Viral Video: ರೀಲ್ಸ್ ಮಾಡಲು ಹೋದ ವಿದ್ಯಾರ್ಥಿನಿಗೆ ಕೊನೆಗೆ ಆಗಿದ್ದೇನು? ವಿಡಿಯೊ ನೋಡಿ - Vistara News

Latest

Viral Video: ರೀಲ್ಸ್ ಮಾಡಲು ಹೋದ ವಿದ್ಯಾರ್ಥಿನಿಗೆ ಕೊನೆಗೆ ಆಗಿದ್ದೇನು? ವಿಡಿಯೊ ನೋಡಿ

Viral Video: ಮೊನ್ನೆಯಷ್ಟೇ ಮುಂಬೈಯಲ್ಲಿ ಚಲಿಸುತ್ತಿರುವ ರೈಲಿನಲ್ಲಿ ಹುಡುಗಿಯೊಬ್ಬಳು ರೀಲ್ಸ್ ಮಾಡಿದ್ದಳು, ಅದಕ್ಕೂ ಮೊದಲು ಪುಣೆಯಲ್ಲಿ ಪಾಳುಬಿದ್ದ ಕಟ್ಟಡದ ಮೇಲಿಂದ ರೀಲ್ಸ್ ಮಾಡಿದ ಹುಡುಗಿ ಆರೆಸ್ಟ್ ಆಗಿದ್ದಳು. ದಿನ ಈ ಸುದ್ದಿ ನೋಡುತ್ತಿದ್ದರೂ, ಮತ್ತು ಅದೇ ತಪ್ಪುಗಳನ್ನು ಈಗಿನ ಯುವಪೀಳಿಗೆ ಮಾಡುತ್ತಿದೆ. ರೀಲ್ಸ್ ಮಾಡುವುದು ತಪ್ಪಲ್ಲ, ಆದರೆ ತಮ್ಮ ಜೀವಕ್ಕೆ ಕುತ್ತು ತಂದುಕೊಳ್ಳುವಂತಹ ರೀಲ್ಸ್ ಮಾಡುವುದಿಂದ ಮನೆಯವರನ್ನು ಆಪತ್ತಿಗೆ ದೂಡಿದ ಹಾಗೇ ಆಗುವುಂತೂ ಗ್ಯಾರಂಟಿ. ಬೆಂಗಳೂರಿನ ಈ ವಿದ್ಯಾರ್ಥಿನಿಯು ನಟ್ಟನಡುವಿನ ರಸ್ತೆಯಲ್ಲಿ ರೀಲ್ಸ್ ಮಾಡಲು ಹೋಗಿ ಹೀನಾಯ ಪರಿಸ್ಥಿತಿಯನ್ನು ತಂದುಕೊಂಡಿದ್ದಾಳೆ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸೋಶಿಯಲ್ ಮೀಡಿಯಾದಲ್ಲಿ ರೀಲ್ಸ್ ಮಾಡುವ ಟ್ರೆಂಡ್ ಹೆಚ್ಚಾಗುತ್ತಿದೆ. ರೀಲ್ಸ್‌ನಿಂದ ಫಾಲೋವರ್ಸ್ ಹೆಚ್ಚಿಸಿಕೊಂಡು ಫೇಮಸ್ ಆಗಲು ಯುವಕ, ಯುವತಿಯರು ಮಾತ್ರವಲ್ಲ ಕಾಲೇಜು ವಿದ್ಯಾರ್ಥಿಗಳು ಕೂಡ ಹಲವು ವಿಧದ ಅಪಾಯಕಾರಿ ರೀಲ್ಸ್ ಮಾಡುತ್ತಿದ್ದಾರೆ. ಆದರೆ ಬೇರೆಯವರನ್ನು ಮೆಚ್ಚಿಸಲು ಹೋಗಿ ಅವರ ಜೀವಕ್ಕೆ ಆಪತ್ತು ತಂದುಕೊಳ್ಳುತ್ತಿದ್ದಾರೆ. ಅಂತಹದೊಂದು ಘಟನೆ ಇತ್ತೀಚೆಗೆ ನಡೆದಿದ್ದು, ವಿದ್ಯಾರ್ಥಿನಿಯೊಬ್ಬಳು ರೀಲ್ಸ್ ಗಾಗಿ ಸ್ಟಂಟ್ ಮಾಡಲು ಹೋಗಿ ಆಪತ್ತು ತಂದುಕೊಂಡಿದ್ದಾಳೆ. ಈ ವಿಡಿಯೊ ಎಲ್ಲೆಡೆ ವೈರಲ್‌ (Viral Video) ಆಗಿದೆ.

ಶಾಲಾ ಸಮವಸ್ತ್ರ ಧರಿಸಿದ್ದ ವಿದ್ಯಾರ್ಥಿನಿಯರಿಬ್ಬರು ಸೋಶಿಯಲ್ ಮೀಡಿಯಾದ ರೀಲ್ಸ್ ಗಾಗಿ ರಸ್ತೆಯಲ್ಲಿ ಸ್ಟಂಟ್ ಮಾಡಲು ಹೋಗಿದ್ದಾರೆ. ರೀಲ್ಸ್ ಮತ್ತಷ್ಟು ವೈರಲ್ ಆಗಲಿ ಎಂದು ಅಪಾಯಕಾರಿ ಸ್ಟಂಟ್ ಮಾಡಿದ್ದಾಳೆ. ಮತ್ತೊಬ್ಬ ವಿದ್ಯಾರ್ಥಿನಿಯ ಭುಜದ ಮೇಲೆ ಹತ್ತಿ ಬ್ಯಾಕ್ ಫ್ಲಿಪ್ ಮಾಡಿದ್ದಾಳೆ. ಎತ್ತರಕ್ಕೆ ಹಾರಿದ ಹುಡುಗಿ ನೆಲದ ಮೇಲೆ ಇಳಿಯುವಾಗ ಬ್ಯಾಲೆನ್ಸ್ ತಪ್ಪಿ ಕಾಲು ಜಾರಿ ದೊಪ್ಪೆಂದು ಕೆಳಕ್ಕೆ ಬಿದ್ದಿದ್ದಾಳೆ. ಇದರಿಂದ ಅವಳ ಬೆನ್ನುಮೂಳೆ ಮುರಿತಕ್ಕೊಳಗಾಗಿದೆ. ಹಾಗಾಗಿ ಆಕೆಗೆ ಮೇಲೆಳಲು ಸಾಧ್ಯವಾಗಲಿಲ್ಲ. ಮತ್ತೊಬ್ಬ ವಿದ್ಯಾರ್ಥಿನಿ ಆಕೆಯನ್ನು ಎತ್ತಿ ನಿಲ್ಲಿಸಲು ಪ್ರಯತ್ನಿಸಿದರೂ ಆಕೆಗೆ ನಿಲ್ಲಲು ಆಗಲಿಲ್ಲ. ಇಂತಹ ಅಪಾಯಕಾರಿ ರೀಲ್ಸ್ ಮಾಡಲು ಹೋಗಿ ಓದಿ ವಿದ್ಯಾವಂತೆ ಆಗಬೇಕಿದ್ದ ವಿದ್ಯಾರ್ಥಿನಿ ತನ್ನ ಜೀವನವನ್ನೇ ಕತ್ತಲೆಗೆ ತಳ್ಳಿದ್ದಾಳೆ. ಅವಳ ಕಾಲು ಸ್ವಾಧೀನ ಕಳೆದುಕೊಂಡ ಪರಿಣಾಮ ಆಕೆಗೆ ನಿಲ್ಲಲು ಸಾಧ್ಯವಾಗದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಸದ್ಯಕ್ಕೆ ಆಕೆ ಎದ್ದೇಳದಂತೆ, ನಡೆಯದಂತೆ ಮಲಗಿಕೊಂಡೇ ವಿಶ್ರಾಂತಿ ತೆಗೆದುಕೊಳ್ಳಲು ವೈದ್ಯರು ಸಲಹೆ ನೀಡಿದ್ದಾರೆ.

ಇದಕ್ಕೆ ಸಂಬಂಧಪಟ್ಟ ವಿಡಿಯೊ ಪೋಸ್ಟ್ ಆಗಿದ್ದು, ಇದಕ್ಕೆ 17 ಲಕ್ಷಕ್ಕೂ ಹೆಚ್ಚು ವೀವ್ಸ್ ಬಂದಿದೆ ಮತ್ತು ಹಲವರು ಕಾಮೆಂಟ್ ಕೂಡ ಮಾಡಿದ್ದಾರೆ. ನಿಮ್ಮ ಜೀವಕ್ಕೆ ಕುತ್ತು ತರುವಂತಹ ಈ ರೀತಿಯ ಸ್ಟಂಟ್ ಮಾಡಬೇಡಿ ಎಂದು ಹಲವರು ಸಲಹೆ ನೀಡಿದ್ದಾರೆ. ಈ ರೀಲ್ಸ್ ನಿಂದ ಫೇಮಸ್ ಆದವರಿಗಿಂತ ಅಪಾಯಕ್ಕೆ ಒಳಗಾಗಿ ಜೀವ ಕಳೆದುಕೊಂಡವರೇ ಹೆಚ್ಚು. ಆದರೂ ಈ ಯುವಜನರಿಗೆ ರೀಲ್ಸ್ ಹುಚ್ಚು ಯಾವಾಗ ಬಿಟ್ಟು ಹೋಗುತ್ತದೆಯೋ ತಿಳಿಯದು. ಒಟ್ಟಾರೆ ಸೋಶಿಯಲ್ ಮೀಡಿಯಾದ ರೀಲ್ಸ್‌ಗಾಗಿ ಯುವ ಜನರು ಪ್ರತಿದಿನ ಯಾವ ಸಂಕಷ್ಟಕ್ಕೆ ತಂದುಕೊಳ್ಳುತ್ತಾರೋ ಎಂಬುದು ತಿಳಿಯುತ್ತಿಲ್ಲ.

ಇದನ್ನೂ ಓದಿ: Tirupathi Laddu: ತಿರುಪತಿ ಲಡ್ಡು, ವಿಶೇಷ ದರ್ಶನ ದರದ ಬಗ್ಗೆ ಟಿಟಿಡಿ ಸ್ಪಷ್ಟನೆ

ಇಂತಹ ಘಟನೆಗಳು ಪ್ರತಿದಿನ ಒಂದಲ್ಲ ಒಂದು ನಡೆಯುತ್ತಿರುತ್ತದೆ. ಈ ಹಿಂದೆ ಪುಣೆಯಲ್ಲಿ ಹುಡುಗಿಯೊಬ್ಬಳು ಸ್ನೇಹಿತನ ಕೈ ಹಿಡಿದುಕೊಂಡು ಪಾಳುಬಿದ್ದ ಕಟ್ಟಡದಿಂದ ಇಳಿದು ನೇತಾಡುತ್ತಾ ರೀಲ್ಸ್ ಮಾಡಿ ಪೊಲೀಸರ ಅತಿಥಿಯಾಗಿದ್ದಾಳೆ. ಅಲ್ಲದೇ ಮುಂಬೈ ಹುಡುಗಿಯೊಬ್ಬಳು ಚಲಿಸುತ್ತಿದ್ದ ರೈಲಿನ ಬಾಗಿಲ ಬಳಿ ನಿಂತು ಡ್ಯಾನ್ಸ್ ಮಾಡಿ ವೀಕ್ಷಕರನ್ನು ದಿಗ್ಭ್ರಮೆಗೊಳಿಸಿದ್ದಳು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Viral Video: ಒಂಟಿ ಯುವತಿಯ ಮೇಲೆ ದುಷ್ಕರ್ಮಿಯ ದಾಳಿ; ಆಕೆ ಪಾರಾಗಿದ್ದು ಹೇಗೆ?

Viral Video: ಮಹಿಳೆಯರ ಮೇಲೆ ಒಂದಿಲ್ಲೊಂದು ಕಾರಣಕ್ಕೆ ಏನಾದರೂ ಕಿರುಕುಳ ನಡೆಯುತ್ತಲೇ ಇರುತ್ತದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯೊಬ್ಬಳನ್ನು ಹಿಂದಿನಿಂದ ಬಂದ ಯುವಕನೊಬ್ಬ ಹಿಡಿದು ಎಳೆದಾಡಿದ. ಇದರಿಂದ ಹೆದರಿದ ಆಕೆ ಓಡಲು ಪ್ರಯತ್ನಿಸಿದರೂ ಆತ ಬಿಡಲಿಲ್ಲ. ಆ ವೇಳೆ ಒಬ್ಬ ದಾರಿಹೋಕ ಇದನ್ನು ಕಂಡು ಕಾಣದಂತೆ ಸುಮ್ಮನೆ ನಡೆದುಕೊಂಡು ಮುಂದೆ ಹೋದ. ಆದರೆ ಅಷ್ಟರಲ್ಲಿ ಬಸ್ಸೊಂದು ಬಂತು. ಮುಂದೇನಾಯಿತು? ಈ ವಿಡಿಯೊ ನೋಡಿ.

VISTARANEWS.COM


on

Viral Video
Koo

ಸಮಾಜದಲ್ಲಿ ಮಹಿಳೆಯರು ವಿವಿಧ ರೀತಿಯ ಕಿರುಕುಳಗಳಿಗೆ ಒಳಗಾಗುತ್ತಿದ್ದಾರೆ. ಆದರೆ ಕೆಲವರು ಕಂಡೂ ಕಾಣದಂತೆ ಸುಮ್ಮನಿದ್ದರೆ ಇನ್ನೂ ಕೆಲವರು ಮಹಿಳೆಯರ ಸಹಾಯಕ್ಕೆ ಬಂದು ಅವರನ್ನು ರಕ್ಷಿಸುವ ಮನೋಭಾವವುಳ್ಳವರಾಗಿರುತ್ತಾರೆ. ಅಂತಹದೊಂದು ಘಟನೆ ಇದೀಗ ನಡೆದಿದ್ದು, ಇದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ಇತ್ತೀಚೆಗೆ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಯುವತಿಯೊಬ್ಬಳಿಗೆ ಯುವಕನೊಬ್ಬ ಕಿರುಕುಳ ನೀಡುತ್ತಿದ್ದು, ಇದನ್ನು ಕಂಡು ಬಸ್‌ನ ಪ್ರಯಾಣಿಕರು ಆಕೆಯ ಸಹಾಯಕ್ಕೆ ಧಾವಿಸಿದ್ದಾರೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ರಸ್ತೆಯಲ್ಲಿ ಯುವತಿಯೊಬ್ಬಳು ನಡೆದುಕೊಂಡು ಬರುತ್ತಿದ್ದಳು. ಆ ವೇಳೆ ಆಕೆಯ ಹಿಂದಿನಿಂದ ಬಂದ ಯುವಕನೊಬ್ಬ ಆಕೆಯನ್ನು ರಸ್ತೆಯ ಮೇಲೆ ಹಿಡಿದು ಎಳೆದಾಡಿದ. ಇದರಿಂದ ಹೆದರಿದ ಆಕೆ ಓಡಲು ಪ್ರಯತ್ನಿಸಿದರೂ ಆತ ಬಿಡಲಿಲ್ಲ. ಆ ವೇಳೆ ಒಬ್ಬ ದಾರಿಹೋಕ ಇದನ್ನು ಕಂಡೂ ಕಾಣದಂತೆ ಸುಮ್ಮನೆ ನಡೆದುಕೊಂಡು ಮುಂದೆ ಹೋದ. ಆದರೆ ರಸ್ತೆಯಲ್ಲಿ ಬರುತ್ತಿದ್ದ ಬಸ್‌ನ ಪ್ರಯಾಣಿಕರು ಈ ದೃಶ್ಯವನ್ನು ಕಂಡು ಬಸ್ ನಿಲ್ಲಿಸಿ ಅದರಲ್ಲಿದ್ದ ಪುರುಷರು ಒಟ್ಟಾಗಿ ಯುವತಿಯ ಸಹಾಯಕ್ಕೆ ಬಂದಿದ್ದಾರೆ. ಆ ಯುವಕನನ್ನು ಹಿಡಿದು ಹಿಗ್ಗಾಮುಗ್ಗಾ ಬಾರಿಸಿದ್ದಾರೆ.

ಇದನ್ನೂ ಓದಿ:  ಬಿಜೆಪಿಗೆ ಮತ ಹಾಕಿದ್ದಕ್ಕೆ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ಪತಿ!

ಹಾಗಾಗಿ ಸಮಾಜದಲ್ಲಿ ಯಾವುದೇ ರೀತಿಯ ದುರ್ವತನೆಗಳನ್ನು ಕಂಡಾಗ ಅದನ್ನು ಎದುರಿಸಲು ಮುಂದಾಗಬೇಕು. ಕಿರುಕುಳದ ವಿರುದ್ಧ ಧ್ವನಿ ಎತ್ತಿ ನಿಲ್ಲುವುದು ಕೇವಲ ನಮ್ಮ ಜವಾಬ್ದಾರಿ ಮಾತ್ರವಲ್ಲ ಅದು ಸಾಮಾಜಿಕ ಕರ್ತವ್ಯ ಎಂಬುದನ್ನು ತಿಳಿಯಿರಿ. ಇದರಿಂದ ಸಮಾಜದಲ್ಲಾಗುವ ದೌರ್ಜನ್ಯಗಳ ವಿರುದ್ಧ ಹೋರಾಡಬಹುದು. ಹಾಗೂ ಅವುಗಳನ್ನು ನಿರ್ಮೂಲನೆ ಮಾಡಬಹುದು ಎಂಬ ಸಂದೇಶವನ್ನು ಈ ಘಟನೆ ಮತ್ತು ವಿಡಿಯೊ ಸಾರಿದೆ.

Continue Reading

Latest

BGauss RUV350 : ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಆರ್‌ಯುವಿ350 ಬಿಡುಗಡೆ ಮಾಡಿದ ಬಿಗಾಸ್

BGauss RUV350 : ಬಿಗಾಸ್ ಆರ್‌ಯುವಿ350 ಜುಲೈನಿಂದ ಎಲ್ಲಾ 120 ಬಿಗಾಸ್ ಡೀಲರ್‌ಶಿಪ್‌ಗಳಲ್ಲಿ ಖರೀದಿಗೆ ಲಭ್ಯವಿರುತ್ತದೆ. ಬಿಗಾಸ್ ಆರ್‌ಯುವಿ350ಯ ಸ್ಪರ್ಧಾತ್ಮಕ ಆರಂಭಿಕ ಬೆಲೆ ರೂ. 1,09,999/- (ಎಕ್ಸ್ ಶೋ ರೂಂ) ಈ ದ್ವಿಚಕ್ರ ವಾಹನವನ್ನು ವಿಸ್ತಾವಾದ ಗ್ರಾಹಕ ಜಗತ್ತಿಗೆ ಸುಲಭವಾಗಿ ದೊರಕಿಸುವಂತೆ ಮಾಡಲು ವಿವಿಧ ಹಣಕಾಸು (ಫೈನಾನ್ಸಿಂಗ್) ಆಯ್ಕೆಗಳನ್ನು ಸಹ ನೀಡಲಾಗುತ್ತದೆ.

VISTARANEWS.COM


on

BGauss RUV350
Koo

ಮುಂಬೈ : ಆರ್ ಆರ್ ಗ್ಲೋಬಲ್‌ನ ಬಿಗಾಸ್ ತನ್ನ ಹೊಚ್ಚ ಹೊಸ ಮಾಡೆಲ್ ಆರ್‌ಯುವಿ350 (BGauss RUV350 ) ಎಲೆಕ್ಟ್ರಿಕ್​ ಸ್ಕೂಟರ್ ಬಿಡುಗಡೆ ಮಾಡಿದೆ. ನಗರ ಕೇಂದ್ರೀತ ಸ್ಕೂಟರ್​ ಆರ್‌ಯುವಿ ಗಮನಾರ್ಹ ಮೈಲಿಗಲ್ಲನ್ನು ಸಾಧಿಸಿದ್ದು, ಅತ್ಯುತ್ತಮ ರೈಡಿಂಗ್ ಅನುಭವವನ್ನು ನೀಡುತ್ತಿದೆ. ಅದಕ್ಕಾಗಿ ವಿಭಿನ್ನ ವಿನ್ಯಾಸ ಹಾಗೂ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಲಾಗಿದೆ. ಬಿಗಾಸ್ ಆರ್‌ಯುವಿ350 ಜುಲೈನಿಂದ ಎಲ್ಲಾ 120 ಬಿಗಾಸ್ ಡೀಲರ್‌ಶಿಪ್‌ಗಳಲ್ಲಿ ಖರೀದಿಗೆ ಲಭ್ಯವಿರುತ್ತದೆ. ಬಿಗಾಸ್ ಆರ್‌ಯುವಿ350ಯ ಸ್ಪರ್ಧಾತ್ಮಕ ಆರಂಭಿಕ ಬೆಲೆ ರೂ. 1,09,999/- (ಎಕ್ಸ್ ಶೋ ರೂಂ) ಈ ದ್ವಿಚಕ್ರ ವಾಹನವನ್ನು ವಿಸ್ತಾವಾದ ಗ್ರಾಹಕ ಜಗತ್ತಿಗೆ ಸುಲಭವಾಗಿ ದೊರಕಿಸುವಂತೆ ಮಾಡಲು ವಿವಿಧ ಹಣಕಾಸು (ಫೈನಾನ್ಸಿಂಗ್) ಆಯ್ಕೆಗಳನ್ನು ಸಹ ನೀಡಲಾಗುತ್ತದೆ.

ನಗರ ಪ್ರಯಾಣಿಕರ ವೈವಿಧ್ಯಮಯ ಅಗತ್ಯಗಳನ್ನು ಪೂರೈಸಲು ನಿಖರವಾಗಿ ವಿನ್ಯಾಸಗೊಳಿಸಲಾಗಿರುವ ಬಿಗಾಸ್ ಆರ್‌ಯುವಿ350 ಉನ್ನತ- ಕಾರ್ಯಕ್ಷಮತೆ ಒದಗಿಸುವ, ದಕ್ಷತೆ ಹಾಗೂ ವಿಶ್ವಾಸಾರ್ಹತೆಗೆ ಹೆಚ್ಚಿನ ಒತ್ತು ನೀಡುವ ಇನ್ ವೀಲ್ ಹೈಪರ್ ಡ್ರೈವ್ ಮೋಟಾರ್‌ ಹೊಂದಿದೆ. ಸಾಂಪ್ರದಾಯಿಕ ಬೆಲ್ಟ್- ಚಾಲಿತ ವ್ಯವಸ್ಥೆಗಳಿಗಿಂತ ಭಿನ್ನವಾಗಿರುವ ಆರ್‌ಯುವಿ350ಯ ಡೈರೆಕ್ಟ್ ಡ್ರೈವ್ ಮೋಟಾರ್ ವ್ಯವಸ್ಥೆಯು ಬ್ಯಾಟರಿ ಚಾರ್ಜ್​ (ವಿದ್ಯುತ್) ನಷ್ಟ ಆಗುವುದನ್ನು ಕಡಿಮೆ ಮಾಡುತ್ತದೆ. ಆ ಮೂಲಕ ಉತ್ತಮ ದಕ್ಷತೆ ಮತ್ತು ಹೆಚ್ಚುನ ಕಾರ್ಯಕ್ಷಮತೆಗೆ ನೀಡುತ್ತದೆ. ಈ ವಿನ್ಯಾಸವು ಶಕ್ತಿಯುತ ಮತ್ತು ಮೃದುವಾದ ಆಕ್ಸಲರೇಷನ್ ಆಗುವಂತೆ ನೋಡಿಕೊಳ್ಳುತ್ತದೆ.

ಉನ್ನತ ಕಾರ್ಯಕ್ಷಮತೆ ಮತ್ತು ವೈವಿಧ್ಯಮಯತೆ

ಆರ್‌ಯುವಿ350ನ ಅಸಾಧಾರಣ ಫೀಚರ್ ಎಂದರೆ ಅದರ ಗ್ರೇಡೇಬಿಲಿಟಿ. ಇದು ಕಡಿದಾದ ಇಳಿಜಾರು ಹಾದಿಗಳಲ್ಲಿ ಸುಲಭವಾಗಿ ಸಾಗಲು ಅನುವು ಮಾಡಿಕೊಡುತ್ತದೆ. ಈ ದ್ವಿಚಕ್ರ ವಾಹನವು ವಿವಿಧ ರೀತಿಯ ಭೂಪ್ರದೇಶಗಳಿಗೂ ಉತ್ತಮ ಆಯ್ಕೆಯಾಗಿದೆ. ಗುಡ್ಡಗಾಡು ಪ್ರದೇಶಗಳಲ್ಲಿ, ನಗರ ಪ್ರದೇಶಗಳಲ್ಲಿ ಅಥವಾ ಸಮತಟ್ಟಾದ ನಗರ ರಸ್ತೆಗಳಲ್ಲಿ ಹೀಗೆ ಎಲ್ಲೇ ಪ್ರಯಾಣಿಸುತ್ತಿರಲಿ ಆರ್‌ಯುವಿ350 ಸ್ಥಿರ ಮತ್ತು ವಿಶ್ವಾಸಾರ್ಹ ರೈಡಿಂಗ್ ಸೌಕರ್ಯವನ್ನು ಒದಗಿಸುತ್ತದೆ.

ಬಾಳಿಕೆ ಮತ್ತು ಸುರಕ್ಷತೆ

ಬಾಳಿಕೆ ಮತ್ತು ಸುರಕ್ಷತೆ ಎಂಬುದು ಆರ್‌ಯುವಿ350 ವಿನ್ಯಾಸದ ಅವಿಭಾಜ್ಯ ಅಂಗ. ವಾಹನವು ದೃಢವಾದ, ಗಟ್ಟಿಯಾದ ಲೋಹದ ಬಾಡಿ ಹೊಂದಿದ್ದು, ಆ ಮೂಲಕ ವಾಹನದ ಬಾಳಿಕೆ ಹೆಚ್ಚಿಸಲಾಗಿದೆ. ಜೊತೆಗೆ ಸವಾರನಿಗೆ ಹೆಚ್ಚುವರಿ ಸುರಕ್ಷತೆ ಒದಗಿಸುತ್ತದೆ. ಈ ಗಟ್ಟಿಮುಟ್ಟಾದ ವಾಹನವು 16-ಇಂಚಿನ ಚಕ್ರಗಳನ್ನು ಹೊಂದಿದ್ದು, ಆ ಚಕ್ರಗಳು ಹೆಚ್ಚಿನ ಸ್ಥಿರತೆ ಮತ್ತು ನಿಯಂತ್ರಣವನ್ನು ಒದಗಿಸುತ್ತದೆ. ಚಕ್ರದ ದೊಡ್ಡ ಗಾತ್ರವು ಸವಾರಿಯ ಗುಣಮಟ್ಟವನ್ನು ಸುಧಾರಿಸುತ್ತದೆ, ಗುಂಡಿಗಳು ಮತ್ತು ಉಬ್ಬು ತಗ್ಗುಗಳನ್ನು ಹೊಂದಿರುವ ರಸ್ತೆಗಳ ಮೇಲ್ಮೈಗಳ ಮೇಲೆ ಸುಗಮವಾಗಿ ಮುಂದೆ ಸಾಗಲು ಅನುವು ಮಾಡಿಕೊಡುತ್ತದೆ.

ರೈಡರ್ ನ ಆರಾಮದಾಯಕತೆ ಮತ್ತು ಅನುಕೂಲತೆ

ಆರ್‌ಯುವಿ350 ಅನ್ನು ರೈಡರ್ ಗೆ ಆರಾಮದಾಯಕತೆ ಮತ್ತು ಅನುಕೂಲತೆಯನ್ನು ಒದಗಿಸುವ ವಿಚಾರವನ್ನು ಗಮನದಲ್ಲಿಟ್ಟುಕೊಂಡು ವಿನ್ಯಾಸಗೊಳಿಸಲಾಗಿದೆ. ಅತ್ಯುತ್ತಮ ಸೀಟಿಂಗ್ ವ್ಯವಸ್ಥೆಯು ಸುದೀರ್ಘ ಪ್ರಯಾಣದ ಸಮಯದಲ್ಲಿಯೂ ಉತ್ತಮ ಸೌಕರ್ಯವನ್ನು ಒದಗಿಸುತ್ತದೆ. ಹೆಚ್ಚುವರಿಯಾಗಿ, ಸೀಟು ವಿಶಾಲವಾಗಿದ್ದು, ಈ ವಿಶಾಲವಾದ ಸೀಟಿನ ಕೆಳಗೆ ಉತ್ತಮ ಸ್ಟೋರೇಜ್ ವ್ಯವಸ್ಥೆ ಕೂಡ ಇದೆ. ಈ ಮೂಲಕ ರೈಡರ್ ಗಳು ತಮ್ಮ ಅಗತ್ಯ ವಸ್ತುಗಳನ್ನು ಅನುಕೂಲಕರವಾಗಿ ಸಾಗಿಸಲು ಅನುವು ಮಾಡಿಕೊಡುತ್ತದೆ. ಸುಧಾರಿತ ಸಸ್ಪೆನ್ಷನ್ ವ್ಯವಸ್ಥೆಯು ಆಘಾತ, ವೈಬ್ರೇಷನ್ ಗಳು ಅಥವಾ ಕಂಪನಗಳನ್ನು ಪರಿಣಾಮಕಾರಿಯಾಗಿ ಕಡಿಮೆ ಮಾಡುತ್ತದೆ. ಜೊತೆಗೆ ಉಬ್ಬು ತಗ್ಗು ರಸ್ತೆಗಳಲ್ಲಿ ಸುಗಮ ಸವಾರಿ ಮಾಡುವ ಸೌಕರ್ಯ ಒದಗಿಸುತ್ತದೆ.

ಇದನ್ನೂ ಓದಿ: Tata Motors: ನೆಕ್ಸಾನ್, ಪಂಚ್‌ ಮೂಲಕ ಎಸ್‌ಯುವಿ ಮಾರುಕಟ್ಟೆಯಲ್ಲಿ ಮುನ್ನಡೆ ಸಾಧಿಸಿದ ಟಾಟಾ ಮೋಟಾರ್ಸ್

ಆಧುನಿಕ ಫೀಚರ್ ಗಳು ಮತ್ತು ಕನೆಕ್ಟಿವಿಟಿ ವ್ಯವಸ್ಥೆ

ಆಧುನಿಕ ಫೀಚರ್ ಗಳ ಶ್ರೇಣಿಯನ್ನು ಹೊಂದಿರುವ ಆರ್‌ಯುವಿ350 ಸವಾರರ ಒಟ್ಟಾರೆ ಅನುಭವ ಹೆಚ್ಚಿಸುವ ಗುರಿ ಹೊಂದಿದೆ. ಡಿಜಿಟಲ್ ಡಿಸ್ಪ್ಲೇ ಕಾಲ್ ನೋಟಿಫಿಕೇಷನ್ ಗಳು, ಟರ್ನ್ ಬೈ ಟರ್ನ್ ನ್ಯಾವಿಗೇಷನ್, ಲೈವ್ ವೆಹಿಕಲ್ ಟ್ರ್ಯಾಕಿಂಗ್, ಜಿಯೋ ಫೆನ್ಸಿಂಗ್, ವಾಹನ ಇಮ್ಮೊಬಿಲೈಸೇಷನ್, ಡ್ಯುಯಲ್ ಥೀಮ್, ಹಗಲು ರಾತ್ರಿ ಮೋಡ್, ಡಾಕ್ಯುಮೆಂಟ್ ಸ್ಟೋರೇಜ್, ವೇಗ, ಬ್ಯಾಟರಿ ಸ್ಥಿತಿ ಮತ್ತು ರೇಂಜ್ ನಂತಹ ನೈಜ-ಸಮಯದ ಮಾಹಿತಿ ಒದಗಿಸುತ್ತದೆ. ಈ ಮೂಲಕ ಸವಾರರು ಎಲ್ಲಾ ಅಗತ್ಯ ಮಾಹಿತಿಯು ಸುಲಭವಾಗಿ ಲಭ್ಯವಿರುವುದನ್ನು ಖಚಿತಪಡಿಸಿಕೊಳ್ಳಬಹುದು. ಇದಲ್ಲದೆ, ವಾಹನವು ಬ್ಲೂಟೂತ್ ಮತ್ತು ಟೆಲಿಮ್ಯಾಟಿಕ್ಸ್‌ ನಂತಹ ಸ್ಮಾರ್ಟ್ ಕನೆಕ್ಟಿವಿಟಿ ಫೀಚರ್ ಗಳನ್ನು ಒಳಗೊಂಡಿದೆ. ಈ ವ್ಯವಸ್ಥೆಯು ಸವಾರರು ಸಂಪರ್ಕದಲ್ಲಿರಲು ಮತ್ತು ಸುಲಭವಾಗಿ ಮುಂದೆ ಸಾಗಲು ಅನುವು ಮಾಡಿಕೊಡುತ್ತದೆ.

ಪರಿಸರ ಸ್ನೇಹಿ ಮತ್ತು ಆರ್ಥಿಕ ಸ್ನೇಹಿ

ಆರ್‌ಯುವಿ350 ಕೇವಲ ಹೆಚ್ಚಿನ ಕಾರ್ಯಕ್ಷಮತೆ ಒದಗಿಸುವ ವಾಹನ ಮಾತ್ರವೇ ಅಲ್ಲ, ಜೊತೆಗೆ ಪರಿಸರ ಸ್ನೇಹಿ ಆಯ್ಕೆಯೂ ಆಗಿದೆ. ಆ ಮೂಲಕ ಈ ವಾಹನವು ಸ್ವಚ್ಛ ಮತ್ತು ಆರೋಗ್ಯಕರ ಪರಿಸರಕ್ಕೆ ಕೊಡುಗೆ ನೀಡುತ್ತದೆ. ವಾಹನದ ಸಮರ್ಥ ವಿನ್ಯಾಸ ಮತ್ತು ಕಡಿಮೆ ನಿರ್ವಹಣಾ ಅಗತ್ಯತೆಗಳು ಇದನ್ನು ನಗರ ಪ್ರಯಾಣಿಕರಿಗೆ ಆರ್ಥಿಕವಾಗಿ ನೆರವಾಗುವ ಆಯ್ಕೆಯನ್ನಾಗಿಯೂ ಮಾಡುತ್ತದೆ.

ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಹೊಸ ಮಾನದಂಡಗಳನ್ನು ಸ್ಥಾಪಿಸುವುದು

ಸ್ಕೂಟರ್​ ಬಿಡುಗಡೆ ಕುರಿತು ಬಿಗಾಸ್ ನ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಹೇಮಂತ್ ಕಾಬ್ರಾ ಮಾತನಾಡಿ “ನಗರದ ಸಂಚಾರ ವ್ಯವಸ್ಥೆಗೆ ಹೊಸತನ ನೀಡಲೆಂದೇ ವಿನ್ಯಾಸಗೊಳಿಸಲಾದ ಕ್ರಾಂತಿಕಾರಿ ಬಿಗಾಸ್ಆರ್‌ಯುವಿ350 ಅನ್ನು ಪರಿಚಯಿಸಲು ಸಂತೋಷ ಪಡುತ್ತೇವೆ. ಇದು ನಾವೀನ್ಯತೆ ಕಡೆಗೆ ನಾವು ಹೊಂದಿರುವ ನಮ್ಮ ಬದ್ಧತೆಗೆ ಸಾಕ್ಷಿ. ಆರ್‌ಯುವಿ350ನ ಸುಧಾರಿತ ಫೀಚರ್ ಗಳು, ದೃಢ ವಿನ್ಯಾಸ ಮತ್ತು ಅತ್ಯುತ್ತಮ ಕಾರ್ಯಕ್ಷಮತೆ ನೀಡುತ್ತದೆ. ಆರ್‌ಯುವಿ350 ನಮ್ಮ ತಾಂತ್ರಿಕ ಹೆಚ್ಚುಗಾರಿಕೆಗೆ ಉದಾಹರಣೆ. ಇದು ಮೇಕ್ ಇನ್ ಇಂಡಿಯಾ ಉಪಕ್ರಮದೊಂದಿಗೆ ಸೂಕ್ತವಾಗಿ ಹೊಂದಿಕೆಯಾಗುತ್ತದೆ. ಗುಣಮಟ್ಟದ ಉತ್ಪನ್ನಗಳನ್ನು ದೇಶದಲ್ಲಿಯೇ ಉತ್ಪಾದಿಸುವ ನಮ್ಮ ಬದ್ಧತೆಯನ್ನು ಈ ವಾಹನ ತೋರಿಸುತ್ತದೆ. ಈ ವಾಹನವು ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಹೊಸ ಮಾನದಂಡಗಳನ್ನು ಸ್ಥಾಪಿಸುತ್ತದೆ ಎಂದು ನಾವು ನಂಬಿದ್ದೇವೆ” ಎಂದು ಹೇಳಿದರು.

Continue Reading

ಸಿನಿಮಾ

Priyanka Chopra: ಬೆಳ್ಳುಳ್ಳಿ ಎಸಳು ಪಾದಗಳಿಗೆ ಉಜ್ಜುವುದರಿಂದ ಏನು ಪ್ರಯೋಜನ? ನಟಿ ಪ್ರಿಯಾಂಕಾ ಚೋಪ್ರಾ ಹೇಳಿದ್ದೇನು?

ದಿ ಬ್ಲಫ್ ಇನ್ ಆಸ್ಟ್ರೇಲಿಯಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಅವರು ಪತಿ ನಿಕ್ ಜೋನಾಸ್, ಮಗಳು ಮಾಲತಿ ಮೇರಿ ಮತ್ತು ತಾಯಿ ಮಧು ಚೋಪ್ರಾ ಅವರೊಂದಿಗೆ ಕೆಲವು ಅಮೂಲ್ಯ ಕ್ಷಣಗಳ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಇದರಲ್ಲಿ ಬೆಳ್ಳುಳ್ಳಿ ಎಸಳು ಪದಗಳಿಗೆ ಉಜ್ಜುವುದರಿಂದ ಏನು ಪ್ರಯೋಜನ ಎಂಬುದರ ಕುರಿತು ಅವರು ಹೇಳಿರುವುದು ವೈರಲ್ ಆಗಿದೆ.

VISTARANEWS.COM


on

By

Priyanka Chopra
Koo

ಬಾಲಿವುಡ್ ನಟಿ (Bollywood actress) ಪ್ರಿಯಾಂಕಾ ಚೋಪ್ರಾ (Priyanka Chopra) ಅವರು ತಮ್ಮ ಪಾದಗಳಿಗೆ ಬೆಳ್ಳುಳ್ಳಿಯ (Garlic) ಎಸಳುಗಳನ್ನು ಉಜ್ಜಿಕೊಳ್ಳುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ (social media) ಹಂಚಿಕೊಂಡಿದ್ದು, ಹಲವಾರು ಬಳಕೆದಾರರು ಅವರ ಪೋಸ್ಟ್‌ಗೆ ಕಾಮೆಂಟ್ ಮಾಡಿದ್ದಾರೆ. ಸಾಕಷ್ಟು ಮಂದಿ ಬೆಳ್ಳುಳ್ಳಿಯನ್ನು ಉಜ್ಜಲು ಕಾರಣವೇನು ಎಂದು ಪ್ರಶ್ನಿಸಿದ್ದಾರೆ.

ಪ್ರಿಯಾಂಕಾ ಚೋಪ್ರಾ ಪ್ರಸ್ತುತ ದಿ ಬ್ಲಫ್ ಇನ್ ಆಸ್ಟ್ರೇಲಿಯಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಪತಿ ನಿಕ್ ಜೋನಾಸ್, ಮಗಳು ಮಾಲತಿ ಮೇರಿ ಮತ್ತು ತಾಯಿ ಮಧು ಚೋಪ್ರಾ ಅವರೊಂದಿಗೆ ಕೆಲವು ಅಮೂಲ್ಯ ಕ್ಷಣಗಳ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಅವರ ಪೋಸ್ಟ್ ನೊಂದಿಗೆ ಇದ್ದ ವಿಡಿಯೋವೊಂದು ಎಲ್ಲರ ಗಮನ ಸೆಳೆದಿದೆ. ಚಿತ್ರದ ಸೆಟ್‌ಗಳಲ್ಲಿ ಪ್ರಿಯಾಂಕಾಗೆ ಉಂಟಾದ ಗಮನಾರ್ಹ ಗಾಯಗಳನ್ನು ಇದು ಬಹಿರಂಗಪಡಿಸಿದೆ. ನಟಿ ಕೆಲವು ಎಸಳು ಬೆಳ್ಳುಳ್ಳಿ ಮತ್ತು ಲವಂಗವನ್ನು ಬಲವಾಗಿ ಅವಳ ಪಾದಗಳಿಗೆ ಉಜ್ಜುತ್ತಿರುವ ವಿಡಿಯೋ ಇದರಲ್ಲಿದೆ. ಇದು ವಾಸ್ತವವಾಗಿ ಕೆಲವು ಖಾಯಿಲೆಗಳನ್ನು ಎದುರಿಸಲು ಅನೇಕರು ಬಳಸುವ ಸಾಂಪ್ರದಾಯಿಕ ಔಷಧವಾಗಿದೆ.

ಬೆಳ್ಳುಳ್ಳಿಯನ್ನು ಪಾದಗಳಿಗೆ ಉಜ್ಜುವುದು ಏಕೆ?

ನಟಿ ಪ್ರಿಯಾಂಕಾ ಹಂಚಿಕೊಂಡ್ಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯನ್ನು ಹುಟ್ಟು ಹಾಕಿದೆ. ಇದು ವೈಜ್ಞಾನಿಕ ಅಂಶಗಳ ಬಗ್ಗೆಯೂ ಚರ್ಚೆಯನ್ನು ಹುಟ್ಟು ಹಾಕಿತ್ತು.

ಟಿಸರ್ ಮತ್ತು ಇನ್‌ಸ್ಟಿಟ್ಯೂಟ್ ವರದಿಯ ಪ್ರಕಾರ ಈ ಪ್ರಕ್ರಿಯೆಯ ಸಾಕಷ್ಟು ಪರಿಣಾಮಕಾರಿಯಾಗಿದೆ. ಬೆಳ್ಳುಳ್ಳಿ ಮತ್ತು ಲವಂಗವನ್ನು ಕತ್ತರಿಸಿ ಪುಡಿ ಮಾಡಿದಾಗ ಇದು ಅಲಿನ್ ಅನ್ನು ಅಲಿನೇಸ್ ಕಿಣ್ವದೊಂದಿಗೆ ಸೇರುವಂತೆ ಮಾಡುತ್ತದೆ. ಇದು ಅಲಿಸಿನ್ ಎಂಬ ಹೊಸ ಸಂಯುಕ್ತವನ್ನು ಸೃಷ್ಟಿಸುತ್ತದೆ. ಬೆಳ್ಳುಳ್ಳಿ ಮತ್ತು ಪುಡಿ ಮಾಡಿದ ಲವಂಗವನ್ನು ಪಾದಗಳ ಮೇಲೆ ಉಜ್ಜಿದಾಗ ಅದು ದೇಹದಲ್ಲಿ ರಕ್ತಪ್ರವಾಹ ಚೆನ್ನಾಗಿ ನಡೆಯಲು ಸಹಾಯ ಮಾಡುತ್ತದೆ.

ವೆರಿವೆಲ್ ಹೆಲ್ತ್ ವರದಿಯ ಪ್ರಕಾರ, ಇದು ಕೆಲವು ರೀತಿಯ ಕ್ಯಾನ್ಸರ್‌ಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ. ಮಧುಮೇಹ, ಕೊಲೆಸ್ಟ್ರಾಲ್ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ವ್ಯಾಯಾಮದ ಅನಂತರ ಸ್ನಾಯುವಿನ ಚೇತರಿಕೆಗೆ ಸಹಾಯ ಮಾಡುತ್ತದೆ ಮತ್ತು ಸೋಂಕುಗಳಿಂದ ರಕ್ಷಿಸುತ್ತದೆ.


ಪ್ರಯೋಜನಗಳೇನು?

ಕ್ಲೀವ್ ಲ್ಯಾಂಡ್ ಕ್ಲಿನಿಕ್ ವರದಿಯ ಪ್ರಕಾರ, ಬೆಳ್ಳುಳ್ಳಿಯು ಉರಿಯೂತದ ಗುಣಲಕ್ಷಣಗಳ ಜೊತೆಗೆ ಅಪಾರವಾದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿದೆ.

ಕೀಲು ಮತ್ತು ಸ್ನಾಯುಗಳಲ್ಲಿನ ನೋವನ್ನು ನಿವಾರಿಸಲು ಇದು ಸೂಕ್ತವಾಗಿದೆ. ಬೆಳ್ಳುಳ್ಳಿ ಲವಂಗವನ್ನು ಮೊಡವೆಗಳ ಮೇಲೆ ಉಜ್ಜುವುದರಿಂದ ಮೊಡವೆಗಳನ್ನು ದೂರಮಾಡಬಹುದು. ಆದರೂ ಅದು ನಿಮ್ಮ ಚರ್ಮಕ್ಕೆ ಸೂಕ್ತವೇ ಎಂಬುದನ್ನು ತಿಳಿದುಕೊಳ್ಳಲು ಚರ್ಮಶಾಸ್ತ್ರಜ್ಞರನ್ನು ಸಂಪರ್ಕಿಸಬೇಕು.

ಕೆಂಪು ರಕ್ತ ಕಣಗಳು ಬೆಳ್ಳುಳ್ಳಿಯಲ್ಲಿರುವ ಸಲ್ಫರ್ ಅನ್ನು ಹೈಡ್ರೋಜನ್ ಸಲ್ಫೈಡ್ ಅನಿಲವಾಗಿ ಪರಿವರ್ತಿಸುತ್ತವೆ. ಇದು ರಕ್ತನಾಳಗಳನ್ನು ವಿಸ್ತರಿಸಲು ಸಹಾಯ ಮಾಡುತ್ತದೆ ಮತ್ತು ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಅಂತಿಮವಾಗಿ ಬೆಳ್ಳುಳ್ಳಿ ಕ್ರೀಡಾಪಟುವಿನ ಪಾದಕ್ಕೆ ಚಿಕಿತ್ಸೆ ನೀಡಲು ಉತ್ತಮ ಪ್ರತಿವಿಷವಾಗಿದೆ. ಇದು ಶಿಲೀಂಧ್ರದ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಬೆಳ್ಳುಳ್ಳಿಯನ್ನು ಸತತವಾಗಿ ಆಹಾರದಲ್ಲಿ ಸೇರಿಸುವುದು ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನವನ್ನು ಕೊಡುತ್ತದೆ. ಬೆಳ್ಳುಳ್ಳಿಯ ಎಣ್ಣೆ ನೋವು ನಿವಾರಕವಾಗಿಯೂ ಕೆಲಸ ಮಾಡುತ್ತದೆ.

ಇದನ್ನೂ ಓದಿ: Kalki 2898 AD: ಮೊದಲ ದಿನವೇ ಗಳಿಕೆಯಲ್ಲಿ ದಾಖಲೆ ಬರೆದ ‘ಕಲ್ಕಿ 2898 ಎಡಿ’ ಸಿನಿಮಾ; ಕಲೆಕ್ಷನ್‌ ಎಷ್ಟು?

ಹೆಲ್ತ್‌ಲೈನ್ ವರದಿಯ ಪ್ರಕಾರ ಪ್ರತಿ ಊಟದಲ್ಲಿ 1 ಎಸಳಿಗಿಂತ ಹೆಚ್ಚು ಬೆಳ್ಳುಳ್ಳಿಯನ್ನು ಸೇವಿಸಲು ಪ್ರಯತ್ನಿಸುವುದು ಆರೋಗ್ಯಕ್ಕೆ ಒಳ್ಳೆಯದು.

ಪ್ರಿಯಾಂಕಾ ಬಳಸುತ್ತಿರುವುದು ಏಕೆ?

ಬಳಕೆದಾರರ ಕಾಮೆಂಟ್ ಗಳಿಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕಾ ಚೋಪ್ರಾ ಅವರು, ಇದು ಉರಿಯೂತ ಮತ್ತು ದೇಹದ ತಾಪವನ್ನು ಇಳಿಸಲು ಕಡಿಮೆ ಮಾಡುತ್ತದೆ ಎಂದು ಹೇಳಿದ್ದಾರೆ.

Continue Reading

Latest

Viral Video: ನಡುರಸ್ತೆಯಲ್ಲಿ ಶಿಕ್ಷಕಿಯ ಹಣೆಗೆ ಸಿಂಧೂರ ಹಚ್ಚಿ ಬಲವಂತವಾಗಿ ಮದುವೆಯಾದ ಯುವಕ!

Viral Video: ಕೆಲಸ ಮುಗಿಸಿ ತಂದೆಯೊಡನೆ ಮನೆಗೆ ಬರುತ್ತಿದ್ದ ಶಾಲಾ ಶಿಕ್ಷಕಿಯನ್ನು ಅಡ್ಡಗಟ್ಟಿದ ಯುವಕನೊಬ್ಬ ಬಲವಂತವಾಗಿ ಅವಳ ಹಣೆಗೆ ಸಿಂಧೂರ ಹಚ್ಚಿ ಮದುವೆಯಾಗಲು ಯತ್ನಿಸಿದ ಅಮಾನವೀಯವಾದ ಘಟನೆಯೊಂದು ನಡೆದಿದೆ. ಶಿಕ್ಷಕಿಯ ತಂದೆ ಯುವಕನಿಂದ ತಮ್ಮ ಮಗಳನ್ನು ರಕ್ಷಿಸಲು ಪ್ರಯತ್ನಿಸಲು ಒದ್ದಾಡುತ್ತಿದ್ದರೂ ಲೆಕ್ಕಿಸದೇ ಸಿಂಧೂರ ಹಚ್ಚಲು ಪ್ರಯತ್ನಿಸಿದ್ದಾನೆ. ಇನ್ನೊಬ್ಬ ಯುವಕ ಇದನ್ನು ವಿಡಿಯೊ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾನೆ. ಇದು ವೈರಲ್ ಆಗಿದೆ.

VISTARANEWS.COM


on

Viral Video
Koo

ಬಿಹಾರ: ಕೆಲವೊಂದು ಕಡೆಗಳಲ್ಲಿ ಮಹಿಳೆಯ ಕುತ್ತಿಗೆಗೆ ಮಾಂಗಲ್ಯ ಸರ ಕಟ್ಟಿದರೆ ಮದುವೆಯಾದ ಹಾಗೇ. ಅದೇರೀತಿ ಕೆಲವು ಕಡೆಗಳಲ್ಲಿ ಹಣೆಗ ಸಿಂಧೂರ ಹಚ್ಚಿದರೆ ಅವರಿಬ್ಬರು ದಂಪತಿ ಎಂದು ಪರಿಗಣಿಸುತ್ತಾರೆ. ಹಾಗಾಗಿ ಇಂತಹದೊಂದು ಸಂಪ್ರದಾಯವನ್ನಿಟ್ಟುಕೊಂಡು ಯುವಕನೊಬ್ಬ ಶಾಲಾ ಶಿಕ್ಷಕಿಯ ಹಣೆಗೆ ಸಿಂಧೂರ ಹಚ್ಚಿ ಆಕೆಯ ತಂದೆಯ ಎದುರೇ ಬಲವಂತವಾಗಿ ಮದುವೆಯಾಗಲು ಯತ್ನಿಸಿದ ಘಟನೆ ಬಿಹಾರದ ಬಂಕಾ ಜಿಲ್ಲೆಯ ಅಮರಪುರ ಬ್ಲಾಕ್‌ನಲ್ಲಿ ನಡೆದಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ.

ವಿಡಿಯೊದಲ್ಲಿ ಶಾಲೆ ಕೆಲಸ ಮುಗಿಸಿ ಶಿಕ್ಷಕಿ ತನ್ನ ತಂದೆಯೊಂದಿಗೆ ಬೈಕಿನಲ್ಲಿ ಬರುವಾಗ ಯುವಕರಿಬ್ಬರು ಅವರನ್ನು ರಸ್ತೆಯಲ್ಲಿ ತಡೆದು ನಿಲ್ಲಿಸಿದ್ದಾರೆ. ಅದರಲ್ಲಿ ಒಬ್ಬ ಯುವಕ ಬಲವಂತವಾಗಿ ಆಕೆಯ ಹಣೆಗೆ ಸಿಂಧೂರವನ್ನು ಹಚ್ಚಲು ಪ್ರಯತ್ನಿಸಿದ್ದಾನೆ. ಯುವಕ ತನ್ನ ಮುಖವನ್ನು ಬಟ್ಟೆಯಿಂದ ಮುಚ್ಚಿಕೊಂಡಿದ್ದಾನೆ. ಹಾಗೇ ಶಿಕ್ಷಕಿಯ ತಂದೆ ಯುವಕನಿಂದ ತಮ್ಮ ಮಗಳನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆ. ಶಿಕ್ಷಕಿ ತಲೆಯನ್ನು ತನ್ನ ದುಪ್ಪಟ್ಟದಿಂದ ಮುಚ್ಚಿಕೊಂಡಿದ್ದರು ಕೂಡ ಆತ ಸಿಂಧೂರ ಹಚ್ಚಿದ್ದಾನೆ. ಇನ್ನೊಬ್ಬ ಯುವಕ ಇದನ್ನು ವಿಡಿಯೊ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾನೆ. ಇದು ವೈರಲ್ ಆಗಿದೆ.

ವಿಡಿಯೊದಲ್ಲಿ ಯುವಕ ತನ್ನ ಜೀವನ ಆಕೆಯಿಂದ ಹಾಳಾಗಿದೆ ಎಂದು ಹೇಳಿದ್ದಾನೆ. ಈ ಘಟನೆ ಬಳಿಕ ಶಿಕ್ಷಕಿ ಯುವಕನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾಳೆ. ದೂರಿನಲ್ಲಿ ಶಿಕ್ಷಕಿ, ಬಭಂಗಮಾ ನಿವಾಸಿ ಸೌರಭ್ ಸೋನು ಎಂಬ ಯುವಕನೊಬ್ಬ ಪೋನ್‌ನಲ್ಲಿ ತನಗೆ ವೈಯಕ್ತಿಕವಾಗಿ ಕಿರುಕುಳ ನೀಡುತ್ತಿದ್ದಾನೆ. ತಾನು ಬಿಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಅಮರಪುರದ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡಲು ಶುರುಮಾಡಿದಾಗಿನಿಂದ ತನ್ನನ್ನು ಮದುವೆಯಾಗುವಂತೆ ಆತ ಒತ್ತಡ ಹಾಕುತ್ತಿದ್ದಾನೆ ಎಂದು ತಿಳಿಸಿದ್ದಾಳೆ. ಅಲ್ಲದೇ ಎರಡು ತಿಂಗಳ ಹಿಂದೆ ಯುವಕನ ವಿರುದ್ಧ ಲಿಖಿತ ದೂರು ನೀಡಿದ ಹಿನ್ನಲೆಯಲ್ಲಿ ಪೊಲೀಸರು ಆತನನ್ನು ಕರೆದು ಎಚ್ಚರಿಕೆ ನೀಡಿದ್ದರೂ ಕೂಡ ಆತ ಆಕೆಗೆ ಕಿರುಕುಳ ನೀಡುವುದನ್ನು ಮುಂದುವರಿಸಿದ್ದಾನೆ. ಇದೀಗ ಆತನ ವಿರುದ್ಧ ಮತ್ತೊಂದು ದೂರು ದಾಖಲಿಸಿದ ಶಿಕ್ಷಕಿ ನ್ಯಾಯಕ್ಕಾಗಿ ಕಾಯುತ್ತಿದ್ದಾಳೆ.

ಇದನ್ನೂ ಓದಿ:ರೈಲು ಪ್ರಯಾಣಿಕರೇ, ಬರ್ತ್‌ನಲ್ಲಿ ಮಲಗುವ ಕುರಿತ ಈ ಹೊಸ ರೂಲ್ಸ್‌ ನೆನಪಿನಲ್ಲಿರಲಿ!

ಈ ವಿಡಿಯೊ ಜೂನ್ 27ರಂದು ಪೋಸ್ಟ್ ಆಗಿದ್ದು, ಇದಕ್ಕೆ 3.5 ಲಕ್ಷ ಲೈಕ್ಸ್ ಬಂದಿದೆ. ಹಾಗೇ ಅನೇಕ ಜನರು ಇದಕ್ಕೆ ಕಾಮೆಂಟ್ ಮಾಡಿದ್ದಾರೆ. ಇಂತಹ ಘಟನೆಗಳು ಹಲವು ಕಡೆ ನಡೆಯುತ್ತಿರುತ್ತದೆ. ಇದರಿಂದ ಅದೆಷ್ಟೋ ಹೆಣ್ಣುಮಕ್ಕಳ ಜೀವನ ಹಾಳಾಗಿದೆ. ಹಾಗಾಗಿ ಭವಿಷ್ಯದಲ್ಲಿ ಮಹಿಳೆಯರ ಮೇಲೆ ಮತ್ತೆ ಇಂತಹ ಘಟನೆಗಳು ನಡೆಯದಂತೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗದುಕೊಳ್ಳುವಂತೆ ನೆಟ್ಟಿಗರು ಆಗ್ರಹಿಸಿದ್ದಾರೆ.

Continue Reading
Advertisement
ಕರ್ನಾಟಕ2 mins ago

CM Siddaramaiah: ಮೇಕೆದಾಟು ಯೋಜನೆಗೆ ತಮಿಳುನಾಡಿನ ತಕರಾರಿಲ್ಲ, ಕೇಂದ್ರ ಅನುಮತಿ ನೀಡಬೇಕು: ಸಿಎಂ ಸಿದ್ದರಾಮಯ್ಯ

ವಿದೇಶ23 mins ago

US Presidential Election: ರಂಗೇರುತ್ತಿದೆ ಅಮೆರಿಕ ಅಧ್ಯಕ್ಷೀಯ ಚುನಾವಣೆ; ಬೈಡೆನ್‌-ಟ್ರಂಪ್‌ ಮುಖಾಮುಖಿ; ಭರ್ಜರಿ ಟಾಕ್‌ ವಾರ್‌

NK Bailu victims to get relief soon says Incharge secretary Ritesh Kumar Singh
ಉತ್ತರ ಕನ್ನಡ30 mins ago

Uttara Kannada News: ಕಾರವಾರದ ಎನ್.ಕೆ. ಬೈಲು ಸಂತ್ರಸ್ತರಿಗೆ ತಕ್ಷಣ ಪರಿಹಾರಕ್ಕೆ ಸೂಚನೆ

Viral Video
Latest32 mins ago

Viral Video: ಒಂಟಿ ಯುವತಿಯ ಮೇಲೆ ದುಷ್ಕರ್ಮಿಯ ದಾಳಿ; ಆಕೆ ಪಾರಾಗಿದ್ದು ಹೇಗೆ?

power outage in many parts of Bengaluru on June 29
ಬೆಂಗಳೂರು41 mins ago

Bengaluru Power Cut: ಬೆಂಗಳೂರು ನಿವಾಸಿಗಳೇ ಗಮನಿಸಿ; ಜೂ.29ರಂದು ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

Actor Darshan In Central Jail remembering mother and son
ಸ್ಯಾಂಡಲ್ ವುಡ್50 mins ago

Actor Darshan: ಜೈಲಿನಲ್ಲಿ ದರ್ಶನ್‌ಗೆ ತಾಯಿ, ತಮ್ಮನ ನೆನಪಾಗ್ತಿದೆಯಂತೆ!

bear attack
ಕೊಪ್ಪಳ50 mins ago

Wild Animals Attack : ಕೊಪ್ಪಳದಲ್ಲಿ ಕಂಡ ಕಂಡಲ್ಲಿ ಕರಡಿಗಳ ಹಾವಳಿ

Haveri Accident
ಕರ್ನಾಟಕ1 hour ago

Haveri Accident: ಹಾವೇರಿ ಅಪಘಾತ ಪ್ರಕರಣ; ಭಾರತ ಅಂಧರ ಪುಟ್‌ಬಾಲ್ ತಂಡದ ಕ್ಯಾಪ್ಟನ್ ಕೂಡ ಸಾವು

cm siddaramaiah karnataka cm
ಕರ್ನಾಟಕ1 hour ago

Karnataka CM: ಒಕ್ಕಲಿಗ ಆಯ್ತು, ಈಗ ಲಿಂಗಾಯತ ಮುಖ್ಯಮಂತ್ರಿಗೆ ಪಂಚ ಪೀಠ ಶ್ರೀಗಳಿಂದ ಬೇಡಿಕೆ!

Ajinkya Rahane
ಕ್ರೀಡೆ2 hours ago

Ajinkya Rahane: ಕೌಂಟಿ ಕ್ರಿಕೆಟ್​ನತ್ತ ಮುಖ ಮಾಡಿದ ಅಜಿಂಕ್ಯ ರಹಾನೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ3 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ20 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ21 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು23 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ7 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು2 weeks ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

ಟ್ರೆಂಡಿಂಗ್‌