Viral Video: ಸೈಕಲ್‌ ಮೇಲೆ ಶಾಲೆಗೆ ಹೋಗುತ್ತಿದ್ದ ಮಕ್ಕಳಿಬ್ಬರಿಗೆ ವಿದ್ಯುತ್‌ ಶಾಕ್‌; ಕ್ಯಾಮೆರಾದಲ್ಲಿ ಸೆರೆಯಾಯ್ತು ಘೋರ ದೃಶ್ಯ - Vistara News

Latest

Viral Video: ಸೈಕಲ್‌ ಮೇಲೆ ಶಾಲೆಗೆ ಹೋಗುತ್ತಿದ್ದ ಮಕ್ಕಳಿಬ್ಬರಿಗೆ ವಿದ್ಯುತ್‌ ಶಾಕ್‌; ಕ್ಯಾಮೆರಾದಲ್ಲಿ ಸೆರೆಯಾಯ್ತು ಘೋರ ದೃಶ್ಯ

ಬೀದಿಯಲ್ಲಿ ಜನರ ಕಣ್ಣ ಮುಂದೆಯೇ (Viral Video) ಈ ಘೋರ ದುರಂತ ನಡೆದಿದೆ. ಈ ಘಟನೆಗೆ ಸಂಬಂಧಪಟ್ಟ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ (Viral Video) ಆಗಿದೆ. ವಿದ್ಯಾರ್ಥಿಗಳಿಬ್ಬರು ವಿದ್ಯಾಸಾಗರ್ ಶಾಲೆಯಲ್ಲಿ 10 ಮತ್ತು 8ನೇ ತರಗತಿಯಲ್ಲಿ ಓದುತ್ತಿದ್ದು, ಬೆಳಗ್ಗೆ ಒಂದೇ ಸೈಕಲ್‍ನಲ್ಲಿ ಶಾಲೆಗೆ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಇದರಲ್ಲಿ ಒಬ್ಬ ವಿದ್ಯಾರ್ಥಿ ಸಾವನ್ನಪ್ಪಿದ್ದು, ಇನ್ನೊಬ್ಬನ ಸ್ಥಿತಿ ಗಂಭೀರವಾಗಿದೆ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo


ಆಂಧ್ರಪ್ರದೇಶದ ಕಡಪದಲ್ಲಿ ಬುಧವಾರ ಬೆಳಗ್ಗೆ ಸೈಕಲ್‌ ಮೇಲೆ ಶಾಲೆಗೆ ತೆರಳುತ್ತಿದ್ದ ಇಬ್ಬರು ಪುಟ್ಟ ವಿದ್ಯಾರ್ಥಿಗಳು ವಿದ್ಯುತ್‌ ತಂತಿ ಸ್ಪರ್ಶಕ್ಕೆ ಒಳಗಾಗಿದ್ದಾರೆ. ಒಬ್ಬ ವಿದ್ಯಾರ್ಥಿ ಕೆಲವೇ ಕ್ಷಣಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾನೆ. ಮತ್ತೊಬ್ಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಇಂಟರ್ನ್ಯಾಷನಲ್ ವೆಲ್ಫೇರ್ ಮಂಟಪಂ ಬಳಿಯ ಅಂಗಡಿ ಬೀದಿಯಲ್ಲಿ ಜನರ ಕಣ್ಣ ಮುಂದೆಯೇ ಈ ಘೋರ ದುರಂತ ನಡೆದಿದೆ. ಈ ಘಟನೆಗೆ ಸಂಬಂಧಪಟ್ಟ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ (Viral Video) ಆಗಿದೆ. ವಿದ್ಯಾರ್ಥಿಗಳಿಬ್ಬರು ವಿದ್ಯಾಸಾಗರ್ ಶಾಲೆಯಲ್ಲಿ 10 ಮತ್ತು 8ನೇ ತರಗತಿಯಲ್ಲಿ ಓದುತ್ತಿದ್ದು, ಬೆಳಗ್ಗೆ ಒಂದೇ ಸೈಕಲ್‍ನಲ್ಲಿ ಶಾಲೆಗೆ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಇದರಲ್ಲಿ ಒಬ್ಬ ವಿದ್ಯಾರ್ಥಿ ಸಾವನ್ನಪ್ಪಿದ್ದು, ಇನ್ನೊಬ್ಬನ ಸ್ಥಿತಿ ಗಂಭೀರವಾಗಿದೆ.

ಘಟನೆಯ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಇಬ್ಬರು ಹುಡುಗರು ಸೈಕಲ್‍ನಲ್ಲಿ ಬರುತ್ತಿರುವಾಗ ವಿದ್ಯುತ್ ತಂತಿಯನ್ನು ಸ್ಪರ್ಶಿಸಿದ್ದು, ತಕ್ಷಣವೇ ಸೈಕಲ್‍ನಿಂದ ಕೆಳಗೆ ಬಿದ್ದಿದ್ದಾರೆ. ಕೆಲವು ಕ್ಷಣಗಳ ನಂತರ, ಒಬ್ಬ ವಿದ್ಯಾರ್ಥಿಯ ದೇಹಕ್ಕೆ ಮತ್ತು ಸೈಕಲ್ ಗೆ ಬೆಂಕಿ ಹೊತ್ತಿಕೊಂಡಿತು ಮತ್ತು ಇನ್ನೊಬ್ಬ ಹುಡುಗ ಅವನ ಪಕ್ಕದಲ್ಲಿ ಚಲನೆಯಿಲ್ಲದೆ ಬಿದ್ದಿದ್ದ.
ವರದಿಗಳ ಪ್ರಕಾರ, ವಿದ್ಯಾರ್ಥಿಗಳಲ್ಲಿ ಒಬ್ಬನನ್ನು ತನ್ವೀರ್ ಎಂದು ಗುರುತಿಸಲಾಗಿದ್ದು, ಆತ ತೀವ್ರ ಸುಟ್ಟಗಾಯಗಳಿಂದ ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ದು, ಅವನನ್ನು ಸ್ಥಳೀಯರು ತಕ್ಷಣ ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ಅವನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

ಈ ಭಯಾನಕ ಘಟನೆಯ ವಿಡಿಯೊವನ್ನು ನಬಿಲಾ ಜಮಾಲ್ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. ಕಾಮೆಂಟ್ ವಿಭಾಗದಲ್ಲಿ ನೆಟ್ಟಿಗರು ಮಿಶ್ರ ಪ್ರತಿಕ್ರಿಯೆಯೊಂದಿಗೆ ಆ ವಿಡಿಯೊಗೆ ಬೇಸರದಿಂದ , ಕೋಪದಿಂದ, ಅಳುತ್ತಾ ಕಾಮೆಂಟ್ ಮಾಡಿದ್ದಾರೆ, “ನೀವು ಮನೆಯಿಂದ ಹೊರಗೆ ಬರದಿದ್ದರೆ ಇಂತಹ ದುರಂತ ನಡೆಯದೆ ಸುರಕ್ಷಿತವಾಗಿರುತ್ತಿದ್ದೀರಿʼʼ ಎಂದು ವೀಕ್ಷಕರೊಬ್ಬರು ದುಃಖಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಸುರಕ್ಷತಾ ಕ್ರಮಗಳಿಲ್ಲದ ಕಾರಣ ಅವರು ಇಂತಹ ಹತಾಶೆಯನ್ನು ವ್ಯಕ್ತಪಡಿಸಿದ್ದಾರೆ. ಮತ್ತೊಂದು ಕಾಮೆಂಟ್‌ನಲ್ಲಿ ಒಬ್ಬರು ನಿರ್ಲಕ್ಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ” ಇದು ತುಂಬಾ ದುಃಖಕರವಾಗಿದೆ. ಇಂಥ ದುರಂತ ಸಂಭವಿಸುವ ಮೊದಲು ಸುತ್ತಮುತ್ತಲಿನ ಜನ ವಿದ್ಯುತ್ ಇಲಾಖೆಗೆ ದೂರು ನೀಡಲು ಸಾಧ್ಯವಾಗಲಿಲ್ಲ ಏಕೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ:ಹೆಣ್ಣಿನ ಮೇಲೆ ಆಸೆಯಾದರೆ ನಮ್ಮ ಬಳಿ ಬನ್ನಿ; ಕಾಮುಕರಿಗೆ ಯುವತಿಯ ಮುಕ್ತ ಆಹ್ವಾನ!

ಈ ಘಟನೆಯು ಸಾರ್ವಜನಿಕ ಸುರಕ್ಷತೆ ಮತ್ತು ಮೂಲಸೌಕರ್ಯ ನಿರ್ವಹಣೆಯ ಬಗ್ಗೆ ಗಂಭೀರ ವಿಷಯವನ್ನು ಬೆಳಕಿಗೆ ತರುತ್ತದೆ. ಅಂತಹ ಜನನಿಬಿಡ ಸ್ಥಳಗಳಲ್ಲಿ ಕರೆಂಟ್ ತಂತಿ ಬಿದ್ದಿರುವುದು ಸ್ಥಳೀಯ ಅಧಿಕಾರಿಗಳು ಸರಿಯಾದ ಸಮಯದಲ್ಲಿ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂಬುದನ್ನು ಸೂಚಿಸುತ್ತದೆ. ಇಂತಹ ದುರಂತಗಳನ್ನು ತಪ್ಪಿಸಲು ಜಾಗರೂಕತೆ ಮತ್ತು ತ್ವರಿತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ಇಂತಹ ಸ್ಥಳಗಳಲ್ಲಿ ನಿಯಮಿತವಾಗಿ ಅಧಿಕಾರಿಗಳು ಕೆಲಸ ನಿರ್ವಹಿಸುವುದು ಮತ್ತು ತಪಾಸಣೆ ಮಾಡುತ್ತಿರುಬೇಕು ಎಂಬುದನ್ನು ತಿಳಿಸುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

CM Siddaramaiah: ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆಗೆ ಸಿದ್ದರಾಮಯ್ಯ ಸೂಚನೆ

CM Siddaramaiah: ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ತಮ್ಮನ್ನು ಭೇಟಿ ಮಾಡಿದ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಸ್ವಾಮೀಜಿ, ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದ ಶಾಸಕರ ಮತ್ತು ಸಮುದಾಯದ ಮುಖಂಡರ ನಿಯೋಗದ ಬೇಡಿಕೆಗೆ ಸಿಎಂ ಸ್ಪಂದಿಸಿ ಹೆಚ್ಚುವರಿ ಅನುದಾನ ಬಿಡುಗಡೆಗೊಳಿಸಲು ಸ್ಥಳದಲ್ಲೇ ಅಧಿಕಾರಿಗಳಿಗೆ ಸೂಚನೆ ನೀಡಿದರು.

VISTARANEWS.COM


on

CM Siddaramaiah
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ತಮ್ಮನ್ನು ಭೇಟಿ ಮಾಡಿದ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಸ್ವಾಮೀಜಿ ಮತ್ತು ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದ ಶಾಸಕರ ಮತ್ತು ಸಮುದಾಯದ ಮುಖಂಡರ ನಿಯೋಗದ ಬೇಡಿಕೆಗೆ ಸಿಎಂ ಸ್ಪಂದಿಸಿ ಹೆಚ್ಚುವರಿ ಅನುದಾನ ಬಿಡುಗಡೆಗೊಳಿಸಲು ಸ್ಥಳದಲ್ಲೇ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ: CLP Meeting: ಮುಡಾ ಹಗರಣ; ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಪರ ನಿಂತ ಶಾಸಕರು

ವಾಲ್ಮೀಕಿ ನಿಗಮಕ್ಕೆ ಈ ಹಿಂದೆ ನೀಡಲಾಗಿದ್ದ 84.63 ಕೋಟಿ ಅನುದಾನದಲ್ಲಿ 50 ಕೋಟಿಯನ್ನು ಎಸ್‌ಐಟಿ ಅಧಿಕಾರಿಗಳು ಬ್ಯಾಂಕ್ ಖಾತೆಯಲ್ಲೇ ಫ್ರೀಜ್ ಮಾಡಿಟ್ಟಿದ್ದಾರೆ. ಪ್ರಕರಣದ ತನಿಖೆ ಮುಂದುವರೆದಿದ್ದು ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಆಗಿರುವ ಸುಮಾರು 30 ಕೋಟಿಯಷ್ಟು ಹಣವನ್ನು ವಾಪಾಸ್ ವಶಕ್ಕೆ ಪಡೆಯುವ ಪ್ರಯತ್ನ ಮುಂದುವರೆದಿದೆ. ಸದ್ಯದಲ್ಲೇ ಪೂರ್ತಿ ಹಣವನ್ನು ವಾಪಾಸ್ ವಶಕ್ಕೆ ಪಡೆಯುವ ಸಾಧ್ಯತೆಗಳಿವೆ. ಅಲ್ಲಿಯವರೆಗೂ ವಾಲ್ಮೀಕಿ ಸಮುದಾಯದ ಅಭಿವೃದ್ಧಿ ಕೆಲಸಗಳಿಗೆ ತೊಂದರೆ ಆಗಬಾರದು ಎನ್ನುವ ಉದ್ದೇಶದಿಂದ ನಿಗಮಕ್ಕೆ ತಕ್ಷಣವೇ ಹೆಚ್ಚುವರಿ ಅನುದಾನ ಬಿಡುಗಡೆಗೆ ಸೂಚನೆ ನೀಡಿದರು.

ಪ್ರಕರಣ ಪೂರ್ತಿ ಇತ್ಯರ್ಥ ಆಗುವವರೆಗೂ ನಿಗಮದ ಮತ್ತು ಸಮುದಾಯದ ಕೆಲಸಗಳಿಗೆ ತೊಂದರೆ ಆಗಬಾರದು ಎನ್ನುವುದು ನಮ್ಮ ಆದ್ಯತೆಯಾಗಿದೆ. ಹೀಗಾಗಿ ಹಣ ಬಿಡುಗಡೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿಗಳು ನಿಯೋಗಕ್ಕೆ ಸ್ಪಷ್ಟಪಡಿಸಿದರು.

ಇದನ್ನೂ ಓದಿ: Job market: ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ; ವರ್ಷಾಂತ್ಯದೊಳಗೆ ಹೊಸಬರ ನೇಮಕಕ್ಕೆ ಮುಂದಾದ ಶೇ. 72ರಷ್ಟು ಕಂಪನಿಗಳು!

ಈ ವೇಳೆ ಶಾಸಕರಾದ ಕಂಪ್ಲಿ ಗಣೇಶ್, ರಘುಮೂರ್ತಿ, ಕೋನರೆಡ್ಡಿ, ಸಮುದಾಯದ ಮುಖಂಡರಾದ ನಿವೃತ್ತ ಕೆಎಎಸ್‌ ಅಧಿಕಾರಿ ಮೃತ್ಯುಂಜಯಪ್ಪ ಸೇರಿ ಸಮಾಜದ ಹಲವು ಹಿರಿಯರು ಉಪಸ್ಥಿತರಿದ್ದರು.

Continue Reading

ಮನಿ-ಗೈಡ್

Fixed Deposits: ಪೋಸ್ಟ್ ಆಫೀಸ್ ಎಫ್‌ಡಿ; ಬಡ್ಡಿ ದರ ಎಷ್ಟು, ಏನೆಲ್ಲ ಲಾಭ?

ಕಷ್ಟಪಟ್ಟುಗಳಿಸಿದ ಹಣವನ್ನು ಹೂಡಿಕೆ ಮಾಡಲು ಸುರಕ್ಷಿತ ಆಯ್ಕೆಯನ್ನು ಹುಡುಕುತ್ತಿದ್ದರೆ ಭದ್ರತೆಯನ್ನು ಒದಗಿಸುವ ಯೋಜನೆಗಿಂತ ಉತ್ತಮವಾದದ್ದು ಯಾವುದೂ ಇಲ್ಲ. ಅಂಚೆ ಕಚೇರಿಯ ಫಿಕ್ಸೆಡ್ ಡೆಪಾಸಿಟ್‌ನಲ್ಲಿ (Fixed Deposits) ಹೂಡಿಕೆ ಮಾಡಿದರೆ ಉತ್ತಮ ಆದಾಯದೊಂದಿಗೆ ಸಾಕಷ್ಟು ಪ್ರಯೋಜನವನ್ನು ಪಡೆಯಬಹುದು. ಈ ಕುರಿತ ಸರಳ ಮಾಹಿತಿ ಇಲ್ಲಿದೆ.

VISTARANEWS.COM


on

By

Fixed Deposits
Koo

ಸುರಕ್ಷಿತ ಮತ್ತು ವಿಶ್ವಾಸಾರ್ಹ ಹೂಡಿಕೆಯಾಗಿ ಎಲ್ಲರ ಗಮನ ಸೆಳೆಯುವ ಪೋಸ್ಟ್ ಆಫೀಸ್‌ನ (post office) ಫಿಕ್ಸೆಡ್ ಡೆಪಾಸಿಟ್‌ಗಳನ್ನು (Fixed Deposits) ಟರ್ಮ್ ಡಿಪಾಸಿಟ್‌ಗಳು (term deposits) ಎಂದೂ ಕರೆಯಲಾಗುತ್ತದೆ. ಇದೊಂದು ಅದ್ಭುತ ಯೋಜನೆಯಾಗಿದ್ದು, ಹೂಡಿಕೆ ಬಗ್ಗೆ ಯೋಚನೆ ಮಾಡುತ್ತಿದ್ದರೆ ಇದರಲ್ಲಿ ಹೂಡಿಕೆ (investment) ಮಾಡಬಹುದು. ಅದಕ್ಕೂ ಮೊದಲು ಇದರ ಬಗ್ಗೆ ಸಂಪೂರ್ಣ ತಿಳಿದುಕೊಂಡರೆ ಒಳ್ಳೆಯದು.

ಪೋಸ್ಟ್ ಆಫೀಸ್ ಎಫ್‌ಡಿ ಅಥವಾ ಟರ್ಮ್ ಡೆಪಾಸಿಟ್‌ಗಳು ಇಂಡಿಯಾ ಪೋಸ್ಟ್ ಮೂಲಕ ಉಳಿತಾಯ ಮಾಡುವ ಸುರಕ್ಷಿತ ಮತ್ತು ಸುಲಭವಾದ ಮಾರ್ಗಗಳಾಗಿವೆ.

ಬ್ಯಾಂಕ್‌ಗಳು ಎಲ್ಲ ಕಡೆ ಲಭ್ಯವಿರುವುದಿಲ್ಲ. ಹೀಗಾಗಿ ಹತ್ತಿರದ ಪೋಸ್ಟ್ ಆಫೀಸ್‌ನಲ್ಲಿ ಸಿಗುವ ಕೆಲವೊಂದು ಪ್ರಯೋಜನಗಳನ್ನು ನಾವು ಸುಲಭವಾಗಿ ಪಡೆಯಬಹುದು. ಪೋಸ್ಟ್ ಆಫೀಸ್‌ನಲ್ಲಿ ಲಭ್ಯವಿರುವ ಎಫ್‌ಡಿ ಯೋಜನೆಯು ಠೇವಣಿದಾರರಿಗೆ ಹೆಚ್ಚಿನ ಬಡ್ಡಿದರದೊಂದಿಗೆ ತಮ್ಮ ಹಣವನ್ನು ಉಳಿಸಲು ಅವಕಾಶ ನೀಡುತ್ತದೆ. ಪೋಸ್ಟ್ ಆಫೀಸ್ ಎಫ್‌ಡಿ ಯೋಜನೆಯು ಗ್ರಾಮೀಣ ಜನರಲ್ಲಿ ವಿಶೇಷವಾಗಿ ಅಚ್ಚುಮೆಚ್ಚಿನದ್ದಾಗಿದೆ. ಯಾಕೆಂದರೆ ಇದು ಭಾರತದಲ್ಲಿನ ಅಗ್ರ ಸ್ಥಿರ ಠೇವಣಿ ಪೂರೈಕೆದಾರರಲ್ಲಿ ಒಂದಾಗಿದೆ.

2024ರ ಬಡ್ಡಿ ದರಗಳು

ಪೋಸ್ಟ್ ಆಫೀಸ್‌ನಲ್ಲಿ ಎಫ್‌ಡಿ ಬಡ್ಡಿ ದರ ಇಂತಿದೆ. 1 ವರ್ಷಕ್ಕೆ ಶೇ. 6, 1 ವರ್ಷ 1 ದಿನದಿಂದ 2 ವರ್ಷಗಳ ವರೆಗೆ ಶೇ. 7, 2 ವರ್ಷ 1 ದಿನದಿಂದ 3 ವರ್ಷಗಳ ವರೆಗೆ ಶೇ. 7.1, 3 ವರ್ಷಗಳಿಂದ 5 ವರ್ಷಗಳವರೆಗೆ ಶೇ. 7.5ರಷ್ಟು ಬಡ್ಡಿ ದರವನ್ನು ನೀಡಲಾಗುತ್ತದೆ.

ಪ್ರಯೋಜನಗಳು ಏನೇನು?

ಪೋಸ್ಟ್ ಆಫೀಸ್‌ನ ಎಫ್‌ಡಿಯಲ್ಲಿ ಒಂದು ವರ್ಷದಿಂದ ಐದು ವರ್ಷಗಳವರೆಗೆ ಹೂಡಿಕೆಯ ಅವಧಿಯನ್ನು ಆಯ್ಕೆ ಮಾಡಬಹುದು. ಒಬ್ಬ ವ್ಯಕ್ತಿಯು ಯಾವುದೇ ಅಂಚೆ ಕಚೇರಿಯಲ್ಲಿ ತನಗೆ ಬೇಕಾದಷ್ಟು ಎಫ್‌ಡಿ ಖಾತೆಗಳನ್ನು ತೆರೆಯಬಹುದು. ಖಾತೆಗಳನ್ನು 10 ವರ್ಷ ಮತ್ತು ಮೇಲ್ಪಟ್ಟವರು ಯಾರಾದರೂ ತೆರೆಯಬಹುದು. ಅಂತಹ ಖಾತೆಗಳನ್ನು 18 ವರ್ಷ ತುಂಬಿದ ಅನಂತರ ಅಪ್ರಾಪ್ತರ ಹೆಸರಿಗೆ ವರ್ಗಾಯಿಸಬಹುದು.

ಠೇವಣಿ ಮಾಡಬೇಕಾದ ಕನಿಷ್ಠ ಮೊತ್ತ 200 ರೂ. ಆಗಿದ್ದು, ಗರಿಷ್ಠ ಮೊತ್ತಕ್ಕೆ ಮಿತಿ ಇಲ್ಲ. ಇದರಲ್ಲಿ ಜಂಟಿ ಖಾತೆಯನ್ನು ತೆರೆಯಲು ಅವಕಾಶವಿದೆ. ಅಗತ್ಯವಿರುವಂತೆ ಏಕ ಮತ್ತು ಜಂಟಿ ಖಾತೆ ನಡುವೆ ಬದಲಾಯಿಸಲೂಬಹುದು.
5 ವರ್ಷಗಳ ಹೂಡಿಕೆ ಮಾಡಿರುವ ಠೇವಣಿಗಳಿಗೆ ತೆರಿಗೆ ಕಾಯಿದೆಯ ಸೆಕ್ಷನ್ 80ಸಿ ಅಡಿಯಲ್ಲಿ ತೆರಿಗೆ ವಿನಾಯಿತಿಯನ್ನೂ ಪಡೆಯಬಹುದು. ಖಾತೆಗಳನ್ನು ಸುಲಭವಾಗಿ ಒಂದು ಅಂಚೆ ಕಚೇರಿಯಿಂದ ಇನ್ನೊಂದು ಅಂಚೆ ಕಚೇರಿಗೆ ವರ್ಗಾಯಿಸಬಹುದಾಗಿದೆ. ಎಲ್ಲ ಖಾತೆಗಳು ಆಯಾ ಕಾಲದ ಬಡ್ಡಿ ದರಗಳೊಂದಿಗೆ ಮುಕ್ತಾಯದ ಸಮಯದಲ್ಲಿ ಸ್ವಯಂ ಚಾಲಿತವಾಗಿ ಮರುಸಮತೋಲನಗೊಳ್ಳುತ್ತವೆ.

ಇದನ್ನೂ ಓದಿ: National Pension Scheme: ಎನ್‌ಪಿಎಸ್‌ನಲ್ಲಿ ದಿನಕ್ಕೆ 200 ರೂ. ಹೂಡಿಕೆ ಮಾಡಿದರೆ ಸಿಗುವ ಮಾಸಿಕ ಪಿಂಚಣಿ ಎಷ್ಟು ಗೊತ್ತೇ?

ಅಗತ್ಯವಿರುವ ದಾಖಲೆಗಳು ಏನೇನು?

ಭಾರತೀಯ ನಿವಾಸಿಗಳಿಗೆ ಒಂಟಿಯಾಗಿ ಅಥವಾ ಜಂಟಿಯಾಗಿ, ಪೋಷಕರ ಆರೈಕೆಯಲ್ಲಿ ಅಪ್ರಾಪ್ತ ವಯಸ್ಕರು ಈ ಖಾತೆಗಳನ್ನು ತೆರೆಯಬಹುದು. ಆದರೆ ಎನ್‌ಆರ್‌ಐಗಳು ಮತ್ತು ಸಂಸ್ಥೆಗಳಿಗೆ ಈ ಖಾತೆ ತೆರೆಯಲು ಅವಕಾಶವಿಲ್ಲ.

ಆಧಾರ್, ಪಾನ್ ಕಾರ್ಡ್ ಗುರುತಿನ ಪುರಾವೆಯಾಗಿ, ವಿದ್ಯುತ್ ಬಿಲ್, ನೀರಿನ ಸಂಪರ್ಕ, ಪಾಸ್‌ಪೋರ್ಟ್ ಇತ್ಯಾದಿಗಳನ್ನು ವಿಳಾಸ ಪುರಾವೆಯಾಗಿ, ಸಾಕ್ಷಿ ಸಹಿಯೊಂದಿಗೆ ನಾಮಿನಿ ವಿವರಗಳನ್ನು ಒಳಗೊಂಡಂತೆ ದಾಖಲೆ ಪುರಾವೆಗಳನ್ನು ಒದಗಿಸಬಹುದು.

Continue Reading

ಬೆಂಗಳೂರು

Water Price Hike: ಎಷ್ಟೇ ವಿರೋಧ ಬಂದರೂ ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ಖಚಿತ; ಡಿ.ಕೆ.ಶಿವಕುಮಾರ್

ಬೆಂಗಳೂರಿನಲ್ಲಿ ಕಳೆದ 12-13 ವರ್ಷಗಳಿಂದ ನೀರಿನ ದರ ಹೆಚ್ಚಳ (Water Price hike) ಮಾಡಿಲ್ಲ. ಆದರೂ ಬಿಡಬ್ಲ್ಯೂಎಸ್‌ಎಸ್‌ಬಿ ಕಷ್ಟಪಟ್ಟು ನಿರ್ವಹಣೆ ಮಾಡುತ್ತಿದೆ. ಯಾರೇ ಆಕ್ಷೇಪ ವ್ಯಕ್ತಪಡಿಸಿದರೂ ನೀರಿನ ದರ ಏರಿಕೆ ಅನಿವಾರ್ಯ. ಅದನ್ನು ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧ ಆವರಣದಲ್ಲಿ ಗುರುವಾರ ನಡೆದ “ಬಾಗಿಲಿಗೆ ಬರಲಿದೆ ಕಾವೇರಿ ಸಂಪರ್ಕ, 110 ಹಳ್ಳಿಗಳಿಗೆ ಕಾವೇರಿ ನೀರಿನ ಸಂಪರ್ಕ” ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

VISTARANEWS.COM


on

Water Price hike
Koo

ಬೆಂಗಳೂರು: ಬೆಂಗಳೂರಿನಲ್ಲಿ ಕಳೆದ 12-13 ವರ್ಷಗಳಿಂದ ನೀರಿನ ದರ ಹೆಚ್ಚಳ ಮಾಡಿಲ್ಲ. ಆದರೂ ಬಿಡಬ್ಲ್ಯೂ ಎಸ್‌ಎಸ್‌ಬಿ ಕಷ್ಟಪಟ್ಟು ನಿರ್ವಹಣೆ ಮಾಡುತ್ತಿದೆ. ಯಾರೇ ಆಕ್ಷೇಪ ವ್ಯಕ್ತಪಡಿಸಿದರೂ ನೀರಿನ ದರ ಏರಿಕೆ (Water Price Hike) ಅನಿವಾರ್ಯ. ಅದನ್ನು ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ವಿಧಾನಸೌಧದ ಆವರಣದಲ್ಲಿ ಗುರುವಾರ ನಡೆದ “ಬಾಗಿಲಿಗೆ ಬರಲಿದೆ ಕಾವೇರಿ ಸಂಪರ್ಕ, 110 ಹಳ್ಳಿಗಳಿಗೆ ಕಾವೇರಿ ನೀರಿನ ಸಂಪರ್ಕ” ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇದನ್ನೂ ಓದಿ: CLP Meeting: ಮುಡಾ ಹಗರಣ; ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಪರ ನಿಂತ ಶಾಸಕರು

ರಾಜಧಾನಿಯ 1.40 ಕೋಟಿ ಜನಸಂಖ್ಯೆಗೆ ನೀರನ್ನು ಒದಗಿಸಲೇ ಬೇಕು. ಇದಕ್ಕಾಗಿ ಸಾಲ ಮಾಡಿ, ಸಂಪರ್ಕ ಜಾಲವನ್ನು ಹೆಚ್ಚಿಸದ ಹೊರತು ನೀರು ಕೊಡಲು ಕಷ್ಟವಾಗುತ್ತದೆ. ದರ ಹೆಚ್ಚಳ ಮಾಡದಿದ್ದರೇ ನೀರು ಸರಬರಾಜು ಕಂಪನಿ ಉಳಿಯುವುದಿಲ್ಲ, ನೌಕರರು ಬದುಕಲು ಆಗುವುದಿಲ್ಲ. ಸಂಸ್ಥೆಗೆ ವಿದ್ಯುತ್ ಬಿಲ್ ಕಟ್ಟಲು ಆಗುತ್ತಿಲ್ಲ. ಎಲ್ಲರಿಗೂ ನೀರಿನ ದರ ಹೆಚ್ಚಳ ಮಾಡುವುದಿಲ್ಲ. ಎಷ್ಟು ಏರಿಕೆ ಮಾಡಬೇಕು ಎಂದು ಇನ್ನೂ ನಿರ್ಧರಿಸಿಲ್ಲ. ಚರ್ಚೆ ಮಾಡಲಿ. ಧರಣಿ ಮಾಡಲಿ ನಾನು ಇದಕ್ಕೆ ಬದ್ಧವಾಗಿದ್ದೇನೆ ಎಂದು ಹೇಳಿದರು.

ಇಲಾಖೆಗೆ ಪ್ರತ್ಯೇಕ ವಿದ್ಯುತ್ ತಯಾರಿಕಾ ಕಂಪನಿ

14 ವರ್ಷಗಳಲ್ಲಿ ಸಾಕಷ್ಟು ಬಾರಿ ವಿದ್ಯುತ್ ಬಿಲ್ ಹೆಚ್ಚಳವಾಗಿದೆ. ಇದಕ್ಕಾಗಿ ಇಲಾಖೆಯದ್ದೇ ಪ್ರತ್ಯೇಕ ಕಂಪನಿ ಸ್ಥಾಪಿಸಿ ನೀವೇ ಸೋಲಾರ್ ಸೇರಿದಂತೆ ಇತರೇ ಮೂಲಗಳಿಂದ ವಿದ್ಯುತ್ ತಯಾರಿಸಿದರೆ ಹಣ ಉಳಿತಾಯವಾಗುತ್ತದೆ. ಬೆಂಗಳೂರಿಗೆ ಸಂಬಂಧಿಸಿದ ಎಲ್ಲಾ ಇಲಾಖೆಗಳು ಜಂಟಿಯಾಗಿ ಈ ಕಾರ್ಯಕ್ರಮ ರೂಪಿಸಬಹುದು. ದೂರಾಲೋಚನೆ ಇಟ್ಟುಕೊಂಡು ಈಗಾಗಲೇ ಕಂಪನಿ ಸಿದ್ಧಪಡಿಸಲಾಗಿದೆ. ಪಾವಗಡದಲ್ಲಿ ಸೋಲಾರ್ ಪಾರ್ಕ್ ಮಾಡಿದ ಕಾರಣಕ್ಕೆ ಮೂರುವರೆ ರೂಪಾಯಿಗೆ ವಿದ್ಯುತ್ ಸಿಗುತ್ತಿದೆ. ಆಗ ಹಲವರು ತಲೆಕೆಟ್ಟಿದೆಯಾ ಎಂದು ಆಡಿಕೊಂಡರು. ಇದರಿಂದ ಸರಬರಾಜು ಮಾಡುವ ಖರ್ಚು ಉಳಿತಾಯವಾಗಿದೆ ಎಂದು ಹೇಳಿದರು.

ನಾನಿರುವ ತನಕ ಖಾಸಗೀಕರಣ ಆಗುವುದಿಲ್ಲ

ಬಿಡಬ್ಲ್ಯೂ ಎಸ್‌ಎಸ್‌ಬಿ ನನ್ನ ಬಳಿಯೇ ಇರುವ ಕಾರಣ ಅನೇಕರು ನೂತನ ಯೋಜನೆ ಕುರಿತು ಚರ್ಚೆ ನಡೆಸಲು ಬಂದರು. ಈ ಹಿಂದೆ ಇಂಧನ ಇಲಾಖೆಯಲ್ಲಿ ಇದ್ದಾಗಲು ಇದೇ ಪ್ರಸ್ತಾವನೆ ಬಂದಿತ್ತು. ಮುಂಬೈ ಸೇರಿದಂತೆ ಇತರೆಡೆ ಅದಾನಿ ಹಾಗೂ ಇತರೆ ಕಂಪೆನಿಗಳು ವಿದ್ಯುತ್ ಸರಬರಾಜು ಮಾಡುತ್ತಿವೆ. ನಾನು ಇರುವ ತನಕ ಇದೆಲ್ಲವೂ ಸಾಧ್ಯವಿಲ್ಲ. ಈ ವಿಚಾರ ಇಲ್ಲಿಗೆ ಬಿಟ್ಟುಬಿಡಿ, ಇದರ ಸುದ್ದಿಗೆ ಬರಬೇಡಿ ಎಂದು ವಾಪಸ್ ಕಳುಹಿಸಿದೆ ಎಂದರು.

ಜಲ ಹಾಗೂ ಇಂಧನ ಇವೆರಡೂ ಬಹಳ ಮುಖ್ಯವಾದವುಗಳು. ಈ ಹಿಂದೆ ನಾನು ಇಂಧನ ಸಚಿವನಾಗಿದ್ದೆ. ಈಗ ನೀರಾವರಿ ಸಚಿವನಾಗಿದ್ದೇನೆ. ಜೆ.ಎಚ್. ಪಟೇಲ್ ಅವರ ಕಾಲದಲ್ಲಿ ನೀರು ಸರಬರಾಜನ್ನು ಖಾಸಗಿಯವರಿಗೆ ನೀಡಬೇಕು ಎನ್ನುವ ಪ್ರಸ್ತಾವನೆ ಬಂದಿತ್ತು. ನಂತರ ಎಸ್.ಎಂ ಕೃಷ್ಣ ಅವರ ಸರ್ಕಾರದಲ್ಲಿ ನಾನು ನಗರಾಭಿವೃದ್ಧಿ ಸಚಿವನಾಗಿದ್ದಾಗಲೂ ಈ ಬಗ್ಗೆ ದೊಡ್ಡ ಚರ್ಚೆಯಾಯಿತು ಎಂದರು.

ಇದನ್ನೂ ಓದಿ: Kannada New Movie: ವಿನೋದ್ ಪ್ರಭಾಕರ್ ಅಭಿನಯದ ʼಬಲರಾಮನ ದಿನಗಳುʼ ಚಿತ್ರ ತಂಡದಿಂದ ಬಿಗ್ ಅನೌನ್ಸ್‌ಮೆಂಟ್!

ಸದನದಲ್ಲಿ ನಾಣಯ್ಯನವರು ವ್ಯಾಪಕವಾಗಿ ಚರ್ಚೆ ಮಾಡಿದರು. ಆಗ ಎಸ್.ಎಂ. ಕೃಷ್ಣ ಅವರು ನನ್ನನ್ನು ಹೊರದೇಶಕ್ಕೆ ಕಳುಹಿಸಿ ನೀರು ಸರಬರಾಜನ್ನು ಖಾಸಗಿಕರಣದ ಬಗ್ಗೆ ಅಧ್ಯಯನ ಮಾಡುವಂತೆ ತಿಳಿಸಿದ್ದರು. ನಾನು ಫ್ರ್ಯಾನ್ಸ್ ಹಾಗೂ ಇತರ ದೇಶಗಳಿಗೆ ಹೋಗಿದ್ದೆ. ಅಲ್ಲಿ ಒಂದು ಪದ್ಧತಿಯಲ್ಲಿ ಮಾಡುತ್ತಿದ್ದಾರೆ. ನಮ್ಮಲ್ಲಿರುವ ಬಿಡಬ್ಲ್ಯೂ ಎಸ್‌ಎಸ್‌ಬಿ ಎಂಜಿನಿಯರ್‌ಗಳು ಹೊರದೇಶದಲ್ಲಿರುವ ಎಂಜಿನಿಯರ್‌ಗಳಿಗಿಂತ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಎಸ್.ಎಂ.ಕೃಷ್ಣ ಅವರಿಗೆ ಹೇಳಿದೆ. ಅಲ್ಲಿಂದ ಬಂದವರು ನಮ್ಮವರ ಬಳಿಯೇ ಕೆಲಸ ಮಾಡಿಸುತ್ತಾರೆ. ನೀರಿನ ಪೈಪ್ ಲೈನ್ ಬದಲಾಯಿಸಿ ಹೊಸ ವ್ಯವಸ್ಥೆ ಮಾಡುತ್ತೇವೆ ಎಂದು ಹೇಳಿ ಶೇ 30 ರಷ್ಟು ಹೆಚ್ಚು ವೆಚ್ಚ ಕೇಳುತ್ತಾರೆ. ಆ ವ್ಯವಸ್ಥೆ ನಮ್ಮ ರಾಜ್ಯಕ್ಕೆ ಅನುಕೂಲಕರವಾಗಿಲ್ಲ. ದೆಹಲಿ, ಮುಂಬೈಗೆ ಸೂಕ್ತವಾಗಿದೆ ಎಂದು ವರದಿ ನೀಡಿದೆ. ಖಾಸಗೀಕರಣದ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾದ ಕಾರಣಕ್ಕೆ ಪ್ರಸ್ತಾವನೆ ಕೈ ಬಿಡಲಾಯಿತು ಎಂದು ತಿಳಿಸಿದರು.

ಮೇಕೆದಾಟು, ನ್ಯಾಯಾಲಯದಲ್ಲಿ ನ್ಯಾಯ ಸಿಗುವ ನಂಬಿಕೆ ಇದೆ

ನಾನು ಅಧಿಕಾರವಹಿಸಿಕೊಂಡ ತಕ್ಷಣ 6 ಎಂಎಲ್‌ಡಿ ನೀರು ಸರಬರಾಜನ್ನು ಹೆಚ್ಚಳ ಮಾಡಲಾಗಿದೆ. ತಮಿಳುನಾಡಿಗೆ ನಿಗದಿತ ನೀರಿಗಿಂತ 100 ಟಿಎಂಸಿ ಹೆಚ್ಚುವರಿ ಕಾವೇರಿ ನೀರನ್ನು ಹರಿಸಲಾಗಿದೆ. ನಮ್ಮಲ್ಲಿ ಹೆಚ್ಚುವರಿ ನೀರನ್ನು ಹಿಡಿದಿಟ್ಟುಕೊಳ್ಳಲು ಆಗುವುದಿಲ್ಲ. ನಮ್ಮಲ್ಲಿ ಮತ್ತೊಂದು ಅಣೆಕಟ್ಟು ಇದ್ದಿದ್ದರೆ ಅವರಿಗೆ ಹೆಚ್ಚು ಅನುಕೂಲವಾಗುತ್ತಿತ್ತು. ಮೇಕೆದಾಟು ಯೋಜನೆ ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಗುತ್ತದೆ ಎಂದು ನಂಬಿದ್ದೇನೆ ಎಂದರು.

ಕೆಆರ್‌ಎಸ್‌ಯಿಂದಲೇ ನೇರವಾಗಿ ನಗರಕ್ಕೆ ನಿಗದಿಯಾದ ನೀರನ್ನು ತರಬಹುದು ಎಂದು ಒಂದಷ್ಟು ಜನ ವರದಿ ಕೊಟ್ಟಿದ್ದಾರೆ. ಶರಾವತಿಯಿಂದ ನೀರು ತರಬೇಕು ಎನ್ನುವ ಆಲೋಚನೆಯಿದೆ. ಅಲ್ಲಿನ ಸ್ಥಳೀಯರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಎತ್ತಿನಹೊಳೆ ಯೋಜನೆ ರಾಜಕಾರಣದಿಂದ ಅಲ್ಲಲ್ಲಿ ಬೇರೆ, ಬೇರೆ ಕಡೆ ತಿರುವು ಪಡೆದುಕೊಂಡಿದೆ. ಇದನ್ನೂ ಸಹ ಒಂದು ಹಂತಕ್ಕೆ ತಲುಪಿಸಿದ್ದೇನೆ. ಕಾವೇರಿ 5 ನೇ ಹಂತದ ಕಾಮಗಾರಿಗೆ ನಿಂತಿದ್ದು ಮತ್ತೆ ಚಾಲನೆ ಮಾಡಲಾಗುವುದು ಎಂದು ತಿಳಿಸಿದರು.

ಕಾಲುವೆಗಳಲ್ಲಿ ನೀರನ್ನು ಕೊನೆಯ ಹಂತಕ್ಕೆ ತಲುಪಿಸಬೇಕು ಎಂದು ಕಾಲುವೆಗಳ ಅಕ್ಕ ಪಕ್ಕ ಅರ್ಧ ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ಬೋರ್‌ವೆಲ್‌ಗಳನ್ನು ಹಾಕುವಂತಿಲ್ಲ ಹಾಗೂ ಪಂಪ್ ಮೂಲಕ ನೀರನ್ನು ಎತ್ತುವಂತಿಲ್ಲ ಎನ್ನುವ ಕಾನೂನು ತರಲಾಗಿದೆ ಎಂದು ಹೇಳಿದರು.

ನಾನು ಸೇರಿದಂತೆ ಹಿರಿಯ ಅಧಿಕಾರಿಗಳು ಇಲಾಖೆಗೆ ಇಂದು ಬರುತ್ತೇವೆ ನಾಳೆ ಹೋಗುತ್ತೇವೆ. ಆದರೆ ಇಲಾಖೆಯ ಎಂಜಿನಿಯರ್‌ಗಳು, ನೌಕರರು ಸಂಸ್ಥೆಗೆ ಯಾವ ರೀತಿಯ ಶಾಶ್ವತ ಪರಿಹಾರ ಬೇಕು ಎನ್ನುವ ಬಗ್ಗೆ ವರದಿ ತಯಾರಿಸಿ ನನಗೆ ನೀಡಿ. ನೀವುಗಳು ಇಲ್ಲದಿದ್ದರೆ ಬೆಂಗಳೂರಿಗೆ ಹೊಸ ರೂಪ ಬರಲು ಸಾಧ್ಯವಿಲ್ಲ. ಈ ಇಲಾಖೆಯವರು ಹಗಲು ರಾತ್ರಿ ಒತ್ತಡದಲ್ಲಿಯೇ ಕೆಲಸ ಮಾಡಬೇಕಾದ ಪರಿಸ್ಥಿತಿಯಿದೆ ಎಂದರು.

ಅಂತರ್ಜಲ ಹೆಚ್ಚಳ ಮಾಡಲು ಕೆರೆ ಅಭಿವೃದ್ದಿ ಸಮಿತಿ ಜತೆ ಕೆಲಸ ಮಾಡಬೇಕಿದೆ. ಕಳೆದ ವರ್ಷದ ಬರಗಾಲದ ಸಮಯದಲ್ಲಿ ಬೆಂಗಳೂರಿನಲ್ಲಿ 7 ಸಾವಿರ ಬೋರ್‌ವೆಲ್‌ಗಳು ಬತ್ತಿ ಹೋಗಿದ್ದರು ಕೂಡ ಹೆಚ್ಚು ಶ್ರಮ ಹಾಕಿ ಕೆಲಸ ಮಾಡಿ ಸರ್ಕಾರಕ್ಕೆ ಕೆಟ್ಟ ಹೆಸರು ಬರದಂತೆ ನೋಡಿಕೊಂಡ ನೌಕರರಿಗೆ ಅಭಾರಿಯಾಗಿದ್ದೇನೆ. ನೀರುಗಂಟಿಯಿಂದ ಹಿಡಿದು ಪ್ರತಿಯೊಬ್ಬ ನೌಕರನಿಗೂ ಮನಪೂರ್ವಕ ಅಭಿನಂದನೆಗಳು ಎಂದು ಹೇಳಿದರು.

ರಾಜ್ಯಪಾಲರ ಮೇಲೆ ಬಿಜೆಪಿ, ದಳದವರೇ ಕಲ್ಲು ಎಸೆಯಬಹುದು

ರಾಜ್ಯಪಾಲರು ಬುಲೆಟ್ ಪ್ರೂಫ್ ಕಾರಿನಲ್ಲಿ ಓಡಾಡಲು ಕಾಂಗ್ರೆಸ್ ಕಾರಣ ಎನ್ನುವ ಬಗ್ಗೆ ಕೇಳಿದಾಗ “ಬಿಜೆಪಿ, ದಳದ ಕಿಡಿಗೇಡಿಗಳು ಕಲ್ಲು ಹೊಡಯಬಹುದು ಎನ್ನುವ ಕಾರಣಕ್ಕೆ ಪೊಲೀಸ್ ಅವರು ರಕ್ಷಣೆಗಾಗಿ ಈ ಕ್ರಮ ತೆಗೆದುಕೊಂಡಿದ್ದಾರೆ. ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಕಾನೂನು ಸುವ್ಯವಸ್ಥೆ ಹಾಳು ಮಾಡಲು ಬಿಜೆಪಿ, ದಳ ಪ್ರಯತ್ನಿಸುತ್ತಿದೆ ಎನ್ನುವ ಮಾಹಿತಿ ನಮಗಿದೆ. ನಮಗೆ ರಾಜ್ಯಪಾಲರ ಮೇಲೆ ಗೌರವವಿದೆ. ಆದ ಕಾರಣ ಅವರಿಗೆ ರಕ್ಷಣೆ ನೀಡಲಾಗಿದೆ ಎಂದರು.

ಇದನ್ನೂ ಓದಿ: Kannada New Movie: ಕವೀಶ್ ಶೆಟ್ಟಿ, ಮೇಘಾ ಶೆಟ್ಟಿ ಅಭಿನಯದ ʼಆಪರೇಷನ್ ಲಂಡನ್ ಕೆಫೆʼ ಚಿತ್ರದ ಟೀಸರ್ ರಿಲೀಸ್‌

ಕಾಂಗ್ರೆಸ್ ರಾಜ್ಯಪಾಲರಿಗೆ ಅವಮಾನಿಸಿದ್ದನ್ನು ವಿರೋಧಿಸಿ ಬಿಜೆಪಿಯವರ ಪ್ರತಿಭಟನೆ ಬಗ್ಗೆ ಕೇಳಿದಾಗ “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನನ್ನನ್ನು, ನಿಮ್ಮನ್ನು ಯಾರನ್ನು ಬೇಕಾದರೂ ಟೀಕೆ ಮಾಡಬಹುದು. ಯಾರಿಗೆ ಯಾವ ಗೌರವ ಕೊಡಬೇಕೋ ಅದನ್ನು ಖಂಡಿತ ಕೊಡಲೇಬೇಕು. ಘನವೆತ್ತ ರಾಜ್ಯಪಾಲರಿಗೆ ನಾವು ಖಂಡಿತಾ ಗೌರವ ನೀಡುತ್ತೇವೆ ಎಂದು ಹೇಳಿದರು.

Continue Reading

ಬೆಂಗಳೂರು

DK Shivakumar: ನನಗೆ ಸಿಬಿಐಗಿಂತ ಲೋಕಾಯುಕ್ತದಿಂದಲೇ ಹೆಚ್ಚಿನ ಹಿಂಸೆ; ಡಿ.ಕೆ.ಶಿವಕುಮಾರ್ ಆರೋಪ!

ಲೋಕಾಯುಕ್ತ ವಿಚಾರಣೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar), ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐನಿಂದ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿತ್ತು. ಆದರೆ ಸಿಬಿಐನವರು ತನಿಖೆಯನ್ನು ನಿಲ್ಲಿಸದೆ ಮುಂದುವರಿಸಿದ್ದಾರೆ. ನೂರಕ್ಕೂ ಹೆಚ್ಚು ನನ್ನ ಸ್ನೇಹಿತರು, ಕುಟುಂಬಸ್ಥರಿಗೆ ತುಂಬಾ ಕಿರುಕುಳ ನೀಡುತ್ತಿದ್ದಾರೆ. ಲೋಕಾಯುಕ್ತ ಕಳೆದ ಆರು ತಿಂಗಳಿನಿಂದ ತನಿಖೆ ಮಾಡುತ್ತಿದ್ದು, 2 ಗಂಟೆಗಳಿಗೂ ಹೆಚ್ಚು ಕಾಲ ನನ್ನನ್ನು ವಿಚಾರಣೆ ಮಾಡಲಾಗಿದೆ. ವಿಚಿತ್ರ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಇವರಿಗಿಂತ ಸಿಬಿಐನವರೇ ಪರವಾಗಿಲ್ಲ ಎಂದು ಹೇಳಿದ್ದಾರೆ.

VISTARANEWS.COM


on

DK Shivakumar
Koo

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐನಿಂದ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿತ್ತು. ಆದರೆ ಸಿಬಿಐನವರು ತನಿಖೆಯನ್ನು ನಿಲ್ಲಿಸದೆ ಮುಂದುವರಿಸಿದ್ದಾರೆ. ನೂರಕ್ಕೂ ಹೆಚ್ಚು ನನ್ನ ಸ್ನೇಹಿತರು, ಕುಟುಂಬಸ್ಥರಿಗೆ ತುಂಬಾ ಕಿರುಕುಳ ನೀಡುತ್ತಿದ್ದಾರೆ. ಇದೇ ಕೆಲಸವನ್ನು ಲೋಕಾಯುಕ್ತ ಕೂಡ ಮುಂದುವರಿಸಿದೆ, ಅವರಿಂದಲೂ ಕಿರುಕುಳ ಆಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದರು.

ಲೋಕಾಯುಕ್ತ ವಿಚಾರಣೆ ನಂತರ ಲೋಕಾಯುಕ್ತ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದ ಅವರು, ಲೋಕಾಯುಕ್ತ ಕಳೆದ ಆರು ತಿಂಗಳಿನಿಂದ ತನಿಖೆ ಮಾಡುತ್ತಿದೆ. ಎರಡು ಗಂಟೆಗಳಿಗೂ ಹೆಚ್ಚು ಕಾಲ ನನ್ನನ್ನು ವಿಚಾರಣೆ ಮಾಡಿದರು. ಇವರಿಗಿಂತ ಸಿಬಿಐನವರೇ ಪರವಾಗಿಲ್ಲ. ಲೋಕಾಯುಕ್ತದವರು ವಿಚಿತ್ರ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಸಿಬಿಐನವರೇ ಇನ್ನು ನನಗೆ ಪ್ರಶ್ನೆಗಳನ್ನೇ ಕೇಳಿಲ್ಲ, ಒಂದು ದಿನವೂ ವಿಚಾರಣೆಗೆ ಕರೆಯಲಿಲ್ಲ. ಆದರೆ ಲೋಕಾಯುಕ್ತದವರು ಈಗ ಹಿಂಸೆ ಕೊಡುತ್ತಿದ್ದಾರೆ ಎಂದು ದೂರಿದರು.

ಇದನ್ನೂ ಓದಿ: CM Siddaramaiah: ಬುಡಕ್ಕೆ ನೀರು ಬಂದಾಗ ಬಿಜೆಪಿ ನಾಯಕರಿಗೆ ಜಾತಿ ನೆನಪಾಗುತ್ತದೆ! ಸಿದ್ದರಾಮಯ್ಯ ಗೇಲಿ

ಲೋಕಾಯುಕ್ತದ ಪ್ರಶ್ನೆಗಳಿಗೆ ಉತ್ತರಗಳನ್ನು ಕೊಟ್ಟಿದ್ದೇನೆ. ಒಂದಷ್ಟು ವಿಚಾರಗಳಲ್ಲಿ ಸ್ಪಷ್ಟನೆ ಪಡೆದುಕೊಳ್ಳಲು ಪ್ರಶ್ನೆಗಳನ್ನು ಕೇಳಿದ್ದು,ಇದಕ್ಕೆ ಸಂಬಂಧಿಸಿದಂತೆ ನನ್ನ ಬಳಿ ಇರುವ ಪೂರಕವಾದ ದಾಖಲೆಗಳನ್ನು ಸಲ್ಲಿಸುತ್ತೇನೆ ಎಂದು ಅವರು ಹೇಳಿದರು.

ಬುಧವಾರ (ಆ.21ರಂದು) ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದ್ದರು. ಆಲಮಟ್ಟಿ ಅಣೆಕಟ್ಟೆಗೆ ಬಾಗಿನ ಅರ್ಪಿಸುವ ಕಾರ್ಯಕ್ರಮವಿದ್ದ ಕಾರಣಕ್ಕೆ ಇಂದು (ಗುರುವಾರ) ಹಾಜರಾಗುತ್ತೇನೆ ಎಂದು ಮನವಿ ಮಾಡಿಕೊಂಡಿದ್ದೆ ಎಂದು ತಿಳಿಸಿದರು. ಯಾವ ದಾಖಲೆಗಳನ್ನು ಕೇಳಿದ್ದಾರೆ ಎಂದು ಪ್ರಶ್ನಿಸಿದಾಗ, ನಾನು ಅದನ್ನೆಲ್ಲಾ ಹೇಳಲು ಆಗುವುದಿಲ್ಲ ಎಂದರು. ಮತ್ತೊಮ್ಮೆ ವಿಚಾರಣೆಗೆ ಹಾಜರಾಗಬೇಕೆ ಎಂದು ಕೇಳಿದಾಗ, ಗೊತ್ತಿಲ್ಲ, ನಾನು ಕೊಟ್ಟಿರುವ ಉತ್ತರ, ದಾಖಲೆಗಳನ್ನು ಪರಿಶೀಲಿಸಿ ಮತ್ತೊಮ್ಮೆ ಕರೆಯುತ್ತಾರೆ ಎಂದು ತಿಳಿಸಿದರು.

ಇದನ್ನೂ ಓದಿ: Home Remedies: ಮಕ್ಕಳನ್ನು ಕಾಡುವ ಶೀತ-ಕೆಮ್ಮಿಗೆ ಮನೆಯಲ್ಲೇ ಇದೆ ಉಪಶಮನ

ದೆಹಲಿ ಭೇಟಿಯ ಬಗ್ಗೆ ಕೇಳಿದಾಗ “ನಾನು ಮತ್ತು ಮುಖ್ಯಮಂತ್ರಿಗಳು ಹೋಗುತ್ತಿದ್ದೇವೆ” ಎಂದು ಉತ್ತರಿಸಿದರು.

Continue Reading
Advertisement
CM Siddaramaiah
ಕರ್ನಾಟಕ18 mins ago

CM Siddaramaiah: ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆಗೆ ಸಿದ್ದರಾಮಯ್ಯ ಸೂಚನೆ

Fixed Deposits
ಮನಿ-ಗೈಡ್20 mins ago

Fixed Deposits: ಪೋಸ್ಟ್ ಆಫೀಸ್ ಎಫ್‌ಡಿ; ಬಡ್ಡಿ ದರ ಎಷ್ಟು, ಏನೆಲ್ಲ ಲಾಭ?

Water Price hike
ಬೆಂಗಳೂರು29 mins ago

Water Price Hike: ಎಷ್ಟೇ ವಿರೋಧ ಬಂದರೂ ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ಖಚಿತ; ಡಿ.ಕೆ.ಶಿವಕುಮಾರ್

DK Shivakumar
ಬೆಂಗಳೂರು33 mins ago

DK Shivakumar: ನನಗೆ ಸಿಬಿಐಗಿಂತ ಲೋಕಾಯುಕ್ತದಿಂದಲೇ ಹೆಚ್ಚಿನ ಹಿಂಸೆ; ಡಿ.ಕೆ.ಶಿವಕುಮಾರ್ ಆರೋಪ!

kolkata Doctor murder case
ದೇಶ34 mins ago

Kolkata Doctor Murder Case: ಬರೋಬ್ಬರಿ 11ದಿನಗಳ ಬಳಿಕ ಮುಷ್ಕರ ಹಿಂಪಡೆದ ವೈದ್ಯರು

CLP Meeting
ಬೆಂಗಳೂರು1 hour ago

CLP Meeting: ಮುಡಾ ಹಗರಣ; ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಪರ ನಿಂತ ಶಾಸಕರು

Actor Darshan
ಕರ್ನಾಟಕ1 hour ago

Actor Darshan: ಅವರ ಋಣ ನಮ್ಮ ಕುಟುಂಬದ ಮೇಲಿದೆ… ದರ್ಶನ್‌ ಭೇಟಿ ಬಳಿಕ ರಚಿತಾ ರಾಮ್‌ ಕಣ್ಣೀರು

PM Modi Poland Visit
ವಿದೇಶ2 hours ago

PM Modi Poland Visit: ಯುದ್ಧಭೂಮಿಯಲ್ಲಿ ಯಾವ ಸಮಸ್ಯೆಯೂ ಬಗೆಹರಿಯಲ್ಲ; ರಷ್ಯಾ-ಉಕ್ರೇನ್‌ ಸಂಘರ್ಷದ ಬಗ್ಗೆ ಪ್ರಧಾನಿ ಮೋದಿ ರಿಯಾಕ್ಟ್‌

Viral Video
Latest2 hours ago

Viral Video: ಸೈಕಲ್‌ ಮೇಲೆ ಶಾಲೆಗೆ ಹೋಗುತ್ತಿದ್ದ ಮಕ್ಕಳಿಬ್ಬರಿಗೆ ವಿದ್ಯುತ್‌ ಶಾಕ್‌; ಕ್ಯಾಮೆರಾದಲ್ಲಿ ಸೆರೆಯಾಯ್ತು ಘೋರ ದೃಶ್ಯ

Viral Video
ಸಿನಿಮಾ2 hours ago

Viral Video: ‘ಶೀಲಾ ಕಿ ಜವಾನಿ’ ಹಾಡಿಗೆ ಸಖತ್ ಆಗಿ ಸೊಂಟ ಬಳುಕಿಸಿದ ಬೆಡಗಿ! ವಿಡಿಯೊ ನೋಡಿ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌