೃತ್ತಿ ಹೇಳಿದ್ದ ಸಾಕ್ಷಿ ಮಲಿಕ್‌ ಕೂಡ ಈ ಒಲಿಂಪಿಕ್ಸ್​ನಲ್ಲಿ ಕಂಚಿನ ಪದಕ ಜಯಿಸಿದ್ದರು.

Independence Day 2024
Independence Day 2024


2021ರಲ್ಲಿ ಮೊದಲ ಟ್ರ್ಯಾಕ್ ಮತ್ತು ಫೀಲ್ಡ್ ಚಿನ್ನ

ಕೊರೊನಾ ಮಹಾಮಾರಿ ಸಾಂಕ್ರಾಮಿಕ ರೋಗದಿಂದ ಹಲವು ಕಟ್ಟುಪಾಡುಗಳ ನಡುವೆ ಜಪಾನ್​ನ ಟೋಕಿಯೊದಲ್ಲಿ ನಡೆದಿದ್ದ ಒಲಿಂಪಿಕ್ಸ್​ನಲ್ಲಿ ಸ್ಟಾರ್​ ಜಾವೆಲಿನ್​ ಎಸೆತಗಾರ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದು ಒಲಿಂಪಿಕ್ಸ್‌ನ ಟ್ರ್ಯಾಕ್‌ ಇವೆಂಟ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಈ ಕ್ರೀಡಾ ಕೂಟದಲ್ಲಿ ಭಾರತ ಒಟ್ಟು 7 ಪದಕ ಜಯಿಸಿತ್ತು. ಇದರಲ್ಲಿ ಒಂದು ಚಿನ್ನ, 2 ಬೆಳ್ಳಿ ಮತ್ತು 4 ಕಂಚಿನ ಪದಕ ಒಳಗೊಂಡಿತ್ತು. ಒಟ್ಟಾರೆಯಾಗಿ ಭಾರತ ಪದಕ ಪಟ್ಟಿಯಲ್ಲಿ 48ನೇ ಸ್ಥಾನ ಪಡೆದಿತ್ತು. 

ಇದನ್ನೂ ಓದಿ: Manu Bhaker: ಒಂದೇ ಆವೃತ್ತಿಯಲ್ಲಿ 2 ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಮನು ಭಾಕರ್

ಪಿ ವಿ ಸಿಂಧು ಕಂಚಿನ ಪದಕ ಜಯಿಸಿ ಸತತವಾಗಿ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ಸಾಧನೆ ಮಾಡಿದರು. ಭಾರತದ ಪುರುಷರ ಹಾಕಿ ತಂಡ ಕಂಚಿನ ಪದಕ ಗೆದ್ದು 1980ರ ಬಳಿಕ ಮೊದಲ ಬಾರಿಗೆ ಒಲಿಂಪಿಕ್ ಹಾಕಿಯಲ್ಲಿ ಪದಕ ಗೆದ್ದು ಸಂಭ್ರಮಿಸಿತ್ತು.

ಬಾಕ್ಸರ್​ ಲವ್ಲೀನಾ ಬೋರ್ಗೊಹೈನ್ ಕಂಚು ಗೆದ್ದರೆ, ಮೀರಾಬಾಯಿ ಚಾನು ಬೆಳ್ಳಿಯೊಂದಿಗೆ ಮಿನುಗಿದರು. ಕುಸ್ತಿಪಟು ರವಿ ದಹಿಯಾ ಬೆಳ್ಳಿ, ಬಜರಂಗ್ ಪೂನಿಯಾ ಕಂಚು ಗೆದ್ದರು.​

Continue Reading
Advertisement
Sheikh Hasina
ಪ್ರಮುಖ ಸುದ್ದಿ5 mins ago

Sheikh Hasina: ರಾಜೀನಾಮೆ ನೀಡಿ ಶೇಖ್‌ ಹಸೀನಾ ವಿದೇಶಕ್ಕೆ ಪಲಾಯನ; ಸುರಕ್ಷತೆಗಾಗಿ ಭಾರತಕ್ಕೆ ಆಗಮನ?

Nia Sharma Trolled For Wearing Plunging Neckline Bralette
ಬಾಲಿವುಡ್10 mins ago

Nia Sharma: ಬ್ರಾ ಧರಿಸಿ ಪೋಸ್‌ ಕೊಟ್ಟ ಕಿರುತೆರೆ ನಟಿ ನಿಯಾ ಶರ್ಮಾರನ್ನು ಕಾಲೆಳೆದ ನೆಟ್ಟಿಗರು!

Emergency Landing
ವೈರಲ್ ನ್ಯೂಸ್31 mins ago

Emergency Landing: ವಿಮಾನದ ಎಮರ್ಜೆನ್ಸಿ ಲ್ಯಾಂಡಿಂಗ್‌ಗೆ ಕಾರಣವಾಯ್ತು ಹೇನು! ಏನಿದು ವಿಚಿತ್ರ ಪ್ರಕರಣ? ಇಲ್ಲಿದೆ ವಿವರ

BJP-JDS Padayatra
ಪ್ರಮುಖ ಸುದ್ದಿ38 mins ago

BJP-JDS Padayatra: ಪಾದಯಾತ್ರೆ ವೇಳೆ ಹೃದಯಾಘಾತದಿಂದ ಜೆಡಿಎಸ್ ಕಾರ್ಯಕರ್ತೆ ಸಾವು

Bangladesh Protests
ಪ್ರಮುಖ ಸುದ್ದಿ42 mins ago

Bangladesh Protests: ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ, ದೇಶದಿಂದ ಪಲಾಯನ; ಪ್ರಧಾನಿ ಅರಮನೆಗೇ ಬೆಂಕಿ ಹಚ್ಚಿದ ಪ್ರತಿಭಟನಾಕಾರರು

Shira News
ತುಮಕೂರು1 hour ago

Shira News: ಶಿರಾ ನಗರಸಭೆಯಿಂದ ದೊಡ್ಡಕೆರೆಯ ಸುತ್ತಲಿನ ಪ್ರದೇಶದ ಸ್ವಚ್ಛತೆ

Shravana 2024
ಧಾರ್ಮಿಕ1 hour ago

Shravana 2024: ಶ್ರಾವಣ ಉಪವಾಸದ ವೇಳೆ ಈ 5 ಪಾನೀಯ ಆರೋಗ್ಯಕರ

bs yediyurappa
ಪ್ರಮುಖ ಸುದ್ದಿ1 hour ago

BS Yediyurappa: ಮುಂದಿನ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್‌ 150 ಸೀಟು ಖಚಿತ: ಬಿಎಸ್‌ ಯಡಿಯೂರಪ್ಪ

PSI Parashuram Case
ಕರ್ನಾಟಕ1 hour ago

PSI Parashuram Case: ನಾನು ಯಾವ ಪೊಲೀಸ್‌ ಬಳಿಯೂ ದುಡ್ಡು ಕೇಳಿಲ್ಲ: ಶಾಸಕ ಚನ್ನಾರೆಡ್ಡಿ ಪಾಟೀಲ

Snake Bite
ವೈರಲ್ ನ್ಯೂಸ್2 hours ago

Snake Bite: ಹಾವು ಹಿಡಿಯುವವನನ್ನು ಕಚ್ಚಿ ತಾನೇ ಜೀವ ಬಿಟ್ಟ ಕಾಳಿಂಗ ಸರ್ಪ! ಸಾವಿಗೆ ಕಾರಣ ಏನು?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ1 day ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ4 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ4 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ6 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ6 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ7 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ7 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌