Viral Video: ವಧುವಿನ ಮುಂದೆಯೇ ಆಕೆಯ ಸಹೋದರಿಗೆ ಕಿಸ್‌ ಕೊಟ್ಟ ವರ! ಮದುವೆಗೆ ಬಂದವರು ಕಕ್ಕಾಬಿಕ್ಕಿ! - Vistara News

Latest

Viral Video: ವಧುವಿನ ಮುಂದೆಯೇ ಆಕೆಯ ಸಹೋದರಿಗೆ ಕಿಸ್‌ ಕೊಟ್ಟ ವರ! ಮದುವೆಗೆ ಬಂದವರು ಕಕ್ಕಾಬಿಕ್ಕಿ!

Viral Video: ವರನೊಬ್ಬ ಮದುವೆ ದಿನ ಮಾಡಿದ ಅವಾಂತರ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.ಈ ವಿಡಿಯೊದಲ್ಲಿ, ವರನು ತನ್ನ ಪತ್ನಿಯ ಸಹೋದರಿಯನ್ನು ನೋಡಿದ ನಂತರ ತನ್ನ ಸಂಯಮವನ್ನು ಕಳೆದುಕೊಳ್ಳುತ್ತಾನೆ ಮತ್ತು ವಧುವಿನ ಮುಂದೆಯೇ ಆಕೆಯ ತಂಗಿಗೆ ಚುಂಬಿಸಿದ್ದಾನೆ. ಈ ವಿಡಿಯೊ ಎಲ್ಲೆಡೆ ವೈರಲ್ ಆಗಿದೆ. ವರ ಮತ್ತು ವಧು ವೇದಿಕೆಯ ಮೇಲೆ ಕುಳಿತಿರುವಾಗ, ವಧುವಿನ ತಂಗಿ ಬಂದು ವರನ ಪಕ್ಕದಲ್ಲಿ ಕುಳಿತುಕೊಳ್ಳುತ್ತಾಳೆ. ಇದ್ದಕ್ಕಿದ್ದಂತೆ, ವರ ಮತ್ತು ಅವನ ಪತ್ನಿಯ ಸಹೋದರಿ ಪರಸ್ಪರ ಚುಂಬಿಸುತ್ತಾರೆ, ಇದನ್ನು ಕಂಡು ಅತಿಥಿಗಳು ಆಘಾತಕ್ಕೊಳಗಾಗಿದ್ದಾರೆ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo


ಪ್ರತಿಯೊಬ್ಬ ಮಹಿಳೆಯು ತನ್ನ ಪತಿ ತನ್ನ ಜೊತೆ ಮಾತ್ರ ಅನ್ಯೋನ್ಯವಾಗಿರಬೇಕು ಎಂದು ಬಯಸುತ್ತಾಳೆ. ಒಂದುವೇಳೆ ಪತಿ ಬೇರೆ ಯುವತಿಯ ಜೊತೆ ಅನ್ಯೋನ್ಯವಾಗಿರುವುದನ್ನು ನೋಡಿದರೆ ಅವಳಷ್ಟು ಕೆಟ್ಟವರು ಮತ್ತೊಬ್ಬರಿರುವುದಿಲ್ಲ ಎಂದು ಹೇಳಬಹುದು. ಅದರಲ್ಲೂ ಮದುವೆ ಎಂಬುದು ಎಲ್ಲರ ಜೀವನದಲ್ಲಿ ಒಂದು ಸಂಭ್ರಮದ ದಿನ. ಈ ದಿನಕ್ಕಾಗಿ ಹಲವರು ದುಬಾರಿ ಖರ್ಚುಗಳನ್ನು ಮಾಡುತ್ತಾರೆ. ಆ ದಿನದ ಪ್ರತಿಕ್ಷಣವನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗುತ್ತದೆ. ಆದರೆ ಇಲ್ಲೊಂದು ಮದುವೆಯಲ್ಲಿ ಅನಿರೀಕ್ಷಿತ ಘಟನೆಯೊಂದು ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದ್ದು, ಅದು ಇತ್ತೀಚೆಗೆ ಸೋಶಿಯಲ್ ಮಿಡಿಯಾದಲ್ಲಿ ವೈರಲ್(Viral Video) ಆಗಿದೆ.

ಈ ವಿಡಿಯೊದಲ್ಲಿ, ವರನು ತನ್ನ ಪತ್ನಿಯ ಸಹೋದರಿಯನ್ನು ನೋಡಿದ ನಂತರ ತನ್ನ ಸಂಯಮವನ್ನು ಕಳೆದುಕೊಳ್ಳುತ್ತಾನೆ ಮತ್ತು ವಧುವಿನ ಮುಂದೆ ಅನುಚಿತವಾಗಿ ವರ್ತಿಸುತ್ತಾನೆ, ಇದು ವಿಡಿಯೊ ವೈರಲ್ ಆಗಲು ಕಾರಣವಾಗುತ್ತದೆ. ಈ ವಿಡಿಯೊವನ್ನು memesmasala_mix ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವಿಡಿಯೊದಲ್ಲಿ, ವರ ಮತ್ತು ವಧು ವೇದಿಕೆಯ ಮೇಲೆ ಕುಳಿತಿರುವಾಗ, ಲೆಹೆಂಗಾ ಧರಿಸಿದ ಯುವತಿಯೊಬ್ಬಳು ಬಂದು ವರನ ಪಕ್ಕದಲ್ಲಿ ಕುಳಿತುಕೊಳ್ಳುತ್ತಾಳೆ. ಇದ್ದಕ್ಕಿದ್ದಂತೆ, ವರ ಮತ್ತು ಅವನ ಪತ್ನಿಯ ಸಹೋದರಿ ಪರಸ್ಪರ ಚುಂಬಿಸುತ್ತಾರೆ, ಇದನ್ನು ಕಂಡು ಅತಿಥಿಗಳು ಆಘಾತಕ್ಕೊಳಗಾಗುತ್ತಾರೆ. ಈ ವಿಡಿಯೊ ನೋಡಿ ನೆಟ್ಟಿಗರು ಕೂಡ ಶಾಕ್ ಆಗಿದ್ದಾರೆ. ನಂತರ ಈ ವಿಡಿಯೊ ವೈರಲ್ ಆಗಿತ್ತು.

ಈ ವಿಡಿಯೊದ ಸತ್ಯಾಸತ್ಯತೆಯನ್ನು ದೃಢೀಕರಿಸಲು ಸಾಧ್ಯವಿಲ್ಲ. ವಿಡಿಯೊ ಶೀರ್ಷಿಕೆಯು “ಅರೇಂಜ್ಡ್ ಮ್ಯಾರೇಜ್ ನ ಪ್ರಯೋಜನಗಳು” ಮತ್ತು ” ಸಿಸ್ಟರ್ ಇನ್ ಲಾ ಇಸ್ ಹಾಫ್ ವೈಪ್” ಎಂದು ಬರೆಯಲಾಗಿದೆ. ಕೆಲವು ವೀಕ್ಷಕರು “ವಿಚ್ಛೇದನ ಆಗುವುದು ಖಂಡಿತ” ಎಂದು ಕಾಮೆಂಟ್ ಮಾಡಿದ್ದಾರೆ ಮತ್ತು ಇನ್ನೊಬ್ಬ ಬಳಕೆದಾರರು ಇಡೀ ಮದುವೆಯ ಪಾರ್ಟಿಯನ್ನು ಈ ರೀತಿ ಹಾಳುಮಾಡಲಾಗಿದೆ ಎಂದು ಕಾಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ:ಸೂಪರ್ ಮಾರ್ಕೆಟ್‍ನೊಳಗೇ ಒಳ ಉಡುಪು ಕಳಚಿ ಬ್ರೆಡ್ ಟ್ರೇನಲ್ಲಿಟ್ಟ ಯುವತಿ!

ಮದುವೆಯ ವೇದಿಕೆಯಯ ಮೇಲೆ ಇಂತಹ ಅಹಿತಕರ ಘಟನೆಗಳು ನಡೆಯುತ್ತಿರುವುದು ಇದೇ ಮೊದಲಲ್ಲಾ. ಈ ಹಿಂದೆ ಆನ್‍ಲೈನ್‍ನಲ್ಲಿ ವೈರಲ್ ಆಗಿರುವ ವಿಡಿಯೊ ಒಂದರಲ್ಲಿ ಛಾಯಾಗ್ರಾಹಕ ವಧುವಿನ ಬಳಿ ಬಂದು ಅವಳ ಸೌಂದರ್ಯವನ್ನು ಸೆರೆಹಿಡಿಯಲು ವಿವಿಧ ಕೋನಗಳನ್ನು ತೆಗೆದುಕೊಳ್ಳುತ್ತಿದ್ದಾನೆ. ಕ್ಯಾಮೆರಾದಲ್ಲಿ ವಧುವಿನ ಫೋಟೊ ತೆಗೆಯುವ ವಿಧಾನವು ವರನಿಗೆ ಕೋಪಬರುವಂತೆ ಮಾಡುತ್ತದೆ. ಇದರಿಂದ ಇದ್ದಕ್ಕಿದ್ದಂತೆ, ವರನು ಅಸೂಯೆಯಿಂದ ಛಾಯಾಗ್ರಾಹಕನನ್ನು ಹೊಡೆಯುತ್ತಾನೆ. ಈ ವಿಡಿಯೊ ಈ ಹಿಂದೆ ಬಹಳಷ್ಟು ವೈರಲ್ ಆಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Green Ammonia Export: ಜಪಾನ್‌ಗೆ ಇನ್ನು ಭಾರತದಿಂದ ಹಸಿರು ಅಮೋನಿಯಾ ರಫ್ತು! ಒಪ್ಪಂದಕ್ಕೆ ಸಹಿ

ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಒಂದು ಹೆಜ್ಜೆ ಮುಂದಿರುವ ಭಾರತ ಇದೀಗ ಜಪಾನ್‌ಗೆ ಹಸಿರು ಅಮೋನಿಯಾ ರಫ್ತು (Green Ammonia Export) ಮಾಡಲು ಒಪ್ಪಂದ ಮಾಡಿಕೊಂಡಿದೆ. ನವದೆಹಲಿಯಲ್ಲಿ ಉಭಯ ರಾಷ್ಟ್ರಗಳು ಒಪ್ಪಂದಕ್ಕೆ ಸಹಿ ಹಾಕಿವೆ. ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ, ಜಪಾನ್‌ಗೆ ಇದೇ ಮೊದಲ ಬಾರಿ ಹಸಿರು ಅಮೋನಿಯ ರಫ್ತು ಯೋಜನೆ ಆಫ್‌ಟೇಕ್ ಒಪ್ಪಂದಕ್ಕೆ ಸಹಿ ಹಾಕಿದೆ. ಈ ಕುರಿತು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಮಾತನಾಡಿದ್ದಾರೆ.

VISTARANEWS.COM


on

Green Ammonia Export
Koo

ನವದೆಹಲಿ: ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಒಂದು ಹೆಜ್ಜೆ ಮುಂದಿರುವ ಭಾರತ ಇದೀಗ ಜಪಾನ್‌ಗೆ ಹಸಿರು ಅಮೋನಿಯಾ ರಫ್ತು (Green Ammonia Export) ಮಾಡಲು ಒಪ್ಪಂದ ಮಾಡಿಕೊಂಡಿದೆ. ನವದೆಹಲಿಯಲ್ಲಿ ಉಭಯ ರಾಷ್ಟ್ರಗಳು ಒಪ್ಪಂದಕ್ಕೆ ಸಹಿ ಹಾಕಿವೆ. ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ, ಜಪಾನ್‌ಗೆ ಇದೇ ಮೊದಲ ಬಾರಿ ಹಸಿರು ಅಮೋನಿಯ ರಫ್ತು ಯೋಜನೆ ಆಫ್‌ಟೇಕ್ ಒಪ್ಪಂದಕ್ಕೆ ಸಹಿ ಹಾಕಿದೆ.

ಈ ವೇಳೆ ಸಚಿವ ಪ್ರಲ್ಹಾದ್‌ ಜೋಶಿ ಮಾತನಾಡಿ, ಜಪಾನ್‌ಗೆ ಹಸಿರು ಅಮೋನಿಯಾ ರಫ್ತು ಮಾಡುವ ಈ ಒಪ್ಪಂದ ಹಸಿರು ಹೈಡ್ರೋಜನ್ ಮತ್ತು ಅಮೋನಿಯಾ ಉತ್ಪಾದನೆಯಲ್ಲಿ ಭಾರತ ಜಾಗತಿಕ ನಾಯಕನಾಗುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಿದೆ ಎಂದು ತಿಳಿಸಿದರು.

ಇದನ್ನೂ ಓದಿ: KPSC Exams : ಕೆಪಿಎಸ್‌ಸಿ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯ ಸ್ಪರ್ಧಾತ್ಮಕ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಭಾರತದಲ್ಲಿ ಹಸಿರು ಅಮೋನಿಯಾ ಉತ್ಪಾದನೆಗೆ ಸೆಂಬ್‌ಕಾರ್ಪ್ ಇಂಡಸ್ಟ್ರೀಸ್ ಮುಂದಾಗಿದ್ದು, ಇದಕ್ಕಾಗಿ ದೇಶದ ನವೀಕರಿಸಬಹುದಾದ ಇಂಧನ ಮೂಲಗಳನ್ನು ಬಳಸಿಕೊಳ್ಳುತ್ತದೆ ಎಂದರು. ಜಪಾನ್‌ ತನ್ನ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲು ಬಳಕೆಯನ್ನು ಭಾಗಶಃ ಬದಲಾಯಿಸಿ ಹಸಿರು ಅಮೋನಿಯಾ ಬಳಕೆಗೆ ಮುಂದಾಗಿದ್ದು, ಭಾರತ ಹಸಿರು ಅಮೋನಿಯಾ ಪೂರೈಕೆ ಮಾಡುವ ಮೂಲಕ ಜಪಾನ್ ಈ ಕಾರ್ಯಕ್ಕೆ ಸಾಥ್ ನೀಡಲಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಹಸಿರು ಜಲಜನಕ ಮತ್ತು ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಗತಿ ಸಾಧಿಸುತ್ತಿದ್ದು, ಹಸಿರು ಅಮೋನಿಯಾ ರಫ್ತು ಮಾಡುವ ಜಪಾನ್ ನೊಂದಿಗಿನ ಒಪ್ಪಂದ ನಿದರ್ಶನ ಎಂದು ಹೇಳಿದರು.

7.5 ಲಕ್ಷ ಟಿಪಿಎಗೆ ಟೆಂಡರ್

ಪ್ರಸ್ತುತದಲ್ಲಿ ಗ್ರೀನ್ ಅಮೋನಿಯಾದ 7.5 ಲಕ್ಷ ಟಿಪಿಎಗೆ ಟೆಂಡರ್ ಆಗಿದೆ. 4.5 ಲಕ್ಷ ಟಿಪಿಎ ಸಾಮರ್ಥ್ಯಕ್ಕೆ ಹೆಚ್ಚುವರಿ ಟೆಂಡರ್‌ಗಳನ್ನು ಸಹ ನಿರೀಕ್ಷಿಸಲಾಗಿದೆ ಎಂದು ಸಚಿವ ಜೋಶಿ ತಿಳಿಸಿದರು.

1 ಮಿಲಿಯನ್ ಟನ್ ಹಸಿರು ಹೈಡ್ರೋಜನ್ ಉತ್ಪಾದನೆ ಗುರಿ

ಭಾರತದಲ್ಲಿ ವಾರ್ಷಿಕ ಒಂದು ಮಿಲಿಯನ್ ಟನ್‌ಗಳಷ್ಟು ಹಸಿರು ಹೈಡ್ರೋಜನ್ ಉತ್ಪಾದನೆ ಗುರಿ ಹೊಂದಿದ್ದು, ಇದಕ್ಕಾಗಿ ಅಗತ್ಯ ಪ್ರೋತ್ಸಾಹ ನೀಡಲಾಗುತ್ತಿದೆ. ಹಸಿರು ಶಕ್ತಿ ಉತ್ಪಾದನೆಯಲ್ಲಿ ಭಾರತ ತ್ವರಿತ ಮತ್ತು ಅಭೂತಪೂರ್ವ ಸಾಧನೆ ತೋರುತ್ತಿದೆ ಎಂದರು.

ಇದನ್ನೂ ಓದಿ: Kannada New Movie: ಕವೀಶ್ ಶೆಟ್ಟಿ, ಮೇಘಾ ಶೆಟ್ಟಿ ಅಭಿನಯದ ʼಆಪರೇಷನ್ ಲಂಡನ್ ಕೆಫೆʼ ಚಿತ್ರದ ಟೀಸರ್ ರಿಲೀಸ್‌

ಭಾರತ, ಜಪಾನ್ ಮತ್ತು ಸಿಂಗಾಪುರ ಈ ಮೂರು ದೇಶಗಳು ಇಂಧನ ದಕ್ಷತೆ ಮತ್ತು ನವೀಕರಿಸಬಹುದಾದ ಇಂಧನ ತಂತ್ರಜ್ಞಾನಗಳ ಮೇಲೆ ಸಹಯೋಗ ಮಾಡುತ್ತಿವೆ ಎಂದು ತಿಳಿಸಿದರು.

Continue Reading

ರಾಜಕೀಯ

TVK Party Flag Unveils: ತಮ್ಮ ರಾಜಕೀಯ ಪಕ್ಷದ ಧ್ವಜ, ಚಿಹ್ನೆ ಅನಾವರಣಗೊಳಿಸಿದ ನಟ ವಿಜಯ್

ತಮಿಳಗ ವೆಟ್ರಿ ಕಳಗಂ ಪಕ್ಷದ ಮೆರೂನ್ (ಕೆಂಗಂದು) ಮತ್ತು ಹಳದಿ ಬಣ್ಣದ ಧ್ವಜವನ್ನು (TVK Party Flag Unveils) ನಟ ವಿಜಯ್ ಅನಾವರಣಗೊಳಿಸಿದರು. ಧ್ವಜದ ಮಧ್ಯದಲ್ಲಿ ಎರಡು ಆನೆಗಳು ಮತ್ತು ನಕ್ಷತ್ರಗಳಿಂದ ಸುತ್ತುವರಿದ ನವಿಲಿನ ಗುರುತು ಇದೆ. ಈ ಧ್ವಜವನ್ನು ಪನೈಯೂರ್ ಪಕ್ಷದ ಕಚೇರಿಯಲ್ಲಿ ವಿಜಯ್ ಧ್ವಜಾರೋಹಣ ಮಾಡಿ ಬಳಿಕ ರಾಜಕೀಯ ಪಕ್ಷದ ಅಧಿಕೃತ ಹಾಡನ್ನು ಬಿಡುಗಡೆ ಮಾಡಲಿದ್ದಾರೆ.

VISTARANEWS.COM


on

By

TVK Party Flag Unveils
Koo

ತಮಿಳು ಚಿತ್ರರಂಗದ (Tamil cinema) ಸೂಪರ್ ಸ್ಟಾರ್ (Super star) ವಿಜಯ್ (actor vijay) ಅವರು ತಮ್ಮ ರಾಜಕೀಯ ಪಕ್ಷವಾದ ತಮಿಳಗ ವೆಟ್ರಿ ಕಳಗಂನ (Tamizhaga Vetri Kazhagam) ಧ್ವಜ ಮತ್ತು ಚಿಹ್ನೆಯನ್ನು (TVK Party Flag Unveils) ಗುರುವಾರ ಅನಾವರಣಗೊಳಿಸಿದರು.

ಮೆರೂನ್ (ಕೆಂಗಂದು) ಮತ್ತು ಹಳದಿ ಬಣ್ಣವಿರುವ ಧ್ವಜದ ಮಧ್ಯದಲ್ಲಿ ಎರಡು ಆನೆಗಳು ಮತ್ತು ನಕ್ಷತ್ರಗಳಿಂದ ಸುತ್ತುವರಿದ ನವಿಲಿನ ಗುರುತು ಇದೆ. ಈ ಧ್ವಜವನ್ನು ಪನೈಯೂರ್ ಪಕ್ಷದ ಕಚೇರಿಯಲ್ಲಿ ವಿಜಯ್ ಧ್ವಜಾರೋಹಣ ಮಾಡಿ ಬಳಿಕ ರಾಜಕೀಯ ಪಕ್ಷದ ಅಧಿಕೃತ ಹಾಡನ್ನು ಬಿಡುಗಡೆ ಮಾಡಲಿದ್ದಾರೆ. ಫೆಬ್ರವರಿಯಲ್ಲಿ ವಿಜಯ್ ಅವರು ತಮಿಳಗ ವೆಟ್ರಿ ಕಳಗಂ ಪಕ್ಷವನ್ನು ಪ್ರಾರಂಭಿಸುವುದಾಗಿ ಘೋಷಿಸಿ, ತಮಿಳುನಾಡಿನಲ್ಲಿ 2026ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದರು. ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಅವರ ಪಕ್ಷವು ಯಾವುದೇ ರಾಜಕೀಯ ಬಣದೊಂದಿಗೆ ಹೊಂದಾಣಿಕೆ ಮಾಡಿಕೊಂಡಿರಲಿಲ್ಲ.

ಪಕ್ಷದ ಧ್ವಜ ಮತ್ತು ಚಿಹ್ನೆಯನ್ನು ಅನಾವರಣಗೊಳಿಸಿದ ಬಳಿಕ ಮಾತನಾಡಿದ ವಿಜಯ್, ನೀವೆಲ್ಲರೂ ನಮ್ಮ ಮೊದಲ ರಾಜ್ಯ ಸಮ್ಮೇಳನಕ್ಕಾಗಿ ಕಾಯುತ್ತಿದ್ದೀರಿ ಎಂದು ನನಗೆ ತಿಳಿದಿದೆ. ಅದಕ್ಕಾಗಿ ಸಿದ್ಧತೆಗಳು ನಡೆಯುತ್ತಿವೆ ಮತ್ತು ಶೀಘ್ರದಲ್ಲೇ ನಾನು ಅದನ್ನು ಘೋಷಿಸುತ್ತೇನೆ. ಅದಕ್ಕೂ ಮೊದಲು ನಾನು ಇಂದು ನಮ್ಮ ಪಕ್ಷದ ಧ್ವಜವನ್ನು ಅನಾವರಣ ಮಾಡಿದ್ದೇನೆ. ನನಗೆ ತುಂಬಾ ಹೆಮ್ಮೆ ಅನಿಸುತ್ತದೆ. ತಮಿಳುನಾಡಿನ ಅಭಿವೃದ್ಧಿಗೆ ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ತಮಿಳುನಾಡಿನ ಕಲ್ಯಾಣಕ್ಕಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದ ಅವರು, ಇನ್ನು ಮುಂದೆ ತಮಿಳುನಾಡು ಉತ್ತಮವಾಗಿರುತ್ತದೆ. ಗೆಲುವು ಖಚಿತ ಎಂದು ತಿಳಿಸಿದ್ದಾರೆ. ಉತ್ತರ ತಮಿಳುನಾಡಿನ ವಿಕ್ರವಾಂಡಿಯಲ್ಲಿ ಸಾರ್ವಜನಿಕರ ದೃಷ್ಟಿಯಲ್ಲಿ ಔಪಚಾರಿಕವಾಗಿ ಪಕ್ಷವನ್ನು ಪ್ರಾರಂಭಿಸಲು ಸೆಪ್ಟೆಂಬರ್ ಕೊನೆಯ ವಾರದಲ್ಲಿ ಬೃಹತ್ ರಾಲಿಯನ್ನು ನಡೆಸಿ ಧ್ವಜವನ್ನು ಬಹಿರಂಗಪಡಿಸಲಾಗುತ್ತದೆ. ಚುನಾವಣಾ ಆಯೋಗದ ಅಡಿಯಲ್ಲಿ ಪಕ್ಷದ ನೋಂದಣಿ ಮುಂದುವರಿದ ಹಂತದಲ್ಲಿದ್ದು, ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ ಎಂದು ಹೇಳಿದರು.


ಇದನ್ನೂ ಓದಿ: Jagan Mohan Reddy: ಬರೀ ಎಗ್‌ ಪಫ್ಸ್‌ಗಾಗಿ ಒಂದಲ್ಲ.. ಎರಡಲ್ಲ ಬರೋಬ್ಬರಿ 3.6 ಕೋಟಿ ರೂ. ವೆಚ್ಚ- ಜಗನ್‌ ಮತ್ತೊಂದು ಹಗರಣ ಬಯಲು

ಧ್ವಜ ಗೀತೆಯನ್ನು ಜನಪ್ರಿಯ ಸಂಗೀತ ನಿರ್ದೇಶಕ ಎಸ್. ಥಮನ್ ಸಂಯೋಜಿಸಿದ್ದು, ಸಾಹಿತ್ಯವನ್ನು ವಿ. ವಿವೇಕ್ ಬರೆದಿದ್ದಾರೆ. ಕಾರ್ಯಕ್ರಮದಲ್ಲಿ ಪಕ್ಷದ 300ಕ್ಕೂ ಹೆಚ್ಚು ಕಾರ್ಯಕರ್ತರು ಮತ್ತು ವಿಜಯ್ ಅವರ ಅಭಿಮಾನಿಗಳ ಸಂಘಗಳ ಸದಸ್ಯರನ್ನು ಆಹ್ವಾನಿಸಲಾಗಿದೆ ಎನ್ನಲಾಗಿದೆ.

Continue Reading

Latest

Viral Video: ಅಪ್ಪ-ಮಗನ ಗುದ್ದಾಟದಿಂದ ಮೂವರು ಅಮಾಯಕರ ಸ್ಥಿತಿ ಗಂಭೀರ!

Viral Video: ಮನೆಯೆಂದ ಮೇಲೆ ಅಲ್ಲಿ ಜಗಳ ಆಗುವುದು ಸಾಮಾನ್ಯ. ಆದರೆ ಇಲ್ಲಿ ಅಪ್ಪ-ಮಗನನ ಜಳಗ ಬೀದಿಯವರೆಗೂ ಬಂದು ಸಾರ್ವಜನಿಕರಿಗೂ ಸಂಕಷ್ಟ ತಂದ್ದೊಡಿದೆ. ತಂದೆಯಿಂದ ಮೇಲೆ ಸಿಟ್ಟಾದ ಅಂಬರ್‌ನಾಥ್‌ ನಿವಾಸಿ ಬಿಂದೇಶ್ವರ್ ಶರ್ಮಾ ತನ್ನ ತಂದೆಯ ಫಾರ್ಚೂನರ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಗಾಯಗೊಂಡಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ.

VISTARANEWS.COM


on

Viral Video
Koo


ಮನೆಯವರ ಜಗಳ ಯಾವಾಗಲೂ ಮನೆಯೊಳಗೆ ನಡೆಯಬೇಕು ಮತ್ತು ಅದು ಮನೆಯೊಳಗೆ ಇತ್ಯರ್ಥವಾಗಬೇಕು. ಒಂದು ವೇಳೆ ಅದು ಬೀದಿಗೆ ಬಂದರೆ ಮರ್ಯಾದೆ ಹೋಗುವುದಲ್ಲದೇ ಸಾರ್ವಜನಿಕರಿಗೂ ಇದರಿಂದ ಹಾನಿಯಾಗುತ್ತದೆ ಎಂಬುದಕ್ಕೆ ಮಹಾರಾಷ್ಟ್ರದ ಅಂಬರ್‌ನಾಥದಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ತಂದೆಯಿಂದ ಕುಪಿತನಾಗಿದ್ದ ಅಂಬರ್‌ನಾಥ್ ನಿವಾಸಿ ಬಿಂದೇಶ್ವರ್ ಶರ್ಮಾ ಮಂಗಳವಾರ ಸಂಜೆ 5 ಗಂಟೆ ಸುಮಾರಿಗೆ ತನ್ನ ತಂದೆಯ ಫಾರ್ಚೂನರ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಗಾಯಗೊಂಡಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಆರೋಪಿ ಬಿಂದೇಶ್ವರ್ ಶರ್ಮಾ ಅವರ ತಂದೆ, ನಿವೃತ್ತ ಹಿರಿಯ ರಕ್ಷಣಾ ಅಧಿಕಾರಿ ಸತೀಶ್ ಶರ್ಮಾ, ತಮ್ಮ ಮಗ ಮತ್ತು ಸೊಸೆಯ ನಡುವಿನ ವಿವಾದವನ್ನು ಬಗೆಹರಿಸಲು ಥಾಣೆಯ ಅಂಬರ್‌ನಾಥ್‍ಗೆ ಬಂದಿದ್ದರು. ಅವರು ಬಿಂದೇಶ್ವರನ ಮನೆಯನ್ನು ತಲುಪಿದಾಗ, ಅವರು ಅಲ್ಲಿ ಅವನನ್ನು ಕಾಣಲಿಲ್ಲ. ಆ ನಂತರ ಸೊಸೆಯನ್ನು ಸಮಾಧಾನಪಡಿಸಿದ ನಂತರ ಅವರು ಮುಂಬೈಗೆ ಹಿಂದಿರುಗಲು ಮುಂದಾದರು. ಆಗ ಅವರು ಅಂಬರ್‌ನಾಥ್‌ನ 7 ಸ್ಟಾರ್‌ ಹೋಟೆಲ್ ಸಮೀಪಿಸುತ್ತಿದ್ದಂತೆ, ಬಿಂದೇಶ್ವರ್ ತನ್ನ ಸಫಾರಿ ಕಾರಿನಲ್ಲಿ ಹಿಂದಿನಿಂದ ವೇಗವಾಗಿ ಬರುತ್ತಿರುವುದನ್ನು ಅವರು ನೋಡಿದರು. ಬಿಂದೇಶ್ವರ್ ತನ್ನ ಕುಟುಂಬದೊಂದಿಗೆ ಮಾತನಾಡಲು ಬಯಸುತ್ತಾನೆ ಎಂದು ಭಾವಿಸಿ ಅವನ ತಂದೆ ತನ್ನ ಡ್ರೈವರ್ ಬಳಿ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸುವಂತೆ ಹೇಳಿ, ಕಾರಿನಿಂದ ಕೆಳಗಿಳಿದರು.

ಬಿಂದೇಶ್ವರ್ ಮಾತ್ರ ಕಾರನ್ನು ನಿಲ್ಲಿಸದೆ, ನಿಲ್ಲಿಸಿದ್ದ ತಂದೆಯ ಕಾರನ್ನು ಓವರ್‌ಟೇಕ್‌ ಮಾಡಿ, ಡ್ರೈವರ್‌ನಿಗೆ ಡಿಕ್ಕಿ ಹೊಡೆದು ಸುಮಾರು 100 ಅಡಿ ಮುಂದೆ ಎಳೆದುಕೊಂಡು ಹೋದ. ನಂತರ ಅವನು ಕಾರನ್ನು ಯು-ಟರ್ನ್ ತೆಗೆದುಕೊಂಡು ತಂದೆಯ ಕಾರಿಗೆ ಗುದ್ದಿದ್ದಾನೆ. ಇದರಿಂದ ಅವರ ತಂದೆಯ ಕಾರಿನ ಹಿಂಭಾಗದಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಇದರಿಂದ ಅವರ ತಂದೆಯ ಕಾರಿನ ಡ್ರೈವರ್ ಮತ್ತು ಬೈಕಿನಲ್ಲಿದ್ದ ಇಬ್ಬರ ಸ್ಥಿತಿ ಗಂಭೀರವಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಇದನ್ನೂ ಓದಿ:ಸೂಪರ್ ಮಾರ್ಕೆಟ್‍ನೊಳಗೇ ಒಳ ಉಡುಪು ಕಳಚಿ ಬ್ರೆಡ್ ಟ್ರೇನಲ್ಲಿಟ್ಟ ಯುವತಿ!

ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಸಂತ್ರಸ್ತರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಆರೋಪಿ ತಲೆಮರೆಸಿಕೊಂಡಿದ್ದು, ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿ ತನ್ನ ತಂದೆಯೊಂದಿಗೆ ವಿವಾದ ಹೊಂದಿದ್ದಾನೆ. ಮುಂಬೈನಲ್ಲಿ ವಾಸಿಸುವ ಸತೀಶ್ ಮಂಗಳವಾರ ತನ್ನ ಪತ್ನಿ ಮತ್ತು ಕಿರಿಯ ಮಗ ಮತ್ತು ಚಾಲಕನೊಂದಿಗೆ ವಿವಾದವನ್ನು ಪರಿಹರಿಸಲು ಥಾಣೆಯ ಅಂಬರ್‌ನಾಥ್‌ಗೆ ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

ಬೆಂಗಳೂರು

Kannada New Movie: ಕವೀಶ್ ಶೆಟ್ಟಿ, ಮೇಘಾ ಶೆಟ್ಟಿ ಅಭಿನಯದ ʼಆಪರೇಷನ್ ಲಂಡನ್ ಕೆಫೆʼ ಚಿತ್ರದ ಟೀಸರ್ ರಿಲೀಸ್‌

ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಅಭಿನಯದ ‘ಆಪರೇಷನ್ ಲಂಡನ್ ಕೆಫೆ’ ಚಿತ್ರದ (Kannada New Movie) ಟೀಸರ್ ಬಿಡುಗಡೆಯಾಗಿ ಸೋಷಿಯಲ್ ಮೀಡಿಯಾದಲ್ಲಿ ಪ್ರೇಕ್ಷಕರಿಂದ ಭರ್ಜರಿ ಫಲಿತಾಂಶವನ್ನು ಕಾಣುತ್ತಿದೆ. ನಿರ್ದೇಶಕ ಸಡಗರ ರಾಘವೇಂದ್ರ ನಿರ್ದೇಶನದ ಈ ಚಿತ್ರವು ಕನ್ನಡ, ಮರಾಠಿ, ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ನಿರ್ಮಾಣವಾಗುತ್ತಿದ್ದು, ಚಿತ್ರದ ಚಿತ್ರೀಕರಣ ಈಗಾಗಲೇ ಮುಕ್ತಾಯಗೊಂಡು ಪೋಸ್ಟ್ ಪ್ರೊಡಕ್ಷನ್ ಕೆಲಸ ಬಿರುಸಿನಿಂದ ಸಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Kannada New Movie
Koo

ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್‌ನ ಕನ್ನಡ, ಮರಾಠಿ, ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ ‘ಆಪರೇಷನ್ ಲಂಡನ್ ಕೆಫೆ’ ಚಿತ್ರದ ಚಿತ್ರೀಕರಣ ಈಗಾಗಲೇ ಮುಕ್ತಾಯಗೊಂಡು ಪೋಸ್ಟ್ ಪ್ರೊಡಕ್ಷನ್ ಕೆಲಸ ಬಿರುಸಿನಿಂದ ಸಾಗಿದೆ. ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರದ (Kannada New Movie) ಟೀಸರ್ ಬಿಡುಗಡೆಯಾಗಿ ಸೋಷಿಯಲ್ ಮೀಡಿಯಾದಲ್ಲಿ ಪ್ರೇಕ್ಷಕರಿಂದ ಭರ್ಜರಿ ಫಲಿತಾಂಶವನ್ನು ಕಾಣುತ್ತಿದೆ.

ಟೀಸರ್ ಬಿಡುಗಡೆ ಮಾಡಿದ ಚಿತ್ರತಂಡ ಇದೆ ಮೊದಲ ಬಾರಿ ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಹಂಚಿಕೊಂಡಿದೆ.

ಮೊದಲು ಮಾತನಾಡಿದ ನಿರ್ದೇಶಕ ಸಡಗರ ರಾಘವೇಂದ್ರ, ನಾನು ಕನ್ನಡದ ಹೆಸರಾಂತ ನಿರ್ದೇಶಕರ ಜತೆ ಹಲವಾರು ವರ್ಷಗಳಿಂದ ಕೆಲಸ ಮಾಡಿದ ನಂತರ ಇದೇ ಮೊದಲ ಬಾರಿಗೆ ತನ್ನ ಚೊಚ್ಚಲ ಚಿತ್ರದ ನಿರ್ದೇಶನ ಮಾಡಿದ್ದೇನೆ. ಈ ಚಿತ್ರದ ನಾಯಕನಾಗಿ ನಟಿಸಿರುವ ಕವೀಶ್ ಶೆಟ್ಟಿ ಈ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಹಾಗೂ ಚಿತ್ರದ ನಿರ್ಮಾಪಕರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು.

ಇನ್ನು ಇದೊಂದು ನಕ್ಸಲಿಸಂ ಬೇಸ್‌ ಆಗಿಟ್ಟಿಕೊಂಡು ಹೆಣೆದಿರುವ ಕಥೆ‌.‌ ಹಾಗಂತ ನಕ್ಸಲಿಸಂನ ವೈಭವಿಕರಿಸಿಲ್ಲ. ಯಾವುದೇ ಒಬ್ಬ ವ್ಯಕ್ತಿಯ ಕುರಿತಾದ ಚಿತ್ರವೂ ಇದಲ್ಲ. ಇದು ಆಫ್ಟರ್ “ಆಪರೇಷನ್ ಲಂಡನ್ ಕೆಫೆ”. ನೀವು ಮೊದಲು ನೋಡುವುದು ಚಿತ್ರದ ಪ್ರೀಕ್ವೆಲ್. ಮೊದಲ ಭಾಗ ಆನಂತರ ಬರಲಿದೆ. ಆ ಚಿತ್ರದ ಕುರಿತು ಈಗಾಗಲೇ ಕಾರ್ಯ ಆರಂಭವಾಗಿದೆ. ಕನ್ನಡ ಹಾಗೂ ಮರಾಠಿ ಎರಡೂ ಭಾಷೆಯಲ್ಲಿ ನೇರವಾಗಿ ಚಿತ್ರೀಕರಣ ಮಾಡಲಾಗಿದೆ‌. ಉಳಿದಂತೆ ಹಿಂದಿ, ತೆಲುಗು, ತಮಿಳು ಹಾಗೂ ಮಲೆಯಾಳಂನಲ್ಲೂ ಚಿತ್ರ ಬಿಡುಗಡೆಯಾಗಲಿದೆ. ಕನ್ನಡ ಕಲಾವಿದರು ಮರಾಠಿ ಕಲಿತು, ಮರಾಠಿ ಕಲಾವಿದರು ಕನ್ನಡ ಕಲಿತು ಅಭಿನಯಿಸಿರುವುದು ಈ ಚಿತ್ರದ ವಿಶೇಷ.

“ಮುಂಗಾರು ಮಳೆ 2” ಚಿತ್ರದಿಂದ ನನ್ನ ಸಿನಿ ಜರ್ನಿ ಆರಂಭವಾಯಿತು. ನಂತರ 2020 ರಲ್ಲಿ “ಜಿಲ್ಕಾ” ಚಿತ್ರದಲ್ಲಿ ನಟಿಸಿದ್ದೆ. ಸಡಗರ ರಾಘವೇಂದ್ರ ಅವರ ಕಾರ್ಯವೈಖರಿಯನ್ನು ಹತ್ತಿರದಿಂದ ಕಂಡಿದ್ದ ನನಗೆ ಅವರ ಮೊದಲ ನಿರ್ದೇಶನದಲ್ಲಿ ನನ್ನದೊಂದು ಚಿತ್ರ ಮಾಡುವ ಆಸೆಯಿತ್ತು. ಈ ಚಿತ್ರದ ಮೂಲಕ ಅದು ಈಡೇರಿದೆ. ವಿಜಯ ಕುಮಾರ್ ಶೆಟ್ಟಿ, ರಮೇಶ್ ಕೊಠಾರಿ, ಹವರಾಲ್ ಹಾಗೂ ದೀಪಕ್ ರಾಣೆ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಮೇಘಾ ಶೆಟ್ಟಿ ನಾಯಕಿಯಾಗಿ ಅಭಿನಯಿಸಿದ್ದಾರೆ ಎಂದು ನಾಯಕ ಕವೀಶ್ ಶೆಟ್ಟಿ ತಿಳಿಸಿದರು.

ನಾನು ಮರಾಠಿ ಕಲಿತು ಈ ಚಿತ್ರದಲ್ಲಿ ಅಭಿನಯಿಸಿದ್ದೇನೆ. ನಿರ್ದೇಶಕರಾಗಿ ಸಡಗರ ರಾಘವೇಂದ್ರ ಅವರು ತಮ್ಮ ಮೊದಲ ನಿರ್ದೇಶನದಲ್ಲೇ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಒಳ್ಳೆಯ ತಂಡದ ಜತೆಗೆ ಕೆಲಸ ಮಾಡಿರುವ ಖುಷಿಯಿದೆ ಎಂದರು ಮೇಘಾ ಶೆಟ್ಟಿ.

ಇಂಡಿಯನ್ ಫಿಲ್ಮ್ ಫ್ಯಾಕ್ಟರಿ ಮತ್ತು ದೀಪಕ್ ರಾಣೆ ಫಿಲಂ ಲಾಂಛನದಡಿಯಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿರುವ ವಿಜಯ್ ಕುಮಾರ್ ಶೆಟ್ಟಿ ಹವರಾಲ್, ರಮೇಶ್ ಕೊಠಾರಿ ಮತ್ತು ದೀಪಕ್ ರಾಣೆ ಮಾತನಾಡಿ ಈ ಚಿತ್ರಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಿ ಎಂದರು.

ಇದನ್ನೂ ಓದಿ: KPSC Exams : ಕೆಪಿಎಸ್‌ಸಿ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯ ಸ್ಪರ್ಧಾತ್ಮಕ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಛಾಯಾಗ್ರಾಹಕ ಎನ್.ಡಿ. ನಾಗಾರ್ಜುನ್, ಸಾಹಸ ನಿರ್ದೇಶಕ ಮಾಸ್ ಮಾದ ಹಾಗೂ ಚಿತ್ರದಲ್ಲಿ ನಟಿಸಿರುವ ಅರ್ಜುನ್ ಕಾಪಿಕ್ಕಾಡ್, ವಿರಾಟ್ ಮಡಕೆ ಮುಂತಾದವರು “ಆಪರೇಷನ್ ಲಂಡನ್ ಕೆಫೆ” ಹಾಗೂ ತಮ್ಮ ಪಾತ್ರದ ಬಗ್ಗೆ ಮಾತನಾಡಿ, ಚಿತ್ರದ ಮೇಕಿಂಗ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Continue Reading
Advertisement
Green Ammonia Export
ದೇಶ3 mins ago

Green Ammonia Export: ಜಪಾನ್‌ಗೆ ಇನ್ನು ಭಾರತದಿಂದ ಹಸಿರು ಅಮೋನಿಯಾ ರಫ್ತು! ಒಪ್ಪಂದಕ್ಕೆ ಸಹಿ

TVK Party Flag Unveils
ರಾಜಕೀಯ9 mins ago

TVK Party Flag Unveils: ತಮ್ಮ ರಾಜಕೀಯ ಪಕ್ಷದ ಧ್ವಜ, ಚಿಹ್ನೆ ಅನಾವರಣಗೊಳಿಸಿದ ನಟ ವಿಜಯ್

Viral Video
Latest13 mins ago

Viral Video: ಅಪ್ಪ-ಮಗನ ಗುದ್ದಾಟದಿಂದ ಮೂವರು ಅಮಾಯಕರ ಸ್ಥಿತಿ ಗಂಭೀರ!

Neeraj Chopra
ಕ್ರಿಕೆಟ್28 mins ago

Neeraj Chopra: ಬ್ರ್ಯಾಂಡ್ ಮೌಲ್ಯದಲ್ಲಿ ಹಾರ್ದಿಕ್​ ಪಾಂಡ್ಯ ಹಿಂದಿಕ್ಕಿದ ನೀರಜ್​ ಚೋಪ್ರಾ

cylinder blast
ಬೆಂಗಳೂರು41 mins ago

Gas Cylinder Blast: ಸಿಲಿಂಡರ್‌ ಸ್ಫೋಟಕ್ಕೆ ಸುಟ್ಟುಕರಕಲಾದ ವ್ಯಕ್ತಿ; ಮನೆ ಗೋಡೆ ಬಿದ್ದು ಮಕ್ಕಳು ಗಾಯ

DCM DK Shivakumar
ಪ್ರಮುಖ ಸುದ್ದಿ42 mins ago

DK Shivakumar: ಡಿಕೆ ಶಿವಕುಮಾರ್‌ಗೆ ಇಂದು ವಿಚಾರಣೆಗೆ ಹಾಜರಾಗಲು ಲೋಕಾಯುಕ್ತ ನೋಟೀಸ್

Kannada New Movie
ಬೆಂಗಳೂರು48 mins ago

Kannada New Movie: ಕವೀಶ್ ಶೆಟ್ಟಿ, ಮೇಘಾ ಶೆಟ್ಟಿ ಅಭಿನಯದ ʼಆಪರೇಷನ್ ಲಂಡನ್ ಕೆಫೆʼ ಚಿತ್ರದ ಟೀಸರ್ ರಿಲೀಸ್‌

Kalki 2898 AD
ಸಿನಿಮಾ54 mins ago

Kalki 2898AD: ಎರಡು ಪ್ರಮುಖ ಒಟಿಟಿಗಳಲ್ಲಿ ಹಲವು ಭಾಷೆಗಳಲ್ಲಿ ಲಗ್ಗೆ ಇಟ್ಟ ಕಲ್ಕಿ 2898 ಎಡಿ!

murder case
ಚಿಕ್ಕಮಗಳೂರು1 hour ago

Murder Case : ಆಸ್ತಿಗಾಗಿ ಸಹೋದರನ ಕಣ್ಣಿಗೆ ಖಾರದ ಪುಡಿ ಎರಚಿ, ಕೊಚ್ಚಿ ಸಾಯಿಸಿದ ರಾಕ್ಷಸಿ ಸಹೋದರಿಯರು!

Kolkata Doctor Murder Case
ಕ್ರೀಡೆ2 hours ago

Kolkata Doctor Murder Case: ‘ಖಾಸಗಿ ಅಂಗಕ್ಕೆ ಹೊಡೆದು ಗಲ್ಲಿಗೇರಿಸಿ’; ವೈದ್ಯೆಯ ಅತ್ಯಾಚಾರ, ಕೊಲೆ ಖಂಡಿಸಿ ಕ್ರಿಕೆಟಿಗ ಚಹಲ್​ ಪೋಸ್ಟ್​

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌